Tag: Ahmedabad

  • ಉಡುಪಿ ವೀಡಿಯೋ ಪ್ರಕರಣ – ಬೆಂಗಳೂರು, ಹೈದರಾಬಾದ್ ಬಳಿಕ ಅಹಮದಾಬಾದ್‍ನ ಎಫ್‍ಎಸ್‍ಎಲ್‍ಗೆ ಮೊಬೈಲ್ ರವಾನೆ

    ಉಡುಪಿ ವೀಡಿಯೋ ಪ್ರಕರಣ – ಬೆಂಗಳೂರು, ಹೈದರಾಬಾದ್ ಬಳಿಕ ಅಹಮದಾಬಾದ್‍ನ ಎಫ್‍ಎಸ್‍ಎಲ್‍ಗೆ ಮೊಬೈಲ್ ರವಾನೆ

    ಉಡುಪಿ: ಇಲ್ಲಿನ ಖಾಸಗಿ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ (Udupi College) ಹಿಂದೂ ಯುವತಿ ಟಾಯ್ಲೆಟ್‍ಗೆ ತೆರಳಿದ್ದಾಗ ಅನ್ಯಕೋಮಿನ ವಿದ್ಯಾರ್ಥಿನಿಯರು ವೀಡಿಯೋ ಮಾಡಿದ್ದ ಪ್ರಕರಣದಲ್ಲಿ ಪೊಲೀಸರಿಗೆ ಮೊಬೈಲ್ ರಿಟ್ರೀವ್ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ವೀಡಿಯೋ ಮಾಡಿದ್ದ ಮೊಬೈಲ್ ಬೆಂಗಳೂರು (Bengaluru) ಹಾಗೂ ಹೈದರಾಬಾದ್‍ನ ಎಫ್‍ಎಸ್‍ಎಲ್‍ನಲ್ಲಿ (FSL) ರಿಟ್ರೀವ್ ಆಗದ ಹಿನ್ನಲೆ ಮೊಬೈಲ್‍ನ್ನು ಅಹಮದಾಬಾದ್‍ಗೆ (Ahmedabad) ಕಳಿಸಲಾಗಿದೆ.

    ಪ್ರಕರಣ ನಡೆದು ಅರ್ಧ ವರ್ಷ ಕಳೆದರೂ ಪೊಲೀಸರಿಗೆ ಈ ಪ್ರಕರಣದಲ್ಲಿ ಯಾವುದೇ ಸಾಕ್ಷಿ ಸಿಕ್ಕಿಲ್ಲ. ಟಾಯ್ಲೆಟ್‍ನಲ್ಲಿ ಮೊಬೈಲ್ ಇಟ್ಟು ಚಿತ್ರೀಕರಿಸಿದ್ದ ಆರೋಪ ಎದುರಿಸುತ್ತಿರುವ ವಿದ್ಯಾರ್ಥಿನಿಯರು ಮೊಬೈಲ್‍ನಲ್ಲಿದ್ದ ವೀಡಿಯೋವನ್ನು ತಕ್ಷಣವೇ ಡಿಲೀಟ್ ಮಾಡಿದ್ದಾಗಿ ತಿಳಿಸಿದ್ದರು. ಬಳಿಕ ಜಪ್ತಿ ಮಾಡಲಾಗಿದ್ದ ಮೊಬೈಲ್‍ನ್ನು ಹೈದರಾಬಾದ್ ಎಫ್‍ಎಸ್‍ಎಲ್ ಕಚೇರಿಗೆ ಕಳಿಸಲಾಗಿತ್ತು. ಈಗ ಅಲ್ಲಿ ರಿಟ್ರೀವ್ ಮಾಡಲು ಸಾಧ್ಯವಾಗಿಲ್ಲ. ಯುವತಿಯ ಮೊಬೈಲ್ ಐಫೋನ್ ಆಗಿದ್ದರಿಂದ ರಿಟ್ರೀವ್ ಮಾಡುವುದು ಸವಾಲಾಗಿ ಪರಿಣಮಿಸಿದೆ. ಇದನ್ನೂ ಓದಿ: ಬೆಂಗಳೂರು, ಮಹಾರಾಷ್ಟ್ರದಲ್ಲಿ ಎನ್‌ಐಎ ದಾಳಿ, 15 ಮಂದಿ ಅರೆಸ್ಟ್‌ – 51 ಹಮಾಸ್‌ ಧ್ವಜ, ಪಿಸ್ತೂಲ್‌, ಗನ್‌, ಮಾರಕಾಸ್ತ್ರಗಳು ಜಪ್ತಿ

    ಅಹಮದಾಬಾದ್‍ನ ಎಫ್‍ಎಸ್‍ಎಲ್‍ನಲ್ಲಿ ಮೊಬೈಲ್ ರಿಟ್ರೀವ್ ಮಾಡುವ ವ್ಯವಸ್ಥೆ ಇದೆ ಎಂದು ಅಲ್ಲಿನ ಅಧಿಕಾರಿಗಳು ತಿಳಿಸಿದ್ದಾರೆ. ಅದಕ್ಕಾಗಿ ಸಿಐಡಿ ತಂಡ ಜಪ್ತಿ ಮಾಡಿದ್ದ ಮೊಬೈಲ್‍ನ್ನು ಅಲ್ಲಿಗೆ ಕೊಂಡೊಯ್ದಿದೆ. ಮೊಬೈನಲ್ಲಿದ್ದ ವೀಡಿಯೋ ಮಾತ್ರ ಅಲ್ಲದೇ ಸ್ನೇಹಿತೆಯರಿಗೆ ಕಳಿಸಿದ ಮೆಸೇಜ್‍ಗಳು ಸಹ ಡಿಲೀಟ್ ಆಗಿದ್ದು, ಮೊಬೈಲ್‍ನ ಸಂಪೂರ್ಣ ಡೇಟಾ ರಿಟ್ರೀವ್ ರಿಪೋರ್ಟ್‌ನ್ನು  ಸಿಐಡಿ ಅಧಿಕಾರಿಗಳು ಕೇಳಿದ್ದಾರೆ.

    ವಿಚಾರಣೆ ವೇಳೆ ವಿದ್ಯಾರ್ಥಿನಿಯರು ತಮಾಷೆಗಷ್ಟೇ ವೀಡಿಯೋ ಮಾಡಿದ್ದಾಗಿ ತಿಳಿಸಿದ್ದರು. ಅಲ್ಲದೇ ಆ ಕ್ಷಣವೇ ವೀಡಿಯೋವನ್ನು ಡಿಲಿಟ್ ಮಾಡಲಾಗಿದೆ. ಯಾವುದೇ ಬೇರೆ ಉದ್ದೇಶ ನಮಗೆ ಇರಲಿಲ್ಲ ಎಂದು ಸ್ಪಷ್ಟನೆ ನೀಡಿದ್ದರು.

    ಈ ವರ್ಷ ಜು.22ರಂದು ಈ ಪ್ರಕರಣ ಬೆಳಕಿಗೆ ಬಂದಿತ್ತು. ಈ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಬಿಜೆಪಿ ದೊಡ್ಡ ಪ್ರತಿಭಟನೆ ನಡೆಸಿತ್ತು. ಅಲ್ಲದೇ ವೀಡಿಯೋ ಮಾಡಿ ಬೇರೆಯವರಿಗೆ ಕಳಿಸುತ್ತಿದ್ದಾರೆ ಎಂದು ಆರೋಪಿಸಿತ್ತು. ಈ ಸಂಬಂಧ ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷರು ಸಹ ಕಾಲೇಜಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಇದನ್ನೂ ಓದಿ: ಕಾರು, ಟ್ರಕ್ ನಡುವೆ ಅಪಘಾತ – ಮದುವೆಗೆ ಹೊರಟಿದ್ದ ಎಂಟು ಮಂದಿ ಸಜೀವ ದಹನ

  • World Cup 2023- ಮೋದಿ ಸ್ಟೇಡಿಯಂನತ್ತ ಹರಿದು ಬಂದ ಜನಸಾಗರ

    World Cup 2023- ಮೋದಿ ಸ್ಟೇಡಿಯಂನತ್ತ ಹರಿದು ಬಂದ ಜನಸಾಗರ

    ಅಹಮದಾಬಾದ್: ಭಾರತ (India) ಮತ್ತು ಆಸ್ಟ್ರೇಲಿಯಾ (Australia) ನಡುವಿನ ಐಸಿಸಿ (ICC) ವಿಶ್ವಕಪ್ (World Cup) ಟೂರ್ನಿಯ ಫೈನಲ್ ಪಂದ್ಯ ಪ್ರಾರಂಭಕ್ಕೆ ಕೆಲವೇ ಕ್ಷಣಗಳು ಬಾಕಿ ಉಳಿದಿದ್ದು, ಎರಡು ತಂಡಗಳ ರೋಚಕ ಪಂದ್ಯ ವೀಕ್ಷಣೆಗಾಗಿ ಸ್ಟೇಡಿಯಂನತ್ತ ಜನಸಾಗರವೇ ಹರಿದುಬಂದಿದೆ.

    ಅಹಮದಾಬಾದ್‌ನ (Ahmedabad) ನರೇಂದ್ರ ಮೋದಿ ಸ್ಟೇಡಿಯಂ (Narendra Modi Stadium) ಒಳಗೆ ಹಾಗೂ ಹೊರಗೆ ಎಲ್ಲಿ ನೋಡಿದರೂ ಜನವೋ ಜನ. ಭಾರತ ತಂಡಕ್ಕೆ ಬೆಂಬಲ ಸೂಚಿಸಲು ಕ್ರಿಕೆಟ್ ಅಭಿಮಾನಿಗಳು ಸ್ಟೇಡಿಯಂ ಬಳಿ ಕಿಕ್ಕಿರಿದಿದ್ದು, ನೀಲಿ ಸಮುದ್ರದಂತೆ ಗೋಚರಿಸುತ್ತಿದೆ. ತ್ರಿವರ್ಣ ಧ್ವಜ ಹಿಡಿದ ಅಭಿಮಾನಿಗಳು, ಭಾರತ ಪರ ಜಯಘೋಷ ಮೊಳಗಿಸುತ್ತಾ, ಟೀಂ ಇಂಡಿಯಾ ಗೆದ್ದು ಬರಲಿ ಎಂದು ಶುಭ ಕೋರುತ್ತಿದ್ದಾರೆ. ಇದನ್ನೂ ಓದಿ: ಬ್ಯಾಟಿಂಗ್, ಬೌಲಿಂಗ್‍ನಲ್ಲಿ ನಮ್ಮ ತಂಡ ದಾಖಲೆ ಸೃಷ್ಟಿಸುತ್ತದೆ: ಪ್ರಿಯಾಂಕಾ ಗಾಂಧಿ

    ಇದೇ ವೇಳೆ ಮಾತನಾಡಿದ ಟೀಂ ಇಂಡಿಯಾ ಬೆಂಬಲಿಗ ಮತ್ತು ಸಚಿನ್ ತೆಂಡೂಲ್ಕರ್ ಅವರ ಅಭಿಮಾನಿ ಸುಧೀರ್ ಕುಮಾರ್ ಚೌಧರಿ, ಭಾರತ ತಂಡ 2011ರ ಗೆಲುವನ್ನು ಪುನರಾವರ್ತಿಸುತ್ತದೆ. ರೋಹಿತ್ ಶರ್ಮಾ ಮತ್ತು ಶುಭಮನ್ ಗಿಲ್ ಶತಕ ಗಳಿಸಿ 450 ರನ್‌ಗಳ ಗುರಿ ನೀಡಿ ಸುಲಭವಾಗಿ ಗೆಲ್ಲಬೇಕೆಂದು ಬಯಸುತ್ತೇನೆ ಎಂದು ತಿಳಿಸಿದರು. ಇದನ್ನೂ ಓದಿ: World Cup Final – ಭಾರತದ ಗೆಲುವಿಗಾಗಿ ಬೆಂಗಳೂರಿನ ಹಲವೆಡೆ ವಿಶೇಷ ಪೂಜೆ

    ವಿಶ್ವದ ಅತಿದೊಡ್ಡ ಕ್ರಿಕೆಟ್ ಕ್ರೀಡಾಂಗಣದ ನರೇಂದ್ರ ಮೋದಿ ಸ್ಟೇಡಿಯಂ ಈಗ ವಿಶ್ವ ದಾಖಲೆ ಬರೆಯಲು ಸಜ್ಜಾಗಿದೆ. ವರದಿಗಳ ಪ್ರಕಾರ, ಸುಮಾರು 1,320,000 ಜನರು ಪಂದ್ಯವನ್ನು ನೋಡಲು ಬರಲಿದ್ದಾರೆ. ಬಹಳಷ್ಟು ಗಣ್ಯರು ಪಂದ್ಯಕ್ಕೆ ಹಾಜರಾಗಲು ಸಜ್ಜಾಗಿದ್ದಾರೆ. ಬಿಸಿಸಿಐ ಸಹ ಭವ್ಯವಾದ ಐಎಎಫ್ ಸೂರ್ಯಕಿರಣ ಶೋ, ಕಲಾವಿದರ ಪ್ರದರ್ಶನ ಮತ್ತು ಲೇಸರ್ ಮತ್ತು ಲೈಟ್ ಶೋ ಅನ್ನು ಆಯೋಜಿಸಿದೆ. ಇದನ್ನೂ ಓದಿ: ವಿಶ್ವಕಪ್‍ನೊಂದಿಗೆ ಮಗ ಮನೆಗೆ ಮರಳುತ್ತಾನೆ: ಶಮಿ ತಾಯಿ ವಿಶ್ವಾಸ

  • ಬರೊಬ್ಬರಿ 20 ವರ್ಷದ ಮುಯ್ಯಿಗೆ ಕಾದಿದೆ ಟೀಂ ಇಂಡಿಯಾ!

    ಬರೊಬ್ಬರಿ 20 ವರ್ಷದ ಮುಯ್ಯಿಗೆ ಕಾದಿದೆ ಟೀಂ ಇಂಡಿಯಾ!

    ಅಹಮದಾಬಾದ್: ಸೋಲಿಗೆ ಸೇಡು ತೀರಿಸಿಕೊಂಡಿದ್ದ ಟೀಂ ಇಂಡಿಯಾ (Team India) ಇಂದು ಮತ್ತೊಂದು ಅಂತಹದ್ದೆ ಮೆಗಾ ರೈವರ್ಲಿಗೆ ಸಜ್ಜಾಗಿದೆ. ಆದರೆ ಇದು ನಿನ್ನೆ ಮೊನ್ನೆಯ ಸೇಡಲ್ಲ, ಬರೊಬ್ಬರಿ 20 ವರ್ಷಗಳ ಹಿಂದಿನ ಸೇಡು.

    ಕಳೆದ 20 ವರ್ಷಗಳ ಹಿಂದೆ ಅಂದರೆ 2003ರ ವಿಶ್ವಕಪ್ (World Cup) ಫೈನಲ್ ಪಂದ್ಯ ಟೂರ್ನಿ ಉದ್ದಕ್ಕೂ ಅದ್ಭುತ ಪ್ರದರ್ಶನ ನೀಡಿದ್ದ ಟೀಂ ಇಂಡಿಯಾ ಫೈನಲ್‌ನಲ್ಲಿ ಆಸ್ಟ್ರೇಲಿಯಾ (Australia) ವಿರುದ್ಧವೇ ಮುಗ್ಗರಿಸಿತ್ತು. 2ನೇ ಬಾರಿಗೆ ಫೈನಲ್‌ಗೇರಿ ಚಾಂಪಿಯನ್ ಆಗೇಬಿಡುತ್ತೆ ಎಂದು ಕಾದು ಕುಳಿತಿದ್ದ ಕೋಟಿ ಕೋಟಿ ಭಾರತೀಯ ಅಭಿಮಾನಿಗಳ ಆಸೆ ನೂಚ್ಚುನೂರಾಗಿದ್ದ ದಿನ ಅದು. ಆ ದಿನ ಆಸ್ಟ್ರೇಲಿಯಾ ತಂಡದ ವಿರುದ್ಧ ಹೀನಾಯವಾಗಿ ಸೋತಿದ್ದ ಟೀಂ ಇಂಡಿಯಾ ಈಗ ಹಳೆಯ ಸೋಲಿನ ನೋವನ್ನು ಮುಯ್ಯಿ ಸಮೇತ ವಾಪಸ್ ಕೊಡಲು ರೆಡಿ ಆಗಿದೆ.

    ವಿಶ್ವಕಪ್ ಇತಿಹಾಸದಲ್ಲಿ 2 ತಂಡಗಳ ಮುಖಾಮುಖಿಯ ಬಲವನ್ನು ನೋಡುವುದಾದರೆ ಭಾರತ ತಂಡಕ್ಕಿಂತ ಆಸ್ಟ್ರೇಲಿಯಾ ತಂಡವೇ ಬಲಿಷ್ಠವಾಗಿರೋದು ಅಂಕಿ ಅಂಶಗಳ ಮೂಲಕ ಸಾಬೀತಾಗಿದೆ. ವಿಶ್ವಕಪ್ ಇತಿಹಾಸದಲ್ಲಿ 13 ಬಾರಿಗೆ ಮುಖಾಮುಖಿ ಆಗಿರೋ ಉಭಯ ತಂಡಗಳಲ್ಲಿ ಭಾರತ ಗೆದ್ದಿರೋದು ಕೇವಲ 5 ಪಂದ್ಯಗಳು ಮಾತ್ರ. ಉಳಿದಂತೆ ಆಸ್ಟ್ರೇಲಿಯಾ 8 ಪಂದ್ಯಗಳನ್ನು ಗೆಲ್ಲುವ ಮೂಲಕ ವಿಶ್ವಕಪ್‌ನಲ್ಲಿ ಭಾರತದ ಮೇಲೆ ಹಿಡಿತ ಸಾಧಿಸಿದೆ. ಆದರೆ ಇತ್ತೀಚಿನ ವರ್ಷಗಳಲ್ಲಿ ಭಾರತ ತಂಡದ ಪ್ರದರ್ಶನವನ್ನು ನೋಡುವುದಾದರೆ ಕಳೆದ 3 ಬಾರಿಯ ವಿಶ್ವಕಪ್ ಮುಖಾಮುಖಿಯಲ್ಲಿ ಭಾರತವೇ ಪ್ರಾಬಲ್ಯ ಮೆರೆದಿರೋದು. 2011-2023 ರವರೆಗೆ ಒಟ್ಟು 4 ಬಾರಿ ಎದುರಾಗಿದ್ದು, ಭಾರತ 3 ಬಾರಿ ಜಯ ಸಾಧಿಸುವ ಮೂಲಕ ಆಸ್ಟ್ರೇಲಿಯಾ ತಂಡಕ್ಕೆ ಶಾಕ್ ನೀಡಿದೆ. ಇದನ್ನೂ ಓದಿ: World Cup 2023: ಟೀಂ ಇಂಡಿಯಾಗೆ 3ನೇ ಪ್ರಶಸ್ತಿ ಗೆಲ್ಲುವ ಕನಸು- ಆಸೀಸ್‍ಗೆ 6ನೇ ಟ್ರೋಫಿ ಮೇಲೆ ಕಣ್ಣು

    ಆಸೀಸ್ ಮುಖಾಮುಖಿಯ ಅಂಕಿ ಅಂಶಗಳು:
    * 1983ರ ವಿಶ್ವಕಪ್‌ನಲ್ಲಿ ಮೊದಲ ಮುಖಾಮುಖಿ ಭಾರತಕ್ಕೆ 162 ರನ್‌ಗಳ ಸೋಲು.
    * 1984ರ ವಿಶ್ವಕಪ್‌ನಲ್ಲೆ 2ನೇ ಬಾರಿಗೆ ಮುಖಾಮುಖಿ. ಭಾರತಕ್ಕೆ ವಿಶ್ವಕಪ್ ಇತಿಹಾಸದಲ್ಲಿ ಮೊದಲ ಜಯ. ಆಸೀಸ್ ವಿರುದ್ಧ 118 ರನ್‌ಗಳ ಜಯ.
    * 1987 ರಲ್ಲಿ 3ನೇ ಮುಖಾಮುಖಿ. ಭಾರತಕ್ಕೆ 1 ರನ್‌ಗಳ ವಿರೋಚಿತ ಸೋಲು.
    * 1987 ರಲ್ಲಿ 4ನೇ ಬಾರಿ ಮುಖಾಮುಖಿ. ಭಾರತಕ್ಕೆ 56 ರನ್‌ಗಳ ಜಯ.
    * 1992 ರಲ್ಲಿ 5ನೇ ಮುಖಾಮುಖಿ. ಭಾರತಕ್ಕೆ 3 ರನ್‌ಗಳ ವಿರೋಚಿತ ಸೋಲು.
    * 1996 ರಲ್ಲಿ 6ನೇ ಮುಖಾಮುಖಿ. ಲೀಗ್ ಭಾರತಕ್ಕೆ 16 ರನ್‌ಗಳ ಸೋಲು.
    * 2003 ರಲ್ಲಿ 7ನೇ ಮುಖಾಮುಖಿ. ಲೀಗ್ ಮ್ಯಾಚ್‌ನಲ್ಲಿ ಭಾರತಕ್ಕೆ 9 ವಿಕೆಟ್‌ಗಳ ಸೋಲು.
    * 2003ರ ಫೈನಲ್‌ನಲ್ಲಿ 8ನೇ ಬಾರಿಗೆ ಮುಖಾಮುಖಿ. 125 ರನ್‌ಗಳ ಸೋಲು.
    * 2011 ರಲ್ಲಿ 9ನೇ ಮುಖಾಮುಖಿ. ಸೆಮಿಸ್‌ನಲ್ಲಿ ಭಾರತಕ್ಕೆ 5 ವಿಕೆಟ್‌ಗಳ ಜಯ.
    * 2015ರಲ್ಲಿ 10ನೇ ಮುಖಾಮುಖಿ ಸೆಮಿಸ್‌ನಲ್ಲಿ ಭಾರತಕ್ಕೆ 95 ರನ್‌ಗಳ ಸೋಲು.
    * 2019 ರಲ್ಲಿ 11ನೇ ಬಾರಿಗೆ ಮುಖಾಮುಖಿ. ಭಾರತಕ್ಕೆ 36 ರನ್‌ಗಳ ಜಯ.
    * 2023 ರಲ್ಲಿ ಲೀಗ್‌ನಲ್ಲಿ 12ನೇ ಬಾರಿಗೆ ಮುಖಾಮುಖಿ. ಭಾರತಕ್ಕೆ 6 ವಿಕೆಟ್‌ಗಳ ಜಯ.

    ಒಟ್ಟಾರೆ ಇಲ್ಲಿಯತನಕ ಒಂದು ಲೆಕ್ಕ ಆದರೆ, ಇಂದಿನಿಂದ ಮತ್ತೊಂದು ಲೆಕ್ಕ. ಟೀಂ ಇಂಡಿಯಾ ಇಂದಿನ ಫೈನಲ್ ಗೆಲ್ಲೋ ಮೂಲಕ 2003 ನಿಮ್ಮ ಸಮಯ ಆದರೆ, 2023 ನಮ್ಮ ಸಮಯ ಅನ್ನೋದನ್ನು ತೋರಿಸಬೇಕಿದೆ. ಇದನ್ನೂ ಓದಿ: ಇಂದು IND Vs AUS ಸಮರ – 12 ವರ್ಷಗಳ ಬಳಿಕ ವಿಶ್ವಕಪ್ ಗೆಲ್ಲುವ ತವಕ

  • ವಿಶ್ವಕಪ್‌ ಪಂದ್ಯಕ್ಕೂ ಮುನ್ನ ರಂಗೇರಲಿದೆ ಮೋದಿ ಕ್ರೀಡಾಂಗಣ – ಕಾರ್ಯಕ್ರಮಗಳ ಪಟ್ಟಿ ರಿಲೀಸ್‌

    ವಿಶ್ವಕಪ್‌ ಪಂದ್ಯಕ್ಕೂ ಮುನ್ನ ರಂಗೇರಲಿದೆ ಮೋದಿ ಕ್ರೀಡಾಂಗಣ – ಕಾರ್ಯಕ್ರಮಗಳ ಪಟ್ಟಿ ರಿಲೀಸ್‌

    ಅಹಮದಾಬಾದ್: ವಿಶ್ವದಲ್ಲೇ ಅತ್ಯಂತ ಶ್ರೀಮಂತ ಕ್ರಿಕೆಟ್‌ ಮಂಡಳಿ ಎನಿಸಿಕೊಂಡಿರುವ ಬಿಸಿಸಿಐ (BCCI) ಸಮಾರೋಪ ಸಮಾರಂಭವನ್ನು ಅದ್ಧೂರಿಯಾಗಿ ನೆರವೇರಿಸಲು ಸಕಲ ಸಿದ್ಧತೆ ಮಾಡಿಕೊಂಡಿದೆ. ಅದಕ್ಕೆ ತಕ್ಕಂತೆ ಕಾರ್ಯಕ್ರಮಗಳನ್ನೂ ರೂಪಿಸಿದ್ದು, ಕಾರ್ಯಕ್ರಮಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.

    ಸೂಪರ್‌ ಸಂಡೇ ನಡೆಯಲಿರುವ ಆಸ್ಟ್ರೇಲಿಯಾ ಮತ್ತು ಭಾರತ (Ind vs Aus) ನಡುವಣ ಫೈನಲ್‌ ಪಂದ್ಯದ ವೇಳೆ ಹಲವು ಮನರಂಜನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಈ ಕುರಿತ ಮಾಹಿತಿಯನ್ನು ಬಿಸಿಸಿಐ ತನ್ನ ಅಧಿಕೃತ X ಖಾತೆಯಲ್ಲಿ ಹಂಚಿಕೊಂಡಿದೆ. ಇದನ್ನೂ ಓದಿ: ಆಸೀಸ್‌ ಫಾರ್ಮ್‌ ಬಗ್ಗೆ ನೋ ಟೆನ್ಷನ್‌, ನಮ್ಮ ಶಕ್ತಿ ಏನೆಂಬುದು ನಾಳೆ ಗೊತ್ತಾಗುತ್ತೆ: ರೋಹಿತ್‌ ಶರ್ಮಾ

    ಲೋಹದ ಹಕ್ಕಿಗಳ ಕಲರವ:
    ಪಂದ್ಯದ ಟಾಸ್​ ಆದ 5 ನಿಮಿಷದಲ್ಲಿ ಅಂದರೆ 1.35ರಿಂದ 1.50ರ ವರೆಗೆ ಭಾರತೀಯ ವಾಯುಪಡೆಯ ಸೂರ್ಯಕಿರಣ್ ತಂಡದಿಂದ ಏರ್ ಶೋ ನಡೆಯಲಿದೆ. ನರೇಂದ್ರ ಮೋದಿ ಸ್ಟೇಡಿಯಂನ (Narendra Modi Stadium) ಬಾನಂಗಳದಲ್ಲಿ ಲೋಹದ ಹಕ್ಕಿಗಳು ತಮ್ಮ ಚಮತ್ಕಾರ ತೋರಿಸಲಿವೆ. ಆಗಸದಲ್ಲೇ ವಿವಿಧ ಬಣ್ಣಗಳ ಚಿತ್ತಾರ ಬಿಡಿಸಿ ಗಣ್ಯರು ಹಾಗೂ ಅಭಿಮಾನಿಗಳ ಕಣ್ಣಿಗೆ ಹಬ್ಬವನ್ನುಂಟುಮಾಡಲಿದೆ. ಎರಡೂ ದಿನಗಳಿಂದಲೂ ರಿಹರ್ಸಲ್‌ ನಡೆಸಿರುವ ಸೂರ್ಯಕಿರಣ್ ತಂಡ ಫೈನಲ್‌ ಶೋಗೆ ಸನ್ನದ್ಧವಾಗಿದೆ.

    ಡ್ರಿಂಕ್ಸ್ ಬ್ರೇಕ್ ವೇಳೆ ಸಂಗೀತ ರಸಮಂಜರಿ:
    ಪಂದ್ಯದ ಮೊದಲ ಇನ್ನಿಂಗ್ಸ್​ನ ಡ್ರಿಂಕ್ಸ್ ಬ್ರೇಕ್ ವೇಳೆ ಆದಿತ್ಯ ಗಧ್ವಿ ಅವರಿಂದ ಗಾಯನ ಪ್ರದರ್ಶನ ನಡೆಯಲಿದೆ. ಮೊದಲ ಇನ್ನಿಂಗ್ಸ್‌ ಮುಗಿದ ಬಳಿಕ ಸಿಗುವ ಸುಮಾರು 30 ನಿಮಿಷಗಳ ಸಮಯದಲ್ಲಿ ಪ್ರೀತಮ್ ಚಕ್ರವರ್ತಿ, ಜೋನಿತಾ ಗಾಂಧಿ, ನಕಾಶ್ ಅಜೀಜ್, ಅಮಿತ್ ಮಿಶ್ರಾ, ಅಕಾಸ ಸಿಂಗ್ ಮತ್ತು ತುಷಾರ್ ಜೋಶಿ ಇವರಿಂದ ಸಂಗೀತ ರಸಮಂಜರಿ ಕಾರ್ಯಕ್ರಮ ಇರಲಿದೆ. ಇದನ್ನೂ ಓದಿ: ವಿಶ್ವ ಮಹಾಸಮರಕ್ಕೆ ಕ್ಷಣಗಣನೆ – ಅಡಾಲಾಜ್ ಸ್ಟೆಪ್‌ವೆಲ್‌ನಲ್ಲಿ ನಾಯಕರ ಪ್ರೀ ಫೋಟೋಶೂಟ್

    2ನೇ ಇನ್ನಿಂಗ್ಸ್‌ ಡ್ರಿಂಕ್ಸ್ ಬ್ರೇಕ್ ವೇಳೆ ಲೇಸರ್ ಶೋ:
    ಫೈನಲ್​ ಪಂದ್ಯದ 2ನೇ ಇನ್ನಿಂಗ್ಸ್‌ನ ಡ್ರಿಂಗ್ಸ್‌ ಬ್ರೇಕ್‌ ವೇಳೆ ವಿಶಿಷ್ಠ ಶೈಲಿಯ ಲೇಸರ್ ಮತ್ತು ಲೈಟ್ ಶೋ ನಡೆಯಲಿದೆ ಎಂದು ಬಿಸಿಸಿಐ ತಿಳಿಸಿದೆ.

    2023ರ ಐಸಿಸಿ ಏಕದಿನ ವಿಶ್ವಕಪ್‌ ಉದ್ಘಾಟನೆ ವೇಳೆ ಬಿಸಿಸಿಐ ಯಾವುದೇ ಸಮಾರಂಭ ಮಾಡಿರಲಿಲ್ಲ. ಇದರಿಂದ ವಿಶ್ವದ ಶ್ರೀಮಂತರ ಕ್ರಿಕೆಟ್‌ ಮಂಡಳಿ ವಿರುದ್ಧ ಭಾರೀ ಟೀಕೆಗಳು ಕೇಳಿಬಂದಿತ್ತು. ಇದನ್ನೂ ಓದಿ: 1.30 ಲಕ್ಷ‌ ಅಭಿಮಾನಿಗಳನ್ನ ದಿಗ್ಭ್ರಮೆಗೊಳಿಸುತ್ತೇವೆ – ಟೀಂ ಇಂಡಿಯಾ ಸೋಲಿಸುವ ಎಚ್ಚರಿಕೆ ನೀಡಿದ ಪ್ಯಾಟ್‌ ಕಮ್ಮಿನ್ಸ್

  • 1.30 ಲಕ್ಷ‌ ಅಭಿಮಾನಿಗಳನ್ನ ದಿಗ್ಭ್ರಮೆಗೊಳಿಸುತ್ತೇವೆ – ಟೀಂ ಇಂಡಿಯಾ ಸೋಲಿಸುವ ಎಚ್ಚರಿಕೆ ನೀಡಿದ ಪ್ಯಾಟ್‌ ಕಮ್ಮಿನ್ಸ್

    1.30 ಲಕ್ಷ‌ ಅಭಿಮಾನಿಗಳನ್ನ ದಿಗ್ಭ್ರಮೆಗೊಳಿಸುತ್ತೇವೆ – ಟೀಂ ಇಂಡಿಯಾ ಸೋಲಿಸುವ ಎಚ್ಚರಿಕೆ ನೀಡಿದ ಪ್ಯಾಟ್‌ ಕಮ್ಮಿನ್ಸ್

    ಅಹಮದಾಬಾದ್‌: 13ನೇ ಆವೃತ್ತಿಯ ಏಕದಿನ ವಿಶ್ವಕಪ್‌ (World Cup) ಟೂರ್ನಿಗೆ ಕ್ಷಣಗಣನೆ ಬಾಕಿಯಿದ್ದು, ಸೂಪರ್‌ ಸಂಡೇ ಕದನಕ್ಕೆ ನರೇಂದ್ರ ಮೋದಿ ಕ್ರೀಡಾಂಗಣ ಸಜ್ಜಾಗಿದೆ. ಈ ಬಗ್ಗೆ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್‌ ಕಮ್ಮಿನ್ಸ್‌ (Pat Cummins) ಟೀಂ ಇಂಡಿಯಾ (Team India) ತಂಡವನ್ನು ಸೋಲಿಸುವ ಎಚ್ಚರಿಕೆ ನೀಡಿದ್ದಾರೆ.

    ವಿಶ್ವಕಪ್‌ ಪಂದ್ಯಕ್ಕೂ ಮುನ್ನ ನಡೆದ ಪ್ರೀ ಮ್ಯಾಚ್‌ ಪ್ರೆಸೆಂಟೇಷನ್‌ನಲ್ಲಿ ಮಾತನಾಡಿರುವ ಕಮ್ಮಿನ್ಸ್‌, ಫೈನಲ್‌ (World Cup Final) ಪಂದ್ಯದಲ್ಲಿ 1.30 ಲಕ್ಷಕ್ಕೂ ಹೆಚ್ಚು ಅಭಿಮಾನಿಗಳು ಪಾಲ್ಗೊಳ್ಳುವ ನಿರೀಕ್ಷೆಯಿದೆ. ಅಷ್ಟೂ ಆತಿಥೇಯ ಪ್ರೇಕ್ಷಕರ ಬಾಯಿ ಮುಚ್ಚಿಸುವುದೇ ತಂಡದ ಬಹುದೊಡ್ಡ ಗುರಿ ಎಂದು ಎಚ್ಚರಿಸಿದ್ದಾರೆ. ಇದನ್ನೂ ಓದಿ: ವಿಶ್ವ ಮಹಾಸಮರಕ್ಕೆ ಕ್ಷಣಗಣನೆ – ಅಡಾಲಾಜ್ ಸ್ಟೆಪ್‌ವೆಲ್‌ನಲ್ಲಿ ನಾಯಕರ ಪ್ರೀ ಫೋಟೋಶೂಟ್

    ಆತಿಥೇಯರ ಎದುರು ಫೈನಲ್‌ ಆಡುತ್ತಿರುವ ಕಾರಣ ಕ್ರೀಡಾಂಗಣದಲ್ಲಿ ಪ್ರೇಕ್ಷಕರ ಬೆಂಬಲ ನೂರರಷ್ಟು ಆತಿಥೇಯರ ತಂಡದ ಪರವಾಗಿಯೇ ಇರಲಿದೆ. ಅಂತೆಯೇ ಈ ವಿಶ್ವಕಪ್‌ ಟೂರ್ನಿಯಲ್ಲಿ ಟೀಂ ಇಂಡಿಯಾ ಜಯದ ನಾಗಾಲೋಟದಲ್ಲಿ ಫೈನಲ್‌ಗೆ ತಲುಪಿದೆ. ಸಹಜವಾಗಿಯೇ ಅಭಿಮಾನಿಗಳ ಬೆಂಬಲ ಭಾರತ ತಂಡದ ಪರವಾಗಿ ಇರುತ್ತದೆ. ಹೀಗಾಗಿ ಕ್ರೀಡಾಂಗಣದಲ್ಲಿ ಪ್ರೇಕ್ಷಕರ ಬಾಯಿ ಮುಚ್ಚಿಸುವಂತಹ ಆಟವಾಡಿದರೆ ಅದಕ್ಕಿಂತಲೂ ತೃಪ್ತಿಕರ ಅನುಭವ ಮತ್ತೊಂದು ಇರಲಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ಸರಣಿ ಶ್ರೇಷ್ಠ ಪ್ರಶಸ್ತಿಗೆ 9 ಮಂದಿಯ ನಾಮನಿರ್ದೇಶನ – ಟೀಂ ಇಂಡಿಯಾದ ನಾಲ್ವರು ಆಯ್ಕೆ

    ಟೀಂ ಇಂಡಿಯಾ ಇಲ್ಲಿಯವರೆಗೆ ಅಜೇಯವಾಗಿ ಉತ್ತಮ ಕ್ರಿಕೆಟ್‌ ಆಡುತ್ತಾ ಬಂದಿದೆ. ಆದ್ರೆ ನಾವು ಅವರಿಗೆ ಹೇಗೆ ಶಾಕ್‌ ನೀಡಬೇಕೆಂಬುದು ತಿಳಿದಿದೆ. ಕಳೆದ 2 ವರ್ಷಗಳಲ್ಲಿ ಅವರೊಂದಿಗೆ ಸಾಕಷ್ಟು ಬಾರಿ ಸರಣಿ ಆಡಿದ್ದೇವೆ ಎಂದು ಹೇಳಿದ್ದಾರೆ.

    ಶಮಿ ದೊಡ್ಡ ಶಕ್ತಿ: ಇದೇ ವೇಳೆ ಮೊಹಮ್ಮದ್‌ ಶಮಿ ಬೌಲಿಂಗ್‌ ಪ್ರದರ್ಶನದ ಕುರಿತು ಮಾತನಾಡಿರುವ ಪ್ಯಾಟ್‌ ಕಮ್ಮಿನ್ಸ್‌, ಶಮಿ ಟೀಂ ಇಂಡಿಯಾದ ದೊಡ್ಡ ಶಕ್ತಿ ಎಂದು ಹೊಗಳಿದ್ದಾರೆ. ಪ್ರಸ್ತುತ ನಡೆಯುತ್ತಿರುವ ವಿಶ್ವಕಪ್‌ನಲ್ಲೇ ಮೊಹಮ್ಮದ್‌ ಶಮಿ ಒಟ್ಟು 23 ವಿಕೆಟ್‌ಗಳನ್ನ ಪಡೆದುಕೊಂಡಿದ್ದಾರೆ. ಈ ಪೈಕಿ ಒಂದೇ ವಿಶ್ವಕಪ್‌ನಲ್ಲಿ 3 ಬಾರಿ 5 ವಿಕೆಟ್‌ ಪಡೆದ ಸಾಧನೆ ಮಾಡಿದ್ದಾರೆ. ಇದನ್ನೂ ಓದಿ: ಮತ್ತೆ ಮಾತಿನಲ್ಲೇ ತಿವಿದ ವಿಚ್ಛೇದಿತ ಪತ್ನಿ – ತೆರೆಯ ಹಿಂದೆ ಶಮಿಯ ಬದುಕು ಘೋರ!

    5 ಬಾರಿ ಚಾಂಪಿಯನ್ಸ್‌ ಆಸ್ಟ್ರೇಲಿಯಾ ತಂಡದ ರೋಚಕ ಸೆಮಿಫೈನಲ್‌ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನ 3 ವಿಕೆಟ್‌ಗಳಿಂದ ಮಣಿಸಿ ದಾಖಲೆಯ 8ನೇ ಬಾರಿ ಫೈನಲ್‌ಗೆ ಕಾಲಿಟ್ಟಿದೆ. ಇನ್ನೂ ಲೀಗ್‌ ಹಂತದಲ್ಲಿ ಆರಂಭಿಕ ಎರಡು ಪಂದ್ಯಗಳಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ಎದುರು ಸೋತಿದ್ದ ಆಸ್ಟ್ರೇಲಿಯಾ, ಇನ್ನುಳಿದ 7 ಪಂದ್ಯಗಳಲ್ಲೂ ಗೆಲುವು ಸಾಧಿಸಿತ್ತು. ಆದ್ರೆ ಆರಂಭದಿಂದಲೂ ಭಾರತ ಒಂದೂ ಪಂದ್ಯವನ್ನೂ ಸೋಲದೇ ಸತತ 10 ಪಂದ್ಯಗಳನ್ನೂ ಗೆದ್ದಿರುವ ಹಿಟ್‌ಮ್ಯಾನ್‌ ಸೈನ್ಯ ಫೈನಲ್‌ ಪಂದ್ಯವನ್ನೂ ಗೆದ್ದು ಟ್ರೋಫಿ ಎತ್ತಿ ಹಿಡಿಯುವ ಗುರಿ ಹೊಂದಿದೆ.

  • ವಿಶ್ವ ಮಹಾಸಮರಕ್ಕೆ ಕ್ಷಣಗಣನೆ – ಅಡಾಲಾಜ್ ಸ್ಟೆಪ್‌ವೆಲ್‌ನಲ್ಲಿ ನಾಯಕರ ಪ್ರೀ ಫೋಟೋಶೂಟ್

    ವಿಶ್ವ ಮಹಾಸಮರಕ್ಕೆ ಕ್ಷಣಗಣನೆ – ಅಡಾಲಾಜ್ ಸ್ಟೆಪ್‌ವೆಲ್‌ನಲ್ಲಿ ನಾಯಕರ ಪ್ರೀ ಫೋಟೋಶೂಟ್

    ಅಹ್ಮದಾಬಾದ್: ದೇಶವೇ ಎದುರು ನೋಡುತ್ತಿರುವ ವಿಶ್ವಕಪ್ ಮಹಾಸಮರಕ್ಕೆ (World Cup Final) ಕ್ಷಣಗಣನೆ ಬಾಕಿಯಿದೆ. ಟೀಂ ಇಂಡಿಯಾ (Team India) ವಿಶ್ವ ಸಾಮ್ರಾಟನಾಗಿ ಮೆರೆದಾಡುವುದನ್ನು ಕಣ್ತುಂಬಿಕೊಳ್ಳಲು 140 ಕೋಟಿ ಭಾರತೀಯರು ಕಾದು ಕುಳಿತಿದ್ದಾರೆ.

    ಅಹಮದಾಬಾದ್‌ನಲ್ಲಿರುವ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ (Narendra Modi Stadium) ಭಾನುವಾರ ಮಧ್ಯಾಹ್ನ 2 ಗಂಟೆಗೆ ಪಂದ್ಯ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಶನಿವಾರ (ನ.18) ಗುಜರಾತ್‌ನ ಗಾಂಧಿನಗರಕ್ಕೆ ಸಮೀಪವಿರುವ ಅಡಾಲಾಜ್ ಸ್ಟೆಪ್‌ವೆಲ್‌ (Adalaj Stepwell) ಪ್ರವಾಸಿ ತಾಣದಲ್ಲಿ ಸಾಂಪ್ರದಾಯಿಕವಾಗಿ ವಿಶ್ವಕಪ್‌ನೊಂದಿಗೆ ಪ್ರೀ ಫೋಟೋಶೂಟ್‌ ನಡೆಸಲಾಗಿದೆ. ಟೀಂ ಇಂಡಿಯಾ ನಾಯಕ ರೋಹಿತ್‌ ಶರ್ಮಾ ಮತ್ತು ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್‌ ಕಮ್ಮಿನ್ಸ್‌ ಅವರನ್ನು ವಿಶ್ವಕಪ್‌ನೊಂದಿಗೆ ಫೋಟೋಶೂಟ್‌ ಮಾಡಿಸಲಾಗಿದೆ. ಈ ಫೋಟೋಗಳು ಜಾಲತಾಣದಲ್ಲಿ ಸಖತ್‌ ಸದ್ದು ಮಾಡುತ್ತಿದ್ದು, ಅಭಿಮಾನಿಗಳು ಟೀಂ ಇಂಡಿಯಾ ಗೆಲುವಿಗೆ ಶುಭ ಹಾರೈಸಿದ್ದಾರೆ. ಇದನ್ನೂ ಓದಿ: ಇಂಡೋ-ಆಸೀಸ್‌ ರೋಚಕ ಫೈನಲ್‌ ವೀಕ್ಷಿಸಲಿದ್ದಾರೆ ಮೋದಿ – ಸೂಪರ್‌ ಸಂಡೇ ಏನೆಲ್ಲಾ ಸ್ಪೆಷಲ್‌ ಇದೆ ಗೊತ್ತಾ..?

    ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾನುವಾರ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವೆ ಹೈವೋಲ್ಟೇಜ್ ಪಂದ್ಯ ಆರಂಭಕ್ಕೂ ಮುನ್ನವೇ 2 ಗಂಟೆ ವಿಶೇಷ ಕಾರ್ಯಕ್ರಮಗಳು ನಡೆಯಲಿವೆ. ಹಲವು ನೃತ್ಯಪಟುಗಳು ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಬೀಡುಬಿಟ್ಟಿದ್ದು, ಸ್ಫೂರ್ತಿ ಗೀತೆಗಳಿಗೆ ನೃತ್ಯ ಅಭ್ಯಾಸ ನಡೆಸುತ್ತಿದ್ದಾರೆ. ಅದಕ್ಕಾಗಿ ʻಜೀತೇಗ ಇಂಡಿಯಾ ಜೀತೇಗ’ ವಿಶೇಷ ಗೀತೆಯನ್ನೂ ಸಿದ್ಧಪಡಿಸಲಾಗಿದೆ. ಅಲ್ಲದೇ ಬಾಲಿವುಡ್ ತಾರೆಯರಿಂದ ನೃತ್ಯ ಪ್ರದರ್ಶನ ಕಾರ್ಯಕ್ರಮಗಳೂ ನಡೆಯಲಿವೆ. ಇದಕ್ಕೂ ಮುನ್ನ ಇತಿಹಾಸದಲ್ಲೇ ಮೊದಲ ಬಾರಿಗೆ ವಿಶ್ವಕಪ್ ಟೂರ್ನಿಯ ಫೈನಲ್ ಸಮಾರಂಭದಲ್ಲಿ ಭಾರತೀಯ ವಾಯುಪಡೆಯಿಂದ ವಿಶೇಷ ಏರ್‌ಶೋ ಪ್ರದರ್ಶನ ನಡೆಸಿಕೊಡಲಿದೆ. ಇದು ಕ್ರಿಕೆಟ್ ಅಭಿಮಾನಿಗಳ ಕಣ್ಣಿಗೆ ಹಬ್ಬವನ್ನುಂಟುಮಾಡಲಿದೆ.

    ಮೋದಿಯೇ ಮುಖ್ಯ ಆಕರ್ಷಣೆ: ಐಸಿಸಿ ವಿಶ್ವಕಪ್ 2023ರ ಫೈನಲ್ ಪಂದ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹಸಚಿವ ಅಮಿತ್‌ ಶಾ ಹಾಜರಾಗಲಿದ್ದಾರೆ. ಐಸಿಸಿ ವಿಶ್ವಕಪ್ 2023ರ ಫೈನಲ್ ಪಂದ್ಯಕ್ಕೆ ಪ್ರಧಾನಿ ಗೌರವಾನ್ವಿತ ಅತಿಥಿಯಾಗಿ ಭಾಗವಹಿಸಲಿದ್ದಾರೆ. ನರೇಂದ್ರ ಮೋದಿ ಕ್ರೀಡಾಂಗಣವು ವಿಶ್ವದ ಅತಿದೊಡ್ಡ ಕ್ರಿಕೆಟ್ ಮೈದಾನವಾಗಿದ್ದು, ರೋಚಕ ಪಂದ್ಯ ವೀಕ್ಷಿಸಲು 1.30 ಲಕ್ಷಕ್ಕೂ ಹೆಚ್ಚು ಜನರು ಆಗಮಿಸಲಿದ್ದಾರೆ. ಈ ವೇಳೆ ಹಲವಾರು ಗಣ್ಯರು ಮೈದಾನದಕ್ಕೆ ಭೇಟಿ ನೀಡಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಗಣ್ಯರೊಂದಿಗೆ ಫೈನಲ್ ಪಂದ್ಯ ವೀಕ್ಷಿಸಲಿದ್ದಾರೆ. ಇದನ್ನೂ ಓದಿ: ಸರಣಿ ಶ್ರೇಷ್ಠ ಪ್ರಶಸ್ತಿಗೆ 9 ಮಂದಿಯ ನಾಮನಿರ್ದೇಶನ – ಟೀಂ ಇಂಡಿಯಾದ ನಾಲ್ವರು ಆಯ್ಕೆ

    ಏನೇನು ವಿಶೇಷ..?
    ನವೆಂಬರ್ 19ರಂದು ಅಹಮದಾಬಾದ್‌ನಲ್ಲಿ ನಡೆಯಲಿರುವ ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ಭಾರತೀಯ ವಾಯುಪಡೆಯು ವಿಶೇಷ ಏರ್ ಶೋ ಪ್ರದರ್ಶನ ನಡೆಸಿಕೊಡಲಿದೆ. ಇದರೊಂದಿಗೆ ಖ್ಯಾತ ಬಾಲಿವುಡ್ ತಾರೆಯರು ಮೋದಿ ಕ್ರೀಡಾಂಗಣಕ್ಕೆ ಮತ್ತಷ್ಟು ರಂಗು ತರಲಿದ್ದಾರೆ. ನೃತ್ಯ, ಸಂಗೀತ, ವಿಶೇಷ ಲೈಟಿಂಗ್ ಶೋ ಕಾರ್ಯಕ್ರಮಗಳು ನಡೆಯಲಿದೆ ಎಂದು ಉನ್ನತ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಜೀತೇಗ ಇಂಡಿಯಾ ಜೀತೇಗ – ವಿಶ್ವ ಮಹಾಸಮರಕ್ಕೆ ಮೋದಿ ಅಂಗಳ ಸಜ್ಜು, ಕೋಟ್ಯಂತರ ಅಭಿಮಾನಿಗಳ ಕಾತರ!

  • ಅಹಮದಾಬಾದ್ ಚಿತ್ರೋತ್ಸವಕ್ಕೆ ಬರಗೂರು ಸಿನಿಮಾ

    ಅಹಮದಾಬಾದ್ ಚಿತ್ರೋತ್ಸವಕ್ಕೆ ಬರಗೂರು ಸಿನಿಮಾ

    ಹಮದಾಬಾದ್ (Ahmedabad) ಅಂತರರಾಷ್ಟ್ರೀಯ ಮಕ್ಕಳ ಚಿತ್ರೋತ್ಸವಕ್ಕೆ (Chirotsava) ಬರಗೂರು ರಾಮಚಂದ್ರಪ್ಪ (Baraguru Ramachandrappa) ನಿರ್ದೇಶನದ ‘ಚಿಣ್ಣರ ಚಂದ್ರ’ (Chinnara Chandra) ಚಿತ್ರ ಅಧಿಕೃತವಾಗಿ ಆಯ್ಕೆಯಾಗಿದೆ. ಸ್ಪರ್ಧಾ ವಿಭಾಗದಲ್ಲಿ ಪ್ರವೇಶ ಪಡೆದಿದೆ.

    ಈ ಚಿತ್ರವು ಈಗಾಗಲೇ ಮೆಲ್ಬರ್ನ್ ಅಂತರರಾಷ್ಟ್ರೀಯ ಚಿತ್ರೋತ್ಸವದ ಸ್ಪರ್ಧಾ ವಿಭಾಗಕ್ಕೆ ಆಯ್ಕೆಯಾಗಿ ಸ್ಪರ್ಧೆಯ ಅಂತಿಮ ಹಂತ ತಲುಪಿದೆ. ಚಿಣ್ಣರ ಚಂದ್ರ ಚಿತ್ರವು ಶಿಕ್ಷಣದ ಮಹತ್ವವನ್ನು ಸಾದರ ಪಡಿಸುತ್ತಲೇ ಸಮಾಜದಲ್ಲಿ ಸದಭಿರುಚಿ, ಸೌಹಾರ್ದತೆ ಮತ್ತು ಸಮಾನತೆ ಅಗತ್ಯ ಎಂಬುದನ್ನೂ ಮಕ್ಕಳ ಮೂಲಕ ಅಭಿವ್ಯಕ್ತ ಪಡಿಸುತ್ತದೆ. ಜೊತೆಗೆ ಜನಪದ ಕಥೆಗಳು ಮಕ್ಕಳ ಮನಸ್ಸಿನ ಭಾಗವಾಗುವುದನ್ನು ಚಿತ್ರಿಸುತ್ತದೆ.

    ಬರಗೂರರ ಅಡಗೂಲಜ್ಜಿ ಎಂಬ ಕಾದಂಬರಿಯನ್ನು ಆಧರಿಸಿರುವ ಈ ಚಿತ್ರವನ್ನು ಜಿ.ಎಸ್ ಗೋವಿಂದರಾಜು (ರಾಜಶೇಖರ್) ನಿರ್ಮಿಸಿದ್ದಾರೆ. ತಾರಾಗಣದಲ್ಲಿ ಆಕಾಂಕ್ಷ್ ಬರಗೂರ್, ನಿಕ್ಷೇಪ, ಷಡ್ಜ, ಈಶಾನ್, ಅಭಿನವ್ ನಾಗ್, ಸುಂದರರಾಜ್, ರೇಖಾ, ವತ್ಸಲ ಮೋಹನ್, ರಾಧ ರಾಮಚಂದ್ರ, ರಾಘವ, ರಾಜಪ್ಪ ದಳವಾಯಿ, ಸುಂದರರಾಜ್ ಅರಸು, ವೆಂಕಟರಾಜು, ಹಂಸ ಮುಂತಾದವರಿದ್ದಾರೆ.

    ಸಂಕಲನಕಾರರಾಗಿ ಸುರೇಶ್ ಅರಸು, ಛಾಯಾಗ್ರಾಹಕರಾಗಿ ನಾಗರಾಜ್ ಆದವಾನಿ, ಸಂಗೀತ ನಿರ್ದೇಶಕರಾಗಿ ಶಮಿತ ಮಲ್ನಾಡ್ ಕೆಲಸ ಮಾಡಿದ್ದಾರೆ. ಸಹ ನಿರ್ದೇಶಕರು ನಟರಾಜ್ ಶಿವ ಮತ್ತು ಪ್ರವೀಣ್. ಚಿಣ್ಣರ ಚಂದ್ರ ಚಿತ್ರವನ್ನು ಶೀಘ್ರದಲ್ಲೇ ಬಿಡುಗಡೆ ಮಾಡುವುದಲ್ಲದೇ ಶಾಲಾ ಮಕ್ಕಳಿಗೆ ರಾಜ್ಯದಾದ್ಯಂತ ಪ್ರದರ್ಶಿಸುವ ಉದ್ದೇಶ ಹೊಂದಲಾಗಿದೆ.

  • ಜೀತೇಗ ಇಂಡಿಯಾ ಜೀತೇಗ – ವಿಶ್ವ ಮಹಾಸಮರಕ್ಕೆ ಮೋದಿ ಅಂಗಳ ಸಜ್ಜು, ಕೋಟ್ಯಂತರ ಅಭಿಮಾನಿಗಳ ಕಾತರ!

    ಜೀತೇಗ ಇಂಡಿಯಾ ಜೀತೇಗ – ವಿಶ್ವ ಮಹಾಸಮರಕ್ಕೆ ಮೋದಿ ಅಂಗಳ ಸಜ್ಜು, ಕೋಟ್ಯಂತರ ಅಭಿಮಾನಿಗಳ ಕಾತರ!

    ಅಹ್ಮದಾಬಾದ್: ದೇಶವೇ ಎದುರು ನೋಡುತ್ತಿರುವ ವಿಶ್ವಕಪ್‌ ಮಹಾಸಮರಕ್ಕೆ ಇನ್ನೊಂದು ದಿನ ಬಾಕಿಯಿದೆ. ಕೋಟ್ಯಂತರ ಅಭಿಮಾನಿಗಳು ಫೈನಲ್‌ (World Cup Final) ಪಂದ್ಯ ವೀಕ್ಷಣೆ ಮಾಡಲು ಕಾದು ಕುಳಿತಿದ್ದಾರೆ. ಲೀಗ್‌ ಸುತ್ತಿನಿಂದಲೂ ಒಂದೇ ಒಂದು ಪಂದ್ಯ ಸೋಲದ ಭಾರತ ಸರಿಸಾಟಿಯೇ ಇಲ್ಲದಂತೆ ಮುನ್ನುಗ್ಗುತ್ತಿದೆ.

    ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ (Narendra Modi Stadium) ಭಾನುವಾರ ಭಾರತ ಮತ್ತು ಆಸ್ಟ್ರೇಲಿಯಾ (Ind vs Aus) ತಂಡಗಳ ನಡುವೆ ಹೈವೋಲ್ಟೇಜ್‌ ಪಂದ್ಯ ನಡೆಯಲಿದೆ. ನವೆಂಬರ್‌ 19 ರಂದು ಮಧ್ಯಾಹ್ನ 2 ಗಂಟೆ ವೇಳೆಗೆ ಪಂದ್ಯ ಆರಂಭವಾಗಲಿದ್ದು, 20 ವರ್ಷಗಳ ಬಳಿಕ ಭಾರತ ಕಾಂಗರೂ ಪಡೆ ವಿರುದ್ಧ ಸೇಡು ತೀರಿಸಿಕೊಳ್ಳಲು ತುದಿಗಾಲಿನಲ್ಲಿ ನಿಂತಿದೆ. ಆದ್ರೆ ಪಂದ್ಯ ಆರಂಭಕ್ಕೂ ಮುನ್ನವೇ ಭಾರತ ತಂಡಕ್ಕೆ (Team India) ಸ್ಫೂರ್ತಿ ತುಂಬಲು ಹಲವು ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಈಗಾಗಲೇ ಹಲವು ನೃತ್ಯಪಟುಗಳು ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಬೀಡುಬಿಟ್ಟಿದ್ದು, ನೃತ್ಯ ಅಭ್ಯಾಸ ನಡೆಸುತ್ತಿದ್ದಾರೆ.

    ಟೀಂ ಇಂಡಿಯಾವನ್ನು ಮತ್ತಷ್ಟು ಹುರಿದುಂಬಿಸಲು ʻಜೀತೇಗ ಇಂಡಿಯಾ ಜೀತೇಗʼ (Jeetega, India Jeetega) ವಿಶೇಷ ಗೀತೆಯೊಂದಿಗೆ ನೃತ್ಯ ಪ್ರದರ್ಶನವನ್ನೂ ಏರ್ಪಡಿಸಲಾಗಿದೆ. ಅಲ್ಲದೇ ಬಾಲಿವುಡ್‌ ತಾರೆಯರಿಂದ ನೃತ್ಯ ಪ್ರದರ್ಶನ ಕಾರ್ಯಕ್ರಮಗಳನ್ನೂ ಆಯೋಜಿಸಲಾಗಿದೆ. ಇದಕ್ಕೂ ಮುನ್ನ ಇತಿಹಾಸದಲ್ಲೇ ಮೊದಲ ಬಾರಿಗೆ ವಿಶ್ವಕಪ್‌ ಟೂರ್ನಿಯ ಫೈನಲ್‌ ಸಮಾರಂಭದಲ್ಲಿ ಭಾರತೀಯ ವಾಯುಪಡೆಯಿಂದ ವಿಶೇಷ ಏರ್‌ಶೋ ಪ್ರದರ್ಶನ ನಡೆಯಲಿದೆ. ಇದು ಕ್ರಿಕೆಟ್‌ ಅಭಿಮಾನಿಗಳ ಕಣ್ಣಿಗೆ ಹಬ್ಬವನ್ನುಂಟುಮಾಡಲಿದೆ. ಇಂದು ಮೊದಲ ಹಂತದ ರಿಹರ್ಸಲ್‌ ಕೂಡ ನಡೆದಿದೆ. ಇದನ್ನೂ ಓದಿ: ಟೀಂ ಇಂಡಿಯಾ ಹೀನಾಯವಾಗಿ ಸೋಲುತ್ತೆ, ಆಸ್ಟ್ರೇಲಿಯಾ ಟ್ರೋಫಿ ಎತ್ತಿ ಹಿಡಿಯುತ್ತೆ – ಮಿಚೆಲ್‌ ಮಾರ್ಷ್‌ ಭವಿಷ್ಯವಾಣಿ ವೈರಲ್‌

    ಮೋದಿ ಮುಖ್ಯ ಆಕರ್ಷಣೆ: ಐಸಿಸಿ ವಿಶ್ವಕಪ್ 2023ರ ಫೈನಲ್ ಪಂದ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಜರಾಗಲಿದ್ದಾರೆ. ಐಸಿಸಿ ವಿಶ್ವಕಪ್ 2023ರ ಫೈನಲ್ ಪಂದ್ಯಕ್ಕೆ ಪ್ರಧಾನಿ ಗೌರವಾನ್ವಿತ ಅತಿಥಿಯಾಗಿ ಭಾಗವಹಿಸಲಿದ್ದಾರೆ. ನರೇಂದ್ರ ಮೋದಿ ಕ್ರೀಡಾಂಗಣವು ವಿಶ್ವದ ಅತಿದೊಡ್ಡ ಕ್ರಿಕೆಟ್ ಮೈದಾನವಾಗಿದ್ದು, ರೋಚಕ ಪಂದ್ಯ ವೀಕ್ಷಿಸಲು 1.30 ಲಕ್ಷಕ್ಕೂ ಹೆಚ್ಚು ಜನರು ಆಗಮಿಸಲಿದ್ದಾರೆ. ಈ ವೇಳೆ ಹಲವಾರು ಗಣ್ಯರು ಮೈದಾನದಕ್ಕೆ ಭೇಟಿ ನೀಡಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಗಣ್ಯರೊಂದಿಗೆ ಫೈನಲ್ ಪಂದ್ಯ ವೀಕ್ಷಿಸಲಿದ್ದಾರೆ.

    ದಕ್ಷಿಣ ಆಫ್ರಿಕಾ ವಿರುದ್ಧ ರೋಚಕ ಜಯ ಸಾಧಿಸಿದ ನಂತ್ರ ಆಸ್ಟ್ರೇಲಿಯಾ 8ನೇ ಬಾರಿಗೆ ಫೈನಲ್ ಪ್ರವೇಶಿಸಿದೆ. ಭಾರತ ಮತ್ತು ಆಸ್ಟ್ರೇಲಿಯಾ ರೋಚಕ ಕದನ ವೀಕ್ಷಿಸಲು ಕೋಟ್ಯಂತರ ಅಭಿಮಾನಿಗಳು ಕಾದು ಕುಳಿತಿದ್ದಾರೆ. ಇದನ್ನೂ ಓದಿ: 2023 World Cup Final – 20 ವರ್ಷದ ಹಿಂದಿನ ಸೇಡನ್ನು ತೀರಿಸಿಕೊಳ್ಳುತ್ತಾ ಟೀಂ ಇಂಡಿಯಾ?

    ಏನೇನು ವಿಶೇಷ..?
    ನವೆಂಬರ್ 19ರಂದು ಅಹಮದಾಬಾದ್‌ನಲ್ಲಿ ನಡೆಯಲಿರುವ ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ಭಾರತೀಯ ವಾಯುಪಡೆಯು ವಿಶೇಷ ಏರ್ ಶೋ ಪ್ರದರ್ಶನ ನಡೆಸಿಕೊಡಲಿದೆ. ಇದರೊಂದಿಗೆ ಖ್ಯಾತ ಬಾಲಿವುಡ್ ತಾರೆಯರು ಮೋದಿ ಕ್ರೀಡಾಂಗಣಕ್ಕೆ ಮತ್ತಷ್ಟು ರಂಗು ತರಲಿದ್ದಾರೆ. ನೃತ್ಯ, ಸಂಗೀತ, ವಿಶೇಷ ಲೈಟಿಂಗ್ ಶೋ ಕಾರ್ಯಕ್ರಮಗಳು ನಡೆಯಲಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

  • ಇಂಡೋ-ಆಸೀಸ್‌ ರೋಚಕ ಫೈನಲ್‌ ವೀಕ್ಷಿಸಲಿದ್ದಾರೆ ಮೋದಿ – ಸೂಪರ್‌ ಸಂಡೇ ಏನೆಲ್ಲಾ ಸ್ಪೆಷಲ್‌ ಇದೆ ಗೊತ್ತಾ..?

    ಇಂಡೋ-ಆಸೀಸ್‌ ರೋಚಕ ಫೈನಲ್‌ ವೀಕ್ಷಿಸಲಿದ್ದಾರೆ ಮೋದಿ – ಸೂಪರ್‌ ಸಂಡೇ ಏನೆಲ್ಲಾ ಸ್ಪೆಷಲ್‌ ಇದೆ ಗೊತ್ತಾ..?

    ಅಹ್ಮದಾಬಾದ್: ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ (Narendra Modi Stadium) ನವೆಂಬರ್ 19ರಂದು ನಡೆಯಲಿರುವ ಐಸಿಸಿ ವಿಶ್ವಕಪ್ 2023ರ ಫೈನಲ್ ಪಂದ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ (Narendra Modi) ಹಾಜರಾಗುವ ನಿರೀಕ್ಷೆಯಿದೆ.

    ಐಸಿಸಿ ವಿಶ್ವಕಪ್ 2023ರ ಫೈನಲ್ ಪಂದ್ಯಕ್ಕೆ ಪ್ರಧಾನಿ ಗೌರವಾನ್ವಿತ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

    ನರೇಂದ್ರ ಮೋದಿ ಕ್ರೀಡಾಂಗಣವು ವಿಶ್ವದ ಅತಿದೊಡ್ಡ ಕ್ರಿಕೆಟ್ ಮೈದಾನವಾಗಿದ್ದು, ರೋಚಕ ಪಂದ್ಯ ವೀಕ್ಷಿಸಲು 1.30 ಲಕ್ಷಕ್ಕೂ ಹೆಚ್ಚು ಜನರು ಆಗಮಿಸಲಿದ್ದಾರೆ. ಈ ವೇಳೆ ಹಲವಾರು ಗಣ್ಯರು ಮೈದಾನಕ್ಕೆ ಭೇಟಿ ನೀಡಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಗಣ್ಯರೊಂದಿಗೆ ಫೈನಲ್‌ ಪಂದ್ಯ ವೀಕ್ಷಿಸಲಿದ್ದಾರೆ ಎಂದು ಹೇಳಲಾಗಿದೆ. ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ಪಂದ್ಯಕ್ಕೂ ಮುನ್ನ ನಡೆದ ಬಾರ್ಡರ್‌ ಗವಾಸ್ಕರ್‌ ಸರಣಿಯ 4ನೇ ಟೆಸ್ಟ್‌ ಪಂದ್ಯವನ್ನು ಪ್ರಧಾನಿ ಮೋದಿ ವೀಕ್ಷಿಸಿದ್ದರು.

    ದಕ್ಷಿಣ ಆಫ್ರಿಕಾ ವಿರುದ್ಧ ರೋಚಕ ಜಯ ಸಾಧಿಸಿದ ಆಸ್ಟ್ರೇಲಿಯಾ (Australia) 8ನೇ ಬಾರಿಗೆ ಫೈನಲ್‌ ಪ್ರವೇಶಿಸಿದೆ. ಭಾರತ ಮತ್ತು ಆಸ್ಟ್ರೇಲಿಯಾ ರೋಚಕ ಕದನ ವೀಕ್ಷಿಸಲು ಕೋಟ್ಯಂತರ ಅಭಿಮಾನಿಗಳು ಕಾದು ಕುಳಿತಿದ್ದಾರೆ. ಅಂದು ವಿಶ್ವಕಪ್‌ಗೆ (ICC World Cup) ಮತ್ತಷ್ಟು ರಂಗು ತರಲು ಹಲವು ವಿಶೇಷ ಕಾರ್ಯಕ್ರಮಗಳನ್ನ ಹಮ್ಮಿಕೊಂಡಿದೆ.

    ಏನೇನು ವಿಶೇಷ..?
    ನವೆಂಬರ್‌ 19ರಂದು ಅಹಮದಾಬಾದ್‌ನಲ್ಲಿ ನಡೆಯಲಿರುವ ವಿಶ್ವಕಪ್‌ ಫೈನಲ್‌ (World Cup Final) ಪಂದ್ಯಕ್ಕೂ ಮುನ್ನ ಭಾರತೀಯ ವಾಯುಪಡೆಯು ವಿಶೇಷ ಏರ್‌ ಶೋ ಪ್ರದರ್ಶನ ನಡೆಸಿಕೊಡಲಿದೆ. ಇದರೊಂದಿಗೆ ಖ್ಯಾತ ಬಾಲಿವುಡ್‌ ತಾರೆಯರು ಮೋದಿ ಕ್ರೀಡಾಂಗಣಕ್ಕೆ ಮತ್ತಷ್ಟು ರಂಗು ತರಲಿದ್ದಾರೆ. ನೃತ್ಯ, ಸಂಗೀತ, ವಿಶೇಷ ಲೈಟಿಂಗ್‌ ಶೋ ಕಾರ್ಯಕ್ರಮಗಳು ನಡೆಯಲಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

  • ಅಹಮದಾಬಾದ್‌ ಬೀದಿಯಲ್ಲಿದ್ದ ನಿರ್ಗತಿಕರಿಗೆ ಹಣ ಕೊಟ್ಟು ಸಹಾಯ ಮಾಡಿದ ಅಫ್ಘಾನ್‌ ಕ್ರಿಕೆಟಿಗ

    ಅಹಮದಾಬಾದ್‌ ಬೀದಿಯಲ್ಲಿದ್ದ ನಿರ್ಗತಿಕರಿಗೆ ಹಣ ಕೊಟ್ಟು ಸಹಾಯ ಮಾಡಿದ ಅಫ್ಘಾನ್‌ ಕ್ರಿಕೆಟಿಗ

    ಹೈದರಾಬಾದ್: ಅಪ್ಘಾನಿಸ್ತಾನದ (Afghanistan) ಆರಂಭಿಕ ಬ್ಯಾಟರ್‌ ರಹಮಾನುಲ್ಲಾ ಗುರ್ಬಾಜ್‌ (Rahmanullah Gurbaz), ಅಹಮದಾಬಾದ್‌ನಲ್ಲಿ ಬೀದಿ ಬದಿಯಲ್ಲಿದ್ದ ನಿರ್ಗತಿಕರಿಗೆ ಸಹಾಯ ಮಾಡಿ ಮಾನವೀಯತೆ ಮೆರೆದ ದೃಶ್ಯದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

    ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಅವರು ಆಡುವ ತಂಡವಾದ ಕೋಲ್ಕತ್ತಾ ನೈಟ್ ರೈಡರ್ಸ್ (KKR) ಸಾಮಾಜಿಕ ಮಾಧ್ಯಮ ಎಕ್ಸ್‌ ಖಾತೆಯಲ್ಲಿ ಗುರ್ಬಾಜ್ ಸಹಾಯ ಮಾಡುತ್ತಿರುವ ವೀಡಿಯೋವನ್ನು ಹಂಚಿಕೊಂಡಿದೆ.

    ಅಹಮದಾಬಾದ್‌ನಲ್ಲಿ (Ahmedabad) ಬೆಳಗಿನ ಜಾವ 3 ಗಂಟೆಗೆ ಗುರ್ಬಾಜ್‌ ವಾಕ್‌ಗೆ ಹೊರಟಿರುತ್ತಾರೆ. ಈ ವೇಳೆ ಬೀದಿ ಬದಿಯಲ್ಲಿ ಮಲಗಿದ್ದ ನಿರ್ಗತಿಕರಿಗೆ ಹಣ ನೀಡಿದ್ದಾರೆ. ಈ ದೃಶ್ಯದ ವೀಡಿಯೋ ಈಗ ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿದೆ.

    “ಈ ತಿಂಗಳ ಆರಂಭದಲ್ಲಿ ಅಫ್ಘಾನಿಸ್ತಾನದಲ್ಲಿ ಸಂಭವಿಸಿದ ಹೆರಾತ್ ಭೂಕಂಪದ ಸಂತ್ರಸ್ತರಿಗೆ ಹಣವನ್ನು ಸಂಗ್ರಹಿಸಲು ದಣಿವರಿಯದೇ ಕೆಲಸ ಮಾಡಿದ್ದೀರಿ. ಅಲ್ಲದೇ ವಿದೇಶಿ ನೆಲದಲ್ಲಿ ಈ ದಯೆಯ ಕಾರ್ಯವನ್ನೂ ಮಾಡಿದ್ದೀರಿ. ನೀವು ನಮಗೆಲ್ಲರಿಗೂ ಸ್ಫೂರ್ತಿ. ದೇವರು ನಿಮ್ಮನ್ನು ಆಶೀರ್ವದಿಸಲಿ, ಜಾನಿ” ಎಂದು ಕೆಕೆಆರ್‌ ಬರೆದುಕೊಂಡಿದೆ.

    ಈ ಬಾರಿಯ ವಿಶ್ವಕಪ್‌ ಟೂರ್ನಿಯಲ್ಲಿ ಆಫ್ಘಾನಿಸ್ತಾನ 9 ರ ಪೈಕಿ 4 ಪಂದ್ಯಗಳಲ್ಲಿ ಜಯ ಗಳಿಸಿದೆ. ಹಾಲಿ ಚಾಂಪಿಯನ್‌ ಇಂಗ್ಲೆಂಡ್‌, ಶ್ರೀಲಂಕಾ ಮತ್ತು ಪಾಕಿಸ್ತಾನ ವಿರುದ್ಧ ಗೆಲುವು ಸಾಧಿಸಿ ಗಮನ ಸೆಳೆದಿದೆ. ಸೆಮಿಫೈನಲ್‌ ಪ್ರವೇಶಿಸುವ ಹತ್ತಿರದಲ್ಲಿದ್ದ ತಂಡಕ್ಕೆ ಕೊನೆಯಲ್ಲಿ ಅವಕಾಶ ಕೈತಪ್ಪಿತು.