Tag: air india

  • ವಿಮಾನ ದುರಂತದಲ್ಲಿ ಮೃತಪಟ್ಟ ಪೈಲಟ್‍ಗೆ ಏರ್ ಇಂಡಿಯಾ ಸಿಬ್ಬಂದಿಯಿಂದ ಅಂತಿಮ ನಮನ

    ವಿಮಾನ ದುರಂತದಲ್ಲಿ ಮೃತಪಟ್ಟ ಪೈಲಟ್‍ಗೆ ಏರ್ ಇಂಡಿಯಾ ಸಿಬ್ಬಂದಿಯಿಂದ ಅಂತಿಮ ನಮನ

    – ಹುಟ್ಟೂರು ತಲುಪಿದ ಅಖಿಲೇಶ್ ಮೃತದೇಹ

    ದೆಹಲಿ/ಲಕ್ನೋ: ಕೇರಳದ ಕೋಯಿಕ್ಕೋಡ್ ಕರಿಪುರ ವಿಮಾನ ದುರಂತದಲ್ಲಿ ಮಡಿದ ಪೈಲಟ್‍ಗೆ ಏರ್ ಇಂಡಿಯಾ ಎಕ್ಸ್‍ ಪ್ರೆಸ್ ಸಿಬ್ಬಂದಿ ಅಂತಿಮ ನಮನ ಸಲ್ಲಿಸಿದರು.

    ಶುಕ್ರವಾರ ರಾತ್ರಿ ನಡೆದ ದುರಂತದಲ್ಲಿ ಪೈಲಟ್ ಅಖಿಲೇಶ್ ಕುಮಾರ್ ಮೃತಪಟ್ಟಿದ್ದರು. ಶನಿವಾರ ರಾತ್ರಿ ಏರ್ ಇಂಡಿಯಾ ಸಿಬ್ಬಂದಿ ಅಂತಿಮ ನಮನ ಸಲ್ಲಿಸಿ, ಮೃತದೇಹ ಇಂದು ಬೆಳಗ್ಗೆ ಹುಟ್ಟೂರು ಉತ್ತರ ಪ್ರದೇಶದ ಮಥುರಾಗೆ ತಲುಪಿದೆ. ಇದನ್ನೂ ಓದಿ: ಅಜ್ಜಿ ಮನೆ ನೋಡುವ ಮುನ್ನವೇ ಕಣ್ಣು ಮುಚ್ಚಿದ 1 ವರ್ಷದ ಕಂದಮ್ಮ

    ಕೊರೊನಾ ವೈರಸ್ ಲಾಕ್‍ಡೌನ್ ಹಿನ್ನೆಲೆಯಲ್ಲಿ ದುಬೈನಲ್ಲಿ ಸಿಲುಕಿದ್ದ ಭಾರತೀಯರನ್ನು ಶುಕ್ರವಾರ ಏರ್ ಇಂಡಿಯಾ ವಿಮಾನ ಮೂಲಕ ಕೇರಳದ ಕೋಯಿಕ್ಕೋಡ್ ನಲ್ಲಿರುವ ಕರಿಪುರ ವಿಮಾನ ನಿಲ್ದಾಣಕ್ಕೆ ಕರೆತರಲಾಗುತ್ತಿತ್ತು. ಆದರೆ ದುರಾದೃಷ್ಟವಶಾತ್ ವಿಮಾನ ಲ್ಯಾಂಡಿಂಗ್ ವೇಳೆ ರನ್ ವೇಯಿಂದ ಜಾರಿ ದುರಂತಕ್ಕೀಡಾಗಿತ್ತು.  ಇದನ್ನೂ ಓದಿ: ಏರ್ ಇಂಡಿಯಾ ವಿಮಾನ ಇಬ್ಭಾಗವಾದ್ರೂ ಬದುಕುಳಿದ ಪುಟ್ಟ ಕಂದಮ್ಮ

    ದುಬೈಯಿಂದ 190 ಪ್ರಯಾಣಿಕರನ್ನು ಕರೆತರುತ್ತಿದ್ದ ಏರ್‍ಇಂಡಿಯಾ ಎಕ್ಸ್ ಪ್ರೆಸ್ ವಿಮಾನವನ್ನು ಪೈಲಟ್ ದೀಪಕ್ ವಸಂತ ಸಾಠೆ ಎರಡು ಬಾರಿ ವಿಮಾನ ನಿಲ್ದಾಣಕ್ಕೆ ಸುತ್ತು ಹೊಡೆಸಿದ್ದರು. ಆದರೆ ಪ್ರತಿಕೂಲ ಹವಾಮಾನದ ಸಮಸ್ಯೆಯ ಮಧ್ಯೆಯೂ ವಿಮಾನವನ್ನು ಟೇಬಲ್ ಟಾಪ್ ರನ್‍ವೇಯಲ್ಲಿ ಇಳಿಸಿದರೂ ಅದು 35 ಅಡಿ ಕಂದಕಕ್ಕೆ ಜಾರಿ ಬಿದ್ದು ಗೋಡೆಗೆ ಡಿಕ್ಕಿ ಹೊಡೆದು ಇಬ್ಭಾಗವಾಗಿತ್ತು. ಘಟನೆಯಲ್ಲಿ ಇಬ್ಬರು ಪೈಲಟ್ ಗಳು ಸೇರಿ 19 ಮಂದಿ ದಾರುಣವಾಗಿ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಯುದ್ಧವಿಮಾನವನ್ನು ಹಾರಿಸಿದ್ದ ಪೈಲಟ್‌ ಸಾಠೆ 2 ಬಾರಿ ಲ್ಯಾಂಡಿಗ್‌ಗೆ ಪ್ರಯತ್ನಿಸಿದ್ರು

  • ಕೇರಳ ವಿಮಾನ ದುರಂತ – ಸಾವನ್ನಪ್ಪಿದ ವ್ಯಕ್ತಿಯ ಕುಟುಂಬಕ್ಕೆ 10 ಲಕ್ಷ ಪರಿಹಾರ

    ಕೇರಳ ವಿಮಾನ ದುರಂತ – ಸಾವನ್ನಪ್ಪಿದ ವ್ಯಕ್ತಿಯ ಕುಟುಂಬಕ್ಕೆ 10 ಲಕ್ಷ ಪರಿಹಾರ

    -ಮಂಗಳೂರು ವಿಮಾನ ದುರಂತದಿಂದ ನಾವು ಪಾಠ ಕಲಿತಿದ್ದೇವೆ

    ತಿರುವನಂತಪುರ: ದುಬೈ-ಕೋಯಿಕ್ಕೋಡ್ ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ ಸಾವನ್ನಪ್ಪಿದ ಕುಟುಂಬಗಳಿಗೆ ತಲಾ ಹತ್ತು ಲಕ್ಷ ಪರಿಹಾರವನ್ನು ಏರ್ ಇಂಡಿಯಾ ನೀಡಲಿದೆ ಎಂದು ಕೇಂದ್ರ ವಿಮಾನಯಾನ ಸಚಿವ ಹರಿದೀಪ್‍ಸಿಂಗ್ ಪುರಿ ತಿಳಿಸಿದ್ದಾರೆ.

    ಇಂದು ಏರ್ ಇಂಡಿಯಾ ವಿಮಾನ ಅಪಘಾತಕ್ಕೀಡದ ಪ್ರದೇಶಕ್ಕೆ ತೆರಳಿ ಪರಿಶೀಲಿಸಿದ ಅವರು ದುರ್ಘಟನೆ ಬಗ್ಗೆ ತನಿಖೆ ನಡೆಸಿ ವರದಿ ನೀಡುವಂತೆ ಸೂಚಿಸಿದರು. ಬಳಿಕ ಮಾತನಾಡಿ, ಜೀವಗಳನ್ನು ಉಳಿಸುವುದು ನಮ್ಮ ಆದ್ಯತೆಯಾಗಿದ್ದು ಸಾವನ್ನಪ್ಪಿದರ ಕುಟುಂಬಕ್ಕೆ ಹತ್ತು ಲಕ್ಷ, ಗಂಭೀರ ಗಾಯಗೊಂಡವರಿಗೆ ಎರಡು ಲಕ್ಷ ಮತ್ತು ಸಣ್ಣ ಪುಟ್ಟ ಗಾಯಾಳುಗಳಿಗೆ 50 ಸಾವಿರ ಪರಿಹಾರ ಏರ್ ಇಂಡಿಯಾ ಕಡೆಯಿಂದ ನೀಡಲಾಗುವುದು. ಈಗಾಗಲೇ 23 ಮಂದಿ ಆಸ್ಪತ್ರೆ ಡಿಸ್ಚಾರ್ಜ್ ಆಗಿದ್ದಾರೆ. 149 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದರು. ಇದನ್ನೂ ಓದಿ: ಯುದ್ಧವಿಮಾನವನ್ನು ಹಾರಿಸಿದ್ದ ಪೈಲಟ್‌ ಸಾಠೆ 2 ಬಾರಿ ಲ್ಯಾಂಡಿಗ್‌ಗೆ ಪ್ರಯತ್ನಿಸಿದ್ರು

    ದುರಂತ ನಡೆದ ಸ್ಥಳದಲ್ಲಿ ವಿಮಾನದ ಎರಡು ಬ್ಲಾಕ್ ಬಾಕ್ಸ್ ಸಿಕ್ಕಿವೆ, ಮುಂದಿನ ಹಂತದಲ್ಲಿ ದುರಂತಕ್ಕೆ ನಿಖರ ಕಾರಣ ಪತ್ತೆಹಚ್ಚಲಾಗುವುದು ಈ ಬಗ್ಗೆ ತನಿಖೆ ನಡೆಸಿದೆ. ವಿಮಾನ ಹಾರಾಟ ನಡೆಸುತ್ತಿದ್ದವರು ಅನುಭವಿ ಪೈಲೆಟ್ ಗಳು ಈ ಪೈಕಿ ಮುಖ್ಯ ಪೈಲೈಟ್ ಸಾಠೆ ಹಿಂದೆ 27 ಬಾರಿ ಇದೇ ರನ್ ವೇ ಲ್ಯಾಂಡ್ ಮಾಡಿದ್ದಾರೆ ಅವರಿಗೆ 10,848 ಗಂಟೆ ವಿಮಾನ ಹಾರಾಟ ನಡೆಸಿರುವ ಅನುಭವ ಇದೆ ಆದರು ಅವಘಡ ಸಂಭವಿಸಿದೆ. ಇದನ್ನೂ ಓದಿ: ಮರಳಿ ಮನೆಗೆ – ಟೇಕಾಫ್‌ ಮೊದಲು ಕುಟುಂಬದೊಂದಿಗೆ ಫೇಸ್‌ಶೀಲ್ಡ್‌ ಹಾಕಿ ಸೆಲ್ಫಿ, ಪ್ರಯಾಣಿಕ ಸಾವು 

    ನಾವು ಮಂಗಳೂರು ವಿಮಾನ ದುರಂತದಿಂದ ಪಾಠ ಕಲಿತಿದ್ದೇವೆ, ಪ್ರತಿನಿತ್ಯವೂ ಹೊಸ ಪಾಠ ವಿಮಾನಯಾನ ಕ್ಷೇತ್ರದಲ್ಲಿ ಕಲಿಯುತ್ತಿದ್ದೇವೆ, ಈಗ ಈ ಘಟನೆ ಮತ್ತೊಂದು ಹೊಸ ಪಾಠ ಕಲಿಸಿದೆ, ಅಪಘಾತಕ್ಕೆ ಕಾರಣ ನೈಜ ಸಮಯ ಆಧರಿಸಿ ಹೊರ ಬರಲಿದ್ದು ಇದನ್ನು ಆಧರಿಸಿ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.

  • ವಿಮಾನದ ಬ್ಲ್ಯಾಕ್‌ ಬಾಕ್ಸ್‌ ಪತ್ತೆ – ಹೇಗೆ ಕೆಲಸ ಮಾಡುತ್ತೆ? ಬೆಂಕಿಯಲ್ಲಿ ಸುಟ್ಟು ಹೋಗಲ್ಲ ಯಾಕೆ?

    ವಿಮಾನದ ಬ್ಲ್ಯಾಕ್‌ ಬಾಕ್ಸ್‌ ಪತ್ತೆ – ಹೇಗೆ ಕೆಲಸ ಮಾಡುತ್ತೆ? ಬೆಂಕಿಯಲ್ಲಿ ಸುಟ್ಟು ಹೋಗಲ್ಲ ಯಾಕೆ?

    ಕ್ಯಾಲಿಕಟ್‌: ಕೇರಳ ವಿಮಾನ ದುರಂತ ಪ್ರಕರಣದ ತನಿಖೆ ನಡೆಸುತ್ತಿರುವ ನಾಗರಿಕ ವಿಮಾನಯಾನ ನಿರ್ದೇಶನಾಲಯ(ಡಿಜಿಸಿಎ) ಅಧಿಕಾರಿಗಳಿಗೆ ಬ್ಲ್ಯಾಕ್‌ ಬಾಕ್ಸ್‌ ಸಿಕ್ಕಿದೆ.

    ದುಬೈನಿಂದ ಹೊರಟಿದ್ದ ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ಟೇಬಲ್‌ಟಾಪ್‌ ವಿಮಾನ ನಿಲ್ದಾಣದ ರನ್‌ವೇಯಲ್ಲಿ ಲ್ಯಾಂಡ್‌ ಆಗಿ 35 ಅಡಿ ಆಳದ ಕಂದಕಕ್ಕೆ ಬಿದ್ದ ಪರಿಣಾಮ 18 ಮಂದಿ ಮೃತಪಟ್ಟಿದ್ದಾರೆ. 137 ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದು, 22 ಮಂದಿಯ ಸ್ಥಿತಿ ಚಿಂತಾಜನಕವಾಗಿದೆ. ಇಬ್ಬರು ಪೈಲಟ್‌ ಮೃತಪಟ್ಟಿದ್ದು, 4 ಮಂದಿ ವಿಮಾನ ಸಿಬ್ಬಂದಿ ಪಾರಾಗಿದ್ದಾರೆ.

    ಏನಿದು ಬ್ಲ್ಯಾಕ್‌ ಬಾಕ್ಸ್‌?
    ವಿಮಾನದಲ್ಲಿ ಧ್ವನಿಗ್ರಹಣಕ್ಕೆ ಬಳಸಲಾಗುವ ಎರಡು ಸಾಧನಗಳನ್ನು ತಾಂತ್ರಿಕ ಭಾಷೆಯಲ್ಲಿ ‘ಬ್ಲ್ಯಾಕ್ ಬಾಕ್ಸ್’ ಎಂದು ಕರೆಯಲಾಗುತ್ತದೆ. ಬ್ಲ್ಯಾಕ್ ಬಾಕ್ಸ್ ಅನ್ನು ‘ಫ್ಲೈಟ್ ಡಾಟಾ ರೆಕಾರ್ಡರ್’ ಎಂದೂ ಕರೆಯುತ್ತಾರೆ. ಬ್ಲ್ಯಾಕ್ ಬಾಕ್ಸ್ ಹಾರಾಟದ ಸಮಯದಲ್ಲಿನ ವಿಮಾನದ ಎಲ್ಲಾ ಚಟುವಟಿಕೆಗಳನ್ನು ದಾಖಲಿಸುತ್ತದೆ. ಎಲ್ಲ ರೀತಿಯ ವಿಮಾನಗಳಲ್ಲಿ ಬ್ಲ್ಯಾಕ್‌ ಬಾಕ್ಸ್‌ ಅನ್ನು ಕಡ್ಡಾಯವಾಗಿ ಅಳವಡಿಸಲಾಗುತ್ತದೆ.

    ವಿಮಾನ ಅಪಘಾತವಾದಾಗ ಅದಕ್ಕೆ ಕಾರಣ ಪತ್ತೆ ಹಚ್ಚಲು ನೆರವಾಗಲೆಂದೇ 5 ಕೆಜಿ ತೂಕದ ರೆಕಾರ್ಡಿಂಗ್ ಸಾಧನವನ್ನು ಅಳವಡಿಸಲಾಗುತ್ತದೆ. ಭದ್ರತೆಯ ದೃಷ್ಟಿಯಿಂದ ಕಪ್ಪು ಪೆಟ್ಟಿಗೆಯನ್ನು ಸಾಮಾನ್ಯವಾಗಿ ವಿಮಾನದ ಹಿಂಭಾಗದಲ್ಲಿ ಇಡಲಾಗುತ್ತದೆ. ಈ ಪೆಟ್ಟಿಗೆಯನ್ನು ಟೈಟಾನಿಯಂ ಲೋಹದಿಂದ ಮಾಡಲಾಗಿದ್ದು, ಟೈಟಾನಿಯಂ ಪೆಟ್ಟಿಗೆಯಲ್ಲಿ ಸುತ್ತುವರಿಯಲಾಗಿದೆ. ಇದು ಎಷ್ಟು ಶಕ್ತಿಶಾಲಿಯೆಂದರೆ ಸಮುದ್ರದಲ್ಲಿ ಬಿದ್ದರೆ ಅಥವಾ ಎತ್ತರದಿಂದ ಬಿದ್ದರೂ ಯಾವುದೇ ಆಘಾತವನ್ನು ತಡೆದುಕೊಳ್ಳುವ ಶಕ್ತಿಯನ್ನು ಹೊಂದಿದೆ. . ಇದನ್ನೂ ಓದಿ: ಯುದ್ಧವಿಮಾನವನ್ನು ಹಾರಿಸಿದ್ದ ಪೈಲಟ್‌ ಸಾಠೆ 2 ಬಾರಿ ಲ್ಯಾಂಡಿಂಗ್‌ಗೆ ಪ್ರಯತ್ನಿಸಿದ್ರು

    ಹಿಂಭಾಗದಲ್ಲಿ ಯಾಕೆ?
    ಅಪಘಾತದ ಸಂಭವಿಸಿದಾಗ ಹಿಂಭಾಗದಲ್ಲಿ ಅದರಲ್ಲೂ ಬಾಲದ ಕಡೆ ಪೆಟ್ಟು ಬೀಳುವುದು ಕಡಿಮೆ. ಯಾಕೆಂದರೆ ಬಾಲ ಎತ್ತರದಲ್ಲಿರುತ್ತದೆ. ಈ ಕಾರಣಕ್ಕೆ ಬಾಲದಲ್ಲಿ ಅಳವಡಿಸಲಾಗಿರುತ್ತದೆ. ವಿಮಾನದ ಎಂಜಿನ್‌ಗೆ ಜೋಡಿಸಲಾದ ಜನರೇಟರ್ ನಿಂದ ಬ್ಲ್ಯಾಕ್ ಬಾಕ್ಸ್ ಚಾರ್ಜ್ ಆಗುತ್ತದೆ.  ಇದನ್ನೂ ಓದಿ: ಮರಳಿ ಮನೆಗೆ – ಟೇಕಾಫ್‌ ಮೊದಲು ಕುಟುಂಬದೊಂದಿಗೆ ಫೇಸ್‌ಶೀಲ್ಡ್‌ ಹಾಕಿ ಸೆಲ್ಫಿ, ಪ್ರಯಾಣಿಕ ಸಾವು 

    ಎರಡು ಪ್ರತ್ಯೇಕ ಪೆಟ್ಟಿಗೆಗಳಿವೆ
    1. ಫ್ಲೈಟ್ ಡೇಟಾ ರೆಕಾರ್ಡರ್ – ಈ ಪೆಟ್ಟಿಗೆಯಲ್ಲಿ ನಿರ್ದೇಶನ, ಎತ್ತರ, ಇಂಧನ, ವೇಗ, ಕ್ಯಾಬಿನ್ ತಾಪಮಾನ ಇತ್ಯಾದಿಗಳ ಬಗ್ಗೆ ಮಾಹಿತಿ ಇರುತ್ತದೆ. ಕೊನೆಯ 25 ಗಂಟೆಗಳ ಕಾಲದ ಒಟ್ಟು 88 ಮಾಹಿತಿಗಳ ಡೇಟಾವನ್ನು ಸಂಗ್ರಹಿಸುತ್ತದೆ. 1,100 ಡಿಗ್ರಿ ಸೆಲ್ಶಿಯಸ್‌ ತಾಪಮಾನ ಇದ್ದರೆ 1 ಗಂಟೆ, 260 ಡಿಗ್ರಿ ಸೆಲ್ಶಿಯಸ್‌ ತಾಪಮಾನ ಇದ್ದರೆ ಇದ್ದರೆ 10 ಗಂಟೆಗಳ ಕಾಲ ಡೇಟಾವನ್ನು ತಡೆದಿಟ್ಟುಕೊಳ್ಳಬಹುದು. ತನಿಖಾಧಿಕಾರಿಗಳಿಗೆ ಸುಲಭವಾಗಿ ಗುರುತಿಸಲು ಕೆಂಪು ಅಥವಾ ಗುಲಾಬಿ ಬಣ್ಣದಲ್ಲಿ ಈ ಪೆಟ್ಟಿಗೆಯನ್ನು ಮಾಡಲಾಗುತ್ತದೆ.

    2. ಕಾಕ್‌ಪಿಟ್ ವಾಯ್ಸ್ ರೆಕಾರ್ಡರ್: ಈ ಬಾಕ್ಸ್ ಕೊನೆಯ ಎರಡು ಗಂಟೆಗಳ ವಿಮಾನದ ಧ್ವನಿಯನ್ನು ದಾಖಲಿಸುತ್ತದೆ. ಯಾವುದೇ ಅಪಘಾತ ಸಂಭವಿಸುವ ಮೊದಲು ಎಂಜಿನ್, ತುರ್ತು ಎಚ್ಚರಿಕೆ, ಕ್ಯಾಬಿನ್ ಮತ್ತು ಕಾಕ್‌ಪಿಟ್‌ ಧ್ವನಿಯನ್ನು ದಾಖಲಿಸುತ್ತದೆ. ಇದನ್ನೂ ಓದಿ: ವಿಮಾನ ದುರಂತ- ಮೃತಪಟ್ಟವರಲ್ಲಿ ಓರ್ವನಿಗೆ ಕೊರೊನಾ ಪಾಸಿಟಿವ್

    ಹೇಗೆ ಕಾರ್ಯನಿರ್ವಹಿಸುತ್ತದೆ?
    ಇದು ಯಾವುದೇ ವಿದ್ಯುತ್ ಇಲ್ಲದೆ 30 ದಿನಗಳವರೆಗೆ ಬ್ಲಾಕ್‌ ಬಾಕ್ಸ್‌ ಕೆಲಸ ಮಾಡಬಹುದು. ಪತ್ತೆ ಕಾರ್ಯ ಸುಲಭವಾಗಲು ಸುಮಾರು 30 ದಿನಗಳವರೆಗೆ ಸಿಗ್ನಲ್‌ ಹೊರಸೂಸುತ್ತಿರುತ್ತದೆ. ಈ ಧ್ವನಿಯನ್ನು ತನಿಖಾಧಿಕಾರಿಗಳು ಸುಮಾರು 2-3 ಕಿಲೋಮೀಟರ್ ದೂರದಿಂದ ಗುರುತಿಸಬಹುದು. 14 ಸಾವಿರ ಅಡಿ ಆಳದ ಸಮದ್ರದಲ್ಲಿದ್ದರೂ ಸಿಗ್ನಲ್‌ ಹೊರ ಸೂಸುತ್ತಿರುತ್ತದೆ.

    ಬಳಕೆ ಆಗಿದ್ದು ಯಾವಾಗ?
    1953-54ರ ವರ್ಷದಲ್ಲಿ ವಿಮಾನ ಅಪಘಾತಗಳು ಹೆಚ್ಚಾಗುತ್ತಿತ್ತು. ಯಾಕೆ ಈ ಅಪಘಾತಗಳು ಸಂಭವಿಸುತ್ತದೆ ಎಂಬುದನ್ನು ಪತ್ತೆ ಹಚ್ಚಲು ಮತ್ತು ಮುಂದೆ ಅಪಘಾತ ತಡೆಯಲು ಬ್ಲ್ಯಾಕ್‌ಬಾಕ್ಸ್‌ ಅನ್ನು ಅಭಿವೃದ್ಧಿ ಪಡಿಸಲಾಯಿತು. ಈ ಮೊದಲು ಇದು ಕೆಂಪು ಬಣ್ಣದ್ದಲ್ಲಿತ್ತು. ಹೀಗಾಗಿ ಇದನ್ನು ʼಕೆಂಪು ಮೊಟ್ಟೆ’ ಎಂಬ ಹೆಸರಿನಿಂದ ಕರೆಯಲಾಗುತ್ತಿತ್ತು. ಬಳಿಕ ಬಾಕ್ಸ್‌ ಒಳಗಡೆ ಇರುವ ಗೋಡೆಗಳು ಕಪ್ಪು ಬಣ್ಣದ್ದಲ್ಲಿದ್ದ ಕಾರಣ ಇದನ್ನು ‘ಬ್ಲ್ಯಾಕ್ ಬಾಕ್ಸ್’ ಎಂದು ಕರೆಯಲಾಯಿತು. ವಿಮಾನ ಅಪಘಾತಕ್ಕೆ ನಿಖರ ಕಾರಣವನ್ನು ಈ ಬ್ಲ್ಯಾಕ್‌ ಬಾಕ್ಸ್‌ ನೀಡದೇ ಇದ್ದರೂ ತನಿಖೆಯಲ್ಲಿ ಇದು ಪ್ರಮುಖ ಪಾತ್ರ ವಹಿಸುತ್ತದೆ ಎಂಬುದು ಸತ್ಯ.

  • ವಿಮಾನ ದುರಂತ- ಮೃತಪಟ್ಟವರಲ್ಲಿ ಓರ್ವನಿಗೆ ಕೊರೊನಾ ಪಾಸಿಟಿವ್

    ವಿಮಾನ ದುರಂತ- ಮೃತಪಟ್ಟವರಲ್ಲಿ ಓರ್ವನಿಗೆ ಕೊರೊನಾ ಪಾಸಿಟಿವ್

    – ಗಾಯಾಳುಗಳನ್ನು ನೋಡಲು ಆಸ್ಪತ್ರೆಗೆ ಧಾವಿಸ್ಬೇಡಿ
    – ಸಿಎಂ ಪಿಣರಾಯಿ ನಿಯೋಗ ಆಸ್ಪತ್ರೆಗೆ ಭೇಟಿ

    ತಿರುವನಂತಪುರಂ: ಕೋಯಿಕ್ಕೋಡ್ ಕರಿಪುರ ವಿಮಾನ ನಿಲ್ದಾಣದಲ್ಲಿ ನಡೆದ ದುರಂತದಲ್ಲಿ ಸಾವನ್ನಪ್ಪಿದವರಲ್ಲಿ ಓರ್ವನಿಗೆ ಕೊರೊನಾ ಪಾಸಿಟಿವ್ ಇರುವುದು ದೃಢವಾಗಿದೆ.

    ಪ್ರಯಾಣಿಕ ದುಬೈನಿಂದ ಭಾರತಕ್ಕೆ ವಂದೆ ಭಾರತ್ ಮಿಷನ್ ಅಡಿ ಟಿಕೆಟ್ ಪಡೆದು ಶುಕ್ರವಾರ ರಾತ್ರಿ ವಿಮಾನ ಹತ್ತಿದ್ದರು. ಆದರೆ ಕರಿಪುರ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ವೇಳೆ ಅವಘಡ ಸಂಭವಿಸಿದ್ದು, ಏರ್ ಇಂಡಿಯಾ ವಿಮಾನ ಇಬ್ಭಾಗವಾಗಿತ್ತು. ಈ ದುರಂತದಲ್ಲಿ ಸಾವನ್ನಪ್ಪಿದವರ ಕೊರೊನಾ ಟೆಸ್ಟ್ ಮಾಡಿದಾಗ ಓರ್ವನಿಗೆ ಕೊರೊನಾ ಪಾಸಿಟಿವ್ ಇರುವುದು ವರದಿಯಾಗಿದೆ.

    ದುಬೈಯಿಂದ 184 ಪ್ರಯಾಣಿಕರನ್ನು ಕರೆತರುತ್ತಿದ್ದ ಏರ್‍ಇಂಡಿಯಾ ಎಕ್ಸ್ ಪ್ರೆಸ್ ವಿಮಾನವನ್ನು ದೀಪಕ್ ವಸಂತ ಸಾಠೆ ಎರಡು ಬಾರಿ ವಿಮಾನ ನಿಲ್ದಾಣಕ್ಕೆ ಸುತ್ತು ಹೊಡೆಸಿದ್ದರು. ಆದರೆ ಪ್ರತಿಕೂಲ ಹವಾಮಾನದ ಸಮಸ್ಯೆಯ ಮಧ್ಯೆಯೂ ವಿಮಾನವನ್ನು ಟೇಬಲ್ ಟಾಪ್ ರನ್‍ವೇಯಲ್ಲಿ ಇಳಿಸಿದರೂ ಅದು 35 ಅಡಿ ಕಂದಕಕ್ಕೆ ಜಾರಿ ಬಿದ್ದು ಗೋಡೆಗೆ ಡಿಕ್ಕಿ ಹೊಡೆದು ಇಬ್ಭಾಗವಾಗಿದೆ. ಇದನ್ನೂ ಓದಿ: ಏರ್ ಇಂಡಿಯಾ ವಿಮಾನ ಇಬ್ಭಾಗವಾದ್ರೂ ಬದುಕುಳಿದ ಪುಟ್ಟ ಕಂದಮ್ಮ

    ದುರ್ಘಟನೆ ನಡೆಯುತ್ತಿದ್ದಂತೆ ಅಧಿಕಾರಿಗಳು, ಅಗ್ನಿಶಾಮಕ ಸಿಬ್ಬಂದಿ ಹಾಗೂ ಸ್ಥಳೀಯ ಸಹಕಾರದಿಂದ ಗಾಯಗೊಂಡ 149 ಮಂದಿಯನ್ನು ಕೂಡಲೇ ಸ್ಥಳೀಯ ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಘಟನೆಯಲ್ಲಿ 18 ಮಂದಿ ಸಾವನ್ನಪ್ಪಿದ್ದು, 22 ಮಂದಿಯ ಸ್ಥಿತಿ ಗಂಭೀರವಾಗಿದೆ. 22 ಮಂದಿ ಈಗಾಗಲೇ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಮಲಪ್ಪುರಂ ಕಲೆಕ್ಟರ್ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಯುದ್ಧವಿಮಾನವನ್ನು ಹಾರಿಸಿದ್ದ ಪೈಲಟ್‌ ಸಾಠೆ 2 ಬಾರಿ ಲ್ಯಾಂಡಿಗ್‌ಗೆ ಪ್ರಯತ್ನಿಸಿದ್ರು

    ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರನ್ನು ಯಾರೂ ಭೇಟಿ ಮಾಡಬೇಡಿ ಎಂದು ಅಲ್ಲಿನ ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ. ಇಂದು ಘಟನಾ ಸ್ಥಳಕ್ಕೆ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ 10 ವರ್ಷಗಳ ಹಿಂದೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಕೂಡ ಇಂತದ್ದೇ ದುರಂತ ಸಂಭವಿಸಿತ್ತು ಎಂದು ಮೆಲುಕು ಹಾಕಿಕೊಂಡರು. ಇದನ್ನೂ ಓದಿ: ಮರಳಿ ಮನೆಗೆ – ಟೇಕಾಫ್‌ ಮೊದಲು ಕುಟುಂಬದೊಂದಿಗೆ ಫೇಸ್‌ಶೀಲ್ಡ್‌ ಹಾಕಿ ಸೆಲ್ಫಿ, ಪ್ರಯಾಣಿಕ ಸಾವು 

    ರಾಜ್ಯಪಾಲ, ಸಿಎಂ ನಿಯೋಗ ಭೇಟಿ:
    ಕೋಯಿಕ್ಕೋಡ್ ನಲ್ಲಿರುವ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ವಿಮಾನ ದುರಂತದಲ್ಲಿ ಮೃತಪಟ್ಟವರ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್, ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ಅವರ ನಿಯೋಗ ತಿರುವನಂಪುರದಿಂದ ಕೋಯಿಕ್ಕೋಡ್ ಏರ್ ಇಂಡಿಯಾ ವಿಶೇಷ ವಿಮಾನದಲ್ಲಿ ಕೋಯಿಕ್ಕೋಡ್ ನಲ್ಲಿರುವ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಭೇಟಿ ನೀಡಿದೆ. ಇದನ್ನೂ ಓದಿ: ಅಜ್ಜಿ ಮನೆ ನೋಡುವ ಮುನ್ನವೇ ಕಣ್ಣು ಮುಚ್ಚಿದ 1 ವರ್ಷದ ಕಂದಮ್ಮ

    ವಿಮಾನ ಅಪಘಾತಕ್ಕೆ ಕಾರಣವೇನು ಎಂಬುದರ ಬಗ್ಗೆ ಈಗಾಗಲೇ ತನಿಖೆ ಆರಂಭವಾಗಿದೆ. ಈ ತನಿಖೆ ಬಳಿಕ ಮುಂದಿನ ಕ್ರಮ ಏನು ಅಂತ ಹೇಳುವುದಾಗಿ ಇದೇ ವೇಳೆ ಸಿಎಂ ಪಿಣರಾಯಿ ಅವರು ತಿಳಿಸಿದರು. ನಿಯೋಗದಲ್ಲಿ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್, ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಸ್ಪೀಕರ್ ಪಿ. ವಿಶ್ವಾಸ್ ಮೆಹ್ತಾ ಹಾಗೂ ರಾಜ್ಯ ಪೊಲೀಸ್ ಮುಖ್ಯಸ್ಥ ಲೋಕನಾಥ್ ಬೆಹ್ರಾ ಪ್ರಮುಖರಾಗಿದ್ದರು.

  • ಅಜ್ಜಿ ಮನೆ ನೋಡುವ ಮುನ್ನವೇ ಕಣ್ಣು ಮುಚ್ಚಿದ 1 ವರ್ಷದ ಕಂದಮ್ಮ

    ಅಜ್ಜಿ ಮನೆ ನೋಡುವ ಮುನ್ನವೇ ಕಣ್ಣು ಮುಚ್ಚಿದ 1 ವರ್ಷದ ಕಂದಮ್ಮ

    – ಮೊಮ್ಮಗನಿಗಾಗಿ ಕಾದು ಕುಳಿತಿದ್ದ ಅಜ್ಜ-ಅಜ್ಜಿಗೆ ಶಾಕ್

    ತಿರುವನಂತಪುರಂ: ಕೇರಳದ ಕರಿಪುರ ವಿಮಾನ ನಿಲ್ದಾಣದಲ್ಲಿ ದುರಂತಕ್ಕೀಡಾದವರ ಒಂದೊಂದೇ ಮನಮಿಡಿಯುವ ಕಥೆಗಳು ಬೆಳಕಿಗೆ ಬರುತ್ತಿದೆ.

    ಹೌದು. 1 ವರ್ಷದ ಅಜಮ್ ಮೊಹಮ್ಮದ್ ತನ್ನ ಅಜ್ಜಿ ಮನೆಗೆ ಹೋಗುವ ಮುನ್ನವೇ ಕಣ್ಣುಮುಚ್ಚಿರುವ ಮನಕಲಕುವ ಘಟನೆಯೊಂದು ನಡೆದಿದೆ. ಕೋಯಿಕ್ಕೋಡ್ ವೆಲ್ಲಿಮಡುಕುನ್ನು ಮ್ದು ನಿಜಮ್ ಹಾಗೂ ಸಾಹಿರಾ ದಂಪತಿಗೆ ಒಂದು ವರ್ಷಗಳ ಹಿಂದೆ ಅಜಮ್ ಜನಿಸಿದ್ದಾನೆ.

    ಮಗುವಿಗೆ 1 ವರ್ಷವಾದ ಬಳಿಕ ಇದೀಗ ತಮ್ಮ ಮಗುವನ್ನು ತಾಯ್ನಾಡಿಗೆ ಪರಿಚಯಿಸಲು ತಾಯಿ ತನ್ನ ಮೂವರು ಮಕ್ಕಳೊಂದಿಗೆ ವಿಮಾನ ಹತ್ತಿದ್ದರು. ಆದರೆ ಅಜಮ್ ಮೊದಲ ಪ್ರಯಾಣವೇ ಅಂತಿಮ ಪ್ರಯಾಣವಾಗಿದ್ದು, ಇತ್ತ ಮೊಮ್ಮಗನನ್ನು ನೋಡಲು ಕಾತರದಿಂದ ಕಾಯುತ್ತಿದ್ದ ಅಜ್ಜ-ಅಜ್ಜಿಗೆ ದಿಗಿಲು ಬಡಿದಂತಾಗಿದೆ. ಇದನ್ನೂ ಓದಿ: ಏರ್ ಇಂಡಿಯಾ ವಿಮಾನ ಇಬ್ಭಾಗವಾದ್ರೂ ಬದುಕುಳಿದ ಪುಟ್ಟ ಕಂದಮ್ಮ

    ಅಜಮ್ ತಾಯಿ 29 ವರ್ಷದ ಸಾಹಿರಾ ಬಾನು ಕೂಡ ದುರ್ಘಟನೆಗೆ ಬಲಿಯಾಗಿದ್ದಾರೆ. ಅಜಮ್ ಸಹೋದರರಾದ 8 ವರ್ಷದ ಇಹಾನ್ ಮೊಹಮ್ಮದ್ ಹಾಗೂ 4 ವರ್ಷದ ಮರಿಯಮ್ ಮೊಹಮ್ಮದ್ ಗಾಯಗೊಂಡಿದ್ದು, ಬೇರೆ ಬೇರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ. ಪರಿಪುರದಲ್ಲಿ ವಿಮಾನ ಲ್ಯಾಂಡಿಂಗ್ ಆಗುತ್ತಿದ್ದ ಸಂದರ್ಭದಲ್ಲಿ ಪುಟ್ಟ ಕಂದಮ್ಮ ಅಜಮ್ ತನ್ನ ತಾಯಿಯ ತೊಡೆಯ ಮೇಲೆ ಕುಳಿತುಕೊಂಡಿದ್ದ ಎನ್ನಲಾಗಿದೆ.

    ನಿಜಮ್ ಹಾಗೂ ಅವರ ಕುಟುಂಬ ಕಳೆದ 10 ವರ್ಷಗಳಿಂದ ದುಬೈನಲ್ಲಿ ನೆಲೆಸಿದೆ. ನಿಜಮ್ ಅಲ್ಲೇ ಉಳಿದುಕೊಂಡಿದ್ದು, ಸಾಹಿರಾ ತಮ್ಮ ಮೂವರು ಮಕ್ಕಳೊಂದಿಗೆ ಶುಕ್ರವಾರ ದುಬೈನಿಂದ ತಾಯ್ನಾಡಿಗೆ ಬರಲು ವಿಮಾನ ಏರಿದ್ದಾರೆ. ಆದರೆ ತಾಯ್ನಾಡಿಗೆ ಕಾಲಿಡುವ ಮೊದಲೇ ದುರಂತಕ್ಕೀಡಾಗಿದ್ದಾರೆ. ಸಾಹಿರಾಗೆ ಹೆರಿಗೆ ಸಮಯದಲ್ಲಿ ಜೊತೆಗಿದಿದ್ದರಿಂದ ತಾಯಿ ಸಕೀನಾ ಮಾತ್ರ ಅಜಮ್ ನನ್ನು ನೋಡಿದ್ದರು. ಹೀಗಾಗಿ ಮಗನಿಗೆ 1 ವರ್ಷ ತುಂಬಿದ ಬಳಿಕ ಆತನನ್ನು ತಾಯ್ನಾಡು ಕಕ್ಕಡ್‍ಗೆ ಪರಿಚಯಿಸಲು ದಂಪತಿ ತುದಿಗಾಲಿನಲ್ಲಿದ್ದರು ಎಂದು ಸಾಹಿರಾ ಸಂಬಂಧಿಕರು ಬೇಸರ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಯುದ್ಧವಿಮಾನವನ್ನು ಹಾರಿಸಿದ್ದ ಪೈಲಟ್‌ ಸಾಠೆ 2 ಬಾರಿ ಲ್ಯಾಂಡಿಗ್‌ಗೆ ಪ್ರಯತ್ನಿಸಿದ್ರು

    ಕಳೆದ ರಾತ್ರಿ ಮಕ್ಕಳು ಎಲ್ಲಿದ್ದಾರೆ ಎಂದು ಹುಡುಕಾಡಿದೆವು. ಆದರೆ ಇಬ್ಬರು ಮಕ್ಕಳು ಪ್ರತ್ಯೇಕ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ನಿಟ್ಟುಸಿರು ಬಿಟ್ಟೆವು. ಇಬ್ಬರೂ ಕೂಡ ಅಪಾಯದಿಂದ ಪಾರಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಸಾಹಿರಾ ಸಂಬಂಧಿಕರು ತಿಳಿಸಿದ್ದಾರೆ. ಇದನ್ನೂ ಓದಿ: ಮರಳಿ ಮನೆಗೆ – ಟೇಕಾಫ್‌ ಮೊದಲು ಕುಟುಂಬದೊಂದಿಗೆ ಫೇಸ್‌ಶೀಲ್ಡ್‌ ಹಾಕಿ ಸೆಲ್ಫಿ, ಪ್ರಯಾಣಿಕ ಸಾವು
     

    ಶುಕ್ರವಾರ ರಾತ್ರಿ ವಿಮಾನ ದುರಂತ ಸಂಭವಿಸುತ್ತಿದ್ದಂತೆಯೇ ಗಂಭೀರ ಗಾಯಗೊಂಡಿದ್ದ ಸಾಹಿರಾರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಯಿಸಿತಾದರೂ ಚಿಕಿತ್ಸೆ ಫಲಕಾರಿಯಾಗೆ ಮೃತಪಟ್ಟಿದ್ದಾರೆ. ಇತ್ತ ಅಜಮ್ ಕೂಡ ಕೋಯಿಕ್ಕೋಡ್ ಮೆಡಿಕಲ್ ಕಾಲೇಜ್ ಅಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ. ಸಹೋದರ ಮರಿಯಮ್ ನನ್ನು ಮೊದಲು ಬೇಬಿ ಮೆಮೊರಿಯಲ್ ಆಸ್ಪತ್ರೆಗೆ ದಾಖಲಿಸಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮೈತ್ರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

    ಸಾಹಿರಾ ತಂದೆ ನಿವೃತ್ತ ಶಿಕ್ಷಕರಾಗಿದ್ದು, ಮೊಮ್ಮಗನ ಬರುವಿಕೆಗಾಗಿ ಕಾದು ಕುಳಿತಿದ್ದು, ಇದೀಗ ಮಗಳು, ಮೊಮ್ಮಗನನ್ನು ಕಳೆದುಕೊಂಡು ಕುಟುಂಬ ದುಃಖದ ಕಡಲಲ್ಲಿ ಮುಳುಗಿದೆ. ಇದನ್ನೂ ಓದಿ: ಮಂಗಳೂರು ದುರಂತದ ಬಳಿಕ ಎಚ್ಚರಿಸಿದ್ದೆ, ಆದ್ರೆ ನಿರ್ಲಕ್ಷಿಸಿದ್ರು – ವಾಯು ಸುರಕ್ಷಾ ತಜ್ಞ

  • ಕೋಯಿಕ್ಕೋಡ್ ವಿಮಾನ ದುರಂತ- 16 ಸಾವು, 15 ಮಂದಿ ಗಂಭೀರ

    ಕೋಯಿಕ್ಕೋಡ್ ವಿಮಾನ ದುರಂತ- 16 ಸಾವು, 15 ಮಂದಿ ಗಂಭೀರ

    ತಿರುವನಂತಪುರಂ: ಕೇರಳದ ಕರಿಪುರ ವಿಮಾನ ನಿಲ್ದಾಣದಲ್ಲಿ ನಡೆದ ದುರಂತ ಘಟನೆಯಲ್ಲಿ 16 ಮಂದಿ ಸಾವನ್ನಪ್ಪಿದ್ದು, 15 ಮಂದಿಯ ಸ್ಥಿತಿ ಗಂಭೀರವಾಗಿದೆ. ಘಟನೆಯಲ್ಲಿ 123 ಮಂದಿ ಗಾಯಗೊಂಡಿದ್ದಾರೆ ಎಂದು ಮಲಪ್ಪುರಂ ಎಸ್‍ಪಿ ತಿಳಿಸಿದ್ದಾರೆ.

    ಇಂದು ಸಂಜೆ 7.45ರ ಸುಮಾರಿಗೆ ದುಬೈನಿಂದ ಬಂದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ ಕೋಯಿಕ್ಕೋಡ್‍ನ ಕರಿಪುರದಲ್ಲಿ ಲ್ಯಾಂಡಿಗೆ ವೇಳೆ ನಿಲ್ದಾಣದ ರನ್ ವೇಯಲ್ಲಿ ಜಾರಿ ದುರಂತಕ್ಕೀಡಾಗಿದೆ. ಲ್ಯಾಂಡಿಂಗ್ ವೇಳೆ ಬೆಂಕಿ ಹೊತ್ತಿಕೊಂಡಿಲ್ಲ. ವಿಮಾನದಲ್ಲಿ 174 ಮಂದಿ ಪ್ರಯಾಣಿಕರಿದ್ದರು. 10 ಮಂದಿ ಮಕ್ಕಳು, ಇಬ್ಬರು ಪೈಲಟ್‍ಗಳು ಹಾಗೂ ಐವರು ಕ್ಯಾಬಿನ್ ಸಿಬ್ಬಂದಿ ಇದ್ದರು. ಸದ್ಯ ಪ್ರಯಾಣಿಕರ ರಕ್ಷಣಾ ಕಾರ್ಯ ಭರದಿಂದ ಸಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗುತ್ತಿದೆ.

    ಭೀಕರ ದುರಂತದಲ್ಲಿ ಪುಟ್ಟ ಕಂದಮ್ಮವೊಂದು ಬದುಕುಳಿದಿದೆ. ವಿಮಾನ ಭೀಕರ ದುರಂತಕ್ಕೀಡಾದ ವಿಚಾರ ತಿಳಿದು ಸ್ಥಳಕ್ಕೆ ಆಗಮಿಸಿದ ರಕ್ಷಣಾ ಸಿಬ್ಬಂದಿಗೆ ಪುಟ್ಟ ಮಗುವೊಂದು ಅಳುತ್ತಿರುವ ಶಬ್ದ ಕೇಳಿದೆ. ಕೂಡಲೇ ಎಚ್ಚೆತ್ತ ಸಿಬ್ಬಂದಿ ಮಗುವಿನ ಅಳು ಕೇಳುತ್ತಿರುವ ಕಡೆ ತೆರಳಿ ರಕ್ಷಿಸಿದ್ದಾರೆ. ಘಟನೆಯಿಂದ ಮಗುವಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಕೊಂಡ್ರೊಟ್ಟಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದೊಯ್ದಿದ್ದಾರೆ.

  • ಏರ್ ಇಂಡಿಯಾ ವಿಮಾನ ಇಬ್ಭಾಗವಾದ್ರೂ ಬದುಕುಳಿದ ಪುಟ್ಟ ಕಂದಮ್ಮ

    ಏರ್ ಇಂಡಿಯಾ ವಿಮಾನ ಇಬ್ಭಾಗವಾದ್ರೂ ಬದುಕುಳಿದ ಪುಟ್ಟ ಕಂದಮ್ಮ

    ತಿರುವನಂತಪುರಂ: ಕೇರಳದ ಕೋಯಿಕ್ಕೋಡ್ ಕರಿಪುರ ವಿಮಾನ ನಿಲ್ದಾಣದಲ್ಲಿ ನಡೆದ ಭೀಕರ ದುರಂತದಲ್ಲಿ ಪುಟ್ಟ ಕಂದಮ್ಮವೊಂದು ಬದುಕುಳಿದಿದೆ.

    ವಿಮಾನ ಭೀಕರ ದುರಂತಕ್ಕೀಡಾದ ವಿಚಾರ ತಿಳಿದು ಸ್ಥಳಕ್ಕೆ ಆಗಮಿಸಿದ ರಕ್ಷಣಾ ಸಿಬ್ಬಂದಿಗೆ ಪುಟ್ಟ ಮಗುವೊಂದು ಅಳುತ್ತಿರುವ ಶಬ್ದ ಕೇಳಿದೆ. ಕೂಡಲೇ ಎಚ್ಚೆತ್ತ ಸಿಬ್ಬಂದಿ ಮಗುವಿನ ಅಳು ಕೇಳುತ್ತಿರುವ ಕಡೆ ತೆರಳಿ ರಕ್ಷಿಸಿದ್ದಾರೆ. ಘಟನೆಯಿಂದ ಮಗುವಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಕೊಂಡ್ರೊಟ್ಟಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದೊಯ್ದಿದ್ದಾರೆ.

    ಈ ಸಂಬಂಧ ಸಿವಿಲ್ ಪೊಲಿಸ್ ಅಧಿಕಾರಿ ಮಗುವನ್ನು ಹಿಡಿದ ಫೋಟೋದೊಂದಿಗೆ ಆಡಿಯೋ ಬಿಡುಗಡೆ ಮಾಡಿದ್ದು, ದುಬೈನಿಂದ ಬಂದ ವಿಮಾನ ಇಲ್ಲಿ ಅವಘಡಕ್ಕೆ ತುತ್ತಾಗಿದೆ. ಘಟನೆಯಲ್ಲಿ ಮಗುವೊಂದು ಪ್ರಾಣಾಪಾಯದಿಂದ ಪಾರಾಗಿದ್ದು, ಸದ್ಯ ಮಗುವಿಗೆ ಯಾರೂ ಇಲ್ಲ. ಮಗುವನ್ನು ಆಸ್ಪತ್ರೆಗೆ ದಾಖಲಿಸುವುದಾಗಿ ತಿಳಿಸಿದ್ದಾರೆ.

    ಇಂದು ಸಂಜೆ 7.45ರ ಸುಮಾರಿಗೆ ದುಬೈನಿಂದ ಕೋಯಿಕ್ಕೋಡ್ ಗೆ ಬರುತ್ತಿದ್ದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ ಲ್ಯಾಂಡಿಗೆ ವೇಳೆ ನಿಲ್ದಾಣದ ರನ್ ವೇಯಲ್ಲಿ ಜಾರಿ ದುರಂತಕ್ಕೀಡಾಗಿದೆ. ಲ್ಯಾಂಡಿಂಗ್ ವೇಳೆ ಬೆಂಕಿ ಹೊತ್ತಿಕೊಂಡಿಲ್ಲ. ವಿಮಾನದಲ್ಲಿ 174 ಮಂದಿ ಪ್ರಯಾಣಿಕರಿದ್ದರು. 10 ಮಂದಿ ಮಕ್ಕಳು, ಇಬ್ಬರು ಪೈಲಟ್‍ಗಳು ಹಾಗೂ ಐವರು ಕ್ಯಾಬಿನ್ ಸಿಬ್ಬಂದಿ ಇದ್ದರು. ಸದ್ಯ ಪ್ರಯಾಣಿಕರ ರಕ್ಷಣಾ ಕಾರ್ಯ ಭರದಿಂದ ಸಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗುತ್ತಿದೆ.

  • ‘Proud Of You’ – ಏರ್ ಇಂಡಿಯಾ ಸೇವೆಗೆ ಪಾಕ್ ಮೆಚ್ಚುಗೆ

    ‘Proud Of You’ – ಏರ್ ಇಂಡಿಯಾ ಸೇವೆಗೆ ಪಾಕ್ ಮೆಚ್ಚುಗೆ

    ನವದೆಹಲಿ: “ನಿಮ್ಮ ಬಗ್ಗೆ ನಮಗೆ ಹೆಮ್ಮೆ ಆಗುತ್ತಿದೆ” – ಹೀಗೆ ಕರೆಯುವ ಮೂಲಕ ಕೊರೊನಾ ಸಂಕಷ್ಟದ ಸಮಯದಲ್ಲಿ ಭಾರತದ ಸಹಕಾರವನ್ನು ಪಾಕಿಸ್ತಾನ ಶ್ಲಾಘಿಸಿದೆ.

    ಹೌದು. ಅಂತರಾಷ್ಟ್ರೀಯ ವೇದಿಕೆಯಲ್ಲಿ ಭಾರತದ ವಿರುದ್ಧ ಸದಾ ದೂರಿಕೊಂಡೇ ಬರುತ್ತಿರುವ ಪಾಕಿಸ್ತಾನ ಕೊರೊನಾದಿಂದ ಆಗಿರುವ ಸಮಸ್ಯೆಯನ್ನು ಏರ್ ಇಂಡಿಯಾ ಬಗೆ ಹರಿಸುತ್ತಿರುವುದನ್ನು ನೋಡಿ ಮೆಚ್ಚುಗೆ ಸೂಚಿಸಿದೆ.

    ಆಗಿದ್ದೇನು?
    ಲಾಕ್‍ಡೌನ್ ಘೋಷಣೆಯಾದ ಬಳಿಕ ಭಾರತ ಸರ್ಕಾರ ಸಂಪೂರ್ಣವಾಗಿ ವಿದೇಶಿ ವಿಮಾನಗಳ ಸಂಚಾರಕ್ಕೆ ನಿಷೇಧ ಹೇರಿತ್ತು. ಈ ನಿಷೇಧ ಕೈಗೊಳ್ಳುವ ಮುನ್ನವೇ ಹಲು ದೇಶಗಳಿಂದ ಪ್ರಯಾಣಿಕರು ಭಾರತಕ್ಕೆ ಆಗಮಿಸಿದ್ದರು. ವಿಮಾನ ಸೇವೆ ರದ್ದಾದ ಹಿನ್ನೆಲೆಯಲ್ಲಿ ವಿವಿಧ ರಾಯಭಾರ ಕಚೇರಿಗಳ ಮನವಿಗೆ ಸ್ಪಂದಿಸಿದ ಭಾರತ ಏರ್ ಇಂಡಿಯಾ ವಿಶೇಷ ವಿಮಾನದ ಮೂಲಕ ಈ ಪ್ರಯಾಣಿಕರನ್ನು ವಿದೇಶಕ್ಕೆ ಕಳುಹಿಸಿಕೊಡುತ್ತಿದೆ.

    ಏಪ್ರಿಲ್ 2 ರಂದು ಮುಂಬೈ ವಿಮಾನ ನಿಲ್ದಾಣದಿಂದ ಜರ್ಮನಿಯ ಫ್ರಾಂಕ್‍ಫರ್ಟ್ ವಿಮಾನ ನಿಲ್ದಾಣಕ್ಕೆ ಯುರೋಪ್ ಪ್ರಜೆಗಳನ್ನು ಹೊತ್ತುಕೊಂಡು ಏರ್ ಇಂಡಿಯಾ ಸಾಗುತಿತ್ತು. ಏರ್ ಇಂಡಿಯಾ ಪಾಕಿಸ್ತಾನದ ಫ್ಲೈಟ್ ಇನ್ಫಾರ್ಮೆಶನ್ ರಿಜನ್(ಎಫ್‍ಐಆರ್) ತಲುಪುತ್ತಿದ್ದಂತೆ ಪಾಕಿಸ್ತಾನ ಏರ್ ಟ್ರಾಫಿಕ್ ಕಂಟ್ರೋಲರ್(ಎಟಿಸಿ) ಅಸಲಾಂ ವಾಲಿಕುಮ್ ಎಂದು ಹೇಳಿ ಸ್ವಾಗತಿಸಿದ್ದಾರೆ.

    “ಇದು ಫ್ರಾಂಕ್‍ಫರ್ಟ್‍ಗೆ ತೆರಳುತ್ತಿರುವ ಪರಿಹಾರ ವಿಮಾನವಲ್ಲವೇ ದೃಢಪಡಿಸಿ” ಎಂದು ಪಾಕ್ ಎಟಿಸಿ ಹೇಳಿದೆ. ಇದಕ್ಕೆ ಕ್ಯಾಪ್ಟನ್, “ಹೌದು” ಎಂದು ಉತ್ತರಿಸಿದ್ದಾರೆ.

    ಈ ವೇಳೆ “ಇಂತಹ ಕಠಿಣ ಪರಿಸ್ಥಿತಿಯಲ್ಲೂ ನೀವು ವಿಶೇಷ ವಿಮಾನ ಸೇವೆ ನೀಡುತ್ತಿದ್ದೀರಿ. ನಮಗೆ ತುಂಬಾ ಹೆಮ್ಮೆ ಆಗುತ್ತಿದೆ. ಗುಡ್ ಲಕ್” ಎಂದು ಮೆಚ್ಚುಗೆ ಸೂಚಿಸಿದ್ದಾರೆ. ಇದನ್ನು ಕೇಳಿ ಭಾರತದ ಕ್ಯಾಪ್ಟನ್ ಆಶ್ಚರ್ಯಗೊಂಡು “ಧನ್ಯವಾದಗಳು” ಎಂದು ಪ್ರತಿಕ್ರಿಯಿಸಿದ್ದರೆ.

    ಪ್ರಯಾಣದ ಸಂದರ್ಭದಲ್ಲಿ ಭಾರತದ ವಿಮಾನಕ್ಕೆ ಇರಾನ್ ವಾಯುಸೀಮೆಯ ರೇಡಾರ್ ಸಂಪರ್ಕಕಕ್ಕೆ ಸಿಕ್ಕಿರಲಿಲ್ಲ. ಈ ವಿಚಾರವನ್ನು ಭಾರತದ ಕ್ಯಾಪ್ಟನ್ ಪಾಕಿಸ್ತಾನದ ಎಟಿಸಿಗೆ ತಿಳಿಸಿದ್ದಾರೆ. ಕೂಡಲೇ ಪಾಕ್ ಎಟಿಸಿ ಇರಾಕ್ ಟೆಹರಾನ್ ಎಟಿಸಿ ಜೊತೆ ಸಂಪರ್ಕಿಸಿ ಸಹಾಯ ಮಾಡಿದ್ದಾರೆ.

    ಈ ವಿಚಾರದ ಬಗ್ಗೆ ಏರ್ ಇಂಡಿಯಾ ಪೈಲಟ್ ಮಾತನಾಡಿ, “ನನ್ನ ಜೀವನದಲ್ಲಿ ಮೊದಲ ಬಾರಿಗೆ ನೇರವಾದ ದಾರಿಯಲ್ಲಿ ಪ್ರಯಾಣಿಸಿದ್ದೇನೆ. ಇರಾನ್ ನೇರ ಮತ್ತು ಹತ್ತಿರವಾದ ದಾರಿಯನ್ನು ಏರ್‍ಲೈನ್ಸ್ ಕಂಪನಿಗಳಿಗಳಿಗೆ ನೀಡುವುದು ಬಹಳ ಅಪರೂಪ. ಈ ವಾಯು ದಾರಿ ಇರಾನಿನ ರಕ್ಷಣೆಗೆ ಮಾತ್ರ ಮೀಸಲು. ಆದರೆ ಇರಾನ್ ಎಟಿಸಿ ನೇರವಾದ ದಾರಿಯನ್ನು ನೀಡಿದ್ದು ಮಾತ್ರವಲ್ಲದೇ ಅವರ ವಾಯು ಸೀಮೆಯನ್ನು ದಾಟುವಾಗ ‘ಆಲ್ ದಿ ಬೆಸ್ಟ್’ ಎಂದು ಹೇಳಿ ಮೆಚ್ಚುಗೆ ಸೂಚಿಸಿದರು ಎಂಬುದಾಗಿ ತಿಳಿಸಿದ್ದಾರೆ.

    ಇರಾನ್ ಬಳಿಕ ಟರ್ಕಿ ವಾಯು ಸೀಮೆಯನ್ನು ಬಳಸಿ ಏರ್ ಇಂಡಿಯಾ ವಿಮಾನ ಜರ್ಮನಿಯ ಫ್ರಾಂಕ್‍ಫರ್ಟ್ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಿದೆ. ಏರ್ ಇಂಡಿಯಾ ವಿಮಾನ ಬೆಳಗ್ಗೆ 9:15ಕ್ಕೆ ಲ್ಯಾಂಡ್ ಆಗಬೇಕಿತ್ತು. ಆದರೆ ಪಾಕಿಸ್ತಾನ ಮತ್ತು ಎಟಿಸಿ ಅಧಿಕಾರಿಗಳ ಸಹಾಯದಿಂದ 45 ನಿಮಿಷ ಬೇಗ ಅಂದರೆ 8:30ಕ್ಕೆ ಲ್ಯಾಂಡ್ ಆಗಿದೆ.

    ಜರ್ಮನಿ, ಫ್ರಾನ್ಸ್, ಐರ್ಲೆಂಡ್ ಮತ್ತು ಕೆನಡಾದ ರಾಯಭಾರ ಕಚೇರಿ ಮನವಿಯ ಮೇರೆಗೆ ಏರ್ ಇಂಡಿಯಾ ಭಾರತದಲ್ಲಿ ಅತಂತ್ರರಾಗಿರುವ ಆ ದೇಶಗಳ ಪ್ರಜೆಗಳನ್ನು 18 ವಿಶೇಷ ವಿಮಾನಗಳ ಮೂಲಕ ಕಳುಹಿಸಿ ಕೊಡುತ್ತಿದೆ. ಈ ವಿಮಾನದಲ್ಲೇ ಚೀನಾದಿಂದ ಬರುತ್ತಿರುವ ಕೊರೊನಾಗೆ ಸಂಬಂಧಿಸಿದ ವೈದ್ಯಕೀಯ ಪರಿಕರಗಳನ್ನು ಏರ್ ಇಂಡಿಯಾ ವಿಮಾನಗಳು ವಿದೇಶಕ್ಕೆ ಕಳುಹಿಸುತ್ತಿವೆ.

  • ಏ. 30ರವರೆಗೆ ಏರ್‌ಇಂಡಿಯಾ ಟಿಕೆಟ್ ಬುಕ್ಕಿಂಗ್ ಕ್ಯಾನ್ಸಲ್

    ಏ. 30ರವರೆಗೆ ಏರ್‌ಇಂಡಿಯಾ ಟಿಕೆಟ್ ಬುಕ್ಕಿಂಗ್ ಕ್ಯಾನ್ಸಲ್

    ನವದೆಹಲಿ: ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಅಂತರಾಷ್ಟ್ರೀಯ ಮತ್ತು ದೇಶಿಯ ವಿಮಾನಗಳ ಹಾರಾಟವನ್ನು ನಿಷೇಧ ಮಾಡಲಾಗಿತ್ತು. ಇದೀಗ ಏರ್‌ಇಂಡಿಯಾ ತನ್ನ ದೇಶಿಯ ಮತ್ತು ಅಂತರಾಷ್ಟ್ರೀಯ ವಿಮಾನಯಾದ ಟಿಕೆಟ್ ಬುಕ್ಕಿಂಗ್ ನಿಷೇಧವನ್ನು ವಿಸ್ತರಿಸಿದೆ.

    ಏಪ್ರಿಲ್ 14ರವರೆಗೂ ಲಾಕ್‍ಡೌನ್ ಇರುವುದರಿಂದ ಏಪ್ರಿಲ್ 30ರವರೆಗೂ ದೇಶಿಯ ಮತ್ತು ಅಂತರಾಷ್ಟ್ರೀಯ ವಿಮಾನಗಳ ಟಿಕೆಟ್ ಬುಕ್ಕಿಂಗ್ ಅನ್ನು ನಿಲ್ಲಿಸಲು ಏರ್ ಇಂಡಿಯಾ ತೀರ್ಮಾನಿಸಿದೆ.

    ಏಪ್ರಿಲ್ 14ರ ನಂತರ ದೇಶಿಯ ವಿಮಾನಗಳ ಟಿಕೆಟ್ ಬುಕ್ಕಿಂಗ್ ಆರಂಭಿಸಲಾಗುವುದು ಎಂದು ಇಂಡಿಗೋ, ಸ್ಪೈಸ್ ಜೆಟ್ ಮತ್ತು ಗೋಏರ್ ಹೇಳಿದೆ. ಇದೀಗ ಏರ್‌ಇಂಡಿಯಾ ಅಂತರಾಷ್ಟ್ರೀಯ ವಿಮಾನಯಾದ ಟಿಕೆಟ್ ಬುಕ್ಕಿಂಗ್ ನಿಷೇಧವನ್ನು ವಿಸ್ತರಿಸಿದೆ. ಹೀಗಾಗಿ ಏಪ್ರಿಲ್ 30ರವರೆಗೂ ಅಂತರಾಷ್ಟ್ರೀಯ ವಿಮಾನಗಳ ಟಿಕೆಟ್ ಬುಕ್ಕಿಂಗ್ ಅನ್ನು ಸ್ಥಗಿತಗೊಳಿಸಿದೆ.

    ಅಂತರಾಷ್ಟ್ರೀಯ ವಿಮಾನಗಳ ಬುಕ್ಕಿಂಗ್ ಗಳನ್ನು ನಿಷೇಧಿಸಲಾಗಿದೆ. ಕೊರೊನಾ ವೈರಸ್ ತಡೆಗಟ್ಟಲು ಮಾಡಲಾಗಿರುವ ಲಾಕ್‍ಡೌನ್ ಮಧ್ಯೆ ದೇಶಿಯ ಮತ್ತು ಅಂತರಾಷ್ಟ್ರೀಯ ಮಾರ್ಗಗಳಲ್ಲಿನ ವಾಣಿಜ್ಯ ವಿಮಾನಗಳ ಹಾರಾಟವನ್ನು ಏಪ್ರಿಲ್ 14ರವರೆಗೆ ಸ್ಥಗಿತಗೊಳಿಸಲಾಗಿದೆ. ಆದರೆ ಇದೀಗ ಏಪ್ರಿಲ್ 30ರವರೆಗೆ ಟಿಕೆಟ್ ಬುಕ್ಕಿಂಗ್ ಅನ್ನು ನಿಷೇಧಿಸಲಾಗಿದೆ ಎಂದು ಏರ್ ಇಂಡಿಯಾ ವಕ್ತಾರರು ತಿಳಿಸಿದ್ದಾರೆ.

  • ವಿಮಾನ ಪ್ರಯಾಣ ಬಂದ್ – ರದ್ದುಗೊಂಡ ವಿದೇಶಿ ವಾಯುಮಾರ್ಗಗಳ ವಿವರ ಓದಿ

    ವಿಮಾನ ಪ್ರಯಾಣ ಬಂದ್ – ರದ್ದುಗೊಂಡ ವಿದೇಶಿ ವಾಯುಮಾರ್ಗಗಳ ವಿವರ ಓದಿ

    ನವದೆಹಲಿ: ಕೊರೊನಾ ವೈರಸ್ ವ್ಯಾಪಕವಾಗಿ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ಭಾರತದ ಹಲವು ವಿಮಾನಯಾನ ಕಂಪನಿಗಳು ವಿದೇಶಗಳಿಗೆ ನೀಡುವ ಸೇವೆಯನ್ನು ಬಲವಂತವಾಗಿ ರದ್ದುಗೊಳಿಸಿದೆ.

    ಏರ್ ಇಂಡಿಯಾ ಮಾರ್ಚ್ 16 ರಿಂದ ಏಪ್ರಿಲ್ 30ರವರೆಗೆ ನೇಪಾಳದ ಕಠ್ಮಂಡು, ದುಬೈ, ಸೌದಿ ಅರೆಬಿಯಾದ ರಾಜಧಾನಿ ರಿಯಾದ್, ದಮ್ಮಂ, ಜೆಡ್ಡಾ, ಕತಾರ್ ರಾಜಧಾನಿ ದೋಹಾ, ಓಮನ್ ರಾಜಧಾನಿ ಮಸ್ಕತ್‍ಗೆ ದೇಶದ ವಿವಿಧ ವಿಮಾನ ನಿಲ್ದಾಣಗಳಿಂದ ಹೋಗುವ ವಿಮಾನ ಸೇವೆಯನ್ನು ರದ್ದುಮಾಡಿದೆ.

    ಏರ್ ಇಂಡಿಯಾ ಈಗಾಗಲೇ ಸ್ಪೇನ್ ಮ್ಯಾಡ್ರಿಡ್, ಫ್ರಾನ್ಸಿನ ಪ್ಯಾರಿಸ್, ಜರ್ಮನಿಯ ಫ್ರಂಕ್‍ಫರ್ಟ್, ಇಸ್ರೇಲಿನ ಟೆಲ್ ಎವಿವ್, ಇಟಲಿಯ ರೋಮ್ ಮತ್ತು ಮಿಲನ್, ದಕ್ಷಿಣ ಕೊರಿಯದ ಇಂಚಿಯಾನ್, ಕುವೈತ್, ಕೊಲೊಂಬೋಗೆ ಏಪ್ರಿಲ್ 30ರವರೆಗೆ ವಿಮಾನ ಸೇವೆಯನ್ನು ರದ್ದು ಮಾಡಿದೆ.

    ಆರಂಭದಲ್ಲಿ ಭಾರತ ಯುರೋಪ್, ಇಂಗ್ಲೆಂಡ್ ಮತ್ತು ಟರ್ಕಿ ದೇಶದ ಪ್ರಯಾಣಿಕರಿಗೆ ನಿರ್ಬಂಧ ಹೇರಿತ್ತು. ಇದರಿಂದಾಗಿ ಹಲವು ಮಾರ್ಗಗಳು ಬಂದ್ ಆಗಿತ್ತು. ಭಾರತ ಸರ್ಕಾರ ತಾತ್ಕಾಲಿಕವಾಗಿ ಏಪ್ರಿಲ್ 15ರವರೆಗೆ ವಿಶ್ವಸಂಸ್ಥೆ, ರಾಯಭಾರ ಸೇವೆಯಲ್ಲಿ ಸಲ್ಲಿಸುತ್ತಿರುವ ವ್ಯಕ್ತಿಗಳಿಗೆ ಹೊರತು ಪಡಿಸಿ ಬೇರೆ ಯಾರಿಗೂ ವೀಸಾ ನೀಡುವುದಿಲ್ಲ ಎಂಬ ನಿರ್ಧಾರ ಪ್ರಕಟಿಸಿದ ಬೆನ್ನಲ್ಲೇ ಈಗ ವಿಮಾನಯಾನ ಕಂಪನಿಗಳು ಸೇವೆಯನ್ನು ರದ್ದುಗೊಳಿಸುತ್ತಿವೆ.

    ರದ್ದುಗೊಂಡ ವಾಯುಮಾರ್ಗಗಳು
    ಹಾಂಕಾಂಗಿನಿಂದ ಭಾರತಕ್ಕೆ ಬರುವ ಕ್ಯಾಥೆಡ್ರಾಗನ್ ಸೇವೆ ಜೊತೆ ಬ್ಯಾಂಕಾಕ್, ಸಿಂಗಾಪುರ, ದೋಹಾ, ಕೊಲಂಬೋಗೆ ಸಂಚರಿಸುವ ಇಂಡಿಗೋ ವಿಮಾನ ಸೇವೆ ರದ್ದಾಗಿದೆ.

    ಕೊಲಂಬೋಗೆ ಸಂಚರಿಸುವ ಗೋ ಏರ್, ಬ್ಯಾಂಕಾಂಕ್‍ನಿಂದ ಭಾರತಕ್ಕೆ ಬರುವ ಥಾಯ್ ಏರ್‍ವೇಸ್, ಮಲೇಷ್ಯಾ ಏರ್ ಲೈನ್ಸ್,  ಕೌಲಾಲಂಪುರ್, ಸಿಂಗಾಪುರಕ್ಕೆ ಕೊಚ್ಚಿಯಿಂದ ಪ್ರಯಾಣಿಸುವ ಏರ್ ಇಂಡಿಯಾ ಎಕ್ಸ್ ಪ್ರೆಸ್, ರಿಯಾದಿಗೆ ಹೋಗುವ ಸೌದಿ ಅರೆಬಿಯಾ ಏರ್‍ಲೈನ್ಸ್, ಆಡಿಸ್ ಅಬಾಬಾದಿಂದ ಬರುವ ಇಥಿಯೋಪಿಯನ್ ಏರ್‍ಲೈನ್ಸ್ ಸೇವೆ ರದ್ದುಗೊಂಡಿದೆ.

    ಕುವೈತ್‍ನಿಂದ ಬರುವ ಕುವೈತ್ ಏರ್‍ವೇಸ್, ಜರ್ಮನಿಯಿಂದ ಫ್ರಂಕ್‍ಫರ್ಟ್ ನಿಂದ ಹೊರಡುವ ಲುಫ್ತಾನ್ಸ ಏರ್‍ಲೈನ್ಸ್, ಮಸ್ಕತ್ ನಿಂದ ಹೊರಡುವ ಓಮನ್ ಏರ್, ಪ್ಯಾರಿಸ್‍ನಿಂದ ಬರುವ ಏರ್ ಫ್ರಾನ್ಸ್,  ಬ್ಯಾಂಕಾಕ್‍ಗೆ ಸಂಪರ್ಕ ಕಲ್ಪಿಸುವ ಥಾಯ್ ಏರ್, ಬಹ್ರೇನ್ ದೇಶದಿಂದ ಬರುವ ಗಲ್ಫ್ ಏರ್, ಯುಎಇ ಶಾರ್ಜಾದಿಂದ ಬರುವ ಏರ್ ಅರೇಬಿಯಾ, ಲಂಡನ್‍ನಿಂದ ಹೊರಡುವ ಬ್ರಿಟಿಷ್ ಏರ್‍ವೇಸ್, ದುಬೈನಿಂದ ಬರುವ ಎಮಿರೇಟ್ಸ್ ವಿಮಾನ ಸೇವೆಗಳು ರದ್ದಾಗಿದೆ.