Tag: afghanistan

  • ಜರ್ಮನಿಯಲ್ಲಿ ಪಿಜ್ಜಾ ಡೆಲಿವರಿ ಬಾಯ್ ಆದ ಅಫ್ಘಾನ್ ಮಾಜಿ ಸಚಿವ!

    ಜರ್ಮನಿಯಲ್ಲಿ ಪಿಜ್ಜಾ ಡೆಲಿವರಿ ಬಾಯ್ ಆದ ಅಫ್ಘಾನ್ ಮಾಜಿ ಸಚಿವ!

    ಕಾಬೂಲ್: ಅಫ್ಘಾನ್ ಮಾಜಿ ಸಚಿವರೊಬ್ಬರು ಇದೀಗ ಜರ್ಮನಿಯಲ್ಲಿ ಪಿಜ್ಜಾ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದಾರೆ. ಈ ಮೂಲಕ ಅವರು ತಮ್ಮ ಬದುಕಿನ ಬಂಡಿ ಸಾಗಿಸುತ್ತಿದ್ದಾರೆ ಎಂಬುದಾಗಿ ವರದಿಯಾಗಿದೆ.

    ಆಶ್ರಫ್ ಘನಿ ಸರ್ಕಾರದಲ್ಲಿ ಮಾಹಿತಿ ತಂತ್ರಜ್ಞಾನ ಸಚಿವರಾಗಿದ್ದ ಸೈಯದ್ ಅಹಮ್ಮದತ್ ಶಾ ಸಾದತ್ ಅವರೇ ಇದೀಗ ಪಿಝಾ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿರುವವರಾಗಿದ್ದಾರೆ. ಅಶ್ರಫ್ ಘನಿಯವರೊಂದಿಗಿನ ಭಿನ್ನಾಭಿಪ್ರಾಯದಿಂದ ದೇಶವನ್ನೇ ತೊರೆದು ಜರ್ಮನಿಯಲ್ಲಿ ನೆಲೆಸಿದ್ದರು. ಈ ವೇಳೆ ಅವರಿಗೆ ತಮ್ಮ ಬದುಕು ಸಾಗಿಸಲು ಹಣದ ಕೊರತೆ ಉಂಟಾಗಿದೆ.

    ಹಣದ ಅವಶ್ಯಕತೆ ಎದುರಾದ ಸಂದರ್ಭದಲ್ಲಿ ಅವರು ಪಿಜ್ಜಾ ಡೆಲಿವರಿ ಬಾಯ್ ಆಗಿ ಕೆಲಸ ಮಾಡಬೇಕಾದ ಅನಿವಾರ್ಯ ಎದುರಾಯಿತು. ಹೀಗಾಗಿ ಸಾದತ್ ಅವರು ಜರ್ಮನಿಯ ಲೀಪ್ ಜಿಂಗ್ ನಲ್ಲಿ ಫುಡ್ ಡೆಲಿವರಿ ಸಂಸ್ಥೆಯೊಂದರಲ್ಲಿ ಕೆಲಸಕ್ಕೆ ಸೇರ್ಪಡೆಗೊಳ್ಳುತ್ತಾರೆ. ಅಂತೆಯೇ ಇದೀಗ ನಗರದಾದ್ಯಂತ ಸೈಕಲ್‍ನಲ್ಲಿ ಓಡಾಡುತ್ತಾ ತಮ್ಮ ಗ್ರಾಹಕರಿಗೆ ಆಹಾರವನ್ನು ವಿತರಿಸುತ್ತಿದ್ದಾರೆ.  ಇದನ್ನೂ ಓದಿ: ಕಾಬೂಲ್‍ನಲ್ಲಿ 3 ಸಾವಿರ ರೂ.ಗೆ ಒಂದು ಬಾಟೆಲ್ ನೀರು, ಪ್ಲೇಟ್ ರೈಸ್‍ಗೆ 7,500 ರೂ.

    ಸಾದತ್ ಅವರು ಜರ್ಮನಿಯಲ್ಲಿ ತನ್ನ ಗ್ರಾಹಕರಿಗೆ ಆಹಾರ ಪೂರೈಕೆ ಮಾಡುತ್ತಿದ್ದ ಸಂದರ್ಭ ಸ್ಥಳೀಯ ಮಾಧ್ಯಮದ ವರದಿಗಾರರು ಮಾಜಿ ಸಚಿವರ ಫೋಟೋವನ್ನು ಕ್ಲಿಕ್ಕಿಸಿದ್ದಾರೆ. ಸದ್ಯ ಈ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಇದನ್ನೂ ಓದಿ: ಹಿರಿಯ ನಟ ದೊಡ್ಡಣ್ಣ ಆಸ್ಪತ್ರೆಗೆ ದಾಖಲು

    ಸ್ಥಳೀಯ ಮಾಧ್ಯಮ ವರದಿಗಾರ ಈಓ ಬಗ್ಗೆ ತಮ್ಮ ಟ್ವೀಟ್ ನಲ್ಲಿ ಫೋಟೋ ಅಪ್ಲೋಡ್ ಮಾಡಿಕೊಂಡು, ಕಳೆದ ಎರಡು ವರ್ಷಗಳ ಹಿಂದೆ ಅಫ್ಘಾನಿಸ್ತಾನದಲ್ಲಿ ಸಂವಹನ ಸಚಿವರಾಗಿದ್ದೆ ಎಂದು ಹೇಳಿಕೊಂಡ ವ್ಯಕ್ತಿಯನ್ನು ನಾನು ಕಳೆದ ಕೆಲವು ದಿನಗಳ ಹಿಂದೆ ಭೇಟಿಯಾಗಿದ್ದೆ. ನಾನು ಆ ವ್ಯಕ್ತಿಯ ಬಳಿ ನೀವು ಲೀಪ್‍ಜಿಂಗ್ ಪ್ರದೇಶದಲ್ಲಿ ಏನು ಮಾಡುತ್ತಿದ್ದೀರಿ ಎಂದು ಪ್ರಶ್ನಿಸಿದೆ. ಆಗ ಅವರು ಲೈಫೆರಾಂಡೋಗೆ ಕಾರ್ಯ ನಿರ್ವಹಿಸುತ್ತಿದ್ದೇನೆ ಎಂದು ತಿಳಿಸಿದ್ದಾರೆ ಎಂದು ಬರೆದುಕೊಂಡಿದ್ದಾರೆ.

    2018 ರಲ್ಲಿ ಅಶ್ರಫ್ ಘನಿ ನೇತೃತ್ವದ ಅಫ್ಘಾನಿಸ್ತಾನ ಸರ್ಕಾರದಲ್ಲಿ ಸಂಪುಟ ಸಚಿವರಾಗಿ ಇದ್ದರು. ಎರಡು ವರ್ಷಗಳ ಕಾಲ ಅಫ್ಘಾನಿಸ್ತಾನದಲ್ಲಿ ಮಾಹಿತಿ ಹಾಗೂ ತಂತ್ರಜ್ಞಾನ ಸಚಿವರಾಗಿ ಸೈಯದ್ ಅಹಮ್ಮದ್ ಶಾ ಸಾದತ್ ಕಾರ್ಯ ನಿರ್ವಹಿಸಿದ್ದಾರೆ. 2020 ರಲ್ಲಿ ಸಾದತ್ ತನ್ನ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಬಳಿಕ ಕಳೆದ ವರ್ಷ ಅಂದರೆ 2020 ರ ಡಿಸೆಂಬರ್‍ನಲ್ಲಿ ಜರ್ಮಿನಿಗೆ ಬಂದಿದ್ದಾರೆ ಎಂದು ಹೇಳಲಾಗಿದೆ. ಇದನ್ನೂ ಓದಿ: ಅಫ್ಘಾನಿಸ್ತಾನದಲ್ಲಿ ಅಮ್ಮನಿಂದ ದೂರವಾದ ಕಂದಮ್ಮನನ್ನ ರಕ್ಷಿಸಿದ ಟರ್ಕಿ ಸೈನಿಕರು

  • ಕಾಬೂಲ್‍ನಲ್ಲಿ 3 ಸಾವಿರ ರೂ.ಗೆ ಒಂದು ಬಾಟೆಲ್ ನೀರು, ಪ್ಲೇಟ್ ರೈಸ್‍ಗೆ 7,500 ರೂ.

    ಕಾಬೂಲ್‍ನಲ್ಲಿ 3 ಸಾವಿರ ರೂ.ಗೆ ಒಂದು ಬಾಟೆಲ್ ನೀರು, ಪ್ಲೇಟ್ ರೈಸ್‍ಗೆ 7,500 ರೂ.

    ಕಾಬೂಲ್: ಅಫ್ಘಾನಿಸ್ತಾನ ರಾಜಧಾನಿ ತಾಲಿಬಾನಿಗಳ ವಶವಾಗುತ್ತಿದ್ದಂತೆ ಆರ್ಥಿಕ ಚಟುವಟಿಕೆಗಳ ಮೇಲೆ ನೇರ ಪರಿಣಾಮ ಬೀರಿದೆ. ದೇಶ ತೊರೆಯಲು ಮುಂದಾಗಿ ಕಾಬೂಲ್ ವಿಮಾನನಿಲ್ದಾಣ ತಲುಪಿರುವ ಜನರಿಗೆ ಮೂರು ಸಾವಿರ ರೂಪಾಯಿ ನೀಡಿ ಒಂದು ಬಾಟೆಲ್ ನೀರು ಖರೀದಿಸುವ ಕಠಿಣ ಪರಿಸ್ಥಿತಿ ಎದುರಾಗಿದೆ. ಇತ್ತ ಒಂದು ಪ್ಲೇಟ್ ರೈಸ್‍ಗೆ 7,500 ರೂ. ನೀಡಲಾಗುತ್ತಿದೆ. ಹೇಗಾದ್ರೂ ಮಾಡಿ ಇಲ್ಲಿಂದ ಹೋದ್ರೆ ಸಾಕು ಅಂತಿರುವ ಜನರು ಅನಿವಾರ್ಯವಾಗಿ ಇಷ್ಟು ಹಣ ನೀಡಿ ಅನ್ನಾಹಾರ ಖರೀದಿಸುತ್ತಿದ್ದಾರೆ. ಆದ್ರೆ ಮಧ್ಯಮ ವರ್ಗದ ಜನರ ಸ್ಥಿತಿ ಆ ದೇವರಿಗೆ ಪ್ರೀತಿ ಎಂಬಂತಾಗಿದೆ.

    ಈ ರೀತಿಯ ಕಷ್ಟಗಳು ಎದುರಾದ್ರೂ ಜನ ಮತ್ತೆ ತಮ್ಮ ಮನೆಗಳಿಗೆ ಹಿಂದಿರುಗುವ ಬಗ್ಗೆ ಆಲೋಚನೆಯೂ ಮಾಡುತ್ತಿಲ್ಲ. ಮತ್ತೊಂದು ಕಡೆ ವಿಮಾನ ಏರುವ ತಮ್ಮ ಸರದಿಗಾಗಿ ಕಾಯುತ್ತಿರುವ ಜನರ ಸಹಾಯಕ್ಕೆ ಅಮೆರಿಕ ಸೈನಿಕರು ಮುಂದಾಗಿದ್ದು, ಆಹಾರದ ಪೊಟ್ಟಣಗಳನ್ನು ವಿತರಿಸುತ್ತಿದ್ದಾರೆ. ಕಾಬೂಲ್ ವಿಮಾನ ನಿಲ್ದಾಣದ ಹೊರಗಡೆ ನೀರು ಮತ್ತು ಆಹಾರ ಮಾರಾಟ ಮಾಡಲಾಗುತ್ತಿದೆ. ಆರ್ಥಿಕವಾಗಿ ಸಶಕ್ತರಾಗಿರುವವರು ಹಣ ನೀಡಿ ಖರೀದಿಸುತ್ತಿದ್ದಾರೆ.

    kabul

    ಇನ್ನು ಕೆಲ ಮಾರಾಟಗಾರರು ಡಾಲರ್ ನೀಡಿದ್ರೆ ಮಾತ್ರ ಆಹಾರ ನೀಡುತ್ತಿದ್ದಾರೆ. ಕೆಲವರು ಆಹಾರವಿಲ್ಲದೇ ಕುಳಿತಲ್ಲಿಯೇ ಕುಸಿದು ಬೀಳುತ್ತಿರುವ ಬಗ್ಗೆ ವರದಿಯಾಗಿವೆ. ದೇಶವನ್ನು ವಶಕ್ಕೆ ಪಡೆದ ತಾಲಿಬಾನಿಗಳು ಪ್ರಜೆಗಳ ಮೇಲೆ ಹಲ್ಲೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಅಫ್ಘಾನಿಸ್ತಾನದಲ್ಲಿ ಅಮ್ಮನಿಂದ ದೂರವಾದ ಕಂದಮ್ಮನನ್ನ ರಕ್ಷಿಸಿದ ಟರ್ಕಿ ಸೈನಿಕರು

    ತಾಲಿಬಾನಿಗಳು ಕಾಬೂಲ್ ವಶಕ್ಕೆ ಪಡೆದ ನಂತರ ಸುಮಾರು 75,900 ಜನರನ್ನು ಏರ್ ಲಿಫ್ಟ್ ಮಾಡಲಾಗಿದೆ. ಇದರಲ್ಲಿ ಅಮೆರಿಕ 70,700 ಜನರನ್ನು ರಕ್ಷಣೆ ಮಾಡಿದೆ. ಕಾಬೂಲ್ ವಿಮಾನ ನಿಲ್ದಾಣದತ್ತ ಬರುವ ಜನರ ಸಂಖ್ಯೆಯಲ್ಲಿ ಇಳಿಕೆಯಾಗುತ್ತಿಲ್ಲ. ಇನ್ನು ಸುಮಾರು 2 ಲಕ್ಷಕ್ಕೂ ಅಧಿಕ ಜನರು ಅಫ್ಘಾನಿಸ್ತಾನಕ್ಕೆ ಗುಡ್ ಬೈ ಹೇಳಲು ಸಿದ್ಧರಾಗಿದ್ದಾರೆ ಎಂದು ಅಂದಾಜಿಸಲಾಗಿದೆ. ಇದನ್ನೂ ಓದಿ: ಪಂಜಶೀರ್ ವಶಕ್ಕೆ ಮುಂದಾಗಿದ್ದ 300 ತಾಲಿಬಾನಿಗಳು ಮಟಾಷ್!

  • ತಾಲಿಬಾನಿಗಳು ಹುಡುಕುತ್ತಾ ನನ್ನ ಮನೆಗೆ ಬಂದ್ರು: ಅಫ್ಘಾನಿಸ್ತಾನದ ಮೊದಲ ಮಹಿಳಾ ಮೇಯರ್

    ತಾಲಿಬಾನಿಗಳು ಹುಡುಕುತ್ತಾ ನನ್ನ ಮನೆಗೆ ಬಂದ್ರು: ಅಫ್ಘಾನಿಸ್ತಾನದ ಮೊದಲ ಮಹಿಳಾ ಮೇಯರ್

    – ತಂದೆ, ಗಾರ್ಡ್ ಮೇಲೆ ಹಲ್ಲೆ ನಡೆಸಿದ್ರು
    – ಜಗತ್ತಿಗೆ ಇವರ ಅಸಲಿ ಮುಖ ಅನಾವರಣ ಮಾಡ್ತೀನಿ

    ಕಾಬೂಲ್: ತಾಲಿಬಾನಿಗಳು ನನ್ನನ್ನು ಹುಡುಕುತ್ತಾ ನಮ್ಮ ಮನೆಗೆ ಬಂದಿದ್ದರು. ಮನೆಯಲ್ಲಿದ್ದ ನನ್ನ ತಂದೆ ಮತ್ತು ಸೆಕ್ಯುರಿಟಿ ಗಾರ್ಡ್ ಮೇಲೆ ಹಲ್ಲೆ ನಡೆಸಿ ಹೋಗಿದ್ದಾರೆ ಎಂದು ಅಫ್ಘಾನಿಸ್ತನದ ಮೊದಲ ಮಹಿಳಾ ಮೇಯರ್ ಜರೀಫಾ ಗಫ್ರಿ ಹೇಳಿದ್ದಾರೆ. ಸದ್ಯ ಜರೀಫಾ ಗಫರ್ ಜರ್ಮನಿಯಲ್ಲಿ ಸುರಕ್ಷಿತವಾಗಿದ್ದಾರೆ.

    ಅಫ್ಘಾನಿಸ್ತಾನ ತಾಲಿಬಾನಿಗಳ ಕೈ ವಶವಾಗುತ್ತಿದ್ದ ಅಲ್ಲಿಯ ಮಕ್ಕಳು ಮತ್ತು ಮಹಿಳೆಯರ ಮುಂದಿನ ಭವಿಷ್ಯ ಏನು ಎಂಬುದರ ಪ್ರಶ್ನೆಗೆ ಉತ್ತರ ಸಿಗದಂತಾಗಿದೆ. ಇತ್ತ ತಾಲಿಬಾನಿಗಳು ಸಾಮಾಜಿಕ ಸೇವೆ ಮತ್ತು ರಾಜಕೀಯದಲ್ಲಿ ಗುರುತಿಸಿಕೊಂಡಿರುವ ಮಹಿಳೆಯರ ಮನೆಗಳ ಮೇಲೆ ದಾಳಿ ನಡೆಸುತ್ತಿರುವ ಬಗ್ಗೆ ವರದಿಯಾಗ್ತಿದೆ.

    20 ವರ್ಷ ಪಡೆದುಕೊಂಡಿದ್ದ ಸ್ವಾತಂತ್ರ್ಯ ಇಲ್ಲ:
    ನ್ಯೂಸ್ ಏಜೆನ್ಸಿಗೆ ಸಂದರ್ಶನ ನೀಡಿರುವ ಜರೀಫಾ ಹಲವು ವಿಷಯಗಳನ್ನು ಹಂಚಿಕೊಂಡಿದ್ದಾರೆ. ತಮಗೆ ಆಶ್ರಯ ನೀಡಿರುವ ಜರ್ಮನಿ ಸರ್ಕಾರಕ್ಕೂ ಧನ್ಯವಾದ ಸಲ್ಲಿಸಿದ್ದಾರೆ. ಅಫ್ಘಾನಿಸ್ತಾನದ ಜನರನನ್ನು ಕಟ್ಟಿ ಹಾಕಲು ಸಾಧ್ಯವಿಲ್ಲ. ಅವರು ಯಾವುದಕ್ಕೂ ಹೆದರಲ್ಲ. ತಾಲಿಬಾನಿ ಉಗ್ರರು ಎಷ್ಟೇ ಜನರನ್ನು ಕೊಂದರೂ ನಮ್ಮ ಹೋರಾಟ ನಿಲ್ಲಲ್ಲ. ಕಳೆದ 20 ವರ್ಷಗಳಲ್ಲಿ ನಾವು ಪಡೆದುಕೊಂಡಿದ್ದು ಎಲ್ಲವೂ ನಮ್ಮೊಂದಿಗೆ ಇಲ್ಲ. ನನ್ನ ದೇಶದ ಮಣ್ಣು ಮಾತ್ರ ಬಳಿಯಲ್ಲಿದೆ ಎಂದು ಭಾವುಕರಾಗಿದ್ದಾರೆ.

    ಪಾಕ್ ವಿರುದ್ಧ ಆಕ್ರೋಶ:
    ಇಂದಿನ ಅಫ್ಘಾನಿಸ್ತಾನದ ಸ್ಥಿತಿಗೆ ಜನರು, ರಾಜಕೀಯ ಮುಖಂಡರು ಮತ್ತು ನಮ್ಮ ವಿಶ್ವವೇ ಕಾರಣ. ಸ್ಥಳೀಯ ಜನರು ಒಮ್ಮೆಯೂ ಒಗ್ಗಟ್ಟಾಗಿ ಉಗ್ರರ ವಿರುದ್ಧ ಧ್ವನಿ ಎತ್ತುವ ಪ್ರಯತ್ನ ಮಾಡಲಿಲ್ಲ. ಪಾಕಿಸ್ತಾನ ಏನು ಮಾಡಿದೆ ಅನ್ನೋ ವಿಷಯ ಅಫ್ಘಾನಿಸ್ತಾನದ ಪ್ರತಿ ಮಗುವಿಗೆ ಗೊತ್ತಿದೆ ಎಂದು ಆಕ್ರೋಶ ಹೊರ ಹಾಕಿದರು. ಇದನ್ನೂ ಓದಿ: ಅಫ್ಘಾನಿಸ್ತಾನದಲ್ಲಿ ಅಮ್ಮನಿಂದ ದೂರವಾದ ಕಂದಮ್ಮನನ್ನ ರಕ್ಷಿಸಿದ ಟರ್ಕಿ ಸೈನಿಕರು

    ಅಫ್ಘಾನಿಸ್ತಾನ ನಮ್ಮದೇ:
    ಇದು ನಮ್ಮ ದೇಶ, ಎಂದಿಗೂ ನಮ್ಮದೇ ಆಗಿರುತ್ತೆ. ಇಂದು ನನ್ನಂತಹ ಮಹಿಳೆಯರು ಅಫ್ಘಾನಿಸ್ತಾದಲ್ಲಿರುವ ಪರಿಸ್ಥಿತಿ ಇಲ್ಲ. ಬೇಟೆಗೂ ಮುನ್ನ ಹುಲಿ ಎರಡು ಹೆಜ್ಜೆ ಹಿಂದೆ ಹಾಕೋದು ಭಯದಿಂದಲ್ಲ. ತನ್ನ ಪೂರ್ಣ ಶಕ್ತಿಯನ್ನು ಪ್ರಯೋಗಿಸಲು ಎಂಬುದನ್ನ ಅಲ್ಲಿದ್ದವರು ಅರ್ಥ ಮಾಡಿಕೊಳ್ಳಬೇಕು. ಜರ್ಮನಿಯಲ್ಲಿರು ನಾವು ಶೇ.99 ಅಫ್ಘನ್ನರು ಮತ್ತು ಮಹಿಳೆಯರ ಧ್ವನಿಯಾಗಿರುತ್ತೇನೆ. ವಿಶ್ವದ ಮುಂದೆ ತಾಲಿಬಾನಿಗಳನ್ನು ಅನಾವರಣಗೊಳಿಸುವ ಕೆಲಸ ಮಾಡಲಿದ್ದೇನೆ. ಇಲ್ಲಿಂದಲೇ ನನ್ನ ಮುಂದಿನ ಕೆಲಸಗಳನ್ನು ಆರಂಭಿಸಲಿದು, ಅವರ ವಿರುದ್ಧ ಧ್ವನಿ ಎತ್ತುತ್ತೇನೆ ಎಂದು ಹೇಳಿದ್ದಾರೆ. ಇಂದು ನಾವು ಎರಡು ಹೆಜ್ಜೆ ಹಿಂದೆ ಬಂದಿರೋದು ಇದೇ ಕಾರಣ ಎಂದು ಹೇಳುವ ತಾಲಿಬಾನಿಗಳಿಗೆ ಎಚ್ಚರಿಕೆ ಸಂದೇಶ ರವಾನಿಸಿದರು. ಇದನ್ನೂ ಓದಿ: ಪಂಜಶೀರ್ ವಶಕ್ಕೆ ಮುಂದಾಗಿದ್ದ 300 ತಾಲಿಬಾನಿಗಳು ಮಟಾಷ್!

    ಕಳೆದ ವಾರ ಇಸ್ತಾಂಬುಲ್ ಗೆ ತೆರಳಿದ್ದ ಜರೀಫಾ ಈಗ ಜರ್ಮನಿಯಲ್ಲಿದ್ದಾರೆ. ಸದ್ಯ ಜರೀಫಾ ಜೊತೆ ಅವರ ಕುಟುಂಬ ಸದಸ್ಯರಿದ್ದಾರೆ. ತಾವು ನಿರಾಶ್ರಿತಳಾಗಿ ಜರ್ಮನಿಗೆ ಬಂದಿಲ್ಲ ಎಂದು ಹೇಳಿಕೊಂಡಿದ್ದಾರೆ. ಇತ್ತ ಜರ್ಮನಿಯಲ್ಲಿ ಅಫ್ಘನ್ನರಿಗೆ ಆಶ್ರಯ ನೀಡುವ ಕುರಿತಿ ಹಲವು ಸಮಸ್ಯೆಗಳು ಎದುರಾಗಿವೆ. ಇದನ್ನೂ ಓದಿ: ಕಾಬೂಲ್‍ನಿಂದ ಉಕ್ರೇನ್ ವಿಮಾನ ಹೈಜಾಕ್

  • ಕಾಬೂಲ್‍ನಿಂದ ಉಕ್ರೇನ್ ವಿಮಾನ ಹೈಜಾಕ್

    ಕಾಬೂಲ್‍ನಿಂದ ಉಕ್ರೇನ್ ವಿಮಾನ ಹೈಜಾಕ್

    ಕಾಬೂಲ್: ಅಫ್ಘಾನಿಸ್ತಾನದಲ್ಲಿ ಸಿಲುಕಿರುವ ಜನರ ರಕ್ಷಣೆಗೆ ತೆರಳಿದ್ದ ಉಕ್ರೇನ್ ವಿಮಾನ ಹೈಜಾಕ್ ಮಾಡಲಾಗಿದೆ. ತಮ್ಮ ವಿಮಾನವನ್ನು ಇರಾನ್ ಗೆ ತೆಗೆದುಕೊಂಡು ಹೋಗಲಾಗಿದೆ ಎಂದು ಉಕ್ರೇನ್ ಸರ್ಕಾರದ ಸಚಿವರು ಹೇಳಿದ್ದಾರೆ. ಭಾನುವಾರವೇ ವಿಮಾನವೇ ಹೈಜಾಕ್ ಆಗಿದ್ದು, ಕೆಲ ಅಪರಿಚಿತರು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ ಉಕ್ರೇನ್ ಸರ್ಕಾರ ಹೇಳಿದೆ.

    ಉಕ್ರೇನ್ ಡೆಪ್ಯುಟಿ ವಿದೇಶಾಂಗ ಮಂತ್ರಿ ಯೆವ್ಗೆನಿ ಯೆನಿನ್, ಭಾನುವಾರ ಕೆಲ ಅಪರಿಚಿತರು ವಿಮಾನ ಹೈಜಾಕ್ ಮಾಡಿದ್ದು, ಇರಾನ್ ನತ್ತ ತೆಗೆದುಕೊಂಡು ಹೋಗಿದ್ದಾರೆ. ನಮ್ಮ ಜನರು ಏರ್ ಪೋರ್ಟ್ ತಲುಪದ ಕಾರಣ ವಿಮಾನವನ್ನು ನಿಗದಿತ ಪ್ಲಾನ್ ನಂತೆ ಮೂರು ಸ್ಥಳಗಳಿಗೆ ತೆಗೆದುಕೊಂಡು ಹೋಗಲು ವಿಫಲವಾಗಿದ್ದೇವೆ ಎಂದು ಹೇಳಿದ್ದಾರೆ.

    ವಿಮಾನ ಈಶಾನ್ಯ ಇರಾನಿನ ಮಶಹದ್ ಏರ್ ಪೋರ್ಟ್ ಗೆ ಬಂದಿತ್ತು. ಅಲ್ಲಿ ರೀಪ್ಯೂಲಿಂಗ್ ಬಳಿಕ ಉಕ್ರೇನ್ ನತ್ತ ಟೇಕಾಫ್ ಆಗಿತ್ತು. ನಂತರ ಕಿವ್ ವಿಮಾನ ನಿಲ್ದಾಣದಲ್ಲಿ ಅದು ಲ್ಯಾಂಡ್ ಆಗಿತ್ತು ಎಂದು ಇರಾನ್ ಮಂತ್ರಿ ಅಬ್ಬಾಸ್ ಅಸ್ಲಾನಿ ಮಾಹಿತಿ ನೀಡಿದ್ದಾರೆ.

    ವಿಮಾನ ಹೈಜಾಕ್ ಮಾಡಿದವರು ಶಸ್ತ್ರಸಜ್ಜಿತರಾಗಿದ್ದರು. ಆದ್ರೆ ಇದುವರೆಗೂ ಈ ವಿಮಾನ ಹೈಜಾಕ್ ಮಾಡಿದವರು ಯಾರು ಎಂಬುದರ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಿಲ್ಲ. ಅಫ್ಘಾನಿಸ್ತಾನ ತಾಲಿಬಾನಿಗಳ ವಶವಾಗುತ್ತಿದ್ದಂತೆ ಉಕ್ರೇನ್ ನಿರಂತರವಾಗಿ ತನ್ನ ಜನರನ್ನು ಏರ್ ಲಿಫ್ಟ್ ಮಾಡುತ್ತಿದೆ. ಇದನ್ನೂ ಓದಿ: ಅಫ್ಘಾನಿಸ್ತಾನದಲ್ಲಿ ಅಮ್ಮನಿಂದ ದೂರವಾದ ಕಂದಮ್ಮನನ್ನ ರಕ್ಷಿಸಿದ ಟರ್ಕಿ ಸೈನಿಕರು

    ಕೆಲ ವರದಿಗಳ ಪ್ರಕಾರ, ಕಾಬೂಲ್ ನಿಂದ ಕಿವ್ ವರೆಗೂ 83 ಜನರನ್ನು ಕರೆದುಕೊಂಡು ಬರಲಾಗಿತ್ತು. ಇದರಲ್ಲಿ 31 ಉಕ್ರೇನ್ ಪ್ರಜೆಗಳಿದ್ದಾರೆ ಎಂದು ಹೇಳಲಾಗುತ್ತಿದೆ. ಸದ್ಯ ಅಫ್ಘಾನಿಸ್ತಾದಲ್ಲಿ 100 ಉಕ್ರೇನ್ ಪ್ರಜೆಗಳಿದ್ದು, ಅವರನ್ನ ವಾಪಸ್ ಕರೆಸಿಕೊಳ್ಳುವ ಕೆಲಸ ತ್ವರಿತಗತಿಯಲ್ಲಿ ನಡೆಯುತ್ತಿದೆ. ಇದನ್ನೂ ಓದಿ: ಪಂಜಶೀರ್ ವಶಕ್ಕೆ ಮುಂದಾಗಿದ್ದ 300 ತಾಲಿಬಾನಿಗಳು ಮಟಾಷ್!

    ತಾಲಿಬಾನಿಗಳು ಕಾಬೂಲ್ ನಗರ ವಶಕ್ಕೆ ಪಡೆದುಕೊಳ್ಳುತ್ತಿದ್ದಂತೆ ಭಾರತ, ಫ್ರಾನ್ಸ್, ಉಕ್ರೇನ್, ಜರ್ಮನಿ, ಬ್ರಿಟನ್, ಅಮೆರಿಕ ತನ್ನ ಪ್ರಜೆಗಳನ್ನು ಕರೆಸಿಕೊಳ್ಳುತ್ತಿದೆ. ನಾಟೋ ದೇಶಗಳ ಜೊತೆ ಸೇರಿ ಕಾಬೂಲ್ ವಿಮಾನ ನಿಲ್ದಾಣವನ್ನು ಅಮೆರಿಕ ತನ್ನ ನಿಯಂತ್ರಣದಲ್ಲಿರಿಸಿಕೊಂಡಿದೆ. ಅಮೆರಿಕದ ಸಹಾಯದಿಂದ ಇನ್ನಿತರ ದೇಶಗಳು ಪ್ರಜೆಗಳ ರಕ್ಷಣಾ ಕಾರ್ಯದಲ್ಲಿ ತೊಡಗಿಕೊಂಡಿವೆ. ಇದನ್ನೂ ಓದಿ: ಯುದ್ಧದಲ್ಲಿ ಸಹಾಯ ಮಾಡಿದ ಅಫ್ಘನ್ನರಿಗೆ ಅಮೆರಿಕದಲ್ಲಿ ಆಶ್ರಯ: ಜೋ ಬೈಡನ್ ಘೋಷಣೆ

  • ಅಫ್ಘಾನಿಸ್ತಾನವನ್ನು ಬಿಟ್ಟು ಹೋಗುವುದಿಲ್ಲ, ದೇಹ ಇಲ್ಲೇ ಮಣ್ಣಾದರೂ ಸೈ: ಹಂಗಾಮಿ ಅಧ್ಯಕ್ಷ ಅಮರುಲ್ಲಾ ಸಲೇಹ್

    ಅಫ್ಘಾನಿಸ್ತಾನವನ್ನು ಬಿಟ್ಟು ಹೋಗುವುದಿಲ್ಲ, ದೇಹ ಇಲ್ಲೇ ಮಣ್ಣಾದರೂ ಸೈ: ಹಂಗಾಮಿ ಅಧ್ಯಕ್ಷ ಅಮರುಲ್ಲಾ ಸಲೇಹ್

    ಕಾಬೂಲ್: ಅಫ್ಘಾನಿಸ್ತಾನವನ್ನು ಬಿಟ್ಟು ಹೋಗುವುದಿಲ್ಲ, ದೇಹ ಇಲ್ಲೇ ಮಣ್ಣಾದರೂ ಸೈ ಎಂದು ಹಂಗಾಮಿ ಅಧ್ಯಕ್ಷ ಅಮರುಲ್ಲಾ ಸಲೇಹ್ ಟ್ವೀಟ್ ಮಾಡಿದ್ದಾರೆ.

    ಅಂದ್ರಾಬ್ ಪ್ರಾಂತ್ಯದಲ್ಲಿ ಉಗ್ರರಿಂದ ಮನೆ ಮನೆ ಶೋಧವಾಗುತ್ತಿದೆ. ಈ ಹೊತ್ತಿನಲ್ಲೇ ಅಫ್ಘಾನ್‍ನ ಮಾಜಿ ಉಪಾಧ್ಯಕ್ಷ, ಹಂಗಾಮಿ ಅಧ್ಯಕ್ಷ ಅಮರುಲ್ಲಾ ಸಲೇಹ್ ಟ್ವೀಟ್ ಮಾಡಿ ಸಂದೇಶವೊಂದನ್ನು ರವಾನೆ ಮಾಡಿದ್ದಾರೆ. ಇದನ್ನೂ ಓದಿ: ಯುದ್ಧದಲ್ಲಿ ಸಹಾಯ ಮಾಡಿದ ಅಫ್ಘನ್ನರಿಗೆ ಅಮೆರಿಕದಲ್ಲಿ ಆಶ್ರಯ: ಜೋ ಬೈಡನ್ ಘೋಷಣೆ

    ಟ್ವೀಟ್‍ನಲ್ಲಿ ಏನಿದೆ?

    ದೇವರಿಗೆ ಮಾತ್ರ ನನ್ನನ್ನು ಇಲ್ಲಿಂದ ತೆರವುಗೊಳಿಸಲು ಸಾಧ್ಯ. ಆದರೆ ನನ್ನ ದೇಹ ಈ ಮಣ್ಣಿನಲ್ಲಿ ಐಕ್ಯವಾಗುತ್ತದೆ. ಅಫ್ಘಾನಿಸ್ತಾನ ಮತ್ತು ನಾನು ಒಂದೇ. ಇಲ್ಲಿಂದ ಹೊರದಬ್ಬಲು ಯಾರಿಂದಲೂ ಆಗದು, ನಾನು ಕೂಡಾ ಹೊರಗೆ ಹೋಗಲಾರೆ. ಈ ಮಣ್ಣಿನಲ್ಲೇ ನನ್ನ ದೇಹ ಮಣ್ಣಾಗಿ ಹೋಗಲಿ ಎನ್ನುವ ಮೂಲಕ ಉಗ್ರರಿಗೆ ಹೆದರುವುದಿಲ್ಲ ಎಂಬ ಸಂದೇಶವನ್ನು ಟ್ವೀಟ್ ಮಾಡಿದ್ದಾರೆ.

    ಅಫ್ಘಾನಿಸ್ತಾನದಲ್ಲಿ ಪ್ರಾಬಲ್ಯ ಸಾಧಿಸಿರುವ ತಾಲಿಬಾನ್ ಉಗ್ರರು ದಿನೇ ದಿನೇ ಅಟ್ಟಹಾಸ ಮೆರೆಯುತ್ತಿದ್ದು ಇದೀಗ ಅಫ್ಘಾನ್‍ನ ಅಂದ್ರಾಬ್ ಕಣಿವೆಗೆ ಅಗತ್ಯ ಸಾಮಗ್ರಿ ಪೂರೈಕೆಯನ್ನೇ ಬಂದ್ ಮಾಡಿದ್ದಾರೆ. ಅಂದ್ರಾಬ್ ಕಣಿವೆಗೆ ಆಹಾರ ಸಾಮಗ್ರಿ, ಇಂಧನ ಪೂರೈಕೆ ಸ್ಥಗಿತವಾಗಿದ್ದು ಅಲ್ಲಿನ ಪ್ರತಿ ಮನೆಯನ್ನೂ ಶೋಧಿಸುತ್ತಿರುವ ತಾಲಿಬಾನಿಗಳು ಮಕ್ಕಳು, ವೃದ್ಧರನ್ನು ಕಿಡ್ನ್ಯಾಪ್ ಮಾಡುತ್ತಿದ್ದಾರೆ. ಉಗ್ರರ ಭಯದಿಂದ ಸಾವಿರಾರು ಮಹಿಳೆಯರು, ಮಕ್ಕಳು ಬೆಟ್ಟಗುಡ್ಡಗಳತ್ತ ಓಡಿಹೋಗುತ್ತಿದ್ದು, ಜೀವ ಉಳಿಸಿಕೊಳ್ಳುವುದೇ ಹರಸಾಹಸವಾಗಿದೆ.

  • ಯುದ್ಧದಲ್ಲಿ ಸಹಾಯ ಮಾಡಿದ ಅಫ್ಘನ್ನರಿಗೆ ಅಮೆರಿಕದಲ್ಲಿ ಆಶ್ರಯ: ಜೋ ಬೈಡನ್ ಘೋಷಣೆ

    ಯುದ್ಧದಲ್ಲಿ ಸಹಾಯ ಮಾಡಿದ ಅಫ್ಘನ್ನರಿಗೆ ಅಮೆರಿಕದಲ್ಲಿ ಆಶ್ರಯ: ಜೋ ಬೈಡನ್ ಘೋಷಣೆ

    ವಾಷಿಂಗ್ಟನ್: ಯುದ್ಧದ ಸಮಯದಲ್ಲಿ ತಮಗೆ ಸಹಾಯ ಮಾಡಿದ್ದ ಅಫ್ಘನ್ನರಿಗೆ ಆಶ್ರಯ ನೀಡೋದಾಗಿ ಅಮೆರಿಕ ಅಧ್ಯಕ್ಷ ಜೋ ಬೈಡನ್ ಘೋಷಣೆ ಮಾಡಿದ್ದಾರೆ.

    ಅಫ್ಘಾನಿಸ್ತಾನದ ಸ್ಥಿತಿ ದಿನದಿಂದ ದಿನಕ್ಕೆ ನರಕ ರೂಪ ಪಡೆದುಕೊಳ್ಳುತ್ತಿದ್ದು, ತಾಲಿಬಾನಿಗಳು ತಾವು ರಕ್ತಪಿಪಾಸುಗಳು ಎಂಬುದನ್ನು ಸಾಬೀತು ಮಾಡುತ್ತಿದ್ದಾರೆ. ಈ ಎಲ್ಲ ಬೆಳವಣಿಗೆಗೆ ಅಮೆರಿಕದ ತೆಗೆದುಕೊಂಡ ನಿರ್ಧಾರವೇ ಕಾರಣ ಎಂದು ಆರೋಪಗಳು ಕೇಳಿ ಬಂದಿವೆ. ಇದೀಗ ಅಮೆರಿಕ ಅಧ್ಯಕ್ಷ ಜೋ ಬೈಡನ್ ಮಹತ್ವದ ನಿರ್ಧಾರ ಪ್ರಕಟಿಸಿದ್ದಾರೆ.

    ಅಮೆರಿಕದಲ್ಲಿ ಆಶ್ರಯ:
    ಅಮೆರಿಕ ಅಫ್ಘನ್ನರಿಗೆ ಆಶ್ರಯ ನೀಡಲು ನಿರ್ಧರಿಸಿದೆ. ಯುದ್ಧದ ಸಮಯದಲ್ಲಿ ತಮಗೆ ನೆರವು ನೀಡಿದವರಿಗೆ ಆಶ್ರಯ ನೀಡಲಾಗುತ್ತದೆ. ಒಮ್ಮೆ ಸ್ಕ್ರೀನಿಂಗ್ ಮತ್ತು ಔಪಚಾರಿಕ ಮಾತುಕತೆಗಳು ಅಂತಿಮವಾಗಬೇಕಿದೆ. ನಾವು ಅಫ್ಘನ್ನರನ್ನು ಅಮೆರಿಕಾಗೆ ಸ್ವಾಗತಿಸುತ್ತೇವೆ. ನಾವು ಇರೋದು ಹೀಗೆ. ಇದುವೇ ಅಮೆರಿಕ ಎಂದು ಜೋ ಬೈಡನ್ ಟ್ವೀಟ್ ಮೂಲಕ ತಿಳಿಸಿದ್ದಾರೆ.  ಇದನ್ನೂ ಓದಿ: 6 ಲಕ್ಷ ಕೋಟಿ ಸಂಗ್ರಹ ಗುರಿ – ಖಾಸಗಿಯವರಿಗೆ ಸಿಗಲಿದೆ ರೈಲು, ರಸ್ತೆ, ಗಣಿ

    ತಾಲಿಬಾನಿ ವಕ್ತಾರ ಸೋಹೆಲ್ ಶಾಹಿನ್ ಎಂಬಾತ ಕತಾರ್ ನಲ್ಲಿ ಕುಳಿತು ಹೇಳಿಕೆ ನೀಡಿದ್ದಾನೆ. ಒಂದು ವೇಳೆ ಅಮೆರಿಕ ತನ್ನ ಸೇನೆಯನ್ನ ಹಿಂಪಡೆಯಲು ವಿಳಂಬ ನೀತಿ ತೋರಿದ್ರೆ ಅದರ ಪರಿಣಾಮ ಮುಂದಿನ ದಿನಗಳಲ್ಲಿ ಎದುರಿಸಬೇಕಾಗುತ್ತದೆ. ನಾವು ನಿಮಗೆ ಆಗಸ್ಟ್ 31ರವರೆಗೆ ನಿಮ್ಮ ಸೇನೆ ಕರೆಸಿಕೊಳ್ಳಲು ಸಮಯ ನೀಡಿದ್ದೇವೆ ಎಂದು ಹೇಳಿದ್ದಾನೆ. ಇತ್ತ ಅಮೆರಿಕ ತನ್ನ ರಾಯಭಾರಿ ಕಚೇರಿಯನ್ನು ಮುಚ್ಚದಿರಲು ನಿರ್ಧರಿಸಿದೆ. ಅಫ್ಘಾನಿಸ್ತಾನದಲ್ಲಿ ಸಿಲುಕಿರುವ ವಿದೇಶಿಗರಿಗೆ ರಕ್ಷಣೆ ನೀಡುವ ಭರವಸೆಯನ್ನು ನೀಡಿದೆ. ಸದ್ಯ ಅಫ್ಘಾನಿಸ್ತಾನದಲ್ಲಿ ಸುಮಾರು 6 ಸಾವಿರ ಅಮೆರಿಕ ಸೈನಿಕರಿದ್ದಾರೆ. ಇದನ್ನೂ ಓದಿ: ತಾಲಿಬಾನಿಗಳ ಮೇಲೆ ಗುಂಡಿನ ಮಳೆ – ನಾರ್ಥರ್ನ್ ಅಲಯನ್ಸ್‌ಗೆ ತಜಕಿಸ್ತಾನ ಬೆಂಬಲ

    ತಾಲಿಬಾನಿಗಳಿಗೆ ಬೈಡನ್ ಎಚ್ಚರಿಕೆ:
    ನಾವು 20 ವರ್ಷ ಅಫ್ಘಾನಿಸ್ತಾನದ ಜೊತೆ ಕೆಲಸ ಮಾಡಿದ್ದೇವೆ. ಸದ್ಯ ಕಾಬೂಲ್ ನಲ್ಲಿ ಅಮೆರಿಕದ 6 ಸಾವಿರ ಸೈನಿಕರಿದ್ದಾರೆ. ಒಂದು ವೇಳೆ ಅಮೆರಿಕ ಸೇನೆಯ ಮೇಲೆ ತಾಲಿಬಾನಿಗಳು ದಾಳಿ ನಡೆಸಿದ್ರೆ ಪ್ರತ್ಯುತ್ತರ ನೀಡುತ್ತೇವೆ. ಅಫ್ಘಾನಿಸ್ತಾನದ ಕುರಿತು ಮುಂದಿನ ವಾರದಲ್ಲಿ ಮಹತ್ವದ ತೀರ್ಮಾನ ತೆಗೆದುಕೊಳ್ಳಲಾಗವುದು ಎಂದು ಎಚ್ಚರಿಕೆ ನೀಡಿದ್ದರು. ಇದನ್ನೂ ಓದಿ: ಪಂಜಶೀರ್ ವಶಕ್ಕೆ ಮುಂದಾಗಿದ್ದ 300 ತಾಲಿಬಾನಿಗಳು ಮಟಾಷ್!

  • ಅಫ್ಘಾನ್‍ನಿಂದ ಭಾರತಕ್ಕೆ ಬಂದ 146 ಮಂದಿಯಲ್ಲಿ ಇಬ್ಬರಿಗೆ ಕೊರೊನಾ ಪಾಸಿಟಿವ್

    ಅಫ್ಘಾನ್‍ನಿಂದ ಭಾರತಕ್ಕೆ ಬಂದ 146 ಮಂದಿಯಲ್ಲಿ ಇಬ್ಬರಿಗೆ ಕೊರೊನಾ ಪಾಸಿಟಿವ್

    ನವದೆಹಲಿ: ಅಫ್ಘಾನ್‍ನಿಂದ ಇಂದು ಭಾರತಕ್ಕೆ ಬಂದ 146 ಮಂದಿಯಲ್ಲಿ ಇಬ್ಬರಿಗೆ ಕೊರೊನಾ ಸೋಂಕು ದೃಢವಾಗಿದೆ.

    ಭಾರತೀಯರನ್ನು ವಾಪಸ್ ದೇಶಕ್ಕೆ ತರುವ ಕಾರ್ಯ ಭರದಿಂದ ಸಾಗುತ್ತಿದೆ. ದಿನಕ್ಕೆ ಎರಡು ವಿಮಾನಗಳು ಕಾಬೂಲ್ ಏರ್​ಪೋರ್ಟ್ ನಿಂದ ಹೊರಟು ಭಾರತ ತಲುಪುತ್ತಿದೆ. ವಿವಿಧ ಬ್ಯಾಚ್‍ಗಳ ಮೂಲಕ ಜನರನ್ನು ಕರೆತರಲಾಗುತ್ತಿದೆ. ಆದರೀಗ ಈ ಸ್ಥಳಾಂತರದ ಮಧ್ಯೆ ಕೊರೊನಾ ಆತಂಕ ಶುರುವಾಗಿದೆ.

    ಇಂದು ಬೆಳಗ್ಗೆ ಅಫ್ಘಾನ್‍ನಿಂದ ದೆಹಲಿಗೆ ಬಂದ 146 ಭಾರತೀಯ ಪ್ರಯಾಣಿಕರಲ್ಲಿ ಇಬ್ಬರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಅವರನ್ನು ಎಲ್‍ಎನ್‍ಜೆಪಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಉಪ ವಿಭಾಗೀಯ ಮ್ಯಾಜಿಸ್ಟ್ರೇಟ್ ರಾಜೇಂದ್ರ ಕುಮಾರ್ ತಿಳಿಸಿದ್ದಾರೆ. ಇದನ್ನೂ ಓದಿ:  ತಾಲಿಬಾನಿಗಳ ಮೇಲೆ ಗುಂಡಿನ ಮಳೆ – ನಾರ್ಥರ್ನ್ ಅಲಯನ್ಸ್‌ಗೆ ತಜಕಿಸ್ತಾನ ಬೆಂಬಲ

    ಇಂದು ದೆಹಲಿಗೆ ಬಂದು ಇಳಿದಿದ್ದು 146 ಜನರ ಎರಡನೇ ಬ್ಯಾಚ್ ಆಗಿದೆ. ಇಷ್ಟೂ ಜನ ಸ್ವಲ್ಪ ದಿನಗಳ ಹಿಂದೆ ಯುಎಸ್ ಮತ್ತು ಉತ್ತರ ಅಟ್ಲಾಂಟಿಕ ಒಪ್ಪಂದ ಸಂಸ್ಥೆಗಳ (NATO) ಯುದ್ಧ ವಿಮಾನದ ಮೂಲಕ ಕಾಬೂಲ್‍ನಿಂದ ದೋಹಾಕ್ಕೆ ಹೋಗಿದ್ದರು. ಅಲ್ಲಿಂದ ನಾಲ್ಕು ವಿವಿಧ ವಿಮಾನಗಳ ಮೂಲಕ ದೆಹಲಿಗೆ ಬಂದಿಳಿದಿದ್ದಾರೆ. ಹಾಗೇ ಭಾನುವಾರ ಸುಮಾರು 400 ಜನರನ್ನು ವಿವಿಧ ವಿಮಾನಗಳ ಮೂಲಕ ಅಪ್ಘಾನ್‍ನಿಂದ ಭಾರತಕ್ಕೆ ಕರೆತರಲಾಗಿದೆ. ಅದರಲ್ಲಿ 329 ಮಂದಿ ಭಾರತೀಯರೇ ಆಗಿದ್ದಾರೆ. ಅಫ್ಘಾನ್‍ನಲ್ಲಿರುವ ಹಿಂದು ಮತ್ತು ಸಿಖ್ ಸಮುದಾಯದವರನ್ನೂ ಭಾರತಕ್ಕೆ ಕರೆತರಲಾಗುತ್ತಿದೆ.

  • ಆ. 31ರೊಳಗೆ ನಿಮ್ಮ ಸೇನೆ ಇಲ್ಲಿಂದ ಕಾಲ್ಕಿತ್ತಬೇಕು- ಅಮೆರಿಕಾಗೆ ತಾಲಿಬಾನಿಗಳ ಬೆದರಿಕೆ

    ಆ. 31ರೊಳಗೆ ನಿಮ್ಮ ಸೇನೆ ಇಲ್ಲಿಂದ ಕಾಲ್ಕಿತ್ತಬೇಕು- ಅಮೆರಿಕಾಗೆ ತಾಲಿಬಾನಿಗಳ ಬೆದರಿಕೆ

    ಕಾಬೂಲ್: ಅಫ್ಘಾನಿಸ್ತಾನ ವಶಕ್ಕೆ ಪಡೆದುಕೊಂಡಿರು ಉಗ್ರ ತಾಲಿಬಾನಿಗಳು ಅಮೆರಿಕಾಗೆ ಬೆದರಿಕೆ ಹಾಕಿದ್ದಾರೆ. ಆಗಸ್ಟ್ 31ರೊಳಗೆ ನಿಮ್ಮ ಸೈನಿಕರನ್ನು ಅಫ್ಘಾನಿಸ್ತಾನದಿಂದ ಕರೆಸಿಕೊಳ್ಳುವಂತೆ ಸಂದೇಶ ರವಾನಿಸಿದ್ದಾರೆ.

    ಈ ಕುರಿತು ಮಾಹಿತಿ ನೀಡಿರುವ ತಾಲಿಬಾನಿ ವಕ್ತಾರ ಸೋಹೆಲ್ ಶಾಹಿನ್ ಎಂಬಾತ ಕತಾರ್ ನಲ್ಲಿ ಕುಳಿತು ಹೇಳಿಕೆ ನೀಡಿದ್ದಾನೆ. ಒಂದು ವೇಳೆ ಅಮೆರಿಕ ತನ್ನ ಸೇನೆಯನ್ನ ಹಿಂಪಡೆಯಲು ವಿಳಂಬ ನೀತಿ ತೋರಿದ್ರೆ ಅದರ ಪರಿಣಾಮ ಮುಂದಿನ ದಿನಗಳಲ್ಲಿ ಎದುರಿಸಬೇಕಾಗುತ್ತದೆ. ನಾವು ನಿಮಗೆ ಆಗಸ್ಟ್ 31ರವರೆಗೆ ನಿಮ್ಮ ಸೇನೆ ಕರೆಸಿಕೊಳ್ಳಲು ಸಮಯ ನೀಡಿದ್ದೇವೆ ಎಂದು ಹೇಳಿದ್ದಾನೆ.

    ಇತ್ತ ಅಮೆರಿಕ ತನ್ನ ರಾಯಭಾರಿ ಕಚೇರಿಯನ್ನು ಮುಚ್ಚದಿರಲು ನಿರ್ಧರಿಸಿದೆ. ಅಫ್ಘಾನಿಸ್ತಾನದಲ್ಲಿ ಸಿಲುಕಿರುವ ವಿದೇಶಿಗರಿಗೆ ರಕ್ಷಣೆ ನೀಡುವ ಭರವಸೆಯನ್ನು ನೀಡಿದೆ. ಸದ್ಯ ಅಫ್ಘಾನಿಸ್ತಾನದಲ್ಲಿ ಸುಮಾರು 6 ಸಾವಿರ ಅಮೆರಿಕ ಸೈನಿಕರಿದ್ದಾರೆ. ಇದನ್ನೂ ಓದಿ: ಪಂಜಶೀರ್ ವಶಕ್ಕೆ ಮುಂದಾಗಿದ್ದ 300 ತಾಲಿಬಾನಿಗಳು ಮಟಾಷ್!

    ತಾಲಿಬಾನಿಗಳಿಗೆ ಬೈಡನ್ ಎಚ್ಚರಿಕೆ:
    ನಾವು 20 ವರ್ಷ ಅಫ್ಘಾನಿಸ್ತಾನದ ಜೊತೆ ಕೆಲಸ ಮಾಡಿದ್ದೇವೆ. ಸದ್ಯ ಕಾಬೂಲ್ ನಲ್ಲಿ ಅಮೆರಿಕದ 6 ಸಾವಿರ ಸೈನಿಕರಿದ್ದಾರೆ. ಒಂದು ವೇಳೆ ಅಮೆರಿಕ ಸೇನೆಯ ಮೇಲೆ ತಾಲಿಬಾನಿಗಳು ದಾಳಿ ನಡೆಸಿದ್ರೆ ಪ್ರತ್ಯುತ್ತರ ನೀಡುತ್ತೇವೆ. ಅಫ್ಘಾನಿಸ್ತಾನದ ಕುರಿತು ಮುಂದಿನ ವಾರದಲ್ಲಿ ಮಹತ್ವದ ತೀರ್ಮಾನ ತೆಗೆದುಕೊಳ್ಳಲಾಗವುದು ಎಂದು ಎಚ್ಚರಿಕೆ ನೀಡಿದ್ದರು. ಇದನ್ನೂ ಓದಿ: ಅಫ್ಘಾನಿಸ್ತಾನದಲ್ಲಿ ಅಮ್ಮನಿಂದ ದೂರವಾದ ಕಂದಮ್ಮನನ್ನ ರಕ್ಷಿಸಿದ ಟರ್ಕಿ ಸೈನಿಕರು

  • ತಾಲಿಬಾನ್ ಬೆಂಬಲಿಸುವ ಸಂಸ್ಕೃತಿಯನ್ನ ಕಾಂಗ್ರೆಸ್ ಬಿಡಲಿ: ಕೋಟ ಶ್ರೀನಿವಾಸ್ ಪೂಜಾರಿ

    ತಾಲಿಬಾನ್ ಬೆಂಬಲಿಸುವ ಸಂಸ್ಕೃತಿಯನ್ನ ಕಾಂಗ್ರೆಸ್ ಬಿಡಲಿ: ಕೋಟ ಶ್ರೀನಿವಾಸ್ ಪೂಜಾರಿ

    ಉಡುಪಿ: ಅಫ್ಘಾನಿಸ್ತಾನ ದೇಶದ ಬೆಳವಣಿಗೆಯಿಂದಾದರೂ ತಾಲಿಬಾನ್ ಸಂಸ್ಕೃತಿಯನ್ನು ಬೆಂಬಲಿಸುವ ಕಾಂಗ್ರೆಸ್ ತನ್ನ ಅಭಿಪ್ರಾಯವನ್ನು ಬದಲಾವಣೆ ಮಾಡಿಕೊಳ್ಳಬೇಕು ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಖಾರದ ಪ್ರತಿಕ್ರಿಯೆ ನೀಡಿದ್ದಾರೆ.

    ಕೇಂದ್ರ ಸಚಿವರ ಜನಾಶೀರ್ವಾದ ಯಾತ್ರೆಯಲ್ಲ ಜನದ್ರೋಹ ಯಾತ್ರೆ ಎಂಬ ಕಾಂಗ್ರೆಸ್ ಮುಖಂಡ ಉಗ್ರಪ್ಪ ಹೇಳಿಕಗೆ ಕೋಟ ಶ್ರೀನಿವಾಸ ಪೂಜಾರಿ ಉಡುಪಿಯಲ್ಲಿ ತಿರುಗೇಟು ಕೊಟ್ಟಿದ್ದಾರೆ. ಉಗ್ರಪ್ಪನವರು ಅವರ ರೀತಿಯಲ್ಲಿ ವಿಮರ್ಶೆ ಮಾಡಿದ್ದಾರೆ. ಕೆಲ ಮುಖಂಡರು ಕಾಲಕಾಲಕ್ಕೆ ಸರ್ಟಿಫಿಕೇಟು ಕೊಡುತ್ತಾರೆ. ಎಲ್ಲರ ಭಾವನೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ ಎಂದರು.

    ನಮ್ಮದು ಜನಾಶೀರ್ವಾದ ಇರುವ ಸರ್ಕಾರ. ಪ್ರಧಾನಿ ಮೋದಿ, ಸಿಎಂ ಬೊಮ್ಮಾಯಿ ಜನಾಶೀರ್ವಾದದ ಸರ್ಕಾರ ನೀಡುತ್ತಿದ್ದಾರೆ. ಜನರ ಮಧ್ಯೆ ನಿಂತು ಸಮಸ್ಯೆ ಬಗೆಹರಿಸುತ್ತೇವೆ. ಇನ್ನೊಮ್ಮೆ ಕರ್ನಾಟಕದಲ್ಲಿ ಅಧಿಕಾರಕ್ಕೆ ಬರುತ್ತೇವೆ. ಬಿಜೆಪಿ ತಾಲಿಬಾನ್ ಒಂದೇ ಸಂಸ್ಕೃತಿ ಎಂಬ ಕಾಂಗ್ರೆಸ್ ಟ್ವೀಟ್ ವಿಚಾರಕ್ಕೆ, ಇದು ತಾಲಿಬಾನ್ ಸಂಸ್ಕೃತಿಯನ್ನು ಪ್ರೀತಿಸುವವರ ಹೇಳಿಕೆ. ಆಗಾಗ ತಾಲಿಬಾನ್ ಮೇಲೆ ಇವರಿಗೆ ಒಳ್ಳೆಯ ಭಾವನೆ ಬರುತ್ತದೆ. ಅಲ್ಲಿಯ ದುರಂತವನ್ನು ನೋಡಿಯಾದರೂ ಈ ಸಂಸ್ಕೃತಿಯನ್ನು ಬೆಂಬಲಿಸಬೇಡಿ ಎಂದು ಸಚಿವ ಕೋಟ ಹೇಳಿದರು. ಇದನ್ನೂ ಓದಿ: ನಾನೇ ಮಾಡಿದೇ, ನಾನೇ ಕಟ್ಟಿದೆ ಅಂತ ಪ್ರತಾಪ್ ಸಿಂಹ ಹೇಳೋದು ತಪ್ಪು: ವಿಶ್ವನಾಥ್

    ಪಾಸಿಟಿವಿಟಿ ಇಳಿಕೆಯಾದ ಕೂಡಲೇ ಶಾಲೆ ಶುರು
    ಕೊಡಗು, ದ.ಕನ್ನಡ ಮತ್ತು ಉಡುಪಿ ಜಿಲ್ಲೆ ಪಾಸಿಟಿವಿಟಿ ರೇಟ್ ಜಾಸ್ತಿ ಇದೆ. ಶೇಕಡಾ 2.5ಕ್ಕಿಂತ ಜಾಸ್ತಿ ಇರುವ ಕಾರಣಕ್ಕಾಗಿ ಶಾಲೆ ಪ್ರಾರಂಭ ಮಾಡಿಲ್ಲ. ರಾಜ್ಯದ ಇತರ ಜಿಲ್ಲೆಗಳಲ್ಲಿ ಶಾಲೆ ಪ್ರಾರಂಭವಾಗಿದೆ. ನಮ್ಮ ಜಿಲ್ಲೆಗಳಿಗೆ ಇದೊಂದು ಸಾಂಕೇತಿಕ ಎಚ್ಚರಿಕೆ. ಕೋವಿಡ್ ಗೈಡ್ ಲೈನ್ ಗಟ್ಟಿಗೊಳಿಸಿ ಪಾಸಿಟಿವಿಟಿ ರೇಟ್ ಕಡಿಮೆಯಾಗಬೇಕು. ಶಾಲೆ ಶೀಘ್ರ ಪ್ರಾರಂಭಿಸಲು ನಮಗೆ ಆಸಕ್ತಿ ಇದೆ. ಪಾಸಿಟಿವಿಟಿ ರೇಟ್ ಇಳಿಸಲು ಗಟ್ಟಿ ಕ್ರಮ ಕೈಗೊಳ್ಳುತ್ತೇವೆ ಎಂದು ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಇದನ್ನೂ ಓದಿ: ಕಿಚ್ಚನ ಹೊಸ ಹೇರ್ ಸ್ಟೈಲ್‍ಗೆ ಫ್ಯಾನ್ಸ್ ಫಿದಾ

  • ಪಾಕ್‍ಗೆ ಹಣದ ನೆರವು ನೀಡುವುದನ್ನು ಅಮೆರಿಕ ನಿಲ್ಲಿಸಲಿ: ಅಫ್ಘಾನ್ ಪಾಪ್ ತಾರೆ

    ಪಾಕ್‍ಗೆ ಹಣದ ನೆರವು ನೀಡುವುದನ್ನು ಅಮೆರಿಕ ನಿಲ್ಲಿಸಲಿ: ಅಫ್ಘಾನ್ ಪಾಪ್ ತಾರೆ

    ಪಾಕಿಸ್ತಾನಕ್ಕೆ ಅಮರಿಕೆ ಹಣ ನೆರವು ನೀಡುವುದನ್ನು ನಿಲ್ಲಿಸಲಿ ಎಂದು ಅಫ್ಘಾನಿಸ್ತಾನದ ಪಾಪ್ ಸ್ಟಾರ್ ಆರ್ಯನ ಸಯೀದ್ ಆಗ್ರಹಿಸಿದ್ದಾರೆ.

    ತಾಲಿಬಾನ್ ಗಳು ಅಫ್ಘಾನಿಸ್ತಾನವನ್ನು ತಮ್ಮ ವಶಕ್ಕೆ ಪಡೆದುಕೊಂಡ ಬಳಿಕ ಆರ್ಯನ ಗುರುವಾರ ಕಾಬೂಲ್ ನಿಂದ ಕಾಲ್ಕಿತ್ತಿದ್ದರು. ಈ ವಿಚಾರವನ್ನು ತಮ್ಮ ಇನ್ ಸ್ಟಾದಲ್ಲಿ ಖಚಿತಪಡಿಸಿದ್ದಾರೆ. ಅಫ್ಘಾನಿಸ್ತಾದಿಂದ ಪಲಾಯನ ಮಾಡಿ ಯುಎಸ್ ವಿಮಾನದಲ್ಲಿ ಪ್ರಯಾಣ ಬೆಳೆಸಿದ್ದರು. ಬಳಿಕ ಇನ್‍ಸ್ಟಾಗ್ರಾಮ್ ಪೋಸ್ಟ್‍ನಲ್ಲಿ, ‘ಮರೆಯಲಾಗದ ಒಂದೆರಡು ರಾತ್ರಿಗಳನ್ನು ಕಳೆದ ಬಳಿಕ ಇದೀಗ ನಾನು ಬದುಕಿದ್ದು, ಕ್ಷೇಮವಾಗಿದ್ದೇನೆ. ಸದ್ಯ ಕತಾರ್‍ನ ದೋಹಾ ತಲುಪಿ ಇಸ್ತಾಂಬುಲ್‍ಗೆ ತನ್ನ ವಿಮಾನಕ್ಕಾಗಿ ಕಾಯುತ್ತಿದ್ದೇನೆ ಎಂದು ಬರೆದುಕೊಂಡು ವಿಮಾನದಲ್ಲಿನ ತನ್ನ ಚಿತ್ರವನ್ನು ಹಂಚಿಕೊಂಡಿದ್ದಾರೆ.

    ಅಲ್ಲದೆ ತಾಲಿಬಾನ್ ಸ್ವಾಧೀನದ ನಂತರ ಅಫ್ಘಾನಿಸ್ತಾನದಲ್ಲಿನ ಪರಿಸ್ಥಿತಿಯನ್ನು ಅಮೆರಿಕ ಅರ್ಥೈಸಿಕೊಳ್ಳಬೇಕು. ಐಎಸ್‍ಐಎಸ್ ತಾಲಿಬಾನ್‍ಗಳಿಗೆ ಭಯೋತ್ಪಾದಕರನ್ನು ಉತ್ಪಾದಿಸುತ್ತದೆ ಎಂದು ಆರೋಪಿಸುವ ಪಾಕಿಸ್ತಾನಕ್ಕೆ ಧನಸಹಾಯ ನೀಡುವುದನ್ನು ನಿಲ್ಲಿಸುವಂತೆ ಯುಎಸ್ ಸರ್ಕಾರವನ್ನು ಒತ್ತಾಯಿಸಿದರು. ಅಫ್ಘಾನ್ ನಾಗರಿಕರ ಸರಣಿ ಫೋಟೋಗಳನ್ನು ಹಂಚಿಕೊಂಡಿರುವ ಅವರು ಪಾಕ್ ಗೆ ನೀಡುತ್ತಿರುವ ಧನ ಸಹಾಯವನ್ನು ಅಮೆರಿಕ ನಿಲ್ಲಿಸಬೇಕೆಂದು ಅವರು ಕೇಳಿಕೊಂಡರು.

    ಪಾಪ್ ತಾರೆ ಆರ್ಯನ ಸಯೀದ್ ಅತ್ಯಂತ ಜನಪ್ರಿಯ ಅಫ್ಘಾನ್ ಗಾಯಕಿ. ಅವರು ಪರ್ಷಿಯನ್ ಮತ್ತು ಪಾಷ್ಟೋದಲ್ಲಿ ಹಾಡುತ್ತಾರೆ. ಕುತೂಹಲಕಾರಿ ಸಂಗತಿ ಎಂದರೆ, ಅವರು ಅಫ್ಘನ್ ಆವೃತ್ತಿಯ ದಿ ವಾಯ್ಸ್ಲ್ ನಲ್ಲಿ ಜಡ್ಜ್ ಆಗಿದ್ದರು. ನಂತರ ಅವರು ಅಫ್ಘಾನ್ ಸ್ಟಾರ್ ಕಾರ್ಯಕ್ರಮದಲ್ಲಿ ತೀರ್ಪುಗಾರರಾದರು. ಅವರು ಅಫ್ಘಾನ್ ಐಕಾನ್ ಪ್ರಶಸ್ತಿ ಮತ್ತು 2017 ರ ಅಫ್ಘಾನಿಸ್ತಾನದ ಅತ್ಯುತ್ತಮ ಮಹಿಳಾ ಕಲಾವಿದೆಯಂತಹ ಹಲವಾರು ಪ್ರಶಸ್ತಿಗಳನ್ನು ಗೆದ್ದಿದ್ದಾರೆ.