Tag: Air Defence

  • ಭಾರತದ ಬಳಿಯಿರುವಂತೆ ಅತ್ಯಾಧುನಿಕ ವಾಯುರಕ್ಷಣಾ ವ್ಯವಸ್ಥೆ ನಮಗೂ ಕೊಡಿ – ಅಮೆರಿಕಕ್ಕೆ ಪಾಕ್‌ ಬೇಡಿಕೆ

    ಭಾರತದ ಬಳಿಯಿರುವಂತೆ ಅತ್ಯಾಧುನಿಕ ವಾಯುರಕ್ಷಣಾ ವ್ಯವಸ್ಥೆ ನಮಗೂ ಕೊಡಿ – ಅಮೆರಿಕಕ್ಕೆ ಪಾಕ್‌ ಬೇಡಿಕೆ

    – ಮಿಲಿಟರಿ ಪ್ರಯೋಜನದ ಬಗ್ಗೆ ಶೆಹಬಾಜ್‌ ಸರ್ಕಾರ ಸುಳ್ಳು ಹಬ್ಬಿಸುತ್ತಿದೆ; ತಪ್ಪೊಪ್ಪಿಗೆ
    – ಭಾರತ 80 ಫೈಟರ್‌ ಜೆಟ್‌ಗಳಿಂದ 400 ಕ್ಷಿಪಣಿ ಹಾರಿಸಿತ್ತು
    – ಚೀನಾ ನಂಬಿ ಕೆಟ್ಟು ಈಗ ಅಮೆರಿಕದ ಬಳಿ ಭಿಕ್ಷೆ

    ಇಸ್ಲಾಮಾಬಾದ್‌: ಆಪರೇಷನ್‌ ಸಿಂಧೂರ ಕಾರ್ಯಾಚರಣೆಯಲ್ಲಿ ಭಾರತದ (India) ಅಸ್ತ್ರಗಳನ್ನು ಭೇದಿಸಲು ವಿಫಲವಾದ ಪಾಕಿಸ್ತಾನ ಇದೀಗ ಅತ್ಯಾಧುನಿಕ ವಾಯುರಕ್ಷಣಾ ವ್ಯವಸ್ಥೆಗಾಗಿ (Air Defence System) ಅಮೆರಿಕದ ಬಳಿ ಬೇಡಿಕೊಂಡಿದೆ.

    ಹೌದು. ಆಪರೇಷನ್ ಸಿಂಧೂರ ಸಮಯದಲ್ಲಿ ಭಾರತವು ಪಾಕಿಸ್ತಾನದ (Pakistan) ಮತ್ತು ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿದ್ದ 9 ಉಗ್ರರ ಅಡಗು ತಾಣಗಳನ್ನು ಧ್ವಂಸಗೊಳಿಸಿತು. ಅಲ್ಲದೇ ಪಾಕ್‌ ದಾಳಿಗೆ ಪ್ರತೀಕಾರವಾಗಿ 11 ವಾಯುನೆಲೆಗಳನ್ನೂ ಧ್ವಂಸಗೊಳಿಸಿತ್ತು. ಇದಕ್ಕೂ ಮುನ್ನ ಪಾಕ್‌ ಭಾರತದ ಮೇಲೆ ನಡೆಸಿದ ದಾಳಿಗಳನ್ನೆಲ್ಲ ಎಸ್‌-400 ವಾಯುರಕ್ಷಣಾ ವ್ಯವಸ್ಥೆ ವಿಫಲಗೊಳಿಸಿತು. ಒಟ್ಟಿನಲ್ಲಿ ಭಾರತದ ಎದುರು ಮಂಡಿಯೂರಿದ ಪಾಕ್‌ ಕಾಡಿ ಬೇಡಿ ಕದನ ವಿರಾಮ ಮಾಡಿಕೊಂಡಿತು. ಭಾರತದ ಈ ಪರಾಕ್ರಮ ಕಂಡು ದಂಗಾಗಿರುವ ಪಾಕಿಸ್ತಾನ ಈಗ ತನಗೂ ಅತ್ಯಾಧುನಿಕ ವಾಯುರಕ್ಷಣಾ ವ್ಯವಸ್ಥೆ ಮತ್ತು ಫೈಟರ್‌ ಜೆಟ್‌ಗಳನ್ನು ಕಲ್ಪಿಸುವಂತೆ ಅಮೆರಿಕದ (America) ಬಳಿ ಬೇಡಿಕೊಂಡಿದೆ.

    ಶೆಹಬಾಜ್‌ ಸರ್ಕಾರ ಸುಳ್ಳು ಹಬ್ಬಿಸುತ್ತಿದೆ
    ಪಾಕಿಸ್ತಾನದ 13 ಸದಸ್ಯರ ನಿಯೋಗದ ಭಾಗವಾಗಿರುವ ಪಾಕ್‌ ಸಚಿವ ಮುಸಾದಿಕ್ ಮಲಿಕ್ ವಾಷಿಂಗ್ಟನ್‌ನಲ್ಲಿ ಮಾತನಾಡಿದ್ದಾರೆ. ಅತ್ಯಾಧುನಿಕ ವಾಯು ರಕ್ಷಣಾ ವ್ಯವಸ್ಥೆ ಮತ್ತು ಯುದ್ಧ ವಿಮಾನಗಳನ್ನು ತನಗೆ ಮಾರಾಟ ಮಾಡುವಂತೆ ಮನವಿ ಮಾಡಿದ್ದಾರೆ. ಇದೇ ವೇಳೆ ಶೆಹಬಾಜ್‌ (Shehbaz Sharif) ಸರ್ಕಾರವು ತನ್ನ ಜನತೆಗೆ ಭಾರತಕ್ಕಿಂತ ಹೆಚ್ಚಿನ ಮಿಲಿಟರಿ ಪ್ರಯೋಜನ ಹೊಂದಿರುವುದಾಗಿ ಸುಳ್ಳು ಹಬ್ಬಿಸುತ್ತಿದೆ ಎಂದು ತಪ್ಪೊಪ್ಪಿಕೊಂಡಿದ್ದಾರೆ. ಈ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲೂ ವೈರಲ್‌ ಆಗಿದೆ.

    ನಾವೇ ನಾಶವಾಗಿಬಿಡ್ತಿದ್ವಿ
    ಮುಂದುವರಿದು… ಭಾರತ 80 ವಿಮಾನಗಳೊಂದಿಗೆ 400 ಕ್ಷಿಪಣಿಗಳನ್ನ ಹಾರಿಸಿತ್ತು. ಯುದ್ಧದ ವೇಳೆ ನಮಗೆ ಏನಾಯ್ತು ಅನ್ನೋದನ್ನ ನೀವು ನೋಡಿರಬೇಕು, ನಾವೇ ನಾಶವಾಗಿಬಿಡುತ್ತಿದ್ದೆವು. ನಮ್ಮಲ್ಲಿ ಸೂಕ್ತ ವಾಯು ರಕ್ಷಣಾ ವ್ಯವಸ್ಥೆಗಳಿಲ್ಲದಿರುವುದೇ ಇದಕ್ಕೆ ಕಾರಣ. ಭಾರತ ಬಳಸುತ್ತಿದ್ದ ತಂತ್ರಜ್ಞಾನವು ಅತ್ಯಾಧುನಿಕವಾದುದು, ತುಂಬಾ ಮುಂದುವರಿದಿದೆ. ಆದ್ದರಿಂದ ಆ ರೀತಿಯ ತಂತ್ರಜ್ಞಾನವನ್ನ ನಮಗೆ ಕೊಡಿ. ನಾವು ಖರೀದಿಸಲು ಉತ್ಸುಕವಾಗಿದ್ದೇವೆ ಎಂದು ಸಹ ಪಾಕ್‌ ಸಚಿವ ಹೇಳಿದ್ದಾರೆ.

    ಜೈಶ್‌ ಉಗ್ರ ಸಂಘಟನೆ ವಿರುದ್ಧ ಕ್ರಮ ತಗೊಳ್ಳಿ
    ಓಂದು ದಿನದ ಹಿಂದೆಯಷ್ಟೇ ಅಮೆರಿಕ ಸಂಸದ ಬ್ರಾಡ್‌ ಶೆರ್ಮನ್ (Brad Sherman) ಜೈಶ್‌ ಎ ಮೊಹಮ್ಮದ್‌ (Jaish-e-Mohammed) ಭಯೋತ್ಪಾದಕ ಸಂಘಟನೆ ವಿರುದ್ಧ ನಿರ್ಣಾಯಕ ಕ್ರಮ ಕೈಗೊಳ್ಳುವಂತೆ ಪಾಕ್‌ಗೆ ಬಲವಾದ ಸಂದೇಶ ನೀಡಿದ್ದರು. 2002 ರಲ್ಲಿ ವಾಲ್ ಸ್ಟ್ರೀಟ್ ಜರ್ನಲ್‌ನ ಪತ್ರಕರ್ತ ಡೇನಿಯಲ್ ಪರ್ಲ್ (Daniel Pearl) ಅವರ ಹತ್ಯೆ ಸೇರಿದಂತೆ ಅನೇಕ ಘೋರ ಅಪರಾಧಗಳಿಗೆ ಈ ಗುಂಪು ಕಾರಣವಾಗಿದೆ. ಹಾಗಾಗಿ ಈ ಉಗ್ರ ಸಂಘಟನೆಯನ್ನು ಬುಡಸಮೇತ ನಿರ್ಮೂಲನೆ ಮಾಡಬೇಕು. ಭಯೋತ್ಪಾದನೆ ವಿರುದ್ಧ ಬಲವಾದ ಹೋರಾಟ ನಡೆಸಲು ಸಾಧ್ಯವಿರುವ ಎಲ್ಲ ಕ್ರಮಗಳನ್ನು ಪಾಕಿಸ್ತಾನ ತೆಗೆದುಕೊಳ್ಳಬೇಕು ಎಂದು ಎಚ್ಚರಿಸಿದ್ದರು.

    ಭಾರತದ ಐಡಿಯಾ ಕಾಪಿ
    ಆಪರೇಷನ್‌ ಸಿಂಧೂರ ಕಾರ್ಯಾಚರಣೆ ಬಳಿಕ ಪಾಕ್‌ ಪ್ರಾಯೋಜಿತ ಮುಖವಾಡವನ್ನು ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಬಯಲು ಮಾಡಲು ಭಾರತ 7 ಸರ್ವಪಕ್ಷಗಳ ನಿಯೋಗವನ್ನು ವಿದೇಶಗಳಿಗೆ ಕಳುಹಿಸಿದೆ. ಇದೇ ಐಡಿಯಾ ಕಾಪಿ ಮಾಡಿರುವ ಪಾಕಿಸ್ತಾನ ಸಹ ತನ್ನ ದೇಶದ ನಿಯೋಗವನ್ನ ವಿದೇಶಗಳಿಗೆ ಕಳುಹಿಸಿದೆ. ಆದ್ರೆ ಪಾಕ್‌ ನಿಲುವಿಗೆ ವಿದೇಶಗಳಿಂದಲೂ ವಿರೋಧ ವ್ಯಕ್ತವಾಗುತ್ತಿದೆ.

  • ಭಾರತಕ್ಕಾಗಿ ಒಗ್ಗೂಡಿದ ರಷ್ಯಾ – ಉಕ್ರೇನ್‌; INS ತುಶಿಲ್ ಯುದ್ಧನೌಕೆ ಹಸ್ತಾಂತರ

    ಭಾರತಕ್ಕಾಗಿ ಒಗ್ಗೂಡಿದ ರಷ್ಯಾ – ಉಕ್ರೇನ್‌; INS ತುಶಿಲ್ ಯುದ್ಧನೌಕೆ ಹಸ್ತಾಂತರ

    ಮಾಸ್ಕೋ/ನವದೆಹಲಿ: ಹೆಚ್ಚುಕಡಿಮೆ ಕಳೆದ ಎರಡು ವರ್ಷಗಳಿಂದ ರಷ್ಯಾ-ಉಕ್ರೇನ್ (Russia Ukraine War) ನಡ್ವೆ ಭೀಕರ ಯುದ್ಧ ನಡೀತಿದೆ. ಆದ್ರೆ, ಇಬ್ಬರೂ ಬದ್ಧ ವೈರಿಗಳು ಭಾರತಕ್ಕಾಗಿ (India) ಒಗ್ಗೂಡಿದ ಅಪರೂಪದ ಘಟನೆ ನಡೆದಿದೆ.

    ರಷ್ಯಾ ಮತ್ತು ಉಕ್ರೇನ್ ನಡುವಿನ ವರ್ಷಗಳ ಸುದೀರ್ಘ ಯುದ್ಧದ ಹೊರತಾಗಿಯೂ, ಮಾಸ್ಕೋ ಮತ್ತು ಕೀವ್ ಭಾರತಕ್ಕಾಗಿ ಯುದ್ಧನೌಕೆ ನಿರ್ಮಾಣಕ್ಕಾಗಿ ಒಟ್ಟಾಗಿ ಸೇರಿವೆ. ಭಾರತದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಉನ್ನತ ಮಟ್ಟದ ಭೇಟಿಗಾಗಿ ಮಾಸ್ಕೋಗೆ ಆಗಮಿಸುತ್ತಿದ್ದಂತೆ ಸೋಮವಾರ ರಷ್ಯಾ-ಉಕ್ರೇನ್ ಜಂಟಿ ನಿರ್ಮಿತ ಯುದ್ಧ ನೌಕೆಯನ್ನು ಭಾರತಕ್ಕೆ ಅಧಿಕೃತವಾಗಿ ಹಸ್ತಾಂತರಿಸಲಾಗಿದೆ.

    ಯುದ್ಧನೌಕೆ INS ತುಶಿಲ್ ವಿತರಣೆ ಕಾರ್ಯಕ್ರಮದಲ್ಲಿ ರಷ್ಯಾ ಮತ್ತು ಉಕ್ರೇನ್ ಪ್ರತಿನಿಧಿಗಳು ಹಾಜರಿದಿದ್ದು ಕಾರ್ಯಕ್ರಮದ ವಿಶೇಷವಾಗಿತ್ತು. 2016ರಲ್ಲಿ ಭಾರತ ಸರ್ಕಾರ 2 ಯುದ್ಧನೌಕೆಗಾಗಿ ಆರ್ಡರ್ ಮಾಡಿತ್ತು. ಇದು ರಷ್ಯಾ ನಿರ್ಮಿತ ಕ್ರಿವಾಕ್ III-ವರ್ಗದ ಯುದ್ಧನೌಕೆಯಾಗಿದ್ದು, ಇದು ಸುಧಾರಿತ ಸ್ಟೆಲ್ತ್ ಮಿಸೈಲ್ ಫ್ರಿಗೇಟ್ ಆಗಿದೆ. ಭಾರತವು ಪ್ರಸ್ತುತ ಇಂತಹ ಆರು ಯುದ್ಧನೌಕೆಗಳನ್ನು ನಿರ್ವಹಿಸುತ್ತಿದೆ.

    ಅಲ್ಲದೇ ರಷ್ಯಾದಲ್ಲಿ ತಯಾರಾಗುತ್ತಿರುವ ಎರಡು ಹಡಗುಗಳು ಮಾತ್ರವಲ್ಲದೇ, ಇದೇ ರೀತಿಯ ಇನ್ನೂ ಎರಡು ಹಡಗುಗಳನ್ನು ಭಾರತದಲ್ಲಿ ಕೂಡ ತಯಾರಿಸಲು ಆದೇಶಿಸಲಾಗಿದೆ. ಭಾರತದ ಗೋವಾ ಶಿಪ್‌ಯಾರ್ಡ್‌ನಲ್ಲಿ ಈ ಹಡಗುಗಳ ನಿರ್ಮಾಣ ಕಾರ್ಯ ಭರದಿಂದ ಸಾಗಿದೆ.

  • ರಷ್ಯಾಗೆ ಕೌಂಟರ್ ಕೊಡಲು 125 ಆ್ಯಂಟಿ ಏರ್‌ಕ್ರಾಫ್ಟ್ ಗನ್ – ಉಕ್ರೇನ್ ಬೆಂಬಲಕ್ಕೆ ಬ್ರಿಟನ್

    ರಷ್ಯಾಗೆ ಕೌಂಟರ್ ಕೊಡಲು 125 ಆ್ಯಂಟಿ ಏರ್‌ಕ್ರಾಫ್ಟ್ ಗನ್ – ಉಕ್ರೇನ್ ಬೆಂಬಲಕ್ಕೆ ಬ್ರಿಟನ್

    ಕೀವ್: ಉಕ್ರೇನ್ (Ukraine) ಅನ್ನು ಮಣಿಸಲು ಸತತ ದಾಳಿ ನಡೆಸುತ್ತಿರುವ ರಷ್ಯಾ (Russia) ತನ್ನ ಮಿತಿಯ ಎಲ್ಲ ಮಾದರಿಯ ಕ್ಷಿಪಣಿ ಹಾಗೂ ಸ್ಫೋಟಕಗಳನ್ನು ಉಕ್ರೇನ್ ಮೇಲೆ ಪ್ರಯೋಗಿಸುತ್ತಿದೆ. ಅದರಲ್ಲೂ ಇತ್ತೀಚೆಗೆ ಉಕ್ರೇನಿನ ಮೂಲ ಸೌಕರ್ಯಗಳನ್ನೇ ಗುರಿಯಾಗಿಸಿ ದಾಳಿ ನಡೆಸುತ್ತಿದೆ. ಇದರಿಂದ ಉಕ್ರೇನಿನ ಜನ ಬೆಚ್ಚಿ ಬೀಳುತ್ತಿದ್ದಾರೆ.

    ಇದೀಗ ಬ್ರಿಟನ್ (UK) ಪ್ರಧಾನಿಯಾಗಿ ಇತ್ತೀಚೆಗೆ ಅಧಿಕಾರ ವಹಿಸಿಕೊಂಡ ರಿಷಿ ಸುನಾಕ್ ಉಕ್ರೇನ್‌ಗೆ ಬೆಂಬಲ ನೀಡುವುದಾಗಿ ಘೋಷಿಸಿದ್ದಾರೆ. ಕೀವ್‌ಗೆ ಇಂದು ಅನಿರೀಕ್ಷಿತ ಭೇಟಿ ನೀಡಿದ ರಿಷಿ ಸುನಾಕ್ (Rishi Sunak) ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝಲೆನ್ಸ್ಕಿ (Volodymyr Zelenskyy) ಅವರೊಂದಿಗೆ ಈ ಬಗ್ಗೆ ಮಾತುಕತೆ ನಡೆಸಿದ್ದಾರೆ. ಉಕ್ರೇನ್ ಗೆಲ್ಲುವವರೆಗೆ ಬ್ರಿಟನ್ ಬೆಂಬಲ ನೀಡುತ್ತದೆ ಎಂದು ಹೇಳಿದ್ದಾರೆ. ಅಲ್ಲದೇ ರಷ್ಯಾದಿಂದ ಅಬ್ಬರಿಸುತ್ತಿರುವ ಇರಾನಿ ಡ್ರೋನ್‌ಗಳನ್ನು (Iranian Drones) ಎದುರಿಸಲು 125 `ಆ್ಯಂಟಿ ಏರ್‌ಕ್ರಾಫ್ಟ್ ಗನ್’ಗಳನ್ನು ಪೂರೈಸುವುದಾಗಿ ಹಾಗೂ 50 ಮಿಲಿಯನ್ STG ಪ್ಯಾಕೇಜ್ (ವಾಯುಸೇನೆ ರಕ್ಷಣಾತ್ಮಕ ಸೌಲಭ್ಯ) ಪೂರೈಸುವುದಾಗಿ ಭರವಸೆ ನೀಡಿದ್ದಾರೆ. ಇದನ್ನೂ ಓದಿ: ಉಕ್ರೇನ್ ವಿರುದ್ಧ ಮತ್ತೆ ಸಮರ ಸಾರಿದ ರಷ್ಯಾ – ಒಂದೇ ಬಾರಿಗೆ 100 ಕ್ಷಿಪಣಿ ಉಡಾವಣೆ

    ರಷ್ಯಾದ ಸತತ ದಾಳಿಯಿಂದ ಕಂಗೆಟ್ಟಿರುವ ಉಕ್ರೇನ್‌ನಲ್ಲಿ 437 ಮಕ್ಕಳು ಮೃತಪಟ್ಟಿದ್ದು, 837 ಮಕ್ಕಳು ಗಾಯಗೊಂಡಿದ್ದಾರೆ. ಉಕ್ರೇನಿನ ಮೂಲ ಸೌಕರ್ಯಗಳನ್ನ ಗುರಿಯಾಗಿಸಿ ಈಗಾಗಲೇ 1,000 ಕ್ಷಿಪಣಿ ಮತ್ತು ಡ್ರೋನ್‌ಗಳನ್ನು ರಷ್ಯಾ ಉಡಾಯಿಸಿದೆ. ಆದರೂ ಆಗ್ನೇಯ ಭಾಗದಲ್ಲಿ ತನ್ನ ಪರಾಕ್ರಮವನ್ನು ಮುಂದುವರಿಸಿದೆ.

    ರಷ್ಯಾ ಕ್ಷಿಪಣಿ ದಾಳಿಯಿಂದ ಉಕ್ರೇನಿನ 12 ಪ್ರಾಂತ್ಯಗಳಲ್ಲಿ ತೀವ್ರ ವಿದ್ಯುತ್ ಸಮಸ್ಯೆ ಉಂಟಾಗಿದೆ. ಅಲ್ಲದೇ ಉಕ್ರೇನ್ ರಾಷ್ಟ್ರದ ಅರ್ಧದಷ್ಟು ಇಂಧನ ಮೂಲ ಸೌಕರ್ಯಗಳು ಹಾನಿಗೊಳಗಾಗಿವೆ ಎಂದು ಕೀವ್ ಮಿಲಿಟರಿ ಅಧಿಕಾರಿಗಳು ಹೇಳಿದ್ದಾರೆ. ಇದನ್ನೂ ಓದಿ: ರಷ್ಯಾದಿಂದ ಮತ್ತೆ ಡೆಡ್ಲಿ ಡ್ರೋನ್ ದಾಳಿ – ಉಕ್ರೇನ್‌ನಲ್ಲಿ ಅಲ್ಲೋಲ ಕಲ್ಲೋಲ

    ಕೆಲ ದಿನಗಳ ಹಿಂದೆ ಯುದ್ಧಕ್ಕೆ ಬಿಡುವು ನೀಡಿದ್ದ ರಷ್ಯಾ ತನ್ನ ರಷ್ಯಾದ ಕ್ರಿಮಿಯಾ ಸೇತುವೆಯನ್ನು ಧ್ವಂಸಗೊಳಿಸಿದ ನಂತರ ಪ್ರತಿಕಾರವಾಗಿ ರಷ್ಯಾ ದಾಳಿಗೆ ಮುಂದಾಯಿತು. ಸತತವಾಗಿ 75 ಕ್ಷಿಪಣಿಗಳು, 5 ಡೆಡ್ಲಿ ರಾಕೆಟ್‌ಗಳನ್ನು ಉಕ್ರೇನ್ ಮೇಲೆ ಹಾರಿಬಿಟ್ಟಿತ್ತು. ಇದಾದ ಒಂದು ವಾರದಲ್ಲಿ ರಷ್ಯಾ ಅಧ್ಯಕ್ಷ ಪುಟಿನ್ ಉಕ್ರೇನ್ ವಿರುದ್ಧ ಕ್ಷಿಪಣಿ ದಾಳಿ ಅಂತ್ಯಗೊಳಿಸುವುದಾಗಿ ಹೇಳಿದ್ದರು. ಮತ್ತೆ 84 ಡೆಡ್ಲಿ ಡ್ರೋನ್‌ಗಳಿಂದ ದಾಳಿ ನಡೆಸಿತ್ತು. ಅದಕ್ಕಾಗಿ ಇರಾನಿ ಡ್ರೋನ್‌ಗಳನ್ನು ಬಳಸಲಾಗಿತ್ತು. ಮೂರು ದಿನಗಳ ಹಿಂದೆಯೂ ಸಹ ಏಕಾ-ಏಕಿ ನೂರು ಕ್ಷಿಪಣಿಗಳಿಂದ ದಾಳಿ ನಡೆಸಿತ್ತು.

    Live Tv
    [brid partner=56869869 player=32851 video=960834 autoplay=true]