Tag: agriculture department

  • ಬೋರ್‌ವೆಲ್‌ ನೀರಿನಿಂದ ತುಂಬಿಸಿದ್ದ ಕೃಷಿಹೊಂಡಕ್ಕೆ ಸಚಿವ ಶಿವಶಂಕರರೆಡ್ಡಿಯಿಂದ ಬಾಗಿನ!

    ಬೋರ್‌ವೆಲ್‌ ನೀರಿನಿಂದ ತುಂಬಿಸಿದ್ದ ಕೃಷಿಹೊಂಡಕ್ಕೆ ಸಚಿವ ಶಿವಶಂಕರರೆಡ್ಡಿಯಿಂದ ಬಾಗಿನ!

    ದಾವಣಗೆರೆ: ಸಚಿವರನ್ನು ಮೆಚ್ಚಿಸಲು ಕೃಷಿ ಅಧಿಕಾರಿಗಳು ಕೃಷಿ ಹೊಂಡಕ್ಕೆ ಬೋರ್‌ವೆಲ್‌ ನೀರು ತುಂಬಿಸಿ ಸಚಿವರನ್ನು ಮೆಚ್ಚಿಸಿದ ಘಟನೆ ಜಿಲ್ಲೆಯ ಈಚಘಟ್ಟ ಗ್ರಾಮದಲ್ಲಿ ನಡೆದಿದೆ.

    ಈಚಗಟ್ಟ ಗ್ರಾಮದಲ್ಲಿ ಕೃಷಿ ಸಚಿವ ಶಿವಶಂಕರರೆಡ್ಡಿ ರೈತರ ಜೊತೆ ಸಂವಾದವನ್ನು ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು. ಕಾರ್ಯಕ್ರಮಕ್ಕೂ ಮುಂಚಿತವಾಗಿ ಗ್ರಾಮದ ಮಲ್ಲಿಕಾರ್ಜುನ್ ಎಂಬವರ ಜಮೀನಿನ ಕೃಷಿ ಹೊಂಡಕ್ಕೆ ಬಾಗಿನ ಅರ್ಪಿಸುವ ಕಾರ್ಯಕ್ರಮ ನೆರವೇರಿಸಿದರು. ಆದರೆ ಮಳೆಯೇ ಇಲ್ಲದ ಜಿಲ್ಲೆಯಲ್ಲಿ ಕೃಷಿ ಹೊಂಡಕ್ಕೆ ಬೋರ್‌ವೆಲ್‌ ನೀರನ್ನು ತುಂಬಿಸಿ ಸಚಿವರಿಂದ ಮೆಚ್ಚುಗೆ ಪಡಿಯಲು ಅಧಿಕಾರಿಗಳು ಈ ರೀತಿ ಮಾಡಿದ್ದಾರೆ ಎಂದು ಗ್ರಾಮಸ್ಥರು ಹೇಳಿದ್ದಾರೆ.

     

    ಮಳೆ ನೀರಿನ ಮೂಲಕ ಕೃಷಿ ಹೊಂಡ ತುಂಬಿಸುವ ಯೋಜನೆಗೆ ಇದಾಗಿದೆ. ಆದರೆ ಈ ಯೋಜನೆಗೆ ಅಧಿಕಾರಿಗಳೇ ಎಳ್ಳುನೀರು ಬಿಟ್ಟಿದ್ದಾರೆ. ಇದರ ಮಾಹಿತಿ ಅರಿಯದ ಕೃಷಿ ಸಚಿವರು ತುಂಬಿದ್ದ ಕೃಷಿ ಹೊಂಡಕ್ಕೆ ಬಾಗಿನ ಅರ್ಪಿಸಿ ಸಂವಾದ ಕಾರ್ಯಕ್ರಮಕ್ಕೆ ತೆರಳಿದರು. ಅಲ್ಲದೇ ಕೃಷಿ ಸಚಿವರು ಬರುತ್ತಾರೆಂದು ಕೃಷಿ ಹೊಂಡಕ್ಕೆ ಅಧಿಕಾರಿಗಳು ತಂತಿ ಬೇಲಿಯನ್ನು ಸಹ ನಿರ್ಮಿಸಿದ್ದರು.

    ನಂತರ ರೈತರ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಫಲಾನುಭವಿಗಳಿಗೆ ಕೃಷಿ ಭಾಗ್ಯ ಪರಿಕರ ವಿತರಿಸಿ, ಮಾತನಾಡಿದ ಕೃಷಿ ಸಚಿವರು, ಆತ್ಮಹತ್ಯೆ ಮಾಡಿಕೊಂಡು ಸತ್ತವರೆಲ್ಲಾ ಸಾಲಭಾದೆಯಿಂದ ಸಾವನ್ನಪ್ಪಿದ್ದಾರೆಂದು ಹೇಳಲು ಸಾಧ್ಯವಿಲ್ಲ. ಕೆಲವರು ತಮ್ಮ ಕೌಟುಂಬಿಕ ತೊಂದರೆ ಹಾಗೂ ಬೇರೆ ಬೇರೆ ಕಾರಣಕ್ಕಾಗಿ ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ. ಇಂತಹ ಆತ್ಮಹತ್ಯೆ ವಿಚಾರಗಳನ್ನು ಮಾಧ್ಯಮಗಳು ವೈಭವಿಕರಿಸುವುದು ಸರಿಯಲ್ಲ. ನಮ್ಮ ಸರ್ಕಾರ ರೈತರ ಬಗ್ಗೆ ವಿಶೇಷ ಕಾಳಜಿಯನ್ನು ಹೊಂದಿದೆ ಎಂದು ತಿಳಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews

  • ಸರ್ಕಾರಿ ಕಚೇರಿಗೆ ನುಗ್ಗಿ ದಾಂಧಲೆ- ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಬಿಜೆಪಿ ಜಿ.ಪಂ ಸದಸ್ಯ

    ಸರ್ಕಾರಿ ಕಚೇರಿಗೆ ನುಗ್ಗಿ ದಾಂಧಲೆ- ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಬಿಜೆಪಿ ಜಿ.ಪಂ ಸದಸ್ಯ

    ಚಾಮರಾಜನಗರ: ಜಿಲ್ಲಾ ಪಂಚಾಯಿತಿಯ ಬಿಜೆಪಿ ಸದಸ್ಯ ಮತ್ತು ಬೆಂಬಲಿಗರು ಕೊಳ್ಳೆಗಾಲದ ಕೃಷಿ ಇಲಾಖೆಯ ಕಚೇರಿಗೆ ನುಗ್ಗಿ ಸರ್ಕಾರಿ ಕಚೇರಿಗೆ ನುಗ್ಗಿ ದಾಂಧಲೆ ನಡೆಸಿ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ. ಜಿಲ್ಲೆಯ

    ಕುಂತೂರು ಜಿಲ್ಲಾ ಪಂಚಾಯಿತಿ ಬಿಜೆಪಿ ಸದಸ್ಯ ಎಲ್.ನಾಗರಾಜು ಮತ್ತು ಬೆಂಬಲಿಗರು ಕೊಳ್ಳೆಗಾಲದ ಸಹಾಯಕ ಕೃಷಿ ಇಲಾಖೆಯ ಕಚೇರಿಗೆ ನುಗ್ಗಿ ಸಹಾಯಕ ನಿರ್ದೇಶಕ ಬಿ.ಎಸ್.ಮಹದೇವಯ್ಯ ಹಾಗೂ ಮಹಿಳಾ ಸಿಬ್ಬಂದಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಉಮಾಶಂಕರ್ ಎಂಬ ಡಿ.ದರ್ಜೆಯ ನೌಕರನ ಮೇಲೆ ಹಲ್ಲೆ ನಡೆಸಿದ್ದಾರೆ.

    ಸಹಾಯಕ ನಿರ್ದೇಶಕ ಎಲ್.ಮಹದೇವಯ್ಯ

    ಮಾಹಿತಿ ಹಕ್ಕಿನಡಿ ಸರಿಯಾದ ಮಾಹಿತಿ ನೀಡಿಲ್ಲವೆಂದು ಆರೋಪಿಸಿ ಡಿ ದರ್ಜೆ ನೌಕರನ ಮೇಲೆ ಹಲ್ಲೆ ನಡೆಸಿದ್ದಲ್ಲದೇ, ಉಪನಿರ್ದೇಶಕರಿಗೆ ಕೊಲೆ ಬೆದರಿಕೆ ಹಾಕಿದ್ದಾರೆ. ತಮ್ಮ ಬಳಿಯಿರುವ ದಾಖಲೆಗಳನ್ನು ನೀಡಿದ್ದೇವೆ ಎಂದು ತಿಳಿಸಿದ್ರೂ ನಮ್ಮ ಹಲ್ಲೆ ನಡೆಸಿದ್ದಾರೆ ಎಂದು ಸಹಾಯಕ ನಿರ್ದೇಶಕ ಎಲ್.ಮಹದೇವಯ್ಯ ಹೇಳಿದ್ದಾರೆ.

    ಎಲ್.ನಾಗರಾಜು ಸೇರಿದಂತೆ ಐವರ ವಿರುದ್ಧ ಕರ್ತವ್ಯಕ್ಕೆ ಅಡ್ಡಿ ಹಾಗೂ ಕೊಲೆ ಬೆದರಿಕೆ ಹಾಕಲಾಗಿದೆ ಎಂದು ಕೊಳ್ಳೆಗಾಲ ಪೊಲೀಸ್ ಠಾಣೆಯಲ್ಲಿ ಸಹಾಯಕ ನಿರ್ದೇಶಕ ಎಲ್.ಮಹದೇವಯ್ಯ ದೂರು ದಾಖಲಿಸಿದ್ದಾರೆ. ಇನ್ನೂ ಹಲ್ಲೆಗೊಳಗಾದ ಡಿ ದರ್ಜೆ ನೌಕರ ಉಮಾಶಂಕರ್ ಕೊಳ್ಳೆಗಾಲ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

     

    ನೌಕರ ಉಮಾಶಂಕರ್