Tag: Air Chief Marshal

  • ನಿವೃತ್ತ ವಾಯುಸೇನೆ ಮುಖ್ಯಸ್ಥ ಭದೌರಿಯಾ ಬಿಜೆಪಿ ಸೇರ್ಪಡೆ

    ನಿವೃತ್ತ ವಾಯುಸೇನೆ ಮುಖ್ಯಸ್ಥ ಭದೌರಿಯಾ ಬಿಜೆಪಿ ಸೇರ್ಪಡೆ

    ನವದೆಹಲಿ: ನಿವೃತ್ತ ವಾಯುಸೇನೆ ಮುಖ್ಯಸ್ಥ (Air Chief Marshal) ಆರ್‌ಕೆಎಸ್ ಭದೌರಿಯಾ (R K S Bhadauria) ಬಿಜೆಪಿ ಪಕ್ಷವನ್ನು ಸೇರ್ಪಡೆಯಾಗಿದ್ದಾರೆ.

    ಬಿಜೆಪಿ (BJP) ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ಮತ್ತು ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರ ಸಮ್ಮುಖದಲ್ಲಿ ಭದೌರಿಯಾ ನವದೆಹಲಿಯ ಪಕ್ಷದ ಪ್ರಧಾನ ಕಚೇರಿಯಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು.

    ರಫೇಲ್ ಫೈಟರ್ ಜೆಟ್ (Rafale Fighter Jet) ಅನ್ನು ಹಾರಿಸಿದ ಮೊದಲ ಭಾರತೀಯ ವಾಯುಪಡೆಯ ಅಧಿಕಾರಿಗಳಲ್ಲಿ ಭದೌರಿಯಾ ಕೂಡ ಒಬ್ಬರು ಮತ್ತು ಈ ವಿಮಾನ ಖರೀದಿಗೆ ಫ್ರಾನ್ಸ್‌ನೊಂದಿಗೆ (France) ಒಪ್ಪಂದವನ್ನು ಅಂತಿಮಗೊಳಿಸುವಲ್ಲಿ ಪ್ರಮುಖ ಪಾತ್ರವನ್ನು ವಹಿಸಿದ್ದರು.

    ಭದೌರಿಯಾ ಅವರು ಸೆಪ್ಟೆಂಬರ್ 2019 ರಿಂದ ಸೆಪ್ಟೆಂಬರ್ 2021 ರವರೆಗೆ ವಾಯುಪಡೆಯ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದಾರೆ. ಇದನ್ನೂ ಓದಿ: ತವರು ಜಿಲ್ಲೆಯನ್ನು ಗೆಲ್ಲಲು ನೇರವಾಗಿ ಅಖಾಡಕ್ಕೆ ಇಳಿದ ಸಿದ್ದರಾಮಯ್ಯ

     

    ಭದೌರಿಯಾ ಪರಮ ವಿಶಿಷ್ಟ ಸೇವಾ ಪದಕ, ಅತಿ ವಿಶಿಷ್ಟ ಸೇವಾ ಪದಕ, ವಾಯು ಸೇನಾ ಪದಕ, ರಾಷ್ಟ್ರಪತಿಗಳ ಪದಕ ಪಡೆದ ಇರವು ಪುಣೆಯ ನ್ಯಾಷನಲ್‌ ಡಿಫೆನ್ಸ್‌ ಅಕಾಡೆಮಿಯ ಹಳೆಯ ವಿದ್ಯಾರ್ಥಿ. ಇವರು 4250 ಗಂಟೆಗಳ ಹಾರಾಟದ ಅನುಭವವನ್ನು ಹೊಂದಿದ್ದು, 26 ವಿವಿಧ ರೀತಿಯ ಫೈಟರ್‌ ವಿಮಾನಗಳನ್ನು ಹಾರಿಸಿದ್ದಾರೆ.

    ಉತ್ತರ ಪ್ರದೇಶ (Uttar Pradesh) ಮೂಲದ ಭದೌರಿಯಾ ಆ ರಾಜ್ಯದಿಂದಲೇ ಕಣಕ್ಕೆ ಇಳಿಯುವ ಸಾಧ್ಯತೆಯಿದೆ. ಲೋಕಸಭೆ ಚುನಾವಣೆಗೆ ಉತ್ತರ ಪ್ರದೇಶದ ಹಲವು ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಬಿಜೆಪಿ ಪ್ರಕಟಿಸಿಲ್ಲ. ಮೂಲಗಳ ಪ್ರಕಾರ ಹಾಲಿ ವಿಕೆ ಸಿಂಗ್‌ ಪ್ರತಿನಿಧಿಸುತ್ತಿರುವ ಗಾಜಿಯಾಬಾದ್‌ನಿಂದ ಭದೌರಿಯಾ ಅವರನ್ನು ಕಣಕ್ಕೆ ಇಳಿಸಲು ಬಿಜೆಪಿ ಮುಂದಾಗಿದೆ ಎನ್ನಲಾಗಿದೆ. ಇದನ್ನೂ ಓದಿ: ಮರಳಿ ಗೂಡಿಗೆ ಜನಾರ್ದನ ರೆಡ್ಡಿ- ಸೋಮವಾರ ಬಿಜೆಪಿ ಸೇರ್ಪಡೆ

    ಬಿಜೆಪಿಗೆ ಸೇರ್ಪಡೆಯಾಗಿ ಮಾತನಾಡಿದ ಅವರು, ಮತ್ತೊಮ್ಮೆ ರಾಷ್ಟ್ರ ನಿರ್ಮಾಣಕ್ಕೆ ಕೊಡುಗೆ ನೀಡಲು ನನಗೆ ಈ ಅವಕಾಶ ನೀಡಿದ ಪಕ್ಷದ ನಾಯಕತ್ವಕ್ಕೆ ನಾನು ಧನ್ಯವಾದ ಹೇಳುತ್ತೇನೆ. ನಾನು ನಾಲ್ಕು ದಶಕಗಳಿಗೂ ಹೆಚ್ಚು ಕಾಲ ಐಎಎಫ್‌ಗೆ ಸೇವೆ ಸಲ್ಲಿಸಿದ್ದೇನೆ. ಆದರೆ ಬಿಜೆಪಿ ಸರ್ಕಾರದ ನಾಯಕತ್ವದಲ್ಲಿ ಕಳೆದ 8 ವರ್ಷಗಳು ನನ್ನ ಸೇವೆಯ ಅತ್ಯುತ್ತಮ ಸಮಯವಾಗಿತ್ತು. ನಮ್ಮ ಸಶಸ್ತ್ರ ಪಡೆಗಳನ್ನು ಸಶಕ್ತಗೊಳಿಸಲು ಮತ್ತು ಆಧುನೀಕರಿಸಿ ಸ್ವಾವಲಂಬಿಗಳನ್ನಾಗಿ ಮಾಡಲು ಈ ಸರ್ಕಾರವು ತೆಗೆದುಕೊಂಡ ಕಠಿಣ ಕ್ರಮಗಳು ಪಡೆಗಳಲ್ಲಿ ಹೊಸ ಸಾಮರ್ಥ್ಯವನ್ನು ಹುಟ್ಟುಹಾಕಿದೆ. ಮಾತ್ರವಲ್ಲದೆ ಅವರಿಗೆ ಹೊಸ ಆತ್ಮವಿಶ್ವಾಸವನ್ನೂ ತುಂಬಿದೆ. ಸರ್ಕಾರದ ಸ್ವಾವಲಂಬಿ ನಿರ್ಧಾರ ಫಲಿತಾಂಶಗಳನ್ನು ನಾವು ಈಗ ನೋಡುತ್ತಿದ್ದೇವೆ. ಭದ್ರತೆಯ ದೃಷ್ಟಿಯಿಂದ ಸರ್ಕಾರ ತೆಗೆದುಕೊಳ್ಳುತ್ತಿರುವ ಕ್ರಮಗಳು ಬಹಳ ಮುಖ್ಯವಾಗಿದ್ದು, ಜಾಗತಿಕವಾಗಿ ಭಾರತವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುತ್ತಿದೆ ಎಂದು ಅವರು ಹೇಳಿದರು.

     

  • ಈಗ ಪ್ರತಿಭಟಿಸುವವರು ಮುಂದೆ ಬೆಲೆತೆರಬೇಕಾಗುತ್ತದೆ: ಏರ್ ಚೀಫ್ ಮಾರ್ಷಲ್ ಎಚ್ಚರಿಕೆ

    ಈಗ ಪ್ರತಿಭಟಿಸುವವರು ಮುಂದೆ ಬೆಲೆತೆರಬೇಕಾಗುತ್ತದೆ: ಏರ್ ಚೀಫ್ ಮಾರ್ಷಲ್ ಎಚ್ಚರಿಕೆ

    ನವದೆಹಲಿ: ಜನರ ಈ ರೀತಿಯ ಹಿಂಸಾತ್ಮಕ ನಡೆಯನ್ನು ನಾವು ನಿರೀಕ್ಷಿಸಿರಲಿಲ್ಲ. ಈಗ ಪ್ರತಿಭಟಿಸುತ್ತಿರುವವರು ಮುಂದೆ ಹೆಚ್ಚಿನ ಬೆಲೆ ತೆರಬೇಕಾಗಬಹುದು ಎಂದು ಅಗ್ನಿಪಥ್ ನೇಮಕಾತಿ ಯೋಜನೆಯನ್ನು ಪ್ರತಿಭಟಿಸುತ್ತಿರುವವರಿಗೆ ಏರ್ ಚೀಫ್ ಮಾರ್ಷಲ್ ವಿ.ಆರ್ ಚೌಧರಿ ಎಚ್ಚರಿಕೆ ನೀಡಿದ್ದಾರೆ.

    ನಾವು ಈ ರೀತಿಯ ಹಿಂಸಾಚಾರವನ್ನು ಖಂಡಿಸುತ್ತೇವೆ, ಇದು ಪರಿಹಾರವಲ್ಲ. ಹಿಂಸಾಚಾರ ಹೀಗೆಯೇ ಮುಂದುವರಿದರೆ, ಪೊಲೀಸರ ಕೈಗೆ ಕೆಲಸ ಕೊಡಬೇಕಾಗುತ್ತದೆ. ಹಿಂಸಾಚಾರದಲ್ಲಿ ಭಾಗಿಯಾದವರು ಪೊಲೀಸರ ಕೈಗೆ ಸಿಕ್ಕರು ಎಂದಾದರೆ, ಅವರಿಗೆ ಸುಲಭದಲ್ಲಿ ಕ್ಲಿಯರೆನ್ಸ್ ಸಿಗುವುದಿಲ್ಲ ಎಂದು ಎಚ್ಚರಿಸಿದ್ದಾರೆ. ಇದನ್ನೂ ಓದಿ: ʼಅಗ್ನಿಪಥʼ ಹಿಂಸಾಚಾರ – ಪ್ರತಿಭಟನಾಕಾರರಿಗೆ ಆಸ್ಪತ್ರೆಯಿಂದಲೇ ಸೋನಿಯಾ ಗಾಂಧಿ ಮನವಿ

    ಅಗ್ನಿಪಥ್ ಯೋಜನೆ ಒಂದು ಸಕಾರಾತ್ಮಕ ಹೆಜ್ಜೆ. ಈ ಯೋಜನೆ ಬಗ್ಗೆ ಕಾಳಜಿ ಇರುವವರು ಹತ್ತಿರದ ಸೇನಾ ಕೆಂದ್ರ, ವಾಯುಪಡೆ ಅಥವಾ ನೌಕಾನೆಲೆಯನ್ನು ಸಂಪರ್ಕಿಸಿ, ತಮ್ಮ ಅನುಮಾನಗಳನ್ನು ಸ್ಪಷ್ಟಪಡಿಸಿಕೊಳ್ಳಬಹುದು ಎಂದು ಮಾಹಿತಿ ನೀಡಿದರು.

    ಜನರು ಪ್ರತಿಭಟಿಸುವುದಕ್ಕೂ ಮೊದಲು ಸರಿಯಾದ ಮಾಹಿತಿಯನ್ನು ಪಡೆದುಕೊಳ್ಳಿ. ಯೋಜನೆಯನ್ನು ಸಂಪೂರ್ಣವಾಗಿ ಅರ್ಥಮಾಡಿಕೊಳ್ಳಿ, ಆಗ ಮಾತ್ರ ಯೋಜನೆಯ ಪ್ರಯೋಜನ ಏನೆಂಬುದು ತಿಳಿಯುತ್ತದೆ. ಜನರ ಎಲ್ಲಾ ಅನುಮಾನಗಳನ್ನೂ ಇದು ನಿವಾರಿಸುತ್ತದೆ ಎಂಬುದು ನನಗೆ ಖಾತ್ರಿಯಿದೆ ಎಂದು ಹೇಳಿದರು. ಇದನ್ನೂ ಓದಿ: ಪ್ರಧಾನಿ ಮೋದಿ ಭೇಟಿ ಹಿನ್ನೆಲೆ ಸ್ಥಳ ಪರಿಶೀಲನೆ ಮಾಡಿದ ಸಿಎಂ

    ಸಂಪೂರ್ಣ ಯೋಜನೆಯನ್ನು ಒಮ್ಮೆ ಗಮನಿಸಿದರೆ, ಅದರಲ್ಲಿ ಹಲವು ಪ್ರಯೋಜನಗಳಿರುವುದು ತಿಳಿಯುತ್ತದೆ. ಅದರಲ್ಲಿ ಯುದ್ಧದ ಡೋಮೇನ್‌ಗಳು ಬದಲಾಗುತ್ತಿವೆ. ಸೇವೆಯಲ್ಲಿ ಕಿರಿಯ ಹಾಗೂ ತಂತ್ರಜ್ಞಾನದ ಬಗ್ಗೆ ತಿಳಿದಿರುವವರು ಬೇಕಿದ್ದಾರೆ. ಅಗ್ನಿವೀರರಿಗೆ 2-3 ಆಯ್ಕೆಗಳೂ ಇವೆ. 4 ವರ್ಷ ಸೇವೆ ಸಲ್ಲಿಸಿದ ಬಳಿಕ ವಾಯುಪಡೆಗೆ ಮರುನೋಂದಣಿಯೂ ಮಾಡಿಕೊಳ್ಳಬಹುದು. ಅವರಿಗೆ ಪಿಂಚಣಿ ಸೌಲಭ್ಯ ಇದೆ. ಉನ್ನತ ಶಿಕ್ಷಣ ಮುಂದುವರಿಸಲು ಬಯಸುವವರಿಗೂ ಅವಕಾಶ ಇದೆ. ಸ್ವಂತ ಉದ್ಯಮ ಸ್ಥಾಪಿಸಲು ಬಯಸುವವರು ಅದನ್ನೂ ಮಾಡಬಹುದು. ಅವರಿಗೆ ಖಾಸಗಿ ಅಥವಾ ಸರ್ಕಾರಿ ವಲಯದಲ್ಲಿ ಉದ್ಯೋಗವೂ ದೊರೆಯುತ್ತದೆ ಎಂದು ಸ್ಪಷ್ಟಪಡಿಸಿದರು.

    Live Tv