Tag: afghanistan

  • ಅಲ್‌ಖೈದಾ ಮುಖ್ಯಸ್ಥ ಝವಾಹಿರಿ ಹತ್ಯೆ- ಮೋಸ್ಟ್ ವಾಂಟೆಡ್ ಉಗ್ರನ ಮೇಲೆ ಡ್ರೋಣ್ ಸ್ಟ್ರೈಕ್‌

    ಅಲ್‌ಖೈದಾ ಮುಖ್ಯಸ್ಥ ಝವಾಹಿರಿ ಹತ್ಯೆ- ಮೋಸ್ಟ್ ವಾಂಟೆಡ್ ಉಗ್ರನ ಮೇಲೆ ಡ್ರೋಣ್ ಸ್ಟ್ರೈಕ್‌

    ವಾಷಿಂಗ್ಟನ್: ಅಫ್ಘಾನಿಸ್ತಾನದಲ್ಲಿ ನಡೆದ ಅಮೆರಿಕದ ಡ್ರೋನ್ ದಾಳಿಯಲ್ಲಿ ಅಲ್‌ಕೈದಾ ಉಗ್ರ ಸಂಘಟನೆ ಮುಖ್ಯಸ್ಥ ಆಯ್ಮಾನ್ ಅಲ್ ಝವಾಹಿರಿಯನ್ನು ಹತ್ಯೆ ಮಾಡಲಾಗಿದೆ ಎಂದು ವರದಿಯಾಗಿದೆ.

    ಕಾಬೂಲ್‌ನ ನಿವಾಸದ ಬಾಲ್ಕನಿಯಲ್ಲಿ ಝವಾಹಿರಿಯನ್ನು ಡ್ರೋನ್ ದಾಳಿಯ ಮೂಲಕ ಹತ್ಯೆ ಮಾಡಲಾಗಿದೆ. ಅಫ್ಘಾನಿಸ್ತಾನದಲ್ಲಿ ನಮ್ಮ ಪಡೆಗಳು ಈಗ ಇಲ್ಲ ಎಂದು ಅಮೆರಿಕ ಆಡಳಿತದ ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಅಂತಾರಾಷ್ಟ್ರೀಯ ಒಪ್ಪಿಗೆ ಸಿಗಬೇಕಾದರೆ ಮಾನವ ಹಕ್ಕು ಗೌರವಿಸಿ: ತಾಲಿಬಾನ್‍ಗೆ UN ಖಡಕ್ ಎಚ್ಚರಿಕೆ

    ಮೋಸ್ಟ್ ವಾಂಟೆಡ್ ಉಗ್ರನಾಗಿದ್ದ ಆಯ್ಮಾನ್ ಅಲ್ ಝವಾಹಿರಿ, ಒಸಾಮಾ ಬಿಲ್ ಲಾಡೆನ್ ನಂತರದಲ್ಲಿ ಅಲ್‌ಖೈದಾ ಮುಖ್ಯಸ್ಥನಾಗಿದ್ದ. 2001ರ ಸೆಪ್ಟೆಂಬರ್ 11ರಂದು ಅಮೆರಿಕದ ವಿಶ್ವ ವಾಣಿಜ್ಯ ಕೇಂದ್ರದ ಮೇಲೆ ನಡೆದಿದ್ದ ದಾಳಿಯ ಪ್ರಮುಖ ಶಂಕಿತ ಸಂಚುಕೋರನೂ ಆಗಿದ್ದನು. ಜೊತೆಗೆ ಜಾಗತಿಕ ಭಯೋತ್ಪಾದನಾ ಜಾಲದ ಪ್ರಮುಖ ಆದರ್ಶವಾದಿಯಾಗಿದ್ದ ಎಂದು ಹೇಳಲಾಗಿದೆ. ಇದನ್ನೂ ಓದಿ: ಆಕಾಶದಲ್ಲಿ ಮಿಂಚಿ ಹಿಂದೂ ಮಹಾಸಾಗರಕ್ಕೆ ಅಪ್ಪಳಿಸಿದ ಚೀನಾ ರಾಕೆಟ್

    2011ರಲ್ಲಿ ಅಮೆರಿಕದ ಮೇಲಿನ ದಾಳಿಯ ನಂತರ ಝವಾಹಿರಿ ಅಲ್‌ಕೈದಾ ಗುಂಪಿನ ಅಧ್ಯಕ್ಷತೆ ವಹಿಸಿದ್ದ. ಈತನ ನಾಯಕತ್ವದಿಂದಾಗಿ ಜಿಹಾದಿಗಳ ಚಳವಳಿಯಲ್ಲಿ ಮುಂದಾಳತ್ವ ವಹಿಸಿ ಇರಾಕ್ ಮತ್ತು ಸಿರಿಯಾಗಳಲ್ಲಿ ಹೆಚ್ಚಿನ ಭೂ ಪ್ರದೇಶವನ್ನು ವಶಪಡಿಸಿಕೊಂಡಿದ್ದರಿಂದ, ಇವರ ನಾಯತ್ವ ಹಿಂಪಡೆಯಲಿಲ್ಲ.

    ಝವಾಹಿರಿಯು ಅಫ್ಗಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿ ಇದ್ದನು. ಇದು 2020ರಲ್ಲಿ ದೋಹಾದಲ್ಲಿ ಅಮೆರಿಕದ ಪಡೆಗಳನ್ನು ವಾಪಸ್ ಕರೆಸಿಕೊಳ್ಳುವ ಸಂದರ್ಭದಲ್ಲಿ ತಾಲಿಬಾನ್ ಜತೆ ಮಾಡಿಕೊಂಡಿದ್ದ ಒಪ್ಪಂದದ ಸ್ಪಷ್ಟ ಉಲ್ಲಂಘನೆ. ಆತನ ವಿರುದ್ಧದ ಕಾರ್ಯಾಚರಣೆಗೆ ಅಂತಿಮ ಅನುಮೋದನೆ ನೀಡಿದ್ದೆ. ಇದೀಗ ನ್ಯಾಯ ಒದಗಿಸಲಾಗಿದೆ. ಉಗ್ರ ಸಂಘಟನೆ ನಾಯಕ ಇನ್ನಿಲ್ಲ ಎಂದು ಅಮೆರಿಕದ ಅಧ್ಯಕ್ಷ ಜೋ ಬೈಡನ್ ಹೇಳಿದ್ದಾರೆ. ಇದನ್ನೂ ಓದಿ: ಭಾರತಕ್ಕೆ ಮತ್ತೊಂದು ಚಿನ್ನ ತಂದುಕೊಟ್ಟ ವೈಟ್‍ಲಿಫ್ಟರ್ ‘ಅಚಿಂತಾ ಶೆಯುಲಿ’ – ಮೋದಿಯಿಂದ ಅಭಿನಂದನೆ

    2021ರ ಆಗಸ್ಟ್ 31ರಂದು ಅಮೆರಿಕದ ಪಡೆಗಳು ಅಫ್ಘಾನಿಸ್ತಾನದಿಂದ ವಾಪಸ್ಸಾದ ಬಳಿಕ ಅಮೆರಿಕವು ಅಲ್ಲಿ ನಡೆಸಿದ ಮೊದಲ ದಾಳಿ ಇದಾಗಿದೆ. ಮೂಲತಃ ಈಜಿಪ್ಟ್ನವನಾಗಿದ್ದ ಝವಾಹಿರಿ ಕೈರೊದಲ್ಲಿ ಬಾಲ್ಯ ಕಳೆದಿದ್ದ. ವೃತ್ತಿಯಲ್ಲಿ ಶಸ್ತ್ರಚಿಕಿತ್ಸಕನಾಗಿದ್ದ ಆತ, ನಂತರ ಹಿಂಸಾತ್ಮಕ ಮೂಲಭೂತವಾದದಲ್ಲಿ ತೊಡಗಿಕೊಂಡಿದ್ದ. 2001ರ ಸೆಪ್ಟೆಂಬರ್ 11ರ ದಾಳಿ ಬಳಿಕ ತಲೆಮರೆಸಿಕೊಂಡಿದ್ದ. ಒಸಾಮಾ ಬಿನ್ ಲಾಡೆನ್‌ನಲ್ಲಿ ಅಮೆರಿಕದ ವಿಶೇಷ ಪಡೆಗಳು 2011ರಲ್ಲಿ ಹತ್ಯೆ ಮಾಡಿದ ಬಳಿಕ ಅಲ್‌ಖೈದಾ ಉಗ್ರ ಸಂಘಟನೆಯ ಮುಖ್ಯಸ್ಥನಾಗಿದ್ದ ಝವಾಹಿರಿ. ಆತನ ಸುಳಿವು ನೀಡಿದವರಿಗೆ 2.5 ಕೋಟಿ ಡಾಲರ್ ಇನಾಮು ಘೋಷಿಸಲಾಗಿತ್ತು.

    Live Tv
    [brid partner=56869869 player=32851 video=960834 autoplay=true]

  • ಅಫ್ಘಾನಿಸ್ತಾನದ ಟಿ20 ಪಂದ್ಯದ ವೇಳೆ ಸ್ಟೇಡಿಯಂನಲ್ಲೇ ಬಾಂಬ್ ಸ್ಫೋಟ

    ಅಫ್ಘಾನಿಸ್ತಾನದ ಟಿ20 ಪಂದ್ಯದ ವೇಳೆ ಸ್ಟೇಡಿಯಂನಲ್ಲೇ ಬಾಂಬ್ ಸ್ಫೋಟ

    ಕಾಬೂಲ್: ಅಫ್ಘಾನಿಸ್ತಾನದ ಕಾಬೂಲ್ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ಶಪಜೀಜಾ ಕ್ರಿಕೆಟ್ ಲೀಗ್ ಟಿ20 ಪಂದ್ಯದ ವೇಳೆ ಆತ್ಮಾಹುತಿ ಬಾಂಬ್ ಸ್ಫೋಟ ಸಂಭವಿಸಿದೆ.

    ಬ್ಯಾಂಡ್-ಎ-ಅಮೀರ್ ಡ್ರ‍್ಯಾಗನ್ ಹಾಗೂ ಪಮೀರ್ ಝಲ್ಮಿ ತಂಡಗಳ ನಡುವೆ ಪಂದ್ಯ ನಡೆಯುತ್ತಿದ್ದ ವೇಳೆಯೇ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದಾರೆ. ಸದ್ಯ ಎಲ್ಲಾ ಆಟಗಾರರೂ ಸುರಕ್ಷಿತರಾಗಿದ್ದು, ಅವರನ್ನು ರಕ್ಷಣೆಗೆ ಬಂಕರ್‌ಗೆ ಸಾಗಿಸಲಾಗಿದೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ರಾಜ್ಯದಲ್ಲಿಂದು 2 ಸಾವಿರಕ್ಕೂ ಅಧಿಕ ಮಂದಿಗೆ ಕೊರೊನಾ – ನಾಲ್ವರು ಸಾವು

    ಸ್ಫೋಟ ಸಂಭವಿಸುತ್ತಲೇ ಕ್ರೀಡಾಂಗಣದಲ್ಲಿ ಉದ್ವಿಗ್ನತೆ ಉಂಟಾಗಿದ್ದು, ಜನರು ಪ್ರಾಣಾಪಾಯದಿಂದ ರಕ್ಷಿಸಿಕೊಳ್ಳಲು ಸುರಕ್ಷಿತ ಪ್ರದೇಶಗಳಿಗೆ ಗುಂಪಾಗಿ ಧಾವಿಸಿದ್ದಾರೆ. ಸದ್ಯ ಯಾವುದೇ ಪ್ರಾಣ ಹಾನಿಯಾಗಿಲ್ಲ ಎನ್ನಲಾಗಿದೆ. ಇದನ್ನೂ ಓದಿ: MIG-21 ವಿಮಾನವನ್ನು ಸೇವೆಯಿಂದ ವಜಾಗೊಳಿಸೋದು ಯಾವಾಗ? – ವರುಣ್ ಗಾಂಧಿ

    2 ದಿನಗಳ ಹಿಂದೆಯಷ್ಟೇ ಕಾಬೂಲ್ ಗುರುದ್ವಾರ ಕಾರ್ಟೆ ಪರ್ವಾನ್ ಗೇಟ್ ಬಳಿ ಸ್ಫೋಟ ಸಂಭವಿಸಿತ್ತು. ಇದರ ಬೆನ್ನಲ್ಲೇ ಇದೀಗ ಕ್ರೀಡಾಂಗಣದಲ್ಲಿ ಸ್ಫೋಟ ಸಂಭವಿಸಿದೆ. ಸಾರ್ವಕನಿಕರು ಹೆಚ್ಚಾಗಿ ಸೇರುವ ಪ್ರದೇಶಗಳಲ್ಲಿ ಬಾಂಬ್ ಸ್ಫೋಟದಂತಹ ಘಟನೆಗಳು ಆಗಾಗ ಮರುಕಳಿಸುತ್ತಿರುವುದು ಆಫ್ಘನ್ನರಲ್ಲಿ ನಡುಕ ಉಂಟು ಮಾಡುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • ಭಾರತೀಯರು, ಸಿಖ್ ದೇಶಬಾಂಧವರು ಆಫ್ಘಾನ್‍ಗೆ ಮರಳಿ: ತಾಲಿಬಾನ್

    ಭಾರತೀಯರು, ಸಿಖ್ ದೇಶಬಾಂಧವರು ಆಫ್ಘಾನ್‍ಗೆ ಮರಳಿ: ತಾಲಿಬಾನ್

    ಕಾಬೂಲ್: ಅಫ್ಘಾನಿಸ್ತಾನದಲ್ಲಿ ಭದ್ರತಾ ಪರಿಸ್ಥಿತಿಯನ್ನು ಪರಿಗಣಿಸಿ ಅಲ್ಪಸಂಖ್ಯಾತರಾದ ಹಿಂದೂಗಳು ಮತ್ತು ಸಿಖ್ಖರು ದೇಶಕ್ಕೆ ಮರಳುವಂತೆ ಕೇಳಲಾಗುತ್ತಿದೆ ಎಂದು ತಾಲಿಬಾನ್ ಹೇಳಿಕೊಂಡಿದೆ.

    ತಾಲಿಬಾನ್ ರಾಜ್ಯ ಸಚಿವರ ಕಚೇರಿಯ ಮಹಾನಿರ್ದೇಶಕ ಮುಲ್ಲಾ ಅಬ್ದುಲ್ ವಾಸಿ ಅವರು ಜುಲೈ 24 ರಂದು ಅಫ್ಘಾನಿಸ್ತಾನದ ಹಿಂದೂ ಮತ್ತು ಸಿಖ್ ಕೌನ್ಸಿಲ್‍ನ ಹಲವಾರು ಸದಸ್ಯರನ್ನು ಭೇಟಿಯಾದ ನಂತರ, ಅಫ್ಘಾನಿಸ್ತಾನದ ಮುಖ್ಯಸ್ಥರ ಕಚೇರಿ ಟ್ವೀಟ್ ಮಾಡುವ ಮೂಲಕ ಈ ವಿಚಾರವನ್ನು ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ನಾಯಿಗಳಿಗೂ ಏರ್ ಕಂಡೀಷನ್ ಫ್ಲ್ಯಾಟ್ ಒದಗಿಸಿದ್ದ ಪಾರ್ಥ 

    ವಾಸಿ ಅವರು ಕಾಬೂಲ್‍ನಲ್ಲಿ ಹಿಂದೂ ಮತ್ತು ಸಿಖ್ ನಾಯಕರ ನಿಯೋಗವನ್ನು ಭೇಟಿ ಮಾಡಿ, ಭದ್ರತಾ ಸಮಸ್ಯೆಗಳಿಂದಾಗಿ ದೇಶವನ್ನು ತೊರೆದ ಎಲ್ಲ ಭಾರತೀಯ ಮತ್ತು ಸಿಖ್ ದೇಶಬಾಂಧವರು ಈಗ ಅಫ್ಘಾನಿಸ್ತಾನಕ್ಕೆ ಮರಳಬಹುದು. ಏಕೆಂದರೆ ದೇಶದಲ್ಲಿ ಭದ್ರತೆಯನ್ನು ಸ್ಥಾಪಿಸಲಾಗಿದೆ ಎಂದು ಕೇಳಿಕೊಂಡಿದ್ದಾರೆ.

    ಅಫ್ಘಾನಿಸ್ತಾನದಲ್ಲಿ ಸಿಖ್ ಸಮುದಾಯ ಸೇರಿದಂತೆ ಧಾರ್ಮಿಕ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ಅವರ ಮೇಲೆ ದಾಳಿ ಮಾಡಲಾಗಿತ್ತು. ಈ ಹಿನ್ನೆಲೆ ಹಲವು ಹಿಂದೂಗಳು ಮತ್ತು ಸಿಖ್‍ರು ಪ್ರಾಣ ಉಳಿಸಿಕೊಳ್ಳಲು ಬೇರೆ ಕಡೆ ಪಲಾಯನ ಮಾಡಿದ್ದರು. ಈ ಹಿನ್ನೆಲೆ ಅವರನ್ನು ತಾಲಿಬಾನ್‌ ಮರಳಿ ಬರುವಂತೆ ಕೇಳಿಕೊಂಡಿದೆ.

    ತಾಲಿಬಾನ್ ಬಿಡುಗಡೆ ಮಾಡಿದ ಪ್ರಕಟಣೆ ಪ್ರಕಾರ, ಕಾಬೂಲ್‍ನ ಗುರುದ್ವಾರದ ಮೇಲೆ ಇಸ್ಲಾಮಿಕ್ ಸ್ಟೇಟ್ ಖೊರಾಸನ್ ಪ್ರಾಂತ್ಯದ(ಐಎಸ್‍ಕೆಪಿ) ದಾಳಿಯನ್ನು ತಡೆಗಟ್ಟಿದ್ದಕ್ಕಾಗಿ ಸಿಖ್ ನಾಯಕರು ತಾಲಿಬಾನ್‍ಗೆ ಧನ್ಯವಾದ ಅರ್ಪಿಸಿದರು.

    ನಡೆದಿದ್ದೇನು?
    ಜೂನ್ 18 ರಂದು, ಇಸ್ಲಾಮಿಕ್ ಸ್ಟೇಟ್ ಖೊರಾಸನ್ ಪ್ರಾಂತ್ಯ(ISKP) ಕಾಬೂಲ್‍ನ ಕಾರ್ಟೆ ಪರ್ವಾನ್ ಗುರುದ್ವಾರದ ಮೇಲೆ ದಾಳಿ ಮಾಡಿತು. ಮಾರಣಾಂತಿಕ ದಾಳಿಯ ಸಮಯದಲ್ಲಿ ಸಿಖ್ ಸೇರಿದಂತೆ ಇಬ್ಬರು ಪ್ರಾಣ ಕಳೆದುಕೊಂಡರು. ಇದನ್ನೂ ಓದಿ:  ಒರಾಯನ್ ಮಾಲ್ ಮುಂಭಾಗ ನಡೆಯಿತು ಅಚಾತುರ್ಯ: ಅಮಲಿನ ಶೋಕಿಗೆ ಬಡಜೀವ ಬಲಿ 

    ಮೂಲಗಳ ಪ್ರಕಾರ, ದಾಳಿಕೋರರು ಆವರಣವನ್ನು ಪ್ರವೇಶಿಸಿದಾಗ ಸುಮಾರು 25 ರಿಂದ 30 ಜನರು ತಮ್ಮ ಬೆಳಗಿನ ಪ್ರಾರ್ಥನೆಗಾಗಿ ಗುರುದ್ವಾರಕ್ಕೆ ಬಂದಿದ್ದರು. ಈ ವೇಳೆ ಅವರ ಮೇಲೆ ಉಗ್ರರು ದಾಳಿ ಗುರುದ್ವಾರದ ಸಿಬ್ಬಂದಿಯಾಗಿದ್ದ ಅಹ್ಮದ್‍ನನ್ನು ಹತ್ಯೆ ಮಾಡಿದ್ದರು.

    Live Tv
    [brid partner=56869869 player=32851 video=960834 autoplay=true]

  • ತಾಲಿಬಾನ್ ಬ್ಯಾನ್ ಮಾಡಿ: ಅಫ್ಘನ್ ಜನರಿಂದ ಟ್ವಿಟ್ಟರ್ ಅಭಿಯಾನ

    ತಾಲಿಬಾನ್ ಬ್ಯಾನ್ ಮಾಡಿ: ಅಫ್ಘನ್ ಜನರಿಂದ ಟ್ವಿಟ್ಟರ್ ಅಭಿಯಾನ

    ಕಾಬೂಲ್: ಅಫ್ಘಾನಿಸ್ತಾನದ ತಾಲಿಬಾನ್ ಸಂಬಂಧಿತ ಫೇಸ್‌ಬುಕ್‌ನಂತಹ ಪುಟಗಳನ್ನು ಮೆಟಾ ಬ್ಯಾನ್ ಮಾಡಿದ ಬಳಿಕ ಇದೀಗ ಅಫ್ಘನ್ ಜನರು ಟ್ವಿಟ್ಟರ್‌ನಲ್ಲಿ ಹೊಸ ಅಭಿಯಾನವನ್ನು ಪ್ರಾರಂಭಿಸಿದ್ದಾರೆ. ತಾಲಿಬಾನ್ ಅನ್ನು ಬ್ಯಾನ್ ಮಾಡಿ ಎಂಬ ಕರೆಯೊಂದಿಗೆ ಅಫ್ಘನ್ನರು ಸಾವಿರಾರು ಟ್ವೀಟ್‌ಗಳನ್ನು ಮಾಡಿದ್ದಾರೆ.

    BanTaliban ಹ್ಯಾಶ್ ಟ್ಯಾಗ್ ಬಳಸಿ ಅಫ್ಘಾನಿಸ್ತಾನ ಮಾತ್ರವಲ್ಲದೇ ಪಾಕಿಸ್ತಾನ, ಯುನೈಟೆಡ್ ಅರಬ್ ಎಮಿರೇಟ್ಸ್, ಜರ್ಮನಿ, ಯುರೋಪ್, ಭಾರತ ಹಾಗೂ ಅಮೆರಿಕದಲ್ಲೂ ಜನರು ಟ್ವೀಟ್ ಮಾಡಿ, ಅಭಿಯಾನಕ್ಕೆ ಬೆಂಬಲ ನೀಡಿದ್ದಾರೆ. ಇದನ್ನೂ ಓದಿ: ಭಾರತದ ಗಡಿಯಲ್ಲಿ ಮತ್ತೆ ಪಾಕ್ ಡ್ರೋನ್ ಹಾರಾಟ

    ವರದಿಗಳ ಪ್ರಕಾರ ಅಫ್ಘಾನಿಸ್ತಾನದ ಪತ್ರಕರ್ತರು, ನಾಗರಿಕ ಕಾರ್ಯಕರ್ತರು, ವಕೀಲರು ಟ್ವಿಟ್ಟರ್ ಬಳಸುವ ಎಲ್ಲಾ ತಾಲಿಬಾನ್ ಸದಸ್ಯರಿಗೂ ಪ್ರವೇಶ ನಿಷೇಧಿಸುವಂತೆ ಟ್ವಿಟ್ಟರ್ ಅನ್ನು ಒತ್ತಾಯಿಸಿದ್ದಾರೆ. ತಾಲಿಬಾನ್ ತಪ್ಪು ಮಾಹಿತಿ ಹರಡುವಿಕೆ, ಹಿಂಸಾಚಾರ, ಶಿರಚ್ಛೇದದ ಕರೆಗಳು, ಭಯೋತ್ಪಾದಕರಿಗೆ ಬೆಂಬಲ ನೀಡುವುದು ಸೇರಿದಂತೆ ಹಲವು ಆಘಾತಕರ ವಿಷಯಗಳನ್ನು ಈ ಸಾಮಾಜಿಕ ಮಾಧ್ಯಮದ ಮೂಲಕ ಹಂಚಿಕೊಳ್ಳುತ್ತದೆ ಎಂಬ ಕಾರಣಕ್ಕೆ ಜನರು ಈ ಅಭಿಯಾನಕ್ಕೆ ಮುಂದಾಗಿದ್ದಾರೆ. ಇದನ್ನೂ ಓದಿ: ದೇಶದಲ್ಲಿ 4 ಕೋಟಿಗೂ ಅಧಿಕ ಜನ ಮೊದಲ ಡೋಸ್ ಲಸಿಕೆ ಪಡೆದಿಲ್ಲ!

    ಬುಧವಾರ ಫೇಸ್‌ಬುಕ್ ಆರ್‌ಟಿಎ ಟಿವಿ ಚಾನೆಲ್ ಹಾಗೂ ಬಕ್ತರ್ ನ್ಯೂಸ್ ಏಜೆನ್ಸಿ ಸೇರಿದಂತೆ ವಿವಿಧ ಪ್ಲಾಟ್‌ಫಾರ್ಮ್‌ಗಳಲ್ಲಿ ತಾಲಿಬಾನ್ ಸಂಬಂಧಿತ ವಿಷಯಗಳನ್ನು ಹಾಗೂ ಪುಟಗಳನ್ನು ನಿಷೇಧಿಸಿತ್ತು. ಮೆಟಾದ ಈ ನಿರ್ಧಾರವನ್ನು ಅಫ್ಘನ್ ಜನರು ಸ್ವಾಗತಿಸಿದ್ದಾರೆ. ಮೆಟಾದ ಕ್ರಮದ ಬೆನ್ನಲ್ಲೇ ಟ್ವಿಟ್ಟರ್‌ನಲ್ಲೂ ತಾಲಿಬಾನ್‌ಗೆ ನಿಷೇಧ ಹೇರುವಂತೆ ಒತ್ತಾಯಿಸಿ ಜನರು ಅಭಿಯಾನ ಪ್ರಾರಂಭಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ನೀವು ಬರಬೇಡಿ.. ನಿಮ್ಮ ಮನೆಯ ಪುರುಷರನ್ನು ಕೆಲಸಕ್ಕೆ ಕಳಿಸಿ: ಮಹಿಳಾ ಉದ್ಯೋಗಿಗಳಿಗೆ ತಾಲಿಬಾನ್‌ ಸೂಚನೆ

    ಕಾಬೂಲ್: ಅಫ್ಘಾನಿಸ್ತಾನದ ಮಹಿಳಾ ಉದ್ಯೋಗಿಗಳಿಗೆ ತಮ್ಮ ಕೆಲಸ ಮಾಡಲು ಪುರುಷ ಸಂಬಂಧಿಯನ್ನು ಕಳುಹಿಸುವಂತೆ ತಾಲಿಬಾನ್‌ ಸೂಚನೆ ನೀಡಿದೆ ಎಂದು ಸ್ಥಳೀಯ ಪತ್ರಿಕೆ ವರದಿ ಮಾಡಿದೆ.

    ಈ ಕುರಿತು ಮಾತನಾಡಿರುವ ಮಹಿಳಾ ಉದ್ಯೋಗಿಯೊಬ್ಬರು, ನಿಮ್ಮ ಬದಲಿಗೆ ಮನೆಯ ಪುರುಷನನ್ನು ಉದ್ಯೋಗಕ್ಕೆ ಕಳುಹಿಸಿ ಎಂದು ತಾಲಿಬಾನ್‌ ಅಧಿಕಾರಿಗಳು ಕರೆ ಮಾಡಿ ತಿಳಿಸಿದ್ದಾರೆ. ಕಚೇರಿಯಲ್ಲಿ ಕೆಲಸದ ಹೊರೆ ಹೆಚ್ಚಿದೆ. ನಿಮ್ಮ ಬದಲು ಪುರುಷರನ್ನು ನೇಮಕ ಮಾಡಿಕೊಳ್ಳಬೇಕಾಗಿದೆ ಎಂದು ತಾಲಿಬಾನ್‌ ಅಧಿಕಾರಿಗಳು ಹೇಳಿರುವುದಾಗಿ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಚೀನಾದಲ್ಲಿ ದಿಢೀರ್ ಪ್ರವಾಹ – 12 ಸಾವು, ಹಲವರು ನಾಪತ್ತೆ, ಸಾವಿರಾರು ಜನ ಸ್ಥಳಾಂತರ

    ತಾಲಿಬಾನಿಗಳು ಅಧಿಕಾರಕ್ಕೆ ಬಂದಾಗಿನಿಂದ ನನ್ನನ್ನು ಉದ್ಯೋಗದಲ್ಲಿ ಪ್ರಮುಖ ಸ್ಥಾನದಿಂದ ಕೆಳಗಿಳಿಸಿದ್ದಾರೆ. ನನ್ನ ಸಂಬಳವನ್ನು 60,000 ಅಫ್ಘಾನಿಗಳಿಂದ 12,000 ಅಫ್ಘಾನಿಗೆ ಇಳಿಸಿದ್ದಾರೆ. ಇದರಿಂದ ನನ್ನ ಮಗನ ಶಾಲಾ ಶುಲ್ಕವನ್ನು ಭರಿಸುವುದಕ್ಕೂ ನನ್ನಿಂದ ಸಾಧ್ಯವಾಗುತ್ತಿಲ್ಲ. ಈ ಕುರಿತು ಪ್ರಶ್ನಿಸಿದರೆ, ಕಚೇರಿಯಿಂದ ಹೊರಹೋಗುವಂತೆ ಅಧಿಕಾರಿಗಳು ಉಗ್ರವಾಗಿ ವರ್ತಿಸುತ್ತಾರೆ ಎಂದು ಉದ್ಯೋಗಿಯೊಬ್ಬರು ಅಳಲು ತೋಡಿಕೊಂಡಿದ್ದಾರೆ.

    15 ವರ್ಷಗಳ ಕಾಲ ತಾನು ಕೆಲಸ ಮಾಡಿದ ಹುದ್ದೆಗೆ ಪುರುಷನನ್ನು ಬದಲಿ ಶಿಫಾರಸು ಮಾಡುವಂತೆ ಸಚಿವಾಲಯದ ಮಾನವ ಸಂಪನ್ಮೂಲ ಇಲಾಖೆಯಿಂದ ಕರೆ ಬಂದಿದೆ ಎಂದು ವ್ಯವಹಾರ ನಿರ್ವಹಣೆಯಲ್ಲಿ ಸ್ನಾತಕೋತ್ತರ ಪದವಿಯನ್ನು ಹೊಂದಿರುವ ಮತ್ತು ಸಚಿವಾಲಯದಲ್ಲಿ ವಿಭಾಗದ ಮುಖ್ಯಸ್ಥರಾಗಿರುವ ಮಹಿಳಾ ಅಧಿಕಾರಿಯೊಬ್ಬರು ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಇಂಡಿಯಾನಾದ ಮಾಲ್‍ನಲ್ಲಿ ಗುಂಡಿನ ದಾಳಿ- ಮೂವರು ಸಾವು

    ತಾಲಿಬಾನ್‌ ನೀತಿಗಳನ್ನು ಜಾಗತಿಕ ಸಂಸ್ಥೆಗಳು ತೀವ್ರವಾಗಿ ಟೀಕಿಸಿವೆ. ಇಂತಹ ನೀತಿಗಳಿಂದ ದೇಶದಲ್ಲಿ ಆರ್ಥಿಕ ನಷ್ಟದ ಪರಿಣಾಮವನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿವೆ. ಮಹಿಳೆಯರ ಉದ್ಯೋಗದ ಮೇಲಿನ ಪ್ರಸ್ತುತ ನಿರ್ಬಂಧಗಳು 1 ಬಿಲಿಯನ್‌ ಡಾಲರ್‌ ವರೆಗೆ ತಕ್ಷಣದ ಆರ್ಥಿಕ ನಷ್ಟಕ್ಕೆ ಕಾರಣವಾಗಬಹುದು ಎಂದು UN ಮಹಿಳೆಯರ ಕಾರ್ಯನಿರ್ವಾಹಕ ನಿರ್ದೇಶಕಿ ಸಿಮಾ ಬಹೌಸ್ ತಿಳಿಸಿದ್ದಾರೆ. ಕಳೆದ ವರ್ಷ ಆಗಸ್ಟ್‌ನಲ್ಲಿ ತಾಲಿಬಾನ್ ಅಫ್ಘಾನಿಸ್ತಾನದ ಮೇಲೆ ಸಂಪೂರ್ಣ ಹಿಡಿತ ಸಾಧಿಸಿತು. ಅಂದಿನಿಂದ ಮಹಿಳೆಯರ ಹಕ್ಕುಗಳನ್ನು ಹಿಂತೆಗೆದುಕೊಳ್ಳುವ ಹಲವಾರು ತೀರ್ಪುಗಳನ್ನು ಹೊರಡಿಸಿದೆ.

    Live Tv
    [brid partner=56869869 player=32851 video=960834 autoplay=true]

  • 20 ವರ್ಷ ಸಮಾಧಿಯಾಗಿದ್ದ ತಾಲಿಬಾನ್‌ ಸಂಸ್ಥಾಪಕನ ಕಾರು ಪತ್ತೆ – ಮ್ಯೂಸಿಯಂನಲ್ಲಿಡಲು ನಿರ್ಧಾರ

    20 ವರ್ಷ ಸಮಾಧಿಯಾಗಿದ್ದ ತಾಲಿಬಾನ್‌ ಸಂಸ್ಥಾಪಕನ ಕಾರು ಪತ್ತೆ – ಮ್ಯೂಸಿಯಂನಲ್ಲಿಡಲು ನಿರ್ಧಾರ

    ಕಾಬೂಲ್: ಯುಎಸ್‌ ಪಡೆಗಳ ಟಾರ್ಗೆಟ್‌ನಿಂದ ತಪ್ಪಿಸಿಕೊಳ್ಳಲು ತಾಲಿಬಾನ್‌ ಸಂಸ್ಥಾಪಕ ಮುಲ್ಲಾ ಓಮರ್‌ ಬಳಸಿದ ಕಾರನ್ನು ಪೂರ್ವ ಆಫ್ಘಾನಿಸ್ತಾನದಲ್ಲಿ ಪತ್ತೆ ಹಚ್ಚಲಾಗಿದೆ. ಸುಮಾರು 20 ವರ್ಷಗಳಿಗಿಂತಲೂ ಹೆಚ್ಚು ಕಾಲ ಈ ಕಾರನ್ನು ಸಮಾಧಿ ಮಾಡಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    9/11 ದಾಳಿಯ ನಂತರ ಯುಎಸ್‌ ಪಡೆಗಳು ಓಮರ್‌ನನ್ನು ಟಾರ್ಗೆಟ್‌ ಮಾಡಿದ್ದವು. ತಪ್ಪಿಸಿಕೊಳ್ಳಲು ಓಮರ್‌ ಬಳಸಿದ್ದ ಕಾರನ್ನು ಪೂರ್ವ ಅಫ್ಘಾನಿಸ್ತಾನದಲ್ಲಿ ಉತ್ಕನನ ಮಾಡಲಾಗಿದೆ. ಬಿಳಿ ಟೊಯೊಟಾ ಕೊರೊಲ್ಲಾ ಕಾರನ್ನು ಜಬುಲ್ ಪ್ರಾಂತ್ಯದ ಹಳ್ಳಿಯ ಉದ್ಯಾನದಲ್ಲಿ ಮಾಜಿ ತಾಲಿಬಾನ್ ಅಧಿಕಾರಿ ಅಬ್ದುಲ್ ಜಬ್ಬಾರ್ ಒಮಾರಿ ಹೂತುಹಾಕಿದ್ದರು. ಇದನ್ನೂ ಓದಿ: ಬ್ರಿಟನ್ ಪ್ರಧಾನಿ ಬೋರಿಸ್ ರಾಜೀನಾಮೆ ಘೋಷಣೆ

    ʼಇದು ಇನ್ನೂ ಉತ್ತಮ ಸ್ಥಿತಿಯಲ್ಲಿದೆ, ಅದರ ಮುಂಭಾಗ ಮಾತ್ರ ಸ್ವಲ್ಪ ಹಾನಿಯಾಗಿದೆʼ ಎಂದು ಜಬುಲ್ ಪ್ರಾಂತ್ಯದ ಮಾಹಿತಿ ಮತ್ತು ಸಂಸ್ಕೃತಿಯ ನಿರ್ದೇಶಕ ರಹಮತುಲ್ಲಾ ಹಮ್ಮದ್ AFP ಗೆ ತಿಳಿಸಿದ್ದಾರೆ. ಈ ವಾಹನವು ಯಾರ ಕೈಗೂ ಸಿಗಬಾರದೆಂದು ಅದನ್ನು ಸಮಾಧಿ ಮಾಡಲಾಗಿತ್ತು ಎಂದು ಅಹ್ಮದ್‌ ಹೇಳಿದ್ದಾರೆ

    ರಾಜಧಾನಿಯ ರಾಷ್ಟ್ರೀಯ ವಸ್ತುಸಂಗ್ರಹಾಲಯದಲ್ಲಿ ಕಾರನ್ನು ʼದೊಡ್ಡ ಐತಿಹಾಸಿಕ ಸ್ಮಾರಕʼ ಎಂದು ಹೆಸರಿಸಿ ಪ್ರದರ್ಶಿಸಲು ತಾಲಿಬಾನ್‌ ಬಯಸಿದೆ ಎಂದು ಅವರ ತಿಳಿಸಲಾಗಿದೆ. 1996 ರಲ್ಲಿ ಕಠಿಣ ಇಸ್ಲಾಮಿಸ್ಟ್ ಚಳುವಳಿಯನ್ನು ಅಧಿಕಾರಕ್ಕೆ ತಂದ ಮುಲ್ಲಾ ಒಮರ್ ಅವರು ಕಂದಹಾರ್‌ನಲ್ಲಿ ತಾಲಿಬಾನ್ ರೂಪಿಸಿದರು. ನಂತರ ದೇಶದ ಜನತೆ ಮೇಲೆ ತಾಲಿಬಾನ್‌ ನೀತಿ-ನಿಯಮಗಳ ಕಟ್ಟುನಿಟ್ಟನ್ನು ಹೇರಿದರು.

    ಸೆಪ್ಟೆಂಬರ್‌ 11ರ ದಾಳಿ ನಂತರ ಅಪ್ಘಾನಿಸ್ತಾನವು ಒಸಾಮಾ ಬಿನ್‌ ಲಾಡೆನ್‌, ಅಲ್‌ ಖೈದಾ ಸೇರಿದಂತೆ ಜಿಹಾದಿಸ್ಟ್‌ ಗುಂಪುಗಳಿಗೆ ಆಶ್ರಯತಾಣವಾಯಿತು. ಇದನ್ನೂ ಓದಿ: ಆರ್ಥಿಕ ಹಿಂಜರಿತ ಭೀತಿ – ಅಂತಾರಾಷ್ಟ್ರೀಯ ತೈಲಬೆಲೆ ಭಾರೀ ಇಳಿಕೆ

    ಬಿನ್ ಲಾಡೆನ್‌ನನ್ನು ಹಸ್ತಾಂತರಿಸಲು ತಾಲಿಬಾನ್ ನಿರಾಕರಿಸಿದಾಗ, ಯುಎಸ್ ಮತ್ತು ಅದರ ಮಿತ್ರರಾಷ್ಟ್ರಗಳು ಅಫ್ಘಾನಿಸ್ತಾನದ ಮೇಲೆ ವೈಮಾನಿಕ ದಾಳಿ ನಡೆಸಿದವು. ಆಕ್ರಮಣಕ್ಕೂ ಮೊದಲು ತಾಲಿಬಾನ್‌ ಕಿತ್ತೊಗೆದು ಅಪ್ಘಾನಿಸ್ತಾನದಲ್ಲಿ ಹೊಸ ಸರ್ಕಾರವನ್ನು ರಚಿಸಿದ್ದವು.

    ನಂತರ ಓಮರ್‌ ತಲೆಮರೆಸಿಕೊಂಡಿದ್ದ. ನಂತರ ಓಮರ್‌ ಸಾವಿಗೀಡಾದ. ಅಧಿಕಾರಿಗಳು ಹಲವಾರು ವರ್ಷಗಳವರೆಗೆ ಅವರ ಸಾವನ್ನು ರಹಸ್ಯವಾಗಿಟ್ಟಿದ್ದರು.

    ಅಮೆರಿಕ ಕಳೆದ ವರ್ಷ ತನ್ನ ಸೈನ್ಯವನ್ನು ಹಿಂತೆಗೆದುಕೊಂಡಿತು. ತಾಲಿಬಾನ್ ದೇಶಾದ್ಯಂತ ವ್ಯಾಪಿಸಿ, ಕಾಬೂಲ್ ಅನ್ನು ವಶಪಡಿಸಿಕೊಂಡು ಅಧಿಕಾರಕ್ಕೆ ಮರಳಿತು.

    Live Tv
    [brid partner=56869869 player=32851 video=960834 autoplay=true]

  • ಮದುವೆಯಾಗಿ ನವವಧುವನ್ನು ಸೇನಾ ಹೆಲಿಕಾಪ್ಟರ್‌ನಲ್ಲಿ ಕರೆದೊಯ್ದ ತಾಲಿಬಾನ್‌ ಕಮಾಂಡರ್‌

    ಮದುವೆಯಾಗಿ ನವವಧುವನ್ನು ಸೇನಾ ಹೆಲಿಕಾಪ್ಟರ್‌ನಲ್ಲಿ ಕರೆದೊಯ್ದ ತಾಲಿಬಾನ್‌ ಕಮಾಂಡರ್‌

    ಕಾಬೂಲ್: ತಾಲಿಬಾನ್ ಕಮಾಂಡರ್ ತನ್ನ ನವವಿವಾಹಿತ ಪತ್ನಿಯನ್ನು ಮನೆಗೆ ಕರೆದೊಯ್ಯಲು ಮಿಲಿಟರಿ ಹೆಲಿಕಾಪ್ಟರ್ ಅನ್ನು ಬಳಸಿದ್ದಾರೆ. ಮದುವೆ ಸಮಾರಂಭ ಮುಗಿದ ನಂತರ ಪತ್ನಿಯನ್ನು ಲೋಗರ್‌ನಿಂದ ಪೂರ್ವ ಅಫ್ಘಾನಿಸ್ತಾನದ ಖೋಸ್ಟ್ ಪ್ರಾಂತ್ಯಕ್ಕೆ ಮಿಲಿಟರಿ ಹೆಲಿಕಾಪ್ಟರ್‌ನಲ್ಲಿ ಕರೆದೊಯ್ದಿದ್ದ ವೀಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

    ನವವಧುವನ್ನು ಹೆಲಿಕಾಪ್ಟರ್‌ನಲ್ಲಿ ಕರೆದೊಯ್ದ ವ್ಯಕ್ತಿ, ತಾಲಿಬಾನ್‌ನ ಹಕ್ಕಾನಿ ಶಾಖೆಯ ಕಮಾಂಡರ್ ಎಂದು ಗುರುತಿಸಲಾಗಿದೆ. ಕಮಾಂಡರ್‌ ಖೋಸ್ಟ್‌ನಲ್ಲಿ ನಿವಾಸಿಯಾಗಿದ್ದು, ನವವಧು ಮನೆ ಲೋಗರ್‌ನ ಬಾರ್ಕಿ ಬರಾಕ್ ಜಿಲ್ಲೆಯಲ್ಲಿದೆ. ಇದನ್ನೂ ಓದಿ: ಚಿಕಾಗೋ ಪರೇಡ್‌ ವೇಳೆ ಶೂಟೌಟ್‌, ದಿಕ್ಕಾಪಾಲಾಗಿ ಓಡಿದ ಜನ – 6 ಬಲಿ, 24 ಮಂದಿಗೆ ಗಾಯ

    ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ವೀಡಿಯೋದಲ್ಲಿ, ಕಮಾಂಡರ್ ತನ್ನ ನವವಧು ಮನೆಯ ಬಳಿ ಇಳಿಯುತ್ತಿರುವುದನ್ನು ದೃಶ್ಯ ಸೆರೆಯಾಗಿದೆ. 1,200,000 ಅಫ್ಘಾನಿಸ್‌ ಹಣವನ್ನು (1.07 ಕೋಟಿ ರೂ.) ವಧುವಿನ ತಂದೆ ವರದಕ್ಷಿಣೆಯಾಗಿ ಕಮಾಂಡರ್‌ಗೆ ನೀಡಿದ್ದಾರೆ ಎಂದು ಹೇಳಲಾಗಿದೆ.

    ಕಮಾಂಡರ್ ಅನ್ನು ಸಮರ್ಥಿಸಿಕೊಂಡ ತಾಲಿಬಾನ್‌ನ ಉಪ ವಕ್ತಾರ ಕ್ವಾರಿ ಯೂಸುಫ್ ಅಹ್ಮದಿ, ಆರೋಪಗಳು ಸುಳ್ಳು. ಶತ್ರುಗಳು ಇಲ್ಲಸಲ್ಲದ ಪ್ರಚಾರ ಮಾಡುತ್ತಿದ್ದಾರೆ. ತಾಲಿಬಾನಿ ಕಮಾಂಡರ್‌ನಿಂದ ಮಿಲಿಟರಿ ಹೆಲಿಕಾಪ್ಟರ್‌ನ್ನು ವೈಯಕ್ತಿಕವಾಗಿ ಬಳಸಿಕೊಳ್ಳಲಾಗುತ್ತಿದೆ ಎಂಬ ಆರೋಪವನ್ನು ಅಫ್ಘಾನಿಸ್ತಾನದ ಇಸ್ಲಾಮಿಕ್ ಎಮಿರೇಟ್ ತಳ್ಳಿಹಾಕಿದೆ ಎಂದು ಅವರು ತಿಳಿಸಿದ್ದಾರೆ. ಇದನ್ನೂ ಓದಿ: ಕಾಳಿಗೆ ಅವಮಾನ – ಸಾಕ್ಷ್ಯಚಿತ್ರ ಪ್ರದರ್ಶನ ಮಾಡದಂತೆ ಸೂಚನೆ

    Live Tv
    [brid partner=56869869 player=32851 video=960834 autoplay=true]

  • ದಯವಿಟ್ಟು ಸಹಾಯ ಮಾಡೋದನ್ನ ನಿಲ್ಲಿಸಬೇಡಿ- ಅಮೆರಿಕಾಗೆ ತಾಲಿಬಾನ್ ಬೇಡಿಕೆ

    ದಯವಿಟ್ಟು ಸಹಾಯ ಮಾಡೋದನ್ನ ನಿಲ್ಲಿಸಬೇಡಿ- ಅಮೆರಿಕಾಗೆ ತಾಲಿಬಾನ್ ಬೇಡಿಕೆ

    ಕಾಬೂಲ್: ಅಫ್ಘಾನಿಸ್ತಾನದಲ್ಲಿ ಇತ್ತೀಚೆಗೆ ಸಂಭವಿಸಿದ ಭೂಕಂಪ ಬರೋಬ್ಬರಿ 1,150 ಜನರ ಪ್ರಾಣವನ್ನು ತೆಗೆದುಕೊಂಡಿತು. ಇದೀಗ ಭಾರೀ ನಷ್ಟ ಎದುರಿಸುತ್ತಿರುವ ತಾಲಿಬಾನ್ ಸರ್ಕಾರ ಅಮೆರಿಕಾಗೆ ಸಹಾಯ ಮಾಡಲು ಹಣಕಾಸಿನ ನಿರ್ಬಂಧವನ್ನು ತೆಗೆದುಹಾಕುವಂತೆ ಒತ್ತಾಯಿಸಿದೆ.

    ತಾಲಿಬಾನ್ ವಿದೇಶಾಂಗ ಸಚಿವ ಅಮೀರ್ ಖಾನ್ ಮುಟ್ಟಾಕಿ ಅವರು ಶನಿವಾರ ಕಾಬೂಲ್‌ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡುತ್ತಾ, ಇಂತಹ ಕಷ್ಟದ ಸಮಯದಲ್ಲಿ ಅಫ್ಘಾನಿಸ್ತಾನದ ಹೆಪ್ಪುಗಟ್ಟಿದ ಆಸ್ತಿಗಳನ್ನು ಬಿಡುಗಡೆ ಮಾಡಲು ಹಾಗೂ ಅಫ್ಘಾನಿಸ್ತಾನದ ಬ್ಯಾಂಕುಗಳ ಮೇಲಿನ ನಿರ್ಬಂಧಗಳನ್ನು ತೆಗೆದುಹಾಕಲು ನಾವು ಅಮೆರಿಕಗೆ ಬೇಡಿಕೆ ಇಡುತ್ತಿದ್ದೇವೆ. ಇದರಿಂದಾಗಿ ಸಹಾಯ ಸಂಸ್ಥೆಗಳು ಸುಲಭವಾಗಿ ನಮಗೆ ಸಹಾಯವನ್ನು ತಲುಪಿಸಬಹುದು ಎಂದು ಹೇಳಿದರು. ಇದನ್ನೂ ಓದಿ: ಸ್ಕೂಲ್ ಡೇಸ್‍ನಿಂದ ಪ್ರೀತಿಸಿದವಳ ಮೇಲೆ ಗುಂಡು ಹಾರಿಸಿದ – ಯುವತಿಗೆ ಗಂಭೀರ ಗಾಯ

    ಫೆಬ್ರವರಿಯಲ್ಲಿ ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರು ಅಮೆರಿಕದಲ್ಲಿ ಹೆಪ್ಪುಗಟ್ಟಿರುವ ಅಫ್ಘಾನ್ ಸೆಂಟ್ರಲ್ ಬ್ಯಾಂಕ್ ಆಸ್ತಿಯಲ್ಲಿ ಅರ್ಧದಷ್ಟು ಎಂದರೆ, 7 ಬಿಲಿಯನ್ ಡಾಲರ್(ಸುಮಾರು 54 ಸಾವಿರ ಕೋಟಿ ರೂ.) ಅನ್ನು ಮುಕ್ತಗೊಳಿಸಲು ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿದ್ದರು. ಅಫ್ಘಾನಿಸ್ತಾನಕ್ಕೆ ಮಾನವೀಯ ನೆರವು ಮತ್ತು ತಾಲಿಬಾನ್ ವಿರುದ್ಧದ ಭಯೋತ್ಪಾದನೆ ಸಂಬಂಧಿತ ಮೊಕದ್ದಮೆಗಳನ್ನು ಹೂಡಲು ಹಣವನ್ನು ವಿಭಜಿಸಿದರು ಎಂದು ವರದಿಗಳು ತಿಳಿಸಿವೆ.

    ಅಫ್ಘಾನಿಸ್ತಾನದಲ್ಲಿ ಸಂಭವಿಸಿದ ಭೀಕರ ಭೂಕಂಪದಲ್ಲಿ 1,150 ಜನರು ಸಾವನ್ನಪ್ಪಿದ್ದಾರೆ. 1,600 ಜನ ಗಾಯಗೊಂಡಿದ್ದಾರೆ ಸುಮಾರು 3,000 ಮನೆಗಳು ನಾಶವಾಗಿವೆ. ಸಾವನ್ನಪ್ಪಿರುವವರಲ್ಲಿ 121 ಮಕ್ಕಳು ಸೇರಿದ್ದಾರೆ ಎಂದು ತಾಲಿಬಾನ್ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಚಿಕ್ಕೋಡಿಯಲ್ಲಿ ಆರಕ್ಷಕರಿಗೇ ಇಲ್ಲ ಸೋರದ ಸೂರು!

    ಅಫ್ಘಾನಿಸ್ತಾನದ ಜನರಿಗೆ ಸಹಾಯ ಮಾಡಲು ಭಾರತ ಅಗತ್ಯ ವಸ್ತುಗಳನ್ನು ಕಳುಹಿಸಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ತಿಳಿಸಿದ್ದಾರೆ. ನೆರವಿನಲ್ಲಿ ವಸತಿ ಕಳೆದುಕೊಂಡ ಕುಟುಂಬಗಳಿಗೆ ರಿಡ್ಜ್ ಟೆಂಟ್, ಮಲಗುವ ಚೀಲಗಳು, ಕಂಬಳಿ ಸೇರಿದಂತೆ ಅಗತ್ಯ ವಸ್ತುಗಳನ್ನು ಕಳುಹಿಸಿದೆ.

    Live Tv

  • ಭೂಕಂಪದಿಂದ ತೊಂದರೆಗೆ ಸಿಲುಕಿರುವ ಆಫ್ಘನ್ನರಿಗೆ ನೆರವು – ಭಾರತಕ್ಕೆ ಧನ್ಯವಾದ ತಿಳಿಸಿದ ತಾಲಿಬಾನ್‌

    ಭೂಕಂಪದಿಂದ ತೊಂದರೆಗೆ ಸಿಲುಕಿರುವ ಆಫ್ಘನ್ನರಿಗೆ ನೆರವು – ಭಾರತಕ್ಕೆ ಧನ್ಯವಾದ ತಿಳಿಸಿದ ತಾಲಿಬಾನ್‌

    ಕಾಬೂಲ್‌: ಭೀಕರ ಭೂಕಂಪದಿಂದ ತತ್ತರಿಸಿರುವ ಅಫ್ಘಾನಿಸ್ತಾನದ ಜನತೆಗೆ ಭಾರತ ನೆರವಿನ ಹಸ್ತ ಚಾಚಿದೆ. ಭಾರತವು ಶುಕ್ರವಾರ ಎರಡನೇ ಬಾರಿಗೆ ಅಗತ್ಯ ವಸ್ತುಗಳನ್ನು ಅಫ್ಘಾನ್‌ ಸಂತ್ರಸ್ತರಿಗಾಗಿ ರವಾನಿಸಿದೆ.

    ಅಫ್ಘಾನಿಸ್ತಾನದ ಪೂರ್ವ ಭಾಗದಲ್ಲಿ ಭಾರಿ ಭೂಕಂಪ ಸಂಭವಿಸಿ 1,000ಕ್ಕೂ ಹೆಚ್ಚು ಜನರನ್ನು ಬಲಿಪಡೆದಿದೆ. ಭೂಕಂಪದಿಂದಾಗಿ ಸಾವಿರಾರು ಮಂದಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅವರಿಗೆ ನೆರವು ನೀಡಲು ಭಾರತ ಮುಂದಾಗಿದ್ದು, ಈಗಾಗಲೇ ತಂಡವೊಂದು ಕಾಬೂಲ್‌ ತಲುಪಿದೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್‌ ಬಾಗ್ಚಿ ಈ ಕುರಿತು ಟ್ವೀಟ್‌ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಅಫ್ಘಾನಿಸ್ತಾನದಲ್ಲಿ ಭೂಕಂಪ – 280 ಸಾವು, 250ಕ್ಕೂ ಹೆಚ್ಚು ಜನರಿಗೆ ಗಾಯ

    ರಿಡ್ಜ್ ಟೆಂಟ್‌ಗಳು, ಸ್ಲೀಪಿಂಗ್‌ ಬ್ಯಾಗ್ಸ್‌, ಹೊದಿಕೆಗಳು, ಸ್ಲೀಪಿಂಗ್‌ ಮ್ಯಾಟ್‌ ಸೇರಿದಂತೆ ಇತ್ಯಾದಿ ಅಗತ್ಯ ವಸ್ತುಗಳನ್ನು ಅಪ್ಘಾನ್‌ ಜನತೆಗೆ ನೆರವಿಗಾಗಿ ರವಾನಿಸಲಾಗಿದೆ. ಪರಿಹಾರ ಸರಕನ್ನು ವಿಶ್ವಸಂಸ್ಥೆಯ ಮಾನವೀಯ ವ್ಯವಹಾರಗಳ ಸಮನ್ವಯ ಕಚೇರಿ (UNOCHA) ಮತ್ತು ಕಾಬೂಲ್‌ನಲ್ಲಿರುವ ಅಫ್ಘಾನ್ ರೆಡ್ ಕ್ರೆಸೆಂಟ್ ಸೊಸೈಟಿ (ARCS)ಗೆ ಹಸ್ತಾಂತರಿಸಲಾಗುವುದು.

    ಜೂನ್ 22, 2022 ರಂದು ಅಫ್ಘಾನಿಸ್ತಾನದಲ್ಲಿ ಸಂಭವಿಸಿದ ಭೂಕಂಪದಿಂದಾಗಿ ಸಾವಿರಕ್ಕೂ ಹೆಚ್ಚು ಮಂದಿ ಮೃತಪಟ್ಟರು, ಸಾವಿರಾರು ಮಂದಿ ತೊಂದರೆಗೆ ಸಿಲುಕಿದ್ದಾರೆ. ಸಂತ್ರಸ್ತರಿಗಾಗಿ ಭಾರತ ಸರ್ಕಾರವು ಎರಡು ವಿಮಾನಗಳಲ್ಲಿ 27 ಟನ್ ತುರ್ತು ಪರಿಹಾರ ರವಾನಿಸಿದೆ ಎಂದು ಎಂಇಎ ತಿಳಿಸಿದೆ. ಇದನ್ನೂ ಓದಿ: ಆಫ್ಘನ್‌ನಲ್ಲಿ ಭೂಕಂಪ – ಮೃತರ ಸಂಖ್ಯೆ 1,000ಕ್ಕೆ ಏರಿಕೆ; ಸಂತ್ರಸ್ತರಿಗೆ ನೆರವು ನೀಡ್ತೀವಿ ಎಂದ ತಾಲಿಬಾನ್‌

    ಅಫ್ಘಾನಿಸ್ತಾನಕ್ಕೆ ಮಾನವೀಯ ಸಹಾಯ ಒದಗಿಸಲು ತನ್ನ ತಾಂತ್ರಿಕ ತಂಡವನ್ನು ಕಳುಹಿಸಿದ ಭಾರತದ ನಿರ್ಧಾರವನ್ನು ತಾಲಿಬಾನ್ ಸ್ವಾಗತಿಸಿದೆ. ಸಂಕಷ್ಟಕ್ಕೆ ಸಿಲುಕಿರುವ ಆಫ್ಘನ್ನರ ರಕ್ಷಣೆಗೆ ರಾಜತಾಂತ್ರಿಕರು ಮತ್ತು ತಾಂತ್ರಿಕ ತಂಡವನ್ನು ಕಾಬೂಲ್‌ನಲ್ಲಿರುವ ರಾಯಭಾರಿ ಕಚೇರಿಗೆ ಕಳುಹಿಸಿರುವ ಭಾರತದ ನಿರ್ಧಾರ ಸ್ವಾಗತಾರ್ಹ ಎಂದು ತಾಲಿಬಾನ್‌ ವಕ್ತಾರ ಅಬ್ದುಲ್‌ ಕಹರ್‌ ಬಾಲ್ಚಿ ತಿಳಿಸಿದ್ದಾರೆ.

    Live Tv

  • ಆಫ್ಘನ್‌ನಲ್ಲಿ ಭೂಕಂಪ – ಮೃತರ ಸಂಖ್ಯೆ 1,000ಕ್ಕೆ ಏರಿಕೆ; ಸಂತ್ರಸ್ತರಿಗೆ ನೆರವು ನೀಡ್ತೀವಿ ಎಂದ ತಾಲಿಬಾನ್‌

    ಆಫ್ಘನ್‌ನಲ್ಲಿ ಭೂಕಂಪ – ಮೃತರ ಸಂಖ್ಯೆ 1,000ಕ್ಕೆ ಏರಿಕೆ; ಸಂತ್ರಸ್ತರಿಗೆ ನೆರವು ನೀಡ್ತೀವಿ ಎಂದ ತಾಲಿಬಾನ್‌

    ಕಾಬೂಲ್: ಅಫ್ಘಾನಿಸ್ತಾನದಲ್ಲಿ ಬುಧವಾರ ತೀವ್ರ ಭೂಕಂಪ ಸಂಭವಿಸಿದ ನಂತರ ಮೃತರ ಸಂಖ್ಯೆ 1,000 ಕ್ಕೆ ಏರಿಕೆಯಾಗಿದೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ.

    ದೇಶದ ಆಗ್ನೇಯ ಭಾಗದಲ್ಲಿರುವ ಖೋಸ್ಟ್ ನಗರದ ಬಳಿ ಇಂದು ಮುಂಜಾನೆ ತೀವ್ರ ಭೂಕಂಪ ಸಂಭವಿಸಿದೆ. ಖೋಸ್ಟ್ ಪ್ರಾಂತ್ಯದ ಸ್ಪೆರಾ ಜಿಲ್ಲೆ ಮತ್ತು ಪಕ್ಟಿಕಾ ಪ್ರಾಂತ್ಯದ ಬರ್ಮಲಾ, ಜಿರುಕ್, ನಾಕಾ ಮತ್ತು ಗಯಾನ್ ಜಿಲ್ಲೆಗಳು ಹೆಚ್ಚು ಹಾನಿಗೆ ಒಳಗಾಗಿವೆ. ಇದನ್ನೂ ಓದಿ: ಅಫ್ಘಾನಿಸ್ತಾನದಲ್ಲಿ ಭೂಕಂಪ – 280 ಸಾವು, 250ಕ್ಕೂ ಹೆಚ್ಚು ಜನರಿಗೆ ಗಾಯ

    ಭೂಕಂಪದಿಂದಾಗಿ 1,000 ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. 1,500 ಕ್ಕೂ ಹೆಚ್ಚು ಜನರು ಗಂಭೀರ ಗಾಯಗೊಂಡಿದ್ದಾರೆ. ಅನೇಕ ಹಳ್ಳಿಗಳು ನಾಶವಾಗಿವೆ ಎಂದು ಪಕ್ಟಿಕಾ ಪ್ರಾಂತ್ಯದ ಸಂಸ್ಕೃತಿ ಮತ್ತು ಮಾಹಿತಿ ವಿಭಾಗದ ಮುಖ್ಯಸ್ಥ ಅಮೀನ್ ಹುಝೈಫಾ ಸ್ಪುಟ್ನಿಕ್ಗೆ ಮಾಹಿತಿ ನೀಡಿದ್ದಾರೆ.

    ಸ್ಥಳಕ್ಕೆ ಹೆಲಿಕಾಪ್ಟರ್‌ ಹಾಗೂ ರಕ್ಷಣಾ ತಂಡ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಸ್ಥಳೀಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

    ತಾಲಿಬಾನ್ ವಕ್ತಾರ ಜಬೀವುಲ್ಲಾ ಮುಜಾಹಿದ್ ಮಾತನಾಡಿ, ಭೂಕಂಪದಿಂದ ಸಂತ್ರಸ್ತರಾಗಿರುವ ಜನರಿಗೆ ನೆರವು ನೀಡುವ ಕುರಿತು ಚರ್ಚಿಸಲು ಇಂದು ತುರ್ತು ಸಚಿವ ಸಂಪುಟ ಸಭೆ ನಡೆಸಲಾಯಿತು. ಭೂಕಂಪದಿಂದ ಹಾನಿಗೊಳಗಾದ ಜನರಿಗೆ ಸಹಾಯ ಮಾಡುವುದರ ಜೊತೆಗೆ, ಸಂಬಂಧಿತ ಸಂಸ್ಥೆಗಳು ರಕ್ಷಣಾ ತಂಡಗಳನ್ನು ಕಳುಹಿಸಲು ಕಾರ್ಯಪ್ರವೃತ್ತವಾಗಿವೆ ಎಂದು ತಿಳಿಸಿದ್ದಾರೆ.

    Live Tv