ಪಾಟ್ನಾ: ನಮ್ಮ ಇಲಾಖೆಯಲ್ಲಿರುವ ಅಧಿಕಾರಿಗಳು, ನೌಕರರು ಕಳ್ಳರು. ಈ ಕಳ್ಳರಿಗೆ ನಾನೇ ಸರ್ದಾರ (ಮುಖ್ಯಸ್ಥ) ಎಂದು ಹೇಳಿಕೆ ನೀಡಿ ಚರ್ಚೆಗೆ ಗ್ರಾಸವಾಗಿದ್ದ ಬಿಹಾರದ ಕೃಷಿ ಸಚಿವ ಸುಧಾಕರ್ ಸಿಂಗ್ (Sudhakar Singh) ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಮುಖ್ಯಮಂತ್ರಿ ನಿತೀಶ್ ಕುಮಾರ್ (Nitish Kumar) ಅವರು ಸಿಂಗ್ ಅವರ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ. ರಾಜ್ಯಪಾಲ ಫಾಗು ಚೌಹಾಣ್ ಅವರಿಗೆ ಮಾಹಿತಿ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿ (CMO) ಹೇಳಿಕೆಯಲ್ಲಿ ತಿಳಿಸಿದೆ. ಪ್ರವಾಸೋದ್ಯಮ ಸಚಿವ ಕುಮಾರ್ ಸರ್ವಜೀತ್ ಅವರನ್ನು ರಾಜ್ಯದ ನೂತನ ಕೃಷಿ ಸಚಿವರನ್ನಾಗಿ ನೇಮಿಸಲಾಗಿದೆ. ಪ್ರವಾಸೋದ್ಯಮ ಇಲಾಖೆಯ ಜವಾಬ್ದಾರಿಯನ್ನು ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ನಿರ್ವಹಿಸಲಿದ್ದಾರೆ. ಇದನ್ನೂ ಓದಿ: ದುರ್ಗಾ ಪೂಜೆ ವೇಳೆ ಪೆಂಡಾಲ್ಗೆ ಬೆಂಕಿ – ಮಕ್ಕಳು ಸೇರಿದಂತೆ ಐವರು ಸಾವು, 66 ಮಂದಿಗೆ ಗಾಯ
ಜೆಡಿಯು ಸಂಸದೀಯ ಮಂಡಳಿ ಮುಖ್ಯಸ್ಥ ಉಪೇಂದ್ರ ಕುಶ್ವಾಹ ಮಾತನಾಡಿ, ಈ ಬೆಳವಣಿಗೆಯು ಸರ್ಕಾರದ ಮೇಲೆ ಪರಿಣಾಮ ಬೀರುವುದಿಲ್ಲ. ಲಾಲು ಪ್ರಸಾದ್ ಮತ್ತು ತೇಜಸ್ವಿ ಅವರು ರಾಜೀನಾಮೆ ಕೇಳಿದರೆ ನೀಡುತ್ತೇನೆ ಎಂದು ಸುಧಾಕರ್ ಸಿಂಗ್ ಈ ಹಿಂದೆಯೇ ಹೇಳಿದ್ದರು. ಬಹುಶಃ ಅವರಿಗೆ ರಾಜೀನಾಮೆ ನೀಡುವಂತೆ ಕೇಳಿರಬಹುದು ಎಂದು ತಿಳಿಸಿದ್ದಾರೆ.
ಈಚೆಗೆ ಸುಧಾಕರ್ ಸಿಂಗ್ ಅವರು ರೈತರ ಸಮಾವೇಶವೊಂದರಲ್ಲಿ ಮಾತನಾಡುವಾಗ, ನನ್ನ ಇಲಾಖೆಯಲ್ಲಿ ಅನೇಕ ಕಳ್ಳರಿದ್ದು, ಹಣವನ್ನು ದೋಚುತ್ತಿದ್ದಾರೆ. ನಾನು ಇಲಾಖೆಗೆ ಪ್ರಭಾರಿಯಾಗಿರುವುದರಿಂದ ಅವರಿಗೆ ಮುಖ್ಯಸ್ಥನಾಗುತ್ತೇನೆ. ನನಗಿಂತ ಮೇಲಿರುವ ಅನೇಕ ಮುಖ್ಯಸ್ಥರಿದ್ದಾರೆ. ಈ ಸರ್ಕಾರವು ಹಳೆಯದು. ಅದರ ಕಾರ್ಯಶೈಲಿಯೂ ಹಳೆಯದು. ಸರ್ಕಾರವನ್ನು ಎಚ್ಚರಿಸುವುದು ಸಾಮಾನ್ಯ ಜನರ ಕರ್ತವ್ಯ ಎಂದು ಹೇಳಿಕೆ ನೀಡಿದ್ದರು. ಇದನ್ನೂ ಓದಿ: ಐಸಿಯುನಲ್ಲಿ ಮುಲಾಯಂ ಸಿಂಗ್ – ಅಖಿಲೇಶ್ಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ ಮೋದಿ
Live Tv
[brid partner=56869869 player=32851 video=960834 autoplay=true]
ಯೋಗರಾಜ್ ಭಟ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ‘ಗರಡಿ’ ಸಿನಿಮಾದ ಮೂಲಕ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ ಸಹಕಾರ ಸಚಿವ ಎಸ್.ಟಿ ಸೋಮಶೇಖರ್. ಮತ್ತೋರ್ವ ಸಚಿವ ಬಿ.ಸಿ. ಪಾಟೀಲ್ ನಿರ್ಮಾಣದಲ್ಲಿ ತಯಾರಾಗುತ್ತಿರುವ ಈ ಚಿತ್ರದಲ್ಲಿ ಗೆಳೆಯನಿಗಾಗಿ ಪಾತ್ರ ಮಾಡಿದೆ ಎಂದಿದ್ದಾರೆ ಸೋಮಶೇಖರ್. ಇದನ್ನೂ ಓದಿ : ಜೇಮ್ಸ್ ಚಿತ್ರದ ಬೆಳಗ್ಗಿನ 6 ಗಂಟೆಯ 200 ಶೋಗಳ ಟಿಕೆಟ್ ಸೋಲ್ಡ್ ಔಟ್: ಏನೆಲ್ಲ ದಾಖಲೆ?
“ನನಗೆ ನಟನೆಯ ಗಂಧಗಾಳಿ ಗೊತ್ತಿಲ್ಲ. ಗೆಳೆಯ ಪಾಟೀಲರು ಅವರ ಸಿನಿಮಾದಲ್ಲಿ ನಟಿಸುವಂತೆ ಕೇಳಿದರು. ಗೆಳೆಯನ ಪ್ರೀತಿಗಾಗಿ ಬಣ್ಣ ಹಚ್ಚಿದೆ. ನಾನು ಪಾತ್ರ ಮಾಡುತ್ತಿರುವುದರಿಂದ ಬೇರೊಬ್ಬ ನಟನ ಅವಕಾಶ ಕಸಿದುಕೊಂಡೆ ಅನಿಸುತ್ತಿದೆ’ ಎಂದಿದ್ದಾರೆ ಸಚಿವರು. ಇದನ್ನೂ ಓದಿ : ರಾಮ್ ಗೋಪಾಲ ವರ್ಮಾ ಡೇಂಜರೆಸ್ ಹುಡುಗಿ ಅಂತ ಹೇಳಿದ್ದು ಯಾರಿಗೆ?
“ಬೆಳಗ್ಗೆ ನಿರ್ದೇಶಕ ಯೋಗರಾಜ್ ಭಟ್ಟರು ನನ್ನ ಪಾತ್ರವನ್ನು ವಿವರಿಸಿದರೆ, ಡೈಲಾಗ್ ಹೇಳಿದರು. ಅವರು ಏನು ಹೇಳಿದರೋ ಅಷ್ಟನ್ನು ಮಾಡಿದ್ದೇನೆ. ಅದರಾಚೆ ನನಗೆ ನಟನೆ ಬಾರದು. ಪ್ರೇಕ್ಷಕರು ನನ್ನ ಪಾತ್ರವನ್ನು ಹೇಗೆ ಸ್ವೀಕರಿಸುತ್ತಾರೋ ಗೊತ್ತಿಲ್ಲ’ ಎನ್ನುವುದು ಸೋಮಶೇಖರ್ ಮಾತು. ಇದನ್ನೂ ಓದಿ : ನಟ ಚೇತನ್ ಗಡಿಪಾರು? : ಹೋರಾಟಗಳೇ ನಟನಿಗೆ ಮುಳುವಾಗುತ್ತಾ..?
ಅಂದಹಾಗೆ ಗಾಳಿಪಟ 2 ಸಿನಿಮಾದ ನಂತರ ಯೋಗರಾಜ್ ಭಟ್ ನಿರ್ದೇಶನ ಮಾಡಿರುವ ಚಿತ್ರವಿದು. ಹಳ್ಳಿ ಸೊಗಡಿನಲ್ಲಿ ಕಥೆಯನ್ನು ಈ ಸಿನಿಮಾದ ಮೂಲಕ ಹೇಳಲು ಹೊರಟಿದ್ದಾರಂತೆ ನಿರ್ದೇಶಕರು. ಇಂತಹ ಕಥೆಯನ್ನು ಅವರು ಇದೇ ಮೊದಲ ಬಾರಿಗೆ ಆಯ್ಕೆ ಮಾಡಿಕೊಂಡಿದ್ದಾರಂತೆ ಯೋಗರಾಜ್ ಭಟ್.
ಕಾರವಾರ: ಮಳೆಯ ಅಬ್ಬರದಿಂದಾಗಿ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಹಾಗೂ ಅಂಕೋಲ ತಾಲೂಕಿನ ರೈತರ ಜಮೀನುಗಳು ಕೊಚ್ಚಿಹೋಗುವ ಜೊತೆಗೆ ಹಲವು ಊರುಗಳ ಸಂಪರ್ಕ ಸಹ ಇಲ್ಲವಾಗಿದೆ. ಈ ಗ್ರಾಮಗಳ ಸುತ್ತಲಿನ ಹಳ್ಳಿಯ ಜನರು ಹಾಗೂ ಅವರ ಸಮಸ್ಯೆಗಳನ್ನು ಬೋಟ್ನಲ್ಲಿ ನದಿ ದಾಟುವ ಮೂಲಕ ರೈತರ ಮನೆಯಂಗಳದಲ್ಲಿ ‘ಅನ್ನದಂಗಳದ ಮಾತುಕತೆ ಎಂಬ ಕಾರ್ಯಕ್ರಮದಲ್ಲಿ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಭಾಗವಹಿಸಿ ಸಮಸ್ಯೆ ಆಲಿಸಿದರು.
ಅಂಕೋಲ ತಾಲೂಕಿನ ಹಾಗೂ ಯಲ್ಲಾಪುರ ಗಡಿಯನ್ನು ಹಂಚಿಕೊಂಡ ಡೊಂಗ್ರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅತ್ಯಂತ ಕುಗ್ರಾಮ ಕೈಗಡಿಯ ಕೃಷಿಕರಾದ ರಾಮಚಂದ್ರ ಹೆಗಡೆ, ಸುಬ್ರಾಯ ಹೆಗಡೆ ಅವರ ಮನೆಯಂಗಳದಲ್ಲಿ ಇಂದು ಅನ್ನದಂಗಳದ ಮಾತುಕತೆ ಸಂಭ್ರಮ ಮನೆಮಾಡಿತ್ತು. ಗ್ರಾಮದ ಸುತ್ತಲಿನ ಹಳ್ಳಿಯ ಜನರು ಹಾಗೂ ಕುದ್ದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ ರಾಜ್ಯ ಸಚಿವೆ ದುಮ್ಮಿಕ್ಕುವ ನದಿಯಲ್ಲಿ ದೋಣಿಯ ಮೂಲಕ ಸಂಪರ್ಕ ಕಡಿತವಾಗಿರುವ ಹಳ್ಳಿಯ ಜನರೊಂದಿಗೆ ಬೆರೆತರು. ಇವರಿಗೆ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ್ ಹೆಬ್ಬಾರ್ ಸಾತ್ ನೀಡಿದರು.
ಶೋಭಾ ಕರಂದ್ಲಾಜೆ ಕಾರ್ಯಕ್ರಮವನ್ನು ಉದ್ಘಾಟಿಸುವ ಬದಲು ಹಿಂದಿನಿಂದಲೂ ಸಾವಯವ ಕೃಷಿ ಮಾಡಿಕೊಂಡು ಬಂದ ಕೃಷಿ ದಂಪತಿಗಳಾದ ಬಾಬು ಕಂಚಾ ಸಿದ್ದಿ ಕೈಗಡಿ ಹಾಗೂ ಶ್ರೀಮತಿ ಲಕ್ಷ್ಮೀ ಬಾಬು ಸಿದ್ದಿ ರವರ ಹಸ್ತದಿಂದಲೇ ದೀಪಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಲಾಯಿತು. ಕಾರ್ಯಕ್ರಮಕ್ಕೆ ಉತ್ತರ ಕನ್ನಡ ಜಿಲ್ಲೆಯವರಲ್ಲದೇ ಪಕ್ಕದ ಶಿವಮೊಗ್ಗ ,ಹಾವೇರಿ, ಗದಗ, ಹಾಸನ, ಚಿಕ್ಕಮಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಿಂದ ನೂರಾರು ರೈತರು ಭಾಗವಹಿಸಿದ್ದರು. ಇದನ್ನೂ ಓದಿ: ರಾಜೀವ್ ಗಾಂಧಿ ಹೆಸರನ್ನು ಬದಲಾಯಿಸಿ ಶಂಕರಾಚಾರ್ಯರ ಹೆಸರಿಡುವುದು ಸೂಕ್ತ: ಶೋಭಾ
ಮನೆಯಂಗಳದಲ್ಲಿ ರೈತರಿಂದ ಸಚಿವರಿಗೆ ಪ್ರಶ್ನೆಗಳ ಸುರಿಮಳೆ:
ರಾಮಚಂದ್ರ ಹೆಗಡೆ, ಸುಬ್ರಾಯ ಹೆಗಡೆ ಅವರ ಮನೆಯಂಗಳದ ಚಿಕ್ಕ ವೇದಿಕೆಯಲ್ಲಿ ನೂರಾರು ಜನರು ಕೇಂದ್ರ ಸಚಿವರಲ್ಲಿ ತಮ್ಮ ಸಮಸ್ಯೆಗಳನ್ನು ಹೇಳಿಕೊಂಡರು. ಗೋವನ್ನು ರಾಷ್ಟ್ರೀಯ ಪ್ರಾಣಿಯೆಂದು ಘೋಷಿಸಬೇಕು. ಗೋ ಆಧಾರಿತ ಉತ್ಪನ್ನಗಳಿಗೆ ಹಾಗೂ ಪಶು ಆಹಾರಗಳಿಗೆ ಜಿ.ಎಸ್.ಟಿ ಇಂದ ವಿನಾಯಿತಿ ನೀಡಿ. ಎಲ್ಲಾ ಮೂಲದ ಸಾವಯವ ಗೊಬ್ಬರಗಳಿಗೆ ಜಿ.ಎಸ್.ಟಿ ಇಂದ ವಿನಾಯಿತಿ ನೀಡಬೇಕು. ರೈತರಿಂದಲೇ ಉತ್ಪಾದಿತ ಮತ್ತು ಮೌಲ್ಯವರ್ಧಿತ ಉತ್ಪನ್ನಗಳಿಗೆ ಉತ್ಪಾದನಾ ಜಿ.ಎಸ್.ಟಿ ಇಂದ ವಿನಾಯಿತಿ ಕೊಡಬೇಕು. ಶ್ರೀಲಂಕಾ ದೇಶವು ರಾಸಾಯನಿಕ ಗೊಬ್ಬರ ಹಾಗೂ ವಿಷಗಳಿಗೆ ಪೂರ್ಣ ನಿಷೇಧ ಹೇರಿ ಸಾವಯವ ದೇಶ ಎಂದು ಘೋಷಿಸಿಕೊಂಡಿದೆ. ಈ ಕುರಿತು ಅಧ್ಯಯನಕ್ಕಾಗಿ ಶ್ರೀಲಂಕಾ ದೇಶಕ್ಕೆ ರೈತರನ್ನೊಳಗೊಂಡ ವಿಶೇಷ ತಂಡವನ್ನು ಅಧ್ಯಯನಕ್ಕೆ ಪ್ರವಾಸವನ್ನು ಏರ್ಪಡಿಸಬೇಕು. ಕೃಷಿಕರ ತೋಟದಲ್ಲಿ ಬಸಿಕಾಲುವೆ ಮತ್ತು ಮಣ್ಣಿನ ಏರಿ ನಿರ್ಮಾಣಕ್ಕೆ ಎನ್.ಆರ್.ಇ.ಜಿ(ನರೇಗಾ)ಯೋಜನೆಯಲ್ಲಿ ದೊಡ್ಡ ಹಿಡುವಳಿದಾರರಿಗೆ ಕನಿಷ್ಟ ಎರಡು ಹೆಕ್ಟೇರ್ ಪ್ರದೇಶಕ್ಕೆ ಅವಕಾಶ ಕಲ್ಪಿಸಿಕೊಡಬೇಕು. ವಿಮೆ ಮತ್ತು ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ನಿಯಮಗಳನ್ನು ಲಿಖಿತಗೊಳಿಸುವಾಗ ಕಂಪ್ಯೂಟರಿನ ಅಕ್ಷರದ ಗಾತ್ರ ಹದಿನಾರಕ್ಕಿಂತ ಹೆಚ್ಚಿರುವಂತೆ ಮತ್ತು ಕೃಷಿಕರಿಗೆ/ಗ್ರಾಹಕರಿಗೆ ಮಾತೃಭಾಷೆಯಲ್ಲಿಯೇ (ಕನ್ನಡ) ನಿಯಮಾವಳಿಗಳನ್ನು ಓದುವಂತೆ(ರೂಲ್ಸ್ ಎಂಡ್ ರೆಗುಲೇಶನ್ಸ್) ನಮೂದಿಸುವಂತಾಗಬೇಕು, ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯು ಹವಾಮಾನ ಆಧಾರಿತವಾಗಿದ್ದು,ಈಗಿರುವ ಹೋಬಳಿ ಮಟ್ಟದ ವರದಿ ಆಧಾರದ ಬದಲು ಗ್ರಾಮವಾರು ಮಳೆ, ಬಿಸಿಲು ಮಾಪನ ಮಾಡಿ ಎಂದು ಮನವಿ ಸಲ್ಲಿಸಿದರು.
ಕೇವಲ ಮಳೆ ಹಾಗೂ ಬಿಸಿಲಲ್ಲದೇ ಬೇರೆಲ್ಲೋ ಸುರಿದ ಮಳೆಯಿಂದಾಗಿ ಬರುವ ಪ್ರವಾಹದಿಂದ ಆಗುವ ಹಾನಿಗೂ ಸಹಾ ವಿಮೆ ಜಾರಿಯಾಗುವಂತೆ ತಿದ್ದುಪಡಿ ಮಾಡಬೇಕು, ಮಲ್ಟಿ ಸ್ಟೇಟ್ ಕೋ ಆಪರೇಟಿವ್ ಸೊಸೈಟಿಗಳನ್ನು ಎಫ್.ಪಿ.ಓ (ರೈತ ಉತ್ಪಾದಕ ಸಂಸ್ಥೆ) ಎಂದು ಪರಿಗಣಿಸಿ. ಎಫ್ ಪಿ. ಓ ಮಾರ್ಗಸೂಚಿಯಲ್ಲಿ ಮಾರ್ಪಾಡುಗಳನ್ನು ಮಾಡಬೇಕು.ಸರ್ಕಾರದ ಅನುದಾನವು ಶೇಕಡಾ 60:40ರ ಅನುಪಾತದಲ್ಲಿ ಕ್ರಮವಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಪಾಲಾಗಿರುತ್ತದೆ. ಅದೇ ರೀತಿ ಎಫ್.ಪಿ.ಓ ಇಂದ 40% ಭಾಗ ಹೂಡಿಕೆಯ ಜೊತೆಗೆ ಕೇಂದ್ರದ 60% ಭಾಗದ ಹೂಡಿಕೆಯ ವಿಧಾನವನ್ನು ಅನುಸರಿಸಬೇಕ ಎಂದು ಆಗ್ರಹಿಸಿದರು. ಇದನ್ನೂ ಓದಿ: ಬೋರ್ವೆಲ್ಗೆ ಬಿದ್ದು ಮಗು ಸಾವು ಪ್ರಕರಣಕ್ಕೆ ಟ್ವಿಸ್ಟ್- ತಂದೆಯಿಂದಲೇ ಕಂದಮ್ಮನ ಕೊಲೆ!
ನೋವು ತೋಡಿಕೊಂಡ ಬಿಜೆಪಿ ಎಮ್.ಎಲ್.ಸಿ:
ಬುಡಕಟ್ಟು ಜನಾಂಗದವರು ಅರಣ್ಯಭೂಮಿ ಹಕ್ಕುಪತ್ರಕ್ಕಾಗಿ ಕಾಯುತ್ತಿದ್ದಾರೆ. 1970ರ ಸುಮಾರಿಗೆ ನಮ್ಮ ತಂದೆ ಏಳು ಎಕರೆ ಜಮೀನು ಹೊಂದಿದ್ದರು. ಈಗ ಅರಣ್ಯ ಕಾಯ್ದೆಯಿಂದಾಗಿ ಕೇವಲ ಐದು ಗುಂಟೆಯಲ್ಲಿ ಜೀವನ ನಡೆಸುತ್ತಿದ್ದೇವೆ’ ಎಂದು ತಮ್ಮ ಹಾಗೂ ತಮ್ಮವರ ಸಮಸ್ಯೆ ಬಗ್ಗೆ ಸಚಿವರಿಗೆ ತಿಳಿಸಿದರು. ಅರಣ್ಯ ಕಾನೂನಿನಿಂದಾಗಿ ಅರಣ್ಯವನ್ನೇ ನಂಬಿ ತಲಾ ತಲಾಂತರದಿಂದ ಕಾಡಿನಲ್ಲಿ ಜೀವನ ಸಾಗಿಸುತ್ತಿರುವವರಿಗೆ ಹಕ್ಕುಪತ್ರ ನೀಡಬೇಕು ಎಂದು ಸಚಿವರಿವೆ ಕೇಳಿಕೊಂಡರು.
ಇದೇ ಸಂದರ್ಭದಲ್ಲಿ ಮಾತನಾಡಿದ ಸಚಿವ ಹೆಬ್ಬಾರ್, ಜಿಲ್ಲೆಯಲ್ಲಿ ಅರಣ್ಯಭೂಮಿ ಹಕ್ಕುಪತ್ರಕ್ಕೆ 93,855 ಮಂದಿ ಅರ್ಜಿ ಸಲ್ಲಿಸಿದ್ದಾರೆ. ಹಕ್ಕುಪತ್ರ ನೀಡಲು ಮೂರು ತಲೆಮಾರಿನ ದಾಖಲೆ ಸಲ್ಲಿಸಬೇಕು ಎಂದು ಅರಣ್ಯ ಹಕ್ಕು ಕಾಯ್ದೆ 2005ರಲ್ಲಿ ತಿಳಿಸಲಾಗಿದೆ. ಇದರ ಪ್ರಕಾರ 75 ವರ್ಷಗಳ ದಾಖಲೆ ನೀಡುವುದು ಸಾಧ್ಯವಾಗದೇ ಸಮಸ್ಯೆಯಾಗಿದೆ. ಈ ಬಗ್ಗೆ ಕೇಂದ್ರ ಸರ್ಕಾರದ ಗಮನಕ್ಕೆ ತರಲು ದೆಹಲಿಗೆ ನಿಯೋಗ ಬರುತ್ತೇವೆ. ಇದು ಬಗೆಹರಿದರೆ ರಾಜ್ಯದ ಆರು ಜಿಲ್ಲೆಗಳ 2.39 ಲಕ್ಷ ಕುಟುಂಬಗಳಿಗೆ ಬದುಕು ಕಟ್ಟಿಕೊಡಲು ಸಾಧ್ಯ ಎಂದು ಕೇಂದ್ರ ಸಚಿವರಿಗೆ ಇಲ್ಲಿನ ಅರಣ್ಯ ಒತ್ತುವರಿದಾರರ ಸಮಸ್ಯೆ ಬಗ್ಗೆ ತಿಳಿಸಿದರು.
ಅಂಕೋಲಾ ತಾಲೂಕಿನ ಕೈಗಡಿ ಗ್ರಾಮದಲ್ಲಿ ಸಾವಯವ ಕೃಷಿ ಪರಿವಾರ & ಕೃಷಿ ಇಲಾಖೆಯ ಸಹಭಾಗಿತ್ವದಲ್ಲಿ ಆಯೋಜಿಸಿದ್ದ "ಅನ್ನದಂಗಳದಲ್ಲಿ ಕೃಷಿಕರೊಂದಿಗೆ ಸಂವಾದ" ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕೃಷಿಕರ ಸಮಸ್ಯೆಗಳನ್ನು ಆಲಿಸಲಾಯಿತು.
ಶೋಭಾ ಕರಂದ್ಲಾಜೆ ಮಾತನಾಡಿ, ನಿಮ್ಮ ಎಲ್ಲಾ ಆಗ್ರಹಗಳನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರದ ಗಮನಕ್ಕೆ ತರಲಾಗುವುದು. ಅರಣ್ಯದ ಬಗ್ಗೆ ನಮ್ಮ ರಾಜ್ಯದಲ್ಲಿ ಇರುವಷ್ಟು ಕಠಿಣವಾದ ನಿಯಮಗಳು ದೇಶದ ಮತ್ತೆಲ್ಲೂ ಇಲ್ಲ, ಇದರಲ್ಲಿ ಸಾಕಷ್ಟು ಬದಲಾವಣೆ ಆಗಬೇಕು ಸಾವಯವ ಕೃಷಿ ಪ್ರಮಾಣೀಕರಣವನ್ನು ವಾಣಿಜ್ಯ ಇಲಾಖೆಯಿಂದ ತೆಗೆದು ಕೃಷಿ ಇಲಾಖೆಗೆ ಸೇರಿಸುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಜೊತೆ ಮಾತನಾಡುತ್ತೇನೆ. ಅರಣ್ಯಭೂಮಿ ಹಕ್ಕುಪತ್ರಕ್ಕೆ 75 ವರ್ಷಗಳ ಬದಲು 15 ವರ್ಷಗಳ ದಾಖಲೆ ನೀಡುವಂತೆ ಮಾಡಲು ಸಾಧ್ಯವಾಗಲಿದೆಯಾ ಎಂದು ಪರಿಶೀಲಿಸಲಾಗುವುದು ಎಂದರು. ಇದನ್ನೂ ಓದಿ: ಬೋರ್ವೆಲ್ಗೆ ಬಿದ್ದ ಎರಡೂವರೆ ವರ್ಷದ ಮಗು ಶವವಾಗಿ ಪತ್ತೆ
ಬೇಡಿಕೆ ಇದ್ದಕಡೆ ಕೃಷಿ ಉತ್ಪನ್ನ ರಫ್ತು ಮಾಡುವಂತಾಗಬೇಕು:
ಹಲವು ದೇಶದಲ್ಲಿ ನಮ್ಮ ಕೃಷಿ ಉತ್ಪನ್ನಕ್ಕೆ ಬಹು ಬೇಡಿಕೆ ಇದೆ. ಆದರೇ ಗುಣಮಟ್ಟದ ಉತ್ಪನ್ನಗಳನ್ನು ರಫ್ತುಮಾಡುವಲ್ಲಿ ರೈತರಿಗೆ ಸಾಧ್ಯವಾಗುತ್ತಿಲ್ಲ. ಇದಕ್ಕಾಗಿ ತರಬೇತಿ ನೀಡಬೇಕು, ಗುಣಮಟ್ಟ ಉತ್ಪನ್ನ ಹಾಗೂ ಬೆಳಗಳ ಬಗ್ಗೆ ರೈತರಿಗೆ ಇಲಾಖೆ ಅರಿವು ಮೂಡಿಸುವ ಅಗತ್ಯವಿದೆ. ಕೋವಿಡ್ ಸಂದರ್ಭದಲ್ಲಿ ಶ್ರೀಲಂಕಾ ದೇಶದಲ್ಲಿ ಆಹಾರ ಉತ್ಪನ್ನದ ಕೊರತೆ ಆಗಿದೆ. ನಮ್ಮ ದೇಶದಲ್ಲಿ ಕೋವಿಡ್ ಸಂದರ್ಭದಲ್ಲಿಯೂ ಆಹಾರ ಉತ್ಪಾದನೆಯಲ್ಲಿ ಗಮನಾರ್ಹ ಸಾಧನೆ ಮಾಡಿದೆ ಎಂದರು.
ಸಾವಯವ ಉತ್ಪನ್ನದಿಂದ ತಯಾರಿಸಿದ ಊಟ ಸವಿದ ಸಚಿವೆ:
ಕೇಂದ್ರ ಸಚಿವೆ ದಿನದ ಅರ್ಥ ಭಾಗವನ್ನು ರೈತರೊಂದಿಗೆ ಕಳೆದು ಅವರ ಸಮಸ್ಯೆ ಆಲಿಸಿದರು. ಇದಲ್ಲದೇ ರಾಮಚಂದ್ರ ಹೆಗಡೆ, ಸುಬ್ರಾಯ ಹೆಗಡೆ ಹಾಗೂ ಕೆಲವು ಸಾವಯವ ಪದ್ಧತಿಯಲ್ಲಿ ಕೃಷಿ ಮಾಡಿದ ರೈತರ ಬೆಳೆ ಬೆಳೆದ ತೋಟಗಳಿಗೆ ಭೇಟಿ ನೀಡಿ ಮಾಹಿತಿ ಪಡೆದರು. ಮಧ್ಯಾಹ್ನದ ವೇಳೆ ಸಾಮಾನ್ಯ ಜನರಂತೆ ರೈತರೊಂದಿಗೆ ಕುಳಿತು ಸಾವಯವ ಉತ್ಪನ್ನಗಳಿಂದ ತಯಾರಿಸಿದ ಊಟವನ್ನು ಸವಿದು ಖುಷಿ ಪಟ್ಟರು.
ಚಿತ್ರದುರ್ಗ: ರಾಜಕೀಯದಲ್ಲಿ ಆರೋಪ ಮಾಡುವವರು ಇರುತ್ತಾರೆ. ಯಾರು ಉತ್ತಮ ಕೆಲಸ ಮಾಡುತ್ತಾರೆ ಅಂತವರ ವಿರುದ್ಧ ಕೆಲವರು ಸುಮ್ಮನೆ ಆರೋಪ ಮಾಡುತ್ತಾರೆ. ನನ್ನ ವಿರುದ್ಧದ ಭ್ರಷ್ಟಾಚಾರ ದೂರು ದುರುದ್ದೇಶ ಪೂರಿತ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ತಿಳಿಸಿದ್ದಾರೆ.
ಚಿತ್ರದುರ್ಗ ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಬಿ.ಸಿ.ಪಾಟೀಲ್, ಎಲ್ಲರ ಮೇಲೆ ಭ್ರಷ್ಟಾಚಾರ ಆರೋಪ ಹೊರಿಸುತ್ತಾರೆ. ಈ ಹಿಂದೆ ಸಿದ್ದರಾಮಯ್ಯ ವಿರುದ್ಧವೂ ಭ್ರಷ್ಟಾಚಾರ ಆರೋಪ ಕೇಳಿಬಂದಿತ್ತು. ಸಿಲ್ವರ್ ಬ್ರಿಡ್ಜ್ ನಿರ್ಮಾಣಕ್ಕೆ 500 ಕೋಟಿ ಕಿಕ್ ಬ್ಯಾಕ್ ಆರೋಪ ಬಂದಿತ್ತು. ಆರೋಪ ಮಾಡುವವರು ಇರುವುದು ಸಹಜ ನಾವು ಮಧ್ಯವರ್ತಿ, ಏಜೆಂಟ್ಗಳನ್ನು ದೂರವಿಟ್ಟಾಗ ಅವರು ಅಸಮಾಧಾನಗೊಂಡು ಈ ರೀತಿ ಹೇಳಿಕೆ ಕೊಡುವುದು ಸಹಜ. ಭ್ರಷ್ಟಾಚಾರ ಆರೋಪದ ಬಗ್ಗೆ ಯಾವುದೇ ತನಿಖೆಗೆ ನಾನು ಸಿದ್ಧ. ನಮ್ಮಲ್ಲಿ ಯಾವುದೇ ಕಳ್ಳತನದ ಪ್ರಕ್ರಿಯೆ ಇಲ್ಲ. ಕೃಷಿ ಇಲಾಖೆ ಒಂದೇ ಸಂಪೂರ್ಣ ಪಾರದರ್ಶಕವಾಗಿ ಕೆಲಸ ವಿರ್ವಹಿಸುತ್ತದೆ. ಯಾರು ಆರೋಪ ಮಾಡಿದ್ದಾರೆ ಅವರು ಆರೋಪವನ್ನು ಸಾಬೀತು ಮಾಡಬೇಕು ಇಲ್ಲದಿದದ್ದಲ್ಲಿ ಅವರ ಮೇಲೆ ಮಾನನಷ್ಟ ಮೊಕದ್ದಮೆ ಹಾಕುತ್ತೇನೆ ಎಂದು ಎಚ್ಚರಿಕೆ ನೀಡಿದರು. ಇದನ್ನೂ ಓದಿ: ಚಿತ್ರರಂಗವಷ್ಟೇ ಅಲ್ಲ ಕನ್ನಡ ಬೆಳೆಸುವಲ್ಲಿ ಪ್ರಮುಖ ಪಾತ್ರವಹಿಸಿರುವುದಕ್ಕೆ ಹೆಮ್ಮೆಯಾಗ್ತಿದೆ: ಬೊಮ್ಮಾಯಿ
ಕಾಂಗ್ರೆಸ್ ಜನವಿರೋಧಿ ಆಗಿದ್ದಕ್ಕೆ ಜನರಿಂದ ತಿರಸ್ಕಾರವಾಗಿ ವಿರೋಧ ಪಕ್ಷದ ಸ್ಥಾನದಲ್ಲಿದೆ. ಮುಂದೆಯೂ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಅವಕಾಶವಿಲ್ಲ. ಅವರು ಹಾಗೆ ಇರುತ್ತಾರೆ. 21ದಿನ ಗಣೇಶೋತ್ಸವ ಆಚರಣೆಗೆ ಸಂಘ ಪರಿವಾರ ಪಟ್ಟು ವಿಚಾರವಾಗಿ ಮಾತನಾಡಿ, ಗಣೇಶೋತ್ಸವ 2ನೇ ದಿನ ನಡೆಯುತ್ತಿದ್ದು, ಸರ್ಕಾರದಿಂದ ಸೂಕ್ತ ಕ್ರಮ ಕೈಗೊಳ್ಳಲಾಗಿದೆ. ಉಡುಪಿಯಲ್ಲಿ ಮತಾಂತರ ಪ್ರಕರಣ ಬಗ್ಗೆ ಸರ್ಕಾರ ಸೂಕ್ತ ಕ್ರಮಕ್ಕೆ ಮುಂದಾಗಿದೆ ಎಂದು ತಿಳಿಸಿದರು.
ಹಿರಿಯೂರು ಕ್ಷೇತ್ರದತ್ತ ಬಿ.ಸಿ.ಪಾಟೀಲ್ ಹಚ್ಚು ಒಲವು ವಿಚಾರವಾಗಿ ಮಾತನಾಡಿ, ಕ್ಷೇತ್ರದ ಶಾಸಕಿ ಆಹ್ವಾನದ ಮೇರೆಗೆ ಆಗಮಿಸಿದ್ದೇನೆ. ಹಿರಿಯೂರಲ್ಲಿ ಹಿಂದೆ ಪಿಎಸ್ಐ ಆಗಿ ನಾನು ಕರ್ತವ್ಯ ನಿರ್ವಹಿಸಿದ್ದೇನೆ. ಹಿರಿಯೂರು ಜನರ ಮೇಲೆ ನನಗೆ ಪ್ರೀತಿ ಜಾಸ್ತಿ ಇದೆ. ನನ್ನನ್ನು ನಾಲ್ಕು ಬಾರಿ ಗೆಲ್ಲಿಸಿದ ಹಿರಿಕೇರೂರು ಕ್ಷೇತ್ರ ಭದ್ರವಾಗಿದೆ ನನಗೆ ಅದೇ ಸಾಕು ಎಂದರು. ಇದನ್ನೂ ಓದಿ: ಸುದೀಪ್ ಒಬ್ಬ ನಟರಾಗುತ್ತಾರೆ ಅಂತ ಅಂದುಕೊಂಡಿರಲಿಲ್ಲ: ಬೊಮ್ಮಾಯಿ
ಉಡುಪಿ: ಕೃಷಿ ಚಟುವಟಿಕೆಯನ್ನು ಗಮನಿಸಿ ನೂತನ ಬೇಸಾಯ ನಾಟಿ ಕಾರ್ಯಕ್ರಮಕ್ಕೆ ಚಾಲನೆ ನೀಡಲು ಆಗಮಿಸಿದ್ದ ಕೃಷಿ ಸಚಿವ ಬಿ.ಸಿ ಪಾಟೀಲ್ ಅವರು ಸಂಚರಿಸುತ್ತಿದ್ದ ಕಾರು ಜಿಲ್ಲೆಯ ಕಡೆಕಾರು ಎಂಬಲ್ಲಿ ಕೆಸರಿನಲ್ಲಿ ಹೂತು ಹೋಗಿದೆ. ಭಾರೀ ಮಳೆಗೆ ತೇವಗೊಂಡಿದ್ದ ಗದ್ದೆಗೆ ಕಾರು ಇಳಿಸಿದ್ದೇ ಈ ಪಜೀತಿಗೆ ಕಾರಣವಾಗಿದೆ.
ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಕೇದಾರೋತ್ಥಾನ ಬೇಸಾಯ ಅಭಿಯಾನ ಆರಂಭಗೊಂಡಿದೆ. ಉಡುಪಿ ವಿಧಾನಸಭಾ ಕ್ಷೇತ್ರದ ಬೀಳುಬಿಟ್ಟ 2000 ಎಕರೆ ಗದ್ದೆಯನ್ನು ಬೇಸಾಯ ಮಾಡಲಾಗುತ್ತಿದೆ. ಈ ಪುನಶ್ಚೇತನ ಕಾರ್ಯಕ್ರಮದ ನಾಟಿ ಕಾರ್ಯಕ್ಕೆ ಕೃಷಿ ಸಚಿವರು ಆಗಮಿಸಿದ್ದರು. ಈ ಸಂದರ್ಭ ಕೆಸರಿನಲ್ಲಿ ಸಚಿವರ ಕಾರು ಹೂತಿದೆ. ಉಡುಪಿಯ ಕಡೆಕಾರು ಎಂಬಲ್ಲಿ ಘಟನೆ ನಡೆದಿದ್ದು, ಕಾರು ಮೇಲೆತ್ತಲು ಬಿಜೆಪಿ ನಾಯಕರು, ಸ್ಥಳೀಯ ಜನ ಪ್ರತಿನಿಧಿಗಳು ಕೆಲಕಾಲ ಪರದಾಟ ಮಾಡಿದರು. ನಂತರ ಕೃಷಿ ಚಟುವಟಿಕೆಯಲ್ಲಿ ಭಾಗಿಯಾಗಿದ್ದ ಯುವಕರು ಓಡೋಡಿ ಬಂದು ಸಚಿವರ ಕಾರನ್ನು ತಳ್ಳಿ ಮೇಲೆ ಎತ್ತಿದರು. ಇದನ್ನೂ ಓದಿ: ಆನ್ಲೈನ್ ಕ್ಲಾಸ್ಗಾಗಿ 2 ಕಿ.ಮೀ ದೂರದಲ್ಲಿ ತಾವೇ ಕ್ಲಾಸ್ ರೂಂ ರೆಡಿ ಮಾಡಿದ ವಿದ್ಯಾರ್ಥಿಗಳು
ಉಡುಪಿ ನಗರದಾದ್ಯಂತ ಮುಂಜಾನೆಯಿಂದ ಭಾರೀ ಮಳೆಯಾಗುತ್ತಿದೆ. ಭಾರೀ ಮಳೆಗೆ ಸುತ್ತಮುತ್ತಲ ಗದ್ದೆಗಳು ತೇವಗೊಂಡಿದ್ದು, ಜಿಲ್ಲೆಯಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇದ್ದು, ಜಿಲ್ಲೆಯಾದ್ಯಂತ ಮೋಡ ಮುಸುಕಿದೆ.
ಚಿಕ್ಕಬಳ್ಳಾಪುರ: ಕೊರೊನಾ ಸಂದರ್ಭದ ದುರ್ಲಾಭ ಪಡೆದು ಬಿತ್ತನೆ ಬೀಜ, ಕ್ರಿಮಿನಾಶಕ ಹಾಗೂ ರಸಗೊಬ್ಬರಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡುವವರು ಮತ್ತು ಸರ್ಕಾರ ನಿಗದಿಪಡಿಸಿದ ಬೆಲೆಗಿಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡುವವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಎಚ್ಚರಿಕೆ ನೀಡಿದ್ದಾರೆ.
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂದು ಕೃಷಿ, ರೇಷ್ಮೆ ಮತ್ತು ತೋಟಗಾರಿಕೆ ಇಲಾಖೆಗಳ ಅಧಿಕಾರಿಗಳು ಹಾಗೂ ರೈತ ಪ್ರತಿನಿಧಿಗಳ ಸಭೆ ನಡೆಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ಹಿನ್ನೆಲೆಯಲ್ಲಿ ತುಂಬಾ ಬಿಕ್ಕಟ್ಟಿನ ಪರಿಸ್ಥಿತಿ ಇದೆ. ಕೃಷಿ ಕ್ಷೇತ್ರ ಅನುಭವಿಸಿದ ನಷ್ಟದ ಪ್ರಮಾಣದಷ್ಟು ಮತ್ಯಾವ ಕ್ಷೇತ್ರವೂ ನಷ್ಟ ಅನುಭವಿಸಿಲ್ಲ. ಆದರೂ ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸಾಧ್ಯವಾದಷ್ಟೂ ರೈತರ ಬೆಂಬಲಕ್ಕೆ ನಿಂತಿದ್ದಾರೆ ಎಂದು ತಿಳಿಸಿದರು.
ಈ ಮಧ್ಯೆ ಕೆಲವು ರಸಗೊಬ್ಬರಗಳ ಅಂಗಡಿಯ ಮಾಲೀಕರು ರಸಗೊಬ್ಬರ, ಕ್ರಿಮಿನಾಶಕ ಮತ್ತು ಬಿತ್ತನೆ ಬೀಜಗಳನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದಾರೆ ಎಂಬ ದೂರುಗಳು ಬಂದಿವೆ. ಈ ರೀತಿ ಪರಿಸ್ಥಿತಿಯ ದುರ್ಲಾಭ ಪಡೆದು ಮೊದಲೇ ಕಷ್ಟನಷ್ಟಕ್ಕೆ ಸಿಲುಕಿರುವ ರೈತರನ್ನು ಶೋಷಿಸುವವರನ್ನು ಸರ್ಕಾರ ಸಹಿಸುವ ಪ್ರಶ್ನೆಯೇ ಇಲ್ಲ. ಅಂತವರ ವಿರುದ್ಧ ಸರ್ಕಾರ ಪ್ರಕರಣ ದಾಖಲಿಸಲಿದೆ ಎಂದು ಎಚ್ಚರಿಸಿದರು.
ಬೇಗ ಕೊಳೆಯುವ ಕೃಷಿ ಉತ್ಪನ್ನಗಳನ್ನು ಕೆಲಕಾಲ ಶೇಖರಿಸಿಡಲು ಅಗತ್ಯವಿರುವ ಶೀಥಲ ಗೃಹಗಳು ಹಾಗೂ ಹಣ್ಣು ಮತ್ತು ತರಕಾರಿ ಸಂಸ್ಕರಣಾ ಘಟಕಗಳನ್ನು ತೆರೆಯಲು ಅವಶ್ಯಕತೆ. ಇದು ಸರ್ಕಾರದ ಗಮನಕ್ಕೂ ಬಂದಿದೆ. ಈ ಸಲಹೆಗಳನ್ನು ಸಿಎಂ ಯಡಿಯೂರಪ್ಪ ಅವತಿಗೂ ಶಿಫಾರಸು ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಈ ಕುರಿತು ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದರು.
ರಾಜ್ಯ ಕೃಷಿ ಇಲಾಖೆಯಲ್ಲಿ ಶೇ.50ರಷ್ಟು ಹುದ್ದೆಗಳು ಖಾಲಿಯಿದ್ದು, ಇದರಿಂದ ಇಲಾಖೆ ಸಮರ್ಪಕವಾಗಿ ಕಾರ್ಯನಿರ್ವಸಹಿಲು ಸಾಧ್ಯವಾಗುತ್ತಿಲ್ಲ. ರಾಜ್ಯದ ಕೆಲವೆಡೆ ಕಳಪೆ ಕೀಟನಾಶಕ, ಬಿತ್ತನೆ ಬೀಜ ಮಾರಾಟವಾಗುತ್ತಿದ್ದು, ಈವರೆಗೆ 370 ಮಾದರಿಗಳನ್ನು ಸಂಗ್ರಹಿಸಲಾಗಿದೆ. ಈ ಪೈಕಿ 175 ಮಾದರಿಗಳು ಕಳಪೆ ಎಂದು ಖಚಿತ ಪಟ್ಟಿವೆ. 32 ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಲಾಗಿದೆ. ಚಿಕ್ಕಬಳ್ಳಾಪುರದ ಅಂಗಡಿಯೊಂದರಲ್ಲಿ 20 ಲಕ್ಷ ರೂ.ಗಳ ಕಳಪೆ ಸರಕನ್ನು ಜಫ್ತಿ ಮಾಡಲಾಗಿದೆ ಎಂದು ತಿಳಿಸಿದರು.
ಚಿಕ್ಕಬಳ್ಳಾಪುರ: ಪಕ್ಷದಲ್ಲಿ ಯಾರು ಅಸಮಾಧಾನವಾಗಿದ್ದಾರೆ ಅವರಿಗೆ ಇನ್ನೊಂದು ಹಂತದಲ್ಲಿ ಮಂತ್ರಿ ಸ್ಥಾನ ಕೊಡುವ ನಿರ್ಧಾರವನ್ನು ಹೈಕಮಾಂಡ್ ಮಾಡಿದೆ. ನಾವೆಲ್ಲರೂ ರಾಜೀನಾಮೆ ನೀಡಲು ಒಪ್ಪಿಗೆ ನೀಡಿದ್ದು, ಸಿದ್ಧರಾಗಿದ್ದೇವೆ ಎಂದು ಕೃಷಿ ಸಚಿವ ಶಿವಶಂಕರ್ ರೆಡ್ಡಿ ರಾಜೀನಾಮೆ ಕೊಡುವ ಮುನ್ಸೂಚನೆ ನೀಡಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟದಲ್ಲಿ ಇಬ್ಬರು ಪಕ್ಷೇತರರಿಗೆ ಸಚಿವ ಸ್ಥಾನ ನೀಡಿದ್ದಾರೆ. ಎಲ್ಲರಿಗೂ ಅವಕಾಶ ಮಾಡಿಕೊಡಬೇಕು ಎಂದು ಈಗಾಗಲೇ ತೀರ್ಮಾನವನ್ನೂ ಮಾಡಲಾಗಿದ್ದು, ಅವಧಿ ನಿಗದಿಪಡಿಸಲಾಗಿದೆ. ಅವಧಿ ಮುಗಿದ ಬಳಿಕ ಪರ್ಯಾಯವಾಗಿ ಹೊಸಬರಿಗೆ ಅವಕಾಶ ಮಾಡಿಕೊಡಬೇಕು ಎಂದು ಪಕ್ಷದ ಮಟ್ಟದಲ್ಲಿ ತೀರ್ಮಾನ ಆಗಿದೆ ಎಂದರು.
ಮೈತ್ರಿ ಪಾಲನೆಯಲ್ಲಿ ಕೆಲವೊಂದು ತೊಂದರೆಗಳು ಆಗಿವೆ. ಆದರೆ ಬಿಜೆಪಿಯೆಂಬ ಕೋಮುವಾದಿ ಪಕ್ಷವನ್ನು ಅಧಿಕಾರದಿಂದ ದೂರ ಇಡಬೇಕು ಎಂಬ ದೃಷ್ಟಿಯಿಂದ ಇಂದು ನಾವು ಮೈತ್ರಿ ಮಾಡಿಕೊಂಡಿದ್ದೇವೆ. ಹೀಗಾಗಿ ಕೆಲವು ತೊಂದರೆಗಳಾಗಿವೆ. ಅವುಗಳನ್ನು ಸಹಿಸಿಕೊಂಡು ಮುಂದೆ ನಡೆಯಬೇಕಾಗಿದೆ ಎಂದು ತಿಳಿಸಿದರು.
ಇದೇ ವೇಳೆ ಶಾಸಕ ಬಿಸಿ ಪಾಟೀಲ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಪಾಟೀಲ್ ಸಚಿವರಾಗಬೇಕಿತ್ತು. ಆ ಭಾಗದಲ್ಲಿ ಸಚಿವ ಸ್ಥಾನ ಸಿಕ್ಕಿಲ್ಲ. ಹತಾಶ ಮನೋಭಾವದಿಂದ ಹೇಳಿದ್ದಾರೆ ಅಂದ್ರು.
ಚಾಮರಾಜನಗರ: ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರನ್ನು ಬದಲಿಸಿ ಸಮನ್ವಯ ಸಮಿತಿ ಅಧ್ಯಕ್ಷರಾದ ಸಿದ್ದರಾಮಯ್ಯನವರನ್ನು ನೂತನ ಸಿಎಂ ಆಗಿ ಆಯ್ಕೆ ಮಾಡುವುದಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ ಎಂದು ಹೇಳುವ ಮೂಲಕ ಕೃಷಿ ಸಚಿವ ಶಿವಶಂಕರ ರೆಡ್ಡಿ ಹೊಸ ಬಾಂಬ್ ಸಿಡಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರಿಗೆ ಸಿದ್ದರಾಮಯ್ಯನವರ ಸಿಎಂ ಆಗುತ್ತೇನೆ ಎನ್ನುವ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಅವರು ಯಾವ ರೀತಿ ಹೇಳಿದ್ದಾರೋ ನಮಗೆ ಗೊತ್ತಿಲ್ಲ, ನಾವು ಅವರನ್ನು ಮತ್ತೊಮ್ಮೆ ಮುಖ್ಯಮಂತ್ರಿಯನ್ನಾಗಿ ಮಾಡುವ ಆಸೆ ಹೊಂದಿದ್ದೆವು. ಹೀಗಾಗಿ ಸಿದ್ದರಾಮಯ್ಯನವರನ್ನು ಸಿಎಂ ಮಾಡಲೇಬೇಕೆಂದು ವಿಧಾನಸಭಾ ಚುನಾವಣೆಯಲ್ಲಿ ಪಣ ತೊಟ್ಟಿದ್ದೇವು. ಆದರೆ ನಮಗೆ ಬೇಕಾದ ಬಹುಮತ ಸಿಗಲಿಲ್ಲ. ಹೀಗಾಗಿ ಅವರು ಮುಖ್ಯಮಂತ್ರಿಯಾಗುವ ಅವಕಾಶ ಕೈ ತಪ್ಪಿತು. ಇಂದು ಅವರು ಕಾಂಗ್ರೆಸ್ ಹಾಗೂ ಜೆಡಿಎಸ್ ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿಯ ಅಧ್ಯಕ್ಷರಾಗಿದ್ದಾರೆ. ಒಂದು ವೇಳೆ ಸಭೆಯಲ್ಲಿ ಎಲ್ಲರೂ ಸಿದ್ದರಾಮಯ್ಯನವರನ್ನು ಮುಖ್ಯಮಂತ್ರಿಯನ್ನಾಗಿ ಮಾಡುವ ನಿರ್ಧಾರ ಮಾಡಿದರೆ, ನಮ್ಮೆಲ್ಲರ ಸಂಪೂರ್ಣ ಬೆಂಬಲ ಇದೆ ಎಂದು ಮಾಜಿ ಸಿಎಂ ಪರವಾಗಿ ಬ್ಯಾಟ್ ಬೀಸಿದರು.
ಸಮನ್ವಯ ಸಮಿತಿಯಲ್ಲಿ ತೀರ್ಮಾನವಾದರೆ, ಮುಖ್ಯಮಂತ್ರಿಗಳ ಬದಲಾವಣೆ ಖಚಿತ. ಎರಡು ಪಕ್ಷಗಳ ಸಮನ್ವಯ ಸಮಿತಿಯವರು ಈ ಬಗ್ಗೆ ಕುಳಿತು ತೀರ್ಮಾನ ಕೈಗೊಳ್ಳಬೇಕು. ಸಮ್ಮಿಶ್ರ ಸರ್ಕಾರದ ಉಸ್ತುವಾರಿಯನ್ನು ಸಮನ್ವಯ ಸಮಿತಿ ಹೊಂದಿದೆ. ಸಮಿತಿಯ ನಿರ್ಧಾರಗಳಿಗೆ ಎಲ್ಲರೂ ಬದ್ಧರಾಗಿರಬೇಕು. ಒಂದು ವೇಳೆ ಸಭೆಯಲ್ಲಿ ಕುಮಾರಸ್ವಾಮಿಯವರನ್ನು ಬದಲಾಯಿಸಿ, ಸಿದ್ದರಾಮಯ್ಯನವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಬೇಕೆಂದರೆ ನಮ್ಮ ಎಲ್ಲಾ ಶಾಸಕರುಗಳು ಬದ್ಧರಾಗಿರುತ್ತೇವೆ ಎಂದು ಹೇಳಿಕೆ ನೀಡಿದರು.
ಬಿಜೆಪಿಯವರು ಸಮ್ಮಿಶ್ರ ಸರ್ಕಾರ ಬೀಳುತ್ತದೆಂಬ ಹಗಲುಗನಸು ಕಾಣುತ್ತಾ ಕುಳಿತುಕೊಂಡಿದ್ದಾರೆ. ಅವರುಗಳು ಒಡೆದು ಆಳುವ ನೀತಿಗೆ ಹೆಚ್ಚಿನ ಆಧ್ಯತೆ ನೀಡುವವರು. ನಮ್ಮ ಸಮ್ಮಿಶ್ರ ಸರ್ಕಾರದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಜಾತ್ಯತೀತ ಪಕ್ಷಗಳಾಗಿದ್ದು, ಸಮಾನ ಮನಸ್ಕರೊಂದಿಗೆ ಸರ್ಕಾರ ನಡೆಸುತ್ತಿದ್ದೇವೆ. ಸರ್ಕಾರಕ್ಕೆ ಯಾವುದೇ ಕಂಟಕ ಎದುರಾಗುವುದಿಲ್ಲ ಎಂದು ತಿಳಿಸಿದರು.
ಚಿಕ್ಕಬಳ್ಳಾಪುರ: ಅನ್ನಭಾಗ್ಯ ಪಡಿತರದಲ್ಲಿ ಎರಡು 2 ಕೆ.ಜಿ. ಅಕ್ಕಿಯನ್ನು ಕಡಿತ ಮಾಡಿದ್ದು ಯಾಕೆ? ನನಗೆ 2 ಕೆಜಿ ಅಕ್ಕಿ ಬೇಕು ಕೊಡಿ ಎಂದು ಖಾಲಿ ಚೀಲ ಹಿಡಿದು ಸರ್ಕಾರಿ ಕಾರ್ಯಕ್ರಮಕ್ಕೆ ಬಂದ ವ್ಯಕ್ತಿಯೊಬ್ಬರು ಕೃಷಿ ಸಚಿವರಿಗೆ ಪ್ರಶ್ನೆ ಮಾಡಿದ್ದಾರೆ.
ಗೌರಿಬಿದನೂರು ತಾಲೂಕಿನ ಕಾಚಮಾಚೇನಹಳ್ಳಿ ಗ್ರಾಮದ ಬೊಮ್ಮಲಿಂಗೇಶ್ವರ ದೇವಾಲಯದ ಆವರಣದಲ್ಲಿ 2018-19 ನೇ ಸಾಲಿನ ಸಮಗ್ರ ಕೃಷಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ ಸಚಿವ ಶಿವಶಂಕರ್ ರೆಡ್ಡಿ ಉದ್ಘಾಟಿಸಿದರು. ಈ ವೇಳೆ ಕಾರ್ಯಕ್ರಮದ ಬಳಿ ಬಂದ ಸ್ಥಳೀಯ ವ್ಯಕ್ತಿಯೊರ್ವ ಏಕೆ ಎರಡು ಕೆ.ಜಿ. ಅಕ್ಕಿ ಕಡಿತ ಮಾಡಿದ್ದೀರಿ ಹೇಳಿ ಅಂತ ಪ್ರಶ್ನೆ ಮಾಡಿದ್ರು. ಅಷ್ಟೇ ಅಲ್ಲದೇ ನನಗೆ 2 ಕೆ.ಜಿ ಅಕ್ಕಿ ಕೊಡಲೇ ಬೇಕು ಅಂತಾ ಖಾಲಿ ಚೀಲ ತಂದು ಪ್ರದರ್ಶನ ಮಾಡಿದರು.
ಕಾಯಕ್ರಮದ ಧ್ವನಿವರ್ಧಕದ ಧ್ವನಿಯಿಂದ ವ್ಯಕ್ತಿಯ ಮಾತು ಸಚಿವರ ಕಿವಿಗೆ ಬೀಳಲಿಲ್ಲ. ಅಷ್ಟರಲ್ಲಿಯೇ ಅಲ್ಲೇ ಇದ್ದ ಸ್ಥಳೀಯರು ವ್ಯಕ್ತಿಯನ್ನು ಸಮಾಧಾನ ಪಡಿಸಲು ಯತ್ನಿಸಿದರು. ಕೊನೆಗೆ ಯಾರ ಮಾತನ್ನು ಕೇಳದ ಸ್ಥಿತಿಯಲ್ಲಿದ್ದ ಅವರನ್ನು ಪೊಲೀಸರು ಕಾರ್ಯಕ್ರಮದಿಂದ ಹೊರಗೆ ಕರೆದುಕೊಂಡರು.