Tag: AIADMK

  • ತಮಿಳುನಾಡಿನಲ್ಲಿ ಬಿಜೆಪಿ-ಎಐಎಡಿಎಂಕೆ ಮೈತ್ರಿ: ಅಮಿತ್ ಶಾ ಘೋಷಣೆ

    ತಮಿಳುನಾಡಿನಲ್ಲಿ ಬಿಜೆಪಿ-ಎಐಎಡಿಎಂಕೆ ಮೈತ್ರಿ: ಅಮಿತ್ ಶಾ ಘೋಷಣೆ

    – 2026ರ ತಮಿಳುನಾಡು ಚುನಾವಣೆಗೆ ಪಿಚ್ ತಯಾರಿ

    ಚೆನ್ನೈ: ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ (Tamil Nadu Assembly Polls) ಬಿಜೆಪಿ ಮತ್ತು ಎಐಎಡಿಎಂಕೆ (AIADMK-BJP Alliance) ಒಟ್ಟಾಗಿ ಹೋರಾಡಲಿವೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ತಿಳಿಸಿದ್ದಾರೆ. ಆ ಮೂಲಕ ಎರಡೂ ಪಕ್ಷಗಳು ಮೈತ್ರಿ ಮಾಡಿಕೊಂಡಿವೆ ಎಂದು ಘೋಷಿಸಿದ್ದಾರೆ.

    ಚೆನ್ನೈನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಘೋಷಣೆ ಮಾಡಿದ ಅಮಿತ್‌ ಶಾ (Amit Shah), ಎಐಎಡಿಎಂಕೆ ಮುಖ್ಯಸ್ಥ ಎಡಪ್ಪಾಡಿ ಪಳನಿಸ್ವಾಮಿ ನೇತೃತ್ವದಲ್ಲಿ ಬಿಜೆಪಿ-ಎಐಎಡಿಎಂಕೆ ಮೈತ್ರಿ ಚುನಾವಣೆ ಎದುರಿಸಲಿದೆ ಎಂದು ತಿಳಿಸಿದ್ದಾರೆ. ನಿರ್ಗಮಿತ ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಕೂಡ ಅಮಿತ್‌ ಶಾ ಮತ್ತು ಪಳನಿಸ್ವಾಮಿ ಅವರೊಂದಿಗೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಇದನ್ನೂ ಓದಿ: ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನೈನಾರ್‌ ನಾಗೇಂದ್ರನ್‌ ಅವಿರೋಧ ಆಯ್ಕೆ

    ಎಐಎಡಿಎಂಕೆ, ಬಿಜೆಪಿ ಮತ್ತು ಎಲ್ಲಾ ಮೈತ್ರಿ ಪಕ್ಷಗಳು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ತಮಿಳುನಾಡಿನಲ್ಲಿ ಎನ್‌ಡಿಎಯಾಗಿ ಸ್ಪರ್ಧಿಸಲಿವೆ ಎಂದು ಅಮಿತ್‌ ಶಾ ಹೇಳಿದ್ದಾರೆ.

    ಎಐಎಡಿಎಂಕೆಯಿಂದ ಡಿಮ್ಯಾಂಡೂ ಇಲ್ಲ, ಕಂಡೀಷನೂ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. 2026ರಲ್ಲಿ ತಮಿಳುನಾಡಿನಲ್ಲಿ ಎನ್‌ಡಿಎಗೆ ಬಹುಮತ ಸಿಗಲಿದೆ ಎಂಬ ಆಶಯ ವ್ಯಕ್ತಪಡಿಸಿದ್ದಾರೆ. 2026ರ ತಮಿಳುನಾಡು ಚುನಾವಣೆಗೆ ಪಿಚ್ ತಯಾರಾಗಿದ್ದು, ಅಣ್ಣಾಮಲೈಯ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಶಾಸಕ ನೈನಾರ್ ನಾಗೇಂದ್ರನ್‌ ಆಯ್ಕೆಯಾಗಿದ್ದಾರೆ. ಇದನ್ನೂ ಓದಿ: ಬಿಹಾರ ಚುನಾವಣೆ ವೇಳೆ ಕೇಂದ್ರ ಸರ್ಕಾರ ಉಗ್ರ ರಾಣಾನನ್ನ ಗಲ್ಲಿಗೇರಿಸಲಿದೆ: ಸಂಜಯ್ ರಾವತ್‌

  • ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನೈನಾರ್‌ ನಾಗೇಂದ್ರನ್‌ ಅವಿರೋಧ ಆಯ್ಕೆ

    ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನೈನಾರ್‌ ನಾಗೇಂದ್ರನ್‌ ಅವಿರೋಧ ಆಯ್ಕೆ

    ಚೆನ್ನೈ: ತಮಿಳುನಾಡಿನ (Tamil Nadu) ತಿರುನಲ್ವೇಲಿ ಕ್ಷೇತ್ರವನ್ನು ಪ್ರತಿನಿಧಿಸುವ ಬಿಜೆಪಿ ಶಾಸಕ ನೈನಾರ್ ನಾಗೇಂದ್ರನ್ (Nainar Nagendran) ಅವರು ಪಕ್ಷದ ರಾಜ್ಯಾಧ್ಯಕ್ಷ ಚುನಾವಣೆಗೆ ಶುಕ್ರವಾರ ನಾಮಪತ್ರ ಸಲ್ಲಿಸಿದ್ದು, ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

    ಪ್ರಸ್ತುತ ರಾಜ್ಯ ಉಪಾಧ್ಯಕ್ಷರಾಗಿರುವ ನಾಗೇಂದ್ರನ್ ಅವರು ಈ ಹಿಂದೆ ಎಐಎಡಿಎಂಕೆಯಲ್ಲಿದ್ದರು. ಟಿ.ನಗರದಲ್ಲಿರುವ ಬಿಜೆಪಿ ರಾಜ್ಯ ಪ್ರಧಾನ ಕಚೇರಿ ಕಮಲಾಲಯದಲ್ಲಿ ನಾಪಪತ್ರ ಸಲ್ಲಿಸಿದ ಮೊದಲ ಅಭ್ಯರ್ಥಿಯಾಗಿದ್ದಾರೆ. ಇದನ್ನೂ ಓದಿ: ಬಿಹಾರ ಚುನಾವಣೆ ವೇಳೆ ಕೇಂದ್ರ ಸರ್ಕಾರ ಉಗ್ರ ರಾಣಾನನ್ನ ಗಲ್ಲಿಗೇರಿಸಲಿದೆ: ಸಂಜಯ್ ರಾವತ್‌

    ಅವರ ನಾಮನಿರ್ದೇಶನವು ಪಕ್ಷದ ಹಾಲಿ ಅಧ್ಯಕ್ಷ ಕೆ.ಅಣ್ಣಾಮಲೈ, ಕೇಂದ್ರ ಸಚಿವ ಎಲ್.ಮುರುಗನ್, ಮಾಜಿ ಕೇಂದ್ರ ಸಚಿವ ಪೊನ್ ರಾಧಾಕೃಷ್ಣನ್ ಮತ್ತು ಬಿಜೆಪಿ ಶಾಸಕಿ ಮತ್ತು ಮಹಿಳಾ ಮೋರ್ಚಾ ಅಧ್ಯಕ್ಷೆ ವನತಿ ಶ್ರೀನಿವಾಸನ್ ಸೇರಿದಂತೆ ಪ್ರಮುಖ ನಾಯಕರಿಂದ ಅನುಮೋದನೆ ಪಡೆದಿದೆ ಎಂದು ಪಕ್ಷ ದೃಢಪಡಿಸಿದೆ.

    ನಾಗೇಂದ್ರನ್ ಅವರು ಅಣ್ಣಾಮಲೈ ಅವರ ಉತ್ತರಾಧಿಕಾರಿಯಾಗಿ ನೂತನ ರಾಜ್ಯಾಧ್ಯಕ್ಷರಾಗಲು ಸಜ್ಜಾಗಿದ್ದಾರೆ. ಎಐಎಡಿಎಂಕೆ ಜೊತೆಗಿನ ಅವರ ಹಿಂದಿನ ಮೈತ್ರಿ ಬಿಜೆಪಿಗೆ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳಲು ಸಹಾಯ ಮಾಡುತ್ತದೆ. ಇದನ್ನೂ ಓದಿ: ವಾರಣಾಸಿ ಗ್ಯಾಂಗ್ ರೇಪ್ – ಏರ್‌ಪೋರ್ಟಲ್ಲೇ ಪೊಲೀಸರಿಂದ ಮಾಹಿತಿ ಪಡೆದ ಪ್ರಧಾನಿ ಮೋದಿ

  • ಕುಟುಂಬದ ಯಜಮಾನಿ ಖಾತೆಗೆ ತಿಂಗಳಿಗೆ 3,000 ರೂ. – ಪ್ರಣಾಳಿಕೆಯಲ್ಲಿ ಎಐಎಡಿಎಂಕೆ ಗ್ಯಾರಂಟಿ

    ಕುಟುಂಬದ ಯಜಮಾನಿ ಖಾತೆಗೆ ತಿಂಗಳಿಗೆ 3,000 ರೂ. – ಪ್ರಣಾಳಿಕೆಯಲ್ಲಿ ಎಐಎಡಿಎಂಕೆ ಗ್ಯಾರಂಟಿ

    ಮುಂಬೈ: ಚುನಾವಣೆಯಲ್ಲಿ ಗೆಲ್ಲಲು ಕರ್ನಾಟಕ ಕಾಂಗ್ರೆಸ್‌ ಘೋಷಿಸಿದ್ದ ಗ್ಯಾರಂಟಿ ಯೋಜನೆ ತಂತ್ರಗಾರಿಕೆಯನ್ನು ಅನೇಕ ರಾಜ್ಯಗಳು ಅನುಸರಿಸುತ್ತಿವೆ. ಕರ್ನಾಟಕ ಮಾದರಿಯ ಗೃಹಲಕ್ಷ್ಮಿ ಯೋಜನೆ ಜಾರಿಗೆ ತಮಿಳುನಾಡಿನ (Tamil Nadu) ಎಐಎಡಿಎಂಕೆ (AIADMK) ಪಕ್ಷ ಮುಂದಾಗಿದೆ.

    ಲೋಕಸಭಾ ಚುನಾವಣೆಗೆ (Lok Sabha Election 2024) ಪಕ್ಷ ಸಿದ್ಧವಾಗುತ್ತಿದ್ದು, ಪ್ರಾಣಳಿಕೆ ಬಿಡುಗಡೆ ಮಾಡಿದೆ. ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ ಪಳನಿಸ್ವಾಮಿ ಅವರು ಪಕ್ಷದ ಪ್ರಧಾನ ಕಚೇರಿಯಲ್ಲಿ ಪ್ರಣಾಳಿಕೆ ಬಿಡುಗಡೆ ಮಾಡಿದ್ದಾರೆ. ಇದನ್ನೂ ಓದಿ: ಜೈಲಿನಲ್ಲಿರಲಿ, ಹೊರಗಿರಲಿ ನನ್ನ ಜೀವನ ದೇಶಕ್ಕೆ ಸಮರ್ಪಿತ: ಕೇಜ್ರಿವಾಲ್‌

    ಬಡ ಕುಟುಂಬಗಳ ಯಜಮಾನಿಗೆ ಮಾಸಿಕ 3,000 ರೂ. ಹಣ ನೀಡಲಾಗುವುದು. ಪ್ರಣಾಳಿಕೆಯು ಆರ್ಥಿಕ ಅಸಮಾನತೆಗಳನ್ನು ಪರಿಹರಿಸುವ ಬದ್ಧತೆ ಹೊಂದಿದೆ ಎಂದು ಪಕ್ಷವು ತಿಳಿಸಿದೆ.

    ಎಐಎಡಿಎಂಕೆಯು ಚೆನ್ನೈನಲ್ಲಿ ಸುಪ್ರೀಂ ಕೋರ್ಟ್‌ನ ಪ್ರಾದೇಶಿಕ ಪೀಠವನ್ನು ಸ್ಥಾಪಿಸುವ ಗುರಿಯನ್ನು ಹೊಂದಿದೆ. ಅದೇ ನಗರದಲ್ಲಿ ಸಂಸತ್ತಿನ ಚಳಿಗಾಲದ ಅಧಿವೇಶನವನ್ನು ಆಯೋಜಿಸುತ್ತದೆ ಎಂದು ಹೇಳಿದೆ. ಇದನ್ನೂ ಓದಿ: ಮದ್ಯದ ವಿರುದ್ಧ ಧ್ವನಿ ಎತ್ತಿದ್ದ ಕೇಜ್ರಿವಾಲ್ ಹಣಕ್ಕಾಗಿ ನೂತನ ಲಿಕ್ಕರ್ ಪಾಲಿಸಿ ಮಾಡಿದ್ದಾರೆ: ಅಣ್ಣಾ ಹಜಾರೆ ಕಿಡಿ

  • AIADMK-BJP Split- ಒಬ್ಬ ದರೋಡೆಕೋರ, ಮತ್ತೊಬ್ಬ ಕಳ್ಳ: ಉದಯನಿಧಿ ಸ್ಟಾಲಿನ್

    AIADMK-BJP Split- ಒಬ್ಬ ದರೋಡೆಕೋರ, ಮತ್ತೊಬ್ಬ ಕಳ್ಳ: ಉದಯನಿಧಿ ಸ್ಟಾಲಿನ್

    ಚೆನ್ನೈ: ಬಿಜೆಪಿ (BJP) ನೇತೃತ್ವದ ಎನ್‍ಡಿಎ ಒಕ್ಕೂಟದೊಂದಿಗಿನ 4 ವರ್ಷಗಳ ಮೈತ್ರಿಯಿಂದ ಹೊರಬಂದಿರುವುದಾಗಿ ಎಐಎಡಿಎಂಕೆ (AIADMK) ಹೇಳಿಕೆ ನೀಡಿದ ಬೆನ್ನಲ್ಲೇ ತಮಿಳುನಾಡು ಸಚಿವ ಹಾಗೂ ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ (Udayanidhi Stalin) ಪ್ರತಿಕ್ರಿಯಿಸಿದ್ದಾರೆ.

    ‘ಒಬ್ಬ ದರೋಡೆಕೋರ, ಮತ್ತೊಬ್ಬ ಕಳ್ಳ’ ಎಂಬಂತೆ ಎರಡೂ ಪಕ್ಷಗಳು ಒಟ್ಟಾಗಿ ಮುಂದಿನ ಚುನಾವಣೆಗೆ ಸ್ಪರ್ಧಿಸಬಹುದು. ಎಐಎಡಿಎಂಕೆ ಬಿಜೆಪಿಯೊಂದಿಗಿನ ತನ್ನ ಸಂಬಂಧವನ್ನು ಕಡಿದುಕೊಂಡರೂ, 2024ರ ಲೋಕಸಭಾ ಚುನಾವಣೆಯಲ್ಲಿ ಡಿಎಂಕೆ ವಿಜಯಶಾಲಿಯಾಗಲಿದೆ ಎಂದು ಅವರು ಭವಿಷ್ಯ ನುಡಿದರು.

    ಹೀಗೆ ಆಗುತ್ತಿರುವುದು ಇದು ಮೊದಲೇನಲ್ಲ. ಎಐಎಡಿಎಂಕೆ ಮತ್ತು ಬಿಜೆಪಿ ಜಗಳವಾಡಬಹುದು ಆದರೆ ಚುನಾವಣೆಯ ಸಮಯದಲ್ಲಿ ಅವರು ಮತ್ತೆ ಒಂದಾಗುತ್ತಾರೆ ಏಕೆಂದರೆ ಒಬ್ಬರು ದರೋಡೆಕೋರರು ಮತ್ತು ಇನ್ನೊಬ್ಬರು ಕಳ್ಳರು ಎಂದು ಸ್ಟಾಲಿನ್ ಹೇಳಿದರು. ಇದನ್ನೂ ಓದಿ: ಇದೇನು ಕನ್ನಡಿಗರ ಸರ್ಕಾರವೋ? ಸ್ಟಾಲಿನ್ ಅಧೀನದಲ್ಲಿರುವ ಬಾಡಿಗೆ ಸರ್ಕಾರವೋ? – ಕಾಂಗ್ರೆಸ್ ವಿರುದ್ಧ ಹೆಚ್‌ಡಿಕೆ ಕಿಡಿ

    ದೋಸ್ತಿ ಖತಂಗೆ ಕಾರಣವೇನು?: ಜಯಲಲಿತಾ ಭ್ರಷ್ಟಾಚಾರದ ಆರೋಪಗಳ ಬಗ್ಗೆ ಅಣ್ಣಾಮಲೈ ಮಾತನಾಡಿದ್ದರು. ಪಕ್ಷದ ಸಂಸ್ಥಾಪಕ ಅಣ್ಣಾದುರೈ ಬಗ್ಗೆ ಅಣ್ಣಾಮಲೈ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಅಣ್ಣಾಮಲೈ ಬಗ್ಗೆ ದೂರು ಕೊಟ್ಟರೂ ಹೈಕಮಾಂಡ್ ಸ್ಪಂದಿಸಲಿಲ್ಲ ಎಂಬ ಕೋಪವೂ ಇದೆ. ಇನ್ನು ಪೆರಿಯಾರ್ವಾವಾದದ ವಿರುದ್ಧ ಬಿಜೆಪಿಗರ ನಿರಂತರ ವಾಗ್ದಾಳಿ ನಡೆಸಿತ್ತು. ಬಿಜೆಪಿ ಜೊತೆ ಕೈಜೋಡಿಸಿದ್ದರಿಂದಲೇ ಕಳೆದ ಬಾರಿ ಸೋಲು ಎಂಬ ಅಭಿಪ್ರಾಯಕ್ಕೆ ಅಣ್ಣಾಡಿಎಂಕೆ ಬಂದಿದ್ದು, ಸೀಟು ಹಂಚಿಕೆ ಸಂಬಂಧ ಬಿಜೆಪಿ ಜೊತೆ ಒಮ್ಮತದ ಸಹಮತ ಮೂಡದ ಪರಿಣಾಮ ಬಿಜೆಪಿಗೆ ಶಾಕ್ ನೀಡಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ತಮಿಳುನಾಡಿನಲ್ಲಿ ಬಿಜೆಪಿಗೆ ಬಿಗ್ ಶಾಕ್- NDA ಬಂಧ ಕಡಿದುಕೊಂಡ ಅಣ್ಣಾಡಿಎಂಕೆ  

    ತಮಿಳುನಾಡಿನಲ್ಲಿ ಬಿಜೆಪಿಗೆ ಬಿಗ್ ಶಾಕ್- NDA ಬಂಧ ಕಡಿದುಕೊಂಡ ಅಣ್ಣಾಡಿಎಂಕೆ  

    ಚೆನ್ನೈ: ಸಾರ್ವತ್ರಿಕ ಚುನಾವಣೆ ಸನಿಹದಲ್ಲಿ ತಮಿಳುನಾಡಿನಲ್ಲಿ ಬಿಜೆಪಿಗೆ (BJP) ಬಿಗ್ ಶಾಕ್ ತಗುಲಿದೆ. ಎನ್‍ಡಿಎ ಮೈತ್ರಿಕೂಟದಿಂದ ಅಣ್ಣಾಡಿಎಂಕೆ (AIADMK) ಹೊರಬಂದಿದೆ.
    ಚೆನ್ನೈನಲ್ಲಿ ನಡೆದ ಪಕ್ಷದ ಸಭೆಯಲ್ಲಿ ಡಿಎಂಕೆಯಿಂದ ಹೊರ ಬರಲು ಸರ್ವಾನುಮತದ ತೀರ್ಮಾನ ತೆಗೆದುಕೊಂಡಿದೆ. ಈ ಬೆನ್ನಲ್ಲೇ ಅಣ್ಣಾಡಿಎಂಕೆ ಕಾರ್ಯಕರ್ತರು ಸಂಭ್ರಮ ಮಾಡ್ಕೊಂಡಿದ್ದಾರೆ. ಆದರೆ ಅತ್ತ ಪ್ರಧಾನಿ ಮೋದಿ ಆಡಳಿತವನ್ನು ಮೆಚ್ಚಿರುವ ಒಡಿಶಾ ಸಿಎಂ ನವೀನ್ ಪಟ್ನಾಯಕ್ (Naveen Patnaik) 10ಕ್ಕೆ ಎಂಟು ಅಂಕ ನೀಡಿದ್ದಾರೆ. ಮಹಿಳಾ ಮೀಸಲಾತಿ ಮಸೂದೆಯನ್ನು ಮೆಚ್ಚಿದ್ದಾರೆ. ಒಂದು ದೇಶ-ಒಂದು ಚುನಾವಣೆಯ ಪರವಾಗಿಯೂ ನವೀನ್ ಪಟ್ನಾಯಕ್ ಬ್ಯಾಟ್ ಬೀಸಿದ್ದಾರೆ.
    ಪಟ್ನಾಯಕ್ ಹೇಳಿಕೆಗಳನ್ನು ಗಮನಿಸಿದಲ್ಲಿ ಅವರು, ಎನ್‍ಡಿಎಗೆ ಹತ್ತಿರವಾಗ್ತಿದ್ದಾರೆ ಎಂಬ ವ್ಯಾಖ್ಯಾನಗಳು ಕೇಳಿಬಂದಿವೆ. ಈ ನಡುವೆ ಐಎನ್‍ಡಿಐಎ ಕೂಟದಲ್ಲಿ ಎಲ್ಲವೂ ಸರಿಯಿಲ್ಲ ಎಂಬುದು ಪದೇ ಪದೇ ಗೊತ್ತಾಗ್ತಿದೆ. ಪಶ್ಚಿಮಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಮೇಲೆ ಲೋಕಸಭೆ ವಿಪಕ್ಷ ನಾಯಕ ಅಧಿರ್ ರಂಜನ್ ಚೌಧರಿ ವಾಗ್ದಾಳಿ ನಡೆಸಿದ್ದಾರೆ. ಮಮತಾ ಬ್ಯಾನರ್ಜಿಯ ಸ್ಪೇನ್ ಪ್ರವಾಸದ ಖರ್ಚುವೆಚ್ಚದ ಮಾಹಿತಿ ನೀಡುವಂತೆ ಸವಾಲ್ ಹಾಕಿದ್ದಾರೆ. ಇದನ್ನೂ ಓದಿ: ಮುಸ್ಲಿಂ ವಿದ್ಯಾರ್ಥಿಗೆ ಸಹಪಾಠಿಗಳಿಂದ ಕಪಾಳಮೋಕ್ಷ – ಘಟನೆ ರಾಜ್ಯದ ಆತ್ಮಸಾಕ್ಷಿ ಅಲ್ಲಾಡಿಸುತ್ತದೆ: ಸುಪ್ರೀಂ
    ದೋಸ್ತಿ ಖತಂಗೆ ಕಾರಣವೇನು?: ಜಯಲಲಿತಾ ಭ್ರಷ್ಟಾಚಾರದ ಆರೋಪಗಳ ಬಗ್ಗೆ ಅಣ್ಣಾಮಲೈ ಮಾತನಾಡಿದ್ದರು. ಪಕ್ಷದ ಸಂಸ್ಥಾಪಕ ಅಣ್ಣಾದುರೈ ಬಗ್ಗೆ ಅಣ್ಣಾಮಲೈ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಅಣ್ಣಾಮಲೈ ಬಗ್ಗೆ ದೂರು ಕೊಟ್ಟರೂ ಹೈಕಮಾಂಡ್ ಸ್ಪಂದಿಸಲಿಲ್ಲ ಎಂಬ ಕೋಪವೂ ಇದೆ.
    ಪೆರಿಯಾರ್‍ವಾದದ ವಿರುದ್ಧ ಬಿಜೆಪಿಗರ ನಿರಂತರ ವಾಗ್ದಾಳಿ ನಡೆಸಿತ್ತು. ಬಿಜೆಪಿ ಜೊತೆ ಕೈಜೋಡಿಸಿದ್ದರಿಂದಲೇ ಕಳೆದ ಬಾರಿ ಸೋಲು ಎಂಬ ಅಭಿಪ್ರಾಯಕ್ಕೆ  ಅಣ್ಣಾಡಿಎಂಕೆ ಬಂದಿದ್ದು, ಸೀಟು ಹಂಚಿಕೆ ಸಂಬಂಧ ಬಿಜೆಪಿ ಜೊತೆ ಒಮ್ಮತದ ಸಹಮತ ಮೂಡದ ಪರಿಣಾಮ ಬಿಜೆಪಿಗೆ ಶಾಕ್ ನೀಡಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಎಐಎಡಿಎಂಕೆ ಕಿತ್ತಾಟ – ಪಳನಿಸ್ವಾಮಿ ತಾತ್ಕಾಲಿಕ ಬಾಸ್‌, ಪನ್ನೀರ್‌ಸೆಲ್ವಂ ಉಚ್ಛಾಟನೆ

    ಎಐಎಡಿಎಂಕೆ ಕಿತ್ತಾಟ – ಪಳನಿಸ್ವಾಮಿ ತಾತ್ಕಾಲಿಕ ಬಾಸ್‌, ಪನ್ನೀರ್‌ಸೆಲ್ವಂ ಉಚ್ಛಾಟನೆ

    ಚೆನ್ನೈ: ನೆರೆಯ ತಮಿಳುನಾಡಿನಲ್ಲಿ ಅಣ್ಣಾಡಿಎಂಕೆ ಪಕ್ಷದ ಅಧಿಪತ್ಯಕ್ಕಾಗಿ ನಡೆಯುತ್ತಿದ್ದ ಸಮರದಲ್ಲಿ ಮಾಜಿ ಸಿಎಂ ಎಡಪ್ಪಾಡಿ ಪಳನಿಸ್ವಾಮಿ ಕೈ ಮೇಲಾಗಿದೆ.

    ಇಂದು ನಡೆದ ಸರ್ವಸದಸ್ಯರ ಸಮಾವೇಶದಲ್ಲಿ ಪಕ್ಷದ ತಾತ್ಕಾಲಿಕ ಪ್ರಧಾನಕಾರ್ಯದರ್ಶಿಯಾಗಿ ಪಳನಿಸ್ವಾಮಿ ಆಯ್ಕೆಯಾಗಿದ್ದಾರೆ. ಇದೇ ಸಭೆಯಲ್ಲಿ ಪನ್ನೀರ್‌ಸೆಲ್ವಂರನ್ನು ಪಕ್ಷದಿಂದ ಉಚ್ಛಾಟಿಸಿ ತೀರ್ಮಾನ ತೆಗೆದುಕೊಳ್ಳಲಾಗಿದೆ. ಅಷ್ಟೇ ಅಲ್ಲದೇ ಓಪಿಎಸ್ ಬೆಂಬಲಿಗರನ್ನು ಪಕ್ಷದಿಂದ ಹೊರಹಾಕಲಾಗಿದೆ. ಇದನ್ನೂ ಓದಿ: ವಿಶ್ವ ಅಥ್ಲೆಟಿಕ್ಸ್ – ಚಿನ್ನ ಗೆದ್ದು ಭಾರತಕ್ಕೆ ಹೆಮ್ಮೆ ತಂದ 94ರ ಅಜ್ಜಿ

    ಉಚ್ಛಾಟನೆ ವಿರೋಧಿಸಿ ಪನ್ನೀರ್‌ಸೆಲ್ವಂ ಬೆಂಬಲಿಗರು ಸಭೆ ಸ್ಥಳದಲ್ಲಿ ಭಾರೀ ಗಲಾಟೆ ಮಾಡಿದ್ದಾರೆ. ಈ ವೇಳೆ ಓಪಿಎಸ್ ಮತ್ತು ಇಪಿಎಸ್ ಬೆಂಬಲಿಗರ ನಡುವೆ ಘರ್ಷಣೆ ನಡೆದಿದೆ.

    ಕಲ್ಲು ತೂರಾಟ ಕೂಡ ನಡೆದಿದ್ದು, ಹಲವರು ಗಾಯಗೊಂಡಿದ್ದಾರೆ. ವಾಹನಗಳು ಕೂಡ ಜಖಂ ಆಗಿವೆ. ಈ ಮಧ್ಯೆ, ಓಪಿಎಸ್ ಬೆಂಬಲಕ್ಕೆ ಶಶಿಕಲಾ ಧಾವಿಸಿದ್ದಾರೆ. ಪಳನಿಸ್ವಾಮಿಗೆ ಅಧಿಕಾರ ನೀಡುವುದನ್ನು ಒಪ್ಪುವುದಿಲ್ಲ ಎಂದಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಎಐಡಿಎಂಕೆ ಕಾರ್ಯಕರ್ತರ ನಡುವೆ ಮಾರಾಮಾರಿ- ಕಚೇರಿಯ ಬಾಗಿಲು ಒಡೆದ ಬೆಂಬಲಿಗರು

    ಎಐಡಿಎಂಕೆ ಕಾರ್ಯಕರ್ತರ ನಡುವೆ ಮಾರಾಮಾರಿ- ಕಚೇರಿಯ ಬಾಗಿಲು ಒಡೆದ ಬೆಂಬಲಿಗರು

    ಚೆನ್ನೈ: ಎಐಡಿಎಂಕೆ ನಾಯಕರಾದ ಇ. ಪಳನಿಸ್ವಾಮಿ ಹಾಗೂ ಓ. ಪನ್ನೀರ್‌ ಸೆಲ್ವಂ ಬೆಂಬಲಿಗರ ನಡುವೆ ಮಾರಾಮಾರಿ ನಡೆದಿದ್ದು, ಕಚೇರಿಯ ಬಾಗಿಲನ್ನು ಒಡೆದು ಆಕ್ರೋಶ ವ್ಯಕ್ತಪಡಿಸಿದರು.

    ತಮಿಳುನಾಡಿನ ಚೆನ್ನೈನಲ್ಲಿ ಎಐಎಡಿಎಂಕೆ ಕಚೇರಿ ಎದುರು ಇಂದು ಮುಂಜಾನೆ ಹೈಡ್ರಾಮವೇ ನಡೆದಿದೆ. ಇಪಿಎಸ್, ಒಪಿಎಸ್ ಬಣಗಳ ನಡುವೆ ಮಾರಾಮಾರಿ ನಡೆದಿದ್ದು, ಜನರಲ್ ಕೌನ್ಸಿಲ್ ಸಭೆಗೂ ಮುನ್ನ ಎಐಡಿಎಂಕೆ ನಾಯಕರಾದ ಇ. ಪಳನಿಸ್ವಾಮಿ ಮತ್ತು ಓ. ಪನ್ನೀರ್‌ ಸೆಲ್ವಂ ಬೆಂಬಲಿಗರ ನಡುವೆ ಪಕ್ಷದ ಪ್ರಧಾನ ಕಚೇರಿ ಬಳಿ ಘರ್ಷಣೆ ಉಂಟಾಗಿದೆ. ಅಷ್ಟೇ ಅಲ್ಲದೇ ಓ ಪನೀರ್‌ ಸೆಲ್ವಂ ಬೆಂಬಲಿಗರು ಎಐಎಡಿಎಂಕೆ ಕಚೇರಿಯ ಬಾಗಿಲನ್ನು ಒಡೆದಿದ್ದಾರೆ. ಒಪಿಎಸ್ ಮತ್ತು ಇಪಿಎಸ್ ಬೆಂಬಲಿಗರು ಪೋಸ್ಟರ್ ಮತ್ತು ಬ್ಯಾನರ್‌ಗಳನ್ನು ಸುಟ್ಟು ಹಾಕಿದರು.

    ಪಳನಿಸ್ವಾಮಿ ನೇತೃತ್ವದ ಬಣವು ನಿರ್ಣಾಯಕ ಜನರಲ್ ಕೌನ್ಸಿಲ್ ಸಭೆಯಲ್ಲಿ ಅವರನ್ನು ಸಂಘಟನೆಯ ಏಕೈಕ ನಾಯಕನನ್ನಾಗಿ ಆಯ್ಕೆ ಮಾಡಲು ಸಿದ್ಧರಾಗಿರುವ ಹಿನ್ನೆಲೆಯಲ್ಲಿ ಎಐಡಿಎಂಕೆ ಕಾರ್ಯಕರ್ತರ 2 ಗುಂಪುಗಳು ಪಕ್ಷದ ಪ್ರಧಾನ ಕಚೇರಿಯ ಹೊರಗೆ ಘರ್ಷಣೆ ನಡೆದಿದೆ. 2 ಕಡೆಯ ಕಾರ್ಯಕರ್ತರು ರಸ್ತೆಯಲ್ಲೇ ಹೊಡೆದಾಡಿಕೊಂಡ ವೀಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ನಾಯಕತ್ವದ ವಿಚಾರಕ್ಕೆ ಈ ಗಲಾಟೆ ನಡೆದಿದ್ದು, ಕಲ್ಲು, ದೊಣ್ಣೆಗಳಿಂದ ಕಾರ್ಯಕರ್ತರು ಹೊಡೆದಾಡಿಕೊಂಡಿದ್ದಾರೆ. ಇದನ್ನೂ ಓದಿ: ನರ್ಮದಾ ಬಚಾವೋ ಆಂದೋಲನದ ನಾಯಕಿ ಮೇಧಾ ಪಾಟ್ಕರ್ ವಿರುದ್ಧ FIR ದಾಖಲು

    ಇಂದು ನಡೆಯುವ ಎಐಎಡಿಎಂಕೆ ಜನರಲ್ ಕೌನ್ಸಿಲ್ ಸಭೆಗೆ ಮದ್ರಾಸ್ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಹಂಗಾಮಿ ಪ್ರಧಾನ ಕಾರ್ಯದರ್ಶಿ ಹುದ್ದೆಯನ್ನು ನವೀಕರಿಸಲು ಮತ್ತು ಜಂಟಿ ಸಂಯೋಜಕ ಹುದ್ದೆಗಳನ್ನು ರುದ್ದುಗೊಳಿಸಲು ಪ್ರಸ್ತಾಪಿಸುವ ಸಭೆಯನ್ನು ಸ್ಥಗಿತಗೊಳಿಸುವಂತೆ ಓ ಪನ್ನೀರ ಸೆಲ್ವಂ ಮಾಡಿ ಮನವಿಯನ್ನು ಹೈಕೋರ್ಟ್ ತಿರಸ್ಕರಿಸಿದೆ. ಇದನ್ನೂ ಓದಿ: ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಗೋತಬಯ ರಾಜಪಕ್ಸೆ

    Live Tv
    [brid partner=56869869 player=32851 video=960834 autoplay=true]

  • ತಮಿಳುನಾಡಿನಲ್ಲಿ ಸೂರ್ಯೋದಯ – ಶಾಖಕ್ಕೆ ಬಾಡಿತು ಎರಡೆಲೆ, ಮುದುಡಿತು ಕಮಲ

    ತಮಿಳುನಾಡಿನಲ್ಲಿ ಸೂರ್ಯೋದಯ – ಶಾಖಕ್ಕೆ ಬಾಡಿತು ಎರಡೆಲೆ, ಮುದುಡಿತು ಕಮಲ

    ಚೆನ್ನೈ: ತಮಿಳುನಾಡಿನಲ್ಲಿ ನಿರೀಕ್ಷೆಯಂತೆ ಸೂರ್ಯೋದಯವಾಗಿದೆ. ಸೂರ್ಯ ಶಾಖಕ್ಕೆ ಎರಡೆಲೆ ಬಾಡಿದೆ. ಕಮಲ ಮುದುಡಿದೆ. ಜಯಲಲಿತಾ, ಕರುಣಾನಿಧಿ ಇಲ್ಲದೇ ನಡೆದ ಮೊದಲ ಚುನಾವಣೆಯಲ್ಲಿ ಆಡಲಿತ ವಿರೋಧಿ ಅಲೆಗೆ ಅಣ್ಣಾ ಡಿಎಂಕೆ ಕೊಚ್ಚಿ ಹೋಗಿದ್ದು, ಡಿಎಂಕೆ ಭರ್ಜರಿ ಗೆಲುವು ಸಾಧಿಸಿದೆ.

    ಆರಂಭದಿಂದಲೂ ಮುನ್ನಡೆ ಕಾಯ್ದುಕೊಳ್ಳುತ್ತಲೇ ಬಂದ ಡಿಎಂಕೆಗೆ ಒಂದು ದಶಕದ ಬಳಿಕ ಅಧಿಕಾರ ಸಿಕ್ಕಿದೆ. ಆರಂಭಿಕ ಟ್ರೆಂಡ್‍ನಲ್ಲಿಯೇ ಫಲಿತಾಂಶ ಏನಾಗಬಹುದು ಎಂಬುದು ಎಲ್ಲರಿಗೂ ಸ್ಪಷ್ಟವಾಗಿ ಗೊತ್ತಾಗಿತ್ತು. ಅಧಿಕೃತವಾಗಿ ಒಂದು ಸೀಟ್ ಗೆಲ್ಲದಿರುವ ಹೊತ್ತಲ್ಲಿ ಅಂದರೆ ಮಧ್ಯಾಹ್ನ 12 ಗಂಟೆಗೆ ಡಿಎಂಕೆ ಪಾಳಯದಲ್ಲಿ ಸಂಭ್ರಮ ಮನೆ ಮಾಡಿತ್ತು.

    ಪಕ್ಷದ ಮುಖ್ಯಸ್ಥ ಎಂಕೆ ಸ್ಟಾಲಿನ್ ಮೇ 6ರಂದು ತಮಿಳುನಾಡಿನ ಸಿಎಂ ಆಗಿ ಪದಗ್ರಹಣ ಮಾಡಲಿದ್ದಾರೆ ಎಂದು ಡಿಎಂಕೆ ಘೋಷಿಸಿತ್ತು. ದ್ರಾವಿಡ ರಾಜಕಾರಣದ ಮುಂದೆ, ಹಿಂದುತ್ವ, ರಾಷ್ಟ್ರೀಯ ರಾಜಕಾರಣ ಫಲ ಕೊಟ್ಟಿಲ್ಲ. ಇಲ್ಲಿ ಬಿಜೆಪಿಯ ಪರವಾಗಿ ಚುನಾವಣಾ ಉಸ್ತುವಾರಿಯಾಗಿ ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಪ್ರಚಾರ ಮಾಡಿ ಪಕ್ಷ ಸಂಘಟನೆ ಮಾಡಿದ್ದರು.

    ತಮಿಳುನಾಡಲ್ಲಿ ಸೂರ್ಯೋದಯ ( ಒಟ್ಟು 234)
    * ಡಿಎಂಕೆ  – 143 (+45)
    * ಎಐಎಡಿಎಂಕೆ  – 90 (- 46)
    * ಮಕ್ಕಳ್ ನಿಧಿ ಮಯ್ಯಂ – 01 (ಇರಲಿಲ್ಲ)

    ಗೆದ್ದ ಪ್ರಮುಖರು
    * ಎಂಕೆ ಸ್ಟಾಲಿನ್, (ಡಿಎಂಕೆ)
    * ಉದಯನಿಧಿ ಸ್ಟಾಲಿನ್, ಚೆಪಾಕ್ (ಡಿಎಂಕೆ)
    * ಪಳನಿಸ್ವಾಮಿ, (ಎಐಎಡಿಎಂಕೆ)
    * ಪನ್ನೀರ್ ಸೆಲ್ವಂ, (ಎಐಎಡಿಎಂಕೆ)
    * ಕಮಲ್ ಹಾಸನ್, ಕೊಯಮತ್ತೂರು (ಎಂಎನ್‍ಎಂ)

    ಸೋತ ಪ್ರಮುಖರು
    * ಅಣ್ಣಾಮಲೈ, ಅವರಕುರುಚ್ಚಿ, ಬಿಜೆಪಿ
    * ಖುಷ್ಬು, ಥೌಸಂಡ್ ಲೈಟ್ಸ್, ಬಿಜೆಪಿ
    * ಟಿಟಿವಿ ದಿನಕರನ್,ಕೋವಿಲ್‍ಪಟ್ಟಿ (ಎಎಂಎಂಕೆ)

    ಡಿಎಂಕೆಗೆ ಗೆಲುವಿಗೆ ಕಾರಣ ಏನು?
    * ಅಣ್ಣಾ ಡಿಎಂಕೆಗೆ ಆಡಳಿತ ವಿರೋಧಿ ಅಲೆ
    * ಅಣ್ಣಾ ಡಿಎಂಕೆಗೆ ಸಮರ್ಥ ನಾಯಕತ್ವ ಕೊರತೆ
    * ಡಿಎಂಕೆಗೆ ಎಂಕೆ ಸ್ಟಾಲಿನ್ ನಾಯಕತ್ವ
    * ಅಣ್ಣಾ ಡಿಎಂಕೆಗೆ ಬಿಜೆಪಿ ಮೈತ್ರಿ ಮುಳುವು?
    * ಬಿಜೆಪಿಯಿಂದ ಶೂನ್ಯ ಸಂಪಾದನೆ
    * ಹಿಂದುತ್ವಕ್ಕೆ ಹೆಚ್ಚಿನ ಆದ್ಯತೆ ಸಿಗದೇ ಇರುವುದು
    * ರಾಷ್ಟ್ರೀಯ ರಾಜಕಾರಣಕ್ಕೂ ಅವಕಾಶ ಇಲ್ಲದಿರುವುದು

  • ಪುದುಚೇರಿ ಕಳೆದುಕೊಂಡ ಕಾಂಗ್ರೆಸ್ – ಅರಳಿದ ಕಮಲ

    ಪುದುಚೇರಿ ಕಳೆದುಕೊಂಡ ಕಾಂಗ್ರೆಸ್ – ಅರಳಿದ ಕಮಲ

    ನವದೆಹಲಿ: ನಾಲ್ಕು ರಾಜ್ಯಗಳ ಜೊತೆಯಲ್ಲಿ ಒಂದು ಕೇಂದ್ರಾಡಳಿತ ಪ್ರದೇಶ ಪುದುಚೇರಿಯ 30 ವಿಧಾನ ಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆದಿತ್ತು. ಬಹುಮತ ಸಾಬೀತು ಮಾಡುವಲ್ಲಿ ವಿಫಲವಾದ ಪುದುಚೇರಿಯ ಕಾಂಗ್ರೆಸ್ ಸರ್ಕಾರ ಪತನವಾಗಿತ್ತು. ಈಗ ನಡೆದ ಚುನಾವಣೆಯಲ್ಲಿ ಪುದುಚೇರಿಯನ್ನ ಬಿಜೆಪಿ ತನ್ನ ತೆಕ್ಕಗೆ ತೆಗೆದುಕೊಳ್ಳಲಿದೆ ಎಂದು ಸಮೀಕ್ಷೆಗಳು ಹೇಳಿವೆ.

    ವಿಶ್ವಾಸಮತ ಸಾಬೀತುಪಡಿಸುವಲ್ಲಿ ಕಾಂಗ್ರೆಸ್ ಚುನಾವಣೆಯಲ್ಲಿ ಡಿಎಂಕೆ ಜೊತೆ ಎದುರಿಸಿತ್ತು. ಆದ್ರೆ ತಮಿಳುನಾಡಿನಲ್ಲಿ ವರ್ಕೌಟ್ ಆದ ತಂತ್ರ ಇಲ್ಲಿ ಯಶಸ್ಸು ಕಂಡಿಲ್ಲ. ಚುನಾವಣೆಗೂ ಮುನ್ನವೇ ಕಾಂಗ್ರೆಸ್ ಪ್ರಮುಖ ನಾಯಕರು ಕಮಲ ಹಿಡಿದಿದ್ದರು. ಇದನ್ನೂ ಓದಿ: ಪಶ್ಚಿಮ ಬಂಗಾಳದಲ್ಲಿ ಮತ್ತೊಮ್ಮೆ ದೀದಿ ಅಧಿಕಾರಕ್ಕೆ

    ಯಾರಿಗೆ ಎಷ್ಟು ಕ್ಷೇತ್ರ: ಒಟ್ಟು ವಿಧಾನಸಭಾ ಕ್ಷೇತ್ರಗಳು-30

    ಇಂಡಿಯಾ ಟುಡೇ-ಆಕ್ಸಿನ್ ಮೈ ಇಂಡಿಯಾ
    ಕಾಂಗ್ರೆಸ್+: 6-10
    ಬಿಜೆಪಿ+: 20-24
    ಇತರೆ: 0-1

    ಟೈಮ್ಸ್ ನೌ-ಸಿ ವೋಟರ್
    ಕಾಂಗ್ರೆಸ್+: 6-10
    ಬಿಜೆಪಿ+: 19-23
    ಇತರೆ: 1-2

    ಸಿಎನ್‍ಎಕ್ಸ್
    ಕಾಂಗ್ರೆಸ್+: 11-13
    ಬಿಜೆಪಿ+: 16-20
    ಇತರೆ: 0

    ಜನ್ ಕಿ ಬಾತ್
    ಕಾಂಗ್ರೆಸ್+: 6-11
    ಬಿಜೆಪಿ+: 19-24
    ಇತರೆ: 0

    ಇದನ್ನೂ ಓದಿ: ಮಸ್ಕಿ, ಬಸವ ಕಲ್ಯಾಣದಲ್ಲಿ ಕಾಂಗ್ರೆಸ್ – ಬೆಳಗಾವಿಯಲ್ಲಿ ಮತ್ತೆ ಬಿಜೆಪಿ

    2016ರ ಫಲಿತಾಂಶ: 2016ರಲ್ಲಿ 30 ಕ್ಷೇತ್ರಗಳ ಪೈಕಿ ಕಾಂಗ್ರೆಸ್ 15ರಲ್ಲಿ ಗೆದ್ದು ಅಧಿಕಾರದ ಗದ್ದುಗೆ ಏರಿತ್ತು. ಅಣ್ಣಾಡಿಎಂಕೆ- 04, ಡಿಎಂಕೆ- 02 ಮತ್ತು ಇತರರು ಒಂದು ಕ್ಷೇತ್ರದಲ್ಲಿ ಗೆದ್ದಿದ್ದರು. 33 ಸದಸ್ಯರ ಪುದುಚೇರಿಯ ವಿಧಾನಸಭೆಯಲ್ಲಿ ಮೂವರು ಕೇಂದ್ರ ಸರ್ಕಾರದಿಂದ ನೇಮಕ ಆಗಿರುತ್ತಾರೆ. ಇನ್ನುಳಿದ 30 ಸದಸ್ಯರು ಜನರಿಂದ ನೇರವಾಗಿ ಆಯ್ಕೆಯಾಗಿ ವಿಧಾನಸಭೆ ಪ್ರವೇಶಿಸಿರುತ್ತಾರೆ.ಇದನ್ನೂ ಓದಿ: ಅಸ್ಸಾಂ ಚಹಾ ತೋಟದಲ್ಲಿ ಎರಡನೇ ಬಾರಿ ಅರಳಿದ ಕಮಲ

    ಇದನ್ನೂ ಓದಿ: ಕೇರಳದಲ್ಲಿ ಪಿಣರಾಯಿ ‘ವಿಜಯ’ನ್ ಪತಾಕೆ – ಒಂದಂಕಿಗೆ ಸೀಮಿತವಾದ ಬಿಜೆಪಿ

    ಇದನ್ನೂ ಓದಿ: ತಮಿಳುನಾಡಿನಲ್ಲಿ ಕಾಂಗ್ರೆಸ್-ಡಿಎಂಕೆ ಮೈತ್ರಿ ಸಕ್ಸಸ್ – ಖಾತೆ ತೆರೆಯಲು ಕಮಲ್ ಹಾಸನ್ ಹರಸಾಹಸ

  • ತಮಿಳುನಾಡಿನಲ್ಲಿ ಕಾಂಗ್ರೆಸ್-ಡಿಎಂಕೆ ಮೈತ್ರಿ ಸಕ್ಸಸ್ – ಖಾತೆ ತೆರೆಯಲು ಕಮಲ್ ಹಾಸನ್ ಹರಸಾಹಸ

    ತಮಿಳುನಾಡಿನಲ್ಲಿ ಕಾಂಗ್ರೆಸ್-ಡಿಎಂಕೆ ಮೈತ್ರಿ ಸಕ್ಸಸ್ – ಖಾತೆ ತೆರೆಯಲು ಕಮಲ್ ಹಾಸನ್ ಹರಸಾಹಸ

    – ಬಿಜೆಪಿ ಜೊತೆಗೆ ಕಣಕ್ಕಿಳಿದಿದ್ದ ಎಐಡಿಎಂಕೆಗೆ ಸೋಲು

    ಚೆನ್ನೈ: ಪ್ರತಿ ಚುನಾವಣೆಯಂತೆ ತಮಿಳುನಾಡಿನಲ್ಲಿ ಒಂದೇ ಪಕ್ಷವನ್ನ ಬೆಂಬಲಿಸ್ತಾರೆ ಅನ್ನೋ ಮಾತು ಈ ಬಾರಿ ಸತ್ಯ ಆಗಿದೆ. ಜಯಲಲಿತಾ ಮತ್ತು ಕರುಣಾನಿಧಿ ಇಲ್ಲದ ಮೊದಲ ಚುನಾವಣೆ ಇದಾಗಿದ್ದು, ಜನರು ಕಾಂಗ್ರೆಸ್ ಮೈತ್ರಿಯನ್ನ ಒಪ್ಪಿಕೊಂಡಿದ್ದಾರೆ ಎಂದು ಸಮೀಕ್ಷೆಗಳು ಹೇಳುತ್ತಿವೆ. ತಮಿಳುನಾಡಿನಲ್ಲಿ ಪ್ರಾದೇಶಿಕ ಪಕ್ಷಗಳ ಪ್ರಾಬಲ್ಯ ಹಿನ್ನೆಲೆ ಎರಡೂ ರಾಷ್ಟ್ರೀಯ ಪಕ್ಷಗಳ ನೇರವಾಗಿ ಕಣಕ್ಕಿಳಿದಿರಲಿಲ್ಲ.

    ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಮತ್ತು ಕಾಂಗ್ರೆಸ್ಸಿನ ರಾಹುಲ್ ಗಾಂಧಿ ಜೋಡಿಯನ್ನ ಜನ ಒಪ್ಪಿ ಮತ ನೀಡಿದ್ದಾರೆ. ಪಶ್ಚಿಮ ಬಂಗಾಳ, ಅಸ್ಸಾಂ, ಕೇರಳದಲ್ಲಿ ನಿರಾಸೆ ಕಂಡಿದ್ದ ಕಾಂಗ್ರೆಸ್ ಗೆ ತಮಿಳುನಾಡಿನ ಗೆಲುವು ಮುಂದಿನ ರಾಜಕಾರಣಕ್ಕೆ ಆಸರೆ ಸಿಕ್ಕಂತಾಗಿದೆ. ಇದನ್ನೂ ಓದಿ: ಅಸ್ಸಾಂ ಚಹಾ ತೋಟದಲ್ಲಿ ಎರಡನೇ ಬಾರಿ ಅರಳಿದ ಕಮಲ

    ಯಾರಿಗೆ ಎಷ್ಟು ಕ್ಷೇತ್ರ?: ತಮಿಳುನಾಡು ಒಟ್ಟು ವಿಧಾನಸಭಾ ಕ್ಷೇತ್ರಗಳು – 232

    ಇಂಡಿಯಾ ಟುಡೇ-ಆಕ್ಸಿನ್ ಮೈ ಇಂಡಿಯಾ
    ಎಐಎಡಿಎಂಕೆ+ಬಿಜೆಪಿ: 38-54
    ಡಿಎಂಕೆ+ಕಾಂಗ್ರೆಸ್: 175-195
    ಎಎಂಎಂಕೆ+: 1-2
    ಎಂಎನ್‍ಎಂ+: 0-2

    ಟೈಮ್ಸ್ ನೌ-ಸಿ ವೋಟರ್
    ಎಐಎಡಿಎಂಕೆ+ಬಿಜೆಪಿ: 64
    ಡಿಎಂಕೆ+ಕಾಂಗ್ರೆಸ್: 166
    ಎಎಂಎಂಕೆ+: 1
    ಎಂಎನ್‍ಎಂ+: 1

    ಟುಡೇಸ್ ಚಾಣಕ್ಯ
    ಎಐಎಡಿಎಂಕೆ+ಬಿಜೆಪಿ: 46-68
    ಡಿಎಂಕೆ+ಕಾಂಗ್ರೆಸ್: 164-186
    ಎಎಂಎಂಕೆ+: 0
    ಇತರೆ: 0-8

    ಸಿಎನ್‍ಎಕ್ಸ್
    ಎಐಎಡಿಎಂಕೆ+ಬಿಜೆಪಿ: 58-68
    ಡಿಎಂಕೆ+ಕಾಂಗ್ರೆಸ್: 160-170
    ಎಎಂಎಂಕೆ+: 4-6
    ಎಂಎನ್‍ಎಂ+: 0-2

    ಜನ್ ಕೀ ಬಾತ್:
    ಎಐಎಡಿಎಂಕೆ+ಬಿಜೆಪಿ: 102-123
    ಡಿಎಂಕೆ+ಕಾಂಗ್ರೆಸ್: 110-130
    ಎಎಂಎಂಕೆ+: 0
    ಇತರೆ: 1-2

    ರಾಹುಲ್ ಗಾಂಧಿ ಸಾಲು ಸಾಲು ಸಮಾವೇಶ, ವಿದ್ಯಾರ್ಥಿಗಳ ಸಂವಾದ, ಗ್ರಾಮೀಣ ಭಾಗದಲ್ಲಿ ಮಿಂಚಿನ ಸಂಚಾರ ತಮಿಳುನಾಡಿನಲ್ಲಿ ಕಾಂಗ್ರೆಸ್ ಕೈ ಹಿಡಿದೆ. ಆಡಳಿತ ವಿರೋಧಿ ಅಲೆ ಜೊತೆ ಬಿಜೆಪಿಯೊಂದಿಗಿನ ಮೈತ್ರಿ ಅಣ್ಣಾಡಿಎಂಕೆಗೆ ಶಾಕ್ ನೀಡಿದೆ. ಇತ್ತ ಮೊದಲ ಬಾರಿಗೆ ಎಂಎನ್‍ಎಂ ಪಕ್ಷ ಸ್ಥಾಪಿಸಿ ಚುನಾವಣಾ ಅಖಾಡಕ್ಕೆ ಎಂಟ್ರಿ ಕೊಟ್ಟಿದ್ದ ನಟ ಕಮಲ್ ಹಾಸನ್ ಮತ್ತು ಟಿಟಿವಿ ದಿನಕರನ್ ಎಎಂಎಂಕೆ ಖಾತೆ ತರೆಯಲು ಹರಸಾಹಸ ಪಟ್ಟಿವೆ.  ಇದನ್ನೂ ಓದಿ: ಮಸ್ಕಿ, ಬಸವ ಕಲ್ಯಾಣದಲ್ಲಿ ಕಾಂಗ್ರೆಸ್ – ಬೆಳಗಾವಿಯಲ್ಲಿ ಮತ್ತೆ ಬಿಜೆಪಿ

    2016ರ ಫಲಿತಾಂಶ: ಒಟ್ಟು 232 ಕ್ಷೇತ್ರಗಳಲ್ಲಿ ಅಣ್ಣಾಡಿಎಂಕೆ 134ರಲ್ಲಿ ಗೆದ್ದು ಅಧಿಕಾರ ರಚಿಸಿತ್ತು. ಡಿಎಂಕೆ 89, ಕಾಂಗ್ರೆಸ್ 08 ಮತ್ತು ಇತರರು ಒಂದರಲ್ಲಿ ಗೆಲುವು ದಾಖಲಿಸಿದ್ದರು. ಇದನ್ನೂ ಓದಿ: ಪಶ್ಚಿಮ ಬಂಗಾಳದಲ್ಲಿ ಮತ್ತೊಮ್ಮೆ ದೀದಿ ಅಧಿಕಾರಕ್ಕೆ

    ಇದನ್ನೂ ಓದಿ: ಕೇರಳದಲ್ಲಿ ಪಿಣರಾಯಿ ‘ವಿಜಯ’ನ್ ಪತಾಕೆ – ಒಂದಂಕಿಗೆ ಸೀಮಿತವಾದ ಬಿಜೆಪಿ