Tag: air force

  • ಪಾಕ್‌ ಒಳಗಡೆಯೇ ಏರ್‌ಸ್ಟ್ರೈಕ್‌ – 7 ಬಾಂಬ್‌ಗೆ 30 ಮಂದಿ ಬಲಿ

    ಪಾಕ್‌ ಒಳಗಡೆಯೇ ಏರ್‌ಸ್ಟ್ರೈಕ್‌ – 7 ಬಾಂಬ್‌ಗೆ 30 ಮಂದಿ ಬಲಿ

    ಇಸ್ಲಾಮಾಬಾದ್‌: ಖೈಬರ್ ಪಖ್ತುಂಖ್ವಾ (Khyber Pakhtunkhwa) ಪ್ರಾಂತ್ಯದಲ್ಲಿ ಪಾಕಿಸ್ತಾನ ವಾಯುಪಡೆ (Pakistan Air Force) ನಡೆಸಿದ ವೈಮಾನಿಕ ದಾಳಿಯಲ್ಲಿ (Air Strike) ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಕನಿಷ್ಠ 30 ಜನರು ಸಾವನ್ನಪ್ಪಿದ್ದಾರೆ.

    ಕಣಿವೆಯಲ್ಲಿರುವ ಮಾಟ್ರೆ ದಾರಾ ಗ್ರಾಮದ ಮೇಲೆ ಪಾಕಿಸ್ತಾನದ ಜೆ-17 ಯುದ್ಧ ವಿಮಾನಗಳು ಎಂಟು LS-6 ಬಾಂಬ್‌ಗಳನ್ನು ಹಾಕಿವೆ. ಸೋಮವಾರ ನಸುಕಿನ ಜಾವ 2 ಗಂಟೆಯ ವೇಳೆ ಈ ದಾಳಿ ನಡೆದಿದ್ದು ಭಾರೀ ಪ್ರಮಾಣದಲ್ಲಿ ಸಾವು ನೋವು ಸಂಭವಿಸಿದೆ ಎಂದು ವರದಿಯಾಗಿದೆ.  ಇದನ್ನೂ ಓದಿ:  ಒಂದಿಂಚು ಜಾಗವನ್ನೂ ಬಿಡಲ್ಲ – ಬಾಗ್ರಾಮ್‌ ವಾಯುನೆಲೆ ಹಿಂದಿರುಗಿಸುವ ಟ್ರಂಪ್ ಬೇಡಿಕೆ ತಿರಸ್ಕರಿಸಿದ ತಾಲಿಬಾನ್

     

    ರಕ್ಷಣಾ ತಂಡಗಳು ಅವಶೇಷಗಳ ಅಡಿಯಲ್ಲಿ ಶವಗಳನ್ನು ಹುಡುಕುವಲ್ಲಿ ನಿರತವಾಗಿವೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಜನರು ಚೀರಾಡುತ್ತಿರುವ ವಿಡಿಯೋ ವೈರಲ್‌ ಆಗಿದೆ.

    ಖೈಬರ್ ಪಖ್ತುಂಖ್ವಾದಲ್ಲಿ ಹಿಂದೆ ಅನೇಕ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳನ್ನು ನಡೆಸಲಾಗಿತ್ತು. ಪಾಕಿಸ್ತಾನದಲ್ಲಿ ಭಯೋತ್ಪಾದ ದಾಳಿ ಹೆಚ್ಚಾಗುತ್ತಿದೆ. ಹಿಂದಿನ ತಿಂಗಳಿಗೆ ಹೋಲಿಸಿದರೆ ಶೇ.42 ರಷ್ಟು ಹೆಚ್ಚಳ ಕಂಡಿದೆ. ಇದನ್ನೂ ಓದಿ:  ಅಮೆರಿಕ ವಿರೋಧದ ನಡ್ವೆ ಪ್ಯಾಲೆಸ್ಟೀನ್‌ಗೆ ದೇಶದ ಮಾನ್ಯತೆ ನೀಡಲು ಬ್ರಿಟನ್ ಸಿದ್ಧತೆ

    ಈ ವರ್ಷದ ದೇಶಾದ್ಯಂತ ಕನಿಷ್ಠ 74 ಭಯೋತ್ಪಾದಕ ದಾಳಿಗಳು ದಾಖಲಾಗಿದ್ದು, 90 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಖೈಬರ್ ಪಖ್ತುಂಖ್ವಾದ ಪ್ರಾಂತ್ಯದಲ್ಲಿ ಹೆಚ್ಚು ದಾಳಿ ನಡೆದರೆ ನಂತರದ ಸ್ಥಾನದಲ್ಲಿ ಬಲೂಚಿಸ್ತಾನ್ ಇದೆ.

  • ಬಾಂಗ್ಲಾದೇಶದ ವಾಯುಪಡೆ ವಿಮಾನ ದುರಂತ – ಸಾವಿನ ಸಂಖ್ಯೆ 27ಕ್ಕೆ ಏರಿಕೆ

    ಬಾಂಗ್ಲಾದೇಶದ ವಾಯುಪಡೆ ವಿಮಾನ ದುರಂತ – ಸಾವಿನ ಸಂಖ್ಯೆ 27ಕ್ಕೆ ಏರಿಕೆ

    ಢಾಕಾ: ಬಾಂಗ್ಲಾದೇಶದ (Bangladesh) ವಾಯುಪಡೆಯ (Air Force) ಎಫ್-7 ಬಿಜಿಐ ತರಬೇತಿ ಜೆಟ್ ಪತನಗೊಂಡು ಶಾಲಾ ಕಟ್ಟಡಕ್ಕೆ ಅಪ್ಪಳಿದ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 27ಕ್ಕೆ ಏರಿಕೆಯಾಗಿದೆ.

    ಸಾವನ್ನಪ್ಪಿದವರಲ್ಲಿ 25 ಮಕ್ಕಳಿದ್ದಾರೆ. ಸುಮಾರು 170 ಮಂದಿ ಗಾಯಗೊಂಡಿದ್ದು, ಅವರಲ್ಲಿ ಹಲವರು ಗಂಭೀರ ಸ್ಥಿತಿಯಲ್ಲಿದ್ದಾರೆ ಎಂದು ಶಾಲೆಯ ಸಿಬ್ಬಂದಿ ಸೈದೂರ್ ರೆಹಮಾನ್ ತಿಳಿಸಿದ್ದಾರೆ. ಇದನ್ನೂ ಓದಿ: ಸೋಶಿಯಲ್‌ ಮೀಡಿಯಾದಲ್ಲಿ ಫೋಟೋ ವೈರಲ್‌ ಮಾಡಿ ಕಿರುಕುಳ – ಡ್ಯಾಂಗೆ ಹಾರಿ ಯುವತಿ ಆತ್ಮಹತ್ಯೆ

    ಏನಿದು ಪ್ರಕರಣ?
    ಸೋಮವಾರ ಮಧ್ಯಾಹ್ನ 1:06ರ ಸುಮಾರಿಗೆ ಬಾಂಗ್ಲಾದೇಶದ ವಾಯುಪಡೆಯ ಎಫ್-7 ಬಿಜಿಐ ತರಬೇತಿ ಜೆಟ್ ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ತಾಂತ್ರಿಕ ದೋಷದಿಂದಾಗಿ ಢಾಕಾದ ಉತ್ತರದ (Uttara) ಮೈಲ್‌ಸ್ಟೋನ್ ಶಿಕ್ಷಣ ಸಂಸ್ಥೆಯ ಕ್ಯಾಂಟೀನ್ ಮೇಲೆ ಪತನಗೊಂಡಿತ್ತು. ಇದನ್ನೂ ಓದಿ: ಸುಪ್ರೀಂ ಕೋರ್ಟ್‌ನಲ್ಲಿ ನಟ ದರ್ಶನ್‌ ಅರ್ಜಿ ವಿಚಾರಣೆ ಮುಂದೂಡಿಕೆ – ಗುರುವಾರ ಜಾಮೀನು ಭವಿಷ್ಯ

    ಅಪಘಾತಕ್ಕೀಡಾದ ಎಫ್-7 ಬಿಜಿಐ ತರಬೇತಿ ವಿಮಾನವು ಬಾಂಗ್ಲಾದೇಶದ ನಿರ್ವಹಿಸುತ್ತಿರುವ 16 ವಿಮಾನಗಳಲ್ಲಿ ಒಂದಾಗಿದೆ. ಇದು ಚೀನಾದ ಜೆ-7 ಯುದ್ಧ ವಿಮಾನದ ಮುಂದುವರಿದ ಆವೃತ್ತಿಯ ವಿಮಾನವಾಗಿದೆ.

  • ಬಾಂಗ್ಲಾದೇಶದ ವಾಯುಪಡೆಯ ತರಬೇತಿ ವಿಮಾನ ದುರಂತ – ಪೈಲಟ್ ಸೇರಿ 16 ಜನ ಸಾವು

    ಬಾಂಗ್ಲಾದೇಶದ ವಾಯುಪಡೆಯ ತರಬೇತಿ ವಿಮಾನ ದುರಂತ – ಪೈಲಟ್ ಸೇರಿ 16 ಜನ ಸಾವು

    -70ಕ್ಕೂ ಹೆಚ್ಚು ಜನರಿಗೆ ಗಾಯ

    ಢಾಕಾ: ಬಾಂಗ್ಲಾದೇಶದ (Bangladesh) ವಾಯುಪಡೆಯ (Air Force) ಎಫ್-7 ಬಿಜಿಐ ತರಬೇತಿ ಜೆಟ್ ಪತನಗೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಅವಘಡದಲ್ಲಿ ಪೈಲಟ್ ಸೇರಿ 16 ಜನ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ.

    ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವಿಶೇಷ ಸಹಾಯಕ ಪ್ರೊಫೆಸರ್ ಎಂಡಿ ಸಯದುರ್ ರೆಹಮಾನ್ ಮಾತನಾಡಿ, ಬಾಂಗ್ಲಾದೇಶದ ವಾಯುಪಡೆಯ ಎಫ್-7 ಬಿಜಿಐ ತರಬೇತಿ ಜೆಟ್ ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ನಿಯಂತ್ರಣ ಕಳೆದುಕೊಂಡು ಢಾಕಾದ ಉತ್ತರದಲ್ಲಿರುವ ಮೈಲ್‌ಸ್ಟೋನ್ ಶಿಕ್ಷಣ ಸಂಸ್ಥೆಯ ಕಟ್ಟಡಕ್ಕೆ ಅಪ್ಪಳಿಸಿದೆ. ಪರಿಣಾಮ ಪೈಲಟ್ ಸೇರಿ 16 ಜನ ಮೃತಪಟ್ಟಿದ್ದು, 70ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ತಿಳಿಸಿದ್ದಾರೆ.ಇದನ್ನೂ ಓದಿ: ನಂಗೆ ಯಾರೂ ಬಾಯ್‌ಫ್ರೆಂಡ್ ಇಲ್ಲ, 4 ತಿಂಗಳು ನನ್ನ ಫೋನ್ ಪ್ರತೀಕ್ ಚೌಹಾಣ್ ಬಳಿ ಇತ್ತು: ಸಂತ್ರಸ್ತೆ

    ಅಗ್ನಿಶಾಮಕ ದಳದ ಕರ್ತವ್ಯ ಅಧಿಕಾರಿ ಲಿಮಾ ಖಾನ್ ಮಾತನಾಡಿ, ತರಬೇತಿ ಜೆಟ್ ಪತನಗೊಂಡ ಸ್ವಲ್ಪ ಸಮಯದ ನಂತರ ಗಾಯಗೊಂಡವರನ್ನು ಸಿಎಂಹೆಚ್ ಆಸ್ಪತ್ರೆಗೆ ರವಾನಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿಸಿದ್ದಾರೆ.

    ಬಾಂಗ್ಲಾದೇಶ ಸೇನೆಯ ಸಾರ್ವಜನಿಕ ಸಂಪರ್ಕ ಕಚೇರಿ ಬಿಡುಗಡೆಗೊಳಿಸಿದ ಹೇಳಿಕೆಯಲ್ಲಿ, ಪತನಗೊಂಡ ಎಫ್-7 ಬಿಜಿಐ ಜೆಟ್ ಬಾಂಗ್ಲಾದೇಶದ ವಾಯುಪಡೆಗೆ ಸೇರಿದ್ದು ಎಂದು ದೃಢಪಡಿಸಿದೆ. ಸದ್ಯ ಘಟನಾ ಸ್ಥಳದಲ್ಲಿ ಮೂರು ಅಗ್ನಿಶಾಮಕ ದಳದ ವಾಹನಗಳು ಕಾರ್ಯನಿರ್ವಹಿಸುತ್ತಿದ್ದು, ಪರಿಸ್ಥಿತಿಯನ್ನು ನಿರ್ವಹಿಸುವಲ್ಲಿ ತೊಡಗಿಕೊಂಡಿದ್ದಾರೆ.

    ಏನಿದು ಪ್ರಕರಣ?
    ಸೋಮವಾರ ಮಧ್ಯಾಹ್ನ 1:06ರ ಸುಮಾರಿಗೆ ಬಾಂಗ್ಲಾದೇಶದ ವಾಯುಪಡೆಯ ಎಫ್-7 ಬಿಜಿಐ ತರಬೇತಿ ಜೆಟ್ ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಢಾಕಾದ ಉತ್ತರದ ಮೈಲ್‌ಸ್ಟೋನ್ ಶಿಕ್ಷಣ ಸಂಸ್ಥೆಯ ಕ್ಯಾಂಟೀನ್ ಮೇಲೆ ಪತನಗೊಂಡಿತ್ತು.

    ಅಪಘಾತಕ್ಕೀಡಾದ F-7BGI ತರಬೇತಿ ವಿಮಾನವು ಬಾಂಗ್ಲಾದೇಶದ ನಿರ್ವಹಿಸುತ್ತಿರುವ 16 (ಈಗ 15) ವಿಮಾನಗಳಲ್ಲಿ ಒಂದಾಗಿದೆ. ಇದು ಚೀನಾದ J-7 ಯುದ್ಧ ವಿಮಾನದ ಮುಂದುವರಿದ ಆವೃತ್ತಿಯ ವಿಮಾನವಾಗಿದೆ.ಇದನ್ನೂ ಓದಿ: ದೇವರಾಜ್ ಪುತ್ರ ಪ್ರಣಂ ಸಿನಿಮಾ ಹಾಡಿಗೆ ಸಂಜಿತ್ ಹೆಗ್ಡೆ ದನಿ

  • ಅಸ್ಸಾಂ | ಹಠಾತ್‌ ಆಗಿ ಹೆಚ್ಚಿದ ಪ್ರವಾಹ – ಸಂಕಷ್ಟದಲ್ಲಿ  ಸಿಲುಕಿದ್ದ 14 ಮಂದಿಯನ್ನು ರಕ್ಷಿಸಿದ ವಾಯುಪಡೆ

    ಅಸ್ಸಾಂ | ಹಠಾತ್‌ ಆಗಿ ಹೆಚ್ಚಿದ ಪ್ರವಾಹ – ಸಂಕಷ್ಟದಲ್ಲಿ  ಸಿಲುಕಿದ್ದ 14 ಮಂದಿಯನ್ನು ರಕ್ಷಿಸಿದ ವಾಯುಪಡೆ

    ದಿಸ್ಪುರ್‌: ಅಸ್ಸಾಂ (Assam) ಹಾಗೂ ಅರುಣಾಚಲ ಪ್ರದೇಶದ (Arunachal Pradesh) ಗಡಿಯ ಬೊಮ್ಜಿರ್ ನದಿಯಲ್ಲಿ ಸಿಲುಕಿದ್ದ 14 ಜನರನ್ನು ವಾಯುಪಡೆ ರಕ್ಷಿಸಿದೆ.

    ಟಿನ್ಸುಕಿಯಾ ಜಿಲ್ಲಾ ಆಯುಕ್ತ ಸ್ವಪ್ನೀಲ್ ಪಾಲ್ ಅವರು 14 ಮಂದಿ ಸಿಲುಕಿದ್ದ ಬಗ್ಗೆ ವಾಯುಪಡೆಗೆ ಮಾಹಿತಿ ನೀಡಿ ರಕ್ಷಿಸುವಂತೆ ಮನವಿ ಮಾಡಿದ್ದರು. ತಕ್ಷಣ ಕಾರ್ಯಪೃವೃತ್ತರಾದ ವಾಯುಪಡೆಯ ಅಧಿಕಾರಿಗಳು ಸ್ಥಳಕ್ಕೆ ಹೆಲಿಕಾಪ್ಟರ್‌ ಕಳುಹಿಸಿ, ಸಂಕಷ್ಟದಲ್ಲಿ ಸಿಲುಕಿದ್ದ ಎಲ್ಲರನ್ನೂ ಕಾಪಾಡಿದ್ದಾರೆ.

    ಈ ಪ್ರದೇಶದಲ್ಲಿ ನಿರಂತರ ಮಳೆಯಿಂದಾಗಿ ನದಿಯ ನೀರಿನ ಮಟ್ಟ ಹಠಾತ್‌ ಆಗಿ ಏರಿಕೆಯಾಗಿದೆ. ಪರಿಣಾಮ 14 ಮಂದಿ ಸಿಕ್ಕಿಬಿದ್ದಿದ್ದರು. ಎಲ್ಲರನ್ನೂ ಸುರಕ್ಷಿತವಾಗಿ ಮನೆಗೆ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಮನವಿಯನ್ನು ಪರಿಗಣಿಸಿ ಜನರ ರಕ್ಷಣೆಗೆ ಧಾವಿಸಿದ ವಾಯುಪಡೆಗೆ ಸ್ವಪ್ನೀಲ್ ಪಾಲ್ ಧನ್ಯವಾದ ಅರ್ಪಿಸಿದ್ದಾರೆ.

  • ಪಾಕ್‌ ಏಜೆಂಟ್‌ ಜೊತೆ ಭಾರತೀಯ ಸೇನಾ ತಾಣಗಳ ಫೋಟೊ ಹಂಚಿಕೆ – ಗುಜರಾತ್‌ ವ್ಯಕ್ತಿ ಬಂಧನ

    ಪಾಕ್‌ ಏಜೆಂಟ್‌ ಜೊತೆ ಭಾರತೀಯ ಸೇನಾ ತಾಣಗಳ ಫೋಟೊ ಹಂಚಿಕೆ – ಗುಜರಾತ್‌ ವ್ಯಕ್ತಿ ಬಂಧನ

    – ಭಾರತೀಯ ವಾಯುಪಡೆ, ಬಿಎಸ್‌ಎಫ್‌ ಸೂಕ್ಷ್ಮ ಮಾಹಿತಿ ನೀಡಿ 40,000 ಹಣ ಪಡೆದಿದ್ದ ಆರೋಪಿ

    ಗಾಂಧೀನಗರ: ಭಾರತೀಯ ವಾಯುಪಡೆ (IAF) ಮತ್ತು ಗಡಿ ಭದ್ರತಾ ಪಡೆಗೆ (BSF) ಸಂಬಂಧಿಸಿದ ಪ್ರಮುಖ ಮಾಹಿತಿಯನ್ನು ಪಾಕಿಸ್ತಾನದ ಏಜೆಂಟ್‌ ಜೊತೆ ಹಂಚಿಕೊಂಡ ಆರೋಪದ ಮೇಲೆ ಗುಜರಾತ್‌ನ (Gujarat Man) ವ್ಯಕ್ತಿಯನ್ನು ಬಂಧಿಸಲಾಗಿದೆ.

    ಕಛ್ ನಿವಾಸಿಯಾಗಿರುವ ಆರೋಪಿ ಸಹದೇವ್ ಸಿಂಗ್ ಗೋಹಿಲ್ ಆರೋಗ್ಯ ಕಾರ್ಯಕರ್ತನಾಗಿ ಕೆಲಸ ಮಾಡುತ್ತಿದ್ದ ಎಂದು ಗುಜರಾತ್ ಭಯೋತ್ಪಾದನಾ ನಿಗ್ರಹ ದಳದ (ಎಟಿಎಸ್) ಹಿರಿಯ ಅಧಿಕಾರಿ ಕೆ. ಸಿದ್ಧಾರ್ಥ್ ಸುದ್ದಿಗಾರರಿಗೆ ತಿಳಿಸಿದ್ದಾರೆ. ಇದನ್ನೂ ಓದಿ: ಮೋದಿ ನೇತೃತ್ವದ ನೀತಿ ಆಯೋಗದ ಸಭೆಗೆ ಸಿದ್ದರಾಮಯ್ಯ ಗೈರು

    ಅದಿತಿ ಭಾರದ್ವಾಜ್‌ (28) ಹೆಸರಿನ ಮಹಿಳೆ 2023ರಲ್ಲಿ ವಾಟ್ಸಪ್‌ ಮೂಲಕ ಏಜೆಂಟ್‌ ಜೊತೆ ಸಂಪರ್ಕಕ್ಕೆ ಬಂದಿದ್ದಳು. ಆರೋಪಿ ಸಹದೇವ್‌ ಆಕೆಗೆ ನಿರ್ಮಾಣ ಹಂತದಲ್ಲಿರುವ ಐಎಎಫ್‌ ಮತ್ತು ಬಿಎಸ್‌ಎಫ್‌ ತಾಣಗಳ ಫೋಟೊ, ವೀಡಿಯೋಗಳನ್ನು ಕಳುಹಿಸಿದ್ದ ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ.

    2025 ರ ಆರಂಭದಲ್ಲಿ ಆತ ಸಿಮ್ ಕಾರ್ಡ್ ಖರೀದಿಸಿದ್ದ. OTP ಸಹಾಯದಿಂದ ಅದಿತಿ ಭಾರದ್ವಾಜ್‌ಗಾಗಿ ಆ ಸಂಖ್ಯೆಯಲ್ಲಿ ವಾಟ್ಸಾಪ್ ಅನ್ನು ಸಕ್ರಿಯಗೊಳಿಸಿದ್ದ. ಅದಾದ ಬಳಿಕ BSF ಮತ್ತು IAFಗೆ ಸಂಬಂಧಿಸಿದ ಎಲ್ಲಾ ಫೋಟೋಗಳು ಮತ್ತು ವೀಡಿಯೊಗಳನ್ನು ಆ ಸಂಖ್ಯೆಯಲ್ಲಿ ಹಂಚಿಕೊಳ್ಳಲಾಗಿದೆ. ಇದನ್ನೂ ಓದಿ: ಗಡಿಯಲ್ಲಿ ಭಾರತಕ್ಕೆ ನುಸುಳಲು ಯತ್ನ – ಶಂಕಿತ ಪಾಕಿಸ್ತಾನಿ ಹೊಡೆದುರುಳಿಸಿದ ಬಿಎಸ್‌ಎಫ್‌

    ಗೋಹಿಲ್ ಮಾಹಿತಿ ಹಂಚಿಕೊಳ್ಳಲು ಬಳಸಿದ ಸಂಖ್ಯೆಗಳನ್ನು ಪಾಕಿಸ್ತಾನದಿಂದ ನಿರ್ವಹಿಸಲಾಗುತ್ತಿತ್ತು ಎಂದು ವಿಧಿವಿಜ್ಞಾನ ವಿಶ್ಲೇಷಣೆಯು ಬಹಿರಂಗಪಡಿಸಿದೆ. ಗೋಹಿಲ್‌ಗೆ ಅಪರಿಚಿತ ವ್ಯಕ್ತಿಯೊಬ್ಬರು 40,000 ರೂ. ಹಣ ನೀಡಿರುವುದು ತನಿಖೆಯಿಂದ ಗೊತ್ತಾಗಿದೆ.

    ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಜನರು ಸಾವನ್ನಪ್ಪಿದ್ದರು. ಇದು ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆಗೆ ಕಾರಣವಾಯಿತು. ಪರಿಣಾಮವಾಗಿ ಎಲ್ಲೆಡೆ ತನಿಖೆ ಚುರುಕುಗೊಳಿಸಲಾಗಿದೆ. ಭಾರತದ ವಿರುದ್ಧ ಬೇಹುಗಾರಿಕೆಯ ಆರೋಪದಲ್ಲಿ ಬಂಧನಕ್ಕೆ ಒಳಗಾಗಿರುವ ಯೂಟ್ಯೂಬರ್, ಉದ್ಯಮಿ ಮತ್ತು ಭದ್ರತಾ ಸಿಬ್ಬಂದಿ ಸೇರಿದಂತೆ ಹತ್ತುಕ್ಕೂ ಹೆಚ್ಚು ಜನರಲ್ಲಿ ಗೋಹಿಲ್ ಕೂಡ ಒಬ್ಬ. ಇದನ್ನೂ ಓದಿ: ಉಗ್ರರ ದಾಳಿಯಿಂದ 20,000 ಭಾರತೀಯರು ಸಾವು: ವಿಶ್ವಸಂಸ್ಥೆಯಲ್ಲಿ ಪಾಕ್‌ ವಿರುದ್ಧ ಭಾರತ ಕಿಡಿ

  • ಭಾರತ Vs ಪಾಕಿಸ್ತಾನ – ಭೂಸೇನೆ, ನೌಕಾಸೇನೆ, ವಾಯು ಸೇನೆಯ ಸಾಮರ್ಥ್ಯಗಳ ಬಲಾಬಲ ಎಷ್ಟಿದೆ?

    ಭಾರತ Vs ಪಾಕಿಸ್ತಾನ – ಭೂಸೇನೆ, ನೌಕಾಸೇನೆ, ವಾಯು ಸೇನೆಯ ಸಾಮರ್ಥ್ಯಗಳ ಬಲಾಬಲ ಎಷ್ಟಿದೆ?

    ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ನರಮೇಧಕ್ಕೆ (Pahalgam Terror Attack ) ಭಾರತ ಪ್ರತೀಕಾರ ತೀರಿಸುವುದಾಗಿ ಹೇಳಿದ ಬೆನ್ನಲ್ಲೇ ಯಾವ ರೀತಿ ಪ್ರತೀಕಾರ ತೀರಿಸುತ್ತದೆ ಎಂಬ ಪ್ರಶ್ನೆ ಎದ್ದಿದೆ. ಈ ಹಿಂದೆ ಉರಿ ಮೇಲೆ ದಾಳಿ ಮಾಡಿದಾಗ ಪಾಕ್‌ ಆಕ್ರಮಿತ ಕಾಶ್ಮೀರಕ್ಕೆ (PoK) ನುಗ್ಗಿ ಉಗ್ರರ ನೆಲೆಗಳನ್ನು ಧ್ವಂಸ ಮಾಡಿತ್ತು. ಪುಲ್ವಾಮಾ (Pulwama) ಘಟನೆಯ ಬಳಿಕ ಪಾಕ್‌ ಆಕ್ರಮಿತ ಕಾಶ್ಮೀರ ದಾಟಿ ಬಾಲಾಕೋಟ್‌ನಲ್ಲಿದ್ದ ಉಗ್ರರ ಲಾಂಚ್‌ ಪ್ಯಾಡ್‌ಗೆ ಬಾಂಬ್‌ ಹಾಕಿತ್ತು. ಹೀಗಾಗಿ ಈಗ ಯಾವ ರೀತಿ ಕಠಿಣ ಕ್ರಮ ಕೈಗೊಳ್ಳುತ್ತದೆ ಎಂಬ ಕುತೂಹಲ ಎದ್ದಿದೆ.

    ಬಿಹಾರದ ಭಾಷಣದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಉಗ್ರರು ಮತ್ತು ಉಗ್ರರಿಗೆ ಸಹಕಾರ ನೀಡುವುವರನ್ನು ಹೊಡೆದು ಹಾಕುತ್ತೇವೆ ಎಂದು ಗುಡುಗಿದ್ದರು. ಹೀಗಾಗಿ ಈ ಬಾರಿ ಭಾರತ ಮತ್ತು ಪಾಕಿಸ್ತಾನ ಮಧ್ಯೆ ಯುದ್ಧ ನಡೆಯುತ್ತಾ ಎಂಬ ಪ್ರಶ್ನೆ ಎದ್ದಿದೆ. ಪಾಕಿಸ್ತಾನ ಈಗಾಗಲೇ ಯುದ್ಧ ಸನ್ನದ್ಧವಾಗಿದ್ದು ಸರ್ಕಾರದ ಮಂತ್ರಿಗಳು ಒಂದೊಂದು ಹೇಳಿಕೆ ನೀಡುತ್ತಿದ್ದಾರೆ. ಹೀಗಾಗಿ ಒಂದು ವೇಳೆ ಯುದ್ಧ ಸಂಭವಿಸಿದರೆ ಭಾರತ (India) ಮತ್ತು ಪಾಕ್‌ ಮೂರು ದಳಗಳ ಸಾಮರ್ಥ್ಯದ ಬಗ್ಗೆ ಮಾಹಿತಿ ನೀಡಲಾಗಿದೆ.

    ಭೂಸೇನೆ
    ಟ್ಯಾಂಕ್
    ಭಾರತ – 4,201
    ಪಾಕ್ – 2,627

    ಶಸ್ತ್ರಸಜ್ಜಿತ ವಾಹನ
    ಭಾರತ – 148594
    ಪಾಕ್ – 17516

    ಸ್ವಯಂಚಾಲಿತ ಫಿರಂಗಿ
    ಭಾರತ – 100
    ಪಾಕ್ – 662

    ಟೋವ್ಡ್‌ ಫಿರಂಗಿ (Towed Artillery)
    ಭಾರತ – 3975
    ಪಾಕ್ – 2629

    ಮೊಬೈಲ್ ರಾಕೆಟ್ ಪ್ರಾಜೆಕ್ಟರ್ ಗಳು
    ಭಾರತ – 264
    ಪಾಕ್ – 600

    ವೈಮಾನಿಕ ಸಾಮರ್ಥ್ಯ

    ಒಟ್ಟು ವಿಮಾನ
    ಭಾರತ – 2,229
    ಪಾಕ್ – 1,399

    ಯುದ್ಧ ವಿಮಾನ
    ಭಾರತ – 513
    ಪಾಕ್ – 328 ಇದನ್ನೂ ಓದಿ: ನಾವು ಭಯೋತ್ಪಾದನೆಯನ್ನು ಬೆಂಬಲಿಸಿದ್ದೇವೆ – ಒಪ್ಪಿಕೊಂಡ ಪಾಕಿಸ್ತಾನ

    ಡೆಡಿಕೇಟೆಡ್ ಫೈಟರ್ ಅಟ್ಯಾಕ್ ಏರ್ ಕ್ರಾಫ್ಟ್
    ಭಾರತ – 130
    ಪಾಕ್ – 90

    ಹೆಲಿಕಾಪ್ಟರ್ ಗಳು
    ಭಾರತ – 899
    ಪಾಕ್ – 373

    ದಾಳಿ ಹೆಲಿಕಾಪ್ಟರ್ ಗಳು
    ಭಾರತ – 80
    ಪಾಕ್ – 57

    ಸಾರಿಗೆ ವ್ಯವಸ್ಥೆಗೆ
    ಭಾರತ – 270
    ಪಾಕ್ – 64

    ತರಬೇತುದಾರರು
    ಭಾರತ – 351
    ಪಾಕ್ – 565

    ವೈಮಾನಿಕ ಟ್ಯಾಂಕರ್ ಗಳು
    ಭಾರತ – 6
    ಪಾಕ್ – 4

    ಸ್ಪೆಷಲ್ ಮಿಷನ್ ಗೆ ಬಳಕೆ
    ಭಾರತ – 74
    ಪಾಕ್ – 27


    ನೌಕಾ ಸೇನೆ
    ನೌಕೆಗಳು
    ಭಾರತ – 293
    ಪಾಕ್ – 321

    ವಿಮಾನ ವಾಹಕ ನೌಕೆ
    ಭಾರತ – 2
    ಪಾಕ್ – 0

    ಸಬ್ ಮರೈನ್
    ಭಾರತ – 18
    ಪಾಕ್ – 8

    ಡೆಸ್ಟ್ರಾಯರ್ (ವಿಧ್ವಂಸಕ ನೌಕೆಗಳು)
    ಭಾರತ – 13
    ಪಾಕ್ – 0

    ಯುದ್ಧ ನಾವೆ (ಫ್ರಿಗೇಟ್)
    ಭಾರತ – 14
    ಪಾಕ್ – 9

    ಕಾರ್ವೆಟ್ (ಸಣ್ಣ ಯುದ್ಧ ನೌಕೆ)
    ಭಾರತ – 18
    ಪಾಕ್ – 9

    ಪಾಟ್ರೋಲ್ ವೆಸೆಲ್ಸ್ (ಗಸ್ತು ನೌಕೆ)
    ಭಾರತ – 135
    ಪಾಕ್ – 69

  • ಮೆಟ್ರೋ ಹಳಿ ಮೇಲೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ನಿವೃತ್ತ ಯೋಧ

    ಮೆಟ್ರೋ ಹಳಿ ಮೇಲೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ನಿವೃತ್ತ ಯೋಧ

    ಬೆಂಗಳೂರು: ನಮ್ಮ ಮೆಟ್ರೋದಲ್ಲಿ (Namma Metro) ಆತ್ಮಹತ್ಯೆಗೆ ಯತ್ನಿಸುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿದ್ದು ಇಂದು ಜಾಲಹಳ್ಳಿ ಮೆಟ್ರೋ ನಿಲ್ದಾಣದಲ್ಲಿ (Jalahalli Metro Station) ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದಾರೆ.

    ಇಂದು (ಜ.20) ಬೆಳಗ್ಗೆ 10:30 ರ ಸುಮಾರಿಗೆ ಜಾಲಹಳ್ಳಿ ಮೆಟ್ರೋ ನಿಲ್ದಾಣದ ಪ್ಲಾಟ್‌ಟ್‌ಫಾರಂಗೆ ರೈಲು ಆಗಮಿಸುತ್ತಿದ್ದಂತೆ ಹಳಿಗೆ ಜಿಗಿದು ಹಳಿ ಮೇಲೆ ಅಡ್ಡಲಾಗಿ ಮಲಗಿದ್ದಾರೆ. ಕೂಡಲೇ ಎಚ್ಚೆತ್ತ ಬಿಎಂಆರ್‌ಸಿಎಲ್ (BMRCL) ಸಿಬ್ಬಂದಿ ತುರ್ತು ಟ್ರಿಪ್ ಸಿಸ್ಟಮ್ ಇಟಿಎಸ್ ಅನ್ನು ಸ್ಥಗಿತಗೊಳಿಸಿ ವ್ಯಕ್ತಿಯನ್ನು ಸಾವಿನ ದವಡೆಯಿಂದ ಪಾರು ಮಾಡಿದ್ದಾರೆ.

    ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ ಬಿಹಾರ ಮೂಲದ ವಾಯುಪಡೆ ನಿವೃತ್ತ ಯೋಧ 49 ವರ್ಷದ ಅನಿಲ್ ಕುಮಾರ್ ಪಾಂಡೆ ಎನ್ನುವುದು ತಿಳಿದುಬಂದಿದೆ. ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿರುವ ಜಾಲಹಳ್ಳಿ ಭದ್ರತಾ ವಿಭಾಗದ ಸಿಬ್ಬಂದಿ ಅವರನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಇದನ್ನೂ ಓದಿ: ಮದ್ಯಪ್ರಿಯರಿಗೆ ಸರ್ಕಾರದಿಂದ ಶಾಕ್ | ಇಂದಿನಿಂದಲೇ ದರ ಏರಿಕೆ – ಯಾವುದು ಎಷ್ಟು?

     

    ಘಟನೆಯಿಂದಾಗಿ ಕೆಲ ಕಾಲ ಹಸಿರು ಮಾರ್ಗದಲ್ಲಿ ಮೆಟ್ರೋ ಸಂಚಾರ ಸ್ಥಗಿತಗೊಂಡಿತ್ತು. ಸಾರ್ವಜನಿಕರಿಗೆ ತೊಂದರೆಯಾಗದಂತೆ ಯಶವಂತಪುರದಿಂದ ಸಿಲ್ಕ್ ಇನ್‌ಸ್ಟಿಟ್ಯೂಟ್‌ವರೆಗೆ ಮಾತ್ರ ಸಂಚಾರ ಕಲ್ಪಿಸಲಾಗಿತ್ತು.

    ಅನಿಲ್‌ ಕುಮಾರ್ ಪಾಂಡೆ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದು ಒಂದು ವಾರದ ಹಿಂದೆಯಷ್ಟೇ ಚಿಕಿತ್ಸೆ ಪಡೆದು ಮನೆಗೆ ವಾಪಸ್‌ ಬಂದಿದ್ದರು. ಆತ್ಮಹತ್ಯೆಗೆ ಯತ್ನಿಸಿದ ವಿಚಾರ ತಿಳಿದು ಮೆಟ್ರೋ ನಿಲ್ದಾಣಕ್ಕೆ ಕುಟುಂಬ ಆಗಮಿಸಿತ್ತು. ಈಗ ಮತ್ತೆ ಪಾಂಡೆಯನ್ನು ಸೇನಾ ಆಸ್ಪತ್ರೆಗೆ ದಾಖಲಿಸಲು ಕುಟುಂಬಸ್ಥರು ಮುಂದಾಗಿದ್ದಾರೆ.

    ಮೆಟ್ರೋ ಹಳಿಗೆ ಜಿಗಿದಿದ್ದಕ್ಕೆ 5 ಸಾವಿರ ರೂಪಾಯಿ ದಂಡ ವಿಧಿಸಲಾಗಿದೆ.

  • ಭಾರತೀಯ ಸೈನಿಕರ ಮೇಲೆ ದಾಳಿ – ಮೂವರು ಪಾಕಿಸ್ತಾನಿ ಉಗ್ರರ ಫೋಟೋ ರಿಲೀಸ್‌

    ಭಾರತೀಯ ಸೈನಿಕರ ಮೇಲೆ ದಾಳಿ – ಮೂವರು ಪಾಕಿಸ್ತಾನಿ ಉಗ್ರರ ಫೋಟೋ ರಿಲೀಸ್‌

    ಶ್ರೀನಗರ: ಇತ್ತೀಚೆಗೆ ಪೂಂಚ್‌ನಲ್ಲಿ (Poonch Attack) ಭಾರತೀಯ ವಾಯುಪಡೆಯ ಬೆಂಗಾವಲು ವಾಹನದ ಮೇಲೆ ನಡೆದ ದಾಳಿಗೆ ಹೊಣೆಗಾರರಾಗಿರುವ ಮೂವರು ಪಾಕಿಸ್ತಾನಿ ಭಯೋತ್ಪಾದಕರ ಫೋಟೋಗಳನ್ನು ಭಾರತೀಯ ವಾಯುಪಡೆಯ (IAF) ಅಧಿಕಾರಿಗಳು ಹಂಚಿಕೊಂಡಿದ್ದಾರೆ.

    ಸಿಸಿಟಿವಿಯಲ್ಲಿ ಸೆರೆಯಾದ ಭಯೋತ್ಪಾದಕರ (Terrorists) ಚಿತ್ರಗಳನ್ನು ಭದ್ರತಾ ಪಡೆ ಹಂಚಿಕೊಂಡಿದೆ. ಸಿಸಿಟಿವಿ ದೃಶ್ಯಾವಳಿಯಲ್ಲಿ (CCTV Footage) ಮೂವರು ಭಯೋತ್ಪಾದಕರು ಆಕ್ರಮಣಕಾರಿ ರೈಫಲ್‌ಗಳನ್ನು ಹಿಡಿದುಕೊಂಡು ಹೋಗುತ್ತಿರುವುದು ಕಂಡುಬಂದಿದೆ. ಯುಎಸ್‌ ನಿರ್ಮಿತ M4 ಮತ್ತು ರಷ್ಯಾ ನಿರ್ಮಿತ AK-47 ರೈಫಲ್‌ಗಳನ್ನು ಹಿಡಿದೊಯ್ಯುತ್ತಿರುವುದು ಕಂಡುಬಂದಿದೆ. ಅಲ್ಲದೇ ಇದು ಈ ವರ್ಷದಲ್ಲಿ ಮಿಲಿಟರಿಯನ್ನು ಗುರಿಯಾಗಿಸಿ ನಡೆಸಿದ ಪ್ರಮುಖ ದಾಳಿಯೂ ಆಗಿದೆ. ಕಳೆದ ವರ್ಷ ಸೈನಿಕರನ್ನ ಗುರಿಯಾಗಿಸಿ ಪ್ರಮುಖ ದಾಳಿಗಳು ನಡೆದಿದ್ದವು ಎಂದು ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಸೈನಿಕರ ಮೇಲೆ ದಾಳಿ – ಇಬ್ಬರು ಪಾಕ್ ಉಗ್ರರ ತಲೆಗೆ 20 ಲಕ್ಷ ಬಹುಮಾನ ಘೋಷಿಸಿದ IAF

    ಸಿಸಿಟಿವಿ ದೃಶ್ಯಾವಳಿಯಲ್ಲಿ ಸೆರೆಯಾದ ಮೂವರು ಪಾಕಿಸ್ತಾನದ ಉಗ್ರರು ಎಂದು ಅಧಿಕಾರಿಗಳು ಹೇಳಿದ್ದಾರೆ. ಪಾಕ್ ಸೇನೆಯ ಮಾಜಿ ಕಮಾಂಡೊ ಇಲಿಯಾಸ್, ಲಷ್ಕರ್ ಕಮಾಂಡರ್ ಅಬು ಹಮ್ಜಾ ಮತ್ತು ಹಾಡೂನ್ ಎಂದು ಗುರುತಿಸಲಾಗಿದೆ. ಭಯೋತ್ಪಾದಕ ಹಮ್ಜಾ 30-32 ವರ್ಷ ವಯಸ್ಸಿನವನು ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಅಂದಾಜಿಸಿರುವುದಾಗಿ ಉನ್ನತ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಭಾರತದಲ್ಲಿ ಪಿತ್ರಾರ್ಜಿತ ಆಸ್ತಿ ತೆರಿಗೆ ವಿಧಿಸಿದರೆ ಅಂಬಾನಿ, ಅದಾನಿಯಂಥ ಶ್ರೀಮಂತರು ದುಬೈಗೆ ಹೋಗ್ತಾರೆ: ಆರ್ಥಶಾಸ್ತ್ರಜ್ಞ

    ಕಳೆದ ವಾರವಷ್ಟೇ ಪೂಂಚ್‌ನ ಶಾಸಿತಾರ್ ಬಳಿ ಐಎಎಫ್ ಬೆಂಗಾವಲು ಪಡೆಯ ವಾಹನದ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದರು. ಈ ದಾಳಿಯಲ್ಲಿ ಐಎಎಫ್ ಕಾರ್ಪೋರಲ್ ವಿಕ್ಕಿ ಪಹಾಡೆ ಪ್ರಾಣ ಕಳೆದುಕೊಂಡಿದ್ದರು. ಅಲ್ಲದೇ ಘಟನೆಯಲ್ಲಿ ನಾಲ್ವರು ಸೈನಿಕರು ಗಾಯಗೊಂಡಿದ್ದರು. ದಾಳಿಯ ಬಳಿಕ ಶಾಸಿತಾರ್ ಪ್ರದೇಶದಲ್ಲಿ ಸಶಸ್ತ್ರ ಪಡೆಗಳು ಮಹತ್ವದ ಶೋಧಕಾರ್ಯ ನಡೆಸಿದವು. ಈ ಸಂಬಂಧ ತನಿಖೆ ನಡೆಸುತ್ತಿದ್ದ ಭದ್ರತಾಪಡೆಯ ಅಧಿಕಾರಿಗಳು ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರ ರೇಖಾಚಿತ್ರಗಳನ್ನೂ ಬಹಿರಂಗಪಡಿಸಿದ್ದರು. ಶಂಕಿತ ಉಗ್ರರ ಬಂಧನಕ್ಕೆ ನೆರವಾಗುವ ಯಾವುದೇ ಮಾಹಿತಿ ನೀಡಿದವರಿಗೆ 20 ಲಕ್ಷ ರೂ. ಬಹುಮಾನ ನೀಡುವುದಾಗಿ ಭದ್ರತಾ ಪಡೆ ಘೋಷಿಸಿತ್ತು.

  • ಗಡಿಯಲ್ಲಿ ಚೀನಾ, ಪಾಕ್ ತಂಟೆಗೆ ಬ್ರೇಕ್ ಹಾಕಲು ಸೇನೆಗೆ `ಪ್ರಚಂಡ’ ಬಲ

    ಗಡಿಯಲ್ಲಿ ಚೀನಾ, ಪಾಕ್ ತಂಟೆಗೆ ಬ್ರೇಕ್ ಹಾಕಲು ಸೇನೆಗೆ `ಪ್ರಚಂಡ’ ಬಲ

    ನವದೆಹಲಿ: ಕೇಂದ್ರ ಸರ್ಕಾರವು ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್‍ನಿಂದ (HAL) ಭಾರತದ ವಾಯುಸೇನೆಗೆ (Indian Air Force) 156 ಸ್ಥಳೀಯ `ಪ್ರಚಂಡ್’ ಲಘು ಸೇನಾ ಹೆಲಿಕಾಪ್ಟರ್‌ಗಳನ್ನು (Prachand Helicopter) ಖರೀದಿಸಲು ಮುಂದಾಗಿದೆ. ಈ ಮೂಲಕ ಗಡಿಯಲ್ಲಿ ಪಾಕಿಸ್ತಾನ ಹಾಗೂ ಚೀನಾ ಮಾಡುತ್ತಿರುವ ಸಮಸ್ಯೆಯನ್ನು ನಿಯಂತ್ರಿಸಲು ವಾಯುಸೇನೆಗೆ ಬಲ ತುಂಬಲು ಕೇಂದ್ರ ಈ ನಿರ್ಧಾರ ಕೈಗೊಂಡಿದೆ.

    ಈಗಾಗಲೇ ಈ ಯೋಜನೆಯನ್ನು ಅಂತಿಮಗೊಳಿಸಲಾಗಿದೆ. ಹೆಲಿಕಾಪ್ಟರ್‌ಗಳು ಸಿಯಾಚಿನ್ ಗ್ಲೇಸಿಯರ್ ಮತ್ತು ಪೂರ್ವ ಲಡಾಖ್‍ನಂತಹ ಎತ್ತರದ ಪ್ರದೇಶಗಳಲ್ಲಿ ಆಕ್ರಮಣಕಾರಿ ಕಾರ್ಯಾಚರಣೆಗೆ ಸಮರ್ಥವಾಗಿವೆ. ಸೇನೆಯು (Indian Army) 90 ಹೆಲಿಕಾಪ್ಟರ್‌ಗಳನ್ನು ಪಡೆಯಲಿದೆ. 66 ಹೆಲಿಕಾಪ್ಟರ್‌ಗಳನ್ನು ವಾಯುಸೇನೆ ಪಡೆಯಲಿದೆ. ಇದನ್ನೂ ಓದಿ: ಭಾರತಕ್ಕೆ ಬೇಕಾಗಿದ್ದ ಮೋಸ್ಟ್‌ ವಾಂಟೆಡ್‌ ಉಗ್ರ ಕರಾಚಿಯಲ್ಲಿ ಗುಂಡೇಟಿಗೆ ಬಲಿ

    ಈ ಯೋಜನೆಗೆ ವಾಣಿಜ್ಯ ಮಾತುಕತೆಗಳ ಮತ್ತು ಭದ್ರತೆಯ ಕ್ಯಾಬಿನೆಟ್ ಸಮಿತಿ (ಸಿಸಿಎಸ್) ಅಂತಿಮ ಒಪ್ಪಿಗೆಯ ನಂತರ ಆದೇಶವನ್ನು ನೀಡಲು ನಿರ್ಧರಿಸಲಾಗಿದೆ.

    5.8 ಟನ್ ತೂಕದ ಪ್ರಚಂಡ್ ಲಘು ಯುದ್ಧ ಚಾಪರ್ ಸ್ಥಳೀಯವಾಗಿ ತಯಾರಿಸಲಾಗಿದೆ. ಅಲ್ಲದೇ ವಿಶ್ವದಲ್ಲಿ ತೂಕದ ವರ್ಗದ ಏಕೈಕ ದಾಳಿ ಹೆಲಿಕಾಪ್ಟರ್ ಎಂದು ಹೆಸರು ಪಡೆದಿದೆ. 20 ಎಂಎಂ ಬಂದೂಕುಗಳು, 70 ಎಂಎಂ ರಾಕೆಟ್ ವ್ಯವಸ್ಥೆ ಮತ್ತು ಕ್ಷಿಪಣಿಗಳನ್ನು ಇಂದು ಹೊಂದಿದೆ. ಇದು 16,400 ಅಡಿ ಎತ್ತರದಲ್ಲಿ ಹಾರುವ ಸಾಮರ್ಥ್ಯ ಹೊಂದಿರುವುದು ವಿಶೇಷ. ಇದನ್ನೂ ಓದಿ: ವಾಣಿಜ್ಯ ಬಳಕೆಯ 19 ಕೆಜಿ ಎಲ್‌ಪಿಜಿ ಸಿಲಿಂಡರ್ ಬೆಲೆ 209ರೂ. ಏರಿಕೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಭಾರತಕ್ಕೆ ಸ್ಪೇನ್‌ನ C-295 ಮಿಲಿಟರಿ ವಿಮಾನ ಹಸ್ತಾಂತರ – ಏನಿದರ ವಿಶೇಷ?

    ಭಾರತಕ್ಕೆ ಸ್ಪೇನ್‌ನ C-295 ಮಿಲಿಟರಿ ವಿಮಾನ ಹಸ್ತಾಂತರ – ಏನಿದರ ವಿಶೇಷ?

    ನವದೆಹಲಿ: ಸ್ಪೇನ್‌ನಲ್ಲಿ (Spain) ನಿರ್ಮಾಣವಾದ C-295 ಮಿಲಿಟರಿ ವಿಮಾನವನ್ನು (Military Aircraft) ಭಾರತಕ್ಕೆ ಹಸ್ತಾಂತರಿಸಲಾಗಿದೆ. ಸ್ಪೇನ್‌ನಲ್ಲಿರುವ ವಾಯುಸೇನೆ ಮುಖ್ಯಸ್ಥ ವಿವೇಕ್ ರಾಮ್ ಚೌಧರಿ ವಿಮಾನವನ್ನು ಸ್ವೀಕರಿಸಿದ್ದಾರೆ. ಸೆಪ್ಟೆಂಬರ್ 25ರಂದು ಉತ್ತರ ಪ್ರದೇಶದಲ್ಲಿರುವ ಹಿಂಡನ್ ವಾಯುನೆಲೆಯಲ್ಲಿ ಹೊಸ ವಿಮಾನ ಲ್ಯಾಂಡಿಂಗ್ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿವೆ.

    ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ವಾಯುಸೇನೆಯ ಹಳೆಯದಾದ Avro-748 ವಿಮಾನಗಳನ್ನು ಬದಲಿಸಲು 56 C-295 ವಿಮಾನಗಳನ್ನು ಖರೀದಿಸಲು ಏರ್‌ಬಸ್ ಡಿಫೆನ್ಸ್ ಮತ್ತು ಸ್ಪೇನ್‌ನೊಂದಿಗೆ ಭಾರತವು 21,000 ಕೋಟಿ ರೂ.ಗಳ ಒಪ್ಪಂದವನ್ನು ಮಾಡಿಕೊಂಡಿತ್ತು. 56 ವಿಮಾನಗಳಿಗೆ ಎರಡು ದೇಶಗಳ ನಡುವೆ ಒಪ್ಪಂದ ನಡೆದಿದೆ. 16 ವಿಮಾನಗಳು ಸ್ಪೇನ್ ನಿರ್ಮಾಣ ಮಾಡಲಿದ್ದು, ಅದೇ ತಂತ್ರಜ್ಞಾನ ಬಳಸಿಕೊಂಡು 40 ವಿಮಾನಗಳನ್ನು ಗುಜರಾತ್ ವಡೋದರದಲ್ಲಿ ಉತ್ಪಾದನೆಯಾಗಲಿವೆ. ಇದನ್ನೂ ಓದಿ: ಉದಯನಿಧಿ ಸ್ಟಾಲಿನ್ ವಿರುದ್ಧ ಮುಂಬೈನಲ್ಲಿ ಎಫ್‌ಐಆರ್ ದಾಖಲು

    ಸಿ-295 ಒಂದು ಸಾರಿಗೆ ವಿಮಾನವಾಗಿದ್ದು ಕಡಿಮೆ ಸ್ಥಳದಲ್ಲಿ ಟೇಕಾಫ್ ಮತ್ತು ಲ್ಯಾಂಡಿಂಗ್ ಸಾಮರ್ಥ್ಯವನ್ನು ಹೊಂದಿದೆ, ಇದು ಒಂಬತ್ತು ಟನ್ ಪೇಲೋಡ್ ಅಥವಾ 71 ಸೈನಿಕರನ್ನು ಗರಿಷ್ಠ 260 ನಾಟ್ಸ್ (KTS) ವೇಗದಲ್ಲಿ ಸಾಗಿಸುವ ಸಾಮರ್ಥ್ಯ ಹೊಂದಿದೆ. ವಿಮಾನದ ಸ್ಥಿರ ರೆಕ್ಕೆಗಳ ಸಹಾಯದಿಂದ ಹೆಲಿಕಾಪ್ಟರ್‌ಗಳಿಗೆ ಗಾಳಿಯಲ್ಲಿ ಇಂಧನ ತುಂಬಬಹುದಾಗಿದೆ. ಇದು ಅತ್ಯುತ್ತಮ ಇಂಜಿನ್‌ಗಳನ್ನು ಹೊಂದಿದ್ದು, 13 ಗಂಟೆ ನಿರಂತರ ಹಾರಾಟ ನಡೆಸುವ ಸಾಮರ್ಥ್ಯ ಹೊಂದಿದೆ. ಇದನ್ನೂ ಓದಿ: ಇನ್ಮುಂದೆ ಚುನಾವಣಾ ಸಿಬ್ಬಂದಿಗೆ ಬೂತಲ್ಲೇ ಅಂಚೆ ಮತದಾನ ಕಡ್ಡಾಯ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]