Tag: Agricultural Law

  • ಕೃಷಿ ಕಾನೂನು ವಾಪಸ್ ಬೆನ್ನಲ್ಲೇ ಪಂಜಾಬ್‌ನಲ್ಲಿ ಕ್ಯಾಪ್ಟನ್ ಜೊತೆಗೆ ಬಿಜೆಪಿ ಮೈತ್ರಿ

    ಕೃಷಿ ಕಾನೂನು ವಾಪಸ್ ಬೆನ್ನಲ್ಲೇ ಪಂಜಾಬ್‌ನಲ್ಲಿ ಕ್ಯಾಪ್ಟನ್ ಜೊತೆಗೆ ಬಿಜೆಪಿ ಮೈತ್ರಿ

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಮೂರು ಕೃಷಿ ಕಾನೂನುಗಳನ್ನು ವಾಪಸ್ ಪಡೆಯುತ್ತಿದ್ದಂತೆ ಪಂಜಾಬ್ ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ. 2022 ರ ಫೆಬ್ರವರಿ – ಮಾರ್ಚ್‍ನಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಚುನಾವಣೆ ಪೂರ್ವ ಮೈತ್ರಿ ಲೆಕ್ಕಾಚಾರಗಳು ಶುರುವಾಗಿವೆ.

    ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೇಂದ್ರ ಸಿಂಗ್ ಜೊತೆಗೆ ಮೈತ್ರಿ ಮಾಡಿಕೊಳ್ಳುವ ಲೆಕ್ಕಚಾರದಲ್ಲಿದೆ. ಬಿಜೆಪಿ ಈ ಬಾರಿ ಶಿರೋಮಣಿ ಅಕಾಲಿದಳ ಜೊತೆಗೆ ಮೈತ್ರಿಗೆ ಹಿಂದೇಟು ಹಾಕಿದ್ದು ಕ್ಯಾಪ್ಟನ್ ಜೊತೆಗೆ ಹೊಸ ರಾಜಕೀಯ ತಂತ್ರಗಳನ್ನು ಮಾಡಲು ಮುಂದಾಗಿದೆ. ಇದಕ್ಕೆ ಪೂರಕವಾಗಿ ಹೇಳಿಕೆ ನೀಡಿರುವ ಪಂಜಾಬ್ ಬಿಜೆಪಿ ಅಧ್ಯಕ್ಷ ಅಶ್ವಿನಿ ಶರ್ಮಾ ಕ್ಯಾಪ್ಟನ್ ಜೊತೆಗಿನ ಮೈತ್ರಿಗೆ ನಮ್ಮ ಆದ್ಯತೆಯಾಗಿರಲಿದ್ದು ಶಿರೋಮಣಿ ಅಕಾಲಿದಳ ಜೊತೆಗೆ ಮೈತ್ರಿ ಸಾಧ್ಯವಿಲ್ಲ ಎಂದು ಹೇಳಿದ್ದಾರೆ.  ಇದನ್ನೂ ಓದಿ:  ಲಿಂಗ ತಾರತಮ್ಯವಿಲ್ಲದೇ ಒಂದೇ ರೀತಿ ಸಮವಸ್ತ್ರ ನೀಡಿದ ಕೇರಳ ಶಾಲೆ

    ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಕ್ಯಾಪ್ಟನ್ ಅಮರೇಂದ್ರ ಸಿಂಗ್ ಪ್ರತ್ಯೇಕ ಪಕ್ಷ ಸ್ಥಾಪನೆ ಬಗ್ಗೆ ಘೋಷಿಸಿದರು. ಅಲ್ಲದೇ ಇದಕ್ಕೂ ಮುನ್ನ ಕೇಂದ್ರ ಗೃಹ ಸಚಿವ ಅಮಿತ್ ಶಾರನ್ನು ಭೇಟಿ ಮಾಡಿದ್ದ ಅವರು ಮೂರು ಕೃಷಿ ಕಾನೂನುಗಳನ್ನು ವಾಪಸ್ ಪಡೆಯುವ ಬಗ್ಗೆ ಚರ್ಚೆ ನಡೆಸಿದ್ದರು. ಅಮರೇಂದ್ರ ಸಿಂಗ್ ಭೇಟಿ ಬಳಿಕ ಕೇಂದ್ರ ಸರ್ಕಾರವೂ ಕಾನೂನು ವಾಪಸ್ ಪಡೆದಿದ್ದು ತೆರೆ ಹಿಂದಿನ ರಾಜಕೀಯ ಹೊಂದಾಣಿಕೆಯನ್ನ ತೊರ್ಪಡಿಸಿದೆ. ಇದನ್ನೂ ಓದಿ:  ಪತ್ನಿಯನ್ನು ಕೊಂದು ವಿಷ ಸೇವಿಸಿ ಆಸ್ಪತ್ರೆ ಸೇರಿದ್ದ ಪತಿರಾಯ ಈಗ ಪೊಲೀಸರ ಅತಿಥಿ

    ಕಳೆದ ಬಾರಿಯ ಚುನಾವಣೆಯಲ್ಲಿ ಶಿರೋಮಣಿ ಅಕಾಲಿದಳ 84% ಸ್ಥಾನಗಳಲ್ಲಿ ಸ್ವರ್ಧಿಸಿದರೇ ಬಾಕಿ ಸ್ಥಾನಗಳಲ್ಲಿ ಬಿಜೆಪಿ ಸ್ಪರ್ಧಿಸಿತ್ತು. ಮೂರು ಕೃಷಿ ಕಾನೂನುಗಳನ್ನು ವಾಪಸ್ ಪಡೆಯುವ ವಿಚಾರದಲ್ಲಿ ಬಿಜೆಪಿ ಮತ್ತು ಅಕಾಲಿದಳ ನಡುವಿನ ಆತಂರಿಕ ಸಂಘರ್ಷದ ಬಳಿಕ ಅಕಾಲಿದಳ ಬಿಜೆಪಿ ಜೊತೆಗಿನ ಸಂಬಂಧಕ್ಕೆ ಗುಡ್ ಬೈ ಹೇಳಿತ್ತು. ಈ ವೇಳೆ ಬಿಜೆಪಿಗೆ ರಾಷ್ಟ್ರೀಯ ಮಟ್ಟದಲ್ಲಿ ಮುಜುಗರವಾಗಿತ್ತು. ಈ ಹಿನ್ನಲೆ ಈ ಬಾರಿ ಕ್ಯಾಪ್ಟನ್ ಜೊತೆಗೆ ಹೆಚ್ಚು ಸ್ಥಾನಗಳಲ್ಲಿ ಬಿಜೆಪಿ ಸ್ಪರ್ಧಿಸುವ ಇರಾದೆಯಲ್ಲಿದೆ ಎಂದು ವಿಶ್ಲೇಷಿಸಲಾಗಿದೆ.

    ಕೃಷಿ ಕಾನೂನುಗಳ ವಾಪಸ್ ಪಡೆದಿರುವುದು ಬಿಜೆಪಿಗೆ ಪಂಜಾಬ್‍ನಲ್ಲಿ ಲಾಭವಾಗಲಿದೆ ಎಂದು ಅಧ್ಯಕ್ಷ ಅಶ್ವಿನಿ ಶರ್ಮಾ ಹೇಳಿದ್ದಾರೆ. ಈಗಾಗಲೇ ತಯಾರಿ ಆರಂಭಿಸಿದ್ದು ಕಾರ್ಯಕರ್ತರ ಮೂಲಕ ಮೋದಿ ಸರ್ಕಾರದ ಉದ್ದೇಶಗಳನ್ನು ತಲುಪಿಸುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ. ಕೊರೊನಾ ಸಂದರ್ಭದಲ್ಲಿ ಬಿಜೆಪಿ ಅತ್ಯುತ್ತಮ ಕೆಲಸ ಮಾಡಿದ್ದು 117 ಸ್ಥಾನಗಳ ಮೇಲೆ ಗುರಿ ಇದೆ ಎಂದು ಹೇಳಿದ್ದಾರೆ.

  • ಇದು ನಿಮ್ಮ ಹೋರಾಟಕ್ಕೆ ಸಿಕ್ಕ ವಿಜಯವಾಗಿದೆ: ಮಮತಾ ಬ್ಯಾನರ್ಜಿ

    ಇದು ನಿಮ್ಮ ಹೋರಾಟಕ್ಕೆ ಸಿಕ್ಕ ವಿಜಯವಾಗಿದೆ: ಮಮತಾ ಬ್ಯಾನರ್ಜಿ

    ಕೋಲ್ಕತ್ತಾ: ಬಿಜೆಪಿಯು ನಿಮ್ಮನ್ನು ನಡೆಸಿಕೊಂಡ ಕ್ರೌರ್ಯದಿಂದ ವಿಚಲಿತರಾಗದೇ ಪಟ್ಟುಬಿಡದೇ ಹೋರಾಡಿದ್ದೀರಾ. ಇದು ನಿಮ್ಮ ಹೋರಾಟಕ್ಕೆ ಸಿಕ್ಕ ವಿಜಯವಾಗಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.

    ಕಳೆದ ವರ್ಷ ಜಾರಿಗೆ ತಂದ ಮೂರು ಕೃಷಿ ಕಾನೂನುಗಳನ್ನು ರದ್ದುಪಡಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ ನಂತರ ವಿವಾದಿತ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶುಕ್ರವಾರ ಅಭಿನಂದನೆ ಸಲ್ಲಿಸಿದ್ದಾರೆ. ಇದನ್ನೂ ಓದಿ: ದೇಶದ ರೈತರಿಗೆ ನಾನು ಸಲ್ಯೂಟ್ ಮಾಡುತ್ತೇನೆ: ಅರವಿಂದ್ ಕೇಜ್ರಿವಾಲ್

    modi

    ಈ ಕುರಿತಂತೆ ಟ್ವೀಟ್ ಮಾಡಿರುವ ಅವರು, ‘ಬಿಜೆಪಿಯು ನಿಮ್ಮನ್ನು ನಡೆಸಿಕೊಂಡ ಕ್ರೌರ್ಯದಿಂದ ವಿಚಲಿತರಾಗದೇ ಪಟ್ಟುಬಿಡದೇ ಹೋರಾಡಿದ ಪ್ರತಿಯೊಬ್ಬ ರೈತನಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು. ಇದು ನಿಮ್ಮ ವಿಜಯವಾಗಿದೆ. ಈ ಹೋರಾಟದಲ್ಲಿ ತಮ್ಮ ಪ್ರೀತಿ ಪಾತ್ರರನ್ನು ಕಳೆದುಕೊಂಡ ಪ್ರತಿಯೊಬ್ಬರಿಗೂ ನನ್ನ ಸಂತಾಪಗಳು ಎಂದು ತಿಳಿಸಿದ್ದಾರೆ. ಇದನ್ನೂ ಓದಿ:  ಕೃಷಿ ಕಾಯ್ದೆ ವಾಪಸ್ ಪಡೆದ ಮೋದಿ ಸರ್ಕಾರ

    ಈ ಬಗ್ಗೆ ಕಾಂಗ್ರೆಸ್ ಮುಂಖಡ ರಾಹುಲ್ ಗಾಂಧಿ ಅವರು ಸಹ ಹಳೆಯ ವೀಡಿಯೋವೊಂದನ್ನು ಹಂಚಿಕೊಳ್ಳುವುದರ ಜೊತೆಗೆ, ಅನ್ನದಾತರ ಸತ್ಯಾಗ್ರಹ ಅಹಂಕಾರವನ್ನು ಅಡಗಿಸಿತು. ಅನ್ಯಾಯದ ವಿರುದ್ಧ ಗೆಲುವಿಗೆ ಅಭಿನಂದನೆಗಳು. ಜೈ ಹಿಂದ್ ಜೈ ಹಿಂದ್ ಕಾ ಕಿಸಾನ್ ಎಂದು ಟ್ವೀಟ್ ಮಾಡುವ ಮೂಲಕ ರೈತರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಇದನ್ನೂ ಓದಿ: ಅನ್ನದಾತರ ಸತ್ಯಾಗ್ರಹ ಅಹಂಕಾರ ಅಡಗಿಸಿತು: ರಾಹುಲ್ ಗಾಂಧಿ

  • ದೇಶದ ರೈತರಿಗೆ ನಾನು ಸಲ್ಯೂಟ್ ಮಾಡುತ್ತೇನೆ: ಅರವಿಂದ್ ಕೇಜ್ರಿವಾಲ್

    ದೇಶದ ರೈತರಿಗೆ ನಾನು ಸಲ್ಯೂಟ್ ಮಾಡುತ್ತೇನೆ: ಅರವಿಂದ್ ಕೇಜ್ರಿವಾಲ್

    ನವದೆಹಲಿ: ದೇಶದ ರೈತರಿಗೆ ನಾನು ಸಲ್ಯೂಟ್ ಮಾಡುತ್ತೇನೆ ಎಂದು ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ.

    ವಿವಾದಿತ ಕೃಷಿ ಕಾನೂನುಗಳನ್ನು ಕೇಂದ್ರ ಸರ್ಕಾರ ವಾಪಸ್ ಪಡೆದುಕೊಂಡ ಹಿನ್ನೆಲೆ ಅರವಿಂದ್ ಕೇಜ್ರಿವಾಲ್ ಅವರು ಟ್ವೀಟ್ ಮಾಡಿದ್ದಾರೆ. ಪ್ರಕಾಶಮಾನ ದಿನವಾದ ಇಂದು ನನಗೆ ಎಂತಹ ಸಂತಸದ ಸುದ್ದಿ ಸಿಕ್ಕಿದೆ. ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸಲಾಗಿದೆ. 700ಕ್ಕೂ ಹೆಚ್ಚು ರೈತರು ಹುತಾತ್ಮರಾದರು. ಅವರೆಲ್ಲರ ಬಲಿದಾನ ಅಮರವಾಗಿ ಉಳಿಯುತ್ತದೆ. ಕೃಷಿ ಮತ್ತು ರೈತರನ್ನು ಉಳಿಸಲು ಈ ದೇಶದ ರೈತರು ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದರು ಎಂಬುವುದನ್ನು ಮುಂಬರುವ ಪೀಳಿಗೆಯವರಿಗೆ ಸದಾ ನೆನಪಿಸುತ್ತಿರುತ್ತದೆ. ನನ್ನ ದೇಶದ ರೈತರಿಗೆ ನಾನು ಸಲ್ಯೂಟ್ ಮಾಡುತ್ತೇನೆ ಎಂದು ತಿಳಿಸಿದ್ದಾರೆ.

    ಕಳೆದ ವರ್ಷ ಕೇಂದ್ರ ಸರ್ಕಾರ 3 ಕೃಷಿ ಕಾನೂನನ್ನು ಜಾರಿಗೊಳಿಸಿತ್ತು. ಈ ಕುರಿತಂತೆ ದೇಶದ ರೈತರು ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದರು. ಅಲ್ಲದೇ ಅಂದಿನಿಂದ ಇಂದಿನವರೆಗೂ ರೈತರು ಕೃಷಿ ಕಾನೂನನ್ನು ವಾಪಸ್ಸು ಪಡೆಯುವಂತೆ ಪ್ರತಿಭಟನೆ ನಡೆಸುತ್ತಿದ್ದರು. ಇದೀಗ ರೈತರ ಹೋರಾಟಕ್ಕೆ ಮಣಿದ ಕೇಂದ್ರ ಸರ್ಕಾರ ಮೂರು ವಿವಾದಿತ ಕೃಷಿ ಕಾನೂನನ್ನು ಸರ್ಕಾರ ವಾಪಸ್ ಪಡೆದುಕೊಂಡಿದೆ. ಇದನ್ನೂ ಓದಿ:   ಕೃಷಿ ಕಾಯ್ದೆ ವಾಪಸ್ ಪಡೆದ ಮೋದಿ ಸರ್ಕಾರ

    ಶುಕ್ರವಾರ ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು ರೈತರ ಆರ್ಥಿಕ, ಸಾಮಾಜಿಕ ಸ್ಥಿತಿ ಸುಧಾರಿಸಲು ಪ್ರಯತ್ನ ಮಾಡಲಾಗುತ್ತಿದ್ದು, 3 ಕಾಯ್ದೆ ಜಾರಿಗೆ ತಂದಿದ್ದೆವು. ಸಣ್ಣ ರೈತರ ಒಳಿತಿಗಾಗಿಯೇ ಕೃಷಿ ಕಾಯ್ದೆ ಜಾರಿಗೆ ತಂದಿದ್ದೆವು. ಈ 3 ಕಾನೂನುಗಳು ಸಂಪೂರ್ಣವಾಗಿ ರೈತರ ಪರವಾಗಿದ್ದವು. ರೈತರ ಹಿತ ದೃಷ್ಟಿಯಲ್ಲಿಟ್ಟುಕೊಂಡೇ ಕಾಯ್ದೆ ಜಾರಿ ಮಾಡಲಾಗಿತ್ತು. ಯೋಜನೆ ಬಗ್ಗೆ ರೈತರಿಗೆ ತಿಳಿಸಲು ಸಾಕಷ್ಟು ಯತ್ನಿಸಿದ್ದೇವೆ. ಆದರೆ ಕೆಲವು ರೈತರು ಕಾಯ್ದೆಯನ್ನು ಅವರ ಸಲಹೆ ಒಪ್ಪಿಕೊಂಡಿದ್ದರೂ ವಿರೋಧಿಸುತ್ತಿದ್ದಾರೆ. ರೈತರ ನಿರಂತರ ಹೋರಾಟದ ಹಿನ್ನೆಲೆಯಲ್ಲಿ ಇದೀಗ ಸರ್ಕಾರ ಮೂರು ಕೃಷಿ ಕಾಯ್ದೆ ವಾಪಸ್ ಪಡೆಯಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದರು. ಇದನ್ನೂ ಓದಿ: ಸರ್ಕಾರ ಅನ್ನದಾತನ ಮುಂದೆ ಮಂಡಿಯೂರಿದೆ: ಡಿ.ಕೆ. ಶಿವಕುಮಾರ್

  • ಕೃಷಿ ಬಿಲ್, ವಿದ್ಯುತ್ ಬಿಲ್ ಹಿಂಪಡೆಯುವ ಒತ್ತಾಯ – ಕಾರ್ಮಿಕ ಸಂಘಟನೆ ಉಡುಪಿ ತಹಶಿಲ್ದಾರ್ ಕಚೇರಿ ಮುತ್ತಿಗೆ ಎಚ್ಚರಿಕೆ

    ಕೃಷಿ ಬಿಲ್, ವಿದ್ಯುತ್ ಬಿಲ್ ಹಿಂಪಡೆಯುವ ಒತ್ತಾಯ – ಕಾರ್ಮಿಕ ಸಂಘಟನೆ ಉಡುಪಿ ತಹಶಿಲ್ದಾರ್ ಕಚೇರಿ ಮುತ್ತಿಗೆ ಎಚ್ಚರಿಕೆ

    ಉಡುಪಿ: ದೇಶಾದ್ಯಂತ ಕಾರ್ಮಿಕ ಸಂಘಟನೆಗಳು 13 ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪ್ರತಿಭಟನೆಗೆ ಕರೆ ನೀಡಿದ್ದು, ಅದಕ್ಕೆ ಬೆಂಬಲ ಸೂಚಿಸಿ ಉಡುಪಿಯಲ್ಲಿ ಕಾರ್ಮಿಕ ಸಂಘಟನೆಗಳಾದ ಸಿಐಟಿಯು, ಎಐಕೆಎಸ್ ಜಂಟಿಯಾಗಿ ಇವತ್ತು ಪ್ರತಿಭಟನೆ ನಡೆಸಿತು.

    ಉಡುಪಿಯ ಬನ್ನಂಜೆಯಲ್ಲಿರುವ ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಕೇಂದ್ರ, ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿದರು. ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ಸಂಹಿತೆಗಳು ಹಾಗೂ ಜನವಿರೋಧಿ ಕೃಷಿ ಕಾನೂನುಗಳು ಮತ್ತು ವಿದ್ಯುತ್ ತಿದ್ದುಪಡಿಯನ್ನು ರದ್ದುಪಡಿಸಬೇಕು. ರೈತರ ಎಲ್ಲ ಬೆಳೆಗಳಿಗೂ ಕನಿಷ್ಠ ಬೆಂಬಲ ಬೆಲೆ ನೀಡಬೇಕು ಎಂದು ಒತ್ತಾಯಿಸಲಾಯ್ತು.

    ರಾಜ್ಯ ಸರ್ಕಾರ ಶ್ರೀಮಂತರಿಗೆ ಅನುಕೂಲವಾಗುವಂತೆ ಭೂ ಸುಧಾರಣೆ ಕಾಯ್ದೆಗೆ ಮಾಡಿರುವ ತಿದ್ದುಪಡಿಯನ್ನು ಹಿಂಪಡೆಯಬೇಕು ಎಂಬ ಮುಖ್ಯ ಬೇಡಿಕೆಗಳನ್ನು ಕಾರ್ಮಿಕ ಸಂಘಟನೆಗಳು ಮುಂದಿಟ್ಟಿವೆ. ಕಾರ್ಮಿಕರ ಪರವಾಗಿ ನಮ್ಮ ಸಂಘಟನೆ ಪ್ರತಿಭಟನೆ ಮಾಡುತ್ತಿದೆ. ಅಧಿಕಾರದಲ್ಲಿರುವ ನೀವು ಎಲ್ಲಾ ವರ್ಗದವರನ್ನು ಸಮಾನವಾಗಿ ಕಾಣಬೇಕು. ಕಾರ್ಮಿಕರ ಹಿತ ಕಾಪಾಡುವುದು ಸರ್ಕಾರದ ಪ್ರಮುಖ ಉದ್ದೇಶ ಆಗಬೇಕು ಎಂದು ಒತ್ತಾಯಿಸಲಾಯಿತು. ಸರ್ಕಾರ ಕ್ರಮ ಕೈಗೊಳ್ಳದಿದ್ದರೆ ತಹಶೀಲ್ದಾರ್ ಕಚೇರಿಗೆ ಮುತ್ತಿಗೆ ಹಾಕುತ್ತೇವೆ ಎಂದು ಪ್ರತಿಭಟನಾಕಾರರು ಎಚ್ಚರಿಸಿದರು. ಇದನ್ನೂ ಓದಿ: ಲವ್ ಯೂ ರಚ್ಚು’ ಸಿನಿಮಾ ಶೂಟಿಂಗ್ ವೇಳೆ ದುರಂತ – ಹೈಟೆನ್ಷನ್ ವೈರ್ ತಗುಲಿ ಫೈಟರ್ ಸಾವು

  • ಕೃಷಿ ಕಾನೂನು ವಾಪಸ್ ಪಡೆಯಲ್ಲ: ಕೇಂದ್ರ ಕೃಷಿ ಸಚಿವ ತೋಮರ್

    ಕೃಷಿ ಕಾನೂನು ವಾಪಸ್ ಪಡೆಯಲ್ಲ: ಕೇಂದ್ರ ಕೃಷಿ ಸಚಿವ ತೋಮರ್

    – ರೈತರ ಜೊತೆ ಮಾತನಾಡುತ್ತೇವೆ

    ನವದೆಹಲಿ: ನೂತನ ಮೂರು ಕೃಷಿ ಕಾನೂನುಗಳನ್ನು ಯಾವುದೇ ಕಾರಣಕ್ಕೂ ಹಿಂಪಡೆಯಲ್ಲ. ಈ ವಿಷಯವಾಗಿ ರೈತರ ಜೊತೆ ಮಾತುಕತೆ ನಡೆಸುತ್ತೇವೆ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಹೇಳಿದ್ದಾರೆ.

    ಶುಕ್ರವಾರ ಟ್ವಿಟರ್ ನಲ್ಲಿ ತೋಮರ್ ವೀಡಿಯೋ ಶೇರ್ ಮಾಡಿಕೊಂಡಿದ್ದಾರೆ. ಸರ್ಕಾರ ಕೃಷಿ ಕಾನೂನು ಹಿಂಪಡೆಯುವ ಬದಲಾಗಿ, ರೈತರ ಜೊತೆ ಅರ್ಧ ರಾತ್ರಿಯಲ್ಲಿ ಮಾತುಕತೆ ನಡೆಸಲು ಸಿದ್ಧವಿದೆ. ಯಾವುದೇ ರೈತ ಸಂಘಟನೆಯ ಪ್ರಮುಖರು ಮಾತುಕತೆ ಬಂದ್ರೆ ನಾವು ಸ್ವಾಗತಿಸುತ್ತೇವೆ ಎಂದು ಹೇಳಿರುವ ವೀಡಿಯೋ ಹಂಚಿಕೊಂಡಿದ್ದಾರೆ.

    11 ಬಾರಿ ಸಭೆ:
    ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ಮೂರು ಕೃಷಿ ಕಾನೂನುಗಳನ್ನು ವಿರೋಧಿಸಿ ರೈತರು ದೆಹಲಿ ಗಡಿಭಾಗದಲ್ಲಿ ಕಳೆದ ಆರು ತಿಂಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಇದವರೆಗೂ ಸರ್ಕಾರ ಮತ್ತು ರೈತರ ನಡುವೆ 11 ಬಾರಿ ನಡೆಸಿದ ಸಭೆ ವಿಫಲವಾಗಿವೆ. ಜನವರಿ 22ರಂದು ಕೊನೆಯದಾಗಿ ರೈತರು ಕೇಂದ್ರದ ಜೊತೆ ಚರ್ಚೆ ನಡೆಸಿದ್ದರು. ಜನವರಿ 26ರ ಘಟನೆ ಬಳಿಕ ಯಾವುದೇ ಮಾತುಕತೆ ನಡೆದಿಲ್ಲ.

    ಸುಪ್ರಿಂ ತಡೆ:
    ಕೇಂದ್ರ ಸರ್ಕಾರದ ನೂತನ ಮೂರು ಕೃಷಿ ಕಾಯ್ದೆ ಜಾರಿಗೆ ಸುಪ್ರೀಂಕೋರ್ಟ್ ತಡೆ ನೀಡಿದೆ. ಸಮಸ್ಯೆ ಇತ್ಯರ್ಥಕ್ಕಾಗಿ ನಾಲ್ವರು ಸದಸ್ಯರ ಸಮಿತಿ ರಚನೆಗೆ ಸುಪ್ರೀಂಕೋರ್ಟ್ ಸೂಚಿಸಿದೆ. ಸುಪ್ರೀಂಕೋರ್ಟ್ ಸಮಿತಿಯಲ್ಲಿ ಧನವಂತ್ ಶೇಖಾವತ್, ಜೀತೇಂದ್ರ ಸಿಂಗ್ ಮಾನ್, ಅಶೋಕ್ ಗುಲಾಟಿ ಮತ್ತು ಡಾ.ಪ್ರಮೋದ್ ಕುಮಾರ್ ಇರಲಿದ್ದಾರೆ. ಇದನ್ನೂ ಓದಿ: ದೆಹಲಿಯಲ್ಲಿ ಪೊಲೀಸರನ್ನು ಅಟ್ಟಾಡಿಸಿದ ಉದ್ರಿಕ್ತರು – 10 ಅಡಿ ಆಳದ ಕೋಟೆಯಿಂದ ಜಿಗಿದು ಬಚಾವ್

    ರಾಕೇಶ್ ಟಿಕಾಯತ್ ಎಚ್ಚರಿಕೆ:
    ರೈತರು ದೆಹಲಿಯ ಗಡಿಯಿಂದ ಹಿಂದಿರುಗಲ್ಲ. ಆದ್ರೆ ಒಂದು ಷರತ್ತಿನ ಮೇಲೆ ರೈತರು ಹಿಂದಿರಗಬಹುದು. ಅದು ಮೂರು ಕಾನೂನುಗಳನ್ನ ರದ್ದುಗೊಳಿಸಿ, ಎಂಎಸ್‍ಪಿ ಗೆ ಕಾನೂನು ರೂಪಿಸಿದ ದಿನ. ಈ ಆಂದೋಲನದಲ್ಲಿ ದೇಶದ ರೈತರು ಒಗ್ಗಟ್ಟಾಗಿದ್ದಾರೆ. ಔಷಧಿಗಳ ರೀತಿಯಲ್ಲಿ ಆಹಾರವನ್ನ ಕಾಳಸಂತೆಗೆ ತಲುಪಲು ಬಿಡಲ್ಲ ಎಂದು ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಯಾವುದೇ ರಾಜ್ಯದಲ್ಲಿ ಆಂದೋಲದಲ್ಲಿ ಭಾಗಿಯಾದ ರೈತರ ವಿರುದ್ಧ ಪ್ರಕರಣ ದಾಖಲಿಸೋದು, ತನಿಖೆ ನಡೆಸುವ ಪ್ರಕ್ರಿಯೆ ಆರಂಭವಾದ್ರೆ ನಮ್ಮ ಹೋರಾಟ ತೀವ್ರ ಸ್ವರೂಪ ಪಡೆದುಕೊಳ್ಳಲಿದೆ ಎಂದು ರೈತ ಮುಖಂಡ ರಾಕೇಶ್ ಟಿಕಾಯತ್ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ರೈತನಾಯಕ ರಾಕೇಶ್ ಟಿಕಾಯತ್ 80 ಕೋಟಿ ಆಸ್ತಿಯ ಒಡೆಯ

  • ಕೃಷಿ ಕಾನೂನು ಹಿಂಪಡೆದಾಗ ರೈತರು ಹಿಂದಿರುಗುತ್ತಾರೆ: ರಾಕೇಶ್ ಟಿಕಾಯತ್

    ಕೃಷಿ ಕಾನೂನು ಹಿಂಪಡೆದಾಗ ರೈತರು ಹಿಂದಿರುಗುತ್ತಾರೆ: ರಾಕೇಶ್ ಟಿಕಾಯತ್

    ನವದೆಹಲಿ: ಕೇಂದ್ರ ಸರ್ಕಾರ ವಿವಾದಿತ ಮೂರು ಕೃಷಿ ಕಾನೂನು ಹಿಂಪಡೆದ ದಿನ ರೈತರು ಪ್ರತಿಭಟನಾ ಸ್ಥಳದಿಂದ ಹಿಂದಿರುಗುತ್ತಾರೆ ಎಂದು ಭಾರತ್ ಕಿಸಾನ್ ಯೂನಿಯನ್ ನಾಯಕ ರಾಕೇಶ್ ಟಿಕಾಯತ್ ಹೇಳಿದ್ದಾರೆ.

    ರೈತರು ದೆಹಲಿಯ ಗಡಿಯಿಂದ ಹಿಂದಿರುಗಲ್ಲ. ಆದ್ರೆ ಒಂದು ಷರತ್ತಿನ ಮೇಲೆ ರೈತರು ಹಿಂದಿರಗಬಹುದು. ಅದು ಮೂರು ಕಾನೂನುಗಳನ್ನ ರದ್ದುಗೊಳಿಸಿ, ಎಂಎಸ್‍ಪಿ ಗೆ ಕಾನೂನು ರೂಪಿಸಿದ ದಿನ ಎಂದು ರಾಕೇಶ್ ಟಿಕಾಯತ್ ಕೇಂದ್ರ ಸರ್ಕಾರಕ್ಕೆ ಸಂದೇಶ ರವಾನಿಸಿದ್ದಾರೆ. ಇದನ್ನೂ ಓದಿ: ರೈತನಾಯಕ ರಾಕೇಶ್ ಟಿಕಾಯತ್ 80 ಕೋಟಿ ಆಸ್ತಿಯ ಒಡೆಯ

    ಈ ಆಂದೋಲನದಲ್ಲಿ ದೇಶದ ರೈತರು ಒಗ್ಗಟ್ಟಾಗಿದ್ದಾರೆ. ಔಷಧಿಗಳ ರೀತಿಯಲ್ಲಿ ಆಹಾರವನ್ನ ಕಾಳಸಂತೆಗೆ ತಲುಪಲು ಬಿಡಲ್ಲ ಎಂದು ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಯಾವುದೇ ರಾಜ್ಯದಲ್ಲಿ ಆಂದೋಲದಲ್ಲಿ ಭಾಗಿಯಾದ ರೈತರ ವಿರುದ್ಧ ಪ್ರಕರಣ ದಾಖಲಿಸೋದು, ತನಿಖೆ ನಡೆಸುವ ಪ್ರಕ್ರಿಯೆ ಆರಂಭವಾದ್ರೆ ನಮ್ಮ ಹೋರಾಟ ತೀವ್ರ ಸ್ವರೂಪ ಪಡೆದುಕೊಳ್ಳಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ದೆಹಲಿಯಲ್ಲಿ ಪೊಲೀಸರನ್ನು ಅಟ್ಟಾಡಿಸಿದ ಉದ್ರಿಕ್ತರು – 10 ಅಡಿ ಆಳದ ಕೋಟೆಯಿಂದ ಜಿಗಿದು ಬಚಾವ್

    ಮೂರು ಕೃಷಿ ಕಾನೂನುಗಳ ಹಿಂಪಡೆಯುವರೆಗೂ ಆಂದೋಲನ ನಡೆಯಲಿದೆ. ಹಾಗಾಗಿ ರೈತರು ಸಿದ್ಧರಾಗಿರಬೇಕಿದೆ. ಯಾವುದೇ ಕಾರಣಗಳಿಗೂ ಆಂದೋಲನ ಸ್ಥಗಿತಗೊಳಿಸುವ ಪ್ರಶ್ನೆಯೇ ಇಲ್ಲ. ಕೊರೊನಾ ಕಷ್ಟ ಕಾಲದಲ್ಲಿ ಕಪ್ಪು ಕಾನೂನುಗಳ ಜಾರಿಗೆ ತರಬಹುದು. ಆದ್ರೆ ರದ್ದು ಪಡಿಸಲು ಆಗುವದಿಲ್ಲವೇ ಎಂದು ರಾಕೇಶ್ ಟಿಕಾಯತ್ ಪ್ರಶ್ನಿಸಿದರು. ಇದನ್ನೂ ಓದಿ: ಇದು ಶಾಹೀನ್ ಬಾಗ್ ಅಲ್ಲ, ರೈತರ ಆಂದೋಲನ: ರಾಕೇಶ್ ಟಿಕಾಯತ್

  • ಕೃಷಿ ಕಾನೂನು ವಿರೋಧಿಸಿ ಮನೆ ಮೇಲೆ ಕಪ್ಪು ಧ್ವಜ ಹಾರಿಸಿದ ಸಿಧು

    ಕೃಷಿ ಕಾನೂನು ವಿರೋಧಿಸಿ ಮನೆ ಮೇಲೆ ಕಪ್ಪು ಧ್ವಜ ಹಾರಿಸಿದ ಸಿಧು

    ಚಂಡೀಗಢ: ಕೇಂದ್ರ ನೂತನ ಮೂರು ಕೃಷಿ ಕಾನೂನುಗಳನ್ನ ವಿರೋಧಿಸಿ ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ಮನೆಯ ಮೇಲೆ ಕಪ್ಪು ಧ್ವಜ ಹಾರಿಸಿದ್ದಾರೆ. ಧ್ವಜ ಹಾರಿಸಿರುವ ವೀಡಿಯೋ ಹಂಚಿಕೊಂಡಿರುವ ನವಜೋತ್ ಸಿಂಗ್ ಸಿಧು ಪಂಜಾಬ್ ಜನತೆಗೆ ಸಂದೇಶ ರವಾನಿಸಿದ್ದಾರೆ.

    ಕಳೆದ 20-25 ವರ್ಷಗಳಿಂದ ಆದಾಯ ಕುಸಿತ ಕಾಣುತ್ತಿದ್ದು, ಖರ್ಚು ಹೆಚ್ಚಾಗುತ್ತಿರೋದರಿಂದ ರೈತರು ಸಂಕಷ್ಟದಲ್ಲಿದ್ದಾರೆ. ಮೂರು ಕೃಷಿ ಕಾನೂನುಗಳು ರೈತರು, ದಿನಗೂಲಿ ಕಾರ್ಮಿಕರು ಮತ್ತು ವ್ಯಾಪಾರಿಗಳ ಹೊಟ್ಟೆ ಮೇಲೆ ಹೊಡೆಯಲಿವೆ. ಆದ್ದರಿಂದ ಪಂಜಾಬ್ ರೈತರು ಆಂದೋಲನ ನಡೆಸುತ್ತಿದ್ದಾರೆ ಎಂದು ಹೇಳಿದ್ದಾರೆ.

    ಒಂದು ವೇಳೆ ಕೇಂದ್ರ ಮೂರು ಕಾನೂನು ಹಿಂಪಡೆಯದಿದ್ರೆ ಪಂಜಾಬ್ ಅಭಿವೃದ್ಧಿ ಆಗಲ್ಲ. ಈ ಮೂರು ಕಾನೂನು ವಿರೋಧಿಸಿ ನನ್ನ ಮನೆ ಮೇಲೆ ಕಪ್ಪು ಧ್ವಜ ಹಾರಿಸಿದ್ದೇನೆ. ಕಾನೂನು ಹಿಂಪಡೆಯವರೆಗೂ ಈ ಧ್ವಜ ಇಳಿಸಲ್ಲ. ಪ್ರತಿ ಪಂಜಾಬಿ ರೈತರ ಪ್ರತಿಭಟನೆಯನ್ನ ಬೆಂಬಲಿಸಬೇಕೆಂದು ಕರೆ ನೀಡಿದ್ದಾರೆ.

  • ಶಿವಮೊಗ್ಗದಲ್ಲಿ ನಡೆಯಲಿದೆ ದಕ್ಷಿಣ ಭಾರತದ ಮೊದಲ ರೈತ ಮಹಾ ಪಂಚಾಯತ್

    ಶಿವಮೊಗ್ಗದಲ್ಲಿ ನಡೆಯಲಿದೆ ದಕ್ಷಿಣ ಭಾರತದ ಮೊದಲ ರೈತ ಮಹಾ ಪಂಚಾಯತ್

    – ಮಾರ್ಚ್ 20ರಂದು ಕಾರ್ಯಕ್ರಮ ಆಯೋಜನೆ

    ಶಿವಮೊಗ್ಗ: ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಕಳೆದ 4 ತಿಂಗಳಿನಿಂದ ದೆಹಲಿಯ ಗಡಿ ಭಾಗದಲ್ಲಿ ಚಳಿ, ಗಾಳಿ, ಮಳೆ, ಬಿಸಿಲು ಲೆಕ್ಕಿಸದೇ ನೂರಾರು ರೈತರು ಹೋರಾಟ ನಡೆಸುತ್ತಿದ್ದಾರೆ. ಈ ಹೋರಾಟಕ್ಕೆ ಬೆಂಬಲವಾಗಿ ಇದೇ 20 ರಂದು ದಕ್ಷಿಣ ಭಾರತದಲ್ಲೇ ಮೊದಲ ಬಾರಿಗೆ ಶಿವಮೊಗ್ಗದ ಸೈನ್ಸ್ ಮೈದಾನದಲ್ಲಿ ರೈತರ ಮಹಾ ಪಂಚಾಯತ್ ಸಮಾವೇಶ ನಡೆಯಲಿದೆ.

    ಶಿವಮೊಗ್ಗದಲ್ಲಿ ನಡೆಯುವ ಈ ರೈತರ ಮಹಾ ಪಂಚಾಯತ್ ಸಮಾವೇಶದಲ್ಲಿ ದೆಹಲಿಯ ಹೋರಾಟನಿರತ ಕಿಸಾನ್ ಮೋರ್ಚಾದ ರಾಷ್ಟ್ರೀಯ ನಾಯಕರಾದ ರಾಕೇಶ್ ಸಿಂಗ್ ಟಿಕಾಯತ್, ಡಾ.ದರ್ಶನ್ ಪಾಲ್, ಯುದವೀರ್ ಸಿಂಗ್ ಭಾಗವಹಿಸಲಿದ್ದಾರೆ. ರೈತರ ಮಹಾ ಪಂಚಾಯತ್ ಹಿನ್ನೆಲೆಯಲ್ಲಿ ಈಗಾಗಲೇ ರೈತ ಸಂಘಟನೆ ಕಾರ್ಯಕರ್ತರು ಹಾಗೂ ಇತರೆ ಪಕ್ಷದವರು ಸಮಾವೇಶದಲ್ಲಿ ಭಾಗವಹಿಸುವಂತೆ ಸಾರ್ವಜನಿಕರಲ್ಲಿ, ರೈತರಲ್ಲಿ, ಗ್ರಾಮೀಣ ಭಾಗಗಳಲ್ಲಿ, ಎಪಿಎಂಸಿ ಮಾರುಕಟ್ಟೆಯಲ್ಲಿ ರೈತರಿಗೆ ಹಾಗೂ ಕೃಷಿ ವ್ಯಾಪಾರಸ್ಥರಿಗೆ ಸಮಾವೇಶದ ಉದ್ದೇಶ ಕುರಿತು ಹಾಗೂ ಸಮಾವೇಶದಲ್ಲಿ ಭಾಗವಹಿಸುವಂತೆ ಮನವಿ ಮಾಡುತ್ತಿದ್ದಾರೆ.

    ಹೇಳಿ ಕೇಳಿ ಶಿವಮೊಗ್ಗ ಜಿಲ್ಲೆ ಸಮಾಜವಾದಿ ಹೋರಾಟ ಹಿನ್ನೆಲೆ ಇರುವ ಭೂಮಿ. ಶಾಂತವೇರಿ ಗೋಪಾಲಗೌಡರು, ಕಡಿದಾಳು ಮಂಜಪ್ಪನವರು, ಕುವೆಂಪು, ಪಿ.ಲಂಕೇಶ್, ಯು.ಆರ್.ಅನಂತಮೂರ್ತಿ ಅವರಂತಹ ಮೊದಲಾದವರಂತಹ ಚಳುವಳಿ ಮತ್ತು ಸಾಹಿತ್ಯದ ದಿಗ್ಗಜರನ್ನು ನಾಡಿಗೆ ಕೊಡುಗೆ ಕೊಟ್ಟ ಜಿಲ್ಲೆ. ಸಮಾಜವಾದದ ಆಶಯಗಳನ್ನು ಉತ್ತಿದ, ಬಿತ್ತಿದ ಜಿಲ್ಲೆ. ಹೀಗಾಗಿ ಇಂತಹ ಹೆಗ್ಗಳಿಕೆ ಹೊಂದಿರುವ ಮಲೆನಾಡಿನ ತವರು ಶಿವಮೊಗ್ಗದಲ್ಲಿ ದಕ್ಷಿಣ ಭಾರತದ ಮೊದಲ ರೈತ ಮಹಾ ಪಂಚಾಯತ್ ನಡೆಯಲಿದ್ದು, ಕೇವಲ ಶಿವಮೊಗ್ಗ ಜಿಲ್ಲೆಯಷ್ಟೇ ಅಲ್ಲದೇ ಹೊರ ಜಿಲ್ಲೆಯ ರೈತರು ಸಹ ಸಾವಿರಾರು ಸಂಖ್ಯೆಯಲ್ಲಿ ಭಾಗವಹಿಸುವ ನಿರೀಕ್ಷೆ ಹೊಂದಲಾಗಿದೆ.

  • ನಾವಿಬ್ಬರು, ನಮಗಿಬ್ಬರು- ನಾಲ್ವರಿಂದ ದೇಶದ ಆಡಳಿತ: ಕೇಂದ್ರದ ವಿರುದ್ಧ ರಾಹುಲ್ ಕಟು ಟೀಕೆ

    ನಾವಿಬ್ಬರು, ನಮಗಿಬ್ಬರು- ನಾಲ್ವರಿಂದ ದೇಶದ ಆಡಳಿತ: ಕೇಂದ್ರದ ವಿರುದ್ಧ ರಾಹುಲ್ ಕಟು ಟೀಕೆ

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ನಾವಿಬ್ಬರು, ನಮಗಿಬ್ಬರು ಎನ್ನುವ ತತ್ವದಡಿ ದೇಶವನ್ನು ನಡೆಸುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

    ಸಂಸತ್‍ನಲ್ಲಿ ಆಕ್ರೋಶಭರಿತರಾಗಿ ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದ ಅವರು, ನಾವಿಬ್ಬರು, ನಮಗಿಬ್ಬರು ತತ್ವದ ಆಧಾರದಲ್ಲಿಯೇ ಬಿಜೆಪಿ ಸರ್ಕಾರ ನಗದು ಅಮಾನ್ಯೀಕರಣ ಮಾಡಿದೆ, ಜಿಎಸ್‍ಟಿ ತಂದಿದೆ, ಲಾಕ್‍ಡೌನ್ ಹಾಗೂ ಇತ್ತೀಚೆಗೆ ಕೃಷಿ ಕಾನೂನುಗಳನ್ನು ಜಾರಿಗೆ ತಂದಿದೆ ಎಂದು ಕಿಡಿಕಾರಿದ್ದಾರೆ.

    ಜನಸಂಖ್ಯೆ ನಿಯಂತ್ರಣಕ್ಕೆ ಈ ಹಿಂದೆ ಕುಟುಂಬ ಕಲ್ಯಾಣ ಇಲಾಖೆಯಿಂದ ನಾವಿಬ್ಬರು, ನಮಗಿಬ್ಬರು ಘೋಷ ವಾಕ್ಯವನ್ನು ಜಾರಿಗೆ ತರಲಾಗಿತ್ತು. ಇದೇ ಘೋಷವಾಕ್ಯದ ಮೂಲಕ ಇದೀಗ ಕೇಂದ್ರ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ಆಕ್ರಮಣ ಮಾಡಿದ್ದಾರೆ. ನೇರವಾಗಿ ಯಾರ ಹೆಸರನ್ನೂ ಹೇಳದೆ, ನಾವಿಬ್ಬರು, ನಮಗಿಬ್ಬರು ಯಾರೆಂದು ಎಲ್ಲರಿಗೂ ತಿಳಿದಿದೆ ಎಂದರು.

    ಇತ್ತೀಚೆಗೆ ರೈತರು ಮಾತ್ರ ಹೋರಾಟ ನಡೆಸಿದ್ದಾರೆ. ಆದರೆ ಇದು ಕೇವಲ ರೈತರ ಹೋರಾಟ ಮಾತ್ರವಲ್ಲ. ಇದು ಇಡೀ ದೇಶದ ಹೋರಾಟವಾಗಿದೆ. ಹೋರಾಟದ ಪ್ರತಿನಿಧಿಗಳಾಗಿ ರೈತರು ಮಾತ್ರ ಭಾಗವಹಿಸಿದ್ದಾರೆ. ಇದು ಕೇವಲ ಕೃಷಿ ಕಾಯ್ದೆಗಳ ವಿರುದ್ಧದ ಹೋರಾಟವಾಗಿದೆ. ಈ ಕಾನೂನುಗಳು ರೈತರನ್ನು ಹಾಳು ಮಾಡುವುದು ಮಾತ್ರವಲ್ಲ, ಮಧ್ಯವರ್ತಿಗಳನ್ನು ಮುಗಿಸಿ, ಸಣ್ಣ ಅಂಗಡಿಯವರು, ಸಣ್ಣ ಉದ್ಯಮಿಗಳ ಮೇಲೆ ವಿನಾಶಕಾರಿ ಪರಿಣಾಮ ಬೀರುತ್ತವೆ. ಸಣ್ಣ ಹಾಗೂ ಮಧ್ಯಮ ಕೈಗಾರಿಕೆಗಳಿಗೆ ಭಾರೀ ಹೊಡೆತ ಬೀಳಲಿದೆ. ಈ ಕಾನೂನುಗಳು ಗ್ರಾಮೀಣ ಆರ್ಥಿಕತೆಯನ್ನು ನಾಶಪಡಿಸುತ್ತವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

    ಭಾರತ ಬೆಳವಣಿಗೆ ಹೊಂದಲು ಸಾಧ್ಯವಾಗುವುದಿಲ್ಲ, ಉದ್ಯೋಗ ಸೃಷ್ಟಿಯಾಗುತ್ತಿಲ್ಲ. ಇದಕ್ಕೆ ಕಾರಣ ಹಮ್ ದೋ, ಹಮಾರೆ ದೋ ಪದ್ಧತಿ. ಇವರ ಲಾಭಕ್ಕಾಗಿ ನಮ್ಮ ದೇಶದ ಬೆನ್ನಲುಬನ್ನು ಸರ್ವ ನಾಶ ಮಾಡಲಾಗುತ್ತಿದೆ ಎಂದರು.

    ರಾಹುಲ್ ಗಾಂಧಿ ಮಾತನಾಡುವುದನ್ನು ಮುಗಿಸುವ ಸಂದರ್ಭದಲ್ಲಿ ಹುತಾತ್ಮ ರೈತರಿಗೆ 2 ನಿಮಿಷ ಮೌನಾಚರಣೆ ನಡೆಸಿದರು. ಸದನದ ಒಪ್ಪಿಗೆ ಪಡೆಯದೆ ಮೌನಾಚರಣೆ ಆಚರಿಸಿದ್ದಕ್ಕೆ ಸ್ಪೀಕರ್ ಓಂ ಬಿರ್ಲಾ ಅವರು ವಿರೋಧ ಪಕ್ಷಗಳ ವಿರುದ್ಧ ಬೇಸರ ವ್ಯಕ್ತಪಡಿಸಿದರು.

  • ಮಾತುಕತೆಗೆ ಗೃಹ ಸಚಿವರು, ಪ್ರಧಾನಿಗಳು ಮುಂದೆ ಬರಲಿ: ರಾಕೇಶ್ ಟಿಕಾಯತ್

    ಮಾತುಕತೆಗೆ ಗೃಹ ಸಚಿವರು, ಪ್ರಧಾನಿಗಳು ಮುಂದೆ ಬರಲಿ: ರಾಕೇಶ್ ಟಿಕಾಯತ್

    – ಮಹಾಪಂಚಾಯತ್ ‘ಪಂಚ’ ನಿರ್ಧಾರಗಳು

    ನವದೆಹಲಿ: ರೈತರ ಪ್ರತಿಭಟನೆ 71ನೇ ದಿನಕ್ಕೆ ಕಾಲಿಟ್ಟಿದ್ದು, ಆದ್ರೆ ಇದು ಅಂತ್ಯವಾಗುವ ಯಾವುದೇ ಸಣ್ಣ ಸುಳಿವು ಸಹ ಸಿಗುತ್ತಿಲ್ಲ. ಕೃಷಿ ಕಾನೂನ ಸಂಬಂಧ ರೈತರು ಬುಧವಾರ ಹರಿಯಾಣದ ಜಿಂದ್ ಜಿಲ್ಲೆಯ ಕಂಡೇಲಾ ಗ್ರಾಮದಲ್ಲಿ ಮಹಾಪಂಚಾಯತ್ ಸಭೆ ನಡೆಸಿದರು. ಈ ವೇಳೆ ಮತ್ತೆ ಕೃಷಿ ಮಂತ್ರಿಗಳ ಜೊತೆ ನಾವು ಚರ್ಚೆ ನಡೆಸಲ್ಲ. ಈಗ ಪ್ರಧಾನ ಮಂತ್ರಿ ಮತ್ತು ಗೃಹ ಸಚಿವರು ನಮ್ಮೊಂದಿಗೆ ಮಾತನಾಡಲಿ ಎಂದು ಭಾರತೀಯ ಕಿಸಾನ್ ಯೂನಿಯನ್ ಪ್ರವರ್ತಕ ರಾಕೇಶ್ ಟಿಕಾಯತ್ ಹೇಳಿದ್ದಾರೆ.

    ಸದ್ಯ ರೈತ ವಿರೋಧಿ ಕಾನೂನುಗಳನ್ನ ಹಿಂಪಡೆಯಬೇಕೆಂದು ಕೇಳುತ್ತಿದ್ದೇವೆ. ಅಧಿಕಾರದ ಕುರ್ಚಿ ಕೇಳಿದ್ರೆ ಸರ್ಕಾರ ಏನು ಮಾಡುತ್ತೆ. ರಾಜನಿಗೆ ಭಯವಾದ್ರೆ ಆತ ತನ್ನ ಕೋಟೆಯ ಬಾಗಿಲುಗಳನ್ನ ಭದ್ರ ಮಾಡಿಕೊಳ್ಳುತ್ತಾನೆ. ಈಗ ಸಹ ಅದೇ ನಡೆಯುತ್ತಿದೆ. ದೆಹಲಿ ಗಡಿಯಲ್ಲಿ ಮೊಳೆ, ಬ್ಯಾರಿಕೇಟ್ ಮುಳ್ಳು ತಂತಿಯ ಬೇಲಿ ಹಾಕಲಾಗಿದೆ. ಶತ್ರುಗಳಿಗೆ ಹೆದರಿಯೂ ಈ ರೀತಿ ಯಾರು ಮಾಡಲಾರರು. ಆದ್ರೆ ರೈತರು ಇದ್ಯಾವುದಕ್ಕೂ ಭಯಬೀಳಲಾರರು ಎಂದು ಕೇಂದ್ರ ಸರ್ಕಾರದ ವಿರುದ್ಧ ರಾಕೇಶ್ ಟಿಕಾಯತ್ ಕಿಡಿಕಾರಿದರು.

    ಇದೇ ವೇಳೆ ಸರ್ಕಾರದ ಜೊತೆಗೆ ಮಾತುಕತೆ ಆಗಮಿಸುವ ರೈತರ ಕಮೀಟಿಯ ಸದಸ್ಯರ ಸಂಖ್ಯೆ ಇಳಿಕೆಗೂ ಟಿಕಾಯತ್ ವಿರೋಧ ವ್ಯಕ್ತಪಡಿಸಿದರು. ಯುದ್ಧದ ಮಧ್ಯದಲ್ಲಿ ಯಾವಾಗಲೂ ಕುದುರೆಗಳನ್ನ ಬದಲಿಸಲ್ಲ. ಹಾಗಾಗಿ ಕಮೀಟಿಯಲ್ಲಿರುವ ಸದಸ್ಯರೇ ಮುಂದುವರಿಯಲಿದ್ದಾರೆ. ಇದೇ ವೇಳೆ ಮಹಾಪಂಚಾಯತ್ ನಲ್ಲಿ ಐದು ನಿರ್ಣಯಗಳನ್ನ ತೆಗೆದುಕೊಂಡರು.

    ಮಹಾಪಂಚಾಯತ್ ‘ಪಂಚ’ ನಿರ್ಧಾರ:
    1. ಮೂರು ಕೃಷಿ ಕಾನೂನುಗಳನ್ನ ಸರ್ಕಾರ ಹಿಂಪಡೆದುಕೊಳ್ಳುವುದು.
    2. ಎಂಎಸ್‍ಪಿ ಬಗ್ಗೆ ಕಾನೂನು ರಚನೆ
    3. ಸ್ವಾಮಿನಾಥನ್ ವರದಿ ಜಾರಿಗೆ ಆಗ್ರಹ
    4. ಬಂಧನದಲ್ಲಿರುವ ರೈತರ ಬಿಡುಗಡೆ ಮತ್ತು ವಶಕ್ಕೆ ಪಡೆದ ಟ್ರ್ಯಾಕ್ಟರ್ ಹಸ್ತಾಂತರಿಸುವುದು.
    5. ರೈತರ ಸಾಲಮನ್ನಾ