ಕಾಬೂಲ್: ವಾರಾಂತ್ಯದಲ್ಲಿ ಪೂರ್ವ ಅಫ್ಘಾನಿಸ್ತಾನಕ್ಕೆ (Afghanistan Earthquake) ಅಪ್ಪಳಿಸಿದ ಪ್ರಬಲ ಭೂಕಂಪದಲ್ಲಿ 2,200 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ತಾಲಿಬಾನ್ ಅಧಿಕಾರಿಗಳು ತಿಳಿಸಿದ್ದಾರೆ.
ಭಾನುವಾರ ಮಧ್ಯರಾತ್ರಿಯ ಮೊದಲು ಅಫ್ಘಾನಿಸ್ತಾನದಲ್ಲಿ 6.3 ತೀವ್ರತೆಯ ಭೂಕಂಪ ಸಂಭವಿಸಿದ್ದು, ಪಾಕಿಸ್ತಾನದ ಗಡಿಯಲ್ಲಿರುವ ಕುನಾರ್ ಪ್ರಾಂತ್ಯದಲ್ಲಿ ಅತ್ಯಂತ ಭೀಕರವಾದ ವಿನಾಶಕ್ಕೆ ಕಾರಣವಾಗಿದೆ. ನೂರಾರು ಜನರು ಹತ್ತಿರದ ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆ.
ಅಫ್ಘಾನಿಸ್ತಾನದ ಭೂಕಂಪದ ಕೇಂದ್ರಬಿಂದು ಜಲಾಲಾಬಾದ್ನಿಂದ ಸುಮಾರು 27 ಕಿಲೋಮೀಟರ್ ದೂರದಲ್ಲಿತ್ತು. ಭೂಕಂಪವು ಭೂಮಿಯ ಮೇಲ್ಮೈಯಿಂದ ಎಂಟು ಕಿಲೋಮೀಟರ್ ಕೆಳಗೆ ಆಳದಲ್ಲಿ ಸಂಭವಿಸಿದೆ ಎಂದು ಯುಎಸ್ಜಿಎಸ್ ತಿಳಿಸಿದೆ.
ಕಾಬೂಲ್: ಅಫ್ಘಾನಿಸ್ತಾನದಲ್ಲಿ (Afghanistan) ಸಂಭವಿಸಿದ 6.0 ತೀವ್ರತೆಯ ಪ್ರಬಲ ಭೂಕಂಪದಿಂದ (Earthquake) 1,411ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ. ಈ ದುರಂತದಲ್ಲಿ ಸುಮಾರು 3,124 ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಕುನಾರ್ನಲ್ಲಿ ನೆಲಸಮವಾದ ಮನೆಗಳ ಅವಶೇಷಗಳಲ್ಲಿ ಬದುಕುಳಿದವರಿಗಾಗಿ ರಕ್ಷಣಾ ಕಾರ್ಯಕರ್ತರು ಮಂಗಳವಾರವೂ ಹುಡುಕಾಟ ನಡೆಸಿದ್ದಾರೆ. ದೂರದ ಹಳ್ಳಿಗಳಲ್ಲಿ ಗಾಯಗೊಂಡವರನ್ನು ಸ್ಥಳಾಂತರಿಸುವ ಕೆಲಸ ಇನ್ನೂ ನಡೆಯುತ್ತಿದೆ. ಸಾರ್ವಜನಿಕರು ಸಹ ಬರಿ ಕೈಯಲ್ಲೇ ಅವಶೇಷಗಳ ಅಡಿಯಲ್ಲಿ ಸಿಲುಕಿದವರ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ ಎಂದು ವರದಿಯಾಗಿದೆ.
ಅಫ್ಘಾನಿಸ್ತಾನದ ಸಂಕಷ್ಟದ ಸಮಯದಲ್ಲಿ ಅವರಿಗೆ ಸಹಾಯ ಮಾಡಲು, ಭಾರತವು ಡೇರೆಗಳು ಮತ್ತು ಆಹಾರ ಸಾಮಗ್ರಿಗಳನ್ನು ದೇಶಕ್ಕೆ ರವಾನಿಸಿದೆ ಎಂದು ಜೈಶಂಕರ್ ತಿಳಿಸಿದ್ದಾರೆ. ಮುಂದಿನ ದಿನಗಳಲ್ಲಿ ಅಫ್ಘಾನಿಸ್ತಾನಕ್ಕೆ ಹೆಚ್ಚಿನ ನೆರವು ನೀಡಲಾಗುವುದು ಎಂದಿದ್ದಾರೆ.
ಕಾಬೂಲ್: ಪೂರ್ವ ಅಫ್ಘಾನಿಸ್ತಾನದಲ್ಲಿ (Afghanistan) ಸಂಭವಿಸಿದ 6.3 ತೀವ್ರತೆಯ ಭೂಕಂಪಕ್ಕೆ ಇದುವರೆಗೆ ಸುಮಾರು 800 ಮಂದಿ ಮೃತಪಟ್ಟಿದ್ದಾರೆ. ದುರಂತಕ್ಕೆ ವಿಷಾದ ವ್ಯಕ್ತಪಡಿಸಿರುವ ಭಾರತ ಅಗತ್ಯ ನೆರವಿಗೆ ಧಾವಿಸಿದೆ.
ಭೂಕಂಪವು ಅಫ್ಘಾನಿಸ್ತಾನ ಮತ್ತು ನೆರೆಯ ಪಾಕಿಸ್ತಾನವನ್ನು ಕಂಗೆಡಿಸಿದೆ. ಮನೆಗಳ ಕೆಳಗೆ ಹೂತುಹೋಗಿರುವವರನ್ನು ರಕ್ಷಿಸಲು ರಕ್ಷಣಾ ಸಿಬ್ಬಂದಿ ಕಾರ್ಯಾಚರಣೆ ಮುಂದುವರಿಸಿದ್ದಾರೆ. ಭೂಕಂಪದ ತೀವ್ರತೆಗೆ ಸುಮಾರು 2,500 ಮಂದಿ ಗಾಯಗೊಂಡಿದ್ದಾರೆ.
ಅಫ್ಘಾನಿಸ್ತಾನದಲ್ಲಿ ವಿಪತ್ತು ಸಂಭವಿಸುತ್ತಿದ್ದಂತೆ, ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಅಫ್ಘಾನ್ ವಿದೇಶಾಂಗ ಸಚಿವ ಮೌಲವಿ ಅಮೀರ್ ಖಾನ್ ಮುತ್ತಕಿ ಅವರೊಂದಿಗೆ ಮಾತನಾಡಿ, ದುರಂತದಲ್ಲಿ ನಾಗರಿಕರ ಸಾವಿಗೆ ಸಂತಾಪ ಸೂಚಿಸಿದ್ದಾರೆ. ಅಫ್ಘಾನಿಸ್ತಾನದ ಸಂಕಷ್ಟದ ಸಮಯದಲ್ಲಿ ಅವರಿಗೆ ಸಹಾಯ ಮಾಡಲು, ಭಾರತವು ಡೇರೆಗಳು ಮತ್ತು ಆಹಾರ ಸಾಮಗ್ರಿಗಳನ್ನು ದೇಶಕ್ಕೆ ರವಾನಿಸಿದೆ ಎಂದು ಜೈಶಂಕರ್ ತಿಳಿಸಿದ್ದಾರೆ. ಮುಂದಿನ ದಿನಗಳಲ್ಲಿ ಅಫ್ಘಾನಿಸ್ತಾನಕ್ಕೆ ಹೆಚ್ಚಿನ ನೆರವು ನೀಡಲಾಗುವುದು ಎಂದಿದ್ದಾರೆ.
ಭಾರತ ಇಂದು ಕಾಬೂಲ್ನಲ್ಲಿ 1000 ಕುಟುಂಬ ಡೇರೆಗಳನ್ನು ತಲುಪಿಸಿದೆ. ಭಾರತೀಯ ಮಿಷನ್ 15 ಟನ್ ಆಹಾರ ಸಾಮಗ್ರಿಗಳನ್ನು ತಕ್ಷಣವೇ ಕಾಬೂಲ್ನಿಂದ ಕುನಾರ್ಗೆ ಸಾಗಿಸುತ್ತಿದೆ ಎಂದು ಜೈಶಂಕರ್ ತಿಳಿಸಿದ್ದಾರೆ.
ಭಾನುವಾರ ಮಧ್ಯರಾತ್ರಿಯ ಮೊದಲು ಅಫ್ಘಾನಿಸ್ತಾನದಲ್ಲಿ 6.3 ತೀವ್ರತೆಯ ಭೂಕಂಪ ಸಂಭವಿಸಿದ್ದು, ಪಾಕಿಸ್ತಾನದ ಗಡಿಯಲ್ಲಿರುವ ಕುನಾರ್ ಪ್ರಾಂತ್ಯದಲ್ಲಿ ಅತ್ಯಂತ ಭೀಕರವಾದ ವಿನಾಶಕ್ಕೆ ಕಾರಣವಾಗಿದೆ. ಕುನಾರ್ ಪ್ರಾಂತ್ಯದಲ್ಲಿ ಮಾತ್ರ ಸುಮಾರು 800 ಜನರು ಸಾವನ್ನಪ್ಪಿದ್ದಾರೆ. ನೂರಾರು ಜನರು ಹತ್ತಿರದ ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆ.
ಅಫ್ಘಾನಿಸ್ತಾನದ ಭೂಕಂಪದ ಕೇಂದ್ರಬಿಂದು ಜಲಾಲಾಬಾದ್ನಿಂದ ಸುಮಾರು 27 ಕಿಲೋಮೀಟರ್ ದೂರದಲ್ಲಿತ್ತು. ಭೂಕಂಪವು ಭೂಮಿಯ ಮೇಲ್ಮೈಯಿಂದ ಎಂಟು ಕಿಲೋಮೀಟರ್ ಕೆಳಗೆ ಆಳದಲ್ಲಿ ಸಂಭವಿಸಿದೆ ಎಂದು ಯುಎಸ್ಜಿಎಸ್ ತಿಳಿಸಿದೆ.
ಕುನಾರ್ ಪ್ರಾಂತ್ಯದಲ್ಲಿ ನೂರ್ ಗುಲ್, ಸೋಕಿ, ವಾಟ್ಪುರ್, ಮನೋಗಿ ಮತ್ತು ಚಾಪಾ ದಾರಾ ಪ್ರದೇಶಗಳು ಅತಿ ಹೆಚ್ಚು ಹಾನಿಗೊಳಗಾಗಿವೆ. ದುರ್ಬಲವಾದ ಮಣ್ಣು ಮತ್ತು ಕಲ್ಲಿನಿಂದ ನಿರ್ಮಿಸಲಾದ ಇಡೀ ಹಳ್ಳಿಗಳು ಕುಸಿದಿವೆ. ಭೂಕುಸಿತಗಳು ಪ್ರಮುಖ ಮಾರ್ಗಗಳನ್ನು ಮುಚ್ಚಿಹಾಕಿವೆ. ಸಂವಹನ ಸ್ಥಗಿತವು ರಕ್ಷಣಾ ಮತ್ತು ಪರಿಹಾರ ಪ್ರಯತ್ನಗಳನ್ನು ಮತ್ತಷ್ಟು ಕುಂಠಿತಗೊಳಿಸಿದೆ.
ಕಾಬೂಲ್: ಅಫ್ಘಾನಿಸ್ತಾನದಲ್ಲಿ (Afghanistan) ಸಂಭವಿಸಿದ 6.0 ತೀವ್ರತೆಯ ಪ್ರಬಲ ಭೂಕಂಪದಿಂದಾಗಿ ಈವರೆಗೆ 800 ಮಂದಿ ಬಲಿಯಾಗಿದ್ದು, 2000ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ಭಾನುವಾರ ಮಧ್ಯರಾತ್ರಿ (ಆ.31) ಜಲಾಲಾಬಾದ್ನ ಪೂರ್ವ ಈಶಾನ್ಯಕ್ಕೆ ಸುಮಾರು 27 ಕಿ.ಮೀ ದೂರದಲ್ಲಿ 6.0 ತೀವ್ರತೆಯ ಭೂಕಂಪ ದಾಖಲಾಗಿದೆ. ಪೂರ್ವ ಅಫ್ಘಾನಿಸ್ತಾನದಾದ್ಯಂತ ಮೊದಲು ಭೂಕಂಪ ಸಂಭವಿಸಿದ ನಂತರ 30 ನಿಮಿಷಗಳ ಅವಧಿಯಲ್ಲಿಯೇ ಮತ್ತೆ ಮೂರರಿಂದ ನಾಲ್ಕು ಕಂಪನಗಳು ಸಂಭವಿಸಿವೆ. ಅವುಗಳ ತೀವ್ರತೆ 4 ರಿಂದ 5ರವರೆಗೆ ಇತ್ತು ಎಂದು ಮೂಲಗಳು ತಿಳಿಸಿವೆ.ಇದನ್ನೂ ಓದಿ: ಅಫ್ಘಾನಿಸ್ತಾನದಲ್ಲಿ ಪ್ರಬಲ ಭೂಕಂಪ – 622 ಮಂದಿ ಸಾವು, 500ಕ್ಕೂ ಹೆಚ್ಚು ಜನರಿಗೆ ಗಾಯ
ಈ ಕುರಿತು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ಮಾಹಿತಿ ಪ್ರಕಾರ, ಸ್ಥಳೀಯ ಕಾಲಮಾನ ರಾತ್ರಿ 11:47ಕ್ಕೆ ಭೂಕಂಪ ಸಂಭವಿಸಿದೆ. ಭೂಕಂಪದ ಕೇಂದ್ರಬಿಂದುವು ಆಗ್ನೇಯ ಅಫ್ಘಾನಿಸ್ತಾನದಲ್ಲಿ 160 ಕಿ.ಮೀ ಆಳದಲ್ಲಿ 34.50ಓ ಅಕ್ಷಾಂಶ ಮತ್ತು 70.81ಇ ರೇಖಾಂಶದಲ್ಲಿದೆ ಎಂದು ತಿಳಿಸಿದೆ.
ಭೂಕಂಪದಿಂದಾಗಿ ಕುನಾರ್ ಪ್ರಾಂತ್ಯದ ಮೂರು ಗ್ರಾಮಗಳು ಸಂಪೂರ್ಣವಾಗಿ ನೆಲಸಮವಾಗಿದ್ದು, ನುರ್ಗಲ್, ಚಾವ್ಕೇ ಮತ್ತು ವಾಟಪುರ್ ಜಿಲ್ಲೆಗಳಲ್ಲಿ ತೀವ್ರ ಹಾನಿಯಾಗಿದೆ. ಜೊತೆಗೆ ಹಲವರು ಮನೆಯ ಛಾವಣಿ ಅಡಿಯಲ್ಲಿಯೇ ಸಿಲುಕಿ ಸಾವನ್ನಪ್ಪಿದ್ದಾರೆ. ಸದ್ಯ ಪಾಕಿಸ್ತಾನದ ಖೈಬರ್ ಪಖ್ತುನ್ಖ್ವಾ ಪ್ರದೇಶದ ಗಡಿಯಲ್ಲಿ ರಕ್ಷಣಾ ತಂಡಗಳು ಕಾರ್ಯಾಚರಣೆ ನಡೆಸಿವೆ. ಪಾಕಿಸ್ತಾನ ಮತ್ತು ಉತ್ತರ ಭಾರತದ ಕೆಲವು ಪ್ರದೇಶಗಳಲ್ಲಿಯೂ ಭೂಕಂಪದ ಅನುಭವವಾಗಿದೆ. ದೆಹಲಿಯ ಎನ್ಸಿಆರ್ ಮತ್ತು ಇತರ ನಗರಗಳ ನಿವಾಸಿಗಳು ಕಂಪನದ ಅನುಭವವಾಗಿ ಭಯದಿಂದ ಮನೆಯಿಂದ ಹೊರಗೆ ಓಡಿದ್ದಾರೆ ಎಂದು ವರದಿಯಾಗಿದೆ.
Deeply saddened by the loss of lives due to the earthquake in Afghanistan. Our thoughts and prayers are with the bereaved families in this difficult hour, and we wish a speedy recovery to the injured. India stands ready to provide all possible humanitarian aid and relief to those…
ಇನ್ನೂ ಈ ಸಂಬಂಧ ಪ್ರಧಾನಿ ಮೋದಿ ಅಫ್ಘಾನಿಸ್ತಾನಕ್ಕೆ ಅಗತ್ಯ ನೆರವು ಕೊಡ್ತೇವೆ ಎಂದು ಹೇಳಿದ್ದಾರೆ. ಅಫ್ಘಾನಿಸ್ತಾನದಲ್ಲಿ ಸಂಭವಿಸಿದ ಭೂಕಂಪದಿಂದ ಉಂಟಾದ ಜೀವಹಾನಿಯಿಂದ ತೀವ್ರ ದುಃಖಿತನಾಗಿದ್ದೇನೆ. ಇಂತಹ ಸಮಯದಲ್ಲಿ ಮೃತರ ಕುಟುಂಬಸ್ಥರಿಗಾಗಿ ನಾವು ಪಾರ್ಥಿಸುತ್ತೇವೆ. ಗಾಯಗೊಂಡವರು ಶೀಘ್ರವಾಗಿ ಗುಣಮುಖರಾಗಲಿ. ಮಾನವೀಯ ದೃಷ್ಟಿಯಿಂದ ಅಗತ್ಯವಿರುವ ಎಲ್ಲಾ ರೀತಿಯ ಸಹಾಯ ಮಾಡಲು ಸಿದ್ಧವಿದ್ದೇನೆ ಎಂದು ತಿಳಿಸಿದ್ದಾರೆ. ಇದರ ಬೆನ್ನಲ್ಲೇ 15 ಟನ್ ಪರಿಹಾರ ಸಾಮಾಗ್ರಿ ತೆರಳಿದೆ.ಇದನ್ನೂ ಓದಿ: ಭಯೋತ್ಪಾದನೆ ವಿಚಾರದಲ್ಲಿ ಡಬಲ್ ಸ್ಟ್ಯಾಂಡರ್ಡ್ ಸರಿಯಲ್ಲ: ಪಾಕ್ ಪ್ರಧಾನಿ ಮುಂದೆಯೇ ಪಹಲ್ಗಾಮ್ ದಾಳಿ ವಿಚಾರ ಪ್ರಸ್ತಾಪಿಸಿದ ಮೋದಿ