Tag: AIMS hospital

  • ಸಿಪಿಎಂ ನಾಯಕ ಸೀತಾರಾಮ್ ಯೆಚೂರಿ ಆರೋಗ್ಯ ಸ್ಥಿತಿ ತೀವ್ರ ಗಂಭೀರ

    ನವದೆಹಲಿ : ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸವಾದಿ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ (Sitharam Yechury) ಆರೋಗ್ಯ ಪರಿಸ್ಥಿತಿ ತೀವ್ರ ಗಂಭೀರವಾಗಿದ್ದು, ಏಮ್ಸ್ (AIMS) ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ದಾಖಲಿಸಲಾಗಿದೆ. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವ ಅವರನ್ನು ಕಳೆದ ತಿಂಗಳು ಆಸ್ಪತ್ರೆಗೆ ದಾಖಲಿಸಿತ್ತು.

    ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವ ಅವರನ್ನು ಕಳೆದ ತಿಂಗಳು ಏಮ್ಸ್ ಆಸ್ಪತ್ರೆಗೆ ದಾಖಲಿಸಿತ್ತು. ಆರೋಗ್ಯ ಪರಿಸ್ಥಿತಿ ತೀವ್ರ ಗಂಭೀರ ಹಿನ್ನೆಲೆ ಇದೀಗ ತುರ್ತು ನಿಗಾ ಘಟಕದಲ್ಲಿ ದಾಖಲಿಸಲಾಗಿದೆ.ಇದನ್ನೂ ಓದಿ: ಡಿವೋರ್ಸ್ ಬಳಿಕ ನಿವಿ ಫುಲ್ ಆ್ಯಕ್ಟೀವ್- ಕೆಟ್ಟ ಕಾಮೆಂಟ್ಸ್ ಬಗ್ಗೆ ತಲೆಕೆಡಿಸಿಕೊಳ್ಳದೆ ರೀಲ್ಸ್ ಮಾಡಿದ ನಟಿ

    ವೈದ್ಯರ ಬಹು-ಶಿಸ್ತಿನ ತಂಡವು ಅವರ ಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ. ಈ ಸಮಯದಲ್ಲಿ ಅವರ ಸ್ಥಿತಿ ಗಂಭೀರವಾಗಿದೆ ಎಂದು ಪಕ್ಷವು ಎಕ್ಸ್ ಪೋಸ್ಟ್ ಮೂಲಕ ತಿಳಿಸಿದೆ.ತೀವ್ರ ಜ್ವರದಿಂದ ಬಳಲುತ್ತಿದ್ದ ಯೆಚೂರಿ ಅವರನ್ನು ಆಗಸ್ಟ್ 19 ರಂದು ಏಮ್ಸ್ನ ತುರ್ತು ವಿಭಾಗಕ್ಕೆ ದಾಖಲಿಸಲಾಗಿತ್ತು. ನ್ಯುಮೋನಿಯಾದ ಕಾರಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಯಚೂರಿ ಅವರು ಇತ್ತೀಚೆಗೆ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.ಇದನ್ನೂ ಓದಿ: ಡಿವೋರ್ಸ್ ಬಳಿಕ ನಿವಿ ಫುಲ್ ಆ್ಯಕ್ಟೀವ್- ಕೆಟ್ಟ ಕಾಮೆಂಟ್ಸ್ ಬಗ್ಗೆ

  • ಗಣ್ಯಾತಿಗಣ್ಯರಿಂದ ಭಾರತ ರತ್ನ ಪುರಸ್ಕೃತ ಅಟಲ್ ಜಿಗೆ ಅಂತಿಮ ನಮನ

    ಗಣ್ಯಾತಿಗಣ್ಯರಿಂದ ಭಾರತ ರತ್ನ ಪುರಸ್ಕೃತ ಅಟಲ್ ಜಿಗೆ ಅಂತಿಮ ನಮನ

    ನವದೆಹಲಿ: ಮಾಜಿ ಪ್ರಧಾನಿ, ಅಜಾತಶತ್ರು ಮತ್ತು ಭಾರತ ರತ್ನ ಪುರಸ್ಕೃತ ಅಟಲ್ ಬಿಹಾರಿ ವಾಜಪೇಯಿ ಅವರ ಅಗಲಿಕೆಯಿಂದ ದೇಶದಾದ್ಯಂತ ಶೋಕಾಚರಣೆ ಆಚರಿಸಲಾಗುತ್ತಿದ್ದು, ಗಣ್ಯಾತಿ ಗಣ್ಯರು ಅವರ ಅಂತಿ ದರ್ಶನ ಪಡೆದು ನಮನ ಸಲ್ಲಿಸುತ್ತಿದ್ದಾರೆ.

    ದೆಹಲಿಯ 6ಎ ಕೃಷ್ಣಮೆನನ್ ಮಾರ್ಗ್ ನಲ್ಲಿರುವ ವಾಜಪೇಯಿ ನಿವಾಸದಲ್ಲಿಯೇ ಅಂತಿಮ ದರ್ಶನಕ್ಕೆ ಇಡಲಾಗಿದೆ. ಈ ವೇಳೆ ಬಂಧು ಮಿತ್ರರು ಮತ್ತು ಗಣ್ಯರಿಗೆ ದರ್ಶನ ಪಡೆಯಲು ಅವಕಾಶ ಕಲ್ಪಿಸಲಾಗಿತ್ತು. ಪ್ರಧಾನ ಮಂತ್ರಿ ನರೇಂದ್ರ ಮೋದಿ, ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್, ಬಿಜೆಪಿ ಮುಖಂಡ ಹಾಗೂ ವಾಜಪೇಯಿ ಅವರ ಆಪ್ತ ಎಲ್ ಕೆ ಅಡ್ವಾಣಿ, ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ, ಮಾಜಿ ಪ್ರಧಾನಿ ಮನ ಮೋಹನ್ ಸಿಂಗ್ ಸೇರಿದಂತೆ ಇತರ ರಾಜ್ಯಗಳ ಮುಖ್ಯಮಂತ್ರಿಗಳು, ರಾಜಕೀಯ ಮುಖಂಡರು ಅಂತಿಮ ದರ್ಶನ ಪಡೆದಿದ್ದಾರೆ.

    ಅಷ್ಟೇ ಅಲ್ಲದೇ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್, ಬಿಜೆಪಿ ಅಧ್ಯಕ್ಷ ಅಮಿತ್ ಶಾ, ರಾಜನಾಥ್ ಸಿಂಗ್, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯ ನಾಥ್, ಯೋಗ ಗುರು ಬಾಬಾ ರಾಮ್ ದೇವ್ ಸೇರಿದಂತೆ ಇನ್ನು ಅನೇಕ ಗಣ್ಯರು ಅಟಲ್ ಬಿಹಾರಿ ವಾಜಪೇಯಿಗೆ ಮಾಲಾರ್ಪಣೆ ಸಮರ್ಪಿಸಿ ಅಂತಿಮ ನಮನವನ್ನು ಸಲ್ಲಿಸಿದ್ದಾರೆ.

    ಯುಮುನಾ ನದಿ ದಂಡೆಯಲ್ಲಿರುವ ರಾಷ್ಟ್ರೀಯ ಸ್ಮೃತಿ ಸ್ಥಳದವರೆಗೆ ಅಂತಿಮ ಯಾತ್ರೆ ನಡೆಯಲಿದ್ದು, ಬಳಿಕ ಬ್ರಾಹ್ಮಣ ಸಂಪ್ರದಾಯದಂತೆ ಅಂತ್ಯ ಸಂಸ್ಕಾರ ನಡೆಯಲಿದೆ. ಲಾಲ್ ಬಹದ್ದೂರ್ ಶಾಸ್ತ್ರಿಯವರ ಸ್ಮಾರಕವಿರುವ ವಿಜಯ್‍ಘಾಟ್ ಮತ್ತು ಶಾಂತಿವನದ ಪಕ್ಕದಲ್ಲೇ ಅಟಲ್ ಸ್ಮಾರಕ ನಿರ್ಮಾಣಕ್ಕೆ ನಗರಾಭಿವೃದ್ಧಿ ಇಲಾಖೆ 1.5 ಎಕರೆ ಜಮೀನು ಮೀಸಲಿರಿಸಿದೆ. ಅಜಾತ ಶತ್ರುವಿನ ನಿಧನಕ್ಕೆ ಇಡೀ ದೇಶವೇ ಕಣ್ಣೀರು ಹಾಕುತ್ತಿದೆ.

    ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ(93) ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು, ಚಿಕಿತ್ಸೆ ಫಲಕಾರಿಯಾಗದೇ ದೆಹಲಿಯಲ್ಲಿರುವ ಏಮ್ಸ್ ಆಸ್ಪತ್ರೆಯಲ್ಲಿ ಗುರುವಾರ ಸಂಜೆ ವಿಧಿವಶರಾಗಿದ್ದಾರೆ. ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ವಾಜಪೇಯಿ ಕೆಲ ವರ್ಷಗಳಿಂದ ಸಾರ್ವಜನಿಕ ಜೀವನದಲ್ಲಿ ಕಾಣಿಸಿಕೊಳ್ಳುತ್ತಿರಲಿಲ್ಲ. ಕೆಲ ತಿಂಗಳ ಹಿಂದೆ ಏಮ್ಸ್ ಆಸ್ಪತ್ರೆಗೆ ದಾಖಲಾಗಿ ಬಳಿಕ ಡಿಸ್ಚಾರ್ಜ್ ಆಗಿದ್ದರು. ಆದರೆ ನಂತರ ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗೆ ಮತ್ತೆ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಒಟ್ಟಿನಲ್ಲಿ 9 ವಾರ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದ ಅಟಲ್ ಜಿ ನಿನ್ನೆ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ವಿಡಿಯೋ: ಮಂಡ್ಯದಲ್ಲಿ ವಿದ್ಯುತ್ ಹರಿದು ಕಂಬದಲ್ಲೇ ಒದ್ದಾಡಿದ ಕಾರ್ಮಿಕನ ರಕ್ಷಣೆ

    ವಿಡಿಯೋ: ಮಂಡ್ಯದಲ್ಲಿ ವಿದ್ಯುತ್ ಹರಿದು ಕಂಬದಲ್ಲೇ ಒದ್ದಾಡಿದ ಕಾರ್ಮಿಕನ ರಕ್ಷಣೆ

    ಮಂಡ್ಯ: ವಿದ್ಯುತ್ ಕಂಬ ಸ್ಥಳಾಂತರದ ವೇಳೆ ತಂತಿಯಲ್ಲಿ ವಿದ್ಯುತ್ ಹರಿದು ಒದ್ದಾಡುತ್ತಿದ್ದ ಕಾರ್ಮಿಕನನ್ನು ಸ್ಥಳೀಯರು ರಕ್ಷಣೆ ಮಾಡಿರುವ ಘಟನೆ ಮಂಡ್ಯದಲ್ಲಿ ನಡೆದಿದೆ.

    ಜಿಲ್ಲೆಯ ನಾಗಮಂಗಲ ತಾಲೂಕು ಬೆಳ್ಳೂರಿನಲ್ಲಿ ಭಾನುವಾರ ಸಂಜೆ ಈ ಘಟನೆ ಸಂಭವಿಸಿದೆ. ನಾಗಮಂಗಲ ತಾಲೂಕಿನ ಅರಸೇಗೌಡನಕೊಪ್ಪಲು ಗ್ರಾಮದ ಕುಮಾರ್ ಅಪಾಯದಿಂದ ಪಾರಾದ ವ್ಯಕ್ತಿ.

    ಬೆಳ್ಳೂರಿನ ಸಂತೆ ಬೀದಿಯಲ್ಲಿ ವಿದ್ಯುತ್ ಕಂಬ ಸ್ಥಳಾಂತರ ಮಾಡುವ ಕೆಲಸ ನಡೆಯುತ್ತಿತ್ತು. ಹೀಗಾಗಿ ಕಾರ್ಮಿಕ ಕುಮಾರ್ ವಿದ್ಯುತ್ ಕಂಬದ ಮೇಲೇರಿ ಕೆಲಸ ಮಾಡುತ್ತಿದ್ದರು. ಈ ವೇಳೆ ಒಂದು ತಂತಿಯಲ್ಲಿ ಇದ್ದಕ್ಕಿದ್ದಂತೆ ವಿದ್ಯುತ್ ಹರಿದಿದ್ದು, ಪರಿಣಾಮ ಕಾರ್ಮಿಕ ಕುಮಾರ್ ಕಂಬದ ಮೇಲೆಯೇ ಒದ್ದಾಡಿದ್ದಾರೆ. ಇದನ್ನು ಗಮನಿಸಿದ ಸ್ಥಳೀಯರು ದೊಣ್ಣೆಯಿಂದ ಅವರನ್ನು ತಳ್ಳಿ ರಕ್ಷಣೆ ಮಾಡಿದ್ದಾರೆ.

    ಕೂಡಲೇ ಬೆಳ್ಳೂರು ಉಪಶಾಖೆಗೆ ಕರೆ ಮಾಡಿ ಲೈನ್ ಆಫ್ ಮಾಡಿಸಿ, ಕುಮಾರ್ ಅವರನ್ನು ಕಂಬದಿಂದ ಕೆಳಗೆ ಇಳಿಸಲಾಗಿದೆ. ತೀವ್ರ ಅಸ್ವಸ್ಥಗೊಂಡಿದ್ದ ಅವರಿಗೆ ಬಿಜಿ ನಗರದ ಎಐಎಂಎಸ್ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ನಂತ್ರ ಹೆಚ್ಚಿನ ಚಿಕಿತ್ಸೆಗೆಂದು ಬೆಂಗಳೂರಿಗೆ ರವಾನಿಸಲಾಗಿದೆ. ಅಪಾಯದಿಂದ ಪಾರಾಗಿರುವ ಕುಮಾರ್, ಚೇತರಿಸಿಕೊಳ್ಳುತ್ತಿದ್ದಾರೆ. ಆದ್ರೆ, ಈ ಘಟನೆಗೆ ವಿದ್ಯುತ್ ಇಲಾಖೆಯ ನಿರ್ಲಕ್ಷ್ಯವೇ ಕಾರಣ. ಆದ್ರಿಂದ ತಪಿತಸ್ಥರಿಗೆ ಶಿಕ್ಷೆ ಆಗಬೇಕು ಅಂತಾ ಸ್ಥಳೀಯರು ಆಗ್ರಹಿಸ್ತಿದ್ದಾರೆ.

    https://www.youtube.com/watch?v=wM5ibO098AI