Tag: Agriculture Law

  • ಬೀದಿಗಿಳಿದ ಜನರು ಕಾನೂನುಗಳನ್ನು ಮಾಡಲು ಪ್ರಾರಂಭಿಸಿದರೆ ಸರ್ಕಾರ ಯಾಕಿರಬೇಕು: ಕಂಗನಾ ಅಸಮಾಧಾನ

    ಬೀದಿಗಿಳಿದ ಜನರು ಕಾನೂನುಗಳನ್ನು ಮಾಡಲು ಪ್ರಾರಂಭಿಸಿದರೆ ಸರ್ಕಾರ ಯಾಕಿರಬೇಕು: ಕಂಗನಾ ಅಸಮಾಧಾನ

    ಮುಂಬೈ:  ದುಃಖ, ನಾಚಿಕೆಗೇಡು, ಸಂಪೂರ್ಣವಾಗಿ ಅನ್ಯಾಯ. ಬೀದಿಗಿಳಿದ ಜನರು ಕಾನೂನುಗಳನ್ನು ಮಾಡಲು ಪ್ರಾರಂಭಿಸಿದ್ದರೆ ಸರ್ಕಾರ ಯಾಕಿರಬೇಕು. ಆಗ ಇದು ಕೂಡ ಜಿಹಾದಿ ರಾಷ್ಟ್ರವಾಗಿದೆ. ಈ ರೀತಿ ಬಯಸಿದ ಎಲ್ಲರಿಗೂ ಅಭಿನಂದನೆಗಳು. ”ಎಂದು ಬಾಲಿವುಡ್ ನಟಿ ಕಂಗನಾ ರಣಾವತ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ಕೃಷಿ ಕಾಯ್ದೆಯನ್ನು ಕೇಂದ್ರ ಸರ್ಕಾರ ವಾಪಸ್‌ ಪಡೆದ ಬಗ್ಗೆ ಇನ್‌ಸ್ಟಾಗ್ರಾಮ್‌ನಲ್ಲಿ ಕಂಗನಾ ಸ್ಟೋರಿ ಪಬ್ಲಿಶ್‌ ಮಾಡಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇಂದಿರಾಗಾಂಧಿಯ ಫೋಟೋ ಹಾಕಿ ರಾಷ್ಟ್ರದ ಆತ್ಮಸಾಕ್ಷಿಯು ಆಳವಾದ ನಿದ್ರೆಯಲ್ಲಿರುವಾಗ, ಲಾಠಿ ಒಂದೇ ಪರಿಹಾರ ಮತ್ತು ಸರ್ವಾಧಿಕಾರ ಒಂದೇ ಪರಿಹಾರ. ಜನ್ಮದಿನದ ಶುಭಾಶಯಗಳು ಮೇಡಂ ಪ್ರಧಾನ ಮಂತ್ರಿ ಎಂದು ಬರೆದುಕೊಂಡಿದ್ದಾರೆ.

    ಗುರುನಾನಕ್ ಜಯಂತಿಯ ವಿಶೇಷ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ದೇಶವನ್ನುದ್ದೇಶಿಸಿ ಮಾತನಾಡಿದರು. ಈ ವೇಳೆ ರೈತರ ಬೃಹತ್ ಪ್ರತಿಭಟನೆಗೆ ಕಾರಣವಾದ ಮೂರು ಹೊಸ ಕೃಷಿ ಕಾನೂನುಗಳನ್ನು ಸರ್ಕಾರ ಹಿಂಪಡೆಯುತ್ತಿರುವುದಾಗಿ ಘೋಷಿಸಿದ್ದಾರೆ.

    ಮೋದಿ ಅವರ ಹೇಳಿಕೆ ನಂತರ ಅನೇಕ ರಾಜಕಾರಣಿಗಳು ಮತ್ತು ಸಾರ್ವಜನಿಕರು ತಮ್ಮ ತಮ್ಮ ಅಭಿಪ್ರಾಯಗಳನ್ನು ತಿಳಿಸುತ್ತಿದೆ. ಈ ನಡುವೆ ನಟಿ ಕಂಗನಾ ರಣಾವತ್, ನಟ ಸೋನು ಸೂದ್, ತಾಪ್ಸಿ ಪನ್ನು ಸೇರಿದಂತೆ ಹಲವಾರು ಬಾಲಿವುಡ್ ಸೆಲೆಬ್ರಿಟಿಗಳು ಕೂಡ ತಮ್ಮ ಅಭಿಪ್ರಾಯಗಳನ್ನು ಸೋಶಿಯಲ್ ಮೀಡಿಯಾ ಮೂಲಕ ತಿಳಿಸಿದ್ದಾರೆ. ಕೆಲವು ಸೆಲೆಬ್ರಿಟಿಗಳು ಸರ್ಕಾರದ ನಿರ್ಧಾರವನ್ನು ಶ್ಲಾಘಿಸಿದರೆ ಮತ್ತೆ ಕೆಲವರು ಅಸಮಾಧಾನ ವ್ಯಕ್ತ ಪಡಿಸಿದ್ದಾರೆ. ಇದನ್ನೂ ಓದಿ: ಮೊದಲ ಬಾರಿಗೆ ಮಗುವಿನ ಮುದ್ದಾದ ಫೋಟೋ ಶೇರ್ ಮಾಡಿದ ನಟಿ

    ಈ ಕುರಿತಂತೆ ನಟಿ ಕಂಗನಾ ರಣಾವತ್ ತಮ್ಮ ಇನ್‍ಸ್ಟಾಗ್ರಾಮ್ ಸ್ಟೋರಿಯಲ್ಲಿ ದುಃಖಕರ, ನಾಚಿಕೆಗೇಡಿತನ ಮತ್ತು ಸಂಪೂರ್ಣ ಅನ್ಯಾಯ. ಬೀದಿಗಿಳಿದ ಜನರು ಕಾನೂನುಗಳನ್ನು ಮಾಡಲು ಪ್ರಾರಂಭಿಸಿದ್ದರೆ ಸರ್ಕಾರ ಯಾಕಿರಬೇಕು ಎಂದು ಪ್ರಶ್ನಿಸಿದ್ದಾರೆ.

    ಮತ್ತೊಂದೆಡೆ ನಟ ಸೋನು ಸೂದ್ ಅವರು, ಇದೊಂದು ಅದ್ಭುತವಾದಂತಹ ಸುದ್ದಿ. ಕೃಷಿ ಕಾನೂನುಗಳನ್ನು ಹಿಂಪಡೆದಿದ್ದಕ್ಕೆ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದಗಳು. ಶಾಂತಿಯುತ ಪ್ರತಿಭಟನೆಗಳ ಮೂಲಕ ನ್ಯಾಯಯುತ ಬೇಡಿಕೆಗಳ ಬಗ್ಗೆ ಧ್ವನಿ ಎತ್ತಿದ್ದ ರೈತರಿಗೆ ಅಭಿನಂದನೆಗಳು. ಗುರುನಾನಕ್ ಜಯಂತಿಯ ಈ ದಿನದಂದು ನೀವು ನಿಮ್ಮ ಕುಟುಂಬದವರೊಂದಿಗೆ ಸಂತಸದಿಂದ ಹಿಂದಿರುಗುತ್ತೀರಿ ಎಂದು ಭಾವಿಸುತ್ತೇನೆ ಎಂದು ಟ್ವಿಟ್ಟರ್‍ನಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಕೆಂಪು ಬಣ್ಣದ ಸೀರೆಯುಟ್ಟು, ಮಲ್ಲಿಗೆ ಮುಡಿದ ಆಶಿಕಾ

    ಕೃಷಿ ಕಾನೂನುಗಳನ್ನು ಹಿಂಪಡೆದಿರುವ ಪ್ರಧಾನಿ ನರೇಂದ್ರ ಮೋದಿ ಅವರ ನಿರ್ಧಾರ ಕುರಿತಂತೆ ನಟಿ ತಾಪ್ಸಿ ಪನ್ನು ಅವರು ಕೂಡ ತಮ್ಮ ಇನ್‍ಸ್ಟಾಗ್ರಾಮ್ ಸ್ಟೋರಿಯಲ್ಲಿ ಬರೆದುಕೊಂಡಿದ್ದಾರೆ.

  • ಕೊನೆಗೂ ಕೇಂದ್ರಕ್ಕೆ ಜ್ಞಾನೋದಯ ಆಗಿರೋದು ಉತ್ತಮ ಬೆಳವಣಿಗೆ: ಹೆಚ್.ಡಿ. ಕುಮಾರಸ್ವಾಮಿ

    ಕೊನೆಗೂ ಕೇಂದ್ರಕ್ಕೆ ಜ್ಞಾನೋದಯ ಆಗಿರೋದು ಉತ್ತಮ ಬೆಳವಣಿಗೆ: ಹೆಚ್.ಡಿ. ಕುಮಾರಸ್ವಾಮಿ

    ಬೆಂಗಳೂರು: ಕೊನೆಗೂ ಕೇಂದ್ರ ಸರ್ಕಾರಕ್ಕೆ ಜ್ಞಾನೋದಯ ಆಗಿರುವುದು ಉತ್ತಮ ಬೆಳವಣಿಗೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರು ಟ್ವೀಟ್ ಮಾಡುವ ಮೂಲಕ ತಿಳಿಸಿದ್ದಾರೆ.

    PM MODI

    ಕಳೆದ ವರ್ಷ ಕೇಂದ್ರ ಸರ್ಕಾರ ಜಾರಿಗೊಳಿಸಿದ್ದ 3 ಕೃಷಿ ಕಾನೂನನ್ನು ವಿರೋಧಿಸಿ ದೇಶಾದ್ಯಂತ ರೈತರು ವ್ಯಾಪಕ ಆಕ್ರೋಶ ವ್ಯಕ್ತಪಡಿಸಿ ನಿರಂತರ ಪ್ರತಿಭಟನೆ ನಡೆಸುತ್ತಿದ್ದರು. ಇದೀಗ ರೈತರ ಹೋರಾಟಕ್ಕೆ ಮಣಿದ ಕೇಂದ್ರ ಸರ್ಕಾರ 3 ಕೃಷಿ ಕಾನೂನನ್ನು ರದ್ದುಗೊಳಿಸಿದೆ.

    ಈ ಕುರಿತಂತೆ ಹೆಚ್.ಡಿ ಕುಮಾರಸ್ವಾಮಿ ಅವರು ತಮ್ಮ  ಟ್ವಿಟ್ಟರ್‌ನಲ್ಲಿ, ರೈತರ ಆಕ್ರೋಶಕ್ಕೆ ಗುರಿಯಾಗಿದ್ದ 3 ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಘೋಷಣೆ ಮಾಡಿರುವುದು ಸ್ವಾಗತಾರ್ಹ. ಕೊನೆಗೂ ಕೇಂದ್ರಕ್ಕೆ ಜ್ಞಾನೋದಯ ಆಗಿರುವುದು ಉತ್ತಮ ಬೆಳವಣಿಗೆ. ರೈತರ ಜತೆ ಚರ್ಚೆ ನಡೆಸದೇ ಈ ಕಾಯ್ದೆಗಳ ಏಕಪಕ್ಷೀಯ ಜಾರಿ ಮತ್ತು ಈಗ ಏಕಾಏಕಿ ರದ್ದತಿ ಅನೇಕ ಪ್ರಶ್ನೆ ಹುಟ್ಟುಹಾಕಿದೆ ಎಂದಿದ್ದಾರೆ.  ಇದನ್ನೂ ಓದಿ: ಪ್ರತಿಭಟನೆ ಕೈ ಬಿಡುವಂತೆ ರೈತರಲ್ಲಿ ಮೋದಿ ಮನವಿ

    ನಿಜಕ್ಕೂ ಕರಾಳ ಕಾಯ್ದೆಗಳ ವಾಪಸಾತಿ ರೈತರ ವಿಜಯ & ಐತಿಹಾಸಿಕ. ಒಂದು ವರ್ಷಕ್ಕೂ ಹೆಚ್ಚು ಕಾಲ ದೆಹಲಿಯ ಗಡಿಯಲ್ಲಿ ಅನ್ನಧಾತರು ಪ್ರತಿಭಟನೆ ನಡೆಸಿದರು. ಕೇಂದ್ರವು ಅವರ ಮೇಲೆ ಅಮಾನವೀಯ ಕ್ರೌರ್ಯ ನಡೆಸಿತು. ಅನೇಕ ಅಮೂಲ್ಯ ಜೀವಗಳ ನೆತ್ತರು ಹರಿಯಿತು. ಚಳಿ, ಮಳೆ, ಬಿಸಿಲೆನ್ನದೇ ರೈತರು ಹೋರಾಡಿದರು.

    ಐದು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ಇದೆ. ಕೇಂದ್ರದ ನಿರ್ಧಾರ ಪ್ರಾಮಾಣಿಕವಾಗಿರಲಿ. ಕೇವಲ ಮತ ಫಸಲಿಗೆ ಮಾಡಿದ ಹೈಡ್ರಾಮಾ ಆಗದಿರಲಿ. ಚುನಾವಣೆ ಮುಗಿದ ಮೇಲೆ ಆ ಕರಾಳ ಕಾಯ್ದೆಗಳನ್ನು ಬೇರೆ ರೂಪದಲ್ಲಿ ಪುನಃ ಜಾರಿ ಮಾಡುವುದಿಲ್ಲ ಎಂದು ಪ್ರಧಾನಿಗಳು ತಮ್ಮ ಭಾಷಣದಲ್ಲಿ ರೈತರಿಗೆ ಮಾತು ಕೊಡಬೇಕಿತ್ತು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

    ದೆಹಲಿ, ಉತ್ತರ ಪ್ರದೇಶ, ಹರಿಯಾಣ, ಪಂಜಾಬ್ ಸೇರಿದಂತೆ ದೇಶದ ನಾನಾ ಕಡೆ ರೈತರ ವಿರುದ್ಧ ನಡೆದಿರುವ ದೌರ್ಜನ್ಯಕ್ಕೆ ಪ್ರಧಾನಿಗಳು ತಮ್ಮ ಭಾಷಣದಲ್ಲಿ ಕ್ಷಮೆ ಯಾಚನೆ ಮಾಡಬೇಕಿತ್ತು. ಈಗಲಾದರೂ ರೈತರ ಮೇಲೆ ಹಿಂಸಾಚಾರ ನಡೆಸಿದವರ ವಿರುದ್ಧ ಕಠಿಣ ಕ್ರಮ ಜರುಗಿಸಲೇಬೇಕು ಎಂಬುದು ನನ್ನ ಒತ್ತಾಯ ಎಂದು ತಿಳಿಸಿದ್ದಾರೆ.

  • ಅನ್ನದಾತರ ಸತ್ಯಾಗ್ರಹ ಅಹಂಕಾರ ಅಡಗಿಸಿತು: ರಾಹುಲ್ ಗಾಂಧಿ

    ಅನ್ನದಾತರ ಸತ್ಯಾಗ್ರಹ ಅಹಂಕಾರ ಅಡಗಿಸಿತು: ರಾಹುಲ್ ಗಾಂಧಿ

    ನವದೆಹಲಿ: ಅನ್ನದಾತರ ಸತ್ಯಾಗ್ರಹ ಅಹಂಕಾರವನ್ನು ಅಡಗಿಸಿತು. ಅನ್ಯಾಯದ ವಿರುದ್ಧ ಗೆಲುವಿಗೆ ಅಭಿನಂದನೆಗಳು ಎಂದು  ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಟ್ವೀಟ್ ಮೂಲಕ ತಿಳಿಸಿದ್ದಾರೆ.

    ಸತತ 355 ದಿನಗಳ ಕಾಲ ರೈತರು ನಡೆಸಿದ್ದ ಹೋರಾಟಕ್ಕೆ ಕೊನೆಗೂ ಪ್ರತಿಫಲ ಸಿಕ್ಕಿದೆ. ಕಳೆದ ವರ್ಷ ಕೇಂದ್ರ ಸರ್ಕಾರ 3 ಕೃಷಿ ಕಾನೂನನ್ನು ಜಾರಿಗೊಳಿಸಿತ್ತು. ಈ ಕುರಿತಂತೆ ದೇಶದ ರೈತರು ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದರು. ಅಲ್ಲದೇ ಅಂದಿನಿಂದ ಇಂದಿನವರೆಗೂ ರೈತರು ಕೃಷಿ ಕಾನೂನನ್ನು ವಾಪಸ್ಸು ಪಡೆಯುವಂತೆ ಪ್ರತಿಭಟನೆ ನಡೆಸುತ್ತಿದ್ದರು. ಇದೀಗ ರೈತರ ಹೋರಾಟಕ್ಕೆ ಮಣಿದ ಕೇಂದ್ರ ಸರ್ಕಾರ ಮೂರು ವಿವಾಧಿತ ಕೃಷಿ ಕಾನೂನನ್ನು ಸರ್ಕಾರ ವಾಪಸ್ ಪಡೆದುಕೊಂಡಿದೆ.

    ಈ ಕುರಿತಂತೆ ರಾಹುಲ್ ಗಾಂಧಿ ಅವರು ತಮ್ಮ ಟ್ವಿಟ್ಟರ್‌ನಲ್ಲಿ, ಅನ್ನದಾತರ ಸತ್ಯಾಗ್ರಹ ಅಹಂಕಾರವನ್ನು ಅಡಗಿಸಿತು. ಅನ್ಯಾಯದ ವಿರುದ್ಧ ಗೆಲುವಿಗೆ ಅಭಿನಂದನೆಗಳು. ಜೈ ಹಿಂದ್ ಜೈ ಹಿಂದ್ ಕಾ ಕಿಸಾನ್ ಎಂದು ಟ್ವೀಟ್ ಮಾಡುವ ಮೂಲಕ ರೈತರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

    ಈ ಮುನ್ನ ಜನವರಿ 14ರಂದೇ ರಾಹುಲ್ ಗಾಂಧಿ ಅವರು ಕೇಂದ್ರ ಸರ್ಕಾರ ಕೃಷಿ ಕಾನೂನನ್ನು ವಾಪಸ್ ಪಡೆಯಲೇಬೇಕಾಗುತ್ತದೆ ಎಂಬ ಹೇಳಿಕೆ ನೀಡಿದ್ದರು. ಇದೀಗ ಈ ಮಾತು ಸತ್ಯವಾಗಿದೆ.

    ಶುಕ್ರವಾರ ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು ರೈತರ ಆರ್ಥಿಕ, ಸಾಮಾಜಿಕ ಸ್ಥಿತಿ ಸುಧಾರಿಸಲು ಪ್ರಯತ್ನ ಮಾಡಲಾಗುತ್ತಿದ್ದು, 3 ಕಾಯ್ದೆ ಜಾರಿಗೆ ತಂದಿದ್ದೆವು. ಸಣ್ಣ ರೈತರ ಒಳಿತಿಗಾಗಿಯೇ ಕೃಷಿ ಕಾಯ್ದೆ ಜಾರಿಗೆ ತಂದಿದ್ದೆವು. ಈ 3 ಕಾನೂನುಗಳು ಸಂಪೂರ್ಣವಾಗಿ ರೈತರ ಪರವಾಗಿದ್ದವು. ರೈತರ ಹಿತ ದೃಷ್ಟಿಯಲ್ಲಿಟ್ಟುಕೊಂಡೇ ಕಾಯ್ದೆ ಜಾರಿ ಮಾಡಲಾಗಿತ್ತು. ಯೋಜನೆ ಬಗ್ಗೆ ರೈತರಿಗೆ ತಿಳಿಸಲು ಸಾಕಷ್ಟು ಯತ್ನಿಸಿದ್ದೇವೆ. ಆದರೆ ಕೆಲವು ರೈತರು ಕಾಯ್ದೆಯನ್ನು ಅವರ ಸಲಹೆ ಒಪ್ಪಿಕೊಂಡಿದ್ದರೂ ವಿರೋಧಿಸುತ್ತಿದ್ದಾರೆ. ರೈತರ ನಿರಂತರ ಹೋರಾಟದ ಹಿನ್ನೆಲೆಯಲ್ಲಿ ಇದೀಗ ಸರ್ಕಾರ ಮೂರು ಕೃಷಿ ಕಾಯ್ದೆ ವಾಪಸ್ ಪಡೆಯಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದರು.

     

  • ಭಾರತ ಬಂದ್‍ಗೆ ಕರ್ನಾಟಕದಲ್ಲೂ ಸಂಪೂರ್ಣ ಬೆಂಬಲ: ಕುರುಬೂರು ಶಾಂತಕುಮಾರ್

    ಭಾರತ ಬಂದ್‍ಗೆ ಕರ್ನಾಟಕದಲ್ಲೂ ಸಂಪೂರ್ಣ ಬೆಂಬಲ: ಕುರುಬೂರು ಶಾಂತಕುಮಾರ್

    ಬೀದರ್: ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯಲ್ಲಿ ರೈತರು ಹೋರಾಟ ಮಾಡುತ್ತಿದ್ದು, ಹೋರಾಟ ಫಲಪ್ರದವಾಗದ ಕಾರಣ ಸೆಪ್ಟೆಂಬರ್ 27 ರಂದು ಸಂಯುಕ್ತ ಕಿಸಾನ್ ಮೋರ್ಚಾದಿಂದ ಭಾರತ್ ಬಂದ್‍ಗೆ ಕೆರೆ ನೀಡಲಾಗಿದೆ. ಈ ಬಂದ್ ಕರ್ನಾಟಕದಲ್ಲೂ ನಡೆಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ರಾಜ್ಯ ರೈತ ಮುಖಂಡ ಕುರುಬೂರು ಶಾಂತಕುಮಾರ್ ಸರ್ಕಾರಗಳಿಗೆ ಎಚ್ಚರಿಕೆ ನೀಡಿದ್ದಾರೆ.

    ಇಂದು ಬೀದರ್‍ ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರೈತರ ಹೋರಾಟದಲ್ಲಿ 12ನೇ ಸುತ್ತಿನ ಮಾತುಕತೆಯಾದರು ಕೂಡಾ ಇನ್ನೂ ಯಾವುದೇ ಪರಿಹಾರ ಸಿಕ್ಕಿಲ್ಲ. ಈಗಾಗಲೇ ಹೋರಾಟದಲ್ಲಿ 600ಕ್ಕೂ ಹೆಚ್ಚು ರೈತರ ಪ್ರಾಣ ಬಲಿದಾನವಾಗಿವೆ. ಇಷ್ಟಾದ್ರು ಕೂಡಾ ಇಲ್ಲಿಯ ತನಕ ಪ್ರಧಾನಿ ಮೋದಿ ಸಮಸ್ಯೆ ಪರಿಹರಿಸುವಂತ ಕೆಲಸ ಮಾಡಿಲ್ಲ. ರೈತರ ಬೆನ್ನೆಲುಬನ್ನು ಮುರಿಯುವ ನೀಚ ಕೆಲಸವನ್ನು ಸರ್ಕಾರಗಳು ಮಾಡುತ್ತಿವೆ ಎಂದು ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಜನ ಅಸಮಾನ್ಯ, ಅಭಿಮಾನಿಗಳ ತಲೆಗೆ ಹುಳ ಬಿಟ್ಟ ಉಪೇಂದ್ರ

    ಸೆಪ್ಟೆಂಬರ್ 27 ರಂದು ಭಾರತ ಬಂದ್‍ಗೆ ಕರೆ ನೀಡಿದ್ದು, ಕರ್ನಾಟಕದಲ್ಲೂ ಕೂಡಾ ಸಂಪೂರ್ಣ ಬಂದ್ ಮಾಡಬೇಕು ಎಂದು ಸಭೆ ಮಾಡಿ ನಿರ್ಮಾಣ ಮಾಡಿದ್ದೇವೆ. ರೈತರು ಹಾಗೂ ಜನರನ್ನು ಮೋಸ ಮಾಡಿ ಆಡಳಿತ ಮಾಡುತ್ತೇವೆ ಅಂದುಕೊಂಡಿದ್ದರೆ ಅದು ಸಾಧ್ಯವಿಲ್ಲ ಮೋದಿಯವರೆ. ಈ ದೇಶದ ಜನರು ಎಚ್ಚರಗೊಂಡಿದ್ದಾರೆ. ಮುಂದಿನ ಉತ್ತರ ಪ್ರದೇಶದ ಚುನಾವಣೆಯಲ್ಲಿ ರೈತರ ಶಕ್ತಿಯನ್ನು ತೋರಿಸಬೇಕಾಗುತ್ತದೆ ಎಂದು ಕುರುಬೂರು ಶಾಂತಕುಮಾರ್ ಗುಡುಗಿದ್ದಾರೆ. ಇದನ್ನೂ ಓದಿ: ಬಾಳೆಎಲೆಯಲ್ಲಿ ಮೂಡಿದ ಮೋದಿ ಚಿತ್ರ

  • ದೆಹಲಿಯ ರೈತ ಹೋರಾಟದ ಬಗ್ಗೆ ಜಾಗೃತಿಗೊಳಿಸಿ ಅಕ್ಟೋಬರ್ 2ರಿಂದ ಕಿಸಾನ್ ಸ್ವರಾಜ್ ಯಾತ್ರೆ

    ದೆಹಲಿಯ ರೈತ ಹೋರಾಟದ ಬಗ್ಗೆ ಜಾಗೃತಿಗೊಳಿಸಿ ಅಕ್ಟೋಬರ್ 2ರಿಂದ ಕಿಸಾನ್ ಸ್ವರಾಜ್ ಯಾತ್ರೆ

    – ರೈತ ಮುಖಂಡರ ಎರಡನೇ ದಿನದ ಸಭೆಯಲ್ಲಿ ನಿರ್ಣಯ

    ಚೆನ್ನೈ: ಕೇಂದ್ರ ಕೃಷಿ ಕಾಯ್ದೆಗಳ ಮಾರಕ ಪರಿಣಾಮಗಳು ಮತ್ತು ಎಂಎಸ್‍ಪಿ ಶಾಸನಬದ್ಧ ಖಾತ್ರಿ ಬೆಲೆ ಆಗಬೇಕು ಎನ್ನುವ ಬೇಡಿಕೆ ಈಡೇರಿಕೆಗಾಗಿ ರೈತ ಜಾಗೃತಿ ದೇಶವ್ಯಾಪಿ, ಕಿಸಾನ್ ಸ್ವರಾಜ್ ಯಾತ್ರೆ ಅಕ್ಟೋಬರ್ 2 ಗಾಂಧೀಜಯಂತಿಯ ದಿನದಿಂದ ಆರಂಭಿಸುವುದಾಗಿ ಚೆನ್ನೈನಲ್ಲಿ ನಡೆದ ರಾಷ್ಟ್ರೀಯ ರೈತ ಮುಖಂಡರ ಎರಡನೇ ದಿನದ ಸಭೆಯಲ್ಲಿ ನಿರ್ಣಯ ತೆಗೆದುಕೊಳ್ಳಲಾಗಿದೆ.

    ದೆಹಲಿಯಲ್ಲಿ ನಡೆಯುತ್ತಿರುವ ರೈತ ಹೋರಾಟದ ಬಗ್ಗೆ ದೇಶಾದ್ಯಂತ ರೈತರನ್ನು ಜಾಗೃತಿಗೊಳಿಸಲು ಕೇಂದ್ರ ಸರ್ಕಾರಕ್ಕೆ ಒತ್ತಡ ತರಲು ಕನ್ಯಾಕುಮಾರಿಯಿಂದ ಕಾಶ್ಮೀರದ ವರೆಗೆ ಅಕ್ಟೋಬರ್ 2 ಗಾಂಧಿ ಜಯಂತಿ ದಿನದಂದು ಕಿಸಾನ್ ಸ್ವರಾಜ್ ಯಾತ್ರೆ ನಡೆಸಲು ರಾಷ್ಟ್ರೀಯ ರೈತ ಮುಖಂಡರ ಸಭೆಯಲ್ಲಿ ನಿರ್ಣಯಿಸಲಾಯಿತು. ಈ ನಿರ್ಣಯವನ್ನು ಸಂಯುಕ್ತ ಕಿಸಾನ್ ಮೋರ್ಚಾ ಸಮಿತಿಯ ಮುಂದೆ ಮಂಡಿಸಿ ಕಿಸಾನ್ ಯಾತ್ರೆಯ ಮಾರ್ಗಸೂಚಿ ಕಾರ್ಯಕ್ರಮಗಳನ್ನು ಯೋಚಿಸಲು ರಾಷ್ಟ್ರೀಯ ರೈತ ಮುಖಂಡ ರಾಕೇಶ್ ಟಿಕಾಯತ್ ಹಾಗೂ ಯದುವೀರ ಸಿಂಗ್ ರವರಿಗೆ ಜವಾಬ್ದಾರಿ ನೀಡಲಾಯಿತು. ಇದನ್ನೂ ಓದಿ: ದೇಶವ್ಯಾಪಿ ಹೋರಾಟ ನಡೆಸಲು ರೈತರ ಸಭೆ

    2 ದಿನ ಚೆನ್ನೈನಲ್ಲಿ ನಡೆದ ರಾಷ್ಟ್ರೀಯ ರೈತ ಮುಖಂಡರ ಸಭೆಯಲ್ಲಿ ದೇಶವ್ಯಾಪಿ ರೈತರ ಸಮಸ್ಯೆ, ನೀರು ಬಳಕೆ ಪರಿಸರ ಸುರಕ್ಷತೆ ಸಮಸ್ಯೆ 9ತಿಂಗಳ ರೈತರ ಹೋರಾಟದ ಸಾಧಕ-ಭಾದಕಗಳ ಬಗ್ಗೆ ಚರ್ಚಿಸಿ ತೀರ್ಮಾನಿಸಲಾಯಿತು ನಿರ್ಣಯವನ್ನು ರಾಷ್ಟ್ರೀಯ ಜಲತಜ್ಞ ರಾಜೇಂದ್ರಸಿಂಗ್ ಸಭೆಯಲ್ಲಿ ಮಂಡಿಸಿದರು.

    ಉತ್ತರ-ದಕ್ಷಿಣ, ಪೂರ್ವ-ಪಶ್ಚಿಮ ದಿಕ್ಕುಗಳಿಂದ ಯಾತ್ರೆ ಆರಂಭಿಸಿ, ಯಾತ್ರೆ ದೆಹಲಿಯಲ್ಲಿ ಸಂಗಮವಾಗಲು ಯೋಚಿಸುತ್ತಿದ್ದೇವೆ. ದೇಶಾದ್ಯಂತ ಆರೂವರೆ ಲಕ್ಷ ಹಳ್ಳಿಗಳಿವೆ. ಪ್ರತಿ ಹಳ್ಳಿಯಿಂದ ಒಬ್ಬರು ಬಂದರೆ ಆರೂವರೆ ಲಕ್ಷ ಜನ ದೆಹಲಿಯಲ್ಲಿ ಸಂಗಮವಾಗಬಹುದು ಎಂಬುದನ್ನು ಅರಿತುಕೊಳ್ಳಬೇಕು ಎಂದು ರಾಕೇಶ್ ಟಿಕಾಯತ್ ತಿಳಿಸಿದರು. ಇದನ್ನೂ ಓದಿ: ಇನ್ಫಿ ಸಿಇಒ ಸಲೀಲ್ ಪರೇಖ್‍ಗೆ ಹಣಕಾಸು ಸಚಿವಾಲಯದಿಂದ ಸಮನ್ಸ್

    ತಮಿಳುನಾಡಿನ ಜಂಟಿ ರೈತ ಸಂಘಟನೆಗಳ ಒಕ್ಕೂಟದ ಪರವಾಗಿ ಗುರುಸ್ವಾಮಿ, ಸಭೆಯಲ್ಲಿ ಭಾಗವಹಿಸಿದ ಎಲ್ಲಾ ರಾಷ್ಟ್ರೀಯ ರೈತ ಮುಖಂಡರಿಗೆ ಧನ್ಯವಾದ ಸಮರ್ಪಿಸಿದರು. ಕರ್ನಾಟಕ ರೈತ ಸಂಘಟನೆಗಳ ಮುಖಂಡರಾದ ಕೆ.ಟಿ ಗಂಗಾಧರ್, ಕುರುಬೂರು ಶಾಂತಕುಮಾರ್, ಬಡಗಲಪುರ ನಾಗೇಂದ್ರ, ಚುಕ್ಕಿನಂಜುಂಡಸ್ವಾಮಿ ಮುಂತಾದವರಿದ್ದರು.

  • ದೇಶವ್ಯಾಪಿ ಹೋರಾಟ ನಡೆಸಲು ರೈತರ ಸಭೆ

    ದೇಶವ್ಯಾಪಿ ಹೋರಾಟ ನಡೆಸಲು ರೈತರ ಸಭೆ

    ಚೆನ್ನೈ: ರೈತರ ಹೋರಾಟ ದೇಶವ್ಯಾಪಿ ಮುಂದಿನ ನಡೆ ಕುರಿತು ದಕ್ಷಿಣ ಭಾರತ ರಾಜ್ಯಗಳ ರೈತ ಮುಖಂಡರ ಸಭೆ ಚೆನ್ನೈನಲ್ಲಿ ನಡೆಯಿತು.

    ಸಭೆಯಲ್ಲಿ ಮಾತನಾಡಿದ ರಾಷ್ಟ್ರೀಯ ಜಲತಜ್ಞ ಡಾ ರಾಜೇಂದ್ರಸಿಂಗ್, ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆ ರದ್ದಾಗಬೇಕು. ಕನಿಷ್ಟ ಬೆಂಬಲ ಬೆಲೆ ಖಾತ್ರಿ ಶಾಸನವಾಗಬೇಕು ಎಂದು ಒತ್ತಾಯಿಸಿ ಮತ್ತು ಕೃಷಿ ಕಾಯ್ದೆ ಜಾರಿಯಿಂದ ರೈತರಿಗೆ ಆಗುವ ಮಾರಕ ಪರಿಣಾಮಗಳ ಬಗ್ಗೆ ದೇಶಾದ್ಯಂತ ರೈತರನ್ನು ಜಾಗೃತಿ ಮಾಡಲು ಕಾಶ್ಮೀರದಿಂದ ಕನ್ಯಾಕುಮಾರಿ ತನಕ ಸಂಯುಕ್ತ ಕಿಸಾನ್ ಮೋರ್ಚಾ ಅಡಿಯಲ್ಲಿ ಕಿಸಾನ್ ಯಾತ್ರಾ ನಡೆಸಲಾಗುತ್ತಿದೆ. ಭಾರತವನ್ನು ಈಸ್ಟ್ ಇಂಡಿಯಾ ಕಂಪನಿ ರೀತಿ, ಸ್ವದೇಶಿ ಬಂಡವಾಳಶಾಹಿಗಳ ಕಂಪನಿಗಳ ರಾಷ್ಟ್ರವಾಗಿ ಮಾಡಲು ಬಿಡುವುದಿಲ್ಲ ಅದಕ್ಕಾಗಿ ರೈತರು ನಿರಂತರ ಹೋರಾಟ ನಡೆಸುತ್ತಿದ್ದಾರೆ ಎಂದು ಎಚ್ಚರಿಕೆ ನೀಡಿದರು. ಇದನ್ನೂ ಓದಿ: ರೈತರ ಹೋರಾಟಕ್ಕೆ ಪಾಪ್ ಗಾಯಕಿ ಬೆಂಬಲ- ಅನ್ನದಾತರನ್ನ ಭಯೋತ್ಪಾದಕರೆಂದ ಕಂಗನಾ

    ಸಂಯುಕ್ತ ಕಿಸಾನ್ ಮೋರ್ಚಾ ಮುಖಂಡ ರಾಕೇಶ್ ಟಿಕಾಯತ್ ಮಾತನಾಡಿ, ಕೇಂದ್ರದ ಮೂರು ಕಾಯ್ದೆಗಳನ್ನು ರದ್ದುಗೊಳಿಸಬೇಕು ಎಂಎಸ್‍ಪಿಗೆ ಶಾಸನಬದ್ಧ ಕಾತ್ರಿ ಕಾಯ್ದೆ ಜಾರಿ ಬರಬೇಕು ಎಂಎಸ್‍ಪಿ ಗಿಂತ ಕಡಿಮೆ ಬೆಲೆಗೆ ರೈತರ ಉತ್ಪನ್ನಗಳ ಖರೀದಿ ಶಿಕ್ಷಾರ್ಹ ಅಪರಾಧ ಎಂದು ಕಾನೂನು ಆಗಬೇಕು, ಕೃಷಿ ಉತ್ಪನ್ನಗಳ ಖರೀದಿ ಸಮಯದಲ್ಲಿ ಆಗುವ ಸಮಸ್ಯೆಗಳ ಪರಿಹಾರಕ್ಕೆ ರೈತರು ನ್ಯಾಯಾಲಯಕ್ಕೆ ಹೋಗುವ ಅಧಿಕಾರ ಸಿಗಬೇಕು ಎನ್ನುವ ನಿರ್ಣಯಗಳನ್ನು ಇಂದಿನ ಸಭೆಯಲ್ಲಿ ಕೈಗೊಳ್ಳಲಾಯಿತು ಎಂದರು.

    ತಮಿಳುನಾಡಿನ ಜಂಟಿ ರೈತ ಸಂಘಟನೆಗಳ ಒಕ್ಕೂಟದ ಪರವಾಗಿ ಗುರುಸ್ವಾಮಿ, ರೈತರ ಹೋರಾಟವನ್ನು ಹತ್ತಿಕ್ಕಲು ಹಲವು ರೀತಿಯಲ್ಲಿ ಅಪಪ್ರಚಾರಗಳನ್ನು ಮಾಡಿತು ಖಲಿಸ್ತಾನಿಗಳು, ಪಾಕಿಸ್ತಾನಿಗಳು, ದೇಶದ್ರೋಹಿಗಳು, ದಳ್ಳಾಳಿಗಳು ಎಂದು ಕರೆಯುವ ಮೂಲಕ ಚಳುವಳಿ ಮಾಡುವ ರಸ್ತೆಗಳನ್ನು ಅಗೆದು ಹಳ್ಳ ಮಾಡಿದರು. ಇಷ್ಟೆಲ್ಲ ಕಿರುಕುಳ ನೀಡಿದರು ರೈತರ ಪ್ರಬಲ ಹೋರಾಟ ನಿಲ್ಲಲಿಲ್ಲ ಇದು ರೈತರ ಅಳಿವು-ಉಳಿವಿನ ಪ್ರಶ್ನೆ ಚುನಾವಣೆ ಮೊದಲು ರೈತರೇ ದೇಶದ ಬೆನ್ನೆಲುಬು ಎನ್ನುತ್ತಾರೆ ಅಧಿಕಾರಕ್ಕೆ ಬಂದ ನಂತರ ರೈತರು ನಮ್ಮ ಸೇವಕರು ಎಂದು ಕಾಣುತ್ತಾರೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಕೃಷಿ ಕಾಯ್ದೆ ವಿರುದ್ಧ ಹೋರಾಟ ಮಾಡುತ್ತಿರುವವರು ರೈತರಲ್ಲ, ಮಧ್ಯವರ್ತಿಗಳು: ಶೋಭಾ ಕರಂದ್ಲಾಜೆ

  • ಕೃಷಿ ಕಾನೂನು ವಿರೋಧಿಸಿ ಸಂಸತ್‍ಗೆ ಟ್ರ್ಯಾಕ್ಟರ್ ಏರಿ ಬಂದ ರಾಹುಲ್ ಗಾಂಧಿ

    ಕೃಷಿ ಕಾನೂನು ವಿರೋಧಿಸಿ ಸಂಸತ್‍ಗೆ ಟ್ರ್ಯಾಕ್ಟರ್ ಏರಿ ಬಂದ ರಾಹುಲ್ ಗಾಂಧಿ

    ನವದೆಹಲಿ: ಕೇಂದ್ರ ಸರ್ಕಾರದ ನೂತನ ಕೃಷಿ ಕಾನೂನು ವಿರೋಧಿಸಿ ಕಾಂಗ್ರೆಸ್ ಮಾಜಿ ಅಧ್ಯಕ್ಷ, ಸಂಸದ ರಾಹುಲ್ ಗಾಂಧಿ ಟ್ರ್ಯಾಕ್ಟರ್ ನಲ್ಲಿ ಸಂಸತ್ ಭವನಕ್ಕೆ ಬರುವ ಮೂಲಕ ಪ್ರತಿಭಟನೆ ನಡೆಸಿದರು. ಇದೇ ಟ್ರ್ಯಾಕ್ಟರ್ ನಲ್ಲಿಯೇ ರಣ್‍ದೀಪ್ ಸುರ್ಜೇವಾಲಾ, ದೀಪೇಂದ್ರ ಹುಡ್ಡಾ ಸೇರಿದಂತೆ ಅನೇಕ ಕಾಂಗ್ರೆಸ್ ನಾಯಕರು ಆಗಮಿಸಿದರು.

    ಕೇಂದ್ರ ಸರ್ಕಾರ ರೈತರ ಸಮಸ್ಯೆಯನ್ನು ಆಲಿಸುತ್ತಿಲ್ಲ. ಕೂಡಲೇ ನೂತನ ಕೃಷಿ ಕಾನೂನುಗಳನ್ನು ಹಿಂಪಡೆದುಕೊಳ್ಳಬೇಕು. ಈ ಕಾನೂನುಗಳು ರೈತರನ್ನು ಕತ್ತಲೆಗೆ ತಳ್ಳಲಿವೆ. ಈ ಸರ್ಕಾರ ಪ್ರತಿಭಟನಾ ನಿರತ ರೈತರನ್ನು ಭಯೋತ್ಪಾದಕರಿಗೆ ಹೋಲಿಸಿ ಅವಮಾನನಿಸಿದೆ ಎಂದು ರಾಹುಲ್ ಗಾಂಧಿ ಆಕ್ರೋಶ ಹೊರಹಾಕಿದರು. ಇದನ್ನೂ ಓದಿ: ಯುಪಿಯಲ್ಲಿ ಸಮಾಜವಾದಿ ಪಕ್ಷದ ಜೊತೆ ಮೈತ್ರಿ ಇಲ್ಲ: ಓವೈಸಿ

    ಅಧಿವೇಶನ ಆರಂಭ ಹಿನ್ನೆಲೆ ದೆಹಲಿಯ ಜಂತರ್-ಮಂತರ್ ಬಳಿಯಲ್ಲಿ ಪ್ರತಿನಿತ್ಯ 200 ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಜಂತರ್ ಮಂತರ್ ನಲ್ಲಿ ಅಧಿವೇಶನ ಮುಗಿಯವರೆಗೂ ಪ್ರತಿಭಟನೆ ನಡೆಸಲು ರೈತರು ತೀರ್ಮಾನಿಸಿದ್ದಾರೆ. ಕಳೆದ ಒಂದು ವರ್ಷದಿಂದ ಕೃಷಿ ಕಾನೂನು ವಿರೋಧಿಸಿ ರಾಜಧಾನಿ ದೆಹಲಿಯ ಗಡಿ ಭಾಗಗಳಾದ ಸಿಂಘು, ಟಿಕ್ರಿ, ಗಾಜೀಪುರದಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.

  • ರೈತ ಬಂಡಾಯದ ನೆಲೆದಲ್ಲಿ ರೈತರ ಕಹಳೆ,ಕೃಷಿ ಕಾಯ್ದೆಗಳಿಗೆ ವಿರೋಧ

    ರೈತ ಬಂಡಾಯದ ನೆಲೆದಲ್ಲಿ ರೈತರ ಕಹಳೆ,ಕೃಷಿ ಕಾಯ್ದೆಗಳಿಗೆ ವಿರೋಧ

    – ಮಹಾದಾಯಿ ಯೋಜನೆ ಅನುಷ್ಠಾನಕ್ಕೆ ಆಗ್ರಹ

    ಗದಗ: 41ನೇ ರೈತ ಹುತಾತ್ಮ ದಿನಾಚರಣೆ ಅಂಗವಾಗಿ ರೈತ ಬಂಡಾಯದ ನೆಲೆ ನರಗುಂದದಲ್ಲಿ ಮತ್ತೆ ರೈತರು ಕಹಳೆ ಮೊಳಗಿಸಿದ್ದಾರೆ. ಮಹಾದಾಯಿ ಕುಡಿಯುವ ನೀರು ಯೋಜನೆ ಅನುಷ್ಠಾನದ ಜೊತೆಗೆ ಕೇಂದ್ರ ಸರ್ಕಾರದ ಮೂರು ನೂತನ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.

    ಕೃಷಿ ಕಾಯ್ದೆಗಳ ಪ್ರತಿಗಳನ್ನು ಸುಟ್ಟು ಹಾಕುವ ಮೂಲಕ ರೈತ ಹುತಾತ್ಮ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಪಂಜಾಬ್‍ನ ಸಂಯುಕ್ತ ಮೊರ್ಚಾ ಸಂಘಟನೆ ಹಿರಿಯ ರೈತ ನಾಯಕ ಹರಿಖೇತ್ ಸಿಂಗ್ ಹಾಗೂ ಹರಿಯಾಣ ದೀಪಕ್ ಲಂಬಾ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.

    ರೈತರನ್ನು ಉದ್ದೇಶಿಸಿ ಮಾತನಾಡಿದ ಹರಿಖೇತ್ ಸಿಂಗ್ ಅವರು, ರೈತರನ್ನು ಭಿಕ್ಷುಕರನ್ನಾಗಿಸುವ ಕೇಂದ್ರದ ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕು. ರೈತರ ಬೇಡಿಕೆಗಳನ್ನು ಈಡೇರಿಸುವವರೆಗೆ ದೆಹಲಿಯ ಹೋರಾಟವನ್ನು ಹಿಂಪಡೆಯುವ ಪ್ರಶ್ನೆಯೇ ಇಲ್ಲ. ದೇಶದ ರಾಜಧಾನಿಯಲ್ಲಿ ಅನ್ನದಾತ ಹೊತ್ತಿಸಿರುವ ಹೋರಾಟದ ಕಿಡಿ ಇದೀಗ ಬಂಡಾಯದ ನೆಲೆ ನರಗುಂದಕ್ಕೂ ತಲುಪಿದೆ. ಈ ಮೂಲಕ ದಕ್ಷಿಣ ಭಾರತದ ಎಲ್ಲ ಜಿಲ್ಲೆ ಮತ್ತು ಗ್ರಾಮಗಳಿಗೂ ಕೇಂದ್ರದ ಕೃಷಿ ಕಾಯ್ದೆಗಳ ವಿರುದ್ಧದ ಹೋರಾಟ ತಲುಪಬೇಕು. ಈ ನಿಟ್ಟಿನಲ್ಲಿ ರೈತ ಹೋರಾಟದ ಜನ್ಮಸ್ಥಾನವಾಗಿರುವ ನರಗುಂದಲ್ಲಿ ಎಲ್ಲಾ ರೈತ ನಾಯಕರು ಹಾಗೂ ಪ್ರಗತಿಪರರ ಸಂಕಲ್ಪ ಮಾಡಬೇಕು ಎಂದು ಕರೆ ನೀಡಿದರು. ಇದನ್ನೂ ಓದಿ: ಕೇಂದ್ರದ ವಿವಾದಿತ ಮೂರು ಕೃಷಿ ಕಾಯ್ದೆ ಜಾರಿಗೆ ಸುಪ್ರೀಂ ತಡೆ

    ದೀಪಕ್ ಲಂಬಾ ಮಾತನಾಡಿ, ನರಗುಂದ- ನವಲಗುಂದ ರೈತರ ಪುಣ್ಯಭೂಮಿಯಾಗಿದೆ. ಈ ಭಾಗದ ರೈತರು ಮಹಾದಾಯಿ ನೀರಿಗಾಗಿ ಸುದೀರ್ಘವಾಗಿ ಹೋರಾಟ ನಡೆಸುತ್ತಿದ್ದಾರೆ. ಇಷ್ಟೊಂದು ದೀರ್ಘಾವಧಿ ಹೋರಾಟ ದೇಶದಲ್ಲಿ ಮತ್ತೊಂದಿಲ್ಲ. ಅದರಂತೆ ದೆಹಲಿಯಲ್ಲಿ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ಚಳವಳಿ ನಡೆಸುತ್ತಿದ್ದಾರೆ. ಇಷ್ಟು ದೀರ್ಘಾ ಕಾಲ ರಾಜಧಾನಿಯಲ್ಲಿ ಮತ್ಯಾವ ಹೋರಾಟವೂ ನಡೆದಿಲ್ಲ. ಆದರೂ, ಆಳುವ ಸರ್ಕಾರಗಳು ಅನ್ನದಾತನ ಪರ ಕಣ್ಣು ತೆರೆಯುತ್ತಿಲ್ಲ ಎಂದು ತರಾಟೆಗೆ ತೆಗೆದುಕೊಂಡರು.

    ವೇದಿಕೆ ಮೇಲೆ ರಾಜ್ಯ ರೈತ ಸಂಘದ ಕಾರ್ಯಾಧ್ಯಕ್ಷ ಚಾಮರಸ ಮಾಲೀಪಾಟೀಲ್, ಮಾಜಿ ವಿಧಾನಸಭಾ ಪರಿಷತ್ ಬಿ.ಆರ್.ಪಾಟೀಲ್, ಸಾಮಾಜಿಕ ಕಾರ್ಯಕರ್ತ ಎಸ್.ಆರ್.ಹಿರೇಮಠ, ಕಳಸಾ ಬಂಡೂರಿ ಹೋರಾಟಗಾರ ವಿಜಯ್ ಕುಲಕರ್ಣಿ, ಮದುಸೂಧನ್ ತಿವಾರಿ ಸೇರಿದಂತೆ ಅನೇಕ ನಾಯಕರು ಪಾಲ್ಗೊಂಡಿದ್ದರು. ಕಾರ್ಯಕ್ರಮದಲ್ಲಿ ನರಗುಂದ, ನವಲಗುಂದ ಸೇರಿದಂತೆ ವಿವಿಧ ಭಾಗದಿಂದ ಅಪಾರ ಸಂಖ್ಯೆಯಲ್ಲಿ ರೈತರು ಭಾಗವಹಸಿದ್ದರು.

  • ಗಾಜಿಪುರ ಗಡಿಯಲ್ಲಿ ಧರಣಿ ನಿರತ ರೈತರು, ಬಿಜೆಪಿ ಕಾರ್ಯಕರ್ತರ ನಡುವೆ ಸಂಘರ್ಷ

    ಗಾಜಿಪುರ ಗಡಿಯಲ್ಲಿ ಧರಣಿ ನಿರತ ರೈತರು, ಬಿಜೆಪಿ ಕಾರ್ಯಕರ್ತರ ನಡುವೆ ಸಂಘರ್ಷ

    – ಎರಡೂ ಗುಂಪುಗಳ ನಡುವೆ ಹೊಡಿ ಬಡಿ

    ನವದೆಹಲಿ: ರಾಜಧಾನಿ ದೆಹಲಿ ಗಡಿಭಾಗದ ಗಾಜಿಪುರದಲ್ಲಿ ರೈತರು ಮತ್ತು ಬಿಜೆಪಿ ಕಾರ್ಯಕರ್ತರು ನಡುವೆ ಸಂಘರ್ಷ ಏರ್ಪಟ್ಟಿದೆ. ಎರಡೂ ಗುಂಪುಗಳು ಕಲ್ಲು ಮತ್ತು ಲಾಠಿಗಳಿಂದ ದಾಳಿ ನಡೆಸಿರುವ ಬಗ್ಗೆ ವರದಿಯಾಗಿದೆ.

    ಗಡಿಯಲ್ಲಿ ಆಗಿದ್ದೇನು?:
    ಬಿಜೆಪಿಯ ನಾಯಕರ ಸ್ವಾಗತಕ್ಕಾಗಿ ಪಕ್ಷದ ಕಾರ್ಯಕರ್ತರು ಗಾಜಿಪುರ ಗಡಿಗೆ ಆಗಮಿಸಿದ್ದರು. ಈ ವೇಳೆ ಕೃಷಿ ಕಾನೂನು ವಿರೋಧಿಸಿ ಧರಣಿ ಕುಳಿತ ರೈತರು ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ಉಂಟಾಗಿ, ಗಲಾಟೆ ವಿಕೋಪಕ್ಕೆ ತಿರುಗಿದೆ. ಮಧ್ಯ ಪ್ರವೇಶಿಸಿದ ಪೊಲೀಸರು ಪರಿಸ್ಥಿತಿಯನ್ನು ತಿಳಿಗೊಳಿಸಿ, ಬಿಜೆಪಿ ನಾಯಕನನ್ನು ಅಲ್ಲಿಂದ ಕಳುಹಿಸಿದ್ದಾರೆ. ಸದ್ಯ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ.

    ರಾಕೇಶ್ ಟಿಕಾಯತ್ ಅವಾಜ್:
    ನಮ್ಮ ಸಂಘಟನೆಯ ವೇದಿಕೆ ರಸ್ತೆಯ ಮೇಲಿದೆ. ಹಾಗಂತ ಯಾರೂ ಬೇಕಾದ್ರೂ ವೇದಿಕೆಯನ್ನ ಬಳಸಿಕೊಳ್ಳುವಂತಿಲ್ಲ. ಒಂದು ವೇಳೆ ನಮ್ಮ ವೇದಿಕೆ ಮೇಲೆ ಬರುವದಿದ್ರೆ ಬಿಜೆಪಿ ತೊರೆದು ಬನ್ನಿ. ಸುಮ್ನೆ ನಮ್ಮ ವೇದಿಕೆ ಮೇಲೆ ಬಂದು ಬಿಜೆಪಿಯ ಧ್ವಜ ತೋರಿಸಿ, ಇಲ್ಲಿಯ ಸ್ಥಳವನ್ನು ವಶಕ್ಕೆ ಪಡೆದಿದ್ದೇವೆ ಎಂಬ ಸಂದೇಶ ರವಾನಿಸುವ ಕೆಲಸ ಮಾಡೋದು ಬೇಡ. ಇಂತಹವರನ್ನು ಹೇಳ ಹೆಸರಿಲ್ಲದಂತೆ ಮಾಡಲಾಗುವುದು. ಮತ್ತೆ ಯಾವುದೇ ಪ್ರದೇಶದಲ್ಲಿ ಈ ರೀತಿ ಮಾಡದ ಹಾಗೆ ಇರಬೇಕು ಎಂದು ಬಿಕೆಯು ಮುಖಂಡ ರಾಕೇಶ್ ಟಿಕಾಯತ್ ಅವಾಜ್ ಹಾಕಿದ್ದಾರೆ.

    ಹೌದು, ನಾನು ಧಮ್ಕಿ ಹಾಕ್ತೀನಿ:
    ನಮ್ಮ ವೇದಿಕೆ ನಿಮ್ಮ ಧ್ವಜ ಹಾರಿಸಿದ್ರೆ ಅದಕ್ಕೆ ಪರಿಹಾರ ನಮ್ಮ ಬಳಿಯಲ್ಲಿದೆ. ಹೌದು ನಾನು ಧಮ್ಕಿ ನೀಡುತ್ತಿದ್ದೇನೆ. ಈ ಮಾತುಗಳನ್ನು ನೆನೆಪಿನಲ್ಲಿಟ್ಟುಕೊಳ್ಳಿ. ನಿಮಗೆ ಈ ವೇದಿಕೆ ಇಷ್ಟವಾಗಿದ್ರೆ, ನಮ್ಮ ಆಂದೋಲನದಲ್ಲಿ ಭಾಗಿಯಾಗಿ. ಈ ಕೆಟ್ಟ ಚಾಳಿ ಏಕೆ ಎಂದು ರಾಕೇಶ್ ಟಿಕಾಯತ್ ಪ್ರಶ್ನೆ ಮಾಡಿದ್ದಾರೆ. ಇದನ್ನೂ ಓದಿ: ರೈತನಾಯಕ ರಾಕೇಶ್ ಟಿಕಾಯತ್ 80 ಕೋಟಿ ಆಸ್ತಿಯ ಒಡೆಯ

    ರೈತರ ಮೇಲೆ ಕೋಲುಗಳಿಂದ ಹಲ್ಲೆ:
    ಬಿಜೆಪಿಯ ಕಾರ್ಯಕರ್ತರು ಗಾಜಿಪುರದ ಗಡಿಯಲ್ಲಿ ಓರ್ವ ನಾಯಕನನ್ನು ಸ್ವಾಗತಿಸಲು ಅಪಾರ ಸಂಖ್ಯೆಯಲ್ಲಿ ಸೇರಿದ್ದರು. ವೇದಿಕೆ ಮತ್ತು ಮೇಲ್ಸೇತುವೆ ನಡುವಿನ ಇಕ್ಕಾಟದ ಜಾಗದಲ್ಲಿ ಮೆರವಣಿಗೆ ನಡೆಯುತ್ತಿತ್ತು. ಇನ್ನೂ ಈ ಮೆರವಣಿಗೆಯಲ್ಲಿ ನಮ್ಮ ಆಂದೋಲನದ ವಿರುದ್ಧವಾಗಿ ಘೋಷಣೆ ಕೂಗಲಾಗುತ್ತಿತ್ತು. ಘೋಷಣೆ ಕೂಗದಂತೆ ರೈತರು ಮನವಿ ಮಾಡಿದಾಗ ಬಿಜೆಪಿ ಕಾರ್ಯಕರ್ತರು ಕೋಲುಗಳಿಂದ ಹಲ್ಲೆ ನಡೆಸಿದ್ದರಿಂದ ಗಲಾಟೆ ವಿಕೋಪಕ್ಕೆ ತಿರುಗಿತು ಎಂದು ಭಾರತೀಯ ಕಿಸಾನ್ ಯೂನಿಯನ್ ಹೇಳಿದೆ. ಇದನ್ನೂ ಓದಿ: ಕೃಷಿ ಕಾನೂನು ವಾಪಸ್ ಪಡೆಯಲ್ಲ: ಕೇಂದ್ರ ಕೃಷಿ ಸಚಿವ ತೋಮರ್

    ಬಿಜೆಪಿ ನಮ್ಮ ಆಂದೋಲನವನ್ನು ಹಿಂಸೆಯ ಮೂಲಕ ಕೊನೆ ಮಾಡುವ ಪ್ರಯತ್ನಕ್ಕೆ ಮುಂದಾಗಿದೆ. ಇದಕ್ಕೆ ಇವತ್ತಿನ ಘಟನೆಯ ಉದಾಹರಣೆ. ಗಾಜಿಪುರ ಗಡಿಯಲ್ಲಿ ನಡೆದದ್ದು ಬಿಜೆಪಿ ಕಾರ್ಯಕರ್ತರಿಂದ ಉಂಟಾದ ಹಿಂಸೆ. ಯಾವುದೇ ಗಾಳಿಸುದ್ದಿ ಮತ್ತು ಅವರ ಮಾತಿಗೆ ಮರಳಾಗದೇ ನೀವು ಹೋರಾಟದಲ್ಲಿ ಮುಂದುವರಿಯಿರಿ ಎಂದು ಬಿಕೆಯು ಕರೆ ನೀಡಿದೆ. ಇದನ್ನೂ ಓದಿ: ದೆಹಲಿಯಲ್ಲಿ ಪೊಲೀಸರನ್ನು ಅಟ್ಟಾಡಿಸಿದ ಉದ್ರಿಕ್ತರು – 10 ಅಡಿ ಆಳದ ಕೋಟೆಯಿಂದ ಜಿಗಿದು ಬಚಾವ್

  • ಸೇತುವೆ ಕಟ್ಟಿ ಗೋಡೆಗಳನ್ನಲ್ಲ: ರಾಹುಲ್ ಗಾಂಧಿ

    ಸೇತುವೆ ಕಟ್ಟಿ ಗೋಡೆಗಳನ್ನಲ್ಲ: ರಾಹುಲ್ ಗಾಂಧಿ

    ನವದೆಹಲಿ: ಕೃಷಿ ಕಾಯ್ದೆ ವಿರೋಧಿಸಿ ರೈತರು ನಡೆಸುತ್ತಿರುವ ಹೋರಾಟಕ್ಕೆ ಸರ್ಕಾರ ಸೇತುವೆ ನಿರ್ಮಿಸಬೇಕೆ ಹೊರತು ಗೋಡೆಗಳನ್ನಲ್ಲ ಎಂದು ಟ್ವೀಟ್ ಮಾಡುವ ಮೂಲಕವಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

    ಕೇಂದ್ರ ಸರ್ಕಾರದ ಕೃಷಿ ಕಾಯ್ದೆಯನ್ನು ವಿರೋಧಿಸಿ ನಡೆಯುತ್ತಿರುವ ಹೋರಾಟವನ್ನು ಮುಂದುವರಿಸಿದ್ದಾರೆ. ಸುತ್ತಮುತ್ತಲಿನ ಗ್ರಾಮಗಳಿಂದ ಬಂದು ರೈತರು ಕೈಜೋಡಿಸುತ್ತಿದ್ದಾರೆ. ಈ ವಿಚಾರವಾಗಿ ರಾಹುಲ್ ಗಾಂಧಿ ಸರ್ಕಾರ ವಿರುದ್ಧ ಟ್ವೀಟ್ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಭಾರತೀಯ ಸರ್ಕಾರ ಸೇತುವೆಗಳನ್ನು ಕಟ್ಟಿಸಿ, ಗೋಡೆಗಳನ್ನಲ್ಲ ಎಂದು ಒಂದೇ ಸಾಲಿನಲ್ಲಿ ಬರೆದುಕೊಂಡು ರೈತರ ಹೋರಾಟ ತಡೆಯಲು ನಿರ್ಮಿತವಾದ ಕೆಲವು ತಡೆಗೋಡೆಗಳ ಫೋಟೋವನ್ನು ಹಂಚಿಕೊಳ್ಳುವ ಮೂಲಕವಾಗಿ ಚಾಟಿ ಬೀಸಿದ್ದಾರೆ.

     

    ಘಾಜಿಪುರ್ ಗಡಿಯಲ್ಲಿ ನೂರಾರು ಪೊಲೀಸರು ಸೈನಿಕರಂತೆ ನಿಂತಿದ್ದಾರೆ. ಹತ್ತಾರು ಅಡಿಗಳಷ್ಟು ದೂರ ಸಿಮೆಂಟ್ ಬ್ಯಾರಿಕೇಡ್‍ಗಳನ್ನು ಜೋಡಿಸಲಾಗಿದೆ. ಬ್ಯಾರಿಕೇಡ್‍ನ ಮಧ್ಯೆ ಸಿಮೆಂಟ್ ಹಾಕಲಾಗಿದೆ. ಕಬ್ಬಿಣದ ಬ್ಯಾರಿಕೇಡ್‍ಗಳನ್ನು ಹಾಕಿ ರಾಡುಗಳನ್ನು ಹಿಡಿದು ನಿಂತಿದ್ದಾರೆ. ರೈತರ ಪ್ರತಿಭಟನೆ ತೀವ್ರವಾಗದಂತೆ ತಡೆಯಲು ಹಾಗೂ ದೆಹಲಿಯನ್ನು ಪ್ರವೇಶಿಸದಂತೆ ತಡೆಯಲು ಪೊಲೀಸರು ಭದ್ರಕೋಟೆ ನಿರ್ಮಿಸಿರುವ ಫೋಟೋಗಳನ್ನು ರಾಹುಲ್ ಗಾಂಧಿ ಟ್ವಿಟ್ಟರ್‍ನಲ್ಲಿ ಹಂಚಿಕೊಂಡಿದ್ದಾರೆ.