Tag: agriculture

  • ರೈತರ ಟ್ರ್ಯಾಕ್ಟರ್‌ಗಳಿಗೆ ಡೀಸೆಲ್ ಸಬ್ಸಿಡಿ, ಮಹಿಳೆಯರಿಗೆ ಪ್ರತ್ಯೇಕ ಕೃಷಿ ಪಂಡಿತ ಪ್ರಶಸ್ತಿ ನೀಡಲು ನಿರ್ಧಾರ: ಬಿ.ಸಿ.ಪಾಟೀಲ್

    ರೈತರ ಟ್ರ್ಯಾಕ್ಟರ್‌ಗಳಿಗೆ ಡೀಸೆಲ್ ಸಬ್ಸಿಡಿ, ಮಹಿಳೆಯರಿಗೆ ಪ್ರತ್ಯೇಕ ಕೃಷಿ ಪಂಡಿತ ಪ್ರಶಸ್ತಿ ನೀಡಲು ನಿರ್ಧಾರ: ಬಿ.ಸಿ.ಪಾಟೀಲ್

    ಬೆಂಗಳೂರು: ರೈತರ ಟ್ರ್ಯಾಕ್ಟರ್‌ಗಳಿಗೆ ಡೀಸೆಲ್ ಸಬ್ಸಿಡಿ ನೀಡಲಾಗುತ್ತಿದೆ. ಇದು ಕೂಡ ದೇಶದಲ್ಲೇ ಮೊದಲ ಬಾರಿಗೆ ಜಾರಿಯಾಗಿದೆ. ಮಹಿಳೆಯರಿಗೆ ಪ್ರತ್ಯೇಕ ಕೃಷಿ ಪಂಡಿತ ಪ್ರಶಸ್ತಿ ಕೊಡಲು ನಿರ್ಧರಿಸಲಾಗಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರು ತಿಳಿಸಿದರು.

    ಮಲ್ಲೇಶ್ವರಂ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಡೈರೆಕ್ಟರೇಟ್ ಆಫ್ ಸೆಕೆಂಡರಿ ಅಗ್ರಿಕಲ್ಚರ್ ರಚನೆ ಕುರಿತ ಪ್ರಧಾನಿ ನರೇಂದ್ರ ಮೋದಿಯವರ ಕನಸನ್ನು ಕರ್ನಾಟಕದಲ್ಲಿ ದೇಶದಲ್ಲೇ ಪ್ರಥಮ ಬಾರಿಗೆ ನನಸು ಮಾಡಲು ಹೊರಟಿದೆ. ರಾಜ್ಯದಲ್ಲಿ ಡೈರೆಕ್ಟರೇಟ್ ಆಫ್ ಸೆಕೆಂಡರಿ ಅಗ್ರಿಕಲ್ಚರ್ ಯೋಜನೆ ಮೂಲಕ ಕೃಷಿ ತೋಟಗಾರಿಕೆ, ಹೈನುಗಾರಿಕೆ, ಪ್ರಾಣಿಜನ್ಯ ಉತ್ಪನ್ನಗಳ ಸಂಸ್ಕರಣೆ, ಗುಡಿ ಕೈಗಾರಿಕೆ ಮೂಲಕ ರೈತರಿಗೆ ಹೆಚ್ಚಿನ ಆದಾಯ, ಉದ್ಯೋಗ ಹೆಚ್ಚಳ ಸಾಧ್ಯವಾಗಿದೆ. ಕೃಷಿ ಉಪ ಉತ್ಪನ್ನಗಳ ತಯಾರಿಕೆಯೂ ಸಾಧ್ಯವಾಗುತ್ತಿದೆ. ಆತ್ಮನಿರ್ಭರ ಯೋಜನೆಯಡಿ ಆಹಾರ ಸಂಸ್ಕರಣಾ ಘಟಕಗಳನ್ನು ರಚಿಸಲು ಸೆಕೆಂಡರಿ ಡೈರೆಕ್ಟರೇಟ್ ನೆರವಾಗಲಿದೆ. ಇದರಡಿ ಘಟಕಕ್ಕೆ ಪಡೆದ ಸಾಲಕ್ಕೆ ಶೇ.35ರಷ್ಟು ಸಬ್ಸಿಡಿ ಸಿಗಲಿದೆ. ಅಲ್ಲದೆ ರಾಜ್ಯ ಸರ್ಕಾರವು ಶೇ.15 ಸಬ್ಸಿಡಿ ನೀಡಲಿದ್ದು, ಒಟ್ಟು ಶೇ.50 ಸಬ್ಸಿಡಿ ಸಿಗಲಿದೆ ಎಂದು ನುಡಿದರು. ಇದನ್ನೂ ಓದಿ: ಗಳಿಗೆ ತೇರು ಎಳೆಯುವ ಮುನ್ನ ಕುರಾನ್ ಪಠಣ ಮಾಡುವ ಸಂಪ್ರದಾಯವಿದೆ: ಸಯ್ಯದ್ ಸಜ್ಜಾದ್ ಭಾಷಾ ಖಾದ್ರಿ

    ಯಡಿಯೂರಪ್ಪನವರು ಮುಖ್ಯಮಂತ್ರಿ ಆಗಿದ್ದಾಗ ರೈತರ ಮಕ್ಕಳಿಗೆ ಕೃಷಿ ಕಾಲೇಜು ಸೇರಲು ಶೇ.40ರಷ್ಟು ಮೀಸಲಾತಿ ಇತ್ತು. 2021ರಲ್ಲಿ ಶೇ.50ಕ್ಕೆ ಮೀಸಲಾತಿಯನ್ನು ಹೆಚ್ಚಿಸಲಾಗಿದೆ. ಕಳೆದ ವರ್ಷ 186 ಜನ ರೈತರ ಮಕ್ಕಳಿಗೆ ಹೆಚ್ಚುವರಿ ಸೀಟು ಲಭಿಸಿದೆ. ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾದ ಬಳಿಕ ರೈತ ವಿದ್ಯಾನಿಧಿ ಆರಂಭ ಮಾಡಿದ್ದು, ಇದರಿಂದ 7.13 ಲಕ್ಷ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ರೂ.261 ಕೋಟಿ ವಿದ್ಯಾರ್ಥಿವೇತನ ಸಿಕ್ಕಿದೆ. ಇದು ಕೂಡ ದೇಶದಲ್ಲೇ ಮೊದಲು. ಇದರಲ್ಲಿ ಜಾತಿ ಧರ್ಮದ ಭೇದ ಇಲ್ಲ. ಕರ್ನಾಟಕದಲ್ಲಿ ಒಟ್ಟು 742 ರೈತ ಸಂಪರ್ಕ ಕೇಂದ್ರಗಳಿದ್ದು, ಅದರಲ್ಲಿ 694 ಕೃಷಿ ಯಾಂತ್ರೀಕರಣ ಕೇಂದ್ರಗಳನ್ನು ಸ್ಥಾಪಿಸಿ 22 ಲಕ್ಷ ರೈತರು ಪ್ರಯೋಜನ ಪಡೆಯುತ್ತಿದ್ದಾರೆ. ಇಲ್ಲಿ ಕೃಷಿ ಯಂತ್ರೋಪಕರಣಗಳನ್ನು ರೈತರಿಗೆ ಬಾಡಿಗೆಗೆ ಕೊಡಲಾಗುತ್ತಿದೆ. ಟ್ರ್ಯಾಕ್ಟರ್ ಮತ್ತಿತರ ಉಪಕರಣ ಇಲ್ಲದ ರೈತರಿಗೆ ಇದರಿಂದ ಪ್ರಯೋಜನ ಸಿಗುತ್ತಿದೆ. ಕೃಷಿ ಯಂತ್ರೋಪಕರಣ ಬ್ಯಾಂಕ್ ಕೂಡ ಆರಂಭವಾಗಿದೆ ಎಂದರು.

    ರಾಜ್ಯದಲ್ಲಿ ರಸಗೊಬ್ಬರದ ಯಾವುದೇ ಕೊರತೆ ಇಲ್ಲ. 50 ಸಾವಿರ ಮೆಟ್ರಿಕ್ ಟನ್ ಗೊಬ್ಬರವನ್ನು ಈ ವರ್ಷಕ್ಕಾಗಿ ನಾವು ದಾಸ್ತಾನು ಮಾಡಿದ್ದೇವೆ. ಯೂರಿಯಾ 30 ಸಾವಿರ ಮೆಟ್ರಿಕ್‍ಟನ್ ಇದ್ದು, ಡಿಎಪಿ ಸಾಕಷ್ಟು ಪ್ರಮಾಣದಲ್ಲಿ ದಾಸ್ತಾನಿದೆ. ಸೂಕ್ಷ್ಮ ನೀರಾವರಿಗೂ ಆದ್ಯತೆ ಕೊಡುತ್ತಿದ್ದು, ನೆರವು ನೀಡಲಾಗುತ್ತಿದೆ. ರಿವಾರ್ಡ್ ರಿಜುವನೇಟಿಂಗ್ ವಾಟರ್‍ಶೆಡ್ ಫಾರ್ ಅಗ್ರಿಕಲ್ಚರ್ ಯೋಜನೆಯು ಕರ್ನಾಟಕಕ್ಕೆ ಸಿಕ್ಕಿದ್ದು, ರಾಜ್ಯದ 21 ಜಿಲ್ಲೆಗಳಲ್ಲಿ 600 ಕೋಟಿ ವೆಚ್ಚದಡಿ ಮುಂದಿನ 5 ವರ್ಷಗಳಲ್ಲಿ ಅನುಷ್ಠಾನಕ್ಕೆ ಬರಲಿದೆ. ನ್ಯೂ ಜನರೇಷನ್ ವಾಟರ್‍ಶೆಡ್ ಯೋಜನೆಯಡಿ 642 ಕೋಟಿ ಮೊತ್ತವನ್ನು 51 ತಾಲೂಕುಗಳಲ್ಲಿ ಖರ್ಚು ಮಾಡುತ್ತಿದ್ದೇವೆ. ಕಳಪೆ ರಸಗೊಬ್ಬರ, ಕಳಪೆ ಬಿತ್ತನೆ ಬೀಜ ಮಾರಾಟದ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತಿದ್ದೇವೆ. ಜಾಗೃತ ದಳವನ್ನು ಪೊಲೀಸ್ ಮಾದರಿಯಲ್ಲಿ ಜಾಗೃತಗೊಳಿಸಿ ಪರಿವರ್ತಿಸಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಮಸೀದಿಯಿಂದ ಧ್ವನಿವರ್ಧಕ ತೆಗೆಸುವುದು ಸರ್ಕಾರಕ್ಕೆ ನಾಚಿಕೆಗೇಡಿನ ಸಂಗತಿ: ಸಂಜಯ್‌ ನಿರುಪಮ್‌

    ಈ ಬಾರಿ ಬಳ್ಳಾರಿ ಜಿಲ್ಲೆಯ ಹಗರಿ ಹಾಗೂ ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ಕೃಷಿ ಕಾಲೇಜು ಆರಂಭವಾಗಲಿದೆ. 2020-21ರಲ್ಲಿ ರಾಜ್ಯವು ಕೋವಿಡ್ ಸಂಕಷ್ಟದಲ್ಲಿದ್ದರೂ 160.55 ಲಕ್ಷ ಮೆಟ್ರಿಕ್ ಟನ್ ಆಹಾರವನ್ನು ಉತ್ಪಾದಿಸಲಾಗಿದೆ. ಇದು ಹಿಂದಿನ ವರ್ಷದ ಉತ್ಪಾದನೆಯಲ್ಲಿ ಶೇ.10ರಷ್ಟು ಹೆಚ್ಚಳದ ಸಾಧನೆಯಾಗಿದೆ. ಕೃಷಿಕರು ಕೋವಿಡ್ ಇದ್ದರೂ ಹಿಂದೆ ಸರಿಯದೆ ಇದ್ದುದಕ್ಕೆ ಇದು ಉದಾಹರಣೆ ಎಂದು ಮಾಹಿತಿ ನೀಡಿದರು.

    ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಲ್ಲಿ ನಾವು 2019-20ನೇ ಸಾಲಿನಲ್ಲಿ 7.32 ಲಕ್ಷ ಫಲಾನುಭವಿಗಳಿಗೆ 843 ಕೋಟಿ, 20-21ರಲ್ಲಿ 4.60 ಲಕ್ಷ ರೈತರಿಗೆ 580 ಕೋಟಿ ಬೆಳೆ ವಿಮಾ ಪರಿಹಾರ ಕೊಡಲಾಗಿದೆ. 2021ರ ಮುಂಗಾರು ಹಂಗಾಮಿನಲ್ಲಿ 48 ಸಾವಿರಕ್ಕೂ ಹೆಚ್ಚು ಫಲಾನುಭವಿಗಳಿಗೆ ಬೆಳೆ ಹಾನಿಗೆ ಸಂಬಂಧಿಸಿ 25.15 ಕೋಟಿ ಬೆಳೆ ವಿಮೆ ಪರಿಹಾರವನ್ನು ಇತ್ಯರ್ಥ ಪಡಿಸಲಾಗಿದೆ ಎಂದು ವಿವರ ನೀಡಿದರು. ಇದನ್ನೂ ಓದಿ: ಪರ್ಸೆಂಟೇಜ್ ಕೊಡದಿದ್ದರೆ ಗುದ್ದಲಿ ಪೂಜೆನೂ ಮಾಡಲ್ಲ: ಸಿದ್ದಣ್ಣ ಶೇಗಜಿ

    ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ 2020-21 ಸಾಲಿನಲ್ಲಿ ರಾಜ್ಯದಿಂದ 49.18 ಲಕ್ಷ ರೈತರಿಗೆ 983.71 ಕೋಟಿ ಹಣವನ್ನು ನೇರ ಬ್ಯಾಂಕ್ ಖಾತೆಗೆ ವರ್ಗಾಯಿಸಲಾಗಿದೆ. 2021-22ರಲ್ಲಿ ಇದುವರೆಗೆ 50,035 ರೈತರಿಗೆ 1,977 ಕೋಟಿ ರೂ. ಆರ್ಥಿಕ ನೆರವು ನೀಡಲಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ಸೇರಿ 2020-21 ಸಾಲಿನಲ್ಲಿ 52 ಲಕ್ಷಕ್ಕೂ ಹೆಚ್ಚು ರೈತರಿಗೆ 3,113 ಕೋಟಿ ಹಾಗೂ 2021-22ರಲ್ಲಿ 53 ಲಕ್ಷಕ್ಕೂ ಹೆಚ್ಚು ರೈತರಿಗೆ 2,809 ಕೋಟಿ ಹಣವನ್ನು ಇದುವರೆಗೆ ನೀಡಿದೆ ಎಂದರು.

    2017ರವರೆಗೆ ಗ್ರಾಮಲೆಕ್ಕಿಗರು ಕಟ್ಟೆ ಮೇಲೆ ಕುಳಿತು ಬೆಳೆ ಸಮೀಕ್ಷೆ ನಡೆಸುತ್ತಿದ್ದರು. ಇದೀಗ ಜಿಪಿಎಸ್ ಅಳವಡಿಸಿ ಸಮೀಕ್ಷೆ ಮಾಡಲಾಗುತ್ತಿದೆ. 2020ರಲ್ಲಿ ನನ್ನ ಬೆಳೆ ನನ್ನ ಹಕ್ಕು ಕಾರ್ಯಕ್ರಮದ ಮೂಲಕ ರೈತರಿಂದಲೇ ಬೆಳೆ ಸಮೀಕ್ಷೆ ಮಾಡುತ್ತಿದ್ದು, 46 ಲಕ್ಷ ಪ್ಲಾಟ್‍ಗಳಲ್ಲಿ ರೈತರೇ ಬೆಳೆ ಸಮೀಕ್ಷೆ ಮಾಡಿದ್ದಾರೆ. ಇದರಿಂದ ಬೆಳೆ ಉತ್ಪಾದನೆ ಸಂಬಂಧ ಏರಿಳಿತದ ಸಮಸ್ಯೆ ಪರಿಹಾರವಾಗಿದ್ದು, ರೈತರಿಗೆ ಅನುಕೂಲವಾಗುತ್ತಿದೆ ಎಂದು ತಿಳಿಸಿದರು.

    ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷರಾದ ನಂಜುಂಡೇಗೌಡ ಮತ್ತು ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷರಾದ ಜಿ.ಮಂಜುನಾಥ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

  • ರೈತರು ಬಲಿಷ್ಠರಾದಷ್ಟು ನವ ಭಾರತವು ಹೆಚ್ಚು ಸಮೃದ್ಧವಾಗುತ್ತೆ: ಮೋದಿ

    ರೈತರು ಬಲಿಷ್ಠರಾದಷ್ಟು ನವ ಭಾರತವು ಹೆಚ್ಚು ಸಮೃದ್ಧವಾಗುತ್ತೆ: ಮೋದಿ

    ನವದೆಹಲಿ: ರೈತರು ಎಷ್ಟು ಬಲಿಷ್ಠರಾಗುತ್ತಾ ಹೋಗುತ್ತಾರೋ, ಹಾಗೇ ನವ ಭಾರತವು ಹೆಚ್ಚು ಸಮೃದ್ಧವಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದರು.

    ಪಿಎಂ ಕಿಸಾನ್ ಸಮ್ಮಾನ್ ನಿಧಿ ಮತ್ತು ಇತರೆ ಕೃಷಿ ಸಂಬಂಧಿತ ಯೋಜನೆಗಳ ಕುರಿತು ಟ್ವೀಟ್ ಮಾಡಿದ್ದಾರೆ. ಪಿಎಂ ಕಿಸಾನ್ ಸಮ್ಮಾನ್ ನಿಧಿ ಮತ್ತು ಇತರ ಕೃಷಿ ಸಂಬಂಧಿತ ಯೋಜನೆಗಳು ಕೋಟಿಗಟ್ಟಲೆ ಉಳುಮೆದಾರರಿಗೆ ಹೊಸ ಶಕ್ತಿಯನ್ನು ನೀಡುತ್ತಿವೆ ಎಂದು ಟ್ವೀಟ್‌ನಲ್ಲಿ ಮಾಹಿತಿ ನೀಡಿದರು.

    ಟ್ವೀಟ್‍ನಲ್ಲಿ ಏನಿದೆ?: ನಮ್ಮ ರೈತ ಸಹೋದರ ಸಹೋದರಿಯರ ಬಗ್ಗೆ ದೇಶ ಹೆಮ್ಮೆಪಡುತ್ತದೆ. ಅವರು ಬಲಿಷ್ಠರಾಗಿದಷ್ಟು, ನವ ಭಾರತವು ಹೆಚ್ಚು ಸಮೃದ್ಧವಾಗಿರುತ್ತದೆ. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಮತ್ತು ಕೃಷಿಗೆ ಸಂಬಂಧಿಸಿದ ಇತರ ಯೋಜನೆಗಳು ದೇಶದ ಕೋಟ್ಯಂತರ ರೈತರಿಗೆ ಹೊಸ ಶಕ್ತಿಯನ್ನು ನೀಡುತ್ತಿರುವುದು ನನಗೆ ಖುಷಿ ತಂದಿದೆ ಎಂದು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ದೇಶದ ಸಂವಿಧಾನ ಪಾಲನೆ ಮಾಡದವರಿಗೆ ಭಾರತದಲ್ಲಿ ಇರಲು ಹಕ್ಕಿಲ್ಲ: ಅಭಯ್ ಪಾಟೀಲ್

    11.3 ಕೋಟಿ ರೈತರ ಬ್ಯಾಂಕ್ ಖಾತೆಗಳಿಗೆ 1.82 ಲಕ್ಷ ಕೋಟಿ ರೂ.ವನ್ನು ನೇರವಾಗಿ ವರ್ಗಾಯಿಸಲಾಗಿದೆ ಎಂದು ಹೇಳುವ ಗ್ರಾಫಿಕ್ ಅನ್ನು ಪ್ರಧಾನಿ ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ದೇಶದ ವೈವಿಧ್ಯತೆಯನ್ನು ಗುರುತಿಸುವುದು ಸಂಘ ಪರಿವಾರದ ಅಜೆಂಡಾವಲ್ಲ : ಪಿಣರಾಯಿ

  • ಟೊಮೆಟೊ ಬೆಲೆ ಭಾರೀ ಕುಸಿತ – ಬೆಳೆಗಾರರಿಗೆ ಎದುರಾಗಿದೆ ಸಂಕಷ್ಟ

    ಟೊಮೆಟೊ ಬೆಲೆ ಭಾರೀ ಕುಸಿತ – ಬೆಳೆಗಾರರಿಗೆ ಎದುರಾಗಿದೆ ಸಂಕಷ್ಟ

    – 1 ರೂ. ಗಿಂತಲೂ ಕಡಿಮೆ ಬೆಲೆಗೆ 1 ಕೆಜಿ ಟೊಮೆಟೊ ಬಿಕರಿ
    – ಲಕ್ಷ ಲಕ್ಷ ಖರ್ಚು ಮಾಡಿ ಟೊಮೆಟೊ ಬೆಳೆದ ರೈತರಿಗೆ ಸಂಕಷ್ಟ
    – 15 ಕೆಜಿ ಯ ಟೊಮೆಟೊ ಬಾಕ್ಸ್ 10, 20, 30 ರೂ.ಗೆ ಬಿಕರಿ

    ಚಿಕ್ಕಬಳ್ಳಾಪುರ: ಒಂದು ಕಡೆ ಅಗತ್ಯ ವಸ್ತುಗಳ ಬೆಲೆ ದಿನದಿಂದ ದಿನಕ್ಕೆ ಗಗನಕ್ಕೇರುತ್ತಿದ್ದು ಜನಸಾಮಾನ್ಯರು ಹೈರಾಣಾಗುವಂತಾಗಿದೆ. ಮತ್ತೊಂದೆಡೆ ಲಕ್ಷ ಲಕ್ಷ ಖರ್ಚು ಮಾಡಿ ರೈತರು ಬೆಳೆದ ಬೆಳೆಗಳ ಬೆಲೆ ಪಾತಾಳಕ್ಕಿಳಿಯುವಂತಾಗಿದೆ.

    ಲಕ್ಷ ಲಕ್ಷ ಖರ್ಚು ಮಾಡಿ ರೈತ ಬೆಳೆದ ಟೊಮೆಟೊ ಬೆಲೆ ಈಗ ಪಾತಾಳಕ್ಕಿಳಿದಿದ್ದು, ಅನ್ನದಾತ ಅಕ್ಷರಶಃ ನಲುಗಿ ಹೋಗುವಂತಾಗಿದೆ. ಒಂದು ಕೆಜಿ ಟೊಮೆಟೊ 1 ರೂ.ಗೂ ಕಡಿಮೆ ದರಕ್ಕೆ ಬಿಕರಿಯಾಗುತ್ತಿದ್ದು, ರೈತ ಸಾಲದ ಶೂಲಕ್ಕೆ ಸಿಲುಕುವಂತಾಗಿ ದಿಕ್ಕು ತೋಚದಂತಾಗಿದ್ದಾನೆ. ಇದನ್ನೂ ಓದಿ: ಮಲ್ಲೇಶ್ವರಂ 18ನೇ ಅಡ್ಡರಸ್ತೆ ಮೈದಾನದಲ್ಲಿ ವಾಕಿಂಗ್ ಪಥ ನಿರ್ಮಾಣ ಇಲ್ಲ: ಅಶ್ವತ್ಥನಾರಾಯಣ

    ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಗರದ ಟೊಮೆಟೊ ಮಾರುಕಟ್ಟೆಗೆ ರೈತರೇನೋ ಹಗಲು ರಾತ್ರಿ ಎನ್ನದೇ ಕಷ್ಟಪಟ್ಟು ಬಂಪರ್ ಟೊಮೆಟೊ ಬೆಳೆದು ಲೋಡ್ ಗಟ್ಟಲೇ ಸಾವಿರಾರು ಟನ್ ಟೊಮೆಟೊವನ್ನು ಮಾರುಕಟ್ಟೆಗೆ ಹೊತ್ತು ತರುತ್ತಾರೆ. ಆದರೆ ಈಗ ಚಿಂತಾಮಣಿ ಟೊಮೆಟೊ ಮಾರುಕಟ್ಟೆಯಲ್ಲಿ ಟೊಮೆಟೊ ಖರೀದಿಸುವವರೇ ಕಡಿಮೆಯಾಗಿದ್ದಾರೆ.

    ಟೊಮೆಟೊ ಖರೀದಿ ಮಾಡಿದರೂ 15 ಕೆಜಿಯ ಬಾಕ್ಸ್ 10 ರೂಪಾಯಿ, 20 ರೂಪಾಯಿ, ಹೆಚ್ಚೆಂದರೆ 30 ರೂಪಾಯಿಗೆ ಬಿಕರಿಯಾಗುತ್ತಿದೆ. ಇದರಿಂದ 1 ಕೆಜಿ ಟೊಮೆಟೊ 1 ರೂ. ಗಿಂತಲೂ ಕಡಿಮೆ ಬೆಲೆಗೆ ಬಿಕರಿಯಾಗುತ್ತಿದ್ದು, ಟೊಮೆಟೊ ಬೆಳೆದ ರೈತರು ಬೀದಿಪಾಲಾಗುವಂತಾಗಿದೆ ಎಂದು ಟೊಮೆಟೊ ಬೆಳೆಗಾರ, ರೈತ ತಿಪ್ಪಣ್ಣ ತಮ್ಮ ಅಳಲು ತೋಡಿಕೊಂಡಿದ್ದಾರೆ.

    1 ಎಕೆರೆ ಪ್ರದೇಶದಲ್ಲಿ ಟೊಮೆಟೊ ಬೆಳೆಯಲು ಸರಿಸುಮಾರು 2 ಲಕ್ಷ ರೂ. ಖರ್ಚಾಗುತ್ತದೆ. ಆದರೆ ಈಗ ಮಾರುಕಟ್ಟೆಯಲ್ಲಿ ಟೊಮೆಟೊ ರೇಟ್ ನೋಡಿದರೆ ಅಸಲು ಅಲ್ಲ, ಕನಿಷ್ಠ ಟೊಮೆಟೊ ಕೀಳಲು ಕೂಲಿಯಾಳುಗಳಿಗೆ ಕೂಲಿ ಹಾಗೂ ಟ್ರಾನ್ಸ್ ಪೋರ್ಟ್ ವೆಚ್ಚ ಕೂಡಾ ವಾಪಾಸ್ ಬರುವುದಿಲ್ಲ. ಈ ಸಂದರ್ಭದಲ್ಲಿ ಏನು ಮಾಡುವುದು ಎಂದು ರೈತ ಮಂಜುನಾಥ್ ರೆಡ್ಡಿ ಆಳಲು ತೋಡಿಕೊಂಡಿದ್ದಾರೆ. ಇದನ್ನೂ ಓದಿ: ಖಾಕಿ ಶರ್ಟ್ ಧರಿಸಿ ಸ್ಟೇರಿಂಗ್ ಹಿಡಿದು ರಸ್ತೆಯಲ್ಲಿ ಸಂಚಾರ – ನೋವಿನ ಹಿಂದಿದೆ ಇಂಟರೆಸ್ಟಿಂಗ್ ಸ್ಟೋರಿ

    ಕಳೆದ 3 ತಿಂಗಳ ಹಿಂದೆ 15 ಕೆಜಿ ಟೊಮೆಟೊ ಬಾಕ್ಸ್ 2 ರಿಂದ 3 ಸಾವಿರ ರೂ.ಗೆ ಬಿಕರಿಯಾಗುತ್ತಿತ್ತು. ಹೀಗಾಗಿ ರೈತರು ಈ ಬಾರಿ ಹೆಚ್ಚಾಗಿ ಟೊಮೆಟೊ ಬೆಳೆದಿದ್ದಾರೆ. ಇನ್ನೂ ಟೊಮೆಟೊ ಆಮದು ಮಾಡಿಕೊಳ್ಳುವ ರಾಜ್ಯಗಳಲ್ಲೂ ಈ ಬಾರಿ ಟೊಮೆಟೊ ಬೆಳೆ ಬಂಪರ್ ಇಳುವರಿ ಬಂದಿದ್ದು, ಆಮದು ಕುಂಠಿತವಾಗಿ ಬೆಲೆ ಕುಸಿತ ಕಂಡಿದೆ.

  • ಒಂದೇ ಗಿಡದಲ್ಲಿ 1,200 ಟೊಮೆಟೋ ಬೆಳೆದು ಗಿನ್ನಿಸ್ ದಾಖಲೆ ಮಾಡಿದ

    ಒಂದೇ ಗಿಡದಲ್ಲಿ 1,200 ಟೊಮೆಟೋ ಬೆಳೆದು ಗಿನ್ನಿಸ್ ದಾಖಲೆ ಮಾಡಿದ

    ವಾಷಿಂಗ್ಟನ್: ಕೆಲವು ಹವ್ಯಾಸಗಳು ನಮ್ಮನ್ನು ಹಾಳು ಮಾಡುತ್ತವೆ ಕೆಲವು ಜೀವನ ಕಟ್ಟಿಕೊಡುತ್ತವೆ ಎನ್ನುವುದು ಗೊತ್ತಿರುವ ವಿಚಾರವಾಗಿದೆ. ಇಲ್ಲೊಬ್ಬ ವ್ಯಕ್ತಿ ಹವ್ಯಾಸ ಮತ್ತು ಸಂತೋಷಕ್ಕಾಗಿ ಕೃಷಿಯನ್ನು ಮಾಡಿ ಗಿನ್ನಿಸ್ ದಾಖಲೆಗೆ (World Record) ಪಾತ್ರನಾಗಿದ್ದಾನೆ.

    ಒಂದೇ ಗಿಡದಲ್ಲಿ 1,200 ಟೊಮೆಟೋ ಹಣ್ಣುಗಳನ್ನು ಬೆಳೆಸಿ ವ್ಯಕ್ತಿಯೊಬ್ಬ ಗಿನ್ನಿಸ್ ದಾಖಲೆ ನಿರ್ಮಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಇದನ್ನೂ ಓದಿ: ಚೀನಾದಲ್ಲಿ 2 ವರ್ಷಗಳ ಬಳಿಕ ಒಂದೇ ದಿನ 3 ಸಾವಿರಕ್ಕೂ ಹೆಚ್ಚು ಕೊರೊನಾ ಕೇಸ್

    ಯುಕೆಯ ನಿವಾಸಿ ಡೌಗ್ಲಾಶ್ ಸ್ಮಿತ್ ಮನೆಯ ಟೆರೇಸ್ ಮೇಲೆ ಟೊಮೆಟೋ ಗಿಡವನ್ನು ನೆಟ್ಟು ಒಂದೆ ಗಿಡದಿಂದ 2021ರಲ್ಲಿ 839 ಟೊಮೆಟೋ ಹಣ್ಣುಗಳನ್ನು ಬೆಳೆಸಿ ದಾಖಲೆ ನಿರ್ಮಿಸಿದ್ದರು. ಇದೀಗ ಅದೇ ವ್ಯಕ್ತಿ ಒಂದೇ ಕಾಂಡದ ಗಿಡದಿಂದ 1,269 ಟೊಮೆಟೋ ಹಣ್ಣುಗಳನ್ನು ಬೆಳೆಸುವ ಮೂಲಕ ಹೊಸ ದಾಖಲೆ ನಿರ್ಮಿಸಿದ್ದಾರೆ. ಸ್ಮಿತ್ ಈ ಹಿಂದೆ ಮನೆಯ ಹಿತ್ತಲಿನಲ್ಲಿ 21 ಅಡಿ ಎತ್ತರದ ಸೂರ್ಯಕಾಂತಿ ಗಿಡವನ್ನು ಬೆಳೆದು ದಾಖಲೆ ನಿರ್ಮಿಸಿದ್ದರು. ಇದೀಗ ಒಂದೇ ಗಿಡದಲ್ಲಿ 1269 ಟೊಮೆಟೋ ಹಣ್ಣುಗಳನ್ನು ಬೆಳೆದು ಗಿನ್ನಿಸ್ ದಾಖಲೆ ನಿರ್ಮಿಸಿದ್ದಾರೆ.

    2021ರ ಸೆಪ್ಟೆಂಬರ್‌ನಲ್ಲಿ  ಟೊಮೆಟೋವನ್ನು ನೆಟ್ಟು ಬೆಳೆಸಲು ಆರಂಭಿಸಿದ್ದರು. ಇದೀಗ 1,200ಕ್ಕೂ ಹೆಚ್ಚು ಟೊಮೆಟೊ ಹಣ್ಣುಗಳನ್ನು ಬೆಳೆಸಿದ್ದಾರೆ. 2022 ಮಾರ್ಚ್ 9 ರಂದು ಗಿನ್ನಿಸ್ ವಲ್ಡ್ ರೆಕಾರ್ಡ್ ಅಧಿಕೃತವಾಗಿ ಹೊಸ ದಾಖಲೆ ನಿರ್ಮಿಸಿರುವುದರ ಕುರಿತು ಖಚಿತಪಡಿಸಿದೆ. ಸ್ಮಿತ್ ಟ್ವಿಟ್ಟರ್‌ನಲ್ಲಿ ಈ ಬಗ್ಗೆ ಹಂಚಿಕೊಂಡಿದ್ದು, ಸೋಶಿಯಲ್ ಮೀಡಿಯಾದಲ್ಲಿ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ.

  • ಇಸ್ರೇಲ್ ಮಾದರಿ ಕೃಷಿಯಿಂದ ಕೃಷಿ ಕ್ಷೇತ್ರದಲ್ಲಿ ಹೆಚ್ಚಿನ ಲಾಭ: ಶೋಭಾ ಕರಂದ್ಲಾಜೆ

    ಇಸ್ರೇಲ್ ಮಾದರಿ ಕೃಷಿಯಿಂದ ಕೃಷಿ ಕ್ಷೇತ್ರದಲ್ಲಿ ಹೆಚ್ಚಿನ ಲಾಭ: ಶೋಭಾ ಕರಂದ್ಲಾಜೆ

    ಮಂಗಳೂರು: ಇಸ್ರೇಲ್ ಮಾದರಿ ಕೃಷಿಗೆ ಸರ್ಕಾರ ಹೆಚ್ಚಿನ ಒತ್ತು ನೀಡುತ್ತಿದೆ. ಇಸ್ರೇಲ್ ಮಾದರಿ ಕೃಷಿಯಿಂದ ಕೃಷಿ ಕ್ಷೇತ್ರದಲ್ಲಿ ಹೆಚ್ಚಿನ ಲಾಭವಿದೆ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಇಲಾಖೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅಭಿಪ್ರಾಯಪಟ್ಟಿದ್ದಾರೆ.

    ರಾಜ್ಯಮಟ್ಟದ ಕೃಷಿ ಸಮ್ಮೇಳನ ಮಂಗಳೂರಿನ ಮುಲ್ಕಿ ಸಂಜೆ ಶ್ರೀರಾಮಕೃಷ್ಣ ಪೂಂಜಾ ವೇದಿಕೆಯಲ್ಲಿ ಕೃಷಿ ಸಿರಿ-2022 ಉದ್ಘಾಟನೆ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಜರುಗಿತು. ಸಭಾ ಕಾರ್ಯಕ್ರಮವನ್ನು ತುಳಸಿ ಗಿಡಕ್ಕೆ ನೀರೆರೆದು ತುಳುನಾಡಿನ ಸಾಂಪ್ರದಾಯಿಕ ಬಲಿಂದ್ರ ಕಂಬಕ್ಕೆ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು. ಇದನ್ನೂ ಓದಿ: ತಂತ್ರಜ್ಞಾನ ಈಗ ಭದ್ರತಾ ವ್ಯವಸ್ಥೆಯಲ್ಲಿ ಸಂಭಾವ್ಯ ಅಸ್ತ್ರವಾಗಿದೆ: ಮೋದಿ

    ಕೃಷಿ ಮೇಳ ಉದ್ಘಾಟಿಸಿ ಮಾತಾಡಿದ ಶೋಭಾ ಕರಂದ್ಲಾಜೆ, ಒಂದು ಕಾಲದಲ್ಲಿ ದಕ್ಷಿಣ ಕನ್ನಡ ಕೃಷಿಗೆ ಹೆಸರುವಾಸಿಯಾಗಿತ್ತು. ನಮ್ಮ ಆಹಾರ, ತರಕಾರಿಯನ್ನು ನಾವೇ ಉತ್ಪಾದನೆ ಮಾಡುತ್ತಿದ್ದೆವು. ಆದರೆ ಈಗ ತಿರುಗಿ ನೋಡಿದರೆ ನಾವು ಒಂದು ಹಿಡಿ ಭತ್ತಕ್ಕಾಗಿ ಬೇರೆ ಜಿಲ್ಲೆಯನ್ನು ಅವಲಂಬನೆ ಮಾಡಿದರೆ ತರಕಾರಿಗಾಗಿ ಘಟ್ಟವನ್ನು ಆಶ್ರಯಿಸಿದ್ದೇವೆ. ನಮ್ಮ ಭತ್ತದ ಗದ್ದೆಯನ್ನು ಹಡಿಲು ಬಿಟ್ಟು ಕೃಷಿ ಲಾಭವಿಲ್ಲ ಎಂದು ಬೇರೆ ಉದ್ಯೋಗವನ್ನು ಅರಸಿಕೊಂಡೆವು. ಕಳೆದ ಎರಡು ವರ್ಷಗಳ ಕೊರೊನಾ ಹಾವಳಿ ಹಿನ್ನೆಲೆಯಲ್ಲಿ ಊರಿಗೆ ವಾಪಾಸ್ ಆದ ಅನೇಕ ಕೃಷಿಕರು ಮತ್ತೆ ಹಡಿಲು ಗದ್ದೆಯಲ್ಲಿ ಕೃಷಿ ಚಟುವಟಿಕೆ ಕೈಗೊಂಡೆವು. ಇದು ಖುಷಿಯ ವಿಚಾರ. ಯುವಕರು ಮತ್ತೆ ಕೃಷಿಯತ್ತ ನೋಡುತ್ತಿರುವ ಈ ವೇಳೆಯಲ್ಲಿ ಯುವಕರಲ್ಲಿ ಕೃಷಿ ಮೇಳದಂತಹ ಕಲ್ಪನೆ ಹುಟ್ಟುವ ಮೂಲಕ ಇಂದಿಲ್ಲಿ ಸಾಕಾರಗೊಳ್ಳುತ್ತಿದೆ ಎಂದರು. ಇದನ್ನೂ ಓದಿ: ಅಷ್ಟು ದೂರದಿಂದ ವಿದ್ಯಾರ್ಥಿಗಳನ್ನು ಕರೆದುಕೊಂಡು ಬಂದರೂ ಸರ್ಕಾರ ಏನೂ ಮಾಡಿಲ್ಲ ಅಂತಿದ್ದಾರೆ: ಸೂರ್ಯ ಅಸಮಾಧಾನ

    ನರೇಂದ್ರ ಮೋದಿಯವರು ಪ್ರಧಾನಿಯಾದ ಬಳಿಕ ದೇಶದಲ್ಲಿ ರೈತರು ಸ್ವಾವಲಂಬಿಯಾಗಬೇಕು. ರೈತವರ್ಗ ಮತ್ತೆ ಕೃಷಿಯಲ್ಲಿ ತೊಡಗಿಕೊಳ್ಳಬೇಕು ಎಂದು ಬಯಸಿದರು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೃಷಿಕರು ಹೆಚ್ಚಿನ ಕೃಷಿ ಭೂಮಿಯನ್ನು ಹೊಂದಿಲ್ಲ. ಇದಕ್ಕಾಗಿ ಬೀಜ ಮತ್ತು ಗೊಬ್ಬರ ಖರೀದಿಗೆಂದು ವಾರ್ಷಿಕ 6 ಸಾವಿರ ರೂ. ಅನ್ನು ರೈತರ ಖಾತೆಗೆ ಜಮಾ ಮಾಡಲು ಕೇಂದ್ರ ಸರ್ಕಾರ ಯೋಜನೆ ರೂಪಿಸಿದೆ. ಇಸ್ರೇಲ್ ಮಾದರಿ ಕೃಷಿಗೆ ಸರ್ಕಾರ ಹೆಚ್ಚಿನ ಒತ್ತು ನೀಡುತ್ತಿದೆ. ಪಾಲಿ ಹೌಸ್, ಗ್ರೀನ್ ಹೌಸ್ ಫಾರ್ಮಿಂಗ್ ಮೂಲಕ ಕಡಿಮೆ ಕೀಟನಾಶಕ ಬಳಸಿ ಕೃಷಿ ಚಟುವಟಿಕೆಯಲ್ಲಿ ತೊಡಗಿಕೊಳ್ಳಬಹುದು. ಸಾವಯವ ಕೃಷಿಗೆ ಇಂದು ಪ್ರಪಂಚದಲ್ಲಿ ಬೇಡಿಕೆ ಹೆಚ್ಚಾಗಿದ್ದು, ಮಣಿಪುರ, ನಾಗಾಲ್ಯಾಂಡ್, ತ್ರಿಪುರ ಮತ್ತಿತರ ಸಣ್ಣಪುಟ್ಟ ರಾಜ್ಯಗಳಲ್ಲಿ ಸಾವಯವ ಕೃಷಿಗೆ ಹೆಚ್ಚಿನ ಮಹತ್ವವಿದ್ದು ಅಲ್ಲಿನ ರೈತರ ಬೆಳೆಗಳನ್ನು ಖರೀದಿ ಮಾಡಲು ಅಮೆರಿಕ ಮತ್ತಿತರ ದೇಶಗಳಿಂದ ಕಂಪೆನಿಗಳು ಬರುತ್ತವೆ. ಇಂತಹ ಲಾಭದಾಯಕ ಕೃಷಿ ಕುರಿತು ನಾವಿಂದು ಚಿಂತಿಸಬೇಕಿದೆ ಎಂದು ಮಾಹಿತಿ ಹಂಚಿಕೊಂಡರು.

    ಈ ಹಿಂದೆ 2013-14ರಲ್ಲಿ ದೇಶದಲ್ಲಿ 70% ಜನ ಕೃಷಿ ಆಧರಿಸಿದ್ದರೂ ಅಂದಿನ ಸರ್ಕಾರ ಬಜೆಟ್‍ನಲ್ಲಿ ಕೃಷಿಗಾಗಿ ಇಟ್ಟಿದ್ದು 23,000 ಕೋಟಿ ರೂ. ಮಾತ್ರ. ಈ ವರ್ಷ ಬಜೆಟ್‍ನಲ್ಲಿ ಕೃಷಿಗಾಗಿ 1.33 ಸಾವಿರ ಕೋಟಿ ರೂಪಾಯಿ ಮೀಸಲಿಟ್ಟಿದೆ. ಐಟಿ ಕಲಿತವರಿಗೆ ಕೃಷಿ ಮಾಡಿ ಎಂದರೆ ಮಾಡಲ್ಲ ಅದರ ಬದಲು ಕೃಷಿ ಎಕ್ಸ್‌ಪೋರ್ಟ್‌ ಕೃಷಿ ಮಾರ್ಕೆಟ್, ಕೃಷಿ ಬ್ಯುಸಿನೆಸ್, ಫುಡ್ ಪ್ರೋಸೆಸಿಂಗ್ ಇತ್ಯಾದಿ ಮಾಡಲು ಪ್ರೆರೇಪಿಸಿ. ಯುವಜನತೆ ಇಂತಹ ಉದ್ಯಮಗಳಲ್ಲಿ ತೊಡಗಿಕೊಂಡರೆ ದೇಶದ ಕೃಷಿ ಸ್ವಾವಲಂಬಿಯಾಗಲು ಸಾಧ್ಯವಿದೆ. ಕೊರೊನಾದಿಂದಾಗಿ ಇಂದು ದೇಶದ ಕೃಷಿ ಎಕ್ಸ್‌ಪೋರ್ಟ್‌ನಲ್ಲಿ 9 ನೇ ಸ್ಥಾನದಲ್ಲಿದೆ. ನಾವು ಈ ಎಲ್ಲವನ್ನೂ ಪ್ರೇರೇಪಣೆಯಾಗಿ ತೆಗೆದುಕೊಂಡು ಮುಂದಿನ ದಿನಗಳಲ್ಲಿ ಕೃಷಿ ಚಟುವಟಿಕೆಯನ್ನು ಹೆಚ್ಚಿಸುವ ಮೂಲಕ ದೇಶವನ್ನು ಕೃಷಿಯಲ್ಲಿ ಸ್ವಾವಲಂಬಿಯನ್ನಾಗಿ ಮಾಡಲು ಸಹಕರಿಸಬೇಕು ಎಂದು ಆಶಯ ವ್ಯಕ್ತಪಡಿಸಿದರು. ಇದನ್ನೂ ಓದಿ: ಉಕ್ರೇನ್‍ನಿಂದ ಬಂದಿರೋದು ಮೋದಿ ಮಗ, ನನ್ನ ಮಗನಲ್ಲ: ವಿದ್ಯಾರ್ಥಿ ತಂದೆ ಕಣ್ಣೀರು

    ಬಳಿಕ ಮಾತಾಡಿದ ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಉಳೆಪಾಡಿ ಗುತ್ತು, ದೇಶದಲ್ಲಿ 65-70 ಶೇ. ಜನರು ಇಂದಿಗೂ ಕೃಷಿಯನ್ನು ಅವಲಂಬಿಸಿದ್ದಾರೆ. ದೇಶದಲ್ಲಿ ಕೊರೊನಾ ಲಾಕ್‍ಡೌನ್ ಸಂದರ್ಭದಲ್ಲಿ ಎಲ್ಲಾ ಉದ್ಯಮಗಳು ನಿಂತರೂ ಕೃಷಿಕ ಮಾತ್ರ ತನ್ನ ಕೃಷಿಭೂಮಿಯಲ್ಲಿ ನಿರಂತರ ದುಡಿದು ನಮ್ಮ ಹಸಿವನ್ನು ನೀಗಿಸಿದ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚಿನ ರೈತರು ಒಂದೆರಡು ಎಕರೆ ಮಾತ್ರ ಕೃಷಿಭೂಮಿ ಹೊಂದಿದ್ದಾರೆ. ಇಸ್ರೇಲ್ ನಂತಹ ಪುಟ್ಟ ರಾಷ್ಟ್ರ ಇಂದು ಕೃಷಿಯಲ್ಲಿ ಪ್ರಗತಿ ಸಾಧಿಸಿದ್ದರೆ ನಮಗೆ ಏಕೆ ಸಾಧ್ಯವಾಗುವುದಿಲ್ಲ. ಕೃಷಿ ಯಾವತ್ತೂ ನಷ್ಟದ ಉದ್ಯಮವಲ್ಲ. ಆದರೆ ನಮಗಿರುವ ಸಣ್ಣ ಕೃಷಿ ಭೂಮಿಯೇ ನಮ್ಮ ಸಮಸ್ಯೆಯಾಗಿದೆ. ಆದರೆ ನಾವು ಎರಡು ತಿಂಗಳು ಕೆಲಸ ಮಾಡಿದರೆ ವರ್ಷದ 12 ತಿಂಗಳು ಊಟ ಮಾಡುತ್ತೇವೆ. ಇದು ಕೃಷಿ ಕ್ಷೇತ್ರದ ಸಾಧನೆ ಎಂದರು.

    ವೇದಿಕೆಯಲ್ಲಿ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಹಾಗೂ ಅಮೈ ಮಹಾಲಿಂಗ ನಾಯ್ಕ ಅವರನ್ನು ಸನ್ಮಾನಿಸಲಾಯಿತು. ಕೃಷಿ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಅಬೂಬಕರ್ ಸಿದ್ದಿಕ್ ಹೈನುಗಾರಿಕೆ, ರಘುರಾಮ ಕುಲಾಲ್ ಗುಡಿಕೈಗಾರಿಕೆ, ವಿಶ್ವೇಶ್ವರ ಸಜ್ಜನ ಬಳ್ಳಾರಿ, ನಿತ್ಯಾನಂದ ಕರ್ಕೇರ ಉಡುಪಿ ಮೀನು ಕೃಷಿ, ಶ್ರೀನಿವಾಸ್ ಗಾಣಿಗ ಅವರನ್ನು ಅತಿಥಿಗಳು ಶಾಲು ಹೊದಿಸಿ ಪೇಟಾ ತೊಡಿಸಿ ಸ್ಮರಣಿಕೆ ನೀಡಿ ಗೌರವಿಸಿದರು. ಕೃಷಿ ಇಲಾಖೆಯ ಎಸ್‍ಎಂಎಎಂ ಯೋಜನೆಯ 8 ಲಕ್ಷ ಸಹಾಯ ಧನದಿಂದ ವಿನಯ ಕೃಷಿ ಬೆಳೆಗಾರರ ಸಂಘಕ್ಕೆ ಟ್ರ್ಯಾಕ್ಟರ್ ವಿತರಣೆ ಮಾಡಲಾಯಿತು.

    ವೇದಿಕೆಯಲ್ಲಿ ಮಂಗಳೂರು ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್, ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಸೀತಾ, ಮೂಲ್ಕಿ ಮೂಡಬಿದ್ರೆ ಕ್ಷೇತ್ರ ಶಾಸಕ ಉಮಾನಾಥ್ ಕೋಟ್ಯಾನ್, ಬಂಟ್ವಾಳ ಕ್ಷೇತ್ರ ಶಾಸಕ ರಾಜೇಶ್ ನಾಯಕ್ ಉಳೆಪಾಡಿಗುತ್ತು, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಶ್ರೀನಿವಾಸ್ ವಿಶ್ವವಿದ್ಯಾನಿಲಯ ಮಂಗಳೂರು ಇದರ ಉಪಕುಲಪತಿ ಪಿ. ರಮಣ್ ಐತಾಳ್, ಕೃಷಿ ಸಿರಿ ಸಂಚಾಲಕ ಡಾ. ಅಣ್ಣಯ್ಯ ಕುಲಾಲ್ ಉಳ್ತೂರು, ಪಟ್ಲ ಫೌಂಡೇಶನ್ ಇದರ ಅಧ್ಯಕ್ಷರಾದ ಪಟ್ಲ ಸತೀಶ್ ಶೆಟ್ಟಿ, ಮಂಗಳೂರು ವಿಶ್ವವಿದ್ಯಾನಿಲಯ ಉಪಕುಲಪತಿ ಪಿ.ಎಸ್ ಯಡಪಡಿತ್ತಾಯ, ಉದ್ಯಮಿ ಮನೋಹರ್ ಶೆಟ್ಟಿ, ಕೃಷಿ ಸಿರಿ ಸಂಚಾಲಕ ಕೃಷ್ಣ ಶೆಟ್ಟಿ ತಾರೆಮಾರ್, ಕೃಷಿ ಸಿರಿ ಕಾರ್ಯದರ್ಶಿ ಸಂತೋಷ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

    ಕೃಷಿ ಮೇಳ ಆಯೋಜನೆಯ ಹಿನ್ನೆಲೆ, ರೂಪುರೇಷೆ ಕುರಿತು ಕೃಷಿ ಸಿರಿಯ ಪ್ರಧಾನ ಕಾರ್ಯದರ್ಶಿ ಸಂತೋಷ್ ಶೆಟ್ಟಿ ಪ್ರಸ್ತಾವಿಕ ಮಾತನ್ನಾಡಿದರು. ಕೃಷಿ ಸಿರಿ ಸಂಚಾಲಕ ಪ್ರಶಾಂತ್ ಪೈ ಅತಿಥಿಗಳನ್ನು ಸ್ವಾಗತಿಸಿದರು. ದಾಮೋದರ ಶರ್ಮಾ ಕಾರ್ಯಕ್ರಮ ನಿರೂಪಿಸಿದರು.

  • ರೈತರಿಗೆ ನಕಲಿ ಬಿತ್ತನೆ ಬೀಜ, ಗೊಬ್ಬರ ಕೊಟ್ಟ ಕಂಪನಿ ಮೇಲೆ ಕಠಿಣ ಕ್ರಮ: ಈಶ್ವರಪ್ಪ

    ರೈತರಿಗೆ ನಕಲಿ ಬಿತ್ತನೆ ಬೀಜ, ಗೊಬ್ಬರ ಕೊಟ್ಟ ಕಂಪನಿ ಮೇಲೆ ಕಠಿಣ ಕ್ರಮ: ಈಶ್ವರಪ್ಪ

    ಬೆಂಗಳೂರು: ನಕಲಿ ಬಿತ್ತನೆ ಬೀಜ ಮತ್ತು ನಕಲಿ ಗೊಬ್ಬರ ಮಾರಾಟ ಮಾಡುವ ಕಂಪನಿ ಹಾಗೂ ಮಾಲೀಕರು ಎಷ್ಟೇ ಪ್ರಭಾವಿಗಳಾಗಿದ್ದರೂ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಎಚ್ಚರಿಕೆ ನೀಡಿದರು.

    ಬಿಜೆಪಿ ಸದಸ್ಯ ರವಿಕುಮಾರ್ ಪ್ರಶ್ನೆಗೆ ಕೃಷಿ ಸಚಿವರ ಪರವಾಗಿ ಉತ್ತರ ನೀಡಿದ ಈಶ್ವರಪ್ಪ, ರೈತರಿಗೆ ಮೋಸ ಮಾಡುವ ಕಂಪನಿಗಳನ್ನು ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂದು ಎಚ್ಚರಿಕೆ ಕೊಟ್ಟರು.

    ಬಿಜೆಪಿ ಸದಸ್ಯ ರವಿಕುಮಾರ್, ರಾಜ್ಯದಲ್ಲಿ ನಕಲಿ ಬೀಜಗಳ ಹಾವಳಿ ಹೆಚ್ಚಾಗಿದೆ. ಒಂದೇ ವರ್ಷದಲ್ಲಿ 8,500 ಕ್ವಿಂಟಾಲ್ ನಕಲಿ ಬೀಜ ಸಿಕ್ಕಿದೆ. ಕೃಷಿ ಇಲಾಖೆಯೇ ದಾಳಿ ಮಾಡಿ ಸುಮಾರು 500 ಕ್ವಿಂಟಾಲ್ ವಶ ಮಾಡಿಕೊಂಡಿದೆ. 12-15 ಕೋಟಿ ಮೊತ್ತ ಇದರ ಬೆಲೆಯಾಗಿದೆ. ನಕಲಿ ಹಾಗೂ ಅಕ್ರಮ ಬೀಜದಿಂದ ರೈತರಿಗೆ ಅನ್ಯಾಯವಾಗುತ್ತಿದೆ ಎಂದರು. ಇದನ್ನೂ ಓದಿ: ಓಬಿಸಿ ಮೀಸಲಾತಿ ಕೈ ಬಿಟ್ಟು ತಾಲೂಕು, ಜಿಲ್ಲಾ ಪಂಚಾಯತಿ ಚುನಾವಣೆ ನಡೆಸುವುದಿಲ್ಲ: ಈಶ್ವರಪ್ಪ

    ಇಷ್ಟೆಲ್ಲಾ ಆದರೂ ಕೇವಲ 10 ಕೇಸ್‌ಗಳು ಮಾತ್ರ ಈ ವರ್ಷ ದಾಖಲಾಗಿವೆ. ಇದು ಸರಿಯಲ್ಲ. ಲೈಸೆನ್ಸ್ ಇಲ್ಲದೆ ಕಂಪನಿಗಳು ನಕಲಿ ಬೀಜ ಮಾರಾಟ ಮಾಡುತ್ತಿವೆ. ಓದಲು ಬಾರದ ರೈತರಿಗೆ ಕಂಪನಿಗಳು ಅನ್ಯಾಯ ಮಾಡುತ್ತಿವೆ. ಈ ಬಗ್ಗೆ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ರವಿಕುಮಾರ್ ಒತ್ತಾಯ ಮಾಡಿದರು.

    ಇದಕ್ಕೆ ಉತ್ತರ ನೀಡಿದ ಸಚಿವ ಈಶ್ವರಪ್ಪ, ನಕಲಿ ಬಿತ್ತನೆ ಬೀಜ ಮಾರಾಟ ಮಾಡುವುದು ಆಘಾತಕಾರಿ ವಿಷಯ. ರೈತರಿಗೆ ಮೋಸ ಮಾಡುವ ಯಾವುದೇ ಕಂಪನಿಗಳನ್ನು ಬಿಡುವುದಿಲ್ಲ. ಬಿತ್ತನೆ ಬೀಜ ಆಗಲಿ ಅಥವಾ ಗೊಬ್ಬರದಲ್ಲಿಯೇ ಆಗಲಿ ಯಾರೇ ಮೋಸ ಮಾಡಿದರೂ ಅಂತಹ ಕಂಪನಿ ಮೇಲೆ ಕ್ರಮ ತೆಗೆದುಕೊಳ್ಳುತ್ತೇವೆ. ಎಷ್ಟೇ ಪ್ರಭಾವಿಗಳಾದರೂ ಯಾರನ್ನೂ ರಕ್ಷಣೆ ಮಾಡುವುದಿಲ್ಲ ಎಂದು ಭರವಸೆ ನೀಡಿದರು. ಇದನ್ನೂ ಓದಿ: ಪಂಚರಾಜ್ಯಗಳ ಸೋಲು ಕಾಂಗ್ರೆಸ್‍ಗೆ ಬದಲಾವಣೆ ಆಗೋದಕ್ಕೆ ಪಾಠ: ಸತೀಶ್ ಜಾರಕಿಹೊಳಿ

    ಈ ಬಗ್ಗೆ ಶೀಘ್ರವೇ ಕೃಷಿ ಇಲಾಖೆ, ಸಚಿವರ ಜೊತೆ ಪರಿಷತ್ ಸದಸ್ಯರ ಸಭೆ ಮಾಡಿ ಅಂತಹ ಕಂಪನಿಗಳ ಮೇಲೆ ಕಾನೂನು ಕ್ರಮ ತೆಗೆದುಕೊಳ್ಳುವ ಬಗ್ಗೆ ನಿರ್ಧಾರ ಮಾಡುತ್ತೇವೆ ಎಂದು ತಿಳಿಸಿದರು.

  • ಮಾರ್ಚ್ ಅಂತ್ಯಕ್ಕೆ 100 ಕೃಷಿ ಸಂಜೀವಿನಿ ವಾಹನಗಳು ಲೋಕಾರ್ಪಣೆ: ಬಿ.ಸಿ ಪಾಟೀಲ್

    ಮಾರ್ಚ್ ಅಂತ್ಯಕ್ಕೆ 100 ಕೃಷಿ ಸಂಜೀವಿನಿ ವಾಹನಗಳು ಲೋಕಾರ್ಪಣೆ: ಬಿ.ಸಿ ಪಾಟೀಲ್

    ಬೆಂಗಳೂರು: ರೈತರಿಗೆ ಸಹಾಯ ಮಾಡುವ ನಿಟ್ಟಿನಲ್ಲಿ ಅಂಬುಲೆನ್ಸ್ ಮಾದರಿಯ 100 ಕೃಷಿ ಸಂಜೀವಿನಿ ವಾಹನಗಳು ಮಾರ್ಚ್ ಅಂತ್ಯಕ್ಕೆ ಲೋಕಾರ್ಪಣೆಗೊಳ್ಳಲಿವೆ ಎಂದು ಕೃಷಿ ಸಚಿವ ಬಿ.ಸಿ ಪಾಟೀಲ್ ತಿಳಿಸಿದ್ದಾರೆ.

    ವಿಧಾನ ಪರಿಷತ್ ಕಲಾಪದಲ್ಲಿ ನಿಯಮ 330ರ ಅಡಿ ಜೆಡಿಎಸ್ ಸದಸ್ಯ ಗೋವಿಂದ್ ರಾಜು ಪ್ರಸ್ತಾಪ ಮಾಡಿದ ವಿಷಯಕ್ಕೆ ಪ್ರತಿಕ್ರಿಯೆ ನೀಡಿದ ಬಿ.ಸಿ ಪಾಟೀಲ್, ಮಾರ್ಚ್ ಅಂತ್ಯಕ್ಕೆ 100 ಕೃಷಿ ಸಂಜೀವಿನಿ ವಾಹನಗಳನ್ನು ಲೋಕಾರ್ಪಣೆ ಮಾಡುವ ಬಗ್ಗೆ ತಿಳಿಸಿದರು.

    ಮಣ್ಣಿನ ಗುಣಮಟ್ಟ, ಕೀಟ ನಾಶಕಗಳಿಂದಾಗುವ ಸಮಸ್ಯೆ ಸೇರಿದಂತೆ ಅನೇಕ ಇತರ ಸಮಸ್ಯೆಗಳನ್ನು ರೈತ ಎದುರಿಸುತ್ತಿದ್ದಾನೆ. ಕೃಷಿ ಸಂಜೀವಿನಿ ಸಕಾಲದಲ್ಲಿ ಬೆಳೆಯ ಎಲ್ಲಾ ಹಂತಗಳಲ್ಲಿ ಸರ್ವೇಕ್ಷಣೆಯನ್ನು ಕೈಗೊಂಡು ಕಂಡುಬಂದಿರುವ ಕೀಟ, ರೋಗ, ಕಳೆಗಳ ನಿರ್ವಹಣಾ ಮಾರ್ಗೋಪಾಯಗಳನ್ನು ಆತನ ಜಮೀನಿಗೆ ಹೋಗಿ ಮಣ್ಣಿನ ಪರೀಕ್ಷೆ ನಡೆಸಿ ಸ್ಥಳದಲ್ಲಿಯೇ ಸಮಸ್ಯೆಗೆ ಪರಿಹಾರ ನೀಡುವ ಯೋಜನೆ ಇದಾಗಿದೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ಬಿಜೆಪಿಯದ್ದು ಸಬ್ ಕಾ ವಿಕಾಸ್ ನಹೀ ಹೇ, ಸಬ್ ಕಾ ಸರ್ವ ನಾಶ್ ಹೇ: ಸಿದ್ದರಾಮಯ್ಯ

    ಅಂಬುಲೆನ್ಸ್ ಮಾದರಿ ವಾಹನ ಇದಾಗಿದ್ದು, ಒಬ್ಬ ಕೃಷಿ ಡಿಪ್ಲೋಮಾ ಪದವೀಧರ ಇದರಲ್ಲಿ ಕಾರ್ಯ ನಿರ್ವಹಿಸುತ್ತಾರೆ. ಸ್ಥಳದಲ್ಲಿ ರೈತರ ಸಮಸ್ಯೆಗೆ ಪರಿಹಾರ ನೀಡುತ್ತಾರೆ ಎಂದು ತಿಳಿಸಿದರು. ಇದನ್ನೂ ಓದಿ: ಕೊರೊನಾದಿಂದ ಮೃತಪಟ್ಟ ರೈತರ ಸಾಲಮನ್ನಾ ಅಸಾಧ್ಯ: ಎಸ್.ಟಿ. ಸೋಮಶೇಖರ್

    ಈಗಾಗಲೇ ಕೊಪ್ಪಳದಲ್ಲಿ ನಾನು ಉಸ್ತುವಾರಿ ಸಚಿವನಾಗಿದ್ದಾಗ 24 ಕೃಷಿ ಸಂಜೀವಿನಿ ವಾಹನಗಳನ್ನು ಪೈಲಟ್ ಪ್ರಾಜೆಕ್ಟ್ ರೂಪದಲ್ಲಿ ಜಾರಿ ಮಾಡಿದ್ದೆ. ಇದನ್ನು ಯಶಸ್ವಿಯಾಗಿ ಅನುಷ್ಠಾನ ಮಾಡಲಾಗಿತ್ತು. ಹೀಗಾಗಿ ಇದನ್ನು ರಾಜ್ಯಾದ್ಯಂತ ವಿಸ್ತರಣೆ ಮಾಡಲು ತೀರ್ಮಾನ ಮಾಡಲಾಗಿದೆ. 164 ವಾಹನಗಳಿಗೆ ಆರ್ಥಿಕ ಇಲಾಖೆ ಒಪ್ಪಿಗೆ ನೀಡಿದೆ. ಮಾರ್ಚ್ ಅಂತ್ಯಕ್ಕೆ 100 ವಾಹನ ಲೋಕಾರ್ಪಣೆಗೊಳ್ಳಲಿದೆ. ಉಳಿದ ವಾಹನ ಏಪ್ರಿಲ್‌ನಲ್ಲಿ ಸಿದ್ಧವಾಗಲಿವೆ ಎಂದು ಮಾಹಿತಿ ನೀಡಿದರು.

  • ಐಟಿಬಿಟಿ ರಂಗಕ್ಕೂ ಕೃಷಿ ಪ್ರವೇಶಿಸಿರುವುದು ಹೆಮ್ಮೆಯ ಸಂಗತಿ: ಬಿ.ಸಿ.ಪಾಟೀಲ್

    ಐಟಿಬಿಟಿ ರಂಗಕ್ಕೂ ಕೃಷಿ ಪ್ರವೇಶಿಸಿರುವುದು ಹೆಮ್ಮೆಯ ಸಂಗತಿ: ಬಿ.ಸಿ.ಪಾಟೀಲ್

    ಬೆಂಗಳೂರು: ಐಟಿಬಿಟಿ ರಂಗಕ್ಕೂ ಕೃಷಿ ಪ್ರವೇಶಿಸಿರುವುದು ಬಹಳ ದೊಡ್ಡ ಹೆಮ್ಮೆಯ ಸಂಗತಿ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಸಂತಸ ವ್ಯಕ್ತಪಡಿಸಿದ್ದಾರೆ.

    ಬೆಂಗಳೂರಿನ ಜಿಕೆವಿಕೆಯಲ್ಲಿ ಲಘು ಉದ್ಯಮ ಭಾರತ್ ಸಂಸ್ಥೆ ವತಿಯಿಂದ ಆಯೋಜಿಸಿದ್ದ “ಟೆಕ್ ಭಾರತ್” ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕೃಷಿಯ ಮಹತ್ವ ಒಂದಲ್ಲ ಒಂದು ರೀತಿಯಲ್ಲಿ ಎಲ್ಲರಿಗೂ ಅರಿವಾಗುತ್ತಿದೆ. ಕೃಷಿಯಮೂಲ ಇಲ್ಲದಿದ್ದರೆ ಯಾವ ರಂಗವೂ ಇಲ್ಲ ಎಂಬುದು ತಿಳಿಯುತ್ತಿದೆ. ಮೇಕ್ ಇನ್ ಇಂಡಿಯಾ ಅಡಿ ಕೃಷಿ ಕಾರ್ಯಕ್ರಮಗಳು ಕಾರ್ಯಗತಗೊಳಿಸುತ್ತಿದೆ. ದೇಶದಲ್ಲಿ ಮೊದಲನೇ ಹಾಗೂ ಇಡೀ ವಿಶ್ವದಲ್ಲಿ ನಾಲ್ಕನೇ ಸ್ಥಾನದಲ್ಲಿ ನಮ್ಮ ಬೆಂಗಳೂರು ತಂತ್ರಜ್ಞಾನ ವಿಜ್ಞಾನ ಅಭಿವೃದ್ಧಿಯಲ್ಲಿ ಸ್ಥಾನ ಪಡೆದಿರುವುದು ಸಂತಸದ ಸಂಗತಿ ಎಂದರು. ಇದನ್ನೂ ಓದಿ: ಮೀನುಗಾರಿಕೆಗೆ ಬೆಂಬಲ – ಮತ್ಸ್ಯ ಸಿರಿ ಯೋಜನೆ ಆರಂಭ

    1912 ರಲ್ಲಿಯೇ ಸರ್.ಎಂ.ವಿಶ್ವೇಶ್ವರಯ್ಯನವರು ನೀರಾವರಿ ಮತ್ತು ಕೈಗಾರಿಕಾಕರಣದಲ್ಲಿ ರೈತರ ಅಭಿವೃದ್ಧಿಯ ಚಿಂತನೆ ಹೊಂದಿದ್ದರು. 2014 ರಿಂದ 2018 ರವರೆಗೆ ದೇಶದಲ್ಲಿ ಸುಮಾರು 50 ಸಾವಿರ ಸ್ಟಾರ್ಟಪ್‍ಗಳು ಹುಟ್ಟಿವೆ. 2019 ಈ ಒಂದು ವರ್ಷದಲ್ಲಿಯೇ 9,300 ಅಗ್ರಿ ಸ್ಟಾರ್ಟಪ್‍ಗಳು ಆರಂಭವಾಗಿದ್ದು, ಅದರಲ್ಲಿ ಕೃಷಿಗಾಗಿಯೇ 474 ಸ್ಟಾರ್ಟಪ್‍ಗಳಾಗಿವೆ. ಇದುವರೆಗೂ ಬೆಂಗಳೂರಿನಲ್ಲಿ 4 ಸಾವಿರ ಸ್ಟಾರ್ಟಪ್‍ಗಳು ತಲೆಯೆತ್ತಿವೆ. ನಮ್ಮ ದೇಶದಲ್ಲಿ ಪ್ರತಿದಿನ 2ರಿಂದ 3 ಸ್ಟಾರ್ಟಪ್‍ಗಳು ಹುಟ್ಟುತ್ತಿವೆ. ಸುಮಾರು 40 ಸಾವಿರ ಉದ್ಯೊಗಗಳು ಸೃಷ್ಟಿಯಾಗುತ್ತಿದೆ ಎಂದರು.

    ವಿದ್ಯಾವಂತ ಯುವಕರು ಪಟ್ಟಣದಿಂದ ಹಳ್ಳಿಕಡೆಗೆ ಕೃಷಿ ತಂತ್ರಜ್ಞಾನ ಅಳವಡಿಸಿಕೊಂಡು ಪುನಃ ಮುಖಮಾಡಿದ್ದಾರೆ. ವೃದ್ಧಾಶ್ರಮವಾಗಿದ್ದ ಹಳ್ಳಿಗಳೀಗ ಕೃಷಿಯತ್ತ ಆಸಕ್ತಿಯಿಂದ ಮತ್ತೆ ಕಳೆ ಹೊಂದುತ್ತಿವೆ. 2020-21ರಲ್ಲಿ ಕೋವಿಡ್ ಲಾಕ್-ಡೌನ್ ಸಂದರ್ಭದಲ್ಲಿಯೂ ಕೂಡ ಕರ್ನಾಟಕ 64 ಲಕ್ಷ ಮೆಟ್ರಿಕ್ ಟನ್ ಆಹಾರ ಉತ್ಪಾದನೆಯಾಗಿದೆ. ಇದರಲ್ಲಿ ಶೇ. 3 ಭಾಗ ಕರ್ನಾಟಕವೇ ಇಡೀ ದೇಶದಲ್ಲಿ ಆಹಾರ ಉತ್ಪಾದಿಸಿ ಕೊಡುಗೆ ನೀಡಿರುವುದು ಹೆಮ್ಮೆಯ ವಿಚಾರವಾಗಿದೆ. ಆಹಾರ ಸಂಸ್ಕರಣಾ ಘಟಕ ಮತ್ತು ಅಗ್ರಿ ಸ್ಟಾರ್ಟಪ್‍ಗಳಿಗೆ ಆತ್ಮನಿರ್ಭರ ಯೋಜನೆಯಡಿ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ 10 ಸಾವಿರ ಕೋಟಿ ರೂ ಆಹಾರ ಸಂಸ್ಕರಣಾ ಘಟಕಗಳಿಗೆ ಹಾಗೂ 1 ಲಕ್ಷ ಕೋಟಿ ರೂ. ಅಗ್ರಿಕಲ್ಚರ್ ಇನ್ಫಟಾಸ್ಟ್ರ್‍ಕ್ಚರ್ ಗಳಿಗೆ ಇಟ್ಟಿದ್ದಾರೆ. 35% ರಾಜ್ಯ ಸರ್ಕಾರ ಉತ್ತೇಜನ 15 ಲಕ್ಷ ರೂ. ಸಬ್ಸಿಡಿ ಉತ್ತೇಜನ ನೀಡುತ್ತಿದೆ ಎಂದರು. ಇದನ್ನೂ ಓದಿ : ಏಳು ತಿಂಗಳ ಗರ್ಭಿಣಿಗೆ ಇದೆಂಥ ಟಾರ್ಚರ್? : ಶಾಕ್ ನಲ್ಲಿ ನಟಿ ಸಂಜನಾ

    ಸರ್ಕಾರಿ ನೌಕರಿ ಮೇಲೆಯೇ ಅವಲಂಬಿತರಾಗದೇ ಯುವಕರು ಸ್ವ ಉದ್ಯೋಗಕ್ಕೆ ಹೆಚ್ಚು ಒತ್ತುಕೊಡಬೇಕು. ಟೀ ಕಾಫಿಯು ಆನ್-ಲೈನ್‍ನಲ್ಲಿ ಮನೆಗೆ ಸಿಗುವಂತಾಗಿದೆ ಎಂದರು.

  • ಏಕಾಂಗಿಯಾಗಿ ಬಾವಿ ತೋಡಿ ನೀರು ತಂದ ಎಂಟೆಕ್ ಪದವೀಧರ

    ಏಕಾಂಗಿಯಾಗಿ ಬಾವಿ ತೋಡಿ ನೀರು ತಂದ ಎಂಟೆಕ್ ಪದವೀಧರ

    ಬೀದರ್: ಕೃಷಿಗಾಗಿ ಸತತ 5 ತಿಂಗಳಿನಿಂದ ಏಕಾಂಗಿಯಾಗಿ ಬಾವಿ ತೋಡಿದ ಎಂಟೆಕ್ ಪದವೀಧರರೊಬ್ಬರು ನೀರು ತಂದು ಆಧುನಿಕ ಭಗೀರಥ ಎನಿಸಿಕೊಂಡಿದ್ದಾರೆ.

    ಜಿಲ್ಲೆಯ ಔರಾದ್ ತಾಲೂಕಿನ ಸೂರ್ಯಕಾಂತ್ ಪ್ರಭು ಎಂಟೆಕ್ ಓದಿದ್ದಾರೆ. 25/30 ವಿಸ್ತೀರ್ಣದ 14 ಅಡಿ ಬಾವಿಯನ್ನು ಬಬ್ಬರೇ ತೋಡಿ ನೀರು ತೆಗೆದಿದ್ದಾರೆ. ಎಂಟೆಕ್ ಮಾಡಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಸೂರ್ಯಕಾಂತ್ ಲಾಕ್‍ಡೌನ್ ವೇಳೆ ಕೃಷಿಯಲ್ಲಿ ಏನಾದರೂ ಸಾಧನೆ ಮಾಡಬೇಕು ಎಂಬ ಛಲದಿಂದ ಈ ಸಾಧನೆ ಮಾಡಿದ್ದಾರೆ. ಇದನ್ನೂ ಓದಿ: ಇಂದು ಕೇಂದ್ರ ಬಜೆಟ್ – ಆರ್ಥಿಕತೆಗೆ ಸಿಗುತ್ತಾ ‘ಬೂಸ್ಟರ್ ಡೋಸ್’..?

    ಮೊದ ಮೊದಲು ಈ ಪದವೀಧರನ ಈ ಸಾಹಸ ನೋಡಿ ಗ್ರಾಮಸ್ಥರು ಹುಚ್ಚು ಎನ್ನುತ್ತಿದ್ದರು. ಈಗ ಅದೇ ಗ್ರಾಮಸ್ಥರು ಅವರ ಬಾವಿಯಿಂದ ನೀರು ತೆಗೆದುಕೊಂಡು ಹೋಗುತ್ತಿದ್ದಾರೆ. ಬಾವಿ ನೀರಿನಿಂದ 400 ಗಡಿಗಳನ್ನು ಬೆಳಸಿರುವ ಸೂರ್ಯಕಾಂತ್ ಛಲಕ್ಕೆ ಜಿಲ್ಲೆಯ ಜನರು ಜೈಕಾರ ಹಾಕುತ್ತಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಭ್ರಷ್ಟಾಚಾರದ ಬಗ್ಗೆ ಮಾತನಾಡಲು ಬಿಜೆಪಿಗೆ ನೈತಿಕತೆಯಿಲ್ಲ: ಲಕ್ಷ್ಮೀ ಹೆಬ್ಬಾಳ್ಕರ್

    ತಮ್ಮ ಸಾಧನೆ ಕುರಿತು ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿದ ಸೂರ್ಯಕಾಂತ್‍ರವರು, ಮೊದಲು ಎಲ್ಲರು ಹುಚ್ಚ ಎಂದು ಕರೆಯುತ್ತಿದ್ದರು. ಈಗ ಅದೇ ಗ್ರಾಮಸ್ಥರು ಇಲ್ಲಿಂದಲೇ ನೀರು ತೆಗೆದುಕೊಂಡು ಹೋಗುತ್ತಿದ್ದು ನನಗೆ ಬಹಳ ಖುಷಿಯಾಗುತ್ತದೆ ಎಂದು ಸಂತಸ ವ್ಯಕ್ತಪಡಿಸಿದರು.

  • ಸೆಕೆಂಡರಿ ಅಗ್ರಿಕಲ್ಚರ್ ನಿರ್ದೇಶನಾಲಯ ಸ್ಥಾಪಿಸಿ ಆದೇಶಿಸಿದ ಸರ್ಕಾರ

    ಸೆಕೆಂಡರಿ ಅಗ್ರಿಕಲ್ಚರ್ ನಿರ್ದೇಶನಾಲಯ ಸ್ಥಾಪಿಸಿ ಆದೇಶಿಸಿದ ಸರ್ಕಾರ

    ಬೆಂಗಳೂರು: ರೈತರ ಆದಾಯ ಹೆಚ್ಚಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಕೃಷಿ ಸಚಿವ ಬಿ.ಸಿ.ಪಾಟೀಲ್‍ರೊಂದಿಗೆ ಸಮಿತಿಯಲ್ಲಿ ಚರ್ಚಿಸಿ ನೀಡಿದ ಭರವಸೆಯಂತೆ ಸೆಕೆಂಡರಿ ಅಗ್ರಿಕಲ್ಚರ್ ನಿರ್ದೇಶನಾಲಯ ಸ್ಥಾಪಿಸಿ ಆದೇಶಿಸಿದೆ.

    ಕಳೆದ 2021 ಆಗಸ್ಟ್ 25 ರಂದು ಸೆಕೆಂಡರಿ ಅಗ್ರಿಕಲ್ಚರ್ ಸ್ಥಾಪಿಸುವ ನಿಟ್ಟಿನಲ್ಲಿ ಸಿಎಂ ಜೊತೆ ಕೃಷಿ ಸಚಿವ ಬಿ.ಸಿ.ಪಾಟೀಲ್ ಕೇಂದ್ರದ ಆದಾಯ ದ್ವಿಗುಣಗೊಳಿಸುವ ಸಮಿತಿಯ ಮುಖ್ಯಸ್ಥರೊಂದಿಗೆ ಸಮಿತಿ ಸಭೆ ನಡೆಸಿದ್ದು, ಸಮಿತಿಯಲ್ಲಿ ಚರ್ಚಿಸಿ ತೀರ್ಮಾನಿಸಿದಂತೆ ಸರ್ಕಾರ ಕೃಷಿ ಇಲಾಖೆಯ ನಿರ್ದೇಶಕರ ನೇತೃತ್ವದಲ್ಲಿ 13 ಜನರ ಸದಸ್ಯರನ್ನೊಳಗೊಂಡ ಸಮಿತಿ ಸೆಕೆಂಡರಿ ಅಗ್ರಿಕಲ್ಚರ್ ನಿರ್ದೇಶಾನಲಯ ಸ್ಥಾಪಿಸಿ ಆದೇಶಿಸಲಾಗಿದೆ. ಇದನ್ನೂ ಓದಿ: ಮನೆಯೊಂದರಲ್ಲಿ ಕುಳಿತು ಬಿ.ಇಡಿ ವಿದ್ಯಾರ್ಥಿಗಳ ಸಾಮೂಹಿಕ ನಕಲು – ವೀಡಿಯೋ ವೈರಲ್‌

    ಸ್ಥಳೀಯವಾಗಿ ಲಭ್ಯವಿರುವ ಕೃಷಿ ಮತ್ತು ಇತರ ಜೈವಿಕ ಸಂಪನ್ಮೂಲಗಳ ಪ್ರಾಥಮಿಕ ಉತ್ಪನ್ನ ಮತ್ತು ಉಪ ಉತ್ಪನ್ನಗಳನ್ನು ಕಚ್ಚಾ ವಸ್ತುವಾಗಿ ಬಳಸಿಕೊಂಡು ಸಂಸ್ಕರಣೆ, ಪ್ಯಾಕಿಂಗ್ ಹಾಗೂ ಸೂಕ್ತ ಬ್ಯ್ರಾಂಡ್ ಮೂಲಕ ಮಾರುಕಟ್ಟೆ ಕಲ್ಪಿಸುವುದು ಸೆಕೆಂಡರಿ ಅಗ್ರಿಕಲ್ಚರ್‌ನ ಮುಖ್ಯ ಧ್ಯೇಯೋದ್ದೇಶವಾಗಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಸ್ಪಷ್ಟಪಡಿಸಿದ್ದಾರೆ.

    ಏನಿದು ಸೆಕೆಂಡರಿ ಅಗ್ರಿಕಲ್ಚರ್..?

    ಗ್ರಾಮೀಣ ಮಟ್ಟದಲ್ಲಿ ಗುಡಿ ಕೈಗಾರಿಕೆ ಎಂದು ಪರಿಗಣಿಸಬಹುದಾದ ಚಟುವಟಿಕೆಯು ಸ್ಥಳೀಯ ಮತ್ತು ಸುತ್ತಮುತ್ತಲಿನ ರೈತರ ಆರ್ಥಿಕ ಮಟ್ಟ ಹೆಚ್ಚಳಕ್ಕೆ ಕೊಡುಗೆ ನೀಡುವ ಪ್ರಮಾಣದಲ್ಲಿ ಇರುವುದು ಸೆಕೆಂಡರಿ ಕೃಷಿಯಾಗಿದ್ದಉದ್ಯಮ ಸ್ಥಳೀಯವಾಗಿ ಸುತ್ತಮುತ್ತಲಿನ ಪ್ರದೇಶದಲ್ಲಿ ಲಭ್ಯವಾಗುವ ಮೂಲ ಹಾಗೂ ಕಚ್ಚಾ ವಸ್ತುಗಳ್ನು ಮಾನವ ಶಕ್ತಿ ಕೌಶಲ್ಯಗಳನ್ನು ಮೂಲವಾಗಿ ಸದಯೋಗಪಡಿಸಿಕೊಂಡು ಅಳವಡಿಸುವ ಸಮಗ್ರ ಚಟುವಟಿಕೆಗಳನ್ನು ಸೆಕೆಂಡರಿ ಕೃಷಿಯಡಿ ಪರಿಗಣಿಸಬಹುದಾಗಿದೆ. ಇದನ್ನೂ ಓದಿ: ಪ್ರಾಂಶುಪಾಲರಿಗೆ ಕಪಾಳಮೋಕ್ಷ ಮಾಡಿದ ಪ್ರಾಧ್ಯಾಪಕರು!

    ಸ್ಥಳೀಯವಾಗಿ ಉತ್ಪಾದಿಸಲಾದ ಕಚ್ಚಾ ವಸ್ತುವು ಗ್ರಾಮ ಮಟ್ಟದಲ್ಲಿ ಪ್ರಾಥಮಿಕ ಸಂಸ್ಕರಣೆಗೆ ಒಳಗಾಗಿದ್ದರೆ ಮತ್ತು ಅಂತಹ ಕಚ್ಚಾವಸ್ತುಗಳಿಂದ ಮೌಲ್ಯವರ್ಧಿತಗೊಳಿಸಿವ ಪ್ರಾಥಮಿಕ ಉತ್ಪಾದನೆಯನ್ನು ಉದ್ಯಮಕ್ಕೆ ಸರಬರಾಜು ಮಾಡಿದರೆ ಅದನ್ನು ಸೆಕೆಂಡರಿ ಕೃಷಿಗೆ ಪರಿಗಣಿಸಬಹುದಾಗಿದೆ. ಜೇನುಸಾಕಾಣೆ, ಜೈವಿಕ ಗೊಬ್ಬರ ಘಟಕಗಳು, ಸಾವಯವ ಬಣ್ಣ ಅಥವಾ ಡೈ ತಯಾರಿಕೆ, ಅಣಬೆ, ರೇಷ್ಮೆ ಹುಳು ಸಾಕಣೆ, ನರ್ಸರಿ ಇತ್ಯಾದಿಗಳಂತಹ ಸಣ್ಣ ಪ್ರಮಾಣದ ಚಟುವಟಿಕೆಗಳು ಸೆಕೆಂಡರಿ ಕೃಷಿಗೆ ಉತ್ತಮ ಉದಾಹರಣೆಯಾಗಿದೆ.

    ಸ್ಥಳೀಯವಾಗಿ ಸುತ್ತಮುತ್ತಲಿನ ಪ್ರದೇಶದಲ್ಲಿ ಲಭ್ಯವಾಗುವ ಮೂಲ/ಕಚ್ಛಾ ವಸ್ತುಗಳನ್ನು ಮಾನವ ಶಕ್ತಿ, ಕೌಶಲ್ಯಗಳನ್ನು ಮೂಲವಾಗಿ ಸದುಪಯೋಗಪಡಿಸಿಕೊಂಡು ಅಳವಡಿಸುವ ಸಮಗ್ರ ಚಟುವಟಿಕೆಗಳು ಸೆಕೆಂಡರಿ ಕೃಷಿಗೆ ಉತ್ತಮ ಉದಾಹರಣೆಯಾಗಿವೆ. ರೇಸ್ ಕುದುರೆಗಳ ಸಾಕಣೆ, ವನ್ಯಜೀವಿ ಮೀಸಲು ಪ್ರದೇಶಗಳ ಅಭಿವೃದ್ಧಿ, ದೊಡ್ಡ ಔಷಧೀಯ ಮತ್ತು ಕೃಷಿ ರಾಸಾಯನಿಕ ಉದ್ಯಮಗಳು, ದೊಡ್ಡ ಕೃಷಿ ಕೈಗಾರಿಕೆಗಳನ್ನು ಸೆಕೆಂಡರಿ ಅಗ್ರಿಕಲ್ಚರ್ ಎಂದು ಪರಿಗಣಿಸಲಾಗದು. ಇದನ್ನೂ ಓದಿ: ಗಾಂಜಾ ಮಾರುತ್ತಿದ್ದ ಪೊಲೀಸರನ್ನು ಅರೆಸ್ಟ್ ಮಾಡಿದ್ದ ಇನ್‌ಸ್ಪೆಕ್ಟರ್ ಸಸ್ಪೆಂಡ್

    ಗ್ರಾಮೀಣ ಪ್ರದೇಶದಲ್ಲಿ ಸ್ಥಳೀಯವಾಗಿ ಲಭ್ಯವಿರುವ ಕೃಷಿ ಮತ್ತು ಇತರ ಜೈವಿಕ ಸಂಪನ್ಮೂಲಗಳ ಪ್ರಾಥಮಿಕ ಉತ್ಪನ್ನ ಮತ್ತು ಉಪಉತ್ಪನ್ನಗಳ ಕಚ್ಚಾ ವಸ್ತುವಾಗಿ ಬಳಸಿಕೊಂಡು ಉತ್ಪಾದಕ ಚಟುವಟಿಕೆ ಮಾಡುವುದು. ಸ್ಥಳೀಯವಾಗಿ ಲಭ್ಯವಿರುವ ಮಾನವ ಸಂಪನ್ಮೂಲ ಬಳಕೆಗಾಗೊ ಕೌಶಲ್ಯ ತರಬೇತಿಗಳನ್ನು ನೀಡಿ ಉದ್ಯಮ ಚಟುವಟಿಕೆ ಮಾಡುವುದು.ಎಂ.ಎಸ್.ಎಂ.ಈ.ಡಿ ಕಾಯಿದೆ 2006 ಅಡಿಯಲ್ಲಿ ವರ್ಗೀಕರಿಸಲಾದ ಸಣ್ಣ ಅಥವಾ ಮಧ್ಯಮ ಉದ್ಯಮಗಳನ್ನು ಅಭಿವೃದ್ಧಿಪಡಿಸುವುದು.

    ಸಾವಯವ ಗೊಬ್ಬರ ತಯಾರಿಕೆ, ತೋಟಗಾರಿಕೆ ಹೂವು ಅರಣ್ಯ ಕೃಷಿ ಬೆಳೆಗಳ ನರ್ಸರಿ, ಜೈವಿಕ ಕೀಟನಾಶಕಗಳ ತಯಾರಿಕೆ, ನೀರು ಮತ್ತು ಮಣ್ಣು ಪರೀಕ್ಷೆ, ಪಶು ಆಹಾರ ಮೇವು ಉತ್ಪಾದನೆ ಇತ್ಯಾದಿಗಳ ಉತ್ಪಾದಿತ ಬೆಳೆಗಳ ಮೌಲ್ಯವರ್ಧನೆ ಮಾಡುವುದು. ಕಟಾವು ಆದ ನಂತರ ಹೂವು, ಹಣ್ಣು, ಸಾಂಬಾರು ಪದಾರ್ಥಗಳ ಇತ್ಯಾದಿಗಳನ್ನು ಪೂರ್ವಸಿದ್ಧತೆಗೊಳಿಸಿ ಮಾರುಕಟ್ಟೆಗೆ ತಲುಪಿಸುವುದು. ಅತಿಸಣ್ಣ, ಸಣ್ಣ ಉದ್ದಿಮೆಗಳಾದ ಉಪ್ಪಿನಕಾಯಿ, ಜಾಮ್ ತಯಾರಿಕೆ ಅರಿಶಿನ ಪುಡಿ, ಶುಂಠಿಬೆಳ್ಳುಳ್ಳಿ ಪೇಸ್ಟ್ ಬಾಡಿಗೆ ಆಧಾರಿತ ಸೇವಾ ಕೇಂದ್ರಗಳು, ಅಗ್ರಿ ಟೂರಿನಂ, ಆಯುಷ್ ಮೆಡಿಸಿನ್ಸ್, ನೇಯ್ಗೆ ಉತ್ಪನ್ನಗಳು, ಸುಗಂಧ ದ್ರವ್ಯ, ಡೈಗಳನ್ನು ಇತ್ಯಾದಿ ಮೌಲ್ಯ ವರ್ದನೆ ಕೇಂದ್ರಿತ ಚಟುವಟಿಕೆಗಳನ್ನು ಮಾಡುವುದು. ಇದನ್ನೂ ಓದಿ: ಮಿನಿ ಕೃತಕ ಚಂದ್ರ – ಚೀನಾದ ಹೊಸ ಪ್ರಯತ್ನ

    ಸೆಕೆಂಡರಿ ಅಗ್ರಿಕಲ್ಚರ್ ಅಡಿ ಜೇನು ಸಾಕಾಣೆ, ಬೇವಿನ ಉತ್ಪನ್ನಗಳು, ಕಾರ್ನ್ ಪೌಡರ್ ತಯಾರಿಕೆ, ಹೈಡ್ರೋಪೋನಿಕ್ಸ್, ಕೈತೋಟ, ಅಡಿಕೆ ಹಾಳೆ ಉತ್ಪನ್ನಗಳು, ಅಲೊವೆರಾ ಉತ್ಪನ್ನಗಳು, ಬಿದಿರು ಉತ್ಪನ್ನಗಳು, ಅಂಟು ಉತ್ಪಾದನೆ, ರೇಷ್ಮೆ ಉತ್ಪನ್ನಗಳು, ಕುರಿಮರಿ ಹೊಸ ತಳಿ ಸಾಕಣೆ, ಹೋರಿ ಸಾಕಣೆ, ಡಯಾಂಚ ಬೆಳೆಸುವ ಮೂಲಕ ಪರ್ಯಾಯ/ಪೂರಕ ಉದ್ಯಮಗಳಿಗೆ ಉತ್ತೇಜಿಸುವುದು. ಹತ್ತಿ ಬೆಳೆ ಉಳಿಕೆಯ ಉತ್ಪನ್ನಗಳು, ಹತ್ತಿ ಭತ್ತದ ಉಳಿಕೆಯಿಂದ ಪೈಬರ್ ಬೋರ್ಡ್ ಯಾರಿಸುವುದು, ಕತ್ತಾಳೆ ಬಾಳೆ ನಾರಿನ ತ್ಪನ್ನಗಳು, ಅಡಿಕೆ ಹಾಳೆ ಉತ್ಪನ್ನಗಳು, ಬಯೋಗ್ಯಾಸ್ ಉತ್ಪಾದನೆ, ಯೂರಿಯಾ ಲೇಪಿಸಿಸಿ ಮೇವಿನ ಬ್ಲಾಕ್‍ಗಳ ತಯಾರಿಕೆ, ಕಬ್ಬು ಸೋಗೆಯಿಂದ ಉತ್ಪನ್ನಗಳ ತಯಾರಿಕೆ ಸೇರಿದಂತೆ ಮುಂತಾದ ಕೃಷಿ, ತೋಟಗಾರಿಕೆ, ರೇಷ್ಮೆ ಹಾಗೂ ಪಶು ಸಂಗೋಪನಾ ತ್ಯಾಜ್ಯಗಳನ್ನು ಮರುಬಳಸಬಹುದಾಗಿದೆ.