Tag: air force

  • ಪಾಕ್ ಗಡಿ ಬಳಿಯೇ ವಾಯುಪಡೆ ಶಕ್ತಿ ಪ್ರದರ್ಶನ – ಎಚ್ಚರಿಕೆ ಸಂದೇಶ ರವಾನಿಸಿದ ಭಾರತ – ವಿಡಿಯೋ ನೋಡಿ

    ಪಾಕ್ ಗಡಿ ಬಳಿಯೇ ವಾಯುಪಡೆ ಶಕ್ತಿ ಪ್ರದರ್ಶನ – ಎಚ್ಚರಿಕೆ ಸಂದೇಶ ರವಾನಿಸಿದ ಭಾರತ – ವಿಡಿಯೋ ನೋಡಿ

    ಪೋಖ್ರಾನ್: ಪುಲ್ವಾಮಾದಲ್ಲಿ ಭಯೋತ್ಪಾದಕ ದಾಳಿಯ ಬೆನ್ನಲ್ಲೇ ಇತ್ತ ಪಾಕಿಸ್ತಾನ ಗಡಿಯಲ್ಲಿ ಭಾರತೀಯ ವಾಯಸೇನೆ ತನ್ನ ಶಕ್ತಿ ಪ್ರದರ್ಶನ ಮಾಡಿದೆ.

    ಅಣ್ವಸ್ತ್ರ ಪರೀಕ್ಷಾರ್ಥ ಪ್ರಯೋಗ ನಡೆದಿದ್ದ ರಾಜಸ್ಥಾನ ರಾಜ್ಯದ ಪೋಖ್ರಾನ್ ಮರುಭೂಮಿಯಲ್ಲಿ ಯುದ್ಧ ವಿಮಾನಗಳು ಅಬ್ಬರಿಸಿವೆ. ನಿರ್ದೇಶಿತ ಕ್ಷಿಪಣಿ ಪ್ರಯೋಗ ಮೂಲಕ ಆರ್ಭಟಿಸಿದ್ದು, ಈ ಮೂಲಕ ವೈರಿ ಪಾಕಿಸ್ತಾನಕ್ಕೆ ಭಾರತ ಪರೋಕ್ಷವಾಗಿ ಎಚ್ಚರಿಕೆ ಸಂದೇಶ ರವಾನಿಸಿದೆ.

    ಪಾಕಿಸ್ತಾನದ ಗಡಿಯಲ್ಲೇ ನಡೆದ ಪ್ರದರ್ಶನದಲ್ಲಿ ವಾಯುಸೇನೆಯ ಯುದ್ಧ ವಿಮಾನಗಳು, ಹೆಲಿಕಾಪ್ಟರ್ ಗಳು ಭಾಗವಹಿಸಿದ್ದವು. ಪ್ರಮುಖವಾಗಿ ತೇಜಸ್, ಹಾಂಕ್ ಎಂಕೆ-132, ನೆಲದಿಂದ ಆಕಾಶಕ್ಕೆ ಮತ್ತು ಆಗಸದಿಂದ ಆಗಸಕ್ಕೆ ಚಿಮ್ಮುವ ಕ್ಷಿಪಣಿಯನ್ನು ಪ್ರಯೋಗಿಸಲಾಯಿತು. ಈ ವೇಳೆ ಸೇನಾ ಮುಖ್ಯಸ್ಥ ಬಿಪಿನ್ ರಾವತ್, ಸೇನಾ ಅಧಿಕಾರಿಗಳು ಹಾಗೂ ಐಎಎಫ್ ಗೌರವಾನ್ವಿತ ಸಮೂಹ ಕ್ಯಾಪ್ಟನ್, ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಸಚಿನ್ ಭಾಗವಹಿಸಿದ್ದರು. ಈ ಪ್ರದರ್ಶನದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರಶಂಸೆ ವ್ಯಕ್ತವಾಗಿದೆ.

    ಇತ್ತ ಪುಲ್ವಾಮಾ ದಾಳಿ ವಿಚಾರದಲ್ಲಿ ಇಡೀ ದೇಶ ಒಂದಾಗಿದೆ. ಈ ವಿಚಾರದಲ್ಲಿ ಎಲ್ಲಾ ರಾಜಕೀಯ ಪಕ್ಷಗಳು ಒಂದೇ ಧ್ವನಿ ಹೊರಡಿಸಿವೆ. ಇಂದು ದೆಹಲಿಯಲ್ಲಿ ನಡೆದ ಸರ್ವ ಪಕ್ಷ ಸಭೆಯಲ್ಲಿ ಭಯೋತ್ಪಾದಕ ದಾಳಿಯನ್ನು ಸರ್ವಾನುಮತದಿಂದ ಖಂಡಿಸಿವೆ. ಭಯೋತ್ಪಾದನೆ ದಮನಕ್ಕಾಗಿ ಸರ್ಕಾರ ಕೈಗೊಳ್ಳುವ ನಿರ್ಧಾರಗಳಿಗೆ ಬೆಂಬಲ ಘೋಷಿಸಿವೆ. ಹುತಾತ್ಮರ ಕುಟುಂಬಗಳ ದು:ಖದಲ್ಲಿ ಭಾಗಿಯಾಗುವುದಾಗಿ ತಿಳಿಸಿವೆ.

    ಸರ್ವಪಕ್ಷ ಸಭೆ ಬಳಿಕ ಮಾತನಾಡಿದ ಗೃಹ ಸಚಿವ ರಾಜನಾಥ್ ಸಿಂಗ್, ಈ ದುರ್ಘಟನೆಗೆ ಕಾರಣರಾದವರೂ ಯಾರೇ ಆಗಿರಲಿ, ಅವರನ್ನು ಪತ್ತೆಹಚ್ಚಿ ಕಾನೂನು ಕ್ರಮ ಕೈಗೊಳ್ಳಲು ಎಲ್ಲ ಪಕ್ಷಗಳೂ ಒಮ್ಮತ ತೀರ್ಮಾನಕ್ಕೆ ಬಂದಿವೆ ಎಂದು ತಿಳಿಸಿದರು. ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ಮಾತನಾಡಿ, ಸರ್ಕಾರದ ಜೊತೆ ಭಿನ್ನಾಭಿಪ್ರಾಯ ಇರಬಹುದು. ಆದರೆ ದೇಶದ ಹಿತಾಸಕ್ತಿ, ಭದ್ರತೆ ವಿಚಾರದಲ್ಲಿ ಸರ್ಕಾರದ ಜೊತೆ ನಿಲ್ಲುತ್ತೇವೆ, ಸರ್ಕಾರಕ್ಕೆ ನಮ್ಮ ಬೆಂಬಲವಿದೆ ಎಂದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಗಣಿ ದುರಂತ: ಬರೋಬ್ಬರಿ 1 ತಿಂಗ್ಳ ಬಳಿಕ ಕಾರ್ಮಿಕನ ಮೃತ ದೇಹ ಪತ್ತೆ – ವಿಡಿಯೋ

    ಗಣಿ ದುರಂತ: ಬರೋಬ್ಬರಿ 1 ತಿಂಗ್ಳ ಬಳಿಕ ಕಾರ್ಮಿಕನ ಮೃತ ದೇಹ ಪತ್ತೆ – ವಿಡಿಯೋ

    ಶಿಲ್ಲಾಂಗ್: ಇಲ್ಲಿನ ಅಕ್ರಮ ಗಣಿಗಾರಿಕೆಯಲ್ಲಿ ಸಿಲುಕಿದ್ದ ಕಾರ್ಮಿಕರ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, ಘಟನೆ ನಡೆದ 1 ತಿಂಗಳ ಬಳಿಕ ಭಾರತೀಯ ನೌಕಾದಳದ ಚಾಲಕರು ಒಬ್ಬ ಕಾರ್ಮಿಕನ ಮೃತ ದೇಹವನ್ನು ಪತ್ತೆ ಮಾಡಿದ್ದಾರೆ.

    ಕಾರ್ಮಿಕರ ಪತ್ತೆಗಾಗಿ ನೀರಿನಲ್ಲಿ ವಸ್ತುಗಳನ್ನು ಗುರುತಿಸಲು ಬಳಸುವ ವಿಶೇಷ ವಿನ್ಯಾಸದ ಯುಡಬ್ಲ್ಯುಆರ್‍ಒವಿ ಯಂತ್ರದ ಸಹಾಯದ ಪಡೆಯಲಾಗಿದೆ. ಈ ವೇಳೆ ಸುಮಾರು 210 ಮೀಟರ್ ಆಳದಲ್ಲಿ ಮೃತದೇಹ ಪತ್ತೆಯಾಗಿದ್ದು, ಕಾರ್ಮಿಕನ ಮೃತದೇಹವನ್ನು ಹೊರ ತೆಗೆಯಲಾಗಿದೆ ಎಂದು ಎನ್‍ಡಿಆರ್ ಎಫ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

    ಏನಿದು ದುರಂತ?
    ಮೇಘಾಲಯದ ಜೈಂತಿಯಾ ಹಿಲ್ಸ್ ಪ್ರದೇಶದಲ್ಲಿ ಅಕ್ರಮವಾಗಿ ಗಣಿಗಾರಿಕೆ ನಡೆಸುತ್ತಿದ್ದಾಗ ಡಿ.13 ರಂದು ದುರಂತ ಸಂಭವಿಸಿತ್ತು. ಘಟನೆಯಲ್ಲಿ 15 ಕಾರ್ಮಿಕರು ಗಣಿಯಲ್ಲಿ ಸಿಲುಕಿದ್ದರು. ಇವರ ರಕ್ಷಣೆಗಾಗಿ ಭಾರತೀಯ ವಾಯುಪಡೆ ಹಾಗೂ ಎನ್‍ಡಿಆರ್‍ಎಫ್ ಸಿಬ್ಬಂದಿ ಒಟ್ಟಿಗೆ ಕಾರ್ಯಾಚರಣೆ ನಡೆಸುತ್ತಿದೆ.

    ಗಣಿಗಾರಿಕೆ 20 ಮಂದಿ ಕಾರ್ಮಿಕರನ್ನ ಬಳಕೆ ಮಾಡಿಕೊಳ್ಳಲಾಗಿತ್ತು. ಆದರೆ ಗಣಿಗಾರಿಕೆ ನಡೆಯುತ್ತಿದ್ದ ಸಮೀಪದಲ್ಲಿ ನದಿ ಇದ್ದ ಕಾರಣ, ನದಿಯ ನೀರು ಗಣಿಯ ಒಳಗೆ ನುಗ್ಗಿತ್ತು. ಈ ವೇಳೆ 5 ಮಂದಿ ಗಣಿಯಿಂದ ಹೊರ ಬರಲು ಸಾಧ್ಯವಾದರೆ, 15 ಮಂದಿ ಒಳಗೆ ಸಿಲುಕಿದ್ದರು. ಸದ್ಯ ಕಾರ್ಮಿಕನ ಮೃತದೇಹ 200 ಮೀಟರ್ ಅಳದಲ್ಲಿ ಪತ್ತೆಯಾಗಿದೆ. ಉಳಿದ 14 ಮಂದಿಯ ಮೃತದೇಹಗಳ ಪತ್ತೆಗಾಗಿ ಕಾರ್ಯಾಚರಣೆ ಮುಂದುವರಿಸಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಪ್ರಧಾನಿ ಮೋದಿಗೆ ಅತಿ ದೊಡ್ಡ ಗೆಲುವು: ಸುಪ್ರೀಂ ತೀರ್ಪಿನಲ್ಲಿರುವ ಪ್ರಮುಖ ಅಂಶಗಳು ಏನು?

    ಪ್ರಧಾನಿ ಮೋದಿಗೆ ಅತಿ ದೊಡ್ಡ ಗೆಲುವು: ಸುಪ್ರೀಂ ತೀರ್ಪಿನಲ್ಲಿರುವ ಪ್ರಮುಖ ಅಂಶಗಳು ಏನು?

    ನವದೆಹಲಿ: ಪಂಚರಾಜ್ಯಗಳ ಚುನಾವಣೆಯಲ್ಲಿ ಸೋತಿದ್ದ ಪ್ರಧಾನಿ ನರೇಂದ್ರ ಮೋದಿಗೆ ಲೋಕಸಭಾ ಚುನಾವಣೆಗೂ ಮುನ್ನ ಅತಿ ದೊಡ್ಡ ಗೆಲುವಿನ ರೂಪದಲ್ಲಿ ರಫೇಲ್ ತೀರ್ಪು ಪ್ರಕಟವಾಗಿದೆ. ಜೆಟ್ ಖರೀದಿ ಸಂಬಂಧ ಯಾವುದೇ ತನಿಖೆಗೆ ಆದೇಶ ನೀಡುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ಆದೇಶವನ್ನು ಪ್ರಕಟಿಸಿದೆ.

    ರಫೇಲ್ ಯುದ್ದ ವಿಮಾನ ಖರೀದಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ ವಕೀಲ ಎಂ.ಎಲ್ ಶರ್ಮಾ, ವಿನೀತಾ ದಾಂಡ, ಆಪ್ ನಾಯಕ ಸಂಜಯ್ ಸಿಂಗ್ ಮಾಜಿ ಕೇಂದ್ರ ಸಚಿವ ಯಶವಂತ ಸಿನ್ಹಾ, ಅರುಣ್ ಶೌರಿ ಹಾಗೂ ಹಿರಿಯ ವಕೀಲ ಪ್ರಶಾಂತ್ ಭೂಷಣ್ ಅರ್ಜಿ ಸಲ್ಲಿಸಿದ್ದರು. ರಫೇಲ್ ಒಪ್ಪಂದವನ್ನು ರದ್ದುಗೊಳಿಸಿ ಸುಪ್ರೀಂಕೋರ್ಟ್ ಮೇಲುಸ್ತುವಾರಿಯಲ್ಲಿ ಸಿಬಿಐ ತನಿಖೆ ನಡೆಸಬೇಕು ಎಂದು ವಕೀಲರು ಆಗ್ರಹಿಸಿದ್ದರು. ಈ ಅರ್ಜಿಗಳನ್ನು ಒಟ್ಟಾಗಿಸಿದ್ದ ಮುಖ್ಯ.ನ್ಯಾ ರಂಜನ್ ಗೋಗಯ್ ನೇತೃತ್ವದ ನ್ಯಾ. ಎಸ್‍ಕೆ ಕೌಲ್, ನ್ಯಾ. ಕೆಎಂ ಜೋಸೆಫ್ ಅವರಿದ್ದ ತ್ರಿಸದಸ್ಯ ಪೀಠ ಸುದೀರ್ಘ ವಿಚಾರಣೆ ನಡೆಸಿತ್ತು. ನವೆಂಬರ್ 14 ರಂದು ವಿಚಾರಣೆ ಅಂತ್ಯಗೊಳಿಸಿದ್ದ ಸುಪ್ರೀಂಕೋರ್ಟ್ ಇಂದು ತೀರ್ಪು ಪ್ರಕಟಿಸಿ ಎಲ್ಲ ಅರ್ಜಿಗಳನ್ನು ವಜಾಗೊಳಿಸಿದೆ. ಇದನ್ನೂ ಓದಿ: ರಫೇಲ್ ಡೀಲ್ : ಮೋದಿಗೆ ಬಿಗ್ ರಿಲೀಫ್, ಕೈಗೆ ಮುಖಭಂಗ

    ರಫೇಲ್ ಖರೀದಿ ವ್ಯವಹಾರಗಳನ್ನು ನಿಯಮದಡಿಯಲ್ಲಿಯೇ ಮಾಡಲಾಗಿದೆ. ಯುದ್ಧ ವಿಮಾನ ಖರೀದಿಯಲ್ಲಿ ಯಾವುದೇ ರೀತಿಯ ಅವ್ಯವಹಾರ ಕಂಡುಬಂದಿಲ್ಲ. ಈ ಕಾರಣಕ್ಕೆ ತನಿಖೆ ನಡೆಸಲು ಆದೇಶ ನೀಡುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಆದೇಶದಲ್ಲಿ ತಿಳಿಸಿದೆ. ಇದನ್ನೂ ಓದಿ:ಎಚ್‍ಎಎಲ್ ಜೊತೆ ರಫೇಲ್ ಯೋಜನೆ ಕೈಬಿಟ್ಟಿದ್ದೇಕೆ: ಸ್ಪಷ್ಟನೆ ನೀಡಿದ ರಕ್ಷಣಾ ಸಚಿವೆ

    ಸುಪ್ರೀಂ ತೀರ್ಪಿನಲ್ಲಿ ಏನಿದೆ?
    – ರಫೇಲ್ ಖರೀದಿ ಒಪ್ಪಂದದಲ್ಲಿ ಸಂದೇಹ ಪಡುವ ಅಗತ್ಯವಿಲ್ಲ. ಖರೀದಿಯಲ್ಲಿ ಅವ್ಯವಹಾರ ನಡೆದಿದೆ ಎನ್ನುವುದಕ್ಕೆ ಯಾವುದಕ್ಕೆ ಸಾಕ್ಷ್ಯಗಳು ಸಿಕ್ಕಿಲ್ಲ. ಗುಣಮಟ್ಟದ ವಿಮಾನ ಖರೀದಿ ವಿಚಾರಕ್ಕೆ ಸಂಬಂಧಿಸಿದಂತೆ ಎದ್ದಿರುವ ಖರೀದಿ ಒಪ್ಪಂದ ಬೆಲೆಯ ಪರಾಮರ್ಶೆ ಮಾಡುವುದು ಕೋರ್ಟ್ ಕೆಲಸವಲ್ಲ.

    – ದೇಶಕ್ಕೆ ನಾಲ್ಕು ಮತ್ತು ಐದನೇಯ ತಲೆಮಾರಿನ ಫೈಟರ್ ಜೆಟ್ ಭಾರತೀಯ ವಾಯುಸೇನೆಗೆ ನಿಯೋಜಿಸುವ ಅಗತ್ಯವಿದೆ. ಖರೀದಿ, ಬೆಲೆ ನಿರ್ಣಯ, ದೇಶಿ ಪಾಲುದಾರ ಆಯ್ಕೆ ವಿಚಾರದಲ್ಲಿ ಮಧ್ಯಪ್ರವೇಶಿಸುವ ಅಗತ್ಯ ಕಂಡು ಬರುವುದಿಲ್ಲ. ಒಪ್ಪಂದದಲ್ಲಿ ಭಾಗಿಯಾದ ಎಲ್ಲರೂ ಖರೀದಿ ಹೇಗೆ ನಡೆಯಿತು ಎನ್ನುವ ವಿಚಾರವನ್ನು ಸ್ಪಷ್ಟಪಡಿಸಿದ್ದಾರೆ. ತುಲಾತ್ಮಕ ಬೆಲೆ ವಿವರವನ್ನು ನೀಡಿ ವಿಮಾನಗಳನ್ನು ಖರೀದಿಸಿ ಎಂದು ಹೇಳುವುದು ಕೋರ್ಟ್ ಕೆಲಸವಲ್ಲ. ಇದನ್ನೂ ಓದಿ:ಒಂದೇ ಯುದ್ಧ ವಿಮಾನ ನಿರ್ಮಿಸದ ರಿಲಯನ್ಸ್ ಕಂಪನಿ ಜೊತೆ ಒಪ್ಪಂದ ಮಾಡಿದ್ದು ಯಾಕೆ: ಪ್ರಶ್ನೆಗೆ ಡಸಾಲ್ಟ್ ಸಿಇಒ ಉತ್ತರ ನೀಡಿದ್ದು ಹೀಗೆ

    – ನಾವು ಕೇಳಿದ ಪ್ರಶ್ನೆಗಳಿಗೆ ಸಿಕ್ಕಿದ ಉತ್ತರಿಂದ ನಮ್ಮ ಸಂಶಯ ಪರಿಹಾರವಾಗಿದ್ದು ತೃಪ್ತಿಯಾಗಿದೆ. ರಕ್ಷಣೆಯಂತಹ ಸೂಕ್ಷ್ಮ ವಿಚಾರದಲ್ಲಿ ತನಿಖೆಗೆ ಆದೇಶ ನೀಡುವುದು ಸರಿಯಲ್ಲ. ದೇಶಿ ಪಾಲುದಾರನ ಆಯ್ಕೆ ಮಾಡುವುದು ಕಂಪನಿಗೆ ಬಿಟ್ಟ ವಿಚಾರ. ಈ ವಿಚಾರದಲ್ಲಿ ನಾವು ಮಧ್ಯಪ್ರವೇಶಿಸುವುದಿಲ್ಲ.

    – ರಫೇಲ್ ಖರೀದಿ ಒಪ್ಪಂದದಲ್ಲಿ ದೇಶಿಯ ಪಾಲುದಾರಿಕೆಯ ಆಯ್ಕೆ ವಿಚಾರದಲ್ಲಿ ವಾಣಿಜ್ಯ ಒಲವು ತೋರಿಸಲಾಗಿದೆ ಎನ್ನುವುದನ್ನು ಒಪ್ಪಲು ಸಾಧ್ಯವಿಲ್ಲ. ಫ್ರಾನ್ಸ್ ಮಾಜಿ ಅಧ್ಯಕ್ಷ ಹೊಲಾಂಡೆ ಅವರು ಮಾಧ್ಯಮಗಳಿಗೆ ನೀಡಿದ ಹೇಳಿಕೆಯಿಂದ ರಫೇಲ್ ಜೆಟ್ ಖರೀದಿ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಶ್ನೆ ಎದ್ದಿದ್ದು ಈ ವಿಚಾರವನ್ನು ನಾವು ನ್ಯಾಯಾಂಗದ ಪರಿಧಿ ವ್ಯಾಪ್ತಿಯಲ್ಲಿ ಪರಾಮರ್ಶೆ ಮಾಡುವುದಿಲ್ಲ.

    – 126 ಜೆಟ್ ಬದಲು 36 ಜೆಟ್ ಖರೀದಿ ಒಪ್ಪಂದ ಮಾಡಿಕೊಂಡಿರುವ ಭಾರತ ಸರ್ಕಾರದ ಈ ನಿರ್ಧಾರವನ್ನು ಬದಲಾಯಿಸಿ ಎಂದು ನಾವು ಹೇಳಲು ಸಾಧ್ಯವಿಲ್ಲ. 2016ರ ಸಪ್ಟೆಂಬರ್ ತಿಂಗಳಿನಲ್ಲಿ ಈ ಡೀಲ್ ನಡೆದಾಗ ಯಾರು ಪ್ರಶ್ನೆ ಕೇಳಿರಲಿಲ್ಲ.

    – 4 ಮತ್ತು 5ನೇ ತಲೆಮಾರಿನ ಯುದ್ಧ ವಿಮಾನಗಳನ್ನು ವಾಯುಸೇನೆಗೆ ಅಗತ್ಯವಾಗಿದ್ದು, ಈ ವಿಮಾನಗಳನ್ನು ಸೇರ್ಪಡೆಗೊಳಿಸುವಂತಹ ವಿಚಾರದಲ್ಲಿ ಜನರ ವೈಯಕ್ತಿಯ ಗ್ರಹಿಕೆಗಳಿಗಿಂತಲೂ ಸೇನೆಯ ಅಭಿಪ್ರಾಯಗಳನ್ನು ನ್ಯಾಯಾಂಗ ಹೆಚ್ಚು ಪರಾಮರ್ಶಿಸುತ್ತದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮೈಸೂರು ದಸರಾ: ಭಾನುವಾರ ನಡೆಯಲಿದೆ ಏರ್ ಶೋ

    ಮೈಸೂರು ದಸರಾ: ಭಾನುವಾರ ನಡೆಯಲಿದೆ ಏರ್ ಶೋ

    ಮೈಸೂರು: ನಾಡಹಬ್ಬ ದಸರಾ ಹಿನ್ನೆಲೆಯಲ್ಲಿ ಭಾನುವಾರ ನಡೆಯಲಿರುವ ಏರ್ ಶೋ ಕಾರ್ಯಕ್ರಮದ ನಿಮಿತ್ತ ವಾಯುಪಡೆಯ ಹೆಲಿಕಾಪ್ಟರ್ ಗಳು ಶನಿವಾರ ಬನ್ನಿಮಂಟಪದಲ್ಲಿ ತಾಲೀಮು ನಡೆಸಿದವು.

    ಈ ಬಾರಿ ಮೈಸೂರು ದಸರಾ ಮಹೋತ್ಸವ ಹಲವು ವಿಶೇಷತೆಗಳನ್ನು ಒಳಗೊಂಡಿದೆ. ಈ ಬಾರಿ ವಿಶೇಷವಾಗಿ ವಾಯುಸೇನಾ ಪಡೆಗಳು ಏರ್ ಶೋ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಇಂದು ಬನ್ನಿಮಂಟಪದಲ್ಲಿ ಇದರ ಪ್ರಾಯೋಗಿಕ ತಾಲೀಮನ್ನು ಕೈಗೊಂಡಿದ್ದವು. ಏರ್ ಫೋರ್ಸ್ ನ ವೀರಯೋಧರು ಅಗಸದಲ್ಲಿ ತ್ರಿವರ್ಣ ಧ್ವಜ ಮೂಡಿಸಿದ್ದರು. ಇದು ಪ್ರೇಕ್ಷಕರ ಗಮನವನ್ನು ಸೆಳೆದಿತ್ತು. ತಾಲೀಮಿನಲ್ಲೇ 5 ರಿಂದ 10 ಸಾವಿರಕ್ಕೂ ಹೆಚ್ಚು ಪ್ರವಾಸಿಗರು ಲೋಹದ ಹಕ್ಕಿಗಳ ಹಾರಾಟವನ್ನು ವೀಕ್ಷಣೆ ಮಾಡಿದ್ದಾರೆ.

    ಭಾನುವಾರ 11 ಗಂಟೆಗೆ ಬನ್ನಿಮಂಟಪದಲ್ಲಿ ಲೋಹದ ಹಕ್ಕಿಗಳು ಆರ್ಭಟಿಸಲಿದ್ದು, ಏರ್ ಫೋರ್ಸ್ ಎರಡು ಯುದ್ಧ ವಿಮಾನಗಳು ಸಹ ಏರ್‍ಶೋನಲ್ಲಿ ಭಾಗಿಯಾಗಲಿವೆ. ಏರ್ ಶೋ ವೇಳೆ 1,130 ಅಡಿ ಎತ್ತರದಿಂದ ಸ್ಕೈ ಡೈವಿಂಗ್ ಹಾಗೂ 1,130 ಅಡಿ ಎತ್ತರದಿಂದ ಹಗ್ಗದ ಮೂಲಕ ವಿಮಾನದಿಂದ ಸೈನಿಕರು ಇಳಿಯುವ ಪ್ರದರ್ಶನವೂ ಕೂಡ ಇರುತ್ತದೆ. ಇದರ ಜೊತೆ 1,105 ಅಡಿ ಎತ್ತರದಿಂದ ಚಾಮುಂಡೇಶ್ವರಿ ಪುಷ್ಪಾರ್ಚನೆಯನ್ನು ಸಲ್ಲಿಸಲಿವೆ. ಹೀಗಾಗಿ ಬನ್ನಿಮಂಟಪಕ್ಕೆ ಜನಸಾಗರವೇ ಹರಿದು ಬರವು ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ..

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಯಲಹಂಕ ವಾಯುನೆಲೆಯಲ್ಲಿ 2 ದಿನ ಮೊಕ್ಕಾಂ ಹಾಕಿದ್ದ ನಕಲಿ ಐಎಎಸ್ ಅಧಿಕಾರಿ ಅರೆಸ್ಟ್!

    ಯಲಹಂಕ ವಾಯುನೆಲೆಯಲ್ಲಿ 2 ದಿನ ಮೊಕ್ಕಾಂ ಹಾಕಿದ್ದ ನಕಲಿ ಐಎಎಸ್ ಅಧಿಕಾರಿ ಅರೆಸ್ಟ್!

    ಬೆಂಗಳೂರು: ಐಎಎಸ್ ಅಧಿಕಾರಿ ಎಂದು ನಕಲಿ ದಾಖಲೆ ಸೃಷ್ಟಿಸಿ ನಗರದ ಯಲಹಂಕ ವಾಯುನೆಲೆಯಲ್ಲಿ 2 ದಿನಗಳ ಕಾಲ ಮೊಕ್ಕಾಂ ಹೂಡಿದ್ದ ವ್ಯಕ್ತಿಯನ್ನ ಯಲಹಂಕ ಪೊಲೀಸರು ಬಂಧಿಸಿದ್ದಾರೆ.

    ಪೂರ್ಣಚಂದ್ರ ದಾಸ್ ಬಂಧಿತ ಆರೋಪಿಯಾಗಿದ್ದು, ಸೆಪ್ಟೆಂಬರ್ 25ರಂದು ಯಲಹಂಕ ವಾಯನೆಲೆಯ ಒಳಗೆ ಪತ್ನಿಯೊಂದಿಗೆ ಪ್ರವೇಶ ಪಡೆದಿದ್ದ. ತಾನು ದೆಹಲಿ ಮೂಲದ ಐಎಎಸ್ ಅಧಿಕಾರಿ ಎಂದು ಗುರುತಿನ ಚೀಟಿ ನೀಡಿದ್ದ. ಅಲ್ಲದೇ ತಾನು ಡೈರೆಕ್ಟರೇಟ್ ಪರ್ಸನಲ್ ಆಂಡ್ ಟ್ರೈನಿಂಗ್‍ನಲ್ಲಿ ಅಧಿಕಾರಿ ಎಂದು ಹೇಳಿದ್ದ. ಅಲ್ಲದೇ ಸೆ. 25 ರಿಂದ 26ರವರೆಗೆ ಮೆಸ್ ನಲ್ಲಿ ರೂಮ್ ನೀಡುವಂತೆ ಕೇಳಿದ್ದ. ಇದರ ಅನ್ವಯ ಆಫೀಸರ್ಸ್ ಮೆಸ್‍ನಲ್ಲಿ ರೂಮ್ ವ್ಯವಸ್ಥೆ ಮಾಡಲಾಗಿತ್ತು ಎಂಬ ಮಾಹಿತಿ ಲಭಿಸಿದೆ.

    ಸಿಕ್ಕಿ ಬಿದ್ದಿದ್ದು ಹೇಗೆ?
    ಐಎಎಸ್ ಅಧಿಕಾರಿ ಎಂದು ಹೇಳಿದ್ದ ಪೂರ್ಣಚಂದ್ರ ದಾಸ್ ನೀಡಿದ್ದ ಗುರುತಿನ ಚೀಟಿ ಹಾಗೂ ಸಹಿ ಮಾಡುವ ವೇಳೆ ಬರೆದಿದ್ದ ಹೆಸರಿನಲ್ಲಿ ಅಕ್ಷರ ದೋಷ ಇರುವುದನ್ನು ಅಧಿಕಾರಿಗಳು ಗಮನಿಸಿದ್ದು, ಇದರಿಂದ ಅನುಮಾನಗೊಂಡು ದೆಹಲಿ ಕಚೇರಿಗೆ ಸಂಪರ್ಕ ಮಾಡಿದ್ದಾರೆ. ಈ ವೇಳೆ ಪೂರ್ಣಚಂದ್ರ ದಾಸ್ ನಕಲಿ ಐಎಎಸ್ ಅಧಿಕಾರಿ ಎಂದು ತಿಳಿದುಬಂದಿದೆ.

    ಸದ್ಯ ಆರೋಪಿಯ ವಿರುದ್ಧ ಯಲಹಂಕ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಐಪಿಸಿ ಸೆಕ್ಷನ್ 419 ಮತ್ತು 420ರ ಅಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಸದ್ಯ ಬಂಧಿಸಲಾಗಿರುವ ಪೂರ್ಣಚಂದ್ರ ದಾಸ್ 2017 ರಲ್ಲೂ ನ್ಯಾಷನಲ್ ಏರೋಸ್ಪೇಸ್ ಲ್ಯಾಬ್‍ನಲ್ಲಿ ತಂಗಿದ್ದ ಕುರಿತು ಮಾಹಿತಿ ಲಭಿಸಿದ್ದು, 5 ದಿನಗಳ ಕಾಲ ಐಎಎಸ್ ಅಧಿಕಾರಿ ಎಂದು ರೂಮ್ ಪಡೆದಿದ್ದ ಎಂಬ ಅಂಶ ಬೆಳಕಿಗೆ ಬಂದಿದೆ. ಸದ್ಯ ಪೊಲೀಸರು ಪೂರ್ಣಚಂದ್ರ ದಾಸ್‍ನನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದು, ನಕಲಿ ಅಧಿಕಾರಿಯ ಹೆಸರಿನಲ್ಲಿ ಗೂಢಾಚಾರಿಕೆ ನಡೆಸುತ್ತಿರುವ ಕುರಿತು ಅನುಮಾನ ವ್ಯಕ್ತವಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಕೊಡಗಿನಲ್ಲಿ ಪ್ರವಾಹ ಪೀಡಿತರ ರಕ್ಷಣೆಗೆ ಕ್ರಮ: ಸಿಎಂ ಕುಮಾರಸ್ವಾಮಿ

    ಕೊಡಗಿನಲ್ಲಿ ಪ್ರವಾಹ ಪೀಡಿತರ ರಕ್ಷಣೆಗೆ ಕ್ರಮ: ಸಿಎಂ ಕುಮಾರಸ್ವಾಮಿ

    ಕೊಡಗು: ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ಎದುರಾಗಿದ್ದು, ಪ್ರವಾಹ ಪೀಡಿತರ ರಕ್ಷಣೆಗೆ ಸೂಕ್ತ ಕ್ರಮಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

    ಪ್ರವಾಹದಲ್ಲಿ ಸಿಲುಕಿರುವ ಮಡಿಕೇರಿ ತಾಲೂಕಿನ ಹಟ್ಟಿಹೊಳೆ ಬಳಿಯ ಗ್ರಾಮದ ಜನರನ್ನು ಸ್ಥಳಾಂತರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಅಲ್ಲದೇ ಲೋಕೋಪಯೋಗಿ ಸಚಿವರು ಸ್ಥಳಕ್ಕೆ ಭೇಟಿ ನೀಡಿದ್ದು, ಅಲ್ಲಿನ ಜನರನ್ನು ಸ್ಥಳಾಂತರಿಸಲು ಸೂಕ್ತ ಕ್ರಮ ಕೈಗೊಳ್ಳುತ್ತಾರೆ ಎಂದು ಅವರು ಹೇಳಿದ್ದಾರೆ.

    ಖುದ್ದು ಸ್ವತಃ ನಾನೇ ವಾಯುಪಡೆಯ ಅಧಿಕಾರಿಗಳೊಂದಿಗೆ ಮಾತನಾಡಿ, ಪ್ರವಾಹದಲ್ಲಿ ಸಿಲುಕಿರುವ ಕೊಡಗು ಜಿಲ್ಲೆಯ ಜನರ ರಕ್ಷಣೆಗೆ ನೆರವು ನೀಡುವಂತೆ ಮಾತುಕತೆ ನಡೆಸಿದ್ದೇನೆ. ಈಗಾಗಲೇ ಜಿಲ್ಲೆಯಲ್ಲಿ ಲೋಕೋಪಯೋಗಿ ಸಚಿವ ರೇವಣ್ಣ, ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಾ.ರಾ. ಮಹೇಶ್‍ರವರು ಮೊಕ್ಕಾಮ್ ಹೂಡಿದ್ದಾರೆ. ಸಚಿವರುಗಳು ಪ್ರವಾಹದಲ್ಲಿ ಸಿಲುಕಿದ ಜನರ ರಕ್ಷಣೆಗೆ ಕ್ರಮ ವಹಿಸುತ್ತಾರೆ ಎಂದು ಹೇಳಿದ್ದಾರೆ.

    ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿರುವ ಕೊಡಗು, ದಕ್ಷಿಣ ಕನ್ನಡ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಉಡುಪಿ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಖುದ್ದು ಸಿಎಂ ಮಾತಕತೆ ನಡೆಸಿ ಪ್ರಸ್ತುತ ಸ್ಥಿತಿಯ ಕುರಿತು ಮಾಹಿತಿ ಪಡೆದುಕೊಂಡಿದ್ದಾರೆ. ಅಲ್ಲದೇ ಸಾರ್ವಜನಿಕರಿಗೆ ನೆರವು ನೀಡಲು, ಅಗತ್ಯ ಬಿದ್ದಲ್ಲಿ ಗಂಜಿ ಕೇಂದ್ರ ತೆರೆಯಲು ಹಾಗೂ ಇತರ ಪರಿಹಾರ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

    ಪ್ರವಾಹ ಪರಿಸ್ಥಿತಿ ಉಂಟಾಗಿರುವ ಜಿಲ್ಲೆಗಳ ಉಸ್ತುವಾರಿ ಕಾರ್ಯದರ್ಶಿಗಳು ಸಹ ಕೂಡಲೇ ಜಿಲ್ಲೆಗಳಿಗೆ ತೆರಳಿ ಪರಿಹಾರ ಕಾರ್ಯಗಳನ್ನು ಚುರುಕುಗೊಳಿಸುವಂತೆ ಸೂಚಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಲಂಬೋರ್ಗಿನಿ Vs ಮಿಗ್ ಫೈಟರ್ ಜೆಟ್- ವೈರಲ್ ರೇಸ್ ವಿಡಿಯೋ ನೋಡಿ

    ಲಂಬೋರ್ಗಿನಿ Vs ಮಿಗ್ ಫೈಟರ್ ಜೆಟ್- ವೈರಲ್ ರೇಸ್ ವಿಡಿಯೋ ನೋಡಿ

    ಪಣಜಿ: ಇಟಲಿಯ ಲಂಬೋರ್ಗಿನಿ ಹುರಕೇನ್ ಹಾಗೂ ಮಿಗ್ 29ಕೆ ಫೈಟರ್ ನಡುವೆ ಗೋವಾ ವಿಮಾನ ನಿಲ್ದಾಣದಲ್ಲಿ ರೇಸ್ ನಡೆದಿದೆ.

    ಲಂಬೋರ್ಗಿನಿ ವೇಗವಾಗಿ ಚಲಿಸಿದರೂ ಮಿಗ್ ವಿಮಾನವನ್ನು ಸೋಲಿಸಲು ಆಗಲಿಲ್ಲ. ಆರಂಭದಲ್ಲಿ ನಿಧಾನವಾಗಿ ಬಳಿಕ ವೇಗವನ್ನು ಹೆಚ್ಚಿಸಿಕೊಂಡ ವಿಮಾನ ಕೊನೆಗೆ ಲಂಬ ಕೋನದಲ್ಲಿ ಟೇಕಾಫ್ ಆಗಿದೆ. ಭಾರತೀಯ ನೌಕಾಪಡೆಯಿಂದ ಯುವ ಜನರನ್ನು ಭಾರತೀಯ ಸೇನೆ ಸೇರಲು ಪ್ರೇರೇಪಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು.

    ನೌಕಾ ಸೇನೆಯಲ್ಲಿ 735 ಪೈಲಟ್ ಗಳ ನೇಮಕಕ್ಕೆ ಅನುಮತಿ ಸಿಕ್ಕಿದ್ದು, 91 ಹುದ್ದೆ ಖಾಲಿಯಿದೆ. ಭಾರತೀಯ ಸೇನೆಯ 794 ಹುದ್ದೆ ಭರ್ತಿಗೆ ಅನುಮತಿ ಸಿಕ್ಕಿದ್ದರೂ 192 ಹುದ್ದೆಗಳು ಖಾಲಿಯಿದೆ.

    https://www.youtube.com/watch?v=mRr1v4XFZU0

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ: www.instagram.com/publictvnews

  • ಆಕಾಶದಲ್ಲಿ ಯೋಗ ಪ್ರದರ್ಶಿಸಿದ ವಾಯುಪಡೆಯ ಸಿಬ್ಬಂದಿ

    ಆಕಾಶದಲ್ಲಿ ಯೋಗ ಪ್ರದರ್ಶಿಸಿದ ವಾಯುಪಡೆಯ ಸಿಬ್ಬಂದಿ

    ನವದೆಹಲಿ: ದೇಶದ ಭೂ, ವಾಯು ಹಾಗೂ ನೌಕಾ ಪಡೆಯಿಂದ ವಿಶ್ವ ಯೋಗದಿನ ಆಚರಿಸಲಾಗಿದ್ದು, ತಾವು ಇರುವ ವಾತಾವರಣದಲ್ಲಿಯೇ ಯೋಗಾಸಗಳನ್ನು ಮಾಡುವ ಮೂಲಕ ಜಗತ್ತಿನ ಜನರ ಗಮನ ಸೆಳೆದಿದ್ದಾರೆ.

    ಭಾರತೀಯ ವಾಯು ಪಡೆಯ ಪ್ಯಾರಾಟ್ರೂಪರ್ಸ್ ಟ್ರೈನಿಂಗ್ ಸ್ಕೂಲ್ ನ ತರಬೇತುದಾರರಾದ ಸ್ಯಾಮಲ್ ಹಾಗೂ ಗಜಾನಂದ್ ಯಾದವ್ ಅವರು ಆಕಾಶಸದಲ್ಲಿ ಯೋಗಾಸ ಪ್ರದರ್ಶಿಸಿದ್ರು. ಅವರ ಫೋಟೋ ಕೆಳಗೆ “ಇದು ಉತ್ತಮ ಆರೋಗ್ಯ, ಸಂತೋಷ, ಸಾಮರಸ್ಯ ಮತ್ತು ಐಎಎಫ್ ಏರ್ ವಾರಿಯರ್ ಶಾಂತಿಯ ಸಂದೇಶ. ಆಕಾಶದಲ್ಲಿ ಯೋಗಾಭ್ಯಾಸ ಮಾಡುತ್ತಿರುವ ಭಾರತೀಯ ವಾಯುಪಡೆಯ ಪ್ಯಾರಾಟ್ರೂಪರ್ಸ್ ಟ್ರೈನಿಂಗ್ ಸ್ಕೂಲ್ ನ ತರಬೇತುದಾರರು” ಎಂದು ಬರೆದು ಐಎಎಫ್ ಟ್ವೀಟ್ ಮಾಡಿದೆ.

    ವಿಶಾಖಪಟ್ಟಣದ ಬಂಗಾಳ ಕೊಲ್ಲಿಯಲ್ಲಿ ಪೂರ್ವ ನೌಕಾದಳದ ಕಮಾಂಡರ್ ಸಿಬ್ಬಂದಿ ಹಾಗೂ ಪೂರ್ವ ನೌಕಾ ಪಡೆಯ ಜಲಾಂತರ್ಗಾಮಿ (ಸಬ್ ಮೆರಿನ್) ಸಿಬ್ಬಂದಿ ಕೂಡ ವಿಶ್ವ ಯೋಗ ಭಾಗವಹಿಸಿದರು. ಪೂರ್ವ ನೌಕಾ ಪಡೆಯ ಜಲಾಂತರ್ಗಾಮಿ ಸಿಬ್ಬಂದಿ ಸಬ್‍ಮೆರಿನ್ ನಲ್ಲಿಯೇ ಯೋಗಾಸನ ಮಾಡಿದರು.

  • ಕರ್ನಾಟಕದ ಮೊದಲ ಫೈಟರ್ ಪೈಲಟ್ – ಕನ್ನಡತಿ ಮೇಘನಾ ಶಾನಭೋಗ್ ಸಾಧನೆ

    ಕರ್ನಾಟಕದ ಮೊದಲ ಫೈಟರ್ ಪೈಲಟ್ – ಕನ್ನಡತಿ ಮೇಘನಾ ಶಾನಭೋಗ್ ಸಾಧನೆ

    ನವದೆಹಲಿ: ಕರ್ನಾಟಕ ಮೊದಲ ಯುದ್ಧ ವಿಮಾನ ಮಹಿಳಾ ಪೈಲಟ್ ಆಗಿ ಮೇಘನಾ ಶಾನಭೋಗ್ ಶನಿವಾರ ಆಯ್ಕೆ ಆಗಿದ್ದು, ಇಂತಹ ಸಾಧನೆ ಮಾಡಿದ ಮೊದಲ ಕನ್ನಡತಿ ಎಂಬ ಹೆಗ್ಗಳಿಕೆ ಪಡೆದಿದ್ದಾರೆ.

    ಮೂಲತಃ ಕರ್ನಾಟಕ ಚಿಕ್ಕಮಗಳೂರಿನ ಜಿಲ್ಲೆಯವರಾದ ಮೇಘನಾ ಅವರ ಹೆಸರನ್ನು ಹೈದರಾಬಾದ್ ದುಂಡಿಗಲ್ ವಾಯುಪಡೆ ಅಕಾಡೆಮಿಯಲ್ಲಿ ನಡೆದ ಪದವಿ ಪಥಸಂಚಲನ ಕಾರ್ಯಕ್ರಮದ ಬಳಿಕ ಅಧಿಕೃತವಾಗಿ ಘೋಷಣೆ ಮಾಡಲಾಗಿದೆ. ಮೇಘನಾರೊಂದಿಗೆ ಮತ್ತೊಬ್ಬ ಯುವತಿಯನ್ನು ಯುದ್ಧ ವಿಮಾನದ ಪೈಲಟ್ ಆಗಿ ಆಯ್ಕೆ ಮಾಡಿರುವ ಮಾಹಿತಿಯನ್ನು ಅಧಿಕಾರಿಗಳು ನೀಡಿದ್ದಾರೆ.

    ಈ ಕುರಿತು ಪ್ರತಿಕ್ರಿಯೆ ನೀಡಿರುವ ಮೇಘನಾ ಅವರು, ಭಾರತೀಯ ವಾಯುಪಡೆಯ ಮೊದಲ ಮಹಿಳಾ ಪೈಲಟ್ ಆದ ಅವನಿ ಚತುರ್ವೇದಿ ಸೇರಿದಂತೆ ಭವನ ಕಾಂತ್, ಮೋಹನಾ ಸಿಂಗ್ ಅವರ ಕಥೆಗಳನ್ನು ಓದಿ 2016 ರಲ್ಲಿ ಫೈಟರ್ ಪೈಲಟ್ ಆಗಲು ಸ್ಫೂರ್ತಿ ಪಡೆದಿದ್ದಾಗಿ ಖಾಸಗಿ ಮಾಧ್ಯಮವೊಂದರ ಸಂದರ್ಶನದಲ್ಲಿ ತಿಳಿಸಿದ್ದಾರೆ.

    ಮೇಘನಾ ಅವರ ತಂದೆ ಎಂಕೆ ರಮೇಶ್ ವಕೀಲರಾಗಿದ್ದು, ತಾಯಿ ಉಡುಪಿ ಜಿಲ್ಲಾ ಗ್ರಾಹಕ ನ್ಯಾಯಾಲಯದಲ್ಲಿ ನ್ಯಾಯಾಧೀಶೆಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

    ಅಂದಹಾಗೆ ಮೇಘನಾ ಅವರು ಹೈದರಾಬಾದ್‍ನ ದುಂಡುಗಲ್ ಏರ್ ಫೋರ್ಸ್ ಗೆ 2017 ರ ಜನವರಿಯಲ್ಲಿ ಪ್ರವೇಶ ಪಡೆದಿದ್ದರು. ಇವರೊಂದಿಗೆ ಮಧ್ಯಪ್ರದೇಶ, ರಾಜಸ್ಥಾನ, ಬಿಹಾರ ಮತ್ತು ಉತ್ತರ ಪ್ರದೇಶದ ಯುವತಿಯರು ಸಹ ಸೇರಿದ್ದರು. ಮೇಘನಾ ಅವರು ಮೈಸೂರಿನ ಶ್ರೀ ಜಯ ಚಾಮರಾಜೇಂದ್ರ ಕಾಲೇಜಿನಲ್ಲಿ ಎಂಜಿನಿಯರಿಂಗ್ ಪದವಿಯನ್ನು 2011 ರಿಂದ 2015 ರ ಅವಧಿಯಲ್ಲಿ ಓದಿದ್ದರು. ಬಳಿಕ ಮನಾಲಿ ಯಲ್ಲಿ ಪರ್ವತಾರೋಹಣ ಮತ್ತು ಗೋವಾ ದಲ್ಲಿ ಪ್ಯಾರಾಗ್ಲೈಡಿಂಗ್ ಕೋರ್ಸ್ ಅನ್ನು 2016 ರಲ್ಲಿ ಪೂರ್ಣಗೊಳಿಸಿದ್ದರು. ಹೈದರಾಬಾದ್ ಆಕಾಡೆಮಿಗೆ ಸೇರುವ ಮುನ್ನ ಏರ್ ಫೋರ್ಸ್ ಆಕಾಡೆಮಿಯ ಫ್ಲೈಯಿಂಗ್ ಬ್ರಾಂಚ್ ನ ನಲ್ಲಿ ಫೈಟರ್ ಸ್ಟ್ರೀಮ್ ತರಬೇತಿ ಪೂರ್ಣಗೊಳಿಸಿದ್ದರು.

  • ದೆಹಲಿಯಲ್ಲಿ ಅಗ್ನಿ ದುರಂತ- ಹೆಲಿಕಾಪ್ಟರ್ ಬಳಸಿ ನಂದಿಸೋ ಕಾರ್ಯವನ್ನ ನೋಡಿ

    ದೆಹಲಿಯಲ್ಲಿ ಅಗ್ನಿ ದುರಂತ- ಹೆಲಿಕಾಪ್ಟರ್ ಬಳಸಿ ನಂದಿಸೋ ಕಾರ್ಯವನ್ನ ನೋಡಿ

    ನವದೆಹಲಿ: ನಗರದ ಮಾಳವಿಯ ನಗರದ ಗೋದಾಮಿನಲ್ಲಿ ನಿನ್ನೆ ರಾತ್ರಿ ಬೃಹತ್ ಅಗ್ನಿ ದುರಂತ ಸಂಭವಿಸಿರುವ ಘಟನೆ ನಡೆದಿದೆ.

    ವಾಯುಪಡೆಯ ಎಮ್‍ಐ-17 ಹೆಲಿಕಾಪ್ಟರ್ ಬಳಸಿ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ. ಇತ್ತೀಚೆಗೆ ನಗರ ಕಂಡ ಬೃಹತ್ ಅಗ್ನಿ ದುರಂತ ಇದಾಗಿದೆ ಎನ್ನಲಾಗಿದೆ.

    ನಗರದ ಖಿರ್ಕಿ ಎಕ್ಸ್‍ಟೆನ್ಶನ್ ನ ಗೊದಾಮಿನಲ್ಲಿ ಸುಮಾರು 5 ಗಂಟೆಗೆ ಬೆಂಕಿ ಕಾಣಿಸಿಕೊಂಡಿದೆ. ಜನನಿಭಿಡ ಪ್ರದೇಶ ಮಾಳವಿಯ ನಗರವಾಗಿದ್ದು ಸುಮಾರು 80 ಅಗ್ನಿ ಶಾಮಕ ವಾಹನಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿವೆ. ಪಕ್ಕದ ಕಟ್ಟಡಗಳಿಗೆ ಹಾಗೂ ಶಾಲೆಗೆ ಬೆಂಕಿ ಪಸರಿಸದಂತೆ ಸಾಕಷ್ಟು ಅಗ್ನಶಾಮಕ ಸಿಬ್ಬಂಧಿಗಳು ರಾತ್ರಿಯಿಡಿ ನೋಡಿಕೊಂಡಿದ್ದಾರೆ. ಹೊಗೆ ಮೇಲೇಳುತ್ತಿರುವುದನ್ನು ದಕ್ಷಿಣ ದೆಹಲಿಯ ಯಾವ ಭಾಗದಲ್ಲಿ ನಿಂತರೂ ನೋಡಬಹುದಾಗಿತ್ತು.

    ಗೋದಾಮಿನ ಬಳಿ ನಿಲ್ಲಿಸಿದ್ದ ರಬ್ಬರ್ ತುಂಬಿದ ಟ್ರಕ್ ಗೆ ಮೊದಲು ಬೆಂಕಿ ಹತ್ತಿದೆ. ತುಂಬಾ ಗಾಳಿ ಬೀಸುತ್ತಿದ್ದರಿಂದ ತಕ್ಷಣವೇ ಪಕ್ಕದಲ್ಲೇ ಇದ್ದ ಗೋದಾಮಿಗೂ ಬೆಂಕಿ ಪಸರಿಸಿದೆ. ಗೋದಾಮಿನಲ್ಲಿದ್ದ ಪ್ಲಾಸ್ಟಿಕ್ ಹಾಗೂ ಕಚ್ಛಾ ವಸ್ತುಗಳು ಬೆಂಕಿ ಹೆಚ್ಚಾಗಲು ಕಾರಣವಾಗಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ.

    ಗೋದಾಮಿನ ಪಕ್ಕದಲ್ಲಿರುವ ಸುಮಾರು 15 ಮನೆಗಳಿಂದ ಜನರನ್ನು ಖಾಲಿಮಾಡಿಸಲಾಗಿದೆ. ಘಟನೆಯಿಂದ ಯಾವುದೇ ಜೀವ ಹಾನಿಯಾಗಿಲ್ಲ. ಒಬ್ಬ ಅಗ್ನಿ ಶಾಮಕ ಸಿಬ್ಬಂದಿಗೆ ಗಾಯವಾಗಿದೆ. ದಾರಿ ಚಿಕ್ಕದಿರುವುದರಿಂದ ಅಗ್ನಿ ಶಾಮಕ ವಾಹನಗಳಿಗೆ ನಂದಿಸುವ ಕಾರ್ಯದಲ್ಲಿ ಸ್ವಲ್ಪ ಅಡಚಣೆಯಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.