Tag: air force

  • ಭಾರತೀಯರ ಸ್ಥಳಾಂತರಕ್ಕೆ ತೆರಳಿದ ವಾಯುಪಡೆ

    ಭಾರತೀಯರ ಸ್ಥಳಾಂತರಕ್ಕೆ ತೆರಳಿದ ವಾಯುಪಡೆ

    ನವದೆಹಲಿ: ಉಕ್ರೇನ್‍ನಲ್ಲಿ ಸಿಲುಕಿರುವ ಭಾರತೀಯರನ್ನು ಸ್ಥಳಾಂತರಿಸುವಂತೆ ವಾಯುಪಡೆಗೆ ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ ಎಂದು ಅಧಿಕೃತ ಮೂಲ ಹೇಳಿದೆ.

    ವಾಯುಪಡೆಯ ಸಾಮಥ್ರ್ಯವನ್ನು ಸಹಾಯ ಪಡೆದುಕೊಂಡು ಕಡಿಮೆ ಸಮಯದಲ್ಲಿ ಹೆಚ್ಚಿನ ಜನರನ್ನು ಸ್ಥಳಾಂತರಿಸಬಹುದು. ಇದು ಇದರಿಂದ ಹೆಚ್ಚು ಜನರನ್ನು ಕರೆಸಿಕೊಳ್ಳಲು ಸಹಾಯವಾಗುತ್ತದೆ ಎಂದು ತಿಳಿಸಿದೆ.

    ಭಾರತದ ವಾಯುಪಡೆಯು ಸಿ-17 ಗ್ಲೋಬ್‍ಮಾಸ್ಟರ್ ವಿಮಾನವನ್ನು ಆಪರೇಷನ್ ಗಂಗಾದ ಭಾಗವಾಗಿ ಅಳವಡಿಸುವ ನಿರೀಕ್ಷೆಯಿದೆ. ಇಂದು ಬೆಳಗ್ಗೆ 182 ಭಾರತೀಯರನ್ನು ಹೊತ್ತ ವಿಮಾನವೊಂದು ಮುಂಬೈಗೆ ಬಂದಿಳಿದಿದೆ. ಉಕ್ರೇನ್ ತನ್ನ ವಾಯುಪ್ರದೇಶವನ್ನು ಮುಚ್ಚಿದ್ದರಿಂದ ಭಾರತೀಯ ವಿಮಾನವು ರೊಮೇನಿಯನ್ ರಾಜಧಾನಿ ಬುಕಾರೆಸ್ಟ್ ತಲುಪಿದೆ.

    ಭಾರತೀಯ ಪ್ರಜೆಗಳನ್ನು ಸ್ಥಳಾಂತರಿಸಲು ಉಕ್ರೇನ್‍ನ ನೆರೆಯ ರಾಷ್ಟ್ರಗಳಾದ ರೊಮೇನಿಯಾ ಮತ್ತು ಸ್ಲೋವಾಕ್ ರಿಪಬ್ಲಿಕ್‍ನಲ್ಲಿರುವವರೊಂದಿಗೆ ಮಾತನಾಡಿ ಉಕ್ರೇನ್‍ನಲ್ಲಿ ಸಿಲುಕಿರುವವರನ್ನು ದೇಶಕ್ಕೆ ವಾಪಸ್ ಕರೆಸಿಕೊಳ್ಳುವ ಪ್ರಯತ್ನ ಮಾಡುತ್ತಿದೆ ಎಂದು ತಿಳಿಸಿದೆ. ಇದನ್ನೂ ಓದಿ: ಟ್ರ್ಯಾಕ್ಟರ್ ಬಳಸಿ ರಷ್ಯಾದ ಮಿಲಿಟರಿ ಟ್ಯಾಂಕ್ ಹೊತ್ತೊಯ್ದ ರೈತ

    ಉಕ್ರೇನ್‍ನಲ್ಲಿದ್ದ ಅಂದಾಜು 20,000 ಭಾರತೀಯರಲ್ಲಿ ಸುಮಾರು 8,000 ಜನರು ಫೆಬ್ರವರಿ ತಿಂಗಳಲ್ಲಿ ದೇಶವನ್ನು ತೊರೆದಿದ್ದಾರೆ ಎಂದು ಸರ್ಕಾರ ಹೇಳಿದೆ. ಇದನ್ನೂ ಓದಿ: ಪುಟಿನ್ ಆದೇಶ ನಿರಾಕರಿಸಿ ಉಕ್ರೇನ್‍ನಿಂದ ಹಿಂದಿರುಗಿದ್ರೆ ಪ್ರತೀ ಸೈನಿಕರೊಂದಿಗೆ ಸೆಕ್ಸ್‌ಗೆ ಸಿದ್ಧಳಿದ್ದೇನೆ: ಮಾಡೆಲ್

  • ವಾಯುಪಡೆಯ ಗ್ರೂಪ್​ ಕ್ಯಾಪ್ಟನ್ ಆಗಿ ಬಡ್ತಿ  ಪಡೆದ ಅಭಿನಂದನ್

    ವಾಯುಪಡೆಯ ಗ್ರೂಪ್​ ಕ್ಯಾಪ್ಟನ್ ಆಗಿ ಬಡ್ತಿ ಪಡೆದ ಅಭಿನಂದನ್

    ನವದೆಹಲಿ: ವಾಯುಪಡೆಯ ಗ್ರೂಪ್ ಕ್ಯಾಪ್ಟನ್ ಆಗಿ ಅಭಿನಂದನ್ ವರ್ಧಮಾನ್ ಬಡ್ತಿ ಪಡೆದಿದ್ದಾರೆ.

    ವಿಂಗ್ ಕಮಾಂಡರ್ ಅಭಿನಂದನ್ ಎಂದಾಕ್ಷಣ ಅಂದು ಪಾಕ್‍ಗೆ ದಿಟ್ಟ್ ಉತ್ತರ ಕೊಟ್ಟು ಜೀವಂತ ಮರಳಿದ ಆರೋಚಕ ಕ್ಷಣಗಳು ನೆನಪಾಗುತ್ತದೆ. ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಅಭಿನಂದನ್ ಪಾಕಿಸ್ತಾನದ ಎಫ್-16 ಯುದ್ಧ ವಿಮಾನ ಹೊಡೆದುರುಳಿಸಿದ್ದರು. ಅವರಿದ್ದ ಮಿಗ್-21 ಹಾನಿಗೀಡಾದ ಕಾರಣ ಪ್ಯಾರಾಚೂಟ್ ಸಹಾಯದಿಂದ ಕೆಳಗೆ ಜಿಗಿದು, ಸಿಕ್ಕಿಬಿದ್ದಿದ್ದರು. ನಂತರ ಪಾಕ್ ಯೋಧರು ಅವರನ್ನು ಬೇರೆಡೆಗೆ ಕರೆದೊಯ್ದಿದ್ದರು.

    ಬಂಧನದ ಅವಧಿಯಲ್ಲಿಯೂ ಆತ್ಮಗೌರವ ಕಾಪಾಡಿಕೊಂಡ ರೀತಿ ಜನರ ಮೆಚ್ಚುಗೆಗೆ ಪಾತ್ರವಾಗಿತ್ತು. ತಲೆ ಎತ್ತಿಯೇ ಗರ್ವದಿಂದ ಎಲ್ಲೆಡೆ ನಡೆಯುತ್ತಿದ್ದ ವೈಖರಿಯನ್ನೂ ಜನರು ಮೆಚ್ಚಿಕೊಂಡಿದ್ದರು. ಅಭಿನಂದನ್ ಅವರಿದ್ದ ವಾಯುಪಡೆಯ 51ನೇ ಸ್ಕ್ವಾರ್ಡನ್‍ಗೂ ಭಾರತ ಸರ್ಕಾರದಿಂದ ವಿಶೇಷ ಮಾನ್ಯತೆ ಸಿಕ್ಕಿತ್ತು. ಪಾಕಿಸ್ತಾನ ವಾಯುಪಡೆಯು ಫೆಬ್ರುವರಿ 27, 2019ರಂದು ಭಾರತದ ಮೇಲೆ ದಾಳಿ ನಡೆಸಲು ಮಾಡಿದ ಪ್ರಯತ್ನವನ್ನು ಹಿಮ್ಮೆಟ್ಟಿಸುವಲ್ಲಿ ಈ ತುಕಡಿಯ ಕಾರ್ಯಕ್ಷಮತೆ ಪರಿಣಾಮಕಾರಿಯಾಗಿತ್ತು. ಕೇಂದ್ರೀಯ ಮೀಸಲು ಪೊಲೀಸ್ ಸಿಬ್ಬಂದಿ ಇದ್ದ ಬಸ್ ಒಂದರ ಮೇಲೆ ಉಗ್ರರು ನಡೆಸಿದ ಬಾಂಬ್ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳಲು ಭಾರತವು ಬಾಲಾಕೋಟ್‍ನಲ್ಲಿದ್ದ ಉಗ್ರಗಾಮಿ ಶಿಬಿರಗಳ ಮೇಲೆ ದಾಳಿ ನಡೆಸಿತ್ತು. ಇದನ್ನೂ ಓದಿ: ಚಪ್ಪಲಿ ತೆಗೆದು ಅಭಿಮಾನಿಗಳಿಂದ ಅಪ್ಪುಗೆ ಅಂತಿಮ ನಮನ- ಬಿಬಿಎಂಪಿಯಿಂದ ರಾಶಿ ರಾಶಿ ಸ್ಲಿಪ್ಪರ್ಸ್ ತೆರವು

    ಅಭಿನಂದನ್ ವರ್ಧಮಾನ್ ಅವರಿಗೆ ಶೌರ್ಯ ಪ್ರಶಸ್ತಿಯನ್ನೂ ನೀಡಲಾಗಿತ್ತು. ಇದೀಗ ಭಾರತೀಯ ವಾಯುಸೇನೆ ಗ್ರೂಪ್ ಕ್ಯಾಪ್ಟನ್ ಆಗಿ ಪದೋನ್ನತಿ ನೀಡಿದೆ. ಇದನ್ನೂ ಓದಿ: ಅಪ್ಪು ಸಮಾಧಿ ಬಳಿ ನೃತ್ಯ ನಮನ ಸಲ್ಲಿಸಿದ ಪುಟಾಣಿಗಳು

  • ಅಮೆಜಾನ್ ಕಾಡಿನಲ್ಲಿ ಬೊಲಿವಿಯಾ ವಾಯುಪಡೆ ವಿಮಾನ ಪತನ – 6 ಮಂದಿ ಸಾವು

    ಅಮೆಜಾನ್ ಕಾಡಿನಲ್ಲಿ ಬೊಲಿವಿಯಾ ವಾಯುಪಡೆ ವಿಮಾನ ಪತನ – 6 ಮಂದಿ ಸಾವು

    ವಾಷಿಂಗ್ಟನ್: ಬೊಲಿವಿಯಾದ ವಾಯುಪಡೆಯ ವಿಮಾನ (Bolivian Airforce Plane) ಅಮೆಜಾನ್ ಅರಣ್ಯದಲ್ಲಿ ಪತನವಾಗಿದ್ದು, 6 ಮಂದಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

    ದಕ್ಷಿಣ ಅಮೆರಿಕಾದ ದೇಶ ಬೊಲಿವಿಯಾದ ಈಶಾನ್ಯದಲ್ಲಿರುವ ಬೆನಿ ಪ್ರದೇಶದ ಅಮೆಜಾನ್ ಕಾಡಿನಲ್ಲಿ ಶನಿವಾರ ಈ ದುರಂತ ನಡೆದಿದೆ. ಬೊಲಿವಿಯಾದ ಆರೋಗ್ಯ ಸಚಿವಾಲಯದ ಡೆಂಗ್ಯೂ-ಚಿಕೂನ್‍ಗುನ್ಯಾ ಕಾರ್ಯಕ್ರಮದ ನಾಲ್ವರು ಆರೋಗ್ಯಾಧಿಕಾರಿಗಳನ್ನು ರಿಬೆರಾಲ್ಟಾದಿಂದ ಕೋಬಿಜಾಗೆ ಕರೆದೊಯ್ಯಲಾಗುತ್ತಿತ್ತು. ಮಲೇರಿಯಾ ರೋಗ ಜಾಗೃತಿ ಮೂಡಿಸುವ ಜೊತೆಗೆ, ಮೌಲ್ಯಮಾಪನ ಕಾರ್ಯದಲ್ಲಿ ಇವರೆಲ್ಲ ತೊಡಗಿಸಿಕೊಂಡಿದ್ದರು. ನಾಲ್ವರೂ ಅಧಿಕಾರಿಗಳು ಮೃತಪಟ್ಟಿದ್ದಾರೆ. ಇದನ್ನೂ ಓದಿ: ದಕ್ಷಿಣ ಕನ್ನಡದಲ್ಲಿ ನಿಲ್ಲದ ಪುಂಡರ ಕುಚೇಷ್ಟೆ – ಕಾರಿನಲ್ಲಿ ಹೋಗ್ತಿದ್ದ ದಂಪತಿಗೆ ಅಡ್ಡಗಟ್ಟಿ ಧಮ್ಕಿ

    ವಿಮಾನ ಪತನದಲ್ಲಿ ಇಬ್ಬರು ಸೇನಾ ಪೈಲಟ್‍ಗಳು, ನಾಲ್ವರು ನಾಗರಿಕರು ಮೃತಪಟ್ಟಿದ್ದಾರೆ. ಈ ವಿಮಾನ ಅಮೆಜಾನ್ ಕಾಡಿನ (Amazon Forest) ದಟ್ಟವಾದ ಮರಗಳ ಮಧ್ಯೆ ಪತನವಾಗಿದ್ದು, ತಕ್ಷಣ ಬೆಂಕಿ ಹೊತ್ತಿಕೊಂಡು ಸಂಪೂರ್ಣ ಬೆಂಕಿಗಾಹುತಿಯಾಗಿದೆ. ವಿಮಾನ ಪತನವಾದ ಸ್ಥಳದ ಸಮೀಪದಲ್ಲೇ ಇದ್ದ ಅಗುವಾ ಡುಲ್ಸೆ ಎಂಬ ಸಮುದಾಯದ ನಿವಾಸಿಗಳು ವಿಮಾನಕ್ಕೆ ಹೊತ್ತಿಕೊಂಡಿದ್ದ ಬೆಂಕಿಯನ್ನು ನಂದಿಸಲು ಪ್ರಯತ್ನ ಪಟ್ಟರೂ ಫಲ ನೀಡಲಿಲ್ಲ ಎಂದು ಬೆನಿ ಪ್ರದೇಶದ ಪೊಲೀಸರು ಮಾಹಿತಿ ನೀಡಿದ್ದಾರೆ. ಸೇನಾ ವಿಮಾನ ಪತನಕ್ಕೆ (Plane Crash) ನೈಜ ಕಾರಣ  ಪತ್ತೆ ಹಚ್ಚಲು ತನಿಖೆ ನಡೆಯುತ್ತಿದೆ.

  • ಅತ್ಯಾಚಾರದ ಆರೋಪ- ವಾಯುಸೇನೆ ಅಧಿಕಾರಿ ಅರೆಸ್ಟ್

    ಅತ್ಯಾಚಾರದ ಆರೋಪ- ವಾಯುಸೇನೆ ಅಧಿಕಾರಿ ಅರೆಸ್ಟ್

    ಚೆನ್ನೈ: ಭಾರತೀಯ ವಾಯುಪಡೆ(ಐಎಎಫ್) ಅಧಿಕಾರಿಯನ್ನು ಅತ್ಯಾಚಾರದ ಆರೋಪದ ಮೇಲೆ ತಮಿಳುನಾಡಿನ ಕೊಯಮತ್ತೂರಿನಲ್ಲಿ ಅರೆಸ್ಟ್ ಮಾಡಲಾಗಿದೆ.

    ಫ್ಲೈಟ್ ಲೆಫ್ಟಿನೆಂಟ್ ಅಮಿತೇಶ್(29) ಅವರನ್ನು ಕೊಯಂಬತ್ತೂರಿನ ರೇಸ್ ಕೋರ್ಸ್‍ನ ಸಹೋದ್ಯೋಗಿಯ ಆರೋಪದ ಮೇಲೆ ಐಎಎಫ್ ಕ್ಯಾಂಪಸ್ ನಲ್ಲಿ ನಿನ್ನೆ ಬಂಧಿಸಲಾಗಿದೆ. ಅಮಿತೇಶ್ ಅವರು ಇಲ್ಲಿ ತರಬೇತಿ ಪಡೆಯುತ್ತಿದ್ದರು. ಇದನ್ನೂ ಓದಿ: ಹೆತ್ತ ಮಗಳನ್ನೇ ಕೊಂದ ತಂದೆ, ತಾಯಿ, ದೊಡ್ಡಪ್ಪ – ಮರ್ಯಾದಾ ಹತ್ಯಾ ಪ್ರಕರಣ ಬಯಲು

    ಈ ಕುರಿತು ಸಂತ್ರಸ್ತೆ ಮಾತನಾಡಿದ್ದು, ಸೆ.10ರಂದು ತರಬೇತಿ ಸಮಯದಲ್ಲಿ ನನಗೆ ಗಾಯವಾಯಿತು. ಅದಕ್ಕೆ ನಾನು ಔಷಧಿ ಸೇವಿಸಿ ಮಲಗಿಕೊಂಡೆ. ಆದರೆ ನಂತರ ಎಚ್ಚರವಾಗಿ ನೋಡಿದರೆ ನನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಲಾಗಿತ್ತು. ಯಾರು ಎಂದು ತಿಳಿದು ಅದನ್ನು ಐಎಎಫ್ ಅಧಿಕಾರಿಗಳಿಗೆ ದೂರು ನೀಡಿದೆ. ಆದರೂ ಸಹ ಅವರು ಯಾವುದೇ ಕ್ರಮ ಕೈಗೊಂಡಿಲ್ಲ. ಅದಕ್ಕೆ ಕೊಯಮತ್ತೂರಿನ ಮಹಿಳಾ ಪೆÇಲೀಸ್ ಠಾಣೆಯನ್ನು ಸಂಪರ್ಕಿಸಿ ಅವರಿಗೆ ದೂರು ನೀಡಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಸಿಎಂ ಜಿಲ್ಲೆಯಲ್ಲಿ ಮರಳು ಸಾಗಾಣಿಕೆಗೆ ಮಕ್ಕಳ ಬಳಕೆ – ಕಣ್ಣುಮುಚ್ಚಿ ಕುಳಿತ ಪೊಲೀಸ್ ಇಲಾಖೆ

    ಈ ಹಿನ್ನೆಲೆ ಅಮಿತೇಶ್‍ನನ್ನು ಕೊಯಮತ್ತೂರಿನ ಪೊಲೀಸರು ಅರೆಸ್ಟ್ ಮಾಡಿದ್ದು ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದೆ. ಈಗ ಅಮಿತೇಶ್ ಅವರನ್ನು ಉಡುಮಲ್ ಪೇಟೆ ಜೈಲಿಗೆ ಕಳಹಿಸಲಾಗಿದೆ.

  • ವಾಯು ನೆಲೆಯ ಸನಿಹ ಆತಂಕ ಹುಟ್ಟಿಸಿದ ಡ್ರೋನ್ ಹಾರಾಟ

    ವಾಯು ನೆಲೆಯ ಸನಿಹ ಆತಂಕ ಹುಟ್ಟಿಸಿದ ಡ್ರೋನ್ ಹಾರಾಟ

    ಬೆಂಗಳೂರು: ಜಾಲಹಳ್ಳಿಯ ವಾಯು ನೆಲೆಯ ಸನಿಹ ಡ್ರೋನ್ ಗಳ ಹಾರಾಟ ಮಾಡಿರೋ ಶಂಕೆ ವ್ಯಕ್ತವಾಗಿದ್ದು ಆತಂಕ ಸೃಷ್ಟಿಸಿದೆ.

    ಅಕ್ರಮವಾಗಿ ಎರಡು ಡ್ರೋನ್ ಗಳು ಹಾರಾಟ ಮಾಡಿರೋ ಬಗ್ಗೆ ಸೇನಾ ಸಿಬ್ಬಂದಿ ಅನುಮಾನ ವ್ಯಕ್ತಪಡಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅಕ್ರಮವಾಗಿ ಎರಡು ಡ್ರೋನ್ ಹಾರಾಟ ಮಾಡುತ್ತಿರುವ ಬಗ್ಗೆ ಅನುಮಾನ ವ್ಯಕ್ತಪಡಿಸಿ ಗಂಗಮ್ಮನ ಗುಡಿ ಪೊಲೀಸರಿಗೆ ಸೇನಾ ಸಿಬ್ಬಂದಿ ಮಾಹಿತಿ ನೀಡಿದ್ದಾರೆ. ಅವರ ನೀಡಿದ ಮಾಹಿತಿ ಆಧಾರದ ಮೇಲೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಮದುವೆ ಮನೆಗೆ ಹೋಗಿ ಪ್ರಾಣಕ್ಕೆ ಆಪತ್ತು ತಂದುಕೊಂಡ 100ಕ್ಕೂ ಹೆಚ್ಚು ಜನರು

    Drone
    ಸಾಂದರ್ಭಿಕ ಚಿತ್ರ

    ಸುಮಾರು 40 ದಿನಗಳ ಹಿಂದೆ ಈ ಕುರಿತು ದೂರು ಬಂದಿತ್ತು. ಜಾಲಹಳ್ಳಿ ವಾಯುನೆಲೆಯ ಕಾಂಪೌಂಡ್ ಬಳಿ ಅನುಮಾನಾಸ್ಪದ ಲೈಟ್ ಬ್ಲಿಂಕಿಂಗ್ ಕಂಡುಬಂದಿತ್ತು. ಇದು ರಾತ್ರಿ ಕರ್ತವ್ಯದಲ್ಲಿದ್ದ ಸೆಕ್ಯುರಿಟಿ ಗಮನಕ್ಕೆ ಬಂದಿತ್ತು. ರಾತ್ರಿಯಾದ ಕಾರಣ ಅದು ಏನೆಂದು ಸೆಕ್ಯುರಿಟಿಗೆ ಗೊತ್ತಾಗಿರಲಿಲ್ಲ. ಮೇಲ್ನೋಟಕ್ಕೆ ಚಿಕ್ಕ ಡ್ರೋನ್ ಎಂಬ ಸಂಶಯ ವ್ಯಕ್ತವಾಗಿತ್ತು. ಹೀಗಾಗಿ ಸ್ಥಳೀಯ ಠಾಣೆಗೆ ದೂರನ್ನು ನೀಡಿದ್ದ ವಾಯುನೆಲೆ ಅಧಿಕಾರಿಗಳು, ಗಂಗಮ್ಮನ ಗುಡಿ ಹಾಗೂ ಜಾಲಹಳ್ಳಿ ಪೊಲೀಸ್ ಸಿಬ್ಬಂದಿಯನ್ನು ಕರೆಸಿ ಪರಿಶೀಲನೆ ಮಾಡಲಾಗಿತ್ತು.

    ಸುಮಾರು 15 ದಿನಗಳ ನಿರಂತರವಾಗಿ ಪರಿಶೀಲನೆ ನಡೆಸಿದ ಬಳಿಕ ಪೊಲೀಸರಿಗೆ ಡ್ರೋನ್ ಹಾರಾಟದ ಬಗ್ಗೆ ಯಾವುದೇ ಕುರುಹು ಪತ್ತೆಯಾಗಿಲ್ಲ. ವಾಯುನೆಲೆ ಅಧಿಕಾರಿಗಳ ಜೊತೆ ನಿರಂತರ ಸಂಪರ್ಕ ಮಾಡಿ ಮಾಹಿತಿ ನೀಡಲಾಗಿದ್ದು, ಈ ಕುರಿತು ಪರಿಶೀಲನೆ ಮುಂದುವರೆಸಿದ್ದೇವೆ ಎಂದು ಉತ್ತರ ವಿಭಾಗದ ಡಿಸಿಪಿ ಧಮೇರ್ಂದ್ರ ಕುಮಾರ್ ಮೀನಾ ಸ್ಪಷ್ಟ ಪಡಿಸಿದ್ದಾರೆ. ಇದನ್ನೂ ಓದಿ: ಒಂದೇ ವೇದಿಕೆಯಲ್ಲಿ ರಾಜಕೀಯ ವಿರೋಧಿಗಳ ಸಂಗಮ

  • ಜಮ್ಮು ವಾಯು ನೆಲೆ ಮೇಲೆ ಡ್ರೋನ್ ದಾಳಿ – 2 ಸ್ಫೋಟ, ಇಬ್ಬರಿಗೆ ಗಾಯ

    ಜಮ್ಮು ವಾಯು ನೆಲೆ ಮೇಲೆ ಡ್ರೋನ್ ದಾಳಿ – 2 ಸ್ಫೋಟ, ಇಬ್ಬರಿಗೆ ಗಾಯ

    ಜಮ್ಮು:  ಭಾರತದ ಸೇನೆಯ ಇತಿಹಾಸದಲ್ಲಿ ಮೊದಲ ಬಾರಿಗೆ ಡ್ರೋನ್ ದಾಳಿ ನಡೆದಿದೆ.   ಭಾನುವಾರ ನಸುಕಿನ ವೇಳೆಯಲ್ಲಿ ಜಮ್ಮು ವಾಯು ನೆಲೆಯ ಮೇಲೆ ಎರಡು ಡ್ರೋನ್ ಮೂಲಕ ಸ್ಫೋಟಕವನ್ನು ಸ್ಫೋಟಿಸಲಾಗಿದೆ.

    ಟೆಕ್ನಿಕಲ್ ಪ್ರದೇಶದಲ್ಲಿರುವ ಕಟ್ಟಡದ ಮೇಲ್ಭಾಗದಲ್ಲಿ ಬೆಳಗ್ಗೆ 1:45ಕ್ಕೆ ಮೊದಲ ಸ್ಫೋಟ ಸಂಭವಿಸಿದೆ. ಈ ಸ್ಫೋಟ ಸಂಭವಿಸಿದ 5 ನಿಮಿಷದಲ್ಲಿ ತೆರೆದ ಪ್ರದೇಶದಲ್ಲಿ ಮತ್ತೊಂದು ಸ್ಫೋಟ ಸಂಭವಿಸಿದೆ. ಸ್ಫೋಟದ ತೀವ್ರತೆಗೆ ಮೇಲ್ಭಾಗ ಒಡೆದು ಹೋಗಿದೆ.

    ಈ ಸ್ಫೋಟದಲ್ಲಿ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದೆ ಎಂದು ವರದಿಯಾಗಿದೆ. ವಿಮಾನ ನಿಲ್ದಾಣದ ಮೇಲೆ ಡ್ರೋನ್ ಮೂಲಕ ಸುಧಾರಿತ ಸ್ಫೋಟಕ ಸಾಧನ(ಐಇಡಿ) ಬಳಸಿ ಸ್ಫೋಟ ನಡೆಸಿರಬಹುದು ಎಂದು ಶಂಕಿಸಲಾಗಿದೆ.

    ರಾಷ್ಟ್ರೀಯ ಬಾಂಬ್ ದತ್ತಾಂಶ ಕೇಂದ್ರದ ತಜ್ಞರು ಮತ್ತು ವಿಧಿ ವಿಜ್ಞಾನ ಪ್ರಯೋಗಾಲಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.  ಇದನ್ನೂ ಓದಿ: ವಿಶ್ವದ ಅತಿ ದೊಡ್ಡ ತೈಲ ಉತ್ಪಾದನಾ ಕಂಪನಿಯ ಮೇಲೆ ಡ್ರೋನ್ ದಾಳಿ – ಹೊತ್ತಿ ಉರಿದ ಘಟಕಗಳು

    ಜಮ್ಮು ವಿಮಾನ ನಿಲ್ದಾಣಕ್ಕೆ ಸತ್ವಾರಿ ವಿಮಾನ ನಿಲ್ದಾಣ ಎಂದು ಕರೆಯಲಾಗುತ್ತದೆ. ಇಲ್ಲಿ ನಾಗರಿಕ ವಿಮಾನಗಳು ಲ್ಯಾಂಡ್ ಆದರೂ ಏರ್ ಟ್ರಾಫಿಕ್ ಕಟ್ರೋಲ್(ಎಟಿಸಿ) ಭಾರತೀಯ ವಾಯುಪಡೆಯ ನಿಯಂತ್ರಣದಲ್ಲಿದೆ.

    ಈ ವಿಮಾನ ನಿಲ್ದಾಣ ಜಮ್ಮು ತಾವಿ ರೈಲು ನಿಲ್ದಾಣದಿಂದ 6 ಕಿ.ಮೀ, ಪಂಜಾಬ್‍ನ ಪಠಾಣ್‍ಕೋಟ್ ವಿಮಾನ ನಿಲ್ದಾಣದಿಂದ 110 ಕಿ.ಮೀ ಮತ್ತು ರಾಷ್ಟ್ರೀಯ ಹೆದ್ದಾರಿ 1 ರಿಂದ 1 ಕಿ.ಮೀ ದೂರದಲ್ಲಿದೆ.

    ಭಾರತದ ಗಡಿಯಲ್ಲಿ ಪಾಕಿಸ್ತಾನ ಕಡಿಮೆ ಬೆಲೆ ಚೀನಿ ಡ್ರೋನ್ ಮೂಲಕ ಶಸ್ತ್ರಾಸ್ತ್ರವನ್ನು ಮೇಲಿನಿಂದ ಕೆಳಗಡೆ ಉದುರಿಸುತ್ತಿದ್ದ ಪ್ರಕರಣಗಳು ವರದಿಯಾಗಿದ್ದವು. ಈ ವೇಳೆ ಹಲವು ಡ್ರೋನ್‍ಗಳನ್ನು ಹೊಡೆದು ಉರುಳಿಸುವ ಮೂಲಕ ಭಾರತದ ಸೇನಾಪಡೆಗಳು ಪಾಕಿಸ್ತಾನಕ್ಕೆ ತಿರುಗೇಟು ನೀಡಿದ್ದವು.

  • ಏರ್ ಫೋರ್ಸ್ ನಿಂದ 100 ಹಾಸಿಗೆಯ ಕೋವಿಡ್ ಕೇರ್ ಸೆಂಟರ್

    ಏರ್ ಫೋರ್ಸ್ ನಿಂದ 100 ಹಾಸಿಗೆಯ ಕೋವಿಡ್ ಕೇರ್ ಸೆಂಟರ್

    – ಜಾಲಹಳ್ಳಿ ವಾಯುಪಡೆ ಕೇಂದ್ರದಲ್ಲಿ ಆಸ್ಪತ್ರೆ

    ಬೆಂಗಳೂರು: ಸಾರ್ವಜನಿಕರಿಗಾಗಿ ಏರ್ ಫೋರ್ಸ್ 100 ಹಾಸಿಗೆ ಕೋವಿಡ್ ಕೇರ್ ಸೆಂಟರ್ ನಿರ್ಮಿಸಲು ನಿರ್ಧರಿಸಿದೆ.

    ಬೆಂಗಳೂರಿನ ಜಾಲಹಳ್ಳಿಯ ವಾಯುಪಡೆ ಕೇಂದ್ರದಲ್ಲಿ ಆಸ್ಪತ್ರೆ ನಿರ್ಮಿಸಲಾಗುತ್ತಿದು, ಮೇ 6ರಿಂದ ಆಕ್ಸಿಜನ್ ಸಹಿತ 20 ಬೆಡ್‍ಗಳು ಕಾರ್ಯರಂಭ ಆಗಲಿದೆ. ನಂತರ ಮೇ 20ರ ವೇಳಗೆ ಇನ್ನುಳಿದ 80 ಬೆಡ್ ಗಳನ್ನ ಸಿದ್ಧಪಡಿಸಲಾಗುವುದು ಎಂದು ವಾಯುಪಡೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

    ರಾಜ್ಯದಲ್ಲಿ ಕೊರೊನಾ ಸ್ಫೋಟವಾಗತ್ತಿದ್ದು, ಆಕ್ಸಿಜನ್, ಬೆಡ್ ಕೊರತೆಯಿಂದಾಗಿ ಸೋಂಕಿತರು ಆಸ್ಪತ್ರೆಗಳ ಹುಡುಕಾಟದಲ್ಲಿದ್ದಾರೆ. ಬೆಂಗಳೂರಿನಲ್ಲಿಯೂ ಆಕ್ಸಿಜನ್ ಕೊರತೆಯಿಂದ ಸೋಂಕಿತರು ಸಾವನ್ನಪ್ಪುತ್ತಿದ್ದಾರೆ. ಬೆಂಗಳೂರಿನಲ್ಲಿ ಹೆಲ್ತ್ ಎಮೆರ್ಜೆನ್ಸಿಯನ್ನ ಮನಗಂಡ ಏರ್‍ಫೋರ್ಸ್ ಸಾರ್ವಜನಿಕರ ಸಹಾಯಕ್ಕೆ ಮುಂದಾಗಿದೆ.

     

     

  • ನವೆಂಬರಿನಲ್ಲಿ 4 ಯುದ್ಧ ವಿಮಾನ ಸೇರ್ಪಡೆ – ವಾಯುಸೇನೆಯಲ್ಲಿ ಹೆಚ್ಚಲಿದೆ ರಫೇಲ್ ಬಲ

    ನವೆಂಬರಿನಲ್ಲಿ 4 ಯುದ್ಧ ವಿಮಾನ ಸೇರ್ಪಡೆ – ವಾಯುಸೇನೆಯಲ್ಲಿ ಹೆಚ್ಚಲಿದೆ ರಫೇಲ್ ಬಲ

    ನವದೆಹಲಿ: ಭಾರತ ಮತ್ತು ಚೀನಾ ನಡುವೆ ಪೂರ್ವ ಲಡಾಕ್ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿರುವ ಹೊತ್ತಲ್ಲಿ ಭಾರತೀಯ ವಾಯು ಸೇನೆಗೆ ಮತ್ತಷ್ಟು ಬಲ ಬರುವ ಲಕ್ಷಣಗಳು ಗೋಚರಿಸುತ್ತಿದೆ.

    ನವೆಂಬರ್ ಮೊದಲ ವಾರದಲ್ಲಿ ಎರಡನೇ ಹಂತದಲ್ಲಿ ಭಾರತಕ್ಕೆ 3-4 ರಫೇಲ್ ಯುದ್ಧ ವಿಮಾನಗಳು ಬರುವ ಸಾಧ್ಯತೆಗಳಿದೆ. ಮೊದಲ ಹಂತದಲ್ಲಿ ಐದು ವಿಮಾನಗಳು ಭಾರತೀಯ ವಾಯು ಸೇನೆ ಸೇರಿದ್ದು, ಎರಡನೇ ಹಂತದಲ್ಲಿ 3-4 ವಿಮಾನಗಳು ಹರಿಯಾಣದ ಅಂಬಾಲ ವಾಯು ನೆಲೆಗೆ ಬಂದಿಳಿಯಲಿದೆ.

    ಎರಡನೇ ಹಂತದಲ್ಲಿ ನಾಲ್ಕು ರಫೇಲ್ ಯುದ್ಧ ವಿಮಾನಗಳನ್ನು ಸೇರ್ಪಡೆ ಹಿನ್ನೆಲೆ ಭಾರತದ ಅಧಿಕಾರಿಗಳ ತಂಡ ಫ್ರಾನ್ಸ್ ಗೆ ತೆರಳಿದೆ. ಅಲ್ಲಿ ಸೇಂಟ್-ಡಿಜಿಯರ್ ವಾಯುನೆಲೆಯ ತರಬೇತಿ ಕೇಂದ್ರಕ್ಕೆ ಭೇಟಿ ನೀಡಲಿದ್ದು, ಯುದ್ಧ ವಿಮಾನಗಳ ತಯಾರಿ ಪರಿಶೀಲನೆ ಮಾಡಲಿದೆ.

    ಕಳೆದ ಜುಲೈ 28ರಂದು ಐದು ರಫೇಲ್ ಯುದ್ಧ ವಿಮಾನಗಳು ಭಾರತಕ್ಕೆ ಮೊದಲ ಹಂತದಲ್ಲಿ ಬಂದಿಳಿದ್ದವು ತರಬೇತಿ ಬಳಿಕ ಸೆಪ್ಟೆಂಬರ್ 10ರಂದು ವಾಯುಸೇನೆಗೆ ಅಧಿಕೃತವಾಗಿ ಸೇರ್ಪಡೆ ಮಾಡಲಾಗಿತ್ತು. 2023ರ ವೇಳೆಗೆ ಒಪ್ಪಂದದಂತೆ ಎಲ್ಲಾ 36 ರಫೇಲ್ ವಿಮಾನಗಳು ಭಾರತದಲ್ಲಿರಲಿವೆ.

  • ಪ್ರಧಾನಿ, ರಾಷ್ಟ್ರಪತಿ ಹಾರಾಟಕ್ಕೆ ಬಂದಿಳಿದ ವಿಶೇಷ ಏರ್ ಇಂಡಿಯಾ ಒನ್ ವಿಮಾನ- ವಿಡಿಯೋ

    ಪ್ರಧಾನಿ, ರಾಷ್ಟ್ರಪತಿ ಹಾರಾಟಕ್ಕೆ ಬಂದಿಳಿದ ವಿಶೇಷ ಏರ್ ಇಂಡಿಯಾ ಒನ್ ವಿಮಾನ- ವಿಡಿಯೋ

    ನವದೆಹಲಿ: ದೇಶದ ರಾಷ್ಟ್ರಪತಿ, ಉಪ ರಾಷ್ಟ್ರಪತಿ ಹಾಗೂ ಪ್ರಧಾನಿಗಳ ಪ್ರವಾಸಕ್ಕಾಗಿ ವಿಶೇಷವಾಗಿ ತಯಾರಿಸಲ್ಪಟ್ಟ ಏರ್ ಇಂಡಿಯಾ ಒನ್ ವಿಮಾನ ಇಂದು ಭಾರತ ತಲುಪಿದೆ.

    ಅಮೆರಿಕಾದಿಂದ ದೆಹಲಿಯ ಏರ್ ಪೋರ್ಟ್‍ಗೆ ಏರ್ ಇಂಡಿಯಾ ಒನ್ ಬಂದಿಳಿಯಿತು. ಆಗಸ್ಟ್ ನಲ್ಲಿಯೇ ಈ ವಿಮಾನ ಭಾರತಕ್ಕೆ ಹಸ್ತಾಂತರ ಆಗಬೇಕಿತ್ತು. ಆದರೆ ತಾಂತ್ರಿಕ ಕಾರಣಗಳಿಂದಾಗಿ ಇದೀಗ ಏರ್ ಇಂಡಿಯಾ ಒನ್ ದೆಹಲಿ ತಲುಪಿದೆ.

    ಅಮೆರಿಕಾ ಅಧ್ಯಕ್ಷರು ಬಳಸುವ ಏರ್ ಫೋರ್ಸ್ ಒನ್ ಮಾದರಿಯಲ್ಲಿಯೇ ಎರಡು ಬೋಯಿಂಗ್-777 ವಿಮಾನಗಳನ್ನು ಏರ್ ಇಂಡಿಯಾ ಒನ್ ಹೆಸರಲ್ಲಿ ತಯಾರಿಸಲು ಆರ್ಡರ್ ನೀಡಲಾಗಿತ್ತು. ಸದ್ಯ ರಾಷ್ಟ್ರಪತಿ, ಉಪರಾಷ್ಟ್ರಪತಿ, ಪ್ರಧಾನಿ ಪ್ರಧಾನಿ ಪ್ರವಾಸಕ್ಕೆ ಬೋಯಿಂಗ್-747 ವಿಮಾನವನ್ನು ಬಳಸಲಾಗುತ್ತಿದೆ. ಮತ್ತೊಂದು ಬೋಯಿಂಗ್-777 ಏರ್ ಇಂಡಿಯಾ ಒನ್ ವಿಮಾನ ಮುಂದಿನ ದಿನಗಳಲ್ಲಿ ಭಾರತಕ್ಕೆ ಹಸ್ತಾಂತರ ಆಗಲಿದೆ.

    ಏರ್ ಇಂಡಿಯಾ ಒನ್ ವಿಶೇಷತೆ:
    ಅತ್ಯಾಧುನಿಕ ಕ್ಷಿಪಣಿ ರಕ್ಷಣಾ ವ್ಯವಸ್ಥೆಯನ್ನು ವಿಮಾನ ಹೊಂದಿದ್ದು, 1,300 ಕೋಟಿ ರೂ. ಮೌಲ್ಯದ ಅಲ್ಟ್ರಾ ಸೂಪರ್ ವಿಮಾನ ಇದಾಗಿದೆ. ವಿವಿಐಪಿಗಳಿಗೆ ದೊಡ್ಡ ಕ್ಯಾಬಿನ್, ಮಿನಿ ಮೆಡಿಕಲ್ ಸೆಂಟರ್ ಸೇರಿದಂತೆ ನಿರಂತರವಾಗಿ 17 ಗಂಟೆ ಕಾಲ ಹಾರುವ ಸಾಮಥ್ರ್ಯವನ್ನು ಹೊಂದಿದೆ. ಬಹುತೇಕ ಬ್ಯುಸಿನೆಸ್ ಕ್ಲಾಸ್ ಸೀಟ್ ಅಳವಡಿಕೆ ಮಾಡಲಾಗಿದ್ದ, ವಾಯುಸೇನೆ ಪೈಲಟ್‍ಗಳಿಂದ ಮಾತ್ರ ಚಾಲನೆ ಮಾಡಲಾಗುತ್ತದೆ. ಈ ವಿಮಾನ ಅತ್ಯಾಧುನಿಕ ಸಂವಹನ ವ್ಯವಸ್ಥೆಯನ್ನು ಹೊಂದಿದ್ದು, ಹ್ಯಾಕ್ ಮಾಡದೆ ಮಧ್ಯ ಗಾಳಿಯಲ್ಲಿ ಆಡಿಯೋ ಮತ್ತು ವಿಡಿಯೋ ಸಂವಹನ ಕಾರ್ಯವನ್ನು ಮಾಡುವ ಸಾಮರ್ಥ್ಯವನ್ನು ಹೊಂದಿದೆ.

  • ಲಡಾಖ್ ಗಡಿಯಲ್ಲಿ ಫೈಟರ್‌ ಜೆಟ್‌ ರಫೇಲ್‌ ನಿಯೋಜಿಸಲು ಚಿಂತನೆ

    ಲಡಾಖ್ ಗಡಿಯಲ್ಲಿ ಫೈಟರ್‌ ಜೆಟ್‌ ರಫೇಲ್‌ ನಿಯೋಜಿಸಲು ಚಿಂತನೆ

    ನವದೆಹಲಿ: ಗಲ್ವಾನ್‌ ಘರ್ಷಣೆಯ ಬಳಿಕ ಲಡಾಖ್‌ ಗಡಿಯಲ್ಲಿ ಭಾರತೀಯ ವಾಯುಸೇನೆಯ ಯುದ್ಧ ವಿಮಾನಗಳು, ಹೆಲಿಕಾಪ್ಟರ್‌ಗಳು ಈಗಾಗಲೇ ಹಾರಾಟ ನಡೆಸುತ್ತಿವೆ. ಈಗ ಇವುಗಳ ಜೊತೆ ರಫೇಲ್‌ ಯುದ್ಧ ವಿಮಾನಗಳನ್ನು ನಿಯೋಜಿಸಲು ವಾಯುಸೇನೆ ಚಿಂತನೆ ನಡೆಸಿದೆ.

    ಭಾರತ ಚೀನಾ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣ ಹಿನ್ನೆಲೆಯಲ್ಲಿ ವಾಯು ಸೇನೆ ಮುಖ್ಯಸ್ಥ ಆರ್.ಕೆ.ಎಸ್ ಭದೌರಿಯಾ ನೇತೃತ್ವದ ಉನ್ನತ ವಾಯುಪಡೆಯ ಕಮಾಂಡರ್ ಗಳ ತಂಡ ಎರಡು ದಿನಗಳ ಕಾಲ ಲಡಾಕ್‍ಗೆ ಭೇಟಿ ನೀಡಲಿದೆ.

    ಭೂ ಸೇನಾ ಮುಖ್ಯಸ್ಥ ಎಂ.ಎಂ ನರವಾಣೆ ಭೇಟಿ ಬಳಿಕ ವಾಯು ಸೇನೆ ತಂಡ ಭೇಟಿ ನೀಡುತ್ತಿದ್ದು, ಲಡಾಕ್‍ನಲ್ಲಿರುವ ಚೀನಾ ಭಾರತದ ವಾಸ್ತವ ನಿಯಂತ್ರಣ ರೇಖೆ(ಎಲ್‌ಎಸಿ) ಪ್ರದೇಶ ಹಾಗೂ ಆ ಭಾಗದಲ್ಲಿ ನಡೆಯುತ್ತಿರುವ ಮೂಲ ಸೌಕರ್ಯಗಳ ಅಭಿವೃದ್ಧಿ ಪರಿಸ್ಥಿತಿಯ ಪರಿಶೀಲನೆ ನಡೆಸಲಿದೆ.

    ಎರಡು ದಿನದ ಭೇಟಿಯಲ್ಲಿ ಈ ಪ್ರದೇಶದಲ್ಲಿ ವಾಯುಪಡೆ ಅವಳಿ-ಎಂಜಿನ್ ಫೈಟರ್ ಜೆಟ್ ಹಾಗೂ ಜುಲೈ ಅಂತ್ಯದ ವೇಳೆಗೆ ಭಾರತಕ್ಕೆ ಬರಲಿರುವ ರಫೇಲ್ ಫೈಟರ್ ಜೆಟ್‍ಗಳು ನಿಯೋಜಿಸುವ ಬಗ್ಗೆ ಮುಖ್ಯವಾಗಿ ಚರ್ಚೆಯಾಗಲಿದೆ. ಸುಖೋಯ್-30 ಎಂಕೆಐ ಮತ್ತು ಮಿರಾಜ್-2000 ಸೇರಿದಂತೆ ಇತರ ಫೈಟರ್ ಜೆಟ್‍ಗಳ ಸಮನ್ವಯದೊಂದಿಗೆ ಉತ್ತರದ ಗಡಿಗಳಲ್ಲಿ ರಫೇಲ್ ಫೈಟರ್ ಜೆಟ್‍ಗಳನ್ನು ಶೀಘ್ರವಾಗಿ ನಿಯೋಜಿಸುವ ಬಗ್ಗೆ ವಾಯುಪಡೆ ಗಮನ ಹರಿಸಿದ್ದು, ಈ ಬಗ್ಗೆ ಯೋಜನೆಗಳನ್ನು ರೂಪಿಸಲಿದೆ.

    ಪೂರ್ವ ಲಡಾಕ್‍ನಿಂದ ಅರುಣಾಚಲ ಪ್ರದೇಶದವರೆಗಿನ ಗಡಿ ಪ್ರದೇಶ, ಎಲ್‍ಎಸಿ ಉದ್ದಕ್ಕೂ ವಾಯುಪಡೆಯು ತನ್ನ ಫೈಟರ್ ಜೆಟ್‍ಗಳನ್ನು ಸಕ್ರಿಯವಾಗಿ ನಿಯೋಜಿಸಲು ತೀರ್ಮಾನಿಸಿದೆ. ಐಎಎಫ್‍ನ ಹಿರಿಯ ಅಧಿಕಾರಿಗಳು ಎರಡು ದಿನದ ಭೇಟಿಯಲ್ಲಿ ಚೀನಾದ ಮಿಲಿಟರಿ ರಚನೆಯನ್ನು ಆಧರಿಸಿ ಭಾರತದ ಪ್ರತಿರೋಧದ ಶಕ್ತಿಯನ್ನು ನಿಯೋಜಿಸಲಿದ್ದಾರೆ.

    ಜೂನ್ 2ರಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್, ಫ್ರೆಂಚ್ ರಕ್ಷಣಾ ಸಚಿವ ಫ್ಲಾರೆನ್ಸ್ ಪಾರ್ಲೆ ಜೊತೆ ದೂರವಾಣಿ ಸಂಭಾಷಣೆ ನಡೆಸಿದ್ದರು. ಈ ವೇಳೆ ಫ್ರಾನ್ಸ್‌ನಲ್ಲಿ ಕೋವಿಡ್‌ 19 ಇದ್ದರೂ ನಿಗದಿಯಂತೆ ಜುಲೈ 27ರ ಒಳಗಡೆ ಭಾರತಕ್ಕೆ ಯುದ್ಧ ವಿಮಾನಗಳನ್ನು ತಲುಪಿಸಲಾಗುವುದು ಎಂದು ಅವರು ತಿಳಿಸಿದ್ದಾರೆ ಎಂದು ವರದಿಯಾಗಿತ್ತು.

    58 ಸಾವಿರ ಕೋಟಿ ರೂ.ವೆಚ್ಚದಲ್ಲಿ 36 ರಫೇಲ್ ಯುದ್ಧ ವಿಮಾನಗಳನ್ನು ಖರೀದಿಸಲು ಭಾರತ 2016 ರ ಸೆಪ್ಟೆಂಬರ್‌ನಲ್ಲಿ ಫ್ರಾನ್ಸ್‌ ಜೊತೆ ಒಪ್ಪಂದಕ್ಕೆ ಸಹಿ ಹಾಕಿತ್ತು. ಐಎಎಫ್‌ನ ಅತ್ಯಂತ ಪ್ರಮುಖ ನೆಲೆಗಳಲ್ಲಿ ಒಂದಾಗಿರುವ ಹರ್ಯಾಣದ ಅಂಬಾಲ ವಾಯನೆಲೆಯಲ್ಲಿ ಮೊದಲ ಸ್ಕ್ವಾಡ್ರನ್ಅನ್ನು ಇರಿಸಲಾಗಿತ್ತದೆ.