Tag: air india

  • ಕೊರೊನಾ ಎಫೆಕ್ಟ್ – 6 ದೇಶಗಳಿಗೆ ಏರ್ ಇಂಡಿಯಾ ಸೇವೆ ರದ್ದು

    ಕೊರೊನಾ ಎಫೆಕ್ಟ್ – 6 ದೇಶಗಳಿಗೆ ಏರ್ ಇಂಡಿಯಾ ಸೇವೆ ರದ್ದು

    ನವದೆಹಲಿ: ಕೊರೊನಾ ವೈರಸ್ ಹರಡುವ ಭೀತಿ ಹಿನ್ನೆಲೆಯಲ್ಲಿ ಇಟಲಿ, ಫ್ರಾನ್ಸ್, ಜರ್ಮನಿ, ಇಸ್ರೇಲ್, ದಕ್ಷಿಣ ಕೊರಿಯಾ, ಶ್ರೀಲಂಕಾ ದೇಶಗಳಿಗೆ ಏರ್ ಇಂಡಿಯಾ ವಿಮಾನ ಸೇವೆಯನ್ನು ರದ್ದು ಮಾಡಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

    ಕೊರೊನಾ ಸಾಂಕ್ರಾಮಿಕ ರೋಗ ಎಂದು ಘೋಷಣೆಯಾದ ಬೆನ್ನಲ್ಲೇ ಈ ನಿರ್ಧಾರವನ್ನು ಏರ್ ಇಂಡಿಯಾ ತೆಗೆದುಕೊಂಡಿದ್ದು, ಏಪ್ರಿಲ್ 30ರವರೆಗೂ ಈ ದೇಶಗಳಿಗೆ ಸೇವೆ ರದ್ದು ಮಾಡಲಾಗಿದೆ. ಇದಕ್ಕೂ ಮುನ್ನ ಇಟಲಿ, ಫ್ರಾನ್ಸ್ ಸೇರಿ ಯುರೋಪಿಯನ್ ದೇಶಗಳಿಗೆ ಚಾಲನೆಯಲ್ಲಿದ್ದ ವಿಮಾನ ಹಾರಾಟದ ಸಂಖ್ಯೆಯನ್ನು ಕಡಿಮೆ ಮಾಡಲಾಗಿತ್ತು. ವಿಶ್ವ ಆರೋಗ್ಯ ಸಂಸ್ಥೆ ಕೊರೊನಾ ಸಾಂಕ್ರಾಮಿಕ ರೋಗ ಎಂದು ಘೋಷಣೆ ಮಾಡಿದ ಬೆನ್ನಲ್ಲೇ ಬಳಿಕ ಇಟಲಿ, ಫ್ರಾನ್ಸ್, ಜರ್ಮನಿ, ಇಸ್ರೇಲ್, ದಕ್ಷಿಣ ಕೊರಿಯಾ, ಶ್ರೀಲಂಕಾಕ್ಕೆ ಹಾರಾಟ ರದ್ದು ಮಾಡಿದೆ.

    ಕೊರೊನಾ ವೈರಸ್ ಏಕಾಏಕಿ ಇಟಲಿ, ಫ್ರಾನ್ಸ್, ಜರ್ಮನಿ, ಸ್ಪೇನ್, ಇಸ್ರೇಲ್, ದಕ್ಷಿಣ ಕೊರಿಯಾದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕಂಡು ಬಂದಿದ್ದು, ಅಲ್ಲಿಂದ ಭಾರತಕ್ಕೆ ಬರುವ ಪ್ರಯಾಣಿಕರಲ್ಲಿ ಸೋಂಕು ಹೆಚ್ಚು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಏರ್ ಇಂಡಿಯಾ ಮುಖ್ಯಸ್ಥರು ತಿಳಿಸಿದ್ದಾರೆ.

    ಇತ್ತೀಚೆಗೆ ಮಾರ್ಚ್ 13ರಿಂದ ಏಪ್ರಿಲ್ 15ರವರೆಗೆ ರಾಜತಾಂತ್ರಿಕ ಮತ್ತು ಕೆಲವು ವಿಭಾಗಗಳನ್ನು ಹೊರತುಪಡಿಸಿ ಎಲ್ಲಾ ಮಾದರಿ ವೀಸಾಗಳನ್ನು ಅಮಾನತುಗೊಳಿಸಲು ಬುಧವಾರ ಕೇಂದ್ರ ಸರ್ಕಾರ ಆದೇಶ ಹೊರಡಿಸಿತ್ತು.

  • ‘ಪ್ಲೀಸ್ ನಮ್ಮನ್ನು ರಕ್ಷಿಸಿ’ – ಇಟಲಿ ವಿಮಾನ ನಿಲ್ದಾಣದಲ್ಲಿ ಸಿಲುಕಿಕೊಂಡಿದ್ದಾರೆ 50ಕ್ಕೂ ಹೆಚ್ಚು ಕನ್ನಡಿಗರು

    ‘ಪ್ಲೀಸ್ ನಮ್ಮನ್ನು ರಕ್ಷಿಸಿ’ – ಇಟಲಿ ವಿಮಾನ ನಿಲ್ದಾಣದಲ್ಲಿ ಸಿಲುಕಿಕೊಂಡಿದ್ದಾರೆ 50ಕ್ಕೂ ಹೆಚ್ಚು ಕನ್ನಡಿಗರು

    – ಪಬ್ಲಿಕ್ ಟಿವಿ ಜೊತೆ ನೋವು ತೋಡಿಕೊಂಡ ಪ್ರಯಾಣಿಕರು
    – ಕೊರೊನಾಗೆ ಇಟಲಿ ಬಂದ್
    – ಪ್ರತಿ ದಿನ ನಿಯಮ ಬದಲಾಗುತ್ತಿದೆ

    ರೋಮ್: ಕೊರೊನಾ ದಾಳಿಗೆ ಇಟಲಿ ಸಂಪೂರ್ಣ ಬಂದ್ ಆಗಿದ್ದು, ರೋಮ್ ಏರ್‌ಪೋರ್ಟ್‌ನಲ್ಲಿ 50ಕ್ಕೂ ಹೆಚ್ಚು ಕನ್ನಡಿಗರು ಸಿಲುಕಿದ್ದಾರೆ. ವಿಮಾನ ನಿಲ್ದಾಣದಲ್ಲಿ ಸಿಲುಕಿಕೊಂಡಿರುವ ಕನ್ನಡಿಗರು ಪಬ್ಲಿಕ್ ಟಿವಿ ಜೊತೆ ಮಾತನಾಡುವ ಮೂಲಕ ತಮ್ಮ ಕಷ್ಟವನ್ನು ಹೇಳಿಕೊಂಡಿದ್ದಾರೆ.

    ನಿರುಪಮಾ ಗೌಡ ಎಂಬವರು ಮಾತನಾಡಿ, “ನಾವೆಲ್ಲಾ ಇಲ್ಲಿ ಸಿಲುಚಿನಿ ಏರ್‌ಪೋರ್ಟ್‌ನಲ್ಲಿ ಸಿಲುಕಿ ಹಾಕಿಕೊಂಡಿದ್ದೇವೆ. ಭಾರತದಿಂದ ಫ್ಲೈಟ್ ಯಾವಾಗ ಬರುತ್ತೆ ಎಂದು ಕಾಯುತ್ತಿದ್ದೇವೆ. ಯಾವಾಗ ಬರುತ್ತೆ ಎನ್ನುವ ಮಾಹಿತಿಯೇ ಇನ್ನು ಸಿಕ್ಕಿಲ್ಲ. ಬುಧವಾರ ಸಂಜೆಯಿಂದ ನಾವು ಕಾಯುತ್ತಿದ್ದೇವೆ. ನಾವು ಏರ್‍ ಇಂಡಿಯಾ ಫ್ಲೈಟ್ ಬುಕ್ ಮಾಡಿದ್ದೇವೆ. ಆದರೆ ಇದುವರೆಗೆ ಯಾವುದೇ ಅಪ್ಡೇಟ್ ಬಂದಿಲ್ಲ. ಚಿಕ್ಕಪುಟ್ಟ ದೇಶವಾದ ಶ್ರೀಲಂಕಾದವರನ್ನು ಹಾಗೂ ಬೇರೆ ದೇಶದವರನ್ನು ಕರೆಸಿಕೊಳ್ಳುತ್ತಿದ್ದಾರೆ. ಆದರೆ ನಮ್ಮ ದೇಶದಿಂದ ಯಾವುದೇ ಪ್ರತಿಕ್ರಿಯೆ ಬರುತ್ತಿಲ್ಲ. ನಾವು ಈವರೆಗೆ ಆರೋಗ್ಯವಾಗಿದ್ದೇವೆ. ಇನ್ನು 2 ದಿನ ಇಲ್ಲೇ ಇದ್ದರೆ ಆರೋಗ್ಯ ಸಮಸ್ಯೆ ಎದುರಾಗುತ್ತೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

    ಮದನ್ ಗೌಡ ಎಂಬವರು,”ನಾನು ಸೋಮವಾರ ಫ್ಲೈಟ್ ಬುಕ್ ಮಾಡಿದ್ದೆ. ಏರ್ ಇಂಡಿಯಾ ವೆಬ್‍ಸೈಟ್‍ನಲ್ಲಿ ಯಾವುದೇ ದಾಖಲೆ ಕಡ್ಡಾಯ, ನೀವು ಕೊಡಲೇಬೇಕು ಎಂದು ಕೊಟ್ಟಿರಲಿಲ್ಲ. ನಾವು ರಾಯಭಾರ ಜೊತೆ ಮಾತನಾಡಿದ್ದೇವೆ. ಇಟಲಿಯಲ್ಲಿ ಹೊರಗಡೆ ಬರುವುದಕ್ಕೆ ಜನರು ಹೆದರುತ್ತಿದ್ದಾರೆ. ಇಟಲಿ ಸರ್ಕಾರ ತುಂಬಾ ಕಠಿಣವಾದ ರೂಲ್ಸ್ ತರುತ್ತಿದೆ. ಪ್ರತಿದಿನ ರೂಲ್ಸ್ ಚೇಂಜ್ ಆಗುತ್ತಿದೆ. ವಿಮಾನ ನಿಲ್ದಾಣದಲ್ಲಿ ತುಂಬಾ ರಿಸ್ಕ್ ಇದೆ. ಇಲ್ಲಿ ಫ್ಲೈಟ್ ಟೈಮ್ಮಿಂಗ್ ಚೇಂಜ್ ಮಾಡುತ್ತಿದ್ದಾರೆ. ಏರ್‌ಪೋರ್ಟ್‌ನಲ್ಲಿ ಸೋಂಕು ಹರಡುವ ಸಾಧ್ಯತೆ ಜಾಸ್ತಿ ಇದೆ. ಹೊರಗಡನೇ ಹೋಗಬಾರದು ಎನ್ನುವ ಈ ಟೈಮಲ್ಲಿ ಏನೂ ಮಾಹಿತಿ ಕೊಡದೇ ಏರ್‌ಪೋರ್ಟ್‌ನಲ್ಲಿ ಕೂಡಿ ಹಾಕಿದ್ರೆ ಎಷ್ಟು ಜನರಿಗೆ ಸೋಂಕು ಹರಡಬಹುದು. ನೀವೇ ನಿಮ್ಮ ಪ್ರಜೆಗಳನ್ನು ರಿಸ್ಕ್ ಗೆ ಸಿಲುಕಿಸುತ್ತಿದ್ದೀರ. ಯಾರಿಗಾದರೂ ಸೋಂಕು ತಗುಲಿದರೆ ಇದಕ್ಕೆಲ್ಲಾ ನೇರ ಕಾರಣ ಭಾರತ ಸರ್ಕಾರ ಹಾಗೂ ಏರ್ ಇಂಡಿಯಾನೇ ಎಂದು ಆಕ್ರೋಶ ಹೊರಹಾಕಿದರು.

    ಇದೇ ವೇಳೆ ಮತ್ತೊಬ್ಬ ವ್ಯಕ್ತಿ,”ಏರ್ ಇಂಡಿಯಾ ವಿಮಾನದಲ್ಲಿ ನಮ್ಮನ್ನು ಕರೆದೊಯ್ದಿಲ್ಲ. ನಾವು ವಾರದ ಮುಂಚೆಯೇ ಟಿಕೆಟ್ ಬುಕ್ ಮಾಡಿದ್ದೀವಿ. ಆದರೆ ಇಲ್ಲಿ ಈಗ ಮೆಡಿಕಲ್ ಸರ್ಟಿಫಿಕೇಟ್ ನೀಡಬೇಕೆಂದು ಹೇಳುತ್ತಿದ್ದಾರೆ. ಸರ್ಟಿಫಿಕೇಟ್ ನೀಡಿದ ಮೇಲೆ ಪರಿಶೀಲಿಸಿ ನಿಮ್ಮ ಪ್ರಯಾಣವನ್ನು ರೀಶೆಡ್ಯೂಲ್ ಮಾಡುತ್ತೇವೆ ಎನ್ನುತ್ತಿದ್ದಾರೆ. ನಮಗೆ ಮಾಹಿತಿ ನೀಡಲೂ ಸಹ ಇಲ್ಲಿ ಯಾರೂ ಇಲ್ಲ. ನಾವು ಇಲ್ಲಿ ಸಿಲುಕಿಕೊಂಡಿದ್ದೇವೆ. ದಯವಿಟ್ಟು ನಮ್ಮನ್ನು ಇಲ್ಲಿಂದ ರಕ್ಷಿಸಬೇಕೆಂದು ಮನವಿ ಮಾಡುತ್ತೇನೆ” ಎಂದು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

     

     

     

     

     

     

     

     

    ಡಿಸಿಎಂ ಅಶ್ವಥ್ ನಾರಾಯಣ ತನ್ನ ಟ್ವಿಟ್ಟರಿನಲ್ಲಿ, ಇಟಲಿ ಸೇರಿದಂತೆ ಕೊರೊನಾ ಪೀಡಿತ ಹೊರದೇಶಗಳಲ್ಲಿರುವ ಕನ್ನಡಿಗರನ್ನು ಕರೆತರಲು ನಮ್ಮ ಸರ್ಕಾರ ಕೇಂದ್ರದ ಪ್ರಧಾನಿ ಮೋದಿ ಸರ್ಕಾರದ ಜೊತೆಗೆ ಸಹಕರಿಸಿ ಕಾರ್ಯೋನ್ಮುಖವಾಗಿದೆ. ತಜ್ಞ ವೈದ್ಯರನ್ನು ಕರೆದುಕೊಂಡು ಹೋಗಿ ಅಲ್ಲಿಯೇ ತೀವ್ರ ತಪಾಸಣೆಗೆ ಒಳಪಡಿಸಿ ಸುರಕ್ಷತೆಯಿಂದ ಅವರನ್ನು ಇಲ್ಲಿಗೆ ವಾಪಸ್ ಕರೆತರಲಾಗುವುದು ಎಂದು ಟ್ವೀಟ್ ಮಾಡಿ ಭರವಸೆ ನೀಡಿದ್ದಾರೆ.

  • ಸುರಕ್ಷತಾ ನಿಯಮ ಉಲ್ಲಂಘನೆ – ಮೂವರು ಪೈಲೆಟ್ ಅಮಾನತು

    ಸುರಕ್ಷತಾ ನಿಯಮ ಉಲ್ಲಂಘನೆ – ಮೂವರು ಪೈಲೆಟ್ ಅಮಾನತು

    ನವದೆಹಲಿ: ಸುರಕ್ಷತಾ ನಿಯಮಗಳನ್ನು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ನಾಗರಿಕ ವಿಮಾನಯಾನ ಜಾರಿ ನಿರ್ದೇಶನಾಲಯ ಮೂವರು ಪೈಲೆಟ್‍ಗಳನ್ನು ಅಮಾನತುಗೊಳಿಸಿದೆ.

    ಒಬ್ಬರು ಏರ್ ಇಂಡಿಯಾ ಹಾಗೂ ಇನ್ನಿಬ್ಬರು ಸ್ಪೈಸ್ ಜೆಟ್ ವಿಮಾನದ ಪೈಲೆಟ್‍ಗಳನ್ನು ಸುರಕ್ಷತೆಯ ನಿಯಮಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ಅಮಾನತುಗೊಂಡಿದ್ದಾರೆ. ಮೂವರು ಪೈಲೆಟ್‍ಗಳ ಜೊತೆಗೆ ಓರ್ವ ಏರ್ ಇಂಡಿಯಾ ಕ್ಯಾಬಿನ್ ಸಿಬ್ಬಂದಿಯೂ ಅಮಾನತುಗೊಂಡಿದ್ದಾರೆ.

    ಕೊಲ್ಕತ್ತಾ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಮಾಡುವಾಗ ರನ್ ವೇ ಅಂಚಿನಲ್ಲಿರುವ ದೀಪಗಳಿಗೆ ಹಾನಿಯಾಗಿತ್ತು. ಹೀಗಾಗಿ ಸ್ಪೈಸ್ ಜೆಟ್ ವಿಮಾನದ ಇಬ್ಬರು ಪೈಲೆಟ್‍ಗಳ ಫ್ಲೈಯಿಂಗ್ ಪರವಾನಗಿ(ಲೈಸೆನ್ಸ್)ಗಳನ್ನು ಆರು ತಿಂಗಳುಗಳ ಕಾಲ ಅಮಾನತುಗೊಳಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಜುಲೈ 2ರಂದು ಪುಣೆ-ಕೊಲ್ಕತ್ತಾ ಮಧ್ಯೆ ಆರತಿ ಗುಣಶೇಖರನ್ ಹಾಗೂ ಸೌರಭ್ ಗುಲಿಯಾ ವಿಮಾನ ಹಾರಿಸುತ್ತಿದ್ದರು. ಈ ವೇಳೆ ನಡೆದ ಘಟನೆಯ ಹಿನ್ನೆಲೆಯಲ್ಲಿ ಇಬ್ಬರನ್ನು ಅಮಾನತುಗೊಳಿಸಲಾಗಿದೆ.

    ಘಟನೆ ಕುರಿತು ತನಿಖೆ ನಡೆಸಲಾಗಿದ್ದು, ಸ್ಪೈಸ್ ಜೆಟ್ ವಿಮಾನ ರನ್ ವೇ hಡಿeshoಟಜ ಠಿoiಟಿಣ ನಿಂದ 1300 ಅಡಿಗಳಷ್ಟು ದೂರ ಚಲಿಸಿ ಬಲಗಡೆ ಅಂಚಿನಲ್ಲಿರುವ ದೀಪಗಳಿಗೆ ಹಾನಿ ಮಾಡಿದ ಹಿನ್ನೆಲೆಯಲ್ಲಿ ಶಿಸ್ತು ಕ್ರಮ ಕೈಗೊಳ್ಳಲಾಗಿದೆ.

  • ಪ್ರತಿ ನಿತ್ಯ ಸೆಕ್ಸ್ ಬೇಕಾ? ಮಹಿಳಾ ಪೈಲಟ್‍ಗೆ ಪ್ರಶ್ನಿಸಿದ ಕ್ಯಾಪ್ಟನ್

    ಪ್ರತಿ ನಿತ್ಯ ಸೆಕ್ಸ್ ಬೇಕಾ? ಮಹಿಳಾ ಪೈಲಟ್‍ಗೆ ಪ್ರಶ್ನಿಸಿದ ಕ್ಯಾಪ್ಟನ್

    ನವದೆಹಲಿ: ಏರ್ ಇಂಡಿಯಾ ಹಿರಿಯ ಕ್ಯಾಪ್ಟನ್ ತನ್ನ ಸಹದ್ಯೋಗಿ ಮಹಿಳಾ ಪೈಲಟ್ ಗೆ ಪ್ರತಿನಿತ್ಯ ಸೆಕ್ಸ್ ಬೇಕಲ್ಲವೆ ಎಂದು ಪ್ರಶ್ನಿಸಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ಈ ಸಂಬಂಧ ಮಹಿಳೆ ಕ್ಯಾಪ್ಟನ್ ವಿರುದ್ಧ ದೂರು ದಾಖಲಿಸಿದ್ದಾರೆ. ಈಗಾಗಲೇ ಏರ್ ಇಂಡಿಯಾ ಈ ಸಂಬಂಧ ವಿಚಾರಣೆಯನ್ನು ನಡೆಸುತ್ತಿದೆ.

    ಏನಿದು ಪ್ರಕರಣ?
    ಕ್ಯಾಪ್ಟನ್ ಮಾರ್ಗದರ್ಶನದಲ್ಲಿ ನನ್ನ ತರಬೇತಿ ಮುಗಿದಿತ್ತು. ಮೇ 5ರಂದು ಕ್ಯಾಪ್ಟನ್ ಹೈದರಾಬಾದ್ ರೆಸ್ಟೊರೆಂಟ್ ನಲ್ಲಿ ಊಟಕ್ಕೆ ನನ್ನನ್ನು ಆಹ್ವಾನಿಸಿದ್ದರು. ಕ್ಯಾಪ್ಟನ್ ಆಗಿದ್ದರಿಂದ ಅವರ ಮೇಲಿನ ಗೌರವದಿಂದ ರಾತ್ರಿ ಸುಮಾರು 8 ಗಂಟೆಗೆ ಔತಣಕೂಟಕ್ಕೆ ತೆರಳಿದ್ದೆ ಎಂದು ಮಹಿಳಾ ಪೈಲಟ್ ದೂರಿನಲ್ಲಿ ತಿಳಿಸಿದ್ದಾರೆ.

    ಊಟ ಮಾಡಲು ಆರಂಭಿಸುತ್ತಿದ್ದಂತೆ ಕ್ಯಾಪ್ಟನ್ ತಮ್ಮ ವೈವಾಹಿಕ ಜೀವನದ ಬಗ್ಗೆ ಮಾತನಾಡಲು ಆರಂಭಿಸಿದರು. ಹೀಗೆ ಮಾತನಾಡುತ್ತಾ ನಿನ್ನ ಪತಿ ಕೆಲಸದ ನಿಮಿತ್ತ ಮನೆಯಿಂದ ಹೊರಗೆ ಇರ್ತಾರೆ. ನೀನು ಎಲ್ಲವನ್ನು ಹೇಗೆ ನಿಭಾಸ್ತೀಯಾ? ಪ್ರತಿದಿನ ನಿನಗೆ ಸೆಕ್ಸ್ ಅವಶ್ಯಕವೆಂದು ಅನ್ನಿಸಲ್ವಾ ಎಂದು ಪ್ರಶ್ನೆ ಮಾಡಿದ್ದಾನೆ. ಕ್ಯಾಪ್ಟನ್ ಅಸಹ್ಯ ಮಾತುಗಳಿಂದ ಬೇಸರಗೊಂಡ ಮಹಿಳೆ ಈ ರೀತಿ ಕೇಳುವುದು ತಪ್ಪು ಎಂದು ತಿಳಿಸಿ ರೆಸ್ಟೊರೆಂಟ್ ನಿಂದ ಹೊರಬಂದಿದ್ದಾರೆ. ಸ್ವಲ್ಪವೂ ತಡಮಾಡದೇ ಕ್ಯಾಬ್ ಬುಕ್ ಮಾಡಿಕೊಂಡು ಮನೆ ತಲುಪಿದ್ದಾರೆ.

    ಮರುದಿನ ಮಹಿಳೆ ತನಗಾದ ಲೈಂಗಿಕ ದೌರ್ಜನ್ಯದ ಬಗ್ಗೆ ಸಂಸ್ಥೆಯ ಹಿರಿಯ ಅಧಿಕಾರಿಗಳಿಗೆ ಕ್ಯಾಪ್ಟನ್ ವಿರುದ್ಧ ದೂರು ಸಲ್ಲಿಸಿದ್ದಾರೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಸಿರುವ ಏರ್ ಇಂಡಿಯಾ ತನಿಖೆಗೆ ಆದೇಶಿಸಿದೆ.

  • ಜೆಟ್ ಏರ್‍ವೇಸ್ ಬಳಿಕ ಸಂಕಟದಲ್ಲಿ ಏರ್ ಇಂಡಿಯಾ!

    ಜೆಟ್ ಏರ್‍ವೇಸ್ ಬಳಿಕ ಸಂಕಟದಲ್ಲಿ ಏರ್ ಇಂಡಿಯಾ!

    – 9 ಸಾವಿರ ಕೋಟಿ ಸಾಲದ ಸುಳಿಯಲ್ಲಿ ಏರ್ ಇಂಡಿಯಾ

    ನವದೆಹಲಿ: ಖಾಸಗಿ ವಿಮಾನಯಾನ ಸಂಸ್ಥೆ ಜೆಟ್ ಏರ್‍ವೇಸ್ ತನ್ನ ಸೇವೆಯನ್ನು ನಿಲ್ಲಿಸಿದೆ. ಇದೀಗ ಸರ್ಕಾರದ ಏರ್ ಇಂಡಿಯಾ ಸಹ ಸಾಲದ ಸುಳಿಯಲ್ಲಿ ಸಿಲುಕಿಕೊಂಡಿದೆ.

    ಈ ಆರ್ಥಿಕ ವರ್ಷದಲ್ಲಿ ಏರ್ ಇಂಡಿಯಾ ಬರೋಬ್ಬರಿ 9 ಸಾವಿರ ಕೋಟಿ ರೂ. ಸಾಲವನ್ನು ಮರುಪಾವತಿಸಬೇಕಿದೆ. ಪ್ರತಿನಿತ್ಯ 6 ಕೋಟಿ ರೂ. ನಷ್ಟ ಅನುಭವಿಸುತ್ತಿರುವ ಏರ್ ಇಂಡಿಯಾ ಸಾಲ ಹೇಗೆ ಮರುಪಾವತಿಸುತ್ತದೆ ಎಂಬ ಪ್ರಶ್ನೆ ಹುಟ್ಟಿಕೊಂಡಿದೆ. ಸರ್ಕಾರದ ಒಂದು ವೇಳೆ ಹಣಕಾಸಿನ ವ್ಯವಸ್ಥೆಯನ್ನು ಕಲ್ಪಿಸಿದರೆ ಮಾತ್ರ ಏರ್ ಇಂಡಿಯಾ ಜೊತೆಗೆ ಜೆಟ್ ಏರ್‍ವೇಸ್ ಕಂಪನಿಗಳು ಉಳಿದುಕೊಳ್ಳುತ್ತೇವೆ ಎಂದು ಹೇಳಲಾಗುತ್ತಿದೆ.

    ಏರ್ ಇಂಡಿಯಾದ ಈ ಮೊದಲಿನ ಸಾಲವನ್ನ ಪಾವತಿಸಿದ್ದ ಸರ್ಕಾರ, ಮುಂದಿನ ದಿನಗಳಲ್ಲಿ ಯಾವುದೇ ಈಕ್ವಿಟಿ ಶೇರ್‍ಗಳನ್ನು ಪಡೆಯಲ್ಲ ಹಾಗೂ ಹಣಕಾಸಿನ ಸಹಾಯಕ್ಕೆ ಮುಂದಾಗಲ್ಲ ಎಂದು ಎಚ್ಚರಿಕೆ ನೀಡಿತ್ತು. ಆರ್ಥಿಕ ಸಚಿವಾಲಯದ ಅಧಿಕಾರಿಗಳ ಪ್ರಕಾರ, ಏರ್ ಇಂಡಿಯಾ ಭವಿಷ್ಯ ಲೋಕಸಭಾ ಚುನಾವಣೆಯ ಫಲಿತಾಂಶದ ಮೇಲೆ ನಿಂತಿದೆ. ಮತ್ತೊಮ್ಮೆ ಎನ್‍ಡಿಎ ಮೈತ್ರಿಕೂಟ ಸರ್ಕಾರ ರಚಿಸಿದ್ದಲ್ಲಿ, ಬಂಡವಾಳ ಹೂಡುವಂತೆ ಪ್ರಧಾನಿಗಳಿಗೆ ಮನವಿ ಮಾಡಿಕೊಳ್ಳಲಾಗುವುದು. ಸರ್ಕಾರಿ ಕಂಪನಿ ಆಗಿದ್ದರಿಂದ ಮರು ಹೂಡಿಕೆಗೆ ಸರ್ಕಾರ ಮುಂದಾಗಬಹುದು ಎಂದು ಹೇಳುತ್ತಾರೆ.

    54 ಸಾವಿರ ಕೋಟಿ ಸಾಲ:
    ಮೂಲಗಳ ಪ್ರಕಾರ ಏರ್ ಇಂಡಿಯಾ 54 ಸಾವಿರ ಕೋಟಿ ರೂ. ಸಾಲದ ಸುಳಿಯಲ್ಲಿ ಸಿಲುಕಿದೆ. ಕಂಪನಿಯನ್ನು ಉಳಿಸಲು ಕಳೆದ ಆರ್ಥಿಕ ವರ್ಷದಲ್ಲಿ ಸರ್ಕಾರ ಕಂಪನಿಯ ಶೇ.76ರಷ್ಟು ಶೇರುಗಳನ್ನು ಮಾರಾಟ ಮಾಡುವಲ್ಲಿ ವಿಫಲವಾಗಿತ್ತು. ಕೊನೆಗೆ ವಿಶೇಷ ಪ್ಯಾಕೇಜ್ ಹೆಸರಿನಲ್ಲಿ ವೆಹಿಕಲ್ ಏರ್ ಇಂಡಿಯಾ ಅಸೆಟ್ ಹೋಲ್ಟಿಂಗ್ಸ್ ಲಿಮಿಟೆಡ್ ಖಾತೆಗೆ 29 ಸಾವಿರ ಕೋಟಿ ರೂ. ಹಣವನ್ನು ವರ್ಗಾವಣೆ ಮಾಡಿತ್ತು. ಈ ಹಣಕ್ಕೆ ಏರ್ ಇಂಡಿಯಾ ಕಂಪನಿ ಸರ್ಕಾರಕ್ಕೆ ವಾರ್ಷಿಕ 4,400 ಕೋಟಿ ಬಡ್ಡಿ ಜೊತೆಗೆ 2,700 ಕೋಟಿ ಕಂತು ಪಾವತಿಸಬೇಕಿತ್ತು. ಈ ನಿರ್ಧಾರದಿಂದ ಮುಂದಿನ ಆರ್ಥಿಕ ವರ್ಷಗಳಲ್ಲಿ ಏರ್ ಇಂಡಿಯಾದ ಹಣಕಾಸಿನ ಪರಿಸ್ಥಿತಿ ಸುಧಾರಿಸಬಹುದು ಎಂದು ಅಂದಾಜಿಸಿತ್ತು. ಆದ್ರೆ ಕಂಪನಿ ಆರ್ಥಿಕ ಪರಿಸ್ಥಿತಿ ಸುಧಾರಣೆಯ ಬದಲು ಮತ್ತಷ್ಟು ಹದೆಗೆಡುತ್ತಾ ಬಂದಿದೆ.

    ಪ್ರತಿನಿತ್ಯ 6 ಕೋಟಿ ನಷ್ಟ: ಆರ್ಥಿಕ ಮುಗ್ಗಟ್ಟು ಎದುರಿಸುತ್ತಿರುವ ಏರ್ ಇಂಡಿಯಾ ಪ್ರತಿನಿತ್ಯ ಅಂತರರಾಷ್ಟ್ರೀಯ ಸೇವೆಯಲ್ಲಿ 6 ಕೋಟಿ ರೂ. ನಷ್ಟವನ್ನು ಅನುಭವಿಸುತ್ತಿದೆ. ದೇಶದ ಗಡಿ ಪ್ರದೇಶದಲ್ಲಿ ಉದ್ವಿಘ್ನ ಪರಿಸ್ಥಿತಿ ನಿರ್ಮಾಣ ಆಗಿದ್ದರಿಂದ ಪಾಕಿಸ್ತಾನ ತನ್ನ ವಾಯು ಮಾರ್ಗವನ್ನು ಬಂದ್ ಮಾಡಿದೆ. ಈ ಹಿನ್ನೆಲೆಯಲ್ಲಿ ಯುರೋಪ್ ಮತ್ತು ಅಮೆರಿಕಾ ಸೇವೆಯಲ್ಲಿ ನಷ್ಟ ಅನುಭಸುವಂತಾಗಿದೆ. ನಷ್ಟ ಸರಿದೂಗಿಸುಕೊಳ್ಳಲು ಕೆಲವು ವಿಮಾನಗಳ ಹಾರಾಟವನ್ನು ನಿಲ್ಲಿಸಿದೆ.

  • ವೈನ್ ಬೇಕು ವೈನ್ – ವಿಮಾನದಲ್ಲಿ ಮಹಿಳೆಯ ರಾದ್ಧಾಂತ: ವಿಡಿಯೋ

    ವೈನ್ ಬೇಕು ವೈನ್ – ವಿಮಾನದಲ್ಲಿ ಮಹಿಳೆಯ ರಾದ್ಧಾಂತ: ವಿಡಿಯೋ

    ನವದೆಹಲಿ: ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣ ನಡೆಸಿದ್ದ ಐರಿಷ್ ಮಹಿಳಾ ಪ್ರಯಾಣಿಕರೊಬ್ಬರು ವಿಮಾನದ ಸಿಬ್ಬಂದಿ ವೈನ್ ನೀಡಿಲ್ಲ ಎಂದು ಆರೋಪಿಸಿ ರಾದ್ಧಾಂತ ಸೃಷ್ಟಿಸಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    ಮುಂಬೈನಿಂದ ಲಂಡನ್‍ಗೆ ಶನಿವಾರ ಬಿಸಿನೆಸ್ ಕ್ಲಾಸಿನಲ್ಲಿ ಪ್ರಯಾಣ ಬೆಳೆಸಿದ್ದ ಐರಿಷ್ ಮಹಿಳೆ ವಿಮಾನ ಸಿಬ್ಬಂದಿಗೆ ನಿಂದನೆ ಮಾಡಿದ್ದಾಳೆ. ವಿಮಾನದ ಸಿಬ್ಬಂದಿ ಹೆಚ್ಚಿನ ಪ್ರಮಾಣದಲ್ಲಿ ವೈನ್ ನೀಡಲು ನಿರಾಕರಿಸಿದ್ದ ವೇಳೆ ಈ ಘಟನೆ ನಡೆದಿದೆ.

    ಮೊದಲು ಮಹಿಳೆಗೆ ವೈನ್ ಪೂರೈಕೆ ಮಾಡಲಾಗಿದ್ದು, ಆ ಬಳಿಕವೂ ಹೆಚ್ಚಿನ ಪ್ರಮಾಣದಲ್ಲಿ ವೈನ್ ನೀಡುವಂತೆ ಮಹಿಳೆ ಪಟ್ಟು ಹಿಡಿದಿದ್ದಾಳೆ. ಈ ವೇಳೆ ವಿಮಾನ ಸಿಬ್ಬಂದಿ ನಿರಾಕರಿಸಿದ ಕಾರಣ ಆಕೆ ಬಾಯಿಗೆ ಬಂದಂತೆ ಬೈದು ರಾದ್ಧಾಂತ ಮಾಡಿದ್ದಾಳೆ.

    ಮಹಿಳೆಯ ಏರ್ ಇಂಡಿಯಾ ಸಿಬ್ಬಂದಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮಹಿಳೆ ಎಷ್ಟೇ ಕುಗಾಡಿದರೂ ವಿಮಾನ ಸಿಬ್ಬಂದಿ ತಾಳ್ಮೆಯಿಂದಲೇ ಇದ್ದರು. ಇದನ್ನು ಕಂಡು ಮತ್ತಷ್ಟು ರೊಚ್ಚಿಗೆದ್ದ ಆಕೆ ಸಿಬ್ಬಂದಿ ಮೇಲೆ ಉಗುಳಿರುವ ದೃಶ್ಯಗಳನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ. ಮಹಿಳೆಯ ಅಸಭ್ಯ ವರ್ತನೆಯನ್ನ ವಿಮಾನ ಸಿಬ್ಬಂದಿಯೇ ಮೊಬೈಲ್‍ನಲ್ಲಿ ಸೆರೆ ಹಿಡಿದ್ದಾರೆ. ಅಸಭ್ಯ ವರ್ತನೆ ಕಾರಣ ಲಂಡನ್ ವಿಮಾನ ನಿಲ್ದಾಣದಲ್ಲಿ ಆಕೆಯನ್ನು ಬಂಧಿಸಿದ್ದಾರೆ ಎಂದು ಮಾಧ್ಯಮ ವರದಿಯಲ್ಲಿ ಉಲ್ಲೇಖಿಸಲಾಗಿದೆ.

    ತಾನು ಅಂತರಾಷ್ಟ್ರೀಯ ಮಟ್ಟದ ವಕೀಲೆಯಾಗಿದ್ದು, ಪ್ರಯಾಣಿಕರಿಗೆ ಸರಿಯಾದ ಸೇವೆ ನೀಡಲು ನಿಮಗೆ ಆಗುವುದಿಲ್ಲ ಎಂದು ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದಾಳೆ. ಘಟನೆ ವೇಳೆ ಸಹಪ್ರಯಾಣಿಕರು ಯಾರು ಮಾತನಾಡದೇ ಸುಮ್ಮನೆ ಕುಳಿತಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ದೀಪಾವಳಿ ಬೋನಸ್ ನೀಡದ್ದಕ್ಕೆ ಏರ್ ಇಂಡಿಯಾ ಸಿಬ್ಬಂದಿಯಿಂದ ಸ್ಟ್ರೈಕ್

    ದೀಪಾವಳಿ ಬೋನಸ್ ನೀಡದ್ದಕ್ಕೆ ಏರ್ ಇಂಡಿಯಾ ಸಿಬ್ಬಂದಿಯಿಂದ ಸ್ಟ್ರೈಕ್

    ಮುಂಬೈ: ದೀಪಾವಳಿ ಬೋನಸ್ ನೀಡದ್ದಕ್ಕೆ ಏರ್ ಇಂಡಿಯಾ ಏರ್ ಟ್ರಾನ್ಸ್ಪೋರ್ಟ್ ಸರ್ವಿಸಸ್ ಲಿಮಿಟಿಡ್‍ನ (ಎಐಎಟಿಎಸ್‍ಎಲ್) 400 ಸಿಬ್ಬಂದಿ ಮುಂಬೈ ವಿಮಾನ ನಿಲ್ದಾಣದಲ್ಲಿ ದಿಢೀರ್ ಮುಷ್ಕರ ಆರಂಭಿಸಿದ್ದಾರೆ.

    ಬುಧವಾರ ರಾತ್ರಿ ಪ್ರಾರಂಭವಾಗಿದ್ದು ಇಂದು ಕೂಡ ಮುಂದುವರಿದಿತ್ತು. ಏರ್ ಇಂಡಿಯಾ ಸಿಬ್ಬಂದಿ ಏರ್‍ಪೋರ್ಟ್‍ನಲ್ಲಿ ಪ್ರಯಾಣಿಕರ ಟಿಕೆಟ್ ಪರಿಶೀಲನೆ, ಬ್ಯಾಗ್‍ಗಳನ್ನು ಲೋಡ್ ಹಾಗೂ ಅನ್‍ಲೋಡ್ ಮಾಡುವುದು, ವಿಮಾನ ಹಾಗೂ ಕಾರ್ಗೋಗಳನ್ನು ಸ್ವಚ್ಛ ಮಾಡುವ ಕೆಲಸಗಳನ್ನು ನಿರ್ವಹಿಸುತ್ತಾರೆ. ಅಲ್ಲದೆ ಕೆಲವು ವಿದೇಶಿ ಏರ್‍ಲೈನ್ಸ್‍ಗಳ ಗುತ್ತಿಗೆಯನ್ನು ನೋಡಿಕೊಳ್ಳುತ್ತಾರೆ.

    ಪ್ರತಿಭಟನೆಯಿಂದ ಇಂದು ಎಲ್ಲಾ ಏರ್ ಇಂಡಿಯಾ ವಿವಾನಗಳ ಹಾರಾಟ ವಿಳಂಬವಾಗಿದೆ. ಮುಂಬೈ- ಬ್ಯಾಂಕಾಕ್ ಎಐ330 ವಿಮಾನ ಬೆಳಗ್ಗೆ 8.18ಕ್ಕೆ ಮುಂಬೈ ವಿಮಾನ ನಿಲ್ದಾಣದಿಂದ 7 ಗಂಟೆ ತಡವಾಗಿ ಹೊರಟಿದೆ. ಹಾಗೆಯೇ ಬೆಳಗಿನ ಜಾವ 1.30ಕ್ಕೆ ಹೊರಡಬೇಕಾದ ಮುಂಬೈ-ನೆವಾರ್ಕ್ ವಿಮಾನ 4.08ಕ್ಕೆ ಹೊರಟಿದೆ ಎಂದು ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ.

    ಪ್ರತಿಭಟನೆಯಿಂದ ಹಲವು ಏರ್ ಇಂಡಿಯಾ ವಿವಾನಗಳ ನಿರ್ಗಮನ ಹಾಗೂ ಆಗಮನದಲ್ಲಿ ಸರಿಸುಮಾರು 2 ಗಂಟೆ ಕಾಲ ವಿಳಂಬವಾಗಿದೆ. ಒಟ್ಟು 16 ಅಂತರಾಷ್ಟ್ರೀಯ ಮತ್ತು 8 ದೇಶಿಯ ವಿಮಾನ ಹಾರಾಟಕ್ಕೆ ಈ ಪ್ರತಿಭಟನೆಯ ಬಿಸಿ ತಟ್ಟಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಟೇಕಾಫ್ ವೇಳೆ ತಡೆ ಗೋಡೆಗೆ ಏರ್‌ಇಂಡಿಯಾ ವಿಮಾನ ಡಿಕ್ಕಿ – 130 ಪ್ರಯಾಣಿಕರು ಸೇಫ್

    ಟೇಕಾಫ್ ವೇಳೆ ತಡೆ ಗೋಡೆಗೆ ಏರ್‌ಇಂಡಿಯಾ ವಿಮಾನ ಡಿಕ್ಕಿ – 130 ಪ್ರಯಾಣಿಕರು ಸೇಫ್

    ಚೆನ್ನೈ: ಏರ್‌ಇಂಡಿಯಾ ಸಂಸ್ಥೆಯ ವಿಮಾನವೊಂದು ಟೇಕಾಫ್ ವೇಳೆ ವಿಮಾನ ನಿಲ್ದಾಣದ ತಡೆಗೋಡೆಗೆ ಡಿಕ್ಕಿ ಹೊಡೆದಿರುವ ಘಟನೆ ತಿರುಚ್ಚಿ ವಿಮಾನ ನಿಲ್ದಾಣದಲ್ಲಿ ನಡೆದಿದೆ.

    ಘಟನೆ ನಡೆದ ವೇಳೆ ವಿಮಾನದಲ್ಲಿ 130 ಪ್ರಯಾಣಿಕರು, 6 ಮಂದಿ ಸಿಬ್ಬಂದಿ ಇದ್ದರು ಎಂಬ ಮಾಹಿತಿ ಲಭಿಸಿದ್ದು, ಘಟನೆ ಬಳಿಕ ಬೇರೊಂದು ವಿಮಾನದ ಮೂಲಕ ಪ್ರಯಾಣಿಕರನ್ನು ದುಬೈಗೆ ಕರೆದೊಯ್ಯಲಾಗಿದೆ. ಆದರೆ ಘಟನೆಯಲ್ಲಿ ಯಾವುದೇ ಪ್ರಯಾಣಿಕರಿಗೆ ಹಾನಿಯಾಗಿಲ್ಲ.

    ಆಗಿದ್ದು ಏನು?
    ಏರ್ ಇಂಡಿಯಾ 737 ಬೋಯಿಂಗ್ ವಿಮಾನ ತಿರುಚ್ಚಿಯಿಂದ ದುಬೈಗೆ ಹಾರಬೇಕಿತ್ತು. ಶುಕ್ರವಾರ ನಸುಕಿನ ಜಾವ 1.30ರ ವೇಳೆಗೆ ಪ್ರತಿ ಗಂಟೆಗೆ 250-290 ಕಿ.ಮೀ ವೇಗದಲ್ಲಿ ರನ್‍ವೇಯಲ್ಲಿ ಸಂಚರಿಸಿ ಬಳಿಕ ಟೇಕಾಫ್ ಆಗಿದೆ. ಟೇಕಾಫ್ ಆಗುವ ವೇಳೆ ವಿಮಾನದ ಚಕ್ರ ನಿಲ್ದಾಣದ ತಡೆಗೋಡೆ ಡಿಕ್ಕಿ ಹೊಡೆದಿದೆ. ಆದರೆ ಇದು ಪೈಲಟ್ ಗಮನಕ್ಕೆ ಬಂದಿರಲಿಲ್ಲ.

    ಈ ಘಟನೆಯ ಕೂಡಲೇ ತಿರುಚ್ಚಿ ವಿಮಾನ ನಿಲ್ದಾಣದ ಏರ್ ಟ್ರಾಫಿಕ್ ಕಂಟ್ರೋಲ್(ಎಟಿಸಿ) ಸಿಬ್ಬಂದಿ ಹಾನಿಯಾಗಿರುವ ಕುರಿತು ಮಾಹಿತಿ ನೀಡಿದರೂ ಪೈಲಟ್ ಸರಿ ಇದೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಆದರೂ ಸುರಕ್ಷತಾ ದೃಷ್ಟಿಯಿಂದ ವಿಮಾನವನ್ನು ಮುಂಬೈ ಮಾರ್ಗಕ್ಕೆ ತಿರುಗಿಸಲಾಯಿತು. ಬೆಳಗ್ಗೆ 5.35ಕ್ಕೆ ಲ್ಯಾಂಡ್ ಆದ ಬಳಿಕ ಬೇರೊಂದು ವಿಮಾನದಲ್ಲಿ ದುಬೈಗೆ ಪ್ರಯಾಣಿಕರನ್ನು ಕಳುಹಿಸಲಾಯಿತು.

    ಮುಂಬೈ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆದ ವೇಳೆ ವಿಮಾನದ ಆಂಟೆನಾ ಹಾಗೂ ಕೆಲ ಭಾಗಗಳಿಗೆ ಹಾನಿಯಾಗಿದ್ದು ಬೆಳಕಿಗೆ ಬಂದಿದೆ. ಘಟನೆ ಸಂಬಂಧ ವಿಮಾನದ ಪೈಲಟ್ ಹಾಗೂ ಸಹ ಪೈಲಟ್ ಅನ್ನು ವಶಕ್ಕೆ ಪಡೆಯಲಾಗಿದ್ದು, ಆಂತರಿಕ ತನಿಖೆ ಆರಂಭಿಸಲಾಗಿದೆ. ಈ ಕುರಿತು ತನಿಖೆ ಮುಂದುವರಿದಿದೆ ಎಂದು ಏರ್ ಇಂಡಿಯಾ ತಿಳಿಸಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಏರ್ ಇಂಡಿಯಾ ವಿಮಾನದಲ್ಲಿ ಬಾಂಬ್ ಬೆದರಿಕೆ: ಜೋಧ್‍ಪುರದ ಎಲ್ಲಾ ವಿಮಾನಗಳ ಹಾರಾಟ ರದ್ದು!

    ಏರ್ ಇಂಡಿಯಾ ವಿಮಾನದಲ್ಲಿ ಬಾಂಬ್ ಬೆದರಿಕೆ: ಜೋಧ್‍ಪುರದ ಎಲ್ಲಾ ವಿಮಾನಗಳ ಹಾರಾಟ ರದ್ದು!

    ಜೈಪುರ: ರಾಜಸ್ಥಾನದ ಜೋಧ್‍ಪುರ ವಿಮಾನ ನಿಲ್ದಾಣದಲ್ಲಿ ಹಾರಾಟಕ್ಕೆ ಸಿದ್ದವಾಗಿದ್ದ ಏರ್ ಇಂಡಿಯಾ ವಿಮಾನದಲ್ಲಿ ಬಾಂಬ್ ಇರುವ ಬಗ್ಗೆ ಕರೆ ಬಂದಿದ್ದರಿಂದ ಏರ್ ಇಂಡಿಯಾ ಸೇರಿದಂತೆ ಎಲ್ಲಾ ವಿಮಾನಗಳ ಹಾರಾಟವನ್ನು ವಿಮಾನ ನಿಲ್ದಾಣ ಅಧಿಕಾರಿಗಳು ರದ್ದುಗೊಳಿಸಿದ್ದಾರೆ.

    ಜೋಧ್‍ಪುರದಿಂದ ದೆಹಲಿಗೆ ಹೊರಡಲಿದ್ದ ಏರ್ ಇಂಡಿಯಾ ವಿಮಾನದಲ್ಲಿ ಬಾಂಬ್ ಇರುವುದಾಗಿ ಕರೆ ಬಂದಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ವಿಮಾನ ನಿಲ್ದಾಣ ಅಧಿಕಾರಿಗಳು ಜೋಧ್‍ಪುರದಿಂದ ಹೊರಡಬೇಕಾಗಿದ್ದ ಎಲ್ಲಾ ವಿಮಾನಗಳ ಹಾರಾಟವನ್ನು ತಡೆಹಿಡಿದ್ದಾರೆ. ಅಲ್ಲದೇ ಏರ್ ಇಂಡಿಯಾ ವಿಮಾನವನ್ನು ಭದ್ರತಾ ಪಡೆಗಳು ತೀವ್ರವಾಗಿ ತಪಾಸಣೆ ನಡೆಸುತ್ತಿವೆ ಎನ್ನುವ ಮಾಹಿತಿಗಳು ಲಭ್ಯವಾಗಿವೆ.

    ಜೋಧ್‍ಪುರ ವಿಮಾನ ನಿಲ್ದಾಣವು ಭಾರತೀಯ ವಾಯುಪಡೆಯ ವಾಯು ನೆಲೆಗೆ ತಾಗಿಕೊಂಡೇ ಇರುವುದರಿಂದ, ಭದ್ರತಾ ಪಡೆಗಳು ವ್ಯಾಪಕ ಶೋಧ ನಡೆಸುತ್ತಿದ್ದಾರೆ. ಜೋಧ್‍ಪುರ ವಿಮಾನನಿಲ್ದಾಣದಲ್ಲಿ ಏರ್ ಇಂಡಿಯಾ ವಿಮಾನವಲ್ಲದೇ, ಜೆಟ್ ಏರ್ ವೇಸ್ ಹಾಗೂ ಸ್ಪೈಸ್ ಜೆಟ್ ವಿಮಾನ ಸಂಸ್ಥೆಗಳ ವಿಮಾನಗಳನ್ನು ಸಹ ತಪಾಸಣೆಗೆ ಒಳಪಡಿಸಲಾಗಿದೆ ಎಂದು ವರದಿಯಾಗಿದೆ.

    ಸದ್ಯ ಬಾಂಬ್ ಪ್ರಕರಣಕ್ಕೆ ಸಂಬಂಧಿಸಿದಂತೆ 4 ಮಂದಿಯನ್ನು ಬಂಧಿಸಲಾಗಿದ್ದು, ಬಂಧಿತರನ್ನು ಪೊಲೀಸರು ವ್ಯಾಪಕ ವಿಚಾರಣೆಗೆ ಒಳಪಡಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ವಿಮಾನದಲ್ಲಿ ಪ್ರಯಾಣಿಸ್ತಿದ್ದಾಗ ಮಹಿಳೆ ಪಕ್ಕದಲ್ಲೇ ಸೂಸು ಮಾಡ್ದ!

    ವಿಮಾನದಲ್ಲಿ ಪ್ರಯಾಣಿಸ್ತಿದ್ದಾಗ ಮಹಿಳೆ ಪಕ್ಕದಲ್ಲೇ ಸೂಸು ಮಾಡ್ದ!

    ನವದೆಹಲಿ: ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಮಹಿಳೆಯ ಪಕ್ಕದಲ್ಲೇ ಸೂಸು ಮಾಡಿದ ಘಟನೆ ನಡೆದಿದೆ.

    ಏರ್ ಇಂಡಿಯಾ ವಿಮಾನವು ನ್ಯೂಯಾರ್ಕ್ ನಿಂದ ದೆಹಲಿಗೆ ಪ್ರಯಾಣಿಸುತ್ತಿದ್ದ ವೇಳೆ ಈ ಘಟನೆ ನಡೆದಿದ್ದು, ಮಹಿಳೆಯ ಮಗಳು ಈ ಬಗ್ಗೆ ಈ ಟ್ವೀಟ್ ಮಾಡಿದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ.

    ಟ್ವೀಟ್ ನಲ್ಲೇನಿತ್ತು?:
    ವಿಮಾನದಲ್ಲಿ ಪ್ರಯಾಣಿಸಿದ ಮಹಿಳೆಯ ಮಗಳು ಇಂದ್ರಾಣಿ ಘೋಷ್, `ಶುಕ್ರವಾರ AI 102  ಏರ್ ಇಂಡಿಯಾದಲ್ಲಿ ಚಲಿಸುತ್ತಿದ್ದಾಗ ಪ್ರಯಾಣಿಕನೊಬ್ಬ ಪ್ಯಾಂಟ್ ಜಾರಿಸಿ ಅಮ್ಮ ಕುಳಿತಿದ್ದ ಸೀಟ್ ಪಕ್ಕದಲ್ಲೇ ಸೂಸು ಮಾಡಿದ್ದಾನೆ. ಇದರಿಂದಾಗಿ ಒಬ್ಬರೇ ಪ್ರಯಾಣಿಸುತ್ತಿದ್ದ ನನ್ನ ಅಮ್ಮ ಗಾಬರಿಯಿಂದ ಆಘಾತಕ್ಕೊಳಗಾಗಿದ್ದಾರೆ’ ಅಂತ ಬರೆದುಕೊಂಡಿದ್ದಾರೆ.

    ಇಂದ್ರಾಣಿ ಟ್ವೀಟ್ ಗಮನಿಸಿದ ಕೇಂದ್ರ ವಿಮಾನಯಾನ ಖಾತೆಯ ಸಚಿವ ಜಯಂತ್ ಸಿನ್ಹಾ ತಕ್ಷಣವೇ ಪ್ರತಿಕ್ರಿಯಿಸಿದ್ದು, ಕೂಡಲೇ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಏರ್ ಇಂಡಿಯಾಗೆ ಸೂಚಿಸಿದ್ದಾರೆ. ಅಲ್ಲದೇ ಈ ಪ್ರಕರಣದ ವರದಿಯನ್ನು ನಾಗರಿಕ ವಿಮಾನಯಾನ ನಿರ್ದೇಶನಾಲಯ(ಡಿಜಿಸಿಎ) ಅಥವಾ ಇಲಾಖೆಗೆ ಸಲ್ಲಿಸಬೇಕು ಅಂತ ಹೇಳಿದ್ದಾರೆ.

    ಇದೇ ವೇಳೆ ನಿಮ್ಮ ಅಮ್ಮ ಇಂತಹ ಕೆಟ್ಟ ಸನ್ನಿವೇಶದಲ್ಲಿ ಒಬ್ಬರೇ ಪ್ರಯಾಣ ಬೆಳೆಸಿದ್ದು ದುರದೃಷ್ಟಕರ ಅಂತ ಹೇಳಿ ಕ್ಷಮೆಯಾಚಿಸಿದ್ದಾರೆ. ವಿಷಾದವೆಂದರೆ ಈ ಬಗ್ಗೆ ಇದೂವರೆಗೂ ಏರ್ ಇಂಡಿಯಾ ಯಾವುದೇ ಕ್ರಮ ಕೈಗೊಂಡಿಲ್ಲ. ಇದರಿಂದ ಬೇಸರಗೊಂಡ ಇಂದ್ರಾಣಿ ಟ್ವೀಟ್ ಮೇಲೆ ಟ್ವೀಟ್ ಮಾಡಿದ್ದಾರೆ. ಆ ಬಳಿಕ ಎಚ್ಚೆತ್ತ ಏರ್ ಇಂಡಿಯಾ ತನಿಖೆ ನಡೆಸಲು ಮುಂದೆ ಬಂದಿದೆ.

    ಇದೇ ವೇಳೆ ಇಂದ್ರಾಣಿ ಇಂತಹ ಅಸಹ್ಯಕರ ಘಟನೆ ವಿರುದ್ಧ ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕೆಂದು ವಿಮಾನಯಾನ ಕಂಪೆನಿಗಳಿಗೆ ಆಗ್ರಹಿಸಿದ್ದಾರೆ. ಇಷ್ಟು ಮಾತ್ರವಲ್ಲದೇ ಸರಣಿ ಟ್ವೀಟ್ ಗಳನ್ನು ಮಾಡುವ ಮೂಲಕ ಏರ್‍ಇಂಡಿಯಾವನ್ನು ಪ್ರಶ್ನಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv