Tag: agriculiture bill

  • ರೈತ ವಿರೋಧಿ ನಡೆಯೇ ರಾಜೀನಾಮೆಗೆ ಕಾರಣ: ಬಿಜೆಪಿ ತೊರೆದ ನಾಯಕಿ

    ರೈತ ವಿರೋಧಿ ನಡೆಯೇ ರಾಜೀನಾಮೆಗೆ ಕಾರಣ: ಬಿಜೆಪಿ ತೊರೆದ ನಾಯಕಿ

    ಲಕ್ನೋ: ದೆಹಲಿ ಗಡಿ ಭಾಗದಲ್ಲಿ ನಡೆಯುತ್ತಿರುವ ಅನ್ನದಾತರ ಪ್ರತಿಭಟನೆಯನ್ನ ಬೆಂಬಲಿಸಿ ಬಿಜೆಪಿ ನಾಯಕಿ ಪ್ರಿಯಮ್ ವಾಡ್ ಪಕ್ಷದ ಪ್ರಾಥಮಿಕ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದರ ಜೊತೆಗೆ ಉತ್ತರ ಪ್ರದೇಶದ ಮಹಿಳಾ ಆಯೋಗದ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

    ರಾಜೀನಾಮೆ ಬಳಿಕ ಪ್ರತಿಕ್ರಿಯಿಸಿರುವ ಪ್ರಿಯಮ್ ವಾಡ್, ರೈತ ವಿರೋಧಿ ನಡೆಯೇ ತಮ್ಮ ಈ ನಿರ್ಧಾರಕ್ಕೆ ಕಾರಣ. ಕೇಂದ್ರ ಸರ್ಕಾರದ ನೂತನ ಕೃಷಿ ಕಾನೂನುಗಳನ್ನು ವಿರೋಧಿಸಿ ರೈತರು ನಾಲ್ಕು ತಿಂಗಳಿನಿಂದ ರಸ್ತೆಯಲ್ಲಿ ಕುಳಿತಿದ್ದಾರೆ. ಆದ್ರೆ ಸರ್ಕಾರ ರೈತರ ಪ್ರತಿಭಟನೆಯನ್ನ ನಿರ್ಲಕ್ಷ್ಯದಿಂದ ಕಾಣುತ್ತಿದೆ. ಉತ್ತರ ಪ್ರದೇಶದಲ್ಲಿ ಸರ್ಕಾರ ಮಹಿಳೆಯರ ಬೇಡಿಕೆಗಳನ್ನ ಪೂರ್ಣಗೊಳಿಸುವಲ್ಲಿ ವಿಫಲವಾಗಿದೆ ಎಂದು ಹೇಳಿದರು.

    ತಮ್ಮ ರಾಜೀನಾಮೆ ಪತ್ರವನ್ನ ಉತ್ತರ ಪ್ರದೇಶದ ಬಿಜೆಪಿ ಅಧ್ಯಕ್ಷ ಸ್ವತಂತ್ರ ದೇವ್ ಸಿಂಗ್ ಅವರಿಗೆ ರವಾನಿಸಿದ್ದಾರೆ. ರಾಜೀನಾಮೆ ಬಳಿಕ ತಮ್ಮ ಮುಂದಿನ ನಡೆ ಏನು ಎಂಬುದರ ಬಗ್ಗೆ ಪ್ರಿಯಮ್ ವಾಡ್ ಸ್ಪಷ್ಟಪಡಿಸಿಲ್ಲ.

  • ಇದು ಶಾಹೀನ್ ಬಾಗ್ ಅಲ್ಲ, ರೈತರ ಆಂದೋಲನ: ರಾಕೇಶ್ ಟಿಕಾಯತ್

    ಇದು ಶಾಹೀನ್ ಬಾಗ್ ಅಲ್ಲ, ರೈತರ ಆಂದೋಲನ: ರಾಕೇಶ್ ಟಿಕಾಯತ್

    – ಕರ್ಫ್ಯೂ, ಲಾಕ್‍ಡೌನ್ ಬಂದ್ರೂ ಪ್ರತಿಭಟನೆ ನಿಲ್ಲಲ್ಲ

    ನವದೆಹಲಿ: ಕೊರೊನಾ ನಿಯಂತ್ರಣಕ್ಕಾಗಿ ಸರ್ಕಾರ ಕರ್ಫ್ಯೂ, ಲಾಕ್‍ಡೌನ್ ತಂದರೂ ರೈತರ ಪ್ರತಿಭಟನೆ ಮುಂದುವರಿಯಲಿದೆ. ಇದು ಶಾಹೀನ್ ಬಾಗ್ ಅಲ್ಲ, ರೈತರ ಆಂದೋಲನ ಎಂದು ಕೇಂದ್ರ ಸರ್ಕಾರಕ್ಕೆ ಭಾರತೀಯ ಕಿಸಾನ್ ಯೂನಿಯನ್ ನಾಯಕ ರಾಕೇಶ್ ಟಿಕಾಯತ್ ಸಂದೇಶ ರವಾನಿಸಿದ್ದಾರೆ.

    ಸಹಾರನುಪುರದಲ್ಲಿ ರೈತರನ್ನ ಉದ್ದೇಶಿಸಿ ಮಾತನಾಡಿದ ರಾಕೇಶ್ ಟಿಕಾಯತ್, ದೇಶದಲ್ಲಿ ರೈತರ ಆಂದೋಲನ ನಿರಂತರವಾಗಿರಲಿದೆ. ನವೆಂಬರ್-ಡಿಸೆಂಬರ್ ವರೆಗೂ ಧರಣಿ ನಡೆಯಲಿದೆ ಎಂದು ತಿಳಿಸಿದರು. ಕೊರೊನಾ ಹೆಸರಿನಲ್ಲಿ ರೈತರನ್ನ ಹೆದರಿಸೋದನ್ನ ನಿಲ್ಲಿಸಿ. ಕರ್ಫ್ಯೂ, ಲಾಕ್‍ಡೌನ್ ಹೆಸರಿನ ಮೂಲಕ ರೈತರ ಆಂದೋಲನವನ್ನ ವಿಫಲಗೊಳಿಸುವ ವ್ಯರ್ಥ ಪ್ರಯತ್ನಕ್ಕೆ ಮುಂದಾಗಬೇಡಿ ಎಂದು ಆಕ್ರೋಶ ಹೊರ ಹಾಕಿದರು.

    ಇದೇ ವೇಳೆ ಸಹರಾನಪುರದ ಹುತಾತ್ಮ ಭಗತ್ ಸಿಂಗ್ ಅವರ ಸಂಬಂಧಿ ಕಿರಣ್‍ಜಿತ್ ಸಿಂಗ್ ಪುತ್ರಿಯ ಮದುವೆ ಸಮಾರಂಭದಲ್ಲಿ ಭಾಗಿಯಾದರು. ಅಲ್ಲಿಂದ ನೇರವಾಗಿ ಹಿಮಾಚಲ ಪ್ರದೇಶಕ್ಕೆ ತೆರಳಿ ರೈತರನ್ನ ಭೇಟಿಯಾಗಲಿದ್ದಾರೆ. ತದನಂತರ ಬಿಹಾರದಲ್ಲಿ ಕಿಸಾನ್ ಪಂಚಾಯ್ತನಲ್ಲಿ ಭಾಗಿಯಾಗಿ ರೈತರನ್ನ ಉದ್ದೇಶಿಸಿ ಮಾತನಾಡಲಿದ್ದಾರೆ.

    2019 ಸೆಪ್ಟೆಂಬರ್ ನಿಂದ ಕೇಂದ್ರ ಸರ್ಕಾರ ನೂತನ ಕೃಷಿ ಕಾನೂನುಗಳನ್ನ ವಿರೋಧಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಸೆಪ್ಟೆಂಬರ್ 26ರಿಂದ ದೆಹಲಿ ಗಡಿ ಭಾಗಗಳಲ್ಲಿಯೇ ವಾಸ್ತವ್ಯ ಹೂಡಿರುವ ಅಪಾರ ಸಂಖ್ಯೆಯ ರೈತರು ತಮ್ಮ ಧರಣಿ ಮುಂದುವರಿಸಿದ್ದಾರೆ. ರೈತರು ಮತ್ತು ಸರ್ಕಾರದ ನಡುವೆ 11 ಬಾರಿ ಮಾತುಕತೆ ನಡೆದ್ರೂ ಯಶಸ್ವಿಯಾಗಿಲ್ಲ. ಸರ್ಕಾರ ಮೂರು ಕಾನೂನುಗಳನ್ನು ಹಿಂಪಡೆದು, ಎಂಎಸ್‍ಪಿ ಗ್ಯಾರೆಂಟಿ ಕಾನೂನು ತರಬೇಕೆಂದು ಆಗ್ರಹಿಸಿದ್ದಾರೆ.

  • ಕನಿಷ್ಠ ಬೆಂಬಲ ಬೆಲೆ ಮುಂದುವರಿಕೆ ಭರವಸೆ- ಹಠ ಬಿಡದ ಅನ್ನದಾತರಿಂದ ಹೋರಾಟ ತೀವ್ರ

    ಕನಿಷ್ಠ ಬೆಂಬಲ ಬೆಲೆ ಮುಂದುವರಿಕೆ ಭರವಸೆ- ಹಠ ಬಿಡದ ಅನ್ನದಾತರಿಂದ ಹೋರಾಟ ತೀವ್ರ

    ನವದೆಹಲಿ: ಕೇಂದ್ರ ಒಪ್ತಿಲ್ಲ – ರೈತರು ಪಟ್ಟು ಸಡಿಲಿಸ್ತಿಲ್ಲ. ಕೇಂದ್ರ ಕಳಿಸಿದ ಲಿಖಿತ ಭರವಸೆಯನ್ನು ಕೂಡ ರೈತರು ಒಪ್ಪಿಲ್ಲ. ಪರಿಣಾಮ, ಸತತ 14ನೇ ದಿನವೂ ದೆಹಲಿ ಹೊರ ವಲಯದಲ್ಲಿ ಅನ್ನದಾತರ ಪ್ರತಿಭಟನೆ ಮುಂದುವರಿದಿದೆ.

    ಮಂಗಳವಾರ ರಾತ್ರಿ ಅಮಿತ್ ಶಾ ಜೊತೆಗಿನ ಸಂಧಾನ ಸಭೆ ವಿಫಲವಾದ ಬಳಿಕ ಇವತ್ತಿನ ಸಭೆ ರದ್ದು ಮಾಡಿದ ಕೇಂದ್ರ ಸರ್ಕಾರ, ರೈತರ ಬೆಳೆಗಳಿಗೆ ಬೆಂಬಲ ಬೆಲೆ ಇರುತ್ತೆ ಎಂಬ ಭರವಸೆ ಸೇರಿ ಹಲವು ತಿದ್ದುಪಡಿಗಳಿಗೆ ಸಮ್ಮತಿ ಸೂಚಿಸಿ ಲಿಖಿತ ಪ್ರಸ್ತಾವನೆಯನ್ನು ಧರಣ ನಿರತ ಅನ್ನದಾತರ ಬಳಿಗೆ ಕಳಿಸಿತ್ತು. ಆದರೆ ಅನ್ನದಾತರು ಮಾತ್ರ ಇದನ್ನು ಒಪ್ಪೋಕೆ ರೆಡಿ ಇಲ್ಲ. ಸಿಂಘು ಗಡಿಯಲ್ಲಿ ಇಂದು ಸಭೆ ಸೇರಿದ್ದ ರೈತರು, ತಮ್ಮ ಹಳೆಯ ನಿಲುವಿಗೆ ಅಂಟಿಕೊಂಡಿರಲು ತೀರ್ಮಾನಿಸಿದ್ದಾರೆ.

    ಸಭೆಯ ಬಳಿಕ ಮೂರು ಕೃಷಿ ಕಾಯ್ದೆಗಳನ್ನು ರದ್ದು ಮಾಡೋವರೆಗೂ ಹೋರಾಟದಿಂದ ವಿರಮಿಸಲ್ಲ ಎಂದು ಘೋಷಿಸಿದ್ದಾರೆ. ಸೋಮವಾರ ದೆಹಲಿಯಲ್ಲಿ ದೊಡ್ಡಮಟ್ಟದ ಸಮಾವೇಶ, ಡಿಸೆಂಬರ್ 12ರವರೆಗೂ ಜೈಪುರ-ದೆಹಲಿ, ಆಗ್ರಾ-ದೆಹಲಿ ಹೈವೇ ತಡೆ ನಡೆಸೋದಾಗಿ ಎಚ್ಚರಿಸಿದ್ದಾರೆ. ದೇಶಾದ್ಯಂತ ಎಲ್ಲಾ ಟೋಲ್‍ಗಳ ಬಳಿ ಪ್ರತಿಭಟನೆ ನಡೆಸುವುದಾಗಿಯೂ ತಿಳಿಸಿದ್ದಾರೆ.

    ಡಿಸೆಂಬರ್ 13ರಿಂದ ಬಿಜೆಪಿ ನಾಯಕರಿಗೆ ಕಂಡಕಂಡಲ್ಲಿ ಘೇರಾವ್ ಹಾಕೋದಾಗಿ ರೈತರು ಪ್ರಕಟಿಸಿದ್ದು, ಡಿಸೆಂಬರ್ 14ರಂದು ದೇಶಾದ್ಯಂತ ಚಳವಳಿ ನಡೆಡುವ ಸಂದೇಶವನ್ನ ಕೇಂದ್ರಕ್ಕೆ ರವಾನಿಸಿದ್ದಾರೆ. ಕೇಂದ್ರ ಸರ್ಕಾರ ತಮ್ಮ ಬೇಡಿಕೆಗೆ ಒಪ್ಪಿದ್ರೇ ನಾಳೆಯೇ ಕೇಂದ್ರದ ಜೊತೆ ಮಾತುಕತೆ ಸಿದ್ಧ ಎಂದು ಕೂಡ ಸ್ಪಷ್ಟಪಡಿಸಿದ್ದಾರೆ.

    ಈ ಮಧ್ಯೆ, ಸಂಜೆ ರಾಷ್ಟ್ರಪತಿಗಳನ್ನು ಭೇಟಿ ಮಾಡಿದ ವಿಪಕ್ಷ ನಿಯೋಗ, ವಿವಾದಿತ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯಬೇಕೆಂದು ಮನವಿ ಪತ್ರ ಸಲ್ಲಿಸಿದ್ರು. ರಾಹುಲ್ ಗಾಂಧಿ, ಶರದ್ ಪವಾರ್ ಸೇರಿ ಹಲವರು ಈ ವೇಳೆ ಉಪಸ್ಥಿತರಿದ್ದರು.