ಗಾಂಧೀನಗರ: ಈ ಸರ್ಕಾರಕ್ಕೆ ಹಿಂಸಾಚಾರ ಬೇಕಾಗಿದೆ. ಅದಕ್ಕೆ ಗಲಭೆಗೆ ಸಹಕರಿಸಿದೆ ಎಂದು ರಾಮನವಮಿಯಂದು ನಡೆದ ಹಿಂಸಾಚಾರ ಖಂಡಿಸಿ ಗುಜರಾತ್ ಸರ್ಕಾರದ ವಿರುದ್ಧ ಎಐಎಂಐಎಂ ಮುಖ್ಯಸ್ಥ ಹಾಗೂ ಸಂಸದ ಅಸಾದುದ್ದೀನ್ ಓವೈಸಿ ಕಿಡಿಕಾರಿದ್ದಾರೆ.
ಎಷ್ಟು ದಿನ ಹಳೆಯ ಕಥೆಗಳನ್ನು ಹೊರತರುತ್ತೀರಿ? ನಿಮ್ಮ ವೈಫಲ್ಯವನ್ನು ಒಪ್ಪಿಕೊಳ್ಳಿ. ನೀವೇ ಜಟಿಲರು. ಭಜನೆ ಮಾಡಬೇಕು, ಆದರೆ ಯಾವ ರೀತಿಯ ಘೋಷಣೆಗಳು ಎದ್ದವು? 50-100 ಕತ್ತಿಗಳನ್ನು ಬೀಸಲಾಗಿದೆ. ಪೊಲೀಸರ ಸಮ್ಮುಖದಲ್ಲಿಯೇ ಇದನ್ನು ಮಾಡಲಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ವಾರಣಾಸಿಯ ಸೀರೆ ಮಳಿಗೆಯಲ್ಲಿ ಅಗ್ನಿ ದುರಂತ: ನಾಲ್ವರು ಸಜೀವ ದಹನ
ಗುಪ್ತಚರ ಇಲಾಖೆ (IB) ವರದಿಯಿದ್ದರೆ ನೀವು ಏಕೆ ಮಲಗಿದ್ದೀರಿ? ನೀವು ಅದನ್ನು ಬಹಿರಂಗಪಡಿಸಬೇಕು. ಹೆಚ್ಚಿನ ಪೋಲಿಸ್ ಪಡೆಯನ್ನು ನಿಯೋಜಿಸಿ, ಹಿಂಸಾಚಾರವನ್ನು ನಿಲ್ಲಿಸಬೇಕು. ನಿಮ್ಮ ಜಟಿಲ ವರ್ತನೆಯನ್ನು ಮರೆಮಾಡಲು ಕಥೆಗಳನ್ನು ಹೇಳುತ್ತೀರಿ. ಅಂತಹ ಕಥೆಗಳು ಈಗ ಹಳೆಯದಾಗಿವೆ ಎಂದು ಚಾಟಿ ಬೀಸಿದ್ದಾರೆ.
ಯಾವುದೇ ಹಿಂಸಾಚಾರವೂ ಸರಿಯಲ್ಲ. ಹಿಂಸಾಚಾರ ಭುಗಿಲೆದ್ದರೆ ಅದರ ಹೊಣೆ ರಾಜ್ಯ ಸರ್ಕಾರದ ಮೇಲಿದೆ. ರಾಜ್ಯ ಸರ್ಕಾರಗಳು ಬಯಸದಿದ್ದರೆ, ಹಿಂಸಾಚಾರ ಭುಗಿಲೇಳುವುದಿಲ್ಲ ಎಂದು ತನಿಖಾ ಆಯೋಗದ ವರದಿಗಳು ಹೇಳಿವೆ ಎಂದು ತಿಳಿಸಿದ್ದಾರೆ.
ಹೈದರಾಬಾದ್: ರಾಮನವಮಿ ಸಂದರ್ಭದಲ್ಲಿ ಹಿಂಸಾಚಾರವನ್ನು ತಡೆಗಟ್ಟುವಲ್ಲಿ ಕರ್ನಾಟಕ ಸೇರಿದಂತೆ ಅನೇಕ ರಾಜ್ಯ ಸರ್ಕಾರಗಳು ಸೋತಿವೆ ಎಂದು ಸಂಸದ ಹಾಗೂ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಕಿಡಿಕಾರಿದ್ದಾರೆ.
ರಾಮನವಮಿ ಆಚರಣೆ ಸಂದರ್ಭದಲ್ಲಿ ಹಲವು ರಾಜ್ಯಗಳಲ್ಲಿ ಹಿಂಸಾಚಾರಗಳಾಗಿವೆ. ರಾಜಸ್ಥಾನ, ಮಧ್ಯಪ್ರದೇಶ, ಜಾರ್ಖಂಡ್, ಕರ್ನಾಟಕ, ಗೋವಾ ರಾಜ್ಯಗಳಲ್ಲಿ ಹಿಂಸಾಚಾರ ನಡೆದಿದ್ದು, ಅದನ್ನು ತಡೆಗಟ್ಟುವಲ್ಲಿ ಸರ್ಕಾರಗಳು ವಿಫಲವಾಗಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಮಮತಾ ಬ್ಯಾನರ್ಜಿ ಸಿಎಂ ಸ್ಥಾನಕ್ಕೆ ಅರ್ಹರಲ್ಲ: ನಿರ್ಭಯಾ ತಾಯಿ
ಇದು ಸ್ಪಷ್ಟವಾಗಿ ರಾಜ್ಯಗಳ ಸಹಭಾಗಿತ್ವದ ಹಿಂಸಾಚಾರವಾಗಿದೆ. ಜಿನೆವಾ ಒಪ್ಪಂದದ ಗಂಭೀರ ಉಲ್ಲಂಘನೆಯಾಗಿದೆ ಎಂದು ಓವೈಸಿ ಗಂಭೀರ ಆರೋಪ ಮಾಡಿದ್ದಾರೆ.
ಮುಂಬೈ: ಎಐಎಂಐಎಂ ಜೊತೆ ತಮ್ಮ ಪಕ್ಷವು ಮೈತ್ರಿ ಮಾಡಿಕೊಳ್ಳಲು ಒಲವು ಹೊಂದಿಲ್ಲ ಎಂದು ಎನ್ಸಿಪಿ ಅಧ್ಯಕ್ಷ ಶರದ್ ಪವಾರ್ ಪುಣಾದಲ್ಲಿ ಸ್ಪಷ್ಟ ಪಡಿಸಿದರು.
ಎಐಎಂಐಎಂ ಸಂಸದ ಇಮ್ತಿಯಾಜ್ ಜಲೀಲ್ ಅವರು ಶಿವಸೇನೆ ನೇತೃತ್ವದ ತ್ರಿಪಕ್ಷೀಯ ಮಹಾ ವಿಕಾಸ್ ಅಘಾಡಿ(ಎಂವಿಎ) ಜೊತೆ ಮೈತ್ರಿ ಮಾಡಿಕೊಳ್ಳಲು ಪ್ರಸ್ತಾಪಿಸಿತ್ತು. ಈ ಬಗ್ಗೆ ಮಾತನಾಡಿ, ಮೈತ್ರಿಯ ಬಗ್ಗೆ ಇಮ್ತಿಯಾಜ್ ಜಲೀಲ್ ಅವರ ಸಲಹೆಯನ್ನು ಶಿವಸೇನೆ ಈಗಾಗಲೇ ತಿರಸ್ಕರಿಸಿದೆ ಎಂದು ಹೇಳಿದರು.
ಎಐಎಂಐಎಂ ಮೈತ್ರಿ ಬಗ್ಗೆ ಮಾತನಾಡಬಹುದು. ಆದರೆ ಅವರು ಮಾತನಾಡುತ್ತಿರುವ ಪಕ್ಷಗಳು ಅಂತಹ ಪ್ರಸ್ತಾಪವನ್ನು ಮೊದಲು ಒಪ್ಪಿಕೊಳ್ಳಬೇಕು. ಎಐಎಂಐಎಂ ರಾಜ್ಯ ಮಟ್ಟದಲ್ಲಿ ಮೈತ್ರಿ ಮಾಡಿಕೊಳ್ಳಲೂ ಪ್ರಸ್ತಾಪಿಸಿದ್ದರೂ, ಅಂತಹ ಮೈತ್ರಿ ರಚನೆಗೆ ರಾಜಕೀಯ ಪಕ್ಷಗಳ ರಾಷ್ಟ್ರೀಯ ಸಮಿತಿಯು ಅನುಮೋದನೆ ನೀಡಬೇಕು ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ಸೇನೆಗೆ ತಯಾರಿ – ಕೆಲಸ ಮುಗಿಸಿ ಪ್ರತಿದಿನ 10 ಕಿಮೀ ಓಡಿಕೊಂಡೇ ಮನೆಗೆ ಹೋಗ್ತಾನೆ!
ಎನ್ಸಿಪಿಯು ಶಿವಸೇನೆ ಮತ್ತು ಕಾಂಗ್ರೆಸ್ನೊಂದಿಗೆ ಆಡಳಿತಾರೂಢ ಒಕ್ಕೂಟದ ಭಾಗವಾಗಿರುವುದರಿಂದ, ಮೈತ್ರಿಯನ್ನು ವಿಸ್ತರಿಸುವ ಬಗ್ಗೆ ಅದರ ಅಸ್ತಿತ್ವದಲ್ಲಿರುವ ಪಾಲುದಾರರ ಅಭಿಪ್ರಾಯಗಳನ್ನು ಗಣನೆಗೆ ತೆಗೆದುಕೊಳ್ಳಬೇಕು ಎಂದರು. ಇದನ್ನೂ ಓದಿ: ಪತ್ನಿ ಮಟನ್ ಕರಿ ಮಾಡ್ಲಿಲ್ಲ ಅಂತ ಪೊಲೀಸರಿಗೆ ಟಾರ್ಚರ್ ಕೊಟ್ಟ ವ್ಯಕ್ತಿ
ಬಿಜೆಪಿಯನ್ನು ಅಧಿಕಾರಕ್ಕೆ ಬರದಂತೆ ತಡೆಯಲು ಶಿವಸೇನೆ ನೇತೃತ್ವದ ಆಡಳಿತಾರೂಢ ಮಹಾ ವಿಕಾಸ್ ಅಘಾಡಿ(ಎಂವಿಎ) ಸಮ್ಮಿಶ್ರದೊಂದಿಗೆ ತಮ್ಮ ಪಕ್ಷವು ಮೈತ್ರಿಮಾಡಿಕೊಳ್ಳಬಹುದು ಎಂದು ಎಐಎಂಐಎಂ ಸಂಸದ ಇಮ್ತಿಯಾಜ್ ಜಲೀಲ್ ಹೇಳಿದ್ದರು.
ಔರಂಗಬಾದ್: ರಾಷ್ಟ್ರೀಯ ಕಾಂಗ್ರೆಸ್ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳಲು ಎಐಎಂಐಎಂ ಸಿದ್ಧವಾಗಿದೆ. ಆದರೆ ಅವರು ನಮ್ಮೊಂದಿಗೆ ಕೈಜೋಡಿಸುತ್ತಾರೆಯೇ ಎಂಬುದನ್ನು ಕಾದು ನೋಡಬೇಕಿದೆ ಎಂದು ಎಐಎಂಐಎಂ (ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್) ಪಕ್ಷದ ಸಂಸದ ಇಮ್ತಿಯಾಜ್ ಜಲೀಲ್ ಹೇಳಿದ್ದಾರೆ.
ರಾಜ್ಯ ಸಚಿವ ಮತ್ತು ಎನ್ಸಿಪಿ ನಾಯಕ ರಾಜೇಶ್ ಟೋಪೆ ಅವರ ನಿವಾಸಕ್ಕೆ ಭೇಟಿ ನೀಡಿದ ಜಲೀಲ್ ಎಐಎಂಐಎಂ ಸಂಘಟನೆಯ ಬಗ್ಗೆ ಮಾತುಕತೆ ನಡೆಸಿದ್ದಾರೆ. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಮತ್ತು ಎನ್ಸಿಪಿಯೊಂದಿಗೆ ಎಐಎಂಐಎಂ ಮೈತ್ರಿ ಮಾಡಿಕೊಳ್ಳಲು ಸಿದ್ಧವಾಗಿದೆ ಎಂದಿದ್ದಾರೆ.
ಕಾಂಗ್ರೆಸ್ ಪಕ್ಷಗಳಿಗೆ ಮುಸ್ಲಿಮರ ಮತಗಳು ಬೇಕಿದೆ. ಕಾಂಗ್ರೆಸ್ ಸಹ ತಾನು ಜಾತ್ಯಾತೀತರು ಎನ್ನುತ್ತದೆ. ಹಾಗಾಗಿ ನಾವೂ ಅವರೊಂದಿಗೆ ಕೈಜೋಡಿಸಲು ಸಿದ್ಧರಿದ್ದೇವೆ. ಈಗಾಗಲೇ ಉತ್ತರ ಪ್ರದೇಶದ ಚುನಾವಣೆಯಲ್ಲಿ ಬಿಜೆಪಿಯು ಕಾಂಗ್ರೆಸ್ಗೆ ಗರಿಷ್ಠ ಹಾನಿಯನ್ನುಂಟು ಮಾಡಿದೆ. ಕಾಂಗ್ರೆಸ್ ಒಂದೇ ಒಂದು ಮತವನ್ನು ಗಳಿಸುವ ಮೂಲಕ ತೀವ್ರ ಮುಖಭಂಗ ಎದುರಿಸುವಂತಾಗಿದೆ. ಹಾಗಾಗಿ ಮುಂದಿನ ಚುನಾವಣೆಯಲ್ಲಿ ನಾವು ಬಿಜೆಪಿ ಸೋಲಿಸಲು ಸಿದ್ಧರಿದ್ದೇವೆ ಎಂದು ಜಲೀಲ್ ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ: ಹಿಂದೂ-ಮುಸ್ಲಿಂ ಒಟ್ಟಿಗೆ ಇರಲು ಸಾಧ್ಯವಿಲ್ಲ ಅಂತ ಅಂಬೇಡ್ಕರ್ ಹೇಳಿದ್ದರು: ಪ್ರತಾಪ್ ಸಿಂಹ
ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷ ಮತ್ತು ಬಹುಜನ ಸಮಾಜ ಪಕ್ಷದೊಂದಿಗೆ (ಚುನಾವಣೆ) ಎಐಎಂಐಎಂ ಮಾತನಾಡಿದೆ, ಆದರೆ ಅವರಿಗೆ ಮುಸ್ಲಿಮರ ಮತಗಳು ಬೇಕೇ ಹೊರತು ನಮ್ಮ ಪಕ್ಷದ ಮುಖ್ಯಸ್ಥರು ಬೇಕಿಲ್ಲ ಎಂದಿದ್ದಾರೆ.
2019ರ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಎಐಎಂಐಎಂ ಎರಡು ಸ್ಥಾನಗಳನ್ನು ಗೆದ್ದುಕೊಂಡಿತ್ತು. ಈಗ ಮೈತ್ರಿ ಮಾಡಿಕೊಂಡರೆ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವ ಮೂಲಕ ಬಿಜೆಪಿಯನ್ನು ಮಣಿಸಬಹುದು. ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ಗೆ ಮುಸ್ಲಿಮರ ಮತಗಳು ಅವಶ್ಯವಿದ್ದು, ನಾವು ಒಟ್ಟಾಗಿ ಚುನಾವಣೆ ಎದುರಿಸೋಣ ಎಂದು ಪ್ರಸ್ತಾಪಿಸುತ್ತೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಪಂಜಾಬ್ನಲ್ಲಿ ಆಪ್ ಸರ್ಕಾರ ಸಂಪುಟ ರಚನೆ – 10 ಮಂದಿ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ
ಇಲ್ಲಿ ಯಾವುದೇ ಧರ್ಮವೂ ಕೆಟ್ಟದ್ದಲ್ಲ. ಅದನ್ನು ಅನುರಸರಿಸುವ ಜನರು ಒಳ್ಳೆಯವರು ಅಥವಾ ಕೆಟ್ಟವರು ಆಗಿರಬಹುದು ಎಂಬುದನ್ನು ನಾವು ಅರ್ಥ ಮಾಡಿಕೊಳ್ಳಬೇಕು ಎಂದು ಜಲೀಲ್ ಸಲಹೆ ನೀಡಿದ್ದಾರೆ.
ನವದೆಹಲಿ: ಹಿಜಬ್ ವಿವಾದ ಕುರಿತು ಕರ್ನಾಟಕ ಹೈಕೋರ್ಟ್ ನೀಡಿರುವ ತೀರ್ಪನ್ನು ನಾನು ಒಪ್ಪುವುದಿಲ್ಲ ಎಂದು ಎಐಎಂಐಎಂ ಅಧ್ಯಕ್ಷ ಹಾಗೂ ಸಂಸದ ಅಸಾದುದ್ದೀನ್ ಓವೈಸಿ ಹೇಳಿದ್ದಾರೆ.
ಹಿಜಬ್ ಸಂಬಂಧ ಹೈಕೋರ್ಟ್ ತೀರ್ಪು ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಕರ್ನಾಟಕ ಹೈಕೋರ್ಟ್ ನೀಡಿರುವ ತೀರ್ಪನ್ನು ನಾನು ಒಪ್ಪುವುದಿಲ್ಲ. ಕೋರ್ಟ್ ತೀರ್ಪನ್ನು ವಿರೋಧಿಸುವುದು ನನ್ನ ಹಕ್ಕು. ಹಿಜಬ್ ಪರ ಅರ್ಜಿದಾರರು ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಲಿದ್ದಾರೆ ಎಂಬ ಭರವಸೆ ಇದೆ ಎಂದು ಆಶಯ ವ್ಯಕ್ತಪಡಿಸಿದ್ದಾರೆ.
ಟ್ವೀಟ್ನಲ್ಲೇನಿದೆ?
ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾವ್ ಬೋರ್ಡ್ ಮಾತ್ರವಲ್ಲ ಇತರೆ ಧಾರ್ಮಿಕ ಗುಂಪುಗಳ ಸಂಘಸಂಸ್ಥೆಗಳು ಸಹ ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲಿವೆ ಎಂದು ಭಾವಿಸಿದ್ದೇನೆ.
1. I disagree with Karnataka High Court's judgement on #hijab. It’s my right to disagree with the judgement & I hope that petitioners appeal before SC
2. I also hope that not only @AIMPLB_Official but also organisations of other religious groups appeal this judgement…
ಏಕೆಂದರೆ ಅದು (ಕೋರ್ಟ್) ಧರ್ಮ, ಸಂಸ್ಕೃತಿ, ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಮೂಲಭೂತ ಹಕ್ಕುಗಳನ್ನು ಸ್ಥಗಿತಗೊಳಿಸಿದೆ. ಸಂವಿಧಾನದ ಪೀಠಿಕೆಯು ವ್ಯಕ್ತಿಗೆ ಆಲೋಚನೆ, ಅಭಿವ್ಯಕ್ತಿ, ನಂಬಿಕೆ ಮತ್ತು ಆರಾಧನೆಯ ಸ್ವಾತಂತ್ರ್ಯವನ್ನು ಹೊಂದುವ ಹಕ್ಕಿದೆ ಎಂದು ಹೇಳುತ್ತದೆ.
… as it has suspended fundamental rights to freedom of religion, culture, freedom of speech and expression
3. Preamble to the Constitution says that one has LIBERTY of thought, EXPRESSION, belief faith, and WORSHIP….
ನನ್ನ ತಲೆಯನ್ನು ಮುಚ್ಚಿಕೊಳ್ಳುವುದು ಅತ್ಯಗತ್ಯ ಎಂಬುದು ನನ್ನ ನಂಬಿಕೆ. ನಾನು ಸೂಕ್ತವೆಂದು ಭಾವಿಸಿದಂತೆ ಆ ನಂಬಿಕೆಯನ್ನು ವ್ಯಕ್ತಪಡಿಸಲು ನನಗೆ ಹಕ್ಕಿದೆ. ಧರ್ಮನಿಷ್ಠ ಮುಸಲ್ಮಾನರಿಗೆ ಹಿಜಬ್ ಕೂಡ ಒಂದು ಆರಾಧನೆಯ ಕ್ರಿಯೆಯಾಗಿದೆ.
…If it is MY belief & faith that covering my head is essential then I have a right to EXPRESS it as I deem fit. For a devout Muslim, Hijab is also an act of worship.
ಅಗತ್ಯವಾದ ಧಾರ್ಮಿಕ ಅಭ್ಯಾಸ ಪರೀಕ್ಷೆಯನ್ನು ಪರಿಶೀಲಿಸುವ ಸಮಯ ಇದು. ದರ್ಮನಿಷ್ಠ ವ್ಯಕ್ತಿಗೆ ಎಲ್ಲವೂ ಅತ್ಯಗತ್ಯ. ನಾಸ್ತಿಕನಿಗೆ ಯಾವುದೂ ಅತ್ಯಗತ್ಯವಲ್ಲ. ಶ್ರದ್ಧಾವಂತ ಹಿಂದೂ ಬ್ರಾಹ್ಮಣರಿಗೆ ಜನಿವಾರ ಅತ್ಯಗತ್ಯ. ಆದರೆ ಬ್ರಾಹ್ಮಣೇತರರಿಗೆ ಅದು ಇಲ್ಲದಿರಬಹುದು. ನ್ಯಾಯಾಧೀಶರು ಅಗತ್ಯವನ್ನು ನಿರ್ಧರಿಸಬಹುದು ಎಂಬುದು ಅಸಂಬದ್ಧವಾಗಿದೆ.
4. It’s time to review the essential religious practice test. For a devout person, everything is essential & for an atheist nothing is essential. For a devout Hindu Brahmin, janeu is essential but for a non-Brahmin it may not be. It is absurd that judges can decide essentiality
ಅದೇ ಧರ್ಮದ ಇತರ ಜನರು ಸಹ ಅಗತ್ಯವನ್ನು ನಿರ್ಧರಿಸುವ ಹಕ್ಕನ್ನು ಹೊಂದಿಲ್ಲ. ಇದು ವ್ಯಕ್ತಿ ಮತ್ತು ದೇವರ ನಡುವೆ ಇದೆ. ಇಂತಹ ಪೂಜಾ ಕಾರ್ಯಗಳು ಇತರರಿಗೆ ಹಾನಿಯಾದರೆ ಮಾತ್ರ ಧಾರ್ಮಿಕ ಹಕ್ಕುಗಳಲ್ಲಿ ರಾಜ್ಯವು ಹಸ್ತಕ್ಷೇಪ ಮಾಡಲು ಅವಕಾಶ ನೀಡಬೇಕು. ಹಿಜಬ್ ಯಾರಿಗೂ ಹಾನಿ ಮಾಡುವುದಿಲ್ಲ.
5. Not even other people of the same religion have the right to decide essentiality. It is between the individual & God. State should be allowed to interfere in religious rights only if such acts of worship harm others. Headscarf does not harm anyone.
ಹಿಜಬ್ ನಿಷೇಧಿಸುವುದರಿಂದ ಧಾರ್ಮಿಕ ಮುಸ್ಲಿಂ ಮಹಿಳೆಯರು ಮತ್ತು ಅವರ ಕುಟುಂಬಗಳಿಗೆ ಖಂಡಿತವಾಗಿಯೂ ಹಾನಿಯಾಗುತ್ತದೆ. ಅವರು ಶಿಕ್ಷಣ ಪಡೆಯುವುದಕ್ಕೆ ಅಡ್ಡಿಪಡಿಸಿದಂತಾಗುತ್ತದೆ.
6. Banning headscarf definitely harms devout Muslim women and their families as it prevents them from accessing education
7. The excuse being used is that uniform will ensure uniformity. How? Will kids not know who’s from a rich/poor family? Do caste names not denote background?
ಸಮವಸ್ತ್ರವು ಏಕರೂಪತೆಯನ್ನು ಖಚಿತಪಡಿಸುತ್ತದೆ ಎನ್ನಲಾಗುತ್ತದೆ. ಅದು ಹೇಗೆ? ಶ್ರೀಮಂತ/ಬಡ ಕುಟುಂಬದಿಂದ ಬಂದವರು ಯಾರೆಂದು ಮಕ್ಕಳಿಗೆ ತಿಳಿಯುವುದಿಲ್ಲವೇ? ಜಾತಿಯ ಹೆಸರುಗಳು ಹಿನ್ನೆಲೆಯನ್ನು ಸೂಚಿಸುವುದಿಲ್ಲವೇ? ಶಿಕ್ಷಕರು ತಾರತಮ್ಯ ಮಾಡುವುದನ್ನು ತಡೆಯಲು ಸಮವಸ್ತ್ರ ಸಹಕಾರಿಯಾಗಿದೆಯೇ?
8. What does uniform do to prevent teachers from discriminating? Globally, the experience has been that reasonable accommodations are made in school, police & army uniforms to reflect diversity.
ಐರ್ಲೆಂಡ್ ಸರ್ಕಾರವು ಹಿಜಬ್ ಮತ್ತು ಸಿಖ್ ಪೇಟವನ್ನು ಅನುಮತಿಸಲು ಪೊಲೀಸ್ ಸಮವಸ್ತ್ರದ ನಿಯಮಗಳನ್ನು ಬದಲಾಯಿಸಿದಾಗ ಮೋದಿ ಸರ್ಕಾರ ಅದನ್ನು ಸ್ವಾಗತಿಸಿತು. ಹಾಗಾದರೆ ಸ್ವದೇಶ ಮತ್ತು ವಿದೇಶ ವಿಚಾರವಾಗಿ ಏಕೆ ಎರಡು ಮಾನದಂಡಗಳು? ಸಮವಸ್ತ್ರದ ಬಣ್ಣಗಳಿಗೆ ಹೋಲುವ ಹಿಜಬ್ ಮತ್ತು ಪೇಟಗಳನ್ನು ಧರಿಸಲು ಅನುಮತಿಸಬಹುದು.
9. When Ireland’s govt changed the rules for police uniform to allow hijab and Sikh turban, Modi govt welcomed it. So why double standards at home & abroad? Hijab and turbans of the uniform’s colours can allowed to be worn
ಇದೆಲ್ಲದರ ಪರಿಣಾಮವೇನು? ಮೊದಲನೆಯದಾಗಿ, ಸರ್ಕಾರವು ಅಸ್ತಿತ್ವದಲ್ಲಿಲ್ಲದ ಸಮಸ್ಯೆಯನ್ನು ಸೃಷ್ಟಿಸಿತು. ಮಕ್ಕಳು ಹಿಜಬ್, ಬಳೆ ಇತ್ಯಾದಿ ಧರಿಸಿ ಶಾಲೆಗೆ ಹೋಗುತ್ತಿದ್ದರು. ಎರಡನೆಯದಾಗಿ, ಹಿಂಸಾಚಾರವನ್ನು ಪ್ರಚೋದಿಸಲಾಯಿತು. ಕೇಸರಿ ಪೇಟಗಳೊಂದಿಗೆ ಪ್ರತಿಯಾಗಿ ಪ್ರತಿಭಟನೆಗಳನ್ನು ನಡೆಸಲಾಯಿತು.
10. What is the consequence of all of this? First, govt created a problem where none existed. Children were wearing hijab, bangles, etc & going to school. Second, violence was instigated and counter-protests were held with saffron turbans.
ಕೇಸರಿ ಪೇಟಗಳು ಅಗತ್ಯವೆ? ಅಥವಾ ಹಿಜಬ್ಗೆ ಪ್ರತಿಕ್ರಿಯೆ ಮಾತ್ರವೇ? ಸರ್ಕಾರ ಮತ್ತು ಹೈಕೋರ್ಟ್ ಆದೇಶವು ಮೂಲಭೂತ ಹಕ್ಕುಗಳನ್ನು ಅಮಾನತುಗೊಳಿಸಿದೆ. ಹಿಜಬ್ ಧರಿಸಿದ ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ಮಾಧ್ಯಮಗಳು, ಪೊಲೀಸರು ಮತ್ತು ನಿರ್ವಾಹಕರು ಕಿರುಕುಳ ನೀಡುವುದನ್ನು ನಾವು ನೋಡಿದ್ದೇವೆ. ಮಕ್ಕಳು ಪರೀಕ್ಷೆ ಬರೆಯುವುದನ್ನು ಸಹ ನಿಷೇಧಿಸಲಾಗಿದೆ. ಇದು ನಾಗರಿಕ ಹಕ್ಕುಗಳ ಸಾಮೂಹಿಕ ಉಲ್ಲಂಘನೆಯಾಗಿದೆ.
11. Are saffron turbans “essential”? Or only a “reaction” to hijab? Third, GO & HC order suspended fundamental rights. We saw media, police & admin harass hijab wearing students & even teachers. Kids have been even banned from writing exams. It’s a mass violation of civil rights
ಕೊನೆಯದಾಗಿ, ಇದರರ್ಥ ಒಂದು ಧರ್ಮವನ್ನು ಗುರಿಯಾಗಿಸಲಾಗಿದೆ. ಅದರ ಧಾರ್ಮಿಕ ಆಚರಣೆಯನ್ನು ನಿಷೇಧಿಸಲಾಗಿದೆ. ಆರ್ಟಿಕಲ್ 15, ಧರ್ಮದ ಆಧಾರದ ಮೇಲೆ ತಾರತಮ್ಯವನ್ನು ನಿಷೇಧಿಸುತ್ತದೆ. ಇದು ಅದೇ ಉಲ್ಲಂಘನೆಯಲ್ಲವೇ? ಸಂಕ್ಷಿಪ್ತವಾಗಿ ಹೈಕೋರ್ಟ್ ಆದೇಶವು ಮಕ್ಕಳನ್ನು ಶಿಕ್ಷಣ ಮತ್ತು ಅಲ್ಲಾನ ಆಜ್ಞೆಗಳ ನಡುವೆ ಆಯ್ಕೆ ಮಾಡಲು ಒತ್ತಾಯಿಸಿದೆ.
12. Lastly, this means that one religion has been targeted & its religious practice has been banned. Article 15 prohibits discrimination based on religion. Is this not a violation of the same? In short HC order has forced kids to choose between education & Allah’s commands
ಮುಸ್ಲಿಮರಿಗೆ ಶಿಕ್ಷಣ ಪಡೆಯುವುದು ಅಲ್ಲಾಹನ ಆಜ್ಞೆಯಾಗಿದೆ. ಅವನ ಕಟ್ಟುಪಾಡುಗಳನ್ನು (ಸಲಾಹ್, ಹಿಜಬ್, ರೋಜಾ ಇತ್ಯಾದಿ) ಅನುಸರಿಸುತ್ತದೆ. ಈಗ ಯಾವುದು ಬೇಕು ಅದನ್ನು ಆಯ್ಕೆ ಮಾಡಿ ಎಂದು ಸರ್ಕಾರ ಹುಡುಗಿಯರನ್ನು ಒತ್ತಾಯಿಸುತ್ತಿದೆ. ಇಲ್ಲಯವರೆಗೆ ನ್ಯಾಯಾಂಗವು ಗಡ್ಡವನ್ನು ಹೊಂದುವುದು ಮತ್ತು ಹಿಜಬ್ ಅನಿವಾರ್ಯವಲ್ಲ ಎಂದು ಘೋಷಿಸಿದೆ. ನಂಬಿಕೆಗಳ ಮುಕ್ತ ಅಭಿವ್ಯಕ್ತಿಯಿಂದ ಈಗ ಏನು ಉಳಿದಿದೆ?
13. For Muslims it’s Allah’s command to be educated while also following his strictures (salah, hijab, roza, etc). Now govt is forcing girls to choose. So far judiciary has declared masjids, keeping a beard & now hijab as non-essential. What is left of free expression of beliefs?
ಹಿಜಬ್ ಧರಿಸುವುದು ಮಹಿಳೆಯರಿಗೆ ಕಿರುಕುಳವನ್ನು ಕಾನೂನುಬದ್ಧಗೊಳಿಸಲು ಈ ತೀರ್ಪು ಬಳಸಿಕೊಳ್ಳುವುದಿಲ್ಲ ಎಂದು ನಾನು ಭಾವಿಸುತ್ತೇನೆ. ಬ್ಯಾಂಕ್ಗಳು, ಆಸ್ಪತ್ರೆಗಳು, ಸಾರ್ವಜನಿಕ ಸಾರಿಗೆ ಇತ್ಯಾದಿಗಳಲ್ಲಿ ಹಿಜಬ್ ಧರಿಸಿದ ಮಹಿಳೆಯರಿಗೆ ಇದು ಸಂಭವಿಸಿದಾಗ ನಿರಾಶೆಯಾಗಬಹುದು.
14. I hope this judgement will not be used to legitimise harassment of hijab wearing women. One can only hope and eventually be disappointed when this starts happening to hijab wearing women in banks, hospitals, public transport etc
ಪೂರ್ಣ ತೀರ್ಪು ಲಭ್ಯವಾದಾಗ ಒಬ್ಬರು ಹೆಚ್ಚು ವಿವರವಾಗಿ ಪ್ರತಿಕ್ರಿಯೆಯನ್ನು ನೀಡಬಹುದು ಎಂದು ಅಸಾದುದ್ದೀನ್ ಓವೈಸಿ ಸರಣಿ ಟ್ವೀಟ್ ಮಾಡಿದ್ದಾರೆ.
15. One can give a more detailed response whence the full judgement is made available. For now, this thread is based on the oral order dictated in court.
ಲಕ್ನೋ/ಬೆಂಗಳೂರು: ಪಂಚರಾಜ್ಯಗಳ ಚುನಾವಣೆಯ ಫಲಿತಾಂಶಗಳ ಪೈಕಿ ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಹೀನಾಯವಾಗಿ ಸೋಲು ಕಂಡಿದೆ. ಈ ಸೋಲಿಗೆ ಕಾರಣ ಮಾತ್ರ ಆ ಒಂದು ಪಕ್ಷ ಎಂಬ ಸತ್ಯ ಬಯಲಾಗಿದೆ.
ಹೌದು ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಸಾಧನೆ ನೆಲಕಚ್ಚಿದೆ. ‘ಕೈ’ ಪಡೆ ಹೀನಾಯ ಸೋಲು ಕಂಡು ಮುಖಭಂಗ ಅನುಭವಿಸಿದೆ. ‘ಕೈ’ ಪಡೆಯ ಅತಿದೊಡ್ಡ ಸೋಲಿಗೆ ಕಾರಣ ಇದೀಗ ರಿವೀಲ್ ಆಗಿದ್ದು, AIMIM ಪಕ್ಷ ಗೆಲುವಿನ ಅಂಚಿನಲ್ಲಿದ್ದ ಕಾಂಗ್ರೆಸ್ಗೆ ಸೋಲಿನ ರುಚಿ ತೋರಿಸಿದೆ. ಕಾಂಗ್ರೆಸ್ ವೋಟ್ಗಳನ್ನು ಅಸಾದುದ್ದೀನ್ ಓವೈಸಿಯ AIMIM ಪಕ್ಷ ಕಿತ್ತು ತಿಂದಿದೆ. ಪರಿಣಾಮ ಕಾಂಗ್ರೆಸ್ ಹೀನಾಯ ಸೋಲು ಕಂಡಿದೆ. 2-3 ಸಾವಿರ ಮತಗಳ ಅಂತರದಲ್ಲಿ ಕಾಂಗ್ರೆಸ್ ಗೆಲುವನ್ನು ಎಂಐಎಂಐಎಂ ಕಸಿದುಕೊಂಡಿದೆ. 100 ಕ್ಷೇತ್ರಗಳ ಪೈಕಿ ಸುಮಾರು 50 ಕ್ಷೇತ್ರಗಳಲ್ಲಿ ಕಾಂಗ್ರೆಸ್ 2-3 ಸಾವಿರ ಮತಗಳ ಅಂತರದಲ್ಲಿ ಸೋಲು ಕಾಣುವಂತಾಗಿದೆ. ಇದನ್ನೂ ಓದಿ: EVMಗಳಲ್ಲಿ ಸಮಸ್ಯೆಯಿಲ್ಲ, ಜನರ ತಲೆಯೊಳಗಿನ ಚಿಪ್ಪಿನಲ್ಲಿ ಸಮಸ್ಯೆಯಿದೆ: ಫಲಿತಾಂಶದ ಬಗ್ಗೆ ಓವೈಸಿ ಪ್ರತಿಕ್ರಿಯೆ
ಮುಂದಿನ ವರ್ಷ ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಉತ್ತರ ಪ್ರದೇಶದ ಫಲಿತಾಂಶ ಕರ್ನಾಟಕ ಕಾಂಗ್ರೆಸ್ಗೂ ಅನ್ವಯವಾಗುವ ಸಾಧ್ಯತೆ ಹೆಚ್ಚಿದೆ. ಆದರೆ ಕರ್ನಾಟಕದಲ್ಲಿ ಎರಡು ಪಕ್ಷಗಳು ಕಾಂಗ್ರೆಸ್ಗೆ ಕಂಟಕವಾಗುವ ಸಾಧ್ಯತೆ ಇದೆ. ಕಾಂಗ್ರೆಸ್ ಮತಗಳನ್ನು ಒಡೆಯುವ ಶಕ್ತಿ ರಾಜ್ಯದಲ್ಲಿ ಎಸ್ಡಿಪಿಐ, ಎಐಎಂಐಎಂ ಪಕ್ಷಗಳಿಗಿದೆ. ಹಾಗಾಗಿ ಬಿಜೆಪಿಗಿಂತಲೂ, ಕಾಂಗ್ರೆಸ್ಗೆ ಈ ಎರಡು ಪಕ್ಷಗಳು ಡೇಂಜರ್ ಆಗಿದೆ. ಇದನ್ನೂ ಓದಿ: ಮೂರು ಪ್ರತ್ಯೇಕ ಎನ್ಕೌಂಟರ್ಗಳಲ್ಲಿ ನಾಲ್ವರು ಉಗ್ರರ ಹತ್ಯೆ
ಈಗಾಗಲೇ ಕರ್ನಾಟಕದಲ್ಲಿ ಕಾಂಗ್ರೆಸ್ಗೆ ಎಸ್ಡಿಪಿಐ, ಎಐಎಂಐಎಂ ಪಕ್ಷಗಳು ತೀವ್ರ ಸ್ಪರ್ಧೆ ನೀಡುತ್ತಿವೆ. ಎಸ್ಡಿಪಿಐ, ಎಐಎಂಐಎಂ ಪಕ್ಷಗಳು ಸಂಘಟನೆ ಗಟ್ಟಿ ಮಾಡಿಕೊಳ್ಳುತ್ತಿವೆ. ಕರಾವಳಿ ಭಾಗದಲ್ಲಿ ಎಸ್ಡಿಪಿಐ ಬಲಿಷ್ಠವಾಗುತ್ತಿದ್ದರೆ, ಇತ್ತ ಹೈದರಾಬಾದ್ ಕರ್ನಾಟಕದಲ್ಲಿ ಓವೈಸಿ ಕೋಟೆ ಕಟ್ಟುತ್ತಿದ್ದಾರೆ. ಅದಲ್ಲದೆ ಹಿಜಬ್ ಸೇರಿ ಮುಸ್ಲಿಂ ಧಾರ್ಮಿಕ ವಿಚಾರಗಳಲ್ಲಿ ಎರಡು ಪಕ್ಷಗಳು ಹಸ್ತಕ್ಷೇಪ ಮಾಡುತ್ತಿವೆ. ಸ್ಥಳೀಯ ಸಂಸ್ಥೆಗಳಲ್ಲಿ ಈ ಎರಡು ಪಕ್ಷಗಳು ಪ್ರಾಬಲ್ಯ ಸಾಧಿಸುತ್ತಿವೆ. ಮುಂದಿನ ವಿಧಾನಸಭೆ ಚುನಾವಣೆಯಲ್ಲೂ ಕಾಂಗ್ರೆಸ್ ಮತ ಕಸಿಯುವ ಸಾಧ್ಯತೆ ಇದ್ದು, ಎಚ್ಚೆತ್ತುಕೊಳ್ಳದಿದ್ದರೇ ಕಾಂಗ್ರೆಸ್ ಮತಗಳನ್ನು ಕಿತ್ತು ತಿನ್ನುವುದು ಖಚಿತ.
ಲಕ್ನೋ: ಪಂಚರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ಭಾರಿ ಗೆಲುವು ಸಾಧಿಸಿದೆ. ಚುನಾವಣೆ ಕುರಿತು ಸಂಸದ ಹಾಗೂ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀದ್ ಓವೈಸಿ ಪ್ರತಿಕ್ರಿಯಿಸಿದ್ದಾರೆ.
ಎಲ್ಲಾ ರಾಜಕೀಯ ಪಕ್ಷಗಳು ಇವಿಎಂ ಸಮಸ್ಯೆಗಳನ್ನು ಎತ್ತಿ ತೋರಿಸುವ ಮೂಲಕ ತಮ್ಮ ಸೋಲನ್ನು ಮರೆಮಾಚಲು ಪ್ರಯತ್ನಿಸುತ್ತಿವೆ. ಆದರೆ ಇದು ಇವಿಎಂ ಸಮಸ್ಯೆಯಲ್ಲ, ಜನರ ತಲೆಯಲ್ಲಿರುವ ಚಿಪ್ಪಿನ ಸಮಸ್ಯೆ. ಬಿಜೆಪಿ ಯಶಸ್ವಿಯಾಗಿರುವುದು 80-20. ನಾವು ನಾಳೆಯಿಂದಲೇ ಮತ್ತೆ ಕೆಲಸ ಮಾಡಲು ಪ್ರಾರಂಭಿಸುತ್ತೇವೆ. ಮುಂದಿನ ಬಾರಿ ಉತ್ತಮ ಸಾಧನೆ ಮಾಡುತ್ತೇವೆ ಎಂಬ ನಂಬಿಕೆ ಇದೆ ಎಂದು ಓವೈಸಿ ತಿಳಿಸಿದ್ದಾರೆ. ಇದನ್ನೂ ಓದಿ: ಜನರು ರಾಷ್ಟ್ರೀಯತೆ, ಅಭಿವೃದ್ಧಿ ಮತ್ತು ಉತ್ತಮ ಆಡಳಿತವನ್ನ ಗೆಲ್ಲಿಸಿದ್ದಾರೆ: ಯೋಗಿ
ಉತ್ತರ ಪ್ರದೇಶದ ಅಲ್ಪಸಂಖ್ಯಾತರನ್ನು ಕೇವಲ ವೋಟ್ ಬ್ಯಾಂಕ್ಗಾಗಿ ಬಳಸಿಕೊಳ್ಳಲಾಗುತ್ತಿದೆ. ಲಖಿಂಪುರ್ ಖೇರಿಯಲ್ಲೂ ಬಿಜೆಪಿ ಗೆದ್ದಿದೆ. ಅದಕ್ಕಾಗಿಯೇ 80-20 ಗೆಲುವು ಎಂದು ಹೇಳುತ್ತಿದ್ದೇನೆ. ಈ 80-20 ಪರಿಸ್ಥಿತಿಯು ವರ್ಷಗಳವರೆಗೆ ಇರುತ್ತದೆ. ಅದನ್ನು ಜನ ಅರ್ಥ ಮಾಡಿಕೊಳ್ಳಬೇಕು. ನಮ್ಮ ಉತ್ಸಾಹ ಇನ್ನೂ ಹೆಚ್ಚಿದೆ ಎಂದು ಹೇಳಿದ್ದಾರೆ.
ಬಿಜೆಪಿಗೆ ಅಧಿಕಾರ ನೀಡಲು ಯುಪಿ ಜನತೆ ನಿರ್ಧರಿಸಿದ್ದಾರೆ. ಜನತೆಯ ನಿರ್ಧಾರವನ್ನು ನಾನು ಗೌರವಿಸುತ್ತೇನೆ. ಎಐಎಂಐಎಂನ ರಾಜ್ಯಾಧ್ಯಕ್ಷರು, ಕಾರ್ಯಕರ್ತರು, ಸದಸ್ಯರು ಮತ್ತು ನಮಗೆ ಮತ ಹಾಕಿದ ಎಲ್ಲರಿಗೂ ಧನ್ಯವಾದ ಸಲ್ಲಿಸುತ್ತೇನೆ. ನಮ್ಮ ಪ್ರಯತ್ನಗಳು ಸಾಕಷ್ಟಿತ್ತು. ಆದರೆ ಫಲಿತಾಂಶಗಳು ನಮ್ಮ ನಿರೀಕ್ಷೆಗೆ ತಕ್ಕಂತೆ ಬರಲಿಲ್ಲ. ನಾವು ಮತ್ತೆ ಕಷ್ಟಪಟ್ಟು ಕೆಲಸ ಮಾಡುತ್ತೇವೆ ಎಂದು ಆಶಯ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ನಾನು ಆತಂಕವಾದಿಯಲ್ಲ ಎಂದು ಮತದಾರರು ಸಾಬೀತು ಮಾಡಿದ್ದಾರೆ: ಕೇಜ್ರಿವಾಲ್
ಕಾಂಗ್ರೆಸ್ ಕುರಿತು ಮಾತನಾಡಿದ ಅವರು, ಕಾಂಗ್ರೆಸ್ ಬಗ್ಗೆ ಮಾತನಾಡುವ ಮೂಲಕ ನಾನು ಯಾಕೆ ಅವರನ್ನು ಗೌರವಿಸಬೇಕು ಎಂದು ಪ್ರಶ್ನಿಸಿದ್ದಾರೆ.
ಬಹುಜನ ಸಮಾಜ ಪಕ್ಷವನ್ನು ವಿಸರ್ಜಿಸಿದರೆ ಪ್ರಜಾಪ್ರಭುತ್ವಕ್ಕೆ ದುಃಖದ ದಿನವಾಗಲಿದೆ. ಭಾರತದ ಪ್ರಜಾಪ್ರಭುತ್ವದಲ್ಲಿ ಬಿಎಸ್ಪಿ ದೊಡ್ಡ ಪಾತ್ರ ವಹಿಸಿದೆ. ಪಕ್ಷ ಗಟ್ಟಿಯಾಗಲಿ ಎಂದು ಹಾರೈಸುತ್ತೇವೆ. ಇಂದಿನ ಫಲಿತಾಂಶವು ಖಂಡಿತವಾಗಿಯೂ ದೌರ್ಬಲ್ಯವನ್ನು ತೋರಿಸುತ್ತದೆ. ಆದರೆ ಬಿಎಸ್ಪಿ ಅಗತ್ಯವಿದೆ ಎಂದು ನುಡಿದಿದ್ದಾರೆ. ಇದನ್ನೂ ಓದಿ: ಜನರ ತೀರ್ಪನ್ನು ನಮ್ರತೆಯಿಂದ ಸ್ವೀಕರಿಸುತ್ತೇನೆ, ನಾವು ಕಲಿಯುತ್ತೇವೆ: ರಾಹುಲ್ ಗಾಂಧಿ
ಬಾಗಲಕೋಟೆ: ಭಾರತ್ ಮಾತಾ ಎನ್ನುವುದು ಅವೈಜ್ಞಾನಿಕ ಎಂದು ಎಐಎಂಐಎಂ ರಾಜ್ಯಾಧ್ಯಕ್ಷ ಉಸ್ಮಾನ್ ಘನಿ ಹುಮ್ನಾಬಾದ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಬಾಗಲಕೋಟೆಯ ಇಳಕಲ್ನಲ್ಲಿ ಭಾಷಣ ಮಾಡುವಾಗ, ಒಂದು ಮಗುವಿಗೆ ಜನ್ಮ ಕೊಡಲು ಎಷ್ಟು ತಾಯಂದಿರು ಬೇಕು? ಒಬ್ಬರು ತಾಯಿ ಸಾಕಲ್ವಾ? ಹೀಗಿದ್ಮೇಲೆ ಭಾರತ ಮಾತಾ, ಗಂಗಾಮಾತಾ, ಗೋಮಾತಾ, ಎಲ್ಲಿಂದ ಬರ್ತಾರೆ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ರಸ್ತೆ ಅಪಘಾತದಲ್ಲಿ ನನ್ನಮ್ಮ ಸೂಪರ್ ಸ್ಟಾರ್ ಖ್ಯಾತಿಯ ಸಮನ್ವಿ ದಾರುಣ ಸಾವು
ಕಂಡ ಕಂಡವರನ್ನು ತಾಯಿ ಎನ್ನುತ್ತಾ ಹೋದರೆ ಮುಂದೆ ದೇಶದ ಗತಿ ಏನು ಎಂದು ವಿವಾದಾತ್ಮಕವಾಗಿ ಮಾತನಾಡಿದ್ದಾರೆ. ಉಸ್ಮಾನ್ ಘನಿ ಹೇಳಿಕೆಗೆ ವ್ಯಾಪಕ ಟೀಕೆ ವ್ಯಕ್ತವಾಗುತ್ತಿದೆ. ಇದನ್ನೂ ಓದಿ: ಮೀಟೂ ಕೇಸಲ್ಲಿ ಅರ್ಜುನ್ ಸರ್ಜಾಗೆ ರಿಲೀಫ್
ನವದೆಹಲಿ: 18ನೇ ವಯಸ್ಸಿಗೆ ಹೆಣ್ಣುಮಕ್ಕಳು ಪ್ರಧಾನಿಯನ್ನು ಆಯ್ಕೆ ಮಾಡುವ ಹಕ್ಕಿದೆ ಎಂದ ಮೇಲೆ, ಬಾಳ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳುವ ಹಕ್ಕು ಯಾಕಿಲ್ಲ ಎಂದು ಎಐಎಂಐಎಂ ಸಂಸದ ಅಸಾದುದ್ದೀನ್ ಓವೈಸಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಮಹಿಳೆಯರ ವಿವಾಹದ ಕನಿಷ್ಠ ವಯಸ್ಸನ್ನು 18ರಿಂದ 20ಕ್ಕೆ ಹೆಚ್ಚಿಸುವ ಪ್ರಸ್ತಾವನೆಗೆ ಕೇಂದ್ರ ಸರ್ಕಾರ ಬುಧವಾರ ಒಪ್ಪಿಗೆ ಸೂಚಿಸಿದೆ. ಈ ಕುರಿತು ಮಾತನಾಡಿದ ಓವೈಸಿ, ಮದುವೆ ವಯಸ್ಸನ್ನು ಹೆಚ್ಚಿಸಿರುವ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ನಿಲುವು ಪುರುಷ ಪ್ರಧಾನ ವ್ಯವಸ್ಥೆ ಬಗ್ಗೆ ಒಲವು ಹೊಂದಿದೆ ಎಂಬುದಕ್ಕೆ ಉತ್ತಮ ಉದಾಹರಣೆಯಾಗಿದೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ:ಹೆಣ್ಣುಮಕ್ಕಳ ವಿವಾಹದ ವಯಸ್ಸು 18ರಿಂದ 21ಕ್ಕೆ ಏರಿಕೆ – ಕೇಂದ್ರ ಸಂಪುಟ ಅನುಮೋದನೆ
ಭಾರತೀಯ ನಾಗರಿಕ ತನಗೆ 18 ವರ್ಷ ತುಂಬಿದ ಮೇಲೆ ಯಾವುದೇ ಒಪ್ಪಂದಕ್ಕೆ ಸಹಿ ಹಾಕಬಹುದು, ಉದ್ಯಮ ನಡೆಸಬಹುದು, ಪ್ರಧಾನಿ ಹಾಗೂ ಸಂಸದರು, ಶಾಸಕರನ್ನೂ ಆಯ್ಕೆ ಮಾಡಬಹುದು. ಆದ್ದರಿಂದ ಕಾನೂನಿನಲ್ಲಿ ಈಗ ಇರುವ ಪುರುಷರ ಮದುವೆಯ ಕನಿಷ್ಠ ವಯಸ್ಸನ್ನು 21ರಿಂದ 18ಕ್ಕೆ ಇಳಿಸಬೇಕು ಎಂಬುದು ನನ್ನ ಅಭಿಪ್ರಾಯ ಎಂದು ತಿಳಿಸಿದ್ದಾರೆ.
ಭಾರತದಲ್ಲಿ ಬಾಲ್ಯ ವಿವಾಹಗಳು ಕಡಿಮೆಯಾಗಿರುವುದು ಕ್ರಿಮಿನಲ್ ಕಾನೂನಿನಿಂದಲ್ಲ, ಶಿಕ್ಷಣ ಮತ್ತು ಆರ್ಥಿಕ ಪ್ರಗತಿಯಿಂದಾಗಿ. ಹೀಗಿದ್ದೂ ಸುಮಾರು 1.2 ಕೋಟಿ ಮಕ್ಕಳ ಬಾಲ್ಯ ವಿವಾಹಗಳು ನಡೆದಿವೆ. ಈ ಸರ್ಕಾರ ಮಹಿಳೆಯರ ಏಳಿಗೆಗಾಗಿ ಏನನ್ನೂ ಮಾಡಿಲ್ಲ. 2005ರ ಹೊತ್ತಿಗೆ ಮಹಿಳಾ ಉದ್ಯೋಗಿಗಳ ಸಂಖ್ಯೆ ಶೇ.26ರಷ್ಟು ಇದ್ದದ್ದು, 2020ರ ವೇಳೆಗೆ ಶೇ.16ಕ್ಕೆ ಕುಸಿದಿದೆ ಎಂದು ಟೀಕಿಸಿದ್ದಾರೆ.
ವೈಯಕ್ತಿಕ ಮಾಹಿತಿ ರಕ್ಷಣಾ ಮಸೂದೆಯಲ್ಲಿ, ಮಾಹಿತಿಯನ್ನು ಹಂಚಿಕೊಳ್ಳಬಹುದಾದ ನಾಗರಿಕರಿಗೆ ಬಾಳಸಂಗಾತಿ ಆಯ್ಕೆ ಮಾಡಿಕೊಳ್ಳುವ ಹಕ್ಕಿಲ್ಲ. ಇದೆಂತಹ ಲಾಜಿಕ್? ಕೇಂದ್ರ ಸರ್ಕಾರ ತಪ್ಪು ಹೆಜ್ಜೆ ಇಟ್ಟಿದೆ ಎಂಬುದು ನನ್ನ ಭಾವನೆ. 21 ವರ್ಷ ದಾಟಿದ್ದರೆ ಅಂತಹವರಿಗೆ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಬೇಕು. ಖಾಸಗಿತನ ಮೂಲಭೂತ ಹಕ್ಕು ಎಂದು ಸುಪ್ರೀಂ ಕೋರ್ಟ್ ಕೂಡ ಹೇಳಿದೆ. ಯಾರನ್ನು ಮದುವೆಯಾಗಬೇಕು, ಯಾವಾಗ ಮಗುವನ್ನು ಪಡೆಯಬೇಕು ಎಂಬುದು ಸಹ ಆಯ್ಕೆಯ ವಿಚಾರವಾಗಿದೆ. ಹೀಗಿದ್ದರೂ ಮಹಿಳೆಯರ ಸರ್ವಾಂಗೀಣ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಏನನ್ನೂ ಮಾಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಮಹಿಳೆಯ ಕಾಲಿಗೆ ನಮಸ್ಕರಿಸಿದ ಮೋದಿ
ಅಮೆರಿಕದಲ್ಲಿ 14 ವಯಸ್ಸಿನವರೂ ಮದುವೆಯಾಗಲು ಅವಕಾಶ ಇದೆ. ಬ್ರಿಟನ್, ಕೆನಡಾ ದೇಶಗಳು ಮದುವೆ ಕನಿಷ್ಠ ವಯಸ್ಸನ್ನು 16 ವರ್ಷಕ್ಕೆ ನಿಗದಿಪಡಿಸಿವೆ ಎಂದು ಓವೈಸಿ ಉದಾಹರಣೆ ಸಹಿತ ವಿವರಿಸಿದ್ದಾರೆ.
ಹುಬ್ಬಳ್ಳಿ: ಹರ್ಯಾಣ ರಾಜ್ಯದ ಗುರುಗ್ರಾಮ್ ನಗರದಲ್ಲಿ ಮುಸ್ಲಿಂ ಸಮುದಾಯದವರಿಗೆ ಧಾರ್ಮಿಕ ಆಚರಣೆ ಮಾಡಲು, ನಮಾಜ್ ಮಾಡಲು ಹಾಗೂ ಮಸೀದಿಗಳನ್ನು ಕಟ್ಟಲು ರಾಜ್ಯ ಸರ್ಕಾರ ಅನುಮತಿ ನೀಡುತ್ತಿಲ್ಲ ಎಂದು ಆರೋಪಿಸಿ ಎಐಎಮ್ಐಎಮ್ ಪಕ್ಷದ ವತಿಯಿಂದ ಹುಬ್ಬಳ್ಳಿಯಲ್ಲಿ ಪ್ರತಿಭಟನೆ ನಡೆಸಲಾಯಿತು.
ಹುಬ್ಬಳ್ಳಿ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು ಹರ್ಯಾಣ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಹರ್ಯಾಣ ರಾಜ್ಯ ಸರ್ಕಾರ 2018ರಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮುಸ್ಲಿಂ ಸಮುದಾಯದವರಿಗೆ ನಮಾಜ್ ಮಾಡಲು ಅವಕಾಶ ನೀಡಿತ್ತು. ಸಾರ್ವಜನಿಕ ಸ್ಥಳಗಳು ಸಾರ್ವಜನಿಕ ಬಳಕೆಗೆ ಮುಕ್ತವಾಗಿರುತ್ತದೆ. ಆದರೆ ನಿರ್ದಿಷ್ಟವಾಗಿ ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿಕೊಂಡು ಅವರ ಧಾರ್ಮಿಕ ಆಚರಣೆಗೆ ನಮಾಜ್ ಮಾಡಲು ಹರಿಯಾಣ ರಾಜ್ಯ ಬಿಜೆಪಿ ಸರ್ಕಾರ ಕಡಿವಾಣ ಹಾಕುತ್ತಿದೆ ಎಂದು ಕಿಡಿಕಾರಿದರು.
ಹರ್ಯಾಣ ರಾಜ್ಯದ ಬಿಜೆಪಿ ಸರ್ಕಾರ ಸಂವಿಧಾನದ ಆಶಯಗಳನ್ನು ಗಾಳಿಗೆ ತೂರಿ ಮುಸ್ಲಿಂ ಸಮುದಾಯದವರ ಧಾರ್ಮಿಕ ಆಚರಣೆಗೆ ಕಡಿವಾಣ ಹಾಕುತ್ತಿರುವುದು ಸಂವಿಧಾನ ವಿರೋಧಿ ನಡೆಯಾಗಿದೆ ಎಂದು ಆರೋಪಿಸಿ ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಕನ್ನಡ ಕಾರ್ಯಕರ್ತರಿಂದ MES ಮುಖಂಡನ ಮುಖಕ್ಕೆ ಮಸಿ
ಈ ಬಗ್ಗೆ ರಾಷ್ಟ್ರಪತಿಗಳು ಗಂಭೀರವಾಗಿ ಪರಿಗಣಿಸಿ ಮುಸ್ಲಿಂ ಸಮುದಾಯಕ್ಕೆ ಸಂವಿಧಾನ ಬದ್ಧ ಹಕ್ಕುಗಳನ್ನು ಕಲ್ಪಿಸಿಕೊಡಬೇಕೆಂದು ತಹಶೀಲ್ದಾರ್ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು.