Tag: Aero India 2021

  • ಏರೋ ಇಂಡಿಯಾ ಅಂತರಾಷ್ಟ್ರೀಯ ವೈಮಾನಿಕ ಪ್ರದರ್ಶನದಲ್ಲಿ ಫುಲ್ ಟೈಟ್ ಸೆಕ್ಯೂರಿಟಿ

    ಏರೋ ಇಂಡಿಯಾ ಅಂತರಾಷ್ಟ್ರೀಯ ವೈಮಾನಿಕ ಪ್ರದರ್ಶನದಲ್ಲಿ ಫುಲ್ ಟೈಟ್ ಸೆಕ್ಯೂರಿಟಿ

    ಬೆಂಗಳೂರು: 13ನೇ ಆವೃತ್ತಿಯ ಏರೋ ಇಂಡಿಯಾ ಅಂತರಾಷ್ಟ್ರೀಯ ವೈಮಾನಿಕ ಪ್ರದರ್ಶನಕ್ಕೆ ಕೌಂಟ್ ಡೌನ್ ಶುರುವಾಗಿದೆ. ಕಳೆದ ವರ್ಷ ನಡೆದ ಅಗ್ನಿ ಅವಘಡದಿಂದ ಎಚ್ಚೆತ್ತ ಭಾರತೀಯ ರಕ್ಷಣಾಲಯ ಈ ಸಲ ಭಾರೀ ಭದ್ರತೆಯನ್ನು ಮಾಡಿಕೊಂಡಿದೆ.

    ಕಳೆದ ಬಾರಿ ಪ್ರದರ್ಶನ ತಾಲೀಮು ವೇಳೆ ಸೂರ್ಯ ಕಿರಣ್ ವಿಮಾನ ದುರಂತ ಹಾಗೂ ವಾಹನ ನಿಲುಗಡೆ ಸ್ಥಳದಲ್ಲಿ ಸಂಭವಿಸಿದ್ದ ಅಗ್ನಿ ದುರಂತ ಹಿನ್ನೆಲೆ, ಫುಲ್ ಅಲರ್ಟ್ ಮಾಡಿಕೊಳ್ಳಲಾಗಿದೆ. ಏರ್ ಶೋ ನಡೆಯುವ ಸ್ಥಳ ಹಾಗೂ ಅದರ ಸುತ್ತಮುತ್ತಲಿನ ಪ್ರದೇಶದಲ್ಲಿ ಬಿಗಿ ಭದ್ರತೆಯನ್ನ ಮಾಡಿಕೊಂಡಿದೆ.

    ವೈಮಾನಿಕ ಪ್ರದರ್ಶನ ನಡೆಯುವ ಆವರಣ ಮಾತ್ರವಲ್ಲದೇ ಅದರ ಸುತ್ತಮುತ್ತಲಿನ 45 ಚದರ ಕಿ.ಮೀ ವ್ಯಾಪ್ತಿಯಲ್ಲಿ ಹದ್ದಿನ ಕಣ್ಣಿಡಲಾಗಿದೆ. ಯಾವುದೇ ಅವಘಢಗಳು ನಡೆಯದಂತೆ ನೋಡಿಕೊಳ್ಳಲು ರಾಜ್ಯ ಸರ್ಕಾರದಿಂದ ನಯಾ ಕಾರ್ಯತಂತ್ರವನ್ನ ಮಾಡಿಕೊಂಡಿದೆ.

    ಜಿಐಎಸ್ (ಭೌಗೋಳಿಕ ಮಾಹಿತಿ ವ್ಯವಸ್ಥೆ) ನಕ್ಷೆ ಸಿದ್ಧಪಡಿಸಿ ಭದ್ರತೆಯನ್ನ ರಾಜ್ಯ ವಿಪತ್ತು ನಿರ್ವಾಹಣಾ ಪ್ರಾಧಿಕಾರ ಪರಿಶೀಲಿಸಲಿದೆ. 45 ಚದರ ಕಿ.ಮೀ ವ್ಯಾಪ್ತಿಯಲ್ಲಿ ದುರ್ಘಟನೆ ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಿದ್ದು, ಆಕಸ್ಮಿಕ ಅನಾಹುತಗಳು ಸಂಭವಿಸಿದ್ರೆ ತಕ್ಷಣ ಕಾರ್ಯಪ್ರವೃತ್ತರಾಗಿ ಘಟನಾ ಸ್ಥಳ ತಲುಪಿ ಹಾನಿ ಪ್ರಮಾಣ ಕಡಿಮೆ ಮಾಡಲು 45 ಚದರ ಕಿ.ಮೀ ವ್ಯಾಪ್ತಿಯನ್ನು ಗ್ರೀಡ್, ಸಬ್ ಗ್ರೀಡ್, ಮೈಕ್ರೋಗ್ರೀಡ್ ಗಳಾಗಿ ವಿಂಗಡಣೆ ಮಾಡಿಕೊಳ್ಳಲಾಗಿದೆ. ಪ್ರತಿ ಗ್ರೀಡ್ 5 ಚದರ ಕಿ.ಮೀ ವ್ಯಾಪ್ತಿಯನ್ನು ಒಳಗೊಂಡಿರುತ್ತದೆ.

    ಗ್ರೀಡ್ ಗಳನ್ನ 1 ಚ.ಕಿ.ಮೀಟರ್ ಸಬ್ ಗ್ರೀಡ್ ಗಳಾಗಿ ವಿಭಜನೆ, ಸಬ್ ಗ್ರೀಡ್ ಗಳನ್ನ ತಲಾ 100 ಚದರ ಮೀ ಮೈಕ್ರೋ ಗ್ರೀಡ್ ಗಳಾಗಿ ಬೇರ್ಪಡಿಸಲಾಗಿದೆ. ಪ್ರತಿ ಗ್ರೀಡ್ ಗೂ 1,2,3 ಸಂಖ್ಯೆ ನೀಡಿ ಗುರ್ತಿಸಲಾಗಿದ್ದು, ವೈಮಾನಿಕ ಪ್ರದರ್ಶನದ ವ್ಯಾಪ್ತಿಯ ಒಳಾಂಗಣದ ವಿಪತ್ತು ನಿರ್ವಾಹಣೆಗೆ ಭಾರತೀಯ ವಾಯುಸೇನೆಯ ಹಿರಿಯ ಅಧಿಕಾರಿಗಳು ಕಮಾಂಡಿಂಗ್ ಅಧಿಕಾರಿಗಳಾಗಿ ನೇಮಕ ಮಾಡಲಾಗಿದೆ. ಹೊರಾಂಗಣ ವಿಪತ್ತು ನಿರ್ವಾಹಣೆಗೆ ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಗಳನ್ನು ಕಮಾಂಡಿಂಗ್ ಅಧಿಕಾರಿಯಾಗಿ ನೇಮಕ ಮಾಡಲಾಗಿದೆ.

    ಸಹಾಯಕ ಕಮಾಂಡಿಂಗ್ ಅಧಿಕಾರಿಗಳನ್ನಾಗಿ ಸಂಚಾರಿ ಪೊಲೀಸ್, ಬಿಬಿಎಂಪಿ, ಜಿಲ್ಲಾಡಳಿತ, ಆರೋಗ್ಯ ಇಲಾಖೆ, ಆರೋಗ್ಯ ಇಲಾಖೆ, ಅಗ್ನಿ ಶಾಮಕದಳ, ಪೊಲೀಸ್ ಹಾಗೂ ರಕ್ಷಣಾ ಇಲಾಖೆ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳ ನೇಮಕವಾಗಿದೆ. ಜಲಮಂಡಳಿ, ಲೋಕೋಪಯೋಗಿ, ಬೆಸ್ಕಾಂ ಅಧಿಕಾರಿಗಳನ್ನು ನೋಡಲ್ ಅಧಿಕಾರಿಗಳಾಗಿ ನೇಮಿಸಿ ತರಬೇತಿಯನ್ನ ನೀಡಲಾಗ್ತಿದೆ. ಆಕಸ್ಮಿಕ ಅನಾಹುತಗಳ ಬಗ್ಗೆ ನಿಗಾ, ಹಾಗೂ ಅಧಿಕಾರಿಗಳಿಗೆ ಸೂಚನೆ ನೀಡಲು ರಾಜ್ಯ ವಿಪತ್ತು ನಿರ್ವಾಹಣಾ ಪ್ರಾಧಿಕಾರದಿಂದ ಇಂಟಿಗ್ರೇಟೆಡ್ ಕಮಾಂಡಿಂಗ್ ಆಂಡ್ ಕಂಟ್ರೋಲ್ ಕೊಠಡಿ ಸ್ಥಾಪನೆ ಮಾಡಲಾಗಿದೆ.

  • ಬೆಂಗಳೂರಲ್ಲೇ ಫೆಬ್ರವರಿ 3 ರಿಂದ 7ರವರೆಗೆ ನಡೆಯಲಿದೆ ಏರ್ ಶೋ

    ಬೆಂಗಳೂರಲ್ಲೇ ಫೆಬ್ರವರಿ 3 ರಿಂದ 7ರವರೆಗೆ ನಡೆಯಲಿದೆ ಏರ್ ಶೋ

    – ಪೂರ್ವಭಾವಿ ಸಭೆ ನಡೆಸಿದ ರಾಜನಾಥ್ ಸಿಂಗ್

    ನವದೆಹಲಿ: ಏಷ್ಯಾದ ಅತಿ ದೊಡ್ಡ ಏರ್ ಶೋ ‘ಏರೋ ಇಂಡಿಯಾ’ ಬೆಂಗಳೂರಿನಲ್ಲೇ 2021ರ ಫೆಬ್ರವರಿ 3 ರಿಂದ 7ರವರೆಗೆ ನಡೆಯಲಿದೆ ಎಂಬ ಮಾಹಿತಿ ಲಭ್ಯವಾಗಿದೆ.

    ‘ಏರೋ ಇಂಡಿಯಾ’ ಏರ್ ಶೋ ಸಂಬಂಧ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಶುಕ್ರವಾರ ಪೂರ್ವಭಾವಿ ಸಭೆ ನಡೆಸಿದ್ದು, ಪ್ರತಿ ವರ್ಷದಂತೆ ಬೆಂಗಳೂರಿನ ಯಲಹಂಕದ ವಾಯುನೆಲೆಯಲ್ಲಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಇಲಾಖೆ ಮೂಲಗಳು ಮಾಹಿತಿ ನೀಡಿವೆ.

    ಕೋವಿಡ್-19 ಹಿನ್ನೆಲೆಯಲ್ಲಿ ಈ ಬಾರಿ ಪೂರ್ಣ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಸಚಿವರು ಸಭೆಯಲ್ಲಿ ಸೂಚಿಸಿದ್ದಾರೆ. ಈಗಾಗಲೇ ಖ್ಯಾತ ವೈಮಾನಿಕ ಸಂಸ್ಥೆಗಳು ಏರೋ ಇಂಡಿಯಾದಲ್ಲಿ ಪಾಲ್ಗೊಳ್ಳಲು ಉತ್ಸುಕತೆ ತೋರಿವೆ. ಹಲವು ರಾಷ್ಟ್ರಗಳ ಪ್ರತಿನಿಧಿಗಳು, ರಕ್ಷಣಾ ಕ್ಷೇತ್ರದ ಪ್ರಮುಖ ಸಂಸ್ಥೆಗಳು ಹಾಗೂ ಹೂಡಿಕೆದಾರರು ಏರ್ ಶೋ ನಲ್ಲಿ ಭಾಗಿಯಾಗಲಿದ್ದಾರೆ.

    1996ರಲ್ಲಿ ಮೊದಲ ಏರೋ ಇಂಡಿಯಾ ವೈಮಾನಿಕ ಪ್ರದರ್ಶನ ಬೆಂಗಳೂರಿನಲ್ಲಿ ಶುರುವಾಗಿತ್ತು. ಅಂದಿನಿಂದಲೂ ಏರ್ ಶೋ ಬೆಂಗಳೂರಿನಲ್ಲೇ ನಡೆಯುತ್ತಿದೆ. ಪ್ರತಿ ವರ್ಷ ಫೆಬ್ರವರಿಯಲ್ಲಿ ಏರ್ ಶೋ ನಡೆಯುತ್ತದೆ. ಈ ವೇಳೆ ಲೋಹದ ಹಕ್ಕಿಗಳನ್ನು ನೋಡೋದೆ ಚೆಂದ. ಇದೀಗ ಇದರ 13ನೇ ಆವೃತ್ತಿ ನಡೆಯಲಿದೆ. ಕೋವಿಡ್-19 ಹರಡುವಿಕೆ ತಡೆಯಲು ಸೂಕ್ತ ಮುನ್ನೆಚ್ಚರಿಕೆ ವಹಿಸಲಾಗುವುದು. ನಿಗದಿಯಂತೆಯೇ ಏರ್ ಶೋ ಕಾರ್ಯಕ್ರಮ ನಡೆಯಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

    ಕಳೆದ ವರ್ಷ ಫೆಬ್ರವರಿಯಲ್ಲಿ ಏರ್ ಶೋ ವೇಳೆ ಭಾರೀ ಅವಘಡ ಸಂಭವಿಸಿತ್ತು. ಸ್ಥಳದಲ್ಲಿದ್ದ ಒಣ ಹುಲ್ಲಿನಿಂದಾಗಿ ಎಲ್ಲೆಡೆ ಬೆಂಕಿ ವ್ಯಾಪಿಸಿದ್ದು, ಸುಮಾರು 32 ಎಕರೆ ಪ್ರದೇಶದಲ್ಲಿ ಬೆಂಕಿಯ ಜ್ವಾಲೆ ಹರಡಿತ್ತು. ಪರಿಣಾಮ ಪಾರ್ಕ್ ಮಾಡಿದ್ದ 200 ಕ್ಕೂ ಹೆಚ್ಚು ಕಾರುಗಳು ಬೆಂಕಿಗಾಹುತಿಯಾಗಿದ್ದವು. ಕಾರು ನಿಲ್ಲಿಸಿದ್ದ ಸ್ಥಳ ಖಾಸಗಿ ಪಾರ್ಕಿಂಗ್ ಪ್ರದೇಶವಾಗಿದ್ದು, ಘಟನೆ ಸಂಬಂಧ ಸಾರ್ವಜನಿಕರು ಸಾಮಾಜಿಕ ಜಾಲತಾಣದಲ್ಲಿ ಬೆಂಕಿಯ ತೀವ್ರತೆಯ ವಿಡಿಯೋ, ಫೋಟೋ ತೆಗೆದು ಪೋಸ್ಟ್ ಮಾಡಿದ್ದರು.