Tag: Air India Plane Crash

  • ಮೋದಿ ಹೋಗಿ ವಿಮಾನ ಇಂಜಿನ್ ಚೆಕ್‌ ಮಾಡೋಕೆ ಸಾಧ್ಯನಾ? – ವಿಪಕ್ಷಗಳಿಗೆ ಪಿ. ರಾಜೀವ್ ತಿರುಗೇಟು

    ಮೋದಿ ಹೋಗಿ ವಿಮಾನ ಇಂಜಿನ್ ಚೆಕ್‌ ಮಾಡೋಕೆ ಸಾಧ್ಯನಾ? – ವಿಪಕ್ಷಗಳಿಗೆ ಪಿ. ರಾಜೀವ್ ತಿರುಗೇಟು

    ಚಿಕ್ಕಬಳ್ಳಾಪುರ: ವಿಮಾನ ದುರಂತದಲ್ಲಿ ಪ್ರಧಾನಿಗಳ (Prime Minister) ಪಾತ್ರ ಏನಾದ್ರು ಇತ್ತಾ? ಪ್ರಧಾನಿ ಹೋಗಿ ಇಂಜಿನ್‌ ಚೆಕ್ ಮಾಡಲು ಸಾಧ್ಯನಾ..? ಅಂತ ಕುಡಚಿ ಕ್ಷೇತ್ರದ ಮಾಜಿ ಶಾಸಕ ಪಿ. ರಾಜೀವ್ (P Rajeev) ವಿಪಕ್ಷಗಳಿಗೆ ತಿರುಗೇಟು ನೀಡಿದ್ದಾರೆ.

    ಅಹಮದಾಬಾದ್‌ ವಿಮಾನ ದುರಂತ (Ahmedabad Tragedy) ಪ್ರಕರಣದಲ್ಲಿ ಮೋದಿ ರಾಜೀನಾಮೆಗೆ ಆಗ್ರಹ ವಿಚಾರಕ್ಕೆ ಚಿಕ್ಕಬಳ್ಳಾಪುರದಲ್ಲಿ (Chikkaballapura) ಅವರು ಪ್ರತಿಕ್ರಿಯಿಸಿದ್ದಾರೆ. ಇದನ್ನೂ ಓದಿ: Ahmedabad Tragedy | ಡಿಎನ್‌ಎ ಮ್ಯಾಚ್ – 3 ದಿನಗಳ ಬಳಿಕ ವಿಜಯ್ ರೂಪಾನಿ ಮೃತದೇಹದ ಗುರುತು ಪತ್ತೆ

    PM visits a crash site of the AI-171 flight that met with an accident at Ahmedabad, in Gujarat on June 13, 2025.

    ಅಮಹದಾಬಾದ್ ವಿಮಾನ ದುರಂತಕ್ಕೆ ಇಡೀ ರಾಷ್ಟ್ರ ಕಂಬನಿ ಮಿಡಿಯುತ್ತಿದೆ. ಎಲ್ಲರಿಗೂ ನೋವಿದೆ. ಬೆಂಗಳೂರಿನ ಕಾಲ್ತುಳಿತ ಪ್ರಕರಣದಲ್ಲಿ ಸರ್ಕಾರ, ಗೃಹ ಇಲಾಖೆ, ಇಂಟೆಲಿಜೆನ್ಸ್ ನಿರ್ಲಕ್ಷ್ಯ ಇದೆ. ಬಂದೋಬಸ್ತ್ ಹೇಗೆ ಮಾಡಬೇಕು ಎಂಬ ಪೊಲೀಸ್ ಗೈಡ್‌ಲೈನ್ಸ್‌ ಇದೆ. ವಿಮಾನ ದುರಂತದಲ್ಲಿ ಪ್ರಧಾನಿಗಳ ಪಾತ್ರ ಏನಾದ್ರೂ ಇತ್ತಾ? ಪ್ರಧಾನಿ ಹೋಗಿ ಇಂಜಿನ್‌ ಚೆಕ್ ಮಾಡಲು ಸಾಧ್ಯನಾ..? ಅಂತ ಪ್ರಶ್ನೆ ಮಾಡಿದ್ದಾರೆ. ಇದನ್ನೂ ಓದಿ: ಹೆದರಿ ಬಂಕರ್‌ನಲ್ಲಿ ಕುಳಿತಿದ್ದೆವು, ರಸ್ತೆಗೆ ಇಳಿಯಲ್ಲ – ಇರಾನ್ ದಾಳಿಯ ಭೀಕರತೆ ಬಿಚ್ಚಿಟ್ಟ ಕರ್ನಾಟಕದ ಮಹಿಳೆ

    ಕಾಂಗ್ರೆಸ್‌ನವರು ರಾಜಕೀಯ ಹೊಣೆಗಾರಿಕೆಗೂ ಟೆಕ್ನಿಕಲ್ ವಿಂಗ್‌ಗೂ ವ್ಯತ್ಯಾಸ ತಿಳ್ಕೋಬೇಕಲ್ವಾ? ಇಲ್ಲವಾದಲ್ಲಿ ಯಾವ ರೀತಿ ನಾವ್ ನಗಬೇಕು ಹೇಳಿ? ತಮ್ಮ ತಪ್ಪನ್ನ ಒಪ್ಪಿಕೊಳ್ಳುವ ಬದ್ಧತೆ ತೋರಿಸಿ ಎಂದು ವಿಪಕ್ಷಗಳಿಗೆ ಕುಟುಕಿದ್ದಾರೆ.

    ವಿಮಾನ ಹಾರಿಸಲೇಬೇಕು ಅಂತ ಏನಾದ್ರೂ ಪ್ರಧಾನಿ ಹೇಳಿದ್ರಾ? ಹೇಳಿದ್ರೆ ತಪ್ಪು, ಆದ್ರೆ ಬೆಂಗಳೂರಲ್ಲಿ ಕಾರ್ಯಕ್ರಮ ಮಾಡಲೇಬೇಕು ಅಂತ ಮಾಡಿಸಿದವರು ಯಾರು? ಹಾಗಾಗಿ ಯಾರು ರಾಜೀನಾಮೆ ಕೊಡಬೇಕು ಅಂತ ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಪುಣೆಯ ಇಂದ್ರಯಾಣಿ ನದಿಗೆ ಅಡ್ಡಲಾಗಿ ನಿರ್ಮಿಸಿದ್ದ ಸೇತುವೆ ಕುಸಿದು ಕನಿಷ್ಠ 20 ಮಂದಿ ನೀರುಪಾಲು

  • ಏರ್‌ ಇಂಡಿಯಾ ವಿಮಾನ ದುರಂತ ತನಿಖೆಗೆ ಉನ್ನತ ಮಟ್ಟದ ಸಮಿತಿ – 3 ತಿಂಗಳ ಡೆಡ್‌ಲೈನ್: ಸಚಿವ ರಾಮಮೋಹನ್ ನಾಯ್ಡು

    ಏರ್‌ ಇಂಡಿಯಾ ವಿಮಾನ ದುರಂತ ತನಿಖೆಗೆ ಉನ್ನತ ಮಟ್ಟದ ಸಮಿತಿ – 3 ತಿಂಗಳ ಡೆಡ್‌ಲೈನ್: ಸಚಿವ ರಾಮಮೋಹನ್ ನಾಯ್ಡು

    – ಏರ್‌ಇಂಡಿಯಾ ವಿಮಾನ ಪತನದ 48 ಗಂಟೆ ಬಳಿಕ ಮೊದಲ ಸುದ್ದಿಗೋಷ್ಠಿ
    – ಬ್ಲ್ಯಾಕ್‌ಬಾಕ್ಸ್‌ ಡಿಕೋಡ್‌ ಮಾಡಲಾಗುತ್ತಿದೆ, ನಿಖರ ಕಾರಣ ತಿಳಿಯಲಿದೆ ಎಂದ ಸಚಿವ

    ನವದೆಹಲಿ: ಜೂನ್‌ 12ರಂದು ಅಹಮದಾಬಾದ್‌ನ ಮೇಘನಿನಗರದಲ್ಲಿ ಸಂಭವಿಸಿದ ವಿಮಾನ ದುರಂತ (Air India Plane Crash) ಪ್ರಕರಣದ ತನಿಖೆಗೆ ಉನ್ನತ ಮಟ್ಟದ ಸಮಿತಿ ನಿಯೋಜಿಸಲಾಗಿದೆ. ಕೇಂದ್ರ ಗೃಹಸಚಿವಾಲಯ ಕಾರ್ಯದರ್ಶಿ ನೇತೃತ್ವದಲ್ಲಿ ತನಿಖೆ ನಡೆಯಲಿದ್ದು, 3 ತಿಂಗಳ ಗಡುವು ನಿಗದಿಪಡಿಸಲಾಗಿದೆ ಎಂದು ಕೇಂದ್ರ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು (Ram Mohan Naidu) ಹೇಳಿದರು.

    ಏರ್‌ ಇಂಡಿಯಾ ವಿಮಾನ ದುರಂತ ನಡೆದ 48 ಗಂಟೆ ಬಳಿಕ ಮೊದಲ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವರು, ಮೂರು ತಿಂಗಳಲ್ಲಿ ತನಿಖೆ ಪೂರ್ಣಗೊಳಿಸಲು ಗಡುವು ನಿಗದಿಮಾಡಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ನಾನು ವಿಮಾನದಿಂದ ಜಂಪ್ ಮಾಡ್ಲಿಲ್ಲ – ದೊಡ್ಡ ಆಪತ್ತಿನಿಂದ ರಮೇಶ್ ವಿಶ್ವಾಸ್ ಕುಮಾರ್ ಪಾರಾಗಿದ್ದು ಹೇಗೆ?

    ವಿಮಾನ ದುರಂತ ನಡೆದಿದ್ದು ನಿಜಕ್ಕೂ ದುರದೃಷ್ಟಕರ. ನಾನೂ ನನ್ನ ಅಪ್ಪನನ್ನು ರಸ್ತೆ ಅಪಘಾತದಲ್ಲಿ ಕಳೆದುಕೊಂಡಿದ್ದೇನೆ. ಹಾಗಾಗಿ ಕುಟುಂಬಸ್ಥರ ಕಷ್ಟ ನನಗೆ ಅರ್ಥವಾಗುತ್ತದೆ. ಮೃತರ ಕುಟುಂಬಗಳಿಗೆ ಅಗತ್ಯ ನೆರವು ನೀಡಲು ಸೂಚನೆ ನೀಡಿದ್ದೇವೆ ಎಂದು ಹೇಳಿದರು. ಇದನ್ನೂ ಓದಿ: ಏರ್ ಇಂಡಿಯಾ ವಿಮಾನ ದುರಂತ – ಅವಶೇಷಗಳ ತೆರವು ಕಾರ್ಯ ಆರಂಭ

    ಬ್ಲ್ಯಾಕ್‌ಬಾಕ್ಸ್‌ ಡಿಕೋಡ್‌ ಮಾಡಲಾಗ್ತಿದೆ:
    ಮುಂದುವರಿದು… ಶುಕ್ರವಾರ ಸಂಜೆ 5 ಗಂಟೆ ವೇಳೆಗೆ ಬ್ಲ್ಯಾಕ್‌ಬಾಕ್ಸ್‌ (Black Box) ಪತ್ತೆ ಮಾಡಲಾಗಿದ್ದು, ದತ್ತಾಂಶವನ್ನು (Black Box Data) ಡಿಕೋಡ್‌ ಮಾಡಲಾಗುತ್ತಿದೆ. ಇದರ ದತ್ತಾಂಶದಿಂದ ಅಪಘಾತಕ್ಕೆ ನಿಖರ ಕಾರಣ ಏನೆಂಬುದು ತಿಳಿಯಲಿದೆ. ಅಲ್ಲದೇ ಅನೇಕ ತನಿಖಾ ಸಂಸ್ಥೆಗಳು ಹಾಗೂ ಕೇಂದ್ರದ ಉನ್ನತ ಮಟ್ಟದ ಸಮಿತಿ ಸಹ ವಿಮಾನ ದುರಂತದ ಬಗ್ಗೆ ತನಿಖೆ ನಡೆಸುತ್ತಿವೆ ಎಂದು ವಿವರಿಸಿದರು.

    ವಿಮಾನ ದುರಂತವನ್ನು ವಿಮಾನಯಾನ ಸಚಿವಾಲಯವು ಅತ್ಯಂತ ಗಂಭೀರವಾಗಿ ತೆಗೆದುಕೊಂಡಿದೆ. ಅದಕ್ಕಾಗಿ ಅಪಘಾತ ನಡೆದ ತಕ್ಷಣ ವಿಮಾನ ಅಪಘಾತ ತನಿಖಾ ಬ್ಯೂರೋ (AAIB)ಗೆ ತನಿಖೆ ನಡೆಸುವಂತೆ ಸೂಚಿಸಲಾಯಿತು. ಕೂಡಲೇ ಎಎಐಬಿ ತಂಡ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ಪರಿಶೀಲಿಸಿತ್ತು ಎಂದು ತಿಳಿಸಿದರು. ಇದನ್ನೂ ಓದಿ: 40 ರೂ. ಬದಲಿಗೆ 34,000 ರೂ. ಪೇ ಮಾಡಿದ ಪ್ರಯಾಣಿಕ – ಹಣ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಆಟೋ ಚಾಲಕ

    ಕಪ್ಪು ಪೆಟ್ಟಿಗೆಯಿಂದ ಡಿಕೋಡ್‌ ಮುಕ್ತಾಯದ ಬಳಿಕ ಅಪಘಾತ ಸಮಯದಲ್ಲಿ ಅಥವಾ ಅಪಘಾತಕ್ಕೆ ಕೆಲವು ಕ್ಷಣಗಳ ಮೊದಲು ನಿಜವಾಗಿ ಏನಾಯ್ತು ಅನ್ನೋದು ಗೊತ್ತಾಗಲಿದೆ. ಎಎಐಬಿ ತನ್ನ ತನಿಖೆಯನ್ನು ಪೂರ್ಣಗೊಳಿಸಿದ ಬಳಿಕ ವರದಿ ನೀಡಲಿದ್ದು, ಏನಾಗಿದೆ ಎಂಬುದು ಗೊತ್ತಾಗಲಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: Plane Crash – ನಗುಮೊಗದ ಗಗನಸಖಿ ಮನೀಷಾ ಥಾಪಾ ದುರಂತ ಅಂತ್ಯ

    ಇದೇ ವೇಳೆ ಶಿಷ್ಟಾಚಾರ ಮತ್ತು ಅಪಘಾತದ ನಂತರದ ಕ್ರಮಗಳ ಬಗ್ಗೆ ಮಾತನಾಡಿದ ಸಚಿವರು, ಭಾರತವು ಕಟ್ಟುನಿಟ್ಟಿನ ಸುರಕ್ಷತಾ ಮಾನದಂಡಗಳು ಹಾಗೂ ವಾಯುಯಾನ ಸುರಕ್ಷತಾ ಚೌಕಟ್ಟನ್ನು ಹೊಂದಿದೆ. ಈ ಘಟನೆ ಬಳಿಕ ಬೋಯಿಂಗ್‌ 787 ಸರಣಿಯ ನಿಗಾ ಇಡಲಾಗಿದೆ. ಸದ್ಯ ಭಾರತದಲ್ಲಿ ಬೋಯಿಂಗ್‌ 787 ಸರಣಿಯ 34 ವಿಮಾನಗಳಿದ್ದು, ಅವುಗಳ ತಪಾಸಣೆಗೆ ಡಿಜಿಸಿಎ ಕೂಡ ಆದೇಶ ನೀಡಿದೆ. 8 ವಿಮಾನಗಳನ್ನ ಈಗಾಗಲೇ ಪರಿಶೀಲಿಸಲಾಗಿದ್ದು, ಉಳಿದ ಎಲ್ಲ ವಿಮಾನಗಳನ್ನು ತುರ್ತಾಗಿ ಪರಿಶೀಲಿಸಲಾಗುವುದು ಎಂದು ವಿವರಿಸಿದರು.

    ಇನ್ನೂ ನಾಗರಿಕ ವಿಮಾನಯಾನ ಕಾರ್ಯದರ್ಶಿ ಸಮೀರ್ ಕುಮಾರ್ ಸಿನ್ಹಾ, ಅಪಘಾತಕ್ಕೀಡಾದ ಏರ್ ಇಂಡಿಯಾ ವಿಮಾನವು ದುರಂತಕ್ಕೂ ಮುನ್ನ ಯಾವುದೇ ಅಡೆತಡೆಯಿಲ್ಲದೇ ಪ್ಯಾರಿಸ್-ದೆಹಲಿ-ಅಹಮದಾಬಾದ್ ಪ್ರಯಾಣವನ್ನ ಪೂರ್ಣಗೊಳಿಸಿತ್ತು ಎಂದು ಮಾಹಿತಿ ನೀಡಿದರು.

  • ವಿಮಾನ ದುರಂತ – ಟೀ ಅಂಗಡಿ ಬಳಿ ನಿಂತಿದ್ದ 14 ವರ್ಷದ ಬಾಲಕ ಸಾವು

    ವಿಮಾನ ದುರಂತ – ಟೀ ಅಂಗಡಿ ಬಳಿ ನಿಂತಿದ್ದ 14 ವರ್ಷದ ಬಾಲಕ ಸಾವು

    – ತಾಯಿಗೆ ತಿಂಡಿ ಕೊಡಲು ಹೋಗಿದ್ದ ಬಾಲಕ ಬೆಂಕಿಯ ತೀವ್ರತೆಗೆ ದುರ್ಮರಣ

    ಅಹಮದಾಬಾದ್: ಏರ್ ಇಂಡಿಯಾ ವಿಮಾನ ದುರಂತದ (Air India Flight Crash) ವೇಳೆ ಅಲ್ಲೇ ಪಕ್ಕದ ಟೀ ಸ್ಟಾಲ್ ಬಳಿ ನಿಂತಿದ್ದ 14 ವರ್ಷದ ಬಾಲಕ ಬೆಂಕಿಯ ತೀವ್ರತೆಗೆ ಸಿಲುಕಿ ದಾರುಣ ಅಂತ್ಯ ಕಂಡಿದ್ದಾನೆ.

    ಆಕಾಶ್ (14) ಮೃತ ಬಾಲಕ. ಬಿಜೆ ಹಾಸ್ಟೆಲ್‌ನ ಮುಂಭಾಗ ಆಕಾಶ್ ಕುಟುಂಬವು ಟೀ ಅಂಗಡಿ ಇಟ್ಟುಕೊಂಡಿದ್ದರು. ಆಕಾಶ್ ತಾಯಿಗೆ ತಿಂಡಿ ಕೊಡಲು ಅಂಗಡಿ ಬಳಿ ಹೋಗಿದ್ದ. ವಿಮಾನ ದುರಂತದ ವೇಳೆ ಆಕಾಶ್ (Akash) ಟೀ ಅಂಗಡಿಯ ಮುಂದೆ ನಿಂತಿದ್ದ. ಇದ್ದಕ್ಕಿದ್ದಂತೆ ಸ್ಫೋಟದಿಂದ ದೊಡ್ಡ ಮಟ್ಟದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯ ಕೆನ್ನಾಲಿಗೆಗೆ ಆಕಾಶ್ ಮೃತಪಟ್ಟಿದ್ದಾನೆ ಎಂದು ಕುಟುಂಬಸ್ಥರು ಅಳಲು ತೋಡಿಕೊಂಡಿದ್ದಾರೆ. ಇದನ್ನೂ ಓದಿ: Plane crash | ಲಂಡನ್ ತಲುಪಿ ಫೋನ್ ಮಾಡ್ತೀನಿ ಅಂದವ್ಳು ಬಾರದ ಲೋಕಕ್ಕೆ ಹೋದ್ಳು..!

    ಆಕಾಶ್‌ನನ್ನು ಕಳೆದುಕೊಂಡ ಸಹೋದರ ಕಲ್ಪೇಶ್ ಆಕ್ರಂದನ ಮುಗಿಲು ಮುಟ್ಟಿತು. ನನ್ನ ದೊಡ್ಡಣ್ಣ ನನಗೆ ಕರೆ ಮಾಡಿ ವಿಚಾರ ತಿಳಿಸಿದ್ದರು. ನಾನು ಆಟೋ ಓಡಿಸುತ್ತಿದ್ದೆ. ಬೆಂಕಿ ತೀವತ್ರೆಗೆ ಗಾಯಗೊಂಡಿದ್ದ ನನ್ನ ತಾಯಿಯನ್ನು ಆಸ್ಪತ್ರೆಗೆ ಕರೆದೊಯ್ದರು. ನನ್ನ ತಮ್ಮ ಅಲ್ಲೇ ಸಿಲುಕಿದ್ದ. ನನ್ನ ತಮ್ಮನನ್ನು ಒಮ್ಮೆ ನೋಡಲು ಬಿಡಿ ಎಂದು ಕಣ್ಣೀರು ಹಾಕುತ್ತಿದ್ದಾರೆ. ಇದನ್ನೂ ಓದಿ: ಇಡೀ ವಿಮಾನ ಸುಟ್ಟು ಭಸ್ಮವಾದರೂ ಒಂದಿಷ್ಟೂ ಹಾನಿಯಾಗದ ಸ್ಥಿತಿಯಲ್ಲಿ ಸಿಕ್ತು ಭಗವದ್ಗೀತೆ ಪುಸ್ತಕ

    ನನ್ನ ತಮ್ಮ ಆಕಾಶ್ ಕೂಡ ಅಲ್ಲೇ ಇದ್ದ. ಆದರೆ ಅವನನ್ನು ಯಾರೂ ರಕ್ಷಣೆ ಮಾಡೋರಿಲ್ಲದೆ ಸಾವನ್ನಪ್ಪಿದ್ದಾನೆ. ನನ್ನ ತಮ್ಮ ಇಲ್ಲದೆ ನಾನು ಹೇಗೆ ಬದುಕಲಿ. ಒಮ್ಮೆ ನನ್ನ ಸಹೋದರನ ಮುಖ ನೋಡಲು ಬಿಡಿ. ದೇವರು ನನ್ನ ತಮ್ಮನ ಕಿತ್ಕೊಂಡ. ನನ್ನ ತಮ್ಮನನ್ನು ನಿನ್ನೆಯಿಂದ ನೋಡಿಲ್ಲ. ದಯಮಾಡಿ ನನ್ನ ಚಿಕ್ಕ ತಮ್ಮನನ್ನು ನೋಡಲು ಬಿಡಿ ಎಂದು ಪರಿ ಪರಿಯಾಗಿ ಬೇಡಿಕೊಂಡರು. ಇದನ್ನೂ ಓದಿ: Plane Crash | ಅಪ್ಪನ ಅಂತ್ಯ ಸಂಸ್ಕಾರ ಮುಗಿಸಿ ಹೊರಟಿದ್ದ ಮಗ ದುರಂತ ಸಾವು

    ನನ್ನ ತಾಯಿಗೆ ಇನ್ನೂ ವಿಷಯ ತಿಳಿದಿಲ್ಲ. ಆಕೆಗೆ ಕೂಡ ಚಿಕಿತ್ಸೆ ಕೊಡಿಸಲಾಗ್ತಿದೆ. ಮಗ ಹೇಗಿದ್ದಾನೆ ಎಂದು ಕೇಳ್ತಿದ್ದಾರೆ. ಆಕಾಶ್‌ಗೆ ಏನೂ ಆಗಿಲ್ಲ, ಚೆನ್ನಾಗಿದ್ದಾನೆ ಎಂದು ಅವರನ್ನು ಸಮಾಧಾನಪಡಿಸಿದ್ದೇವೆ ಎಂದು ದುಃಖಿಸಿದರು.