Tag: afghanistan

  • ಕಾಬೂಲ್‍ನಿಂದ ಭಾರತಕ್ಕೆ ಮರಳ್ತಿದ್ದಂತೆ ತಮ್ಮನಿಗೆ ಕಿಸ್ ಕೊಟ್ಟ ಅಕ್ಕ- ಭಾವನಾತ್ಮಕ ವೀಡಿಯೋ ವೈರಲ್

    ಕಾಬೂಲ್‍ನಿಂದ ಭಾರತಕ್ಕೆ ಮರಳ್ತಿದ್ದಂತೆ ತಮ್ಮನಿಗೆ ಕಿಸ್ ಕೊಟ್ಟ ಅಕ್ಕ- ಭಾವನಾತ್ಮಕ ವೀಡಿಯೋ ವೈರಲ್

    ನೋಯ್ಡಾ: ಅಫ್ಘಾನಿಸ್ತಾನದಿಂದ ಭಾನುವಾರ ಸುಮಾರು 168 ಮಂದಿ ಗಾಜಿಯಾಬಾದ್‍ನ ಹಿಂಡನ್ ವಾಯುನೆಲೆಗೆ ಬಂದಿಳಿದರು. ಇದರಲ್ಲಿ ಮಕ್ಕಳು ಸಹ ಇದ್ದು, ಇದೀಗ ಇಬ್ಬರು ಮಕ್ಕಳು ನೆಟ್ಟಿಗರ ಗಮನ ಸೆಳೆದಿದ್ದಾರೆ. ತಾಯಿಯ ಮಡಿಲಲ್ಲಿದ್ದ ಪುಟ್ಟ ಕಂದಮ್ಮನಿಗೆ ಆತನ ಅಕ್ಕ ಮುತ್ತಿಟ್ಟ ಭಾವನಾತ್ಮಕ ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ.

    ವೀಡಿಯೋದಲ್ಲಿ, ಜನರ ಮಧ್ಯೆ ತಾಯಿಯೊಬ್ಬಳು ತನ್ನ ಪುಟ್ಟ ಕಂದಮ್ಮನನ್ನು ಮಡಿಲಲ್ಲಿ ಕೂರಿಸಿಕೊಂಡಿದ್ದಾಳೆ. ಈ ವೇಳೆ ಅಲ್ಲೆ ಇದ್ದ ಪುಟ್ಟ ಹುಡುಗಿಯೊಬ್ಬಳು ಆ ಮಗುವಿನ ಮುಂದೆ ಕುಣಿಯುತ್ತಾ ಕಿಸ್ ಕೊಡುತ್ತಾ ಮುದ್ದಾಡುತ್ತಿರುವುದನ್ನು ಕಾಣಬಹುದಾಗಿದೆ. ಮೇಲ್ನೋಟಕ್ಕೆ ಪುಟ್ಟ ಹುಡುಗಿ ಕಂದಮ್ಮನ ಸಹೋದರಿಯಂತೆ ಕಾಣುತ್ತದೆ. ಸದ್ಯ ಈ ಹೃದಯಸ್ಪರ್ಶಿ ವೀಡಿಯೋಗೆ ನೆಟ್ಟಿಗರು ಫಿದಾ ಆಗಿದ್ದಾರೆ. ಇದನ್ನೂ ಓದಿ: ಪಂಜಶೀರ್ ವಶಕ್ಕೆ ಮುಂದಾಗಿದ್ದ 300 ತಾಲಿಬಾನಿಗಳು ಮಟಾಷ್!

    ಈ ವೀಡಿಯೋವನ್ನು ಸರಿಯಾಗಿ ಗಮನಿಸಿದಾಗ ಮಹಿಳೆ, ಕಳೆದ ಏಳು ದಿನಗಳಿಂದ ಅನುಭವಿಸುತ್ತಿರುವ ನರಕಯಾತನೆಯ ಬಗ್ಗೆ ಮಾತನಾಡುವುದನ್ನು ಸಹ ಕೇಳಬಹುದಾಗಿದೆ. ತಾಲಿಬಾನ್ ಉಗ್ರರು ಅಫ್ಘಾನಿಸ್ತಾನವನ್ನು ವಶಕ್ಕೆ ಪಡೆದುಕೊಳ್ಳುತ್ತಿದ್ದಂತೆಯೇ ಅಲ್ಲಿ ನೆಲೆಸಿದ್ದ ಸಾವಿರಾರು ಮಂದಿ ನರಕಯಾತನೆ ಅನುಭವಿಸಿದ್ದಾರೆ. ಅನೇಕರು ದೇಶ ಬಿಟ್ಟು ತೆರಳಿದ್ದಾರೆ. ಇತ್ತ ಕನ್ನಡಿಗರನ್ನು ಭಾರತಕ್ಕೆ ಕರೆತರುವ ಪ್ರಯತ್ನವೂ ನಡೆಯುತ್ತಿದ್ದು, ಈಗಾಗಲೇ ಹಲವಾರು ಮಂದಿ ತಮ್ಮ ತಾಯ್ನಾಡಿಗೆ ವಾಪಸ್ ಆಗಿದ್ದಾರೆ.  ಇದನ್ನೂ ಓದಿ: ನೀನು ಮಹಿಳೆ ಉದ್ಯೋಗ ಮಾಡುವಂತಿಲ್ಲ, ಮನೆಗೆ ತೆರಳು – ಮಹಿಳಾ ಪತ್ರಕರ್ತೆಗೆ ಗೇಟ್‍ಪಾಸ್

    ಉಗ್ರರು ದೇಶವನ್ನು ವಶಕ್ಕೆ ಪಡೆದುಕೊಳ್ಳುತ್ತಿದ್ದಂತೆಯೇ ತಮ್ಮ ಕಣ್ಣ ಮುಂದೆ ನಡೆದಿದ್ದ ಘಟನೆಯನ್ನು ವಿವರಿಸುತ್ತಿದ್ದಾರೆ. ಇತ್ತೀಚೆಗಷ್ಟೇ ಮಹಿಳೆಯೊಬ್ಬರ ಆರ್ತನಾದ ಕೇಳಲಾಗದೇ ಏರ್‍ಪೋರ್ಟ್‍ನ ಮುಳ್ಳುತಂತಿ ಗೋಡೆಯ ಮೇಲೆ ಹತ್ತಿದ ಅಮೆರಿಕ ಸೈನಿಕರು, ಆ ಮಹಿಳೆ ಮತ್ತು ಮಗುವೊಂದನ್ನು ಏರ್‍ಪೋರ್ಟ್ ಒಳಗೆ ಎಳೆದುಕೊಂಡಿದ್ದರು. ಕೆಲ ಪೋಷಕರು ತಮ್ಮ ಮುಂದಿನ ತಲೆಮಾರಾದ್ರೂ ತಾಲಿಬಾನಿಗಳ ಕ್ರೂರದೃಷ್ಟಿಗೆ ಬೀಳದಿರಲಿ ಎಂದು ಏರ್‍ಪೋರ್ಟ್ ಕಾಂಪೌಂಡ್ ಬಳಿ ನಿಂತು ಮಕ್ಕಳನ್ನು ಒಳಗೆ ಎಸೆದಿದ್ದು, ಹೀಗೆ ಎಸೆಯುವಾಗ ಕೆಲ ಮಕ್ಕಳು ಮುಳ್ಳಿನ ತಂತಿಗೆ ಸಿಲುಕಿ ಒದ್ದಾಡೋದನ್ನು ನೋಡಲು ಆಗ್ತಿಲ್ಲ ಎಂದು ಅಧಿಕಾರಿಯೊಬ್ಬರು ಕಣ್ಣೀರು ಇಟ್ಟಿದ್ದರು. ಇದನ್ನೂ ಓದಿ: ತಾನು ಸೆಲೆಕ್ಟ್ ಮಾಡಿದ ಹಾಡು ಹಾಕೋವರೆಗೂ ಮದುವೆ ಹಾಲ್‍ಗೆ ತೆರಳಲು ನಿರಾಕರಿಸಿದ ವಧು!

    https://twitter.com/ANI/status/1429324388420112384

  • ಪಂಜಶೀರ್ ವಶಕ್ಕೆ ಮುಂದಾಗಿದ್ದ 300 ತಾಲಿಬಾನಿಗಳು ಮಟಾಷ್!

    ಪಂಜಶೀರ್ ವಶಕ್ಕೆ ಮುಂದಾಗಿದ್ದ 300 ತಾಲಿಬಾನಿಗಳು ಮಟಾಷ್!

    ಕಾಬೂಲ್: ತಾಲಿಬಾನಿಗಳ ನರಬೇಟೆ ಮುಂದುವರಿದಿದ್ದು, ಪಂಜಶೀರ್ ದಲ್ಲಿರುವ ಹೋರಾಟಗಾರನ್ನು ಕೊಲ್ಲಲು ಮುಂದಾಗಿರುವ ಬಗ್ಗೆ ವರದಿಯಾಗಿದೆ. ನೂರಕ್ಕೂ ಹೆಚ್ಚು ತಾಲಿಬಾನಿಗಳ ಹಿಂಡು ಪಂಜಶೀರ್ ದತ್ತ ಪ್ರಯಾಣ ಬೆಳೆಸಿದೆ. ಇತ್ತ ಪಂಜಶೀರ್ ದತ್ತ ಪ್ರಯಾಣ ಬೆಳೆಸಿದ್ದ ಸುಮಾರು 300 ತಾಲಿಬಾನಿಗಳನ್ನು ಹೊಡೆದುರಿಳಿಸಲಾಗಿರುವ ಬಗ್ಗೆ ವರದಿಯಾಗಿದೆ.

    ಪಂಜಶೀರ್ ದ ಹುಲಿ ಎಂದು ಕರೆಸಿಕೊಳ್ಳುವ ಅಹಮದ್ ಶಾ ಮಸೂದ್ ಪುತ್ರ 32 ವರ್ಷದ ಅಹಮದ್ ಶಾ, ನಮ್ಮ ಪ್ರಾಂತ್ಯವನ್ನು ತಾಲಿಬಾನಿಗಳಿಗೆ ಬಿಟ್ಟುಕೊಡಲ್ಲ ಎಂದು ಹೇಳಿದ್ದಾರೆ. ಅಫ್ಘಾನಿಸ್ತಾನದ 34 ಪ್ರಾಂತ್ಯಗಳಲ್ಲಿ 33 ಪ್ರಾಂತ್ಯಗಳನ್ನು ತಾಲಿಬಾನಿಗಳು ವಶಪಡಿಸಿಕೊಂಡಿದ್ದಾರೆ.

    ಭಾನುವಾರ ಅಲ್-ಅರೇಬಿಯಾ ಮಾಧ್ಯಮಕ್ಕೆ ಸಂದರ್ಶನ ನೀಡಿರುವ ಅಹಮದ್ ಮಸೂದ್, ನಾವು ಯುದ್ಧ ಮಾಡಲ್ಲ. ಆದ್ರೆ ಆಕ್ರಮಣಕ್ಕೆ ವಿರೋಧ ವ್ಯಕ್ತಪಡಿಸುತ್ತೇವೆ. ಒಂದು ವೇಳೆ ತಾಲಿಬಾನಿಗಳ ವರ್ತನೆ ಅತಿರೇಕಕ್ಕೆ ತಲುಪಿದ್ರೆ ಯುದ್ಧವೇ ನಡೆಯಲ್ಲ ಎಂದು ಹೇಳಲಾರೆ. ವ್ಯಾಪಾರ ವಹಿವಾಟಿಗೆ ಸಂಬಂಧಿಸಿದಂತೆ ತಾಲಿಬಾನಿಗಳ ಮಾತುಕತೆ ಅವಶ್ಯಕವಾಗಿದೆ. ತಾಲಿಬಾನಿಗಳು ಮಾತುಕತೆಗೆ ಒಪ್ಪದಿದ್ರೆ ಯುದ್ಧ ನಮ್ಮ ಮುಂದಿನ ಆಯ್ಕೆ ಆಗಬಹುದು ಎಂದು ಎಚ್ಚರಿಕೆ ನೀಡಿದ್ದಾರೆ.

    ಪಂಜಶೀರ್ ದಲ್ಲಿಯ ಜನರು ಒಗ್ಗಟ್ಟಾಗಿದ್ದು ದೇಶವನ್ನು ರಕ್ಷಿಸಬೇಕೆಂದು ಗುರಿ ಹೊಂದಿದ್ದಾರೆ. ವಿಸ್ತೀರ್ಣದಲ್ಲಿ ಪಂಜಶೀರ್ ಚಿಕ್ಕ ಪ್ರಾಂತ್ಯವಾಗಿರಬಹುದು. ಆದ್ರೆ ಇಲ್ಲಿರುವ ಎಲ್ಲರೂ ದೇಶದ ಜನರ ಶಾಂತಿಗಾಗಿ ಹೋರಾಡಲು ಸಿದ್ಧರಾಗಿದ್ದಾರೆ ಎಂದು ಅಹಮದ್ ಮಸೂದ್ ಹೇಳಿದ್ದಾರೆ. ಇದನ್ನೂ ಓದಿ: ನೀನು ಮಹಿಳೆ ಉದ್ಯೋಗ ಮಾಡುವಂತಿಲ್ಲ, ಮನೆಗೆ ತೆರಳು – ಮಹಿಳಾ ಪತ್ರಕರ್ತೆಗೆ ಗೇಟ್‍ಪಾಸ್

    ಸದ್ಯ ಪಂಜಶೀರ್ ದಲ್ಲಿ 10 ಸಾವಿರಕ್ಕೂ ಅಧಿಕ ಸೈನಿಕರಿದ್ದಾರೆ. ತಾಲಿಬಾನಿಗಳ ವಿರುದ್ಧದ ಹೋರಾಟಕ್ಕೆ ಅಫ್ಘಾನಿಸ್ತಾನದ ಮಾಜಿ ಅಧ್ಯಕ್ಷ ಅಮರೂಲ್ಲಾಹ ಸಾಲೇಹ ಮತ್ತು ಅಫ್ಘಾನಿಸ್ತಾನದ ವಾರ್ ಬೋರ್ಡ್ ಎಂದು ಕರೆಸಿಕೊಳ್ಳುವ ಜನರಲ್ ಅಬ್ದುಲ್ ರಶೀದ್ ಸಹ ಪಂಜಶೀರ್ ದಲ್ಲಿರುವ ಜನತೆಗೆ ಬೆಂಬಲ ನೀಡಿದ್ದಾರೆ. ಇದರ ಜೊತೆ ಅಶ್ರಫ್ ಘನಿ ಸರ್ಕಾರದ ರಕ್ಷಣಾ ಸಚಿವ ಜನರಲ್ ಬಿಸ್ಮಿಲ್ಲಾಹ ಮೊಹಮ್ಮದಿ ಸಹ ತಾವು ಪಂಜಶೀರ್ ನೊಂದಿಗೆ ಇರೋದಾಗಿ ಘೋಷಣೆ ಮಾಡಿದ್ದಾರೆ. ಹಾಗಾಗಿ ಪಂಜಶೀರ್ ಕ್ಕೆ ತಾಲಿಬಾನಿಗಳು ಎಂಟ್ರಿ ಸರಳವಾಗಿಲ್ಲ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ: ಅಫ್ಘಾನಿಸ್ತಾನದಲ್ಲಿ ಅಮ್ಮನಿಂದ ದೂರವಾದ ಕಂದಮ್ಮನನ್ನ ರಕ್ಷಿಸಿದ ಟರ್ಕಿ ಸೈನಿಕರು

  • ಅಫ್ಘಾನ್‍ನಿಂದ ವಾಪಸಾದ ಚಿಕ್ಕೋಡಿಯ ಯೋಧ- ಕುಟಂಬಸ್ಥರಲ್ಲಿ ಸಂತಸ

    ಅಫ್ಘಾನ್‍ನಿಂದ ವಾಪಸಾದ ಚಿಕ್ಕೋಡಿಯ ಯೋಧ- ಕುಟಂಬಸ್ಥರಲ್ಲಿ ಸಂತಸ

    – ಪತ್ನಿ, ಮಗು ಹಾಗೂ ತಾಯಿಯ ಮೊಗದಲ್ಲಿ ಮಂದಹಾಸ

    ಚಿಕ್ಕೋಡಿ/ಬೆಳಗಾವಿ: ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‍ನ ಭಾರತೀಯ ರಾಯಭಾರಿ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಚಿಕ್ಕೋಡಿಯ ಯೋಧ ಸುರಕ್ಷಿತವಾಗಿ ಭಾರತಕ್ಕೆ ಮರಳಿರುವುದಕ್ಕೆ ಯೋಧನ ಕುಟುಂಬಸ್ಥರು ಸಂತಸ ವ್ಯಕ್ತಪಡಿಸಿದ್ದಾರೆ.

    ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕೇರೂರ ಗ್ರಾಮದ ಯೋಧ ದಸ್ತಗೀರ ಮುಲ್ಲಾ ತವರಿಗೆ ವಾಪಸ್ ಮರಳಿದ್ದು, ಕುಟುಂಬಸ್ಥರು ಸಂತಸ ವ್ಯಕ್ತಪಡಿಸಿದ್ದಾರೆ. ಕಾಬೂಲ್ ನಲ್ಲಿ ಭಾರತೀಯ ರಾಯಭಾರಿ ಕಚೇರಿಯಲ್ಲಿ ಭದ್ರತಾ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಯೋಧನನ್ನು ಭಾರತೀಯ ಸೇನೆ ಸುರಕ್ಷಿತವಾಗಿ ವಾಪಸ್ ಕರೆತಂದಿದೆ. ಇದನ್ನೂ ಓದಿ: 107 ಭಾರತೀಯರು ಸೇರಿ ಅಫ್ಘಾನಿಸ್ತಾನದಿಂದ 168 ಜನರ ಆಗಮನ

    ಅಫ್ಘಾನಿಸ್ತಾನದಲ್ಲಿ ತಾಲಿಬಾನಿಗಳ ಅಟ್ಟಹಾಸ ಹಿನ್ನೆಲೆ ದಸ್ತಗೀರ ಕುಟುಂಬಸ್ಥರು ಆತಂಕದಲ್ಲಿದ್ದರು. ಇದೀಗ ಸುರಕ್ಷಿತವಾಗಿ ವಾಪಸಾದ ಹಿನ್ನೆಲೆ ಯೋಧನ ಪತ್ನಿ, ಮಗು ಹಾಗೂ ತಾಯಿ ಸಂತಸ ವ್ಯಕ್ತಪಡಿಸಿದ್ದು, ಕೇರೂರು ಗ್ರಾಮಸ್ಥರಲ್ಲೂ ಹರ್ಷ ಮೂಡಿಸಿದೆ. ಅಗಸ್ಟ್ 16 ರಂದೇ ಅಪಘಾನಿಸ್ತಾನದಿಂದ ಯೋಧರನ್ನು ವಾಪಸ್ ಕರೆ ತರಲಾಗಿದ್ದು, ಸದ್ಯ ದೆಹಲಿಯಲ್ಲಿ ಯೋಧನನ್ನು ಕ್ವಾರಂಟೈನ್ ಮಾಡಲಾಗಿದೆ.

  • ರಾಬರ್ಟ್, ಜೆರೋನಾ ಸೇರಿ ಐವರು ಕನ್ನಡಿಗರು ತವರಿಗೆ

    ರಾಬರ್ಟ್, ಜೆರೋನಾ ಸೇರಿ ಐವರು ಕನ್ನಡಿಗರು ತವರಿಗೆ

    ಬೆಂಗಳೂರು: ಅಫ್ಘಾನಿಸ್ತಾನದಲ್ಲಿ ಸಿಲುಕಿದ್ದ ರಾಬರ್ಟ್, ಜೆರೋನಾ ಸೀಕ್ವೇರ್ ಸೇರಿದಂತೆ ಐವರು ಕನ್ನಡಿಗರು ಭಾರತ ತಲುಪಿದ್ದಾರೆ. ಇಂದು ಬೆಳಗ್ಗೆ ಕಾಬೂಲ್ ನಿಂದ ಟೇಕಾಫ್ ಆಗಿದ್ದ ಭಾರತೀಯ ವಾಯುಸೇನೆಯ ಗ್ಲೋಬ್ ಮಾಸ್ಟರ್ ಸಿ-17 ವಿಮಾನ ಹಿಂಡನ್ ಏರ್ ಫೋರ್ಸ್ ಬೇಸ್‍ನ ಗಾಜಿಯಾಬಾದ್ ನಲ್ಲಿ ಲ್ಯಾಂಡ್ ಆಗಿದೆ.

    ಕರ್ನಾಟಕ ತಲುಪಿರುವ ಇಬ್ಬರ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಇನ್ನುಳಿದ ಮೂವರ ಹೆಸರನ್ನು ಅಧಿಕಾರಿಗಳು ಖಚಿತಪಡಿಸಿಲ್ಲ. 107 ಭಾರತೀಯರು ಸೇರಿ ಒಟ್ಟು 168 ಜನರನ್ನು ಅಫ್ಘಾನಿಸ್ತಾನದಿಂದ ಭಾರತಕ್ಕೆ ಕರೆ ತರಲಾಗಿದೆ. ಭಾರತೀಯ ಸೇನೆಯ ವಿಮಾನದ ಮೂಲಕ ಕಾಬೂಲ್‍ನಿಂದ ಹಿಂಡನ್ ಏರ್ ಫೋರ್ಸ್ ಬೇಸ್‍ನ ಗಾಜಿಯಾಬಾದ್‍ಗೆ ಕರೆತರಲಾಗಿದೆ. 24 ಗಂಟೆಯಲ್ಲಿ ಮೂರು ವಿಮಾನಗಳ ಮೂಲಕ ಪ್ರಯಾಣಿಕರನ್ನ ಭಾರತಕ್ಕೆ ಕರೆ ತರಲಾಗಿದೆ.

    ಕಾಬೂಲ್ ವಿಮಾನ ನಿಲ್ದಾಣ ಅಮೆರಿಕ ನಾಟೋ ರಾಷ್ಟ್ರಗಳ ನಿಯಂತ್ರಣದಲ್ಲಿದೆ. ಸದ್ಯ ಪ್ರತಿನಿತ್ಯ ಭಾರತದ ಎರಡು ವಿಮಾನಗಳ ಹಾರಾಟಕ್ಕೆ ಅನುಮತಿ ನೀಡಲಾಗಿದ್ದು, ಮತ್ತಷ್ಟು ಭಾರತೀಯರು ಹಿಂದಿರುಗೋದು ಖಚಿತವಾಗಿದೆ. ಇದನ್ನೂ ಓದಿ: 107 ಭಾರತೀಯರು ಸೇರಿ ಅಫ್ಘಾನಿಸ್ತಾನದಿಂದ 168 ಜನರ ಆಗಮನ

    ಅಫ್ಘನ್‍ನಲ್ಲಿ ಸಿಲುಕಿರುವ ಉಳಿದ ಹಿಂದೂಗಳನ್ನು, ಸಿಖ್ಖರನ್ನು, ಮುಸ್ಲಿಮರನ್ನು, ಕ್ರೈಸ್ತರನ್ನು ಕಾಪಾಡಲು ಕಸರತ್ತುಗಳನ್ನು ನಡೆಸಲಾಗ್ತಿದೆ. ಆದ್ರೆ ತಾಲಿಬಾನ್ ಉಗ್ರರು ಅಷ್ಟು ಸುಲಭಕ್ಕೆ ಭಾರತೀಯರನ್ನು ಏರ್‍ಪೋರ್ಟ್ ತಲುಪಲು ಬಿಡ್ತಿಲ್ಲ. ಅಲ್ಲಿ ಸಿಲುಕಿರುವ ಭಾರತೀಯರೊಬ್ಬರ ಪ್ರಕಾರ, ಅವರನ್ನು ವಿಮಾನನಿಲ್ದಾಣಕ್ಕೆ ಕರೆದೊಯ್ಯಲು ಕಳೆದ ಎರಡು ದಿನಗಳಿಂದ ನಿರಂತರ ಪ್ರಯತ್ನಗಳು ನಡೆಯತ್ತಿವೆ. ದಾರಿ ಮಧ್ಯೆ ತಾಲಿಬಾನಿ ಉಗ್ರರು ಬಿಡುತ್ತಿಲ್ಲ ಎಂದು ವರದಿಯಾಗಿದೆ. ಇದನ್ನೂ ಓದಿ: ಅಫ್ಘಾನಿಸ್ತಾನದಲ್ಲಿ ಅಮ್ಮನಿಂದ ದೂರವಾದ ಕಂದಮ್ಮನನ್ನ ರಕ್ಷಿಸಿದ ಟರ್ಕಿ ಸೈನಿಕರು

  • 107 ಭಾರತೀಯರು ಸೇರಿ ಅಫ್ಘಾನಿಸ್ತಾನದಿಂದ 168 ಜನರ ಆಗಮನ

    107 ಭಾರತೀಯರು ಸೇರಿ ಅಫ್ಘಾನಿಸ್ತಾನದಿಂದ 168 ಜನರ ಆಗಮನ

    – ಭಾರತಕ್ಕೆ ಕಾಲಿಡುತ್ತಿದ್ದಂತೆ ಗಳಗಳನೆ ಅತ್ತ ಅಫ್ಘಾನ್ ಸಂಸದ

    ನವದೆಹಲಿ: ಅಫ್ಘಾನಿಸ್ತಾನದಲ್ಲಿ ಹಿಂಸಾಚಾರ ಅತಿರೇಕಕ್ಕೆ ತಿರುಗಿದ್ದು, 107 ಭಾರತೀಯರು ಸೇರಿ ಒಟ್ಟು 168 ಜನರನ್ನು ಅಫ್ಘಾನಿಸ್ತಾನದಿಂದ ಭಾರತಕ್ಕೆ ಕರೆ ತರಲಾಗಿದೆ. ಭಾರತೀಯ ಸೇನೆಯ ವಿಮಾನದ ಮೂಲಕ ಕಾಬೂಲ್‍ನಿಂದ ಹಿಂಡನ್ ಏರ್ ಫೋರ್ಸ್ ಬೇಸ್‍ನ ಗಾಜಿಯಾಬಾದ್‍ಗೆ ಕರೆತರಲಾಗಿದೆ.

    ಭಾರತೀಯ ವಾಯು ಸೇನೆಯ ಸಿ-17 ವಿಮಾನದ ಮೂಲಕ ಕಾಬೂಲ್‍ನಿಂದ ಇಂದು ಬೆಳಗ್ಗೆ 107 ಜನ ಭಾರತೀಯರು ಸೇರಿ ಒಟ್ಟು 168 ಜನ ಭಾರತಕ್ಕೆ ಬಂದಿಳಿದಿದ್ದಾರೆ. ವಿದೇಶಾಂಗ ಸಚಿವಾಲಯದ ಅರಿಂದಮ್ ಬಾಗ್ಚಿ ಅವರು ಈ ಕುರಿತು ಟ್ವೀಟ್ ಮಾಡಿ ಖಚಿತಪಡಿಸಿದ್ದಾರೆ. ಸ್ಥಳಾಂತರಿಸುವ ಕಾರ್ಯ ಮುಂದುವರಿದಿದ್ದು, ಭಾರತೀಯ ವಾಯು ಸೇನೆಯ ವಿಶೇಷ ವಿಮಾನದ ಮೂಲಕ 107 ಭಾರತೀಯರು ಸೇರಿ ಒಟ್ಟು 168 ಜನರು ಭಾರತಕ್ಕೆ ಬಂದಿಳಿದಿದ್ದಾರೆ ಎಂದಿದ್ದಾರೆ. ಇದನ್ನೂ ಓದಿ: ಮಧ್ಯರಾತ್ರಿ ಆಪರೇಷನ್ ಇಂಡಿಯನ್ಸ್ – ಕಾಬೂಲ್‍ನಿಂದ ದೋಹಾ ಮೂಲಕ ದೆಹಲಿಗೆ ಭಾರತೀಯರು

    ಇದೇ ವೇಳೆ ಅಫ್ಘಾನಿಸ್ತಾನದ ಸಂಸದ ನರೇಂದ್ರ ಸಿಂಗ್ ಖಲ್ಸಾ ಅವರು ಕಾಬೂಲ್‍ನಿಂದ ಭಾರತಕ್ಕೆ ಲ್ಯಾಂಡ್ ಆಗುತ್ತಿದ್ದಂತೆ ಭಾವುರಾಗಿ ಕಣ್ಣೀರಿಟ್ಟಿದ್ದಾರೆ. ನನಗೆ ಅಳು ಬರುತ್ತಿದೆ. ಕಳೆದ 20 ವರ್ಷಗಳಿಂದ ನಾವು ಸಂಪಾದಿಸಿದ ಎಲ್ಲವನ್ನೂ ಕಳೆದುಕೊಂಡಿದ್ದೇವೆ. ಇದೀಗ ಝೀರೋ ಆಗಿದ್ದೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಅಫ್ಘಾನಿಸ್ತಾನದಲ್ಲಿ ಅಮ್ಮನಿಂದ ದೂರವಾದ ಕಂದಮ್ಮನನ್ನ ರಕ್ಷಿಸಿದ ಟರ್ಕಿ ಸೈನಿಕರು

    ಅಫ್ಘಾನಿಸ್ತಾನದಲ್ಲಿ ಪರಿಸ್ಥಿತಿ ತುಂಬಾ ಹದಗೆಟ್ಟಿದೆ. ಹೀಗಾಗಿ ನನ್ನ ಮಗಳು ಹಾಗೂ ಇಬ್ಬರು ಮೊಮ್ಮಕ್ಕಳೊಂದಿಗೆ ಇಲ್ಲಿಗೆ ಬಂದಿದ್ದೇವೆ. ನಮ್ಮ ಭಾರತದ ಸಹೋದರ, ಸಹೋದರಿಯರು ಕಾಪಾಡಲು ಬಂದಿದ್ದರು. ತಾಲಿಬಾನಿಗಳು ನಮ್ಮ ಮನೆಯನ್ನು ಸುಟ್ಟು ಹಾಕಿದರು. ನಮಗೆ ಸಹಾಯ ಮಾಡಿದ್ದಕ್ಕೆ ಭಾರತಕ್ಕೆ ನಾನು ಧನ್ಯವಾದ ಸಮರ್ಪಿಸುತ್ತೇನೆ ಎಂದು ಹೇಳಿದ್ದಾರೆ.

    ವಿಮಾನದಲ್ಲಿ ಬಂದವರ ಪೈಕಿ ಬಹುತೇಕ ಸಿಖ್ಖರಿದ್ದು, 87 ಜನ ಇತರೆ ಭಾರತೀಯರಿದ್ದಾರೆ. ಇಬ್ಬರು ನೇಪಾಳದವರಿದ್ದಾರೆ. ಕೆಲ ದಿನಗಳ ಹಿಂದೆ ಯುಎಸ್ ಹಾಗೂ ನಾಟೊ ವಿಮಾನದ ಮೂಲಕ ಕಾಬೂಲ್‍ನಿಂದ ದೋಹಾಗೆ ಸ್ಥಳಾಂತರಿಸಲಾಗಿದ್ದ 135 ಭಾರತೀಯರು ಸಹ ಭಾರತಕ್ಕೆ ಮರಳಿದ್ದಾರೆ.

  • ಮಧ್ಯರಾತ್ರಿ ಆಪರೇಷನ್ ಇಂಡಿಯನ್ಸ್ – ಕಾಬೂಲ್‍ನಿಂದ ದೋಹಾ ಮೂಲಕ ದೆಹಲಿಗೆ ಭಾರತೀಯರು

    ಮಧ್ಯರಾತ್ರಿ ಆಪರೇಷನ್ ಇಂಡಿಯನ್ಸ್ – ಕಾಬೂಲ್‍ನಿಂದ ದೋಹಾ ಮೂಲಕ ದೆಹಲಿಗೆ ಭಾರತೀಯರು

    – ಕಾಬೂಲ್‍ನಲ್ಲಿ ಉಳಿದವರ ಏರ್ ಲಿಫ್ಟ್ ಗೆ ಕಸರತ್ತು

    ಕಾಬೂಲ್: ಅಫ್ಘಾನಿಸ್ತಾನದ ಕಾಬೂಲ್‍ನಲ್ಲಿ ಸಿಲುಕಿರುವ ಭಾರತೀಯರನ್ನು ಸುರಕ್ಷಿತವಾಗಿ ಏರ್ ಲಿಫ್ಟ್ ಮಾಡಲು ಮೋದಿ ಸರ್ಕಾರ ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದೆ. ಮಧ್ಯರಾತ್ರಿ 135 ಮಂದಿ ಭಾರತೀಯರು ಸೇಫಾಗಿ ದೆಹಲಿಯಲ್ಲಿ ಲ್ಯಾಂಡ್ ಆಗಿದ್ದಾರೆ. ಮೂರು ದಿನಗಳ ಹಿಂದೆ 135 ಭಾರತೀಯರನ್ನು ಕಾಬೂಲ್‍ನಿಂದ ಖತಾರ್ ನ ದೋಹಾಗೆ ಏರ್ ಲಿಫ್ಟ್ ಮಾಡಲಾಗಿತ್ತು. ಅವರನ್ನು ಮಧ್ಯರಾತ್ರಿ 1 ಗಂಟೆ ಸುಮಾರಿಗೆ ದೋಹದಿಂದ ದೆಹಲಿಗೆ ವಿಶೇಷ ವಿಮಾನದಲ್ಲಿ ಕರೆತರಲಾಗಿದೆ.

    ಅಫ್ಘನ್‍ನಲ್ಲಿ ಸಿಲುಕಿರುವ ಉಳಿದ ಹಿಂದೂಗಳನ್ನು, ಸಿಖ್ಖರನ್ನು, ಮುಸ್ಲಿಮರನ್ನು, ಕ್ರೈಸ್ತರನ್ನು ಕಾಪಾಡಲು ಕಸರತ್ತುಗಳನ್ನು ನಡೆಸಲಾಗ್ತಿದೆ. ಆದ್ರೆ ತಾಲಿಬಾನ್ ಉಗ್ರರು ಅಷ್ಟು ಸುಲಭಕ್ಕೆ ಭಾರತೀಯರನ್ನು ಏರ್ ಪೋರ್ಟ್ ತಲುಪಲು ಬಿಡ್ತಿಲ್ಲ. ಅಲ್ಲಿ ಸಿಲುಕಿರುವ ಭಾರತೀಯರೊಬ್ಬರ ಪ್ರಕಾರ, ಅವರನ್ನು ವಿಮಾನನಿಲ್ದಾಣಕ್ಕೆ ಕರೆದೊಯ್ಯಲು ಕಳೆದ ಎರಡು ದಿನಗಳಿಂದ ನಿರಂತರ ಪ್ರಯತ್ನಗಳು ನಡೆಯತ್ತಿವೆ. ದಾರಿ ಮಧ್ಯೆ ತಾಲಿಬಾನಿ ಉಗ್ರರು ಬಿಡುತ್ತಿಲ್ಲ. ಇದನ್ನೂ ಓದಿ: ತಾಲಿಬಾನಿಗಳನ್ನ RSS, ಬಜರಂಗದಳಕ್ಕೆ ಹೋಲಿಸಿದ ಕವಿ ಮುನ್ವರ್ ರಾಣಾ

    ಭಾರತೀಯರು ಇರುವ ಬಸ್ ತಪಾಸಣೆ ನಡೆಸಿದ ಉಗ್ರರು, ಅದರಲ್ಲಿ ಅಫ್ಘಾನಿ ಹಿಂದೂಗಳು, ಸಿಖ್ಖರನ್ನು ಭಾರತೀಯರಿಂದ ಬೇರ್ಪಡಿಸಿ ಫ್ಯಾಕ್ಟರಿಯೊಂದಕ್ಕೆ ಕರೆದೊಯ್ದಿದ್ದಾರೆ. ಕೆಲವರು ಭಯದಿಂದ ಗುರುದ್ವಾರಕ್ಕೆ ವಾಪಸ್ ಆಗಿದ್ದಾರೆ. ಉಳಿದ ಭಾರತೀಯರು ಏರ್ ಪೋರ್ಟ್ ಸಮೀಪದ ಕಲ್ಯಾಣಮಂಟಪದಲ್ಲಿ ಬೀಡುಬಿಟ್ಟಿದ್ದಾರೆ. ಇದರಲ್ಲಿ ಕನ್ನಡಿಗರು ಕೂಡ ಇದ್ದಾರೆ ಎನ್ನಲಾಗಿದೆ. ತಾಲಿಬಾನಿಗಳು ಕೆಲ ಭಾರತೀಯರ ಮೊಬೈಲ್‍ಗಳನ್ನು ಉಡೀಸ್ ಮಾಡಿದ್ದಾರೆ. ಅಲ್ಲದೇ 150 ಭಾರತೀಯರನ್ನು ಕಿಡ್ನಾಪ್ ಮಾಡಿದ್ದಾರೆ ಎನ್ನಲಾಗಿತ್ತು. ಆದ್ರೆ ಇದು ಸುಳ್ಳು ಎಂದು ಸ್ವತಃ ತಾಲಿಬಾನ್ ಸ್ಪಷ್ಟಪಡಿಸಿದೆ. ಇದನ್ನೂ ಓದಿ: ಅಫ್ಘಾನಿಸ್ತಾನದಲ್ಲಿ ಅಮ್ಮನಿಂದ ದೂರವಾದ ಕಂದಮ್ಮನನ್ನ ರಕ್ಷಿಸಿದ ಟರ್ಕಿ ಸೈನಿಕರು

  • ಅಫ್ಘಾನ್‍ನಿಂದ ಪಾಠ ಕಲಿತುಕೊಳ್ಳಿ, ನಮ್ಮನ್ನು ಪರೀಕ್ಷಿಸಬೇಡಿ- ಕೇಂದ್ರಕ್ಕೆ ಮುಫ್ತಿ ಎಚ್ಚರಿಕೆ

    ಅಫ್ಘಾನ್‍ನಿಂದ ಪಾಠ ಕಲಿತುಕೊಳ್ಳಿ, ನಮ್ಮನ್ನು ಪರೀಕ್ಷಿಸಬೇಡಿ- ಕೇಂದ್ರಕ್ಕೆ ಮುಫ್ತಿ ಎಚ್ಚರಿಕೆ

    ಶ್ರೀನಗರ: ತಾಲಿಬಾನ್ ಅಧಿಕಾರ ವಶಪಡಿಸಿಕೊಂಡು, ಅಮೆರಿಕವನ್ನು ಅಫ್ಘಾನಿಸ್ತಾನದಿಂದ ಪಲಾಯನ ಮಾಡುವಂತೆ ಮಾಡಿದೆ. ಕೇಂದ್ರ ಸರ್ಕಾರ ಅಫ್ಘಾನಿಸ್ತಾನದಿಂದ ಪಾಠ ಕಲಿಯಲಿ. ಅಲ್ಲದೆ 2019ರಲ್ಲಿ ರದ್ದು ಮಾಡಿರುವ ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ಮರು ಸ್ಥಾಪಿಸಲಿ ಎಂದು ಹೇಳಿದ್ದಾರೆ.

    ದಕ್ಷಿಣ ಕಾಶ್ಮೀರದ ಕುಲ್ಗಮ್‍ನಲ್ಲಿ ತಮ್ಮ ಪಕ್ಷದ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ್ದಾರೆ. ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಅಧಿಕಾರ ವಶಪಡಿಸಿಕೊಂಡಿರುವುದನ್ನು ಉಲ್ಲೇಖಿಸಿ ಮಾತನಾಡಿರುವ ಮಾಜಿ ಮುಖ್ಯಮಂತ್ರಿ, ನಮ್ಮನ್ನು ಪರೀಕ್ಷಿಸಬೇಡಿ. ಸರ್ಕಾರ ಮಾರ್ಗಗಳನ್ನು ಸರಿಪಡಿಸಿಕೊಂಡು, ಪರಿಸ್ಥಿತಿಯನ್ನು ಅರ್ಥ ಮಾಡಿಕೊಳ್ಳಬೇಕಿದೆ. ನಿಮ್ಮ ಪಕ್ಕದಲ್ಲಿ ಏನಾಗುತ್ತಿದೆ ಎಂಬುದನ್ನು ನೋಡಿ ಎಂದು ಹೇಳಿದ್ದಾರೆ. ಇದನ್ನೂ ಓದಿ: ಅಫ್ಘಾನಿಸ್ತಾನದಲ್ಲಿ ಅಮ್ಮನಿಂದ ದೂರವಾದ ಕಂದಮ್ಮನನ್ನ ರಕ್ಷಿಸಿದ ಟರ್ಕಿ ಸೈನಿಕರು

    ಸೂಪರ್ ಪವರ್ ಆಗಿರುವ ಅಮೆರಿಕ ಗಂಟು ಮೂಟೆ ಕಟ್ಟಿಕೊಂಡು ಪಲಾಯನ ಮಾಡಿದೆ. ಮಾಜಿ ಪ್ರಧಾನಿ ವಾಜಪೇಯಿಯವರ ರೀತಿ ಜಮ್ಮು ಕಾಶ್ಮೀರದೊಂದಿಗೆ ಮಾತುಕತೆ ನಡೆಸಲು ನಿಮಗೆ ಇನ್ನೂ ಸಮಯವಿದೆ. ಜಮ್ಮು ಕಾಶ್ಮೀರವನ್ನು ಕಾನೂನುಬಾಹಿರವಾಗಿ ಮತ್ತು ಅಸಂವಿಧಾನಿಕವಾಗಿ ಕಿತ್ತುಕೊಳ್ಳುವುದು. ಜಮ್ಮು ಕಾಶ್ಮೀರವನ್ನು ವಿಭಜನೆ ಮಾಡಿರುವ ನಿಮ್ಮ ತಪ್ಪನ್ನು ತಕ್ಷಣ ಸರಿಪಡಿಸಿ, ತಡವಾದರೆ ತೊಂದರೆಯಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ನಮ್ಮ ಸೈನಿಕರ ಮೇಲೆ ದಾಳಿಯಾದ ಮರು ಕ್ಷಣವೇ ಪ್ರತಿದಾಳಿ – ಅಮೆರಿಕ ಅಧ್ಯಕ್ಷ ಬೈಡನ್ ಎಚ್ಚರಿಕೆ

    ಕೇಂದ್ರ ಸರ್ಕಾರ ನಮ್ಮಿಂದ ಕಸಿದುಕೊಂಡಿರುವುದನ್ನು ಹಿಂದಿರುಗಿಸಬೇಕು. ಕಾಶ್ಮೀರ ಸಮಸ್ಯೆಯನ್ನು ಜಮ್ಮು ಕಾಶ್ಮೀರದ ಜನರ ಆಶಯಗಳು ಹಾಗೂ ಆಕಾಂಕ್ಷೆಗಳ ಪ್ರಕಾರ ಪರಿಹರಿಸಬೇಕು ಎಂದು ಹೇಳಿದ್ದಾರೆ.

    ಗನ್ ಹಾಗೂ ಕಲ್ಲುಗಳನ್ನು ಹಿಡಿಯುವುದರಿಂದ ಸಮಸ್ಯೆಗಳು ಬಗೆಹರಿಯುವುದಿಲ್ಲ. ತಾಲಿಬಾನಿಗಳು ಇದೀಗ ಅಫ್ಘಾನಿಸ್ತಾನವನ್ನು ನಿಯಂತ್ರಣಕ್ಕೆ ಪಡೆದಿದ್ದಾರೆ. ಈ ಮೂಲಕ ಅಮೆರಿಕ ಪಲಾಯನ ಮಾಡುವಂತೆ ಮಾಡಿದ್ದಾರೆ. ಇಡೀ ವಿಶ್ವ ಅವರತ್ತ ನೋಡುತ್ತಿದೆ. ಅವರು ಹೇಗೆ ವರ್ತಿಸುತ್ತಿದ್ದಾರೆ? ಹೇಗೆ ಕಟ್ಟುನಿಟ್ಟು ಪಾಲಿಸುತ್ತಾರೆ, ಜನರೊಂದಿಗೆ ಯಾವ ರೀತಿ ವರ್ತಿಸುತ್ತಿದ್ದಾರೆ ಎನ್ನುವುದನ್ನು ಗಮನಿಸುತ್ತಿದ್ದಾರೆ ಎಂದು ಹೇಳಿದರು.

    ಯುವಕರು ಶಸ್ತ್ರಾಸ್ತ್ರಗಳನ್ನು ಹಿಡಿಯಬಾರದು. ಗನ್ ಹಾಗೂ ಕಲ್ಲುಗಳಿಂದ ಸಮಸ್ಯೆ ಬಗೆಹರಿಯುವುದಿಲ್ಲ. ಅಫ್ಘಾನಿಸ್ತಾದ ಪರಿಸ್ಥಿತಿ ಜಮ್ಮು ಕಾಶ್ಮೀರದ ಜನರಿಗೆ ಪಾಠವಾಗಬೇಕು. ಯುವಕರು ಜೀವಗಳನ್ನು ಕಾಪಾಡಿಕೊಳ್ಳಬೇಕು. ನೀವು ಜೀವಗಳನ್ನು ಕಳೆದುಕೊಂಡರೆ ಎಲ್ಲವೂ ಮುಗಿದಂತೆ ಎಂದು ಎಚ್ಚರಿಸಿದ್ದಾರೆ.

    ಮೆಹಬೂಬಾ ಮುಫ್ತಿ ಅವರ ಈ ಹೇಳಿಕೆಗೆ ಬಿಜೆಪಿ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಕೇಂದ್ರಾಡಳಿತ ಪ್ರದೇಶದಲ್ಲಿ ತಮ್ಮ ನೆಲೆಯನ್ನು ಕಳೆದುಕೊಂಡ ಬಳಿಕ ಹತಾಶೆಯಿಂದ ದ್ವೇಷದ ರಾಜಕಾರಣದಲ್ಲಿ ತೊಡಗಿದ್ದಾರೆ. ಅಲ್ಲದೆ ಭಾರತದ ವಿರುದ್ಧ ಪಿತೂರಿ ಮಾಡುವವರು ನಾಶವಾಗುತ್ತಾರೆ ಎಂದು ಹೇಳಿದೆ.

  • ಅಫ್ಘಾನಿಸ್ತಾನಕ್ಕೆ ನಮ್ಮ ನೆರವು ಬೇಕಿದೆ: ಸೋನುಸೂದ್

    ಅಫ್ಘಾನಿಸ್ತಾನಕ್ಕೆ ನಮ್ಮ ನೆರವು ಬೇಕಿದೆ: ಸೋನುಸೂದ್

    ಮುಂಬೈ: ಅಫ್ಘಾನಿಸ್ತಾನದ ಸ್ಥಿತಿಗೆ ಮರುಗಿದ ಬಾಲಿವುಡ್ ನಟ ಸೋನು ಸೂದ್ ಅವರಿಗೆ ನಮ್ಮ ನೆರವು ಬೇಕಿದೆ ಎಂದಿದ್ದಾರೆ.

    ಅಫ್ಘಾನಿಸ್ತಾನದ ಜನರಿಗೆ ಹಾಗೂ ಅಲ್ಲಿ ನೆಲಸಿರುವ ಭಾರತೀಯರ ನೆರವಿಗೆ ನಾವೆಲ್ಲರೂ ಧಾವಿಸಬೇಕು. ಅಫ್ಘಾನಿಸ್ತಾನ ಜನ ಈಗ ಅಕ್ಷರಶಃ ಬೀದಿಗೆ ಬಂದಿದ್ದಾರೆ. ಅಫ್ಘಾನಿಯರಿಗೆ ಕೆಲಸ ಮತ್ತು ಮನೆ ನೀಡುವ ಮೂಲಕ ಅವರ ನೆರವಿಗೆ ಧಾವಿಸಬೇಕು ಎಂದು ಮನವಿ ಮಾಡಿ ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಭಾರತಕ್ಕೆ ಬರುವ ಅಫ್ಘಾನ್ನರಿಗೆ ತಾತ್ಕಾಲಿಕ ವೀಸಾ ವ್ಯವಸ್ಥೆ

    ಅಫ್ಘಾನ್‍ನಲ್ಲಿರುವ ಭಾರತೀಯರ ಪರವಾಗಿ ಸಹ ಧ್ವನಿ ಎತ್ತಿರುವ ಸೋನುಸೂದ್ ಅಫ್ಘಾನಿಸ್ತಾನದಲ್ಲಿ ನೆಲಸಿರುವ ಭಾರತೀಯರು ಸಹ ಈಗ ನಿರಾಶ್ರಿತರಾಗಿದ್ದಾರೆ. ಅವರ ಬದುಕನ್ನು ಕಟ್ಟಿಕೊಳ್ಳಲು ನಾವೆಲ್ಲ ಸಹಾಯ ಮಾಡಬೇಕು. ಈ ಬಿಕ್ಕಟ್ಟಿನ ಸಂದರ್ಭದಲ್ಲಿ ಅವರಿಗೆ ನಮ್ಮ ಅವಶ್ಯಕತೆಯಿದೆ ಎಂದು ಸೋನುಸೂದ್ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಉತ್ತರ ಪ್ರದೇಶದ ಮಾಜಿ ಸಿಎಂ ಕಲ್ಯಾಣ್ ಸಿಂಗ್ ಇನ್ನಿಲ್ಲ

    ಅಫ್ಘಾನ್ ನಲ್ಲಿ ನಡೆಯುತ್ತಿರೋ ನರಮೇಧದಿಂದ ಹೈರಾಣಾಗಿರೋ ಅಫ್ಘಾನಿಸ್ತಾನದವರು ಭಾರತಕ್ಕೆ ಬರಲು ಇಚ್ಛಿಸುವವರಿಗೆ ಭಾರತದಿಂದ ತಾತ್ಕಾಲಿಕ ವೀಸಾದ ವ್ಯವಸ್ಥೆಯನ್ನ ಕಲ್ಪಿಸಲಾಗುತ್ತಿದೆ. ಕರ್ನಾಟದಲ್ಲಿರೋ ಅಪ್ಘಾನ್ ವಿದ್ಯಾರ್ಥಿಗಳಿಗಾಗಿ ಕರ್ನಾಟಕ ಸರ್ಕಾರ ಹೆಲ್ಪ್ ಡೆಸ್ಕ್ ವ್ಯವಸ್ಥೆ ಮಾಡಿದೆ.

    ಈ ಹೆಲ್ಪ್ ಡೆಸ್ಕ್ ಗೆ ನಿರಂತರವಾಗಿ ವಿದ್ಯಾರ್ಥಿಗಳು ಕರೆ ಮಾಡಿ ನಮ್ಮ ಪೋಷಕರನ್ನ ಭಾರತ ಹಾಗೂ ಬೆಂಗಳೂರಿಗೆ ಕರಿಸಿಕೊಡುವಂತೆ ಮನವಿ ಮಾಡುತ್ತಿದ್ದರು. ಆ ಕಾರಣಕ್ಕಾಗಿ ತಾತ್ಕಾಲಿಕ ವೀಸಾ ಆನ್‍ಲೈನ್ ನಲ್ಲಿ ವೆಬ್‍ಸೈಟ್ ಮೂಲಕ ಅಪ್ಲೈ ಮಾಡಿ ತಾತ್ಕಾಲಿಕ ವೀಸಾ ಪಡೆದುಕೊಳ್ಳಲುವಂತೆ ಸಲಹೆ ಸೂಚನೆಯನ್ನ ಎಡಿಜಿಪಿ ಉಮೇಶ್ ಕುಮಾರ್ ತಿಳಿಸಿದ್ದಾರೆ.

  • ಐ ಲವ್ ತಾಲಿಬಾನ್ ಎಂದು ಪೋಸ್ಟ್ ಹಾಕಿದ್ದ ಯುವಕ ಅರೆಸ್ಟ್

    ಐ ಲವ್ ತಾಲಿಬಾನ್ ಎಂದು ಪೋಸ್ಟ್ ಹಾಕಿದ್ದ ಯುವಕ ಅರೆಸ್ಟ್

    ಬಾಗಲಕೋಟೆ: ಐ ಲವ್ ತಾಲಿಬಾನ್ ಎಂದು ಫೇಸ್‍ಬುಕ್ ಪೋಸ್ಟ್ ಹಾಕಿದ್ದ ಜಮಖಂಡಿಯ ಆಸೀಫ್ ಗಲಗಲಿ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

    ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಗರದ ಆಸೀಫ್ ಗಲಗಲಿ, ಅವಿವೇಕಿ ತಾಲಿಬಾನ್ ಉಗ್ರರ ಬಗ್ಗೆ ಪ್ರೀತಿ ತೋರಿದ್ದನು. ಈತ ತನ್ನ ಫೇಸ್‍ಬುಕ್ ಪೋಸ್ಟ್ ನಲ್ಲಿ ಐಲವ್ ತಾಲಿಬಾನಿ ಎಂದು ಬರೆದುಕೊಂಡಿದ್ದ. ಈ ಪೋಸ್ಟ್ ವೈರಲ್ ಆಗಿತ್ತು. ಈ ಬಗ್ಗೆ ಸ್ವ ಸಮುದಾಯದವರು ಈತನ ದೇಶದ್ರೋಹ ಕೃತ್ಯವನ್ನು ಖಂಡಿಸಿದ್ದರು.

    Social media logos

    ಅಫ್ಘಾನಿಸ್ತಾನದಲ್ಲಿ ತಾಲಿಬಾನಿಗಳ ಕಿರುಕುಳ ಹಿನ್ನೆಲೆಯಲ್ಲಿ ಅಫ್ಘಾನ್ ದೇಶ ಬಿಟ್ಟು ಜನ ಓಡಿ ಹೋಗುತ್ತಿದ್ದಾರೆ. ಹೀಗಿರುವಾಗ ತಾಲಿಬಾನಿಗಳ ಮೇಲೆ ಪ್ರೀತಿ ತೋರಿದ್ದಕ್ಕೆ ವ್ಯಾಪಕವಾಗಿ ಖಂಡನೆ ವ್ಯಕ್ತವಾಗಿತ್ತು. ಈ ಪೋಸ್ಟ್ ವಿರುದ್ಧ ಹಿಂದೂ ಸಂಘಟನೆಗಳ ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ನಾಪತ್ತೆಯಾಗಿದ್ದ ಆಸೀಫ್ ಗಲಗಲಿಯನ್ನು ಪೊಲೀಸರು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ. ಜಮಖಂಡಿ ನಗರ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ. ಪಬ್ಲಿಕ್‌ ಟಿವಿ ನೇರ ಪ್ರಸಾರ ವೀಕ್ಷಿಸಿ

  • ಕಾಬೂಲ್‍ನಲ್ಲಿ ಸುರಕ್ಷಿತವಾಗಿದ್ದೇನೆ: ಮಂಗಳೂರು ಮೂಲದ ಸಿಸ್ಟರ್ ಥೆರೆಸಾ ಕ್ರಾಸ್ತಾ ಸಂದೇಶ

    ಕಾಬೂಲ್‍ನಲ್ಲಿ ಸುರಕ್ಷಿತವಾಗಿದ್ದೇನೆ: ಮಂಗಳೂರು ಮೂಲದ ಸಿಸ್ಟರ್ ಥೆರೆಸಾ ಕ್ರಾಸ್ತಾ ಸಂದೇಶ

    ಬೆಂಗಳೂರು: ಅಫ್ಘಾನಿಸ್ತಾನದಲ್ಲಿರುವ ಸಿಲುಕಿರುವ ಮಂಗಳೂರು ಮೂಲದ ಸಿಸ್ಟರ್ ಥೆರೆಸಾ ಕ್ರಾಸ್ತಾ ತಾವು ಕಾಬೂಲ್ ನಗರದ ಕಾನ್ವೆಂಟಿಯಲ್ಲಿ ಸುರಕ್ಷಿತವಾಗಿರುವ ಬಗ್ಗೆ ಆಡಿಯೋ ಸಂದೇಶ ಕಳುಹಿಸಿದ್ದಾರೆ.

    ಸಿಸ್ಟರ್ ಥೆರೆಸಾ ಕ್ರಾಸ್ಟಾ ಆಡಿಯೋ ಮೆಸೇಜ್
    ನಾನು ಸಿಸ್ಟರ್ ಥೆರೇಸಾ… ಕಾಬೂಲ್ ಕಾನ್ವೆಂಟಿನಲ್ಲಿ ಸುರಕ್ಷಿತವಾಗಿದ್ದೇನೆ. ನಾನು ಕೆಲಸ ಮಾಡುವ ಸಂಸ್ಥೆಯು ಪಿಪಿಕೆ ಇಟಾಲಿಯನಾ ಅವರು ನನ್ನ ಸುರಕ್ಷತೆಗೆ ಇಟಾಲಿಯನ್ ಕೌನ್ಸಲೆಂಟ್ ರೋಮ್ ನಿಂದ ಇಟಲಿಗೆ ಹೋಗಲು ಎಲ್ಲಾ ವ್ಯವಸ್ಥೆಯನ್ನು ಮಾಡಿದೆ. ಸದ್ಯಕ್ಕೆ ಕಾಬೂಲ್ ವಿಮಾನ ನಿಲ್ದಾಣದಲ್ಲಿ ಗೊಂದಲ ಇರುವುದರಿಂದ ಒಳಗೆ ಪ್ರವೇಶವಿಲ್ಲ. ಆದ್ದರಿಂದ ನಮ್ಮ ಪ್ರಯಾಣವನ್ನು ಮುಂದೂಡಲಾಗಿದೆ. ಏರ್ಪೋರ್ಟ್ ಗೆ ಪ್ರವೇಶ ನೀಡುವಾಗ ನಮ್ಮನ್ನು ಕರೆದುಕೊಂಡು ಹೋಗುವರು. ಇಂಡಿಯನ್ ಎಂಬೆಸಿಗೆ ನಾನು ರಿಜಿಸ್ಟರ್ ಮಾಡಿರೋದ್ರಿಂದ ಸುರಕ್ಷತೆಗೆ ಎಲ್ಲಾ ವ್ಯವಸ್ಥೆ ಮಾಡುತ್ತಿದ್ದಾರೆ. ನಿಮ್ಮ ಸಹಕಾರಕ್ಕೆ ನನ್ನ ತುಂಬು ಹೃದಯದ ವಂದನೆಗಳು ಎಂದು ಹೇಳಿದ್ದಾರೆ.

    ಬೈಡನ್ ಎಚ್ಚರಿಕೆ:
    ಶುಕ್ರವಾರ ತಡರಾತ್ರಿ ಅಮೆರಿಕ ಅಧ್ಯಕ್ಷ ಜೋ ಬೈಡನ್ ಅಫ್ಘಾನಿಸ್ತಾನದ ವಿಷಯದ ಕುರಿತು ಮಾತನಾಡಿದ್ದಾರೆ. ಈ ವೇಳೆ ಇದು ಜಗತ್ತಿನಲ್ಲಿ ಅತಿ ದೊಡ್ಡ ಸಮಸ್ಯೆ. ಭಯೋತ್ಪಾದನೆಗೆ ಅಫ್ಘನ್ ನೆಲೆ ಬಳಸಲು ಬಿಡಲ್ಲ ಎಂದು ಹೇಳಿದ್ದಾರೆ. ನಮ್ಮ ಸೈನಿಕರ ಮೇಲೆ ದಾಳಿಯಾದ ಮರುಕ್ಷಣವೇ ಪ್ರತಿದಾಳಿ ನಡೆಸುತ್ತೇವೆ ಎಂದು ಅಮೆರಿಕ ಅಧ್ಯಕ್ಷ ಜೋ ಬೈಡನ್ ತಾಲಿಬಾನಿಗಳಿಗೆ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಅಫ್ಘಾನಿಸ್ತಾನದಲ್ಲಿ ಶಾಲೆ, ಕಾಲೇಜು ಬಂದ್ – ಬುರ್ಖಾ ಅಂಗಡಿ ಓಪನ್

    ಬೈಡನ್ ಭರವಸೆ:
    ನಾವು ಜುಲೈನಿಂದ ಇಲ್ಲಿಯವರೆಗೆ 18 ಸಾವಿರಕ್ಕೂ ಹೆಚ್ಚು ಮತ್ತು ಆಗಸ್ಟ್ 14ರ ನಂತರ 13 ಸಾವಿರ ಜನರನ್ನು ಕಾಬೂಲ್ ನಿಂದ ಸ್ಥಳಾಂತರ ಮಾಡಿದ್ದೇವೆ. ಇದು ಇತಿಹಾಸದಲ್ಲಿ ಕಂಡು ಕೇಳರಿಯದ ದೊಡ್ಡ ಸಮಸ್ಯೆಯಾಗಿದ್ದು, ದೊಡ್ಡ ಮಟ್ಟದಲ್ಲಿಯೇ ಜನರ ಏರ್ ಲಿಫ್ಟ್ ಕಾರ್ಯ ನಡೆಯುತ್ತಿದೆ. ಇದೇ ವೇಳೆ ಕಾಬೂಲ್ ನಲ್ಲಿಯ ಜನರ ಏರ್ ಲಿಫ್ಟ್ ಮಾಡಲು ಅಮೆರಿಕದ ಸರ್ಕಾರ ಬದ್ಧವಾಗಿದೆ ಎಂದು ಭರವಸೆ ನೀಡಿದರು. ಇದನ್ನೂ ಓದಿ: ಷರಿಯತ್ ಕಾನೂನು ಎಂದರೇನು? ಅಫ್ಘಾನ್ ತಾಲಿಬಾನ್ ಹೇಗೆ ಅರ್ಥೈಸುತ್ತದೆ?