Tag: Ahmedabad Plane Crash

  • ಅಹಮದಾಬಾದ್ ವಿಮಾನ ದುರಂತದಲ್ಲಿ ಮೃತಪಟ್ಟವರಿಗೆ ಗೋಕರ್ಣದಲ್ಲಿ ಪಿತೃಕಾರ್ಯ

    ಅಹಮದಾಬಾದ್ ವಿಮಾನ ದುರಂತದಲ್ಲಿ ಮೃತಪಟ್ಟವರಿಗೆ ಗೋಕರ್ಣದಲ್ಲಿ ಪಿತೃಕಾರ್ಯ

    ಕಾರವಾರ: ಅಹಮದಾಬಾದ್‌ನಿಂದ ಲಂಡನ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ 171 (Air India Crash) ದುರಂತಕ್ಕೀಡಾಗಿ 260 ಮಂದಿ ಮೃತಪಟ್ಟಿದ್ದರು. ಮೃತರ ಆತ್ಮಕ್ಕೆ ಶಾಂತಿಗಾಗಿ ಪಿತೃ ಪಕ್ಷ ಹಿನ್ನೆಲೆಯಲ್ಲಿ ಗೋಕರ್ಣದಲ್ಲಿ (Gokarna) ಮೃತರ ಪಿತೃಕಾರ್ಯ (Pitru Karya) ನೆರವೇರಿಸಲಾಯಿತು.

    ಜೂನ್ 12 ರಂದು ದುರಂತ ಸಂಭವಿಸಿ 260 ಜನ ಮೃತಪಟ್ಟಿದ್ದರು. ಇದರಲ್ಲಿ ಭಾರತ ಹಾಗೂ ಲಂಡನ್ ಪ್ರಜೆಗಳು ಸಹ ಅಸುನೀಗಿದ್ದರು. ಈ ಘಟನೆ ನಡೆದು ನಾಲ್ಕು ತಿಂಗಳ ನಂತರ ಮೃತರ ಆತ್ಮಕ್ಕೆ ಶಾಂತಿಗಾಗಿ ಪಿತೃ ಪಕ್ಷ ಹಿನ್ನೆಲೆಯಲ್ಲಿ ಗೋಕರ್ಣದಲ್ಲಿ ಮೃತರ ಪಿತೃಕಾರ್ಯ ನೆರವೇರಿಸಲಾಗಿದೆ. ಇದನ್ನೂ ಓದಿ: ಅಹಮದಾಬಾದ್‌ ವಿಮಾನ ದುರಂತದಲ್ಲಿ 241 ಮಂದಿ ಸಾವು, ಪವಾಡ ಸದೃಶವಾಗಿ ಏಕೈಕ ಪ್ರಯಾಣಿಕ ಪಾರು: ಏರ್‌ ಇಂಡಿಯಾ

    ಪಿತೃಕಾರ್ಯಕ್ಕೆ ಪ್ರಾಮುಖ್ಯತೆ ಹೊಂದಿರುವ ಗೋಕರ್ಣದಲ್ಲಿ ಮೃತರ ಕುಟುಂಬದವರು ಪಿತೃಪಕ್ಷದಲ್ಲಿ ಪಿಂಡ ಪ್ರದಾನ ಮಾಡಿ ಆತ್ಮಕ್ಕೆ ಸದ್ಗತಿ ದೊರೆಯಲಿ ಎಂದು ಬೇಡಿಕೊಳ್ಳುವುದು ಸಂಪ್ರದಾಯ. ದೇಶ ವಿದೇಶದಿಂದಲೂ ಪಿತೃಪಕ್ಷದ ಸಂದರ್ಭದಲ್ಲಿ ಗೋಕರ್ಣಕ್ಕೆ ಬಂದು ಪಿತೃಕಾರ್ಯ ನಡೆಸಿ, ಇಲ್ಲಿಯೇ ಅಸ್ತಿ ವಿಸರ್ಜಿಸುತ್ತಾರೆ. ಹೀಗಾಗಿ, ಮಹಾಬಲೇಶ್ವರ ದೇವಸ್ಥಾನ ಕಾಶಿಯಷ್ಟೇ ಪ್ರಾಮುಖ್ಯತೆ ಹೊಂದಿದೆ.

    ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದ ಪುಣ್ಯಾಶ್ರಮದಲ್ಲಿ ಅಹಮದಾಬಾದ್ ವಿಮಾನ ದುರಂತ (Ahmedabad Plane Crash) ಮಡಿದ 260 ಜನರ ಪಿತೃಕಾರ್ಯ ನಡೆಸಲಾಗಿದೆ. ದೇಶದಲ್ಲಿ ನಡೆದ ದೊಡ್ಡ ದುರಂತದ ಸಾಲಿಗೆ ಈ ವಿಮಾನ ದುರಂತ ಸೇರಿಹೋಗಿತ್ತು. ಹೀಗಾಗಿ ದುರಂತದಲ್ಲಿ ಮಡಿದ ಪ್ರತಿಯೊಬ್ಬರ ಹೆಸರನ್ನೂ ಸಹ ಪಡೆದು ಅವರ ಹೆಸರಲ್ಲಿ ಎಳ್ಳು-ನೀರಿನ ಅರ್ಗೆ ಸಮರ್ಪಿಸಿ ಪಿಂಡ ಪ್ರದಾನವನ್ನು ಗೋಕರ್ಣ ಮಹಾಬಲೇಶ್ವರ ದೇವಸ್ಥಾನದ ಮುಖ್ಯ ಅರ್ಚಕ ರಾಜು ಅಡಿಯವರು ತಮ್ಮ ಪುಣ್ಯಾಶ್ರಮದಲ್ಲಿ ನೆರವೇರಿಸಿದರು. ಇದನ್ನೂ ಓದಿ: Photo Gallery: ಅಹಮದಾಬಾದ್‌ನಲ್ಲಿ ವಿಮಾನ ದುರಂತ ನಡೆದ ಸ್ಥಳಕ್ಕೆ ಮೋದಿ ಭೇಟಿ

    ಗೋಕರ್ಣದ ಪುಣ್ಯಾಶ್ರಮದಲ್ಲಿ ಮಹಾಬಲೇಶ್ವರ ದೇವಾಲಯದ ಮುಖ್ಯ ಅರ್ಚಕ ರಾಜುಗೋಪಾಲ ಅಡಿ ಅವರ ನೇತೃತ್ವದಲ್ಲಿ 30 ಜನ ಪುರೋಹಿತರೊಂದಿಗೆ ಈ ಪಿತೃಕಾರ್ಯವನ್ನು ಕೈಗೊಳ್ಳಲಾಯಿತು. ಗುಜರಾತ್‌ನ ಮಾಜಿ ಮುಖ್ಯಮಂತ್ರಿ ದಿವಂಗತ ವಿಜಯ್ ರೂಪಾನಿ ಅವರಿಂದ ಹಿಡಿದು ಲಂಡನ್‌ನ ಮೃತ ಪ್ರಜೆಗಳಿಗೂ ಇಲ್ಲಿ ಪಿತೃಕಾರ್ಯ ನಡೆಸಲಾಯಿತು. ಎರಡು ದಿನದ ಈ ಕಾರ್ಯದಲ್ಲಿ ವಿಘ್ನ ನಿವಾರಕ ಗಣಪತಿಯ ಪೂಜೆ ನಡೆಸಿ, ನಾರಾಯಣ, ಈಶ್ವರನ ನೆನೆದು ನಾರಾಯಣ ಬಲಿ, ದಶ ಪಿಂಡ ಪ್ರದಾನ ಮಾಡಲಾಯ್ತು. ನಂತರ ಗೋದಾನ, ವಸ್ತ್ರದಾನ ಮಾಡಲಾಗಿದ್ದು, ಇಂದು ನೂರಾರು ಜನರಿಗೆ ಮೃತರ ಹೆಸರಿನಲ್ಲಿ ಅನ್ನ ಸಂತರ್ಪಣೆ ಕಾರ್ಯ ಸಹ ಕೈಗೊಳ್ಳಲಾಗಿದೆ.

    ಈ ಕಾರ್ಯವನ್ನು ಮುಂದೆ ದೇಶದಲ್ಲಿ ಈರೀತಿಯ ಘಟನೆ ನಡೆಯದಿರಲಿ ಹಾಗೂ ಮೃತರ ಆತ್ಮಕ್ಕೆ ಶಾಂತಿ ದೊರೆಯಬೇಕು ಎಂಬ ಉದ್ದೇಶದಿಂದ ಮಾಡಲಾಗಿದೆ. ಪಿತೃಮಾಸದ ಈ ಸಂದರ್ಭದಲ್ಲಿ ಪುಣ್ಯಾಶ್ರಮದ ಮಹಾಬಲೇಶ್ವರ ದೇವಾಲಯದ ಮುಖ್ಯ ಅರ್ಚಕ ರಾಜು ಗೋಪಾಲ ಅಡಿ ಅವರಿಂದ ಪಿತೃಕಾರ್ಯ ನೆರವೇರಿಸಲಾಗಿದೆ.

  • ನೀವು ಯಾಕೆ ಇಂಧನ ಸ್ಥಗಿತಗೊಳಿಸಿದ್ದೀರಿ? – ದುರಂತಕ್ಕೀಡಾದ ಏರ್ ಇಂಡಿಯಾ ಪೈಲಟ್‌ಗಳ ಸಂಭಾಷಣೆ

    ನೀವು ಯಾಕೆ ಇಂಧನ ಸ್ಥಗಿತಗೊಳಿಸಿದ್ದೀರಿ? – ದುರಂತಕ್ಕೀಡಾದ ಏರ್ ಇಂಡಿಯಾ ಪೈಲಟ್‌ಗಳ ಸಂಭಾಷಣೆ

    ನವದೆಹಲಿ: ಅಹಮದಾಬಾದ್‌ನಲ್ಲಿ 270 ಜನರನ್ನು ಬಲಿ ಪಡೆದ ಏರ್ ಇಂಡಿಯಾ ವಿಮಾನ ದುರಂತ ಕುರಿತು ಏರ್‌ಕ್ರಾಫ್ಟ್ ಆಕ್ಸಿಡೆಂಟ್ ಇನ್ವೆಸ್ಟಿಗೇಷನ್ ಬ್ಯೂರೋ (ಎಎಐಬಿ) 15 ಪುಟಗಳ ಪ್ರಾಥಮಿಕ ವರದಿಯನ್ನು ಪ್ರಕಟಿಸಿದೆ.

    ‘ನೀವು ಯಾಕೆ ಇಂಧನ ಸ್ಥಗಿತಗೊಳಿಸಿದ್ದೀರಿ?’ ಎಂದು ಕಾಕ್‌ಪಿಟ್ ಧ್ವನಿ ರೆಕಾರ್ಡಿಂಗ್‌ನಲ್ಲಿ ಒಬ್ಬ ಪೈಲಟ್ ಇನ್ನೊಬ್ಬರನ್ನು ಕೇಳುತ್ತಿರುವುದು ರೆಕಾರ್ಡ್ ಆಗಿದೆ. ಇನ್ನೊಬ್ಬ ಪೈಲಟ್ ತಾನು ಹಾಗೆ ಮಾಡಲಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ. ಇಬ್ಬರೂ ಪೈಲಟ್‌ಗಳ ಸಂಭಾಷಣೆ ಅದರಲ್ಲಿದೆ. ಇದನ್ನೂ ಓದಿ: Air India Crash | ವಿಮಾನ ದುರಂತಕ್ಕೂ ಮುನ್ನವೇ ಏರ್‌ ಇಂಡಿಯಾಕ್ಕೆ ಎಚ್ಚರಿಕೆ ನೀಡಿತ್ತು ಅಮೆರಿಕ

    ಜೂ.12 ರಂದು ಬೋಯಿಂಗ್ ಡ್ರೀಮ್‌ಲೈನರ್ 787-8 ಅಪಘಾತಕ್ಕೀಡಾಗಲು ಕಾರಣ ಏನೆಂಬುದು ಯಕ್ಷ ಪ್ರಶ್ನೆಯಾಗಿತ್ತು. ವಿಮಾನದ ಎರಡು ಎಂಜಿನ್‌ಗಳಿಗೆ ಇಂಧನ ಪೂರೈಕೆ ಸ್ಥಗಿತಗೊಂಡಿದ್ದೇ ಅಪಘಾತಕ್ಕೆ ಕಾರಣ ಎಂಬುದು ತನಿಖೆಯಿಂದ ತಿಳಿದುಬಂದಿದೆ.

    ವಿಮಾನವು ಹಾರಾಟದ ಸಮಯದಲ್ಲಿ ಗರಿಷ್ಠ ವೇಗ ಪಡೆದುಕೊಂಡ ಹೊತ್ತಿಗೆ ಎಂಜಿನ್-1 ಮತ್ತು ಎಂಜಿನ್-2ಕ್ಕೆ ಇಂಧನ ಪೂರೈಕೆ ಸ್ಥಗಿತಗೊಂಡಿದೆ. ಇದು ‘ರನ್’ ಸ್ಥಿತಿಯಿಂದ ‘ಕಟ್‌ಆಫ್’ ಸ್ಥಿತಿಗೆ ತಲುಪಿದೆ. ಈ ಎರಡೂ ಎಂಜಿನ್‌ಗಳು ಒಂದು ಸೆಕೆಂಡು ಅಂತರದಲ್ಲಿ ತಮ್ಮ ಕಾರ್ಯ ಸ್ಥಗಿತಗೊಳಿಸಿವೆ. ಕಾಕ್‌ಪಿಟ್‌ನ ಸಂಭಾಷಣೆಯು ಬ್ಲ್ಯಾಕ್‌ಬಾಕ್ಸ್‌ನಲ್ಲಿ ದಾಖಲಾಗಿದೆ. ಇದನ್ನೂ ಓದಿ: Air India Crash | 2 ಎಂಜಿನ್‌ಗಳಿಗೆ ಇಂಧನ ಪೂರೈಕೆ ಆಗದಿದ್ದೇ ದುರಂತಕ್ಕೆ ಕಾರಣ – AAIB ಪ್ರಾಥಮಿಕ ವರದಿ ಬಹಿರಂಗ

  • Ahmedabad Plane Crash | ನಾಗರಿಕ ವಿಮಾನಯಾನ ಸಚಿವಾಲಯಕ್ಕೆ 2 ಪುಟಗಳ ಪ್ರಾಥಮಿಕ ವರದಿ ಸಲ್ಲಿಸಿದ AAIB

    Ahmedabad Plane Crash | ನಾಗರಿಕ ವಿಮಾನಯಾನ ಸಚಿವಾಲಯಕ್ಕೆ 2 ಪುಟಗಳ ಪ್ರಾಥಮಿಕ ವರದಿ ಸಲ್ಲಿಸಿದ AAIB

    ನವದೆಹಲಿ: ಗುಜರಾತ್‌ನ (Gujarat) ಅಹಮದಾಬಾದ್‌ನಲ್ಲಿ (Ahmedabad) ನಡೆದಿದ್ದ ಏರ್ ಇಂಡಿಯಾ (Air India) ವಿಮಾನ ದುರಂತ ಸಂಬಂಧ ಇಂದು ಎಎಐಬಿ (AAIB) 2 ಪುಟಗಳ ಪ್ರಾಥಮಿಕ ತನಿಖಾ ವರದಿ ಸಲ್ಲಿಸಿದೆ.

    ಜೂ.12ರಂದು ಏರ್ ಇಂಡಿಯಾ ವಿಮಾನ ಪತನಗೊಂಡ ಪರಿಣಾಮ ಸ್ಥಳೀಯರು, ಪ್ರಯಾಣಿಕರು ಸೇರಿ 260ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದರು. ಅವಶೇಷಗಳನ್ನು ತೆರವುಗೊಳಿಸುವ ವೇಳೆ ಬಿಜೆ ಮೆಡಿಕಲ್ ಹಾಸ್ಟೆಲಿನ ಮೇಲ್ಛಾವಣಿಯಲ್ಲಿ ವಿಮಾನದ ಬ್ಲ್ಯಾಕ್ ಬಾಕ್ಸ್ ಪತ್ತೆಯಾಗಿತ್ತು. ಇದನ್ನು ವಶಪಡಿಸಿಕೊಂಡಿದ್ದ ವಿಮಾನ ಅಪಘಾತ ತನಿಖಾ ಬ್ಯೂರೋ ತನಿಖೆ ಆರಂಭಿಸಿತ್ತು.ಇದನ್ನೂ ಓದಿ: ಮದುವೆಗೆ ನಿರಾಕರಿಸಿದ್ದಕ್ಕೆ ಯುವತಿಗೆ ಆ್ಯಸಿಡ್ ಎರಚಿ ತಾನೂ ಬೆಂಕಿ ಹಚ್ಚಿಕೊಂಡ ಸೋದರ ಮಾವ

    ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯದ ಕ್ರ್ಯಾಶ್‌ ತನಿಖಾ ವಿಭಾಗದ ಅಡಿಯಲ್ಲಿ ಬರುವ ವಿಮಾನ ಅಪಘಾತ ತನಿಖಾ ಬ್ಯೂರೋ ಪ್ರಯೋಗಾಲಯದಲ್ಲಿ ಬ್ಲ್ಯಾಕ್ ಬಾಕ್ಸ್‌ನ ಮುಂಭಾಗದ ಕಪ್ಪು ಪೆಟ್ಟಿಗೆಯಿಂದ ಕ್ರ್ಯಾಶ್‌ ಪ್ರೊಟೆಕ್ಷನ್ ಮಾಡ್ಯೂಲ್‌ನ್ನು ರಿಕವರಿ ಮಾಡಿಕೊಂಡಿದ್ದರು. ಬಳಿಕ ಮೆಮೊರಿ ಮಾಡ್ಯೂಲ್‌ನಲ್ಲಿನ ಡೇಟಾವನ್ನು ಯಶಸ್ವಿಯಾಗಿ ಡೌನ್‌ಲೋಡ್ ಮಾಡಿದ್ದರು. ಸದ್ಯ ವಿಮಾನ ದುರಂತಕ್ಕೆ ಕಾರಣ ಏನು ಎಂಬುವುದರ ವರದಿ ಸಲ್ಲಿಸಿದೆ. ವಿಮಾನ ಅಪಘಾತಕ್ಕೆ ಕಾರಣ ಏನೆಂದು ಈ ವರದಿಯಲ್ಲಿ ಬಹಿರಂಗವಾಗುವ ಸಾಧ್ಯತೆಯಿದ್ದು, ನಾಗರಿಕ ವಿಮಾನಯಾನ ಸಚಿವಾಲಯ ಮತ್ತು ಸಂಬಂಧಪಟ್ಟ ಅಧಿಕಾರಿಗಳಿಗೆ ವರದಿ ಸಲ್ಲಿಸಲಾಗಿದೆ. ಈ ತಿಂಗಳ ಕೊನೆಯ ವಾರದಲ್ಲಿ ಸಾರ್ವಜನಿಕರಿಗೆ ಈ ಕುರಿತು ಮಾಹಿತಿ ನೀಡುವ ಸಾಧ್ಯತೆಯಿದೆ.

    ವಿಮಾನ ಅಪಘಾತವಾದ ಮರುದಿನವೇ ಅಂತಾರಾಷ್ಟ್ರೀಯ ಮಾನದಂಡ, ಶಿಷ್ಟಾಚಾರಗಳಿಗೆ ಅನುಗುಣವಾಗಿ ಜೂ.13ರಂದು ತನಿಖಾ ತಂಡ ರಚಿಸಲಾಗಿತ್ತು. ಎಎಐಬಿ ತಂಡವು ಜೂ.24ರಂದು ವಿಮಾನದ ಬ್ಲಾö್ಯಕ್ ಬಾಕ್ಸ್ ದಾಖಲೆ ಹೊರತೆಗೆಯುವ ಪ್ರಕ್ರಿಯೆ ಪ್ರಾರಂಭಿಸಿತ್ತು. ಕಾಕ್‌ಪಿಟ್ ವಾಯ್ಸ್ ರೆಕಾರ್ಡರ್ ಮತ್ತು ಫ್ಲೈಟ್ ಡೇಟಾ ರೆಕಾರ್ಡರ್‌ನ ವಿಶ್ಲೇಷಣೆಯನ್ನೂ ನಡೆಸಲಾಗಿತ್ತು.

    ಇನ್ನು ವಿಮಾನಯಾನ ಸಂಸ್ಥೆಯಿಂದ ನಡೆದ ಮತ್ತೊಂದು ತನಿಖೆ ಪ್ರಕಾರ, ಡಬಲ್ ಎಂಜಿನ್ ವೈಫಲ್ಯದಿಂದಾಗಿ ಬೋಯಿಂಗ್ 787 ಡ್ರೀಮ್‌ಲೈನರ್ ಏರ್ ಇಂಡಿಯಾ ವಿಮಾನ ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ಅಪಘಾತಕ್ಕೆ ಕಾರಣವಾಗಿರಬಹುದು ಎಂದು ಹೇಳಿದೆ.

    ಏನಿದು ಬ್ಲ್ಯಾಕ್ ಬಾಕ್ಸ್?
    ವಿಮಾನದಲ್ಲಿ ಧ್ವನಿಗ್ರಹಣಕ್ಕೆ ಬಳಸಲಾಗುವ ಎರಡು ಸಾಧನಗಳನ್ನು ತಾಂತ್ರಿಕ ಭಾಷೆಯಲ್ಲಿ ಬ್ಲ್ಯಾಕ್ ಬಾಕ್ಸ್ ಎಂದು ಕರೆಯಲಾಗುತ್ತದೆ. ಬ್ಲ್ಯಾಕ್ ಬಾಕ್ಸ್ ಅನ್ನು ಫ್ಲೈಟ್ ಡೇಟಾ ರೆಕಾರ್ಡರ್ ಎಂದೂ ಕರೆಯುತ್ತಾರೆ. ಬ್ಲ್ಯಾಕ್ ಬಾಕ್ಸ್ ಹಾರಾಟದ ಸಮಯದಲ್ಲಿನ ವಿಮಾನದ ಎಲ್ಲಾ ಚಟುವಟಿಕೆಗಳನ್ನು ದಾಖಲಿಸುತ್ತದೆ. ಎಲ್ಲ ರೀತಿಯ ವಿಮಾನಗಳಲ್ಲಿ ಬ್ಲ್ಯಾಕ್ ಬಾಕ್ಸ್ ಅನ್ನು ಕಡ್ಡಾಯವಾಗಿ ಅಳವಡಿಸಲಾಗುತ್ತದೆ.

    ವಿಮಾನ ಅಪಘಾತವಾದಾಗ ಅದಕ್ಕೆ ಕಾರಣ ಪತ್ತೆ ಹಚ್ಚಲು ನೆರವಾಗಲೆಂದೇ 5 ಕೆಜಿ ತೂಕದ ರೆಕಾರ್ಡಿಂಗ್ ಸಾಧನವನ್ನು ಅಳವಡಿಸಲಾಗುತ್ತದೆ. ಭದ್ರತೆಯ ದೃಷ್ಟಿಯಿಂದ ಕಪ್ಪು ಪೆಟ್ಟಿಗೆಯನ್ನು ಸಾಮಾನ್ಯವಾಗಿ ವಿಮಾನದ ಹಿಂಭಾಗದಲ್ಲಿ ಇಡಲಾಗುತ್ತದೆ. ಈ ಪೆಟ್ಟಿಗೆಯನ್ನು ಟೈಟಾನಿಯಂ ಲೋಹದಿಂದ ಮಾಡಲಾಗಿದ್ದು, ಟೈಟಾನಿಯಂ ಪೆಟ್ಟಿಗೆಯಲ್ಲಿ ಸುತ್ತುವರಿಯಲಾಗಿದೆ. ಇದು ಎಷ್ಟು ಶಕ್ತಿಶಾಲಿಯೆಂದರೆ ಸಮುದ್ರದಲ್ಲಿ ಬಿದ್ದರೆ, ಸುತ್ತಲೂ ಬೆಂಕಿ ಇದ್ದರೂ ಅಥವಾ ಎತ್ತರದಿಂದ ಬಿದ್ದರೂ ಯಾವುದೇ ಹಾನಿಯಾಗುವುದಿಲ್ಲ.ಇದನ್ನೂ ಓದಿ: ಹರಿಯಾಣದ ರೈಲಿನಲ್ಲಿ ಗ್ಯಾಂಗ್‌ ರೇಪ್ -‌ ಅತ್ಯಾಚಾರ ಬಳಿಕ ರೈಲ್ವೆ ಹಳಿಗಳ ಮೇಲೆ ಮಹಿಳೆ ಎಸೆದ ಪಾಪಿಗಳು

    ಅಪಘಾತದ ಸಂಭವಿಸಿದಾಗ ಹಿಂಭಾಗದಲ್ಲಿ ಅದರಲ್ಲೂ ಬಾಲದ ಕಡೆ ಪೆಟ್ಟು ಬೀಳುವುದು ಕಡಿಮೆ. ಯಾಕೆಂದರೆ ಬಾಲ ಎತ್ತರದಲ್ಲಿರುತ್ತದೆ. ಈ ಕಾರಣಕ್ಕೆ ಬಾಲದಲ್ಲಿ ಅಳವಡಿಸಲಾಗಿರುತ್ತದೆ. ವಿಮಾನದ ಎಂಜಿನ್‌ಗೆ ಜೋಡಿಸಲಾದ ಜನರೇಟರ್ ನಿಂದ ಬ್ಲ್ಯಾಕ್ ಬಾಕ್ಸ್ ಚಾರ್ಜ್ ಆಗುತ್ತದೆ.

    ಎರಡು ಪ್ರತ್ಯೇಕ ಪೆಟ್ಟಿಗೆಗಳಿವೆ
    1. ಫ್ಲೈಟ್ ಡೇಟಾ ರೆಕಾರ್ಡರ್: ಈ ಪೆಟ್ಟಿಗೆಯಲ್ಲಿ ನಿರ್ದೇಶನ, ಎತ್ತರ, ಇಂಧನ, ವೇಗ, ಕ್ಯಾಬಿನ್ ತಾಪಮಾನ ಇತ್ಯಾದಿಗಳ ಬಗ್ಗೆ ಮಾಹಿತಿ ಇರುತ್ತದೆ. ಕೊನೆಯ 25 ಗಂಟೆಗಳ ಕಾಲದ ಒಟ್ಟು 88 ಮಾಹಿತಿಗಳ ಡೇಟಾವನ್ನು ಸಂಗ್ರಹಿಸುತ್ತದೆ. 1,100 ಡಿಗ್ರಿ ಸೆಲ್ಶಿಯಸ್ ತಾಪಮಾನ ಇದ್ದರೆ 1 ಗಂಟೆ, 260 ಡಿಗ್ರಿ ಸೆಲ್ಶಿಯಸ್ ತಾಪಮಾನ ಇದ್ದರೆ ಇದ್ದರೆ 10 ಗಂಟೆಗಳ ಕಾಲ ಡೇಟಾವನ್ನು ತಡೆದಿಟ್ಟುಕೊಳ್ಳಬಹುದು. ತನಿಖಾಧಿಕಾರಿಗಳಿಗೆ ಸುಲಭವಾಗಿ ಗುರುತಿಸಲು ಕೆಂಪು ಅಥವಾ ಗುಲಾಬಿ ಬಣ್ಣದಲ್ಲಿ ಈ ಪೆಟ್ಟಿಗೆಯನ್ನು ಮಾಡಲಾಗುತ್ತದೆ.

    2. ಕಾಕ್‌ಪಿಟ್ ವಾಯ್ಸ್ ರೆಕಾರ್ಡರ್: ಈ ಬಾಕ್ಸ್ ಕೊನೆಯ ಎರಡು ಗಂಟೆಗಳ ವಿಮಾನದ ಧ್ವನಿಯನ್ನು ದಾಖಲಿಸುತ್ತದೆ. ಯಾವುದೇ ಅಪಘಾತ ಸಂಭವಿಸುವ ಮೊದಲು ಎಂಜಿನ್, ತುರ್ತು ಎಚ್ಚರಿಕೆ, ಕ್ಯಾಬಿನ್ ಮತ್ತು ಕಾಕ್‌ಪಿಟ್ ಧ್ವನಿಯನ್ನು ದಾಖಲಿಸುತ್ತದೆ.

    ಹೇಗೆ ಕಾರ್ಯನಿರ್ವಹಿಸುತ್ತದೆ?
    ಯಾವುದೇ ವಿದ್ಯುತ್ ಇಲ್ಲದೆ 30 ದಿನಗಳವರೆಗೆ ಬ್ಲಾಕ್ ಬಾಕ್ಸ್ ಕೆಲಸ ಮಾಡಬಹುದು. ಪತ್ತೆ ಕಾರ್ಯ ಸುಲಭವಾಗಲು ಸುಮಾರು 30 ದಿನಗಳವರೆಗೆ ಸಿಗ್ನಲ್ ಹೊರಸೂಸುತ್ತಿರುತ್ತದೆ. ಈ ಧ್ವನಿಯನ್ನು ತನಿಖಾಧಿಕಾರಿಗಳು ಸುಮಾರು 2-3 ಕಿಲೋಮೀಟರ್ ದೂರದಿಂದ ಗುರುತಿಸಬಹುದು. 14 ಸಾವಿರ ಅಡಿ ಆಳದ ಸಮದ್ರದಲ್ಲಿದ್ದರೂ ಸಿಗ್ನಲ್ ಹೊರ ಸೂಸುತ್ತಿರುತ್ತದೆ.ಇದನ್ನೂ ಓದಿ: ರಕ್ಷಿತಾ ಪ್ರೇಮ್ ಸಹೋದರ ರಾಣಾ ನಟನೆಯ ಚಿತ್ರದ ಟೈಟಲ್ ಟೀಸರ್ ರಿಲೀಸ್

  • ವಿಮಾನ ದುರಂತವಾಗಿ ದಿನಗಳೂ ಕಳೆದಿರಲಿಲ್ಲ – ಪಾರ್ಟಿ ಮೂಡ್‌ನಲ್ಲಿದ್ದ ಉದ್ಯೋಗಿಗಳ ವಜಾಗೊಳಿಸಿದ Air India ವೆಂಚರ್‌

    ವಿಮಾನ ದುರಂತವಾಗಿ ದಿನಗಳೂ ಕಳೆದಿರಲಿಲ್ಲ – ಪಾರ್ಟಿ ಮೂಡ್‌ನಲ್ಲಿದ್ದ ಉದ್ಯೋಗಿಗಳ ವಜಾಗೊಳಿಸಿದ Air India ವೆಂಚರ್‌

    ನವದೆಹಲಿ: 270 ಜನರ ಸಾವಿಗೆ ಕಾರಣವಾದ ಅಹಮದಾಬಾದ್‌ ವಿಮಾನ ದುರಂತದ (Ahmedabad Plane Crash) ನಂತರದ ದಿನಗಳಲ್ಲಿ ಕರ್ತವ್ಯದ ಸ್ಥಳದಲ್ಲಿ ಪಾರ್ಟಿ ಮೂಡ್‌ನಲ್ಲಿದ್ದ ಏರ್‌ ಇಂಡಿಯಾ (Air India) ಉದ್ಯೋಗಿಗಳನ್ನು ಕೆಲಸದಿಂದ ವಜಾಗೊಳಿಸಲಾಗಿದೆ.

    ಏರ್ ಇಂಡಿಯಾದ ವಿಮಾನ ನಿಲ್ದಾಣದ ಗೇಟ್‌ವೇ ಸೇವಾ ಪೂರೈಕೆದಾರ AISATS ನ ನಾಲ್ವರು ಹಿರಿಯ ಉದ್ಯೋಗಿಗಳಿಗೆ ರಾಜೀನಾಮೆ ನೀಡುವಂತೆ ಸೂಚಿಸಲಾಗಿದೆ. ನೌಕರರು ಕೆಲಸದ ಸ್ಥಳದಲ್ಲಿ ಪಾರ್ಟಿ ಮಾಡುತ್ತಿರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿತ್ತು. ಇದರ ಬೆನ್ನಲ್ಲೇ ಖಡಕ್‌ ಸೂಚನೆ ನೀಡಲಾಗಿದೆ. ಇದನ್ನೂ ಓದಿ: ಪುರಿ ಜಗನ್ನಾಥ ರಥೋತ್ಸವ ವೇಳೆ ಕಾಲ್ತುಳಿತ – 600ಕ್ಕೂ ಹೆಚ್ಚು ಭಕ್ತರು ಅಸ್ವಸ್ಥ, 40ಕ್ಕೂ ಹೆಚ್ಚು ಜನರ ಸ್ಥಿತಿ ಚಿಂತಾಜನಕ

    ಅಹಮದಾಬಾದ್‌ನಲ್ಲಿ 270 ಜನರನ್ನು ಬಲಿತೆಗೆದುಕೊಂಡ ಏರ್ ಇಂಡಿಯಾ ಬೋಯಿಂಗ್ 787-8 ಡ್ರೀಮ್‌ಲೈನರ್ ಅಪಘಾತವಾಗಿ ಕೆಲ ದಿನಗಳೂ ಕಳೆದಿರಲಿಲ್ಲ. ಕರಾಳತೆ ಇನ್ನೂ ಮಾಸದಿದ್ದರೂ, ಗುರುಗ್ರಾಮ್‌ನ AISATS ಕಚೇರಿಯಲ್ಲಿ ಪಾರ್ಟಿಯನ್ನು ಆಯೋಜಿಸಲಾಗಿತ್ತು ಎಂದು ವರದಿಯಾಗಿದೆ.

    ಏರ್‌ ಇಂಡಿಯಾ 171 ವಿಮಾನದ ದುರಂತದಲ್ಲಿ ತಮ್ಮವರನ್ನು ಕಳೆದುಕೊಂಡು ದುಃಖದಲ್ಲಿರುವ ಕುಟುಂಬಗಳೊಂದಿಗೆ ಕಂಪನಿಯು ನಿಲ್ಲುತ್ತದೆ ಎಂದು AISATS ವಕ್ತಾರರು ತಿಳಿಸಿದ್ದಾರೆ. ಅಲ್ಲದೇ, ತಮ್ಮದೇ ಸಿಬ್ಬಂದಿಯ ಈ ವರ್ತನೆಗೆ ವಿಷಾದ ವ್ಯಕ್ತಪಡಿಸಿದ್ದಾರೆ. ಇಂತಹ ಸಂಭ್ರಮಕ್ಕೆ ಇದು ಸೂಕ್ತ ಸಮಯವಲ್ಲ ಎಂದು ನೆಟ್ಟಿಗರು ಕಾಮೆಂಟ್‌ ಮಾಡಿ ತರಾಟೆಗೆ ತೆಗೆದುಕೊಂಡಿದ್ದರು. ಇದನ್ನೂ ಓದಿ: ಮಧ್ಯಪ್ರದೇಶ ಸಿಎಂ ಬೆಂಗಾವಲು ಪಡೆಯ 19 ವಾಹನಗಳಿಗೆ ನೀರು ಮಿಶ್ರಿತ ಡೀಸೆಲ್ ತುಂಬಿದ ಬಂಕ್ ಸಿಬ್ಬಂದಿ!

    ಇಂತಹ ನಡವಳಿಕೆಯು ನಮ್ಮ ಮೌಲ್ಯಗಳಿಗೆ ತಕ್ಕುದಲ್ಲ. ನಾವು ಸಹಾನುಭೂತಿ, ವೃತ್ತಿಪರತೆ ಮತ್ತು ಹೊಣೆಗಾರಿಕೆಗೆ ಬದ್ಧರಾಗಿದ್ದೇವೆ. ಈ ಲೋಪಕ್ಕೆ ಕಾರಣರಾದವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗಿದೆ ಎಂದು ವಕ್ತಾರರು ಸ್ಪಷ್ಟಪಡಿಸಿದ್ದಾರೆ.

  • ಒಂದೇ ದಿನ 8 ಏರ್ ಇಂಡಿಯಾ ವಿಮಾನ ಹಾರಾಟ ರದ್ದು, 16 ಅಂತಾರಾಷ್ಟ್ರೀಯ ಮಾರ್ಗಗಳು ಬಂದ್

    ಒಂದೇ ದಿನ 8 ಏರ್ ಇಂಡಿಯಾ ವಿಮಾನ ಹಾರಾಟ ರದ್ದು, 16 ಅಂತಾರಾಷ್ಟ್ರೀಯ ಮಾರ್ಗಗಳು ಬಂದ್

    – 3 ವಿದೇಶಿ ತಾಣಗಳಿಗೆ ವಿಮಾನ ಸಂಚಾರ ರದ್ದು

    ನವದೆಹಲಿ: ಅಹಮದಾಬಾದ್ (Ahmedabad) ವಿಮಾನ ದುರಂತದ ಬಳಿಕ ಎಚ್ಚೆತ್ತುಕೊಂಡಿರುವ ಏರ್ ಇಂಡಿಯಾ (Air India) ಸಂಸ್ಥೆ ಈಗ ವಿಮಾನಗಳ ತಾಂತ್ರಿಕ ಪರಿಶೀಲನೆಗೆ ಮುಂದಾಗಿದೆ. ಈ ಹಿನ್ನೆಲೆ ದೇಶಾದ್ಯಂತ 8 ವಿಮಾನಗಳ ಹಾರಾಟ ರದ್ದುಗೊಳಿಸಿದೆ. ಜೊತೆಗೆ ಜು.15ರವರೆಗೆ 16 ಅಂತಾರಾಷ್ಟ್ರೀಯ ಮಾರ್ಗಗಳಲ್ಲಿ ವಿಮಾನಯಾನವನ್ನು ಸ್ಥಗಿತಗೊಳಿಸಿರುವುದಾಗಿ ತಿಳಿಸಿದೆ ಎಂದು ವರದಿಯಾಗಿದೆ.

    ಜೂ.12ರ ಅಹಮದಾಬಾದ್ ವಿಮಾನ ದುರಂತದ ಬಳಿಕ ಏರ್ ಇಂಡಿಯಾ ವಿಮಾನಗಳಲ್ಲಿ ಒಂದಿಲ್ಲೊಂದು ದೋಷಗಳು ಕಾಣಿಸಿಕೊಳ್ಳುತ್ತಲೇ ಇದೆ. ಹೀಗಾಗಿ ವಿಮಾನಗಳಲ್ಲಿನ ತಾಂತ್ರಿಕ ಸಮಸ್ಯೆ ಹಾಗೂ ಇನ್ನಿತರ ಪರಿಶೀಲನೆ ನಡೆಸಲು ಮುಂದಾಗಿದೆ. ಈ ಹಿನ್ನೆಲೆ ಇಂದು (ಜೂ.20) ಏರ್ ಇಂಡಿಯಾದ ಎಂಟು ದೇಶೀಯ ಹಾಗೂ ಅಂತಾರಾಷ್ಟ್ರೀಯ ವಿಮಾನಗಳನ್ನು ರದ್ದುಗೊಳಿಸಲಾಗಿದೆ.ಇದನ್ನೂ ಓದಿ: ʻಲಕ್ಷ್ಮೀ ನಿವಾಸʼದಿಂದ ಹೊರನಡೆದ ಶ್ವೇತಾ

    ಜೊತೆಗೆ ಜೂ.21ರಿಂದ ಜು.15ರವೆಗೆ 16 ಅಂತಾರಾಷ್ಟ್ರೀಯ ಮಾರ್ಗಗಳಲ್ಲಿ ವಿಮಾನಯಾನ ಸ್ಥಗಿತಗೊಳ್ಳಲಿದೆ ಹಾಗೂ 3 ವಿದೇಶಿ ತಾಣಗಳಲ್ಲಿ ವಿಮಾನ ಸಂಚಾರ ಇರುವುದಿಲ್ಲ ಎಂದು ತಿಳಿಸಿದೆ.

    ಯಾವ ಯಾವ ವಿಮಾನಗಳು ರದ್ದು?
    ಸಮಸ್ಯೆ ಮುಂದುವರಿದ ಹಿನ್ನೆಲೆ ಅಂತಾರಾಷ್ಟ್ರೀಯ ವಿಮಾನಗಳಾದ AI906 ದುಬೈನಿಂದ ಚೆನ್ನೈಗೆ, AI308 ದೆಹಲಿಯಿಂದ ಮೆಲ್ಬೋರ್ನ್‌ಗೆ, AI309 ಮೆಲ್ಬೋರ್ನ್‌ನಿಂದ ದೆಹಲಿಗೆ, AI2204 ದುಬೈನಿಂದ ಹೈದರಾಬಾದ್‌ಗೆ ಹಾಗೂ ದೇಶೀಯ ವಿಮಾನಗಳಾದ AI874 ಪುಣೆಯಿಂದ ದೆಹಲಿಗೆ, AI456 ಅಹಮದಾಬಾದ್‌ನಿಂದ ದೆಹಲಿಗೆ, AI2872 ಹೈದರಾಬಾದ್‌ನಿಂದ ಮುಂಬೈಗೆ, AI571 ಚೆನ್ನೈನಿಂದ ಮುಂಬೈಗೆ ಸಂಚರಿಸಬೇಕಿದ್ದ ವಿಮಾನಗಳು ರದ್ದಾಗಿವೆ. ಹೀಗಾಗಿ ಪ್ರಯಾಣಿಕರಿಗೆ ಟಿಕೆಟ್ ರದ್ದತಿ ಹಾಗೂ ಮರುಹೊಂದಿಕೆ, ಸಂಪೂರ್ಣ ಮರುಪಾವತಿ ನೀಡುವುದಾಗಿ ತಿಳಿಸಿದೆ.ಇದನ್ನೂ ಓದಿ: RSS ಮುಖಂಡನ ಮನೆ ಮೇಲೆ ಮಧ್ಯರಾತ್ರಿ ದಾಳಿ – ಕಾರಣ ಕೇಳಿ ದ.ಕ. ಎಸ್‌ಪಿಗೆ ಹೈಕೋರ್ಟ್‌ ನೋಟಿಸ್‌

    ಇದಲ್ಲದೆ ಉತ್ತರ ಅಮೆರಿಕ, ಯುರೋಪ್, ಆಸ್ಟ್ರೇಲಿಯಾ ಮತ್ತು ದೂರದ ಪೂರ್ವ ನಗರಗಳನ್ನು ಸಂಪರ್ಕಿಸುವ 16 ಅಂತಾರಾಷ್ಟ್ರೀಯ ಮಾರ್ಗಗಳಲ್ಲಿ ವಿಮಾನಯಾನ ಸ್ಥಗಿತಗೊಳ್ಳಲಿದೆ. ಜೊತೆಗೆ ಉತ್ತರ ಅಮೆರಿಕಾದ ಮಾರ್ಗಗಳಾದ ದೆಹಲಿ-ಟೊರೊಂಟೊ, ದೆಹಲಿ-ವ್ಯಾಂಕೋವರ್, ದೆಹಲಿ-ಸ್ಯಾನ್ ಫ್ರಾನ್ಸಿಸ್ಕೊ, ದೆಹಲಿ-ಚಿಕಾಗೊ ಮತ್ತು ದೆಹಲಿ-ವಾಷಿಂಗ್ಟನ್‌ಗೆ ವಿಮಾನ ಸಂಚಾರ ಕಡಿಮೆಯಾಗಲಿದೆ.

    ದೆಹಲಿ-ನೈರೋಬಿ, ಅಮೃತಸರ-ಲಂಡನ್ ಮತ್ತು ಗೋವಾ-ಲಂಡನ್ ಮಾರ್ಗಗಳಲ್ಲಿ ಜು.15ರವರೆಗೆ ವಿಮಾನಯಾನ ಸ್ಥಗಿತಗೊಳ್ಳಲಿದೆ. ವಾರಕ್ಕೆ ನಾಲ್ಕು ವಿಮಾನಗಳನ್ನು ಹೊಂದಿರುವ ದೆಹಲಿ-ನೈರೋಬಿ ಮಾರ್ಗ, ವಾರಕ್ಕೆ ತಲಾ ಮೂರರಂತೆ ವಿಮಾನಗಳನ್ನು ಹೊಂದಿರುವ ಅಮೃತಸರ-ಲಂಡನ್ (ಗ್ಯಾಟ್ವಿಕ್) ಹಾಗೂ ಗೋವಾ (ಮೋಪಾ)-ಲಂಡನ್ (ಗ್ಯಾಟ್ವಿಕ್) ಮಾರ್ಗಗಳಲ್ಲಿ ವಿಮಾನ ಸಂಚರಿಸುವುದಿಲ್ಲ ಎಂದು ವಿಮಾನಯಾನ ಸಂಸ್ಥೆ ತಿಳಿಸಿದೆ.

    ಏರ್ ಇಂಡಿಯಾ ವಿಮಾನ ಅಪಘಾತದ ನಂತರದಿಂದ ಈವರೆಗೆ 60 ವಿಮಾನಗಳು ರದ್ದಾಗಿದ್ದು, ವಿಮಾನ ದುರಂತದ ನಂತರ ವಿಮಾನಗಳ ಪರಿಶೀಲನೆ ಹಾಗೂ ತನಿಖಾ ದೃಷ್ಟಿಯಿಂದ ಈ ಬೆಳವಣಿಗೆ ನಡೆದಿದೆ. ಮುಂದಿನ ದಿನಗಳಲ್ಲಿ ವಿಮಾನಗಳ ಪರಿಶೀಲನೆ ಹೆಚ್ಚಾಗಲಿದೆ.ಇದನ್ನೂ ಓದಿ: ಸರ್ಕಾರದ ಬುಡಕ್ಕೆ ಮತ್ತೊಂದು ಭ್ರಷ್ಟಾಚಾರ ಬಾಂಬ್‌; ಜಮೀರ್ ಪಿಎ – ಬಿ.ಆರ್ ಪಾಟೀಲ್‌ರದ್ದು ಎನ್ನಲಾದ ಆಡಿಯೋ ವೈರಲ್‌ 

  • Plane Crash | ಬ್ಲ್ಯಾಕ್‌ ಬಾಕ್ಸ್‌ಗಳನ್ನು ವಿದೇಶಕ್ಕೆ ಕಳಿಸಿಲ್ಲ: ಸುಳ್ಳು ಸುದ್ದಿ ಹರಡದಂತೆ ಕೇಂದ್ರ ಸರ್ಕಾರ ಮನವಿ

    Plane Crash | ಬ್ಲ್ಯಾಕ್‌ ಬಾಕ್ಸ್‌ಗಳನ್ನು ವಿದೇಶಕ್ಕೆ ಕಳಿಸಿಲ್ಲ: ಸುಳ್ಳು ಸುದ್ದಿ ಹರಡದಂತೆ ಕೇಂದ್ರ ಸರ್ಕಾರ ಮನವಿ

    ನವದೆಹಲಿ: ದುರಂತಕ್ಕೀಡಾದ ಏರ್ ಇಂಡಿಯಾ ವಿಮಾನದ ಬ್ಲ್ಯಾಕ್‌ ಬಾಕ್ಸ್‌ಗಳನ್ನು (Black Boxes) ವಿದೇಶಕ್ಕೆ ಕಳುಹಿಸಲಾಗುತ್ತಿದೆ ಎಂಬ ವರದಿಗಳನ್ನು ನಾಗರಿಕ ವಿಮಾನಯಾನ ಸಚಿವಾಲಯ (Ministry of Civil Aviation) ತಳ್ಳಿಹಾಕಿದೆ.

    ಅಪಘಾತಕ್ಕೀಡಾದ ಏರ್‌ ಇಂಡಿಯಾ 171 ವಿಮಾನದ CVR/DFDR ಅನ್ನು ವಿಶ್ಲೇಷಣೆಗಾಗಿ ವಿದೇಶಕ್ಕೆ ಕಳುಹಿಸಲಾಗುತ್ತಿದೆ ಎಂದು ಕೆಲವು ಮಾಧ್ಯಮಗಳಲ್ಲಿ ವರದಿಯಾಗಿದೆ. ಫ್ಲೈಟ್ ರೆಕಾರ್ಡರ್‌ಗಳನ್ನು ಡಿಕೋಡ್ ಮಾಡುವ ಸ್ಥಳದ ಬಗ್ಗೆ ಸೂಕ್ತ ಮೌಲ್ಯಮಾಪನದ ನಂತರ AAIB ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಸಚಿವಾಲಯ ಎಕ್ಸ್‌ ಪೋಸ್ಟ್‌ನಲ್ಲಿ ಸ್ಪಷ್ಟಪಡಿಸಿದೆ. ಇಂತಹ ಸೂಕ್ಷ್ಮ ವಿಷಯಗಳ ಬಗ್ಗೆ ಊಹಾಪೋಹಗಳನ್ನು ಹರಡದಂತೆ ಸಚಿವಾಲಯವು ಮನವಿ ಮಾಡಿಕೊಂಡಿದೆ. ಇದನ್ನೂ ಓದಿ: ಏರ್ ಇಂಡಿಯಾ ದುರಂತದ ಬಳಿಕ ಎಚ್ಚೆತ್ತ DGCA – ಏರ್‌ಪೋರ್ಟ್‌ ಬಳಿಯ ಕಟ್ಟಡಗಳಿಗೆ ಹೊಸ ರೂಲ್ಸ್‌

    ನಾಗರಿಕ ವಿಮಾನಯಾನ ಸಚಿವಾಲಯವು ಎಲ್ಲಾ ಪಾಲುದಾರರನ್ನು ಇಂತಹ ಸೂಕ್ಷ್ಮ ವಿಷಯಗಳ ಬಗ್ಗೆ ಊಹಾಪೋಹಗಳಿಂದ ದೂರವಿರಲು ಮತ್ತು ತನಿಖಾ ಪ್ರಕ್ರಿಯೆಯು ಅದು ಖಾತರಿಪಡಿಸುವ ಗಂಭೀರತೆ ಮತ್ತು ವೃತ್ತಿಪರತೆಯೊಂದಿಗೆ ಮುಂದುವರಿಯಲು ಅನುವು ಮಾಡಿಕೊಡುವಂತೆ ಒತ್ತಾಯಿಸುತ್ತದೆ.

    ಅಹಮದಾಬಾದ್ ಬಳಿ ಸಂಭವಿಸಿದ ಏರ್ ಇಂಡಿಯಾ ವಿಮಾನ 171 ರ ದುರಂತ ಅಪಘಾತದ ತನಿಖೆ ನಡೆಯುತ್ತಿದೆ. ವಿಮಾನ ಅಪಘಾತ ತನಿಖಾ ಬ್ಯೂರೋ (AAIB) ಔಪಚಾರಿಕ ತನಿಖೆಯ ನೇತೃತ್ವ ವಹಿಸಿದೆ. ಇದನ್ನೂ ಓದಿ: Air India Plane crash | ಡೇಟಾ ರಿಕವರಿಗಾಗಿ ಬ್ಲ್ಯಾಕ್‌ ಬಾಕ್ಸ್ ಅಮೆರಿಕಕ್ಕೆ ರವಾನೆ

    ಅಂತರರಾಷ್ಟ್ರೀಯ ನಾಗರಿಕ ವಿಮಾನಯಾನ ಸಂಸ್ಥೆ (ICAO) ಪ್ರೋಟೋಕಾಲ್‌ಗಳಿಗೆ ಅನುಸಾರವಾಗಿ, ಬಹು-ಶಿಸ್ತಿನ AAIB ತಂಡವು ಜೂ.12 ರಂದು ತನಿಖೆ ಪ್ರಾರಂಭಿಸಿತು. ಇದಕ್ಕೆ US ರಾಷ್ಟ್ರೀಯ ಸಾರಿಗೆ ಸುರಕ್ಷತಾ ಮಂಡಳಿ (NTSB) ಮತ್ತು ಮೂಲ ಸಲಕರಣೆ ತಯಾರಕರ (OEM) ತಜ್ಞರ ಬೆಂಬಲವಿದೆ.

    ಏರ್ ಇಂಡಿಯಾ ವಿಮಾನ ಅಪಘಾತ ಸ್ಥಳದಿಂದ ಡಿಜಿಟಲ್ ಫ್ಲೈಟ್ ಡೇಟಾ ರೆಕಾರ್ಡರ್ (DFDR) ಮತ್ತು ಕಾಕ್‌ಪಿಟ್ ವಾಯ್ಸ್ ರೆಕಾರ್ಡರ್ (CVR) ಸಾಧನಗಳ ಬ್ಲ್ಯಾಕ್‌ ಬಾಕ್ಸ್‌ಗಳನ್ನು ವಶಕ್ಕೆ ಪಡೆಯಲಾಗಿದೆ. ಮೊದಲನೆಯದು ಜೂ.13 ಮತ್ತು ಎರಡನೆಯದನ್ನು ಜೂ.16 ರಂದು ಪತ್ತೆಹಚ್ಚಲಾಯಿತು. ಇದನ್ನೂ ಓದಿ: ತಿರುಪತಿಗೆ ಹೊರಟಿದ್ದ ವಿಮಾನ ವಾಪಸ್‌ – ಹೈದರಾಬಾದ್‌ನಲ್ಲಿ ಯೂಟರ್ನ್‌ ಹೊಡೆದ ಸ್ಪೈಸ್‌ಜೆಟ್‌ ಫ್ಲೈಟ್‌

  • ಏರ್‌ ಇಂಡಿಯಾ ವಿಮಾನ ದುರಂತದಲ್ಲಿ ಸಾವು ಗೆದ್ದು ಬಂದಿದ್ದ ವಿಶ್ವಾಸ್‌ ಆಸ್ಪತ್ರೆಯಿಂದ ಡಿಸ್ಚಾರ್ಜ್‌

    ಏರ್‌ ಇಂಡಿಯಾ ವಿಮಾನ ದುರಂತದಲ್ಲಿ ಸಾವು ಗೆದ್ದು ಬಂದಿದ್ದ ವಿಶ್ವಾಸ್‌ ಆಸ್ಪತ್ರೆಯಿಂದ ಡಿಸ್ಚಾರ್ಜ್‌

    – ಸಹೋದರನ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿ ಕಣ್ಣೀರಿಟ್ಟ ವಿಶ್ವಾಸ್‌ ಕುಮಾರ್‌

    ಗಾಂಧೀನಗರ: ಅಹಮದಾಬಾದ್‌ನಲ್ಲಿ ಸಂಭವಿಸಿದ್ದ ಏರ್‌ ಇಂಡಿಯಾ (Air India Plane Crash) ವಿಮಾನ ಭೀಕರ ಅಪಘಾತದಲ್ಲಿ ಬದುಕುಳಿದಿದ್ದ ಏಕೈಕ ಪ್ರಯಾಣಿಕ ವಿಶ್ವಾಸ್‌ ಕುಮಾರ್‌ ರಮೇಶ್‌ (Vishwas Kumar Ramesh) ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದಾರೆ.

    ಹಾಸ್ಟೆಲ್‌ವೊಂದಕ್ಕೆ ವಿಮಾನ ಡಿಕ್ಕಿಯಾಗಿ ಅವಘಡ ಸಂಭವಿಸಿದಾಗ, ತುರ್ತು ನಿರ್ಗಮನ ಬಾಗಿಲು ತೆರೆದು ವಿಶ್ವಾಸ್‌ ಜಿಗಿದು ಬದುಕುಳಿದಿದ್ದರು. ಸಣ್ಣಪುಟ್ಟ ಗಾಯಗಳಿಂದ ಅಹಮದಾಬಾದ್‌ನ ಸಿವಿಲ್‌ ಆಸ್ಪತ್ರೆಗೆ ದಾಖಲಾಗಿದ್ದರು. ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್‌ ಶಾ ಸೇರಿದಂತೆ ಅನೇಕ ಗಣ್ಯರು ಗಾಯಾಳು ಆರೋಗ್ಯ ವಿಚಾರಿಸಿದ್ದರು. ಇದನ್ನೂ ಓದಿ: ಬೆಂಗಳೂರು – ಲಂಡನ್‌ ಸೇರಿದಂತೆ ದಿಢೀರ್‌ 7 ಏರ್‌ ಇಂಡಿಯಾ ಅಂತರಾಷ್ಟ್ರೀಯ ವಿಮಾನಗಳ ಹಾರಾಟ ರದ್ದು

    ಚಿಕಿತ್ಸೆ ಬಳಿಕ ವಿಶ್ವಾಸ್‌ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆದರು. ನಂತರ ತನ್ನ ಸಹೋದರನ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದರು. ತನ್ನ ಜೊತೆ ಪ್ರಯಾಣಿಸಿದ್ದ ಸಹೋದರ ವಿಮಾನ ಪತನದಲ್ಲಿ ಮೃತಪಟ್ಟಿದ್ದ.

    ಜೂನ್ 12 ರಂದು ನಡೆದ ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ ಬದುಕುಳಿದ ಏಕೈಕ ವ್ಯಕ್ತಿ 40 ವರ್ಷದ ಬ್ರಿಟಿಷ್ ಪ್ರಜೆ ವಿಶ್ವಾಸ್. ವಿಮಾನ ಅಪಘಾತದ ಸುದ್ದಿ ತಿಳಿದ ನಂತರ ವಿಶ್ವಾಸ್ ಅವರ ಕುಟುಂಬ ಯುಕೆಯಿಂದ ಆಗಮಿಸಿತು. ವಿಶ್ವಾಸ್ ಮತ್ತು ಅವರ ಸಹೋದರ ಇಬ್ಬರೂ ದಿಯು ಮೂಲದವರಾಗಿದ್ದು, ಕೇಂದ್ರಾಡಳಿತ ಪ್ರದೇಶದಲ್ಲಿ ತಮ್ಮ ಕುಟುಂಬದೊಂದಿಗೆ ಸಮಯ ಕಳೆಯಲು ಭಾರತಕ್ಕೆ ವಿಮಾನದಲ್ಲಿ ಬಂದಿದ್ದರು.‌ ಇದನ್ನೂ ಓದಿ: ಏರ್‌ ಇಂಡಿಯಾ ಎಂಜಿನಿಯರಿಂಗ್ ಮುಖ್ಯಸ್ಥನಿಗೆ ಡಿಜಿಸಿಎ ಬುಲಾವ್ – ಬೋಯಿಂಗ್ 787 ವಿಮಾನಗಳ ತಾಂತ್ರಿಕ ಸಮಸ್ಯೆ ಬಗ್ಗೆ ಚರ್ಚೆ

    ಬುಧವಾರ ಬೆಳಗ್ಗೆ ಅಜಯ್ ಅವರ ಅಂತ್ಯಕ್ರಿಯೆಯನ್ನು ಕುಟುಂಬವು ದಿಯುನಲ್ಲಿ ನಡೆಸಿದೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ. ಡಿಎನ್ಎ ಮಾದರಿಯು ಅವರ ಗುರುತನ್ನು ದೃಢಪಡಿಸಿದ ನಂತರ ದೇಹವನ್ನು ಕುಟುಂಬಕ್ಕೆ ಹಸ್ತಾಂತರಿಸಲಾಗಿತ್ತು.

    ಅಹಮದಾಬಾದ್‌ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟ ಕೆಲವೇ ನಿಮಿಷಗಳಲ್ಲಿ ಬೋಯಿಂಗ್ 787 ಡ್ರೀಮ್‌ಲೈನರ್ ಏರ್‌ ಇಂಡಿಯಾ ವಿಮಾನ 171 ಅಪಘಾತಕ್ಕೀಡಾಗಿದೆ. ದುರಂತದಲ್ಲಿ 270 ಮಂದಿ ಮೃತಪಟ್ಟಿದ್ದಾರೆ. ಅಪಘಾತದ ಕೆಲವೇ ಕ್ಷಣಗಳ ನಂತರ ವೈರಲ್ ಆಗಿರುವ ವೀಡಿಯೊದಲ್ಲಿ, ಗಾಯಗೊಂಡಿದ್ದ ವಿಶ್ವಾಸ್ ಅಂಬುಲೆನ್ಸ್‌ ಕಡೆಗೆ ನಡೆದುಕೊಂಡು ಹೋಗುತ್ತಿರುವುದು ಕಂಡುಬಂದಿದೆ. ಇದನ್ನೂ ಓದಿ: ಏರ್ ಇಂಡಿಯಾದ ಮತ್ತೊಂದು ವಿಮಾನದಲ್ಲಿ ತಾಂತ್ರಿಕ ದೋಷ – ಕೋಲ್ಕತ್ತಾದಲ್ಲಿ ಪ್ರಯಾಣಿಕರನ್ನು ಕೆಳಗಿಳಿಸಿದ ಸಿಬ್ಬಂದಿ

  • Explainer: ವಿಮಾನ ಸುಟ್ಟು ಬೂದಿಯಾದರೂ ‘ಬ್ಲ್ಯಾಕ್‌ಬಾಕ್ಸ್‌’ಗೆ ಏನಾಗಲ್ಲ – ಏನಿದು ಪೆಟ್ಟಿಗೆ? ಫ್ಲೈಟ್‌ ಆಕ್ಸಿಡೆಂಟ್‌ಗಳಲ್ಲಿ ಏಕೆ ಮುಖ್ಯ?

    Explainer: ವಿಮಾನ ಸುಟ್ಟು ಬೂದಿಯಾದರೂ ‘ಬ್ಲ್ಯಾಕ್‌ಬಾಕ್ಸ್‌’ಗೆ ಏನಾಗಲ್ಲ – ಏನಿದು ಪೆಟ್ಟಿಗೆ? ಫ್ಲೈಟ್‌ ಆಕ್ಸಿಡೆಂಟ್‌ಗಳಲ್ಲಿ ಏಕೆ ಮುಖ್ಯ?

    – ಬ್ಲ್ಯಾಕ್‌ಬಾಕ್ಸ್‌ ಕಿತ್ತಳೆ ಬಣ್ಣದಲ್ಲಿರುತ್ತೆ ಯಾಕೆ?
    – ನದಿ, ಸಮುದ್ರದಲ್ಲಿ ಬಿದ್ದರೆ ಸಿಗುತ್ತಾ?

    ಗುಜರಾತ್‌ನ ಅಹಮದಾಬಾದ್‌ನಲ್ಲಿ ಜೂ.12 ರಂದು ಸಂಭವಿಸಿದ ಏರ್‌ ಇಂಡಿಯಾ ಬೋಯಿಂಗ್‌ 787 ಡ್ರೀಮ್‌ಲೈನರ್‌ ವಿಮಾನ ಅಪಘಾತವು (Ahmedabad Plane Crash) ಇಡೀ ಜಗತ್ತನ್ನು ಬೆಚ್ಚಿಬೀಳಿಸಿತು. ಭೀಕರ ಅಪಘಾತಕ್ಕೆ 270 ಮಂದಿ ಬಲಿಯಾದರು. ಈ ಘೋರ ವಿಮಾನ ದುರಂತದ ಬಳಿಕ ಹೆಚ್ಚಾಗಿ ಕೇಳಿಬರುತ್ತಿರುವ ಹೆಸರು ‘ಬ್ಲ್ಯಾಕ್‌ಬಾಕ್ಸ್’ (Blackbox).‌ ಹುಡುಕಾಟದಲ್ಲಿದ್ದ 2 ಕಪ್ಪು ಪೆಟ್ಟಿಗೆಗಳು ಕೊನೆಗೂ ಸಿಕ್ಕಿವೆ. ಈಗ ಎಲ್ಲರ ಚಿತ್ತವೂ ಆ ಬಾಕ್ಸ್‌ಗಳ ಕಡೆ ನೆಟ್ಟಿದೆ.

    ಅಷ್ಟಕ್ಕೂ ಏನಿದು ಬ್ಲ್ಯಾಕ್‌ಬಾಕ್ಸ್?‌ ವಿಮಾನಗಳಿಗೆ ಇದು ಏಕೆ ಮುಖ್ಯ? ಇವುಗಳ ಪ್ರಾಮುಖ್ಯತೆ ಏನು? ಅಹಮದಾಬಾದ್‌ ಏರ್‌ ಇಂಡಿಯಾ ದುರಂತದ ಹೊತ್ತಲ್ಲಿ ಇದರ ಬಗ್ಗೆ ಚರ್ಚೆ ಯಾಕೆ? ಎಂಬಿತ್ಯಾದಿ ಪ್ರಶ್ನೆಗಳು ಮೂಡುವುದು ಸಹಜ. ಇಲ್ಲಿದೆ ನೋಡಿ ವಿವರ. ಇದನ್ನೂ ಓದಿ: ಬ್ಲ್ಯಾಕ್‌ಬಾಕ್ಸ್‌ನಲ್ಲಿ ಅಡಗಿದೆ ವಿಮಾನ ದುರಂತದ ರಹಸ್ಯ – ನಾಳೆಯೊಳಗೆ ಅಪಘಾತಕ್ಕೆ ಅಸಲಿ ಕಾರಣ ಸಿಗುತ್ತಾ?

    ಏನಿದು ಬ್ಲ್ಯಾಕ್‌ಬಾಕ್ಸ್‌?
    ಬ್ಲ್ಯಾಕ್‌ಬಾಕ್ಸ್‌ ಎಂದರೆ, ವಿಮಾನ ಹಾರಾಟ ಸಂದರ್ಭದಲ್ಲಿನ ರೆಕಾರ್ಡರ್‌. ವಿಮಾನದಲ್ಲಿ ಫ್ಲೈಟ್‌ ಡೇಟಾ ರೆಕಾರ್ಡರ್‌ ಮತ್ತು ಕಾಕ್‌ಪಿಟ್‌ ವಾಯ್ಸ್‌ ರೆಕಾರ್ಡರ್‌ ಎಂಬ ಸಾಧನಗಳಿರುತ್ತವೆ. ಇದು ಕಿತ್ತಳೆ ಬಣ್ಣದಲ್ಲಿರುತ್ತದೆ.

    ಫ್ಲೈಟ್ ಡೇಟಾ ರೆಕಾರ್ಡರ್
    ಅಪಘಾತಕ್ಕೂ ಮೊದಲು ವಿಮಾನದ ವೇಗ, ಎತ್ತರ, ಎಂಜಿನ್ ಕಾರ್ಯಕ್ಷಮತೆ, ಮಾರ್ಗನಕ್ಷೆ ಮತ್ತು ಹಾರಾಟ ನಿಯಂತ್ರಣ ಚಲನೆ ಸೇರಿದಂತೆ ಎಲ್ಲಾ ತಾಂತ್ರಿಕ ವಿವರವನ್ನು ಈ ಸಾಧನ ದಾಖಲಿಸುತ್ತದೆ. ಕೊನೆಯ 25 ಗಂಟೆಗಳ ಕಾಲದ ಒಟ್ಟು 88 ಮಾಹಿತಿಗಳ ಡೇಟಾವನ್ನು ಸಂಗ್ರಹಿಸುತ್ತದೆ. 1,100 ಡಿಗ್ರಿ ಸೆಲ್ಶಿಯಸ್‌ ತಾಪಮಾನ ಇದ್ದರೆ 1 ಗಂಟೆ ಹಾಗೂ 260 ಡಿಗ್ರಿ ಸೆಲ್ಶಿಯಸ್‌ ತಾಪಮಾನ ಇದ್ದರೆ 10 ಗಂಟೆಗಳ ಕಾಲ ಡೇಟಾವನ್ನು ತಡೆದಿಟ್ಟುಕೊಳ್ಳಬಹುದು.

    ಕಾಕ್‌ಪಿಟ್ ವಾಯ್ಸ್ ರೆಕಾರ್ಡರ್
    ಇದು ಪೈಲಟ್‌ಗಳ ನಡುವಿನ ಸಂಭಾಷಣೆಗಳು, ಅಲಾರಾಂಗಳು ಮತ್ತು ಸುತ್ತುವರಿದ ಶಬ್ದಗಳನ್ನು ಒಳಗೊಂಡಂತೆ ಕಾಕ್‌ಪಿಟ್‌ನಿಂದ ಆಡಿಯೊವನ್ನು ರೆಕಾರ್ಡ್ ಮಾಡುತ್ತದೆ. ಈ ಬಾಕ್ಸ್ ಕೊನೆಯ ಎರಡು ಗಂಟೆಗಳ ವಿಮಾನದಲ್ಲಿನ ಧ್ವನಿಯನ್ನು ದಾಖಲಿಸುತ್ತದೆ.

    ಬ್ಲ್ಯಾಕ್‌ಬಾಕ್ಸ್‌ ಪರಿಚಯಿಸಿದ್ದು ಯಾವಾಗ?
    1950 ರ ದಶಕದ ಆರಂಭದಲ್ಲಿ ಬ್ಲ್ಯಾಕ್‌ಬಾಕ್ಸ್‌ ಪರಿಚಯಿಸಲಾಯಿತು.

    ಪರಿಚಯಿಸಿದ್ದು ಯಾರು?
    ರೆಕಾರ್ಡ್ ಮಾಡುವ ಸಾಧ್ಯತೆಯ ಬಗ್ಗೆ ಡೇವಿಡ್ ವಾರೆನ್‌ಗೆ ಇದ್ದ ಆಸಕ್ತಿಯೇ ವಿಶ್ವದ ಮೊದಲ ಫ್ಲೈಟ್ ರೆಕಾರ್ಡರ್ ಅಥವಾ ‘ಬ್ಲ್ಯಾಕ್‌ಬಾಕ್ಸ್’ ಆವಿಷ್ಕಾರಕ್ಕೆ ಕಾರಣವಾಯಿತು. ಡೇವಿಡ್ ವಾರೆನ್ ಮೆಲ್ಬೋರ್ನ್‌ನಲ್ಲಿರುವ ಏರೋನಾಟಿಕಲ್ ರಿಸರ್ಚ್ ಲ್ಯಾಬೊರೇಟರಿ (ARL)ಯಲ್ಲಿ ಸಂಶೋಧನಾ ವಿಜ್ಞಾನಿಯಾಗಿದ್ದರು.

    1953: ಜನರಲ್ ಮಿಲ್ಸ್ ಮೊದಲ FDR (ಫ್ಲೈಟ್‌ ಡೇಟಾ ರೆಕಾರ್ಡರ್) ಅನ್ನು ಲಾಕ್‌ಹೀಡ್ ಏರ್‌ಕ್ರಾಫ್ಟ್ ಕಂಪನಿಗೆ ಮಾರಾಟ ಮಾಡಿದರು. ಇದನ್ನೂ ಓದಿ: ಏರ್‌ ಇಂಡಿಯಾ ವಿಮಾನ ಪತನ: ಬ್ಲ್ಯಾಕ್‌ ಬಾಕ್ಸ್‌ ಪತ್ತೆ – ಬೆಂಕಿ ಬಿದ್ದರೂ ಸುಟ್ಟು ಹೋಗಿಲ್ಲ ಯಾಕೆ?

    1954: ಆಸ್ಟ್ರೇಲಿಯಾದ ಡೇವಿಡ್ ರೊನಾಲ್ಡ್ ಡಿ ಮೇ ವಾರೆನ್ ವಿಮಾನ ಅಪಘಾತವನ್ನು ತನಿಖೆ ಮಾಡುವಾಗ ವಿಶ್ವದ ಮೊದಲ ಎಫ್‌ಡಿಆರ್ ಅನ್ನು ಕಂಡುಹಿಡಿದರು. 1953 ರಲ್ಲಿ, ಜೆಟ್ ಇಂಧನ ತಜ್ಞ ವಾರೆನ್, ವಿಶ್ವದ ಮೊದಲ ವಾಣಿಜ್ಯ ಜೆಟ್ ವಿಮಾನವಾದ ಡಿ ಹ್ಯಾವಿಲ್ಯಾಂಡ್ ಕಾಮೆಟ್ ಅಪಘಾತನಗಳನ್ನು ವಿಶ್ಲೇಷಿಸುವ ವಿಶೇಷ ತಂಡದ ಭಾಗವಾಗಿ ಕೆಲಸ ಮಾಡುತ್ತಿದ್ದರು. ತರುವಾಯ, ವಿಮಾನ ಅಪಘಾತಗಳ ವಿಶ್ಲೇಷಣೆಯಲ್ಲಿ ರೆಕಾರ್ಡಿಂಗ್‌ಗಳು ಸಹಾಯಕವಾಗುವಂತೆ ಅವರು ಎಫ್‌ಡಿಆರ್ ಅನ್ನು ಕಂಡುಹಿಡಿದರು.

    ಬ್ಲ್ಯಾಕ್‌ಬಾಕ್ಸ್‌ಗೆ ಕಿತ್ತಳೆ ಬಣ್ಣ ಯಾಕೆ?
    ಅಪಘಾತದ ಸ್ಥಳಗಳಲ್ಲಿ ಸುಲಭವಾಗಿ ಪತ್ತೆಹಚ್ಚಲು FDR ಗಳನ್ನು ಪ್ರಕಾಶಮಾನವಾದ ಕಿತ್ತಳೆ ಅಥವಾ ಹಳದಿ ಬಣ್ಣದಿಂದ ರೂಪಿಸಲಾಗಿದೆ.

    FDR ಮತ್ತು CVR ಹೇಗೆ ಕೆಲಸ ಮಾಡುತ್ತವೆ?
    FDR ಮತ್ತು CVR ಎರಡೂ ಸಾಧನಗಳು ಯಾವಾಗಲೂ ಹಾರಾಟದ ಸಮಯದಲ್ಲಿ ಡೇಟಾವನ್ನು ಸಂಗ್ರಹಿಸುತ್ತವೆ. FDR ತಾಂತ್ರಿಕ ಮತ್ತು ಕಾರ್ಯಕ್ಷಮತೆಯ ಮೆಟ್ರಿಕ್‌ಗಳನ್ನು ದಾಖಲಿಸುತ್ತದೆ, ಆದರೆ CVR ಕಾಕ್‌ಪಿಟ್ ಒಳಗೆ ಧ್ವನಿಯನ್ನು ದಾಖಲಿಸುತ್ತದೆ. ಅಪಘಾತದ ಸಂದರ್ಭದಲ್ಲಿ, ಅಪಘಾತಕ್ಕೆ ಕಾರಣವಾಗುವ ಕ್ಷಣಗಳಲ್ಲಿ ಯಾಂತ್ರಿಕವಾಗಿ ಮತ್ತು ಸಿಬ್ಬಂದಿ ನಡುವಿನ ಸಂಭಾಷಣೆಯಲ್ಲಿ ಏನು ನಡೆಯುತ್ತಿದೆ ಎಂಬುದನ್ನು ತಿಳಿಯಲು ಇದು ನೆರವಾಗುತ್ತದೆ.

    ವಿಮಾನದಲ್ಲಿ ಎಲ್ಲಿ ಇಡುತ್ತಾರೆ?
    5 ಕೆಜಿ ತೂಕದ ರೆಕಾರ್ಡಿಂಗ್ ಸಾಧನವನ್ನು ಭದ್ರತೆಯ ದೃಷ್ಟಿಯಿಂದ ವಿಮಾನದ ಹಿಂಭಾಗದಲ್ಲಿ ಇಡಲಾಗುತ್ತದೆ. ಈ ಪೆಟ್ಟಿಗೆಯನ್ನು ಟೈಟಾನಿಯಂ ಲೋಹದಿಂದ ಮಾಡಲಾಗಿದ್ದು, ಟೈಟಾನಿಯಂ ಪೆಟ್ಟಿಗೆಯಲ್ಲಿ ಸುತ್ತುವರಿಯಲಾಗಿದೆ. ಸಮುದ್ರದಲ್ಲಿ ಬಿದ್ದರೆ ಅಥವಾ ಎತ್ತರದಿಂದ ಬಿದ್ದರೂ ಯಾವುದೇ ಆಘಾತವನ್ನು ತಡೆದುಕೊಳ್ಳುವ ಶಕ್ತಿಯನ್ನು ಇದು ಹೊಂದಿದೆ. ತೀವ್ರ ಶಾಖ, ಶೀತವನ್ನೂ ತಡೆದುಕೊಳ್ಳುವ ಸಾಮರ್ಥ್ಯವನ್ನು ಹೊಂದಿದೆ. ಇದನ್ನೂ ಓದಿ: ಏರ್‌ ಇಂಡಿಯಾ ವಿಮಾನ ಪತನ – ಏನಿದು ಬ್ಲ್ಯಾಕ್‌ಬಾಕ್ಸ್‌? ಬೆಂಕಿಯಲ್ಲಿ ಸುಟ್ಟು ಹೋಗಲ್ಲ ಯಾಕೆ?

    ಹಿಂಭಾಗದಲ್ಲಿ ಯಾಕೆ?
    ಅಪಘಾತದ ಸಂಭವಿಸಿದಾಗ ಹಿಂಭಾಗದಲ್ಲಿ ಅದರಲ್ಲೂ ಬಾಲದ ಕಡೆ ಪೆಟ್ಟು ಬೀಳುವುದು ಕಡಿಮೆ. ಯಾಕೆಂದರೆ ಬಾಲ ಎತ್ತರದಲ್ಲಿರುತ್ತದೆ. ಈ ಕಾರಣಕ್ಕೆ ಬಾಲದಲ್ಲಿ ಅಳವಡಿಸಲಾಗಿರುತ್ತದೆ. ವಿಮಾನದ ಎಂಜಿನ್‌ಗೆ ಜೋಡಿಸಲಾದ ಜನರೇಟರ್ ನಿಂದ ಬ್ಲ್ಯಾಕ್ ಬಾಕ್ಸ್ ಚಾರ್ಜ್ ಆಗುತ್ತದೆ.

    ಬ್ಲ್ಯಾಕ್‌ಬಾಕ್ಸ್‌ ರೂಪಿಸಿದ್ದೇಕೆ?
    1953-54ರ ಅವಧಿಯಲ್ಲಿ ವಿಮಾನ ಅಪಘಾತಗಳು ಹೆಚ್ಚುತ್ತಿತ್ತು. ಯಾಕೆ ಈ ಅಪಘಾತಗಳು ಸಂಭವಿಸುತ್ತಿವೆ ಎಂಬುದನ್ನು ಪತ್ತೆಹಚ್ಚಲು ಮತ್ತು ಮುಂದೆ ಅಪಘಾತಗಳನ್ನು ತಪ್ಪಿಸಲು ಬ್ಲ್ಯಾಕ್‌ಬಾಕ್ಸ್‌ ರೂಪಿಸಲಾಯಿತು.

    1953ರ ವಿಮಾನ ದುರಂತ
    1953ರ ಮೇ 2 ರಂದು BOAC ಫ್ಲೈಟ್ 783, ಗುಡುಗು ಸಹಿತ ತೀವ್ರ ಮಳೆಯ ನಡುವೆ 43 ಪ್ರಯಾಣಿಕರು ಮತ್ತು ಸಿಬ್ಬಂದಿ ಹೊತ್ತು ಕೋಲ್ಕತ್ತಾದಿಂದ ದೆಹಲಿಗೆ ಹೊರಟಿತು. ಟೇಕ್ ಆಫ್ ಆದ ಆರು ನಿಮಿಷಗಳ ನಂತರ 7,500 ಅಡಿ ಎತ್ತರಕ್ಕೆ ಏರುವಾಗ ವಿಮಾನದಲ್ಲಿಯೇ ಬಿರುಕು ಬಿಟ್ಟು ಪತನಗೊಂಡಿತ್ತು. ವಿಮಾನದಲ್ಲಿದ್ದ ಎಲ್ಲರೂ ಸಾವನ್ನಪ್ಪಿದ್ದರು. ಇದನ್ನೂ ಓದಿ: ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದರೆ ಏನಾಗುತ್ತೆ?

    ವಿರೋಧ
    ಆರಂಭದಲ್ಲಿ ಬ್ಲ್ಯಾಕ್‌ಬಾಕ್ಸ್ ಕಲ್ಪನೆಗೆ ಪ್ರತಿರೋಧ ವ್ಯಕ್ತವಾಗಿತ್ತು. ಸಿಬ್ಬಂದಿಯ ಮೇಲೆ ಕಣ್ಣಿಡಲು ಅದರಲ್ಲಿನ ರೆಕಾರ್ಡರ್‌ಗಳನ್ನು ಬಳಸಲಾಗುವುದು ಎಂದು ಪೈಲಟ್‌ಗಳು ದೂರಿದ್ದರು. ಆದಾಗ್ಯೂ, 1956 ರ ಹೊತ್ತಿಗೆ ವಾರೆನ್ ARL ಫ್ಲೈಟ್ ಮೆಮೊರಿ ಯುನಿಟ್ ಎಂಬ ಹೆಸರಿನ ಒಂದು ಮೂಲಮಾದರಿಯನ್ನು ರಚಿಸಿದರು. ಇದು ನಾಲ್ಕು ಗಂಟೆಗಳವರೆಗೆ ಧ್ವನಿ ಮತ್ತು ವಿಮಾನ ಹಾರಾಟದ ಸಂದರ್ಭದಲ್ಲಿನ ಡೇಟಾವನ್ನು ಸಂಗ್ರಹಿಸಲು ಅವಕಾಶ ಮಾಡಿಕೊಟ್ಟಿತು.

    ಮೊದಲು ಅಳವಡಿಸಿಕೊಂಡ ದೇಶ ಯಾವುದು?
    1963 ರಲ್ಲಿ ಎರಡು ಭೀಕರ ವಿಮಾನ ಅಪಘಾತಗಳು ಸಂಭವಿಸಿದವು. ಆಗ ಆಸ್ಟ್ರೇಲಿಯಾ ವಿಮಾನಗಳಲ್ಲಿ ಫ್ಲೈಟ್ ರೆಕಾರ್ಡರ್‌ಗಳನ್ನು ಕಡ್ಡಾಯ ಮಾಡಿತು. ಕಾನೂನಾತ್ಮಕವಾಗಿ ಅದನ್ನು ಕಡ್ಡಾಯಗೊಳಿಸಿದ ಮೊದಲು ದೇಶವಾಗಿ ಹೊರಹೊಮ್ಮಿತು. ಕಡ್ಡಾಯ ಕಾನೂನು ಅವಶ್ಯಕತೆಯನ್ನಾಗಿ ಮಾಡಿದ ಮೊದಲ ದೇಶವಾಯಿತು.

    ನದಿ, ಸಮುದ್ರದಲ್ಲಿ ಬಿದ್ದರೆ ಪತ್ತೆ ಹೇಗೆ?
    ವಿಮಾನಗಳು ಜಲಮೂಲಗಳಲ್ಲಿ ಪತನಗೊಂಡ ಪ್ರಕರಣಗಳು ನಡೆದಿವೆ. ಕಪ್ಪು ಪೆಟ್ಟಿಗೆಗಳು ನೀರಿನ ಅಡಿಯಲ್ಲಿ ಇರುವ ಸಂದರ್ಭಗಳಲ್ಲಿ ಪತ್ತೆಹಚ್ಚಲು, ಅವುಗಳಿಗೆ 30 ದಿನಗಳವರೆಗೆ ಅಲ್ಟ್ರಾಸೌಂಡ್ ಸಂಕೇತಗಳನ್ನು ಕಳುಹಿಸುವ ಬೀಕನ್ ಅಳವಡಿಸಲಾಗಿರುತ್ತದೆ.

  • ವಿಮಾನ ದುರಂತ ಸ್ಥಳಕ್ಕೆ ಭೇಟಿ – ಗಾಯಾಳುಗಳ ಆರೋಗ್ಯ ವಿಚಾರಿಸಿ, ಧೈರ್ಯ ತುಂಬಿದ ಮಲ್ಲಿಕಾರ್ಜುನ ಖರ್ಗೆ

    ವಿಮಾನ ದುರಂತ ಸ್ಥಳಕ್ಕೆ ಭೇಟಿ – ಗಾಯಾಳುಗಳ ಆರೋಗ್ಯ ವಿಚಾರಿಸಿ, ಧೈರ್ಯ ತುಂಬಿದ ಮಲ್ಲಿಕಾರ್ಜುನ ಖರ್ಗೆ

    – ಗೃಹ ಸಚಿವರು ಅಪಘಾತಗಳು ನಡೆಯುತ್ತಿರುತ್ತವೆ ಎಂಬರ್ಥದಲ್ಲಿ ಮಾತನಾಡಿದ್ದಾರೆ: ಖರ್ಗೆ ಬೇಸರ

    ಅಹಮದಾಬಾದ್‌: ಜೂನ್‌ 12ರಂದು ಏರ್‌ ಇಂಡಿಯಾ ವಿಮಾನ ದುರಂತ (Air India Plane Crash) ನಡೆದ ಅಹಮದಾಬಾದ್‌ನ ಮೇಘನಿ ನಗರಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಹಾಗೂ ಕರ್ನಾಟಕ ಡಿಸಿಎಂ ಡಿ.ಕೆ ಶಿವಕುಮಾರ್‌ ಕಾಂಗ್ರೆಸ್‌ ನಾಯಕರೊಂದಿಗೆ ಭೇಟಿ ನೀಡಿದ್ದರು. ಇಲ್ಲಿನ ಸಿವಿಲ್‌ ಆಸ್ಪತ್ರೆಗೆ ಭೇಟಿ ನೀಡಿದ ಖರ್ಗೆ ಅವರು ದುರಂತದಲ್ಲಿ ಗಾಯಗೊಂಡವರ ಯೋಗಕ್ಷೇಮ ವಿಚಾರಿಸಿದರು. ಅಲ್ಲದೇ ಶೀಘ್ರ ಗುಣಮುಖರಾಗುವುದಾಗಿ ಗಾಯಾಳುಗಳಿಗೆ ಧೈರ್ಯತುಂಬಿದರು.

    ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ಅಹಮದಾಬಾದ್ ಇತಿಹಾಸದಲ್ಲಿ ಮರೆಯಲಾಗದ ದುರ್ಘಟನೆ. ಹಲವಾರು ಜನ ಸಾವನ್ನಪ್ಪಿದ್ದಾರೆ. ಮೃತಪಟ್ಟ ಎಲ್ಲರಿಗೂ ಶ್ರದ್ಧಾಂಜಲಿ ಅರ್ಪಿಸುತ್ತೇನೆ. ಆಸ್ಪತ್ರೆ ವೈದ್ಯ ಡಾ. ವಿಠ್ಠಲ್ ಜೊತೆ ಚರ್ಚಿಸಿ ಗಾಯಾಳುಗಳ ಬಗ್ಗೆ ಮಾಹಿತಿ ಪಡೆದಿದ್ದೇನೆ. ಅವರ ಆರೋಗ್ಯ ವಿಚಾರಿಸಿ ಧೈರ್ಯ ಹೇಳಿದ್ದೇನೆ. ಈ ದುರಂತದಲ್ಲಿ ಏಕೈಕ ವ್ಯಕ್ತಿ ವಿಶ್ವಾಸ್ ಕುಮಾರ್ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ, ಅವರು ಶೀಘ್ರವೇ ಚೇತರಿಸಿಕೊಳ್ಳಲಿ ಎಂದು ಹಾರೈಸಿದರು. ಇದನ್ನೂ ಓದಿ: Ahmedabad Tragedy | ಮೃತರ ಕುಟುಂಬಗಳಿಗೆ ತಲಾ 25 ಲಕ್ಷ ಮಧ್ಯಂತರ ಪರಿಹಾರ ಘೋಷಿಸಿದ ಏರ್‌ ಇಂಡಿಯಾ

    ಸರ್ಕಾರ ಗಂಭಿರವಾಗಿ ಪರಿಗಣಿಸಬೇಕು
    ಮೃತರ ಕುಟುಂಬಗಳಿಗೆ ದೇವರು ದುಃಖ ಭರಿಸುವ ಶಕ್ತಿ ಕೊಡಲಿ. ದುರ್ಘಟನೆಯನ್ನ ಸರ್ಕಾರ ಗಂಭಿರವಾಗಿ ಪರಿಗಣಿಸಬೇಕು. ಇಂತಹದೆಲ್ಲ ನಡೆಯತ್ತವೆ ಎನ್ನುವಂತೆ ಹಗುವರಾಗಿ ಪರಿಗಣಿಸಬಾರದು. ನಮ್ಮ ಹಿರಿಯ ಮುಖಂಡರು ಪರಿಹಾರ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ದುರಂತಕ್ಕೂ ಮುನ್ನ ಇದೇ ವಿಮಾನ ಪ್ಯಾರಿಸ್‌ನಿಂದ ದೆಹಲಿಗೆ ಹಾರಾಟ ನಡೆಸಿತ್ತು!

    ಕೇಂದ್ರ ಸರ್ಕಾರ ಯಾವುದನ್ನೂ ಲಘುವಾಗಿ ಪರಿಗಣಿಸಬಾರದು. ಗೃಹ ಸಚಿವರು ಅಪಘಾತಗಳು ನಡೆಯುತ್ತಿರುತ್ತವೆ, ತಪ್ಪಿಸಲಾಗಲ್ಲ ಎಂಬರ್ಥದಲ್ಲಿ ಮಾತಾಡಿದ್ದಾರೆ. ನಾವು ಈಗಲೇ ಏನು ಹೇಳಲು ಸಾಧ್ಯವಿಲ್ಲ. ಸುಮ್ಮನೆ ಆರೋಪ ಮಾಡೋದಕ್ಕೂ ಸಾಧ್ಯವಿಲ್ಲ. ಬ್ಲ್ಯಾಕ್‌ಬಾಕ್ಸ್‌ನಲ್ಲಿ ಏನಿದೆ ಅಂತ ಗೊತ್ತಾಗಬೇಕು. ಸೂಕ್ತ ತನಿಖೆ ನಂತರ ಯಾರು ಹೊಣೆಗಾರರು ಗೊತ್ತಾಗುತ್ತೆ ಎಂದು ವಿವರಿಸಿದರು. ಇದನ್ನೂ ಓದಿ: ಏರ್‌ ಇಂಡಿಯಾ ವಿಮಾನ ದುರಂತ ತನಿಖೆಗೆ ಉನ್ನತ ಮಟ್ಟದ ಸಮಿತಿ – 3 ತಿಂಗಳ ಡೆಡ್‌ಲೈನ್: ಸಚಿವ ರಾಮಮೋಹನ್ ನಾಯ್ಡು

    ಆರೋಪ ಮಾಡುವ ಸಮಯವಲ್ಲ
    ಇದೇ ವೇಳೆ ಡಿಸಿಎಂ ಡಿ.ಕೆ ಶಿವಕುಮಾರ್‌ (DK Shivakumar) ಮಾತನಾಡಿ, ಗಾಯಾಳುಗಳ ಆರೋಗ್ಯ ವಿಚಾರಿಸಿದ್ದೇವೆ. ಘಟನೆಯಿಂದ ಬಹಳ ದುಃಖ ಆಗ್ತಿದೆ. ಯಾವುದೇ ದುರಂತ ಆಗಬಾರದು. ಟೆಕ್ನಿಕಲ್ ಸಮಸ್ಯೆಯೋ.. ಏನು ಅಂತಾ ಹೇಳಕ್ಕಾಗಲ್ಲ. ಬೇರೆ ಅವರ ಮೇಲೆ ಆರೋಪ ಮಾಡುವ ಸಮಯವೂ ಇದಲ್ಲ ಎಂದು ನುಡಿದರು. ಇದನ್ನೂ ಓದಿ: Plane Crash | ಇಂಜಿನಿಯರ್‌ ಆಗುವ ಕನಸು ಕಂಡಿದ್ದ ಆಟೋ ಚಾಲಕನ ಮಗಳ ದುರಂತ ಅಂತ್ಯ

  • ಏರ್‌ ಇಂಡಿಯಾ ಪತನ – ಮದುವೆಯಾಗಿದ್ದ Gay Couple ದುರಂತ ಸಾವು

    ಏರ್‌ ಇಂಡಿಯಾ ಪತನ – ಮದುವೆಯಾಗಿದ್ದ Gay Couple ದುರಂತ ಸಾವು

    – 2022 ರಲ್ಲಿ ಮದುವೆಯಾಗಿತ್ತು ಈ ಜೋಡಿ

    ಗಾಂಧೀನಗರ: ಅಹಮದಾಬಾದ್‌ನಲ್ಲಿ (Ahmedabad) ಗುರುವಾರ ಸಂಭವಿಸಿದ ಏರ್‌ ಇಂಡಿಯಾ (Air India) ಭೀಕರ ಅವಘಡದಲ್ಲಿ, ಮದುವೆಯಾಗಿದ್ದ ಗೇ ಜೋಡಿಯು ದುರಂತ ಸಾವು ಕಂಡಿದೆ.

    ಜಾಮಿ ಮೀಕ್ (45) ಮತ್ತು ಫಿಯಾಂಗಲ್ ಗ್ರೀನ್ ಲಾ (39) ಇಬ್ಬರೂ ಗೇ ಜೋಡಿ.‌ ಲಂಡನ್-ಬ್ರಿಟನ್‌ನ ವಾಕ್ಸ್ ಹಾಲ್‌ನವರಾಗಿದ್ದ ಸಲಿಂಗಿ ಜೋಡಿ 2022ರಲ್ಲಿ ಮದುವೆಯಾಗಿದ್ದರು (Same Sex Marriage). ಇದನ್ನೂ ಓದಿ: ನಾನು ವಿಮಾನದಿಂದ ಜಂಪ್ ಮಾಡ್ಲಿಲ್ಲ – ದೊಡ್ಡ ಆಪತ್ತಿನಿಂದ ರಮೇಶ್ ವಿಶ್ವಾಸ್ ಕುಮಾರ್ ಪಾರಾಗಿದ್ದು ಹೇಗೆ?

    ಜಾಮಿ ಮೀಕ್ ಎಂಬಾತ ವೆಲ್ನೆಸ್ ಫೌಂಡ್ರಿಯ ಸಂಸ್ಥಾಪಕ. ಇವರಿಬ್ಬರೂ ಯೋಗ ತರಬೇತಿ, ಆಧ್ಯಾತ್ಮಿಕ ತರಬೇತಿ ನೀಡುತ್ತಿದ್ದರು. ಭಾರತ ಪ್ರವಾಸಕ್ಕೆ ಬಂದಿದ್ದರು. ಘಟನೆ ಹಿಂದಿನ‌ ದಿನ ರಾತ್ರಿ ಅತ್ಯದ್ಭುತ ಎಂದು ಬಣ್ಣಿಸಿ ವೀಡಿಯೋ ಮಾಡಿದ್ದರು.

    ಭಾರತ ಪ್ರವಾಸ ಮುಗಿಸಿ ಹೊರಟಾಗ ಖುಷಿಯಲ್ಲಿದ್ದರು. ಅಹಮದಾಬಾದ್ ವಿಮಾನ ನಿಲ್ದಾಣದ ಗೇಟ್‌ನಲ್ಲಿ ಕುಳಿತು ಇವರು ಮಾಡಿದ್ದ ಕೊನೆಯ ವೀಡಿಯೋ ವೈರಲ್ ಆಗಿತ್ತು. ವೀಡಿಯೋದಲ್ಲಿ ಭಾರತದ ಪ್ರವಾಸದ ಬಗ್ಗೆ ಮಾತನಾಡಿದ್ದರು. ಇದನ್ನೂ ಓದಿ: Mayday… unable to lift: ಕ್ಯಾಪ್ಟನ್‌ ಸುಮಿತ್‌ ಕೊನೆ ಕ್ಷಣದ ಆಡಿಯೋ ಲಭ್ಯ

    ಗುರುವಾರ ಅಹಮದಾಬಾದ್‌ನಿಂದ ಲಂಡನ್ ಗ್ಯಾಟ್ವಿಕ್ ವಿಮಾನ ನಿಲ್ದಾಣಕ್ಕೆ ಟೇಕಾಫ್ ಆದ ಕೆಲವೇ ಸೆಕೆಂಡುಗಳಲ್ಲಿ ಅಪಘಾತಕ್ಕೀಡಾದ ವಿಮಾನದಲ್ಲಿ 230 ಪ್ರಯಾಣಿಕರು, ಇಬ್ಬರು ಪೈಲಟ್‌ಗಳು ಮತ್ತು 10 ಸಿಬ್ಬಂದಿ ಸೇರಿದಂತೆ 242 ಜನರಿದ್ದರು. ಈ ಪೈಕಿ ಭಾರತೀಯ ಮೂಲದ ಬ್ರಿಟಿಷ್ ಪ್ರಜೆ ಮಾತ್ರ ಅಪಘಾತದಲ್ಲಿ ಬದುಕುಳಿದರು. ವಿಮಾನವು ಹಾಸ್ಟೆಲ್‌ವೊಂದಕ್ಕೆ ಡಿಕ್ಕಿ ಹೊಡೆದು ಪತನಗೊಂಡಿತು. ಪರಿಣಾಮವಾಗಿ ಪ್ರಯಾಣಿಕರು ಸೇರಿದಂತೆ 274 ಮಂದಿ ಮೃತಪಟ್ಟಿದ್ದಾರೆ.