Tag: Adyanta

  • ಮಯೂರಿ ಅಭಿನಯದ ಆದ್ಯಂತ ರೋಚಕ ಟೀಸರ್ ಸದ್ಯದಲ್ಲೇ ರಿಲೀಸ್

    ಮಯೂರಿ ಅಭಿನಯದ ಆದ್ಯಂತ ರೋಚಕ ಟೀಸರ್ ಸದ್ಯದಲ್ಲೇ ರಿಲೀಸ್

    ವ ನಟ ದಿಲೀಪ್, ಮಯೂರಿ ಖ್ಯಾತ್ರಿ ನಟನೆಯ ಆದ್ಯಂತ ಚಿತ್ರ ಬಿಡುಗಡೆಯ ಬಾಗಿಲಿಗೆ ಬಂದು ನಿಂತಿದೆ. ಈಗಾಗಲೇ ಫಸ್ಟ್ ಲುಕ್ ಪೋಸ್ಟರ್ ಮೂಲಕ ಮೆಚ್ಚುಗೆ ಪಡೆದುಕೊಂಡಿದ್ದ ಆದ್ಯಂತ ಚಿತ್ರ ಒಂದು ಮಿಲಿಯನ್ ವೀಕ್ಷಣೆ ಪಡೆದುಕೊಂಡು ಭರವಸೆ ಮೂಡಿಸಿದೆ. ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸ ಮುಗಿಸಿ ಬಿಡುಗಡೆ ಹೊಸ್ತಿಲಲ್ಲಿರೋ ಚಿತ್ರತಂಡ ಕುತೂಹಲಕಾರಿ ಟೀಸರ್ ಬಿಡುಗಡೆ ಮಾಡಲು ಪ್ಲ್ಯಾನ್ ಮಾಡಿಕೊಂಡಿದೆ. ಇದೇ ತಿಂಗಳು ಟೀಸರ್ ಪ್ರೇಕ್ಷಕರ ಮುಂದೆ ಬರಲಿದೆ.

    ಪುನೀತ್ ಶರ್ಮಾ ಚಿತ್ರದ ಸೂತ್ರದಾರ. ಹಲವು ಸಿನಿಮಾಗಳಲ್ಲಿ ದುಡಿದ ಅನುಭವವನ್ನು ತಮ್ಮ ಮೊದಲ ಚಿತ್ರದ ಮೂಲಕ ಹೊರತರಲು ಸಿದ್ಧವಾಗಿರೋ ಪುನೀತ್ ಶರ್ಮಾ ಕಥೆ ಬರೆದು ತಾವೇ ನಿರ್ದೇಶನ ಮಾಡಿದ್ದಾರೆ. ಆದ್ಯಂತ ಸೈಕಲಾಜಿಕಲ್ ಥ್ರಿಲ್ಲರ್ ಸಿನಿಮಾವಾಗಿದ್ದು, ಹಲವು ಟ್ವಿಸ್ಟ್ ಟರ್ನ್ ಗಳು ಚಿತ್ರದಲ್ಲಿದ್ದು ಸಿನಿರಸಿಕರಿಗೆ ಫುಲ್ ಮನೋರಂಜನೆ ನೀಡೋದರ ಜೊತೆ ರೋಚಕ ಅನುಭವ ನೀಡೋದು ಪಕ್ಕಾ ಅಂತಿದೆ ಚಿತ್ರತಂಡ. ಜೊತೆಗೆ ಅತ್ಯಾಧುನಿಕ ತಂತ್ರಜ್ಞಾನವನ್ನು ಈ ಚಿತ್ರದಲ್ಲಿ ಬಳಸಿಕೊಳ್ಳಲಾಗಿದೆ.

    ಲೇಖನಾ ಕ್ರಿಯೇಷನ್ಸ್ ಹಾಗೂ ಆರ್.ಆರ್ ಮೂವೀಸ್ ಬ್ಯಾನರ್ ನಡಿ ರಮೇಶ್ ಬಾಬು ಆದ್ಯಂತ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಬೆಂಗಳೂರು, ಸಕಲೇಶಪುರ ಮತ್ತು ಕಳಸಾ ಸುತ್ತಾಮುತ್ತ ಸುಂದರ ಲೊಕೇಷನ್ ಗಳಲ್ಲಿ ಚಿತ್ರವನ್ನು ಸೆರೆಹಿಡಿಯಲಾಗಿದ್ದು, ನವೀನ್ ಕುಮಾರ್ ಚೆಲ್ಲಾ ಸಿನಿಮಾಟೋಗ್ರಫಿ, ಕಿಲ್ಲಿಂಗ್ ವೀರಪ್ಪನ್ ಖ್ಯಾತಿಯ ಸಂಗೀತ ನಿರ್ದೇಶಕ ಸ್ಯಾಂಡಿ ಅಡ್ಹಂಕೀ ಮ್ಯೂಸಿಕ್ ಮ್ಯಾಜಿಕ್ ಆದ್ಯಂತ ಚಿತ್ರಕ್ಕಿದೆ. ರಮೇಶ್ ಭಟ್, ಶ್ರೀನಿವಾಸ್, ವಸಿಷ್ಠ, ಪ್ರಶಾಂತ್ ನಟನಾ, ನಿಖಿಲ್ ಚಿತ್ರದ ತಾರಾ ಬಳಗದಲ್ಲಿದ್ದಾರೆ. ಸಾಕಷ್ಟು ಕುತೂಹಲ ಕ್ರಿಯೇಟ್ ಮಾಡಿರೋ ಈ ಚಿತ್ರದ ಟೀಸರ್ ಮೇಲೆ ಈಗ ಎಲ್ಲರ ಕಣ್ಣು ನೆಟ್ಟಿದೆ.

  • ಮಯೂರಿ ಬರ್ತ್ ಡೇ ಸಂಭ್ರಮಕ್ಕೆ ಕಿಕ್ಕೇರಿಸಿತು ‘ಆದ್ಯಂತ’ ಫಸ್ಟ್ ಲುಕ್!

    ಮಯೂರಿ ಬರ್ತ್ ಡೇ ಸಂಭ್ರಮಕ್ಕೆ ಕಿಕ್ಕೇರಿಸಿತು ‘ಆದ್ಯಂತ’ ಫಸ್ಟ್ ಲುಕ್!

    ಕಿರುತೆಯಿಂದ ಕಲಾಯಾನ ಆರಂಭಿಸಿ ಹಿರಿತೆರೆಯಲ್ಲೂ ಯಶಸ್ವಿ ನಾಯಕಿಯಾಗಿ ನೆಲೆ ಕಂಡುಕೊಂಡಿರುವವರು ಮಯೂರಿ ಕ್ಯಾತರಿ. ಪ್ರಬುದ್ಧವಾದ ನಿರ್ಧಾರಗಳ ಮೂಲಕ ಚೆಂದದ ಪಾತ್ರಗಳನ್ನ ಆಯ್ಕೆ ಮಾಡಿಕೊಳ್ಳುತ್ತಿರೋ ಮಯೂರಿ ಇತ್ತೀಚೆಗಷ್ಟೇ ಸಾಂಸಾರಿಕ ಜೀವನಕ್ಕೆ ಅಡಿಯಿರಿಸಿದ್ದಾರೆ. ಆ ಖುಷಿಯಲ್ಲಿರೋ ಅವರ ಪಾಲಿಗೆ ಈ ಬಾರಿಯ ಹುಟ್ಟುಹಬ್ಬ ನಿಜಕ್ಕೂ ಸ್ಪೆಷಲ್ಲು. ಅದನ್ನು ಮತ್ತೂ ಕಳೆಗಟ್ಟಿಸುಯವಂತೆ ‘ಆದ್ಯಂತ’ ಚಿತ್ರದ ಚೆಂದದ ಫಸ್ಟ್ ಲುಕ್ ಬಿಡುಗಡೆಗೊಂಡಿದೆ.

    ಆದ್ಯಂತ ಮಯೂರಿ ನಾಯಕಿಯಾಗಿ ನಟಿಸಿರೋ ಚಿತ್ರ. ಅವರ ಪಾಲಿಗಿದು ಮಹತ್ವಾಕಾಕ್ಷೆಯ ಮೈಲಿಗಲ್ಲು. ಪುನೀತ್ ಶರ್ಮಾ ನಿರ್ದೇಶನದ ಈ ಸಿನಿಮಾವನ್ನು ಲೇಖನಾ ಕ್ರಿಯೇಷನ್ಸ್ ಮತ್ತು ಆರ್.ಆರ್ ಮೂವೀಸ್ ಬ್ಯಾನರಿನಡಿಯಲ್ಲಿ ನಿರ್ಮಾಣವಾಗಿದೆ. ಬಹುಕಾಲದಿಂದಲೂ ಆದ್ಯಂತ ಒಂದಷ್ಟು ಚರ್ಚೆಗೆ ಕಾರಣವಾಗಿತ್ತು. ಭಿನ್ನವಾದ ಟೈಟಲ್ಲು, ಅದಕ್ಕೆ ತಕ್ಕುದಾದ ಕಥೆಯ ಸುಳಿವುಗಳ ಮೂಲಕ ಟಾಕ್ ಕ್ರಿಯೇಟ್ ಮಾಡಿತ್ತು. ಇದೀಗ ಬಿಡುಗಡೆಯಾಗಿರೋ ಫಸ್ಟ್ ಲುಕ್ ಅಂತೂ ಆದ್ಯಂತದತ್ತ ಎಲ್ಲರೂ ಕಣ್ಣು ಕೀಲಿಸುವಂತೆ ಮಾಡಿದೆ.

    ಈ ಸಿನಿಮಾದಲ್ಲಿ ಮಯೂರಿ ಕ್ಯಾತರಿ ಪಾಲಿಗೆ ಬಯಸಿದ ಪಾತ್ರವೇ ಸಿಕ್ಕಿದೆಯಂತೆ. ಅದು ನಟನೆಗೆ ವಿಪುಲ ಅವಕಾಶಗಳಿರೋ ಪಾತ್ರ. ಬೆಂಗಳೂರಿಂದ ಸಕಲೇಶಪುರ ಪ್ರದೇಶಕ್ಕೆ ಶಿಫ್ಟ್ ಆಗಿ ಹೆಜ್ಜೆ ಹೆಜ್ಜೆಗೂ ಕುತೂಹಲ ಮೂಡುವಂಥ ಧಾಟಿಯಲ್ಲಿ ಇಡೀ ಸಿನಿಮಾ ಮೂಡಿ ಬಂದಿದೆಯಂತೆ. ಆದ್ಯಂತದ ಬಗ್ಗೆ ಹೀಗೆ ಅಪಾದಮಸ್ತಕ ಕುತೂಹಲ ಮೂಡಿಕೊಂಡಿರೋದಕ್ಕೆ ಮತ್ತೊಂದು ಪ್ರಧಾನ ಕಾರಣವಾಗಿರೋದು ನಿರ್ದೇಶಕ ಪುನೀತ್ ಶರ್ಮಾರ ಸಿನಿಮಾ ಯಾನ.

    ಪುನೀತ್, ರಾಜಮೌಳಿ ಮತ್ತು ರಾಮ್ ಗೋಪಾಲ್ ವರ್ಮಾರಂಥಾ ಪ್ರಸಿದ್ಧ ನಿರ್ದೇಶಕರ ಗರಡಿಯಲ್ಲಿ ಪಳಗಿಕೊಂಡಿರೋ ಪ್ರತಿಭೆ. ಆ ಅನುಭವಗಳನ್ನೆಲ್ಲ ಪರಿಣಾಮಕಾರಿಯಾಗಿ ಒಟ್ಟುಗೂಡಿಸಿ ಆದ್ಯಂತ ಕಥೆ ಹೆಣೆದಿದ್ದಾರಂತೆ. ಈ ಕಾರಣದಿಂದಲೇ ಇದರ ಕಥೆ ವಿಭಿನ್ನವಾಗಿರಲಿದೆ ಅನ್ನೋ ನಂಬಿಕೆ ಎಲ್ಲರಲ್ಲಿಯೂ ಪಡಿಮೂಡಿಕೊಂಡಿದೆ. ಇದೀಗ ಬಿಡುಗಡೆಗೊಂಡಿರೋ ಫಸ್ಟ್ ಲುಕ್ ಆ ನಂಬಿಕೆಯನ್ನ ಮತ್ತಷ್ಟು ಗಟ್ಟಿಗೊಳಿಸುವಂತಿದೆ.

    ರಮೇಶ್ ಬಾಬು ಟಿ ನಿರ್ಮಾಣ ಮಾಡಿ, ಪ್ರಕಾಶ್ ಎಲಗೋಡು ಮತ್ತು ಮೋಹನ್ ಕುಮಾರ್ ಆರ್.ಎಸ್ ಸಹ ನಿರ್ಮಾಪಕರಾಗಿರೋ ಚಿತ್ರ ಆದ್ಯಂತ. ಇದರ ಚಿತ್ರೀಕರಣ ಸಂಪೂರ್ಣವಾಗಿ ಮುಗಿದಿದೆ. ಇದೀಗ ಪೋಸ್ಟ್ ಪ್ರೊಡಕ್ಷನ್ ಕಾರ್ಯ ಚಾಲ್ತಿಯಲ್ಲಿದೆ. ಮಯೂರಿ, ದಿಲೀಪ್, ರಮೇಶ್ ಭಟ್, ಪ್ರಶಾಂತ್ ನಟನಾ, ಶ್ರೀನಾಥ್ ವಸಿಷ್ಠ, ಟಿಕ್‍ಟಾಕ್ ಖ್ಯಾತಿಯ ನಿಖಿಲ್ ಗೌಡ ಮುಂತಾದವರ ತಾರಾಗಣ ಈ ಚಿತ್ರಕ್ಕಿದೆ. ಮಯೂರಿ ತುಂಬಾನೇ ಹೋಪ್ ಇಟ್ಟುಕೊಂಡಿರೋ ಆದ್ಯಂತ ಕೊರೊನಾ ಕಂಟಕ ಕಳೆದ ಬಳಿಕ ಬಿಡುಗಡೆಯಾಗಲಿದೆ.

     

    View this post on Instagram

     

    Adyanta team ❤️ Best birthday ????

    A post shared by mayuri (@mayurikyatari) on