Tag: Aiden Markram

  • ಟೀಂ ಇಂಡಿಯಾ ವಿರುದ್ಧದ 3 ಸರಣಿಗಳಿಗೆ ದಕ್ಷಿಣ ಆಫ್ರಿಕಾ ತಂಡ ಪ್ರಕಟ – ಏಡನ್‌ ಮಾರ್ಕ್ರಮ್‌ ನಾಯಕ

    ಟೀಂ ಇಂಡಿಯಾ ವಿರುದ್ಧದ 3 ಸರಣಿಗಳಿಗೆ ದಕ್ಷಿಣ ಆಫ್ರಿಕಾ ತಂಡ ಪ್ರಕಟ – ಏಡನ್‌ ಮಾರ್ಕ್ರಮ್‌ ನಾಯಕ

    ಪ್ರಿಟೋರಿಯಾ: ಭಾರತ (Team India) ವಿರುದ್ಧದ ಮೂರು ಸರಣಿಗಳಿಗೆ ದಕ್ಷಿಣ ಆಫ್ರಿಕಾ (South Africa) ತಂಡ ಪ್ರಕಟಿಸಿದ್ದು, ಟಿ20 ಮತ್ತು ಏಕದಿನ ಸರಣಿಯಿಂದ ನಾಯಕ ತೆಂಬಾ ಬವುಮಾ ಮತ್ತು ಕಗಿಸೊ ರಬಾಡ ಅವರಿಗೆ ವಿಶ್ರಾಂತಿ ನೀಡಲಾಗಿದೆ. ಈ ಇಬ್ಬರೂ ಆಟಗಾರರು ಭಾರತ ವಿರುದ್ಧದ ಟೆಸ್ಟ್ ಸರಣಿಯನ್ನು ಆಡಲಿದ್ದಾರೆ. ಇವರ ಅನುಪಸ್ಥಿತಿಯಲ್ಲಿ ತಂಡವನ್ನು ಏಡನ್‌ ಮಾರ್ಕ್ರಮ್‌ (Aiden Markram) ಮುನ್ನೆಡೆಸಲಿದ್ದಾರೆ.

    ಟೀಂ ಇಂಡಿಯಾ ಹಾಗೂ ದಕ್ಷಿಣ ಆಫ್ರಿಕಾ ತಂಡಗಳ ಮುಖಾಮುಖಿ 3 ಪಂದ್ಯಗಳ ಟಿ20 ಸರಣಿಯೊಂದಿಗೆ ಆರಂಭವಾಗಲಿದೆ. ಬಳಿಕ ನಡೆಯಲಿರುವ ಏಕದಿನ ಸರಣಿಯಿಂದ ಖಾಯಂ ನಾಯಕ ತೆಂಬಾ ಬವುಮಾಗೆ ವಿಶ್ರಾಂತಿ ನೀಡಲಾಗಿದ್ದು, ಅವರ ಸ್ಥಾನವನ್ನು ಏಡನ್‌ ಮಾರ್ಕ್ರಮ್‌ ತುಂಬಲಿದ್ದಾರೆ. ಇದನ್ನೂ ಓದಿ: IND vs AUS T20I: ಕೊನೆ ಪಂದ್ಯದಲ್ಲಿ ಭಾರತಕ್ಕೆ ಗೆಲುವು; 4-1 ಅಂತರದಿಂದ ಸರಣಿ ಕೈವಶ

    ಮಾಕ್ರ್ರಾಮ್ ಈ ಹಿಂದೆಯೂ ತಂಡದ ನಾಯಕತ್ವ ವಹಿಸಿಕೊಂಡಿದ್ದರು. ಉಳಿದಂತೆ ಟಿ20 ಸರಣಿಗೆ ಆಯ್ಕೆಯಾಗಿರುವ ಜೆರಾಲ್ಡ್ ಕೊಯೆಟ್ಜಿ, ಮಾರ್ಕೊ ಯಾನ್ಸನ್ ಮತ್ತು ಲುಂಗಿ ಎನ್‍ಗಿಡಿಗೆ ಮೂರನೇ ಟಿ20 ಮತ್ತು ಏಕದಿನ ಸರಣಿಯಿಂದ ಕೋಕ್ ನೀಡಲಾಗಿದೆ.

    ಮೂರು ಸ್ವರೂಪಗಳಿಗೆ ದಕ್ಷಿಣ ಆಫ್ರಿಕಾದ ತಂಡ
    ಟಿ20 ತಂಡ: ಏಡನ್‌ ಮಾರ್ಕ್ರಮ್‌ (ನಾಯಕ), ಒಟ್ನೀಲ್ ಬಾರ್ಟ್‍ಮನ್, ಮ್ಯಾಥ್ಯೂ ಬ್ರಿಟ್ಜ್ಕೆ, ನಾಂಡ್ರೆ ಬರ್ಗರ್, ಜೆರಾಲ್ಡ್ ಕೋಟ್ಜಿ, ಡೊನೊವನ್ ಫೆರೀರಾ, ರೀಜಾ ಹೆಂಡ್ರಿಕ್ಸ್, ಮಾರ್ಕೊ ಯಾನ್ಸೆನ್, ಡೇವಿಡ್ ಮಿಲ್ಲರ್, ಹೆನ್ರಿಚ್ ಕ್ಲಾಸೆನ್, ಕೇಶವ್ ಮಹಾರಾಜ್, ಆಂಡಿಲೆ ಫೆಹ್ಲುಕ್ವಾಯೊ, ತಬ್ರೈಜ್ ಶಮ್ಸಿ, ಟ್ರಿಸ್ಟಾನ್ ಸ್ಟಬ್ಸ್, ಲಿಜಾದ್ ವಿಲಿಯಮ್ಸ್. ಲುಂಗಿ ಎನ್‍ಗಿಡಿ.

    ಏಕದಿನ ತಂಡ: ಏಡನ್‌ ಮಾರ್ಕ್ರಮ್‌ (ನಾಯಕ), ಒಟ್ನಿಯೆಲ್ ಬಾರ್ಟ್‍ಮ್ಯಾನ್, ಟೋನಿ ಡಿ ಜೊರ್ಜಿ, ನಾಂಡ್ರೆ ಬರ್ಗರ್, ರೀಜಾ ಹೆಂಡ್ರಿಕ್ಸ್, ಹೆನ್ರಿಕ್ ಕ್ಲಾಸೆನ್, ಕೇಶವ್ ಮಹಾರಾಜ್, ಮಿಹ್ಲಾಲಿ ಎಂಪೊಂಗ್ವಾನಾ, ಡೇವಿಡ್ ಮಿಲ್ಲರ್, ವಿಯಾನ್ ಮುಲ್ಡರ್, ಆಂಡಿಲ್ ಫೆಹ್ಲುಕ್ವಾಯೊ, ತಬ್ರೈಜ್ ಶಮ್ಸಿ, ರಾಸ್ಸಿ ವ್ಯಾನ್ ಡೆರ್ ಡುಸ್ಸೆನ್, ಕೈಲ್ ವೆರ್ರೆನ್, ಲಿಜಾದ್ ವಿಲಿಯಮ್ಸ್.

    ಟೆಸ್ಟ್ ತಂಡ: ತೆಂಬಾ ಬವುಮಾ (ನಾಯಕ), ಡೇವಿಡ್ ಬೆಡಿಂಗ್‍ಹ್ಯಾಮ್, ಆಂಡ್ರೆ ಬರ್ಗರ್, ಜೆರಾಲ್ಡ್ ಕೋಟ್ಜಿ, ಟೋನಿ ಡಿ ಜೊರ್ಜಿ, ಡೀನ್ ಎಲ್ಗರ್, ಮಾರ್ಕೊ ಜಾನ್ಸೆನ್, ಕೇಶವ್ ಮಹಾರಾಜ್, ಏಡನ್‌ ಮಾರ್ಕ್ರಮ್‌, ವಿಯಾನ್ ಮುಲ್ಡರ್, ಕೇಶವ್ ಮಹಾರಾಜ್, ಲುಂಗಿ ಎನ್ಗಿಡಿ, ಕೀಗನ್ ಪೀಟರ್ಸನ್, ಕಗಿಸೊ ರಬಾಡ, ಟ್ರಿಸ್ಟಾನ್ ಸ್ಟಬ್ಸ್, ಕೈಲ್ ವೆರೆನ್. ಇದನ್ನೂ ಓದಿ: ಐಪಿಎಲ್ 2024 ಮಿನಿ ಹರಾಜಿನ ಅಧಿಕೃತ ದಿನಾಂಕ ಪ್ರಕಟ – 1166 ಆಟಗಾರರು ನೋಂದಣಿ

  • ICC World Cup: 20 ವರ್ಷಗಳ ಬಳಿಕ ಟೀಂ ಇಂಡಿಯಾದ ಸತತ 8ನೇ ಗೆಲುವು

    ICC World Cup: 20 ವರ್ಷಗಳ ಬಳಿಕ ಟೀಂ ಇಂಡಿಯಾದ ಸತತ 8ನೇ ಗೆಲುವು

    ಬೆಂಗಳೂರು: ಐಸಿಸಿ ವಿಶ್ವಕಪ್ (ICC World Cup) ಕ್ರಿಕೆಟ್ ಟೂರ್ನಿಯಲ್ಲಿ ಭಾರತ 20 ವರ್ಷಗಳ ಬಳಿಕ ಸತತ 8 ಏಕದಿನ ಪಂದ್ಯಗಳನ್ನು ಗೆದ್ದಿದೆ. ಈ ಹಿಂದೆ ಭಾರತ ತಂಡವು 2003ರಲ್ಲಿ ಸತತ 8 ಪಂದ್ಯಗಳನ್ನು ಗೆದ್ದಿತ್ತು.

    ಈ ಬಾರಿಯ ವಿಶ್ವಕಪ್ ಪಂದ್ಯಾವಳಿಯಲ್ಲಿ ಟೀಂ ಇಂಡಿಯಾ (Team India) ಇದುವರೆಗೆ 8 ಪಂದ್ಯಗಳನ್ನು ಆಡಿದ್ದು, 8 ಪಂದ್ಯಗಳನ್ನು ಗೆಲ್ಲುವ ಮೂಲಕ ಟೂರ್ನಿಯಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದೆ.

    2023ರ ವಿಶ್ವಕಪ್ ನಲ್ಲಿ ಟೀಂ ಇಂಡಿಯಾ ‘ಅಷ್ಟ’ಜಯ!
    ಮ್ಯಾಚ್ 1: ಆಸ್ಟ್ರೇಲಿಯಾ ವಿರುದ್ಧ 6 ವಿಕೆಟ್ ಗೆಲುವು
    ಮ್ಯಾಚ್ 2: ಆಫ್ಘಾನಿಸ್ತಾನ ವಿರುದ್ಧ 8 ವಿಕೆಟ್ ಗೆಲುವು
    ಮ್ಯಾಚ್ 3: ಪಾಕಿಸ್ತಾನ ವಿರುದ್ಧ 7 ವಿಕೆಟ್ ಗೆಲುವು
    ಮ್ಯಾಚ್ 4: ಬಾಂಗ್ಲಾದೇಶದ ವಿರುದ್ಧ 7 ವಿಕೆಟ್ ಗೆಲುವು
    ಮ್ಯಾಚ್ 5: ನ್ಯೂಜಿಲೆಂಡ್ ವಿರುದ್ಧ 4 ವಿಕೆಟ್ ಗೆಲುವು
    ಮ್ಯಾಚ್ 6: ಇಂಗ್ಲೆಂಡ್ ವಿರುದ್ಧ 100 ರನ್ ಗೆಲುವು
    ಮ್ಯಾಚ್ 7: ಶ್ರೀಲಂಕಾ ವಿರುದ್ಧ 302 ರನ್ ಗೆಲುವು
    ಮ್ಯಾಚ್ 8: ದಕ್ಷಿಣ ಆಫ್ರಿಕಾ ವಿರುದ್ಧ 243 ರನ್ ಗೆಲುವು

    ಒನ್ ಡೇ ಮ್ಯಾಚಲ್ಲಿ ದಕ್ಷಿಣ ಆಫ್ರಿಕಾದ ಬೃಹತ್ ಸೋಲು: ಏಕದಿನ ಅಂತಾರಾಷ್ಟ್ರೀಯ ಸರಣಿಯಲ್ಲಿ (Odi Series) ಇಂದಿನ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ 243 ರನ್ ಗಳಿಂದ ಸೋತಿದೆ. ಇದು ದಕ್ಷಿಣ ಆಫ್ರಿಕಾದ ಬೃಹತ್ ಅಂತರದ ಸೋಲು ಎನ್ನುವುದು ಇಲ್ಲಿ ಗಮನಾರ್ಹ. ಇದಕ್ಕೂ ಮುನ್ನ 2002ರಲ್ಲಿ ಪಾಕಿಸ್ತಾನ ತಂಡ ದಕ್ಷಿಣ ಆಫ್ರಿಕಾ ತಂಡವನ್ನು 182 ರನ್ ಗಳಿಂದ ಸೋಲಿಸಿತ್ತು. ಭಾರತ ತಂಡ ಇದಕ್ಕೂ ಮುನ್ನ 2010ರಲ್ಲಿ 153 ರನ್‌ಗಳ ಅಂತರದಿಂದ ಸೋಲಿಸಿದ್ದೇ ಟೀಂ ಇಂಡಿಯಾ ಪಾಲಿನ ದಾಖಲೆಯಾಗಿತ್ತು.

    2015ರ ವಿಶ್ವಕಪ್ ಪಂದ್ಯಾವಳಿಯಲ್ಲಿ ಮೆಲ್ಬರ್ನ್ ನಲ್ಲಿ ನಡೆದ ಪಂದ್ಯದಲ್ಲಿ ಭಾರತ ತಂಡ 130 ರನ್ ಗಳಿಂದ ಸೋಲಿಸಿದ್ದೇ ವಿಶ್ವಕಪ್ ನ ದಾಖಲೆಯಾಗಿತ್ತು.

    ವಿಶ್ವಕಪ್ ನಲ್ಲಿ ಆಫ್ರಿಕಾ ಕನಿಷ್ಠ ಮೊತ್ತ!
    ಇದೇ ಮೊದಲ ಬಾರಿಗೆ ದಕ್ಷಿಣ ಆಫ್ರಿಕಾ ತಂಡ ವಿಶ್ವಕಪ್ ಪಂದ್ಯದಲ್ಲಿ 100 ರನ್ ಗಿಂತಲೂ ಕಡಿಮೆ ಮೊತ್ತಕ್ಕೆ ಆಲೌಟ್ ಆಗಿದೆ. ಈ ಹಿಂದೆ ಆಸ್ಟ್ರೇಲಿಯಾ ತಂಡವು 2007ರಲ್ಲಿ ದಕ್ಷಿಣ ಆಫ್ರಿಕಾವನ್ನು 149 ರನ್ ಗಳಿಗೆ ಆಲೌಟ್ ಮಾಡಿತ್ತು. ಇಂದು ಕೋಲ್ಕತ್ತಾದ ಈಡನ್ ಗಾರ್ಡನ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ದ.ಆಫ್ರಿಕಾ 83 ರನ್ ಗೆ ಆಲೌಟ್ ಆಗಿದೆ. ಈ ಹಿಂದೆ ಎರಡು ಬಾರಿ ಇಂಗ್ಲೆಂಡ್ ವಿರುದ್ಧ 83 ರನ್ ಗೆ ದಕ್ಷಿಣ ಆಫ್ರಿಕಾ ಆಲೌಟ್ ಆಗಿತ್ತು. 1993ರಲ್ಲಿ ಆಸ್ಟ್ರೇಲಿಯಾ ವಿರುದ್ಧ 69 ರನ್ ಗಳಿಗೆ ಆಲೌಟ್ ಆಗಿದ್ದೇ ದಕ್ಷಿಣ ಆಫ್ರಿಕಾ ತಂಡದ ಏಕದಿನ ಇತಿಹಾಸದ ಅತಿ ಕಡಿಮೆ ರನ್ ದಾಖಲೆಯಾಗಿದೆ.

  • ಜಡೇಜಾ ಸ್ಪಿನ್‌ ಜಾದುಗೆ ಮಕಾಡೆ ಮಲಗಿದ ಹರಿಣರು – ಭಾರತಕ್ಕೆ 243 ರನ್‌ಗಳ ಭರ್ಜರಿ ಜಯ

    ಜಡೇಜಾ ಸ್ಪಿನ್‌ ಜಾದುಗೆ ಮಕಾಡೆ ಮಲಗಿದ ಹರಿಣರು – ಭಾರತಕ್ಕೆ 243 ರನ್‌ಗಳ ಭರ್ಜರಿ ಜಯ

    ಕೋಲ್ಕತ್ತಾ: ವಿರಾಟ್‌ ಕೊಹ್ಲಿ (Virat Kohli), ಶ್ರೇಯಸ್‌ ಅಯ್ಯರ್‌ ಶತಕದ ಜೊತೆಯಾಟ ಹಾಗೂ ರವೀಂದ್ರ ಜಡೇಜಾ (Ravindra Jadeja) ಸ್ಪಿನ್‌ ಜಾದು ನೆರವಿನಿಂದ ಟೀಂ ಇಂಡಿಯಾ ಬಲಿಷ್ಠ ದಕ್ಷಿಣ ಆಫ್ರಿಕಾ ತಂಡದ ವಿರುದ್ಧ 243 ರನ್‌ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ +2.456 ರನ್‌ರೇಟ್‌ನೊಂದಿಗೆ ಅಗ್ರಸ್ಥಾನ ಉಳಿಸಿಕೊಂಡಿದೆ. ಆದ್ರೆ ಕೇವಲ 83 ರನ್‌ಗಳಿಗೆ ಮಕಾಡೆ ಮಲಗಿದ ದಕ್ಷಿಣ ಆಫ್ರಿಕಾ ತಂಡ ಕೇವಲ 83 ರನ್‌ಗಳಿಗೆ ಆಲೌಟ್‌ ಆಗುವ ಮೂಲಕ ವಿಶ್ವಕಪ್‌ (ICC Cricket World Cup) ಇತಿಹಾಸದಲ್ಲೇ ಅತ್ಯಂತ ಕೆಟ್ಟ ದಾಖಲೆ ಬರೆದಿದೆ.

    ಇಲ್ಲಿನ ಕೋಲ್ಕತ್ತಾ ಈಡನ್‌ ಗಾರ್ಡನ್‌ನಲ್ಲಿ ನಡೆದ ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ 326 ರನ್‌ ಗಳಿಸಿತ್ತು. 327 ರನ್‌ ಗುರಿ ಬೆನ್ನತ್ತಿದ್ದ ದಕ್ಷಿಣ ಆಫ್ರಿಕಾ (South Africa) ತಂಡ 83 ರನ್‌ಗಳಿಗೆ ಆಲೌಟ್‌ ಆಗಿ ಮಕಾಡೆ ಮಲಗಿತು. ಈ ಪಂದ್ಯದಲ್ಲಿ ಹರಿಣರ ವಿರುದ್ಧ ಸ್ಪಿನ್‌ ದಾಳಿ ನಡೆಸಿದ ಜಡೇಜಾ 9 ಓವರ್‌ನಲ್ಲಿ 33 ರನ್‌ ಬಿಟ್ಟುಕೊಟ್ಟು 5 ವಿಕೆಟ್‌ ಪಡೆದು ಮಿಂಚಿದರು. ಇದರೊಂದಿಗೆ ವಿಶ್ವಕಪ್‌ ಕ್ರಿಕೆಟ್‌ ಇತಿಹಾಸದಲ್ಲೇ 5 ವಿಕೆಟ್‌ ಪಡೆದ ಎಡಗೈ ಸ್ಪಿನ್ನರ್‌ ಯುವರಾಜ್‌ ಸಿಂಗ್‌(Yuvraj Singh) ಅವರ ದಾಖಲೆಯನ್ನ ಸರಿಗಟ್ಟಿದರು. ಉಳಿದಂತೆ ಮೊಹಮ್ಮದ್‌ ಶಮಿ, ಕುಲ್ದೀಪ್‌ ಯಾದವ್‌ ತಲಾ 2 ವಿಕೆಟ್‌ ಕಿತ್ತರೆ, ಸಿರಾಜ್‌ 1 ವಿಕೆಟ್‌ಗೆ ತೃಪ್ತಿಪಟ್ಟುಕೊಂಡರು.

    ಉತ್ತಮ ಆರಂಭ ಪಡೆಯವ ನಿರೀಕ್ಷೆಯಲ್ಲಿದ್ದ ದಕ್ಷಿಣ ಆಫ್ರಿಕಾ ತಂಡ ಆರಂಭದಿಂದಲೇ ತನ್ನ ಅವನತಿ ಕಂಡಿತು. ಆರಂಭದಿಂದಲೂ ಎಲ್ಲಾ ತಂಡಗಳು ಎದುರು ರನ್‌ ಹೊಳೆ ಹರಿಸಿ ಅಬ್ಬರಿಸಿದ ಶತಕ ವೀರರು ಟೀಂ ಇಂಡಿಯಾ ಬೌಲರ್‌ಗಳ ಎದುರು ಮಣ್ಣುಮುಕ್ಕಿದರು. 6 ರನ್‌ಗಳಿಗೆ ಮೊದಲ ವಿಕೆಟ್‌ ಕಳೆದುಕೊಂಡಿದ್ದ ಹರಿಣರ ಪಡೆ 63 ರನ್‌ ಗಳಿಸುವಷ್ಟರಲ್ಲೇ ಪ್ರಮುಖ 6 ವಿಕೆಟ್‌ ಕಳೆದುಕೊಂಡಿತು. ಇದರಿಂದ ಹರಿಣರ ಸೋಲು ಖಚಿತವಾಯಿತು.

    ದಕ್ಷಿಣ ಆಫ್ರಿಕಾದ ಪರ ಕ್ವಿಂಟನ್‌ ಡಿಕಾಕ್‌ (Quinton de Kock) 5 ರನ್‌, ತೆಂಬಾ ಬವುಮಾ (Temba Bavuma) 11 ರನ್‌, ರಾಸಿ ವಾನ್‌ ಡೇರ್‌ ಡುಸ್ಸೆನ್‌ 13 ರನ್‌, ಏಡನ್‌ ಮಾರ್ಕ್ರಮ್‌ 9 ರನ್‌, ಹೆನ್ರಿಚ್‌ ಕ್ಲಾಸೆನ್‌ 1 ರನ್‌. ಡೇವಿಡ್‌ ಮಿಲ್ಲರ್‌ 11 ರನ್‌, ಮಾರ್ಕೋ ಜಾನ್ಸೆನ್‌ 14 ರನ್‌, ಕೇಶವ್‌ ಮಹರಾಜ್‌ 7 ರನ್‌, ಕಾಗಿಸೊ ರಬಾಡ 6 ರನ್‌, ತಬ್ರಿಝಿ ಶಂಸಿ 4 ರನ್‌ ಗಳಿಸಿದ್ರೆ ಕ್ರೀಸ್‌ನಲ್ಲಿ ಉಳಿದರೆ, ಲುಂಗಿ ಎನ್ಗಿಡಿ ಶೂನ್ಯ ಸುತ್ತಿದರು.

    ಇದಕ್ಕೂ ಮುನ್ನ ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ಕಿಂಗ್ ಕೊ‌ಹ್ಲಿ ಶತಕ ಹಾಗೂ ಶ್ರೇಯಸ್ ಅಯ್ಯರ್ ಭರ್ಜರಿ ಅರ್ಧಶತಕದ ನೆರವಿನೊಂದಿಗೆ 5 ವಿಕೆಟ್ ನಷ್ಟಕ್ಕೆ 326 ರನ್ ಗಳಿಸಿತ್ತು. ಆರಂಭಿಕರಾಗಿ ಕಣಕ್ಕಿಳಿದ ರೋಹಿತ್ ಶರ್ಮಾ ಹಾಗೂ ಶುಭಮನ್ ಗಿಲ್ ಜೋಡಿ ಮೊದಲ ವಿಕೆಟ್‌ಗೆ 5.5 ಓವರ್‌ಗಳಲ್ಲೇ 62 ರನ್ ಬಾರಿಸುವ ಮೂಲಕ ಸ್ಫೋಟಕ ಆರಂಭ ನೀಡಿತ್ತು. ಆದ್ರೆ ಅಷ್ಟರಲ್ಲೇ ಹಿಟ್‌ಮ್ಯಾನ್ 40 ರನ್ (24 ಎಸೆತ, 6 ಬೌಂಡರಿ, 2 ಸಿಕ್ಸರ್) ಬಾರಿಸಿ ಔಟಾದರು. ಈ ಬೆನ್ನಲ್ಲೇ ಶುಭಮನ್ ಗಿಲ್ 23 ರನ್ ಗಳಿಸಿ ಪೆವಿಲಿಯನ್‌ಗೆ ಮರಳಿದರು.

    ನಂತರ 3ನೇ ವಿಕೆಟ್‌ಗೆ ಜೊತೆಯಾದ ಶ್ರೇಯಸ್ ಅಯ್ಯರ್ ಹಾಗೂ ವಿರಾಟ್ ಕೊಹ್ಲಿ ಹರಿಣರ ಪಡೆಯನ್ನು ಹಿಗ್ಗಾಮುಗ್ಗ ಬೆಂಡೆತ್ತಿದರು. ಶ್ರೇಯಸ್ ನಿಧಾನಗತಿಯ ಬ್ಯಾಟಿಂಗ್ ಆರಂಭಿಸಿದರು. ನಂತರ ಸ್ಫೋಟಕ ಬ್ಯಾಟಿಂಗ್‌ನೊಂದಿಗೆ ಅರ್ಧಶತಕ ಗಳಿಸಿ ಪೆವಿಯನ್‌ಗೆ ಮರಳಿದರು. ಅಯ್ಯರ್ ಮತ್ತು ಕೊಹ್ಲಿ ಜೋಡಿ 3ನೇ ವಿಕೆಟ್‌ಗೆ 158 ಎಸೆತಗಳಲ್ಲಿ 138 ರನ್ ಜೊತೆಯಾಟ ನೀಡಿತು. ಕೊನೆಯಲ್ಲಿ ರವೀಂದ್ರ ಜಡೇಜಾ ಹಾಗೂ ಕೊಹ್ಲಿಯ 41 ರನ್‌ಗಳ ಜೊತೆಯಾಟವೂ ತಂಡದ ಮೊತ್ತ 300ರ ಗಡಿದಾಟಲು ನೆರವಾಯಿತು.

    ಟೀಂ ಇಂಡಿಯಾ ಪರ ಶ್ರೇಯಸ್ ಅಯ್ಯರ್ 77 ರನ್ (87 ಎಸೆತ, 7 ಬೌಂಡರಿ, 2 ಸಿಕ್ಸರ್), ಕೆ.ಎಲ್ ರಾಹುಲ್ 8 ರನ್, ಸೂರ್ಯಕುಮಾರ್ ಯಾದವ್ 22 ರನ್, ರವೀಂದ್ರ ಜಡೇಜಾ 29 ರನ್ ಗಳಿಸಿ ಮಿಂಚಿದರು. ಇದಲ್ಲದೇ ಟೀಂ ಇಂಡಿಯಾಕ್ಕೆ ವೈಡ್, ನೋಬಾಲ್ ಸೇರಿದಂತೆ ಹೆಚ್ಚುವರಿಯಾಗಿಯೇ 26 ರನ್ ಸೇರ್ಪಡೆಯಾಯಿತು.

    ದಕ್ಷಿಣ ಆಫ್ರಿಕಾ ಪರವಾಗಿ ಲುಂಗಿ ಎನ್ಗಿಡಿ, ಮಾರ್ಕೊ ಜಾನ್ಸೆನ್, ಕಗಿಸೊ ರಬಾಡ, ಕೇಶವ ಮಹಾರಾಜರು, ತಬ್ರೈಜ್ ಶಮ್ಸಿ ತಲಾ ಒಂದು ವಿಕೆಟ್ ಪಡೆದರು.

  • ಪಾಕ್‌ ವಿರುದ್ಧ ಗೆಲುವನ್ನು ಹನುಮಾನ್‌ಗೆ ಅರ್ಪಿಸಿದ ಮಹರಾಜ್‌ – ಜೈ ಶ್ರೀ ಹನುಮಾನ್‌ ಫುಲ್‌ ಟ್ರೆಂಡ್‌

    ಪಾಕ್‌ ವಿರುದ್ಧ ಗೆಲುವನ್ನು ಹನುಮಾನ್‌ಗೆ ಅರ್ಪಿಸಿದ ಮಹರಾಜ್‌ – ಜೈ ಶ್ರೀ ಹನುಮಾನ್‌ ಫುಲ್‌ ಟ್ರೆಂಡ್‌

    ಚೆನ್ನೈ: ದಕ್ಷಿಣ ಆಫ್ರಿಕಾ (South Africa) ವಿರುದ್ಧ ಶುಕ್ರವಾರ ನಡೆದ ನಿರ್ಣಾಯಕ ಪಂದ್ಯದಲ್ಲಿ ಪಾಕಿಸ್ತಾನ ತಂಡ ವಿರೋಚಿತ ಸೋಲನುಭವಿಸಿತು. ಆದ್ರೆ ಕೊನೆ ಕ್ಷಣದಲ್ಲಿ ಸಮಯೋಚಿತ ಬ್ಯಾಟಿಂಗ್‌ ಮಾಡಿ ತಂಡವನ್ನು ಗೆಲ್ಲಿಸಿದ ದಕ್ಷಿಣ ಆಫ್ರಿಕಾ ಕ್ರಿಕೆಟಿಗ ಕೇಶವ್‌ ಮಹಾರಾಜ್‌ (Keshav Maharaj) ಈ ಪಂದ್ಯವನ್ನು ಹನುಮಾನ್‌ಗೆ ಅರ್ಪಿಸಿದ್ದಾರೆ.

     

    View this post on Instagram

     

    A post shared by Keshav Maharaj (@keshavmaharaj16)

    ಏಡನ್‌ ಮಾರ್ಕ್ರಮ್‌ (Aiden Markram) ವಿಕೆಟ್‌ ಬೀಳುತ್ತಿದ್ದಂತೆ ದಕ್ಷಿಣ ಆಫ್ರಿಕಾ ತಂಡದ ಒಂದೊಂದೇ ವಿಕೆಟ್‌ ಪತನಗೊಳ್ಳುತ್ತಿತ್ತು. ಇನ್ನೂ 46 ಓವರ್‌ಗಳಲ್ಲಿ 263 ರನ್‌ಗಳಿಗೆ 9 ವಿಕೆಟ್‌ ಕಳೆದುಕೊಂಡಿತ್ತು. ಕೊನೇ ಕ್ಷಣದವರೆಗೂ ಬೌಲಿಂಗ್‌ನಲ್ಲಿ ಹಿಡಿತ ಸಾಧಿಸಿದ್ದ ಪಾಕ್‌ ತಂಡದ ಗೆಲುವಿಗೆ ಒಂದು ವಿಕೆಟ್‌ ಬೇಕಿತ್ತು. ಆದ್ರೆ ಕೊನೆಯಲ್ಲಿ ಕೇಶವ್‌ ಮಹರಾಜ್‌ ಸಮಯೋಚಿತ ಬ್ಯಾಟಿಂಗ್‌ನಿಂದ ಆಫ್ರಿಕಾ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಯಿತು. ಇದನ್ನೂ ಓದಿ: 20 ವರ್ಷಗಳಿಂದ ಆಂಗ್ಲರ ವಿರುದ್ಧ ಗೆದ್ದೇ ಇಲ್ಲ ಭಾರತ – ಸೇಡು ತೀರಿಸಿಕೊಳ್ಳಲು ಸಮರಾಭ್ಯಾಸ?

    ವಿಶ್ವಕಪ್‌ ಟೂರ್ನಿಯಲ್ಲಿ ದಕ್ಷಿಣ ಆಫ್ರಿಕಾದ ಆಟಗಾರ ಕೇಶವ್ ಮಹರಾಜ್, ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ತೋರಿದ ಪ್ರದರ್ಶನದಿಂದ ಹೀರೋ ಆಗಿ ಮಿಂಚುತ್ತಿದ್ದಾರೆ. ಸ್ಪಿನ್ ಆಲ್ ರೌಂಡರ್ ಆಗಿದ್ದರೂ ಮಹರಾಜ್ ಬೌಲಿಂಗ್ ನಲ್ಲಿ ಒಂದೇ ಒಂದು ವಿಕೆಟ್ ಪಡೆಯಲಿಲ್ಲ. ಬ್ಯಾಟಿಂಗ್ ನಲ್ಲೂ 21 ಎಸೆತಗಳಲ್ಲಿ ಕೇವಲ 7 ರನ್ ಗಳಿಸಿದರು. ಆದ್ರೆ 9 ವಿಕೆಟ್ ಕಳೆದುಕೊಂಡು ಸೋಲಿನ ಅಂಚಿನಲ್ಲಿದ್ದ ತಮ್ಮ ತಂಡಕ್ಕೆ ಮಹರಾಜ್ ರೋಚಕ ಜಯ ತಂದುಕೊಟ್ಟರು. ಪಾಕಿಸ್ತಾನದ ಬೌಲರ್‌ಗಳನ್ನ ಸಮರ್ಥವಾಗಿ ಎದುರಿಸಿ ಸಮಯೋಚಿತ ಆಟವಾಡಿದ ಕೇಶವ್ ತಂಡದ ಹೀರೋ ಎನಿಸಿಕೊಂಡರೆ ಪಾಕಿಸ್ತಾನ ಆಟಗಾರರ ಪಾಲಿಗೆ ವಿಲನ್ ಆಗಿದ್ದಾರೆ. ಇದನ್ನೂ ಓದಿ: 23 ವರ್ಷಗಳ ಬಳಿಕ ಗೆದ್ದು ಪಾಕ್‌ ವಿರುದ್ಧ ಸೇಡು ತೀರಿಸಿಕೊಂಡ ಆಫ್ರಿಕಾ – ಸೆಮಿಫೈನಲ್‌ ರೇಸ್‌ನಿಂದ ಪಾಕ್‌ ಔಟ್‌  

    ಪಾಕಿಸ್ತಾನದ ವಿರುದ್ಧ ಗೆಲುವಿನ ಬಳಿಕ ತಮ್ಮ ಅಧಿಕೃತ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಫೋಟೋಗಳನ್ನುಹಂಚಿಕೊಂಡಿರುವ ಕೇಶವ್‌, ʻಜೈ ಶ್ರೀ ಹನುಮಾನ್ʼ (Jai Shree Hanuman) ಎಂದು ಬರೆದುಕೊಂಡಿದ್ದಾರೆ. ಅಲ್ಲದೇ ನಾನು ದೇವರನ್ನು ನಂಬುತ್ತೇನೆ. ಈ ಪಂದ್ಯದಲ್ಲಿ ನಮ್ಮ ತಂಡದ ಹುಡುಗರಿಂದ ಅದ್ಭುತ ಪ್ರದರ್ಶನ ಕಂಡುಬಂದಿದೆ. ಏಡನ್‌ ಮಾರ್ಕ್ರಮ್‌ ಅವರ ಬ್ಯಾಟಿಂಗ್‌, ಶಂಸಿ ಅವರ ಬೌಲಿಂಗ್‌ ಪ್ರದರ್ಶನ ಉತ್ತಮವಾಗಿ ತೋರಿದ್ದಾರೆ ಅಂತಲೂ ಬರೆದುಕೊಂಡಿದ್ದಾರೆ. ಅದು ಕೇಶವ್‌ ಮಹರಾಜ್‌ ಬರೆದುಕೊಂಡಿರುವ ʻಜೈ ಶ್ರೀ ಹನುಮಾನ್‌ʼ ಸಾಲುಗಳು ಭಾರತೀಯ ಕ್ರಿಕೆಟ್‌ ಅಭಿಮಾನಿಗಳ ಗಮನ ಸೆಳೆದಿದೆ. ಇದನ್ನೂ ಓದಿ: World Cup 2023: ಅಂದು ರೋಹಿತ್‌ ಶರ್ಮಾ ಬಿಕ್ಕಿ ಬಿಕ್ಕಿ ಕಣ್ಣೀರಿಟ್ಟಿದ್ದು ಇದೇ ಕಾರಣಕ್ಕೆ

    ಭಾರತೀಯ ಮೂಲದ ಕೇಶವ ಮಹರಾಜ್ ಫೆಬ್ರವರಿ 7, 1990 ರಂದು ಡರ್ಬನ್‌ನಲ್ಲಿ ಜನಿಸಿದರು. ಆಂಜನೇಯ ಸ್ವಾಮಿ ಹೆಚ್ಚು ಪೂಜಿಸುವ ಮಹಾರಾಜ್​ ತಮ್ಮ ಇನ್‌ಸ್ಟಾಗ್ರಾಮ್‌ ಬಯೋದಲ್ಲೂ ಜೈ ಶ್ರೀ ಹನುಮಾನ್ ಎಂದು ಬರೆದಿದ್ದಾರೆ. ಅಲ್ಲದೇ, ಅವರ ಬ್ಯಾಟ್ ಮೇಲೆಯೂ ಓಂ ಎಂದು ಬರೆಯಲಾಗಿದೆ ಎಂಬುದು ವಿಶೇಷ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • 23 ವರ್ಷಗಳ ಬಳಿಕ ಗೆದ್ದು ಪಾಕ್‌ ವಿರುದ್ಧ ಸೇಡು ತೀರಿಸಿಕೊಂಡ ಆಫ್ರಿಕಾ – ಸೆಮಿಫೈನಲ್‌ ರೇಸ್‌ನಿಂದ ಪಾಕ್‌ ಔಟ್‌

    23 ವರ್ಷಗಳ ಬಳಿಕ ಗೆದ್ದು ಪಾಕ್‌ ವಿರುದ್ಧ ಸೇಡು ತೀರಿಸಿಕೊಂಡ ಆಫ್ರಿಕಾ – ಸೆಮಿಫೈನಲ್‌ ರೇಸ್‌ನಿಂದ ಪಾಕ್‌ ಔಟ್‌

    ಚೆನ್ನೈ: ಜಿದ್ದಾಜಿದ್ದಿನಿಂದ ಕಣದಲ್ಲಿ ವಿಶ್ವ ಕಪ್​ನ 26ನೇ ಪಂದ್ಯದಲ್ಲಿ (ICC World Cup 2023) ದಕ್ಷಿಣ ಆಫ್ರಿಕಾ ತಂಡವು ಪಾಕಿಸ್ತಾನದ ವಿರುದ್ಧ 1 ವಿಕೆಟ್​ ರೋಚಕ ಜಯ ಸಾಧಿಸಿದೆ. ಈ ಮೂಲಕ ಬರೋಬ್ಬರಿ 23 ವರ್ಷಗಳ ಬಳಿಕ ICC ಟೂರ್ನಿಯಲ್ಲಿ ಪಾಕಿಸ್ತಾನ ತಂಡವನ್ನು ಸೋಲಿಸಿ ಸೇಡು ತೀರಿಸಿಕೊಂಡಿದೆ. ಅಲ್ಲದೇ ಅಂಕಪಟ್ಟಿಯಲ್ಲಿ ಭಾರತವನ್ನೂ ಹಿಂದಿಕ್ಕಿ ನಂ.1 ಸ್ಥಾನಕ್ಕೇರಿದೆ.

    ಇಲ್ಲಿನ ಚೇಪಾಕ್‌ ಕ್ರೀಡಾಂಗಣದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಪಾಕ್‌ 46.4 ಓವರ್‌ಗಳಲ್ಲಿ 270 ರನ್‌ಗಳಿಗೆ ತನ್ನೆಲ್ಲಾ ವಿಕೆಟ್‌ಗಳನ್ನು ಕಳೆದುಕೊಂಡಿತು. ಈ ಗುರಿ ಬೆನ್ನತ್ತಿದ್ದ ದಕ್ಷಿಣ ಆಫ್ರಿಕಾ ತಂಡ 47.2 ಓವರ್‌ಗಳಲ್ಲಿ 9 ವಿಕೆಟ್‌ ನಷ್ಟಕ್ಕೆ 271 ರನ್‌ ಗಳಿಸಿ ರೋಚಕ ಜಯ ಸಾಧಿಸಿತು. 6 ಪಂದ್ಯಗಳಲ್ಲಿ ಕೇವಲ 4ರಲ್ಲಿ ಗೆಲುವು ಸಾಧಿಸಿರುವ ಪಾಕ್‌ ಸೆಮಿಫೈನಲ್‌ ರೇಸ್‌ನಿಂದ ಹೊರಬಿದ್ದಿತು. 1979, 1983, 1987 ಮತ್ತು 2011ರಲ್ಲಿ 4 ಬಾರಿ ಸೆಮಿ ಫೈನಲ್‌, 1996 ಮತ್ತು 2015ರಲ್ಲಿ ಕ್ವಾರ್ಟರ್‌ ಫೈನಲ್‌ ಪ್ರವೇಶಿಸಿದ್ದ ಪಾಕಿಸ್ತಾನ ತಂಡ ಬೌಲಿಂಗ್‌ನಲ್ಲಿ ಚೇತರಿಕೆ ಕಂಡರೂ ಕಳಪೆ ಬ್ಯಾಟಿಂಗ್‌ನಿಂದ ಸೋತು ಸೆಮಿಸ್‌ ರೇಸ್‌ನಿಂದ ಹೊರಬಿದ್ದಿತು.

    37 ಓವರ್‌ಗಳಲ್ಲಿ 235 ರನ್‌ಗಳಿಗೆ 6 ವಿಕೆಟ್‌ ಕಳೆದುಕೊಂಡಿದ್ದ ದಕ್ಷಿಣ ಆಫ್ರಿಕಾ 41ನೇ ಓವರ್‌ನಲ್ಲಿ 251 ರನ್‌ಗಳಿಗೆ 8 ವಿಕೆಟ್‌ ಕಳೆದುಕೊಂಡಿತ್ತು. ಶಾಹೀನ್‌ ಶಾ ಅಫ್ರಿದಿ (Shaheen Shah Afridi) ಮಾರಕ ದಾಳಿಗೆ ಪ್ರಮುಖ ವಿಕೆಟ್‌ಗಳು ಉರುಳಿದ್ದರಿಂದ ಪಾಕ್‌ ತಂಡದಲ್ಲಿ ಗೆಲುವಿನ ಭರವಸೆ ಚಿಮ್ಮಿತು. ಕೊನೆಯ 36 ಎಸೆತಗಳಲ್ಲಿ 15 ರನ್‌ ಬೇಕಿದ್ದಾಗ ಮೊಹಮ್ಮದ್ ವಾಸಿಂ ತಮ್ಮ 9ನೇ ಓವರ್‌ನಲ್ಲಿ 4 ರನ್‌ ಬಿಟ್ಟುಕೊಟ್ಟರು. ಹ್ಯಾರಿಸ್‌ ರೌಫ್‌ ಎಸೆದ 10ನೇ ಓವರ್‌ನಲ್ಲಿ 3ನೇ ಎಸೆತದಲ್ಲಿ ಕ್ಲೀನ್‌ ಕ್ಯಾಚ್‌ ಪಡೆಯುವ ಮೂಲಕ ಗೆಲುವಿನ ಭರವಸೆ ಮತ್ತಷ್ಟು ಇಮ್ಮಡಿಗೊಳಿಸಿದ್ದರು. ನಂತ್ರ ತಮ್ಮ 7ನೇ ಓವರ್‌ ಬೌಲಿಂಗ್‌ ಮಾಡಿದ ಮೊಹಮ್ಮದ್‌ ನವಾಜ್‌ 2ನೇ ಎಸೆತದಲ್ಲಿ ಬೌಂಡರಿ ಬಿಟ್ಟುಕೊಡುವ ಮೂಲಕ ಪಾಕ್‌ ವಿರೋಚಿತ ಸೋಲಿಗೆ ಕಾರಣವಾದರು.

    ಚೇಸಿಂಗ್‌ ಆರಂಭಿಸಿದ ದಕ್ಷಿಣ ಆಫ್ರಿಕಾ ಪರ ಆರಂಭಿಕರಾದ ಕ್ವಿಂಟನ್‌ ಡಿಕಾಕ್‌ (Quinton de Kock) ನಾಯಕ ತೆಂಬಾ ಬವುಮಾ ಸ್ಫೋಟಕ ಇನ್ನಿಂಗ್ಸ್‌ ಕಟ್ಟಲು ಪ್ರಯತ್ನಿಸಿದ್ದರು. ಕೇವಲ 14 ಎಸೆತಗಳಲ್ಲಿ 24 ರನ್‌ ಚಚ್ಚಿದ್ದ ಡಿಕಾಕ್‌ ಸಿಕ್ಸರ್‌ ಸಿಡಿಸುವ ಬರದಲ್ಲಿ ಕ್ಯಾಚ್‌ ನೀಡಿ ಔಟಾದರು. ಈ ಬೆನ್ನಲ್ಲೇ ನಾಯಕ ತೆಂಬಾ ಬವುಮಾ 28 ರನ್‌, ರಾಸ್ಸಿ ವ್ಯಾನ್ ಡೆರ್ ಡುಸ್ಸೆನ್ 21 ರನ್‌ ಗಳಿಸಿ ಔಟಾದರು. ಆದ್ರೆ ಮಧ್ಯಮ ಕ್ರಮಾಂಕದಲ್ಲಿ ಕ್ರೀಸ್‌ಗಿಳಿದ ಏಡನ್‌ ಮಾರ್ಕ್ರಮ್‌ (Aiden Markram) ಜವಾಬ್ದಾರಿಯುತ ಬ್ಯಾಟಿಂಗ್‌ ಮಾಡಿದರು. ಕೊನೆಯವರೆಗೂ ಹೋರಾಡಿದ ಮಾರ್ಕ್ರಮ್‌ 93 ಎಸೆತಗಳಲ್ಲಿ 91 ರನ್‌ (3 ಸಿಕ್ಸರ್‌, 7 ಬೌಂಡರಿ) ಗಳಿಸಿ ಔಟಾದರು.

    ಇತ್ತ ಮಾರ್ಕ್ರಮ್‌ ಔಟಾಗುತ್ತಿದಂತೆ ಒಂದೊಂದು ವಿಕೆಟ್‌ ಪತನಗೊಳ್ಳಲು ಶುರುವಾಯಿತು. ಇನ್ನೇನು ಗೆಲುವು ಪಾಕ್‌ ತಂಡದ್ದೇ ಎನ್ನುವಷ್ಟರಲ್ಲಿ ವಿರೋಚಿತ ಸೋಲು ಅನುಭವಿಸಬೇಕಾಯಿತು. ಹೆನ್ರಿಚ್‌ ಕ್ಲಾಸೆನ್‌ 12 ರನ್‌, ಡೇವಿಡ್‌ ಮಿಲ್ಲರ್‌ 29 ರನ್‌, ಮಾರ್ಕೊ ಜಾನ್ಸೆನ್‌ 20 ರನ್‌, ಜೆರಾಲ್ಡ್ ಕೋಟ್ಜಿ 10 ರನ್‌ ಗಳಿಸಿದ್ರೆ, ಕೊನೆಯಲ್ಲಿ ಅಜೇಯ 7 ರನ್‌, ತಬ್ರೈಜ್ ಶಮ್ಸಿ ಅಜೇಯ 4 ರನ್‌ ಗಳಿಸುವ ಮೂಲಕ ತಂಡಕ್ಕೆ ಗೆಲುವು ತಂಡುಕೊಟ್ಟರು.

    ಪಾಕಿಸ್ತಾನ ಪರ ಶಾಹೀನ್‌ ಶಾ ಅಫ್ರಿದಿ 3 ವಿಕೆಟ್‌ ಕಿತ್ತರೆ, ಹ್ಯಾರಿಸ್‌ ರೌಫ್‌, ಮೊಹಮ್ಮದ್‌ ವಸೀಮ್‌, ಉಸ್ಮಾ ಮಿರ್‌ ತಲಾ 2 ವಿಕೆಟ್‌ ಪಡೆದು ಮಿಂಚಿದರು.

    ಬ್ಯಾಟಿಂಗ್​ನಲ್ಲಿ ಸಾಧಾರಣ ಪ್ರದರ್ಶನ ನೀಡಿದ ಪಾಕಿಸ್ತಾನ, ಆಫ್ರಿಕಾ ಬೌಲಿಂಗ್ ದಾಳಿಗೆ ನಡುಗಿತು. ಮೊದಲು ಬ್ಯಾಟಿಂಗ್​ ಮಾಡಿದ ಪಾಕ್​, ಆರಂಭದಲ್ಲೇ ಆಘಾತಕ್ಕೊಳಗಾಯಿತು. ಆರಂಭಿಕರಾದ ಇಮಾಮ್ ಉಲ್ ಹಕ್ 12 ರನ್‌, ಅಬ್ದುಲ್ಲಾ ಶಫೀಕ್ 9 ರನ್‌ ಗಳಿಸಿ ವಿಕೆಟ್‌ ಒಪ್ಪಿಸಿ ನಿರಾಸೆ ಮೂಡಿಸಿದರು. 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ನಾಯಕ ಬಾಬರ್ ಆಜಂ (Babar Azam) ತಂಡಕ್ಕೆ ಆಸರೆಯಾದರು. ಬಾಬರ್‌ 65 ಎಸೆತಗಳಲ್ಲಿ 50 ರನ್‌ ಗಳಿಸಿ ಔಟಾಗುತ್ತಿದ್ದಂತೆ ಮೊಹಮ್ಮದ್‌ ರಿಜ್ವಾನ್‌ (Mohammad Rizwan) 31 ರನ್‌, ಇಫ್ತಿಕಾರ್‌ ಅಹ್ಮದ್‌ 21 ರನ್‌ಗಳಿಗೆ ವಿಕೆಟ್‌ ಒಪ್ಪಿಸಿ ಹೊರನಡೆದರು.

    141ಕ್ಕೆ 5 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದ ಪಾಕಿಸ್ತಾನಕ್ಕೆ ಸೌದ್ ಶಕೀಲ್ ಮತ್ತು ಶಾದಾಬ್ ಖಾನ್ ಅದ್ಭುತ ಜೊತೆಯಾಟ ನೀಡಿದರು. 71 ಎಸೆತಗಳಲ್ಲಿ ಈ ಜೋಡಿ 84 ರನ್‌ಗಳ ಜೊತೆಯಾಟ ನೀಡುವ ಮೂಲಕ 250 ರನ್‌ಗಳ ಗಡಿ ದಾಟುವಲ್ಲಿ ಯಶಸ್ವಿಯಾದರು. ಶಕೀಲ್‌ 52 ಎಸೆತಗಳಲ್ಲಿ 3 ಬೌಂಡರಿ, 2 ಸಿಕ್ಸರ್‌ ಜೊತೆಗೆ 52 ರನ್‌ ಚಚ್ಚಿದರೆ, ಶಾದಾಬ್‌ 43 ರನ್‌ ಬಾರಿಸಿ ವಿಕೆಟ್‌ ಒಪ್ಪಿಸಿದರು. ಆ ನಂತರ ಮೊಹಮ್ಮದ್‌ ನವಾಜ್‌ 24 ರನ್‌ಗಳ ಕೊಡುಗೆ ನೀಡಿದರು. ಅಂತಿಮವಾಗಿ ಪಾಕ್‌ ತಂಡ 270 ರನ್‌ಗಳಿಗೆ ಸರ್ವಪತನ ಕಂಡಿತು.

    ಶಂಸಿ ಶೈನ್‌: ಸ್ಪಿನ್​ ಟ್ರ್ಯಾಕ್​ನಲ್ಲಿ ಮಿಂಚಿದ ತಬ್ರೈಜ್ ಶಂಸಿ, ಕ್ರೀಸ್​​ನಲ್ಲಿ ಸೆಟಲ್ ಆಗಿದ್ದ ಆಟಗಾರರಿಗೆ ಗೇಟ್ ಪಾಸ್ ಕೊಡಿಸುವಲ್ಲಿ ಯಶಸ್ವಿಯಾದರು. ತಬ್ರೈಜ್ ಶಂಸಿ 4 ವಿಕೆಟ್‌ ಪಡೆದರೆ, ಜಾನ್ಸನ್ 3 ವಿಕೆಟ್, ಜೆರಾಲ್ಡ್ ಕೊಯೆಟ್ಜಿ 2 ವಿಕೆಟ್, ಲುಂಗಿ ಎನ್​ಗಿಡಿ 1 ವಿಕೆಟ್ ಕಬಳಿಸಿ ಸಾಥ್ ನೀಡಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • World Cup 2023: ಡಿಕಾಕ್‌ ಡಿಚ್ಚಿಗೆ ಬಾಂಗ್ಲಾ ಬರ್ನ್‌ – 149 ರನ್‌ಗಳ ಜಯದೊಂದಿಗೆ 2ನೇ ಸ್ಥಾನಕ್ಕೆ ಜಿಗಿದ ಹರಿಣರು

    World Cup 2023: ಡಿಕಾಕ್‌ ಡಿಚ್ಚಿಗೆ ಬಾಂಗ್ಲಾ ಬರ್ನ್‌ – 149 ರನ್‌ಗಳ ಜಯದೊಂದಿಗೆ 2ನೇ ಸ್ಥಾನಕ್ಕೆ ಜಿಗಿದ ಹರಿಣರು

    ಮುಂಬೈ: ಕ್ವಿಂಟನ್‌ ಡಿಕಾಕ್‌ (Quinton de Kock), ಹೆನ್ರಿಚ್‌ ಕ್ಲಾಸೆನ್‌ (Heinrich Klaasen) ಸ್ಫೋಟಕ ಬ್ಯಾಟಿಂಗ್‌ ಹಾಗೂ ಸಂಘಟಿತ ಬೌಲಿಂಗ್‌ ದಾಳಿ ನೆರವಿನಿಂದ ದಕ್ಷಿಣ ಆಫ್ರಿಕಾ ತಂಡವು ಬಾಂಗ್ಲಾದೇಶದ ವಿರುದ್ಧ 149 ರನ್‌ಗಳ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ 5 ಪಂದ್ಯಗಳ ಪೈಕಿ 4ರಲ್ಲಿ ಗೆಲುವು ಸಾಧಿಸುವ ಮೂಲಕ ಅಂಕಪಟ್ಟಿಯಲ್ಲಿ 2ನೇ ಸ್ಥಾನಕ್ಕೆ ಜಿಗಿದಿದೆ. 5ರಲ್ಲಿ 5 ಪಂದ್ಯಗಳಲ್ಲೂ ಗೆಲುವು ಸಾಧಿಸಿರುವ ಭಾರತ ಮೊದಲ ಸ್ಥಾನದಲ್ಲಿದ್ದರೆ, 4 ಪಂದ್ಯಗಳಲ್ಲಿ ಗೆಲುವು ಸಾಧಿಸಿರುವ ನ್ಯೂಜಿಲೆಂಡ್‌ ತಂಡ 3ನೇ ಸ್ಥಾನಕ್ಕೆ ಕುಸಿದಿದೆ.

    ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ದಕ್ಷಿಣ ಆಫ್ರಿಕಾ (South Africa) ತಂಡ 50 ಓವರ್‌ಗಳಲ್ಲಿ 5 ವಿಕೆಟ್‌ ನಷ್ಟಕ್ಕೆ 382 ರನ್‌ ಬಾರಿಸಿತ್ತು. ಬೃಹತ್‌ ಮೊತ್ತದ ಗುರಿ ಬೆನ್ನತ್ತಿದ್ದ ಬಾಂಗ್ಲಾದೇಶ (Bangladesh) ತಂಡವು 46.4 ಓವರ್‌ಗಳಲ್ಲಿ 233 ರನ್‌ಗಳಿಗೆ ಸರ್ವಪತನ ಕಂಡು ಸೋಲೊಪ್ಪಿಕೊಂಡಿತು. ಇದನ್ನೂ ಓದಿ: ನಮ್ಮನ್ನು ಕ್ಷಮಿಸಿಬಿಡಿ ಪಾಕಿಸ್ತಾನ – ಅಫ್ಘಾನ್‌ ವಿರುದ್ಧ ಸೋಲಿನ ಬಳಿಕ ಅಬ್ದುಲ್ಲಾ ಶಫೀಕ್ ಭಾವುಕ ಟ್ವೀಟ್‌

    ಚೇಸಿಂಗ್‌ ಆರಂಭಿಸಿದ ಬಾಂಗ್ಲಾದೇಶ ತಂಡವು ಆರಂಭದಲ್ಲೇ ಅಗ್ರ ಕ್ರಮಾಂಕದ ಬ್ಯಾಟರ್‌ಗಳನ್ನ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. 6 ಓವರ್‌ಗಳಲ್ಲಿ 30 ರನ್‌ಗಳಿಸಿ ಸ್ಫೋಟಕ ಇನ್ನಿಂಗ್ಸ್‌ ಆರಂಭಿಸಿದ್ದ ಬಾಂಗ್ಲಾದೇಶ ಬಳಿಕ ಒಂದೊಂದೇ ವಿಕೆಟ್‌ಗಳನ್ನ ಕಳೆದುಕೊಂಡಿತು. ಕೇವಲ 16 ರನ್‌ಗಳ ಅಂತರದಲ್ಲೇ ಪ್ರಮುಖ 4 ವಿಕೆಟ್‌ ಕಳೆದುಕೊಂಡಿತು. ಇಲ್ಲಿಂದ ಬಾಂಗ್ಲಾದ ಅವನತಿ ಶುರುವಾಯಿತು. 12ನೇ ಓವರ್‌ನಲ್ಲಿ 46 ರನ್‌ ಗಳಿಸಿದ್ದ ತಂಡ 4 ವಿಕೆಟ್‌ ಕಳೆದುಕೊಂಡು ಸಂಕಷ್ಟಕ್ಕೀಡಾಗಿತ್ತು. ನಾಯಕ ಶಕೀಬ್‌ ಅಲ್‌ ಹಸನ್‌ ಕೂಡ 1 ರನ್‌ಗಳಿಗೆ ವಿಕೆಟ್‌ ಕೈಚೆಲ್ಲಿದರು. ಇದನ್ನೂ ಓದಿ: Record Break: ಭಾರತ-ಕಿವೀಸ್‌ ರೋಚಕ ಪಂದ್ಯಕ್ಕೆ ಗ್ರೌಂಡ್‌ ಹೊರಗಿನ ದಾಖಲೆಗಳೂ ಉಡೀಸ್‌

    ಮೊಹಮ್ಮದುಲ್ಲಾ ಶತಕ ಹೋರಾಟ ವ್ಯರ್ಥ: ಮಧ್ಯಮ ಕ್ರಮಾಂಕದಲ್ಲಿ ಕಣಕ್ಕಿಳಿದ ಮೊಹಮ್ಮದುಲ್ಲಾ ಕೊನೆಯವರೆಗೂ ಹೋರಾಡಿ ಶತಕ ಗಳಿಸಿದರೂ ವ್ಯರ್ಥವಾಯಿತು. ಮೊಹಮ್ಮದುಲ್ಲಾ 111 ಎಸೆತಗಳಲ್ಲಿ 111 ರನ್‌ (11 ಬೌಂಡರಿ, 4 ಸಿಕ್ಸರ್) ಗಳಿಸಿ ಔಟಾಗುತ್ತಿದ್ದಂತೆ, ಉಳಿದ ಎರಡೂ ವಿಕೆಟ್‌ಗಳು ಪತನಗೊಂಡಿತು. ಅಂತಿಮವಾಗಿ ಬಾಂಗ್ಲಾದೇಶ 46.4 ಓವರ್‌ಗಳಲ್ಲಿ 233 ರನ್‌ಗಳಿಗೆ ಸರ್ವಪತನ ಕಂಡಿತು. ಇದನ್ನೂ ಓದಿ: ಶಮಿ ಹೊಸ ದಾಖಲೆ – ODI ವಿಶ್ವಕಪ್‌ ಇತಿಹಾಸದಲ್ಲೇ 2 ಬಾರಿ ಐದು ವಿಕೆಟ್‌ ಕಬಳಿಸಿದ ಮೊದಲ ಭಾರತೀಯ

    ಇದಕ್ಕೂ ಮುನ್ನ ಬ್ಯಾಟಿಂಗ್‌ ಮಾಡಿದ ದಕ್ಷಿಣ ಆಫ್ರಿಕಾ ತಂಡ ಬಾಂಗ್ಲಾ ಬೌಲರ್‌ಗಳನ್ನು ಚೆಂಡಾಡಿತ್ತು. ಆರಂಭದಲ್ಲಿ ಎರಡು ವಿಕೆಟ್‌ ಕಳಡೆದುಕೊಂಡರೂ ಬಳಿಕ ಉತ್ತಮ ರನ್‌ ಪೇರಿಸುವಲ್ಲಿ ತಂಡ ಯಶಸ್ವಿಯಾಯಿತು. ಸ್ಫೋಟಕ ಇನ್ನಿಂಗ್ಸ್‌ ಆರಂಭಿಸಿದ ಕ್ವಿಂಟನ್‌ ಡಿಕಾಕ್‌ 140 ಎಸೆತಗಳಲ್ಲಿ 174 ರನ್‌ (7 ಸಿಕ್ಸರ್‌, 15 ಬೌಂಡರಿ) ಚಚ್ಚಿದರೆ, ನಾಯಕ ಏಡನ್‌ ಮಾರ್ಕ್ರಮ್‌ 69 ಎಸೆತಗಳಲ್ಲಿ 60 ರನ್‌, ಹೆನ್ರಿಚ್‌ ಕ್ಲಾಸೆನ್‌ 49 ಎಸೆತಗಳಲ್ಲಿ ಸ್ಫೋಟಕ 90 ರನ್‌ (8 ಸಿಕ್ಸರ್‌, 2 ಬೌಂಡರಿ), ಡೇವಿಡ್‌ ಮಿಲ್ಲರ್‌ 15 ಎಸೆತಗಳಲ್ಲಿ 34 ರನ್‌ (4 ಸಿಕ್ಸರ್‌, 1 ಬೌಂಡರಿ) ಬಾರಿಸಿ 350 ರನ್‌ಗಳ ಗಡಿ ದಾಟಿಸುವಲ್ಲಿ ಯಶಸ್ವಿಯಾದರು.

    ದಕ್ಷಿಣ ಆಫ್ರಿಕಾ ಪರ ಮಾರ್ಕೊ ಜಾನ್ಸೆನ್, ಲಿಜಾಡ್ ವಿಲಿಯಮ್ಸ್, ಕಗಿಸೊ ರಬಾಡ ತಲಾ ಎರಡು ವಿಕೆಟ್‌ ಕಿತ್ತರೆ, ಜೆರಾಲ್ಡ್ ಕೊಯೆಟ್ಜಿ 3 ವಿಕೆಟ್‌ ಹಾಗೂ ಕೇಶವ್ ಮಹಾರಾಜ್ ಒಂದು ವಿಕೆಟ್‌ ಪಡೆದು ಮಿಂಚಿದರು. ಇದನ್ನೂ ಓದಿ: ಇಶಾನ್‌ಗೆ ಜೇನುಹುಳು ಕಂಟಕ, ಸೂರ್ಯನಿಗೆ ಮೊಣಕೈ ಗಾಯ – ಪಂದ್ಯ ಆರಂಭಕ್ಕೂ ಮುನ್ನವೇ ಭಾರತಕ್ಕೆ ತ್ರಿಬಲ್‌ ಶಾಕ್‌

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕೊಹ್ಲಿ, ಡುಪ್ಲೆಸಿಸ್‌ ಹೊಡೆತಕ್ಕೆ ರೈಸ್‌ ಆಗದ ಸನ್‌ – ಹೈದರಾಬಾದ್‌ ವಿರುದ್ಧ 8 ವಿಕೆಟ್‌ಗಳ ಜಯ; 4ನೇ ಸ್ಥಾನಕ್ಕೆ ಜಿಗಿದ RCB

    ಕೊಹ್ಲಿ, ಡುಪ್ಲೆಸಿಸ್‌ ಹೊಡೆತಕ್ಕೆ ರೈಸ್‌ ಆಗದ ಸನ್‌ – ಹೈದರಾಬಾದ್‌ ವಿರುದ್ಧ 8 ವಿಕೆಟ್‌ಗಳ ಜಯ; 4ನೇ ಸ್ಥಾನಕ್ಕೆ ಜಿಗಿದ RCB

    ಹೈದರಾಬಾದ್‌: ಕೊಹ್ಲಿ (Virat Kohli) ಭರ್ಜರಿ ಶತಕ ಹಾಗೂ ಫಾಫ್‌ ಡು ಪ್ಲೆಸಿಸ್‌ (Faf du Plessis) ಸ್ಫೋಟಕ ಅರ್ಧ ಶತಕದ ಬ್ಯಾಟಿಂಗ್‌ ನೆರವಿನಿಂದ ಆರ್‌ಸಿಬಿ (RCB) ತಂಡವು ಸನ್‌ ರೈಸರ್ಸ್‌ ಹೈದರಾಬಾದ್‌ (Sunrisers Hyderabad) ವಿರುದ್ಧ 8 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ.

    ಹೈದರಾಬಾದ್‌ ವಿರುದ್ಧ ಭರ್ಜರಿ ಗೆಲುವು ಸಾಧಿಸುವ ಮೂಲಕ 14 ಅಂಕ ಪಡೆದು +0.180 ರನ್‌ ರೇಟ್‌ನೊಂದಿಗೆ 4ನೇ ಸ್ಥಾನಕ್ಕೆ ಜಿಗಿದಿದೆ. ಇದರಿಂದ ಪ್ಲೇ ಆಫ್‌ ಹಾದಿ ಮತ್ತಷ್ಟು ಸುಗಮವಾಗಿಸಿಕೊಂಡಿದೆ. ಲಕ್ನೋ ಸೂಪರ್‌ ಜೈಂಟ್ಸ್‌ ಹಾಗೂ ಚೆನ್ನೈ ಸೂಪರ್‌ ಕಿಂಗ್ಸ್‌ ಉತ್ತಮ ರನ್‌ರೇಟ್‌ನೊಂದಿಗೆ ತಮ್ಮ ಸ್ಥಾನ ಭದ್ರಪಡಿಸಿಕೊಂಡಿದ್ದು, 4ನೇ ಸ್ಥಾನಕ್ಕಾಗಿ ಆರ್‌ಸಿಬಿ ಹಾಗೂ ಮುಂಬೈ ಇಂಡಿಯನ್ಸ್‌ ನಡುವೆ ಪೈಪೋಟಿ ನಡೆದಿದೆ. ಇತ್ತಂಡಗಳಿಗೂ ತಲಾ ಒಂದೊಂದು ಪಂದ್ಯ ಬಾಕಿಯಿದೆ. 13 ಪಂದ್ಯಗಳಲ್ಲಿ 7ರಲ್ಲಿ ಗೆಲುವು ಸಾಧಿಸಿರುವ ಮುಂಬೈ ಇಂಡಿಯನ್ಸ್‌ 14 ಅಂಕ ಪಡೆದು -0.128 ರನ್‌ರೇಟ್‌ನೊಂದಿಗೆ 5ನೇ ಸ್ಥಾನದಲ್ಲಿದೆ. ಒಂದು ವೇಳೆ ಮುಂದಿನ ಪಂದ್ಯದಲ್ಲಿ ಆರ್‌ಸಿಬಿ ಸೋತು ಮುಂಬೈ ಗೆದ್ದರೆ, ಆರ್‌ಸಿಬಿ ಪ್ಲೇ ಆಫ್‌ನಿಂದ ಹೊರಬೀಳಲಿದೆ. ಗೆದ್ದರಷ್ಟೇ ಪ್ಲೇ ಆಫ್‌ ತಲುಪಲಿದೆ.

    ರಾಜೀವ್‌ ಗಾಂಧಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಹೈದರಾಬಾದ್‌ ಹೆನ್ರಿಚ್‌ ಕ್ಲಾಸೆನ್‌ (Heinrich Klaasen) ಭರ್ಜರಿ ಶತಕದೊಂದಿಗೆ 20 ಓವರ್‌ಗಳಲ್ಲಿ 186 ರನ್‌ ಗಳಿಸಿತ್ತು. 187 ರನ್‌ಗಳ ಬೃಹತ್‌ ಮೊತ್ತದ ಗುರಿ ಬೆನ್ನತ್ತಿದ್ದ ಆರ್‌ಸಿಬಿ 19.2 ಓವರ್‌ಗಳಲ್ಲಿ 2 ವಿಕೆಟ್‌ ನಷ್ಟಕ್ಕೆ 187 ರನ್‌ ಗಳಿಸಿ ಗೆದ್ದು ಬೀಗಿತು.

    ಚೇಸಿಂಗ್‌ ಆರಂಭಿಸಿದ ಆರ್‌ಸಿಬಿ (RCB) ಪರ ನಾಯಕ ಫಾಫ್‌ ಡು ಪ್ಲೆಸಿಸ್‌ ಹಾಗೂ ವಿರಾಟ್‌ ಕೊಹ್ಲಿ ಹೈದರಾಬಾದ್‌ ಬೌಲರ್‌ಗಳನ್ನು ಚೆಂಡಾಡಿದರು. ಇವರಿಬ್ಬರ ಹೊಡೆತಕ್ಕೆ ಹೈದರಾಬಾದ್‌ ತಂಡ ಮಕಾಡೆ ಮಲಗಿತು.

    ಭರ್ಜರಿ ಸಿಕ್ಸರ್‌, ಬೌಂಡರಿ ಚಚ್ಚಿದ ವಿರಾಟ್‌, ಡುಪ್ಲೆಸಿಸ್‌ 108 ಎಸೆತಗಳಲ್ಲಿ 172 ರನ್‌ಗಳ ಜೊತೆಯಾಟವಾಡಿದರು. ಆರಂಭದಿಂದಲೇ ಆಕ್ರಮಣಕಾರಿ ಬ್ಯಾಟಿಂಗ್‌ ನಡೆಸಿದ ಕಿಂಗ್‌ ಕೊಹ್ಲಿ 63 ಎಸೆತಗಳಲ್ಲಿ 100 ರನ್‌ (12 ಬೌಂಡರಿ, 4 ಸಿಕ್ಸರ್‌) ಚಚ್ಚಿದರೆ, ಫಾಫ್‌ ಡು ಪ್ಲೆಸಿಸ್‌ 47 ಎಸೆತಗಳಲ್ಲಿ ಸ್ಫೋಟಕ 71 ರನ್‌ (7 ಬೌಂಡರಿ, 2 ಸಿಕ್ಸರ್‌) ಬಾರಿಸಿ ಮಿಂಚಿದರು. ಕೊನೆಯಲ್ಲಿ ಗ್ಲೇನ್‌ ಮ್ಯಾಕ್ಸ್‌ವೆಲ್‌ 5 ರನ್‌ ಹಾಗೂ ಮೈಕಲ್‌ ಬ್ರೇಸ್‌ವೆಲ್‌ 4 ರನ್‌ ಗಳಿಸಿ ಅಜೇಯರಾಗುಳಿದರು.

    2016ರ ಐಪಿಎಲ್‌ ಆವೃತ್ತಿಯಲ್ಲಿ 4 ಶತಕಗಳನ್ನು ಸಿಡಿಸಿದ್ದ ಚೇಸ್‌ ಮಾಸ್ಟರ್‌ ಕೊಹ್ಲಿ ‌ಒಂದೇ ಸೀಸನ್‌ನಲ್ಲಿ 973 ರನ್‌ ಗಳಿಸಿ ಯಾರೂ ಮುರಿಯದ ದಾಖಲೆ ಮಾಡಿದ್ದಾರೆ. ಆ ಬಳಿಕ 2019ರ ಐಪಿಎಲ್‌ನಲ್ಲಿ ಒಂದು ಶತಕ ಗಳಿಸಿದ್ದರು. 2023ರ ಐಪಿಎಲ್‌ ಆವೃತ್ತಿಯಲ್ಲಿ ಮತ್ತೊಮ್ಮೆ ಶತಕ ಸಿಡಿಸಿ ಮಿಂಚಿದರು.

    ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಹೈದರಾಬಾದ್‌ ಒಂದೆಡೆ ವಿಕೆಟ್‌ ಕಳೆದುಕೊಂಡರೆ, ಮತ್ತೊಂದೆಡೆ ರನ್‌ ಕಲೆಹಾಕುತ್ತಾ ಸಾಗಿತು. ಆರಂಭಿಕರಾಗಿ ಕಣಕ್ಕಿಳಿದ ಅಭಿಷೇಕ್‌ ಶರ್ಮಾ 11 ರನ್‌, ರಾಹುಲ್‌ ತ್ರಿಪಾಠಿ 15 ರನ್‌, ಏಡನ್‌ ಮಾರ್ಕ್ರಮ್‌ 18 ರನ್‌ ಗಳಿಸಿ ಕೈಕೊಟ್ಟರು.‌ ಬಳಿಕ ಕಣಕ್ಕಿಳಿದ ಹೆನ್ರಿಚ್‌ ಕ್ಲಾಸೆನ್‌ ಭರ್ಜರಿ ಬ್ಯಾಟಿಂಗ್‌ ಪ್ರದರ್ಶನ ನೀಡಿದರು.

    ಕ್ಲಾಸೆನ್‌ 51 ಎಸೆತಗಳಲ್ಲಿ 104 ರನ್‌ (6 ಸಿಕ್ಸರ್‌, 8 ಬೌಂಡರಿ) ಚಚ್ಚಿದರು. ಕೊನೆಯಲ್ಲಿ ಗ್ಲೇನ್‌ ಫಿಲಿಪ್ಸ್‌ 5 ರನ್‌ ಗಳಿಸಿ ಔಟಾದರೆ, ಹ್ಯಾರಿ ಬ್ರೂಕ್‌ 27 ರನ್‌ ಗಳಿಸಿ ಅಜೇಯರಾಗುಳಿದರು.

    ಆರ್‌ಸಿಬಿ ಪರ ಮೈಕೆಲ್‌ ಬ್ಲೇಸ್‌ವೆಲ್‌ 2 ಓವರ್‌ಗಳಲ್ಲಿ 13 ರನ್‌ ನೀಡಿ 2 ವಿಕೆಟ್‌ ಕಿತ್ತರೆ, ಶಹಬಾಜ್‌ ಅಹ್ಮದ್‌, ಹರ್ಷಲ್‌ ಪಟೇಲ್‌, ಮೊಹಮ್ಮದ್‌ ಸಿರಾಜ್‌ ತಲಾ ಒಂದೊಂದು ವಿಕೆಟ್‌ ಪಡೆದು ಮಿಂಚಿದರು.

  • ಗಿಲ್‌ ಚೊಚ್ಚಲ ಶತಕ, ಶಮಿ, ಮೋಹಿತ್‌ ಬೆಂಕಿ ಬೌಲಿಂಗ್‌ – ಗುಜರಾತ್‌ ಪ್ಲೇ ಆಫ್‌ಗೆ, ಹೈದರಾಬಾದ್‌ ಮನೆಗೆ

    ಗಿಲ್‌ ಚೊಚ್ಚಲ ಶತಕ, ಶಮಿ, ಮೋಹಿತ್‌ ಬೆಂಕಿ ಬೌಲಿಂಗ್‌ – ಗುಜರಾತ್‌ ಪ್ಲೇ ಆಫ್‌ಗೆ, ಹೈದರಾಬಾದ್‌ ಮನೆಗೆ

    ಅಹಮದಾಬಾದ್‌: ಶುಭಮನ್‌ ಗಿಲ್‌ (Shubman Gill)  ಭರ್ಜರಿ ಶತಕದ ಬ್ಯಾಟಿಂಗ್‌ ಹಾಗೂ ಮೊಹಮ್ಮದ್‌ ಶಮಿ, ಮೋಹಿತ್‌ ಶರ್ಮಾ ಮಾರಕ ಬೌಲಿಂಗ್‌ ದಾಳಿ ನೆರವಿನಿಂದ ಗುಜರಾತ್‌ ಟೈಟಾನ್ಸ್‌ (Gujarat Titans) ತಂಡ ಹೈದರಾಬಾದ್‌ ವಿರುದ್ಧ 34 ರನ್‌ಗಳ ಜಯ ಸಾಧಿಸಿದೆ.

    ಈ ಮೂಲಕ 2023ರ ಆವೃತ್ತಿಯಲ್ಲೂ 13ರ ಪೈಕಿ 9 ಪಂದ್ಯಗಳಲ್ಲಿ ಗೆಲುವು ಸಾಧಿಸಿ ಪ್ಲೇ ಆಫ್‌ಗೆ ಭರ್ಜರಿ ಎಂಟ್ರಿ ಕೊಟ್ಟ ಮೊದಲ ತಂಡವಾಗಿದೆ.‌ ಸತತ ಸೋಲಿನಿಂದ ಕಂಗೆಟ್ಟಿದ್ದ ಹೈದರಾಬಾದ್‌  (Sunrisers Hyderabad) ತಂಡ 12 ಪಂದ್ಯಗಳಲ್ಲಿ ಕೇವಕ 4ರಲ್ಲಿ ಗೆಲುವು ಸಾಧಿಸಿ ಬಹುತೇಕ ಮನೆಗೆ ಮರಳೋದು ಖಚಿತವಾಗಿದೆ.

    ಮೊದಲು ಬ್ಯಾಟಿಂಗ್‌ ಮಾಡಿದ ಟೈಟಾನ್ಸ್‌ 20 ಓವರ್‌ಗಳಲ್ಲಿ 9 ವಿಕೆಟ್‌ ನಷ್ಟಕ್ಕೆ 188 ರನ್‌ ಗಳಿಸಿತ್ತು. ಗೆಲುವಿಗೆ 189 ರನ್‌ಗಳ ಬೃಹತ್‌ ಮೊತ್ತದ ಗುರಿ ಪಡೆದ ಹೈದರಾಬಾದ್‌ 20 ನಿಗದಿತ ಓವರ್‌ಗಳಲ್ಲಿ 9 ವಿಕೆಟ್‌ ನಷ್ಟಕ್ಕೆ 154ರನ್‌ ಗಳಿಸಿ ಸೋಲೊಪ್ಪಿಕೊಂಡಿತು.

    ಚೇಸಿಂಗ್‌ ಆರಂಭಿಸಿದ ಹೈದರಾಬಾದ್‌ ಆರಂಭದಿಂದಲೇ ವಿಕೆಟ್‌ ಕಳೆದುಕೊಳ್ಳುತ್ತಾ ಸಾಗಿತು. ಪವರ್‌ ಪ್ಲೇ ಮುಗಿಯುವಷ್ಟರಲ್ಲೇ 45 ರನ್‌ ಗಳಿಗೆ ಪ್ರಮುಖ ನಾಲ್ಕು ವಿಕೆಟ್‌ ಕಳೆದುಕೊಂಡಿತ್ತು. 9ನೇ ಓವರ್‌ ಮುಕ್ತಾಯಕ್ಕೆ 7 ವಿಕೆಟ್‌ ಕಳೆದುಕೊಂಡು ಗೆಲುವಿನ ಭರವಸೆಯನ್ನೇ ಕಳೆದುಕೊಂಡಿತು.

    ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್‌ ಹೋರಾಟ ನಡೆಸಿದ ಹೆನ್ರಿಚ್‌ ಕಳಸೇನ್‌ ಅರ್ಧಶತಕ ಗಳಿಸಿದರು. ಕಳಸೇನ್‌ 44 ಎಸೆತಗಳಲ್ಲಿ 64 ರನ್‌ (4 ಬೌಂಡರಿ, 3 ಸಿಕ್ಸರ್‌) ಗಳಿಸಿದರು. ಇದರೊಂದಿಗೆ ಭುವನೇಶ್ವರ್‌ ಕುಮಾರ್‌ 27 ರನ್‌, ಕೊನೆಯಲ್ಲಿ ಮಯಾಂಕ್‌ ಮಾರ್ಕಂಡೆ 9 ಎಸೆತಗಳಲ್ಲಿ ಸ್ಫೋಟಕ 18 ರನ್‌ ಗಳಿಸಿದ್ದು ಬಿಟ್ಟರೆ, ಉಳಿದ ಅಗ್ರ ಕ್ರಮಾಂಕದ ಬ್ಯಾಟ್ಸ್‌ಮ್ಯಾನ್‌ಗಳ ಕಳಪೆ ಪ್ರದರ್ಶನದಿಂದಾಗಿ ತಂಡ ಸೊಲೊಪ್ಪಿಕೊಳ್ಳಬೇಕಾಯಿತು.

    ಗುಜರಾತ್‌ ಟೈಟಾನ್ಸ್‌ ಪರ ಬೆಂಕಿ ಬೌಲಿಂಗ್‌ ದಾಳಿ ನಡೆಸಿದ ಮೊಹಮ್ಮದ್‌ ಶಮಿ 4 ಓವರ್‌ಗಳಲ್ಲಿ 21 ರನ್‌ ನೀಡಿ 4 ವಿಕೆಟ್‌ ಕಿತ್ತರೆ, ಮೋಹಿತ್‌ ಶರ್ಮಾ 4 ಓವರ್‌ಗಳಲ್ಲಿ 28 ರನ್‌ ನೀಡಿ 4 ವಿಕೆಟ್‌ ಉರುಳಿಸಿದರು. ಯಶ್‌ ದಯಾಳ್‌ 1 ವಿಕೆಟ್‌ ಪಡೆದರು.

    ಐಪಿಎಲ್‌ನಲ್ಲಿ ಗಿಲ್‌ ಚೊಚ್ಚಲ ಶತಕ: ಈ ವರ್ಷದ ಆರಂಭದಿಂದಲೂ ಬ್ಯಾಟಿಂಗ್‌ ಫಾರ್ಮ್‌ನಲ್ಲಿರುವ ಶುಭಮನ್‌ ಗಿಲ್‌ ಈ ಬಾರಿ ಐಪಿಎಲ್‌ನಲ್ಲಿ ಭರ್ಜರಿ ಬ್ಯಾಟಿಂಗ್‌ ನಡೆಸುತ್ತಿದ್ದಾರೆ. ಸೋಮವಾರದ ಪಂದ್ಯದಲ್ಲೂ ಹೈದರಾಬಾದ್‌ ಬೌಲರ್‌ಗಳನ್ನ ಬೆಂಡೆತ್ತಿದ್ದ ಗಿಲ್‌ ಶತಕ ಸಿಡಿಸಿ ಮಿಂಚಿದರು. 58 ಎಸೆತಗಳಲ್ಲಿ 13 ಬೌಂಡರಿ, 1 ಸಿಕ್ಸರ್‌ನೊಂದಿಗೆ 101 ರನ್‌ ಗಳಿಸಿದರು. ಇದು ಐಪಿಎಲ್‌ನಲ್ಲಿ ಗಿಲ್‌ ಸಿಡಿಸಿದ ಚೊಚ್ಚಲ ಶತಕ ಹಾಗೂ ಟಿ20 ಫಾರ್ಮ್ಯಾಟ್‌ನಲ್ಲಿ ಚಚ್ಚಿದ 2ನೇ ಶತಕವಾಯಿತು. ಇದರೊಂದಿಗೆ ಸಾಯಿ ಸುದರ್ಶನ್‌ 36 ಎಸೆತೆಗಳಲ್ಲಿ 47 ರನ್‌ (6 ಬೌಂಡರಿ, 1 ಸಿಕ್ಸರ್‌) ಗಳಿಸಿ ಸಾಥ್‌ ನೀಡಿದರು. ಇವರಿಬ್ಬರ ಜೊತೆಯಾಟದಿಂದ 2ನೇ ವಿಕೆಟ್‌ ಪತನಕ್ಕೆ 14.1 ಓವರ್‌ಗಳಲ್ಲಿ 147 ರನ್‌ ಸೇರ್ಪಡೆಯಾಯಿತು.

    ಭುವಿ ಬೆಂಕಿ ಬೌಲಿಂಗ್‌: ಸನ್‌ ರೈಸರ್ಸ್‌ ಹೈದರಾಬಾದ್‌ ಪರ ಮಾರಕ ಬೌಲಿಂಗ್‌ ದಾಳಿ ನಡೆಸಿದ ಭುವನೇಶ್ವರ್‌ ಕುಮಾರ್‌ 4 ಓವರ್‌ಗಳಲ್ಲಿ 30 ರನ್‌ ನೀಡಿ ‌ಪ್ರಮುಖ 5 ವಿಕೆಟ್‌ ಕಿತ್ತರೇ, ಮಾರ್ಕೊ ಜಾನ್ಸೆನ್‌, ಫಜಲ್‌ಹಕ್‌ ಫಾರೂಕಿ ಹಾಗೂ ಟಿ. ನಟರಾಜನ್‌ ತಲಾ ಒಂದೊಂದು ವಿಕೆಟ್‌ ಪಡೆದು ಮಿಂಚಿದರು.

  • ರಿಂಕು, ರಾಣಾ ಬ್ಯಾಟಿಂಗ್‌, ಮ್ಯಾಜಿಕ್‌ ಫೀಲ್ಡಿಂಗ್‌ – KKRಗೆ 5 ರನ್‌ಗಳ ರೋಚಕ ಜಯ

    ರಿಂಕು, ರಾಣಾ ಬ್ಯಾಟಿಂಗ್‌, ಮ್ಯಾಜಿಕ್‌ ಫೀಲ್ಡಿಂಗ್‌ – KKRಗೆ 5 ರನ್‌ಗಳ ರೋಚಕ ಜಯ

    ಹೈದರಾಬಾದ್‌: ರಿಂಕು ಸಿಂಗ್‌ (Rinku Singh), ನಾಯಕ ನಿತೀಶ್‌ ರಾಣಾ (Nitish Rana) ಸಂಘಟಿತ ಬ್ಯಾಟಿಂಗ್‌ ಹಾಗೂ ಸಂಘಟಿತ ಬೌಲಿಂಗ್‌ ದಾಳಿ ನೆರವಿನಿಂದ ಕೋಲ್ಕತ್ತಾ ನೈಟ್‌ರೈಡರ್ಸ್‌ (Kolkata Knight Riders) ತಂಡವು ಸನ್‌ ರೈಸರ್ಸ್‌ ಹೈದರಾಬಾದ್‌ (Sunrisers Hyderabad) ವಿರುದ್ಧ 5 ರನ್‌ಗಳ ರೋಚಕ ಜಯ ಸಾಧಿಸಿತು.

    ಇಲ್ಲಿನ ರಾಜೀವ್‌ಗಾಂಧಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಕೋಲ್ಕತ್ತಾ ನೈಟ್‌ರೈಡರ್ಸ್‌ ತಂಡ 20 ಓವರ್‌ಗಳಲ್ಲಿ 9 ವಿಕೆಟ್‌ ನಷ್ಟಕ್ಕೆ 171 ರನ್‌ ಗಳಿಸಿತ್ತು. ಗೆಲುವಿಗೆ 172 ರನ್‌ ಗುರಿ ಪಡೆದ ಸನ್‌ ರೈಸರ್ಸ್‌ ಹೈದರಾಬಾದ್‌ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್‌ ನಷ್ಟಕ್ಕೆ 166 ರನ್‌ ಗಳಿಸಿ ಸೋಲೊಪ್ಪಿಕೊಂಡಿತು.

    ಚೇಸಿಂಗ್‌ ಆರಂಭಿಸಿದ ಹೈದರಾಬಾದ್‌ ತಂದ ಮೊದಲ 10 ಓವರ್‌ಗಳಲ್ಲಿ 75 ರನ್‌ ಗಳಿಸಿತ್ತು. ಇನ್ನೂ 60 ಎಸೆತಗಳಲ್ಲಿ 97 ರನ್‌ಗಳ ಅಗತ್ಯವಿತ್ತು. ರನ್‌ ಗಳಿಕೆಯಲ್ಲಿ ಉತ್ತಮ ಸ್ಥಿತಿಯಲ್ಲಿದ್ದರೂ ಪ್ರಮುಖ 4 ವಿಕೆಟ್‌ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಆದರೆ ನಾಯಕ ಏಡನ್‌ ಮಾರ್ಕ್ರಮ್‌ ಹಾಗೂ ಹೆನ್ರಿಕ್ ಕ್ಲಾಸೆನ್ ಜವಾಬ್ದಾರಿಯುತ ಬ್ಯಾಟಿಂಗ್‌ ನೆರವಿನಿಂದ ತಂಡಕ್ಕೆ ಮತ್ತಷ್ಟು ರನ್‌ ಸೇರ್ಪಡೆಯಾಯಿತು. ತಂಡದಲ್ಲಿ ಗೆಲುವಿನ ಆಸೆಯೂ ಚಿಗುರಿತ್ತು.

    11 ರಿಂದ 19ನೇ ಓವರ್‌ವರೆಗೆ ಕ್ರಮವಾಗಿ 15, 12, 12, 10, 10, 4, 8, 5, 12 ರನ್‌ ಸೇರ್ಪಡೆಯಾಯಿತು. ಕೊನೆಯ ಓವರ್‌ನಲ್ಲಿ 9 ರನ್‌ ಬೇಕಿದ್ದಾಗ ವರುಣ್‌ ಚಕ್ರವರ್ತಿ ಬೌಲಿಂಗ್‌ನಲ್ಲಿದ್ದರು. ಮೊದಲ ಎರಡು ಎಸೆತಗಳಲ್ಲಿ ತಲಾ ಒಂದೊಂದು ರನ್‌ ಸೇರ್ಪಡೆಯಾಯಿತು. ಆದ್ರೆ ಕ್ರೀಸ್‌ನಲ್ಲಿದ್ದ ಅಬ್ದುಲ್ ಸಮದ್‌ 3ನೇ ಎಸೆತವನ್ನು ಸಿಕ್ಸ್‌ ಸಿಡಿಸಲು ಯತ್ನಿಸಿ ಬೌಂಡರಿ ಲೈನ್‌ ಕ್ಯಾಚ್‌ ನೀಡಿ ನಿರಾಸೆ ಮೂಡಿಸಿದರು. ಬಳಿಕ 3 ಎಸೆತದಲ್ಲಿ ಒಂದೊಂದು ರನ್‌ ಗಳಷ್ಟೇ ಗಳಿಸಲಾಗಿ ತಂಡ ಸೊಲೊಪ್ಪಿಕೊಂಡಿತು.

    ಹೈದರಾಬಾದ್‌ ಪರ ಮಯಾಂಕ್‌ ಅಗರ್ವಾಲ್‌ 18 ರನ್‌, ರಾಹುಲ್‌ ತ್ರಿಪಾಠಿ 20 ರನ್‌, ಏಡನ್‌ ಮಾರ್ಕ್ರಮ್‌ 41 ರನ್‌, ಹೆನ್ರಿಕ್ ಕ್ಲಾಸೆನ್ 36 ರನ್‌ ಹಾಗೂ ಅಬ್ದುಲ್‌ ಸಮದ್‌ 21 ರನ್‌ ಗಳಿಸಿದರು.

    ಕೆಕೆಆರ್‌ ಪರ ವೈಭವ್‌ ಅರೋರ, ಶಾರ್ದೂಲ್‌ ಠಾಕೂರ್‌ ತಲಾ 2 ವಿಕೆಟ್‌ ಪಡೆದರೆ, ಹರ್ಶಿತ್‌ ರಾಣಾ, ರಸ್ಸೆಲ್‌, ಅನುಕುಲ್‌ ರಾಯ್‌ ಹಾಗೂ ವರುಣ್‌ ಚಕ್ರವರ್ತಿ ತಲಾ ಒಂದೊಂದು ವಿಕೆಟ್‌ ಕಿತ್ತರು.

    ಮೊದಲು ಬ್ಯಾಟಿಂಗ್‌ ಮಾಡಿದ ಕೆಕೆಆರ್‌ ತಂಡ ಒಂದೆಡೆ ವಿಕೆಟ್‌ ಕಳೆದುಕೊಳ್ಳುತ್ತಿದ್ದರೂ ರನ್‌ ಕಲೆಹಾಕುತ್ತಾ ಸಾಗಿತು. ಮಧ್ಯಮ ಕ್ರಮಾಂಕದಲ್ಲಿ ನಾಯಕ ನಿತೀಶ್‌ ರಾಣಾ, ರಿಂಕು ಸಿಂಗ್ ಹಾಗೂ ಆ್ಯಂಡ್ರೆ ರಸ್ಸೆಲ್‌ ಬ್ಯಾಟಿಂಗ್‌ ನೆರವಿನಿಂದ 170 ರನ್‌ಗಳ ಗಡಿದಾಟುವಲ್ಲಿ ಯಶಸ್ವಿಯಾಯಿತು.

    ಕೆಕೆಆರ್‌ ಪರ ನಾಯಕ ರಿಂಕು ಸಿಂಗ್‌ 46 ರನ್‌ (35 ಎಸೆತ, 4 ಬೌಂಡರಿ, 1 ಸಿಕ್ಸರ್‌), ನಿತೀಶ್‌ ರಾಣಾ 42 ರನ್‌ (31 ಎಸೆತ, 3 ಬೌಂಡರಿ, 3 ಸಿಕ್ಸರ್‌), ರಸ್ಸೆಲ್‌ 24 ರನ್‌ ಹಾಗೂ ಜೇಸನ್‌ ರಾಯ್‌ 20 ರನ್‌ ಗಳಿಸಿ ತಂಡಕ್ಕೆ ನೆರವಾದರು.

    ಹೈದರಾಬಾದ್‌ ಪರ ಮಾರ್ಕೊ ಜಾನ್ಸೆನ್‌, ಟಿ. ನಟರಾಜನ್‌ ತಲಾ 2 ವಿಕೆಟ್‌ ಪಡೆದರೆ, ಭುವನೇಶ್ವರ್‌ ಕುಮಾರ್‌, ಕಾರ್ತಿಕ್‌ ತ್ಯಾಗಿ, ಏಡನ್‌ ಮಾರ್ಕ್ರಮ್‌, ಮಯಾಂಕ್‌ ಮಾರ್ಕಂಡೆ ತಲಾ ಒಂದೊಂದು ವಿಕೆಟ್‌ ಪಡೆದು ಮಿಂಚಿದರು.

  • ಜಡೇಜಾ ಜಾದು, ಕಾನ್ವೆ ಕಿಕ್‌ – ತವರಿನಲ್ಲಿ ತಿಣುಕಾಡಿ ಗೆದ್ದ ಚೆನ್ನೈ; ಹೈದರಾಬಾದ್‌ ವಿರುದ್ಧ 7 ವಿಕೆಟ್‌ಗಳ ಜಯ

    ಜಡೇಜಾ ಜಾದು, ಕಾನ್ವೆ ಕಿಕ್‌ – ತವರಿನಲ್ಲಿ ತಿಣುಕಾಡಿ ಗೆದ್ದ ಚೆನ್ನೈ; ಹೈದರಾಬಾದ್‌ ವಿರುದ್ಧ 7 ವಿಕೆಟ್‌ಗಳ ಜಯ

    ಚೆನ್ನೈ: ಡಿವೋನ್‌ ಕಾನ್ವೆ ಸ್ಫೋಟಕ ಬ್ಯಾಟಿಂಗ್‌ ಹಾಗೂ ರವೀಂದ್ರ ಜಡೇಜಾ ಸ್ಪಿನ್‌ ಜಾದು ನೆರವಿನಿಂದ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡವು ತವರಿನಲ್ಲಿ ಸನ್‌ ರೈಸರ್ಸ್‌ ಹೈದರಾಬಾದ್‌ ವಿರುದ್ಧ 7 ವಿಕೆಟ್‌ಗಳ ಜಯ ಸಾಧಿಸಿದೆ. ಆರಂಭದಲ್ಲಿ ಅಬ್ಬರಿಸಿದರೂ ಮಧ್ಯಮ ಕ್ರಮಾಂಕದಲ್ಲಿ ಹೈದರಾಬಾದ್‌ ಬೌಲರ್‌ಗಳ ಬಿಗಿ ಹಿಡಿತಕ್ಕೆ ಸಿಕ್ಕಿದ ಚೆನ್ನೈ 19ನೇ ಓವರ್‌ನಲ್ಲಿ ಗೆಲುವಿನ ಮೊತ್ತ ದಾಖಲಿಸಿದೆ.

    ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಸನ್‌ ರೈಸರ್ಸ್‌ ಹೈದರಾಬಾದ್‌ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ 134 ರನ್‌ ಗಳಿಸಿತು. 135 ರನ್‌ಗಳ ಅಲ್ಪ ಮೊತ್ತದ ಗುರಿ ಬೆನ್ನತ್ತಿದ್ದ ಚೆನ್ನೈ ಸೂಪರ್‌ ಕಿಂಗ್ಸ್‌ 18.4 ಓವರ್‌ಗಳಲ್ಲಿ 3 ವಿಕೆಟ್‌ ನಷ್ಟಕ್ಕೆ 138 ರನ್‌ ಗಳಿಸಿ ಗೆಲುವು ಸಾಧಿಸಿತು.

    ಚೇಸಿಂಗ್‌ ಆರಂಭಿಸಿದ ಚೆನ್ನೈ ಸೂಪರ್‌ ಕಿಂಗ್ಸ್‌ ಉತ್ತಮ ಆರಂಭ ಪಡೆದುಕೊಂಡಿತ್ತು. ಆರಂಭಿಕರಾಗಿ ಕಣಕ್ಕಿಳಿದ ಡಿವೋನ್‌ ಕಾನ್ವೆ ಹಾಗೂ ಋತುರಾಜ್‌ ಗಾಯಕ್ವಾಡ್‌ ಭರ್ಜರಿ ಸಿಕ್ಸರ್‌, ಬೌಂಡರಿಯ ಆಟವಾಡಿದ್ದರು. ಮೊದಲ ವಿಕೆಟ್‌ ಪತನಕ್ಕೆ ಈ ಜೋಡಿ 66 ಎಸೆತಗಳಲ್ಲಿ 87 ರನ್‌ ಗಳಿಸಿತ್ತು. ಈ ವೇಳೆ ಋತುರಾಜ್‌ ಗಾಯಕ್ವಾಡ್‌ 35 ರನ್‌ (30 ಎಸೆತ, 2 ಬೌಂಡರಿ) ರನ್‌ ಗಳಿಸಿ ವಿಕೆಟ್‌ ಕಳೆದುಕೊಳ್ಳುತ್ತಿದ್ದಂತೆ ರನ್‌ ವೇಗ ಕಡಿಮೆಯಾಯಿತು.

    ಮಧ್ಯಮ ಕ್ರಮಾಂಕದಲ್ಲಿ ಬಿಗಿ ಬೌಲಿಂಗ್‌ ಹಿಡಿತ ಸಾಧಿಸಿದ ಹೈದರಾಬಾದ್‌ ತಂಡ ಚೆನ್ನೈ ಅಗ್ರಕ್ರಮಾಂಕದ ಬ್ಯಾಟ್ಸ್‌ಮ್ಯಾನ್‌ಗಳಾದ ಅಜಿಂಕ್ಯಾ ರಹಾನೆ ಹಾಗೂ ಅಂಬಟಿ ರಾಯುಡು ಅವರನ್ನು ಅಲ್ಪ ಮೊತ್ತಕ್ಕೆ ಕಟ್ಟಿಹಾಕುವಲ್ಲಿ ಯಶಸ್ವಿಯಾಗಿತ್ತು. ಆದ್ರೆ ಡಿವೋನ್‌ ಕಾನ್ವೆ ಸ್ಫೋಟಕ ಬ್ಯಾಟಿಂಗ್‌ ನೆರವಿನಿಂದ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಯಿತು. ಕೊನೆಯವರೆಗೂ ಹೋರಾಡಿದ ಡಿವೋನ್‌ ಕಾನ್ವೆ 57 ಎಸೆತಗಳಲ್ಲಿ 77 ರನ್‌ (12 ಬೌಂಡರಿ, 1 ಸಿಕ್ಸರ್) ಚಚ್ಚಿದರೆ, ಕೊನೆಯಲ್ಲಿ ಮೊಯಿನ್‌ ಅಲಿ 6 ರನ್‌ ಗಳಿಸಿ ಅಜೇಯರಾಗುಳಿದರು. ಅಜಿಂಕ್ಯಾ ರಹಾನೆ ಹಾಗೂ ಅಂಬಟಿ ರಾಯುಡು ತಲಾ 9 ರನ್‌ ಗಳಿಸಿ ಔಟಾದರು.

    ಟಾಸ್‌ ಸೋತು ಮೊದಲು ಕ್ರೀಸ್‌ಗಿಳಿದ ಹೈದರಾಬಾದ್‌ ತಂಡ ರವೀಂದ್ರ ಜಡೇಜಾ ಸೇರಿದಂತೆ ಚೆನ್ನೈ ಬೌಲರ್‌ಗಳ ದಾಳಿಗೆ ತತ್ತರಿಸಿತು. ಆರಂಭಿಕರಾಗಿ ಕಣಕ್ಕಿಳಿದ ಅಭಿಷೇಕ್‌ ಶರ್ಮಾ ಹಾಗೂ ಹ್ಯಾರಿ ಬ್ರೂಕ್‌ ಉತ್ತಮ ಆರಂಭ ಪಡೆಯುವಲ್ಲಿ ವಿಫಲರಾದರು. ಆರಂಭದಲ್ಲೇ ಆಕ್ರಮಣಕಾರಿ ಬ್ಯಾಟಿಂಗ್‌ಗೆ ಮುಂದಾದಾ ಬ್ರೂಕ್‌ 13 ಎಸೆತಗಲ್ಲಿ 18 ರನ್‌ ಗಳಿಸಿ ಔಟಾದರು. ಮತ್ತೋರ್ವ ಆರಂಭಿಕನಾಗಿ ಕಣಕ್ಕಿಳಿದಿದ್ದ ಅಭಿಷೇಕ್‌ ಶರ್ಮಾ 26 ಎಸೆತಗಳಲ್ಲಿ 34 ರನ್‌ (3 ಬೌಂಡರಿ, 1 ಸಿಕ್ಸರ್‌) ಗಳಿಸಿದರು. ನಂತರದಲ್ಲಿ ಕಣಕ್ಕಿಳಿದ ಯಾರೊಬ್ಬರೂ ಉತ್ತಮ ಜೊತೆಯಾಟ ನೀಡದ ಕಾರಣ ಹೈದರಾಬಾದ್‌ ತಂಡ ಅಲ್ಪ ಮೊತ್ತಕ್ಕೆ ತೃಪ್ತಿಪಟ್ಟುಕೊಳ್ಳಬೇಕಾಯಿತು.

    ಇಂಪ್ಯಾಕ್ಟ್‌ ಪ್ಲೇಯರ್‌ ಆಗಿ ಕಣಕ್ಕಿಳಿದವರಲ್ಲಿ ರಾಹುಲ್‌ ತ್ರಿಪಾಠಿ 21 ರನ್‌ ಗಳಿಸಿ ತಂಡಕ್ಕೆ ಸ್ವಲ್ಪ ಚೇತರಿಕೆ ನೀಡಿದರೆ, ನಾಯಕ ಏಡನ್‌ ಮಾರ್ಕ್ರಮ್‌ 12 ರನ್‌, ಹೆನ್ರಿಕ್ ಕ್ಲಾಸೆನ್ 17 ರನ್‌, ಮಯಾಂಕ್‌ ಅಗರ್ವಾಲ್‌ ಕೇವಲ 2 ರನ್‌, ವಾಷಿಂಗ್ಟನ್‌ ಸುಂದರ್‌ 9 ರನ್‌ ಹಾಗೂ ಮಾರ್ಕೊ ಜಾನ್ಸೆನ್‌ 17 ರನ್‌ ಗಳಿಸಿದರು.

    ಜಡೇಜಾ ಜಾದು: ಚೆನ್ನೈ ಸೂಪರ್‌ ಕಿಂಗ್ಸ್‌ ಪರ ಸ್ಪಿನ್‌ ಜಾದು ನಡೆಸಿದ ರವೀಂದ್ರ ಜಡೇಜಾ 4 ಓವರ್‌ಗಳಲ್ಲಿ ಕೇವಲ 22 ರನ್‌ ನೀಡಿ ಪ್ರಮುಖ 3 ವಿಕೆಟ್‌ ಕಬಳಿಸಿದರು. ಇನ್ನೂ ಇಂಪ್ಯಾಕ್ಟ್‌ ಪ್ಲೇಯರ್‌ ಆಕಾಶ್‌ ಸಿಂಗ್‌, ಮಹೇಶ್‌ ತೀಕ್ಷಣ ಹಾಗೂ ಮತೀಶ ಪತಿರಾನ ತಲಾ ಒಂದೊಂದು ವಿಕೆಟ್‌ ಪಡೆದರು.