Tag: Advocate General

  • ಹಿಂಸಾಚಾರ ಪ್ರತಿಭಟನೆ: ಪೊಲೀಸರಿಂದ ಪರಿಸ್ಥಿತಿ ನಿಯಂತ್ರಿಸಲಾಗದಿದ್ರೆ ಕೇಂದ್ರ ಪಡೆ ಕರೆಸಿ – ಹೈಕೋರ್ಟ್

    ಹಿಂಸಾಚಾರ ಪ್ರತಿಭಟನೆ: ಪೊಲೀಸರಿಂದ ಪರಿಸ್ಥಿತಿ ನಿಯಂತ್ರಿಸಲಾಗದಿದ್ರೆ ಕೇಂದ್ರ ಪಡೆ ಕರೆಸಿ – ಹೈಕೋರ್ಟ್

    ಕೋಲ್ಕತ್ತಾ: ಪ್ರವಾದಿ ಮೊಹಮ್ಮದ್ ಪೈಗಂಬರ್ ವಿರುದ್ಧ ಬಿಜೆಪಿ ಮಾಜಿ ವಕ್ತಾರೆ ನೀಡಿದ ಹೇಳಿಕೆಗಳಿಂದಾಗಿ ಪಶ್ಚಿಮ ಬಂಗಾಳದಲ್ಲಿ ಭುಗಿಲೆದ್ದಿರುವ ಹಿಂಸಾಚಾರ ನಿಯಂತ್ರಿಸಲು ಪೊಲೀಸರಿಗೆ ಸಾಧ್ಯವಾಗದಿದ್ದರೆ ರಾಜ್ಯ ಸರ್ಕಾರ ಕೇಂದ್ರ ಪಡೆಗಳನ್ನು ಕರೆಸಬೇಕು ಎಂದು ಕೋಲ್ಕತ್ತಾ ಹೈಕೋರ್ಟ್ ಸೂಚನೆ ನೀಡಿದೆ.

    ದುಷ್ಕರ್ಮಿಗಳನ್ನು ಗುರುತಿಸಿ ಅವರ ವಿರುದ್ಧ ಕ್ರಮ ಕೈಗೊಳ್ಳಲು ಸಾಧ್ಯವಾಗುವಂತೆ ಹಿಂಸಾಚಾರದ ಘಟನೆಗಳ ವೀಡಿಯೋ ತುಣುಕನ್ನು ಸಂಗ್ರಹಿಸಲು ರಾಜ್ಯ ಅಧಿಕಾರಿಗಳಿಗೆ ಮುಖ್ಯ ನ್ಯಾಯಮೂರ್ತಿ ಪ್ರಕಾಶ್ ಶ್ರೀವಾಸ್ತವ ಹಾಗೂ ನ್ಯಾಯಮೂರ್ತಿ ರಾಜರ್ಷಿ ಭಾರದ್ವಾಜ್ ಅವರಿದ್ದ ಪೀಠ ಸೂಚಿಸಿದೆ. ಇದನ್ನೂ ಓದಿ: ಪ್ರವಾದಿ ಅವಹೇಳನ – ಹಿಂಸಾತ್ಮಕ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ 400ಕ್ಕೂ ಹೆಚ್ಚು ಮಂದಿ ಬಂಧನ

    ನ್ಯಾಯಾಲಯದಲ್ಲಿ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪರಿಹಾರ ಕ್ರಮ ಕೈಗೊಳ್ಳುವಂತೆ ಹಲವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಯಿತು. ಹಿಂಸಾಚಾರದ ವೇಳೆ ಪೊಲೀಸರು ಮೂಕಪ್ರೇಕ್ಷಕರಾಗಿದ್ದರು. `ಹೌರಾ ಅಂಕುರ್‌ಹಾಟಿ ರಾಷ್ಟ್ರೀಯ ಹೆದ್ದಾರಿ ತಡೆದ ಪ್ರತಿಯೊಬ್ಬರನ್ನೂ ಬಂಧಿಸಬೇಕು’ ಎಂಬಿತ್ಯಾದಿ ಅರ್ಜಿಗಳು ಸಲ್ಲಿಕೆಯಾಗಿದ್ದವು. ಈ ನಡುವೆ ಶಾಂತಿಯುತ ಪ್ರತಿಭಟನೆಗೆ ಅವಕಾಶ ಮಾಡಿಕೊಡುವಂತೆಯೂ ಕೆಲ ಅರ್ಜಿಗಳನ್ನು ಸಲ್ಲಿಸಲಾಗಿದೆ. ಇದನ್ನೂ ಓದಿ: ಪ್ರವಾದಿ ವಿರುದ್ಧ ಅವಹೇಳನ – ಮುಸ್ಲಿಂ ಸಂಘಟನೆಗಳ ಪ್ರತಿಭಟನೆಗೆ ವಿಹೆಚ್‌ಪಿ ತೀವ್ರ ಖಂಡನೆ

    ರಾಜ್ಯದ ಪ್ರಸ್ತುತ ಪರಿಸ್ಥಿತಿ ಮತ್ತು ಅಧಿಕಾರಿಗಳು ಕೈಗೊಂಡ ಕ್ರಮ ವಿವರಿಸುವ ಅಫಿಡವಿಟ್ ಸಲ್ಲಿಸಲು ಕಾಲಾವಕಾಶ ಅಗತ್ಯವಿರುವುದರಿಂದ ವಿಚಾರಣೆ ಮುಂದೂಡಬೇಕೆಂದು ಅಡ್ವೋಕೇಟ್ ಜನರಲ್ ಕೋರಿದರು. ಇದಕ್ಕೆ ಒಪ್ಪಿದ ನ್ಯಾಯಾಲಯ ಯಾವುದೇ ಅಹಿತಕರ ಘಟನೆ ನಡೆಯದಂತೆ ಮತ್ತು ಶಾಂತಿ ಕಾಪಾಡಲು ಸಾಧ್ಯವಾಗುವ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳುವಂತೆ ಸರ್ಕಾರಕ್ಕೆ ಸೂಚಿಸಿದೆ. ಜೊತೆಗೆ ಹಿಂಸಾಚಾರ ಪ್ರತಿಭಟನೆ ನಿಯಂತ್ರಿಸಲು ಸಾಧ್ಯವಾಗದೇ ಇದ್ದಲ್ಲಿ, ಕೇಂದ್ರದ ಪಡೆಗಳನ್ನು ಕರೆಸಬೇಕು ಎಂದು ನಿರ್ದೇಶನ ನೀಡಿದೆ.

    ಬಿಜೆಪಿ ಮಾಜಿ ವಕ್ತಾರೆ ನೂಪುರ್ ಶರ್ಮಾ ಅವರ ಹೇಳಿಕೆ ಖಂಡಿಸಿ ಜೂನ್ 10 ರಂದು ಪಶ್ಚಿಮ ಬಂಗಾಳದ ಹೌರಾ, ಮುರ್ಷಿದಾಬಾದ್ ಜಿಲ್ಲೆಗಳಲ್ಲಿ ನಡೆಯುತ್ತಿದ್ದ ಪ್ರತಿಭಟನೆ ಹಿಂಸಾಚರ‍್ಕೆ ತಿರುಗಿತ್ತು. ಇದನ್ನೂ ಓದಿ: ಪದವೀಧರ ಮಹಿಳೆಯನ್ನು ಕೆಲಸಕ್ಕೆ ಹೋಗುವಂತೆ ಒತ್ತಾಯಿಸುವಂತಿಲ್ಲ – ಹೈಕೋರ್ಟ್ 

    ಈ ಘಟನೆಗೆ ಸಂಬಂಧಿಸಿದಂತೆ 26 ಎಫ್‌ಐಆರ್ ದಾಖಲಾಗಿದ್ದು, 240 ಮಂದಿಯನ್ನು ಬಂಧಿಸಲಾಗಿದೆ. ಅಲ್ಲದೆ ಉತ್ತರ ಪ್ರದೇಶದಲ್ಲೂ ಹಿಂಸಾತ್ಮಕ ಪ್ರತಿಭಟನೆ ನಡೆದಿದ್ದು, ಈವರೆಗೆ ದೇಶಾದ್ಯಂತ 400ಕ್ಕೂ ಹೆಚ್ಚು ಜನರನ್ನು ಬಂಧಿಸಿದ್ದು 40ಕ್ಕೂ ಹೆಚ್ಚು FIRಗಳು ದಾಖಲಾಗಿವೆ.

  • ಅಪ್ರಾಪ್ತ ಹುಡುಗಿಯ ಕೈ ಹಿಡಿದು ಸುಂದರವಾಗಿವೆ ಅನ್ನೋದು ಲೈಂಗಿಕ ಅಪರಾಧವಲ್ಲ – ಹೈಕೋರ್ಟ್

    ಅಪ್ರಾಪ್ತ ಹುಡುಗಿಯ ಕೈ ಹಿಡಿದು ಸುಂದರವಾಗಿವೆ ಅನ್ನೋದು ಲೈಂಗಿಕ ಅಪರಾಧವಲ್ಲ – ಹೈಕೋರ್ಟ್

    ನವದೆಹಲಿ: ಅಪ್ರಾಪ್ತ ಹುಡುಗಿಯ ಕೈ ಹಿಡಿದುಕೊಂಡು ಸುಂದರವಾಗಿವೆ ಎಂದು ಹೇಳಿದರೆ, ಅದು ಯಾವುದೇ ಲೈಂಗಿಕ ಉದ್ದೇಶದಿಂದ ಕೂಡಿಲ್ಲದೇ ಇದ್ದರೆ, ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (POCSO) ಕಾಯ್ದೆಯನ್ವಯ ಅದು ಲೈಂಗಿಕ ದೌರ್ಜನ್ಯವಾಗುವುದಿಲ್ಲ ಎಂದು ಮೇಘಾಲಯ ಹೈಕೋರ್ಟ್ ಹೇಳಿದೆ.

    crime

    ಕಳೆದ ಮೇ 26ರಂದು ಘಟನೆಗೆ ಸಂಬಂಧಿಸಿದ ಅರ್ಜಿಯೊಂದನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಡಬ್ಲ್ಯೂ. ದಿಯೆಂಗ್ಡೋಹ್, ಅಂತಹ ಪ್ರಕರಣಗಳಲ್ಲಿ ಆರೋಪಿ ಲೈಂಗಿಕ ಉದ್ದೇಶ ಹೊಂದಿಲ್ಲದೆ ಇದ್ದರೆ ಲೈಂಗಿಕ ದೌರ್ಜನ್ಯ ಎಂದು ಹೇಳಲಾಗುವುದಿಲ್ಲ ಎಂದು ತೀರ್ಪು ನೀಡಿದ್ದಾರೆ. ಇದನ್ನೂ ಓದಿ: ಗಂಗಾ ನದಿಯಲ್ಲಿ ಮೀನಿನ ವೈವಿಧ್ಯತೆ ಶೇ.36 ರಷ್ಟು ಹೆಚ್ಚಳ

    ಏನಿದು ಘಟನೆ?: ಒಂಬತ್ತು ವರ್ಷದ ಸಂತ್ರಸ್ತ ಬಾಲಕಿಯ ಬಳಿ 55 ವರ್ಷದ ಅಂಗಡಿ ಮಾಲೀಕನೊಬ್ಬ ನೀರು ತರಲು ಕೇಳಿದ್ದಾನೆ. ಹುಡುಗಿ ನೀರು ತಂದುಕೊಟ್ಟಾಗ ಆರೋಪಿಯು ಆಕೆಯ ಕೈ ಹಿಡಿದುಕೊಂಡು ನೇವರಿಸಿದ್ದಾನೆ. ನಂತರ ಆಕೆಯ ಕೈಗಳು ಸುಂದರವಾಗಿವೆ ಎಂದು ಹೇಳಿದ್ದಾನೆ. ಇದರಿಂದ ಸಂತ್ರಸ್ತೆ ತಕ್ಷಣವೇ ಸ್ಥಳದಿಂದ ತೆರಳಿದ್ದು ತನ್ನ ತಾಯಿಗೆ ಘಟನೆ ಬಗ್ಗೆ ತಿಳಿಸಿದ್ದಾಳೆ. ನಂತರ ತಾಯಿಯೊಂದಿಗೆ ತೆರಳಿ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ. ಇದನ್ನೂ ಓದಿ: ರಜೆ ಬೇಕೆಂದ್ರೆ ಲಾಡ್ಜ್‌ಗೆ ಬನ್ನಿ – ಮಹಿಳಾ ನೌಕರರಿಗೆ ಎಸ್‌ಪಿ ಕಚೇರಿ ಅಧಿಕಾರಿಯಿಂದ ಕಿರುಕುಳ

    crime

    ಆರೋಪಿ ವಿರುದ್ಧ IPC ಸೆಕ್ಷನ್ 354 (ಮಹಿಳೆಯರ ಮೇಲಿನ ದೌರ್ಜನ್ಯ), 354 A (ಲೈಂಗಿಕ ಕಿರುಕುಳ), ಪೋಕ್ಸೋ ಕಾಯ್ದೆ ಸೆಕ್ಷನ್- 7 (ಲೈಂಗಿಕ ದೌರ್ಜನ್ಯ) ಮತ್ತು ಸೆಕ್ಷನ್ 9 (ಉಲ್ಭಣಗೊಂಡ ಲೈಂಗಿಕ ದೌರ್ಜನ್ಯ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಇದನ್ನೂ ಓದಿ; 7 ಬಾರಿ ಗುಂಡೇಟು ತಿಂದಿದ್ದ ಅಧಿಕಾರಿ UPSCಯಲ್ಲಿ ಪಾಸ್

    ಈ ಪ್ರಕರಣವನ್ನು ವಿಚಾರಣೆ ನಡೆಸಿದ ನ್ಯಾಯಾಧೀಶ ದಿಯೆಂಗ್ಡೋಹ್, ಘಟನೆ ಹಗಲು ಹೊತ್ತಿನಲ್ಲೇ ನಡೆದಿದೆ. ಅರ್ಜಿದಾರರು ಸಹ ಬಾಲಕಿಯ ಕೈಗಳನ್ನು ಕೆಲ ಸೆಕೆಂಡುಗಳ ಕಾಲ ಹಿಡಿದಿಟ್ಟುಕೊಂಡಿದ್ದಾರೆ. ಆದರೆ ಆ ಭಾಗವು ಲೈಂಗಿಕ ಉದ್ದೇಶದಿಂದ ಕೂಡಿದೆ ಎಂದು ಹೇಳಲಾಗುವುದಿಲ್ಲ. ಇದರಲ್ಲಿ ಲೈಂಗಿಕವಲ್ಲದ ಉದ್ದೇಶವನ್ನೂ ಊಹಿಸಬಹುದು ಎಂದು ಹೇಳಿದೆ. ಆದ್ದರಿಂದ ಆರೋಪಿ ವಿರುದ್ಧ ಪೋಕ್ಸೊ ಪ್ರಕರಣವನ್ನು ನ್ಯಾಯಾಲಯ ರದ್ದುಗೊಳಿಸಿದೆ ಎಂದು ತೀರ್ಪು ನೀಡಿದ್ದಾರೆ.

    CRIME

    ಆರೋಪಿಗಳ ಪರವಾಗಿ ಹಿರಿಯ ವಕೀಲರಾದ ಎಸ್.ಸಿ.ಚಕ್ರವರ್ತಿ, ಎ.ಬರುವಾ ವಾದ ಮಂಡಿಸಿದರೆ, ಹೆಚ್ಚುವರಿ ಅಡ್ವೊಕೇಟ್ ಜನರಲ್ ಬಿ.ಭಟ್ಟಾಚಾರ್ಯ ಮತ್ತು ಸರ್ಕಾರಿ ವಕೀಲ ಆರ್.ಕಾಲ್ನಿ ಪ್ರತಿವಾದಿಯಾಗಿದ್ದರು.

  • ಸ್ಥಳೀಯ ಸಂಸ್ಥೆ ಚುನಾವಣೆ – ಸುಪ್ರೀಂ ಕೋರ್ಟ್ ಆದೇಶ ಅಧ್ಯಯನಕ್ಕೆ ಸಿಎಂ ಸೂಚನೆ

    ಸ್ಥಳೀಯ ಸಂಸ್ಥೆ ಚುನಾವಣೆ – ಸುಪ್ರೀಂ ಕೋರ್ಟ್ ಆದೇಶ ಅಧ್ಯಯನಕ್ಕೆ ಸಿಎಂ ಸೂಚನೆ

    ನವದೆಹಲಿ: ಮಧ್ಯಪ್ರದೇಶಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಕುರಿತು ಸುಪ್ರೀಂ ಕೋರ್ಟ್ ನೀಡಿರುವ ಆದೇಶವನ್ನು ಸಂಪೂರ್ಣ ಅಧ್ಯಯನ ಮಾಡುವಂತೆ ಕಾನೂನು ಇಲಾಖೆಗೆ ಹಾಗೂ ಅಡ್ವೊಕೇಟ್ ಜನರಲ್ ಅವರಿಗೆ ತಿಳಿಸಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

    supreme court 12

    ನವದೆಹಲಿಯಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸುಪ್ರೀಂ ಕೋರ್ಟ್ ಆದೇಶ ಪ್ರತಿ ನಮಗೆ ಬಂದಿಲ್ಲ. ಚುನಾವಣಾ ಆಯೋಗ ಏನು ತೀರ್ಮಾನ ಹೇಳುತ್ತದೆ ಅದನ್ನು ಪಾಲಿಸಲಾಗುವುದು ಎಂದು ಹೇಳಿದ್ದಾರೆ. ಇದನ್ನೂ ಓದಿ: ಶೀಘ್ರವೇ ಬಿಬಿಎಂಪಿ ಚುನಾವಣೆ: ಸುಪ್ರೀಂನಿಂದ ಮಹತ್ವದ ತೀರ್ಪು

    ಸುಪ್ರೀಂ ಕೋರ್ಟ್ ಆದೇಶ ಎಲ್ಲಾ ರಾಜ್ಯಗಳಿಗೆ ಹಾಗೂ ಸ್ಥಳೀಯ ಸಂಸ್ಥೆಗಳಿಗೆ ಅನ್ವಯವಾಗುತ್ತದೆ. ಚುನಾವಣಾ ಆಯೋಗದೊಂದಿಗೆ ಚರ್ಚಿಸಿ ಅವರು ಸೂಚಿಸಿದಂತೆ ಕ್ರಮ ವಹಿಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿಂದು 129 ಮಂದಿಗೆ ಕೊರೊನಾ ಸೋಂಕು – 128 ಮಂದಿ ಗುಣಮುಖ

  • ಕೇವಲ 1 ರೂ. ಸಂಬಳ ತೆಗೆದುಕೊಳ್ಳುತ್ತೇನೆ: ಪಂಜಾಬ್‌ನ ಹೊಸ ಅಡ್ವೊಕೇಟ್ ಜನರಲ್

    ಕೇವಲ 1 ರೂ. ಸಂಬಳ ತೆಗೆದುಕೊಳ್ಳುತ್ತೇನೆ: ಪಂಜಾಬ್‌ನ ಹೊಸ ಅಡ್ವೊಕೇಟ್ ಜನರಲ್

    ಚಂಡೀಗಢ: ಪಂಜಾಬ್‌ನ ನೂತನ ಅಡ್ವೋಕೇಟ್ ಜನರಲ್ ಅನ್ಮೋಲ್ ರತ್ತನ್ ಸಿಧು ಸಂದರ್ಶನವೊಂದರಲ್ಲಿ, ನನ್ನ ಕೆಲಸಕ್ಕೆ ಕೇವಲ 1 ರೂ. ಸಂಬಳವನ್ನು ತೆಗೆದುಕೊಳ್ಳುತ್ತೇನೆ ಎಂದು ಹೇಳಿಕೆ ನೀಡಿದ್ದಾರೆ.

    ಸರ್ಕಾರದೊಂದಿಗೆ ಒಟ್ಟಾಗಿ ಕೆಲಸ ಮಾಡುವಾಗ ಸಂಪೂರ್ಣ ಪಾರದರ್ಶಕತೆಯೊಂದಿಗೆ ಕೆಲಸವನ್ನು ನಿರ್ವಹಿಸುವುದರೊಂದಿಗೆ ರಾಜ್ಯದ ವೆಚ್ಚಗಳಿಗೆ ಹೊರೆಯಾಗುವುದಿಲ್ಲ. ಇದಕ್ಕಾಗಿ ಕಾನೂನು ವೇತನವಾಗಿ ಕೇವಲ 1 ರೂ. ತೆಗೆದುಕೊಳ್ಳುತ್ತೇನೆ ಎಂದು ಹೇಳಿದ್ದಾರೆ.

    ರೈತ ಕುಟುಂಬದಲ್ಲಿ ಜನಿಸಿದ ಅನ್ಮೋಲ್ ರತ್ತನ್ ಸಿಧು ಹಳ್ಳಿಯ ಸರ್ಕಾರಿ ಶಾಲೆಗಳಲ್ಲಿ ಓದಿದವರು. ಬಳಿಕ ಚಂಡೀಗಢಕ್ಕೆ ಸ್ಥಳಾಂತರಗೊಂಡು ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಕಾನೂನು ವ್ಯಾಸಂಗ ಪೂರೈಸಿದರು. ಕಾಲೇಜು ಜೀವನದಲ್ಲಿ ಒಬ್ಬ ಕ್ರಿಯಾಶೀಲ, ಸಾಮಾಜಿಕ, ರಾಜಕೀಯ ವಿದ್ಯಾರ್ಥಿಯಾಗಿ ಉಳಿದಿದ್ದ ಸಿಧು ಪಂಜಾಬ್ ವಿಶ್ವವಿದ್ಯಾಲಯದ ವಿದ್ಯಾರ್ಥಿ ಪರಿಷತ್ತಿನ ಅಧ್ಯಕ್ಷ ಹುದ್ದೆಯನ್ನು ಅಲಂಕರಿಸಿದ್ದರು. ಇದನ್ನೂ ಓದಿ: ಕುಶಾಲನಗರ-ಸಂಪಾಜೆ ಚತುಷ್ಪಥ ರಸ್ತೆ ನಿರ್ಮಾಣ ಇಲ್ಲ: ಪ್ರತಾಪ್ ಸಿಂಹ ಸ್ಪಷ್ಟನೆ

    1985ರಲ್ಲಿ ವಕೀಲ ವೃತ್ತಿಯನ್ನು ಪ್ರವೇಶಿಸಿ, 1993ರಲ್ಲಿ ಪಂಜಾಬ್‌ನ ಡೆಪ್ಯುಟಿ ಅಡ್ವೊಕೇಟ್ ಜನರಲ್ ಆಗಿ ಸೇರಿಕೊಂಡರು. 2007ರಲ್ಲಿ ಹಿರಿಯ ವಕೀಲರಾಗಿ ನೇಮಕಗೊಂಡ ಸಿಧು ಬಳಿಕ 2014ರ ವರೆಗೆ ಭಾರತದ ಸಹಾಯಕ ಸಾಲಿಸಿಟರ್ ಜನರಲ್ ಆಗಿ ಸೇವೆ ಸಲ್ಲಿಸಿದರು. ಇದನ್ನೂ ಓದಿ: ಪಠ್ಯಪುಸ್ತಕದಲ್ಲಿ ಪುನೀತ್ ಜೀವನ ಕಥನ

    ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ನಲ್ಲಿ ಸಿಬಿಐಗೆ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿಯೂ ಇದ್ದ ಸಿಧು, ಎಂಟು ಬಾರಿ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಬಾರ್ ಅಸೋಸಿಯೇಷನ್‌ನ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ. ಭಾರತದ ಯಾವುದೇ ಹೈಕೋರ್ಟ್ನಲ್ಲಿ ಇಲ್ಲಿಯವರೆಗೆ ಇಷ್ಟೊಂದು ಬಾರಿ ಆಯ್ಕೆಯಾದವರೇ ಇಲ್ಲ.

    ಇದೀಗ ಪಂಜಾಬ್‌ನ ನೂತನ ಅಡ್ವೋಕೇಟ್ ಜನರಲ್ ಆಗಿ ಅನ್ಮೋಲ್ ರತ್ತನ್ ಸಿಧು ಶನಿವಾರ ಅಧಿಕಾರ ವಹಿಸಿಕೊಂಡಿದ್ದಾರೆ.