Tag: agricultural officer

  • ಶಿರಡಿಗೆ ಹೋಗಿದ್ದಾಗ ಕೃಷಿ ಅಧಿಕಾರಿ ಮನೆ ಬೀಗ ಮುರಿದು ಕಳ್ಳತನ: 26 ಲಕ್ಷದ ಚಿನ್ನಾಭರಣ ಕದ್ದು ಪರಾರಿ

    ಶಿರಡಿಗೆ ಹೋಗಿದ್ದಾಗ ಕೃಷಿ ಅಧಿಕಾರಿ ಮನೆ ಬೀಗ ಮುರಿದು ಕಳ್ಳತನ: 26 ಲಕ್ಷದ ಚಿನ್ನಾಭರಣ ಕದ್ದು ಪರಾರಿ

    – 2 ಲಕ್ಷ ರೂ. ನಗದು ಸಹ ಕಳವು

    ಬೀದರ್: ಮನೆಯಲ್ಲಿ ಯಾರೂ ಇಲ್ಲದ ವೇಳೆ ಬೀಗ ಮುರಿದು 26 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕದ್ದು ಪರಾರಿಯಾಗಿರುವ ಘಟನೆ ಬೀದರ್ (Bidar) ಜಿಲ್ಲೆಯ ಗುರುನಗರ ಕಾಲೊನಿಯಲ್ಲಿ ನಡೆದಿದೆ.

    ಔರಾದ್ (Aurad) ತಾಲೂಕಿನ ಕೃಷಿ ಇಲಾಖೆಯ ಅಧಿಕಾರಿಯಾಗಿದ್ದ ದೂಳಪ್ಪ ಹೊಸಳ್ಳಿ ಎಂಬುವವರ ಮನೆಯಲ್ಲಿ ಕಳ್ಳತನ ನಡೆದಿದೆ.ಇದನ್ನೂ ಓದಿ: ಪೊಲೀಸ್ ಕಮಿಷನರ್‌ಗೆ ದೂರು ನೀಡಿದ ರಮ್ಯಾ – ದರ್ಶನ್ ಅಭಿಮಾನಿಗಳ ವಿರುದ್ಧ FIR

    ಘಟನೆ ನಡೆದ ದಿನ, ದಂಪತಿ ಶಿರಡಿ ಸಾಯಿಬಾಬಾ ದರ್ಶನಕ್ಕೆ ಹೋಗಿದ್ದರು. ಮನೆಯಲ್ಲಿ ಯಾರು ಇಲ್ಲದೇ ಇರುವುದನ್ನು ಗಮನಿಸಿದ ಖದೀಮರು ಮನೆ ಬೀಗ ಮುರಿದು ಒಳನುಗ್ಗಿದ್ದಾರೆ. ಈ ವೇಳೆ ಮನೆಯಲ್ಲಿದ್ದ 310 ಗ್ರಾಂ ಚಿನ್ನಾಭರಣ, 2 ಲಕ್ಷ ನಗದು ಸೇರಿದಂತೆ ಒಟ್ಟು 26 ಲಕ್ಷ ರೂ.ಗೂ ಅಧಿಕ ಮೌಲ್ಯದ ವಸ್ತುಗಳನ್ನು ಕಳವು ಮಾಡಿದ್ದಾರೆ. ದಂಪತಿ ಮನೆಗೆ ಮರಳಿದಾಗ ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ.

    ಸದ್ಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ (New Town Police Station) ಪ್ರಕರಣ ದಾಖಲಾಗಿದ್ದು, ತನಿಖೆ ಆರಂಭಿಸಿದ್ದಾರೆ.ಇದನ್ನೂ ಓದಿ: ಯೆಮನ್‌ನಲ್ಲಿ ಕೇರಳ ನರ್ಸ್ ನಿಮಿಷಾ ಪ್ರಿಯಾ ಮರಣದಂಡನೆ ಸಂಪೂರ್ಣ ರದ್ದು; MEA ರಿಯಾಕ್ಷನ್‌ ಏನು?

  • ಶಾಸಕ ತಂಗಡಗಿ ಬೆಂಬಲಿಗನಿಂದ ಕೃಷಿ ಅಧಿಕಾರಿ ಮೇಲೆ ಹಲ್ಲೆ- ಪಬ್ಲಿಕ್ ಟಿವಿಗೆ ವಿಡಿಯೋ ಲಭ್ಯ

    ಶಾಸಕ ತಂಗಡಗಿ ಬೆಂಬಲಿಗನಿಂದ ಕೃಷಿ ಅಧಿಕಾರಿ ಮೇಲೆ ಹಲ್ಲೆ- ಪಬ್ಲಿಕ್ ಟಿವಿಗೆ ವಿಡಿಯೋ ಲಭ್ಯ

    ಕೊಪ್ಪಳ: ಶಾಸಕ ಶಿವರಾಜ್ ತಂಗಡಗಿ ಅವರ ಬೆಂಬಲಿರೊಬ್ಬರು ಸರ್ಕಾರಿ ಕಚೇರಿಗೆ ನುಗ್ಗಿ ದಾಂಧಲೆ ನಡೆಸಿ, ಅಧಿಕಾರಿ ಮೇಲೆ ಕೈ ಮಾಡಿದ್ದ ಘಟನೆ ಕೊಪ್ಪಳದಲ್ಲಿ ನಡೆದಿದ್ದು, ಇದೀಗ ಈ ಘಟನೆಯ ವಿಡಿಯೋ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

    ಗಂಗಾವತಿಯ ನವಲಿ ರೈತ ಸಂಪರ್ಕ ಕೇಂದ್ರದಲ್ಲಿ ಕೃಷಿ ಸಹಾಯಕ ಅಧಿಕಾರಿ ದೇವೇಂದ್ರಪ್ಪ ಅವರ ಮೇಲೆ ಏಪ್ರಿಲ್ 11 ರಂದು ಕಾಂಗ್ರೆಸ್ ಮುಖಂಡ ಜಡಿಯಪ್ಪ ಹಲ್ಲೆ ಮಾಡಿದ್ದರು. ಘಟನೆ ನಡೆದ ದಿನ ಆರೋಪಿ ಜಡಿಯಪ್ಪ ಹಲ್ಲೆ ಆರೋಪವನ್ನು ಅಲ್ಲಗಳೆದಿದ್ದರು. ಆದ್ರೆ ಇದೀಗ ಪಬ್ಲಿಕ್ ಟಿವಿ ಗೆ ಲಭ್ಯವಾದ ವಿಡಿಯೋದಲ್ಲಿ ಜಡಿಯಪ್ಪ ಕೃಷಿ ಅಧಿಕಾರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿರೋದು, ಇಡೀ ಕಚೇರಿ ತುಂಬಾ ಓಡಾಡಿ ದಾಂಧಲೆ ಮಾಡುತ್ತಾ ಹಲ್ಲೆ ಮಾಡಿರೋದು ದಾಖಲಾಗಿದೆ.

    ಹಲ್ಲೆ ಸಂಬಂಧ ಕನಕಗಿರಿ ಠಾಣೆಗೆ ಹಲ್ಲೆಗೆ ಒಳಗಾಗಿದ್ದ ಅಧಿಕಾರಿ ದೂರು ನೀಡಿದ್ರು. ಕೃಷಿ ಹೊಂಡದ ಬಿಲ್ ನೀಡುವ ವಿಚಾರವಾಗಿ ಜಡಿಯಪ್ಪ ಮತ್ತು ಕೃಷಿ ಅಧಿಕಾರಿ ದೇವೇಂದ್ರಪ್ಪ ನಡುವೆ ವಾಗ್ವಾದ ನಡೆದಿತು. ಈ ವೇಳೆ ಹಲ್ಲೆ ಮಾಡಲಾಗಿದ್ದು, ಜಡಿಯಪ್ಪ ಹಾಗೂ ಇತರರು ನನ್ನ ಮೇಲೆ ಚಪ್ಪಲಿ ಹಾಗೂ ಕಟ್ಟಿಗೆಯಿಂದ ಹಲ್ಲೆ ಮಾಡಿ ಇಲಾಖೆಯ ಸಿಮ್ ಇರುವ ಮೊಬೈಲ್ ಕಸಿದುಕೊಂಡು ಜೀವ ಬೆದರಿಕೆ ಹಾಕಿದ್ರು ಎಂದು ದೇವೇಂದ್ರಪ್ಪ ದೂರಿನಲ್ಲಿ ತಿಳಿಸಿದ್ದರು. ಘಟನೆಯಲ್ಲಿ ಕೃಷಿ ಅಧಿಕಾರಿಯ ಹಲ್ಲು ಮುರಿದಿತ್ತು.

    ಆದ್ರೆ ಈವರೆಗೂ ಜಡಿಯಪ್ಪ ವಿರುದ್ಧ ಕ್ರಮ ಕೈಗೊಂಡಿಲ್ಲ. ಬದಲಾಗಿ ಇದಕ್ಕೆ ಬೆದರಿಕೆ ತಂತ್ರವಾಗಿ ಏಪ್ರಿಲ್ 11ರಂದು ರಾತ್ರಿಯೇ ಹಲ್ಲೆಗೊಳಗಾಗಿದ್ದ ಅಧಿಕಾರಿ ಮೇಲೆಯೇ ಜಾತಿ ನಿಂದನೆ ಪ್ರಕರಣ ದಾಖಲಿಸಲಾಗಿದೆ.

    ಜಡಿಯಪ್ಪ ಪತ್ನಿ ಬಿಜೆಪಿಯಿಂದ ತಾಲೂಕು ಪಂಚಾಯತ್ ಸದಸ್ಯೆಯಾಗಿ ಆಯ್ಕೆಯಾಗಿದ್ದಾರೆ. ಆದ್ರೆ ಜಡಿಯಪ್ಪ ಇತ್ತೀಚೆಗೆ ನಡೆದ ಎಪಿಎಂಸಿ ಚುನಾವಣೆಯಲ್ಲಿ ಶಾಸಕ ಶಿವರಾಜ ತಂಗಡಗಿಯ ನೇತೃತ್ವದಲ್ಲಿ ಕಾಂಗ್ರೆಸ್ ಸೇರಿದ್ದರು.

    https://www.youtube.com/watch?v=9XVr4wuppiI

     

  • ಹಲ್ಲು ಮುರಿದ್ರು, ಚಪ್ಪಲಿಯಲ್ಲಿ ಹೊಡೆದ್ರು- ಶಾಸಕ ತಂಗಡಗಿ ಬೆಂಬಲಿಗನ ವಿರುದ್ಧ ಕೃಷಿ ಅಧಿಕಾರಿ ದೂರು

    ಹಲ್ಲು ಮುರಿದ್ರು, ಚಪ್ಪಲಿಯಲ್ಲಿ ಹೊಡೆದ್ರು- ಶಾಸಕ ತಂಗಡಗಿ ಬೆಂಬಲಿಗನ ವಿರುದ್ಧ ಕೃಷಿ ಅಧಿಕಾರಿ ದೂರು

    ಕೊಪ್ಪಳ: ಶಾಸಕ ಶಿವರಾಜ ತಂಗಡಗಿ ಬೆಂಬಲಿಗರ ಅಟ್ಟಹಾಸ ಮುಂದುವರೆದಿದೆ. ತಾಲೂಕು ಪಂಚಾಯತಿ ಸದಸ್ಯೆ ಪತಿಯಾಗಿರುವ ಕಾಂಗ್ರೆಸ್ ಮುಖಂಡ ಜಡಿಯಪ್ಪ ಮುಕ್ಕುಂದಿ ಎಂಬವರು ಸಹಾಯಕ ಕೃಷಿ ಅಧಿಕಾರಿ ದೇವೇಂದ್ರಪ್ಪ ಮೇಲೆ ಹಲ್ಲೆ ಮಾಡಿರುವ ಘಟನೆ ಕೊಪ್ಪಳದ ಗಂಗಾವತಿ ತಾಲೂಕಿನ ನವಲಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ.

    ಈ ಕುರಿತು ಹಲ್ಲೆಗೊಳಗಾದ ಕೃಷಿ ಅಧಿಕಾರಿ ಕನಕಗಿರಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ರೂ, ಎಫ್‍ಐಆರ್ ದಾಖಲಿಸಲು ಪೊಲೀಸರು ದಿನವಿಡೀ ಸರ್ಕಸ್ ಮಾಡಿದ್ದಾರೆ. ಕೊನೆಗೂ ಮಂಗಳವಾರ ರಾತ್ರಿ ಪ್ರಕರಣ ದಾಖಲಾಗಿದೆ. ಆದ್ರೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ ಯಾರನ್ನೂ ಬಂಧಿಸಿಲ್ಲ.

    ಕೃಷಿ ಹೊಂಡದ ಬಿಲ್ ನೀಡುವ ವಿಚಾರವಾಗಿ ನಿನ್ನೆ ಮುಖಂಡ ಜಡಿಯಪ್ಪ ಮತ್ತು ಕೃಷಿ ಅಧಿಕಾರಿ ದೇವೇಂದ್ರಪ್ಪ ನಡುವೆ ವಾಗ್ವಾದ ನಡೆದಿದೆ. ಈ ವೇಳೆ ಹಲ್ಲೆ ಮಾಡಲಾಗಿದ್ದು, ಜಡಿಯಪ್ಪ ಹಾಗೂ ಇತರರು ನನ್ನ ಮೇಲೆ ಚಪ್ಪಲಿ ಹಾಗೂ ಕಟ್ಟಿಗೆಯಿಂದ ಹಲ್ಲೆ ಮಾಡಿ ಇಲಾಖೆಯ ಸಿಮ್ ಇರುವ ಮೊಬೈಲ್ ಕಸಿದುಕೊಂಡು ಜೀವ ಬೆದರಿಕೆ ಹಾಕಿದ್ದಾರೆ ಎಂದು ದೇವೇಂದ್ರಪ್ಪ ದೂರಿನಲ್ಲಿ ತಿಳಿಸಿದ್ದಾರೆ. ಘಟನೆಯಲ್ಲಿ ಕೃಷಿ ಅಧಿಕಾರಿಯ ಹಲ್ಲು ಮುರಿದಿದೆ.

    ಜಡಿಯಪ್ಪ ಮುಕ್ಕುಂದಿ ಪತ್ನಿ ಬಿಜೆಪಿಯಿಂದ ತಾಲೂಕು ಪಂಚಾಯತ್ ಸದಸ್ಯೆಯಾಗಿ ಆಯ್ಕೆಯಾಗಿದ್ದಾರೆ. ಆದ್ರೆ, ಜಡಿಯಪ್ಪ ಇತ್ತೀಚೆಗೆ ನಡೆದ ಎಪಿಎಂಸಿ ಚುನಾವಣೆಯಲ್ಲಿ ಶಾಸಕ ಶಿವರಾಜ ತಂಗಡಗಿಯ ನೇತೃತ್ವದಲ್ಲಿ ಕಾಂಗ್ರೆಸ್ ಸೇರಿದ್ದರು.