Tag: Aghanashini river

  • ಕಲ್ಲಾಗಿ ಬದಲಾದ ಏಡಿ – ಅಘನಾಶಿನಿ ನದಿಯಲ್ಲಿ ವಿಸ್ಮಯ

    ಕಲ್ಲಾಗಿ ಬದಲಾದ ಏಡಿ – ಅಘನಾಶಿನಿ ನದಿಯಲ್ಲಿ ವಿಸ್ಮಯ

    ಕಾರವಾರ: ಕಲ್ಲಿನಲ್ಲಿ ಏಡಿ ಸಿಗೋದು ನೋಡಿರಬಹುದು. ಆದರೆ ಏಡಿಯೇ ಕಲ್ಲಾಗಿ ಸಿಕ್ಕರೆ ಇದು ಪ್ರಕೃತಿ ವಿಸ್ಮಯವಲ್ಲವೇ? ಹೌದು ಉತ್ತರ ಕನ್ನಡ (Uttara Kannada) ಜಿಲ್ಲೆಯ ಕುಮಟಾ ತಾಲೂಕಿನ ನುಸಿಕೋಟೆ ಬಳಿ ಮೀನುಗಾರರೊಬ್ಬರಿಗೆ ಕಲ್ಲಾಗಿ ರೂಪುಗೊಂಡ ಏಡಿಯ ದೇಹ ಸಿಕ್ಕಿದೆ. ಈ ಕಲ್ಲಾದ ಏಡಿ ನೂರಾರು ವರ್ಷಗಳ ಹಳೆಯ ಪಳೆಯುಳಿಕೆ ಇರಬಹುದು ಎಂದು ತಜ್ಞರು ಅಂದಾಜಿಸಿದ್ದಾರೆ.

    ಅಘನಾಶಿನಿ ನದಿಯಲ್ಲಿ (Aghanashini River) ಮೀನುಗಾರಿಕೆ ನಡೆಸುತಿದ್ದ ವೇಳೆ ಮೀನುಗಾರ ಈಶ್ವರ ಹರಿಕಂತ್ರ ಅವರಿಗೆ ಏಡಿ ಕಲ್ಲು (Crab Stone) ಸಿಕ್ಕಿದೆ. ಮೊದಲು ಇದು ಏಡಿ ಎಂದು ಕೈಯಲ್ಲಿ ಹಿಡಿದಾಗ ಸಾಮಾನ್ಯ ಏಡಿಯಂತೆ ಇರದೇ ಕಲ್ಲಿನಂತೆ ಸ್ಪರ್ಷ ಅನುಭವ ಆಗಿದೆ. ಹೀಗಾಗಿ ಈ ಏಡಿಯಲ್ಲಿ ವಿಶೇಷ ಏನೋ ಇದೆ ಎಂದು ಕಾರವಾರದ ಮೀನುಗಾರ ವಿನಾಯಕ ಹರಿಕಂತ್ರ ಎಂಬವರಿಗೆ ಅದನ್ನು ಕಳುಹಿಸಿ ಕೊಟ್ಟಿದ್ದಾರೆ. ಅವರು ಕಾರವಾರದ ಕಡಲ ಜೀವಶಾಸ್ತ್ರಜ್ಞರ ಗಮನಕ್ಕೆ ತಂದು ಹಸ್ತಾಂತರಿಸಿದ್ದಾರೆ. ಆಗಲೇ ತಿಳಿದಿದ್ದು ಈ ಏಡಿ ನದಿಯಲ್ಲಿ ನೂರಾರು ವರ್ಷಗಳು ಸವೆಸಿ ಕಲ್ಲಿನ ರೂಪ ಪಡೆದಿದೆ ಎಂದು.

    ಏಡಿ ಕಲ್ಲುಗಳು ಸಮಾನ್ಯವಾಗಿ ಬಂಡೆಕಲ್ಲುಗಳಿರುವ ಕಡಲ ತೀರದಲ್ಲಿ ಪತ್ತೆಯಾಗುತ್ತವೆ. ಆದರೆ ಸಿಹಿ ನೀರಿನ ಅಘನಾಶಿನಿ ನದಿಯಲ್ಲಿ ಕಾಣಸಿಕ್ಕಿದ್ದು ಅಪರೂಪವೆನ್ನುತ್ತಾರೆ ಕಡಲ ಜೀವಶಾಸ್ತ್ರಜ್ಞ ವಿಎನ್ ನಾಯಕ್. ಇದನ್ನೂ ಓದಿ: ಭಾರತವನ್ನು ಕಟ್ಟಲು ಯುವಜನರು ವಾರಕ್ಕೆ 70 ಗಂಟೆ ದುಡಿಯಬೇಕು: ನಾರಾಯಣ ಮೂರ್ತಿ

    ಏಡಿ ಕಲ್ಲು ಏಡಿಯ ಪಳಿಯುಳಿಕೆಯಾಗಿದೆ. ಇದು ನೂರು ವರ್ಷಗಳದ್ದು ಇರಬಹುದು. ಆದರೆ ಕಾರ್ಬನ್ ಡೇಟಿಂಗ್‌ಗೆ ಒಳಪಡಿಸದೇ, ಅದರ ನಿಖರ ಆಯಸ್ಸು ಎಷ್ಟು ಎಂದು ಹೇಳಲು ಆಗುವುದಿಲ್ಲ. ಹೀಗಾಗಿ ಕಡಲ ಜೀವಶಾಸ್ತ್ರಜ್ಞರ ಜೊತೆ ಇದೀಗ ಪುರಾತತ್ವ ಸಂಶೋಧಕರು ಸಹ ಈ ಏಡಿ ಹಿಂದೆ ಬಿದ್ದಿದ್ದು ಇದರ ನಿಜವಾದ ಆಯುಷ್ಯವನ್ನು ಹುಡುಕುವತ್ತ ಗಮನ ಹರಿಸಿದ್ದಾರೆ.


    ಒಟ್ಟಿನಲ್ಲಿ ಅಪರೂಪದ ಕಲ್ಲಾಗಿ ಪರಿವರ್ತನೆಗೊಂಡ ಏಡಿ ಪಳಯುಳಿಕೆ ಇದೀಗ ಸಂಶೋಧಕರಿಗೆ ಸಂಶೋಧನೆಯ ವಸ್ತುವಾಗಿದೆ. ಇದನ್ನೂ ಓದಿ: PublicTV Explainer: ಉಗುರಿಗೆ ಹೆದರಿದ ‘ಹೀರೋಸ್‌’; ವನ್ಯಜೀವಿ ಸಂರಕ್ಷಣಾ ಕಾಯ್ದೆ ಏನು ಹೇಳುತ್ತೆ? – ಅಪರಾಧಕ್ಕೆ ಶಿಕ್ಷೆ ಏನು?

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಶರಾವತಿ ಆಯ್ತು, ಈಗ ಬೆಂಗಳೂರಿಗೆ ಅಘನಾಶಿನಿ ನೀರು – ಸರ್ಕಾರಕ್ಕೆ ಜಯಚಂದ್ರ ಪ್ರಸ್ತಾಪ

    ಶರಾವತಿ ಆಯ್ತು, ಈಗ ಬೆಂಗಳೂರಿಗೆ ಅಘನಾಶಿನಿ ನೀರು – ಸರ್ಕಾರಕ್ಕೆ ಜಯಚಂದ್ರ ಪ್ರಸ್ತಾಪ

    ತುಮಕೂರು: ಶರಾವತಿ ನದಿ ನೀರು ಬೆಂಗಳೂರಿಗೆ ಹರಿಸುವ ಯೋಜನೆಗೆ ವಿರೋಧ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಅದೇ ಪಶ್ಚಿಮಘಟ್ಟಕ್ಕೆ ಸೇರಿದ ಅಘನಾಶಿನಿ ನದಿ ನೀರಿನ ಯೋಜನೆಯ ಪ್ರಸ್ತಾವನೆಯನ್ನು ಮಾಜಿ ಸಚಿವ ಟಿ.ಬಿ.ಜಯಚಂದ್ರ ಸರ್ಕಾರದ ಮುಂದಿಟ್ಟಿದ್ದಾರೆ.

    ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಉತ್ತರ ಕನ್ನಡದಲ್ಲಿ ಹರಿಯುವ ಅಘನಾಶಿನಿ ನದಿಯ ಸುಮಾರು 50-60 ಟಿಎಂಸಿ ನೀರನ್ನು ಬೆಂಗಳೂರಿಗೆ ಹರಿಸಬಹುದು ಎಂದು ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ಅಘನಾಶಿನಿ ನದಿಯಿಂದ ನೀರು ತರುವ ಯೋಜನೆಗೆ ಸರಿಸುಮಾರು 10-12 ಸಾವಿರ ಕೋಟಿ ರೂ. ಖರ್ಚಾಗಬಹುದು. ಈ ಯೋಜನೆ ಅನುಷ್ಠಾನಗೊಂಡರೆ ಚಿತ್ರದುರ್ಗ, ತುಮಕೂರು ಹಾಗೂ ಬೆಂಗಳೂರು ನಗರಕ್ಕೆ ಅನುಕೂಲ ಆಗಲಿದೆ ಎಂದು ಅವರು ಮಾಹಿತಿ ಹಂಚಿಕೊಂಡಿದ್ದಾರೆ.

    ಈಗಾಗಲೇ ಶರಾವತಿ ನದಿ ನೀರು ಬೆಂಗಳೂರಿಗೆ ಹರಿಸುವ ಯೋಜನೆಗೆ ಮಲೆನಾಡು ಜನರು ಹಾಗೂ ಬಿಜೆಪಿ ನಾಯಕರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಜೊತೆಗೆ ಸೋಮವಾರದಂದು ಸ್ವತಃ ಕಾಂಗ್ರೆಸ್ ಶಾಸಕ ಬಿ.ಸಿ ಪಾಟೀಲ್ ಕೂಡ ಈ ಯೋಜನೆಯನ್ನು ವಿರೋಧಿಸಿ, ಬೆಂಗಳೂರು ಬೆಳೆಯುವುದನ್ನ ನಿಲ್ಲಿಸಿ, ಉತ್ತರ ಕರ್ನಾಟಕವನ್ನು ಬೆಳೆಸಿ. ಇಲ್ಲಿ ಸಾಕಷ್ಟು ನದಿಗಳಿವೆ ಎಂದು ಟ್ವೀಟ್ ಮಾಡಿ ಕಿಡಿಕಾರಿದ್ದರು.

    ಅಷ್ಟೇ ಅಲ್ಲದೆ ಲಿಂಗನಮಕ್ಕಿ ಜಲಾಶಯದಿಂದ ಬೆಂಗಳೂರಿಗೆ ನೀರು ಹರಿಸುವ ಯೋಜನೆಯಿಂದ ಅಪಾರ ಪರಿಸರ ನಾಶವಾಗುತ್ತದೆ. ಅದ್ದರಿಂದ ಈ ಯೋಜನೆಯನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿ ಜುಲೈ 10 ರಂದು ಶರಾವತಿ ಉಳಿಸಿ ಹೋರಾಟ ಒಕ್ಕೂಟದ ಸಭೆ ಶಿವಮೊಗ್ಗ ಬಂದ್‍ಗೆ ಕರೆ ನೀಡಿದೆ.

    ಶನಿವಾರ ಜಿಲ್ಲೆಯ ನೌಕರರ ಭವನದಲ್ಲಿ ತಾಲೂಕು ಒಕ್ಕೂಟದ ವತಿಯಿಂದ ನಡೆದ ಸಮಾಲೋಚನಾ ಸಭೆಯಲ್ಲಿ ಶಿವಮೊಗ್ಗದ ವಿವಿಧ ಸಂಘ, ಸಂಸ್ಥೆಗಳ ಮತ್ತು ಜನಪ್ರತಿನಿಧಿಗಳು ಸೇರಿ ಈ ಯೋಜನೆ ಜಾರಿ ಆದರೆ ಮಲೆನಾಡಿನ ಜನರಿಗೆ ತೊಂದರೆಯಾಗುತ್ತದೆ ಎಂದು ಈ ತೀರ್ಮಾನ ಕೈಗೊಂಡಿದೆ.