Tag: air india

  • ವಿಮಾನ ದುರಂತ ಸ್ಥಳಕ್ಕೆ ಪ್ರಧಾನಿ ಭೇಟಿ – ಅಹಮದಾಬಾದ್‌ ಆಸ್ಪತ್ರೆಯಲ್ಲಿ ಗಾಯಾಳುಗಳ ಆರೋಗ್ಯ ವಿಚಾರಿಸಿದ ಮೋದಿ

    ವಿಮಾನ ದುರಂತ ಸ್ಥಳಕ್ಕೆ ಪ್ರಧಾನಿ ಭೇಟಿ – ಅಹಮದಾಬಾದ್‌ ಆಸ್ಪತ್ರೆಯಲ್ಲಿ ಗಾಯಾಳುಗಳ ಆರೋಗ್ಯ ವಿಚಾರಿಸಿದ ಮೋದಿ

    ಮುಂಬೈ: ಏರ್ ಇಂಡಿಯಾ (Air India) ವಿಮಾನ ಪತನಗೊಂಡು 241 ಮಂದಿ ಸಾವನ್ನಪ್ಪಿರುವ ದುರಂತ ಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ (PM Modi) ಭೇಟಿ ನೀಡಿದ್ದಾರೆ.

    ಇಂದು ಬೆಳಗ್ಗೆ ಪ್ರಧಾನಿಯವರು ಸರ್ದಾರ್ ವಲ್ಲಭಭಾಯಿ ಪಟೇಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಅಲ್ಲಿಂದ ಮೇಘನಿನಗರ ಪ್ರದೇಶದಲ್ಲಿ ಸಂಭವಿಸಿದ ಅಪಘಾತ ಸ್ಥಳಕ್ಕೆ ನೇರವಾಗಿ ಕಾರಿನಲ್ಲೇ ತೆರಳಿದರು. ಇಲ್ಲಿ ಅಧಿಕಾರಿಗಳ ಬಳಿ ಘಟನೆ ಬಗ್ಗೆ ಮಾಹಿತಿ ಪಡೆದ ಮೋದಿ ಬಳಿಕ ಅಹಮದಾಬಾದ್‌ನ ಸಾರ್ವಜನಿಕ ಆಸ್ಪತ್ರೆಗೆ (Ahmedabad Civil Hospital) ತೆರಳಿದರು. ಅಲ್ಲಿ ವಿಮಾನ ದುರಂತದಲ್ಲಿ ಗಾಯಗೊಂಡವರ ಆರೋಗ್ಯ ವಿಚಾರಿಸಿದರು. ಅಲ್ಲಿಂದ ಏರ್‌ಪೋರ್ಟ್‌ನತ್ತ ತೆರಳಿದರು.

    ಈ ಸಂದರ್ಭದಲ್ಲಿ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್, ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಕಿಂಜರಪು, ಕೇಂದ್ರ ರಾಜ್ಯ ಸಚಿವ ಮುರಳೀಧರ್ ಮೊಹೋಲ್ ಮತ್ತು ರಾಜ್ಯ ಗೃಹ ಸಚಿವ ಹರ್ಷ ಸಾಂಘವಿ, ಇತರ ಭದ್ರತಾ ಅಧಿಕಾರಿಗಳು ಜೊತೆಗಿದ್ದರು.

    ಇನ್ನೂ ದುರಂತದ ಬಗ್ಗೆ ನಿನ್ನೆ ಎಕ್ಸ್ ಪೋಸ್ಟ್ ಮೂಲಕ ಸಂತಾಪ ಸೂಚಿಸಿದ್ದ ಪ್ರಧಾನಿ ಮೋದಿ, ಅಹಮದಾಬಾದ್‌ನಲ್ಲಿ ಏರ್ ಇಂಡಿಯಾ ವಿಮಾನ ದುರಂತದಿಂದ ದಿಗ್ಭ್ರಮೆಗೊಂಡಿದ್ದೇನೆ. ಇದರಿಂದ ಎಲ್ಲರಿಗೂ ಅತೀವ ನೋವು ಉಂಟಾಗಿದೆ. ದುರಂತದಲ್ಲಿ ಸಿಲುಕಿರುವವರಿಗೆ ನೆರವು ನೀಡುವ ವಿಚಾರವಾಗಿ ಸಚಿವರು ಹಾಗೂ ಅಧಿಕಾರಿಗಳ ಜೊತೆ ಮಾತನಾಡಿದ್ದೇನೆ. ಅಲ್ಲದೇ ನಿರಂತರವಾಗಿ ಅವರ ಜೊತೆ ಸಂಪರ್ಕದಲ್ಲಿದ್ದೇನೆ ಎಂದು ತಿಳಿಸಿದ್ದರು.

    ಏನಿದು ದುರಂತ?
    ಜೂನ್ 12ರಂದು (ಗುರುವಾರ) ಅಹಮಾದಾಬಾದ್‌ನ ಸರ್ದಾರ್ ವಲ್ಲಭಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಲಂಡನ್ ಗ್ಯಾಟ್ವಿಕ್‌ಗೆ ಹಾರುತ್ತಿದ್ದ AI171 ವಿಮಾನ ಅಪಘಾತಕ್ಕೀಡಾಯಿತು. ಮಧ್ಯಾಹ್ನ 13.38ಕ್ಕೆ ಅಹಮದಾಬಾದ್‌ನಿಂದ ಹೊರಟ 12 ವರ್ಷದ ಹಳೆಯ ಬೋಯಿಂಗ್ 787-8 ವಿಮಾನ 230 ಪ್ರಯಾಣಿಕರು ಹಾಗೂ 12 ಸಿಬ್ಬಂದಿಯನ್ನ ಹೊತ್ತೊಯ್ಯುತ್ತಿತ್ತು. ವಿಮಾನ ಟೇಕ್‌ಆಫ್ ಆದ ಕೆಲವೇ ನಿಮಿಷಗಳಲ್ಲಿ ಅಪಘಾತಕ್ಕೀಡಾಯಿತು.

    ಇದರಿಂದ ವಿಮಾನದಲ್ಲಿದ್ದ 242 ಜನರಲ್ಲಿ 241 ಮಂದಿ ಸಾವನ್ನಪ್ಪಿದ್ದಾರೆ. ಬದುಕುಳಿದ ಏಕೈಕ ವ್ಯಕ್ತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಿಮಾನದಲ್ಲಿದ್ದ 230 ಪ್ರಯಾಣಿಕರ ಪೈಕಿ 169 ಭಾರತೀಯರು, 53 ಬ್ರಿಟಿಷ್ ಪ್ರಜೆಗಳು, 7 ಪೋರ್ಚುಗೀಸ್ ಪ್ರಜೆಗಳು ಮತ್ತು ಓರ್ವ ಕೆನಡಾ ಇದ್ದರು. ಬದುಕುಳಿದ ಏಕೈಕ ವ್ಯಕ್ತಿ ಭಾರತೀಯ ಮೂಲದ ಬ್ರಿಟಿಷ್ ಪ್ರಜೆಯಾಗಿದ್ದಾರೆ ಎಂದು ಏರ್ ಇಂಡಿಯಾ ಖಚಿತಪಡಿಸಿದೆ.

    ಮೇ ಡೇ – ಕೊನೇ ಸಂದೇಶ
    ಅಪಘಾತಕ್ಕೀಡಾದ ಏರ್ ಇಂಡಿಯಾ ವಿಮಾನವು ರನ್ ವೇ 23ರಿಂದ ವಿಮಾನ ಟೇಕಾಫ್ ಆಗಿತ್ತು. ಹಾರಿದ ಮೂರ್ನಾಲ್ಕು ನಿಮಿಷಗಳಲ್ಲೇ ಪೈಲಟ್ `ಮೇ ಡೇ.. ಮೇ ಡೇ..’ ಎಂದು ಎಟಿಸಿಗೆ ಕೊನೆಯ ಸಂದೇಶ ಕೊಟ್ಟಿದ್ದರು. ಮೇ ಡೇ ಅಂದ್ರೆ ವಿಮಾನ ಡೇಂಜರ್‌ನಲ್ಲಿದ್ದು ತುರ್ತು ಅವಶ್ಯಕತೆ ಬಗ್ಗೆ ಎಮರ್ಜೆನ್ಸಿ ಕರೆ ಮಾಡುವುದು. ಎಟಿಸಿ ಮತ್ತೆ ಕರೆ ಮಾಡಿದಾಗ ವಾಪಸ್ ಪ್ರತಿಕ್ರಿಯೆ ಬಂದಿರಲಿಲ್ಲ. ಪೈಲಟ್ ಮೇ ಡೇ ಸಂದೇಶ ಕೊಟ್ಟ ಕೆಲವೇ ಕ್ಷಣಗಳಲ್ಲಿ ವಿಮಾನ ಪತನಗೊಂಡಿತ್ತು.

  • ಲಂಡನ್‌ನಲ್ಲಿ ಭವಿಷ್ಯದ ಕನಸು ಕಟ್ಟಿ ವಿಮಾನದಲ್ಲಿ ಹಾರಿದ್ದ ಒಂದೇ ಕುಟುಂಬದ ಐವರು ದುರಂತ ಅಂತ್ಯ

    ಲಂಡನ್‌ನಲ್ಲಿ ಭವಿಷ್ಯದ ಕನಸು ಕಟ್ಟಿ ವಿಮಾನದಲ್ಲಿ ಹಾರಿದ್ದ ಒಂದೇ ಕುಟುಂಬದ ಐವರು ದುರಂತ ಅಂತ್ಯ

    – ವಿಮಾನದಲ್ಲಿ ಕೊನೆಯ ಸೆಲ್ಫಿ ತೆಗೆದು ಕುಟುಂಬಸ್ಥರಿಗೆ ಕಳುಹಿಸಿ ಖುಷಿಪಟ್ಟಿದ್ದ ಕುಟುಂಬ

    ಗಾಂಧೀನಗರ: ಲಂಡನ್‌ನಲ್ಲಿ ಭವಿಷ್ಯದ ಕನಸು ಕಟ್ಟಿಕೊಂಡು ಪ್ರಯಾಣ ಬೆಳೆಸಿದ್ದ ಸುಂದರ ಕುಟುಂಬವೊಂದು ಗುರುವಾರ ಅಹಮದಾಬಾದ್‌ನಲ್ಲಿ (Ahmedabad Plane Crash) ಸಂಭವಿಸಿದ ವಿಮಾನ ಅಪಘಾತದಲ್ಲಿ ದುರಂತ ಅಂತ್ಯಕಂಡಿದೆ.

    ಗಂಡ-ಹೆಂಡತಿ ಹಾಗೂ ಮೂರು ಮುದ್ದಾದ ಮಕ್ಕಳ ಒಂದೇ ದಿನ ಮೃತಪಟ್ಟಿದ್ದಾರೆ. ಸಾಫ್ಟ್‌ವೇರ್‌ ವೃತ್ತಿಯಲ್ಲಿದ್ದ ಪ್ರತೀಕ್‌ ಜೋಶಿ ಕಳೆದ ಆರು ವರ್ಷಗಳಿಂದ ಲಂಡನ್‌ನಲ್ಲಿ ವಾಸವಾಗಿದ್ದರು. ಮೂರು ಮಕ್ಕಳು ಹಾಗೂ ಮಡದಿಯೊಂದಿಗೆ ಲಂಡನ್‌ನಲ್ಲಿ ಜೀವನ ಕಟ್ಟಿಕೊಳ್ಳುವ ಕನಸು ಕಂಡಿದ್ದರು. ಇದನ್ನೂ ಓದಿ: Ahmedabad | ವಿಮಾನ ದುರಂತ ನಡೆದ ಸ್ಥಳಕ್ಕೆ ಇಂದು ಮೋದಿ ಭೇಟಿ

    ಮಕ್ಕಳು, ಮಡದಿಯನ್ನ ಲಂಡನ್‌ಗೆ ಕರೆಸಿಕೊಳ್ಳಲು ಹಲವು ವರ್ಷಗಳಿಂದ ಪ್ರತೀಕ್‌ ಕಾದಿದ್ದರು. ಕನಸು ಅಂತಿಮವಾಗಿ ನನಸಾಯಿತು. ಉದಯಪುರದಲ್ಲಿ ಪ್ರಸಿದ್ಧ ವೈದ್ಯೆಯಾಗಿದ್ದ ಡಾ. ಕೋಮಿ ವ್ಯಾಸ್‌ ಅವರು ಎರಡು ದಿನಗಳ ಹಿಂದಷ್ಟೇ ತಮ್ಮ ಕೆಲಸಕ್ಕೆ ರಾಜೀನಾಮೆ ನೀಡಿದ್ದರು. ಪತಿ ಪ್ರತೀಕ್ ಜೊತೆ ಲಂಡನ್‌ಗೆ ಹೊರಡಲು ಸಜ್ಜಾಗಿದ್ದರು.

    ಗುರುವಾರ ಬೆಳಗ್ಗೆ ಭರವಸೆ ಮತ್ತು ಉತ್ಸಾಹದೊಂದಿಗೆ ಈ ಕುಟುಂಬ, ಏರ್ ಇಂಡಿಯಾ ವಿಮಾನ 171 ಅನ್ನು ಹತ್ತಿತ್ತು. ಭಾರತದಲ್ಲಿ ತಮ್ಮ ಜೀವನದ ಕಡೆಯ ಸೆಲ್ಫಿಯನ್ನು ಕುಟುಂಬ ಕ್ಲಿಕ್ಕಿಸಿಕೊಂಡಿತ್ತು. ಆ ಸೆಲ್ಫಿಯನ್ನ ತನ್ನ ಸಂಬಂಧಿಕರಿಗೆ ಕಳಿಸಿ ಖುಷಿಪಟ್ಟಿತ್ತು.

    ಆದರೆ, ಕೆಲವೇ ಹೊತ್ತಿನಲ್ಲಿ ಅವರ ಕನಸು ನುಚ್ಚುನೂರಾಯಿತು. ಭೀಕರ ವಿಮಾನ ಅಪಘಾತದಲ್ಲಿ ಒಬ್ಬ ಪ್ರಯಾಣಿಕನನ್ನು ಹೊರತುಪಡಿಸಿ 241 ಮಂದಿ ಮೃತಪಟ್ಟರು. ಅವರಲ್ಲಿ ಈ ಕುಟುಂಬದ ಐವರು ಸೇರಿದ್ದಾರೆ. ಹಾಸ್ಟೆಲ್‌ವೊಂದಕ್ಕೆ ಬಡಿದು ಪತನಗೊಂಡಿತು. ವಿಮಾನದಲ್ಲಿದ್ದ ಈ ಕುಟುಂಬ ದಾರುಣ ಅಂತ್ಯ ಕಂಡಿತು. ಇದನ್ನೂ ಓದಿ: ಅಹಮದಾಬಾದ್‌ ವಿಮಾನ ದುರಂತದಲ್ಲಿ 241 ಮಂದಿ ಸಾವು, ಪವಾಡ ಸದೃಶವಾಗಿ ಏಕೈಕ ಪ್ರಯಾಣಿಕ ಪಾರು: ಏರ್‌ ಇಂಡಿಯಾ

  • Ahmedabad | ವಿಮಾನ ದುರಂತ ನಡೆದ ಸ್ಥಳಕ್ಕೆ ಇಂದು ಮೋದಿ ಭೇಟಿ

    Ahmedabad | ವಿಮಾನ ದುರಂತ ನಡೆದ ಸ್ಥಳಕ್ಕೆ ಇಂದು ಮೋದಿ ಭೇಟಿ

    ಮುಂಬೈ: ಏರ್‌ ಇಂಡಿಯಾ ವಿಮಾನ ಪತನಗೊಂಡು 241 ಮಂದಿ ಸಾವನ್ನಪ್ಪಿರುವ ಅಹಮದಾಬಾದ್‌ನ (Ahmedabad) ದುರಂತ ಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಂದು ಭೇಟಿ ನೀಡಲಿದ್ದಾರೆ.

    ವಿಮಾನ ಪತನಗೊಂಡ (Plane Crash) ಸ್ಥಳಕ್ಕೆ ಮೋದಿ ಭೇಟಿ ನೀಡಲಿದ್ದು, ಅಧಿಕಾರಿಗಳಿಂದ ದುರಂತದ ಬಗ್ಗೆ ಮಾಹಿತಿ ಪಡೆಯಲಿದ್ದಾರೆ. ಬಳಿಕ ಆಸ್ಪತ್ರೆಗೆ ಭೇಟಿ ನೀಡಿ, ಬದುಕುಳಿದ ಏಕೈಕ ಪ್ರಯಾಣಿಕನ ಆರೋಗ್ಯ ವಿಚಾರಿಸಲಿದ್ದಾರೆ. ನಿನ್ನೆಯೂ ಅವಘಡದ ಕುರಿತು ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮಮೋಹನ್ ನಾಯ್ಡು ಅವರೊಂದಿಗೆ ಮಾತನಾಡಿ, ವಿಮಾನ ಅಪಘಾತದ ಕುರಿತು ಮಾಹಿತಿ ಪಡೆದಿದ್ದರು. ಇದನ್ನೂ ಓದಿ: ಅಹಮದಾಬಾದ್‌ ವಿಮಾನ ದುರಂತದಲ್ಲಿ 241 ಮಂದಿ ಸಾವು, ಪವಾಡ ಸದೃಶವಾಗಿ ಏಕೈಕ ಪ್ರಯಾಣಿಕ ಪಾರು: ಏರ್‌ ಇಂಡಿಯಾ

    ಇನ್ನೂ ದುರಂತದ ಬಗ್ಗೆ ಎಕ್ಸ್‌ ಪೋಸ್ಟ್‌ ಮೂಲಕ ಸಂತಾಪ ಸೂಚಿಸಿದ್ದ ಪ್ರಧಾನಿ ಮೋದಿ, ಅಹಮದಾಬಾದ್‌ನಲ್ಲಿ ಏರ್ ಇಂಡಿಯಾ (Air India) ವಿಮಾನ ದುರಂತದಿಂದ ದಿಗ್ಭ್ರಮೆಗೊಂಡಿದ್ದೇನೆ. ಇದರಿಂದ ಎಲ್ಲರಿಗೂ ಅತೀವ ನೋವು ಉಂಟಾಗಿದೆ. ದುರಂತದಲ್ಲಿ ಸಿಲುಕಿರುವವರಿಗೆ ನೆರವು ನೀಡುವ ವಿಚಾರವಾಗಿ ಸಚಿವರು ಹಾಗೂ ಅಧಿಕಾರಿಗಳ ಜೊತೆ ಮಾತನಾಡಿದ್ದೇನೆ. ಅಲ್ಲದೇ ನಿರಂತರವಾಗಿ ಅವರ ಜೊತೆ ಸಂಪರ್ಕದಲ್ಲಿದ್ದೇನೆ ಎಂದು ತಿಳಿಸಿದ್ದರು. ಇದನ್ನೂ ಓದಿ: 1.25 ಲಕ್ಷ ಲೀಟರ್‌ ಇಂಧನ ಇತ್ತು, ಮಧ್ಯಾಹ್ನ ತಾಪಮಾನ ಹೆಚ್ಚಿದ್ದರಿಂದ ರಕ್ಷಿಸುವ ಅವಕಾಶ ಇರಲಿಲ್ಲ: ಅಮಿತ್‌ ಶಾ

    ಏನಿದು ದುರಂತ?
    ಜೂನ್‌ 12ರಂದು (ಗುರುವಾರ) ಅಹಮಾದಾಬಾದ್‌ನ ಸರ್ದಾರ್ ವಲ್ಲಭಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಲಂಡನ್ ಗ್ಯಾಟ್ವಿಕ್‌ಗೆ ಹಾರುತ್ತಿದ್ದ AI171 ವಿಮಾನ ಅಪಘಾತಕ್ಕೀಡಾಯಿತು. ಮಧ್ಯಾಹ್ನ 13.38ಕ್ಕೆ ಅಹಮದಾಬಾದ್‌ನಿಂದ ಹೊರಟ 12 ವರ್ಷದ ಹಳೆಯ ಬೋಯಿಂಗ್‌ 787-8 ವಿಮಾನ 230 ಪ್ರಯಾಣಿಕರು ಹಾಗೂ 12 ಸಿಬ್ಬಂದಿಯನ್ನ ಹೊತ್ತೊಯ್ಯುತ್ತಿತ್ತು. ವಿಮಾನ ಟೇಕ್‌ಆಫ್‌ ಆದ ಕೆಲವೇ ನಿಮಿಷಗಳಲ್ಲಿ ಅಪಘಾತಕ್ಕೀಡಾಯಿತು.

    ಇದರಿಂದ ವಿಮಾನದಲ್ಲಿದ್ದ 242 ಜನರಲ್ಲಿ 241 ಮಂದಿ ಸಾವನ್ನಪ್ಪಿದ್ದಾರೆ. ಬದುಕುಳಿದ ಏಕೈಕ ವ್ಯಕ್ತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಿಮಾನದಲ್ಲಿದ್ದ 230 ಪ್ರಯಾಣಿಕರ ಪೈಕಿ 169 ಭಾರತೀಯರು, 53 ಬ್ರಿಟಿಷ್ ಪ್ರಜೆಗಳು, 7 ಪೋರ್ಚುಗೀಸ್ ಪ್ರಜೆಗಳು ಮತ್ತು ಓರ್ವ ಕೆನಡಾ ಇದ್ದರು. ಬದುಕುಳಿದ ಏಕೈಕ ವ್ಯಕ್ತಿ ಭಾರತೀಯ ಮೂಲದ ಬ್ರಿಟಿಷ್‌ ಪ್ರಜೆಯಾಗಿದ್ದಾರೆ ಎಂದು ಏರ್‌ ಇಂಡಿಯಾ ಖಚಿತಪಡಿಸಿದೆ. ಇದನ್ನೂ ಓದಿ: Ahmedabad Plane Crash | ಮೊದಲ ಬಾರಿಗೆ ಪತಿ ನೋಡಲು ಹೊರಟಿದ್ದ ನವವಿವಾಹಿತೆ ಸಾವು 

    ಮೇ ಡೇ – ಕೊನೇ ಸಂದೇಶ
    ಅಪಘಾತಕ್ಕೀಡಾದ ಏರ್‌ ಇಂಡಿಯಾ ವಿಮಾನವು ರನ್ ವೇ 23ರಿಂದ ವಿಮಾನ ಟೇಕಾಫ್ ಆಗಿತ್ತು. ಹಾರಿದ ಮೂರ್ನಾಲ್ಕು ನಿಮಿಷಗಳಲ್ಲೇ ಪೈಲಟ್ ʻಮೇ ಡೇ.. ಮೇ ಡೇ..ʼ ಎಂದು ಎಟಿಸಿಗೆ ಕೊನೆಯ ಸಂದೇಶ ಕೊಟ್ಟಿದ್ದರು. ಮೇ ಡೇ ಅಂದ್ರೆ ವಿಮಾನ ಡೇಂಜರ್‌ನಲ್ಲಿದ್ದು ತುರ್ತು ಅವಶ್ಯಕತೆ ಬಗ್ಗೆ ಎಮರ್ಜೆನ್ಸಿ ಕರೆ ಮಾಡುವುದು. ಎಟಿಸಿ ಮತ್ತೆ ಕರೆ ಮಾಡಿದಾಗ ವಾಪಸ್ ಪ್ರತಿಕ್ರಿಯೆ ಬಂದಿರಲಿಲ್ಲ. ಪೈಲಟ್ ಮೇ ಡೇ ಸಂದೇಶ ಕೊಟ್ಟ ಕೆಲವೇ ಕ್ಷಣಗಳಲ್ಲಿ ವಿಮಾನ ಪತನಗೊಂಡಿತ್ತು.

  • ಅಹಮದಾಬಾದ್‌ ವಿಮಾನ ದುರಂತದಲ್ಲಿ 241 ಮಂದಿ ಸಾವು, ಪವಾಡ ಸದೃಶವಾಗಿ ಏಕೈಕ ಪ್ರಯಾಣಿಕ ಪಾರು: ಏರ್‌ ಇಂಡಿಯಾ

    ಅಹಮದಾಬಾದ್‌ ವಿಮಾನ ದುರಂತದಲ್ಲಿ 241 ಮಂದಿ ಸಾವು, ಪವಾಡ ಸದೃಶವಾಗಿ ಏಕೈಕ ಪ್ರಯಾಣಿಕ ಪಾರು: ಏರ್‌ ಇಂಡಿಯಾ

    ಮುಂಬೈ: ಅಹಮದಾಬಾದ್‌ನಲ್ಲಿ (Ahmedabad) ಸಂಭವಿಸಿದ ಏರ್‌ ಇಂಡಿಯಾ ವಿಮಾನ ದುರಂತದಲ್ಲಿ 242ರ ಪೈಕಿ 241 ಮಂದಿ ಸಾವನ್ನಪ್ಪಿದ್ದು, ಓರ್ವ ಪ್ರಯಾಣಿಕ ಪವಾಡ ಸದೃಶ್ಯ ರೀತಿಯಲ್ಲಿ ಪಾರಾಗಿದ್ದಾರೆ ಎಂದು ಏರ್‌ ಇಂಡಿಯಾ (Air India) ವಿಯಾನಯಾನ ಸಂಸ್ಥೆ ಸ್ಪಷ್ಟನೆ ನೀಡಿದೆ.

    ಈ ಕುರಿತು ತನ್ನ ಅಧಿಕೃತ ಎಕ್ಸ್‌ ಖಾತೆಯಲ್ಲಿ ತಡರಾತ್ರಿ 12:41ರ ವೇಳೆಗೆ ಮಾಹಿತಿ ಹಂಚಿಕೊಂಡಿದೆ. ಇದನ್ನೂ ಓದಿ: ಜಸ್ಟ್‌ 10 ನಿಮಿಷ, ಟ್ರಾಫಿಕ್‌ನಲ್ಲಿ ಸಿಲುಕಿ ಲಕ್ಕಿ ಲೇಡಿ ಬಚಾವ್‌!

    ಎಕ್ಸ್‌ ಪೋಸ್ಟ್‌ನಲ್ಲಿ ಏನಿದೆ?
    ಜೂನ್‌ 12ರಂದು ಅಹಮಾದಾಬಾದ್‌ನ ಸರ್ದಾರ್ ವಲ್ಲಭಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಲಂಡನ್ ಗ್ಯಾಟ್ವಿಕ್‌ಗೆ (London Gatwick) ಹಾರುತ್ತಿದ್ದ AI171 ವಿಮಾನ ಅಪಘಾತಕ್ಕೀಡಾಗಿದೆ ಎಂದು ಏರ್‌ ಇಂಡಿಯಾ ದೃಢಪಡಿಸಿದೆ. 12 ವರ್ಷದ ಹಳೆಯ ಬೋಯಿಂಗ್‌ 787-8 (Boeing) ವಿಮಾನವು ಮಧ್ಯಾಹ್ನ 13.38ಕ್ಕೆ ಅಹಮದಾಬಾದ್‌ನಿಂದ ಹೊರಟಿದ್ದು, 230 ಪ್ರಯಾಣಿಕರು ಹಾಗೂ 12 ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿತ್ತು. ವಿಮಾನ ಟೇಕ್‌ಆಫ್‌ ಆದ ಕೆಲವೇ ನಿಮಿಷಗಳಲ್ಲಿ ಅಪಘಾತಕ್ಕೀಡಾಯಿತು. ಇದನ್ನೂ ಓದಿ: Ahmedabad Plane Crash | ಈವರೆಗೆ ಭಾರತದಲ್ಲಿ ಸಂಭವಿಸಿದ ಪ್ರಮುಖ ವಿಮಾನ ದುರಂತಗಳ ಪಟ್ಟಿ ಇಲ್ಲಿದೆ

    ಇದರಿಂದ ವಿಮಾನದಲ್ಲಿದ್ದ 242 ಜನರಲ್ಲಿ 241 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿಸಲು ವಿಷಾದಿಸುತ್ತೇವೆ. ಬದುಕುಳಿದ ಏಕೈಕ ವ್ಯಕ್ತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಿಮಾನದಲ್ಲಿದ್ದ 230 ಪ್ರಯಾಣಿಕರ ಪೈಕಿ 169 ಭಾರತೀಯರು, 53 ಬ್ರಿಟಿಷ್ ಪ್ರಜೆಗಳು, 7 ಪೋರ್ಚುಗೀಸ್ ಪ್ರಜೆಗಳು ಮತ್ತು ಓರ್ವ ಕೆನಡಾ ಇದ್ದರು. ಬದುಕುಳಿದ ಏಕೈಕ ವ್ಯಕ್ತಿ ಭಾರತೀಯ ಮೂಲದ ಬ್ರಿಟಿಷ್‌ ಪ್ರಜೆಯಾಗಿದ್ದಾರೆ.

    ದುರಂತರದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಏರ್‌ ಇಂಡಿಯಾ ಆಳವಾದ ಸಂತಾಪ ಸೂಚಿಸುತ್ತದೆ. ನಾವು ಸಂತ್ರಸ್ತ ಕುಟುಂಬಗಳೊಂದಿಗೆ ಇದ್ದೇವೆ ಎಂದು ಹೇಳಿದೆ. ಇದನ್ನೂ ಓದಿ: ಟೇಕಾಫ್‌ ಆದ 30 ಸೆಕೆಂಡ್‌ನಲ್ಲಿ ದೊಡ್ಡ ಶಬ್ಧ ಬಂತು – ಪವಾಡ ಸದೃಶವಾಗಿ ಏಕೈಕ ಪ್ರಯಾಣಿಕ ಪಾರು

    ಮೇ ಡೇ – ಕೊನೇ ಸಂದೇಶ
    ಅಪಘಾತಕ್ಕೀಡಾದ ಏರ್‌ ಇಂಡಿಯಾ ವಿಮಾನವು ರನ್ ವೇ 23ರಿಂದ ವಿಮಾನ ಟೇಕಾಫ್ ಆಗಿತ್ತು. ಹಾರಿದ ಮೂರ್ನಾಲ್ಕು ನಿಮಿಷಗಳಲ್ಲೇ ಪೈಲಟ್ ʻಮೇ ಡೇ.. ಮೇ ಡೇ..ʼ ಎಂದು ಎಟಿಸಿಗೆ ಕೊನೆಯ ಸಂದೇಶ ಕೊಟ್ಟಿದ್ದರು. ಮೇ ಡೇ ಅಂದ್ರೆ ವಿಮಾನ ಡೇಂಜರ್‌ನಲ್ಲಿದ್ದು ತುರ್ತು ಅವಶ್ಯಕತೆ ಬಗ್ಗೆ ಎಮರ್ಜೆನ್ಸಿ ಕರೆ ಮಾಡುವುದು. ಎಟಿಸಿ ಮತ್ತೆ ಕರೆ ಮಾಡಿದಾಗ ವಾಪಸ್ ಪ್ರತಿಕ್ರಿಯೆ ಬಂದಿರಲಿಲ್ಲ. ಪೈಲಟ್ ಮೇ ಡೇ ಸಂದೇಶ ಕೊಟ್ಟ ಕೆಲವೇ ಕ್ಷಣಗಳಲ್ಲಿ ವಿಮಾನ ಪತನಗೊಂಡಿತ್ತು.

  • 1.25 ಲಕ್ಷ ಲೀಟರ್‌ ಇಂಧನ ಇತ್ತು, ಮಧ್ಯಾಹ್ನ ತಾಪಮಾನ ಹೆಚ್ಚಿದ್ದರಿಂದ ರಕ್ಷಿಸುವ ಅವಕಾಶ ಇರಲಿಲ್ಲ: ಅಮಿತ್‌ ಶಾ

    1.25 ಲಕ್ಷ ಲೀಟರ್‌ ಇಂಧನ ಇತ್ತು, ಮಧ್ಯಾಹ್ನ ತಾಪಮಾನ ಹೆಚ್ಚಿದ್ದರಿಂದ ರಕ್ಷಿಸುವ ಅವಕಾಶ ಇರಲಿಲ್ಲ: ಅಮಿತ್‌ ಶಾ

    ಅಹಮದಾಬಾದ್: ಪತನಗೊಂಡ ಏರ್‌ ಇಂಡಿಯಾ (Air India) ವಿಮಾನವು ಸುಮಾರು 1.25 ಲಕ್ಷ ಲೀಟರ್ ಇಂಧನವನ್ನು ಹೊತ್ತೊಕೊಂಡು ಸಾಗುತ್ತಿತ್ತು. ಮಧ್ಯಾಹ್ನ ಹೆಚ್ಚಿನ ತಾಪಮಾನದಿಂದಾಗಿ (Temperature) ಪ್ರಯಾಣಿಕರನ್ನು ರಕ್ಷಿಸುವ ಅವಕಾಶವಿರಲಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ (Amit Shah) ಹೇಳಿದ್ದಾರೆ.

    ವಿಮಾನ ದುರಂತದಲ್ಲಿ ಬದುಕುಳಿದ ಏಕೈಕ ವ್ಯಕ್ತಿ ಮತ್ತು ಗಾಯಾಳುಗಳನ್ನು ಆಸ್ಪತ್ರೆಯಲ್ಲಿ ಭೇಟಿಯಾದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಘಟನೆಯಿಂದ ಇಡೀ ರಾಷ್ಟ್ರವು ದುಃಖದಲ್ಲಿದ್ದು ಮೃತರ ಕುಟುಂಬಗಳೊಂದಿಗೆ ನಿಂತಿದೆ. ಅಪಘಾತದ ನಡೆದ 10 ನಿಮಿಷಗಳಲ್ಲಿ ಕೇಂದ್ರ ಸರ್ಕಾರಕ್ಕೆ ಮಾಹಿತಿ ಸಿಕ್ಕಿತು ಎಂದು ತಿಳಿಸಿದರು. ಇದನ್ನೂ ಓದಿ: ತಮ್ಮ ಫೇವರೇಟ್‌ ನಂಬರ್‌ ದಿನವೇ ಮೃತಪಟ್ಟ ಗುಜರಾತ್‌ ಮಾಜಿ ಸಿಎಂ ರೂಪಾನಿ

    ನಾನು ಗುಜರಾತ್ ಮುಖ್ಯಮಂತ್ರಿ ಮತ್ತು ನಾಗರಿಕ ವಿಮಾನಯಾನ ಸಚಿವರನ್ನು ಸಂಪರ್ಕಿಸಿದೆ. ಪ್ರಧಾನಿ ನರೇಂದ್ರ ಮೋದಿ (Narendra Modi) ಕೂಡ ಸ್ವಲ್ಪ ಸಮಯದಲ್ಲೇ ಕರೆ ಮಾಡಿದ್ದಾರೆ. ಎಲ್ಲಾ ಕೇಂದ್ರ ಮತ್ತು ರಾಜ್ಯ ಸರ್ಕಾರಿ ಇಲಾಖೆಗಳು ರಕ್ಷಣಾ ಕಾರ್ಯಾಚರಣೆಯನ್ನು ನಡೆಸುತ್ತಿವೆ. ದುರಂತ ನಡೆದ ಸ್ಥಳಕ್ಕೆ ನಾನು ಹೋಗಿದ್ದೆ. 230 ಪ್ರಯಾಣಿಕರು ಮತ್ತು 12 ಸಿಬ್ಬಂದಿ ಇದ್ದರು. ಒಬ್ಬರು ದುರಂತದಿಂದ ಪಾರಾಗಿದ್ದು, ಡಿಎನ್ಎ ಪರಿಶೀಲನೆಯ ನಂತರ ಸಾವಿನ ಸಂಖ್ಯೆಯನ್ನು ಘೋಷಿಸಲಾಗುವುದು ಎಂದು ಹೇಳಿದರು.

     

    ನಾನು ಬದುಕುಳಿದ ಓರ್ವ ಪ್ರಯಾಣಿಕನನ್ನು ಭೇಟಿಯಾದೆ. ಪ್ರತಿಯೊಂದು ಇಲಾಖೆಯು ಸಮನ್ವಯದಿಂದ ರಕ್ಷಣಾ ಕಾರ್ಯಾಚರಣೆಗಳನ್ನು ನಡೆಸುತ್ತಿದೆ. ಮೃತ ದೇಹಗಳ ಮರುಪಡೆಯುವಿಕೆ ಬಹುತೇಕ ಪೂರ್ಣಗೊಂಡಿದೆ. ಕುಟುಂಬ ಸದಸ್ಯರ ಡಿಎನ್ಎ ಮಾದರಿಗಳನ್ನು ಸಂಗ್ರಹಿಸಲಾಗುತ್ತಿದೆ. ವಿದೇಶಗಳಲ್ಲಿರುವ ಕುಟುಂಬ ಸದಸ್ಯರಿಗೂ ಮಾಹಿತಿ ನೀಡಲಾಗಿದೆ. ಸುಮಾರು 1000 ಡಿಎನ್ಎ ಪರೀಕ್ಷೆಗಳನ್ನು ಮಾಡಲಾಗುವುದು ಎಂದರು. ಇದನ್ನೂ ಓದಿ: Ahmedabad Plane Crash | ಮೊದಲ ಬಾರಿಗೆ ಪತಿ ನೋಡಲು ಹೊರಟಿದ್ದ ನವವಿವಾಹಿತೆ ಸಾವು

    ಡಿಎನ್ಎ ಪರೀಕ್ಷೆಗಳ ನಂತರ ಶವಗಳನ್ನು ಹಸ್ತಾಂತರಿಸಲಾಗುವುದು. ಪರಿಶೀಲನಾ ಸಭೆಯಲ್ಲಿ, ಪ್ರತಿಯೊಂದು ಅಂಶವನ್ನು ಚರ್ಚಿಸಲಾಗಿದ್ದು ವಿಮಾನಯಾನ ಸಚಿವರು ತನಿಖೆಯನ್ನು ತ್ವರಿತವಾಗಿ ನಡೆಸುವಂತೆ ಸೂಚನೆ ನೀಡಿದ್ದಾರೆ ಎಂದರು.

  • ವಿಮಾನ ಪತನ – ಗಗನಸಖಿಯ ಫೋಟೋ ಹಿಡಿದು ಕಣ್ಣೀರಿಟ್ಟ ಕುಟುಂಬಸ್ಥರು

    ವಿಮಾನ ಪತನ – ಗಗನಸಖಿಯ ಫೋಟೋ ಹಿಡಿದು ಕಣ್ಣೀರಿಟ್ಟ ಕುಟುಂಬಸ್ಥರು

    ನವದೆಹಲಿ: ಏರ್‌ ಇಂಡಿಯಾ (Air India) ವಿಮಾನ ದುರಂತದ (Plane Crash) ಸುದ್ದಿ ತಿಳಿದು ಗಗನಸಖಿಯೊಬ್ಬರ ಕುಟುಂಬಸ್ಥರು ಆಕೆಯ ಫೋಟೋ ಹಿಡಿದುಕೊಂಡು ಕಣ್ಣೀರಿಟ್ಟಿದ್ದಾರೆ.

    ಮಣಿಪುರದ ತೌಬಲ್ ಜಿಲ್ಲೆಯ ಅವಾಂಗ್ ಲೈಕೈಯ ನಗಂಥೋಯ್ ಶರ್ಮಾ ಕೊಂಗ್ಬ್ರೈಲಾತ್ಪಮ್ (22) ಅಹಮದಾಬಾದ್‌ನಿಂದ (Ahmedabad) ಲಂಡನ್‌ಗೆ ತೆರಳುವುದಾಗಿ ಕುಟುಂಬಸ್ಥರಿಗೆ ತಿಳಿಸಿದ್ದರು. ಕುಟುಂಬದೊಂದಿಗೆ ಈ ಮಾಹಿತಿ ಹಂಚಿಕೊಂಡ ಬೆನ್ನಲ್ಲೇ ವಿಮಾನ ಪತನಗೊಂಡ ಸುದ್ದಿ ಬಂದಿದೆ. ಇದರಿಂದ ಗಾಬರಿಗೊಂಡ ಕುಟುಂಬದ ಸದಸ್ಯರು ಆಲ್ಬಮ್‌ನಲ್ಲಿದ್ದ ಆಕೆಯ ಫೋಟೋಗಳನ್ನು ನೋಡಿ ಕಣ್ಣೀರಿಟ್ಟಿದ್ದಾರೆ. ಇದನ್ನೂ ಓದಿ: ತಮ್ಮ ಫೇವರೇಟ್‌ ನಂಬರ್‌ ದಿನವೇ ಮೃತಪಟ್ಟ ಗುಜರಾತ್‌ ಮಾಜಿ ಸಿಎಂ ರೂಪಾನಿ

    ನಗಂಥೋಯ್ ಶರ್ಮಾ ಅವರ ತಾಯಿ, ʻನನ್ನ ಮಗು, ನಾನು ನಿನ್ನನ್ನು ನೋಡಬೇಕು. ನೀನು ಎಲ್ಲಿದ್ದೀಯಾ?ʼ ಎಂದು ಜೋರಾಗಿ ಅಳುವುದು ವಿಡಿಯೋದಲ್ಲಿ ಸೆರೆಯಾಗಿದೆ.

    ಈ ಬಗ್ಗೆ ನಗಂಥೋಯ್ ಸಹೋದರಿ ಗೀತಾಂಜಲಿ ಮಾಧ್ಯಮಗಳ ಜೊತೆ ಮಾತನಾಡಿ, 2023 ರಲ್ಲಿ ಏರ್ ಇಂಡಿಯಾದಲ್ಲಿ ಗಗನಸಖಿ ಆಗಿ ಆಕೆ ಕೆಲಸಕ್ಕೆ ಸೇರಿದ್ದಳು. ನಾವು ಮೂವರು ಸಹೋದರಿಯರು. ಗಗನಸಖಿ ಆಗುವುದು ಅವಳ ಕನಸಾಗಿತ್ತು. ಇಂಟರ್ನೆಟ್ ನಿಷೇಧದಿಂದಾಗಿ, ನಾವು ಎಂದಿನಂತೆ ವೀಡಿಯೊ ಕಾಲ್ ಮಾಡಲು ಸಾಧ್ಯವಾಗಲಿಲ್ಲ. ಆದರೆ ನಾನು ಶಾಲೆಯಲ್ಲಿದ್ದಾಗ, ಇಂದು ಲಂಡನ್‌ಗೆ ಹೋಗುತ್ತಿದ್ದೇನೆ. ಜೂನ್ 15 ರಂದು ಹಿಂತಿರುತ್ತೇನೆ ಎಂದು ಸಂದೇಶ ಕಳಿಸಿದ್ದಳು. ನಾನು ಆಕೆಗೆ ಶುಭ ಹಾರೈಸಿ, ಇಂಟರ್ನೆಟ್ ಸೇವೆ ಪುನರಾರಂಭವಾದ ನಂತರ ಸಂಪರ್ಕಿಸುತ್ತೇವೆ ಎಂದು ಹೇಳಿದೆ. ನಂತರ ಚಿಕ್ಕಮ್ಮ ವಿಚಾರಿಸಲು ಕರೆ ಮಾಡಿದಾಗ ಏರ್ ಇಂಡಿಯಾ ವಿಮಾನ ಅಪಘಾತಕ್ಕೀಡಾಗಿದೆ ಎಂದು ತಿಳಿಯಿತು ಎಂದು ಹೇಳಿಕೊಂಡಿದ್ದಾರೆ.

    ನಗಂಥೋಯ್ ಅಹಮದಾಬಾದ್‌ನಿಂದ ಲಂಡನ್‌ಗೆ ಹೋಗುತ್ತಿರುವುದಾಗಿ ಹೇಳಿದ್ದಳು. ಆದಾಗ್ಯೂ, ಅವಳ ಫೋನ್ ಇನ್ನೂ ರಿಂಗ್‌ ಆಗುತ್ತಿದೆ. ಅವಳ ಸೋಶಿಯಲ್‌ ಮೀಡಿಯಾ ಖಾತೆಗಳು ಆನ್‌ಲೈನ್‌ನಲ್ಲಿ ಸಕ್ರಿಯವಾಗಿವೆ. ಈ ಬಗ್ಗೆ ನಾವು ವಿಮಾನಯಾನ ಸಂಸ್ಥೆಯ ಅಧಿಕಾರಿಗಳ ಮಾಹಿತಿಗಾಗಿ ಕಾಯುತ್ತಿದ್ದೇವೆ ಎಂದು ತಿಳಿಸಿದ್ದಾರೆ.

    ಅಪಘಾತಗೊಂಡ ಈ ವಿಮಾನದಲ್ಲಿ ಸುಮಾರು 10 ಮಂದಿ ಸಿಬ್ಬಂದಿ ಸೇರಿ 242 ಜನ ಇದ್ದರು. ಮೂಲಗಳ ಪ್ರಕಾರ 200ಕ್ಕೂ ಹೆಚ್ಚು ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಎನ್ನಲಾಗುತ್ತಿದೆ. ಈ ಬಗ್ಗೆ ಅಧಿಕೃತ ಮಾಹಿತಿ ಇನ್ನೂ ಬಿಡುಗಡೆಯಾಗಿಲ್ಲ. ಇದನ್ನೂ ಓದಿ: ಮೃತ ಪ್ರಯಾಣಿಕರ ಕುಟುಂಬಕ್ಕೆ 1 ಕೋಟಿ ಪರಿಹಾರ: ಟಾಟಾ ಗ್ರೂಪ್‌ ಘೋಷಣೆ

  • ತಮ್ಮ ಫೇವರೇಟ್‌ ನಂಬರ್‌ ದಿನವೇ ಮೃತಪಟ್ಟ ಗುಜರಾತ್‌ ಮಾಜಿ ಸಿಎಂ ರೂಪಾನಿ

    ತಮ್ಮ ಫೇವರೇಟ್‌ ನಂಬರ್‌ ದಿನವೇ ಮೃತಪಟ್ಟ ಗುಜರಾತ್‌ ಮಾಜಿ ಸಿಎಂ ರೂಪಾನಿ

    ನವದೆಹಲಿ: ಗುಜರಾತ್‌ ಮಾಜಿ ಸಿಎಂ ವಿಜಯ್‌ ರೂಪಾನಿ (Vijay Rupani) ಅವರು ಫೇವರೇಟ್‌ ಲಕ್ಕಿ ಸಂಖ್ಯೆಯ ದಿನವೇ ಮೃತಪಟ್ಟಿದ್ದಾರೆ.

    ಹೌದು. ರೂಪಾನಿ ಅವರು ಖರೀದಿಸಿದ ಮೊದಲ ವಾಹನದ ಸಂಖ್ಯೆ 1206. ಇದು ತಮ್ಮ ಫೇವರೇಟ್‌ ಸಂಖ್ಯೆ ಎಂದು ಭಾವಿಸಿದ ರೂಪಾನಿ ಅವರು ನಂತರ ಖರೀದಿಸಿದ ವಾಹನಗಳಿಗೆ ಈ ಸಂಖ್ಯೆಯ ನಂಬರ್‌ ಅನ್ನೇ ಪಡೆದುಕೊಳ್ಳುತ್ತಿದ್ದರು. ಆದರೆ ಇಂದು ದಿನಾಂಕ 12 ಮತ್ತು 6ನೇ ತಿಂಗಳು (1206) ಲಂಡನ್‌ಗೆ ಪ್ರಯಾಣ ಬೆಳೆಸುತ್ತಿದ್ದಾಗ ಸಾವನ್ನಪ್ಪಿದ್ದಾರೆ.  ಇದನ್ನೂ ಓದಿ: ಜಸ್ಟ್‌ 10 ನಿಮಿಷ, ಟ್ರಾಫಿಕ್‌ನಲ್ಲಿ ಸಿಲುಕಿ ಲಕ್ಕಿ ಲೇಡಿ ಬಚಾವ್‌!

     

    ರೂಪಾನಿ ಅವರ ಬಳಿ ಎರಡು ಕಾರು ಇತ್ತು. ಇನ್ನೋವಾ ಕಾರಿನ ಸಂಖ್ಯೆ GJ-03-ER-1206 ಆಗಿದ್ದರೆ ಮಾರುತಿ ವಾಗನರ್‌ ಕಾರಿನ ಸಂಖ್ಯೆ GJ-03-HK-1206 ಆಗಿತ್ತು. ಇದನ್ನೂ ಓದಿ: ಟೇಕಾಫ್‌ ಆದ 30 ಸೆಕೆಂಡ್‌ನಲ್ಲಿ ದೊಡ್ಡ ಶಬ್ಧ ಬಂತು – ಪವಾಡ ಸದೃಶವಾಗಿ ಏಕೈಕ ಪ್ರಯಾಣಿಕ ಪಾರು

    ಲಂಡನ್‌ಗೆ ಪ್ರಯಾಣಿಸುತ್ತಿದ್ದ ವಿಜಯ್‌ ರೂಪಾನಿ 12 A ಸೀಟಿನಲ್ಲಿ ಕುಳಿತುಕೊಂಡಿದ್ದರು. ಲಂಡನ್‌ನಲ್ಲಿರುವ ಮಗಳ ಮನೆಗೆ ತೆರಳಲು ರೂಪಾನಿ ಏರ್‌ ಇಂಡಿಯಾ ವಿಮಾನ ಹತ್ತಿದ್ದರು. ಮಗಳ ಮನೆಗೆ ಪತ್ನಿ 6 ತಿಂಗಳ ಹಿಂದೆ ತೆರಳಿದ್ದರು. ಪತ್ನಿಯನ್ನು ಕರೆ ತರುವ ಉದ್ದೇಶದಿಂದ ರೂಪಾನಿ ಪ್ರಯಾಣ ಬೆಳೆಸಿದ್ದರು.

  • ಪತನಗೊಂಡ ವಿಮಾನದಲ್ಲಿ ಮಗಳು, ಮೊಮ್ಮಗ ಇದ್ರು; ಬೆಳಿಗ್ಗೆಯಷ್ಟೇ ಅವಳ ಜೊತೆ ಮಾತಾಡಿದ್ದೆ – ಕಣ್ಣೀರಿಟ್ಟ ತಂದೆ

    ಪತನಗೊಂಡ ವಿಮಾನದಲ್ಲಿ ಮಗಳು, ಮೊಮ್ಮಗ ಇದ್ರು; ಬೆಳಿಗ್ಗೆಯಷ್ಟೇ ಅವಳ ಜೊತೆ ಮಾತಾಡಿದ್ದೆ – ಕಣ್ಣೀರಿಟ್ಟ ತಂದೆ

    ಮುಂಬೈ: ಅಹಮದಾಬಾದ್‌ನಲ್ಲಿ ಪತನಗೊಂಡ ವಿಮಾನದಲ್ಲಿ (Ahmedabad Plane Crash) ಮಗಳು, ಮೊಮ್ಮಗ ಹಾಗೂ ಆಕೆಯ ಅತ್ತೆ ಇದ್ದರೂ ಎಂದು ನಾಗ್ಪುರದ ವ್ಯಕ್ತಿಯೊಬ್ಬರು ಮಾಧ್ಯಮಗಳ ಮುಂದೆ ಕಣ್ಣೀರಿಟ್ಟಿದ್ದಾರೆ.

    ನಾಗ್ಪುರದ ಮನೀಶ್ ಕಮ್ದಾರ್ ಮಾಧ್ಯಮಗಳ ಜೊತೆ ಮಾತನಾಡಿ, ನನ್ನ ಮಗಳು, ಅವಳ ಒಂದೂವರೆ ವರ್ಷದ ಮಗ ಮತ್ತು ಅವಳ ಅತ್ತೆ ಅಪಘಾತಕ್ಕೀಡಾದ ವಿಮಾನದಲ್ಲಿದ್ದರು. ಅಹಮದಾಬಾದ್‌ನಲ್ಲಿ ವಾಸವಾಗಿದ್ದ ನನ್ನ ಮಗಳು ಯಶಾ ಮೋಧಾ ಅವಳೊಂದಿಗೆ ಬೆಳಿಗ್ಗೆಯಷ್ಟೇ ಮಾತನಾಡಿದ್ದೆ. ಆದರೆ ವಿಮಾನ ಅಪಘಾತದ ನಂತರ ಅವಳ ಬಗ್ಗೆ ಏನು ಮಾಹಿತಿ ಸಿಕ್ಕಿಲ್ಲ ಎಂದು ಭಾವುಕರಾಗಿದ್ದಾರೆ. ಇದನ್ನೂ ಓದಿ: ಟೇಕಾಫ್‌ ಆದ 30 ಸೆಕೆಂಡ್‌ನಲ್ಲಿ ದೊಡ್ಡ ಶಬ್ಧ ಬಂತು – ಪವಾಡ ಸದೃಶವಾಗಿ ಏಕೈಕ ಪ್ರಯಾಣಿಕ ಪಾರು

    ಏರ್ ಇಂಡಿಯಾ (Air India) ಸಂಸ್ಥೆಯಾಗಲಿ ಅಥವಾ ಅಧಿಕಾರಿಗಳಾಗಲಿ ಯಾರೂ ಇಲ್ಲಿಯವರೆಗೆ ನನ್ನನ್ನು ಸಂಪರ್ಕಿಸಿಲ್ಲ. ನಾನು ರಸ್ತೆಯ ಮೂಲಕ ಅಹಮದಾಬಾದ್‌ಗೆ ಹೋಗುತ್ತಿದ್ದೇನೆ. ನನ್ನ ಅಳಿಯ ಅಹಮದಾಬಾದ್ ಸಿವಿಲ್ ಆಸ್ಪತ್ರೆಯ ಹೊರಗೆ ಕಾಯುತ್ತಿದ್ದಾರೆ. ಅವರಿಗೂ ಯಾವುದೇ ವಿಚಾರ ತಿಳಿದಿಲ್ಲ ಎಂದು ಹೇಳಿಕೊಂಡಿದ್ದಾರೆ.

    ಬ್ರಿಟನ್‌ ನಿವಾಸಿಯಾಗಿದ್ದ ಅವರ ಮಗಳ ಮಾವ ಒಂದು ತಿಂಗಳ ಹಿಂದೆ ಅಹಮದಾಬಾದ್‌ನಲ್ಲಿ ನಿಧನರಾಗಿದ್ದರು. ಅವರ ಕುಟುಂಬವು ಜೂನ್ 22 ರಂದು ಅಲ್ಲಿ ನಿಗದಿಯಾಗಿದ್ದ ಅವರ ಶ್ರದ್ಧಾಂಜಲಿ ಸಭೆಯಲ್ಲಿ ಭಾಗವಹಿಸಲು ಹೋಗುತ್ತಿತ್ತು ಎಂದು ತಿಳಿಸಿದ್ದಾರೆ.

    ಅಪಘಾತಗೊಂಡ ಈ ವಿಮಾನದಲ್ಲಿ ಸುಮಾರು 10 ಮಂದಿ ಸಿಬ್ಬಂದಿ ಸೇರಿ 242 ಜನ ಇದ್ದರು. ಮೂಲಗಳ ಪ್ರಕಾರ 200ಕ್ಕೂ ಹೆಚ್ಚು ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಎನ್ನಲಾಗುತ್ತಿದೆ. ಈ ಬಗ್ಗೆ ಅಧಿಕೃತ ಮಾಹಿತಿ ಇನ್ನೂ ಬಿಡುಗಡೆಯಾಗಿಲ್ಲ. ಇದನ್ನೂ ಓದಿ: ಜಸ್ಟ್‌ 10 ನಿಮಿಷ, ಟ್ರಾಫಿಕ್‌ನಲ್ಲಿ ಸಿಲುಕಿ ಲಕ್ಕಿ ಲೇಡಿ ಬಚಾವ್‌!

  • ಮೃತ ಪ್ರಯಾಣಿಕರ ಕುಟುಂಬಕ್ಕೆ 1 ಕೋಟಿ ಪರಿಹಾರ: ಟಾಟಾ ಗ್ರೂಪ್‌ ಘೋಷಣೆ

    ಮೃತ ಪ್ರಯಾಣಿಕರ ಕುಟುಂಬಕ್ಕೆ 1 ಕೋಟಿ ಪರಿಹಾರ: ಟಾಟಾ ಗ್ರೂಪ್‌ ಘೋಷಣೆ

    ನವದೆಹಲಿ: ಅಹಮದಾಬಾದ್ ಬಳಿ ನಡೆದ ಏರ್ ಇಂಡಿಯಾ (Air India) ವಿಮಾನ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಟಾಟಾ ಗ್ರೂಪ್ (Tata Group) 1 ಕೋಟಿ ರೂಪಾಯಿ ಪರಿಹಾರ ನೀಡಲಿದೆ ಎಂದು ಕಂಪನಿಯ ಅಧ್ಯಕ್ಷ ಎನ್ ಚಂದ್ರಶೇಖರನ್ (N Chandrasekaran) ಘೋಷಿಸಿದ್ದಾರೆ.

    ಗಾಯಾಳುಗಳ ವೈದ್ಯಕೀಯ ವೆಚ್ಚವನ್ನು ಟಾಟಾ ಗ್ರೂಪ್ ಭರಿಸಲಿದೆ ಮತ್ತು ಅವರಿಗೆ ಅಗತ್ಯವಿರುವ ಎಲ್ಲಾ ಆರೈಕೆ ಮತ್ತು ಬೆಂಬಲ ದೊರೆಯುವಂತೆ ನೋಡಿಕೊಳ್ಳಲಿದೆ ಎಂದು ಅವರು ಹೇಳಿದರು.

    ವಿಮಾನ ಪತನಗೊಂಡು ಬಿದ್ದ ಬಿ ಜೆ ಮೆಡಿಕಲ್ಸ್ ಹಾಸ್ಟೆಲ್ ನಿರ್ಮಾಣಕ್ಕೆ ನಾವು ಸಹಾಯ ಮಾಡುತ್ತೇವೆ ಎಂದು ಅವರು ತಿಳಿಸಿದರು. ಇದನ್ನೂ ಓದಿ: ಟೇಕಾಫ್‌ ಆದ 30 ಸೆಕೆಂಡ್‌ನಲ್ಲಿ ದೊಡ್ಡ ಶಬ್ಧ ಬಂತು – ಪವಾಡ ಸದೃಶವಾಗಿ ಏಕೈಕ ಪ್ರಯಾಣಿಕ ಪಾರು

     

    ಈ ಕ್ಷಣದಲ್ಲಿ ನಾವು ಅನುಭವಿಸುತ್ತಿರುವ ದುಃಖವನ್ನು ಪದಗಳಲ್ಲಿ ಹೇಳಲು ಸಾಧ್ಯವಿಲ್ಲ. ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬ ಮತ್ತು ಗಾಯಗೊಂಡವರ ಜೊತೆ ನಾವಿದ್ದೇವೆ ಎಂದು ಹೇಳಿದರು. ಇದನ್ನೂ ಓದಿ: ಜಸ್ಟ್‌ 10 ನಿಮಿಷ, ಟ್ರಾಫಿಕ್‌ನಲ್ಲಿ ಸಿಲುಕಿ ಲಕ್ಕಿ ಲೇಡಿ ಬಚಾವ್‌!

    1932 ರಲ್ಲಿ ಜೆಆರ್‌ಡಿ ಟಾಟಾ ಅವರು ಟಾಟಾ ಏರ್‌ಲೈನ್ಸ್‌ ಸಂಸ್ಥೆಯನ್ನು ಆರಂಭಿಸಿದರು. ನಂತರ ಅದಕ್ಕೆ 1946ರಲ್ಲಿ ಏರ್‌ ಇಂಡಿಯಾ ಎಂದು ಮರುನಾಮಕರಣ ಮಾಡಲಾಯಿತು. ಕೇಂದ್ರ ಸರ್ಕಾರವು 1953 ರಲ್ಲಿ ಏರ್‌ಲೈನ್ಸ್‌ನ್ನು ತನ್ನ ನಿಯಂತ್ರಣಕ್ಕೆ ತೆಗೆದುಕೊಂಡಿತು. ಆದರೆ ಜೆಆರ್‌ಡಿ ಟಾಟಾ 1977ರವರೆಗೆ ಅದರ ಅಧ್ಯಕ್ಷರಾಗಿ ಮುಂದುವರಿದರು. ಸುಮಾರು 67 ವರ್ಷಗಳ ನಂತರ ಏರ್‌ ಇಂಡಿಯಾವನ್ನು ಟಾಟಾ ಸಂಸ್ಥೆ ಮತ್ತೆ ಪಡೆದುಕೊಂಡಿತ್ತು. ಸಾಲದ ಸುಳಿಯಲ್ಲಿದ್ದ ಏರ್‌ ಇಂಡಿಯಾವನ್ನು ಕೇಂದ್ರ ಸರ್ಕಾರವು ಅಕ್ಟೋಬರ್‌ 2021 ರಲ್ಲಿ 18,000 ಕೋಟಿ ರೂ.ಗೆ ಟಾಟಾ ಗ್ರೂಪ್ಸ್‌ಗೆ ಮಾರಾಟ ಮಾಡಿತ್ತು.

  • ಟೇಕಾಫ್‌ ಆದ 30 ಸೆಕೆಂಡ್‌ನಲ್ಲಿ ದೊಡ್ಡ ಶಬ್ಧ ಬಂತು – ಪವಾಡ ಸದೃಶವಾಗಿ ಏಕೈಕ ಪ್ರಯಾಣಿಕ ಪಾರು

    ಟೇಕಾಫ್‌ ಆದ 30 ಸೆಕೆಂಡ್‌ನಲ್ಲಿ ದೊಡ್ಡ ಶಬ್ಧ ಬಂತು – ಪವಾಡ ಸದೃಶವಾಗಿ ಏಕೈಕ ಪ್ರಯಾಣಿಕ ಪಾರು

    ಅಹಮದಾಬಾದ್: ಏರ್‌ ಇಂಡಿಯಾ ವಿಮಾನ ದುರಂತದಲ್ಲಿ 40 ವರ್ಷದ ವಿಶ್ವಾಸ್‌ ಕುಮಾರ್‌ ರಮೇಶ್‌ (Vishwash Kumar Ramesh) ಅವರು ಪವಾಡ ಸದೃಶ ರೀತಿಯಲ್ಲಿ ಪಾರಾಗಿದ್ದಾರೆ.

    ವಿಮಾನ ನಿಲ್ದಾಣದ ಟೇಕಾಫ್‌ ಆದ 30 ಸೆಕೆಂಡ್‌ಗಳ ನಂತರ ದೊಡ್ಡ ಶಬ್ಧ ಕೇಳಿ ಬಂತು ನಂತರ ವಿಮಾನ ಪತನ ಹೊಂದಿತು ಎಂದು ಅವರು ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.

    ಪಾರಾದ ವಿಶ್ವಾಸ್‌ ಅವರು ತುರ್ತು ನಿರ್ಗಮನ ಡೋರ್‌ ಬಳಿಯ 11A ಸೀಟಿನಲ್ಲಿ ಕುಳಿತುಕೊಂಡಿದ್ದರು. ಪತನಗೊಳ್ಳುವ ಕೊನೆ ಕ್ಷಣದಲ್ಲಿ ವಿಮಾನದಿಂದ ಅವರು ಹಾರಿದ್ದರಿಂದ ಪಾರಾಗಿದ್ದಾರೆ.

    ವಿಶ್ವಾಸ್‌ ಅವರ ಎದೆ , ಕಣ್ಣು, ಪಾದಗಳು ಗಾಯಗೊಂಡಿದ್ದು ಅವರು ಈಗ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಿಮಾನ ಪತನಗೊಂಡ ಸ್ಥಳದಿಂದ ಅವರು ನಡೆದುಕೊಂಡೇ ಅಂಬುಲೆನ್ಸ್‌ ಹತ್ತುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಅಗಿದೆ. ಇದನ್ನೂ ಓದಿ: ಜಸ್ಟ್‌ 10 ನಿಮಿಷ, ಟ್ರಾಫಿಕ್‌ನಲ್ಲಿ ಸಿಲುಕಿ ಲಕ್ಕಿ ಲೇಡಿ ಬಚಾವ್‌!

     

    ನಾನು ಎದ್ದು ನೋಡಿದಾಗ ನನ್ನ ಸುತ್ತಲೂ ಶವಗಳ ರಾಶಿ ಇತ್ತು. ಸುತ್ತಲೂ ಛಿದ್ರಗೊಂಡ ವಿಮಾನದ ಭಾಗಗಳು ಬಿದ್ದಿದ್ದವು. ಭಯಗೊಂಡು ನಾನು ಓಡಲು ಆರಂಭಿಸಿದ್ದೆ. ಈ ವೇಳೆ ಯಾರೋ ನನ್ನನ್ನು ಹಿಡಿದು ಅಂಬುಲೆನ್ಸ್‌ ಮೂಲಕ ಆಸ್ಪತ್ರೆಯಲ್ಲಿ ಅಡ್ಮಿಟ್‌ ಮಾಡಿದ್ದಾರೆ ಎಂದು ವಿವರಿಸಿದರು. ಇದನ್ನೂ ಓದಿ: Ahmedabad Plane Crash | ಮಂಗಳೂರು ಮೂಲದ ಕ್ಲೈವ್‌ ಕುಂದರ್‌ ಸಹ ಪೈಲಟ್‌!

    ಬ್ರಿಟಿಷ್ ಪ್ರಜೆಯಾಗಿರುವ ವಿಶ್ವಾಸ್‌ ತನ್ನ ಕುಟುಂಬವನ್ನು ಭೇಟಿ ಮಾಡಲು ಕೆಲವು ದಿನಗಳ ಕಾಲ ಭಾರತಕ್ಕೆ ಬಂದಿದ್ದರು. ಇಂದು ಸಹೋದರ ಅಜಯ್ ಕುಮಾರ್ ರಮೇಶ್ (45) ಜೊತೆ ಯುಕೆಗೆ ತೆರಳುತ್ತಿದ್ದರು. ವಿಶ್ವಾಸ್‌ ಅವರು 20 ವರ್ಷಗಳಿಂದ ಲಂಡನ್‌ನಲ್ಲಿ ವಾಸವಾಗಿದ್ದಾರೆ.

    ನನ್ನ ಸಹೋದರ ಅಜಯ್‌ ಬೇರೆ ಸಾಲಿನಲ್ಲಿ ಕುಳಿತಿದ್ದರು. ಅವರು ನನಗೆ ಸಿಕ್ಕಿಲ್ಲ. ಅವರನ್ನು ದಯವಿಟ್ಟು ಪತ್ತೆ ಹಚ್ಚಲು ನನಗೆ ಸಹಾಯ ಮಾಡಿ ಎಂದು ಅವರು ಪರಿ ಪರಿಯಾಗಿ ಬೇಡಿಕೊಂಡಿದ್ದಾರೆ.