Tag: AICC president rahul gandhi

  • ರಾಹುಲ್ ಗಾಂಧಿ ಮಹತ್ವಾಕಾಂಕ್ಷಿ ಯೋಜನೆ ರಾಜ್ಯದಲ್ಲಿ ವಿಫಲ

    ರಾಹುಲ್ ಗಾಂಧಿ ಮಹತ್ವಾಕಾಂಕ್ಷಿ ಯೋಜನೆ ರಾಜ್ಯದಲ್ಲಿ ವಿಫಲ

    – ಟಾರ್ಗೆಟ್ ರೀಚ್ ಆದಬಳಿಕ ಸಚಿವ ಸ್ಥಾನ ಕೇಳಿ- ರಾಹುಲ್ ಗಾಂಧಿ ಕಿಡಿ

    ಬೆಂಗಳೂರು: ರಾಜ್ಯದ ಕಾಂಗ್ರೆಸ್ ಶಾಸಕರು ಹಾಗೂ ಮುಖಂಡರ ನಿಷ್ಕಾಳಜಿಯಿಂದಾಗಿ ರಾಹುಲ್ ಗಾಂಧಿ ಕನಸಿನ ಶಕ್ತಿ ಯೋಜನೆ ವಿಫಲವಾಗಿದೆ. ವಿಫಲವಾದ ಹಿನ್ನೆಲೆಯಲ್ಲಿ ಸಚಿವ ಸ್ಥಾನಕ್ಕೆ ಲಾಬಿ ನಡೆಸುತ್ತಿರುವ ಹಾಗೂ ಅಧಿಕಾರ ಪಡೆದು ಪಕ್ಷದ ಸಂಘಟನೆ ಮರೆತಿರುವ ರಾಜ್ಯ ನಾಯಕರ ವಿರುದ್ಧ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಫುಲ್ ಗರಂ ಆಗಿದ್ದಾರೆ.

    ಚಿಕ್ಕ ರಾಜ್ಯಗಳಲ್ಲಿ ನಿರೀಕ್ಷೆಗಿಂತ ಹೆಚ್ಚು ಜನರು ಸದಸ್ಯತ್ವ ಪಡೆದಿದ್ದಾರೆ. ಆದರೆ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವೇ ಅಧಿಕಾರಲ್ಲಿದ್ದರೂ ಹೆಚ್ಚಿನ ಸಂಖ್ಯೆಯಲ್ಲಿ ಜನರು ಪಕ್ಷದ ಸದಸ್ಯತ್ವ ಪಡೆಯುವ ನಿಟ್ಟಿನಲ್ಲಿ ಕೆಲಸ ಮಾಡದ್ದಕ್ಕೆ ಎಐಸಿಸಿ ರಾಜ್ಯ ನಾಯಕರನ್ನು ತರಾಟೆಗೆ ತೆಗದುಕೊಂಡಿದೆ ಎಂದು ಮೂಲಗಳು ತಿಳಿಸಿವೆ.

    ಏನಿದು ಶಕ್ತಿ ಯೋಜನೆ?:
    ಲೋಕಸಭಾ ಚುನಾವಣೆ ಹಿನ್ನೆಲೆ ವಾಟ್ಸಾಪ್ ಮೂಲಕ ಪಕ್ಷದ ಸದಸ್ಯತ್ವ ನೋಂದಣಿ ಯೋಜನೆಯನ್ನು ರಾಹುಲ್ ಗಾಂಧಿ ಪರಿಚಯಿಸಿದ್ದರು. ಈ ಮೂಲಕ ಹೆಚ್ಚು ಸದಸ್ಯರು, ಕಾರ್ಯಕರ್ತರನ್ನು ಪಕ್ಷಕ್ಕೆ ನೋಂದಣಿ ಮತ್ತು ಸೇರ್ಪಡೆ ಮಾಡಿಕೊಳ್ಳುವ ಗುರಿಯನ್ನು ಹೊಂದಲಾಗಿತ್ತು.

    ಈ ಕುರಿತು ಪ್ರಚಾರ ಮಾಡಿ ಸದಸ್ಯರ ಸಂಖ್ಯೆಯನ್ನು ಹೆಚ್ಚಿಸುವ ಜವಾಬ್ದಾರಿಯನ್ನು ಶಾಸಕರು, ಸಚಿವರು ಹಾಗೂ ನಾಯಕರಿಗೆ ನೀಡಲಾಗಿತ್ತು. ಈ ನೋಂದಣಿ ಅಭಿಯಾನ 2018ರ ನವಂಬರ್ ಅಂತ್ಯಕ್ಕೆ ಮುಗಿಯಬೇಕಿತ್ತು. ಆದರೆ ಯೋಜನೆ ವಿಫಲವಾಗಿದ್ದಕ್ಕೆ ರಾಹುಲ್ ಗಾಂಧಿ ಅವರು ರಾಜ್ಯದ ನಾಯಕರಿಗೆ ಫುಲ್ ಕ್ಲಾಸ್ ತೆಗೆದುಕೊಂಡು ಡಿಸೆಂಬರ್ 15ರವರೆಗೆ ಅಭಿಯಾನವನ್ನು ವಿಸ್ತರಿಸಿದ್ದಾರೆ ಎನ್ನಲಾಗಿದೆ.

    ಹೈಕಮಾಂಡ್‍ನ ಹೊಸ ವರಸೆ ಕಂಡು ಶಾಸಕರು, ಸಚಿವ ಸ್ಥಾನ ಆಕಾಂಕ್ಷಿಗಳು ಈಗ ಕಂಗಲಾಗಿದ್ದಾರೆ. ಎಲ್ಲವೂ ಮುಗಿಯಿತು ಎನ್ನುವಾಗ ಪಕ್ಷ ಸಂಘಟನೆಯ ಹೊಸ ಜವಬ್ದಾರಿ ಎದುರಾಗಿದೆ. ಸಚಿವ ಸ್ಥಾನ ಕೇಳಲು ಸದಸ್ಯತ್ವ ನೋಂದಣಿ ಅಭಿಯಾನದ ಫಲಿತಾಂಶ ತೋರಿಸಬೇಕಾದ ಸಂಕಷ್ಟಕ್ಕೆ ಸಿಲುಕಿಕೊಂಡಿದ್ದಾರೆ. ಈ ನಿಟ್ಟಿನಲ್ಲಿ ಕರ್ನಾಟಕದಲ್ಲಿ ಕನಿಷ್ಟ 10 ಲಕ್ಷ ಜನರು ಸದಸ್ಯತ್ವ ಪಡೆಯಬೇಕು ಎಂದು ಎಐಸಿಸಿ ಖಡಕ್ ಆದೇಶ ನೀಡಿದೆ.

    ಯಾವ ರಾಜ್ಯದಲ್ಲಿ ಎಷ್ಟು ನೋಂದಣಿ?:
    ಕರ್ನಾಟಕದಲ್ಲಿ ಕಳೆದ ಎರಡು ತಿಂಗಳಿನಿಂದ ಕೇವಲ 3 ಲಕ್ಷ ಜನರು ನೋಂದಣಿ ಮಾಡಿಕೊಂಡಿದ್ದಾರೆ. ರಾಜಸ್ಥಾನದಲ್ಲಿ 7 ಲಕ್ಷ ಜನ, ಮಧ್ಯ ಪ್ರದೇಶದಲ್ಲಿ 6 ಲಕ್ಷ ಮಂದಿ, ಚಿಕ್ಕ ರಾಜ್ಯವಾಗಿರುವ ಛತ್ತೀಸಗಢದಲ್ಲಿ 4.5 ಲಕ್ಷ ಜನ ಸದಸ್ಯತ್ವ ಪಡೆದಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಹೈಕಮಾಂಡ್‍ನಿಂದ ಲಕ್ಷ್ಮೀ ಹೆಬ್ಬಾಳ್ಕರ್ ತಲೆದಂಡ!

    ಹೈಕಮಾಂಡ್‍ನಿಂದ ಲಕ್ಷ್ಮೀ ಹೆಬ್ಬಾಳ್ಕರ್ ತಲೆದಂಡ!

    – ಮಹಿಳಾ ಕಾಂಗ್ರೆಸ್ ಘಟಕದ ಅಧ್ಯಕ್ಷೆಯಾಗಿ ಪುಷ್ಪಾ ಅಮರನಾಥ್ ನೇಮಕ

    ಬೆಂಗಳೂರು: ರಾಜ್ಯ ಮಹಿಳಾ ಕಾಂಗ್ರೆಸ್ ಘಟಕದ ಅಧ್ಯಕ್ಷೆ ಸ್ಥಾನದಿಂದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಕೆಳಗಿಳಿಸಿ, ಪುಷ್ಪಾ ಅಮರನಾಥ್ ಅವರನ್ನು ನೇಮಕ ಮಾಡಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಆದೇಶ ಹೊರಡಿಸಿದ್ದಾರೆ.

    ಇಷ್ಟು ದಿನ ತೆರೆ ಮರೆಯಲ್ಲಿ ನಡೆಯುತ್ತಿದ್ದ ಪ್ರಯತ್ನಕ್ಕೆ ಈಗ ಅಧಿಕೃತವಾಗಿ ತೆರೆ ಬಿದ್ದಿದೆ. ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ಅಧ್ಯಕ್ಷ ಪಟ್ಟದಿಂದ ಕೆಳಗಿಳಿಸುವಂತೆ ಪೌರಾಡಳಿತ ಸಚಿವ ರಮೇಶ್ ಜಾರಕಿಹೊಳಿ ಹಾಗೂ ಶಾಸಕ ಸತೀಶ್ ಜಾರಕಿಹೊಳಿ ಸಹೋದರರು ಬೇಡಿಕೆ ಇಟ್ಟಿದ್ದರು. ಈಗ ಹೈ ಕಮಾಂಡ್ ಈ ಬೇಡಿಕೆಗೆ ಅಸ್ತು ಅಂದಿದೆ ಎನ್ನುವ ವಿಶ್ಲೇಷಣೆ ಕೇಳಿ ಬಂದಿದೆ.

    ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ಕೆಳಗಡೆ ಇಳಿಸುವ ವಿಚಾರ ಚರ್ಚೆ ಆಗುತ್ತಿದ್ದಂತೆ ಅಧ್ಯಕ್ಷೆ ಸ್ಥಾನಕ್ಕೆ ಕಾಂಗ್ರೆಸ್ ನಲ್ಲಿ ಲಾಬಿ ಜೋರಾಗಿತ್ತು. ರಾಷ್ಟ್ರೀಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸುಶ್ಮಿತಾ ದೇವ್ ರಾಜ್ಯದ 12 ಜನ ಮಹಿಳಾ ನಾಯಕಿಯರನ್ನು ಕರೆದು ಸಂದರ್ಶನ ನಡೆಸಿದ್ದರು. ಇದಾದ ಕೆಲವೇ ದಿನಗಳ ನಂತರ 9 ಮಹಿಳಾ ಕಾಂಗ್ರೆಸ್ ಮುಖಂಡರನ್ನು ದೆಹಲಿಗೆ ಕರೆದು ಸಂದರ್ಶನ ನಡೆಸಿದ್ದರು. ಈ ಎಲ್ಲ ಪ್ರಕ್ರಿಯೆ ಮೂಲಕ ಪುಷ್ಪಾ ಅಮರನಾಥ್ ಅವರನ್ನು ಆಯ್ಕೆ ಮಾಡಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ರಾಹುಲ್ ಗಾಂಧಿ ಒಬ್ಬ ಅರೆ ಹುಚ್ಚ, ಅಯೋಗ್ಯ ಯತ್ನಾಳ್ ವ್ಯಂಗ್ಯ

    ರಾಹುಲ್ ಗಾಂಧಿ ಒಬ್ಬ ಅರೆ ಹುಚ್ಚ, ಅಯೋಗ್ಯ ಯತ್ನಾಳ್ ವ್ಯಂಗ್ಯ

    – ಕುಮಾರಸ್ವಾಮಿಗೆ ಬೇಜಾರಾಗಿದ್ದರೆ ರಾಜೀನಾಮೆ ನೀಡಲಿ
    – ಎಚ್‍ಡಿಡಿ ಯಾರ ತಲೆಯ ಮೇಲೆ ಕೈ ಇಡ್ತಾರೋ ಅವರ ಕಥೆ ಮುಗಿದಂತೆ

    ಬೆಂಗಳೂರು: ಎಐಸಿಸಿ ಅಧ್ಯಕ್ಷ ರಾಹುಲ್ ಅರೆ ಹುಚ್ಚ, ಅವರಿಗೆ ಮೆದುಳು ಇದೆಯೋ, ಇಲ್ಲವೋ ಗೊತ್ತಾಗುತ್ತಿಲ್ಲ. ಅವರನ್ನು ಹುಚ್ಚಾಸ್ಪತ್ರೆಗೆ ಸೇರಿಸುವುದು ಉತ್ತಮ ಎಂದು ಶಾಸಕ ಬಸನಗೌಡ್ ಪಾಟೀಲ್ ಯತ್ನಾಳ್ ವ್ಯಂಗ್ಯವಾಡಿದ್ದಾರೆ.

    ವಿಪಕ್ಷ ನಾಯಕ ಬಿ.ಎಸ್.ಯಡಿಯೂರಪ್ಪ ನಿವಾಸದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಹುಲ್ ಗಾಂಧಿ ಲೋಕಸಭೆಯಲ್ಲಿ ಅಸಭ್ಯವಾಗಿ ನಡೆದುಕೊಂಡಿದ್ದಾರೆ. ಜೊತೆಗೆ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಅರ್ಥವೇ ಇಲ್ಲದ ಹೇಳಿಕೆ ನೀಡುತ್ತಿದ್ದಾರೆ. ಬಂಗಾರವನ್ನು ಲೀಟರ್ ನಲ್ಲಿ ಮಾಪನ ಮಾಡುವುದು, ಬಟಾಟೆಯಿಂದ ಬಂಗಾರ ಮಾಡುವುದು ಸೇರಿದಂತೆ ಅನೇಕ ವಿಚಿತ್ರ ಹೇಳಿಕೆ ನೀಡುತ್ತಿದ್ದಾರೆ. ಹೀಗೆ ಯಾವುದೇ ಅರೆ ಹುಚ್ಚರೂ ಹೇಳಿಕೆ ನೀಡುವುದಿಲ್ಲ ಎಂದು ಕಿಡಿಕಾರಿದರು.

     

    ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆರೋಪ ಹೊರೆಸುತ್ತಿರುವ ಅಯೋಗ್ಯ ವ್ಯಕ್ತಿ ನೇತೃತ್ವದ ಕಾಂಗ್ರೆಸ್ ಪಕ್ಷವು ದೇಶದ ಜನತೆಯನ್ನು ಕ್ಷಮೆ ಕೇಳಬೇಕು. ನೂರಾರು ವರ್ಷಗಳ ಇತಿಹಾಸ ಹೊಂದಿರುವ ಕಾಂಗ್ರೆಸ್ಸಿಗೆ ರಾಹುಲ್ ಗಾಂಧಿ ಅಧ್ಯಕ್ಷರಾಗಿರುವುದು ದುರಂತ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದಲ್ಲಿ ಯಾವುದೇ ಭ್ರಷ್ಟಾಚಾರ ಪ್ರಕರಣಗಳು ನಡೆದಿಲ್ಲ. ಆದರೆ ಕಾಂಗ್ರೆಸ್ ನಾಯಕರು ಸುಳ್ಳು ಆರೋಪ ಮಾಡುತ್ತಿದ್ದಾರೆ. ಇದೇ ರೀತಿ ಹೇಳಿಕೆ ಮುಂದುವರಿಸಿದರೆ ನಾವು ರಾಜ್ಯದಲ್ಲಿ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

    ಈ ಹಿಂದಿನ ಕಾಂಗ್ರೆಸ್ ಸರ್ಕಾರ ಅನೇಕ ಹಗರಣಗಳಲ್ಲಿ ಭಾಗಿಯಾಗಿತ್ತು. ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿ ಹೆರಾಲ್ಡ್ ಪತ್ರಿಕೆ ಹಗರಣದಲ್ಲಿ ಸಿಕ್ಕಿ ಹಾಕಿಕೊಂಡಿದ್ದಾರೆ. ಹೀಗಿದ್ದರೂ ಪ್ರತಿ ಭಾಷಣದಲ್ಲಿಯೂ ರಫೆಲ್ ವಿಮಾನದ ಬಗ್ಗೆ ಮಾತನಾಡುತ್ತಾರೆ. ಅವರು ನೀಡುತ್ತಿರುವ ಅಂಕಿ ಸಂಖ್ಯೆಗೆ ತಾಳ-ಮೇಳವೇ ಇಲ್ಲ ಎಂದು ಟೀಕಿಸಿದರು.

    ಜೆಡಿಎಸ್ ವಿರುದ್ಧ ವಾಗ್ದಾಳಿ:
    ಕಾಂಗ್ರೆಸ್ ಬಳಿಕ ಜೆಡಿಎಸ್ ವಿರುದ್ಧವೂ ವಾಗ್ದಾಳಿ ನಡೆಸಿದ ಶಾಸಕರು, ಜೆಡಿಎಸ್ ಶಾಸಕರು ಹಾಗೂ ನಾಯಕರು ಪಕ್ಷದ ವರಿಷ್ಠ ಎಚ್.ಡಿ.ದೇವೇಗೌಡ ಅವರ ಕುಟುಂಬದಿಂದ ಹೊರಗೆ ಬರುವ ಪರಿಸ್ಥಿತಿಯಲ್ಲಿ ಇಲ್ಲ. ಒಂದು ವೇಳೆ ಹೊರಗೆ ಬಂದರೆ ಅವರನ್ನು ಮುಗಿಸಿ ಬಿಡುತ್ತಾರೆ. ದೇವೇಗೌಡ ಅವರು ಯಾರ ತಲೆಯ ಮೇಲೆ ಕೈ ಇಡುತ್ತಾರೋ ಅವರ ಕಥೆ ಮುಗಿದಂತೆ. ಇಂತಹ ದುರಂತಕ್ಕೆ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ, ಜೆ.ಎಚ್.ಪಟೇಲ್, ಬೈರೇಗೌಡ, ನಾಗೇಗೌಡ, ಎಸ್.ಆರ್. ಬೊಮ್ಮಾಯಿ ಅವರನ್ನು ಸೇರಿದಂತೆ ಅನೇಕ ನಾಯಕರು ಬಲಿಯಾಗಿದ್ದಾರೆ. ಈಗಲೂ ದೇವೇಗೌಡ ಅವರ ಕುಟುಂಬಕ್ಕೆ ಜೆಡಿಎಸ್ ಪಕ್ಷದ ನಾಯಕರು ನಿಷ್ಟೇ ತೋರಬೇಕು. ಹೀಗಾಗಿ ಅವರು ಕುಮಾರಸ್ವಾಮಿ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ ಎಂದರು.

    ಮುಖ್ಯಮಂತ್ರಿ ಸ್ಥಾನದಲ್ಲಿರುವ ಎಚ್.ಡಿ.ಕುಮಾರಸ್ವಾಮಿ ಅವರು ದಂಗೆಗೆ ಪ್ರಚೋದನೆ ನೀಡುವುದು ಸರಿಯಲ್ಲ. ಕುಮಾರಸ್ವಾಮಿ ಅವರನ್ನು ಸಮೀಪದಿಂದ ನೋಡಿದ್ದೇನೆ. ಅವರು ಸುಳ್ಳು ಕಾಗದ ಪತ್ರಗಳನ್ನು ಸೃಷ್ಟಿಸಿ, ಇತರರನ್ನು ಹೆದರಿಸುತ್ತಾರೆ. ಈಗಾಗಲೇ ಅವರ ಸುತ್ತ ಅನೇಕ ಹಗರಣಗಳಿದ್ದು, ಜಂತಕಲ್ ಮೈನಿಂಗ್ ಪ್ರಕರಣ ಸುಪ್ರೀಂ ಕೋರ್ಟ್ ನಲ್ಲಿದೆ. ಸದ್ಯದಲ್ಲಿಯೇ ಕುಮಾರಸ್ವಾಮಿ ಜೈಲು ಸೇರಲಿದ್ದಾರೆ ಎಂದು ಯತ್ನಾಳ್ ಭವಿಷ್ಯ ನುಡಿದರು.

    ನೀವು ಹೇಗೆ ಮಾತನಾಡಿದಂತೆ ನಾವು ಹಾಗೇ ಮಾತನಾಡುತ್ತೇವೆ. ನಿಮ್ಮ ಹೇಳಿಕೆಗಳಿಗೆ ಯಾವ ಶೈಲಿಯಲ್ಲಿ ಟಾಂಗ್ ಕೊಡಬಹುದು ಅಂತ ನಮಗೂ ಗೊತ್ತಿದೆ. ನಿಮಗೆ ನೋವಾಗಿದ್ದರೆ, ಬೇಜಾರಾಗಿದ್ದರೆ ರಾಜೀನಾಮೆ ಕೊಟ್ಟು ಮನೆಗೆ ಹೋಗಲಿ ಎಂದು ಎಚ್.ಡಿ.ಕುಮಾರಸ್ವಾಮಿ ಅವರ ವಿರುದ್ಧ ಕಿಡಿಕಾರಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಮಹಿಳಾ ಮೀಸಲಾತಿ ವಿಧೇಯಕ – ಮೋದಿಗೆ ರಾಹುಲ್ ಗಾಂಧಿ ಸವಾಲ್

    ಮಹಿಳಾ ಮೀಸಲಾತಿ ವಿಧೇಯಕ – ಮೋದಿಗೆ ರಾಹುಲ್ ಗಾಂಧಿ ಸವಾಲ್

    ನವದೆಹಲಿ: ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಮಹಿಳಾ ಮೀಸಲಾತಿ ವಿಧೇಯಕಕ್ಕೆ ಈ ಬಾರಿಯ ಚಳಿಗಾಲದ ಅಧಿವೇಶನದಲ್ಲಿ ಕಾಂಗ್ರೆಸ್ ಬೇಷರತ್ ಬೆಂಬಲ ನೀಡುತ್ತದೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ತಿಳಿಸಿದ್ದಾರೆ.

    ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿರುವ ಕುರಿತು ಟ್ವೀಟ್ ಮಾಡಿ ಈ ಕುರಿತು ಖಚಿತ ಪಡಿಸಿದ ರಾಹುಲ್ ಗಾಂಧಿ, ನಮ್ಮ ಪ್ರಧಾನಿಗಳು ಮಹಿಳಾ ಸಬಲೀಕರಣಕ್ಕೆ ಒತ್ತು ನೀಡೋದಾಗಿ ಹೇಳಿಕೊಳ್ಳುತ್ತಾರೆ. ಅದಕ್ಕೆ ಈಗ ಸಮಯ ಬಂದಿದೆ. ಈ ಬಾರಿಯ ಮಾನ್ಸೂನ್ ಅಧಿವೇಶನದಲ್ಲಿ ಮಹಿಳಾ ಮೀಸಲಾತಿ ಬಿಲ್ ಪಾಸ್ ಮಾಡಿ ಎಂದು ಹೇಳಿದ್ದಾರೆ.

    ಪ್ರಧಾನಿ ಮೋದಿ ಅವರಿಗೆ ಬರೆದಿರುವ ಪತ್ರವನ್ನು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ರಾಹುಲ್ ಗಾಂಧಿ ಪೋಸ್ಟ್ ಮಾಡಿದ್ದಾರೆ. ಅಂದ ಹಾಗೆ, 2010 ರಲ್ಲಿ ಈ ಮಸೂದೆ ರಾಜ್ಯಸಭೆಯಲ್ಲಿ ಪಾಸ್ ಆಗಿದ್ದರೂ 8 ವರ್ಷದಿಂದ ಲೋಕಸಭೆಯಲ್ಲಿ ನೆನೆಗುದಿಗೆ ಬಿದ್ದಿದೆ.

    ಕಳೆದ ಎರಡು ದಿನಗಳ ಹಿಂದೆ ಉತ್ತರ ಪ್ರದೇಶದ ಅಜಂಪುರದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಿ ಮಾತನಾಡಿದ್ದ ಪ್ರಧಾನಿ ಮೋದಿ, ಕಾಂಗ್ರೆಸ್ ಪಕ್ಷ ಮುಸ್ಲಿಮರಿಗೆ ಮಾತ್ರ ಸೀಮಿತವಾಗಿದ್ದರೆ ಅದು ಅವರಿಗೆ ಬಿಟ್ಟಿದ್ದು. ಆದರೆ ಕಾಂಗ್ರೆಸ್ ಮುಸ್ಲಿಂ ಪುರುಷರಿಗೆ ಮಾತ್ರ ಸೀಮಿತವಾಗಿದೆಯಾ? ಏಕೆಂದರೆ ತ್ರಿವಳಿ ತಲಾಖ್, ನಿಖಾ ಹಲಾಲ ವಿರುದ್ಧ ಮುಸ್ಲಿಂ ಮಹಿಳೆಯರು ಹೋರಾಟ ನಡೆಸುವ ಸಂದರ್ಭದಲ್ಲಿ ನೀವು ಅವರ ಪರ ನಿಲ್ಲಲಿಲ್ಲ ಎಂದು ಆರೋಪಿಸಿದ್ದರು. ಸದ್ಯ ಪ್ರಧಾನಿ ಮೋದಿ ಅವರು ಕಾಂಗ್ರೆಸ್ ವಿರುದ್ಧದ ಟೀಕೆಗೆ ಉತ್ತರವಾಗಿ ಮಹಿಳಾ ಮೀಸಲಾತಿ ವಿಧೇಯಕ ಜಾರಿಗೆ ಬೆಂಬಲ ನೀಡುವುದಾಗಿ ಕಾಂಗ್ರೆಸ್ ಹೇಳಿದೆ.

  • ಜವಾರಿ ಕೋಳಿ ತಿಂದು ದೇವಸ್ಥಾನಕ್ಕೆ ಹೋಗಿದ್ದಾರಾ ರಾಹುಲ್?- ಎಸ್ ಆರ್ ಪಾಟೀಲ್ ಸ್ಪಷ್ಟನೆ ನೀಡಿದ್ದು ಹೀಗೆ

    ಜವಾರಿ ಕೋಳಿ ತಿಂದು ದೇವಸ್ಥಾನಕ್ಕೆ ಹೋಗಿದ್ದಾರಾ ರಾಹುಲ್?- ಎಸ್ ಆರ್ ಪಾಟೀಲ್ ಸ್ಪಷ್ಟನೆ ನೀಡಿದ್ದು ಹೀಗೆ

    ಬೆಂಗಳೂರು: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಕನಕಗಿರಿಯಲ್ಲಿರೋ ದೇವಸ್ಥಾನಕ್ಕೆ ಜವಾರಿ ಕೋಳಿ ತಿಂದು ತೆರಳಿದ್ದಾರೆ ಎಂಬ ಬಿಎಸ್ ಯಡಿಯೂರಪ್ಪ ಅವರ ಆರೋಪಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಎಸ್ ಆರ್ ಪಾಟೀಲ್ ಪ್ರತಿಕ್ರಿಯಿಸಿದ್ದಾರೆ.

    ಈ ಸಂಬಂಧ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರು ಮೊದಲು ಹಿಂದುತ್ವವನ್ನು ಸರಿಯಾಗಿ ಅರ್ಥ ಮಾಡಿಕೊಳ್ಳಬೇಕು. ಹಿಂದೂ ಧರ್ಮಕ್ಕೂ ಪರಧರ್ಮ ಸಹಿಷ್ಣುತೆ ಎಂಬ ಅನೇಕ ವಿಚಾರಗಳನ್ನು ನಾವು ಅರ್ಥಮಾಡಿಕೊಳ್ಳಬೇಕು. ಅವರ ಆರೋಪ ಶುದ್ಧ ಸುಳ್ಳಾಗಿದೆ. ನಾನು ಅವರ ಜೊತೆನೇ ಇದ್ದೇನೆ ಅಂದ್ರು.

    ರಾಹುಲ್ ಗಾಂಧಿ ಅವರು ಕರ್ನಾಟಕಕ್ಕೆ ಬಂದು ಇಂದು 4ನೇ ದಿನವಾಗಿದೆ. ಹೀಗಾಗಿ ಅವರ ಆಹಾರವೇನು ಎಂದು ನನಗೆ ತಿಳಿದಿದೆ. ಯಾಕಂದ್ರೆ ನಾನು ಮೊನ್ನೆಯಿಂದ ಅವರ ಜೊತೆ ಇದ್ದೇನೆ. ಹೀಗಿರುವಾಗ ಒಬ್ಬರು ರಾಜ್ಯದ ಮಾಜಿ ಮುಖ್ಯಮಂತ್ರಿಯಾಗಿದ್ದ ಬಿಎಸ್ ಯಡಿಯೂರಪ್ಪನವರು ಈ ರೀತಿ ಟ್ವೀಟ್ ಮಾಡುವುದು ಸರಿಯಲ್ಲ ಅಂತ ಹೇಳಿದ್ರು.

    ಕಾಂಗ್ರೆಸ್ ನವರದ್ದು ಮಜವಾದ ಎಂಬ ಯಡಿಯೂರಪ್ಪ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಸಮಾಜವಾದವನ್ನು ನಾವು ಭಾರತೀಯ ಜನತಾ ಪಕ್ಷದವರಿಂದ ಕಲಿಯಬೇಕಾಗಿಲ್ಲ. ನಮ್ಮಿಂದ ಅವರು ಕಲಿಯಬೇಕು. ಎಲ್ಲಾ ಜಾತಿ-ಧರ್ಮದವರನ್ನು ಒಂದು ಮಾಡಿಕೊಂಡು ನಾವು ಹೋಗುತ್ತಿದ್ದೇವೆ. ಹೀಗಾಗಿ ಅವರು ನಮ್ಮಿಂದ ಕಲಿಯಬೇಕು ಎಂದು ತಿಳಿಸಿದ್ದಾರೆ.

    ರಾಹುಲ್ ಗಾಂಧಿಯವರು ದೇವಾಲಯಕ್ಕೆ ಹೋಗುವಾಗ ಪರಿಶುದ್ಧ ಮನಸ್ಸು ಹಾಗೂ ನಿಷ್ಠೆಯಿಂದ ಹೋಗಿದ್ದಾರೆ. ಅಂದ್ರೆ ನಿಜವಾದ ದೈವಭಕ್ತಿಯಿಂದಲೇ ಹೋಗಿದ್ದಾರೆ. ಅವರು ಅಲ್ಲಿಗೆ ಗಿಮಿಕ್ ಮಾಡಲು ಹೋಗಿಲ್ಲ. ನಿಜವಾಗ್ಲೂ ದೇವರ ಮೇಲೆ ನಂಬಿಕೆ, ವಿಶ್ವಾಸದಿಂದಲೇ ಅವರು ದೇವಸ್ಥಾನಕ್ಕೆ ತೆರಳಿದ್ದಾರೆ ಎಂದು ಪಾಟೀಲ್ ಸ್ಪಷ್ಟಪಡಿಸಿದ್ದಾರೆ.

    ಈ ಹಿಂದೆ ಸಿಎಂ ಸಿದ್ದರಾಮಯ್ಯ ಅವರು ಧರ್ಮಸ್ಥಳಕ್ಕೆ ಮೀನು ತಿಂದು ಹೋಗಿದ್ದರು. ಇದೀಗ ರಾಹುಲ್ ಗಾಂಧಿ ಅವರು ಜವಾರಿ ಕೋಳಿ ತಿಂದು ಕೊಪ್ಪಳ ಜಿಲ್ಲೆಯಲ್ಲಿರೋ ಕನಕಗಿರಿಯ ನರಸಿಂಹಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಈ ಮೂಲಕ ಕಾಂಗ್ರೆಸ್ ಅವರು ಹಿಂದೂಗಳ ಭಾವನೆಗೆ ಧಕ್ಕೆ ತರುತ್ತಿದ್ದಾರೆ. ಎಲ್ಲರನ್ನೂ ಸಮನಾಗಿ ಕಾಣುವುದು ಸಮಾಜವಾದ, ನಿಮ್ಮದು ಮಜವಾದ ಅಂತ ಯಡಿಯೂರಪ್ಪ ಟ್ವೀಟ್ ಮಾಡಿ ವ್ಯಂಗ್ಯವಾಡಿದ್ದರು.

  • ರಾಹುಲ್ ಗಾಂಧಿ ಕೊನೆ ದಿನದ ರಾಜ್ಯ ಪ್ರವಾಸ- ನಿನ್ನೆ ದರ್ಗಾ, ಇಂದು ಅನುಭವ ಮಂಟಪಕ್ಕೆ ಭೇಟಿ

    ರಾಹುಲ್ ಗಾಂಧಿ ಕೊನೆ ದಿನದ ರಾಜ್ಯ ಪ್ರವಾಸ- ನಿನ್ನೆ ದರ್ಗಾ, ಇಂದು ಅನುಭವ ಮಂಟಪಕ್ಕೆ ಭೇಟಿ

    ಬೀದರ್: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರ ರಾಜ್ಯ ಪ್ರವಾಸ ಇಂದು ಅಂತ್ಯವಾಗಲಿದೆ. ಇಂದು ರಾಹುಲ್ ಗಾಂಧಿ ಕಲಬುರ್ಗಿಯಲ್ಲಿ ದಿವಂಗತರಾದ ಇಬ್ಬರು ಕಾಂಗ್ರೆಸ್ ನಾಯಕರುಗಳ ಮನೆಗಳಿಗೆ ಭೇಟಿ ಕೊಡಲಿದ್ದಾರೆ. ಇದನ್ನೂ ಓದಿ:  ರಾಹುಲ್ ಪ್ರಧಾನಿ ಆಗೋವರೆಗೆ ಚಪ್ಪಲಿಯೇ ಹಾಕಲ್ಲ – ಅಭಿಮಾನಿಯಿಂದ ಶಪಥ

    ಮಾಜಿ ಸಿಎಂ ಎನ್ ಧರ್ಮಸಿಂಗ್ ಹಾಗೂ ಮಾಜಿ ಸಚಿವ ಖಮರುಲ್ ಇಸ್ಲಾಮ್ ರವರ ಮನೆಗಳಿಗೆ ಇಂದು ಬೆಳಗ್ಗೆ ಭೇಟಿ ಕೊಡಲಿರುವ ರಾಹುಲ್ ಗಾಂಧಿ ಉಭಯ ನಾಯಕರ ಕುಟುಂಬ ಸದಸ್ಯರುಗಳಿಗೆ ಸಾಂತ್ವಾನ ಹೇಳಲಿದ್ದಾರೆ. ಬಳಿಕ ಕಲಬುರ್ಗಿಯ ವಾಣಿಜ್ಯೋದ್ಯಮಿಗಳ ಜೊತೆ ರಾಹುಲ್ ಗಾಂಧಿ ಸಂವಾದ ನಡೆಸಲಿದ್ದಾರೆ. ಆ ಬಳಿಕ ಮಧ್ಯಾಹ್ನಕ್ಕೆ ರಾಹುಲ್ ಹೆಲಿಕಾಪ್ಟರ್ ಮೂಲಕ ಬೀದರ್ ಜಿಲ್ಲೆಯ ಬಸವಕಲ್ಯಾಣಕ್ಕೆ ತೆರಳಲಿದ್ದಾರೆ. ಇದನ್ನೂ ಓದಿ: ಭಾಷಣದಲ್ಲಿ ಮಹದಾಯಿ ಬಗ್ಗೆ ಒಂದೇ ಒಂದು ಮಾತು ಎತ್ತಲಿಲ್ಲ- ರಾಹುಲ್ ವಿರುದ್ಧ ಶೆಟ್ಟರ್ ವಾಗ್ದಾಳಿ

    ಬಸವಕಲ್ಯಾಣದಲ್ಲಿ ರಾಹುಲ್ ಗಾಂಧಿ ಅನುಭವ ಮಂಟಪಕ್ಕೆ ಭೇಟಿ ಕೊಡಲಿದ್ದಾರೆ. ಇಡೀ ದಿನ ಕಾಂಗ್ರೆಸ್ ನ ರಾಜ್ಯ ನಾಯಕರುಗಳು ರಾಹುಲ್ ಗಾಂಧಿಗೆ ಸಾಥ್ ನೀಡಲಿದ್ದಾರೆ. ಮದ್ಯಾಹ್ನ 1 ಗಂಟೆ ನಂತರ ರಾಹುಲ್ ಗಾಂಧಿ ವಿಶೇಷ ವಿಮಾನದ ಮೂಲಕ ದೆಹಲಿಗೆ ವಾಪಸ್ಸಾಗಲಿದ್ದಾರೆ ಎಂಬುದಾಗಿ ತಿಳಿದುಬಂದಿದೆ. ಇದನ್ನೂ ಓದಿ:  ಒಂದೇ ದಿನದಲ್ಲಿ 5 ವಿಧಾನಸಭಾ ಕ್ಷೇತ್ರಗಳಲ್ಲಿ ರಾಹುಲ್ ಗಾಂಧಿ ಪ್ರವಾಸ