Tag: Ahmadabad

  • 508 ಕಿ.ಮೀ ಉದ್ದದ ಭಾರತದ ಮೊದಲ ಬುಲೆಟ್ ರೈಲು ಯೋಜನೆ ವಿಶೇಷತೆಗಳೇನು ?

    508 ಕಿ.ಮೀ ಉದ್ದದ ಭಾರತದ ಮೊದಲ ಬುಲೆಟ್ ರೈಲು ಯೋಜನೆ ವಿಶೇಷತೆಗಳೇನು ?

    ಭಾರತ ತಂತ್ರಜ್ಞಾನಗಳು ಬೆಳೆದಂತೆ ಒಂದಿಲ್ಲೊಂದು ರೀತಿಯಲ್ಲಿ ಹೊಸ ಮಹತ್ವದ ಹೆಜ್ಜೆಗಳನ್ನು ಇಡುತ್ತಲೇ ಹೊರಟಿದೆ. ಉಗಿ ಬಂಡೆಗಳ ರೈಲುಗಳನ್ನು ಬಳಸುತ್ತಿದ್ದ ನಾವುಗಳು ಇದೀಗ ಇಂಧನ, ವಿದ್ಯುತ್ ಬಳಸಿ ರೈಲುಗಳಲ್ಲಿ ಸಂಚರಿಸುತ್ತಿದ್ದೇವೆ. ಈಗ ಭಾರತ ಮತ್ತೆ ಮಹತ್ವದ ಹೆಜ್ಜೆ ಹಾಕಲು 508 ಕಿಮೀ ಉದ್ದದ ಹೈ ಸ್ಪೀಡ್ ಬುಲೆಟ್ ರೈಲು ಯೋಜನೆಯನ್ನು ನಿರ್ಮಿಸುತ್ತಿದೆ.

    2017ರ ಸೆಪ್ಟೆಂಬರ್ 14ರಂದು ಪ್ರಧಾನಿ ನರೇಂದ್ರ ಮೋದಿ ಹಾಗೂ ಜಪಾನ್ ಪ್ರಧಾನಿ ಶಿಂಜೋ ಅಬೆ ಅವರು ಭಾರತದ ಅತಿ ಉದ್ದದ ಹೈ ಸ್ಪೀಡ್ ಬುಲೆಟ್ ರೈಲು ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದ್ದರು. ಈಗಾಗಲೇ ಇದರ ನಿರ್ಮಾಣ ಆರಂಭವಾಗಿದ್ದು, ಪ್ರಗತಿಯ ಹಂತದಲ್ಲಿದೆ.

    ಮುಂಬೈ ಮತ್ತು ಅಹಮದಾಬಾದ್ ನಡುವೆ ಸಂಚರಿಸುವ ಈ ರೈಲು 508 ಕಿಮೀ ಉದ್ದದ ಯೋಜನೆಯಾಗಿದ್ದು, 300 ಕಿಮೀ ನಷ್ಟು ವಯಾಡಕ್ಟ್ ಮೂಲಕ ಸಂಚರಿಸಲಿದೆ. ಒಟ್ಟು 1.08 ಲಕ್ಷ ಕೋಟಿ ರೂಪಾಯಿ ವೆಚ್ಚದಲ್ಲಿ ಈ ಬುಲೆಟ್ ರೈಲು ನಿರ್ಮಾಣಗೊಳ್ಳಲಿದೆ. ಈ ಪೈಕಿ ತಲಾ 5000 ಕೋಟಿ ರೂಪಾಯಿಗಳನ್ನು ಗುಜರಾತ್ ಮತ್ತು ಮಹಾರಾಷ್ಟ್ರ ಸರ್ಕಾರಗಳು ಪಾವತಿಸುತ್ತೇವೆ ಹಾಗೂ NHSRCL ಗೆ ಕೇಂದ್ರವು 10,000 ಕೋಟಿ ರೂಪಾಯಿಗಳನ್ನು ಪಾವತಿಸುತ್ತಿದೆ. ಈಗಾಗಲೇ ಈ ಬುಲೆಟ್ ರೈಲಿನ ಪ್ರಮುಖ ಘಟ್ಟವಾದ 300 ಕಿಮೀ ವಯಾಡಕ್ಟ್ ನಿರ್ಮಿಸುವ ಹಂತವನ್ನು ಪೂರ್ಣಗೊಳಿಸಿದೆ.

    ಒಟ್ಟು ರೈಲಿನ ಉದ್ದದ ಪೈಕಿ 300 ಕಿಮೀ ವಯಾಡಕ್ಟ್ ನಲ್ಲಿ ಎಂಟು ನದಿಗಳಿದ್ದು, ಆ ಪೈಕಿ 5 ನದಿಗಳಿಗೆ ಸೇತುವೆಗಳನ್ನು ನಿರ್ಮಿಸಲಾಗಿದೆ. ಇನ್ನುಳಿದಂತೆ 21 ಕಿಮೀ ಭೂಗತ, 7 ಕಿಮೀ ಸಮುದ್ರದ ಆಳ ಮತ್ತು 5 ಕಿ.ಮೀ ಪರ್ವತ ಸುರಂಗಗಳನ್ನ ಒಳಗೊಂಡಿದೆ. ಈ ರೈಲು ಮುಂಬೈನಿಂದ ಅಹಮದಾಬಾದ್ ಗೆ ಸಂಚರಿಸಲು 2.07 ಗಂಟೆಗಳನ್ನು ತೆಗೆದುಕೊಳ್ಳುತ್ತದೆ. 12 ನಿಲ್ದಾಣಗಳ ಮೂಲಕ ಚಲಿಸುವುದರಿಂದ ಒಟ್ಟು 2.58 ಗಂಟೆಗಳನ್ನು ತೆಗೆದುಕೊಳ್ಳುತ್ತದೆ.

    ಬುಲೆಟ್ ರೈಲು ಯೋಜನೆಯ 12 ನಿಲ್ದಾಣಗಳು:
    ಈ ಬುಲೆಟ್ ರೈಲು ಯೋಜನೆ ಒಟ್ಟು 12 ನಿಲ್ದಾಣಗಳನ್ನು ಒಳಗೊಂಡಿದ್ದು, ಗುಜರಾತ್ ನಲ್ಲಿ 9 ಹಾಗೂ ಮಹಾರಾಷ್ಟ್ರದಲ್ಲಿ ಮೂರು ನಿಲ್ದಾಣಗಳನ್ನು ಒಳಗೊಂಡಿದೆ. ಸಬರಮತಿ, ಅಹಮದಾಬಾದ್, ಆನಂದ್, ವಡೋದರ, ಭರೂಚ್, ಸೂರತ್, ಬಿಲಿಮೋರಾ, ವಾಪಿ, ಬೋಯಿಸರ್, ವಿರಾರ್, ಥಾಣೆ ಹಾಗೂ ಮುಂಬೈ.

    ಇನ್ನು ಈ ಬುಲೆಟ್ ರೈಲು ಯೋಜನೆ ಒಂದು ವಿಶೇಷತೆ ಎಂದರೆ ಇದು ಯುರೋಪಿಯನ್ ಸಿಗ್ನಲಿಂಗ್ ತಂತ್ರಜ್ಞಾನವನ್ನು ಆಧರಿಸಿದೆ ಎನ್ನಲಾಗುತ್ತದೆ. ಇದಕ್ಕೆ ಸಂಬಂಧಿಸಿದಂತೆ ಜರ್ಮನ್ ಸಂಸ್ಥೆ ಸಿಮೇನ್ಸ್ ಹಾಗೂ ಅಹ್ಮದಾಬಾದ್ ಮೂಲದ ದಿನೇಶ್ ಚಂದ್ ಆರ್ ಅಗರ್ವಾಲ್ ಅವರು ಈ ಕುರಿತು ಮಾತುಕತೆ ನಡೆಸಿರುವುದಾಗಿ ವರದಿಯಾಗಿದೆ.

    ಆರಂಭದಲ್ಲಿ ಇರಲು ಯೋಜನೆ 2026 ಹೊತ್ತಿಗೆ ಪೂರ್ಣಗೊಳ್ಳಲಿದೆ ಎಂದಿದ್ದರು. ಆದರೆ ಸದ್ಯದ ಪ್ರಗತಿಯ ಪ್ರಕಾರ 2028ರಲ್ಲಿ ಬುಲೆಟ್ ರೈಲು ಯೋಜನೆ ಪೂರ್ಣಗೊಳ್ಳಲಿದೆ ಎಂದು ಮಾಹಿತಿ ಇದೆ.

  • ಆಪರೇಷನ್ ಸಿಂಧೂರ ಸಕ್ಸಸ್ – `ತಿರಂಗಾ ಯಾತ್ರೆ’ಯಲ್ಲಿ ಅಮಿತ್ ಶಾ ಭಾಗಿ

    ಆಪರೇಷನ್ ಸಿಂಧೂರ ಸಕ್ಸಸ್ – `ತಿರಂಗಾ ಯಾತ್ರೆ’ಯಲ್ಲಿ ಅಮಿತ್ ಶಾ ಭಾಗಿ

    ಗಾಂಧಿನಗರ: ಆಪರೇಷನ್ ಸಿಂಧೂರ(Operation Sindoor) ಯಶಸ್ಸಿನ ಸಲುವಾಗಿ ಭಾರತೀಯ ಸಶಸ್ತ್ರ ಪಡೆಗಳನ್ನು ಗೌರವಿಸಲು ಭಾನುವಾರ ಗುಜರಾತ್‌ನ ಅಹಮದಾಬಾದ್‌ನಲ್ಲಿ ಹಮ್ಮಿಕೊಂಡಿದ `ತಿರಂಗಾ ಯಾತ್ರೆ’ಯನ್ನು(Tiranga Yatra) ಕೇಂದ್ರ ಗೃಹಸಚಿವ ಅಮಿತ್ ಶಾ(Amit Shah) ಮುನ್ನಡೆಸಿದರು.

    ಈ ತಿರಂಗಾ ಯಾತ್ರೆಯ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ಅವರು, ರಾಷ್ಟ್ರದ ಧೈರ್ಯಶಾಲಿ ಯೋಧರು ತಮ್ಮ ಶೌರ್ಯದಿಂದ ಆಪರೇಷನ್ ಸಿಂಧೂರವನ್ನು ಭಯೋತ್ಪಾದನೆಯ ನಿರ್ಮೂಲನೆಯ ಸಮಾನಾರ್ಥಕ ಪದವನ್ನಾಗಿಸಿದ್ದಾರೆ. ಈ ಕಾರ್ಯಾಚರಣೆಯ ಐತಿಹಾಸಿಕ ಯಶಸ್ಸಿಗಾಗಿ ಸೈನಿಕರನ್ನು ಗೌರವಿಸಲು ಗಾಂಧಿನಗರ ಲೋಕಸಭೆಯಲ್ಲಿ ಆಯೋಜಿಸಲಾದ ತಿರಂಗಾ ಯಾತ್ರೆಯಿಂದ ನೇರಪ್ರಸಾರ ಎಂದು ಬರೆದುಕೊಂಡಿದ್ದರು. ಇದನ್ನೂ ಓದಿ: ಭಾರೀ ಮಳೆಯಿಂದ ಪಂದ್ಯ ರದ್ದು – ನಿರಾಸೆಗೊಂಡಿದ್ದ ಅಭಿಮಾನಿಗಳಿಗೆ ಸಿಹಿ ಸುದ್ದಿ ಕೊಟ್ಟ ಆರ್‌ಸಿಬಿ!

    ಬಿಜೆಪಿಯು ಈ ತಿರಂಗಾ ಯಾತ್ರೆಯನ್ನು ಮೇ 13ರಂದು ಆರಂಭಿಸಿದ್ದು, ಮೇ 23ರಂದು ಇದು ಕೊನೆಗೊಳ್ಳಲಿದೆ. ಆಪರೇಷನ್ ಸಿಂಧೂರದ ಮೂಲಕ ಉಗ್ರರನ್ನು ಮಟ್ಟಹಾಕಿದ ಭಾರತೀಯ ಸೇನೆ(Indian Army) ಹಾಗೂ ಸೈನಿಕರ ಶೌರ್ಯವನ್ನು ಗೌರವಿಸುವ ಉದ್ದೇಶದಿಂದ ಈ ತಿರಂಗಾ ಯಾತ್ರೆ ಮಾಡಲಾಗುತ್ತಿದೆ.

  • ಹುಬ್ಬಳ್ಳಿಯಿಂದ ಅಹಮದಾಬಾದ್, ಚೆನ್ನೈಗೆ ವಿಮಾನ: ಕೇಂದ್ರ ಸಚಿವರ ಸಮಾಲೋಚನೆ

    ಹುಬ್ಬಳ್ಳಿಯಿಂದ ಅಹಮದಾಬಾದ್, ಚೆನ್ನೈಗೆ ವಿಮಾನ: ಕೇಂದ್ರ ಸಚಿವರ ಸಮಾಲೋಚನೆ

    – ವಿಮಾನಯಾನ ಸಚಿವರ ಜೊತೆ ಪ್ರಹ್ಲಾದ್ ಜೋಶಿ ಚರ್ಚೆ

    ನವದೆಹಲಿ: ವಾಣಿಜ್ಯ ನಗರಿ ಹುಬ್ಬಳ್ಳಿಯಿಂದ (Hubbali) ಅಹಮದಾಬಾದ್ (Ahmadabad) ಹಾಗೂ ಚೆನ್ನೈಗೆ (Chennai) ವಿಮಾನಯಾನ ಸೌಲಭ್ಯ ಕಲ್ಪಿಸುವಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Prahlad Joshi) ನಾಗರಿಕ ವಿಮಾನಯಾನ ಸಚಿವ ರಾಮ್‌ಮೋಹನ್ ನಾಯ್ಡು (Rammohan Naidu) ಅವರ ಗಮನ ಸೆಳೆದಿದ್ದಾರೆ.

    ರಾಷ್ಟç ರಾಜಧಾನಿಯ ನಾಗರಿಕ ವಿಮಾನಯಾನ ಸಚಿವಾಲಯದಲ್ಲಿ ಇಂದು (ಅ.17) ಸಚಿವ ರಾಮ್‌ಮೋಹನ್ ನಾಯ್ದು ಅವರನ್ನು ಭೇಟಿ ಮಾಡಿ ಚರ್ಚಿಸಿದರು.ಇದನ್ನೂ ಓದಿ: ದಕ್ಷಿಣ ಲೆಬನಾನ್ ಮೇಲೆ ಇಸ್ರೇಲ್ ದಾಳಿ – ಮೃತರ ಸಂಖ್ಯೆ 16ಕ್ಕೆ ಏರಿಕೆ

    ಹುಬ್ಬಳ್ಳಿಯಿಂದ ಅಹಮದಾಬಾದ್ ನಡುವೆ ವಿಮಾನ ಸೌಲಭ್ಯ ಕಲ್ಪಿಸಲು ಕ್ರಮ ಕೈಗೊಳ್ಳಬೇಕು. ಜೊತೆಗೆ ಹುಬ್ಬಳ್ಳಿಯಿಂದ ಚೆನ್ನೈಗೆ ಇರುವ ವಿಮಾನ ಸಂಪರ್ಕವನ್ನು ಸ್ಥಗಿತಗೊಳಿಸುವುದು ಬೇಡ. ಈ ವಿಮಾನಯಾನವನ್ನು ಮುಂದುವರೆಸುವಂತೆ ಮನವಿ ಮಾಡಿದರು.

    ಛೋಟಾ ಮುಂಬೈ ಎಂದೇ ಹೆಸರಾದ ಪ್ರಮುಖ ವಾಣಿಜ್ಯ ನಗರಿ ಹುಬ್ಬಳ್ಳಿಗೆ ಅನೇಕ ಉದ್ಯಮಿಗಳ ಸಂಪರ್ಕವಿದೆ. ಅಹಮದಾಬಾದ್ ಮತ್ತು ಚೆನ್ನೈ ನಗರಗಳಿಗೆ ವಿಮಾನ ಸಾರಿಗೆ ಸೌಲಭ್ಯಕ್ಕೆ ಹೆಚ್ಚು ಆದ್ಯತೆ ನೀಡಿದ್ದಲ್ಲಿ ಉದ್ಯಮಿಗಳ ತ್ವರಿತ ಸಂಚಾರ ಮತ್ತು ನಿಕಟ ಸಂಪರ್ಕಕ್ಕೆ ಅನುಕೂಲವಾಗುತ್ತದೆ. ಹುಬ್ಬಳ್ಳಿ ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಹ ಗುರುತಿಸಿಕೊಳ್ಳುತ್ತಿದೆ. ಅಂತೆಯೇ ರೈಲ್ವೇ ನಿಲ್ದಾಣದ ಜೊತೆ ವಿಮಾನ ನಿಲ್ದಾಣವೂ ಅಂತಾರಾಷ್ಟ್ರೀಯ ಮೆರುಗಿನಲ್ಲಿ ಅಭಿವೃದ್ಧಿ ಹೊಂದುತ್ತಿದೆ ಎಂದು ಮಾತುಕತೆ ನಡೆಸಿದರು.

    ಹುಬ್ಬಳ್ಳಿ ವಿಮಾನ ನಿಲ್ದಾಣದ ವಿಶಾಲವಾದ ಪ್ರದೇಶದಲ್ಲಿ ಹೊಸ ಟರ್ಮಿನಲ್ ಸಹ ನಿರ್ಮಾಣವಾಗುತ್ತಿದೆ. ಪ್ರಯಾಣಿಕರಿಗೆ ಮತ್ತು ವಿಮಾನಗಳಿಗೆ ಅಗತ್ಯ ಮೂಲ ಸೌಲಭ್ಯ ಇಲ್ಲಿದ್ದು, ಚೆನ್ನೈ ಸಂಪರ್ಕದ ವಿಮಾನಯಾನ ಸ್ಥಗಿತಗೊಳಿಸದೇ ಅದನ್ನು ಮುಂದುವರೆಸಿ ಎಂದು ಸಮಾಲೋಚನೆ ನಡೆಸಿದರು.ಇದನ್ನೂ ಓದಿ: CJI ಹುದ್ದೆಗೆ ನ್ಯಾ. ಸಂಜೀವ್ ಖನ್ನಾ ಹೆಸರು ಶಿಫಾರಸು

  • ಪತಿಯ ಖಾತೆಯ ಸ್ಟೇಟ್‍ಮೆಂಟ್ ಕೊಟ್ಟ ಬ್ಯಾಂಕಿಗೆ ಬಿತ್ತು ದಂಡ!

    ಪತಿಯ ಖಾತೆಯ ಸ್ಟೇಟ್‍ಮೆಂಟ್ ಕೊಟ್ಟ ಬ್ಯಾಂಕಿಗೆ ಬಿತ್ತು ದಂಡ!

    ಗಾಂಧಿನಗರ: ಪತಿಯ ಖಾತೆಯ ವಿವರವನ್ನು ಪತ್ನಿಗೆ ನೀಡಿದ್ದಕ್ಕೆ ರಾಷ್ಟ್ರೀಯ ಬ್ಯಾಂಕ್ ಒಂದಕ್ಕೆ ಗ್ರಾಹಕರ ವ್ಯಾಜ್ಯ ಪರಿಹಾರ ವೇದಿಕೆ 10 ಸಾವಿರ ರೂ. ದಂಡ ವಿಧಿಸಿದೆ.

    ಪತಿಯ ಅನುಮತಿ ಇಲ್ಲದೇ, ಆತನ ಪತ್ನಿಗೆ ಬ್ಯಾಂಕ್ ಖಾತೆಗಳ ಮೂರು ವರ್ಷದ ಸ್ಟೇಟ್‍ಮೇಟ್ ನೀಡಿದ್ದ ಇಂಡಿಯನ್ ಓವರ್‍ಸೀಸ್ ಬ್ಯಾಂಕಿಗೆ ಗ್ರಾಹಕರ ವ್ಯಾಜ್ಯ ಪರಿಹಾರ ವೇದಿಕೆ 10 ಸಾವಿರ ರೂ. ದಂಡ ವಿಧಿಸಿದೆ.

    ಏನಿದು ಪ್ರಕರಣ?
    ಅಹಮದಾಬಾದ್ ನಗರದ ಸರ್ದಾರ್’ನಗರ್-ಹನ್ಸೋಲ್ ಶಾಖೆಯ ಗ್ರಾಹಕರಾಗಿರುವ ದಿನೇಶ್ ಪಮ್ನಾನಿ, ಅನುಮತಿ ಇಲ್ಲದೇ ನನ್ನ ವೈಯಕ್ತಿಕ ಖಾತೆಗಳ ಮಾಹಿತಿಯನ್ನು ಪತ್ನಿಗೆ ನೀಡಿದ್ದರ ಕುರಿತು ಗ್ರಾಹಕರ ನ್ಯಾಯಾಲಯಕ್ಕೆ ದೂರು ನೀಡಿದ್ದರು. ಅಲ್ಲದೇ ದಿನೇಶ್ ಕೌಟುಂಬಿಕ ನ್ಯಾಯಾಲಯದಲ್ಲಿ ಕಳೆದ ಮೂರು ವರ್ಷಗಳಿಂದ ಕುಟುಂಬ ಕಲಹದ ಪ್ರಕರಣ ದಾಖಲಾಗಿತ್ತು. ಹೀಗಿರುವಾಗ ಬ್ಯಾಂಕ್ ನನ್ನ ಅನುಮತಿ ಪಡೆಯದೇ, ಮಾಹಿತಿ ನೀಡಿದ್ದು ತಪ್ಪು ಎಂದು ಆರೋಪಿಸಿದ್ದರು.

    ಗೊತ್ತಾಗಿದ್ದು ಹೇಗೆ?
    ಇತ್ತೀಚೆಗೆ ದಿನೇಶ್ ಅವರ ಮೊಬೈಲ್ ನಂಬರಿಗೆ ಖಾತೆಯಲ್ಲಿ 103 ರೂಪಾಯಿ ಕಡಿತಗೊಂಡಿದೆ ಎಂದು ಮೆಸೇಜ್ ಬಂದಿತ್ತು. ಯಾಕೆ ಕಡಿತವಾಯಿತು ಎಂದು ಪರಿಶೀಲಿಸಿದಾಗ ಯಾರೋ ಬ್ಯಾಂಕ್ ಸ್ಟೇಟ್‍ಮೆಂಟ್ ಪಡೆದಿರುವುದು ಅವರ ಗಮನಕ್ಕೆ ಬಂದಿದೆ. ಕೂಡಲೇ ಬ್ಯಾಂಕ್ ಶಾಖೆಗೆ ಹೋಗಿ ವಿಚಾರಿಸಿದಾಗ, ಸಿಬ್ಬಂದಿ ತನ್ನ ಪತ್ನಿಗೆ ಮೂರು ವರ್ಷದ ಅಕೌಂಟ್ ಸ್ಟೇಟ್‍ಮೆಂಟ್ ನೀಡಿರುವ ವಿಚಾರ ತಿಳಿಯುತ್ತದೆ. ಇದನ್ನೇ ಆಧಾರವಾಗಿಟ್ಟುಕೊಂಡು ದಿನೇಶ್ ಗ್ರಾಹಕರ ವ್ಯಾಜ್ಯ ಪರಿಹಾರ ವೇದಿಕೆಗೆ ದೂರು ನೀಡಿದ್ದರು.

    ಐಓಬಿ ಹೇಳಿದ್ದೇನು?
    ದಿನೇಶ್ ಪ್ರತಿನಿಧಿಯಾಗಿ ಅವರ ಪತ್ನಿ ಬ್ಯಾಂಕಿಗೆ ಬಂದಿದ್ದರು. ಹೀಗಾಗಿ, ನಾವು ಖಾತೆಯ ಸ್ಟೇಟ್‍ಮೆಂಟ್ ನೀಡಿದ್ದೇವು. ಇದರಲ್ಲಿ ಯಾವುದೇ ಅಕ್ರಮ ವ್ಯವಹಾರ ನಡೆದಿಲ್ಲವೆಂದು ವೇದಿಕೆ ಎದುರು ವಾದಿಸಿತ್ತು.

    ಆರ್‌ಬಿಐ ಮಾರ್ಗಸೂಚಿ ಏನು?
    ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ(ಆರ್‌ಬಿಐ) ಮಾರ್ಗಸೂಚಿ ಪ್ರಕಾರ, ವ್ಯಕ್ತಿಯ ಒಪ್ಪಿಗೆ ಪತ್ರವಿಲ್ಲದೇ ಮೂರನೇ ವ್ಯಕ್ತಿಗೆ ಯಾವುದೇ ಬ್ಯಾಂಕ್ ಸ್ಟೇಟ್‍ಮೆಂಟ್ ಗಳನ್ನು ನೀಡಬಾರದು. ಅಲ್ಲದೇ ಬ್ಯಾಂಕುಗಳು ಗ್ರಾಹಕರ ಖಾಸಗಿತನವನ್ನು ಉಲ್ಲಂಘನೆ ಮಾಡುವಂತಿಲ್ಲ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಏಕಾಏಕಿ 11 ಸಿಂಹಗಳ ಸಾವು: ತನಿಖೆಗೆ ಆದೇಶಿಸಿದ ಗುಜರಾತ್ ಸರ್ಕಾರ

    ಏಕಾಏಕಿ 11 ಸಿಂಹಗಳ ಸಾವು: ತನಿಖೆಗೆ ಆದೇಶಿಸಿದ ಗುಜರಾತ್ ಸರ್ಕಾರ

    ಅಹಮದಾಬಾದ್: ಗುಜರಾತಿನ ಗಿರ್ ಅರಣ್ಯ ಪ್ರದೇಶದಲ್ಲಿ ಏಕಾಏಕಿ 11 ಸಿಂಹಗಳು ಸಾವನ್ನಪ್ಪಿದ್ದ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ ತನಿಖೆಗೆ ಆದೇಶ ನೀಡಿದೆ.

    ಸಿಂಹಗಳ ರಾಜ್ಯವೆಂದೆ ಹೆಸರು ಪಡೆದುಕೊಂಡಿರುವ ಗುಜರಾತ್‍ನಲ್ಲಿ ಏಕಾಏಕಿ 11 ಸಿಂಹಗಳು ಸಾವನ್ನಪ್ಪಿದ್ದು, ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಗಿರ್ ಅರಣ್ಯ ಪ್ರದೇಶದ ದಾಲ್ಕನೀಯಾ ವ್ಯಾಪ್ತಿಯಲ್ಲಿ ಸಿಂಹಗಳ ಮೃತದೇಹಗಳು ಪತ್ತೆಯಾಗಿದೆ.

    ಈ ಕುರಿತು ಪ್ರತಿಕ್ರಿಯಿಸಿರುವ ಅರಣ್ಯಾಧಿಕಾರಿ ಪಿ ಪುರುಷೋತ್ತಮ್, ಕಳೆದ ಬುಧವಾರ ಗಿರ್ ಅರಣ್ಯ ಪ್ರದೇಶದ ದಾಲ್ಕನಿಯಾ ರೇಂಜ್ ನಲ್ಲಿ ಕಳೆದ ಎರಡು ದಿನಗಳ ಹಿಂದಷ್ಟೇ 7 ಸಿಂಹಗಳ ಶವ ಪತ್ತೆಯಾಗಿತ್ತು. ಮತ್ತೆ ಇದೀಗ ಇದೇ ಪ್ರದೇಶದಲ್ಲಿ 4 ಸಿಂಹಗಳ ಶವ ಪತ್ತೆಯಾಗಿದೆ. ಈ ಮೂಲಕ ಸಿಂಹಗಳ ಸಾವಿನ ಸಂಖ್ಯೆ 11 ಕ್ಕೆ ಏರಿಕೆಯಾಗಿದೆ. ಸಿಂಹಗಳ ಸಾವಿನಲ್ಲಿ ಯಾವುದೇ ರೀತಿಯ ಷಡ್ಯಂತ್ರ ಕಾಣುತ್ತಿಲ್ಲ. ಆಹಾರ ಮತ್ತು ಸಂತಾನೋತ್ಪತ್ತಿ ಸಂದರ್ಭಗಳಲ್ಲಿ ವನ್ಯಮೃಗಗಳ ಕಾದಾಟ ಸಾಮಾನ್ಯ. ಬಹುಶಃ ಇದೇ ಸಿಂಹಗಳ ಸಾವಿಗೆ ಕಾರಣವಾಗಿರಬಹುದು ಎಂದು ತಿಳಿಸಿದ್ದಾರೆ.

    ಅರಣ್ಯ ಮತ್ತು ಪರಿಸರ ಇಲಾಖೆಯ ಅಧಿಕಾರಿಯಾದ ಡಾ. ರಾಜೀವ್ ಕುಮಾರ್ ಗುಪ್ತಾ ಮಾತನಾಡಿ, ಪ್ರಸ್ತುತ ದೊರೆತ ಸಿಂಹಗಳ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು. ಈ ಹಿಂದೆ ಸತ್ತ ಸಿಂಹಗಳ ಮರಣೋತ್ತರ ಪರೀಕ್ಷೆಯಲ್ಲಿ ಸಿಂಹಗಳ ಸಾವಿಗೆ ಕಾದಾಟದಿಂದ ಆದ ಗಾಯಗಳೇ ಕಾರಣ ಎಂದು ವೈದ್ಯರು ತಿಳಿಸಿದ್ದಾರೆ. ಪ್ರಸ್ತುತ ದೊರೆತಿರುವ ಶವಗಳನ್ನೂ ಜುನಾಘಡ್ ನಲ್ಲಿರುವ ಪಶು ವೈದ್ಯಕೀಯ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಮೇಲ್ನೋಟಕ್ಕೆ ಇದೂ ಕೂಡ ಕಾದಾಟದಿಂದ ಸಂಭವಿಸಿದ ಸಾವು ಎಂದು ಹೇಳಿದ್ದಾರೆ.

    ಅಲ್ಲದೇ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ ಈ ಕುರಿತು ತನಿಖೆ ನಡೆಸುವಂತೆ ಆದೇಶ ನೀಡಿದ್ದಾರೆ ಎಂದಿದ್ದಾರೆ. 2015ರ ಸಿಂಹಗಳ ಗಣತಿಯ ಪ್ರಕಾರ ಗಿರ್ ಅರಣ್ಯ ಪ್ರದೇಶದಲ್ಲಿ ಒಟ್ಟು 520 ಸಿಂಹಗಳಿದ್ದವು ಎಂದು ತಿಳಿದು ಬಂದಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಸಿಂಹಗಳ ದಾಳಿಯಿಂದ ಮಾಲೀಕನನ್ನು ರಕ್ಷಿಸಿದ ಶ್ವಾನ!

    ಸಿಂಹಗಳ ದಾಳಿಯಿಂದ ಮಾಲೀಕನನ್ನು ರಕ್ಷಿಸಿದ ಶ್ವಾನ!

    ಅಹಮದಾಬಾದ್: ಸಿಂಹಗಳ ದಾಳಿಗೆ ಒಳಗಾಗಿದ್ದ ಕುರಿಗಾಹಿ ಮಾಲೀಕನನ್ನು ಸಾಕುನಾಯಿ ಕಾಪಾಡಿದ ಘಟನೆ ಗುಜರಾತ್ ನ ಅಮ್ರೆಲಿ ಜಿಲ್ಲೆಯ ಅಂಬಾರ್ಡಿ ಗ್ರಾಮದಲ್ಲಿ ನಡೆದಿದೆ.

    ಈ ಮೂಲಕ ನಾಯಿ ಹಾಗೂ ಮಾನವನ ನಡುವೆ ಅವಿನಾಭಾವ ಸಂಬಂಧ ಇರುವುದು ಮತ್ತೊಮ್ಮೆ ಸಾಬೀತಾಗಿದೆ. ಕುರಿಗಾಹಿಯೊಬ್ಬರ ಮೇಲೆ ಸಿಂಹಗಳು ದಾಳಿ ನಡೆಸಿದ ಸಂದರ್ಭದಲ್ಲಿ ಆತ ಸಾಕಿದ ನಾಯಿ ಪ್ರಾಣದ ಹಂಗು ತೊರೆದು ಮಾಲೀಕನ ಪ್ರಾಣ ರಕ್ಷಿಸಿದೆ.

    ಭಾವೇಶ್ ಹಮೀರ್ ಭರ್ವಾದ್ (25) ಸಿಂಹಗಳ ದಾಳಿಯಿಂದ ಪಾರಾದ ಕುರಿಗಾಹಿ. ಸಿಂಹಗಳ ದಾಳಿಯಿಂದಾಗಿ ಕುರಿಗಾಹಿ ಭಾವೇಶ್ ಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಕೂಡಲೇ ಗ್ರಾಮಸ್ಥರು ಸಾವರ್ಕುಂಡ್ಲಾದ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಘಟನೆ ಸಂಬಂಧ ಗ್ರಾಮಸ್ಥರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದು, ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

    ಏನಿದು ಘಟನೆ?
    ಭಾವೇಶ್ ಎಂದಿನಂತೆ ಶನಿವಾರ ತನ್ನ ಕುರಿಗಳ ಹಿಂಡು ಹಾಗೂ ಸಾಕುನಾಯಿಯೊಂದಿಗೆ ಅಂಬಾರ್ಡಿ ಗ್ರಾಮದ ಹೊರವಲಯದಲ್ಲಿ ಕುರಿಮೇಯಿಸಲು ತೆರಳಿದ್ದರು. ಈ ವೇಳೆ ಕುರಿಹಿಂಡಿನ ಮೇಲೆ ಏಕಾಏಕಿ ಮೂರು ಸಿಂಹಗಳು ದಾಳಿ ನಡೆಸಿದ್ದು, ಮೂರು ಕುರಿಗಳನ್ನು ಕೊಂದು ಹಾಕಿವೆ. ಇದೇ ವೇಳೆ ಸಿಂಹಗಳ ದಾಳಿಯಿಂದ ತನ್ನ ಕುರಿಗಳನ್ನು ರಕ್ಷಿಸಲು ಹೋದ ಭಾವೇಶ್ ಮೇಲೆಯೂ ಸಿಂಹಗಳು ದಾಳಿ ನಡೆಸಿವೆ.

    ಅಷ್ಟರಲ್ಲೇ ಆತ ಸಾಕಿದ ನಾಯಿ ಜೋರಾಗಿ ಬೋಗಳಲಾರಂಭಿಸಿ ಸಿಂಹಗಳು ಮುಂದೆ ಬರದಂತೆ ತಡೆದಿದೆ. ನಾಯಿ ನಿರಂತರ ಬೊಗಳುತ್ತಿರುವುದನ್ನು ಕೇಳಿಸಿಕೊಂಡ ಸ್ಥಳೀಯರು ತಕ್ಷಣ ಸ್ಥಳಕ್ಕೆ ಧಾವಿಸಿದ್ದರಿಂದ ಜನರ ಗುಂಪು ನೋಡಿ ಗಾಬರಿಗೊಂಡ ಸಿಂಹಗಳು ಸ್ಥಳದಿಂದ ಓಡಿಹೋಗಿವೆ.

  • ನೂರು ಕೋಟಿ ಆಸ್ತಿ ತ್ಯಜಿಸಿ ಜೈನ ದೀಕ್ಷೆ ಪಡೆದ 24ರ ಯುವಕ!

    ನೂರು ಕೋಟಿ ಆಸ್ತಿ ತ್ಯಜಿಸಿ ಜೈನ ದೀಕ್ಷೆ ಪಡೆದ 24ರ ಯುವಕ!

    ಅಹಮದಾಬಾದ್: ಮುಂಬೈ ಮೂಲದ 24ರ ಹರೆಯದ ಯುವಕ ಮೋಕ್ಷೇಶ್ ಸೇಟ್ ಶುಕ್ರವಾರ ಬೆಳಗ್ಗೆ ಜೈನ ದೀಕ್ಷೆಯನ್ನು ಸ್ವೀಕರಿಸಿದರು.

    ಮೋಕ್ಷೇಶ್ ಕುಟುಂಬಕ್ಕೆ ಜೆ ಕೆ ಕಾರ್ಪೊರೇಷನ್ ಹೆಸರಿನ ವಜ್ರ ಲೋಹದ ಮತ್ತು ಸಕ್ಕರೆ ಉದ್ಯಮಗಳಿವೆ. ಸುಮಾರು ನೂರು ಕೋಟಿ ಆಸ್ತಿಯನ್ನು ತ್ಯಜಿಸಿದ್ದಾರೆ. ಚಾರ್ಟೇಡ್ ಅಕೌಂಟೆಂಟ್ ಆಗಿರುವ ಇವರು ಎಲ್ಲಾ ಆಸ್ತಿಪಾಸ್ತಿಯನ್ನು ಬಿಟ್ಟು ಗಾಂಧಿನಗರ-ಅಹಮದಾಬಾದ್ ರಸ್ತೆಯ ತಪೋವನ ಸರ್ಕಲ್‍ನಲ್ಲಿ ಇಂದು ಜೈನ ದೀಕ್ಷೆ ಸ್ವೀಕರಿಸಿದರು.

    ವಿದ್ಯಾಭ್ಯಾಸದಲ್ಲಿ ಮೊದಲಿಗನಾಗಿದ್ದ ನಾನು ಕಂಪನಿಯ ಲೆಕ್ಕ ಪರಿಶೋಧನೆಗಿಂತ ಧರ್ಮದ ಪರಿಶೋಧನೆಯ ವಿದ್ಯಾರ್ಥಿಯಾಗಲು ಬಯಸುತ್ತೇನೆ. 15 ವರ್ಷ ಇದ್ದಾಗಲೇ ಸನ್ಯಾಸಿಯಾಗಲು ಬಯಸಿದ್ದೆ. ಈ ಪ್ರಪಂಚದಿಂದ ನೆಮ್ಮದಿಯ ಜೀವನ ಸಿಗದ ಕಾರಣ ಈ ನಿರ್ಧಾರ ಕೈಗೊಂಡಿದ್ದೇನೆ. ನನ್ನೊಬ್ಬನ ಸಂತೋಷಕ್ಕಿಂತ ಎಲ್ಲರ ಸಂತೋಷವನ್ನು ಬಯಸುತ್ತೇನೆ ಎಂದು ಮೋಕ್ಷೇಶ್ ಹೇಳಿದ್ದಾರೆ.

    ಮೋಕ್ಷೇಶ್ ಕುಟುಂಬದವರು ಉತ್ತರ ಗುಜರಾತ್ ನ ಡೀಸಾ ನಿಂದ ವಲಸೆ ಬಂದು ಮಂಬೈನಲ್ಲಿ ನೆಲೆಸಿ 60 ವರ್ಷ ಆಗಿದೆ. ತಂದೆ ಸಂದೀಪ್, ಚಿಕ್ಕಪ್ಪ ಗಿರೀಶ್ ಸೇಟ್ ಒಟ್ಟಿಗೆ ವಾಸಮಾಡುತ್ತಿದ್ದಾರೆ.

    ಮೂರು ಜನ ಅಣ್ಣ ತಮ್ಮಂದಿರಲ್ಲಿ ಮೋಕ್ಷೇಶ್ ಮೊದಲನೆಯವರು. ವಾಲೇಶ್ವರ್‍ನಲ್ಲಿ ಶಾಲಾ ಶಿಕ್ಷಣವನ್ನು ಮುಗಿಸಿದ್ದ ಮೋಕ್ಷೇಶ್ 10ನೇ ತರಗತಿಯಲ್ಲಿ 93.38%, 12 ನೇ ತರಗತಿಯಲ್ಲಿ 85% ಅಂಕವನ್ನು ಪಡೆದ್ದರು.

    ಹೆಚ್‍ಆರ್ ಕಾಲೇಜಿನಲ್ಲಿ ವಾಣಿಜ್ಯ ಪದವಿ ಓದುತ್ತಿದ್ದಾಗ ಸಿಎ ಆರ್ಹತಾ ಪರೀಕ್ಷೆ ಪಾಸ್ ಮಾಡಿದ್ದ ಮೋಕ್ಷೇಶ್ ನಂತರ ಕುಟುಂಬದ ಲೋಹದ ವ್ಯವಹಾರವನ್ನು ಸಾಂಗ್ಲಿಯಲ್ಲಿ ಮುಂದುವರಿಸಿದರು.

    ಮೋಕ್ಷೇಶ್ ಆಧ್ಯಾತ್ಮದ ಕಡೆಗೆ ಹೆಚ್ಚು ಒಲವು ಹೊಂದಿದ್ದರು. ಸನ್ಯಾಸಿಯಾಗುವ ಬಯಕೆಯನ್ನು 8 ವರ್ಷದ ಕೆಳಗೆ ವ್ಯಕ್ತಪಡಿಸಿದ್ದರು. ಮೊದಲಿಗೆ ವಿದ್ಯಾಭ್ಯಾಸ ಮುಗಿಸಿ ಒಮ್ಮೆ ಪ್ರಪಂಚವನ್ನು ನೋಡಿ ಬಾ ಎಂದಿದ್ದೆವು. 200 ವರ್ಷ ಇತಿಹಾಸ ಇರುವ ನಮ್ಮ ಕುಟುಂಬದ ಪುರುಷ ಸದಸ್ಯರ ಪೈಕಿ ಸನ್ಯಾಸಿ ಆಗುತ್ತಿರುವುದು ಇವನೇ ಮೊದಲನೆಯವನು. ಮಹಿಳೆಯರ ಪೈಕಿ 5 ಜನ ಸಾಧ್ವಿಗಳಾಗಿದ್ದಾರೆ ಎಂದು ಗಿರೀಶ್ ಸೇಟ್ ತಿಳಿಸಿದ್ದಾರೆ.