Tag: agra

  • ರಸಗುಲ್ಲ ಖಾಲಿಯಾಗಿದ್ದಕ್ಕೆ ವಧು-ವರನ ಕುಟುಂಬದ ಮಧ್ಯೆ ಡಿಶುಂ ಡಿಶುಂ – ಯುವಕ ಸಾವು

    ರಸಗುಲ್ಲ ಖಾಲಿಯಾಗಿದ್ದಕ್ಕೆ ವಧು-ವರನ ಕುಟುಂಬದ ಮಧ್ಯೆ ಡಿಶುಂ ಡಿಶುಂ – ಯುವಕ ಸಾವು

    ಲಕ್ನೋ: ಊಟದಲ್ಲಿ ರಸಗುಲ್ಲ (Rasgulla) ಖಾಲಿ ಆಯ್ತು ಅಂತ ಮದುವೆ ಸಮಾರಂಭದಲ್ಲಿಯೇ (Marriage Function) ಗಲಾಟೆ (Quarrel) ನಡೆದು, ಯುವಕನೊಬ್ಬನ ಹತ್ಯೆಯಲ್ಲಿ ಹೊಡೆದಾಟ ಅಂತ್ಯಗೊಂಡಿರುವ ಘಟನೆ ಉತ್ತರ ಪ್ರದೇಶದ (Uttar Pradesh) ಆಗ್ರಾದಲ್ಲಿ (Agra) ನಡೆದಿದೆ.

    ವರದಿಗಳ ಪ್ರಕಾರ ಮದುವೆ ಸಮಾರಂಭದಲ್ಲಿ ರಸಗುಲ್ಲ ಖಾಲಿ ಆಯ್ತು ಅಂತ ವಧು ಹಾಗೂ ವರನ ಕಡೆಯವರ ನಡುವೆ ವಾಗ್ವಾದ ನಡೆದಿದೆ. ಬಳಿಕ ವಾಗ್ವಾದ ಹೊಡೆದಾಟಕ್ಕೆ ತಿರುಗಿ, ಅಲ್ಲೇ ಇದ್ದ ವ್ಯಕ್ತಿಯೊಬ್ಬ ಚಾಕುವಿನಿಂದ ಯುವಕ ಸನ್ನಿ (22) ಮೇಲೆ ಹಲ್ಲೆ ನಡೆಸಿದ್ದಾನೆ. ಇದನ್ನೂ ಓದಿ: ಬಂಡೇ ಮಠದ ಶ್ರೀ ಬರೆದಿದ್ದು ಒಟ್ಟು 6 ಪುಟಗಳ ಡೆತ್‍ನೋಟ್ – ಈಗಾಗಲೇ 20 ಮಂದಿಯ ವಿಚಾರಣೆ

    ಗಂಭೀರವಾಗಿ ಗಾಯಗೊಂಡಿದ್ದ ಸನ್ನಿಯನ್ನು ಮೊದಲು ಸಮುದಾಯ ಆರೋಗ್ಯ ಕೇಂದ್ರಕ್ಕೆ ಕಳುಹಿಸಲಾಯಿತು. ಬಳಿಕ ಆಗ್ರಾದ ಸರೋಜಿನಿ ನಾಯ್ಡು ವೈದ್ಯಕೀಯ ಕಾಲೇಜಿಗೆ ಕಳುಹಿಸಲಾಯಿತು. ಆದರೆ ಚಿಕಿತ್ಸೆ ಫಲಿಸದೇ ಯುವಕ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಇದನ್ನೂ ಓದಿ: ಹಾಲಿನ ಪ್ಯಾಕೆಟ್‌ಗೆ ಹಣ ನೀಡದ್ದಕ್ಕೆ ಗ್ರಾಹಕನ ಮೇಲೆ ಮಾಲೀಕನಿಂದ ಹಲ್ಲೆ

    ಘಟನೆಯಲ್ಲಿ ಇನ್ನೂ ಐವರಿಗೆ ಗಾಯಗಳಾಗಿದ್ದು, ಅವರನ್ನು ಎತ್ಮಾದ್‌ಪುರದ ಸಮದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿದೆ. ಮೃತ ಯುವಕನ ಕುಟುಂಬದವರು ಘಟನೆಯ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ. ಆದರೆ ಇಲ್ಲಿಯವರೆಗೆ ಯಾರನ್ನೂ ಬಂಧಿಸಲಾಗಿಲ್ಲ.

    Live Tv
    [brid partner=56869869 player=32851 video=960834 autoplay=true]

  • ಹೋಟೆಲ್‍ನಲ್ಲಿ ಬೇರೊಬ್ಬಳ ಜೊತೆಗೆ ಚಕ್ಕಂದ – ರೆಡ್‍ಹ್ಯಾಂಡ್ ಆಗಿ ಸಿಕ್ಕ ಪತಿಗೆ ಚಪ್ಪಲಿಯಿಂದ ಗ್ರಹಚಾರ ಬಿಡಿಸಿದ್ಲು

    ಹೋಟೆಲ್‍ನಲ್ಲಿ ಬೇರೊಬ್ಬಳ ಜೊತೆಗೆ ಚಕ್ಕಂದ – ರೆಡ್‍ಹ್ಯಾಂಡ್ ಆಗಿ ಸಿಕ್ಕ ಪತಿಗೆ ಚಪ್ಪಲಿಯಿಂದ ಗ್ರಹಚಾರ ಬಿಡಿಸಿದ್ಲು

    ಲಕ್ನೋ: ಆಗ್ರಾದ(Agra) ಹೋಟೆಲ್ ಒಂದರಲ್ಲಿ ಗೆಳತಿಯ ಜೊತೆಗೆ ಸರಸದಲ್ಲಿ ಮುಳುಗಿದ್ದ ಪತಿರಾಯನಿಗೆ ಚಪ್ಪಲಿಯಲ್ಲಿ (Slipper) ಹೊಡೆಯುವ ಮೂಲಕ ಪತ್ನಿ ಗ್ರಹಚಾರ ಬಿಡಿಸಿದ್ದಾಳೆ. ಇದೀಗ ಈ ಗಲಾಟೆಯ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.

    ಠಾಣಾ ಹರಿ ಪರ್ವತ (Thana Hari Parvata) ಪ್ರದೇಶದ ಹೋಟೆಲ್‍ನಲ್ಲಿ ಈ ಘಟನೆ ನಡೆದಿದ್ದು, ವ್ಯಕ್ತಿ ತನ್ನ ಗೆಳತಿಯೊಂದಿಗೆ ಹೋಟೆಲ್‍ಗೆ ತಲುಪಿದ್ದಾನೆ. ಈ ವಿಚಾರ ತಿಳಿದ ಪತ್ನಿ ಮತ್ತು ಆಕೆಯ ಸಹೋದರ ಆತನನ್ನು ಹಿಂಬಾಲಿಸಿಕೊಂಡು ಬಂದಿದ್ದಾರೆ. ನಂತರ ಹೋಟೆಲ್ ಕೊಠಡಿಯಲ್ಲಿ (Hotel Room) ರೆಡ್ ಹ್ಯಾಂಡ್ ಆಗಿ ಗೆಳತಿ ಜೊತೆಗೆ ಸಿಕ್ಕ ಪರಿ ಜೊತೆಗೆ ಗಲಾಟೆ ಶುರು ಮಾಡಿದ್ದಾಳೆ. ಈ ಘಟನೆಯ ಸಂಪೂರ್ಣ ವೀಡಿಯೋವನ್ನು ಮಹಿಳೆಯ ಸಹೋದರ ಮೊಬೈಲ್‍ನಲ್ಲಿ ಸೆರೆ ಹಿಡಿದಿದ್ದು, ವೀಡಿಯೋದಲ್ಲಿ ಚಪ್ಪಲಿಯಿಂದ ಪತ್ನಿ ತನ್ನ ಪತಿ ಮತ್ತು ಆಕೆಯ ಗೆಳತಿಗೆ ಥಳಿಸಿದ್ದಾಳೆ.

    ವೀಡಿಯೋದಲ್ಲಿ ಮಹಿಳೆ ಇಬ್ಬರಿಗೂ ಕಪಾಳಮೋಕ್ಷ ಮಾಡಿ, ತನ್ನ ಚಪ್ಪಲಿಯಲ್ಲಿ ಒಟ್ಟಿಗೆ ಥಳಿಸಿದ್ದಾಳೆ. ಈ ವೇಳೆ ವ್ಯಕ್ತಿ ಕ್ಷಮಿಸು ಎಂದು ಬೇಡಿಕೊಳ್ಳುತ್ತಿರುತ್ತಾನೆ. ಆದರೆ ರೊಚ್ಚಿಗೆದ್ದ ಮಹಿಳೆ ಆತನನ್ನ ಬಿಡದಂತೆ ಹಿಗ್ಗಾಮುಗ್ಗಾ ಹೊಡೆದು, ಪೊಲೀಸರಿಗೆ ಕರೆ ಮಾಡಿ ಎಂದು ಕೂಗಾಡುತ್ತಿರುವುದನ್ನು ಕಾಣಬಹುದಾಗಿದೆ. ಇದನ್ನೂ ಓದಿ: ಇನ್‍ಸ್ಟಾಗ್ರಾಮ್ ಸರ್ವರ್ ಡೌನ್ – ಫೋಟೋ, ವೀಡಿಯೋ ಅಪ್‍ಲೋಡ್ ಮಾಡಲಾಗದೇ ಜನರ ಪರದಾಟ

    ಮಹಿಳೆಯ ಪತಿ ನರ್ಸಿಂಗ್ ಹೋಂನಲ್ಲಿ (Nursing Home) ಕೆಲಸ ಮಾಡುತ್ತಿದ್ದಾನೆ. ಅತನಿಗೆ 16 ವರ್ಷದ ಮಗಳು ಹಾಗೂ 9 ವರ್ಷದ ಮಗನಿದ್ದಾನೆ. ಗಂಡನ ಈ ಚಾಳಿ ಮಕ್ಕಳಿಬ್ಬರಿಗೂ ತಿಳಿದಿದೆ. ಗಂಡನ ಈ ಕೃತ್ಯಗಳಿಂದ ಬೇಸತ್ತು ಮಹಿಳೆ ತವರು ಮನೆ ಸೇರಿದ್ದಳು. ಆದರೆ ಮುಂದೆ ತನ್ನ ಮಕ್ಕಳಿಗೂ ಇದೇ ಚಾಳಿ ಎಲ್ಲಿ ಬರುತ್ತದೆಯೋ ಎಂದು ರೆಡ್ ಹ್ಯಾಂಡ್ ಆಗಿ ಸಿಕ್ಕ ಪತಿಗೆ ಹಿಗ್ಗಾಮುಗ್ಗ ಬಾರಿಸಿದ್ದಾಳೆ. ಇದನ್ನೂ ಓದಿ: NIA ಮಿಡ್‌ನೈಟ್ ಆಪರೇಷನ್- ಬೆಂಗ್ಳೂರಿನಲ್ಲಿ ಶಂಕಿತ ಉಗ್ರ ಯಾಸಿರ್ ಅರೆಸ್ಟ್

    Live Tv
    [brid partner=56869869 player=32851 video=960834 autoplay=true]

  • ಲವರ್ ಜೊತೆ ಪತ್ನಿಯ ಜಾಲಿ ರೈಡ್ – ಸ್ಕೂಟಿಯನ್ನು ಚೇಸ್ ಮಾಡಿ ಪ್ರಿಯಕರನಿಗೆ ಕಪಾಳಮೋಕ್ಷ ಮಾಡಿದ ಪತಿ

    ಲವರ್ ಜೊತೆ ಪತ್ನಿಯ ಜಾಲಿ ರೈಡ್ – ಸ್ಕೂಟಿಯನ್ನು ಚೇಸ್ ಮಾಡಿ ಪ್ರಿಯಕರನಿಗೆ ಕಪಾಳಮೋಕ್ಷ ಮಾಡಿದ ಪತಿ

    ಲಕ್ನೋ: ಪ್ರಿಯಕರನೊಂದಿಗೆ (Lover) ಓಡಾಡುತ್ತಿದ್ದ ಪತ್ನಿಯನ್ನು ರೆಡ್ ಹ್ಯಾಂಡ್ ಆಗಿ ಹಿಡಿದು ಪತಿಯೊಬ್ಬ (Husband) ನಡುರಸ್ತೆಯಲ್ಲಿ ಥಳಿಸಿರುವ ಘಟನೆ ಆಗ್ರಾದಲ್ಲಿ (Agra) ನಡೆದಿದೆ.

    ದಂಪತಿಗೆ ಮದುವೆಯಾಗಿ 10 ವರ್ಷಗಳಾಗಿದ್ದು, ಓರ್ವ ಮಗಳಿದ್ದಾಳೆ(Daughter). ಉದ್ಯಮಿಯೊಂದಿಗೆ(Businessman) ತನ್ನ ಹೆಂಡತಿ (Wife) ಅಕ್ರಮ ಸಂಬಂಧ ಹೊಂದಿದ್ದಾಳೆ ಎಂಬ ವಿಚಾರ ವ್ಯಕ್ತಿಗೆ ಮೊದಲೇ ತಿಳಿದಿತ್ತು. ಹೀಗಾಗಿ ಇಬ್ಬರ ನಡುವೆ ಆಗಾಗ ಜಗಳವಾಗುತ್ತಿತ್ತು. ಹೀಗಿದ್ದರೂ ಭಾನುವಾರ ಪತ್ನಿ ಯಾರಿಗೂ ತಿಳಿಸದೇ ಮನೆಯಿಂದ ಹೊರಗೆ ಹೋಗಿದ್ದಾಳೆ. ಅವಳನ್ನು ಹೇಗಾದರೂ ಕಂಡು ಹಿಡಿಯಲೇ ಬೇಕೆಂದು ನಿರ್ಧರಿಸಿ ವ್ಯಕ್ತಿ ತನ್ನ ಪುತ್ರಿಯೊಂದಿಗೆ ದ್ವಿಚಕ್ರ ವಾಹನದಲ್ಲಿ ಹುಡುಕಾಟ ನಡೆಸಲು ಆರಂಭಿಸಿದ್ದಾನೆ.

    ಈ ವೇಳೆ ಕೈಲಾಸ ಮಂದಿರ ರಸ್ತೆಯ (Kailash Mandir Road) ಬಳಿ ಮತ್ತೊಬ್ಬ ವ್ಯಕ್ತಿಯೊಂದಿಗೆ ಸ್ಕೂಟಿಯಲ್ಲಿ ತನ್ನ ಪತ್ನಿ ಹೋಗುತ್ತಿರುವುದನ್ನು ನೋಡಿ, ಗಾಡಿಯನ್ನು ಫಾಲೋವ್ ಮಾಡಿಕೊಂಡು ಹೋಗಿದ್ದಾನೆ. ಇನ್ನೂ ಈ ವೀಡಿಯೋವನ್ನು ವ್ಯಕ್ತಿ ತನ್ನ ಮೊಬೈಲ್‍ನಲ್ಲಿ ಸೆರೆ ಹಿಡಿದುಕೊಂಡಿದ್ದಾನೆ. ಸದ್ಯ ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಇದನ್ನೂ ಓದಿ: ಮೇಲ್ಜಾತಿಯ ಜನರಿಗೆ ಸೇರಿದ ಮಡಿಕೆಯಿಂದ ನೀರು ಕುಡಿದ ದಲಿತನ ಮೇಲೆ ಹಲ್ಲೆ

    ಈ ಪ್ರಕರಣದ ಮಧ್ಯೆ ಪೊಲೀಸರು ಎಂಟ್ರಿ ನೀಡುವುದಕ್ಕೂ ಮುನ್ನವೇ ವ್ಯಕ್ತಿ ಪತ್ನಿಯ ಪ್ರಿಯಕರನಿಗೆ(Lover) ಅಡ್ಡಹಾಕಿ ಕಪಾಳಮೋಕ್ಷ(Slapped) ಮಾಡಿದ್ದಾನೆ. ಇದೀಗ ಸಾರ್ವಜನಿಕ ಶಾಂತಿ (Public Peace) ಕದಡಿದ ಕಾರಣಕ್ಕಾಗಿ ಇಬ್ಬರಿಗೂ ದಂಡ ವಿಧಿಸಲಾಗಿದೆ. ಆದರೆ ಮಹಿಳೆ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ. ಇದನ್ನೂ ಓದಿ: ಸೆಮಿಕಂಡಕ್ಟರ್‌ ಘಟಕ ಸ್ಥಾಪನೆಗೆ ಕರ್ನಾಟಕವನ್ನು ಬಿಟ್ಟು ಗುಜರಾತ್‌ ಆಯ್ಕೆ ಮಾಡಿದ್ದು ಯಾಕೆ – ಪ್ರಶ್ನೆಗೆ ಉತ್ತರ ಕೊಟ್ಟ ವೇದಾಂತ ಕಂಪನಿ

    Live Tv
    [brid partner=56869869 player=32851 video=960834 autoplay=true]

  • ಆಗ್ರಾ ನೋಡಲು ಬಂದ ವಿದೇಶಿ ಪ್ರವಾಸಿಗನಿಗೆ ಆಟೋ ಚಾಲಕ, ಸಹಚರರಿಂದ ಪಂಗನಾಮ

    ಆಗ್ರಾ ನೋಡಲು ಬಂದ ವಿದೇಶಿ ಪ್ರವಾಸಿಗನಿಗೆ ಆಟೋ ಚಾಲಕ, ಸಹಚರರಿಂದ ಪಂಗನಾಮ

    ಲಕ್ನೋ: ಆಗ್ರಾದ ತಾಜ್ ಮಹಲ್ (Taj Mahal ) ನೋಡಲೆಂದು ರಿಕ್ಷಾ ಹತ್ತಿದ 25 ವರ್ಷದ ಬೆಲ್ಜಿಯಂ ಪ್ರವಾಸಿಗ (Belgian tourist) ಬಳಿ ಆಟೋ ಚಾಲಕ(Auto Driver) ಮತ್ತು ಆತನ ಇಬ್ಬರು ಸಹಚರರು ದರೋಡೆ ಮಾಡಿದ್ದಾರೆ.

    ಪ್ರವಾಸಿಗನ ಬಳಿಯಿಂದ 8000 ಯುರೋ ನಗದು, ಒಂದು ಲ್ಯಾಪ್‍ಟಾಪ್ (Laptop), ಒಂದು ಕ್ಯಾಮೆರಾ (Camera), ಒಂದು ಮೊಬೈಲ್ ಫೋನ್ (Mobile Phone) ಮತ್ತು ಒಂದು ಜೊತೆ ಶೂಗಳನ್ನು (Shoes) ಲಪಟಾಯಿಸಿದ್ದಾರೆ. ಇದೀಗ ಮೂವರು ಆರೋಪಿಗಳ ವಿರುದ್ಧ ಆಗ್ರಾದ ಪ್ರವಾಸೋದ್ಯಮ ಪೊಲೀಸ್ ಠಾಣೆಯಲ್ಲಿ (Tourism Police Station) ಭಾರತೀಯ ದಂಡ ಸಂಹಿತೆಯ (ಐಪಿಸಿ) ವಿವಿಧ ಸೆಕ್ಷನ್‍ಗಳ ಅಡಿಯಲ್ಲಿ ದೂರು ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಹರಿಯುವ ನೀರಿನಲ್ಲಿ ಸಿಲುಕಿದ ತಾಯಿ, ಮಗ – ಗುಜುರಿ ವ್ಯಾಪಾರಿಯಿಂದ ರಕ್ಷಣೆ

    ಪ್ರವಾಸಿಗನನ್ನು ಸೇವಿ ಎಂದು ಗುರುತಿಸಲಾಗಿದ್ದು, ಆಗ್ರಾ ಕ್ಯಾಂಟ್ ರೈಲ್ವೇ ನಿಲ್ದಾಣದ (Agra Cantt Railway Station) ಬಳಿಯ ರಸ್ತೆಯಲ್ಲಿ ಮಂಗಳವಾರ ಬೆಳಗ್ಗೆ ಆಟೋ ಚಾಲಕ ಮತ್ತು ಆತನ ಇಬ್ಬರು ಸಹಚರರು (Two Associates) ತನ್ನ ಬಳಿ ದರೋಡೆ ಮಾಡಿದ್ದಾರೆ ಎಂದು ದೂರಿನಲ್ಲಿ ಸೇವಿ ಉಲ್ಲೇಖಿಸಿರುವುದಾಗಿ ಪ್ರವಾಸೋದ್ಯಮ ಪೊಲೀಸ್ ಠಾಣೆಯ ಉಸ್ತುವಾರಿ ಜೈ ಸಿಂಗ್ ಪರಿಹಾರ್ (Jai Singh Parihar) ತಿಳಿಸಿದ್ದು, ಇದೀಗ ಆರೋಪಿಗಳ ಪತ್ತೆಗೆ ಹುಡುಕಾಟ ನಡೆಸಲಾಗುತ್ತಿದೆ ಎಂದಿದ್ದಾರೆ. ಇದನ್ನೂ ಓದಿ: ವಿಧಾನಸಭೆ ಉಪ ಸಭಾಪತಿ ಆನಂದ ಮಾಮನಿ ಆರೋಗ್ಯದಲ್ಲಿ ಏರುಪೇರು – ಆಸ್ಪತ್ರೆಗೆ ದಾಖಲು

    ಪ್ರವಾಸಿಗ ಗೋವಾ(Goa) ಮೂಲದವರಾಗಿದ್ದು, ಬೆಲ್ಜಿಯಂನಲ್ಲಿ (Belgium) ಕೆಲಸ ಮಾಡುತ್ತಿದ್ದಾರೆ. ನಾನು ಭಾರತದ ನಿವಾಸಿ ಮತ್ತು ಗೋವಾದಲ್ಲಿ ಹುಟ್ಟಿದ್ದೇನೆ. ಆಗ್ರಾ ಪೊಲೀಸರ ಬಗ್ಗೆ ನನಗೆ ಹೆಮ್ಮೆ ಇದೆ. ಏಕೆಂದರೆ ಅವರು ನನಗೆ ತುಂಬಾ ಸಹಾಯ ಮಾಡುತ್ತಿದ್ದಾರೆ. ಅವರು ಇಷ್ಟೊಂದು ಸಹಾಯ ಮಾಡುತ್ತಾರೆ ಎಂದು ನನಗೆ ತಿಳಿದಿರಲಿಲ್ಲ. ನಾನು ಬೆಳಗ್ಗೆಯಿಂದ ಹಸಿದಿದ್ದೇನೆ ಮತ್ತು ಅವರು ನನಗೆ ಊಟ ಮತ್ತು ಹೋಟೆಲ್ ವ್ಯವಸ್ಥೆ ಮಾಡಿಕೊಟ್ಟರು. ಅವರು ನನ್ನನ್ನು ಅತಿಥಿಯಂತೆ ನೋಡಿಕೊಳ್ಳುತ್ತಿದ್ದಾರೆ ಎಂದು ಸೇವಿ ಹೇಳಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಅಕ್ರಮ ಮರಳು ಸಾಗಣೆ- ಟೋಲ್ ಗೇಟನ್ನು ಮುರಿದ 13 ಟ್ರ್ಯಾಕ್ಟರ್‌ಗಳು

    ಅಕ್ರಮ ಮರಳು ಸಾಗಣೆ- ಟೋಲ್ ಗೇಟನ್ನು ಮುರಿದ 13 ಟ್ರ್ಯಾಕ್ಟರ್‌ಗಳು

    ಲಕ್ನೋ: ವೇಗವಾಗಿ ಬಂದ 13 ಮರಳು ತುಂಬಿದ ಟ್ರ್ಯಾಕ್ಟರ್‌ಗಳು ಉತ್ತರ ಪ್ರದೇಶದ ಆಗ್ರಾದ ಟೋಲ್ ಗೇಟ್‍ನ್ನು ಮುರಿದ ಘಟನೆ ನಡೆದಿದೆ.

    ಈ 13 ಟ್ರ್ಯಾಕ್ಟರ್‌ಗಳಿಗೆ ಅಕ್ರಮ ಮರಳನ್ನು ತುಂಬಲಾಗಿತ್ತು. ಇದರಿಂದಾಗಿ ಟ್ರ್ಯಾಕ್ಟರ್‌ನಲ್ಲಿದ್ದ ಚಾಲಕರು ಟೋಲ್ ಟ್ಯಾಕ್ಸ್ ಅನ್ನು ಪಾವತಿಸಲು ನಿಲ್ಲಿಸದೇ, ಆ ಗೇಟ್‍ನ್ನೇ ಮುರಿದುಕೊಂಡು ಹೋಗಿದ್ದಾರೆ. ಟ್ರ್ಯಾಕ್ಟರ್‌ಗಳು ಅತಿವೇಗದಲ್ಲಿ ಹಾದು ಹೋಗುವುದರಿಂದ ಗೇಟ್ ಮುರಿದಿದೆ. ಟೋಲ್ ಟ್ಯಾಕ್ಸ್ ಸಿಬ್ಬಂದಿ ಲಾಠಿ ಬೀಸಿ ವಾಹನಗಳನ್ನು ನಿಲ್ಲಿಸಲು ಪ್ರಯತ್ನಿಸಿದರೂ ಆ 13 ಟ್ರ್ಯಾಕ್ಟರ್ ನಿಲ್ಲಲಿಲ್ಲ. ಸದ್ಯ ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    ವೈರಲ್ ಆಗುತ್ತಿರುವ ಈ ವೀಡಿಯೋ 53 ಸೆಕೆಂಡ್‍ಗಳಿವೆ. ಈ ವೀಡಿಯೋವನ್ನು ಹಂಚಿಕೊಂಡ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಟ್ವೀಟ್ ಮಾಡಿದ್ದು, ಬಿಜೆಪಿಯ ಡಬಲ್ ಇಂಜಿನ್‍ನ ಸರ್ಕಾರ ಮರಳು ಮಾಫಿಯಾದಲ್ಲಿ ಧೈರ್ಯವನ್ನು ತೋರಿಸುತ್ತಿವೆ. ಬಿಜೆಪಿಯ ಅಡೆತಡೆಗಳು ಅವುಗಳಂತೆಯೇ ನಕಲಿಯಾಗಿದೆ ಎಂದು ಟೀಕಿಸಿದ್ದಾರೆ. ಇದನ್ನೂ ಓದಿ: ತಮ್ಮ ಅವಧಿಯಲ್ಲಿ ಭ್ರಷ್ಟಾಚಾರ ನಡೆದಿಲ್ಲ ಅಂತ ಚಾಮುಂಡೇಶ್ವರಿ ಮೇಲೆ ಆಣೆ ಮಾಡಲಿ – ಸಿದ್ದರಾಮಯ್ಯಗೆ ಈಶ್ವರಪ್ಪ ಸವಾಲ್

    ಘಟನೆಗೆ ಸಂಬಂಧಿಸಿದಂತೆ ಪ್ರಕರಣವನ್ನು ದಾಖಲಿಸಿಕೊಂಡ ಪೊಲೀಸರು ಟ್ರ್ಯಾಕ್ಟರ್‌ನ ಕೆಲವು ಚಾಲಕನ್ನು ಬಂಧಿಸಿದ್ದಾರೆ. ಆರೋಪಿಗಳೆಲ್ಲರೂ ಧೋಲ್‍ಪುರ್(ರಾಜಸ್ಥಾನ)ಕ್ಕೆ ಸೇರಿದವರಾಗಿದ್ದಾರೆ. ಇದನ್ನೂ ಓದಿ: ಗಣೇಶಮೂರ್ತಿ ಸ್ಥಾಪಿಸಿದ ಬಿಜೆಪಿ ನಾಯಕಿ ರೂಬಿಖಾನ್‌ಗೆ ಮುಸ್ಲಿಂ ಧರ್ಮಗುರುಗಳಿಂದ ಕೊಲೆ ಬೆದರಿಕೆ

    Live Tv
    [brid partner=56869869 player=32851 video=960834 autoplay=true]

  • ದೇಶ ವಿರೋಧಿ ಘೋಷಣೆ ಕೂಗಿದ ಮೂವರು ಅರೆಸ್ಟ್

    ದೇಶ ವಿರೋಧಿ ಘೋಷಣೆ ಕೂಗಿದ ಮೂವರು ಅರೆಸ್ಟ್

    ಲಕ್ನೋ: ಸ್ವಾತಂತ್ರ್ಯ ದಿನಾಚರಣೆಯಂದು ಆಗ್ರಾದ ಗೋಕುಲಪುರ ರಿಯಾದಲ್ಲಿ ‘ತಿರಂಗ ಯಾತ್ರೆ’ ಆಯೋಜಿಸಲಾಗಿತ್ತು. ಈ ವೇಳೆ ಭಾರತ ವಿರೋಧಿ ಘೋಷಣೆಗಳನ್ನು ಕೂಗಿದ ಆರೋಪದಡಿ ಮೂವರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ.

    ಆಗ್ರಾದ ಲೋಹಮಂಡಿ ಪೊಲೀಸ್ ಠಾಣಾ ವ್ಯಾಪ್ತಿಯ ಗೋಕುಲಪುರದಲ್ಲಿ ಆಗಸ್ಟ್ 15ರ ಸೋಮವಾರ ‘ತಿರಂಗ ಯಾತ್ರೆ’ ನಡೆಸಲಾಗುತ್ತಿದ್ದು, ರ್‍ಯಾಲಿ ವೇಳೆ ಕೆಲವರು ಭಾರತ ವಿರೋಧಿ ಘೋಷಣೆಗಳನ್ನು ಕೂಗಿದರು. ಈ ಘಟನೆಯ ವೀಡಿಯೋವನ್ನು ಆಧಾರಿಸಿ ಕಿಡಿಗೇಡಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವುದಾಗಿ ಪೊಲೀಸ್ ವರಿಷ್ಠಾಧಿಕಾರಿ (ಎಸ್‍ಪಿ ನಗರ) ವಿಕಾಸ್ ಕುಮಾರ್ ತಿಳಿಸಿದ್ದಾರೆ. ಇದನ್ನೂ ಓದಿ: Exclusive: ಮುಖಕ್ಕೆ ಮಾಸ್ಕ್ ಧರಿಸಿ ಕಲ್ಲು ಹೊಡೆಯಿರಿ – ಶಿವಮೊಗ್ಗ ಗಲಾಟೆಯ ಪ್ಲ್ಯಾನ್ ವೀಡಿಯೋ ಔಟ್

    ಆರೋಪಿಗಳನ್ನು ಆಗ್ರಾ ನಗರದ ಗೋಕುಲಪುರ ನಿವಾಸಿಗಳಾದ ಫೈಜಾನ್, ಸದಾಬ್ ಮತ್ತು ಮುಹಜ್ಜಮ್ ಎಂದು ಗುರುತಿಸಲಾಗಿದ್ದು, ಈ ಮೂವರ ವಿರುದ್ಧ ಐಪಿಸಿಯ ಸೆಕ್ಷನ್ 153-ಬಿ (ರಾಷ್ಟ್ರೀಯ ಸಮಗ್ರತೆಗೆ ಬಾಧಕವಾಗುವ ಆರೋಪಣೆಗಳು) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಮೂವರು ಯುವಕರನ್ನು ಬಂಧಿಸಲಾಗಿದೆ ಮತ್ತು ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುತ್ತಿದೆ ಎಂದಿದ್ದಾರೆ.

    ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಲೋಹಮಂಡಿ ಪೊಲೀಸ್ ಠಾಣೆಯ ಎಸ್‍ಎಚ್‍ಒ ತ್ರಿಲೋಕಿ ಸಿಂಗ್ ಅವರು, ಯುವಕರನ್ನು ಮಂಗಳವಾರ ಬಂಧಿಸಲಾಗಿದ್ದು, ಅವರ ಅವರ ವಯಸ್ಸು 19 ರಿಂದ 21 ವರ್ಷಗಳಿರಬಹುದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಆರ್ಡರ್ ಮಾಡಿದ್ದ ಆಹಾರದಲ್ಲಿ ಹುಳಗಳು – ರೆಸ್ಟೋರೆಂಟ್ ವಿರುದ್ಧ ಮಹಿಳೆ ದೂರು

    Live Tv
    [brid partner=56869869 player=32851 video=960834 autoplay=true]

  • ದೂರು ದಾಖಲಿಸಿಲ್ಲ ಎಂದು ನವಜಾತ ಶಿಶುವಿನ ಶವದೊಂದಿಗೆ ಪೊಲೀಸ್ ಮೆಟ್ಟಿಲೇರಿದ

    ದೂರು ದಾಖಲಿಸಿಲ್ಲ ಎಂದು ನವಜಾತ ಶಿಶುವಿನ ಶವದೊಂದಿಗೆ ಪೊಲೀಸ್ ಮೆಟ್ಟಿಲೇರಿದ

    ಆಗ್ರಾ: ಪೊಲೀಸರು ದೂರು ದಾಖಲಿಸಿಕೊಂಡಿಲ್ಲ ಎಂದು ಮನನೊಂದ ವ್ಯಕ್ತಿಯೊಬ್ಬ ನ್ಯಾಯಕ್ಕಾಗಿ ತನ್ನ ನವಜಾತ ಶಿಶುವಿನ ಶವವನ್ನು ಪೊಲೀಸ್ ವರಿಷ್ಠಾಧಿಕಾರಿಯ ಕಚೇರಿಗೆ ತೆಗೆದುಕೊಂಡ ಹೋದ ಘಟನೆ ಆಗ್ರಾದಲ್ಲಿ ನಡೆದಿದೆ.

    ಧನಿರಾಮ್ ನ್ಯಾಯಕ್ಕಾಗಿ ಹಿರಿಯ ಪೊಲೀಸ್ ಅಧಿಕಾರಿಗಳನ್ನು ಕಚೇರಿಗೆ ಹೋದ ವ್ಯಕ್ತಿ. ಇವರ 6 ತಿಂಗಳ ಗರ್ಭಿಣಿ ಪತ್ನಿ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ದೂರನ್ನು ಪೊಲೀಸರು ತಿರಸ್ಕರಿಸಿದ್ದರು. ಈ ಹಿನ್ನೆಲೆಯಲ್ಲಿ ಮನನೊಂದ ಧನಿರಾಮ್ ನ್ಯಾಯಕ್ಕಾಗಿ ಪೊಲೀಸ್ ವರಿಷ್ಠಾಧಿಕಾರಿಯ ಕಚೇರಿಗೆ ತಲುಪಿದ್ದಾರೆ.

    ಘಟನೆಯೇನು?: ಧನಿರಾಮ್ ಅವರ ಗರ್ಭಿಣಿ ಪತ್ನಿಯ ಮೇಲೆ ಇಬ್ಬರು ಪುರುಷರು ಹಲ್ಲೆ ನಡೆಸಿದ್ದರು. ಇದರಿಂದಾಗಿ ಆಕೆ ತೀವ್ರ ಹೊಟ್ಟೆ ನೋವಿನಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಅವಳನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಾಲಾಗಿತ್ತು. ಅಲ್ಲಿ ಶಸ್ತ್ರ ಚಿಕಿತ್ಸೆ ಮಾಡಿ ಮಗುವನ್ನು ತೆಗೆದಿದ್ದರು. ಆದರೆ ಹುಟ್ಟಿದ ಕೆಲವೇ ದಿನಗಳಲ್ಲಿ ಮಗು ಸಾವನ್ನಪ್ಪಿದೆ.

    ಘಟನೆ ಸಂಬಂಧಿಸಿ ಧನಿರಾಮ್ ಹಲ್ಲೆ ನಡೆಸಿದ ಗುಡ್ಡು ಮತ್ತು ರಾಮಸ್ವಾಮಿ ವಿರುದ್ಧ ದೂರು ನೀಡಲು ಪೊಲೀಸ್ ಠಾಣೆಗೆ ತೆರಳಿದ್ದರು. ಆದರೆ ಅಧಿಕಾರಿಗಳು ದೂರು ದಾಖಲಿಸಿಕೊಳ್ಳಲು ನಿರಾಕರಿಸಿದ್ದಾರೆ. ಇದರಿಂದಾಗಿ ಧನಿರಾಮ್ ಸ್ಥಳೀಯ ನಿವಾಸಿಗಳೊಂದಿಗೆ ನವಜಾತ ಮಗಳ ಶವದೊಂದಿಗೆ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ಆಗಮಿಸಿದ್ದಾರೆ. ಇದನ್ನೂ ಓದಿ: ವ್ಯಕ್ತಿಯನ್ನು ಕೊಂದು, ಅಂತ್ಯಸಂಸ್ಕಾರಕ್ಕೆ ಹಾಜರಾದ ಕಾಡಾನೆ!

    ಈ ಸಂದರ್ಭದಲ್ಲಿ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಪ್ರಭಾಕರ ಚೌಧರಿ ಅವರು ಧನಿರಾಮ್‍ಗೆ ಸಮಾಧಾನ ಮಾಡಿ, ನ್ಯಾಯ ದೊರಕಿಸಿಕೊಡುವುದಾಗಿ ಭರವಸೆ ನೀಡಿದ್ದಾರೆ. ಅಷ್ಟೇ ಅಲ್ಲದೇ ತಕ್ಷಣವೇ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಫತೇಹಾಬಾದ್‍ನ ಉಪಪೊಲೀಸ್ ವರಿಷ್ಠಾಧಿಕಾರಿಗೆ ಸೂಚಿಸಿದರು.

    ಈ ಬಗ್ಗೆ ಮಾತನಾಡಿದ ಧನಿರಾಮ್, ತನ್ನ ಪತ್ನಿ 6 ತಿಂಗಳ ಗರ್ಭಿಣಿಯಾಗಿದ್ದರು. ಆ ಸಂದರ್ಭದಲ್ಲಿ ತಾನು ಮತ್ತು ಆಕೆ ಕೆಲಸಕ್ಕೆ ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಬ್ಯಾಗ್‍ನಲ್ಲಿ ಏನಿದೆ ಎಂದಿದ್ದಕ್ಕೆ ಬಾಂಬ್ ಇದೆ ಎಂದ ವೃದ್ಧ ಅರೆಸ್ಟ್

    Live Tv

  • ಬಾಲಕನನ್ನು ಅಪಹರಿಸಿ 1 ಲಕ್ಷಕ್ಕೆ ಮಾರಿದ್ರು – ನರ್ಸ್ ಜೊತೆ ಪತಿ ಕೈಗೂ ಕೋಳ

    ಬಾಲಕನನ್ನು ಅಪಹರಿಸಿ 1 ಲಕ್ಷಕ್ಕೆ ಮಾರಿದ್ರು – ನರ್ಸ್ ಜೊತೆ ಪತಿ ಕೈಗೂ ಕೋಳ

    ಲಕ್ನೋ: ಆರು ವರ್ಷದ ಬಾಲಕನನ್ನು ಅಪಹರಿಸಿ ಒಂದು ಲಕ್ಷ ರೂ.ಗೆ ಮಾರಾಟ ಮಾಡಿದ್ದ ನರ್ಸ್ ಮತ್ತು ಆಕೆಯ ಪತಿಯನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ.

    ಜೂನ್ 6 ರಂದು ಆಗ್ರಾದ ಶಾಸ್ತ್ರಿಪುರಂ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಆರು ವರ್ಷದ ಆರವ್ ಕಾಣೆಯಾಗಿದ್ದ ಬಾಲಕನಾಗಿದ್ದಾನೆ. ಆರವ್ ತಂದೆ ಫತ್ತೇಲಾಲ್ ಮೂಲತಃ ಛತ್ತೀಸ್‍ಗಢದ ಬಿಲಾಸ್‍ಪುರ ಜಿಲ್ಲೆಯವರಾಗಿದ್ದು, ಕೂಲಿ ಕಾರ್ಮಿಕರಾಗಿದ್ದಾರೆ. ಇದನ್ನೂ ಓದಿ: ಯೋಗಿ ಆದಿತ್ಯನಾಥ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ಗೆ ಪಕ್ಷಿ ಬಡಿದು ಎಮರ್ಜೆನ್ಸಿ ಲ್ಯಾಂಡಿಂಗ್

    ಆರವ್ ತನ್ನ ಎಂಟು ವರ್ಷದ ಸಹೋದರ ರಿತೇಶ್ ಜೊತೆ ಆಗ್ರಾದ ಶಾಸ್ತ್ರಿಪುರಂ ಪ್ರದೇಶದ ಸಿ ಬ್ಲಾಕ್‍ನಲ್ಲಿ ನಿರ್ಮಾಣ ಹಂತದಲ್ಲಿದ್ದ ಕಟ್ಟಡದ ಬಳಿ ಆಟವಾಡುತ್ತಿದ್ದಾಗ ನರ್ಸ್ ಪೂಜಾ ಮತ್ತು ಆಕೆಯ ಪತಿ ಅನಿಲ್ ಅವರನ್ನು ಅಪಹರಿಸಿದ್ದಾರೆ. ನಂತರ ಕಾಣೆಯಾದ ಮಗನಿಗಾಗಿ ಹುಡುಕಾಟ ನಡೆಸಿ ಪೋಷಕರು ಕೊನೆಗೆ ಫತ್ತೇಲಾಲ್ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

    ಈ ಘಟನೆ ಸಂಬಂಧ ತನಿಖೆ ಆರಂಭಿಸಿದ ಪೊಲೀಸರು ಬಾಲಕ ಕಿಡ್ನಾಪ್ ಆದ ಪ್ರದೇಶದಲ್ಲಿದ್ದ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಅನಿಲ್ ಮತ್ತು ಪೂಜಾ ಸ್ಕೂಟರ್‌ನಲ್ಲಿ ಆರವ್‍ನನ್ನು ಕರೆದುಕೊಂಡು ಹೋಗುತ್ತಿರುವುದು ಕಂಡುಬಂದಿದೆ. ಆವಾಸ್ ವಿಕಾಸ್ ಕಾಲೋನಿಯ ನಿವಾಸಿ ಅನಿಲ್ ಶರ್ಮಾ ಮತ್ತು ಅವರ ಪತ್ನಿ ಪೂಜಾ ಪ್ರಸ್ತುತ ಕಾಸ್‌ಗಂಜ್ ಜಿಲ್ಲೆಯಲ್ಲಿ ವಾಸಿಸುತ್ತಿದ್ದರು. ಸದ್ಯ ಇಬ್ಬರು ದೆಹಲಿಯ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಇದನ್ನೂ ಓದಿ: ಬೆಳಗಾವಿಯಲ್ಲಿ ಭೀಕರ ಅಪಘಾತ- 9 ಮಂದಿ ದುರ್ಮರಣ

    ವಿಚಾರಣೆ ವೇಳೆ ಪೂಜಾ ಬಾಲಕನನ್ನು ಕಾಸ್‍ಗಂಜ್‍ನಲ್ಲಿರುವ ನೀರಜ್ ದೇವಿಗೆ ಮಾರಾಟ ಮಾಡಿರುವುದಾಗಿ ಸತ್ಯ ಬಾಯ್ಬಿಟ್ಟಿದ್ದಾಳೆ. ನೀರಜ್ ದೇವಿಗೆ 20 ವರ್ಷಗಳಿಂದ ಮಕ್ಕಳಿಲ್ಲದ ಕಾರಣ ಪೂಜಾ ಅವರಿಗೆ ಮಗುವನ್ನು ಕೊಡಿಸಿದರೆ ಒಂದು ಲಕ್ಷ ರೂಪಾಯಿ ನೀಡುವುದಾಗಿ ಭರವಸೆ ನೀಡಿದ್ದರು. ಹೀಗಾಗಿ ಹಣದ ಆಮಿಷಕ್ಕೆ ಒಳಗಾಗಿದ್ದ ಪೂಜಾ ಮತ್ತು ಆಕೆಯ ಪತಿ ಅನಿಲ್ ಜೂನ್ 6 ರಂದು ಆರವ್‍ನನ್ನು ಕಿಡ್ನಾಪ್ ಮಾಡಿ ಮಾರಾಟ ಮಾಡಿದ್ದಾರೆ. ಇದೀಗ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.

    =

    Live Tv

  • ವರ, ಅತ್ತೆ ಮನೆಯವರನ್ನು ಕೂಡಿ ಹಾಕಿ ರಾತ್ರೋರಾತ್ರಿ ಚಿನ್ನಾಭರಣ ಜೊತೆ ವಧು ಎಸ್ಕೇಪ್

    ವರ, ಅತ್ತೆ ಮನೆಯವರನ್ನು ಕೂಡಿ ಹಾಕಿ ರಾತ್ರೋರಾತ್ರಿ ಚಿನ್ನಾಭರಣ ಜೊತೆ ವಧು ಎಸ್ಕೇಪ್

    ಲಕ್ನೋ: ವರ ಮತ್ತು ಅತ್ತೆ ಮನೆಯವರನ್ನು ಮನೆಯೊಳಗೆ ಕೂಡಿ ಹಾಕಿ ಚಿನ್ನಾಭರಣ ದೋಚಿಕೊಂಡು ವಧು ರಾತ್ರೋ, ರಾತ್ರಿ ಪರಾರಿಯಾಗಿರುವ ಘಟನೆ ಆಗ್ರಾದಲ್ಲಿ ನಡೆದಿದೆ.

    ಏಪ್ರಿಲ್ 25ರಂದು ಆಗ್ರಾದ ಶಾಹಗಂಜ್ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಮದುವೆಯಾಗಿ ಅತ್ತೆ ಮನೆಗೆ ಬಂದ ಕೇವಲ 10 ಗಂಟೆಗಳಲ್ಲೇ ವಧು ಚಿನ್ನಾಭರಣ ದೋಚಿ ಎಸ್ಕೇಪ್ ಆಗಿದ್ದಾಳೆ. ಇದನ್ನೂ ಓದಿ: ಕಾತುವಕುಲಾ ರೆಂಡು ಕಾದಲ್’ ರಿಲೀಸ್: ತಿರುಪತಿ ಆಶೀರ್ವಾದ ಪಡೆದ ನಯನತಾರಾ, ವಿಘ್ನೇಶ್ ಶಿವನ್

    ಬೆಳ್ಳಿ ಕುಶಲಕರ್ಮಿಕನಾಗಿದ್ದ ಯುವಕ ವಧುವನ್ನು ಹುಡುಕುತ್ತಿದ್ದರು. ಇದೇ ವೇಳೆ ತಾಜ್‍ಗಂಜ್‍ನ ಕಾರ್ಖಾನೆಯ ಉದ್ಯೋಗಿಯೊಬ್ಬರು ತಮ್ಮ ಅತ್ತಿಗೆಗೆ ಎರಡು ತಿಂಗಳಿನಿಂದ ವರನನ್ನು ಹುಡುಕುತ್ತಿರುವುದಾಗಿ ತಿಳಿಸಿದ್ದರು. ನಂತರ ಎರಡು ಕಡೆಯವರು ಭೇಟಿಯಾಗಿ ಮದುವೆಗೆ ಒಪ್ಪಿದರು. ಇದನ್ನೂ ಓದಿ:  90 ವರ್ಷದ ಬುದ್ಧಿಮಾಂದ್ಯ ತಾಯಿ, ಮಗನನ್ನು ಗುರುತಿಸುವ ಭಾವನಾತ್ಮಕ ವೀಡಿಯೋ ವೈರಲ್ 

    POLICE JEEP

    ವಧುವಿನ ಸೋದರ ಮಾವ, ಹುಡುಗಿ ಮನೆಯವರು ಬಡವರಾಗಿದ್ದು, ಮದುವೆಯ ವೆಚ್ಚವನ್ನು ಭರಿಸಲಾಗುವುದಿಲ್ಲ ಎಂದು ಹೇಳಿದ್ದರು. ಹೀಗಾಗಿ ವರನ ಮನೆಯವರು ಇಬ್ಬರೂ ಕಡೆಯವರ ಮದುವೆಯ ವೆಚ್ಚದ ಜವಾಬ್ದಾರಿಯನ್ನು ತಾವೇ ತೆಗೆದುಕೊಂಡರು. ಬಳಿಕ ಏಪ್ರಿಲ್ 25 ರಂದು ಗೋರಖ್‍ಪುರದಲ್ಲಿ ಜೋಡಿ ಸಂಪ್ರದಾಯ ಪ್ರಕಾರ ವಿವಾಹವಾದರು. ಏಪ್ರಿಲ್ 26ರ ಬೆಳಗ್ಗೆ ವಧುವನ್ನು ವರನ ಕಡೆಯವರು ಆಗ್ರಾದಲ್ಲಿರುವ ತಮ್ಮ ಮನೆಗೆ ಕರೆದೊಯ್ದರು.

    ಏಪ್ರಿಲ್ 26ರ ಮಧ್ಯರಾತ್ರಿ 12 ಗಂಟೆ ಸುಮಾರಿಗೆ ವಧು ನಿಧಾನವಾಗಿ ಎದ್ದು, ಮನೆಯ ಅಂಗಳದ ಗೋಡೆಯನ್ನು ಹತ್ತಿ ಪರಾರಿಯಾಗಿದ್ದಾಳೆ. ವಧು ಪರಾರಿಯಾಗುವ ಮುನ್ನ ತನ್ನ ಅತ್ತೆ ಮತ್ತು ವರನ ಕೋಣೆಯ ಬಾಗಿಲಿಗೆ ಹೊರಗಿನಿಂದ ಬೀಗ ಓಡಿಹೋಗಿದ್ದಾಳೆ. ಈ ವಿಚಾರ ತಿಳಿದ ಕುಟುಂಬಸ್ಥರು ಬೆಚ್ಚಿ ಬಿದ್ದಿದ್ದಾರೆ. ತಡರಾತ್ರಿ ವಧು ಹೊರಗೆ ಹೋಗುತ್ತಿರುವುದನ್ನು ಕಂಡ ಕಾಲೋನಿ ವಾಚ್‍ಮನ್ ಅನುಮಾನಗೊಂಡು ಗೇಟ್ ತೆರೆಯಲು ನಿರಾಕರಿಸಿದ್ದಾನೆ ಮತ್ತು ವಧುವನ್ನು ಪ್ರಶ್ನಿಸಲು ಮುಂದಾಗಿದ್ದಾನೆ. ಆಗ ವಾಚ್‍ಮನ್‍ಗೆ ವಧು ಬೆದರಿಕೆಯೊಡ್ಡಿ ಹೋಗಿದ್ದಾಳೆ.

    ಕೊನೆಗೆ ಬಾಗಿಲು ಒಡೆದು ಹಾಕಿ ವರ ಮತ್ತು ಆತನ ಕುಟುಂಬಸ್ಥರು ಮನೆಯಿಂದ ಹೊರಬಂದು ರಾತ್ರಿಯಿಡೀ ವಧುವನ್ನು ಹುಡುಕಾಡಿದ್ದಾರೆ. ಆದರೆ ವಧು ಪತ್ತೆಯಾಗಲಿಲ್ಲ. ಇದರಿಂದ ಬೇಸರಗೊಂಡ ಕುಟುಂಬಸ್ಥರು ಠಾಣೆಗೆ ಬಂದು ದೂರು ನೀಡಿದ್ದಾರೆ. ಸದ್ಯ ಪೊಲೀಸರು ಕಾಲೋನಿ ಹಾಗೂ ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ.

  • ಇಮ್ಲಿವಾಲಿ ಮಸೀದಿ ಮುಂದೆ ನಮಾಜ್ ಮಾಡಿದ 150 ಮಂದಿ ವಿರುದ್ಧ FIR

    ಇಮ್ಲಿವಾಲಿ ಮಸೀದಿ ಮುಂದೆ ನಮಾಜ್ ಮಾಡಿದ 150 ಮಂದಿ ವಿರುದ್ಧ FIR

    ಲಕ್ನೋ: ಆಗ್ರಾದಲ್ಲಿ ಪೊಲೀಸರ ಅನುಮತಿಯಿಲ್ಲದೆ ಮಸೀದಿಯ ಮುಂಭಾಗದ ರಸ್ತೆಯಲ್ಲಿ ನಮಾಜ್ ಮಾಡಿದ 150ಕ್ಕೂ ಹೆಚ್ಚು ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

    ರಸ್ತೆಗಳಲ್ಲಿ ನಮಾಜ್ ಮಾಡುವುದನ್ನು ವಿರೋಧಿಸಿ ಹಿಂದೂ ಸಂಘನೆಗಳು ಪ್ರತಿಭಟನೆ ನಡೆಸಿದ ನಂತರ ಸಿಎಂ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರವು ರಸ್ತೆಗಳಲ್ಲಿ ನಮಾಜ್ ಮಾಡುವುದನ್ನು ನಿಷೇಧಿಸುವಂತೆ ಆದೇಶ ಹೊರಡಿಸಿದೆ. ಆದರೂ ಆದೇಶ ಹೊರಡಿಸಿದ ಕೆಲವೇ ದಿನಗಳಲ್ಲಿ ಈ ಘಟನೆ ಬೆಳಕಿಗೆ ಬಂದಿದೆ. ಸೆಕ್ಷನ್ 144 ಉಲ್ಲಂಘಿಸಿದ್ದು, ಧಾರ್ಮಿಕ ಭಾವನೆಯನ್ನು ಘಾಸಿಗೊಳಿಸಿದೆ ಎಂದು ಹೇಳಿ ಪೊಲೀಸರು ಸಾರ್ವಜನಿಕ ಆಸ್ತಿಗೆ ಹಾನಿ ತಡೆ ಕಾಯ್ದೆ ಪ್ರಕರಣ ದಾಖಲಿಸಿದ್ದಾರೆ ಎಂದು ಸುದ್ದಿಸಂಸ್ಥೆಯೊಂದು ವರದಿ ಮಾಡಿದೆ. ಇದನ್ನೂ ಓದಿ: ಯಾರೋ ಒಬ್ಬ ಮೌಲ್ವಿ ತಪ್ಪು ಮಾಡಿದ್ರೆ ಎಲ್ಲರೂ ತಪ್ಪು ಮಾಡಿದ್ದಾರೆ ಎಂದರ್ಥವಲ್ಲ: ಸಿದ್ದು

    IMLI VALI MASID

    ಸರೋಜಿನಿ ನಾಯ್ಡು ಮೆಡಿಕಲ್ ಕಾಲೇಜು ರಸ್ತೆಯಲ್ಲಿರುವ ಇಮ್ಲಿವಾಲಿ ಮುಂಭಾಗದ ಮಸೀದಿ ರಸ್ತೆಯಲ್ಲಿ 5 ದಿನಗಳ ಕಾಲ ರಾತ್ರಿ 9 ರಿಂದ 11 ಗಂಟೆ ವರೆಗೆ ಭಕ್ತರಿಗೆ ನಮಾಜ್ ಮಾಡಲು ಅನುಮತಿ ನೀಡಲಾಗಿತ್ತು. ಇದಕ್ಕಾಗಿ ಸ್ಥಳೀಯ ಮಳಿಗೆದಾರರು ಹಾಗೂ ಅಡಳಿತದ ಒಪ್ಪಿಗೆಯನ್ನೂ ಪಡೆದಿದ್ದರು. ಆದರೆ ಈ ವರ್ಷ ರಸ್ತೆಯಲ್ಲಿ ಪ್ರಾರ್ಥನೆ ಮಾಡಲು ಹಿಂದೂ ಸಂಘಟನೆಗಳು ಆಕ್ಷೇಪ ವ್ಯಕ್ತಪಡಿಸಿದ್ದವು. ಅಲ್ಲದೆ ಹನುಮಾನ್ ಚಾಲೀಸಾ ಪಠಿಸುವುದಾಗಿಯೂ ಬೆದರಿಕೆ ಹಾಕಿದ್ದವು. ಹೀಗಾಗಿ ಅನಿರೀಕ್ಷಿತ ಕೋಮು ಸಂಘರ್ಷವನ್ನು ತಪ್ಪಿಸಲು ಜಿಲ್ಲಾಡಳಿತ ತಕ್ಷಣ ಅನುಮತಿ ಹಿಂಪಡೆಯಿತು. ಇದನ್ನೂ ಓದಿ: ಕುಂಕುಮ ಇಟ್ಟವರು ಯಾರು ಬಾಂಬ್ ಹಾಕಿಲ್ಲ, ಬಾಂಬ್ ಹಾಕೋರು ಟೋಪಿ ಹಾಕಿದವರು: ಸಿ.ಟಿ ರವಿ

    mosque-loudspeakers
    ಸಾಂದರ್ಭಿಕ ಚಿತ್ರ

    ಇಮ್ಲಿವಾಲಿ ಮಸೀದಿ ಮುಂಭಾಗದ ರಸ್ತೆಯಲ್ಲಿ ಕಳೆದ 40 ವರ್ಷಗಳಿಂದ ನಮಾಜ್‌ಗೆ ಅವಕಾಶ ನೀಡಲಾಗುತ್ತಿತ್ತು ಎಂದು ಮಸೀದಿಯ ವ್ಯವಸ್ಥಾಪಕ ಇರ್ಫಾನ್ ಸಲೀಂ ಮತ್ತು ಅವರ ಬೆಂಬಲಿಗರು ಹೇಳಿದರು. ಆದರೆ ಈ ಬಾರಿ ಸಂಜಯ್ ಜಾಟ್ ಅವರ ನೇತೃತ್ವದಲ್ಲಿ ಹಿಂದೂ ಮಹಾಸಭಾದ ಸದಸ್ಯರು ಪ್ರಾರ್ಥನಾ ಸ್ಥಳಕ್ಕೆ ಆಗಮಿಸಿ ಹನುಮಾನ್ ಚಾಲೀಸಾ ಪಠಿಸುವುದಾಗಿ ಬೆದರಿಕೆ ಹಾಕಿದರು. ಹಿಂದುತ್ವ ಸಂಘಟನೆಗಳ ಒತ್ತಡಕ್ಕೆ ಮಣಿದು ಜಿಲ್ಲಾಡಳಿತ ಈ ಕ್ರಮ ಕೈಗೊಂಡಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ ಎಂದು ಹೇಳಲಾಗಿದೆ.