Tag: Agitation

  • ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಆಂದೋಲನ, ರಾಹುಲ್ ವಿದೇಶಕ್ಕೆ ಪ್ರಯಾಣ

    ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಆಂದೋಲನ, ರಾಹುಲ್ ವಿದೇಶಕ್ಕೆ ಪ್ರಯಾಣ

    ನವದೆಹಲಿ: ಒಂದೆಡೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಬೃಹತ್ ಪ್ರತಿಭಟನೆ ನಡೆಸಲು ಯೋಜನೆ ರೂಪಿಸಿದೆ. ಆದರೆ ಇನ್ನೊಂದೆಡೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿದೇಶಕ್ಕೆ ಹಾರಲಿದ್ದಾರೆ ಎಂದು ವರದಿಯಾಗಿದೆ.

    ನವೆಂಬರ್ 1ರಿಂದ 8ರ ವರೆಗೆ ದೇಶಾದ್ಯಂತ ಸುಮಾರು 35 ಸುದ್ದಿಗೋಷ್ಠಿಗಳನ್ನು ನಡೆಸಲು ಕಾಂಗ್ರೆಸ್ ಯೋಜನೆ ರೂಪಿಸಿದೆ. ಎನ್‍ಡಿಎ ಅಧಿಕಾರಾವಧಿಯಲ್ಲಿ ಆರ್ಥಿಕತೆಯ ಕಳಪೆ ಸ್ಥಿತಿಯ ಕುರಿತು ರಾಷ್ಟ್ರವ್ಯಾಪಿ ಆಂದೋಲನ ನಡೆಸಲಾಗುತ್ತಿದೆ. ಇದರ ಭಾಗವಾಗಿ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ನವೆಂಬರ್ 5ರಿಂದ 15ರ ವರೆಗೆ ಬೀದಿಗಿಳಿದು ಹೋರಾಟ ನಡೆಸಲು ಮುಂದಾಗಿದ್ದಾರೆ.

    ಇದೇ ಸಂದರ್ಭದಲ್ಲಿ ಆದರೆ ಕೋರ್ಸ್‍ಗೆ ಹಾಜರಾಗಲು ರಾಹುಲ್ ಗಾಂಧಿ ವಿದೇಶಕ್ಕೆ ಹಾರುತ್ತಿದ್ದಾರೆ. ಹೀಗಾಗಿ ಕಾಂಗ್ರೆಸ್ ನಡೆಸುತ್ತಿರುವ ರಾಷ್ಟ್ರವ್ಯಾಪಿ ಅಂದೋಲನದ ಸಮಯಕ್ಕೆ ಹಾಜರಾಗುವ ಸಾಧ್ಯತೆ ಇಲ್ಲ ಎಂದು ಹೇಳಲಾಗುತ್ತಿದೆ. ರಾಹುಲ್ ಗಾಂಧಿಯವರು ಇಂಡೋನೇಷ್ಯಾಕ್ಕೆ ತೆರಳಬಹುದು ಎಂದು ಸುದ್ದಿ ಸಂಸ್ಥೆ ವರದಿ ಮಾಡಿದೆ. ಆದರೆ ಈ ಕುರಿತು ಖಚಿತಪಡಿಸಲು ಕಾಂಗ್ರೆಸ್ ಮುಖಂಡರು ಹಾಗೂ ಸಿಬ್ಬಂದಿ ನಿರಾಕರಿಸಿದ್ದಾರೆ.

    ಅಕ್ಟೋಬರ್ 21ರಂದು ಮಹಾರಾಷ್ಟ್ರ ಹಾಗೂ ಹರ್ಯಾಣದಲ್ಲಿ ನಡೆದ ವಿಧಾನಸಭಾ ಚುನಾವಣೆಗೂ ಮುನ್ನ ರಾಹುಲ್ ಗಾಂಧಿಯವರು ಕಾಂಬೋಡಿಯಾಕ್ಕೆ ಭೇಟಿ ನೀಡಿದ್ದರು. ಅದಾಗ್ಯೂ ಕೊನೆಯ ಹಂತದ ಪ್ರಚಾರದ ಸಂದರ್ಭದಲ್ಲಿ ಮರಳಿದ್ದರು.

    2014ರ ಚುನಾವಣೆಗೆ ಹೋಲಿಸಿದರೆ ಈ ಎರಡೂ ರಾಜ್ಯಗಳಲ್ಲಿ ಕಾಂಗ್ರೆಸ್ ಉತ್ತಮ ಪ್ರದರ್ಶನ ನೀಡಿದೆ. ಆದರೆ ಈ ಕುರಿತು ರಾಹುಲ್ ಗಾಂಧಿ ಇನ್ನೂ ಪ್ರತಿಕ್ರಿಯಿಸಿಲ್ಲ. ಆದರೆ ಹೆಚ್ಚು ಬಲದಿಂದ ರಾಹುಲ್ ಗಾಂಧಿ ಅವರು ಮತ್ತೆ ರಾಜಕೀಯಕ್ಕೆ ಮರಳಲಿದ್ದಾರೆ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಎ.ಕೆ.ಆ್ಯಂಟನಿ ಇತ್ತೀಚೆಗೆ ತಿಳಿಸಿದ್ದರು.

  • ತೂತುಕುಡಿ ತಾಮ್ರ ಘಟಕಕ್ಕೆ ಬೀಗ – 30,000 ಮಂದಿ ಉದ್ಯೋಗಕ್ಕೆ ಕುತ್ತು!

    ತೂತುಕುಡಿ ತಾಮ್ರ ಘಟಕಕ್ಕೆ ಬೀಗ – 30,000 ಮಂದಿ ಉದ್ಯೋಗಕ್ಕೆ ಕುತ್ತು!

    ಚೆನ್ನೈ: ವೇದಾಂತ ಕಂಪನಿಯ ಸ್ಟೆರ್ಲೈಟ್ ತಾಮ್ರ ಘಟಕವನ್ನು ಮುಚ್ಚುವಂತೆ ತಮಿಳುನಾಡು ಸರ್ಕಾರ ಆದೇಶ ಹೊರಡಿಸಿದ ಪರಿಣಾಮ ಈ ತೀರ್ಮಾನದಿಂದಾಗಿ ಸುಮಾರು 30 ಸಾವಿರ ಮಂದಿಗೆ ಉದ್ಯೋಗ ಕಳೆದು ಕೊಳ್ಳುವ ಭೀತಿ ಎದುರಾಗಿದೆ.

    ಸರ್ಕಾರವು ಹಠಾತ್ತಾಗಿ ತಾಮ್ರ ಘಟಕವನ್ನು ಮುಚ್ಚುವ ನಿರ್ಧಾರದಿಂದಾಗಿ ಸುಮಾರು 30 ಸಾವಿರ ಮಂದಿ ಉದ್ಯೋಗ ಕಳೆದುಕೊಂಡು, ದೇಶಕ್ಕೆ 200 ಕೋಟಿ ರೂ. ನಷ್ಟವುಂಟಾಗಿದೆ. ಹಾಗೆಯೇ ದೇಶದ ಆರ್ಥಿಕ ಪರಿಸ್ಥಿತಿ ಕುಸಿಯುವಂತೆ ಮಾಡಿದ್ದಾರೆಂದು ಸ್ಟೆರ್ಲೈಟ್ ಕಂಪನಿಯ ಮುಖ್ಯಸ್ಥ ಪಿ ರಾಮನಾಥ್ ತಿಳಿಸಿದ್ದಾರೆ.

    ಈ ಘಟಕಕ್ಕೆ ನೇರವಾಗಿ ಮತ್ತು ಪರೋಕ್ಷವಾಗಿ ಸಂಪನ್ಮೂಲಗಳನ್ನು ಪೂರೈಕೆ ಮಾಡುತ್ತಿದ್ದ ಸಣ್ಣ ಮತ್ತು ಮಧ್ಯಮ ಗಾತ್ರದ ಉದ್ಯಮಗಳಲ್ಲಿನ ಸುಮಾರು 30,000 ಮಂದಿಗೆ ಉದ್ಯೋಗ ಕಳೆದುಕೊಳ್ಳುವ ಭೀತಿ ಎದುರಾಗಿದೆ.

    ತೂತುಕುಡಿ ಘಟಕವು ಸುಮಾರು 40 ಲಕ್ಷ ಟನ್ ಉತ್ಪಾದನಾ ಸಾಮಥ್ರ್ಯ ಹೊಂದಿದ್ದು, ದೇಶದಲ್ಲಿಯೇ ಅತಿಹೆಚ್ಚು ತಾಮ್ರ ಉತ್ಪಾದಿಸುತ್ತಿದ್ದ ಘಟಕವಾಗಿತ್ತು. ವಾರ್ಷಿಕವಾಗಿ ಘಟಕವು 200 ಕೋಟಿಗಳಷ್ಟು ವ್ಯವಹಾರ ನಡೆಸುತ್ತಿತ್ತು. ಕಂಪೆನಿಯು ಇದಲ್ಲದೆ ಪಶ್ಚಿಮ ಭಾರತದಲ್ಲಿ ಫಾಸ್ಪೋರಿಕ್ ಆಮ್ಲ ಘಟಕ, ಸಲ್ಫೂರಿಕ್ ಆ್ಯಸಿಡ್ ಘಟಕ, ತಾಮ್ರ ಘಟಕ ಹಾಗೂ 2 ಬೃಹತ್ ವಿದ್ಯುಸ್ಥಾವರನ್ನು ಹೊಂದಿದೆ.

    ತೂತುಕುಡಿ ಘಟಕದಲ್ಲಿ ಇನ್ನೂ ಹೆಚ್ಚಿನ ಉತ್ಪಾದನೆಗಾಗಿ ಕಂಪನಿಯು ಸುಮಾರು 70 ಕೋಟಿ ಬಂಡವಾಳವನ್ನು ಹೂಡಿ 14 ಕೋಟಿ ಹಣವನ್ನು ಖರ್ಚುಮಾಡಿತ್ತು. ಈ ಯೋಜನೆ ಪೂರ್ಣಗೊಂಡಿದ್ದಲ್ಲಿ ಈ ಘಟಕದಲ್ಲಿ ಒಟ್ಟು 80 ಲಕ್ಷ ಟನ್ ತಾಮ್ರ ಉತ್ಪಾದನೆಯಾಗುತಿತ್ತು.

    ತಾಮ್ರ ಘಟಕದಿಂದ ಪರಿಸರದ ಮೇಲೆ ಮಾರಕವಾಗಿ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು ಪ್ರತಿಭಟನೆ ನಡೆಸುತ್ತಿದ್ದರು. ಪ್ರತಿಭಟನೆ ತೀವ್ರ ಸ್ವರೂಪ ಪಡೆದಿದ್ದರಿಂದ ಪರಿಸ್ಥಿತಿ ನಿಯಂತ್ರಿಸಲು ಪೊಲೀಸರ ಗೋಲಿಬಾರ್‍ಗೆ 13 ಮಂದಿ ಮೃತಪಟ್ಟಿದ್ದರು. ಇದಾದ ನಂತರ ತಮಿಳುನಾಡು ಸರ್ಕಾರ ಸ್ಟೆರ್ಲೈಟ್ ತಾಮ್ರ ಘಟಕವನ್ನು ಸಂಪೂರ್ಣವಾಗಿ ಮುಚ್ಚುವ ತೀರ್ಮಾನ ಕೈಗೊಂಡಿದೆ.