Tag: AFSPA

  • ಮಣಿಪುರದಲ್ಲಿ ಮತ್ತೆ ಆಫ್ಸ್ಪಾ ಜಾರಿ – ಈ ಕಾಯ್ದೆಯ ವಿಶೇಷತೆ ಏನು?

    ಮಣಿಪುರದಲ್ಲಿ ಮತ್ತೆ ಆಫ್ಸ್ಪಾ ಜಾರಿ – ಈ ಕಾಯ್ದೆಯ ವಿಶೇಷತೆ ಏನು?

    ಇಂಫಾಲ: ಮತ್ತೆ ಹಿಂಸಾಚಾರ ಆರಂಭವಾಗಿರುವ ನಡುವೆಯೇ ಮಣಿಪುರದಲ್ಲಿ (Manipura) ಆಫ್ಸ್ಪಾ (ಸಶಸ್ತ್ರ ಪಡೆಗಳ ವಿಶೇಷಾಧಿಕಾರ) ಕಾಯ್ದೆಯನ್ನು ಇನ್ನೂ 6 ತಿಂಗಳ ಕಾಲ ವಿಸ್ತರಿಸಲಾಗಿದೆ.

    ಶಾಂತಿ ಸಾಪನೆಗೆ ನಿಯೋಜಿಸಲಾಗಿರುವ ಆಫ್ಸ್ಫಾ (AFSPA) ಅ.1ರಿಂದ ಜಾರಿಯಾಗುವಂತೆ ರಾಜ್ಯಪಾಲರು ನಿರ್ಧಾರ ಕೈಗೊಂಡಿದ್ದಾರೆ. ಮೈತೆಯೇ (Meitei) ಸಮುದಾಯದ ಇಬ್ಬರು ವಿದ್ಯಾರ್ಥಿಗಳಿಬ್ಬರ ಮೃತದೇಹ ಫೋಟೋ ವೈರಲ್ ಆದ ಬಳಿಕ ರಾಜ್ಯ ಮತ್ತೆ ಉದ್ವಿಗ್ನಗೊಂಡಿದೆ.

    ಸೆ.26 ರಂದು ಸಾವಿರಾರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ ಬೆನ್ನಲ್ಲೇ ಮೊಬೈಲ್‌ ಇಂಟರ್‌ನೆಟ್‌ ಸೇವೆಯನ್ನು ಕೆಲ ದಿನಗಳ ಕಾಲ ಸ್ಥಗಿತಗೊಳಿಸಲಾಗಿದೆ.  ಇದನ್ನೂ ಓದಿ: ನನಗೆ ಈಗಲೂ ಸ್ವಂತ ಮನೆ ಇಲ್ಲ: ಪ್ರಧಾನಿ ಮೋದಿ

    ಮಣಿಪುರದಲ್ಲಿ ಹಿಂಸಾಚಾರ ತೀವ್ರಗೊಂಡಿದ್ದಾಗ ಜುಲೈ 6 ರಂದು ಇಬ್ಬರು ವಿದ್ಯಾರ್ಥಿಗಳು ನಾಪತ್ತೆಯಾಗಿದ್ದರು. ಕುಕಿ (Kuki) ಸಮುದಾಯವರು ಈ ಕೃತ್ಯ ಎಸಗಿದ್ದಾರೆ ಎಂದು ಆರೋಪಿಸಿ ಮೈತೆಯೀ ಸಮುದಾಯ ಆರೋಪಿಸಿದೆ.

    ಸಶಸ್ತ್ರ ಪಡೆಗಳ ವಿಶೇಷ ಕಾಯ್ದೆ 1958 ಏನು ಹೇಳುತ್ತದೆ?
    ಕಾನೂನು ಬಾಹಿರ ವ್ಯಕ್ತಿಗಳ ಮೇಲೆ ಗುಂಡು ಹಾರಿಸಬಹುದು. ಅನುಮಾನಿತ ವ್ಯಕ್ತಿಗಳ ಮೇಲೆ ವಾರಂಟ್ ಇಲ್ಲದೇ ಬಂಧಿಸಬಹುದು. ಯಾವುದೇ ವಾಹನವನ್ನು ತಡೆಗಟ್ಟಿ ತಪಾಸಣೆ ಮಾಡಬಹುದು. ಯೋಧರು ಯಾವುದೇ ಕಾರಣಕ್ಕೂ ನ್ಯಾಯಾಂಗದ ವ್ಯಾಪ್ತಿಗೆ ಬರುವುದಿಲ್ಲ. ಹೀಗಾಗಿ ಅವರ ಮೇಲೆ ಕೇಸ್ ದಾಖಲಿಸುವ ಹಾಗೂ ವಿಚಾರಣೆ ನಡೆಸಲು ಅವಕಾಶವೇ ಇಲ್ಲ.

    ಕಾಯ್ದೆ ಯಾವಾಗ ಜಾರಿಯಾಯಿತು?
    ಸಶಸ್ತ್ರ ಪಡೆಗಳ ಕಾಯ್ದೆಯನ್ನು ಮೊದಲು ಭಾರತದಲ್ಲಿ ಜಾರಿಗೆ ತಂದವರು ಬ್ರಿಟಿಷರು. 1942ರ ಕ್ವಿಟ್ ಇಂಡಿಯಾ ಚಳುವಳಿ ಸಂದರ್ಭದಲ್ಲಿ ದೇಶದ ಸ್ವಾತಂತ್ರ‍್ಯ ಹೋರಾಟಗಾರರ ವಿರುದ್ಧ ಈ ಕಾಯ್ದೆಯನ್ನು ಬಳಸಿ ಅವರನ್ನು ನಿಯಂತ್ರಿಸಲಾಗುತ್ತಿತ್ತು.

     
    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನಾಗಾಲ್ಯಾಂಡ್‌ನ 9 ಜಿಲ್ಲೆಗಳಲ್ಲಿ AFSPA ಜಾರಿ

    ನಾಗಾಲ್ಯಾಂಡ್‌ನ 9 ಜಿಲ್ಲೆಗಳಲ್ಲಿ AFSPA ಜಾರಿ

    ನವದೆಹಲಿ: ನಾಗಾಲ್ಯಾಂಡ್‌ನ (Nagaland) 9 ಜಿಲ್ಲೆಗಳಲ್ಲಿ ಸಶಸ್ತ್ರ ಪಡೆಗಳ (ವಿಶೇಷ ಅಧಿಕಾರ) ಕಾಯ್ದೆಯನ್ನು ಇಂದಿನಿಂದ ಮುಂದಿನ ವರ್ಷದ ಮಾರ್ಚ್ 30ರವರೆಗೆ ವಿಸ್ತರಿಸಿದೆ ಎಂದು ಗೃಹ ಸಚಿವಾಲಯ (Central government) ಅಧಿಸೂಚನೆ ಹೊರಡಿಸಿದೆ.

    ನಾಗಾಲ್ಯಾಂಡ್‌ನ ದಿಮಾಪುರ್, ನಿಯುಲ್ಯಾಂಡ್, ಚುಮೌಕೆಡಿಮಾ, ಮೊನ್, ಕಿಫಿರೆ, ನೋಕ್ಲಾಕ್, ಫೆಕ್, ಪೆರೆನ್ ಮತ್ತು ಝುನ್ಹೆಬೊಟೊ ಜಿಲ್ಲೆಗಳು AFSPA ಕಾಯ್ದೆಯಡಿಯಲ್ಲಿ ಬರುತ್ತವೆ. ನಾಗಾಲ್ಯಾಂಡ್‌ನಲ್ಲಿನ ಕಾನೂನು ಮತ್ತು ಸುವ್ಯವಸ್ಥೆಯನ್ನು ಮತ್ತಷ್ಟು ಪರಿಶೀಲಿಸಿದ ನಂತರ ಕೇಂದ್ರವು ಈ ಕ್ರಮ ಕೈಗೊಂಡಿದೆ.

    ಇದಕ್ಕೂ ಮೊದಲು ಕೇಂದ್ರ ಸರ್ಕಾರವು ಸಶಸ್ತ್ರ ಪಡೆಗಳ (ವಿಶೇಷ ಅಧಿಕಾರಗಳು) ಕಾಯ್ದೆಯನ್ನು ಏಪ್ರಿಲ್ 1ರಿಂದ ಸೆಪ್ಟೆಂಬರ್ 30, 2022 ರವರೆಗೆ ನಾಗಾಲ್ಯಾಂಡ್‌ನ ಇತರ ನಾಲ್ಕು ಜಿಲ್ಲೆಗಳಲ್ಲಿ ಘೋಷಿಸಿತ್ತು. ಇದನ್ನೂ ಓದಿ: ಹೈಕೋರ್ಟ್ ವಕೀಲ ಆತ್ಮಹತ್ಯೆ- ಕೋರ್ಟ್ ಕೊಠಡಿ ಧ್ವಂಸ

    ಏನಿದು AFSPA ಕಾಯ್ದೆ?: ಭದ್ರತೆಗೆ ಸಮಸ್ಯೆಯಾಗುವ ಪ್ರದೇಶದಲ್ಲಿ ಐದು ಅಥವಾ ಅದಕ್ಕಿಂತ ಹೆಚ್ಚು ಜನರು ಸೇರುವುದನ್ನು ನಿಷೇಧಿಸುವ ಅಧಿಕಾರವನ್ನು ನೀಡುತ್ತದೆ. ಇದು ಭದ್ರತಾ ಸಿಬ್ಬಂದಿಗೆ ಬಲವನ್ನು ಬಳಸಲು ಮತ್ತು ಕಾನೂನು ಮತ್ತು ಸುವ್ಯವಸ್ಥೆಯ ಉಲ್ಲಂಘನೆಯ ಸಂದರ್ಭದಲ್ಲಿ ಸರಿಯಾದ ಎಚ್ಚರಿಕೆಯ ನಂತರ ಗುಂಡಿನ ದಾಳಿ ನಡೆಸಲು ಸಹ ಅನುಮತಿಸುತ್ತದೆ.

    ಇದರ ಅನ್ವಯ ಕಾನೂನು ಮತ್ತು ಸುವ್ಯವಸ್ಥೆಗೆ ವಿರುದ್ಧವಾಗಿ ವರ್ತಿಸುವ ಯಾರೊಬ್ಬರ ಮೇಲೆ ಗುಂಡು ಹಾರಿಸುವುದು, ವಾರಂಟ್ ಇಲ್ಲದೆ ಯಾರನ್ನಾದರೂ ಬಂಧಿಸುವುದು, ಯಾವುದೇ ವಾಹನ ನಿಲ್ಲಿಸುವುದು ಮತ್ತು ಹುಡುಕುವುದು ಮತ್ತು ಐದು ಅಥವಾ ಅದಕ್ಕಿಂತ ಹೆಚ್ಚು ಜನರ ಸಭೆಯನ್ನು ನಿಷೇಧಿಸುವುದು ಸೇರಿದಂತೆ ಕೆಲವು ಅಧಿಕಾರಗಳನ್ನು ಸಶಸ್ತ್ರ ಪಡೆಗಳಿಗೆ ನೀಡಲಾಗುತ್ತದೆ. AFSPA ಅಡಿಯಲ್ಲಿ ನಾಗರಿಕರು ಬಂದೂಕುಗಳನ್ನು ಹೊಂದುವುದನ್ನು ಸಹ ನಿಷೇಧಿಸಲಾಗಿದೆ. ಇದನ್ನೂ ಓದಿ: ಬೆಂಗಳೂರಿನ ಐದು ರೈಲು ನಿಲ್ದಾಣಗಳಲ್ಲಿ ಪ್ಲಾಟ್‌ಫಾರ್ಮ್ ಟಿಕೆಟ್‌ ದರ ಏರಿಕೆ

    Live Tv
    [brid partner=56869869 player=32851 video=960834 autoplay=true]

  • ಏನಿದು ಸಶಸ್ತ್ರ ಪಡೆಗಳ ವಿಶೇಷ ಕಾಯ್ದೆ? ಸೈನಿಕರಿಗೆ ಇರೋ ಅಧಿಕಾರ ಏನು? ವಿರೋಧ ಯಾಕೆ?

    ಏನಿದು ಸಶಸ್ತ್ರ ಪಡೆಗಳ ವಿಶೇಷ ಕಾಯ್ದೆ? ಸೈನಿಕರಿಗೆ ಇರೋ ಅಧಿಕಾರ ಏನು? ವಿರೋಧ ಯಾಕೆ?

    ಗುರುವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ನಾಗಾಲ್ಯಾಂಡ್, ಅಸ್ಸಾಂ ಹಾಗೂ ಮಣಿಪುರದಲ್ಲಿ ಸಶಸ್ತ್ರ ಪಡೆಗಳ ವಿಶೇಷ ಅಧಿಕಾರ ಕಾಯ್ದೆ(ಎಎಫ್‌ಎಸ್‌ಪಿಎ/ಆಫ್ಸಾ) ಅಡಿಯಲ್ಲಿದ್ದ ಪ್ರದೇಶಗಳನ್ನು ಕಡಿತಗೊಳಿಸುವುದಾಗಿ ಘೋಷಿಸಿದ್ದಾರೆ.

    ಈ ಹಿಂದಿನಿಂದಲೂ ಈ ಕಾಯ್ದೆಗೆ ಆ ರಾಜ್ಯದ ಜನತೆ ಭಾರೀ ವಿರೋಧ ವ್ಯಕ್ತಪಡಿಸಿದ್ದರು. ಈಗ ಕೇಂದ್ರ ಸರ್ಕಾರ ಹಂತ ಹಂತವಾಗಿ ವ್ಯಾಪ್ತಿಯನ್ನು ಕಡಿತಗೊಳಿಸಲು ಮುಂದಾಗಿದೆ. ಹೀಗಾಗಿ ಇಲ್ಲಿ ಈ ಕಾಯ್ದೆ ಏಕೆ ಪ್ರಾರಂಭವಾಯಿತು? ಯಾವಾಗ ಪ್ರಾರಂಭವಾಯಿತು? ಹಾಗೂ ಈ ಕಾಯ್ದೆಯನ್ನು ಇದೀಗ ಕಡಿತಗೊಳಿಸಲು ಕಾರಣ ಏನು ಎಂಬೆಲ್ಲ ಮಾಹಿತಿಯನ್ನು ನೀಡಲಾಗಿದೆ.

    ಸಶಸ್ತ್ರ ಪಡೆಗಳ ವಿಶೇಷ ಕಾಯ್ದೆ 1958 ಏನು ಹೇಳುತ್ತದೆ?
    * ಕಾನೂನು ಬಾಹಿರ ವ್ಯಕ್ತಿಗಳ ಮೇಲೆ ಗುಂಡು ಹಾರಿಸಬಹುದು.
    * ಅನುಮಾನಿತ ವ್ಯಕ್ತಿಗಳ ಮೇಲೆ ವಾರಂಟ್ ಇಲ್ಲದೇ ಬಂಧಿಸಬಹುದು.
    * ಯಾವುದೇ ವಾಹನವನ್ನು ತಡೆಗಟ್ಟಿ ತಪಾಸಣೆ ಮಾಡಬಹುದು.
    * ಯೋಧರು ಯಾವುದೇ ಕಾರಣಕ್ಕೂ ನ್ಯಾಯಾಂಗದ ವ್ಯಾಪ್ತಿಗೆ ಬರುವುದಿಲ್ಲ. ಹೀಗಾಗಿ ಅವರ ಮೇಲೆ ಕೇಸ್ ದಾಖಲಿಸುವ ಹಾಗೂ ವಿಚಾರಣೆ ನಡೆಸಲು ಅವಕಾಶವೇ ಇಲ್ಲ. ಇದನ್ನೂ ಓದಿ: ನಾಗಾಲ್ಯಾಂಡ್, ಅಸ್ಸಾಂ, ಮಣಿಪುರದಲ್ಲಿ ಆಫ್ಸಾ ವ್ಯಾಪ್ತಿಯ ಪ್ರದೇಶಗಳ ಕಡಿತ: ಅಮಿತ್ ಶಾ

    ಭಾರೀ ಪ್ರತಿಭಟನೆ:
    ಈ ಘಟನೆಯ ಬಳಿಕ ಸಶಸ್ತ್ರ ಪಡೆಗಳ ಕಾಯ್ದೆಯನ್ನು ಸೈನಿಕರು ಉಲ್ಲಂಘಿಸುತ್ತಿರುವುದರ ವಿರುದ್ಧವಾಗಿ ಈಶಾನ್ಯ ರಾಜ್ಯಗಳಲ್ಲಿ ಪ್ರತಿಭಟನೆ ನಡೆಯಿತು. ಮಹಿಳೆಯರು ಅಸ್ಸಾಂ ರೈಫಲ್ಸ್ನ ಪ್ರಧಾನ ಕಚೇರಿಯ ಮುಂಭಾಗದಲ್ಲಿ ಸಂಪೂರ್ಣ ನಗ್ನರಾಗಿ ನಮ್ಮನ್ನು ಅತ್ಯಾಚಾರಕ್ಕೆ ಬಳಸಿಕೊಳ್ಳಿ ಎಂದು ಅಬ್ಬರಿಸಿ ಪ್ರತಿಭಟನೆ ನಡೆಸಿದ್ದರು.

    ಈ ಪ್ರತಿಭಟನೆಯ ಬಳಿಕ ಎಚ್ಚೆತ್ತ ಆಗಿನ ಪ್ರಧಾನಿ ಮನಮೋಹನ್ ಸಿಂಗ್ ಮಣಿಪುರಕ್ಕೆ ಭೇಟಿ ನೀಡಿದ್ದರು. ಮಣಿಪುರ ಸರ್ಕಾರ ಘಟನೆ ಬಗ್ಗೆ ತನಿಖೆ ನಡೆಸಲು ಉಪೇಂದ್ರ ಆಯೋಗವನ್ನು ರಚಿಸುತ್ತದೆ. ಸೇನೆ ಆಯೋಗಕ್ಕೆ ಯಾವುದೇ ಸಹಕಾರ ನೀಡುವುದಿಲ್ಲ. ಕಾಯ್ದೆ ಹೇಳುವಂತೆ ಸೈನಿಕರ ವಿಚಾರಣೆ ನಡೆಸುವ ಅಧಿಕಾರ ಆಯೋಗಕ್ಕೆ ಮತ್ತು ನ್ಯಾಯಾಂಗಕ್ಕೆ ಇಲ್ಲವಾದರಿಂದ ಉಪೇಂದ್ರ ಆಯೋಗಕ್ಕೂ ಹಚ್ಚಿನ ತನಿಖೆ ನಡೆಸಲು ಸಾಧ್ಯವಾಗಿರಲಿಲ್ಲ. ಉಪೇಂದ್ರ ಆಯೋಗ ತನಿಖೆ ತಡೆಸಿ ವರದಿ ನೀಡಿದ್ದರೂ ಮಣಿಪುರ ಸರ್ಕಾರ ಈ ವರದಿ ಬಹಿರಂಗಪಡಿಸಿರಲಿಲ್ಲ. ಇದನ್ನೂ ಓದಿ: ಯಾರೀ ಶೆಹಬಾಜ್‌ ಷರೀಫ್‌- ಇವರೇ ಪಾಕಿಸ್ತಾನದ ಮುಂದಿನ ಪ್ರಧಾನಿ?

    ಕಾಯ್ದೆ ಎಲ್ಲಿ ಜಾರಿಯಲ್ಲಿದೆ?
    ಈಶಾನ್ಯ ಭಾರತದ ಏಳು ರಾಜ್ಯಗಳಲ್ಲಿ ಈ ಕಾಯ್ದೆ ಜಾರಿಯಲ್ಲಿದೆ. ಅಸ್ಸಾಂ, ಮಣಿಪುರ, ಮೇಘಾಲಯ, ನಾಗಾಲ್ಯಾಂಡ್, ಅರುಣಾಚಲ ಪ್ರದೇಶ, ತ್ರಿಪುರ, ಮಿಜೋರಾಂ ಇವೇ 7 ರಾಜ್ಯಗಳಲ್ಲಿ ಈ ಕಾಯ್ದೆ ಜಾರಿಯಲ್ಲಿದೆ.

    ಭಾರತದಲ್ಲಿ ಈ ಕಾಯ್ದೆ ಯಾವಾಗ ಜಾರಿಯಾಯಿತು?
    ಸಶಸ್ತ್ರ ಪಡೆಗಳ ಕಾಯ್ದೆಯನ್ನು ಮೊದಲು ಭಾರತದಲ್ಲಿ ಜಾರಿಗೆ ತಂದವರು ಬ್ರಿಟಿಷರು. 1942ರ ಕ್ವಿಟ್ ಇಂಡಿಯಾ ಚಳುವಳಿ ಸಂದರ್ಭದಲ್ಲಿ ದೇಶದ ಸ್ವಾತಂತ್ರ‍್ಯ ಹೋರಾಟಗಾರರ ವಿರುದ್ಧ ಈ ಕಾಯ್ದೆಯನ್ನು ಬಳಸಿ ಅವರನ್ನು ನಿಯಂತ್ರಿಸಲಾಗುತ್ತಿತ್ತು.

    ಈ ಕಾಯ್ದೆಯನ್ನು ಜಾರಿಗೊಳಿಸಿದ್ದು ಯಾಕೆ?
    ಭಾರತಕ್ಕೆ ಸ್ವಾಂತಂತ್ರ‍್ಯ ಸಿಗುವ ಮೊದಲೇ ಈಗಿನ ಮಣಿಪುರ, ಅಸ್ಸಾಂ ನಾಗಾಲ್ಯಾಂಡ್ ಒಳಗೊಂಡ ಪ್ರತ್ಯೇಕ ರಾಷ್ಟ್ರ ನಿರ್ಮಾಣವಾಗಬೇಕೆಂದು ನಾಗಾ ನ್ಯಾಷನಲ್ ಕೌನ್ಸಿಲ್ ಪಾರ್ಟಿಯ ಆಗ್ರಹವಾಗಿತ್ತು. 1940ರಿಂದಲೇ ಈ ಸಂಬಂಧ ಹೋರಾಟಗಳು ಆರಂಭವಾಗಿತ್ತು. ಸ್ವಾತಂತ್ರ‍್ಯಗಳಿಸಿದ ನಂತರ ಭಾರತದ ಹಲವು ಭಾಗಗಳ ನಾಯಕರು ಒಕ್ಕೂಟ ವ್ಯವಸ್ಥೆ ಸೇರಲು ವಿರೋಧ ವ್ಯಕ್ತಪಡಿಸಿದ್ದರು. ಅವುಗಳಲ್ಲಿ ನಾಗಾ ನ್ಯಾಷನಲ್ ಪಾರ್ಟಿಯೂ ಒಂದು.

    1951ರಲ್ಲಿ ನಾಗಾ ನ್ಯಾಷನಲ್ ಕೌನ್ಸಿಲ್ ಪಾರ್ಟಿ ತಮಗಾಗಿ ಈ ಸಂದರ್ಭದಲ್ಲಿ ಆ ಪಕ್ಷ ಅಲ್ಲೇ ಆಂತರಿಕ ಮತದಾನ ಮಾಡಿ ಶೇ.99 ರಷ್ಟು ಜನರು ಪ್ರತ್ಯೇಕ ರಾಷ್ಟ್ರದ ನಿರ್ಮಾಣದ ಪರವಾಗಿ ಮತ ಚಲಾಯಿಸಿದ್ದಾರೆ ಎಂದು ಕೇಂದ್ರ ಸರ್ಕಾರಕ್ಕೆ ತಿಳಿಸಿತ್ತು. ಕೇಂದ್ರ ಸರ್ಕಾರ ಇವರ ಬೇಡಿಕೆಯನ್ನು ತಿರಸ್ಕರಿಸಿತ್ತು. ಬಳಿಕ 1952ರಲ್ಲಿ ನಡೆದ ಸಾರ್ವತ್ರಿಕ ಚುನಾವಣೆಯನ್ನು ನಾಗಾ ನ್ಯಾಷನಲ್ ಪಾರ್ಟಿ ಬಹಿಷ್ಕರಿಸಿತ್ತು. ಇದನ್ನೂ ಓದಿ: ಭಯೋತ್ಪಾದನೆಯಲ್ಲಿ ತೊಡಗಲು ಮುಸ್ಲಿಂ ಯುವಕರಿಗೆ ಪ್ರೇರಣೆ- 5 ವರ್ಷ ಜಾಕಿರ್‌ ನಾಯಕ್‌ ಸಂಸ್ಥೆ ಬ್ಯಾನ್‌

    1956ರಲ್ಲಿ ನಾಗಾ ನ್ಯಾಷನಲ್ ಪಾರ್ಟಿ ‘ಪಿಪಲ್ಸ್ ರಿಪಬ್ಲಿಕ್ ಆಫ್ ಫ್ರೀ ನಾಗಾಲ್ಯಾಂಡ್’ ಹೆಸರಿನಲ್ಲಿ ಪ್ರರ್ಯಾಯ ಸರ್ಕಾರದ ರಚನೆ ಮಾಡಿತು. ಅಲ್ಲಿದ್ದ ರಾಜ್ಯ ಸರ್ಕಾರಕ್ಕೆ ಕೇಂದ್ರದ ಸಹಾಯ ಪಡೆಯದೇ ದಾರಿ ಇರಲಿಲ್ಲ. ಹೀಗಾಗಿ ಕೇಂದ್ರ ಸರ್ಕಾರ ಈಶಾನ್ಯ ಭಾಗದಲ್ಲಿ ಪ್ರತ್ಯೇಕ ರಾಷ್ಟ್ರವಾಗಬೇಕೆಂದು ಹೋರಾಟ ನಡೆಸುತ್ತಿರುವವರನ್ನು ನಿಯಂತ್ರಿಸಲು ಬ್ರಿಟಿಷರು ತಂದಿದ್ದ ಸಶಸ್ತ್ರ ಪಡೆಗಳ ಕಾಯ್ದೆಯನ್ನು ಮುಂದಿಟ್ಟುಕೊಂಡು 1958ರಲ್ಲಿ ಸಶಸ್ತ್ರ ಪಡೆಗಳ ವಿಶೇಷಾಧಿಕಾರದ ಬಗ್ಗೆ ಕಾನೂನು ರಚಿಸಿತು. ಈ ಕಾಯ್ದೆಗೆ 1958 ಮೇ 22ರಂದು ರಾಷ್ಟ್ರಪತಿ ಬಾಬು ರಾಜೇಂದ್ರ ಪ್ರಸಾದ್ ಸಹಿ ಹಾಕಿದರು.

    ಇರೋಮ್ ಶರ್ಮಿಳಾ ಹೋರಾಟ:
    ಈ ಕಾಯ್ದೆಯನ್ನು ಸರ್ಕಾರ ತೆಗೆಯಬೇಕೆಂದು ಇರೋಮ್ ಶರ್ಮಿಳಾ ಭಾರೀ ಹೋರಾಟ ನಡೆಸಿದ್ದರು. 2000 ನವೆಂಬರ್ 2ರಂದು ಮಣಿಪುರ ಇಂಫಾಲದಲ್ಲಿ ಮಲೋಮ್ ಗ್ರಾಮದಲ್ಲಿ ಅಸ್ಸಾ ರೈಫಲ್ಸ್ನ ಯೋಧರು ಎಂಟು ವಾಹನದಲ್ಲಿ ತೆರಳುತ್ತಿದ್ದಾಗ ಉಗ್ರಗಾಮಿಗಳು ಬಾಂಬ್ ಸ್ಪೋಟಿಸಿದ್ದರು. ಯೋಧರ ಗುರಿಯಾಗಿಸಿ ಬಾಂಬ್ ಸ್ಪೋಟಿಸಿದ್ದರೂ, ಸೈನಿಕರಿಗೆ ಯಾವುದೇ ಪ್ರಾಣಾಪಾಯ ಆಗಿರಲಿಲ್ಲ. ಆದರೆ ಈ ಬಾಂಬ್ ದಾಳಿಗೆ ಸ್ಥಳೀಯ ನಿವಾಸಿಗಳೇ ಕಾರಣ ಎಂದು ತಿಳಿದು ಅಸ್ಸಾ ರೈಫಲ್ಸ್ನ ಯೋಧರು ಅಲ್ಲೇ ಬಸ್ಸಿಗಾಗಿ ನಿಂತಿದ್ದ 10 ಮಂದಿ ಪ್ರಯಾಣಿಕರನ್ನು ಗುಂಡಿಟ್ಟು ಹತ್ಯೆ ಮಾಡಿದದ್ದರು. ಇದನ್ನೂ ಓದಿ: ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿಗೆ ಅನುದಾನ ಹಂಚಿಕೆ -ಬಜೆಟ್‍ನಲ್ಲಿ ರಾಜ್ಯಕ್ಕೆ 832 ಕೋಟಿ ಮೀಸಲು

    ಹತ್ಯೆಯಾದವರಲ್ಲಿ 1998ರಲ್ಲಿ ರಾಷ್ಟ್ರೀಯ ಮಕ್ಕಳ ಶೌರ್ಯ ಪ್ರಶಸ್ತಿ ಪುರಸ್ಕಾರ ಪಡೆದ ಸಿನಾಮ್ ಚಂದ್ರಮಣಿ ಬಾಲಕಿ ಮತ್ತು 62 ವರ್ಷದ ಮಹಿಳೆಯೂ ಸೇರಿದ್ದರು. ಹಿಂದಿನಿಂದಲೂ ಸೈನಿಕರು ಈ ಕಾಯ್ದೆಯನ್ನು ದುರ್ಬಳಕೆ ಮಾಡುತ್ತಿದ್ದನ್ನು ಕೇಳಿದ್ದ ಶರ್ಮಿಳಾ ಈ ಹತ್ಯಾಕಾಂಡದ ಸುದ್ದಿಯನ್ನು ಕೇಳಿ ನೊಂದು ಹೋರಾಟಕ್ಕೆ ದುಮುಕಿದ್ದರು.

  • ನಾಗಾಲ್ಯಾಂಡ್, ಅಸ್ಸಾಂ, ಮಣಿಪುರದಲ್ಲಿ ಆಫ್ಸಾ ವ್ಯಾಪ್ತಿಯ ಪ್ರದೇಶಗಳ ಕಡಿತ: ಅಮಿತ್ ಶಾ

    ನಾಗಾಲ್ಯಾಂಡ್, ಅಸ್ಸಾಂ, ಮಣಿಪುರದಲ್ಲಿ ಆಫ್ಸಾ ವ್ಯಾಪ್ತಿಯ ಪ್ರದೇಶಗಳ ಕಡಿತ: ಅಮಿತ್ ಶಾ

    ನವದೆಹಲಿ: ದಶಕಗಳ ಗೊಂದಲದ ಬಳಿಕ ನಾಗಾಲ್ಯಾಂಡ್, ಅಸ್ಸಾಂ ಹಾಗೂ ಮಣಿಪುರದಲ್ಲಿ ಸಶಸ್ತ್ರ ಪಡೆಗಳ ವಿಶೇಷ ಅಧಿಕಾರ ಕಾಯ್ದೆ(ಎಎಫ್‌ಎಸ್‌ಪಿಎ) ಅಡಿಯಲ್ಲಿದ್ದ ಪ್ರದೇಶಗಳನ್ನು ಕಡಿತಗೊಳಿಸಲು ಕೇಂದ್ರ ನಿರ್ಧರಿಸಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

    ಶುಕ್ರವಾರದಿಂದ ನಾಗಾಲ್ಯಾಂಡ್‌ನ ಏಳು ಜಿಲ್ಲೆಗಳಲ್ಲಿ 15 ಪೊಲೀಸ್ ಠಾಣೆಗಳಿಂದ ತೊಂದರೆಗೊಳಗಾದ ಪ್ರದೇಶದ ಅಧಿಸೂಚನೆಯನ್ನು ತೆಗೆದುಹಾಕಲಾಗುವುದು ಎಂದು ಕೇಂದ್ರ ತಿಳಿಸಿದೆ. ಶುಕ್ರವಾರ ಅಸ್ಸಾಂನ 23 ಜಿಲ್ಲೆಗಳಲ್ಲಿ ಆಫ್ಸಾ ವ್ಯಾಪ್ತಿಯನ್ನು ಸಂಪೂರ್ಣವಾಗಿ ತೆಗೆದುಹಾಕಲಾಗುತ್ತದೆ ಹಾಗೂ ಒಂದು ಜಿಲ್ಲೆಯಲ್ಲಿ ಭಾಗಶಃ ತೆಗೆದುಹಾಕಲಾಗುತ್ತದೆ. ಮಣಿಪುರದಲ್ಲಿ ಆರು ಜಿಲ್ಲೆಗಳ 15 ಪೊಲೀಸ್ ಠಾಣೆ ಪ್ರದೇಶಗಳನ್ನು ತೊಂದರೆಗೊಳಗಾದ ಪ್ರದೇಶದ ಅಧಿಸೂಚನೆಯಿಂದ ಹೊರಗಿಡಲಾಗುತ್ತದೆ ಎಂದು ಕೇಂದ್ರ ತಿಳಿಸಿದೆ. ಇದನ್ನೂ ಓದಿ: ಏನಿದು ಸಶಸ್ತ್ರ ಪಡೆಗಳ ವಿಶೇಷ ಕಾಯ್ದೆ? ಸೈನಿಕರಿಗೆ ಇರೋ ಅಧಿಕಾರ ಏನು? ವಿರೋಧ ಯಾಕೆ? 

    nbsp;

    2014 ಕ್ಕೆ ಹೋಲಿಸಿದರೆ, 2021ರಲ್ಲಿ ಭಯೋತ್ಪಾದನಾ ಘಟನೆಗಳು ಶೇ.74 ರಷ್ಟು ಕಡಿಮೆಯಾಗಿದೆ. ಈ ಅವಧಿಯಲ್ಲಿ ಭದ್ರತಾ ಸಿಬ್ಬಂದಿ ಹಾಗೂ ನಾಗರಿಕರ ಸಾವುಗಳು ಕ್ರಮವಾಗಿ ಶೇ.60 ಹಾಗೂ ಶೇ.84 ರಷ್ಟು ಕಡಿಮೆಯಾಗಿದೆ ಎಂದು ತಿಳಿಸಿದೆ. ಇದನ್ನೂ ಓದಿ: ಭಯೋತ್ಪಾದನೆಯಲ್ಲಿ ತೊಡಗಲು ಮುಸ್ಲಿಂ ಯುವಕರಿಗೆ ಪ್ರೇರಣೆ- 5 ವರ್ಷ ಜಾಕಿರ್‌ ನಾಯಕ್‌ ಸಂಸ್ಥೆ ಬ್ಯಾನ್‌

    ಮೋದಿ ಸರ್ಕಾರ ಬಂದ ಬಳಿಕ ಹಲವು ಉಗ್ರಗಾಮಿ ಗುಂಪುಗಳು ಭಯೋತ್ಪಾದನೆಯನ್ನು ನಿಲ್ಲಿಸಿ ಶಸ್ತ್ರಾಸ್ತ್ರಗಳನ್ನು ತ್ಯಜಿಸಿವೆ. ಕಳೆದ ಕೆಲವು ವರ್ಷಗಳಲ್ಲಿ ಸುಮಾರು 7,000 ಉಗ್ರಗಾಮಿಗಳು ಶರಣಾಗಿದ್ದಾರೆ. ಅವರೆಲ್ಲರೂ ಇಂದು ಪ್ರಜಾಪ್ರಭುತ್ವದ ಭಾಗವಾಗುತ್ತಿದ್ದು, ಶಾಂತಿ ಹಾಗೂ ಅಭಿವೃದ್ಧಿಯಲ್ಲಿ ತೊಡಗಿಕೊಳ್ಳುತ್ತಿದ್ದಾರೆ ಎಂದು ಕೇಂದ್ರ ತಿಳಿಸಿದೆ.