Tag: air india

  • ಏರ್ ಇಂಡಿಯಾ ವಿಮಾನದೊಳಗೆ ತೊಟ್ಟಿಕ್ಕಿದ ನೀರು

    ಏರ್ ಇಂಡಿಯಾ ವಿಮಾನದೊಳಗೆ ತೊಟ್ಟಿಕ್ಕಿದ ನೀರು

    ನವದೆಹಲಿ: ಲಂಡನ್‌ನಿಂದ ಅಮೃತಸರಕ್ಕೆ ಪ್ರಯಾಣಿಸುತ್ತಿದ್ದ ಏರ್ ಇಂಡಿಯಾ ವಿಮಾನದ (Air India Flight) ಒಳಗಡೆ ನೀರು ಸೋರಿಕೆಯಾಗಿರುವ (Water Leaking) ಪ್ರಸಂಗ ನಡೆದಿದೆ. ಈ ಅನಿರೀಕ್ಷಿತ ಘಟನೆಯಿಂದ ಪ್ರಯಾಣಿಕರಿಗೆ ಅನಾನುಕೂಲವಾಗಿದ್ದು, ಇದಕ್ಕೆ ಏರ್ ಇಂಡಿಯಾ ವಿಷಾದ ವ್ಯಕ್ತಪಡಿಸಿದೆ.

    ಘಟನೆಗೆ ಸಂಬಂಧಿಸಿದಂತೆ ಎಕ್ಸ್‌ನಲ್ಲಿ ವ್ಯಕ್ತಿಯೊಬ್ಬರು ವೀಡಿಯೋವನ್ನು ಹಂಚಿಕೊಂಡಿದ್ದಾರೆ. ವಿಮಾನದಲ್ಲಿ ಪ್ರಯಾಣಿಕರು ಕುಳಿತುಕೊಳ್ಳುವ ಆಸನಗಳ ಮೇಲಿರುವ ಹ್ಯಾಂಡ್ ಬ್ಯಾಗೇಜ್ ಸಂಗ್ರಹದಿಂದ ನೀರು ಹೇಗೆ ಸೋರಿಕೆಯಾಗುತ್ತಿತ್ತು ಎಂಬುದು ವೀಡಿಯೋದಲ್ಲಿ ಕಂಡುಬಂದಿದೆ.

    ಈ ಬಗ್ಗೆ ಬರೆದಿರುವ ಪ್ರಯಾಣಿಕ, ಏರ್ ಇಂಡಿಯಾ.. ನಮ್ಮೊಂದಿಗೆ ಪ್ರಯಾಣಿಸಿ. ಇದು ಪ್ರಯಾಣವಲ್ಲ, ನಮ್ಮನ್ನು ತಲ್ಲೀನಗೊಳಿಸುವ ಅನುಭವ ಎಂದು ತಮಗಾದ ಅನಾನುಕೂಲತೆಯನ್ನು ತಿಳಿಸಿದ್ದಾರೆ. ಇದನ್ನೂ ಓದಿ: ಗುಜರಾತ್‌ನಲ್ಲಿ ಕಲುಷಿತ ಆಯುರ್ವೇದಿಕ್ ಸಿರಪ್ ಸೇವಿಸಿ 5 ಮಂದಿ ಸಾವು

    ಸರ್ಕಾರದ ನಿಯಂತ್ರಣದಲ್ಲಿದ್ದ ಏರ್ ಇಂಡಿಯಾವನ್ನು 2021ರ ಅಕ್ಟೋಬರ್‌ನಲ್ಲಿ ಟಾಟಾ ಸನ್ಸ್ 70 ವರ್ಷಗಳ ಬಳಿಕ ಖರೀದಿಸಿದೆ. ಈ ಮೂಲಕ ಪ್ರಯಾಣಿಕರಿಗೆ ಉತ್ತಮ ಸೇವೆಯನ್ನು ಒದಗಿಸುವ ಭರವಸೆಯನ್ನು ನೀಡಿದೆ. ಆದರೆ ನವೆಂಬರ್ 24ರಂದು ಗ್ಯಾಟ್ವಿಕ್‌ನಿಂದ ಅಮೃತಸರಕ್ಕೆ ಪ್ರಯಾಣಿಸಿದ ಎಐ169 ವಿಮಾನದಲ್ಲಾದ ಈ ಅವ್ಯವಸ್ಥೆ ಅದರ ಸೇವೆಯ ಗುಣಮಟ್ಟವನ್ನು ಪ್ರಶ್ನಿಸುವಂತಾಗಿದೆ.

    ಇದೀಗ ನಡೆದ ಅನಾನುಕೂಲತೆ ಬಗ್ಗೆ ವಿಷಾದ ವ್ಯಕ್ತಪಡಿಸಿರುವ ಏರ್ ಇಂಡಿಯಾ, ಅನಿರೀಕ್ಷಿತ ದೋಷವನ್ನು ಸರಿಪಡಿಸಲಾಗಿದೆ. ನೀರು ಸೋರಿಕೆ ವೇಳೆ ತೊಂದರೆಗೊಳಗಾಗಿದ್ದ ಪ್ರಯಾಣಿಕರನ್ನು ತಮ್ಮ ಆಸನಗಳಿಂದ ಇತರ ಖಾಲಿ ಆಸನಗಳಿಗೆ ಸ್ಥಳಾಂತರಿಸಿದ್ದೇವೆ. ಸನ್ನಿವೇಶವನ್ನು ಗಮನದಲ್ಲಿಟ್ಟುಕೊಂಡು ಪ್ರಯಾಣಿಕರನ್ನು ಆರಾಮದಾಯಕವಾಗಿರಿಸಲು ನಮ್ಮ ಸಿಬ್ಬಂದಿ ಎಲ್ಲಾ ಪ್ರಯತ್ನವನ್ನು ಮಾಡಿದ್ದಾರೆ. ವಿಮಾನದಲ್ಲಿ ಪ್ರಯಾಣಿಸುವವರ ಸುರಕ್ಷತೆ ಮತ್ತು ಸೇವೆಗಳಿಗೆ ಏರ್ ಇಂಡಿಯಾ ಬದ್ಧವಾಗಿದೆ ಎಂದು ತಿಳಿಸಿದೆ. ಇದನ್ನೂ ಓದಿ: ಬದುಕೋ ಸಾಧ್ಯತೆ ಮೊದಲೇ ತೀರಾ ಕಡಿಮೆಯಿತ್ತು – ಹಾಸನ ಮಗು ಸಾವಿನ ಪ್ರಕರಣಕ್ಕೆ ನಿಮ್ಹಾನ್ಸ್ ಸ್ಪಷ್ಟನೆ

  • ನ.19ಕ್ಕೆ ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸಬೇಡಿ – ಖಲಿಸ್ತಾನಿ ಭಯೋತ್ಪಾದಕನ ಬೆದರಿಕೆ ವೀಡಿಯೋ

    ನ.19ಕ್ಕೆ ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸಬೇಡಿ – ಖಲಿಸ್ತಾನಿ ಭಯೋತ್ಪಾದಕನ ಬೆದರಿಕೆ ವೀಡಿಯೋ

    ನವದೆಹಲಿ: ಖಲಿಸ್ತಾನಿ ನಾಯಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಿಂದಾಗಿ ಭಾರತ ಮತ್ತು ಕೆನಡಾ ನಡುವಿನ ಸಂಬಂಧಗಳು ಹದಗೆಟ್ಟಿದೆ. ಇದೀಗ ಖಲಿಸ್ತಾನಿ ಭಯೋತ್ಪಾದಕ (Khalistani Terrorist) ಗುರುಪತ್ವಂತ್ ಸಿಂಗ್ ಪನ್ನುನ್ (Gurpatwant Singh Pannun) ಬೆದರಿಕೆ ವೀಡಿಯೋವೊಂದನ್ನು ಬಿಡುಗಡೆ ಮಾಡಿದ್ದು, ಅದರಲ್ಲಿ ನವೆಂಬರ್ 19 ರಂದು ಏರ್ ಇಂಡಿಯಾ ವಿಮಾನಗಳಲ್ಲಿ (Air India Flight) ಸಿಖ್ಖರು ಪ್ರಯಾಣಿಸದಂತೆ ಎಚ್ಚರಿಕೆ ನೀಡಿದ್ದಾನೆ.

    ಗುರುಪತ್ವಂತ್ ಪನ್ನುನ್‌ನ ಹೊಸ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಕಾಣಿಸಿಕೊಂಡಿದೆ. ನವೆಂಬರ್ 19 ರಂದು ನಿಮ್ಮ ಜೀವಕ್ಕೆ ಅಪಾಯವಿದೆ. ಏರ್ ಇಂಡಿಯಾ ವಿಮಾನಗಳಲ್ಲಿ ಸಿಖ್ ಸಮುದಾಯದ ಜನರು ಪ್ರಯಾಣಿಸಬೇಡಿ ಎಂದು ಎಚ್ಚರಿಕೆ ನೀಡಿದ್ದು, ಇದು ಏರ್ ಇಂಡಿಯಾ ವಿಮಾನಗಳ ಮೇಲೆ ದಾಳಿಯನ್ನು ಸೂಚಿಸುತ್ತದೆ.

    ವೈರಲ್ ಆಗಿರುವ ವೀಡಿಯೋದಲ್ಲಿ, ನಾವು ಸಿಖ್ ಜನರನ್ನು ನವೆಂಬರ್ 19 ರಂದು ಏರ್ ಇಂಡಿಯಾ ವಿಮಾನದ ಮೂಲಕ ಪ್ರಯಾಣಿಸಬೇಡಿ ಎಂದು ಕೇಳಿಕೊಳ್ಳುತ್ತೇವೆ. ಅಂದು ಜಾಗತಿಕ ದಿಗ್ಬಂಧನ ಇರುತ್ತದೆ. ನವೆಂಬರ್ 19 ರಂದು ಏರ್ ಇಂಡಿಯಾದಲ್ಲಿ ಪ್ರಯಾಣಿಸಬೇಡಿ, ಇಲ್ಲದಿದ್ದರೆ ನಿಮ್ಮ ಜೀವಕ್ಕೆ ಅಪಾಯವಿದೆ ಎಂದು ಖಲಿಸ್ತಾನಿ ಭಯೋತ್ಪಾದಕ ಹೇಳಿದ್ದಾನೆ. ಇದನ್ನೂ ಓದಿ: ಅರಣ್ಯ ಸಿಬ್ಬಂದಿ, ಬೇಟೆಗಾರರ ನಡುವೆ ಗುಂಡಿನ ಚಕಮಕಿ – ಓರ್ವ ಗುಂಡೇಟಿಗೆ ಬಲಿ

    ದೇಶವಿರೋಧಿ ಚಟುವಟಿಕೆಗಳಿಗಾಗಿ ಭಾರತದಲ್ಲಿ ಬೇಕಾಗಿರುವ ಗುರುಪತ್ವಂತ್ ಪನ್ನುನ್ ದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ (ಐಜಿಐ) ವಿಮಾನ ನಿಲ್ದಾಣವನ್ನು ನವೆಂಬರ್ 19 ರಂದು ಮುಚ್ಚಿ, ಅದರ ಹೆಸರನ್ನು ಬದಲಾಯಿಸುವುದಾಗಿ ಹೇಳಿದ್ದಾನೆ. ಐಸಿಸಿ ವಿಶ್ವಕಪ್ 2023 ರ ಅಂತಿಮ ಪಂದ್ಯವೂ ಕೂಡಾ ಅದೇ ದಿನ ನಡೆಯಲಿದೆ. ಅಂದೇ ದಾಳಿಯ ಕುರಿತು ಪನ್ನುನ್ ವೀಡಿಯೋದಲ್ಲಿ ಸೂಚಿಸಿ ಎಚ್ಚರಿಕೆ ನೀಡಿದ್ದಾನೆ.

    ತನ್ನ ವಿರುದ್ಧ ಎಲ್ಲಾ ಬಂಧನ ವಾರಂಟ್‌ಗಳ ಹೊರತಾಗಿಯೂ ಪನ್ನುನ್ ಖಲಿಸ್ತಾನಿ ಅಜೆಂಡಾವನ್ನು ಮುಂದುವರಿಸುತ್ತೇನೆ ಎಂದು ಹೇಳಿದ್ದಾನೆ. ನಾವು ಭಾರತದ ಆರ್ಥಿಕ ವ್ಯವಸ್ಥೆಯ ಬೆನ್ನೆಲುಬನ್ನು ಮುರಿಯಲಿದ್ದೇವೆ ಎಂದಿದ್ದು ಮಾತ್ರವಲ್ಲದೇ ವಿಶ್ವಕಪ್ 2023 ಅನ್ನು ‘ವಿಶ್ವ ಭಯೋತ್ಪಾದಕ ಕಪ್’ ಎಂದು ಕರೆದಿದ್ದಾನೆ. ಇದನ್ನೂ ಓದಿ: ದೇಶದಲ್ಲಿ ಫಸ್ಟ್‌ – ಶಂಕಿತ ಉಗ್ರರ ಕಾಲಿಗೆ ಜಿಪಿಎಸ್‌ ಬಳೆ

    ಈ ಹಿಂದೆ ಪ್ರಧಾನಿ ನರೇಂದ್ರ ಮೋದಿಯವರ ಮೇಲೆ ದಾಳಿ ನಡೆಸುವುದಾಗಿ ಭಯೋತ್ಪಾದಕ ಬೆದರಿಕೆ ಹಾಕಿದ್ದು, ಇಸ್ರೇಲ್-ಪ್ಯಾಲೆಸ್ತೀನ್ ಯುದ್ಧದ ರೀತಿಯ ಪರಿಸ್ಥಿತಿ ಭಾರತದಲ್ಲೂ ಉಂಟಾಗಬಹುದು ಎಂದು ಹೇಳಿದ್ದ.

  • ಇಸ್ರೇಲ್‌ನಲ್ಲಿ ಹಮಾಸ್ ಉಗ್ರರ ದಾಳಿ – ಅ.14 ರವರೆಗೆ ಏರ್ ಇಂಡಿಯಾ ವಿಮಾನ ರದ್ದು

    ಇಸ್ರೇಲ್‌ನಲ್ಲಿ ಹಮಾಸ್ ಉಗ್ರರ ದಾಳಿ – ಅ.14 ರವರೆಗೆ ಏರ್ ಇಂಡಿಯಾ ವಿಮಾನ ರದ್ದು

    ಟೆಲ್ ಅವಿವ್: ಇಸ್ರೇಲ್‌ನಲ್ಲಿ (Israel) ಹಮಾಸ್ ಉಗ್ರರು (Hamas Militants) ದಾಳಿ ನಡೆಸಿರುವ ಹಿನ್ನೆಲೆ ಅಕ್ಟೋಬರ್ 14 ರವರೆಗೆ ಟೆಲ್ ಅವಿವ್‌ಗೆ (Tel Aviv) ಮತ್ತು ಅಲ್ಲಿಂದ ಹೊರಡುವ ವಿಮಾನವನ್ನು ರದ್ದುಗೊಳಿಸಿರುವುದಾಗಿ ಏರ್ ಇಂಡಿಯಾ (Air India) ಭಾನುವಾರ ತಿಳಿಸಿದೆ.

    ಶನಿವಾರ ಇಸ್ರೇಲ್‌ನಲ್ಲಿ ಹಮಾಸ್ ಉಗ್ರರು ದಾಳಿ ನಡೆಸಿದ್ದು, ಅನೇಕ ಮಂದಿ ಮೃತಪಟ್ಟಿದ್ದಾರೆ. ಈ ಹಿನ್ನೆಲೆ ವಿಮಾನಯಾನವನ್ನು ರದ್ದುಗೊಳಿಸಲಾಗಿದೆ. ನಮ್ಮ ಪ್ರಯಾಣಿಕರು ಮತ್ತು ಸಿಬ್ಬಂದಿಯ ಸುರಕ್ಷತೆಗಾಗಿ 2023ರ ಅಕ್ಟೋಬರ್ 14 ರವರೆಗೆ ಟೆಲ್ ಅವಿವ್‌ಗೆ ಮತ್ತು ಅಲ್ಲಿಂದ ಹೊರಡುವ ವಿಮಾನಗಳನ್ನು ಸ್ಥಗಿತಗೊಳಿಸಲಾಗುವುದು ಎಂದು ಏರ್‌ಲೈನ್ ವಕ್ತಾರರು ತಿಳಿಸಿದ್ದಾರೆ. ಇದನ್ನೂ ಓದಿ: ನನ್ನನ್ನು ಸಾಯಿಸ್ಬೇಡಿ- ಬೇಡಿಕೊಂಡ್ರೂ ಬಿಡದೆ ಯುವತಿ ಅಪಹರಿಸಿದ ಹಮಾಸ್ ಉಗ್ರರು

    ಅಲ್ಲದೇ ಈ ಅವಧಿಯಲ್ಲಿ ಯಾವುದೇ ವಿಮಾನದಲ್ಲಿ ಬುಕ್ಕಿಂಗ್ ದೃಢಪಡಿಸಿದ ಪ್ರಯಾಣಿಕರಿಗೆ ಸಾಧ್ಯವಿರುವ ಎಲ್ಲಾ ಬೆಂಬಲವನ್ನು ನೀಡಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಹಮಾಸ್ ಉಗ್ರರಿಂದ ಮಗಳ ಬೆತ್ತಲೆ ಮೆರವಣಿಗೆ- ಸಾರ್ವಜನಿಕರಲ್ಲಿ ತಾಯಿ ಮನವಿ

    ಏರ್ ಇಂಡಿಯಾ ರಾಷ್ಟ್ರೀಯ ರಾಜಧಾನಿಯಿಂದ ಟೆಲ್ ಅವಿವ್‌ಗೆ ಸೋಮವಾರ, ಮಂಗಳವಾರ, ಗುರುವಾರ, ಶನಿವಾರ ಮತ್ತು ಭಾನುವಾರ ಸೇವೆಯನ್ನು ಒದಗಿಸುತ್ತದೆ. ಇದನ್ನೂ ಓದಿ: ತೆರೆದ ಟ್ರಕ್‌ನಲ್ಲಿ ಮಹಿಳೆಯ ಬೆತ್ತಲೆ ದೇಹ ಮೆರವಣಿಗೆ ಮಾಡಿದ ಹಮಾಸ್ ಉಗ್ರರು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕತ್ತು ಸೀಳಿ ಗಗನಸಖಿ ಹತ್ಯೆಗೈದಿದ್ದ ಆರೋಪಿ – ಲಾಕಪ್‌ನಲ್ಲೇ ಪ್ಯಾಂಟ್‌ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ

    ಕತ್ತು ಸೀಳಿ ಗಗನಸಖಿ ಹತ್ಯೆಗೈದಿದ್ದ ಆರೋಪಿ – ಲಾಕಪ್‌ನಲ್ಲೇ ಪ್ಯಾಂಟ್‌ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ

    ಮುಂಬೈ: ತರಬೇತಿ ನಿರತ ಏರ್ ಇಂಡಿಯಾ ಗಗನಸಖಿ ಹತ್ಯೆ ಪ್ರಕರಣದಲ್ಲಿ ಬಂಧಿತನಾಗಿದ್ದ ಆರೋಪಿ (Mumbai Murder Accused) ಅಂಧೇರಿ ಠಾಣೆಯ (Andheri Police Station) ಲಾಕಪ್‌ನಲ್ಲೇ ಪ್ಯಾಂಟ್‌ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

    ಮುಂಬೈನ ಮರೋಲ್ ಪ್ರದೇಶದಲ್ಲಿರುವ ಫ್ಲಾಟ್‌ನಲ್ಲಿ 23 ವರ್ಷದ ಗಗನಸಖಿಯ (Air Hostess) ಕತ್ತು ಸೀಳಿ ಕೊಂದಿದ್ದ ಆರೋಪಿ ವಿಕ್ರಮ್ ಅತ್ವಾಲ್ (40) ನನ್ನ ಬಂಧಿಸಲಾಗಿತ್ತು. ಇದನ್ನೂ ಓದಿ: G20 ಸಭೆ ದೆಹಲಿಯಲ್ಲಿ ಹೈ ಅಲರ್ಟ್ – ಆನ್‌ಲೈನ್ ಫುಡ್, ಅಮೆಜಾನ್, ಪ್ಲಿಪ್‌ಕಾರ್ಟ್ ಹೋಂ ಡೆಲಿವರಿ ಬಂದ್

    ಛತ್ತೀಸ್‌ಗಢ ಮೂಲದ ರೂಪಲ್ ಓಗ್ರೆ (Rupal Ogrey), ಏರ್ ಇಂಡಿಯಾದಲ್ಲಿ ತರಬೇತಿಗೆ ಆಯ್ಕೆಯಾಗಿದ್ದರು. ಈ ವರ್ಷದ ಏಪ್ರಿಲ್‌ನಲ್ಲಿ ಮುಂಬೈಗೆ ಸ್ಥಳಾಂತರಗೊಂಡಿದ್ದರು. ಕೆಲವು ದಿನಗಳ ಹಿಂದೆ ತವರು ಮನೆಗೆ ಹೋಗಿದ್ದ ತನ್ನ ಸಹೋದರಿ ಮತ್ತು ತನ್ನ ಗೆಳೆಯನೊಂದಿಗೆ ಅಂಧೇರಿಯ ಪ್ಲಶ್ ಹೌಸಿಂಗ್ ಸೊಸೈಟಿಯಲ್ಲಿ ತನ್ನ ಫ್ಲಾಟ್‌ನಲ್ಲಿ ವಾಸಿಸುತ್ತಿದ್ದರು. ಗಗನಸಖಿ ಸಾವಿಗೆ ಸಂಬಂಧಿಸಿದಂತೆ ಸ್ವೀಪರ್ ಆಗಿ ಕೆಲಸ ಮಾಡುತ್ತಿದ್ದ ವಿಕ್ರಮ್ ಅತ್ವಾಲ್‌ನನ್ನ ಪೊಲೀಸರು ಬಂಧಿಸಿ, ವಿಚಾರಣೆ ನಡೆಸುತ್ತಿದ್ದರು. ಇದನ್ನೂ ಓದಿ: Chandrayaan-3: ಚಂದ್ರನ ಮೇಲೆ ಮತ್ತೊಮ್ಮೆ ಸಾಫ್ಟ್ ಲ್ಯಾಂಡಿಂಗ್ ಮಾಡಿದ ವಿಕ್ರಮ್ – ಇಸ್ರೋದಿಂದ ವೀಡಿಯೋ ರಿಲೀಸ್‌

    ಮುಂಬೈನಲ್ಲಿರುವ ತನ್ನ ಫ್ಲಾಟ್‌ನಲ್ಲಿ ಗಗನಸಖಿ ಭಾನುವಾರ ರಾತ್ರಿ ಶವವಾಗಿ ಪತ್ತೆಯಾಗಿದ್ದಳು. ಕುಟುಂಬ ಸದಸ್ಯರ ಫೋನ್ ಕರೆಯನ್ನ ಆಕೆ ಸ್ವೀಕರಿಸದಿದ್ದಾಗ ಮುಂಬೈನಲ್ಲಿರುವ ಆಕೆಯ ಸ್ನೇಹಿತರಿಗೆ ಫೋನ್ ಮಾಡಿದ್ದಾರೆ. ಅವರು ಫ್ಲಾಟ್ ಗೆ ಬಂದು ನೋಡಿದಾಗ ಒಳಗಿನಿಂದ ಬೀಗ ಹಾಕಿರುವುದು ಕಂಡುಬಂದಿದೆ. ನಂತರ, ಅವರು ಪೊವೈ ಪೊಲೀಸರನ್ನ  (Powai Police) ಸಂಪರ್ಕಿಸಿದ್ದು, ಅವರ ಸಹಾಯದಿಂದ ನಕಲಿ ಕೀ ಬಳಸಿ ಫ್ಲಾಟ್ ಬಾಗಿಲು ತೆರೆದಾಗ ಮಹಿಳೆ ಕುತ್ತಿಗೆ ಸೀಳಿ ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡುಬಂದಿದೆ. ಕೂಡಲೇ ಆಕೆಯನ್ನು ರಾಜವಾಡಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದ್ರೆ ಅಲ್ಲಿ ದಾಖಲಿಸುವ ಮುನ್ನವೇ ಆಕೆ ಮೃತಪಟ್ಟಿದ್ದಳು ಎಂದು ಅವರು ತಿಳಿಸಿದ್ದಾರೆ.

    ಈ ಸಂಬಂಧ ಪೋವಾಯಿ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದು, ಒಬ್ಬ ವ್ಯಕ್ತಿಯನ್ನ ಬಂಧಿಸಿ ತನಿಖೆ ನಡೆಸುತ್ತಿದ್ದರು. ಪ್ರಕರಣದ ಆರೋಪಿ ವಿಕ್ರಮ್ ಅತ್ವಾಲ್‌ನ ಪತ್ನಿಯನ್ನೂ ವಿಚಾರಣೆ ನಡೆಸಲಾಗುತ್ತಿತ್ತು. ತನಿಖೆಯ ಸಮಯದಲ್ಲಿ ಮಹಿಳೆ ತನ್ನ ಸಹೋದರಿ, ತದನಂತರ ಗೆಳೆಯನೊಂದಿಗೆ ಫ್ಲಾಟ್‌ನಲ್ಲಿ ವಾಸಿಸುತ್ತಿದ್ದದ್ದು ತಿಳಿದುಬಂದಿದೆ. ಆದರೆ ಇಬ್ಬರೂ ಎಂಟು ದಿನಗಳ ಹಿಂದೆ ತಮ್ಮ ಸ್ವಂತ ಸ್ಥಳಕ್ಕೆ ತೆರಳಿದ್ದರು. ಆದರೆ, ಇದೀಗ ಈ ಘಟನೆ ನಡೆದಿರುವುದಾಗಿ ಪೊಲೀಸರು ಹೇಳಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಟೇಕಾಫ್ ಬಳಿಕ ರನ್ ವೇನಲ್ಲಿ ಟಯರ್ ಭಾಗಗಳು ಪತ್ತೆ – ದೆಹಲಿಗೆ ವಿಮಾನ ವಾಪಸ್

    ಟೇಕಾಫ್ ಬಳಿಕ ರನ್ ವೇನಲ್ಲಿ ಟಯರ್ ಭಾಗಗಳು ಪತ್ತೆ – ದೆಹಲಿಗೆ ವಿಮಾನ ವಾಪಸ್

    ನವದೆಹಲಿ: ವಿಮಾನ ಟೇಕಾಫ್ ಆದ ಬಳಿಕ ಅದರ ಟಯರ್‌ನ ಭಾಗಗಳು ರನ್‍ವೇಯಲ್ಲಿ ಪತ್ತೆಯಾದ ಘಟನೆ ದೆಹಲಿಯಲ್ಲಿ ನಡೆದಿದೆ. ಇದನ್ನೂ ಗಮನಿಸಿದ ವಿಮಾನ ನಿಲ್ದಾಣದ ಸಿಬ್ಬಂದಿ ಕೂಡಲೇ ಎಟಿಸಿಗೆ ಮಾಹಿತಿ ನೀಡಿದ್ದಾರೆ. ಬಳಿಕ ವಿಮಾನವನ್ನು ವಾಪಸ್ ಮರಳುವಂತೆ ಸೂಚನೆ

    ಏರ್ ಇಂಡಿಯಾ (Air India) ವಿಮಾನ (Flight) ದೆಹಲಿಯಿಂದ (Delhi) ಪ್ಯಾರಿಸ್‍ಗೆ (Paris) ತೆರಳುತ್ತಿತ್ತು. ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ಟೈರ್‌ನ ಭಾಗಗಳು ರನ್ ವೇಯಲ್ಲಿ ಕಾಣಿಸಿದೆ. ಬಳಿಕ ದೆಹಲಿ ಏರ್ ಟ್ರಾಫಿಕ್ ಕಂಟ್ರೋಲ್ (ATC) ನೀಡಿದ ಮಾಹಿಯ ಆಧಾರದ ಮೇಲೆ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಲಾಗಿದೆ. ಇದನ್ನೂ ಓದಿ: ಸಾಲ ಮಾಡಿ ಲಾಟರಿ ಟಿಕೆಟ್ ಖರೀದಿಸಿದ ಪೌರಕಾರ್ಮಿಕ ಮಹಿಳೆಯರಿಗೆ 10 ಕೋಟಿ ರೂ. ಬಂಪರ್

    ಪ್ರಯಾಣಿಕರಿಗೆ ಆದ ಅನಾನುಕೂಲತೆಗಾಗಿ ಏರ್ ಇಂಡಿಯಾ ವಿಷಾದ ವ್ಯಕ್ತಪಡಿಸಿದೆ. ಪ್ರಯಾಣಿಕರ ಸುರಕ್ಷತೆಗೆ ಏರ್ ಇಂಡಿಯಾ ಮೊದಲ ಆದ್ಯತೆ ನೀಡುತ್ತದೆ. ಇದಕ್ಕಾಗಿ ಈ ನಿರ್ಧಾರ ಕೈಗೊಳ್ಳಲಾಯಿತು ಎಂದು ಸಂಸ್ಥೆಯ ವಕ್ತಾರರು ತಿಳಿಸಿದ್ದಾರೆ.

    ಈ ಘಟನೆಯ ಬಗ್ಗೆ ಸಂಪೂರ್ಣ ತನಿಖೆ ನಡೆಸಲಾಗುತ್ತದೆ. ಪ್ರಯಾಣಿಕರಿಗೆ ಯಾವುದೇ ಹಾನಿಯಾದ ವರದಿ ಆಗಿಲ್ಲ. ಪ್ರಯಾಣಿಕರನ್ನು ಪ್ಯಾರಿಸ್‍ಗೆ ಕಳುಹಿಸಲು ಸೂಕ್ತ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಅಪಘಾತವಾದ ಕಾರಿಗೆ ವಿದ್ಯುತ್ ಶಾಕ್ – ಸಹಾಯಕ್ಕೆ ಬಂದ ಇಬ್ಬರು ಸಾವು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ವಿಮಾನದಲ್ಲಿ ಮೂತ್ರ ವಿಸರ್ಜಿಸಿ ಅಸಭ್ಯವಾಗಿ ವರ್ತಿಸಿದ ವ್ಯಕ್ತಿಯ ಬಂಧನ

    ವಿಮಾನದಲ್ಲಿ ಮೂತ್ರ ವಿಸರ್ಜಿಸಿ ಅಸಭ್ಯವಾಗಿ ವರ್ತಿಸಿದ ವ್ಯಕ್ತಿಯ ಬಂಧನ

    ನವದೆಹಲಿ: ಇತ್ತೀಚೆಗೆ ವಿಮಾನದಲ್ಲಿ ಮೂತ್ರವಿಸರ್ಜನೆ ಮಾಡಿದ ಹಲವು ಪ್ರಕರಣಗಳು ನಡೆಯುತ್ತಿದ್ದು, ಇದೀಗ ವ್ಯಕ್ತಿಯೊಬ್ಬ ಇದೇ ರೀತಿ ದುವರ್ತನೆ ತೋರಿದ್ದಾನೆ.

    ಈ ಘಟನೆ ಮುಂಬೈ-ದೆಹಲಿ ನಡುವಿನ ಏರ್ ಇಂಡಿಯಾ (Air India Flight) ವಿಮಾನದಲ್ಲಿ ಜೂನ್ 24 ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ರಾಮ್‍ಸಿಂಗ್ (Ramsingh) ಎಂಬ ಪ್ರಯಾಣಿಕ ವಿಮಾನದಲ್ಲಿ ಈ ಕೃತ್ಯ ಎಸಗಿದ್ದಾನೆ. ಇದನ್ನೂ ಓದಿಗಡಿ ನುಸುಳಲು ಉಗ್ರರ ಸಂಚು – ಸೇನೆಯಿಂದ ಓರ್ವನ ಎನ್‍ಕೌಂಟರ್

    ಈತ ವಿಮಾನದೊಳಗೆ ಸೀಟ್ ಬಳಿಯೇ ಮೂತ್ರ (Urine) ವಿಸರ್ಜನೆ ಮಾಡಿ ವಿಕೃತಿ ಮೆರೆದಿದ್ದಾನೆ. ಅಲ್ಲದೆ ಕ್ಯಾಬಿನ್ ಸಿಬ್ಬಂದಿಯ ಎಚ್ಚರಿಕೆ ನಡುವೆಯೂ ಉಗುಳಿ ಅಸಭ್ಯವಾಗಿ ವರ್ತಿಸಿದ್ದಾನೆ. ಸದ್ಯ ರಾಮ್‍ಸಿಂಗ್ ವಿರುದ್ಧ ಪ್ರಕರಣ ದಾಖಲಾಗಿದ್ದು, ಬಂಧಿಸಲಾಗಿದೆ. ಈ ಹಿಂದೆಯೂ ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಕರು ಮೂತ್ರ ಮಾಡಿದ್ದ ಘಟನೆಗಳು ವರದಿಯಾಗಿದ್ದವು.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_title” view=”carousel” /]

  • ಏರ್‌ಬಸ್‌ ಜೊತೆ ಬರೋಬ್ಬರಿ 500 ವಿಮಾನ ಖರೀದಿಗೆ ಡೀಲ್‌ – ವಿಶ್ವದಾಖಲೆ ಬರೆದ ಇಂಡಿಗೋ

    ಏರ್‌ಬಸ್‌ ಜೊತೆ ಬರೋಬ್ಬರಿ 500 ವಿಮಾನ ಖರೀದಿಗೆ ಡೀಲ್‌ – ವಿಶ್ವದಾಖಲೆ ಬರೆದ ಇಂಡಿಗೋ

    ಪ್ಯಾರಿಸ್‌: ಭಾರತದ ಕಂಪನಿ ನಿರ್ಮಿಸಿದ ವಿಶ್ವದಾಖಲೆಯನ್ನು ಭಾರತದ (India) ಕಂಪನಿ ಮುರಿಯವುದು ಬಹಳ ಅಪರೂಪ. ಈಗ ಇಂಡಿಗೋ ಕಂಪನಿ ಏರ್‌ ಇಂಡಿಯಾ (Air India) ನಿರ್ಮಿಸಿದ ದಾಖಲೆಯನ್ನು ಮುರಿಯುವ ಮೂಲಕ ಇತಿಹಾಸ ಸೃಷ್ಟಿಸಿದೆ.

    ಹೌದು. ಬಜೆಟ್‌ ಕ್ಯಾರಿಯರ್‌ ವಿಮಾನ ಕಂಪನಿ ಇಂಡಿಗೋ ಫ್ರಾನ್ಸಿನ ಏರ್‌ಬಸ್‌ (Airbus) ಕಂಪನಿಯ ಜೊತೆ 500 A320 ಮಾದರಿಯ ವಿಮಾನ ಖರೀದಿಗೆ ಒಪ್ಪಂದ ಮಾಡಿಕೊಂಡಿದೆ. ಈ ಮೂಲಕ ಅತಿ ಹೆಚ್ಚು ವಿಮಾನ ಖರೀದಿ ಒಪ್ಪಂದ ಮತ್ತು ಒಂದೇ ಕಂಪನಿಯ ಜೊತೆ ಅತಿ ಹೆಚ್ಚು ವಿಮಾನ ಖರೀದಿ ನಡೆಸುತ್ತಿರುವ ವಿಶ್ವದ ಮೊದಲ ಕಂಪನಿ ಎಂಬ ಹೆಗ್ಗಳಿಕೆಗೆ ಇಂಡಿಗೋ ಪಾತ್ರವಾಗಿದೆ.

    ಪ್ಯಾರಿಸ್‌ನಲ್ಲಿ ನಡೆಯುತ್ತಿರುವ ಏರ್‌ಶೋದ (Paris Air Show) ಮೊದಲ ದಿನವೇ ಏರ್‌ಬಸ್‌ ಕಂಪನಿ ಇಂಡಿಗೋ ಜೊತೆಗಿನ ವ್ಯವಹಾರದ ಡೀಲ್‌ ಘೋಷಣೆ ಮಾಡಿದೆ. ಇದನ್ನೂ ಓದಿ: ಅಲ್-ಹಕೀಮ್ ಮಸೀದಿಗೆ ಭೇಟಿ ನೀಡಲಿದ್ದಾರೆ ಪ್ರಧಾನಿ ಮೋದಿ

    ಹಲವು ಸುತ್ತಿನ ಮಾತುಕತೆಯ ಬಳಿಕ ಎರಡೂ ಕಂಪನಿಗಳು ಒಪ್ಪಂದಕ್ಕೆ ಸಹಿ ಹಾಕಿವೆ. ಖರೀದಿ ಒಪ್ಪಂದದ ಮೊತ್ತ ಎಷ್ಟು ಎನ್ನುವುದು ಅಧಿಕೃತವಾಗಿ ತಿಳಿಸದೇ ಇದ್ದರೂ 55 ಶತಕೋಟಿ ಡಾಲರ್‌ ಡೀಲ್‌ ಎಂದು ವರದಿಯಾಗಿದೆ.

    ಈ ಐತಿಹಾಸಿಕ ಒಪ್ಪಂದಕ್ಕೆ ಇಂಡಿಗೋ ವ್ಯವಸ್ಥಾಪಕ ನಿರ್ದೇಶಕ ರಾಹುಲ್‌ ಭಾಟೀಯಾ ಮತ್ತು ಏರ್‌ಬಸ್‌ ಸಿಇಒ ಗುಯಿಲೌಮ್ ಫೌರಿ ಸಹಿ ಹಾಕಿದರು. ಇದನ್ನೂ ಓದಿ: ಏರ್‌ಬಸ್‌-ಬೋಯಿಂಗ್‌ ಜೊತೆ ಮೆಗಾ ಡೀಲ್‌: ವಿಶ್ವದಾಖಲೆ ನಿರ್ಮಿಸಿದ ಏರ್‌ ಇಂಡಿಯಾ

    2030 ಮತ್ತು 2035ರ ಸಮಯದಲ್ಲಿ ವಿಮಾನವನ್ನು ಏರ್‌ಬಸ್‌ ಕಂಪನಿ ಇಂಡಿಗೋಗೆ ವಿತರಣೆ ಮಾಡಲಿದೆ. ಇದು ಕೇವಲ ಪ್ರಾರಂಭ ಅಷ್ಟೇ. ಭಾರತ ಬೆಳವಣಿಗೆ ಮತ್ತು ಭಾರತೀಯ ವಾಯುಯಾನ ಮಾರುಕಟ್ಟೆಯ ಬೆಳವಣಿಗೆಯಾಗುತ್ತಿರುವ ಹಿನ್ನೆಲೆಯಲ್ಲಿ ಈ ಆದೇಶವನ್ನು ನಮಗೆ ನೀಡಲು ಇದು ಸರಿಯಾದ ಸಮಯ ಎಂದು ಏರ್‌ಬಸ್‌ ತಿಳಿಸಿದೆ.

    2006 ರಿಂದ ಇಲ್ಲಿಯವರೆಗೆ ಏರ್‌ಬಸ್‌ ಕಂಪನಿ ಜೊತೆ ಒಟ್ಟು 1,330 ವಿಮಾನ ಖರೀದಿಗೆ ಇಂಡಿಗೋ ಆರ್ಡರ್‌ ನೀಡಿದೆ. ಈ ದಶಕದ ಅಂತ್ಯಕ್ಕೆ ವಿಮಾನಗಳು ವಿತರಣೆಯಾಗುವ ಸಾಧ್ಯತೆಯಿದೆ.

    ಈ ಫೆಬ್ರವರಿಯಲ್ಲಿ ಟಾಟಾ ಸನ್ಸ್ (Tata Sons) ಒಡೆತನದ ಏರ್ ಇಂಡಿಯಾ 470 ವಿಮಾನಗಳನ್ನು ಆರ್ಡರ್ ಮಾಡುವ ಮೂಲಕ ವಾಯುಯಾನ ಕ್ಷೇತ್ರದಲ್ಲಿ ದಾಖಲೆ ಬರೆದಿತ್ತು. ಇದು ಆಧುನಿಕ ವಿಮಾನಯಾನ ಕ್ಷೇತ್ರದಲ್ಲಿ ಏರ್‌ಲೈನ್ಸ್ ಕಂಪನಿಯೊಂದು ಮಾಡಿದ ಅತಿದೊಡ್ಡ ಆರ್ಡರ್‌ಗಳಲ್ಲಿ ಒಂದು ಎಂದು ಬಣ್ಣಿಸಲಾಗಿತ್ತು.

    ಫ್ರಾನ್ಸಿನ ಏರ್‌ಬಸ್‌ನಿಂದ 250 ಮತ್ತು ಅಮೆರಿಕದ ಬೋಯಿಂಗ್‌ನಿಂದ (Boeing) 220 ವಿಮಾನಗಳನ್ನು ಏರ್‌ ಇಂಡಿಯಾದಿಂದ ಖರೀದಿಸಲಿದೆ. ಒಟ್ಟು 420 ಸಣ್ಣ, ಮಧ್ಯಮ ಗಾತ್ರ ಮತ್ತು 40 ದೊಡ್ಡ ಗಾತ್ರದ ವಿಮಾನಗಳನ್ನು ಖರೀದಿಸಲು ಏರ್‌ ಇಂಡಿಯಾ (Air India) ಮುಂದಾಗಿದ್ದು, ಮುಂದಿನ ಏಳರಿಂದ ಎಂಟು ವರ್ಷಗಳಲ್ಲಿ ವಿಮಾನಗಳು ಏರ್‌ ಇಂಡಿಯಾವನ್ನು ಸೇರಲಿದೆ.

  • ಕಾಕ್‍ಪಿಟ್‍ಗೆ ಸ್ನೇಹಿತೆ ಕರೆದೊಯ್ದ ಪೈಲೆಟ್ – ಏರ್ ಇಂಡಿಯಾ ಸಿಇಒಗೆ ಶೋಕಾಸ್ ನೋಟಿಸ್

    ಕಾಕ್‍ಪಿಟ್‍ಗೆ ಸ್ನೇಹಿತೆ ಕರೆದೊಯ್ದ ಪೈಲೆಟ್ – ಏರ್ ಇಂಡಿಯಾ ಸಿಇಒಗೆ ಶೋಕಾಸ್ ನೋಟಿಸ್

    ನವದೆಹಲಿ: ವಿಮಾನದ ಕಾಕ್‍ಪಿಟ್ (Cockpit) ಪ್ರವೇಶಿಸಲು ಸ್ನೇಹಿತೆಗೆ ಅನುಮತಿ ನೀಡಿದ್ದ ಪೈಲೆಟ್ ಲೋಪಕ್ಕಾಗಿ ಏರ್ ಇಂಡಿಯಾ (Air India) ಸಿಇಒ ಕ್ಯಾಂಪ್‍ಬೆಲ್ ವಿಲ್ಸನ್ ಹಾಗೂ ಭದ್ರತಾ ಮುಖ್ಯಸ್ಥ ಹೆನ್ರಿ ಡೊನೊಹೋ ಅವರಿಗೆ ಡಿಜಿಸಿಎ (DGCA) ಶೋಕಾಸ್ ನೋಟಿಸ್ ಜಾರಿ ಮಾಡಿದೆ.

    ಘಟನೆಯ ಕುರಿತು ಡಿಜಿಸಿಎಗೆ ಸಮಯೋಚಿತ ವರದಿ ಮಾಡದಿದ್ದಕ್ಕಾಗಿ ಏರ್ ಇಂಡಿಯಾ ಸಿಇಒ ಮತ್ತು ವಿಮಾನ ಸುರಕ್ಷತಾ ಮುಖ್ಯಸ್ಥರಿಗೆ ಏ.21 ರಂದು ಶೋಕಾಸ್ ನೋಟಿಸ್ ನೀಡಲಾಗಿತ್ತು. ಆದರೂ ಇಲ್ಲಿಯವರೆಗೂ ಏರ್ ಇಂಡಿಯಾ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಏರ್ ಇಂಡಿಯಾ ಸುರಕ್ಷತಾ ಸೂಚನೆಗಳನ್ನು ಉಲ್ಲಂಘಿಸಿದೆ ಎಂದು ಡಿಜಿಸಿಎಯ ಹಿರಿಯ ಅಧಿಕಾರಿ ಭಾನುವಾರ ತಿಳಿಸಿದ್ದಾರೆ. ಇದನ್ನೂ ಓದಿ: ಅಲ್‍ಖೈದಾ ಜೊತೆ ನಂಟು ಶಂಕೆ – ಶಂಕಿತ ಭಯೋತ್ಪಾದಕನ ಸೆರೆ

    ಘಟನೆಯ ತನಿಖೆಯಲ್ಲಿ ವಿಳಂಬವಾಗಿದೆ. ಶೋಕಾಸ್ ನೋಟಿಸ್‍ಗೆ ಉತ್ತರಿಸಲು ಇಬ್ಬರೂ ಕಾರ್ಯನಿರ್ವಾಹಕರಿಗೆ 15 ದಿನಗಳ ಕಾಲಾವಕಾಶ ನೀಡಲಾಗಿದೆ. ತನಿಖೆ ಪೂರ್ಣಗೊಳ್ಳುವವರೆಗೆ ದುಬೈ (Dubai), ದೆಹಲಿ (Delhi) ವಿಮಾನದ ಸಂಪೂರ್ಣ ಸಿಬ್ಬಂದಿಯನ್ನು ಡಿ ರೋಸ್ಟರ್ ಮಾಡುವಂತೆ ಡಿಜಿಸಿಎ ಏರ್ ಇಂಡಿಯಾಗೆ ನಿರ್ದೇಶನ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಫೆ.27 ರಂದು ದುಬೈ ಹಾಗೂ ದೆಹಲಿ ನಡವೆ ಸಂಚರಿಸುವ ವಿಮಾನದಲ್ಲಿ ಪೈಲಟ್ ಸ್ನೇಹಿತೆಗೆ ಕಾಕ್‍ಪಿಟ್ ಪ್ರವೇಶಕ್ಕೆ ಅನುಮತಿ ನೀಡಿ, ಒಳಗೆ ಬಿಟ್ಟಿದ್ದರು. ಈ ಬಗ್ಗೆ ವಿಮಾನದ ಕ್ಯಾಬಿನ್ ಸಿಬ್ಬಂದಿಯೊಬ್ಬರು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯಕ್ಕೆ (Directorate General of Civil Aviation) ದೂರು ಸಲ್ಲಿಸಿದ್ದರು. ಇದನ್ನೂ ಓದಿ: ದಾಂತೇವಾಡ ಸ್ಫೋಟ ಪ್ರಕರಣ- ಮಾಸ್ಟರ್‌ಮೈಂಡ್‌ ಫೋಟೋ ರಿಲೀಸ್

  • ಕುಡಿದ ಅಮಲಿನಲ್ಲಿ ಸಹ ಪ್ರಯಾಣಿಕನ ಮೇಲೆ ಮೂತ್ರ ವಿಸರ್ಜನೆ – American Airlines ನಲ್ಲಿ ಮತ್ತೊಂದು ಕೇಸ್‌

    ಕುಡಿದ ಅಮಲಿನಲ್ಲಿ ಸಹ ಪ್ರಯಾಣಿಕನ ಮೇಲೆ ಮೂತ್ರ ವಿಸರ್ಜನೆ – American Airlines ನಲ್ಲಿ ಮತ್ತೊಂದು ಕೇಸ್‌

    ವಾಷಿಂಗ್ಟನ್‌: ಇತ್ತೀಚೆಗೆ ವಿಮಾನಗಳಲ್ಲಿ ಸಹ ಪ್ರಯಾಣಿಕರ ಮೇಲೆ ಮೂತ್ರ ವಿಸರ್ಜನೆ ಮಾಡುವ ಪ್ರಕರಣಗಳು ಹೆಚ್ಚಾಗುತ್ತಿವೆ. ಏರ್ ಇಂಡಿಯಾ (Air India), ಗೋ ಫಸ್ಟ್‌ ಬಳಿಕ ಅಮೆರಿಕನ್ ಏರ್‌ಲೈನ್ಸ್ (American Airlines) ವಿಮಾನದಲ್ಲೂ ವ್ಯಕ್ತಿಯೊಬ್ಬ ಮೂತ್ರ ವಿಸರ್ಜನೆ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ.‌

    ಅಮೆರಿಕನ್‌ ಏರ್‌ಲೈನ್ಸ್‌ನ ನ್ಯೂಯಾರ್ಕ್‌-ನವದೆಹಲಿ (New York-Delhi Flight) ವಿಮಾನದಲ್ಲಿ ಭಾರತದ ಪ್ರಯಾಣಿಕನೊಬ್ಬ ಕುಡಿದ ಅಮಲಿನಲ್ಲಿ ಸಹ ಪ್ರಯಾಣಿಕನ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾನೆ. ವಿಮಾನ ದೆಹಲಿಗೆ ಬಂದಿಳಿದ ನಂತರ ಆರೋಪಿಯನ್ನ ಸಿಐಎಸ್ಎಫ್ ಅಧಿಕಾರಿಗಳು ಬಂಧಿಸಿದ್ದಾರೆ.

    Air India

    ವಿಮಾನಯಾನ ಸಂಸ್ಥೆ ಸಹಪ್ರಯಾಣಿಕನ ಹೇಳಿಕೆಯನ್ನ ದಾಖಲಿಸಿಕೊಂಡಿದ್ದು, ಆರೋಪಿ ವಿರುದ್ಧ ನಾಗರಿಕ ವಿಮಾನಯಾನ ಕಾಯ್ದೆ ಅಡಿಯಲ್ಲಿ ಕಾನೂನು ಕ್ರಮ ಕೈಗೊಳ್ಳುವಂತೆ ಸೂಚಿಸಿದೆ. ಇದನ್ನೂ ಓದಿ: ಕೇದಾರನಾಥ ಯಾತ್ರೆ ಇಂದಿನಿಂದ ಆರಂಭ – ಯಾತ್ರಾರ್ಥಿಗಳಿಗೆ ಬಾಗಿಲು ತೆರೆದ ದೇವಾಲಯ

    ಏನಿದು ಘಟನೆ?
    ಅಮೆರಿಕನ್‌ ಏರ್‌ಲೈನ್ಸ್‌ನ AA-292 ವಿಮಾನವು ನ್ಯೂಯಾರ್ಕ್‌ನಿಂದ ದೆಹಲಿಗೆ ಹೊರಟಿತ್ತು. ಈ ವೇಳೆ ಭಾರತದ ವ್ಯಕ್ತಿಯೊಬ್ಬ ಕುಡಿದ ಅಮಲಿನಲ್ಲಿ ಸಹ ಪ್ರಯಾಣಿಕನ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾನೆ. ಈ ಸಂಬಂಧ ಅಮೆರಿಕನ್‌ ಏರ್‌ಲೈನ್ಸ್‌ ವಿಮಾನ ಲ್ಯಾಂಡಿಂಗ್‌ ಆಗುವ ಮೊದಲೇ ದೆಹಲಿ ವಿಮಾನ ನಿಲ್ದಾಣಕ್ಕೆ (Delhi Airport) ವಿಷಯ ವರದಿ ಮಾಡಿತ್ತು. ಭಾನುವಾರ ರಾತ್ರಿ 9 ಗಂಟೆಗೆ ದೆಹಲಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ನಂತರ ಆರೋಪಿಯನ್ನ ಬಂಧಿಸಲಾಗಿದೆ. ಇದನ್ನೂ ಓದಿ: ಯಾವುದೇ ಅಹಂ ಇಲ್ಲ, ಬಿಜೆಪಿ ವಿರುದ್ಧ ಹೋರಾಡಲು ಸಿದ್ಧ: ಮಮತಾ ಬ್ಯಾನರ್ಜಿಯನ್ನು ಭೇಟಿಯಾದ ನಿತೀಶ್

    ಕಳೆದ ವರ್ಷ ನವೆಂಬರ್‌ನಲ್ಲಿ ಏರ್‌ ಇಂಡಿಯಾದಲ್ಲಿ ವ್ಯಕ್ತಿಯೊಬ್ಬ ಸಹ ಪ್ರಯಾಣಿಕ ಮಹಿಳೆ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದ. ಮತ್ತೊಂದು ಘಟನೆಯಲ್ಲಿ ಡಿಸೆಂಬರ್‌ 6 ರಂದು ಪ್ಯಾರಿಸ್-ನವದೆಹಲಿ ಏರ್‌ ಇಂಡಿಯಾ ವಿಮಾನದಲ್ಲೂ ಇದೇ ಘಟನೆ ನಡೆದಿತ್ತು. ಈ ವರ್ಷದ ಮಾರ್ಚ್‌ ತಿಂಗಳಲ್ಲೂ ಅಮೆರಿಕನ್‌ ಏರ್‌ಲೈನ್ಸ್‌ನಲ್ಲಿ ಇದೇ ರೀತಿ ಘಟನೆ ವರದಿಯಾಗಿತ್ತು.

  • ಕೂದಲೆಳೆ ಅಂತರದಲ್ಲಿ ತಪ್ಪಿದ ಭಾರೀ ದುರಂತ – ಏರ್ ಇಂಡಿಯಾ, ನೇಪಾಳ ಏರ್‌ಲೈನ್ಸ್ ಡಿಕ್ಕಿ ಜಸ್ಟ್ ಮಿಸ್

    ಕೂದಲೆಳೆ ಅಂತರದಲ್ಲಿ ತಪ್ಪಿದ ಭಾರೀ ದುರಂತ – ಏರ್ ಇಂಡಿಯಾ, ನೇಪಾಳ ಏರ್‌ಲೈನ್ಸ್ ಡಿಕ್ಕಿ ಜಸ್ಟ್ ಮಿಸ್

    – 3 ನಿಯಂತ್ರಕರು ಅಮಾನತು

    ಕಠ್ಮಂಡು: ಏರ್ ಇಂಡಿಯಾ (Air India) ಹಾಗೂ ನೇಪಾಳ ಏರ್‌ಲೈನ್ಸ್ (Nepal Airlines) ವಿಮಾನಗಳ (Flight) ನಡುವೆ ಸಂಭವಿಸಬಹುದಾಗಿದ್ದ ಭಾರೀ ಅನಾಹುತ ಕೂದಲೆಳೆ ಅಂತರದಲ್ಲಿ ತಪ್ಪಿರುವ ಘಟನೆ ತಡವಾಗಿ ವರದಿಯಾಗಿದೆ. ಎರಡೂ ವಿಮಾನಗಳ ನಡುವೆ ಡಿಕ್ಕಿ ಸಂಭವಿಸುವ ಸಾಧ್ಯತೆಯಿದ್ದು, ವಿಮಾನದ ಎಚ್ಚರಿಕೆ ವ್ಯವಸ್ಥೆ ಪೈಲಟ್‌ಗಳಿಗೆ ಅಪಾಯದ ಸೂಚನೆಯನ್ನು ನೀಡಿದ್ದರಿಂದ ದೊಡ್ಡ ಅನಾಹುತವನ್ನು ತಪ್ಪಿಸಲಾಗಿದೆ.

    ವರದಿಗಳ ಪ್ರಕಾರ ಮಲೇಷ್ಯಾದ ಕೌಲಾಲಂಪುರದಿಂದ ಕಠ್ಮಂಡುಗೆ (Kathmandu) ತೆರಳುತ್ತಿದ್ದ ನೇಪಾಳ ಏರ್‌ಲೈನ್ಸ್ ವಿಮಾನ ಹಾಗೂ ದೆಹಲಿಯಿಂದ ಕಠ್ಮಂಡುಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ ಶುಕ್ರವಾರ ಪರಸ್ಪರ ಡಿಕ್ಕಿ ಹೊಡೆಯಲು ಅತ್ಯಂತ ಹತ್ತಿರದಲ್ಲಿತ್ತು ಎನ್ನಲಾಗಿದೆ.

    ಏರ್ ಇಂಡಿಯಾ ವಿಮಾನ ಭೂಮಿಯಿಂದ 19,000 ಅಡಿ ಎತ್ತರದಿಂದ ಕೆಳಗಿಳಿಯುತ್ತಿದ್ದರೆ, ನೇಪಾಳ ಏರ್‌ಲೈನ್ಸ್ ವಿಮಾನ ಅದೇ ಸ್ಥಳದಲ್ಲಿ 15,000 ಅಡಿ ಎತ್ತರದಲ್ಲಿ ಹಾರಾಟ ನಡೆಸುತ್ತಿತ್ತು. ಎರಡು ವಿಮಾನಗಳು ಅತ್ಯಂತ ಸಮೀಪದಲ್ಲಿದೆ ಎಂದು ರಾಡಾರ್‌ನಲ್ಲಿ ತೋರಿಸಿದ್ದರಿಂದ ನೇಪಾಳ ಏರ್‌ಲೈನ್ಸ್ ವಿಮಾನ 7,000 ಅಡಿಗಳಿಗೆ ಇಳಿದಿದೆ ಎಂದು ನೇಪಾಳದ ನಾಗರಿಕ ವಿಮಾನಯಾನ ಪ್ರಾಧಿಕಾರ (ಸಿಎಎಎನ್) ವಕ್ತಾರರು ತಿಳಿಸಿದ್ದಾರೆ. ಇದನ್ನೂ ಓದಿ: Women’s World Boxing Championship: ಭಾರತದ ನಿಖತ್‌, ಲವ್ಲಿನಾ ಚಿನ್ನದ ಪಂಚ್‌

    ಸದ್ಯ ಎರಡು ವಿಮಾನಗಳ ನಡುವೆ ಸಂಭವಿಸಬಹುದಾಗಿದ್ದ ಭಾರೀ ಅನಾಹುತ ಕೂದಲೆಳೆ ಅಂತರದಲ್ಲಿ ತಪ್ಪಿದೆ. ನಾಗರಿಕ ವಿಮಾನಯಾನ ಪ್ರಾಧಿಕಾರ ಅಜಾಗರೂಕತೆ ವಹಿಸಿದ ಹಿನ್ನೆಲೆ ಏರ್ ಟ್ರಾಫಿಕ್ ಕಂಟ್ರೋಲ್ ವಿಭಾಗದ ಮೂವರು ಉದ್ಯೋಗಿಗಳನ್ನು ಅಮಾನತುಗೊಳಿಸಿದೆ. ಘಟನೆಯ ತನಿಖೆಗಾಗಿ 3 ಸದಸ್ಯರ ಸಮಿತಿಯನ್ನು ರಚಿಸಿದೆ. ಇದನ್ನೂ ಓದಿ: 2 ವರ್ಷ ಕೋವಿಡ್ ಸ್ಟ್ರಿಕ್ಟ್ ರೂಲ್ಸ್ ಬಳಿಕ ಮೊದಲ ಬಾರಿ ಚೀನಾದ ಹಾಂಕಾಂಗ್‌ನಲ್ಲಿ ಪ್ರತಿಭಟನೆ