Tag: Aindritha Rai

  • ದಾಂಪತ್ಯ ಜೀವನಕ್ಕೆ ಎಂಟ್ರಿ ಕೊಟ್ಟ ದಿಗಂತ್- ಐಂದ್ರಿತಾ ರೇ

    ದಾಂಪತ್ಯ ಜೀವನಕ್ಕೆ ಎಂಟ್ರಿ ಕೊಟ್ಟ ದಿಗಂತ್- ಐಂದ್ರಿತಾ ರೇ

    ಚಿಕ್ಕಬಳ್ಳಾಪುರ: ಸ್ಯಾಂಡಲ್‍ವುಡ್ ಕ್ಯೂಟ್ ಕಪಲ್ ದೂದ್‍ಪೇಡ ದಿಗಂತ್ ಹಾಗೂ ನಟಿ ಐಂದ್ರಿತಾ ರೇ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು, ಇದೀಗ ಅವರ ಮದುವೆ ಫೋಟೋ ರಿವೀಲ್ ಆಗಿದೆ.

    ಚಿಕ್ಕಬಳ್ಳಾಪುರದ ನಂದಿಬೆಟ್ಟದ ಸಮೀಪವಿರುವ ಡಿಸ್ಕವರಿ ವಿಲೇಜ್ ರೆಸಾರ್ಟ್‍ನಲ್ಲಿ ಬುಧವಾರ ಸಂಜೆ 6.30ಕ್ಕೆ ದಿಗಂತ್ ಹಾಗೂ ಐಂದ್ರಿತಾ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಬೆಂಗಾಳಿ ಸಂಪ್ರದಾಯದಲ್ಲಿ ದಿಗಂತ್ ಹಾಗೂ ಐಂದ್ರಿತಾ ಮಿಂಚಿದ್ದಾರೆ.

    ದಿಗಂತ್ ಹಾಗೂ ಐಂದ್ರಿತಾ ರೇ ಮದುವೆ ಬೆಂಗಾಳಿ ಸಂಪ್ರದಾಯದಲ್ಲಿ ನಡೆದಿದೆ. ಇವರಿಬ್ಬರ ಮದುವೆ ಸಮಾರಂಭಕ್ಕೆ ನಟಿ ರಾಗಿಣಿ ದ್ವಿವೇದಿ, ಶರ್ಮಿಳಾ ಮಾಂಡ್ರೆ ಸೇರಿದಂತೆ ಇನ್ನಿತರ ಕಲಾವಿದರು, ಸ್ನೇಹಿತರು ಹಾಗೂ ಕುಟುಂಬದವರು ಭಾಗಿಯಾಗಿದ್ದರು.

    ದಿಗಂತ್ ಹಾಗೂ ಐಂದ್ರಿತಾ ರೇ ಮನಸಾರೆ ಇಷ್ಟಪಟ್ಟು ಬರೋಬ್ಬರಿ 8 ವರ್ಷವಾಗಿದ್ದು, ಇದೀಗ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ನಂದಿಬೆಟ್ಟದ ತಪ್ಪಲಲ್ಲಿರುವ ಡಿಸ್ಕವರಿ ವಿಲೇಜ್‍ನಲ್ಲಿ ಮಂಗಳವಾರ ಅರಿಶಿಣ ಶಾಸ್ತ್ರ ನೆರವೇರಿತ್ತು. ಐಂದ್ರಿತಾ ಅವರ ಮನೆಯಂಗಳದಲ್ಲೇ ಬೆಳೆದಿರುವ ಅರಿಶಿನದಿಂದ ಮದ್ವೆ ಶಾಸ್ತ್ರ ಮಾಡಿಸಿಕೊಂಡು ಸಂಭ್ರಮಿಸಿದ್ದಾರೆ.

    ಡಿ. 15ರಂದು ಬೆಂಗಳೂರಿನ ಖಾಸಗಿ ಹೋಟೆಲ್‍ನಲ್ಲಿ ಆರತಕ್ಷತೆ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಸ್ಯಾಂಡಲ್‍ವುಡ್ ಹಲವು ನಟ- ನಟಿಯರು ಭಾಗಿಯಾಗಿ ನವಜೋಡಿಯನ್ನು ಶುಭ ಕೋರಲಿದ್ದಾರೆ. ಶೇರ್ ಚಾಟ್ ಸಂಸ್ಥೆ ಐಂದ್ರಿತಾ, ದಿಗಂತ್ ಜೋಡಿಯ ಮದುವೆಯ ಫೋಟೋ ಮತ್ತು ವಿಡಿಯೋಗಳನ್ನು ಜನರಿಗೆ ತಲುಪಿಸುವ ಕೆಲಸ ಮಾಡುತ್ತಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ನಂದಿ ಬೆಟ್ಟದ ತಪ್ಪಲಲ್ಲಿ ಇಂದು ಮನಸಾರೆ ಜೋಡಿ ಸರಳ ವಿವಾಹ

    ನಂದಿ ಬೆಟ್ಟದ ತಪ್ಪಲಲ್ಲಿ ಇಂದು ಮನಸಾರೆ ಜೋಡಿ ಸರಳ ವಿವಾಹ

    ಚಿಕ್ಕಬಳ್ಳಾಪುರ/ಬೆಂಗಳೂರು: ಸ್ಯಾಂಡಲ್‍ವುಡ್‍ನ ಮತ್ತೊಂದು ತಾರಾ ಜೋಡಿ ಪ್ರೀತಿಸಿ ದಾಂಪತ್ಯ ಜೀವನಕ್ಕೆ ಕಾಲಿಡ್ತಿದೆ. ನಂದಿಬೆಟ್ಟದ ತಪ್ಪಲಿನಲ್ಲಿ ಸರಳವಾಗಿ ಮದುವೆ ಮಹೋತ್ಸವ ನಡೆಯಲಿದೆ.

    ಸ್ಯಾಂಡಲ್‍ವುಡ್‍ನ ಹಾಟ್ ಪೇರ್ ಗಳ ಸಾಲಿನಲ್ಲಿ ಮೊದಲಿಗೆ ಕೇಳಿ ಬರುವ ಹೆಸರು ದೂದ್‍ಪೇಡಾ ನಟ ದಿಗಂತ್ ಹಾಗೂ ಬೆಂಗಾಲಿ ಚೆಲುವೆ ಐಂದ್ರಿತಾ ರೈ. `ಮನಸಾರೆ’ ಅವರು ಇಷ್ಟಪಟ್ಟು ಲವ್ ಮಾಡಲು ಬರೋಬ್ಬರಿ 8 ವರ್ಷವಾಗಿದೆ. ಐಂದ್ರಿತಾ-ದಿಗಂತ್ ನಡುವಿನ ಪ್ರೀತಿ-ಬೆಸುಗೆ ಪಾರಿಜಾತದ ಮೂಲಕ ಮತ್ತಷ್ಟು ಗಟ್ಟಿಯಾಗಿದೆ.

    ಧೃವ ಎಂಗೇಜ್ ಆದ ಬೆನ್ನಲ್ಲೇ ಐಂದ್ರಿತಾ, ದಿಗಂತ್ ಜೋಡಿ ಸಪ್ತಪದಿ ತುಳಿಯೋಕೆ ಸಕಲ ಸಿದ್ಧತೆ ನಡೆದಿದೆ. ನಂದಿಬೆಟ್ಟದ ತಪ್ಪಲಲ್ಲಿರುವ ಡಿಸ್ಕವರಿ ವಿಲೇಜ್‍ನಲ್ಲಿ ಮಂಗಳವಾರ ಅರಿಶಿಣ ಶಾಸ್ತ್ರ ನೆರವೇರಿದೆ. ಐಂದ್ರಿತಾ ಅವರ ಮನೆಯಂಗಳದಲ್ಲೇ ಬೆಳೆದಿರುವ ಅರಿಶಿನದಿಂದ ಮದ್ವೆ ಶಾಸ್ತ್ರ ಮಾಡಿಸಿಕೊಂಡು ಸಂಭ್ರಮಿಸಿದ್ದಾರೆ.

    ಎರಡೂ ಕುಟುಂಬಗಳ ಸದಸ್ಯರು ಮತ್ತು ಸ್ಟಾರ್ ಪೇರ್ ನ ಆಪ್ತರಷ್ಟೇ ಅರಿಶಿಣ ಶಾಸ್ತ್ರದಲ್ಲಿ ಭಾಗಿಯಾಗಿ ದಾಂಪತ್ಯ ಗೀತೆ ಹಾಡುವುದಕ್ಕೆ ರೆಡಿಯಾಗಿರುವ ದಿಗಂತ್ ಐಂದ್ರಿತಾಗೆ ಶುಭಹಾರೈಸಿದರು. ತಿಳಿ ಹಳದಿ ಬಣ್ಣದ ಸೀರೆಯಲ್ಲಿ ಮಧುಮಗಳು ಐಂದ್ರಿತಾ ಮಿಂಚಿದರೆ, ನೀಲಿ ಶಾಲು, ಬಿಳಿಪಂಚೆಯಲ್ಲಿ ದಿಗಂತ್ ಕಂಗೊಳಿಸಿದರು.

    ಇಂದು ಸಂಜೆ ನಂದಿಬೆಟ್ಟದ ತಪ್ಪಲಿನಲ್ಲಿ ಐಂದ್ರಿತಾ, ದಿಗಂತ್ ಜೋಡಿ ಸಪ್ತಪದಿ ತುಳಿಯಲಿದೆ. ಕುಟುಂಬದವರು ಮತ್ತು ಚಿತ್ರರಂಗದ ಆಪ್ತರಿಗೆ ಮಾತ್ರ ಮದುವೆಗೆ ಆಮಂತ್ರಣ ಕೊಟ್ಟಿದ್ದಾರೆ. ಶೇರ್‍ಚಾಟ್ ಸಂಸ್ಥೆ ಐಂದ್ರಿತಾ, ದಿಗಂತ್ ಜೋಡಿಯ ಮದುವೆಯ ಫೋಟೋ ಮತ್ತು ವಿಡಿಯೋಗಳನ್ನು ಜನರಿಗೆ ತಲುಪಿಸುವ ಕೆಲಸ ಮಾಡುತ್ತಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಬೆಂಗ್ಳೂರು ಮೇಯರ್ ವಿರುದ್ಧ ಸ್ಯಾಂಡಲ್‍ವುಡ್ ನಟಿಮಣಿಯರು ಗರಂ!

    ಬೆಂಗ್ಳೂರು ಮೇಯರ್ ವಿರುದ್ಧ ಸ್ಯಾಂಡಲ್‍ವುಡ್ ನಟಿಮಣಿಯರು ಗರಂ!

    ಬೆಂಗಳೂರು: ನಾಯಿಗಳ ವಿಚಾರದಲ್ಲಿ ಮೇಯರ್ ಸಂಪತ್ ರಾಜ್ ವಿರುದ್ಧ ಸ್ಯಾಂಡಲ್ ವುಡ್ ತಾರೆಯರು ಕೆಂಡಕಾರಿದ್ದಾರೆ.

    ಸಾಕು ನಾಯಿಗಳಿಗೆ ಲೈಸೆನ್ಸ್ ಹಾಗೂ ಅಪಾರ್ಟ್ ಮೆಂಟ್‍ನಲ್ಲಿ ಸ್ವಂತ ಮನೆಯಲ್ಲಿ ವಾಸಿಸುವರಿಗೆ ಇಷ್ಟೇ ನಾಯಿ ಸಾಕಬೇಕು ಎನ್ನುವ ರೂಲ್ಸ್ ಮಾಡಿರುವ ಬಿಬಿಎಂಪಿ ಮೇಯರ್ ವಿರುದ್ಧ ಐಂದ್ರಿತಾ ರೇ, ಶ್ರುತಿ ಹರಿಹರನ್ ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ.

    ಮೇಯರ್ ಇದೆಂಥ ನಾನ್ ಸೆನ್ಸ್ ಐಡಿಯಾ. ಬೀದಿನಾಯಿಗಳನ್ನು ಸಾಕಲು ಈ ರೀತಿ ಕಠಿಣ ಕಾಯ್ದೆ ತಂದಿರುವುದು ಸರಿಯಲ್ಲ. ಮೊದಲು ಬೀದಿನಾಯಿಗಳ ಸಂತಾನಹರಣ ಕಾರ್ಯಕ್ರಮವನ್ನು ಸರಿಯಾಗಿ ಅನುಷ್ಟಾನಕ್ಕೆ ತನ್ನಿ ಎಂದು ನಟಿಯರು ಟ್ವಿಟ್ಟರ್ ಮೂಲಕ ತರಾಟೆಗೆ ತೆಗೆದುಕೊಂಡಿದ್ದಾರೆ.

    ಶೃತಿ ಹರಿಹರನ್ ಆನ್‍ಲೈನ್ ಪಿಟಿಷನ್ ಹಾಕುವ ಬೆಂಬಲ ಸೂಚಿಸಿದ್ದಾರೆ. ಅಷ್ಟೇ ಅಲ್ಲದೇ ಜನರ ಜೊತೆ ಸಹಿ ಹಾಕುವಂತೆ ಮನವಿ ಮಾಡಿದ್ದಾರೆ. ಸದ್ಯ ಕೋರ್ಟ್ ಈ ಆದೇಶಕ್ಕೆ ಮಧ್ಯಂತರ ತಡೆಯಾಜ್ಞೆ ಕೂಡ ನೀಡಿದೆ.

    ನಿಯಮದಲ್ಲಿ ಏನಿದೆ?
    ಬಿಬಿಎಂಪಿ ವ್ಯಾಪ್ತಿಯಲ್ಲಿ ಇನ್ನು ಮುಂದೆ ನಾಯಿ ಸಾಕಲು ವಾರ್ಷಿಕ 110 ಪರವಾನಗಿ ಶುಲ್ಕವನ್ನು ಕಡ್ಡಾಯವಾಗಿ ಪಾವತಿಸಬೇಕು. ಅಲ್ಲದೆ, ತಪ್ಪದೆ ಸಂತಾನ ಶಕ್ತಿಹರಣ ಚಿಕಿತ್ಸೆ ಮಾಡಿಸಬೇಕು. ಈ ನಿಯಮ ಉಲ್ಲಂಘಿಸಿದರೆ 1 ಸಾವಿರ ದಂಡ ಕಟ್ಟಬೇಕು. ಒಂದು ವೇಳೆ ಈ ನಿಯಮವನ್ನು ಉಲ್ಲಂಘಿಸಿದರೆ ಮುದ್ದಿನ ನಾಯಿಯನ್ನು ಮಾಲೀಕರು ಕಳೆದುಕೊಳ್ಳುವ ಸಾಧ್ಯತೆಯಿದೆ.

    ಫ್ಲ್ಯಾಟ್‍ಗಳಲ್ಲಿರುವವರು ಒಂದು ನಾಯಿ, ಮನೆಗಳಲ್ಲಿರುವವರು ಗರಿಷ್ಠ ಮೂರು ನಾಯಿ ಸಾಕಲು ಅವಕಾಶವಿದೆ. ಹೆಚ್ಚು ನಾಯಿ ಸಾಕಿದರೆ, ಬಿಬಿಎಂಪಿ ನೋಟಿಸ್ ಕೊಡಲಿದೆ. ನಿಗದಿತ ಅವಧಿಯೊಳಗೆ ನೋಟಿಸ್‍ಗೆ ಉತ್ತರಿಸಬೇಕು. ನಿಯಮ ಉಲ್ಲಂಘಿಸುವವರ ನಾಯಿಯನ್ನು ವಶಕ್ಕೆ ಪಡೆದು ಬಿಬಿಎಂಪಿಯ ಶ್ವಾನ ಸಂತಾನ ನಿಯಂತ್ರಣ ಕೇಂದ್ರದಲ್ಲಿಟ್ಟು, ಮುಂದೆ ಹರಾಜು ಹಾಕಲಾಗುತ್ತದೆ ಅಥವಾ ಸಾಕುವವರಿಗೆ ಉಚಿತವಾಗಿ ಕೊಡಲಾಗುತ್ತದೆ.

    ನಾಯಿಗಳ ಕುತ್ತಿಗೆಗೆ ಪಟ್ಟಿ ಕಟ್ಟಿ ಕಾಲರ್ ಐಡಿ ಹಾಕಬೇಕು. ಈ ಪಟ್ಟಿಯಲ್ಲಿ ನಾಯಿಯ ಆರೋಗ್ಯ, ಲಸಿಕೆ ಕೊಡಿಸಿದ್ದು, ಮಾಲೀಕರ ವಿವರ, ಪರವಾನಗಿ ಸಂಖ್ಯೆ ಮೊದಲಾದ ಮಾಹಿತಿ ಇರಬೇಕು. ಬೀದಿ ನಾಯಿಗಳನ್ನು ಹಿಡಿದು ಸಂತಾನ ಶಕ್ತಿಹರಣ ಚಿಕಿತ್ಸೆ ಮಾಡಿ ಮೂಲ ಸ್ಥಳದಲ್ಲೇ ವಾಪಸ್ ಬಿಡಲಾಗುತ್ತದೆ. ಒಂದು ವೇಳೆ ನಾಯಿಗಳಿಂದ ತೊಂದರೆ ಆಗಿದ್ದಲ್ಲಿ ಬಿಬಿಎಂಪಿಗೆ ದೂರು ನೀಡಬಹುದು. ಅದನ್ನು ಆಧರಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಬಿಬಿಎಂಪಿ ತಿಳಿಸಿದೆ.