Tag: AIDMK

  • ’94’ ಕರುಣಾ ಕಥೆ

    ’94’ ಕರುಣಾ ಕಥೆ

    https://www.youtube.com/watch?v=GY-peQGWAK8

  • ಬಿಗ್ ಬುಲೆಟಿನ್ | 08-08-2018

    ಬಿಗ್ ಬುಲೆಟಿನ್ | 08-08-2018

    https://www.youtube.com/watch?v=v95r9qsPqko

  • ಶಶಿಕಲಾ ಪತಿಗೆ ತೀವ್ರ ಅನಾರೋಗ್ಯ- ಜಾಮೀನು ಅರ್ಜಿ ಸಲ್ಲಿಕೆಗೆ ಚಿನ್ನಮ್ಮ ಪ್ಲಾನ್

    ಶಶಿಕಲಾ ಪತಿಗೆ ತೀವ್ರ ಅನಾರೋಗ್ಯ- ಜಾಮೀನು ಅರ್ಜಿ ಸಲ್ಲಿಕೆಗೆ ಚಿನ್ನಮ್ಮ ಪ್ಲಾನ್

    ಬೆಂಗಳೂರು: ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಜೈಲು ಸೇರಿರುವ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಶಶಿಕಲಾ ಪತಿ ಎಂ ನಟರಾಜನ್ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದ್ದು, ಚೆನ್ನೈನ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಶಶಿಕಲಾ ಪತಿ ನಟರಾಜನ್‍ಗೆ ಯಕೃತ್ ಹಾಗು ಮೂತ್ರಪಿಂಡಗಳು ವಿಫಲವಾಗಿದ್ದು ಆರೋಗ್ಯ ಗಂಭೀರವಾಗಿದೆ. ಸದ್ಯ ಚೆನ್ನೈನ ಗ್ಲೋಬಲ್ ಹೆಲ್ತ್ ಸಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದ್ದು, ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿದೆ. ಪತಿಯ ಆರೋಗ್ಯ ಚಿಂತಾಜನಕ ಸ್ಥಿತಿ ತಲುಪಿರೋ ಬೆನ್ನಲ್ಲೇ ಇವತ್ತು ಅಥವಾ ನಾಳೆ ಜಾಮೀನು ಕೋರಿ ಶಶಿಕಲಾ ಪರ ವಕೀಲರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸೋ ಸಾಧ್ಯತೆಯಿದೆ.

    74 ವರ್ಷದ ನಟರಾಜನ್‍ಗೆ ಭಾನುವಾರ ಸುಮಾರು 8 ಗಂಟೆಗಳ ಕಾಲ ನಿರಂತರವಾಗಿ ಡಯಾಲಿಸಿಸ್ ಮಾಡಲಾಗಿದ್ದು, ಕಿಡ್ನಿ ಹಾಗು ಲಿವರ್ ದಾನಿಗಳಿಗಾಗಿ ತೀವ್ರ ಹುಡುಕಾಟ ನಡೆಯುತ್ತಿದೆ.

  • ಎರಡೆಲೆ ಚಿಹ್ನೆಗಾಗಿ ಕೋಟಿ ಡೀಲ್ ಮಾಡ್ದೋನು ಬೆಂಗ್ಳೂರು ಹುಡ್ಗ – ದಕ್ಷಿಣ ಭಾರತದ ರಾಜಕಾರಣಿಗಳೆಲ್ಲಾ ಈತನ ಸಂಬಂಧಿಕರಂತೆ!

    ಎರಡೆಲೆ ಚಿಹ್ನೆಗಾಗಿ ಕೋಟಿ ಡೀಲ್ ಮಾಡ್ದೋನು ಬೆಂಗ್ಳೂರು ಹುಡ್ಗ – ದಕ್ಷಿಣ ಭಾರತದ ರಾಜಕಾರಣಿಗಳೆಲ್ಲಾ ಈತನ ಸಂಬಂಧಿಕರಂತೆ!

    ಮುರುಳೀಧರ್ ಹೆಚ್.ಸಿ.

    ನವದೆಹಲಿ: ಎಐಎಡಿಎಂಕೆಯ ಎರಡೆಲೆ ಚಿಹ್ನೆಗಾಗಿ ಡೀಲ್ ಕುದುರಿಸೋಕೆ ಮುಂದಾದವನು ಬೆಂಗಳೂರಿನ ಯುವಕ. ಮೊದಲಿನಿಂದಲೂ ಈತನಿಗೆ ಹಣದ ಹುಚ್ಚು ವ್ಯಾಮೋಹ, ಕಾರುಗಳೆಂದರೆ ಶೋಕಿ. ಸುಖೇಶ್ ಚಂದ್ರಶೇಖರನ್ ಎಂಬ ಹೆಸರಿನ ಈತ ಮೂಲತಃ ತಮಿಳುನಾಡಿನವನು. ಆದರೆ ಈತ ನೆಲೆಸಿರೋದು ಮಾತ್ರ ಬೆಂಗಳೂರಿನಲ್ಲಿ.

    ಘಟನೆ ಏನು?: ಎಐಎಡಿಎಂಕೆ ಪಕ್ಷದ ಚಿಹ್ನೆಗಾಗಿ ಚುನಾವಣಾ ಆಯೋಗಕ್ಕೆ ಲಂಚ ನೀಡಲು ಮುಂದಾಗಿದ್ದ ಆರೋಪದ ಮೇಲೆ ಶಶಿಕಲಾ ಸಂಬಂಧಿ ಟಿಟಿ ದಿನಕರನ್ ವಿರುದ್ಧ ದೆಹಲಿ ಕ್ರೈಂ ಬ್ರಾಂಚ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಎಐಎಡಿಎಂಕೆ ಪಕ್ಷದ ಉಪ ಪ್ರಧಾನ ಕಾರ್ಯದರ್ಶಿಯಾದ ದಿನಕರನ್ ವಿರುದ್ಧ ಎಫ್‍ಐಆರ್ ದಾಖಲಾಗಿದೆ. ಆರ್‍ಕೆ ನಗರದ ಉಪಚುನಾವಣೆ ಹಿನ್ನೆಲೆಯಲ್ಲಿ ಎಐಎಡಿಎಂಕೆಯ ಎರಡು ಬಣದ ನಡುವೆ ಚಿಹ್ನೆಗಾಗಿ ಪೈಪೋಟಿ ಏರ್ಪಟ್ಟಿದ್ದರಿಂದ ಚುನಾವಣಾ ಆಯೋಗ ಪಕ್ಷದ ಎರಡು ಎಲೆಯ ಚಿಹ್ನೆಯನ್ನು ತಡೆಹಿಡಿದಿತ್ತು. ಈ ಚಿಹ್ನೆಗಾಗಿ ದಿನಕರನ್ 50 ಕೋಟಿ ರೂ. ಲಂಚ ಕೊಡಲು ಸಿದ್ಧರಾಗಿದ್ದರು ಎಂದು ವರದಿಯಾಗಿದೆ.

    ಇದಕ್ಕೆ ಸಂಬಂಧಿಸಿದಂತೆ ಮಧ್ಯವರ್ತಿ ಸುಖೇಶ್ ಚಂದ್ರಶೇಖರನ್‍ನನ್ನು ಪೊಲೀಸರು ಬಂಧಿಸಿದ್ದು, ಸುಖೇಶ್ ಬಳಿ 1.30 ಕೋಟಿ ರೂ. ಪತ್ತೆಯಾಗಿದೆ. ಇದು ಚುನಾವಣಾ ಆಯೋಗಕ್ಕೆ ನೀಡಲು ಇಟ್ಟುಕೊಂಡಿದ್ದ ಹಣ ಎಂದು ಹೇಳಲಾಗಿದೆ. ಲಂಚ ನೀಡಲು ಮುಂದಾಗಿದ್ದ ಬಗ್ಗೆ ಸುಖೇಶ್ ಒಪ್ಪಿಕೊಂಡಿದ್ದಾನೆಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಆದ್ರೆ ದಿನಕರನ್ ಈ ಆರೋಪಗಳನ್ನ ತಳ್ಳಿ ಹಾಕಿದ್ದು, ಸುಖೇಶ್ ಚಂದ್ರಶೇಖರನ್ ಎಂಬ ಹೆಸರಿನ ಯಾವುದೇ ವ್ಯಕ್ತಿ ನನಗೆ ಗೊತ್ತಿಲ್ಲ. ನಾನು ನನ್ನ ಜೀವನದಲ್ಲೇ ಈ ವ್ಯಕ್ತಿಯ ಜೊತೆ ಮಾತನಾಡಿಲ್ಲ ಎಂದು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ. ಬಂಧಿತ ಆರೋಪಿ ಸುಖೇಶ್‍ನಿಂದ ಪೊಲೀಸರು 1.3 ಕೋಟಿ ರೂ. ಹಣ, ಬಿಎಂಡಬ್ಲ್ಯೂ ಹಾಗೂ ಮರ್ಸಿಡಿಸ್ ಕಾರುಗಳನ್ನ ಜಪ್ತಿ ಮಾಡಿದ್ದಾರೆ.

    ತಮಿಳುನಾಡು ಅಂದ್ರೆ ಜಯಲಲಿತಾ, ಜಯಲಲಿತಾ ಅಂದ್ರೆ ತಮಿಳುನಾಡು ಅಂತಿತ್ತು. ಯಾವಾಗ ಜಯಲಲಿತಾ ಸಾವನ್ನಪ್ಪಿದರೋ ಬಳಿಕ ಇಡೀ ತಮಿಳುನಾಡಿನ ರಾಜಕೀಯವೇ ಬುಡಮೇಲು ಆಗಿಬಿಟ್ಟಿತ್ತು. ಇನ್ನು ಆರ್‍ಕೆ ನಗರ ಉಪಚುನಾವಣೆಗೆ ಎರಡೆಲೆಗಾಗಿ ಬಡಿದಾಡಿಕೊಂಡ ಎರಡು ಬಣ ಬೇರೆ ಬೇರೆ ಚಿಹ್ನೆಯನ್ನು ಇಟ್ಟುಕೊಂಡು ಚುನಾವಣೆಗೆ ಇಳಿದ್ರು. ಆದರೆ ಭ್ರಷ್ಟಚಾರದ ಕಾರಣದಿಂದ ಉಪಚುನಾವಣೆಯೇ ಕ್ಯಾನ್ಸಲ್ ಆಗಿಬಿಟ್ಟಿತ್ತು.

    ಎರಡೆಲೆಗೆ 50 ಕೋಟಿ..!: ಇಷ್ಟೆಲ್ಲ ಆದ್ಮೇಲೆ ಎರಡೆಲೆ ಚಿಹ್ನೆಯನ್ನು ಪಡೆದುಕೊಳ್ಳೊದೇ ಪ್ರತಿಷ್ಟೆಯನ್ನಾಗಿ ಮಾಡಿಕೊಂಡ ಎರಡು ಬಣಗಳಲ್ಲಿ ದಿನಕರನ್ ಒಂದು ಹೆಜ್ಜೆ ಮುಂದೆಯೇ ಹೋದಂತಿದೆ… ಎರಡೆಲೆಗಾಗಿ ಚುನಾವಣಾ ಆಯೋಗದ ಅಧಿಕಾರಿಗಳಿಗೆ 50 ಕೋಟಿ ಡೀಲ್ ಮಾತನಾಡೋದಕ್ಕೆ ಹೋಗಿ 1 ಕೋಟಿ ಹಣವನ್ನು ಕೊಡೋದಕ್ಕೆ ಡೀಲ್ ಮಾಡಿಕೊಂಡಿದ್ದರಂತೆ. ಈ ವಿಚಾರ ತಿಳಿದಿದ್ದ ದೆಹಲಿ ಕ್ರೈಂ ಬ್ರಾಂಚ್ ಪೊಲೀಸ್ರು ಸುಖೇಶ್ ಚಂದ್ರಶೇಖರನ್‍ನನ್ನು ಬಂಧಿಸಿದ್ದಾರೆ.

    ದಕ್ಷಿಣದ ರಾಜಕರಾಣಿಗಳೆಲ್ಲಾ ಸಂಬಂಧಿಕರೇ!: ಹಣ ಕೊಡೋದಕ್ಕೆ ಹೋಗಿ ಪೊಲೀಸ್ರ ಕೈಯಲ್ಲಿ ತಗ್ಲಾಕೊಂಡ ಸುಖೇಶ್ ಚಂದ್ರಶೇಖರನ್ ಮೂಲ ಕೆದುಕುತ್ತಾ ಹೋದ್ರೆ ಒಂದು ಫಿಲಂ ಸ್ಟೋರಿಯನ್ನೇ ಮಾಡ್ಬಹುದು. ಚೆನ್ನೈ ಮೂಲದ ಸುಕೇಶ್ ಬೆಂಗಳೂರಿನಲ್ಲೇ ನೆಲೆಸಿ ಸಿಕ್ಕ ಸಿಕ್ಕ ಜನರಿಗೆಲ್ಲಾ ಮೋಸ ಮಾಡಿಕೊಂಡೇ ಜೀವನ ಮಾಡ್ತಾ ಇದ್ದ. ರಾಜಕಾರಣಿಗಳ ಸಂಬಂಧಿ ಅಂತ ಹೇಳಿಕೊಳ್ತಾ ಇದ್ದ ಸುಖೇಶ್, ಕುಮಾರಸ್ವಾಮಿ ಮುಖ್ಯ ಮಂತ್ರಿಯಾಗಿದ್ದಾಗ ನಾನು ಕುಮಾರಸ್ವಾಮಿ ಸಂಬಂಧಿ ಎಂದು ಬಾಲಾಜಿ ಎಂಬುವವರಿಗೆ ಬರೋಬರಿ 1 ಕೋಟಿಯಷ್ಟು ಉಂಡೆ ನಾಮ ತೀಡಿ ಎಸ್ಕೇಪ್ ಆಗಿದ್ನಂತೆ.

    2009ರಲ್ಲಿಯೇ ಕೋರಮಂಗಲ ಪೊಲೀಸ್ರು 10 ಲಕ್ಷ ಚೀಟಿಂಗ್ ಕೇಸ್‍ನಲ್ಲಿ ಅರೆಸ್ಟ್ ಆಗಿದ್ದ ಸುಖೇಶ್ ಮೋಸ ಮಡೋದಕ್ಕೆ ಶುರು ಮಾಡಿದ್ದೇ ತನ್ನ 17ನೇ ವಯಸ್ಸಿನಲ್ಲಿ. ಟೀನೇಜ್‍ನಲ್ಲಿ ನೋಡಿದ್ದೆಲ್ಲಾ ಬೇಕು ಅಂದುಕೊಳ್ಳುವ ವಯಸ್ಸಿನ ಹುಡ್ಗ ಸಿಕ್ಕ ಸಿಕ್ಕವರನ್ನೆಲ್ಲಾ ಮೋಸ ಮಾಡಬಹುದು ಅಂತ ಸುಲಭವಾಗಿ ತಿಳಿದುಕೊಂಡುಬಿಟ್ಟಿದ್ದ.

    ಜಯಲಲಿತಾ ಸೋದರನ ಮಗ ಅಂತೆ..!, ಕರುಣಾನಿಧಿಯ ಮೊಮ್ಮಗ..!: ಹಾವು ಮುಂಗುಸಿಯಂತೆ ಬಡಿದಾಡಿಕೊಳ್ತಾ ಇದ್ದ ಜಯಲಲಿತಾ ಮತ್ತು ಕರುಣಾನಿಧಿ ಸಂಬಂಧಿ ಅಂತ ಜನರಿಗೆ ಮೋಸ ಮಾಡ್ತಾ ಇದ್ದ. ಒಬ್ಬೊಬ್ಬರ ಬಳಿ ಒಂದೊಂದು ರೀತಿಯಲ್ಲಿ ಹೇಳ್ತಾ ಇದ್ದ ಸುಖೇಶ್ ಚಂದ್ರಶೇಖರನ್ ತಮಿಳುನಾಡಿನಲ್ಲಿಯೇ 100 ಕೋಟಿಗೂ ಮೀರಿದ ವಂಚನೆಯನ್ನು ಮಾಡಿದ್ದಾನೆ. ಪೊಲೀಸ್ರ ಕೈಯಲ್ಲಿ ಸಾಕಷ್ಟು ಬಾರಿ ಸಿಕ್ಕಿಬಿದ್ದಿದ್ದಾನೆ.

    ಕಾರು ಅಂದ್ರೆ ಮೋಜು..!, ಹುಡ್ಗೀರು ಅಂದ್ರೆ ಇವನದ್ದೇ ಕಾರುಬಾರು..!: ತನ್ನ 17ನೇ ವಯಸ್ಸಿನಲ್ಲಿ ಸಿಕ್ಕ ಸಿಕ್ಕವರೆನ್ನೆಲ್ಲಾ ಮೋಸ ಮಾಡಿಕೊಂಡು ಜೀವನ ಮಾಡೋದಕ್ಕೆ ಪ್ರಮುಖ ಕಾರಣವೇ ಅವನ ವಿಲಾಸಿ ಜೀವನ. ಕಾರುಗಳ ಬಗ್ಗೆ ಸಿಕ್ಕಾಪಟ್ಟೆ ಕ್ರೇಜ್ ಬೆಳಸಿಕೊಂಡಿದ್ದ ಸುಖೇಶ್ ಇಷ್ಟೆಲ್ಲಾ ಮೋಸ ಮಾಡ್ತಾ ಇದ್ದಿದ್ದೇ ತನ್ನ ವಿಲಾಸಿ ಜೀವನಕ್ಕಾಗಿ. ಬಿಎಂಡಬ್ಲೂ, ಆಡಿ ಮುಂತಾದ ಕೋಟಿ ಕೋಟಿ ಮೌಲ್ಯದ ಕಾರುಗಳನ್ನು ಖರೀದಿ ಮಾಡಿ ಮಜಾ ಮಾಡ್ತಿದ್ದ. ಇನ್ನು ಹುಡ್ಗೀರ ಜೊತೆಯಲ್ಲಿ ಮೋಜು ಮಸ್ತಿಯಲ್ಲಿ ಮಾಡಿಕೊಂಡಿದ್ದವನಿಗೆ ಮಾಡಲ್‍ಗಳು ಅಂದ್ರೆ ಭಯಂಕರ ಹುಚ್ಚು.

    ಬಾಡಿಗಾರ್ಡ್ಸ್ ಕೊಟ್ಟು ಕೊಡೋದು ಹಣ ಪೀಕೋದು…!: ಬಾಡಿಗಾರ್ಡ್ಸ ಗಳನ್ನು ಕೊಡೋದಾಗಿ ಹೇಳಿ ರಾಜಕಾರಣಿಗಳ ಜೊತೆಯಲ್ಲಿ ಸ್ನೇಹ ಬೆಳೆಸುತ್ತಿದ್ದ. ಹಾಗೆಯೇ ಇಂಟೀರಿಯರ್ ಡೆಕೊರೇಷನ್ ಮಾಡಿಕೊಡ್ತೀನಿ ಎಂದು ಮನೆಯ ಒಳಗೆ ಎಂಟ್ರಿ ಕೊಡುವ ಈತ ರಾಜಕಾರಣಿಗಳನ್ನು ಪರಿಚಯ ಮಾಡಿಕೊಂಡು ಬಳಿಕ ಅವರ ಡೀಲ್‍ಗಳು ಅವರ ಕೆಲಸವೆಲ್ಲವನ್ನೂ ಮಾಡಿಕೊಡ್ತಾನೆ. ಇದೇ ರೀತಿ ದಿನಕರನ್ ಪರಿಚಯ ಮಾಡಿಕೊಂಡು ಡೀಲ್ ಮಾಡಿದ್ನಂತೆ ಸುಖೇಶ್.

    10 ಪರ್ಸೆಂಟ್ ಡೀಲ್..!: ಎರಡೆಲೆಗಾಗಿ 50 ಕೋಟಿ ಡೀಲ್ ಮಾಡೋದಕ್ಕೆ ಬಂದು ಪೊಲೀಸ್ರ ಕೈಗೆ ಸಿಕ್ಕಿಬಿದ್ದಿರೋ ಸುಖೇಶ್ ಚಂದ್ರಶೇಖರನ್ ದಿನಕರ್ ಜೊತೆಗೆ 10 ಪರ್ಸೆಂಟ್ ಡೀಲ್ ಮಾತನಾಡಿಕೊಂಡಿದ್ದು, ಅದನ್ನು ಕುದುರಿಸಲು ಹೋಗಿ ಸಿಕ್ಕಿಬಿದ್ದಿದ್ದಾನೆ. ಸದ್ಯ ದಿನಕರನ್ ಕೂಡ ನಾಪತ್ತೆಯಾಗಿದ್ದು ಆತನಿಗಾಗಿ ಹುಡುಕಾಟ ಮುಂದುವರೆಸಿದ್ದಾರೆ.

     

  • ಇಂದು ಶಶಿಕಲಾ ಶರಣಾಗದಿದ್ದರೆ ಸೆಷನ್ ಕೋರ್ಟ್ ಕೊಡುತ್ತೆ ಅರೆಸ್ಟ್ ವಾರೆಂಟ್!

    ಇಂದು ಶಶಿಕಲಾ ಶರಣಾಗದಿದ್ದರೆ ಸೆಷನ್ ಕೋರ್ಟ್ ಕೊಡುತ್ತೆ ಅರೆಸ್ಟ್ ವಾರೆಂಟ್!

    ಬೆಂಗಳೂರು: ಅಕ್ರಮ ಆಸ್ತಿ ಸಂಪಾದನೆ ಪ್ರಕರಣದಲ್ಲಿ ದೋಷಿಯೆಂದು ಶಿಕ್ಷೆಗೆ ಗುರಿಯಾಗಿರುವ ದಿವಂಗತ ಜಯಲಲಿತಾ ಪರಮಾಪ್ತೆ, ಎಐಎಡಿಎಂ ಪಕ್ಷದ ಪ್ರಧಾನ ಕಾರ್ಯದರ್ಶಿ ವಿಕೆ ಶಶಿಕಲಾ ಹಾಗೂ ಸಂಬಂಧಿಗಳಾದ ಸುಧಾಕರನ್ ಮತ್ತು ಇಳವರಸಿ ಇಂದು ಕೋರ್ಟ್ ಮುಂದೆ ಶರಣಾಗಲೇ ಬೇಕಾದ ಸ್ಥಿತಿ ನಿರ್ಮಾಣವಾಗಿದೆ.

    ಮಂಗಳವಾರ ಮೇಲ್ಮನವಿ ಅರ್ಜಿ ವಿಚಾರಣೆಯ ತೀರ್ಪು ನೀಡಿದ ಸುಪ್ರೀಂಕೋರ್ಟ್, ಇಂದೇ ಶರಣಾಗಬೇಕು ಅಂತಾ ತೀರ್ಪಿನಲ್ಲಿ ಸೂಚಿಸಿತ್ತು. ಆದ್ರೂ ಮೂವರಲ್ಲಿ ಯಾರೊಬ್ಬರೂ ಶರಣಾಗಲಿಲ್ಲ. ಇಂದು ಸುಪ್ರೀಂಕೋರ್ಟ್‍ನಲ್ಲಿ ಮೇಲ್ವಿಚಾರಣ ಅರ್ಜಿ ಹಾಗೂ ಶರಣಾಗತಿಗೆ 4 ವಾರಗಳ ಕಾಲಾವಕಾಶ ಕೋರಿ ಅರ್ಜಿ ಸಲ್ಲಿಸಲಾಗುತ್ತೆ ಅಂತಾ ಶಶಿಕಲಾ ಗುಂಪಿನಿಂದ ಮಾಹಿತಿಯಿದ್ದು, ಅಂತಿಮವಾಗಿ ಉಳಿದಿರುವ ಏಕೈಕ ಮಾರ್ಗ ಅಂದ್ರೆ ಶರಣಾಗತಿ. 4 ವರ್ಷ ಜೈಲು ಶಿಕ್ಷೆ ಅನುಭವಿಸೋದು ಅಂತಾ ಹೇಳಲಾಗ್ತಿದೆ.

    ಬೆಂಗಳೂರಿನ ವಿಶೇಷ ನ್ಯಾಯಾಲಯ ವಿಚಾರಣೆ ನಡೆಸಿ ಶಿಕ್ಷೆಯನ್ನು ಜಾರಿ ಮಾಡಿರುವ ಕಾರಣ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲೇ 4 ವರ್ಷದಲ್ಲಿ ಉಳಿದಿರುವ ಶಿಕ್ಷೆಯನ್ನು ಅನುಭವಿಸಬೇಕಿದೆ. ಒಂದು ವೇಳೆ ಶಶಿಕಲಾ ಹಾಗೂ ಇಬ್ಬರು ಸಂಬಂಧಿಗಳು ಕೋರ್ಟ್‍ಗೆ ಶರಣಾಗಲು ವಿಳಂಬ ಮಾಡಿದ್ರೆ, ಹೈಕೋರ್ಟ್ ರಿಜಿಸ್ಟಾರ್ ಅವರಿಂದ ಸುಪ್ರೀಂಕೋರ್ಟ್‍ನ ಆದೇಶದ ಪ್ರತಿ ಪಡೆದು, ಸೆಷನ್ಸ್ ಕೋರ್ಟ್, ಈ ಮೂವರ ಮೇಲೂ ಅರೆಸ್ಟ್ ವಾರೆಂಟ್ ಬಳಸಿ ಬಂಧಿಸಿ ಕರೆತರುವಂತೆ ಸೂಚನೆ ನೀಡುವ ಸಾಧ್ಯತೆಗಳು ಕೂಡ ಹೆಚ್ಚಾಗಿವೆ.

    ಹಿರಿಯ ಅಧಿಕಾರಿಗಳ ಸಭೆ: ಇನ್ನು ಶಶಿಕಲಾ ನಟರಾಜನ್ ಜೈಲುಶಿಕ್ಷೆ ಅನುಭವಿಸಲು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಬರುತ್ತಿರುವ ಕಾರಣ ತಡರಾತ್ರಿ ಹಿರಿಯ ಪೊಲೀಸ್ ಅಧಿಕಾರಿಗಳು ಸಭೆ ನಡೆಸಿದ್ರು. ಎಸಿಪಿ ಸೂರ್ಯ ನಾರಾಯಣ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಯಾವ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕೆಂಬ ಕುರಿತು ಚರ್ಚಿಸಿದ್ರು. ಇನ್ನು ಪರಪ್ಪನ ಅಗ್ರಹಾರ ಜೈಲಿನ ಸುತ್ತಮುತ್ತ ಭದ್ರತೆಗಾಗಿ ಭಾರೀ ಪೊಲೀಸರನ್ನು ನಿಯೋಜನೆ ಮಾಡಲಾಗಿದ್ದು, ಕಳೆದ ಬಾರಿ ಜೈಲಿನೊಳಗಡೆ ಜಯಲಲಿತಾ ಪಕ್ಕದಲ್ಲೇ ಶಶಿಕಲಾ ಕೂಡ ಇದ್ದರು. ಈಗಲೂ ಅದೇ ಸೆಲ್ ನೀಡಲು ತೀರ್ಮಾನಿಸಿದ್ದು, ಈ ಹಿನ್ನೆಲೆಯಲ್ಲಿ ಅದನ್ನು ಸ್ವಚ್ಚಗೊಳಿಸಲಾಗಿದೆ. ಶಶಿಕಲಾ ಅಗತ್ಯಗಳಿಗೆ ತಕ್ಕಂತೆ ಸೆಲ್ ಸಿದ್ದಗೊಳಿಸಲಾಗಿದ್ದು, ಇದ್ರಲ್ಲಿ ವಿಶೇಷವಾಗಿ ಫಾರಿನ್ ಕಮೋಡ್ ಟಾಯ್ಲೆಟ್, 24 ಗಂಟೆ ಶುದ್ಧ ಕುಡಿಯುವ ನೀರು ವ್ಯವಸ್ಥೆ, ಸ್ನಾನಕ್ಕೆ ಬಿಸಿ ನೀರು ಇರುವಂತೆ ವ್ಯವಸ್ಥೆ ಮಾಡಲಾಗಿದೆ.

  • ಶಶಿಕಲಾ ರೆಸಾರ್ಟ್ ಬಿಟ್ಟರೂ ಶಾಸಕರ ಠಿಕಾಣಿ- ಅಧಿಕಾರಿಗಳಿಂದ ರೆಸಾರ್ಟ್‍ನ ವಿದ್ಯುತ್ ಸಂಪರ್ಕ ಕಟ್

    ಶಶಿಕಲಾ ರೆಸಾರ್ಟ್ ಬಿಟ್ಟರೂ ಶಾಸಕರ ಠಿಕಾಣಿ- ಅಧಿಕಾರಿಗಳಿಂದ ರೆಸಾರ್ಟ್‍ನ ವಿದ್ಯುತ್ ಸಂಪರ್ಕ ಕಟ್

    ಚೆನ್ನೈ: ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‍ನಲ್ಲಿ ಮಂಗಳವಾರ ತೀರ್ಪು ಪ್ರಕಟ ಆಗಲು ಸಮಯ ನಿಗದಿಯಾಗುತ್ತಿದ್ದ ಹಾಗೆ ಸೋಮವಾರವೇ ಶಾಸಕರ ಜೊತೆ ರೆಸಾರ್ಟ್ ಸೇರಿದ್ದ ಚಿನ್ನಮ್ಮ ತಡರಾತ್ರಿ ಪೋಯಸ್ ಗಾರ್ಡನ್ ಮನೆಗೆ ಬಂದಿದ್ದಾರೆ. ನಿನ್ನೆ ತಡರಾತ್ರಿ ಪೋಯಸ್ ಗಾರ್ಡನ್ ಮನೆಗೆ ತೆರಳುವುದಕ್ಕೆ ಮುಂಚೆ ಸ್ಥಳೀಯ ಮಾಧ್ಯಮವೊಂದರ ಜೊತೆ ಮಾತನಾಡಿರುವ ಶಶಿಕಲಾ, ಒಂದು ರೀತಿಯ ವಿದಾಯ ಭಾಷಣ ಮಾಡಿದ್ದಾರೆ.

    ನನಗೆ ಬೆಂಬಲ ಸೂಚಿಸಿದ ಎಲ್ಲಾ ಶಾಸಕರುಗಳಿಗೂ ಧನ್ಯವಾದ. ಎಐಡಿಎಂಕೆ ಪಕ್ಷ ಮಾತ್ರ ನನಗೆ ಮುಖ್ಯವಾಗಿದ್ದು, ನನ್ನನ್ನು ಪಕ್ಷದಿಂದ ಬೇರೆ ಮಾಡಲು ಯಾರಿಂದಲೂ ಸಾಧ್ಯವಿಲ್ಲ. ಈ ವಿಚಾರವನ್ನು ಅಲ್ಲಿನ ಜಯಾ ಟಿವಿ ಪ್ರಸಾರ ಮಾಡಿದೆ. ಇದಾದ ಬಳಿಕ ಪೋಯಸ್ ಗಾರ್ಡನ್ ಮನೆ ಮುಂದೆ ಜಮಾಯಿಸಿದ್ದ ಜನರನ್ನು ಉದ್ದೇಶಿಸಿ ಮಾತನಾಡಿದ ಚಿನ್ನಮ್ಮ, ನಾನು ಜೈಲಿಗೆ ಹೋಗುತ್ತಿದ್ದೇನೆ ಅಂತಾ ನೀವು ಅಳಬೇಡಿ ಅಂತಾ ಹೇಳಿದ್ದಾರೆ.

    ಬಳಿಕ ಜಯಲಲಿತಾ ಹಾಗೂ ನನ್ನ ಮೇಲೆ ಉದ್ದೇಶಪೂರ್ವಕವಾಗಿ ಕೇಸ್ ಹಾಕಿದ್ದು ಡಿಎಂಕೆ ಅಂತಾ ದೂರಿದ್ದಾರೆ. ಇದರ ಮಧ್ಯೆ ಕೊವತ್ತೂರು ರೆಸಾರ್ಟ್ ಖಾಲಿ ಮಾಡುವಂತೆ ಎಐಡಿಎಂಕೆ ಪಕ್ಷದ ಶಶಿಕಲಾ ಗುಂಪಿನ ಶಾಸಕರಿಗೆ ಪೊಲೀಸ್ ಅಧಿಕಾರಿಗಳು ಸೂಚನೆ ನೀಡಿದ್ರು. ಆದ್ರೆ ಶಾಸಕರು ಗೋಲ್ಡನ್ ಬೇ ರೆಸಾರ್ಟ್ ಖಾಲಿ ಮಾಡಲು ನಿರಾಕರಿಸಿದ್ರು, ಏನಾದ್ರು ಒತ್ತಾಯ ಮಾಡಿ ದಬ್ಬಾಳಿಕೆ ಮಾಡಿದ್ರೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದ್ರು. ಆ ಬಳಿಕ ರೆಸಾರ್ಟ್‍ಗೆ ನೀಡಿದ್ದ ವಿದ್ಯುತ್ ಸಂಪರ್ಕವನ್ನು ಸಂಪೂರ್ಣವಾಗಿ ಕಡಿತ ಮಾಡಲಾಗಿದೆ. ಆದ್ರೂ ಕೂಡ ಶಾಸಕರು ಅಲ್ಲೇ ಬೀಡುಬಿಟ್ಟಿದ್ದಾರೆ.

    ಜಯಾ ಸಮಾಧಿಗೆ ಪನ್ನೀರ್, ದೀಪಾ ಭೇಟಿ: ಮಂಗಳವಾರ ಬೆಳಗ್ಗೆ ಸುಪ್ರೀಂಕೋರ್ಟ್‍ನಲ್ಲಿ ತೀರ್ಪು ಪ್ರಕಟ ಆಗ್ತಿದ್ದ ಹಾಗೆ ಜಯಲಲಿತಾ ಸೋದರ ಸಂಬಂಧಿಗಳಾದ ದೀಪಾ ಹಾಗೂ ದೀಪಕ್‍ರನ್ನು ಕರೆದು ಚಿನ್ನಮ್ಮ ಶಶಿಕಲಾ ಮಾತನಾಡಿದ್ರು. ಇದಾದ ಬಳಿಕ ಸಂಜೆ ದೀಪಾ, ಪನ್ನೀರ್ ಸೆಲ್ವಂ ಬಳಗ ಸೇರಿದ್ದು, ರಾತ್ರಿ ಜಯಾ ಸಮಾಧಿಗೆ ಪನ್ನೀರ್ ಸೆಲ್ವಂ ಹಾಗೂ ಈಗಾಗಲೇ ಪಕ್ಷದಿಂದ ವಜಾಗೊಂಡಿರುವ ಶಾಸಕರು ಹಾಗೂ ಸಂಸದರ ಜೊತೆ ಭೇಟಿ ನೀಡಿದ್ರು. ಇಂದಿನಿಂದ ನಾನು ಸಕ್ರಿಯ ರಾಜಕಾರಣಕ್ಕೆ ಬರುತ್ತೇನೆ ಅಂತಾ ದೀಪಾ ಸಮಾಧಿ ಬಳಿಯೇ ಘೋಷಣೆ ಮಾಡಿದ್ರು. ಈ ಮೂಲಕ ಪನ್ನೀರ್ ಸೆಲ್ವಂ ಬಣದ ಬಲ ನಿಧಾನವಾಗಿ ಹೆಚ್ಚಾಗುತ್ತಿದೆ. ಇದಕ್ಕೂ ಮೊದಲು ಎಐಎಡಿಎಂ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾದ ಎಡಪ್ಪಾಡಿ ಕೆ ಪಳನಿಸ್ವಾಮಿ ರಾಜ್ಯಪಾಲ ಸಿ ವಿದ್ಯಾಸಾಗರ್ ಅವರನ್ನು ಭೇಟಿ ಮಾಡಿ ಸರ್ಕಾರ ರಚನೆಗೆ ಆಹ್ವಾನ ನೀಡುವಂತೆ ಮನವಿ ಮಾಡಿದ್ರು. ಈ ವೇಳೆ ಹಲವು ಸಚಿವರು ಪಳನಿಸ್ವಾಮಿಗೆ ಸಾಥ್ ನೀಡಿದ್ರು.