Tag: Ahinda

  • ಸಿದ್ದುಗೆ `ಅಹಿಂದ’ ಪದದ ಅರ್ಥವೇ ಗೊತ್ತಿಲ್ಲ – ಕಣ್ಣೀರಿಟ್ಟ ಗೋಪಿಕೃಷ್ಣ ದಂಪತಿ

    ಸಿದ್ದುಗೆ `ಅಹಿಂದ’ ಪದದ ಅರ್ಥವೇ ಗೊತ್ತಿಲ್ಲ – ಕಣ್ಣೀರಿಟ್ಟ ಗೋಪಿಕೃಷ್ಣ ದಂಪತಿ

    ಚಿಕ್ಕಮಗಳೂರು: ಗೋಪಿಕೃಷ್ಣಗೆ (Gopikrishna) ತರೀಕೆರೆಯ (Tarikere) ಕಾಂಗ್ರೆಸ್ (Congress) ಟಿಕೆಟ್ ತಪ್ಪಿದ್ದು, ಮನನೊಂದ ದಂಪತಿ ನೂರಾರು ಅಭಿಮಾನಿಗಳ ಮಧ್ಯೆಯೇ ಕಣ್ಣೀರಿಟ್ಟಿದ್ದಾರೆ.

    ತರೀಕೆರೆಯಲ್ಲಿ ಆರಂಭದಿಂದಲೂ ಕಾಂಗ್ರೆಸ್ ಟಿಕೆಟ್‍ಗಾಗಿ ತೀವ್ರ ಪೈಪೋಟಿ ನಡೆದಿತ್ತು. ಟಿಕೆಟ್‍ಗಾಗಿ 14 ಜನ ಹೋರಾಡುತ್ತಿದ್ದರು. ಅಂತಿಮವಾಗಿ ಗೋಪಿಕೃಷ್ಣ ಹಾಗೂ ಮಾಜಿ ಶಾಸಕ ಜಿ.ಎಚ್ ಶ್ರೀನಿವಾಸ್ ಮಧ್ಯೆ ತೀವ್ರ ಪೈಪೋಟಿ ನಡೆದಿತ್ತು. ಇದನ್ನೂ ಓದಿ: ಜಗದೀಶ್‌ ಶೆಟ್ಟರ್‌ಗೆ ಬಿಜೆಪಿ ನೀಡಿತ್ತು 2 ಬಿಗ್‌ ಆಫರ್‌

    ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಗೋಪಿಕೃಷ್ಣಗೆ ಟಿಕೆಟ್ ನೀಡುತ್ತೇವೆ ಎಂದು ಹೇಳಿದ್ದರು. ರಾಜ್ಯದಲ್ಲಿ ಮಡಿವಾಳದ ಸಮುದಾಯದವರಿಗೆ ಎಲ್ಲೂ ಟಿಕೆಟ್ ನೀಡಿಲ್ಲ. ಅವರಿಗೆ ಟಿಕೆಟ್ ಕೊಟ್ಟೆ ಕೊಡುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದ್ದರು. ಆದರೆ ಕೊನೆ ಘಳಿಗೆಯಲ್ಲಿ ಅವರಿಗೆ ಕೈ ಟಿಕೆಟ್ ತಪ್ಪಿದ್ದು, ದಂಪತಿ ನೂರಾರು ಅಭಿಮಾನಿಗಳ ಮಧ್ಯೆ ಕಣ್ಣೀರಿಟ್ಟಿದ್ದಾರೆ.

    ಗೋಪಿಕೃಷ್ಣಗೆ ಟಿಕೆಟ್ ಮಿಸ್ ಆಗುತ್ತಿದ್ದಂತೆ ಅಭಿಮಾನಿಗಳು ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ. ಸಿಟ್ಟಿಗೆದ್ದ ಅಭಿಮಾನಿಗಳು ಆಟೋಗೆ ಬೆಂಕಿ ಹಚ್ಚಿದ್ದಾರೆ. ಸಿದ್ದರಾಮಯ್ಯನವರ (Siddaramaiah) ಅಹಿಂದ (Ahinda) ಹೆಸರಿಗೆ ಮಾತ್ರ. ಅವರಿಗೆ ಅಹಿಂದ ಪದದ ಅರ್ಥವೇ ಗೊತ್ತಿಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.

    ಸದ್ಯ ಟಿಕೆಟ್ ಸಿಕ್ಕಿರುವ ಮಾಜಿ ಶಾಸಕ ಶ್ರೀನಿವಾಸ್ ಗೆಲುವಿನ ಹಾದಿಯೂ ಸುಲಭವಾಗಿಲ್ಲ. ತರೀಕೆರೆಯಲ್ಲಿ ನಿರ್ಣಾಯಕ ಪಾತ್ರವಿರುವ ಕುರುಬ ಸಮುದಾಯ ಶ್ರೀನಿವಾಸ್‍ಗೆ ವಿರೋಧವಿದೆ. ಶ್ರೀನಿವಾಸ್ ಕುರುಬ ಸಂಘದ ಹಣವನ್ನ ದುರುಪಯೋಗ ಮಾಡಿಕೊಂಡಿದ್ದಾರೆ ಎಂಬ ಆರೋಪವಿದೆ. ಇದೇ ಕಾರಣದಿಂದ ಕುರುಬ (Kuruba) ಸಮುದಾಯ ಅವರ ವಿರುದ್ಧ ತಿರುಗಿದೆ. ಅವರಿಗೆ ಟಿಕೆಟ್ ಕೈತಪ್ಪಿಸಬೇಕೆಂದು ಕುರುಬ ಸಮುದಾಯದ ಪ್ರಮುಖ ನಾಯಕರು ಸಹ ಹೋರಾಡಿದ್ದರು. ಶ್ರೀನಿವಾಸ್‍ಗೆ ಟಿಕೆಟ್ ನೀಡಿದರೆ ಕುರುಬ ಸಮುದಾಯದಿಂದ ಏಳೆಂಟು ಅಭ್ಯರ್ಥಿಗಳು ಚುನಾವಣೆಗೆ ನಿಲ್ಲುತ್ತೇವೆಂದು ಎಚ್ಚರಿಕೆ ಕೂಡ ನೀಡಿದ್ದರು. ಆದರೂ ಟಿಕೆಟ್ ಅವರಿಗೆ ಸಿಕ್ಕಿರುವುದು ಸಮುದಾಯದವನ್ನ ಸಿಟ್ಟಾಗಿಸಿದೆ.

    ಶ್ರೀನಿವಾಸ್ ವಿರುದ್ಧ ಇರುವ ಕುರುಬ ಸಮುದಾಯದ ನಾಯಕರು ಗೋಪಿಕೃಷ್ಣ ಜೊತೆಗೆ ನಿಂತಿದ್ದಾರೆ. ಗೋಪಿಕೃಷ್ಣ, ಅಭಿಮಾನಿಗಳು ಹಾಗೂ ಎಲ್ಲಾ ಸಮುದಾಯದ ಮುಖಂಡರ ಜೊತೆ ಸಭೆ ಬಳಿಕ ಮುಂದಿನ ರಾಜಕೀಯದ ನಡೆ ನಿರ್ಧರಿಸುತ್ತೇನೆ ಎಂದಿದ್ದಾರೆ. ಈ ಮೂಲಕ ಅವರು ಪಕ್ಷೇತರವಾಗಿ ನಿಲ್ಲುವ ಸೂಚನೆ ನೀಡಿದ್ದಾರೆ. ಗೋಪಿಕೃಷ್ಣ ಸ್ವಂತಂತ್ರವಾಗಿ ಸ್ಪರ್ಧಿಸಿದರೆ ಶ್ರೀನಿವಾಸ್ ಗೆಲುವಿಗೆ ಕಷ್ಟವಾಗುವ ಸೂಚನೆ ಕೂಡ ಇದೆ. ಈ ಇಬ್ಬರ ನಡುವಿನ ತಿಕ್ಕಾಟ ಮೂರನೇಯವನಿಗೆ ಲಾಭ ಎಂಬಂತೆ ನಮಗೆ ಲಾಭವಾಗಬಹುದು ಎಂದು ಬಿಜೆಪಿಗರು ಅಂದಾಜಿಸಿದ್ದಾರೆ. ಇದನ್ನೂ ಓದಿ: 40% ಕಮಿಷನ್‌ ಕಡಿಮೆ ಮಾಡಿದ್ರೆ ಇಂದಿರಾ ಕ್ಯಾಂಟೀನ್‌ ಉಳಿಯುತ್ತಿತ್ತು – ಸಿದ್ದರಾಮಯ್ಯ ಟಾಂಗ್‌

  • ಸಿದ್ದುಗೆ ಮುಳುವಾಯ್ತು ಅಹಿಂದ ಮಂತ್ರ – ಕುರುಬ ಸಮಾಜದಲ್ಲಿ ಅಸಮಾಧಾನ ಸ್ಫೋಟ

    ಸಿದ್ದುಗೆ ಮುಳುವಾಯ್ತು ಅಹಿಂದ ಮಂತ್ರ – ಕುರುಬ ಸಮಾಜದಲ್ಲಿ ಅಸಮಾಧಾನ ಸ್ಫೋಟ

    ಯಾದಗಿರಿ: ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಈಗ ಅಹಿಂದ ಮಂತ್ರವೇ ಮುಳುವಾಗಿ ಪರಿಣಮಿಸುತ್ತಿದ್ದು, ಅವರ ವಿರುದ್ಧವೇ  ಕುರುಬ ಸಮಾಜದಲ್ಲಿ ಅಸಮಾಧಾನ ಸ್ಫೋಟಗೊಂಡಿದೆ.

    ಸಿದ್ದರಾಮಯ್ಯ ಅವರ ವಿರುದ್ಧ ಯಾದಗಿರಿ ಕುರುಬ ಸಮಾಜ ತೀವ್ರವಾಗಿ ತಮ್ಮ ಆಕ್ರೋಶ ಹೊರ ಹಾಕಿದೆ. ಯಾದಗಿರಿ ಪತ್ರಿಕಾ ಭವನದಲ್ಲಿ ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿದ ಕುರುಬ ಸಮಾಜದ ವಿವಿಧ ಸಂಘಗಳ ಮುಖಂಡರು ಮತ್ತು ಸಂಗೊಳ್ಳಿ ರಾಯಣ್ಣ ಸಂಘದ ಜಿಲ್ಲಾಧ್ಯಕ್ಷ ಭೀಮರಾಯ ಬಂಡಾರಿ ಸಿದ್ದರಾಮಯ್ಯ ಅವರ ವಿರುದ್ಧ ತಮ್ಮ ಅಸಮಾಧಾನ ಹೊರಹಾಕಿದರು. ಕುರುಬ ಸಮಾಜದಲ್ಲಿ ಸಿದ್ದರಾಮಯ್ಯ ಅವರನ್ನು ಬಿಟ್ಟು ಬೇರೆ ಯಾರನ್ನು ಬೆಳೆಯಲು ಬಿಡುತ್ತಿಲ್ಲ. ಕುರುಬ ಸಮಾಜದಲ್ಲಿ ರಾಜಕೀಯ ಆಸಕ್ತರು ಅವರೊಬ್ಬರೇ ಅಲ್ಲ, ಇನ್ನೂ ತುಂಬ ಜನ ಇದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಸಿದ್ದರಾಮಯ್ಯ ಮತ್ತು ಸಚಿವ ಕೆ.ಎಸ್.ಈಶ್ವರಪ್ಪ ನಮ್ಮ ಸಮಾಜದಲ್ಲಿನ ಮುಖಂಡರನ್ನು ಗುರುತಿಸುವ ಕಾರ್ಯ ಮಾಡುತ್ತಿಲ್ಲ. ಕಾಂಗ್ರೆಸ್ ಪಕ್ಷದಲ್ಲಿ ಸಿದ್ದರಾಮಯ್ಯ ಇದ್ದರೆ ಕುರುಬರ ಮತ ಪಡೆಯಬಹುದು ಅಂತ ತಿಳಿದುಕೊಂಡಿದೆ. ಆದರೆ ಇದು ಅವರ ಭ್ರಮೆ. ಸಿದ್ದರಾಮಯ್ಯ ಅವರು ನಮ್ಮ ಸಮಾಜಕ್ಕೆ ಏನು ಮಾಡಿಲ್ಲ ಅಂದ ಮೇಲೆ ಅವರ ಜೊತೆಗೆ ನಾವು ಏಕೆ ಇರಬೇಕು. ಇನ್ನ ಮೇಲೆ ನಾವು ಏನು ಎಂದು ಕುರುಬ ಸಮಾಜ ತೋರಿಸುತ್ತದೆ. ಈಗ ನಮಗೆ ಗೊತ್ತಾಗಿದೆ, ಇವಾಗ ನೋಡಿ ಎಂದು ಸವಾಲನ್ನು ಹಾಕಿದರು. ಇದನ್ನೂ ಓದಿ: ತುಂಗಾನಗರ ಪೊಲೀಸರು ಏನು ದನ ಕಾಯುತ್ತಿದ್ದಾರಾ? : SPಗೆ ಈಶ್ವರಪ್ಪ ಪ್ರಶ್ನೆ

    ನಮಗೆ ಯಾರನ್ನ ಗೆಲ್ಲಸಬೇಕು, ಯಾರನ್ನು ಸೋಲಿಸಬೇಕು ಎಂದು ಚೆನ್ನಾಗಿ ಗೊತ್ತು. ಹೆಸರಿಗೆ ಮಾತ್ರ ಸಿದ್ದರಾಮಯ್ಯ ಅವರು ಕುರುಬರ ನಾಯಕರು. ಅವರು ಯಾವತ್ತು ನಮ್ಮ ಸಮಾಜದ ಅಭಿವೃದ್ಧಿಗೆ ಕೆಲಸ ಮಾಡಿಲ್ಲ. ಅವರೂ ಅಹಿಂದ ಹೆಸರನಲ್ಲಿ ರಾಜಕೀಯ ಮಾಡಿ ನಮ್ಮ ಸಮಾಜವನ್ನೆ ಮರೆತು ಬಿಟ್ಟಿದ್ದಾರೆ. ಮುಂದೆ ಅವರು ಅಹಿಂದ ಹೆಸರಿನಲ್ಲಿ ರಾಜಕೀಯ ಮಾಡಲಿ ಎಂದು ಸಿದ್ದರಾಮಯ್ಯ ಅವರ ವಿರುದ್ಧ ಸಿಡಿದರು.