Tag: Agriculture Bill

  • ಸಾಧಕ ಬಾಧಕ ಚರ್ಚಿಸದೆ ಕೃಷಿ ಬಿಲ್ ವಿರೋಧಿಸಬೇಡಿ: ಶೋಭಾ ಕರಂದ್ಲಾಜೆ

    ಸಾಧಕ ಬಾಧಕ ಚರ್ಚಿಸದೆ ಕೃಷಿ ಬಿಲ್ ವಿರೋಧಿಸಬೇಡಿ: ಶೋಭಾ ಕರಂದ್ಲಾಜೆ

    ಉಡುಪಿ: ಕೇಂದ್ರ ಕೃಷಿ ಬಿಲ್‍ನ ಸಾಧಕ ಬಾಧಕ ಚರ್ಚೆ ಮಾಡದೆ ಬಿಲ್ ಸರಿಯಿಲ್ಲ ಎಂದು ರೈತ ಪರ ಹೋರಾಟಗಾರರು ತೀರ್ಮಾನಿಸುವುದು ಹೇಗೆ? ಬಂದ್ ಮಾಡಲು ತೀರ್ಮಾನ ಮಾಡಿರುವ ಮೊದಲು ಲಾಭ ನಷ್ಟದ ಬಗ್ಗೆ ಚರ್ಚಿಸಿ ಎಂದು ಕೇಂದ್ರ ಕೃಷಿ, ರೈತ ಕಲ್ಯಾಣ ಸಚಿವೆ ಶೋಭಾ ಕರಂದ್ಲಾಜೆ ಪ್ರಶ್ನಿಸಿದ್ದಾರೆ.

    ರೈತ ಹೋರಾಟಗಾರರ ಜೊತೆ 11 ಸುತ್ತಿನ ಮಾತುಕತೆ ಆಗಿದೆ ಮತ್ತೆ ಮಾತುಕತೆಗೆ ಕೇಂದ್ರ ಸರ್ಕಾರ ಸಿದ್ಧವಾಗಿದೆ. ಕೇಂದ್ರ ಕೃಷಿ ಬಿಲ್ ನಿಂದ ಲಾಭ ಏನು ನಷ್ಟ ಏನು ಎಂದು ಚರ್ಚೆ ಮಾಡಿ ಸಮಸ್ಯೆ ಬಗೆಹರಿಸಿಕೊಳ್ಳಿ ಎಂದು ಶೋಭಾ ಕರಂದ್ಲಾಜೆ ಉಡುಪಿಯಲ್ಲಿ ಹೇಳಿದ್ದಾರೆ. ಇದನ್ನೂ ಓದಿ:  ದಂಪತಿ ಜಗಳಕ್ಕೆ ಬಲಿಯಾದ 22ದಿನದ ಕಂದಮ್ಮ

    ಸೋಮವಾರ ಭಾರತ್ ಬಂದ್‍ಗೆ ಕರೆ ವಿಚಾರ ಪ್ರತಿಕ್ರಿಯೆ ನೀಡುತ್ತಿದ್ದರು. ಚರ್ಚೆಯೇ ಆಗದೆ ಲಾಭ ನಷ್ಟದ ಬಗ್ಗೆ ಗೊತ್ತಾಗುವುದಿಲ್ಲ. ಕೇಂದ್ರದ ಬಿಲ್ ಅನುಷ್ಠಾನ ಮಾಡಿದ ರಾಜ್ಯಗಳ ರೈತರಿಗೆ ಲಾಭ ಆಗಿದೆ. ಆ ರಾಜ್ಯದ ವರದಿಯನ್ನು ರೈತ ಹೋರಾಟಗಾರರು ತರಿಸಿಕೊಳ್ಳಬೇಕು. ರೈತರ ವಿಚಾರದಲ್ಲಿ ರಾಜಕೀಯ ಇಲ್ಲ. ರೈತರ ವಿಚಾರದಲ್ಲಿ ಧರ್ಮ ಮತ್ತು ಪಕ್ಷಗಳು ಇಲ್ಲ. ದೇಶಕ್ಕೆ ಅನ್ನ ಕೊಡುವವರ ರೈತರ ಜೊತೆ ಚರ್ಚೆಗೆ ಸಿದ್ಧ ಎಂದು ಶೋಭಾ ಕರಂದ್ಲಾಜೆ ಹೇಳಿದ್ದಾರೆ.

  • ಕೇಂದ್ರದ ವಿವಾದಿತ ಮೂರು ಕೃಷಿ ಕಾಯ್ದೆ ಜಾರಿಗೆ ಸುಪ್ರೀಂ ತಡೆ

    ಕೇಂದ್ರದ ವಿವಾದಿತ ಮೂರು ಕೃಷಿ ಕಾಯ್ದೆ ಜಾರಿಗೆ ಸುಪ್ರೀಂ ತಡೆ

    – ಮಾತುಕತೆಗೆ ನಾಲ್ವರು ಸದಸ್ಯರ ಸಮಿತಿ
    – ಮುಂದಿನ ಆದೇಶದವರೆಗೂ ತಡೆಯಾಜ್ಞೆ

    ನವದೆಹಲಿ: ಕೇಂದ್ರ ಸರ್ಕಾರದ ನೂತನ ಮೂರು ಕೃಷಿ ಕಾಯ್ದೆ ಜಾರಿಗೆ ಸುಪ್ರೀಂಕೋರ್ಟ್ ತಡೆ ನೀಡಿದೆ. ಸಮಸ್ಯೆ ಇತ್ಯರ್ಥಕ್ಕಾಗಿ ನಾಲ್ವರು ಸದಸ್ಯರ ಸಮಿತಿ ರಚನೆಗೆ ಸುಪ್ರೀಂಕೋರ್ಟ್ ಸೂಚಿಸಿದೆ. ಸುಪ್ರೀಂಕೋರ್ಟ್ ಸಮಿತಿಯಲ್ಲಿ ಧನವಂತ್ ಶೇಖಾವತ್, ಜೀತೇಂದ್ರ ಸಿಂಗ್ ಮಾನ್, ಅಶೋಕ್ ಗುಲಾಟಿ ಮತ್ತು ಡಾ.ಪ್ರಮೋದ್ ಕುಮಾರ್ ಇರಲಿದ್ದಾರೆ.

    ವಿವಾದಿತ ಮೂರು ಕೃಷಿ ಕಾನೂನುಗಳ ವಿರುದ್ಧ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆ ನ್ಯಾ. ಎಸ್.ಎ ಬೊಬ್ಡೆ ನೇತೃತ್ವದ ತ್ರಿಸದಸ್ಯ ಪೀಠ ನಡೆಸಿತ್ತು. ರೈತ ಮುಖಂಡರ ಜೊತೆಗೆ ಕೇಂದ್ರ ಸರ್ಕಾರ ನಡೆಸುತ್ತಿರುವ ಸಂಧಾನ ಸಭೆ ನಿರಾಶದಾಯಕವಾಗಿದ್ದು ಪರಿಸ್ಥಿತಿ ವಿಕೋಪಕ್ಕೆ ತೆರಳಿ ರಕ್ತಪಾತಗಳಾದರೆ ಯಾರು ಹೊಣೆ ಎಂದು ಕೇಂದ್ರ ಸರ್ಕಾರವನ್ನು ಸುಪ್ರೀಂಕೋರ್ಟ್ ಪ್ರಶ್ನಿಸಿತ್ತು.

    ಕಳೆದ ಒಂದು ತಿಂಗಳಿನಿಂದ ಪ್ರತಿಭಟನೆ ನಡೆಯುತ್ತಿದೆ ಪ್ರತಿಭಟನಾಕಾರರನ್ನು ವಿಶ್ವಾಸಕ್ಕೆ ಪಡೆಯುವ ಕೇಂದ್ರ ಸರ್ಕಾರದ ನಡೆ ಸಮಾಧಾನ ತಂದಿಲ್ಲ. ಇಲ್ಲಿ ಪರಿಸ್ಥಿತಿ ಹದಗೆಟ್ಟಿರುವುದನ್ನು ಕೋರ್ಟ್ ಗಮನಿಸುತ್ತಿದೆ. ಗಣರಾಜ್ಯೋತ್ಸವ ದಿನದಂದು ದೊಡ್ಡ ರ್ಯಾಲಿ ನಡೆಯಲಿದ್ದು ಪರಿಸ್ಥಿತಿ ಕೈ ಮೀರಿ ಹೋದರೆ ಯಾರು ಹೊಣೆ ಎಂದು ಸುಪ್ರೀಂ ಕೇಂದ್ರ ಸರ್ಕಾರವನ್ನು ಪ್ರಶ್ನಿಸಿ ತರಾಟೆ ತೆಗೆದುಕೊಂಡಿತ್ತು.

  • ಮಾತುಕತೆಗೂ ಮುನ್ನ ಸರ್ಕಾರದ ಮುಂದೆ ರೈತರ 3 ಷರತ್ತು

    ಮಾತುಕತೆಗೂ ಮುನ್ನ ಸರ್ಕಾರದ ಮುಂದೆ ರೈತರ 3 ಷರತ್ತು

    ನವದೆಹಲಿ: ಇಂದು ಸರ್ಕಾರದ ಜತೆ ಪ್ರತಿಭಟನಾ ನಿರತ ರೈತರ ಎಂಟನೇ ಸುತ್ತಿನ ಮಾತುಕತೆ ನಡೆಯಲಿದ್ದು, ಅನ್ನದಾತರು ಸಭೆಗೂ ಮುನ್ನ ಮೂರು ಷರತ್ತುಗಳನ್ನಿರಿಸಿದ್ದಾರೆ. ಇಂದು ಮಧ್ಯಾಹ್ನ ಎರಡು ಗಂಟೆಗೆ ದೆಹಲಿ ವಿಜ್ಞಾನ ಭವನದಲ್ಲಿ ಸಭೆ ನಡೆಯಲಿದೆ.

    ಭಾರತೀಯ ಕಿಸಾನ್ ಯೂನಿಯನ್ ರಾಷ್ಟ್ರೀಯ ವಕ್ತಾರ ರಾಕೇಶ್ ಟಿಕೈತ್, ಸಭೆಯಲ್ಲಿ ಸ್ವಾಮಿನಾಥನ್ ಸಮಿತಿ ವರದಿ, ಮೂರು ಕೃಷಿ ಕಾನೂನು ಹಿಂಪಡೆಯುವುದು ಮತ್ತು ಎಂಎಸ್‍ಪಿ (ಬೆಂಬಲ ಬೆಲೆ) ಬಗ್ಗೆ ಚರ್ಚೆಗಳು ನಡೆಯಬೇಕೆಂದು ಮೂರು ಷರತ್ತುಗಳನ್ನ ಇರಿಸಿದ್ದಾರೆ. ಧರಣಿ ವೇಳೆ 60 ರೈತರು ಸಾವನ್ನಪ್ಪಿದ್ದು, ನಾವು ಹಿಂದೆ ಸರಿಯಲ್ಲ ಎಂದು ಹೇಳಿದ್ದಾರೆ.

    ಇಂದು ಮೂರು ಕಾಯ್ದೆಗಳನ್ನ ಹಿಂಪಡೆದುಕೊಂಡು, ಬೆಂಬಲ ಬೆಲೆ ಬಗ್ಗೆ ಹೊಸ ಕಾನೂನು ತರಬೇಕು. ಒಂದು ವೇಳೆ ನಮ್ಮ ಬೇಡಿಕೆಗಳು ಈಡೇರದಿದ್ರೆ ಜನವರಿ 6ರಂದು ಟ್ರ್ಯಾಕ್ಟರ್ ತಂದು ಪ್ರತಿಭಟನೆ ನಡೆಸುತ್ತೇವೆ. ಜನವರಿ 7 ರಿಂದ ರೈತ ವಿರೋಧಿ ಕಾನೂನುಗಳ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಆರಂಭವಾಗಲಿದೆ ಎಂದು ಕಿಸಾನ್ ಮಜ್ದೂರ್ ಕಮೀಟಿ ನಾಯಕ ಸುಖ್‍ವಿಂದರ್ ಸಿಂಗ್ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

    ಇಂದಿನ ಸಭೆಯಲ್ಲಿ ಸರ್ಕಾರ ನಮ್ಮ ಬೇಡಿಕೆಗಳನ್ನ ಪೂರ್ಣ ಮಾಡದಿದ್ರೆ ಪ್ರತಿಭಟನೆ ತೀವ್ರಗೊಳಿಸಲಾಗುವುದು ಎಂದಿದ್ದಾರೆ. ಏಳನೇ ಬಾರಿ ನಡೆದ ಸಭೆಯಲ್ಲಿ ಎರಡು ಬೇಡಿಕೆಗಳನ್ನ ಪೂರೈಸಲು ಸರ್ಕಾರ ಒಪ್ಪಿಕೊಂಡಿತ್ತು. ಇವತ್ತು ಇನ್ನುಳಿದ ಎರಡು ಬೇಡಿಕೆಗಳ ಬಗ್ಗೆ ಸುದೀರ್ಘವಾದ ಚರ್ಚೆ ನಡೆಯಲಿದೆ.

  • ಕೃಷಿ ಕಾಯ್ದೆ ವಿರೋಧಿಸಿ ವಿಪಕ್ಷ ನಾಯಕರಿಂದ ರಾಷ್ಟ್ರಪತಿಗಳ ಭೇಟಿ

    ಕೃಷಿ ಕಾಯ್ದೆ ವಿರೋಧಿಸಿ ವಿಪಕ್ಷ ನಾಯಕರಿಂದ ರಾಷ್ಟ್ರಪತಿಗಳ ಭೇಟಿ

    – ಕೃಷಿ ಕಾಯ್ದೆ ಹಿಂಪಡೆಯುವಂತೆ ಒತ್ತಾಯ

    ನವದೆಹಲಿ: ಕೇಂದ್ರ ಸರ್ಕಾರ ಮೂರು ಹೊಸ ಕೃಷಿ ಕಾಯ್ದೆಗಳನ್ನ ಹಿಂಪಡೆಯುವಂತೆ ಆಗ್ರಹಿಸಲು ವಿಪಕ್ಷ ನಾಯಕರ ನಿಯೋಗ ಬುಧವಾರ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನ ಭೇಟಿಯಾಗಲಿದೆ.

    ಕೊರೊನಾ ಹಿನ್ನೆಲೆ ಎನ್‍ಸಿಪಿ ಮುಖ್ಯಸ್ಥ ಶರದ್ ಪವಾರ್, ಕಾಂಗ್ರೆಸ್ ಮಾಜಿ ಅಧ್ಯಕ್ಷ, ಸಂಸದ ರಾಹುಲ್ ಗಾಂಧಿ, ಸಿಪಿಐ(ಎಂ) ಮಹಾ ಸಚಿವ ಸೀತಾರಾಮ್ ಯೆಚೂರಿ ನೇತೃತ್ವದ ಐವರು ನಾಯಕ ನಿಯೋಗ ಬುಧವಾರ ಸಂಜೆ 5 ಗಂಟೆಗೆ ರಾಷ್ಟ್ರಪತಿಗಳ ಭೇಟಿಗೆ ತೆರಳಲಿದೆ. ಈ ವೇಳೆ ಮೂರು ಕೃಷಿ ಕಾಯ್ದೆಗಳನ್ನ ಹಿಂಪಡೆಯುವಂತೆ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಿದ್ದಾರೆ.

     

    ಕಳೆದ 13 ದಿನಗಳಿಂದ ಸಿಂಘು ಬಾರ್ಡರ್ ನಲ್ಲಿ ರೈತರು ಸರ್ಕಾರದ ಕೃಷಿ ಕಾಯ್ದೆ ವಿರೋಧಿಸಿ ಧರಣಿಗೆ ಕುಳಿತಿದ್ದಾರೆ. ದೆಹಲಿ ಪ್ರವೇಶಕ್ಕೆ ಪೊಲೀಸರು ನಿರಾಕರಿಸಿದ ಹಿನ್ನೆಲೆ ರೈತರು ಹೆದ್ದಾರಿಯ ಪಕ್ಕದಲ್ಲಿಯೇ ಬಿಡಾರ ಹೂಡಿಕೊಂಡು ವಾಸ್ತವ್ಯ ಹೂಡಿದ್ದಾರೆ. ಈಗಾಗಲೇ ಸರ್ಕಾರ ಪ್ರತಿಭಟನಾ ನಿರತ ರೈತರ ಮುಖಂಡರ ಜೊತೆ ಐದು ಸುತ್ತಿನ ಮಾತುಕತೆ ನಡೆಸಿದ್ದು ವಿಫಲವಾಗಿದೆ. ನಾಳೆ ಆರನೇ ಸುತ್ತಿನ ಮಾತುಕತೆ ನಡೆಯಲಿದೆ.

  • ದೆಹಲಿಯ ಆಂದೋಲನದ ಕಿಚ್ಚು ದೇಶವ್ಯಾಪಿ ಹರಡಬೇಕು: ಅಣ್ಣಾ ಹಜಾರೆ

    ದೆಹಲಿಯ ಆಂದೋಲನದ ಕಿಚ್ಚು ದೇಶವ್ಯಾಪಿ ಹರಡಬೇಕು: ಅಣ್ಣಾ ಹಜಾರೆ

    ಮುಂಬೈ: ದೆಹಲಿಯ ಗಡಿಭಾಗದಲ್ಲಿ ರೈತರು ನಡೆಸುತ್ತಿರುವ ಅಂದೋಲನ ದೇಶದ ಪ್ರತಿಭಾಗಕ್ಕೂ ವಿಸ್ತರಣೆ ಆಗಬೇಕು. ಹಾಗಾದ್ರೆ ಮಾತ್ರ ಸರ್ಕಾರದ ಮೇಲೆ ಒತ್ತಡ ಬೀಳುತ್ತೆ ಎಂದು ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಹೇಳಿದ್ದಾರೆ. ರೈತರ ಹೋರಾಟಕ್ಕೆ ಬೆಂಬಲ ನೀಡಿರುವ ಅಣ್ಣಾ ಹಜಾರೆ ಒಂದು ದಿನದ ಉಪವಾಸ ಕುಳಿತು ಪ್ರತಿಭಟನೆ ನಡೆಸಿದ್ದಾರೆ.

    ಕಳೆದ 10 ದಿನಗಳಿಂದ ದೆಹಲಿ ಗಡಿಭಾಗದಲ್ಲಿ ಚಳಿಯನ್ನ ಲೆಕ್ಕಿಸದೇ ರೈತರು ಶಾಂತಿಯುತವಾಗಿ ಧರಣಿ ನಡೆಸುತ್ತಿದ್ದಾರೆ. ದೆಹಲಿಯಲ್ಲಿ ನಡೆಯುತ್ತಿರುವ ಆಂದೋಲನ ದೇಶವ್ಯಾಪಿ ವಿಸ್ತರಣೆ ಆಗಬೇಕು. ಸರ್ಕಾರದ ಒತ್ತಡ ಹೇರಲು ದೇಶದ ಎಲ್ಲ ರೈತರು ರಸ್ತೆಗಿಳಿದಾಗ ಮಾತ್ರ ಗುರಿ ತಲುಪಲು ಸಾಧ್ಯವಾಗುತ್ತೆ. ಹಾಗಾಗಿ ಈ ಆಂದೋಲನದಲ್ಲಿ ದೇಶದ ಜನತೆ ಭಾಗಿಯಾಗಬೇಕು ಎಂದು ಅಣ್ಣಾ ಹಜಾರೆ ಮನವಿ ಮಾಡಿಕೊಂಡಿದ್ದಾರೆ.

    ಈ ಹೋರಾಟದಲ್ಲಿ ಯಾರು ಅಹಿಂಸ ಮಾರ್ಗದತ್ತ ಹೆಜ್ಜೆ ಹಾಕಬಾರದು ಎಂಬುವುದು ನನ್ನ ಮನವಿ. ಕೃಷಿ ವಲಯದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಇದುವೇ ಸೂಕ್ತ ಸಮಯ. ಈ ಮೊದಲು ರೈತರ ಹೋರಾಟಕ್ಕೆ ಬೆಂಬಲ ನೀಡಿದ್ದು, ಮುಂದಿನ ದಿನಗಳಲ್ಲಿಯೂ ಅವರ ಜೊತೆಯಲ್ಲಿರುತ್ತೇನೆ. ಕೇಂದ್ರ ಸರ್ಕಾರ ರೈತರಿಗೆ ಆಶ್ವಾಸನೆ ನೀಡುವ ಬದಲು ಸಮಸ್ಯೆಗಳ ಪರಿಹರಿಸಲು ಮುಂದಾಗಬೇಕೆಂದು ಅಣ್ಣಾ ಹಜಾರೆ ಆಗ್ರಹಿಸಿದ್ದಾರೆ.

  • ಕೃಷಿ ಮಸೂದೆಯನ್ನು ಹಿಂಪಡೆಯದಿದ್ರೆ, ಖೇಲ್ ರತ್ನ ಪ್ರಶಸ್ತಿ ವಾಪಸ್ ಕೊಡುವೆ: ವಿಜೇಂದರ್ ಸಿಂಗ್

    ಕೃಷಿ ಮಸೂದೆಯನ್ನು ಹಿಂಪಡೆಯದಿದ್ರೆ, ಖೇಲ್ ರತ್ನ ಪ್ರಶಸ್ತಿ ವಾಪಸ್ ಕೊಡುವೆ: ವಿಜೇಂದರ್ ಸಿಂಗ್

    ನವದೆಹಲಿ: ಕೃಷಿ ಮಸೂದೆಯನ್ನು ವಾಪಸ್ ಪಡೆಯದೆ ಇದ್ದರೆ, ತಮಗೆ ಬಂದಿರುವ ಖೇಲ್ ರತ್ನ ಪ್ರಶಸ್ತಿಯನ್ನು ವಾಪಸ್ ಕೊಡುತ್ತೇನೆ ಎಂದು ಬಾಕ್ಸರ್ ವಿಜೇಂದರ್ ಸಿಂಗ್ ಹೇಳಿದ್ದಾರೆ.

    ಭಾರತದ ಬಾಕ್ಸರ್ ಮತ್ತು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ವಿಜೇಂದರ್ ಸಿಂಗ್ ಅವರು ಇಂದು ಸಿಂಘು (ದೆಹಲಿ-ಹರಿಯಾಣ) ಗಡಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಗೆ ಸಾಥ್ ನೀಡಿದರು. ಮಿಡಲ್ ವೇಟ್ ವಿಭಾಗದಲ್ಲಿ 2006 ಮತ್ತು 2014ರ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಬೆಳ್ಳಿ ಪದಕಗಳನ್ನು ಗೆದ್ದ ಸಿಂಗ್ ಅವರು ಖೇಲ್ ರತ್ನ ಪ್ರಶಸ್ತಿಗೆ ಭಾಜನಾರಗಿದ್ದರು.

    ಈ ವೇಳೆ ಪ್ರತಿಭಟನಾ ನಿರತ ರೈತರನ್ನು ಉದ್ದೇಶಿಸಿ ಮಾತನಾಡಿದ ವಿಜೇಂದರ್ ಸಿಂಗ್, ವಿವಾದಾತ್ಮಕ ಕೃಷಿ ಮಸೂದೆಯನ್ನು ಕೇಂದ್ರ ಸರ್ಕಾರ ಹಿಂತೆಗೆದುಕೊಳ್ಳದಿದ್ದರೆ ತಮಗೆ ಬಂದಿರುವ ರಾಷ್ಟ್ರದ ಅತ್ಯುನ್ನತ ಕ್ರೀಡಾ ಪ್ರಶಸ್ತಿ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಯನ್ನು ಹಿಂದಿರುಗಿಸುವುದಾಗಿ ಹೇಳಿದರು. ವಿಜೇಂದರ್ ಸಿಂಗ್ ಅವರಿಗೆ 2009ರಲ್ಲಿ ಖೇಲ್ ರತ್ನ ಪ್ರಶಸ್ತಿಯನ್ನು ನೀಡಲಾಗಿತ್ತು.

    ನಾನು ಪಾಂಜಾಬ್‍ನಲ್ಲಿ ತರಬೇತಿ ಪಡೆದಿದ್ದೇನೆ ಮತ್ತು ಅಲ್ಲಿನ ರೈತರು ಬೆಳೆದ ಗೋದಿಯ ರೊಟ್ಟಿ ತಿಂದಿದ್ದೇನೆ. ಇಂದು ಅವರು ಇಲ್ಲಿ ಕಷ್ಟದಲ್ಲಿರುವಾಗ ನಾನು ಅವರ ಸಹೋದರನಾಗಿ ಬಂದಿದ್ದೇನೆ. ಹರಿಯಾಣದ ಇತರ ಕ್ರೀಡಾಪಟುಗಳು ಇಲ್ಲಿಗೆ ಬರಲು ಬಯಸಿದ್ದರು, ಆದರೆ ಅವರಿಗೆ ಸರ್ಕಾರಿ ಉದ್ಯೋಗ ಇರುವ ಕಾರಣ ಬರಲು ಆಗಲಿಲ್ಲ. ಆದರೆ ಅವರು ರೈತರೊಂದಿಗೆ ಇದ್ದಾರೆ ಎಂದು ತಿಳಿಸಿದರು.

    ಇದಕ್ಕೂ ಮೊದಲು 30ಕ್ಕೂ ಹೆಚ್ಚು ಮಾಜಿ ಒಲಿಂಪಿಕ್ ಆಟಗಾರರು ಮತ್ತು ಪದಕ ವಿಜೇತರು ಸದ್ಯ ನಡೆಯುತ್ತಿರುವ ರೈತ ಹೋರಾಟಕ್ಕೆ ಬೆಂಬಲ ನೀಡಿಲು ನಿರ್ಧರಿಸಿದ್ದಾರೆ. ಇದರ ಜೊತೆಗೆ ಭಾರತದ ಮಾಜಿ ಬಾಸ್ಕೆಟ್ ಬಾಲ್ ಆಟಗಾರ ಮತ್ತು ಅರ್ಜುನ ಪ್ರಶಸ್ತಿ ವಿಜೇತ ಸಜ್ಜನ್ ಸಿಂಗ್ ಚೀಮಾ ಅವರು ಕೂಡ ರೈತರಿಗೆ ಬೆಂಬಲ ಘೋಷಿಸಿದ್ದಾರೆ. ಕ್ರೀಡಾಪಟುಗಳ ಜೊತೆಗೆ ಖ್ಯಾತ ಕಾದಂಬರಿಕಾರ ಡಾ.ಜಸ್ವಿಂದರ್ ಸಿಂಗ್ ಅವರು ತಮ್ಮ ಭಾರತೀಯ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ಸಹ ಹಿಂದಿರುಗಿಸುವುದಾಗಿ ಹೇಳಿದ್ದಾರೆ.

    ಪಂಜಾಬಿನ ರೈತ ಮುಖಂಡರು ಮತ್ತು ಕೇಂದ್ರ ಸರ್ಕಾರದ ನಡುವೆ ನಡೆದ ಮಾತುಕತೆ ವಿಫಲವಾಗಿದ್ದು, ಈ ಕಾರಣದಿಂದ ಅಖಿಲ ಭಾರತ ಕಿಸಾನ್ ಸಂಘ ಸಮಿತಿಯು ಡಿಸೆಂಬರ್ 8 ರಂದು ಭಾರತ್ ಬಂದ್‍ಗೆ ಕರೆ ನೀಡಿದೆ.

  • ಕಾಂಗ್ರೆಸ್ ಅಧಿಕಾರಕ್ಕೆ ಬರ್ತಿದ್ದಂತೆ ಕೃಷಿ ಮಸೂದೆ ಕಸದ ಬುಟ್ಟಿ ಸೇರುತ್ತೆ: ರಾಹುಲ್ ಗಾಂಧಿ

    ಕಾಂಗ್ರೆಸ್ ಅಧಿಕಾರಕ್ಕೆ ಬರ್ತಿದ್ದಂತೆ ಕೃಷಿ ಮಸೂದೆ ಕಸದ ಬುಟ್ಟಿ ಸೇರುತ್ತೆ: ರಾಹುಲ್ ಗಾಂಧಿ

    – ಮಸೂದೆಗಳಿಂದ ರೈತರಿಗೆ ಸಂತಸವಾಗಿದ್ರೆ, ಯಾಕೆ ಹೋರಾಟ ಮಾಡ್ತಿದ್ದಾರೆ?

    ಚಂಡೀಗಡ: ಕೃಷಿ ಮಸೂದೆ ಕುರಿತು ದೇಶಾದ್ಯಂತ ರೈತರು ಭಾರೀ ಹೋರಾಟ ನಡೆಸುತ್ತಿದ್ದು, ಇದಕ್ಕೆ ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳು ಬೆಂಬಲ ಸೂಚಿಸಿವೆ. ಇದರ ಬೆನ್ನಲ್ಲೇ ಇದೀಗ ರಾಹುಲ್ ಗಾಂಧಿ ಕೃಷಿ ಮಸೂದೆ ಕುರಿತು ಕೇಂದ್ರ ಸರ್ಕಾರದ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿದ್ದಾರೆ.

    ಪಂಜಾಬ್‍ನ ಮೋಗಾದಲ್ಲಿ ನಡೆದ ಖೇತಿ ಬಚಾವ್ ಯಾತ್ರೆಯ ರ್ಯಾಲಿಯಲ್ಲಿ ಮಾತನಾಡಿದ ಅವರು, ಕೊರೊನಾ ಹೊತ್ತಲ್ಲಿ ಈ ಕಾನೂನುಗಳನ್ನು ಜಾರಿಗೆ ತರುವ ಅಗತ್ಯವೇನಿತ್ತು? ಅಂತಹ ಆತುರವೇನಿತ್ತು? ಒಂದು ವೇಳೆ ನೀವು ಜಾರಿಗೆ ತರಲೇ ಬೇಕೆಂದಿದ್ದರೆ ಲೋಕಸಭೆಯಲ್ಲಿ ಈ ಕುರಿತು ಚರ್ಚಿಸಬೇಕಿತ್ತು. ರೈತರಿಗಾಗಿಯೇ ಕಾನೂನು ರೂಪಿಸಿರುವುದಾಗಿ ಪ್ರಧಾನಿ ಮೋದಿ ಹೇಳುತ್ತಾರೆ, ಹಾಗಿದ್ದರೆ ಇದನ್ನು ಸದನದಲ್ಲಿ ಏಕೆ ಚರ್ಚಿಸಲಿಲ್ಲ? ರೈತರಿಗೆ ಇದರಿಂದ ಸಂತಸವಾಗಿದ್ದರೆ ದೇಶಾದ್ಯಂತ ರೈತರು ಯಾಕೆ ಪ್ರತಿಭಟನೆ ನಡೆಸುತ್ತಿದ್ದಾರೆ? ಪಂಜಾಬ್‍ನ ಎಲ್ಲ ರೈತರು ಯಾಕೆ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಕೇಂದ್ರ ಸರ್ಕಾರವನ್ನು ಅವರು ಪ್ರಶ್ನಿಸಿದ್ದಾರೆ.

    ದೇಶದಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬಂದ ದಿನವೇ ಈ ಮೂರು ಕಪ್ಪು ಕಾನೂನುಗಳನ್ನು ಕಸದ ಬುಟ್ಟಿಗೆ ಎಸೆಯುತ್ತೇವೆ. ನಾನು ನಿಮಗೆ ಭರವಸೆ ನೀಡುತ್ತೇನೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದೇ ಬರುತ್ತದೆ. ನಾವು ಈ ಕಪ್ಪು ಕಾನೂನುಗಳನ್ನು ತೆಗೆದು ಕಸದ ಬುಟ್ಟಿಗೆ ಹಾಕಿಯೇ ಹಾಕುತ್ತೇವೆ ಎಂದು ಭರವಸೆ ವ್ಯಕ್ತಪಡಿಸಿದರು.

    ಇದೇ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪಂಜಾಬ್‍ನ ಬಧ್ನಿ ಕಲನ್‍ನಿಂದ ಕತ್ತ್‍ಪುರದ ವರೆಗೆ ಟ್ರ್ಯಾಕ್ಟರ್ ರ್ಯಾಲಿ ನಡೆಸಿದರು. ಈ ವೇಳೆ ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಸಹ ಭಾಗಿಯಾಗಿದ್ದರು. ಮೂರು ದಿನಗಳ ಈ ಯಾತ್ರೆಯ ಭಾಗವಾಗಿ ರಾಹುಲ್ ಗಾಂಧಿ ಪಂಜಾಬ್ ಹಾಗೂ ಹರಿಯಾಣಗಳಲ್ಲಿ ಸಾರ್ವಜನಿಕ ರ್ಯಾಲಿಗಳನ್ನು ನಡೆಸಿರು.

    ಕೃಷಿ ಮಸೂದೆ ಸಂಬಂಧ ಪ್ರಧಾನಿ ಮೋದಿ ಹಲವು ಬಾರಿ ಸ್ಪಷ್ಟನೆ ನೀಡಿದ್ದು, ರೈತರ ಶ್ರೇಯಸ್ಸಿಗಾಗಿಯೇ ಕೃಷಿ ಬಿಲ್ ತರಲಾಗುತ್ತಿದೆ. ಆದರೆ ಈ ಬಗ್ಗೆ ವಿಪಕ್ಷಗಳು ರೈತರನ್ನು ತಪ್ಪು ದಾರಿಗೆ ಎಳೆಯುತ್ತಿವೆ ಎಂದು ಆರೋಪಿಸಿದ್ದರು. ಕೃಷಿ ಮಸೂದೆಗಳು ಯಾವುದೇ ಕಾರಣಕ್ಕೂ ರೈತ ವಿರೋಧಿ ಅಲ್ಲ. ಇವುಗಳಿಂದ ಕೃಷಿ ಕ್ಷೇತ್ರದಲ್ಲಿ ಸಾಕಷ್ಟು ಬದಲಾವಣೆ ಆಗಲಿವೆ. ಈ ಮಸೂದೆಗಳಿಂದಾಗಿ ಬೆಳೆಗಳಿಗೆ ಬೆಂಬಲ ಬೆಲೆಯೂ ರದ್ದಾಗಲ್ಲ. ಬೆಂಬಲ ಬೆಲೆ ಮುಂದುವರೆಯಲಿದೆ ಎಂದು ಈ ಮೂಲಕ ರೈತರಿಗೆ ಭರವಸೆ ನೀಡುತ್ತಿದ್ದೇನೆ. ನೂತನ ಕೃಷಿ ಮಸೂದೆಯಿಂದಾಗಿ ರೈತರು ಎಲ್ಲಿ ಬೇಕಾದ್ರೂ ತಮ್ಮ ಉತ್ಪನ್ನಗಳನ್ನು ಮಾರಬಹುದು. ದೇಶದ ಯಾವುದೇ ಮಂಡಿಯನ್ನು ಮುಚ್ಚುವುದಿಲ್ಲ ಎಂದು ಮೋದಿ ಸ್ಪಷ್ಟಪಡಿಸಿದ್ದರು.

  • ಕಟೀಲ್ ರಾಜ್ಯ ಬಿಜೆಪಿಯ ಕಾಮಿಡಿ ಆ್ಯಕ್ಟರ್: ಕಾಂಗ್ರೆಸ್ ಟ್ವೀಟ್

    ಕಟೀಲ್ ರಾಜ್ಯ ಬಿಜೆಪಿಯ ಕಾಮಿಡಿ ಆ್ಯಕ್ಟರ್: ಕಾಂಗ್ರೆಸ್ ಟ್ವೀಟ್

    -ಕಾಂಗ್ರೆಸ್ ಟ್ವೀಟ್‍ಗೆ ನಳಿನ್ ತಿರುಗೇಟು

    ಬೆಂಗಳೂರು: ಸಂಸದ ನಳಿನ್ ಕುಮಾರ್ ಕಟೀಲ್ ಅವರನ್ನು ರಾಜ್ಯ ಬಿಜೆಪಿಯ ಕಾಮಿಡಿ ಆ್ಯಕ್ಟರ್ ಎಂದು ವ್ಯಂಗ್ಯವಾಡಿ ಕಾಂಗ್ರೆಸ್ ಟ್ವೀಟ್ ಮಾಡಿತ್ತು. ಕಾಂಗ್ರೆಸ್ ಟ್ವೀಟ್‍ಗೆ ತಿರುಗೇಟು ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಕಾಮಿಡಿ ಮಾಡುವ ವ್ಯಕ್ತಿ ಯಾರು ಮತ್ತು ಕಾಮಿಡಿಯಾದ ಪಕ್ಷ ಯಾವುದು ಎಂದು ದೇಶದ ಜನತೆಗೆ ಗೊತ್ತು ಎಂದು ಟ್ವೀಟ್ ಮಾಡಿದ್ದಾರೆ.

    ಭೂ ಸುಧಾರಣಾ ಕಾಯ್ದೆ ಮತ್ತು ಎಪಿಎಂಸಿ ಕಾಯ್ದೆ ಬಗ್ಗೆ ಕಾಂಗ್ರೆಸ್ ರಾಜ್ಯದ ರೈತರನ್ನು ದಿಕ್ಕು ತಲುಪಿಸುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿ ನಳಿನ್ ಕುಮಾರ್ ಕಟೀಲ್ ಟ್ವೀಟ್ ಮಾಡಿದ್ದರು. ಈ ಟ್ವೀಟ್ ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಟ್ಯಾಗ್ ಮಾಡಿದ್ದರು. ಈ ಟ್ವೀಟ್ ರಾಜ್ಯ ಕಾಂಗ್ರೆಸ್ ಟ್ವಿಟ್ಟರ್ ಖಾತೆಯಿಂದ ಕಟೀಲ್ ಅವರಿಗೆ ತಿರುಗೇಟು ನೀಡಿತ್ತು.

    ನಳಿನ್ ಟ್ವೀಟ್: ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪನವರು ರೈತನ ಮಗನಾಗಿ, ರೈತಪರ ಹೋರಾಟಗಳಿಂದ ಜನಮನ ಗೆದ್ದವರು. ಆದರೆ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರು, ರೈತರ ಭೂಮಿಯನ್ನು ಕಬಳಿಸಿ ಈಗ ಮೊಸಳೆ ಕಣ್ಣೀರು ಹಾಕುತ್ತಿದ್ದಾರೆ. ಅಮಾಯಕ ರೈತರನ್ನು ದಾರಿ ತಪ್ಪಿಸಿ ಮೋಸಗೊಳಿಸುತ್ತಿದ್ದಾರೆ. ಅವರ ಕಪಟ ಹೋರಾಟವನ್ನು ನೈಜ ರೈತ ನಂಬುವುದಿಲ್ಲ.

    ಕಾಂಗ್ರೆಸ್ ಟ್ವೀಟ್: ರಾಜ್ಯ ಬಿಜೆಪಿಯ ಕಾಮಿಡಿ ಆಕ್ಟರ್ ನಳಿನ್ ಕುಮಾರ್ ಕಟೀಲ್‍ಅವರೇ ಅಕ್ರಮ ‘ಡಿನೋಟಿಫಿಕೇಷನ್’ ನಂತಹ ಭೂ ಹಗರಣದವರು, ಅಕ್ರಮ ಗಣಿ ಹಗರಣದವರು, ಜೈಲಿಗೆ ಹೋಗಿ ಬಂದವರು ನಿಮ್ಮಲ್ಲೇ ಇದ್ದಾರೆ. ‘ಒಂದು ಡಾಲರ್’ಗೆ 15 ರೂಪಾಯಿ ಮಾಡುತ್ತೇವೆಂದು ಅಮಾಯಕರ ದಾರಿ ತಪ್ಪಿಸುವ ಕಲೆ ನಿಮಗಿಂತ ಚೆನ್ನಾಗಿ ಇನ್ಯಾರಿಗೆ ತಿಳಿದಿರಲು ಸಾಧ್ಯ ಹೇಳಿ?

    ನಳಿನ್ ಟ್ವೀಟ್: ಕಾಮಿಡಿ ಮಾಡುವ ವ್ಯಕ್ತಿ ಯಾರು ಮತ್ತು ಕಾಮಿಡಿಯಾದ ಪಕ್ಷ ಯಾವುದು ಎಂದು ದೇಶದ ಜನತೆಗೆ ಸರಿಯಾಗಿ ತಿಳಿದಿದೆ. ಜೈಲಿಗೆ ಹೋಗಿ ಬಂದವರೆಲ್ಲಾ ಬಿಜೆಪಿಯಲ್ಲೇ ಇರುವುದು ಎಂದಾದರೇ ತಿಹಾರ್ ಜೈಲು ಕಾಂಗ್ರೆಸ್ ನವರಿಗೆ ಜೈಲಿನ ಹಾಗೆ ಕಾಣಲಿಲ್ಲವೇ? ಜಾಮೀನಿನ ಮೇಲೆ ಹೊರಗೆ ಇರುವುದೇ ಪಕ್ಷದ ಅಧ್ಯಕ್ಷರಾಗಲು ಇರುವ ಮಾನದಂಡವೇ ಎಂದು ಪ್ರಶ್ನೆ ಮಾಡಿದ್ದಾರೆ.

  • ಬಿಜೆಪಿ ಸರ್ಕಾರಕ್ಕೆ ಭವಿಷ್ಯವಿಲ್ಲ, ಆರು ತಿಂಗಳಲ್ಲಿ ಪತನವಾಗಲಿದೆ: ಎಂಎಲ್‍ಸಿ ಗೋಪಾಲಸ್ವಾಮಿ

    ಬಿಜೆಪಿ ಸರ್ಕಾರಕ್ಕೆ ಭವಿಷ್ಯವಿಲ್ಲ, ಆರು ತಿಂಗಳಲ್ಲಿ ಪತನವಾಗಲಿದೆ: ಎಂಎಲ್‍ಸಿ ಗೋಪಾಲಸ್ವಾಮಿ

    ಹಾಸನ: ರೈತರು, ಕಾರ್ಮಿಕರ ವಿರೋಧ ಕಟ್ಟಿಕೊಂಡರೆ ಈ ಸರ್ಕಾರ ಉಳಿಯಲು ಸಾಧ್ಯವಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಗೋಪಾಲಸ್ವಾಮಿ ಕಿಡಿಕಾರಿದ್ದಾರೆ.

    ರೈತ ವಿರೋಧಿ ನಡೆ ಖಂಡಿಸಿ ಸರ್ಕಾರದ ವಿರುದ್ಧ ಹಾಸನದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸರ್ಕಾರದ ರೈತ ವಿರೋಧಿ ಕಾಯ್ದೆ ವಿರುದ್ಧ ನಡೆಸುತ್ತಿರುವ ಬಂದ್‍ಗೆ ನಮ್ಮ ಬೆಂಬಲವಿದೆ. ಈಗಾಗಲೇ ಯಡಿಯೂರಪ್ಪ ಅವರನ್ನು ಕೆಳಗಿಸಲು ಅವರ ಪಕ್ಷದಲ್ಲೇ ಒಂದು ಸಂಘಟನೆ ಇದ್ದು, ಸರ್ಕಾರ ಬೀಳಿಸಲು ಬಿಜೆಪಿಯವರೇ ಸಿದ್ಧತೆ ನಡೆಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

    ನಮ್ಮ ಪಕ್ಷದಿಂದ ಬಿಜೆಪಿಗೆ ಹೋದವರು ಈ ಕಾಯ್ದೆ ವಿರೋಧಿಸಿ. ದಯವಿಟ್ಟು ನಮ್ಮ ಪಕ್ಷಕ್ಕೆ ಮರಳಿ ಬನ್ನಿ. ಈ ಸರ್ಕಾರಕ್ಕೆ ಮುಂದಿನ ದಿನಗಳಲ್ಲಿ ಭವಿಷ್ಯವಿಲ್ಲ. ಇನ್ನು ಕೇವಲ ಆರು ತಿಂಗಳಲ್ಲಿ ಈ ಸರ್ಕಾರ ಪತನವಾಗಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೃಷಿ ಮಸೂದೆ ಖಂಡಿಸಿ ನಡೆಸುತ್ತಿರುವ ಬಂದ್‍ಗೆ ಹಾಸನದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ರಸ್ತೆ ತಡೆ ನಡೆಸಿ, ಪ್ರತಿಭಟನೆ ನಡೆಸಲಾಗುತ್ತಿದೆ.

    ಕೃಷಿ ಮಸೂದೆ ಖಂಡಿಸಿ ರಾಜ್ಯಾದ್ಯಂತ ಕರೆ ನೀಡಿರುವ ಬಂದ್‍ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಕೆಲವು ಜಿಲ್ಲೆಗಳಲ್ಲಿ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ ಬೆಂಬಲ ಸೂಚಿಸಿದರೆ, ಇನ್ನೂ ಹಲವೆಡೆ ಅಂಗಡಿ ಮುಂಗಟ್ಟಿಗಳನ್ನು ತೆರೆಯಲಾಗಿದ್ದು, ಬಸ್ ಸಂಚಾರ ಸಹ ಎಂದಿನಂತೆ ಇದೆ. ಹೀಗೆ ಬಂದ್‍ಗೆ ರಾಜ್ಯಾದ್ಯಂತ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ರೈತ ಸಂಘಟನೆ ಕಾರ್ಯಕರ್ತರು ರಸ್ತೆ ತಡೆ ಮಾಡಿ ಪ್ರತಿಭಟನೆ ಮಾಡಿದ್ದಾರೆ.

  • ಗದ್ದಲದ ನಡ್ವೆ ಕೃಷಿ ಮಸೂದೆಗಳು ವಿಧಾನಸಭೆಯಲ್ಲಿ ಪಾಸ್

    ಗದ್ದಲದ ನಡ್ವೆ ಕೃಷಿ ಮಸೂದೆಗಳು ವಿಧಾನಸಭೆಯಲ್ಲಿ ಪಾಸ್

    -ವಿಧೇಯಕದ ಪ್ರತಿ ಹರಿದು ಸಿದ್ದರಾಮಯ್ಯ ಆಕ್ರೋಶ
    -ರಾಜ್ಯ ಸರ್ಕಾರಕ್ಕೆ ರೈತರಿಂದ ಹಿಡಿ ಶಾಪ

    ಬೆಂಗಳೂರು: ವಾರದ ಹಿಂದೆ ಕೃಷಿ ಬಿಲ್ ಬಿಲ್ ವಿರೋಧಿಸಿ ರಾಜ್ಯಸಭೆಯಲ್ಲಿ ವಿಪಕ್ಷ ಸದಸ್ಯರು ಮಸೂದೆ ಪ್ರತಿ ಹರಿದು ಆಕ್ರೋಶ ಹೊರ ಹಾಕಿದ್ದರು. ಇದೀಗ ವಿಧಾನಸಭೆಯಲ್ಲೂ ಇದೇ ರೀತಿಯ ಘಟನೆ ಮರುಕಳಿಸಿದೆ. ವಿಪಕ್ಷ ಸದಸ್ಯರು ಭೂ ಸೂಧಾರಣಾ ತಿದ್ದುಪಡಿ ವಿಧೇಯಕದ ಪ್ರತಿಗಳು ಹರಿದು ಹಾಕಿದರು. ವಿಪಕ್ಷಗಳ ಗದ್ದಲ ಗಲಾಟೆ, ರೈತರ ಪ್ರತಿಭಟನೆಗಳ ನಡುವೆ ಅಧಿವೇಶನದ ಕೊನೆಯ ದಿನವಾದ ಇಂದು ಭೂಸುಧಾರಣಾ ತಿದ್ದುಪಡಿ ವಿಧೇಯಕ ಮತ್ತು ಎಪಿಎಂಸಿ ಬಿಲ್‍ಗಳಿಗೆ ವಿಧಾನಸಭೆಯ ಒಪ್ಪಿಗೆಯನ್ನು ಸರ್ಕಾರ ಪಡೆದುಕೊಂಡಿದೆ.

    ಇದಕ್ಕೂ ಮುನ್ನ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಕಾರ್ಪೋರೇಟ್ ಕಂಪನಿಗಳ ಲಾಬಿಗೆ ಮಣಿದಿರೋ ಸರ್ಕಾರ ಇದನ್ನು ಜಾರಿಗೆ ತರಲು ಮುಂದಾಗುತ್ತಿದೆ. ಇದನ್ನು ಒಪ್ಪಲು ಸಾಧ್ಯವೇ ಇಲ್ಲ. ಇದರಲ್ಲಿ ಭಾರೀ ಅವ್ಯವಹಾರ ನಡೆದಿದೆ ಎಂದು ಆಪಾದಿಸಿದರು. ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಮಾತನಾಡಿ, ಈ ಕಾಯ್ದೆಯನ್ನ ತಂದರೆ 1964ರ ಹಿಂದಕ್ಕೆ ಹೋಗ್ತೇವೆ. ಇಲ್ಲಿಯವರೆಗೆ ಉಳುವವನೇ ಭೂ ಒಡೆಯ ಅನ್ನುವಂತಿತ್ತು. ಆದರೆ ಈಗ ಅದು ಉಲ್ಟಾ ಆಗಲಿದೆ. ಎಪಿಎಂಸಿಗಳು ಮುಚ್ಚಬಹುದಾದ ಆತಂಕವಿದೆ ಅಂತಾ ಆಕ್ಷೇಪ ವ್ಯಕ್ತಪಡಿಸಿದರು.

    ವಿಪಕ್ಷಗಳಿಗೆ ಸ್ಪಷ್ಟನೆ ಕೊಟ್ಟ ಸಿಎಂ ಬಿ.ಎಸ್.ಯಡಿಯೂರಪ್ಪ, ಸಣ್ಣ ಹಿಡುವಳಿದಾರರ ಹಿತ ಕಾಯಲು ಸರ್ಕಾರ ಬದ್ಧ. ಯಾವುದೇ ಆತಂಕ ನಿಮಗೆ ಬೇಡ ಎಂದರು. ಸಚಿವ ಅಶೋಕ್ ಮಾತನಾಡಿ, ಈ ತಿದ್ದುಪಡಿ ಕಾಯ್ದೆ ತಂದಿದ್ದು ನಾವಲ್ಲ. 2004ರಲ್ಲಿ ಕಂದಾಯ ಸಚಿವರಾಗಿದ್ದವರು ಅಂದ್ರು. ಇನ್ನು ರೈತರನ್ನು ಕೇಳಿ ಎಪಿಎಂಸಿ ಬಿಲ್ ತಂದ್ರಾ ಎಂಬ ಸಿದ್ದರಾಮಯ್ಯ ಪ್ರಶ್ನೆಗೆ ಕೌಂಟರ್ ಕೊಟ್ಟ ಸಚಿವ ಸಿಟಿ ರವಿ, ಲೋಕಸಭೆ, ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ವೇಳೆ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಎಪಿಎಂಸಿ ಕಾಯ್ದೆ ತಿದ್ದುಪಡಿ ಬಗ್ಗೆ ಪ್ರಸ್ತಾಪಿಸಿದ್ದನ್ನು ಎತ್ತಿ ತೋರಿಸಿದರಿ. ಈ ವೇಳೆ ಭಾರೀ ಗದ್ದಲ ನಡೀತು.

    ಸಿದ್ದರಾಮಯ್ಯನವರು ಸೇರಿ ಹಲವರು ವಿಧೇಯಕ ಪ್ರತಿ ಹರಿದು ಹಾಕಿ, ಸಭಾತ್ಯಾಗ ಮಾಡಿದರು. ಇದರ ಮಧ್ಯೆಯೇ ಧ್ವನಿಮತದ ಮೂಲಕ ಮಸೂದೆಗಳಿಗೆ ಸರ್ಕಾರ ಅಂಗೀಕಾರ ಪಡೆಯಿತು. ಪರಿಷತ್‍ನಲ್ಲಿಯೂ ಭೂಸುಧಾರಣೆ ಬಿಲ್‍ಗೆ ಸರ್ಕಾರ ಒಪ್ಪಿಗೆ ಪಡೆದಿದೆ. ಎಪಿಎಂಸಿ ಬಿಲ್ ಮೇಲೆ ಚರ್ಚೆ ನಡೆಯುತ್ತಿದೆ.