Tag: afghanistan

  • ಕಾಬೂಲ್‍ನಿಂದ ಭಾರತೀಯರ ಕರೆತರಲು ಕಸರತ್ತು

    ಕಾಬೂಲ್‍ನಿಂದ ಭಾರತೀಯರ ಕರೆತರಲು ಕಸರತ್ತು

    ಕಾಬೂಲ್: ಅಫ್ಘಾನಿಸ್ತಾನದ ಸ್ಥಿತಿ ಘನಘೋರವಾಗಿದೆ. ಕಾಬೂಲ್‍ನಲ್ಲಿರೋ ಭಾರತೀಯರನ್ನು ಸ್ಥಳಾಂತರಿಸುವ ಕೆಲಸ ನಡೆಯುತ್ತಿದೆ. ಕಾಬೂಲ್‍ನಲ್ಲಿ ಸುಮಾರು 500ಕ್ಕೂ ಹೆಚ್ಚು ಭಾರತೀಯರಿದ್ದು, ಅವರನ್ನು ಕರೆತರಲು ಕಸರತ್ತು ನಡೆಸಲಾಗುತ್ತಿದೆ. ವಾಯುಸೇನೆಯ ಸಿ-17 ಗ್ಲೋಬ್ ಮಾಸ್ಟರ್ ವಿಮಾನ ಮುಂದಾಗಿದೆ. ಆದರೆ ಅಲ್ಲಿ ಏರ್ ಪೋರ್ಟ್  ಬಂದ್ ಆಗಿರುವ ಕಾರಣ ಏರ್ ಲಿಫ್ಟ್  ವಿಳಂಬಾಗಿದೆ.

    ಅಫ್ಘನ್‍ನಲ್ಲಿರುವ ಭಾರತೀಯರ ನ್ನು ಸುರಕ್ಷಿತವಾಗಿ ಕರೆತರಲು ಅಗತ್ಯವಾದ ಎಲ್ಲಾ ಕ್ರಮ ತೆಗೆದುಕೊಳ್ಳುವುದಾಗಿ ವಿದೇಶಾಂಗ ಇಲಾಖೆ ತಿಳಿಸಿದೆ. ಕಾಬೂಲ್‍ನಲ್ಲಿರೋ ರತನ್ ನಾಥ್ ದೇವಸ್ಥಾನದ ಅರ್ಚಕ ಪಂಡಿತ್ ರಾಜೇಶ್ ಕುಮಾರ್, ಭಾರತಕ್ಕೆ ಬರಲು ನಿರಾಕರಿಸಿದ್ದಾರೆ. ನೂರಾರು ವರ್ಷಗಳಿಂದ ನಮ್ಮ ಪೂರ್ವಜರು ದೇವಸ್ಥಾನದಲ್ಲಿ ಪೂಜೆ ಮಾಡುತ್ತಿದ್ದು, ಯಾವುದೇ ಕಾರಣಕ್ಕೂ ದೇವಸ್ಥಾನ ತೊರೆಯಲ್ಲ ಎಂದಿದ್ದಾರೆ. ಇದನ್ನೂ ಓದಿ: ಅಘ್ಘಾನಿಸ್ತಾನದಲ್ಲಿ ತಾಲಿಬಾನ್ ಆಡಳಿತ – ಅಫ್ಘನ್ ದೇಶವನ್ನುದ್ದೇಶಿಸಿ ಅಮೆರಿಕ ಅಧ್ಯಕ್ಷ ಜೊ ಬೈಡನ್ ಭಾಷಣ

    ತಾಲಿಬಾನಿಗಳು ಬೇಕಿದ್ರೆ ತಮ್ಮನ್ನು ಕೊಲ್ಲಲ್ಲಿ ಅಂದಿದ್ದಾರೆ. ಕಾಬೂಲ್‍ನ ಗುರುದ್ವಾರದಲ್ಲಿ 200 ಸಿಖ್ಖರು ಇದ್ದು, ಅವರನ್ನು ರಕ್ಷಿಸಿ ಎಂದು ಪಂಜಾಬ್ ಸಿಎಂ ಮನವಿ ಮಾಡಿದ್ದಾರೆ. ನಾವಂದುಕೊಂಡಿದ್ದನ್ನು ಸಾಧಿಸಿದ್ದೇವೆ. ನಮ್ಮ ದೇಶಕ್ಕೆ, ನಮ್ಮ ಪ್ರಜೆಗಳಿಗೆ ಮತ್ತೆ ಸ್ವಾತಂತ್ರ್ಯ ಬಂದಿದೆ ಎಂದು ತಾಲಿಬಾನಿಗಳು ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ನಾಲ್ಕು ಕಾರ್, ಒಂದು ಹೆಲಿಕಾಪ್ಟರ್ ನಲ್ಲಿ ನಗದು ಹೊತ್ತೊಯ್ದ ಅಶ್ರಫ್ ಘನಿ

    ಅಫ್ಘಾನಿಸ್ತಾನದಲ್ಲಿ ವಿಫಲ ಅನುಭವದ ರುಚಿಯನ್ನು ಮತ್ತೆ ನೋಡಲು ವಿದೇಶಿ ಶಕ್ತಿಗಳು ಬಯಸುವುದಿಲ್ಲ ಎಂದುಕೊಳ್ಳುತ್ತೇವೆ ಅಂತಾ ಅಮೆರಿಕಾಗೆ ತಾಲಿಬಾನ್ ಗುದ್ದು ನೀಡಿದ್ದಾರೆ. ಇದೀಗ ಎಲ್ಲರ ಕೋಪ ಸೇನೆಯನ್ನು ಹಿಂದಕ್ಕೆ ಕರೆಯಿಸಿಕೊಂಡ ಅಮೆರಿಕ ಅಧ್ಯಕ್ಷ ಜೋ ಬಿಡೆನ್‍ರತ್ತ ತಿರುಗಿದೆ. ಶ್ವೇತಭವನದ ಮುಂದೆ ಆಫ್ಘನ್ನರು ಪ್ರತಿಭಟನೆ ನಡೆಸಿದ್ದಾರೆ. ಇದನ್ನೂ ಓದಿ: ಅಫ್ಘಾನಿಸ್ತಾನದ ಸ್ಥಿತಿ ಘನಘೋರ – ವಿಮಾನದಿಂದ ಬಿದ್ದು ಮೂವರು ಸಾವು

    ತಾಲಿಬಾನ್ ಆಡಳಿತಕ್ಕೆ ಯಾವ ದೇಶವೂ ಮನ್ನಣೆ ಕೊಡಬಾರದು ಎಂದು ಬ್ರಿಟನ್ ಕೇಳಿಕೊಂಡಿದೆ. ಆದರೆ ಪಾಕಿಸ್ತಾನ ಮತ್ತು ಚೀನಾ ಮಾತ್ರ ತಾಲಿಬಾನ್ ಆಡಳಿತಕ್ಕೆ ಮಾನ್ಯತೆ ನೀಡುವುದಾಗಿ ಘೋಷಿಸಿ ಉದ್ಧಟತನ ಮೆರೆದಿವೆ. ಇಮ್ರಾನ್ ಖಾನ್ ಅಂತೂ ಅಫ್ಘನ್‍ಗೆ ಸ್ವಾತಂತ್ರ್ಯ ಸಿಕ್ಕಿದೆ ಎನ್ನುವ ಅರ್ಥದ ಮಾತಗಳನ್ನಾಡಿದ್ದಾರೆ. ಇದನ್ನೂ ಓದಿ: ಅಫ್ಘಾನಿಸ್ತಾನದಲ್ಲಿ ಶಾಲೆ, ಕಾಲೇಜು ಬಂದ್ – ಬುರ್ಖಾ ಅಂಗಡಿ ಓಪನ್

    https://www.youtube.com/watch?v=ckd3p_Ra2VI

  • ಅಘ್ಘಾನಿಸ್ತಾನದಲ್ಲಿ ತಾಲಿಬಾನ್ ಆಡಳಿತ – ಅಫ್ಘನ್ ದೇಶವನ್ನುದ್ದೇಶಿಸಿ ಅಮೆರಿಕ ಅಧ್ಯಕ್ಷ ಜೊ ಬೈಡನ್ ಭಾಷಣ

    ಅಘ್ಘಾನಿಸ್ತಾನದಲ್ಲಿ ತಾಲಿಬಾನ್ ಆಡಳಿತ – ಅಫ್ಘನ್ ದೇಶವನ್ನುದ್ದೇಶಿಸಿ ಅಮೆರಿಕ ಅಧ್ಯಕ್ಷ ಜೊ ಬೈಡನ್ ಭಾಷಣ

    ಕಾಬೂಲ್: ಅಘ್ಘಾನಿಸ್ತಾನದಲ್ಲಿ ತಾಲಿಬಾನಿ ಆಡಳಿತ ನಿನ್ನೆಯಿಂದ ಆರಂಭವಾಗಿದೆ. ನಿನ್ನೆ ರಾಜಧಾನಿ ಕಾಬೂಲ್ ನಗರವನ್ನು ತಾಲಿಬಾನ್ ಉಗ್ರರು ನಿಯಂತ್ರಣಕ್ಕೆ ತೆಗೆದುಕೊಂಡರು. ಇದಕ್ಕೂ ಮೊದಲೇ ಅಫ್ಘನ್ ಅಧ್ಯಕ್ಷ ಅಶ್ರಫ್ ಘನಿ ತನ್ನ ಆಪ್ತರೊಂದಿಗೆ ಉಜ್ಭೇಕಿಸ್ಥಾನದ ತಾಷ್ಕೆಂಟ್‍ಗೆ ಓಡಿ ಹೋಗಿ ತಲೆ ಮರೆಸಿಕೊಂಡಿದ್ದಾರೆ. ಈ ಎಲ್ಲದರ ನಡುವೆ ಅಘ್ಘಾನಿಸ್ಥಾನವನ್ನುದ್ದೇಶಿಸಿ ಅಮೆರಿಕ ಅಧ್ಯಕ್ಷ ಜೊ ಬೈಡನ್ ಇಂದು ರಾತ್ರಿ ಭಾಷಣ ಮಾಡಲಿದ್ದಾರೆ ಎಂದು ಟ್ವಿಟ್ಟರ್ ಮೂಲಕ ತಿಳಿಸಿದ್ದಾರೆ.

    ತಾಲಿಬಾನಿಗಳ ಅಟ್ಟಹಾಸ ಅಘ್ಘಾನಿಸ್ತಾನದಲ್ಲಿ ಆರಂಭವಾಗುತ್ತಿದ್ದಂತೆ ಅಲ್ಲಿನ ನಾಗರೀಕರು ಅಸಹಾಯಕ ಸ್ಥಿತಿಗೆ ತಲುಪಿದ್ದಾರೆ. ವಿಮಾನ ನಿಲ್ದಾಣಗಳಲ್ಲಿ ಸಿಕ್ಕ, ಸಿಕ್ಕ ವಿಮಾನವೇರಿ ದೇಶ ತೊರೆಯುತ್ತಿದ್ದಾರೆ. ಅಸಹಾಯಕ ಸ್ಥಿತಿಯಲ್ಲಿ ಮಾಜಿ ಅಧ್ಯಕ್ಷ ಹಮೀದ್ ಕರ್ಜೈ ನೇತೃತ್ವದಲ್ಲಿ ತಾಲಿಬಾನ್‍ಗೆ ಅಧಿಕಾರ ಹಸ್ತಾಂತರ ಪ್ರಕ್ರಿಯೆ ನಡೆಯುತ್ತಿದೆ. ಈ ಬೆಳವಣಿಗೆ ನಡುವೆ ಜೊ ಬೈಡನ್ ಅಘ್ಫಾನ್ ದೇಶವನ್ನು ಉದ್ದೇಶಿಸಿ ಭಾಷಣ ಮಾಡುವುದಾಗಿ ತಿಳಿಸಿರುವುದು ಬಾರಿ ಕೂತುಹಲ ಮೂಡಿಸಿದೆ. ಇದನ್ನೂ ಓದಿ: ನಾಲ್ಕು ಕಾರ್, ಒಂದು ಹೆಲಿಕಾಪ್ಟರ್ ನಲ್ಲಿ ನಗದು ಹೊತ್ತೊಯ್ದ ಅಶ್ರಫ್ ಘನಿ

    ತಾಲಿಬಾನಿಗಳ ವಶಕ್ಕೆ ಅಫ್ಘಾನಿಸ್ತಾನ ಒಳಪಡುತ್ತಿದ್ದಂತೆ. ಅಮೆರಿಕಾದಲ್ಲಿ ಅಫ್ಘಾನ್ ಪ್ರಜೆಗಳಿಂದ ಪ್ರತಿಭಟನೆ ನಡೆಯಿತು. ವೈಟ್ ಹೌಸ್ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ ಅಘ್ಘಾನ್ ಪ್ರಜೆಗಳು ಅಲ್ಲಿ ನಡೆಯುತ್ತಿರುವ ಘಟನೆಗೆ ಅಮೆರಿಕ ನೇರ ಹೊಣೆ ಎಂದು ಆಕ್ರೋಶ ವ್ಯಕ್ತಪಡಿಸಿ, ಜೊ ಬೈಡನ್ ವಿರುದ್ಧ ಘೋಷಣೆ ಕೂಗಿದರು. ಇದನ್ನೂ ಓದಿ: ಅಫ್ಘಾನಿಸ್ತಾನದ ಸ್ಥಿತಿ ಘನಘೋರ – ವಿಮಾನದಿಂದ ಬಿದ್ದು ಮೂವರು ಸಾವು

    ಅಫ್ಘಾನ್ ನಲ್ಲಿ ತಾಲಿಬಾನ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಚೀನಾ ತನ್ನ ಕುತಂತ್ರ ಬುದ್ಧಿ ತೋರಿಸಲು ಮುಂದಾಗಿದೆ. ತಾಲಿಬಾನ್ ಸರ್ಕಾರದ ಜೊತೆಗೆ ಕೈಜೊಡಿಸಲು ಮುಂದಾಗಿರುವ ಚೀನಾ, ತಾಲಿಬಾನ್ ಜೊತೆ ಸ್ನೇಹ ಸಂಬಂಧ ಬೆಳೆಸಲು ಸಿದ್ಧ ಎಂದು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದೆ.

  • ಅಫ್ಘಾನಿಸ್ತಾನ ಭಯೋತ್ಪಾದಕರ ಕೈಗೆ ಹೋಗುವುದು ಒಳ್ಳೆಯದಲ್ಲ: ಶೋಭಾ ಕರಂದ್ಲಾಜೆ

    ಅಫ್ಘಾನಿಸ್ತಾನ ಭಯೋತ್ಪಾದಕರ ಕೈಗೆ ಹೋಗುವುದು ಒಳ್ಳೆಯದಲ್ಲ: ಶೋಭಾ ಕರಂದ್ಲಾಜೆ

    ಚಾಮರಾಜನಗರ: ಅಫ್ಘಾನಿಸ್ತಾನ ಭಯೋತ್ಪಾದಕರ ಕೈಗೆ ಹೋಗುವುದು ಒಳ್ಳೆಯದಲ್ಲ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

    ತಾಲಿಬಾನಿಗಳ ವಶಕ್ಕೆ ಅಫ್ಘಾನಿಸ್ತಾನ ವಿಚಾರಕ್ಕೆ ಸಂಬಂಧಿಸಿದಂತೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದೊಂದು ಆತಂಕಕಾರಿ ಬೆಳವಣಿಗೆ. ನಾಗರೀಕ ಸರ್ಕಾರ ಧೂಳಿಪಟ ಮಾಡಿ ಭಯೋತ್ಪಾದಕರ ಕೈಗೆ ದೇಶ ಹೋಗುತ್ತೆ ಅಂದರೆ ವಿಶ್ವಕ್ಕೆ ಒಳ್ಳೆಯದಲ್ಲ. ಭಾರತದ ನಿಲುವೇನು ಅನ್ನೋದ್ನ ವಿದೇಶಾಂಗ ಸಚಿವರು ಸ್ಪಷ್ಟಪಡಿಸುತ್ತಾರೆ ಎಂದು ತಿಳಿಸಿದರು.

    2023 ಅನ್ನು ಸಿರಿ ಧಾನ್ಯಗಳ ವರ್ಷವೆಂದು ಆಚರಿಸಲು ನಿರ್ಧಾರ ಮಾಡಲಾಗಿದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಸಿರಿ ಧಾನ್ಯಗಳ ವರ್ಷಾಚರಣೆಗೆ ಸಂಯುಕ್ತ ರಾಷ್ಟ್ರಗಳು ಒಪ್ಪಿಕೊಂಡಿವೆ. ಕೃಷಿ ಮೂಲ ಸೌಕರ್ಯಕ್ಕೆ ಒಂದು ಲಕ್ಷ ಕೋಟಿ ರೂಪಾಯಿ ಮೀಸಲಿಡಲಾಗಿದೆ. 10 ಸಾವಿರ ರೈತ ಉತ್ಪಾದಕ ಘಟಕಗಳನ್ನ ತೆರೆಯಲು ಉದ್ದೇಶಿಸಲಾಗಿದೆ. ರೈತರ ಆದಾಯ ದ್ವಿಗುಣಗೊಳಿಸುವುದೇ ಕೇಂದ್ರ ಸರ್ಕಾರದ ಗುರಿಯಾಗಿದೆ. ದೇಶದಲ್ಲಿ ಶೇ 70 ರಷ್ಟು ರೈತರಿದ್ದಾರೆ. ರೈತರಿಗೆ ಧೈರ್ಯ ಮತ್ತು ಬಲ ತುಂಬಲು ರೈತರ ಮನೆಗಳಿಗೆ ತೆರಳುತ್ತಿದ್ದೇನೆ ಎಂದರು. ಇದನ್ನೂ ಓದಿ: ನಾಲ್ಕು ಕಾರ್, ಒಂದು ಹೆಲಿಕಾಪ್ಟರ್ ನಲ್ಲಿ ನಗದು ಹೊತ್ತೊಯ್ದ ಅಶ್ರಫ್ ಘನಿ

    ಬಿಜೆಪಿ ಮತ್ತು ಕಾಂಗ್ರೆಸ್ ರಾಜ್ಯದಲ್ಲಿ ನಶಿಸಿ ಹೋಗುತ್ತಿದೆ ಎಂಬ ಎಚ್.ಡಿ.ಕೆ ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವೆ, ಮೊದಲು ಅವರೆಲ್ಲಿದ್ದಾರೆ ಎಂಬುದನ್ನ ನೋಡಿಕೊಳ್ಳಲಿ ಎಂದು ತಿರುಗೇಟು ಕೊಟ್ಟರು. ಟೀಕೆಗಳಿಗೆ ನಾವು ಉತ್ತರ ಕೊಡಲ್ಲ, ಜನರು ಉತ್ತರ ಕೊಡುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.  ಇದನ್ನೂ ಓದಿ: ತಾಲಿಬಾನಿಗಳಿಗೆ ಹೆದರಿ 1 ವಿಮಾನದಲ್ಲಿ ಪ್ರಯಾಣಿಸಲು ಮುಗಿಬಿದ್ದ ನೂರಾರು ಜನ

  • ಅಫ್ಘಾನಿಸ್ತಾನದಲ್ಲಿ ಶಾಲೆ, ಕಾಲೇಜು ಬಂದ್ – ಬುರ್ಖಾ ಅಂಗಡಿ ಓಪನ್

    ಅಫ್ಘಾನಿಸ್ತಾನದಲ್ಲಿ ಶಾಲೆ, ಕಾಲೇಜು ಬಂದ್ – ಬುರ್ಖಾ ಅಂಗಡಿ ಓಪನ್

    ಕಾಬೂಲ್: ಅಫ್ಘಾನಿಸ್ತಾನದಲ್ಲಿ ಬಂದ್ ವಾತಾವರಣ ನಿರ್ಮಾಣವಾಗಿದ್ದು, ಆತಂಕದಲ್ಲಿರುವ ಜನರು ದೇಶ ತೊರೆದು ಪ್ರಾಣ ಉಳಿಸಿಕೊಳ್ಳುತ್ತಿದ್ದಾರೆ. ತಾಲಿಬಾನಿಗಳ ಪ್ರವೇಶದಿಂದ ಕಾಬೂಲ್ ನಲ್ಲಿ ಶಾಲಾ, ಕಾಲೇಜು ಸೇರಿದಂತೆ ವ್ಯವಹಾರ ಚಟುವಟಿಕೆಗಳು ಬಂದ್ ಆಗಿವೆ. ಆದ್ರೆ ಬುರ್ಖಾ ಅಂಗಡಿಗಳು ತೆರೆದಿದ್ದು, ಖರೀದಿಗೆ ಜನ ಮುಗಿಬೀಳುತ್ತಿದ್ದಾರೆ. ಅದರಲ್ಲಿಯೂ ದಪ್ಪ ಬಟ್ಟೆಯ ಬುರ್ಖಾಗಳಿಗೆ ಹೆಚ್ಚು ಬೇಡಿಕೆಯುಂಟಾಗಿದೆ.

    2018ರಲ್ಲಿ ಯುನೈಟೆಡ್ ನೇಷನ್ ನಲ್ಲಿ ಅಫ್ಘಾನಿಸ್ತಾನ ಪ್ರತಿನಿಧಿಸಿದ್ದ ಯುವತಿ ಆಯೇಶಾ ಖುರ್ರಮ್ ಈ ಕುರಿತು ಬರೆದುಕೊಂಡಿದ್ದಾರೆ. ತಾಲಿಬಾನಿಗಳ ಎಂಟ್ರಿಯಿಂದಾಗಿ ಬುರ್ಖಾ ವಹಿವಾಟು ಜೋರಾಗಿದ್ದು, ದೇಶದ ವಿವಿಧ ಪ್ರಾಂತ್ಯಗಳಲ್ಲಿ ಈ ದೃಶ್ಯ ಕಾಣಬಹುದಾಗಿದೆ. ತಾಲಿಬಾನಿಗಳ ದೃಷ್ಟಿ ತಮ್ಮ ಮೇಲೆ ಬೀಳದಿರಲಿ ಎಂದು ಮಹಿಳೆಯರು ದಪ್ಪ ಬಟ್ಟೆ ಮತ್ತು ನೀಲಿ ಬಣ್ಣದ ಬುರ್ಖಾ ಖರೀದಿಗೆ ಮುಂದಾಗುತ್ತಿದ್ದಾರೆ. ಬೇಡಿಕೆ ಹೆಚ್ಚಾದ ಹಿನ್ನೆಲೆ ಮಾರುಕಟ್ಟೆಯಲ್ಲಿ ಬುರ್ಖಾ ಬೆಲೆ ಸಹ ಏರಿಕೆ ಕಂಡಿದೆ. ಈ ಹಿಂದೆ ತಾಲಿಬಾನಿಗಳ ನಲುಗಿದ ಮಹಿಳೆಯರು ಎಲ್ಲ ಯುವತಿಯರಿಗೆ ಬುರ್ಖಾ ಧರಿಸುವಿಕೆಯ ಸಲಹೆ ನೀಡುತ್ತಿದ್ದಾರೆ. ಇದನ್ನೂ ಓದಿ: ರಕ್ತಪಾತ ತಡೆಗಾಗಿ ದೇಶ ತೊರೆದೆ- ಅಫ್ಘಾನಿಸ್ತಾನದ ಅಧ್ಯಕ್ಷ ಅಶ್ರಫ್ ಘನಿ

    22 ವರ್ಷದ ಆಯೇಶಾ ಕಾಬೂಲ್ ವಿಶ್ವವಿದ್ಯಾಲಯದಲ್ಲಿ ಅಂತರಾಷ್ಟ್ರೀಯ ವ್ಯವಹಾರಿಕ ಸಂಬಂಧಗಳ ಕುರಿತ ವಿಷಯದ ಪದವಿ ವ್ಯಾಸಂಗ ಮಾಡುತ್ತಿದ್ದಾರೆ. ಅಂತಿಮ ವರ್ಷದ ಪರೀಕ್ಷೆಗೆ ಇನ್ನೂ ಎರಡು ತಿಂಗಳು ಇರುವಾಗಲೇ ತಾಲಿಬಾನಿಗಳ ಪ್ರವೇಶವಾಗಿದೆ. ನಾನು ಪದವಿ ಪಡೆಯುವ ಕನಸು ಕನಸಾಗಿಯೇ ಉಳಿಯಲಿದೆ ಎಂದು ಆಯೇಶಾ ಬೇಸರ ಹೊರಹಾಕಿದ್ದಾರೆ. ಇದನ್ನೂ ಓದಿ: ನಾಲ್ಕು ಕಾರ್, ಒಂದು ಹೆಲಿಕಾಪ್ಟರ್ ನಲ್ಲಿ ನಗದು ಹೊತ್ತೊಯ್ದ ಅಶ್ರಫ್ ಘನಿ

    ಇನ್ನೂ ಕೆಲ ದಿಟ್ಟ ಮಹಿಳೆಯರು ತಮ್ಮ ಅಭಿಪ್ರಾಯಗಳನ್ನು ತಾಲಿಬಾನಿಗಳಿಗೆ ತಲುಪಿಸುವ ಪ್ರಯತ್ನದಲ್ಲಿದ್ದಾರೆ. ಕಾಬೂಲ್ ವಿಶ್ವವಿದ್ಯಾಲಯದ ಅಧ್ಯಾಪಕಿ ಮುಸ್ಕಾ ದಸ್ತಗೀರ್ ಸೋಶಿಯಲ್ ಮೀಡಿಯಾದಲ್ಲಿ ತಾಲಿಬಾನಿಗಳನ್ನು ಉದ್ದೇಶಿಸಿ ಲೇಖನಗಳನ್ನು ಪ್ರಕಟಿಸುತ್ತಿದ್ದಾರೆ. ಅಫ್ಘಾನಿಸ್ತಾನದ ಜನರನ್ನ ಬೇಟೆಯಂತೆ ಕಂಡು ಕೊಲ್ಲಲಾಗುತ್ತಿದೆ. ಆದ್ರೆ ಈ ದೇಶದ ಮಹಿಳೆಯರು ಮನೆಯಲ್ಲಿ ಅವಿತುಕೊಳ್ಳಲ್ಲ ಮತ್ತು ನಾವುಗಳು ಹೆದರಲ್ಲ ಎಂದು ಬರೆದುಕೊಳ್ಳುತ್ತಿದ್ದಾರೆ. ಇದನ್ನೂ ಓದಿ: ತಾಲಿಬಾನಿಗಳಿಗೆ ಹೆದರಿ 1 ವಿಮಾನದಲ್ಲಿ ಪ್ರಯಾಣಿಸಲು ಮುಗಿಬಿದ್ದ ನೂರಾರು ಜನ

  • ನಾಲ್ಕು ಕಾರ್, ಒಂದು ಹೆಲಿಕಾಪ್ಟರ್ ನಲ್ಲಿ ನಗದು ಹೊತ್ತೊಯ್ದ ಅಶ್ರಫ್ ಘನಿ

    ನಾಲ್ಕು ಕಾರ್, ಒಂದು ಹೆಲಿಕಾಪ್ಟರ್ ನಲ್ಲಿ ನಗದು ಹೊತ್ತೊಯ್ದ ಅಶ್ರಫ್ ಘನಿ

    – ಏರ್ ಪೋರ್ಟ್ ನಲ್ಲಿಯೇ ಉಳಿದ ಅರ್ಧ ಹಣ

    ಕಾಬೂಲ್: ತಾಲಿಬಾನಿಗಳಿಗೆ ಅಧಿಕಾರ ಹಸ್ತಾಂತರಿಸಿ ಮಾಜಿ ಅಧ್ಯಕ್ಷ ಅಶ್ರಫ್ ಘನಿ ದೇಶ ತೊರೆಯುವಾಗ ನಾಲ್ಕು ಕಾರ್ ಮತ್ತು ಒಂದು ಹೆಲಿಕಾಪ್ಟರ್ ನಲ್ಲಿ ಅಪಾರ ಪ್ರಮಾಣದ ನಗದು ತೆಗೆದುಕೊಂಡು ಹೋಗಿರುವ ಬಗ್ಗೆ ವರದಿಯಾಗಿದೆ. ಆದ್ರೆ ಎಲ್ಲವೂ ಹಣ ತೆಗೆದುಕೊಂಡ ಹೋಗಲಾಗದೇ ಕೆಲ ನಗದನ್ನು ಕಾಬೂಲ್ ವಿಮಾನ ನಿಲ್ದಾಣದಲ್ಲಿಯೇ ಬಿಟ್ಟುಹೋಗಿರೋದು ರಷ್ಯಾದ ರಾಯಭಾರಿ ಕಚೇರಿ ದೃಢಪಡಿಸಿದೆ.

    ತಾಲಿಬಾನಿಗಳು ಸಹ ವಿಮಾನ ನಿಲ್ದಾಣದಲ್ಲಿ ಅಪಾರ ಪ್ರಮಾಣದ ನಗದು ಪತ್ತೆಯಾಗಿರೋದನ್ನು ಹೇಳಿಕೊಂಡಿದ್ದರು. ಇದು ಸುಮಾರು 50 ಲಕ್ಷ ಡಾಲರ್ ಎಂದು ಹೇಳಲಾಗುತ್ತಿದ್ದು, ಆದ್ರೆ ಈ ವರದಿಯನ್ನು ದೃಢಪಡಿಸಿರಲಿಲ್ಲ. ಇದೀಗ ಕಾಬೂಲ್ ನಲ್ಲಿರುವ ರಷ್ಯಾದ ರಾಯಭಾರಿ ಕಚೇರಿ ಈ ಸುದ್ದಿಯನ್ನು ಖಚಿತಪಡಿಸಿದೆ. ಅಫ್ಘಾನಿಸ್ತಾನ ತಾಲಿಬಾನಿಗಳ ಕೈ ವಶವಾದ್ರೂ ತನ್ನ ರಾಯಭಾರಿ ಕಚೇರಿಯನ್ನು ಮುಚ್ಚದಿರಲು ರಷ್ಯಾ ನಿರ್ಧರಿಸಿದೆ. ನಾವು ತಾಲಿಬಾನಿಗಳ ಚಲನವಲನಗಳನ್ನು ಇಲ್ಲಿಂದಲೇ ಗಮನಿಸುತ್ತೇವೆ. ಅಂದ್ರೆ ಅವರ ಸರ್ಕಾರವನ್ನು ಒಪ್ಪಿಕೊಂಡಂತೆ ಅಲ್ಲ ಎಂದು ಸ್ಪಷ್ಟಪಡಿಸಿದೆ.

    ಈ ಕುರಿತು ಮಾಹಿತಿ ನೀಡಿರುವ ಕಾಬೂಲ್ ನಲ್ಲಿರುವ ದೂತವಾಸ ಕಚೇರಿಯ ವಕ್ತಾರೆ ನಿಕಿತಾ ಐಚಿಂಕೋ, ಭಾನುವಾರವೇ ಘನಿ ದೇಶ ತೊರೆದಿದ್ದಾಯ್ತು. ಹೋಗುವಾಗ ನಾಲ್ಕು ಕಾರ್ ಮತ್ತು ಹೆಲಿಕಾಪ್ಟರ್ ನಲ್ಲಿ ನಗದು ರವಾನಿಸಲಾಗಿತ್ತು. ಆದ್ರೆ ಏಕಕಾಲದಲ್ಲಿ ಅಷ್ಟು ನಗದು ತೆಗೆದುಕೊಂಡ ಹೋಗಲಾರದ ಘಣಿ ಕೆಲ ಹಣವನ್ನು ವಿಮಾನ ನಿಲ್ದಾಣದಲ್ಲಿ ಬಿಟ್ಟು ಹೋಗಿರುವ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ತಾಲಿಬಾನಿಗಳಿಗೆ ಹೆದರಿ 1 ವಿಮಾನದಲ್ಲಿ ಪ್ರಯಾಣಿಸಲು ಮುಗಿಬಿದ್ದ ನೂರಾರು ಜನ

    ಅಶ್ರಫ್ ಘನಿ ಮತ್ತು ಮಾಜಿ ಉಪಾಧ್ಯಕ್ಷ ಸಾಲೇಹ ಭಾನುವಾರವೇ ತಮ್ಮ ದೇಶದ ಜನತೆಯನ್ನು ಬಿಟ್ಟು ಅಫ್ಘಾನಿಸ್ತಾನ ತೊರೆದಿದ್ದರು. ಈ ವೇಳೆ ಇಬ್ಬರ ಜೊತೆ ಆಪ್ತರು ಮಾತ್ರ ಪ್ರಯಾಣಿಸಿದ್ದಾರೆ ಎನ್ನಲಾಗಿದೆ. ಆದ್ರೆ ಕಾಬೂಲ್ ನಿಂದ ಯಾವ ವಿಮಾನದಿಂದ ಎಲ್ಲಿಗೆ ಹೋದ್ರು ಎಂಬುದರ ಬಗ್ಗೆ ಇದುವರೆಗೂ ಖಚಿತ ಮಾಹಿತಿ ಲಭ್ಯವಾಗಿಲ್ಲ. ಕೆಲ ಮಾಧ್ಯಮಗಳ ಪ್ರಕಾರ ಘನಿ ತಜಕೀಸ್ತಾನ ಎಂದು ಹೇಳುತ್ತಿದ್ರೆ, ಕೆಲವರ ಪ್ರಕಾರ ಅಮೆರಿಕ ತಲುಪಿರುವ ಬಗ್ಗೆ ಅನುಮಾನಗಳು ವ್ಯಕ್ತವಾಗಿವೆ. ಇದನ್ನೂ ಓದಿ: ರಕ್ತಪಾತ ತಡೆಗಾಗಿ ದೇಶ ತೊರೆದೆ- ಅಫ್ಘಾನಿಸ್ತಾನದ ಅಧ್ಯಕ್ಷ ಅಶ್ರಫ್ ಘನಿ

    ಅಶ್ರಫ್ ಘನಿ ಹೇಳಿದ್ದೇನು?:
    ನನಗೆ ಕಠಿಣ ಸವಾಲು ಎದುರಾಗಿತ್ತು. ತಾಲಿಬಾನಿಗಳನ್ನು ಎದುರಿಸಲು ನಿಂತಿದ್ದೆ. ಅವರೆಲ್ಲರೂ ಶಸ್ತ್ರಸಜ್ಜಿ ತರಾಗಿ ರಾಷ್ಟ್ರಪತಿ ಭವನ ಪ್ರವೇಶಿಸಲು ಸಿದ್ಧರಾಗಿದ್ದರು. ನಾನು ಅಫ್ಘಾನಿಸ್ತಾನದಿಂದ ದೂರ ಹೋಗಬೇಕೆಂಬುವುದು ಅವರ ಡಿಮ್ಯಾಂಡ್ ಆಗಿತ್ತು. ಕಳೆದ 20 ವರ್ಷಗಳಿಂದ ದೇಶದ ಜನರ ರಕ್ಷಣೆಯಲ್ಲಿ ತೊಡಗಿಕೊಂಡಿದ್ದೇನೆ. ಒಂದು ವೇಳೆ ಅವರ ಡಿಮ್ಯಾಂಡ್ ಒಪ್ಪದಿದ್ರೆ ಯುದ್ಧವೇ ನಡೆಯತ್ತಿತ್ತು. ಈ ಯುದ್ಧದಲ್ಲಿ ನೂರಾರು ಜನ ಪೊಲೀಸರು ಹುತಾತ್ಮರಾಗುತ್ತಿದ್ದರು. ರಕ್ತ ಹರಿಸೋದು ನನಗೆ ಇಷ್ಟವಿರಲಿಲ್ಲ. ಅವರ ಬೇಡಿಕೆಯಂತೆ ಆಧಿಕಾರ ಹಸ್ತಾಂತರಿಸಿ ದೇಶ ತೊರೆದೆ. ಇಲ್ಲವಾದಲ್ಲಿ 60 ಲಕ್ಷ ಜನಸಂಖ್ಯೆಯುಳ್ಳು ಈ ನಗರ ದೊಡ್ಡ ದುರಂತಕ್ಕೆ ಸಾಕ್ಷಿಯಾಗುತ್ತಿತ್ತು ಎಂದು ಹೇಳಿದ್ದಾರೆ.  ಇದನ್ನೂ ಓದಿ: ಅಫ್ಘಾನಿಸ್ತಾನದ ಸ್ಥಿತಿ ಘನಘೋರ – ವಿಮಾನದಿಂದ ಬಿದ್ದು ಮೂವರು ಸಾವು

    https://www.youtube.com/watch?v=ckd3p_Ra2VI

  • ಅಫ್ಘಾನಿಸ್ತಾನದ ಸ್ಥಿತಿ ಘನಘೋರ – ವಿಮಾನದಿಂದ ಬಿದ್ದು ಮೂವರು ಸಾವು

    ಅಫ್ಘಾನಿಸ್ತಾನದ ಸ್ಥಿತಿ ಘನಘೋರ – ವಿಮಾನದಿಂದ ಬಿದ್ದು ಮೂವರು ಸಾವು

    ಕಾಬೂಲ್: ತಾಲಿಬಾನ್ ಉಗ್ರರು ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡ ಬೆನ್ನಲ್ಲೇ ಜನರು ಭಯಗೊಂಡು ದೇಶ ತೊರೆಯಲು ಆರಂಭಿಸಿದ್ದಾರೆ. 1 ವಿಮಾನದಲ್ಲಿ ಪ್ರಯಾಣಿಸಲು ಮುಗಿಬಿದ್ದ ನೂರಾರು ಜನರಲ್ಲಿ ಮೂವರು ಪ್ರಾಣ ಕಳೆದಕೊಂಡಿದ್ದಾರೆ.

    ಸುರಕ್ಷಿತ ಸ್ಥಳ ತಲುಪಲು ವಿಮಾನ ಏರಿದ ಜನ ವಿಮಾನದ ಟಯರ್ ಹಿಡಿದು ಪ್ರಯಾಣ ಮಾಡಿದ್ದಾರೆ. ವಿಮಾನ ಟೇಕಾಫ್ ಆಗುತ್ತಿದ್ದಂತೆ ಗಾಳಿಯ ರಭಸಕ್ಕೆ ಕಾಬೂಲ್ ಮಧ್ಯಭಾಗದಲ್ಲಿ ಮೂವರು ಮೇಲಿನಿಂದ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ:  ತಾಲಿಬಾನಿಗಳಿಗೆ ಹೆದರಿ 1 ವಿಮಾನದಲ್ಲಿ ಪ್ರಯಾಣಿಸಲು ಮುಗಿಬಿದ್ದ ನೂರಾರು ಜನ

    ವಿಮಾನ ನಿಲ್ದಾಣಗಳಲ್ಲಿ ವಿಮಾನ ಹತ್ತಲು ನಿಯಮಗಳು ಇರುತ್ತದೆ. ದಾಖಲೆಗಳನ್ನು ಪರಿಶೀಲಿಸಿದ ಬಳಿಕ ವಿಮಾನ ಹತ್ತಲು ಅನುಮತಿ ನೀಡಲಾಗುತ್ತದೆ. ಆದರೆ ಕಾಬೂಲ್ ವಿಮಾನ ನಿಲ್ದಾಣದಲ್ಲಿ ಬಸ್ ಹತ್ತಲು ಪ್ರಯಾಣಿಕರು ಹೇಗೆ ಮುಗಿಬೀಳುತ್ತಾರೋ ಆ ರೀತಿಯಾಗಿ ಒಂದು ಏಣಿ ಮೂಲಕ ವಿಮಾನ ಹತ್ತಲು ಪ್ರಯತ್ನಿಸಿದ್ದಾರೆ.

    ವಿಮಾನ ಪ್ರಯಾಣ ಬಸ್, ಪ್ಯಾಸೆಂಜರ್ ರೈಲುಗಳಂತಾಗಿದೆ. ಸಿಕ್ಕ ಸಿಕ್ಕ ವಿಮಾನ ಏರಲು ನೂಕುನುಗ್ಗಲು ಆಗಿದೆ. ಹಮೀದ್ ಕರ್ಜೈ ವಿಮಾನ ನಿಲ್ದಾಣದಲ್ಲಿ ಜನರ ನೂಕುನುಗ್ಗಲು ತಪ್ಪಿಸಲು ಗುಂಡಿನ ದಾಳಿ ನಡೆಸಿ ತಾಲಿಬಾನಿಗಳ ದಾಳಿಗೆ ಐದು ಮಂದಿ ಸಾವನ್ನಪ್ಪಿದ್ದಾರೆ. ಕಾಬೂಲ್ ವಿಮಾನ ನಿಲ್ದಾಣ ಬಂದ್ ಮಾಡಲಾಗಿದ್ದು, ವಿಮಾನಗಳ ಹಾರಾಟಕ್ಕೆ ನಿರ್ಬಂಧಿಸಲಾಗಿದೆ. ಅಫ್ಘಾನ್ ವಾಯಸೀಮೆಯಲ್ಲಿ ವಿಮಾನ ಹಾರಾಡದಂತೆ ಸೂಚನೆ ನೀಡಲಾಗಿದೆ.

    ಧಾರವಾಡದ ಕೃಷಿ ವಿವಿ ಸಂಶೋಧನೆಯಲ್ಲಿ ಅಘ್ಘಾನ್‍ನಿಂದ ಬಂದ 15 ವಿದ್ಯಾರ್ಥಿಗಳು ಕುಟುಂಬಸ್ಥರನ್ನು ನೆನೆದು ಕಣ್ಣೀರು ಹಾಕುತ್ತಿದ್ದಾರೆ. 15 ವಿದ್ಯಾರ್ಥಿಗಳಲ್ಲಿ 5 ವಿದ್ಯಾರ್ಥಿಗಳು ಮತ್ತೆ ಅಘ್ಘಾನ್‍ಗೆ ವಾಪಸ್ ಆಗಿದ್ದಾರೆ. ಕುಟುಂಬಸ್ಥರು ಸುರಕ್ಷವಾಗಿರುವ ಬಗ್ಗೆ ವಿದ್ಯಾರ್ಥಿಗಳಿಗೆ ವಿಶ್ವಾಸ ನೀಡಲಾಗಿದೆ.

  • ರಕ್ತಪಾತ ತಡೆಗಾಗಿ ದೇಶ ತೊರೆದೆ- ಅಫ್ಘಾನಿಸ್ತಾನದ ಅಧ್ಯಕ್ಷ ಅಶ್ರಫ್ ಘನಿ

    ರಕ್ತಪಾತ ತಡೆಗಾಗಿ ದೇಶ ತೊರೆದೆ- ಅಫ್ಘಾನಿಸ್ತಾನದ ಅಧ್ಯಕ್ಷ ಅಶ್ರಫ್ ಘನಿ

    ಕಾಬೂಲ್: ತಾಲಿಬಾನಿಗಳು ಕಾಬೂಲ್ ನಗರ ಮತ್ತು ರಾಷ್ಟ್ರಪತಿ ಭವನ ವಶಕ್ಕೆ ಪಡೆದ ನಂತರ ಅಧ್ಯಕ್ಷ ಅಶ್ರಫ್ ಘನಿ ದೇಶ ತೊರೆದ ಬಳಿಕ ತಮ್ಮ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಅಫ್ಘಾನಿಸ್ತಾನದ ಜನರಿಗೆ ಅಶ್ರಫ್ ಘನಿ ಸಂದೇಶ ರವಾನಿಸಿದ್ದು, ನಿಮ್ಮೆಲ್ಲರ ಹಿತ ಮತ್ತು ರಕ್ತಪಾತ ನಿಲ್ಲಿಸಲು ದೇಶದಿಂದ ಹೊರ ಬಂದಿದ್ದೇನೆ ಎಂದು ಹೇಳಿದ್ದಾರೆ.

    ನನ್ನ ಪ್ರೀತಿಯ ದೇಶವಾಸಿಗಳೇ,
    ನನಗೆ ಕಠಿಣ ಸವಾಲು ಎದುರಾಗಿತ್ತು. ತಾಲಿಬಾನಿಗಳನ್ನು ಎದುರಿಸಲು ನಿಂತಿದ್ದೆ. ಅವರೆಲ್ಲರೂ ಶಸ್ತ್ರಸಜ್ಜಿ ತರಾಗಿ ರಾಷ್ಟ್ರಪತಿ ಭವನ ಪ್ರವೇಶಿಸಲು ಸಿದ್ಧರಾಗಿದ್ದರು. ನಾನು ಅಫ್ಘಾನಿಸ್ತಾನದಿಂದ ದೂರ ಹೋಗಬೇಕೆಂಬುವುದು ಅವರ ಡಿಮ್ಯಾಂಡ್ ಆಗಿತ್ತು. ಕಳೆದ 20 ವರ್ಷಗಳಿಂದ ದೇಶದ ಜನರ ರಕ್ಷಣೆಯಲ್ಲಿ ತೊಡಗಿಕೊಂಡಿದ್ದೇನೆ. ಒಂದು ವೇಳೆ ಅವರ ಡಿಮ್ಯಾಂಡ್ ಒಪ್ಪದಿದ್ರೆ ಯುದ್ಧವೇ ನಡೆಯತ್ತಿತ್ತು. ಈ ಯುದ್ಧದಲ್ಲಿ ನೂರಾರು ಜನ ಪೊಲೀಸರು ಹುತಾತ್ಮರಾಗುತ್ತಿದ್ದರು. ರಕ್ತ ಹರಿಸೋದು ನನಗೆ ಇಷ್ಟವಿರಲಿಲ್ಲ. ಅವರ ಬೇಡಿಕೆಯಂತೆ ಆಧಿಕಾರ ಹಸ್ತಾಂತರಿಸಿ ದೇಶ ತೊರೆದೆ. ಇಲ್ಲವಾದಲ್ಲಿ 60 ಲಕ್ಷ ಜನಸಂಖ್ಯೆಯುಳ್ಳು ಈ ನಗರ ದೊಡ್ಡ ದುರಂತಕ್ಕೆ ಸಾಕ್ಷಿಯಾಗುತ್ತಿತ್ತು.

    ತಮ್ಮ ರಸ್ತೆಗೆ ಅಡ್ಡಲಾಗಿರುವ ನನ್ನನ್ನು ತೆಗೆದುಹಾಕಲು ತಾಲಿಬಾಲಿನಿಗಳು ನಿರ್ಧರಿಸಿದ್ದರು. ಇದಕ್ಕಾಗಿ ಕಾಬೂಲ್ ಮತ್ತು ಕಾಬೂಲ್ ಜನತೆಯ ಮೇಲೆ ದಾಳಿಯ ಕುರಿತು ಪ್ಲಾನ್ ಮಾಡಿಕೊಂಡಿದ್ದರು. ಹಾಗಾಗಿ ಇದೆಲ್ಲವನ್ನು ತಡೆಯಲು ನನ್ನ ಮುಂದಿದ ದಾರಿ ಇದು ಒಂದೇ ಆಗಿತ್ತು. ಬಂದೂಕು, ಬಾಂಬ್ ಗಳಿಂದ ತಾಲಿಬಾನಿಗಳು ಯುದ್ಧ ಗೆದ್ದಿರಬಹುದು. ಈಗ ದೇಶ ಮತ್ತು ಅಲ್ಲಿಯ ಜನತೆಯ ಮಾನ ಹಾಗೂ ಪ್ರಾಣವನ್ನು ರಕ್ಷಿಸುವ ಜವಾಬ್ದಾರಿ ಅವರ ಮೇಲಿದೆ.

    ದೇಶವನ್ನು ತಮ್ಮ ವಶಕ್ಕೆ ಪಡೆದಿರುವ ತಾಲಿಬಾನಿಗಳು ಅಲ್ಲಿಯ ಜನರ ಮನಸ್ಸು ಗೆದ್ದಿಲ್ಲ. ಕೇವಲ ಶಕ್ತಿಪ್ರದರ್ಶನ ತೋರಿದವರನ್ನು ಜನರು ಒಪ್ಪಿಕೊಳ್ಳಲು ಅನ್ನೋ ಉದಾಹರಣೆಗಳು ನಮ್ಮ ಮುಂದಿವೆ. ಸದ್ಯ ತಾಲಿಬಾನಿಗಳ ಮುಂದೆ ಸವಾಲುಗಳಿದ್ದು, ಅಲ್ಲಿಯ ಜನರನ್ನು ರಕ್ಷಣೆ ಮಾಡ್ತಾರೋ ಅಥವಾ ಮತ್ತೆ ಸಾಮ್ರಾಜ್ಯ ವಿಸ್ತರಣೆಯತ್ತ ಹೋಗ್ತಾರಾ ಅನ್ನೋದನ್ನು ಕಾದು ನೋಡಬೇಕಿದೆ.

    ಹಲವು ಜನ ಆತಂಕದಲ್ಲಿದ್ದು, ಮನೆಯಿಂದ ಹೊರ ಬರಲಾರದ ಸ್ಥಿತಿಯಲ್ಲಿದ್ದಾರೆ. ದೇಶದ ಜನತೆಗೆ ತಾಲಿಬಾನಿಗಳ ನಂಬಿಕೆ ಇಲ್ಲ. ದೇಶದ ಮಹಿಳೆ, ಮಕ್ಕಳು, ಪುರುಷರು, ವೃದ್ಧರು ಸೇರಿದಂತೆ ಎಲ್ಲ ರನ್ನೂ ಒಗ್ಗೂಡಿಸಿಕೊಂಡು ತಾಲಿಬಾನಿಗಳು ಮುಂದೆ ಹೆಜ್ಜೆ ಇರಿಸಬೇಕಿದೆ. ನಾನು ನಿಮ್ಮ ಸೇವೆಯಲ್ಲಿರುತ್ತೇನೆ. ಅಫ್ಘಾನಿಸ್ತಾನ ಜಿಂದಾಬಾದ್.

    ವಿಮಾನ ಹತ್ತಲು ನೂಕು ನುಗ್ಗಲು:
    ತಾಲಿಬಾನ್ ಉಗ್ರರು ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡ ಬೆನ್ನಲ್ಲೇ ಜನರ ದೇಶ ತೊರೆಯಲು ಆರಂಭಿಸಿದ್ದಾರೆ. ಉಗ್ರರಿಗೆ ಎಷ್ಟು ಭಯಗೊಂಡಿದ್ದಾರೆ ಎಂದರೆ ಕಾಬೂಲ್ ವಿಮಾನ ನಿಲ್ದಾಣದಲ್ಲಿ ನಿಂತಿದ್ದ ಒಂದು ವಿಮಾನಕ್ಕೆ ಹತ್ತಲು ನೂರಾರು ಜನ ಮುಗಿಬಿದ್ದಿದ್ದಾರೆ. ವಿಮಾನ ನಿಲ್ದಾಣಗಳಲ್ಲಿ ವಿಮಾನ ಹತ್ತಲು ನಿಯಮಗಳು ಇರುತ್ತದೆ. ದಾಖಲೆಗಳನ್ನು ಪರಿಶೀಲಿಸಿದ ಬಳಿಕ ವಿಮಾನ ಹತ್ತಲು ಅನುಮತಿ ನೀಡಲಾಗುತ್ತದೆ. ಆದರೆ ಕಾಬೂಲ್ ವಿಮಾನ ನಿಲ್ದಾಣದಲ್ಲಿ ಬಸ್ ಹತ್ತಲು ಪ್ರಯಾಣಿಕರು ಹೇಗೆ ಮುಗಿ ಬೀಳುತ್ತಾರೋ ಆ ರೀತಿಯಾಗಿ ಒಂದು ಏಣಿ ಮೂಲಕ ವಿಮಾನ ಹತ್ತಲು ಪ್ರಯತ್ನಿಸಿದ್ದಾರೆ.

    ಈ ನಾಲ್ವರಲ್ಲಿ ಯಾರು ಅಂತಿಮ?:
    ತಾಲಿಬಾನಿಗಳು ಹೇಳುವಂತೆ ಈಗಾಗಲೇ ಅಲ್ಲಿಯ ಪೊಲೀಸರು ಶರಣಾಗಿದ್ದು, ಶಸ್ತ್ರಾಸ್ತ್ರಗಳನ್ನು ಹಸ್ತಾಂತರಿಸುತ್ತಿದ್ದಾರೆ. ಈ ನಡುವೆ ಅಫ್ಘಾನಿಸ್ತಾನದ ಮುಂದಿನ ಅಧ್ಯಕ್ಷ ಅಥವಾ ರಾಷ್ಟ್ರಪತಿ ಯಾರು ಅನ್ನೋ ಚರ್ಚೆಗಳು ಮುನ್ನಲೆಗೆ ಬಂದಿದ್ದು, ಮುಲ್ಲಾ ಬರಾದರ್ ಹೆಸರು ಕೇಳಿ ಬರುತ್ತಿದೆ. ಸದ್ಯ ಈ ಮುಲ್ಲಾ ಬರದಾರ್ ಕತಾರ್ ನಲ್ಲಿದ್ದಾನೆ. ಕತಾರ್ ನಲ್ಲಿರುವ ತಾಲಿಬಾನ್ ಕಚೇರಿಯ ರಾಜಕೀಯ ಮುಖ್ಯಸ್ಥನಾಗಿರೋದರಿಂದ, ಮುಲ್ಲಾ ಬರಾದರ್ ಹೆಸರು ಸ್ಪರ್ಧೆಯಲ್ಲಿದೆ. ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಸಂಘಟನೆಯ ಸಹ ಸ್ಥಾಪಕನಾಗಿದ್ದಾನೆ. ಇದನ್ನೂ ಓದಿ: ಅಫ್ಘಾನಿಸ್ತಾನ ತೊರೆದ ಅಧ್ಯಕ್ಷ ಅಶ್ರಫ್ ಘನಿ, ಉಪಾಧ್ಯಕ್ಷ ಸಾಲೇಹ

    ಮುಲ್ಲಾ ಬರಾದರ್ ಹೆಸರಿನ ಜೊತೆ ಹೆಬತುಲ್ಲಾಹ ಅಖುಂದಜಾದ್, ಸಿರಾಜುದ್ದೀನ್ ಹಕ್ಕನಿ ಮತ್ತು ಮುಲ್ಲಾ ಯಾಕೂಬ್ ಸಹ ಗದ್ದುಗೆಯ ಸ್ಪರ್ಧೆಯಲ್ಲಿದ್ದಾರೆ. ಹೆಬತುಲ್ಲಾಹ ತಾಲಿಬಾನಿಗಳ ಸುಪ್ರೀಂ ನಾಯಕನಾದ್ರೆ, ಸಿರಾಜುದ್ದೀನ್ ಎರಡನೇ ಸ್ಥಾನದಲ್ಲಿರುವ ಲೀಡರ್. ಈತ ಹಕ್ಕಾನಿ ನೆಟ್‍ವರ್ಕ್ ಸಂಚಾಲಕನಾಗಿದ್ದು, ಹಲವು ಸಂಘಟನೆಗಳ ಮುಖ್ಯಸ್ಥನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ. ಇನ್ನೂ ಮುಲ್ಲಾ ಯಾಕೂಬ್ ತಾಲಿಬಾನ್ ಸ್ಥಾಪಕರಲ್ಲೊಬ್ಬರಾದ ಮುಲ್ಲಾ ಉಮರ್ ಪುತ್ರನಾಗಿದ್ದಾನೆ. ತಾಲಿಬಾನ್ ದ ಜಂಗಜೂ ಯುನಿಟಿ ಈತನ ಕೈ ವಶದಲ್ಲಿದೆ. ಇದನ್ನೂ ಓದಿ: ತಾಲಿಬಾನಿಗಳ ಅಟ್ಟಹಾಸ, ನರಕವಾದ ಅಫ್ಘಾನಿಸ್ತಾನ- ರಾಜ್ಯಪಾಲ, ಸರ್ಕಾರಿ ಅಧಿಕಾರಿಗಳು ಶರಣಾಗತಿ

  • ಅಫ್ಘಾನಿಸ್ತಾನ ತೊರೆದ ಅಧ್ಯಕ್ಷ ಅಶ್ರಫ್ ಘನಿ, ಉಪಾಧ್ಯಕ್ಷ ಸಾಲೇಹ

    ಅಫ್ಘಾನಿಸ್ತಾನ ತೊರೆದ ಅಧ್ಯಕ್ಷ ಅಶ್ರಫ್ ಘನಿ, ಉಪಾಧ್ಯಕ್ಷ ಸಾಲೇಹ

    – ಭಾರತ ತಲುಪಿದ ಅಫ್ಘಾನಿಸ್ತಾನದಲ್ಲಿದ 129 ಜನರು
    – ತಾಲಿಬಾನಿಗಳಿಗೆ ಶಸ್ತ್ರಾಸ್ತ್ರ ಹಸ್ತಾಂತರಿಸಿದ ಪೊಲೀಸರು
    – ದೆಹಲಿ ತಲುಪಿದ ಬಳಿಕ ಕಣ್ಣೀರಿಟ್ಟ ಮಹಿಳೆ

    ಕಾಬುಲ್: ಅಫ್ಘಾನಿಸ್ತಾನ ತಾಲಿಬಾಲಿಗಳ ಕೈ ವಶವಾಗಿದ್ದು, ಅಧ್ಯಕ್ಷ ಅಶ್ರಫ್ ಘನಿ ಮತ್ತು ಉಪಾಧ್ಯಕ್ಷ ಅಮಿರೂಲ್ಲಾಹ ಸಾಲೇಹ ದೇಶ ತೊರೆದಿದ್ದಾರೆ ಎಂದು ವರದಿಯಾಗಿದೆ. ಅಶ್ರಫ್ ಗನಿ ಅಮೆರಿಕಾದತ್ತ ಪ್ರಯಾಣ ಬೆಳೆಸಿದ್ದಾರೆ ಎನ್ನಲಾಗಿದ್ದು, ಸಾಲೇಹ ಅವರ ನಡೆ ಬಗ್ಗೆ ತಿಳಿದು ಬಂದಿಲ್ಲ. ಈಗಾಗಲೇ ಅಫ್ಘಾನಿಸ್ತಾನದ ರಾಷ್ಟ್ರಪತಿ ಭವನದ ವಶಕ್ಕೆ ಪಡೆದುಕೊಂಡಿರುವ ತಾಲಿಬಾನಿಗಳು ತಮ್ಮ ಧ್ವಜ ಹಾರಿಸಿದ್ದಾರೆ.

    ತಾಲಿಬಾನಿಗಳು ಹೇಳುವಂತೆ ಈಗಾಗಲೇ ಅಲ್ಲಿಯ ಪೊಲೀಸರು ಶರಣಾಗಿದ್ದು, ಶಸ್ತ್ರಾಸ್ತ್ರಗಳನ್ನು ಹಸ್ತಾಂತರಿಸುತ್ತಿದ್ದಾರೆ. ಈ ನಡುವೆ ಅಫ್ಘಾನಿಸ್ತಾನದ ಮುಂದಿನ ಅಧ್ಯಕ್ಷ ಅಥವಾ ರಾಷ್ಟ್ರಪತಿ ಯಾರು ಅನ್ನೋ ಚರ್ಚೆಗಳು ಮುನ್ನಲೆಗೆ ಬಂದಿದ್ದು, ಮುಲ್ಲಾ ಬರಾದರ್ ಹೆಸರು ಕೇಳಿ ಬರುತ್ತಿದೆ.

    ಯಾರು ಈ ಮುಲ್ಲಾ ಬರಾದರ್?:
    ಸದ್ಯ ಈ ಮುಲ್ಲಾ ಬರದಾರ್ ಕತಾರ್ ನಲ್ಲಿದ್ದಾನೆ. ಕತಾರ್ ನಲ್ಲಿರುವ ತಾಲಿಬಾನ್ ಕಚೇರಿಯ ರಾಜಕೀಯ ಮುಖ್ಯಸ್ಥನಾಗಿರೋದರಿಂದ, ಮುಲ್ಲಾ ಬರಾದರ್ ಹೆಸರು ಸ್ಪರ್ಧೆಯಲ್ಲಿದೆ. ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಸಂಘಟನೆಯ ಸಹ ಸ್ಥಾಪಕನಾಗಿದ್ದಾನೆ.

    ಮುಲ್ಲಾ ಬರಾದರ್ ಜೊತೆ ನಾಲ್ಕು ಹೆಸರು:
    ಮುಲ್ಲಾ ಬರಾದರ್ ಹೆಸರಿನ ಜೊತೆ ಹೆಬತುಲ್ಲಾಹ ಅಖುಂದಜಾದ್, ಸಿರಾಜುದ್ದೀನ್ ಹಕ್ಕನಿ ಮತ್ತು ಮುಲ್ಲಾ ಯಾಕೂಬ್ ಸಹ ಗದ್ದುಗೆಯ ಸ್ಪರ್ಧೆಯಲ್ಲಿದ್ದಾರೆ. ಹೆಬತುಲ್ಲಾಹ ತಾಲಿಬಾನಿಗಳ ಸುಪ್ರೀಂ ನಾಯಕನಾದ್ರೆ, ಸಿರಾಜುದ್ದೀನ್ ಎರಡನೇ ಸ್ಥಾನದಲ್ಲಿರುವ ಲೀಡರ್. ಈತ ಹಕ್ಕಾನಿ ನೆಟ್‍ವರ್ಕ್ ಸಂಚಾಲಕನಾಗಿದ್ದು, ಹಲವು ಸಂಘಟನೆಗಳ ಮುಖ್ಯಸ್ಥನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ. ಇನ್ನೂ ಮುಲ್ಲಾ ಯಾಕೂಬ್ ತಾಲಿಬಾನ್ ಸ್ಥಾಪಕರಲ್ಲೊಬ್ಬರಾದ ಮುಲ್ಲಾ ಉಮರ್ ಪುತ್ರನಾಗಿದ್ದಾನೆ. ತಾಲಿಬಾನ್ ದ ಜಂಗಜೂ ಯುನಿಟಿ ಈತನ ಕೈ ವಶದಲ್ಲಿದೆ.

    ಅಫ್ಘಾನಿಸ್ತಾನದಲ್ಲಿ ಸಿಲುಕಿದ್ದ ಭಾರತೀಯರನ್ನು ಏರ್ ಲಿಫ್ಟ್ ಮಾಡಲಾಗಿತ್ತು. ಇಂದು ರಾತ್ರಿ ಸುಮಾರು 10 ಗಂಟೆಗೆ 129 ಪ್ರಯಾಣಿಕರಿದ್ದ ವಿಮಾನ ದೆಹಲಿಯಲ್ಲಿ ಲ್ಯಾಂಡ್ ಆಗಿದೆ. ಅಮೆರಿಕಾ, ಇಂಗ್ಲೆಂಡ್ ಸೇರಿದಂತೆ ಹಲವು ರಾಷ್ಟ್ರಗಳು ತಮ್ಮ ದೇಶದ ಜನರನ್ನು ಏರ್ ಲಿಫ್ಟ್ ಮೂಲಕ ಕರೆಸಿಕೊಳ್ಳುತ್ತಿವೆ. ಇದನ್ನೂ ಓದಿ: ತಾಲಿಬಾನಿಗಳ ಅಟ್ಟಹಾಸ, ನರಕವಾದ ಅಫ್ಘಾನಿಸ್ತಾನ- ರಾಜ್ಯಪಾಲ, ಸರ್ಕಾರಿ ಅಧಿಕಾರಿಗಳು ಶರಣಾಗತಿ

    ಇದು ಅಶ್ರಫ್ ಘನಿ ದ್ರೋಹ:
    ಇಂದು ದೆಹಲಿ ತಲುಪಿರುವ ಅಫ್ಘಾನಿಸ್ತಾನದ ಮಾಜಿ ಸಂಸದ ಜಮೀಲ್ ಕರ್ಜಾಯಿ, ನಾವು ಕಾಬುಲ್ ತೊರೆದಾಗ ಇಡೀ ನಗರ ತಾಲಿಬಾನಿಗಳ ವಶದಲ್ಲಿತ್ತು. ಇಂದಿನ ಸ್ಥಿತಿಗೆ ಅಶ್ರಫ್ ಘನಿ ಕಾರಣ. ಆತ ಮಾಡಿದ ದ್ರೋಹವನ್ನು ಜನ ಮರೆಯಲ್ಲ. ಮುಂದೆ ಏನು ಆಗುತ್ತೆ ಅನ್ನೋದು ತಿಳಿಯುತ್ತಿಲ್ಲ. ತಾಲಿಬಾನಿಗಳು ಬದಲಾಗಿದ್ದಾರಾ ಅಥವಾ ಮೊದಲಿನಂತೆಯೇ ಇದ್ದಾರೆ ಅನ್ನೋದು ಮುಂದಿನ ದಿನಗಳಲ್ಲಿ ಸ್ಪಷ್ಟವಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಕಾಬೂಲ್ ವಶ – ತಾಲಿಬಾನ್‍ಗೆ ಶರಣಾದ ಅಫ್ಘನ್ ಸರ್ಕಾರ

    ಕಣ್ಣೀರಿಟ್ಟ ಮಹಿಳೆ:
    ದೆಹಲಿ ತಲುಪಿದ ಜನರು ಅಲ್ಲಿಯ ಕರಾಳತೆಯನ್ನು ಹೇಳುತ್ತಿದ್ದಾರೆ. ತಾಲಿಬಾನಿಗಳ ಕ್ರೌರ್ಯ ಹೇಳುತ್ತಿರುವ ಜನರು ಇನ್ನೂ ಆತಂಕದಲ್ಲಿರೋದು ಕಾಣಿಸುತ್ತಿದೆ. ಮಾಧ್ಯಮಗಳ ಮುಂದೆ ಬಂದ ಓರ್ವ ಮಹಿಳೆ, ಅಲ್ಲಿ ನಮ್ಮ ಮೇಲಿನ ದೌರ್ಜನ್ಯ ಯಾರೂ ಪ್ರಶ್ನೆ ಮಾಡದ ಪರಿಸ್ಥಿತಿ ನಿರ್ಮಾಣವಾಗಿದೆ. ನಮ್ಮ ಸಂಪೂರ್ಣ ಸ್ವಾತಂತ್ರದ ಹಕ್ಕನ್ನು ಕಿತ್ತುಕೊಳ್ಳಲಾಗಿದೆ ಎಂದು ಕಣ್ಣೀರಿಟ್ಟರು.

  • ಕಾಬೂಲ್ ವಶ – ತಾಲಿಬಾನ್‍ಗೆ ಶರಣಾದ ಅಫ್ಘನ್ ಸರ್ಕಾರ

    ಕಾಬೂಲ್ ವಶ – ತಾಲಿಬಾನ್‍ಗೆ ಶರಣಾದ ಅಫ್ಘನ್ ಸರ್ಕಾರ

    ಕಾಬೂಲ್: ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಅಟ್ಟಹಾಸ ಮುಂದುವರೆದಿದೆ. ರಾಜಧಾನಿ ಕಾಬೂಲ್‍ಗೆ ತಾಲಿಬಾನಿಗಳು ಪ್ರವೇಶ ಪಡೆದು ಇಂದು ಸಂಪೂರ್ಣ ನಗರವನ್ನು ವಶಪಡಿಸಿಕೊಂಡಿದ್ದಾರೆ. ಈ ಮೂಲಕ ಅಫ್ಘನ್ ಸರ್ಕಾರ ತಾಲಿಬಾನ್ ಶರಣಾಗಿದೆ.

    ಕೆಲದಿನಗಳಿಂದ ತಾಲಿಬಾನ್ ಹಾಗೂ ಅಫ್ಘನ್ ಸರ್ಕಾರಗಳ ನಡುವೆ ಕಾದಾಟ ನಡೆಯುತ್ತಿತ್ತು. ಇದಲ್ಲದೆ ಅಘ್ಫಾನಿಸ್ತಾನದ ಎರಡನೇ ಅತ್ಯಂತ ದೊಡ್ಡ ನಗರ ಕಂದಹಾರ್ ಹಾಗೂ ಲಷ್ಕರ್ ಗಹ್‍ನ್ನು ತಾಲಿಬಾನಿಗಳು ವಶಪಡಿಸಿಕೊಂಡಿದ್ದರು. ಇದೀಗ ತಾಲಿಬಾನಿಗಳು ರಾಜಧಾನಿ ಕಾಬೂಲ್‍ಗೆ ಪ್ರವೇಶಪಡೆದು ಆಫ್ಘನ್ ಸರ್ಕಾರದಿಂದ ಅಧಿಕಾರ ಹಸ್ತಾಂತರ ಮಾಡಿಕೊಂಡಿದೆ. ಶಾಂತಿಯುತವಾಗಿ ಅಫ್ಘಾನಿಸ್ತಾನದ ಅಧ್ಯಕ್ಷ ಅಶ್ರಫ್ ಘನಿ, ತಾಲಿಬಾನಿಗಳಿಗೆ ಅಧಿಕಾರ ಹಸ್ತಾಂತರಕ್ಕೆ ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಇದನ್ನೂ ಓದಿ: ತಾಲಿಬಾನಿಗಳ ಅಟ್ಟಹಾಸ, ನರಕವಾದ ಅಫ್ಘಾನಿಸ್ತಾನ- ರಾಜ್ಯಪಾಲ, ಸರ್ಕಾರಿ ಅಧಿಕಾರಿಗಳು ಶರಣಾಗತಿ

    ಸಂಪೂರ್ಣ ಆಫ್ಘಾನಿಸ್ತಾನವನ್ನು 7 ದಿನಗಳಲ್ಲಿ ವಶಪಡಿಸಿಕೊಳ್ಳುತ್ತೇವೆ ಎಂದು ತಾಲಿಬಾನಿಗಳು ಘೋಷಿಸಿದ ಬೆನ್ನಲ್ಲೇ ದಾಳಿ ತೀವ್ರಗೊಂಡು ಕಾಬೂಲ್‍ನ್ನು ತಮ್ಮ ತೆಕ್ಕೆಗೆ ಹಾಕಿಕೊಂಡಿದ್ದಾರೆ. ಕಾಬೂಲ್‍ಗೆ ತಾಲಿಬಾನಿಗಳು ಪ್ರವೇಶಿಸುತ್ತಿದ್ದಂತೆ ಅಮೆರಿಕ ತನ್ನ ರಾಜತಾಂತ್ರಿಕ ಅಧಿಕಾರಿಗಳನ್ನು ಏರ್‍ಲಿಫ್ಟ್ ಮೂಲಕ ಸ್ಥಾಳಾಂತರಿಸಿತು. ಅಫ್ಘನ್ ಭದ್ರತಾ ಪಡೆಗಳು ಮತ್ತು ಅಂತಾರಾಷ್ಟ್ರೀಯ ಮಿತ್ರಪಡೆಯ ಸೈನಿಕರು ತಾಲಿಬಾನಿಗಳ ವಿರುದ್ಧ ಹೋರಾಡಿ ರಾಜಧಾನಿಯನ್ನು ಉಳಿಸಿಕೊಳ್ಳಲು ಶತಪ್ರಯತ್ನ ನಡೆಸಿದರು ಅದು ವಿಫಲಗೊಂಡಿದೆ.

    90 ದಿನಗಳಲ್ಲಿ ಕಾಬೂಲ್ ತಾಲಿಬಾನ್ ವಶವಾಗಲಿದೆ ಎಂದು ಅಮೆರಿಕದ ಗುಪ್ತಚಾರ ಇಲಾಖೆ ಕಳೆದ ವಾರ ಭವಿಷ್ಯ ನುಡಿದಿತ್ತು. ಅದರಂತೆ ಇಂದು ಕಾಬೂಲ್ ಕೂಡ ತಾಲಿಬಾನ್ ವಶವಾಗಿದೆ.

  • ತಾಲಿಬಾನಿಗಳ ಅಟ್ಟಹಾಸ, ನರಕವಾದ ಅಫ್ಘಾನಿಸ್ತಾನ- ರಾಜ್ಯಪಾಲ, ಸರ್ಕಾರಿ ಅಧಿಕಾರಿಗಳು ಶರಣಾಗತಿ

    ತಾಲಿಬಾನಿಗಳ ಅಟ್ಟಹಾಸ, ನರಕವಾದ ಅಫ್ಘಾನಿಸ್ತಾನ- ರಾಜ್ಯಪಾಲ, ಸರ್ಕಾರಿ ಅಧಿಕಾರಿಗಳು ಶರಣಾಗತಿ

    – ಮನೆಗಳನ್ನು ಹೊಕ್ಕು ಮಹಿಳೆಯರ ಮೇಲೆ ಅತ್ಯಾಚಾರ ಎಸಗಿ ವಿಕೃತಿ
    – ಅಫ್ಘಾನಿಸ್ತಾನದ ಮೂರನೇ ಎರಡರಷ್ಟು ಭಾಗ ತಾಲಿಬಾನಿಗಳ ವಶ

    ಕಾಬುಲ್: ತಾಲಿಬಾನಿಗಳ ಅಟ್ಟಹಾಸದಿಂದಾಗಿ ಅಫ್ಘಾನಿಸ್ತಾನದಲ್ಲಿ ರಕ್ಕಸದೃಶ್ಯ ವಾತಾವರಣ ನಿರ್ಮಾಣವಾಗಿದ್ದು, 12 ರಿಂದ 45 ವರ್ಷ ಮೇಲ್ಪಟ್ಟ ಮಹಿಳೆಯರನ್ನು ಬಲವಂತವಾಗಿ ವಿವಾಹವಾಗಿ ಲೈಂಗಿಕ ಕ್ರಿಯೆಗೆ ಬಳಸಿಕೊಳ್ಳುತ್ತಿದ್ದಾರೆ. ಅಲ್ಲದೆ ಈಗಾಗಲೇ ಅಫ್ಘಾನಿಸ್ತಾನದ ಎರಡನೇ ಅತ್ಯಂತ ದೊಡ್ಡ ನಗರ ಕಂದಹಾರ್ ಹಾಗೂ ಲಷ್ಕರ್ ಗಹ್‍ನ್ನು ವಶಪಡಿಸಿಕೊಂಡಿದ್ದಾರೆ. ಅಂದರೆ ಅಫ್ಘಾನಿಸ್ತಾನದ ಮೂರನೇ ಎರಡರಷ್ಟು ಭಾಗ ತಾಲಿಬಾನಿಗಳ ಹಿಡಿತದಲ್ಲಿದೆ. ಇಲ್ಲಿನ ಜನ ಪ್ರಾಣ ರಕ್ಷಣೆಗಾಗಿ ಪರಿತಪಿಸುತ್ತಿದ್ದಾರೆ.

    ಉಗ್ರರ ದಾಳಿಯಿಂದಾಗಿ ಅಫ್ಘಾನಿಸ್ತಾನದ ಹೆರಾತ್‍ನಲ್ಲಿ ಸರ್ಕಾರಿ ಅಧಿಕಾರಿಗಳೇ ಶರಣಾಗಿದ್ದಾರೆ. ಹೆರಾತ್ ಪ್ರಾಂತ್ಯದ ಸರ್ಕಾರಿ ಅಧಿಕಾರಿಗಳು, ರಾಜ್ಯಪಾಲರು, ಪೊಲೀಸ್ ಮುಖ್ಯಸ್ಥರು, ಮಾಜಿ ಮುಜಾಹಿದ್ದೀನ್ ನಾಯಕ ಮೊಹಮ್ಮದ್ ಇಸ್ಮಾಯಿಲ್ ಖಾನ್, ಆಂತರಿಕ ಭದ್ರತೆಯ ಉಪಮಂತ್ರಿ ಮತ್ತು 207 ಜಾಫರ್ ಕಾಪ್ರ್ಸ್ ಕಮಾಂಡರ್ ಗಳು ತಾಲಿಬಾಗ್ ಉಗ್ರರಿಗೆ ಶರಣಾಗಿದ್ದಾರೆ.

    ನಿನ್ನೆಯಷ್ಟೇ ತಾಲಿಬಾನ್ ಉಗ್ರರು ಅಫ್ಘಾನಿಸ್ತಾನದ ಎರಡನೇ ಅತ್ಯಂತ ದೊಡ್ಡ ನಗರ ಕಂದಹಾರ್ ಹಾಗೂ ಲಷ್ಕರ್ ಗಹ್ ಅನ್ನು ವಶಕ್ಕೆ ಪಡೆದುಕೊಂಡಿದ್ದರು. ಇದರಿಂದಾಗಿ ಅಫ್ಘಾನಿಸ್ತಾನದ 34 ಪ್ರಾಂತೀಯ ರಾಜಧಾನಿಗಳ ಪೈಕಿ 12 ರಾಜಧಾನಿಗಳನ್ನು ತಾಲಿಬಾನ್ ವಶಕ್ಕೆ ಪಡೆದುಕೊಂಡಂತಾಗಿದೆ.

    ತಾಲಿಬಾನಿಗಳು ವಶಕ್ಕೆ ಪಡೆದ ಪ್ರದೇಶಗಳಲ್ಲಿ ಮನೆಗಳಿಗೆ ನುಗ್ಗಿ ಋತುಮತಿಯರಾದ ಹಾಗೂ 45 ವರ್ಷದೊಳಗಿನ ಯುವತಿಯರು ಹಾಗೂ ಮಹಿಳೆಯರನ್ನು ಎಳೆದು ತರುತ್ತಿದ್ದು, ಬಲವಂತವಾಗಿ ವಿವಾಹವಾಗಿ, ಲೈಂಗಿಕ ಸೇವಕಿಯರನ್ನಾಗಿ ಮಾಡಿಕೊಂಡಿದ್ದಾರೆ. ಉಗ್ರರ ವಶದಲ್ಲಿರುವ ಮಹಿಳೆಯರು ಪ್ರಾಣ ಉಳಿಸಿಕೊಳ್ಳಲು ಪರಿತಪಿಸುತ್ತಿದ್ದಾರೆ, ಅಂಗಲಾಚುತ್ತಿದ್ದಾರೆ ಎಂದು ವರದಿಯಾಗಿದೆ.

    ಈಗಾಗಲೇ ತಾಲಿಬಾನಿಗಳು ಮಹಿಳೆಯರ ಮೇಲೆ ಇಸ್ಲಾಮಿಕ್ ಕಠಿಣ ನಿರ್ಬಂಧಗಳನ್ನು ಹೇರಲು ಆರಂಭಿಸಿದ್ದು, ಹಿಂಸಾಚಾರ ನಡೆಸಿ, ಮಹಿಳೆಯರನ್ನು ಕೊಲೆ ಮಾಡಿದ್ದಾರೆ. ಹಳ್ಳಿ ಹಳ್ಳಿಗಳಿಗೆ ನುಗ್ಗಿ ಪ್ರತಿ ಮನೆಯನ್ನು ತಡಕಾಡಿ ಮಹಿಳೆಯರನ್ನು ಹಾಗೂ ಅಪ್ರಾಪ್ತೆಯರನ್ನು ತಮ್ಮ ಕಾಮತೃಷೆಗೆ ಬಳಸಿಕೊಳ್ಳುತ್ತಿದ್ದಾರೆ. ಈ ಮೂಲಕ ಅಫ್ಘಾನಿಸ್ತಾನದಲ್ಲಿ ನೆತ್ತರು ಹರಿಸುತ್ತಿದ್ದಾರೆ.

    ಈ ಹಿಂದೆ ಅಮೆರಿಕ ಸರ್ಕಾರ ಆಫ್ಘಾನಿಸ್ತಾನದಲ್ಲಿನ ತನ್ನ ಕೊನೆಯ ಸೈನಿಕ ತುಕಡಿಯನ್ನು ಹಿಂದಕ್ಕೆ ಕರೆಸಿಕೊಂಡ ಬೆನ್ನಲ್ಲೇ ತಾಲಿಬಾನಿಗಳು ಮತ್ತೆ ಅಟ್ಟಹಾಸ ಆರಂಭಿಸಿ, ಕೇವಲ 15 ದಿನಗಳ ಅಂತರದಲ್ಲಿ ತಾವು ಈ ಹಿಂದೆ ಹಿಡಿತ ಕಳೆದುಕೊಂಡಿದ್ದ ಪ್ರದೇಶಗಳ ಪೈಕಿ ಶೇ.50ಕ್ಕೂ ಹೆಚ್ಚು ಪ್ರದೇಶಗಳನ್ನು ವಶಕ್ಕೆ ತೆಗೆದುಕೊಂಡಿದೆ. ಈ ಮೂಲಕ ತಾಲಿಬಾನಿಗಳು ಅಟ್ಟಹಾಸ ಮೆರೆಯುತ್ತಿದ್ದಾರೆ.