Tag: Air Show

  • ಮೈಸೂರು ದಸರಾ ಮಹೋತ್ಸವ – ಸೆ.27ರಂದು ಬನ್ನಿ ಮಂಟಪದಲ್ಲಿ ವೈಮಾನಿಕ ಪ್ರದರ್ಶನ

    ಮೈಸೂರು ದಸರಾ ಮಹೋತ್ಸವ – ಸೆ.27ರಂದು ಬನ್ನಿ ಮಂಟಪದಲ್ಲಿ ವೈಮಾನಿಕ ಪ್ರದರ್ಶನ

    ಬೆಂಗಳೂರು: 2025ರ ಮೈಸೂರು ದಸರಾ (Mysuru Dasara) ಮಹೋತ್ಸವ ಸಂಬಂಧ ಸೆ.27ರಂದು ಸಂಜೆ 4 ಗಂಟೆಗೆ ಬನ್ನಿಮಂಟಪದಲ್ಲಿ ವೈಮಾನಿಕ ಪ್ರದರ್ಶನ (Air Show) ಹಾಗೂ ಸೆ.28 ಮತ್ತು ಸೆ.29ರಂದು ಅದೇ ಮೈದಾನದಲ್ಲಿ ಸಂಜೆ 6 ಗಂಟೆಗೆ ಡ್ರೋನ್ ಶೋ (Drone Show) ನಡೆಯಲಿದೆ.

    ಅ.1ರಂದು ಬನ್ನಿಮಂಟಪದ ಮೈದಾನದಲ್ಲಿ ಸಂಜೆ 4 ಗಂಟೆಗೆ ವೈಮಾನಿಕ ಪ್ರದರ್ಶನ ಮತ್ತು ಪಂಜಿನ ಕವಾಯತು ಪೂರ್ವಾಭ್ಯಾಸದ ಕಾರ್ಯಕ್ರಮ ಜರುಗಲಿದೆ. ಅ.2ರಂದು ಅರಮನೆ ಆವರಣದಲ್ಲಿ ಜಂಬೂಸವಾರಿ ಮೆರವಣಿಗೆ ಕಾರ್ಯಕ್ರಮ ಪ್ರಾರಂಭಗೊಳ್ಳುವುದು ಮತ್ತು ಅದೇ ದಿನ ಸಂಜೆ 6 ಗಂಟೆಗೆ ಬನ್ನಿಮಂಟಪದ ಮೈದಾನದಲ್ಲಿ ಪಂಜಿನ ಕವಾಯತು ಕಾರ್ಯಕ್ರಮ ಜರುಗಲಿದೆ. ಇದನ್ನೂ ಓದಿ: ನವರಾತ್ರಿಯಿಂದ ದೇಶದಲ್ಲಿ ಜಿಎಸ್‌ಟಿ ಉಳಿತಾಯ ಉತ್ಸವ – ಸ್ವದೇಶಿ ವಸ್ತುಗಳನ್ನು ಖರೀದಿಸಿ: ಮೋದಿ ಕರೆ

    ಅರಮನೆ ಆವರಣದಲ್ಲಿ ಮತ್ತು ಬನ್ನಿಮಂಟಪದ ಮೈದಾನದಲ್ಲಿ ಲಭ್ಯವಿರುವ ಆಸನಗಳನ್ನು ಗಮನದಲ್ಲಿಟ್ಟುಕೊಂಡು ವೀಕ್ಷಕರಿಗೆ ಟಿಕೆಟ್ ಮತ್ತು ಪಾಸುಗಳನ್ನು ನೀಡಲಾಗುತ್ತದೆ. ಅಲ್ಲದೇ ಅಧಿಕೃತ ಟಿಕೆಟ್ ಮತ್ತು ಪಾಸು ಹೊಂದಿದವರಿಗೆ ಮಾತ್ರ ಪ್ರವೇಶಾವಕಾಶ ಕಲ್ಪಿಸಲಾಗಿದೆ. ಇದನ್ನೂ ಓದಿ: ನಾಳೆಯಿಂದ ರಾಜ್ಯದಲ್ಲಿ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆ ಶುರು – ಮಧುಸೂದನ್ ನಾಯ್ಕ್

    ಭದ್ರತೆ, ಶಿಷ್ಟಾಚಾರ, ಆದ್ಯತೆ, ಸ್ಥಳದಲ್ಲಿ ಲಭ್ಯವಿರುವ ಸೌಕರ್ಯ ಹಾಗೂ ಸಾರ್ವಜನಿಕ ಸುರಕ್ಷತೆ ಮತ್ತು ಜನಸಮೂಹ ನಿಯಂತ್ರಣಗಳ ಮಾನದಂಡಗಳ ಅನುಗುಣವಾಗಿ ಪಾಸುಗಳನ್ನು ಮತ್ತು ಟಿಕೆಟುಗಳನ್ನು ವಿತರಿಸಲಾಗುತ್ತದೆ. ಈ ಕಾರ್ಯಕ್ರಮಗಳಿಗೆ ಟಿಕೆಟ್‌ಗಳನ್ನು ಆನ್‌ಲೈನ್ www.mysoredasara.gov.in ಮೂಲಕ ಪಡೆದುಕೊಳ್ಳಬಹುದಾಗಿದೆ. ಸಾರ್ವಜನಿಕರು ಕಾರ್ಯಕ್ರಮ ಯಶಸ್ವಿಯಾಗಿಸಲು ಸಹಕರಿಸುವಂತೆ ದಸರಾ ವಿಶೇಷಾಧಿಕಾರಿ ಮತ್ತು ಮೈಸೂರು ಜಿಲ್ಲಾಧಿಕಾರಿಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಆಣೆ ಪ್ರಮಾಣಕ್ಕಾಗಿ ದೇವಾಲಯಕ್ಕೆ ಬಂದ ಹೊನ್ನಾಳಿ ಶಾಸಕ – ಸವಾಲೆಸೆದು ಕೈಕೊಟ್ಟ ರೇಣುಕಾಚಾರ್ಯ ಆಪ್ತ

  • ರಾಜ್ಯದ ಮನವಿಗಳಿಗೆ ಕೇಂದ್ರ ರಕ್ಷಣಾ ಸಚಿವರ ಸಕಾರಾತ್ಮಕ ಸ್ಪಂದನೆ: ಸಿದ್ದರಾಮಯ್ಯ

    ರಾಜ್ಯದ ಮನವಿಗಳಿಗೆ ಕೇಂದ್ರ ರಕ್ಷಣಾ ಸಚಿವರ ಸಕಾರಾತ್ಮಕ ಸ್ಪಂದನೆ: ಸಿದ್ದರಾಮಯ್ಯ

    ನವದೆಹಲಿ: ಮೈಸೂರು ದಸರಾ (Mysuru Dasara) ಉತ್ಸವದಲ್ಲಿ ವೈಮಾನಿಕ ಪ್ರದರ್ಶನ (Air Show) ಹಾಗೂ ಬೆಂಗಳೂರಿನಲ್ಲಿ ಡಿಫೆನ್ಸ್ ಕಾರಿಡಾರ್ (Defence Corridor) ಸೇರಿದಂತೆ ಅಭಿವೃದ್ಧಿ ಕಾಮಗಾರಿಗಳಿಗೆ ರಕ್ಷಣಾ ಇಲಾಖೆಯ ಜಾಗ ನೀಡುವ ಸರ್ಕಾರದ ಮನವಿಗಳಿಗೆ ಕೇಂದ್ರ ರಕ್ಷಣಾ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ತಿಳಿಸಿದರು.

    ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದ ನಂತರ ಸಿಎಂ ಮಾಧ್ಯಮದವರೊಂದಿಗೆ ಮಾತನಾಡಿದರು. ಇದನ್ನೂ ಓದಿ: ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಏರ್ ಶೋ ನಡೆಸಲು ಕೇಂದ್ರ ಒಪ್ಪಿಗೆ

    ಉತ್ತರಪ್ರದೇಶ ಹಾಗೂ ತಮಿಳುನಾಡು ಮಾದರಿಯಲ್ಲಿ ಕರ್ನಾಟಕದಲ್ಲಿಯೂ ರಕ್ಷಣಾ ಕಾರಿಡಾರ್ ಸ್ಥಾಪನೆ ಹಾಗೂ ಟನಲ್ ಯೋಜನೆ, ಬಳ್ಳಾರಿ ರಸ್ತೆಯಲ್ಲಿ ಲಿಂಕ್ ರೋಡ್ ಯೋಜನೆ, ಡಬಲ್ ಡೆಕ್ಕರ್ ಫ್ಲೈಓವರ್ ಯೋಜನೆಯ ನಿರ್ಮಾಣಕ್ಕೆ ಅವಶ್ಯವಿರುವ ಕೇಂದ್ರ ರಕ್ಷಣಾ ಇಲಾಖೆಗೆ ಸೇರಿದ ಜಾಗವನ್ನು ರಾಜ್ಯದ ಅಭಿವೃದ್ಧಿ ಯೋಜನೆಗಳಿಗೆ ನೀಡುವಂತೆ ಕೋರಿ ಮನವಿ ಸಲ್ಲಿಸಿರುವ ಬಗ್ಗೆ ವಿವರಿಸಿದರು. ಇದನ್ನೂ ಓದಿ:ಕಾಡಾನೆ ದಾಳಿಗೆ ಮಾಜಿ ಶಾಸಕ ಬಲಿ

    ರಾಹುಲ್ ಗಾಂಧಿಯನ್ನು ಭೇಟಿಯಾಗುವ ಕಾರ್ಯಕ್ರಮವಿದೆಯೇ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ರಾಹುಲ್ ಗಾಂಧಿಯವರನ್ನು ಸಾಧ್ಯವಾದರೆ ಭೇಟಿಯಾಗುವುದಾಗಿ ತಿಳಿಸಿದರು. ಕಾಂಗ್ರೆಸ್‌ನ ರಣದೀಪ್ ಸಿಂಗ್ ಸುರ್ಜೆವಾಲಾ ಅವರು ನಾಳೆ ನವದೆಹಲಿಗೆ ಆಗಮಿಸಲಿದ್ದು, ಅವರೊಂದಿಗೆ ವಿಧಾನಪರಿಷತ್ ಸದಸ್ಯರು ಹಾಗೂ ನಿಗಮಮಂಡಳಿಗಳಿಗೆ ಅಧ್ಯಕ್ಷರ ನೇಮಕಾತಿ ಬಗ್ಗೆ ಚರ್ಚಿಸಲಾಗುವುದು. ಅಂತೆಯೇ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಭೇಟಿಗೆ ಸಮಯವನ್ನು ಕೋರಲಾಗಿದ್ದು, ನಾಳೆ ಭೇಟಿಯಾಗುವ ಸಾಧ್ಯತೆಯಿದೆ ಎಂದರು. ಇದನ್ನೂ ಓದಿ: ಉತ್ತರ ಭಾರತದ ಹಲವು ರಾಜ್ಯಗಳಿಗೆ ಪ್ರವಾಹ ಎಚ್ಚರಿಕೆ – ಹಿಮಾಚಲ ಪ್ರದೇಶದಲ್ಲಿ ಯೆಲ್ಲೋ ಅಲರ್ಟ್

  • ಏರ್ ಶೋನಲ್ಲಿ ಗಮನ ಸೆಳೆಯುತ್ತಿದೆ 10 ಕೋಟಿ ಮೌಲ್ಯದ ಪೈಲಟ್ ಹೆಲ್ಮೆಟ್

    ಏರ್ ಶೋನಲ್ಲಿ ಗಮನ ಸೆಳೆಯುತ್ತಿದೆ 10 ಕೋಟಿ ಮೌಲ್ಯದ ಪೈಲಟ್ ಹೆಲ್ಮೆಟ್

    – ಕನ್ನಡಿಗರೇ ತಯಾರಿಸಿರೋ ಅಡ್ವಾನ್ಸ್ಡ್‌ ಹೆಲ್ಮೆಟ್ ವಿಶೇಷತೆ ಏನು?

    ಬೆಂಗಳೂರು: ಏರೋ ಇಂಡಿಯಾ-2025 ರಲ್ಲಿ ಭಾರತೀಯ ಸೇನಾ ವಿಂಗ್ ಕಮಾಂಡರ್‌ಗಳು, ಪೈಲೆಟ್‌ಗಳ ಬಳಕೆಗಾಗಿಯೇ ಕನ್ನಡಿಗರು ತಯಾರು ಮಾಡಿರುವ ಅಡ್ವಾನ್ಸ್ಡ್ ಹೆಲ್ಮೆಟ್ ಗಮನ ಸೆಳೆಯುತ್ತಿದೆ.

    ವರ್ಚಸ್ ಏರೋ ಸ್ಪೇಸ್ ಸಂಸ್ಥೆ ಸುಮಾರು 8 ರಿಂದ 10 ಕೋಟಿ ವೆಚ್ಚದ, ಒಂದು ಕೆ.ಜಿ. ತೂಕದ ಅಡ್ವಾನ್ಸ್ಡ್‌ ಹೆಲ್ಮೆಟ್ ಇದು.

    ಸೆನ್ಸಾರ್ ಮೂಲಕ ಫೈಟರ್ ಜೆಟ್ ಮೇಲಿರುವ ಪೈಲೆಟ್‌ಗೆ ಸುತ್ತಲಿನ ಪ್ರದೇಶದ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡುತ್ತದೆ. ಜೊತೆಗೆ, ಕಣ್ಣಂಚಿನಲ್ಲೇ ಎಲ್ಲವು ತಿಳಿಯುವಂತೆ ಅಭಿವೃದ್ಧಿ ಪಡಿಸಲಾಗಿದೆ.

    ಸದ್ಯ ಭಾರತದ ವಾಯುಪಡೆಯಲ್ಲಿರುವ ತೇಜಸ್ ವಿಮಾನದ ಅಪ್‌ಗ್ರೇಡ್ ವರ್ಷನ್‌ಗೆ ಮತ್ತು ಬಹುನೀರಿಕ್ಷಿತ ಭಾರತ ವಾಯಸೇನೆಯ ಮುಂಬರುವ ಫೈಟರ್ ಜೆಟ್ ಅಮ್ಕಾಗೆ ಬಳಕೆ ಮಾಡಲು ತಯಾರಿ ಮಾಡಲಾಗಿದೆ.

  • Aero India 2025: ಇಂದಿನಿಂದ ಸಾರ್ವಜನಿಕರಿಗೆ ಏರ್‌ ಶೋ ವೀಕ್ಷಣೆಗೆ ಅವಕಾಶ

    Aero India 2025: ಇಂದಿನಿಂದ ಸಾರ್ವಜನಿಕರಿಗೆ ಏರ್‌ ಶೋ ವೀಕ್ಷಣೆಗೆ ಅವಕಾಶ

    ಬೆಂಗಳೂರು: ಯಲಂಹಕದಲ್ಲಿ ನಡೆಯುತ್ತಿರುವ ‘ಏರೋ ಇಂಡಿಯಾ 2025’ (Aero India 2025) ಆಕರ್ಷಣೀಯವಾಗಿದೆ. ಇಂದಿನಿಂದ ಸಾರ್ವಜನಿಕರಿಗೆ ಏರ್‌ ಶೋ ವೀಕ್ಷಣೆಗೆ ಅವಕಾಶ ಸಿಗಲಿದೆ.0

    ಇಂದು, ನಾಳೆ ಲಕ್ಷಾಂತರ ಜನ ಭಾಗಿಯಾಗುವ ಸಾಧ್ಯತೆ ಇದೆ. ಮೊದಲ ಮೂರು ದಿನ ಕೇವಲ ಅಡ್ವಾ ಪ್ರದೇಶಕ್ಕೆ ಮಾತ್ರ ಸಾರ್ವಜನಿಕರಿಗೆ ಅವಕಾಶ ನೀಡಲಾಗಿತ್ತು. ಇಂದಿನಿಂದ ಎರಡು ದಿನ ಸಂಪೂರ್ಣ ಏರೋ ಇಂಡಿಯಾ ಸಾರ್ವಜನಿಕ ವೀಕ್ಷಣೆಗೆ ಮುಕ್ತವಾಗಲಿದೆ.

    ಒಂದು ಸಾವಿರ, ಎರಡೂವರೆ ಸಾವಿರಕ್ಕೆ ಟಿಕೆಟ್ ಪಡೆದವರು ಸಂಪೂರ್ಣ ಏರೋ ಇಂಡಿಯಾ ವೀಕ್ಷಣೆಗೆ ಅವಕಾಶ ಇರಲಿದೆ. ಇಂದು ಕೂಡ ಬೆಳಗ್ಗೆ 9:30 ರಿಂದ 12 ಮತ್ತು ಮಧ್ಯಾಹ್ನ 2:30 ರಿಂದ ಸಂಜೆ 5 ಗಂಟೆ ವರೆಗೆ ಏರ್ ಶೋ ಎರಡು ಪ್ರದರ್ಶನ ಇರಲಿದೆ.

    ಸೂರ್ಯಕಿರಣ, ಆಮೆರಿಕದ ಎಫ್ 35, ರಷ್ಯಾದ ಎಸ್‌ಯು 57, ತೇಜಸ್ ಎಲ್ಸಿಎ, ಎಲ್ಯುಹೆಚ್ ಹೆಲಿಕಾಪ್ಟರ್ ಪ್ರದರ್ಶನ ಕಣ್ಮನ ಸೆಳೆಯಲಿದೆ. ಎರಡೂವರೆ ಸಾವಿರ, 5 ಸಾವಿರ ಟಿಕೆಟ್ ಪಡೆದವರಿಗೆ ಕಾರ್ಯಕ್ರಮ ಪ್ರದೇಶದ ಹೊರಭಾಗ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ.

    1 ಸಾವಿರ ರೂ. ಟಿಕೆಟ್ ಪಡೆದವರಿಗೆ ಜಕ್ಕೂರು, ಜಿಕೆವಿಕೆಯಲ್ಲಿ ಪಾರ್ಕಿಂಗ್ ವ್ಯವಸ್ಥೆ ಇರಲಿದೆ. ಈ ಭಾಗದಲ್ಲಿ ಸವಾರರಿಗೆ ಕಳೆದು ಮೂರು ದಿನಕ್ಕಿಂತಲೂ ಹೆಚ್ಚು ವಾಹನ ದಟ್ಟನೆ ಎಫೆಕ್ಟ್ ಇಂದು, ನಾಳೆ ತಟ್ಟುವ ಸಾಧ್ಯತೆ ಇದೆ.

  • ಏರ್ ಶೋ ಹೊತ್ತಲ್ಲೇ ಕೆಂಪೇಗೌಡ ಏರ್‌ಪೋರ್ಟ್‌ಗೆ ಬಾಂಬ್ ಬೆದರಿಕೆ

    ಏರ್ ಶೋ ಹೊತ್ತಲ್ಲೇ ಕೆಂಪೇಗೌಡ ಏರ್‌ಪೋರ್ಟ್‌ಗೆ ಬಾಂಬ್ ಬೆದರಿಕೆ

    ಚಿಕ್ಕಬಳ್ಳಾಪುರ: ಏರ್ ಶೋ ಹೊತ್ತಲ್ಲೇ (Air Show) ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (Kempegowda International Airport) ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿರುವುದು ತಡವಾಗಿ ಬೆಳಕಿಗೆ ಬಂದಿದೆ.

    ಏರ್ ಶೋಗಾಗಿ ತಯಾರಿ ನಡೆಯುತ್ತಿರುವಾಗ ಫೆಬ್ರವರಿ 8 ರಂದು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಮೇಲ್ ಬಂದಿದೆ.ಇದನ್ನೂ ಓದಿ: ಕೃತಕ ಬುದ್ದಿಮತ್ತೆ ವಿಚಾರದಲ್ಲಿ ಎಲ್ಲಾ ದೇಶಗಳು ಒಗ್ಗಟ್ಟಿನಿಂದ ಮುಂದಡಿ ಇಡಬೇಕು: ಮೋದಿ

    mahantesh6699@proton.mi ಇಮೇಲ್ ಐಡಿ ಮೂಲಕ ಬಾಂಬ್ ಬೆದರಿಕೆ ಬಂದಿದ್ದು, ದುಷ್ಕರ್ಮಿಗಳು ಏರ್‌ಪೋರ್ಟ್‌ಗೆ ಆಗಮಿಸುವ ವಿಮಾನಗಳಿಗೆ ಡ್ರೋನ್ ಮುಖಾಂತರ ಬಾಂಬ್ ದಾಳಿ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ.

    ಬೆಂಗಳೂರು, ಚೆನ್ನೈ ಹಾಗೂ ಕೇರಳದಿಂದ ಬರುವ ವಿಮಾನಗಳಿಗೆ ಡ್ರೋನ್ ಬಾಂಬ್ ದಾಳಿ ಬೆದರಿಕೆಯೊಡ್ಡಿದ್ದಾರೆ. ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಯಿಗೆ ಪತ್ರ ಬರೆದಿದ್ದೇನೆ. ಪತ್ರ ಬರೆದು ಅವರಿಂದ ಪ್ರತಿಕ್ರಿಯೆ ಕೋರಿದ್ದೇನೆ. ನನ್ನ ಪತ್ರಕ್ಕೆ ಪ್ರತಿಕ್ರಿಯೆ ಬರದಿದ್ದರೆ ಡ್ರೋನ್ ಬಾಂಬ್ ದಾಳಿ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ.

    ಏರ್ ಶೋ ನಡೆಯುತ್ತಿರುವ ಸಂದರ್ಭದಲ್ಲಿ ಬೆದರಿಕೆ ಬಂದ ಹಿನ್ನೆಲೆ ಪೊಲೀಸರು ಭದ್ರತೆ ಹೆಚ್ಚಿಸಿದ್ದು, ದುಷ್ಕರ್ಮಿಗಳ ವಿರುದ್ಧ ಬಿಎನ್‌ಎಸ್ 125, 351, 353 ಆಡಿ ಎಫ್‌ಐಆರ್ ದಾಖಲು ಮಾಡಲಾಗಿದೆ. ಈ ಬಗ್ಗೆ ಬೆಂಗಳೂರು ಏರ್‌ಪೋರ್ಟ್ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.ಇದನ್ನೂ ಓದಿ: ಬೆಂಗಳೂರಿನ ಕೈಯಲ್ಲಿ ಭಾರತದ ಭವ್ಯ ಭವಿಷ್ಯ – ರಾಜನಾಥ್ ಸಿಂಗ್

     

  • Bengaluru | ಏರ್‌ ಶೋ ಹಿನ್ನೆಲೆ ಟ್ರಾಫಿಕ್ ಜಾಮ್ ಬಿಸಿ – ಕಿಲೋಮೀಟರ್‌ಗಟ್ಟಲೆ ನಿಂತ ವಾಹನಗಳು

    Bengaluru | ಏರ್‌ ಶೋ ಹಿನ್ನೆಲೆ ಟ್ರಾಫಿಕ್ ಜಾಮ್ ಬಿಸಿ – ಕಿಲೋಮೀಟರ್‌ಗಟ್ಟಲೆ ನಿಂತ ವಾಹನಗಳು

    ಬೆಂಗಳೂರು: ನೋಡುಗರ ಹೃದಯ ಬಡಿತ ಹೆಚ್ಚಿಸುವ 15ನೇ ಆವೃತ್ತಿಯ ವೈಮಾನಿಕ ಪ್ರದರ್ಶನ ʻಏರೋ ಇಂಡಿಯಾ 2025ʼ (Aero India 2025) ಇಂದಿನಿಂದ ಶುರುವಾಗಿದೆ. ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಚಾಲನೆ ನೀಡಿದ್ದಾರೆ. ಐದು ದಿನಗಳ ಕಾಲ ಏರ್‌ ಶೋ ನಡೆಯಲಿದ್ದು, ಮೊದಲ ದಿನವೇ ಬೆಂಗಳೂರಿಗರಿಗೆ ಟ್ರಾಫಿಕ್‌ ಜಾಮ್‌ ಬಿಸಿ ತಟ್ಟಿದೆ.

    ಏರ್ ಶೋ ನಡೆಯುವ ಸ್ಥಳದ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ಭಾರೀ ಟ್ರಾಫಿಕ್‌ ಜಾಮ್‌ ಉಂಟಾಗಿದ್ದು, ಬೆಳ್ಳಂಬೆಳಗ್ಗೆಯೇ ವಾಹನ ಸವಾರರು ಪರದಾಡುವಂತಾಗಿದೆ. ಕಿಲೋಮೀಟರ್‌ಗಟ್ಟಲೇ ವಾಹನಗಳು ನಿಂತ ಹಿನ್ನೆಲೆಯಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಟ್ರಾಫಿಕ್ ಪೊಲೀಸರು ಹರಸಾಹಸ ಪಟ್ಟಿದ್ದಾರೆ. ಏರ್ ಶೋ ಉದ್ಘಾಟನಾ ಕಾರ್ಯಕ್ರಮದ ಸ್ಟಾಲ್‌ಗಳಿಗೆ ಬರುವ ಗಣ್ಯರಿಗೂ ಟ್ರಾಫಿಕ್ ಬಿಸಿ ತಟ್ಟಿದೆ. ಕಳೆದ ಎರಡು ಗಂಟೆಯಿಂದ ವಾಹನಗಳು ನಿಧಾನಗತಿಯಲ್ಲಿ ಸಂಚರಿಸುತ್ತಿವೆ. ದನ್ನೂ ಓದಿ: ಮದುವೆಯಲ್ಲಿ ಡಾನ್ಸ್‌ ಮಾಡುತ್ತಿದ್ದಾಗಲೇ ಹೃದಯ ಸ್ತಂಭನ – ವೇದಿಕೆಯಲ್ಲೇ ಎಂಬಿಎ ಪದವೀಧರೆ ಸಾವು

    ಹಲವು ರಸ್ತೆಗಳಲ್ಲಿ ಸಂಚಾರ ಮಾರ್ಪಾಡು:
    ಇನ್ನೂ ಇಂದಿನಿಂದ ಏರ್ ಶೋ ಆರಂಭ ಹಿನ್ನೆಲೆ 5 ದಿನಗಳ ಕಾಲ ಏರ್‌ಪೋರ್ಟ್ ರಸ್ತೆಯ ಸವಾರರಿಗೆ ಟ್ರಾಫಿಕ್ ಬಿಸಿ ತಟ್ಟುವ ಸಾಧ್ಯತೆ ಇದೆ. ವಿದೇಶಿ ಗಣ್ಯರು ಆಗಮಿಸುವ ಕಾರಣ ಎಲಿವೇಟೆಡ್ ರಸ್ತೆಯ ಓಡಾಟವನ್ನ ಕೆಲ ಕಾಲ ಬಂದ್ ಮಾಡಲಾಗುತ್ತೆ. ಸರ್ವೀಸ್ ರಸ್ತೆಯಲ್ಲೇ ಸಂಚಾರ ಮಾಡಬೇಕಿರೋ ಕಾರಣ ಆ ಭಾಗದ ವಾಹನ ಸವಾರರು 5 ದಿನಗಳ ಕಾಲ ಇದೇ ಪರಿಸ್ಥಿತಿ ಎದುರಿಸಬೇಕಾಗುತ್ತದೆ. ಇನ್ನೂ, ಏರ್ ಪೋರ್ಟ್ ರಸ್ತೆ ಸುತ್ತಮುತ್ತ ಹಲವು ರಸ್ತೆಗಳಲ್ಲಿ ಸಂಚಾರ ಮಾರ್ಪಾಡು ಮಾಡಿ ಸಂಚಾರಿ ಪೊಲೀಸರು ಆದೇಶಿಸಿದ್ದಾರೆ. ದನ್ನೂ ಓದಿ: ಜನಾಂಗೀಯ ಹಿಂಸಾಚಾರ; ಬಿಕ್ಕಟ್ಟಿನ ರಾಜ್ಯದ ಸಿಎಂ ರಾಜೀನಾಮೆ – ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಿಕೆಯಾಗುತ್ತಾ?

    ಯಾವೆಲ್ಲ ವಾಹನಗಳಿಗೆ ಸಂಚಾರ ನಿಷೇಧ
    * ಲಾರಿ, ಟ್ರಕ್, ಬಸ್, ಸರಕು ಸಾಗಾಣಿಕೆ ವಾಹನಗಳಿಗೆ ಸಂಚಾರ ನಿರ್ಬಂಧ
    * ಮೇಖ್ರಿ ವೃತ್ತದಿಂದ-ಎಂವಿಐಟಿ ಕ್ರಾಸ್‌ವರೆಗೆ ಸಂಚಾರ ನಿಷೇಧ
    * ಗೊರಗುಂಟೆಪಾಳ್ಯದಿಂದ ಹೆಬ್ಬಾಳ ಮಾರ್ಗವಾಗಿ ಹೆಣ್ಣೂರು ಕ್ರಾಸ್‌ವರೆಗೆ ನಿಷೇಧ
    * ನಾಗವಾರ ಜಂಕ್ಷನ್‌ನಿಂದ ರೇವಾ ಕಾಲೇಜ್ ಜಂಕ್ಷನ್‌ವರೆಗೆ ಸಂಚಾರ ನಿಷೇಧ
    * ಹೆಸರಘಟ್ಟ, ಚಿಕ್ಕಬಾಣಾವರ ಕಡೆಯಿಂದ ಬೆಂಗಳೂರು ಕಡೆಗೆ ಸಂಚಾರ ನಿಷೇಧ
    * ಜಿಕೆವಿಕೆ ಕ್ಯಾಂಪಸ್‌ನಲ್ಲಿ ಸಾರ್ವಜನಿಕರಿಗೆ ಉಚಿತ ಪಾರ್ಕಿಂಗ್ ವ್ಯವಸ್ಥೆ

  • ಗಮನಿಸಿ – ಏರ್‌ ಶೋ ಹಿನ್ನೆಲೆ ಬೆಂಗಳೂರು ಏರ್‌ಪೋರ್ಟ್‌ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ‌

    ಗಮನಿಸಿ – ಏರ್‌ ಶೋ ಹಿನ್ನೆಲೆ ಬೆಂಗಳೂರು ಏರ್‌ಪೋರ್ಟ್‌ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ‌

    ಬೆಂಗಳೂರು: ದೇಶದ 15ನೇ ಆವೃತ್ತಿಯ ವೈಮಾನಿಕ ಪ್ರದರ್ಶನ ʻಏರೋ ಇಂಡಿಯಾ 2025ʼ (Aero India 2025) ಇಂದಿನಿಂದ ಆರಂಭಗೊಳ್ಳುತ್ತಿದೆ. ಈ ಹಿನ್ನೆಲೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ (Bengaluru International Airport) ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಆಡಳಿತ ಮಂಡಳಿ ತಿಳಿಸಿದೆ.

    ಇಂದು (ಸೋಮವಾರ) ಬೆಳಗ್ಗೆ 9 ರಿಂದ ಮಧ್ಯಾಹ್ನ 12ರ ವರೆಗೆ, ಮಧ್ಯಾಹ್ನ 2 ರಿಂದ ಸಂಜೆ 4ರ ವರೆಗೆ ವಿಮಾನ ಹಾರಾಟದಲ್ಲಿ ವ್ಯತ್ಯಯ ಉಂಟಾಗಲಿದೆ. ಫೆಬ್ರವರಿ 11 ಮತ್ತು 12 ರಂದು ಮಧ್ಯಾಹ್ನ 12 ರಿಂದ ಮಧ್ಯಾಹ್ನ 3ರ ವರೆಗೆ, ಫೆಬ್ರವರಿ 13 ಮತ್ತು 14ರ ಬೆಳಿಗ್ಗೆ 9 ರಿಂದ ಮಧ್ಯಾಹ್ನ 12ರ ವರೆಗೆ, ಮಧ್ಯಾಹ್ನ 2 ರಿಂದ ಸಂಜೆ 5ರ ವರೆಗೆ ವಿಮಾನ ಹಾರಾಟದಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೂಲಗಳು ತಿಳಿಸಿವೆ. ಏರ್‌ಶೋನಲ್ಲಿ ವೈಮಾನಿಕ ಪ್ರದರ್ಶನ ಹಿನ್ನೆಲೆಯಲ್ಲಿ ವಿಮಾನ ಹಾರಾಟದಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: Aero India 2025 | ವೈಮಾನಿಕ ಪ್ರದರ್ಶನಕ್ಕಿಂದು ಚಾಲನೆ – ರಷ್ಯಾ, ಅಮೆರಿಕ ಸೇರಿ 90 ದೇಶಗಳು ಭಾಗಿ

    ಯಲಹಂಕ ವಾಯುನೆಲೆಯಲ್ಲಿ ಇಂದು ಬೆಳಗ್ಗೆ 9:30ರ ವೇಳೆಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಚಾಲನೆ ನೀಡಲಿದ್ದಾರೆ. ದೇಶ – ವಿದೇಶಗಳ ಪ್ರಮುಖ ನಾಯಕರು, ರಕ್ಷಣಾ ವಿಭಾಗದ ಅಧಿಕಾರಿಗಳು ಏರ್ ಶೋ ನಲ್ಲಿ ಭಾಗಿಯಾಗಲಿದ್ದಾರೆ. ಫೆಬ್ರವರಿ 14ರ ವರೆಗೆ ನಡೆಯಲಿರುವ ಏರ್ ಶೋನಲ್ಲಿ ಅಮೆರಿಕ, ರಷ್ಯನ್‌ ಸೇರಿದಂತೆ ವಿವಿಧ ದೇಶಗಳ ಯುದ್ಧ ವಿಮಾನಗಳು ಭಾಗಿಯಾಗಲಿವೆ. ಇದನ್ನೂ ಓದಿ: Hassan | ಮದುವೆಯಾಗಲು ಪ್ರಿಯತಮೆ ನಿರಾಕರಣೆ – ವಿಷ ಸೇವಿಸಿ ಯುವಕ ಆತ್ಮಹತ್ಯೆ

    ಈ ಬಾರಿಯ ವಿಶೇಷತೆ ಏನು? 
    ಈ ಬಾರಿ 42,438 ವಿಸ್ತೀರ್ಣದಲ್ಲಿ ಏರ್ ಶೋ ನಡೆಯುತ್ತಿದ್ದು, ವಿವಿಧ 30 ದೇಶಗಳ ರಕ್ಷಣಾ ಸಚಿವರು, ವಿವಿಧ ದೇಶಗಳ 43 ಮಂದಿ ಸೇನಾ ಮುಖ್ಯಸ್ಥರು ಭಾಗಿಯಾಗಲಿದ್ದಾರೆ. ಒಟ್ಟಾರೆ 90 ದೇಶಗಳು ಏರೋ ಇಂಡಿಯಾದವನ್ನು ಪ್ರತಿನಿಧಿಸಲಿವೆ. 70 ಯುದ್ಧ ವಿಮಾನಗಳು, ಸರಕು, ತರಬೇತಿ ವಿಮಾನಗಳು, 30 ವಿಮಾನಗಳು, ಹೆಲಿಕಾಫ್ಟರ್‌ ಹೃದಯ ಬಡಿತ ಹೆಚ್ಚಿಸುವ ಕಸರತ್ತು ನಡೆಸಲಿವೆ. ರಷ್ಯನ್ & ಅಮೆರಿಕನ್ ಯುದ್ಧ ವಿಮಾನಗಳು ಈ ಪ್ರದರ್ಶನದ ಆಕರ್ಷಣೆಯಾಗಿವೆ. ಇದನ್ನೂ ಓದಿ: IND vs ENG, 2nd ODI: ರೋಹಿತ್‌ ಅಬ್ಬರದ ಶತಕ, ಜಡೇಜಾ ಸ್ಪಿನ್‌ ಜಾದು – ಆಂಗ್ಲರ ವಿರುದ್ಧ ಭಾರತಕ್ಕೆ 4 ವಿಕೆಟ್‌ಗಳ ಜಯ

    ಅಲ್ಲದೇ ವಿವಿಧ ದೇಶಗಳ 900ಕ್ಕೂ ಹೆಚ್ಚು ಉತ್ಪಾದಕರು ಇದರಲ್ಲಿ ಭಾಗಿಯಾಗಲಿದ್ದಾರೆ. ಎಐ, ಡ್ರೋನ್‌, ಸೈಬರ್ ಸೆಕ್ಯೂರಿಟಿ, ಗ್ಲೋಬರ್ ಏರೋಸ್ಪೇಸ್, ನೂತನ ತಂತ್ರಜ್ಞಾನಗಳನ್ನು ಪರಿಚಯಿಸಲಿದ್ದಾರೆ. ಆತ್ಮನಿರ್ಭರ ಭಾರತ ಉತ್ಪನ್ನಗಳು ಈ ಬಾರಿಯ ಶೋನಲ್ಲಿ ಇರಲಿವೆ. 100 ವಿವಿಧ ಕಂಪನಿಗಳ ಸಿಇಒಗಳು, 50 ವಿದೇಶಿ ಓಎಂಎಸ್ ಭಾಗಿಯಾಗಲಿದ್ದಾರೆ. ಹೂಡಿಕೆ, ಸಂಶೋಧನೆ, ಜಾಯಿಂಟ್ ವೆಂಚರ್, ರಕ್ಷಣಾ ವಲಯದ ಬಗ್ಗೆ ಚರ್ಚೆ ನಡೆಯಲಿದೆ. 10 ವಿವಿಧ ವಿಷಯಗಳನ್ನ ಒಳಗೊಂಡ ಸೆಮಿನಾರ್‌ಗಳು ಇರಲಿದೆ. 70ಕ್ಕೂ ಹೆಚ್ಚು ಫ್ಲೈಯಿಂಗ್ ಡಿಸ್‌ಪ್ಲೇಗಳು ಏರ್ ಶೋನಲ್ಲಿ ಇರಲಿವೆ. 7 ಲಕ್ಷಕ್ಕೂ ಅಧಿಕ ಸಂಖ್ಯೆಯಲ್ಲಿ ವೀಕ್ಷಕರು ಆಗಮಿಸುವ ನಿರೀಕ್ಷೆ ಹೊಂದಲಾಗಿದೆ.

  • Aero India 2025 | ವೈಮಾನಿಕ ಪ್ರದರ್ಶನಕ್ಕಿಂದು ಚಾಲನೆ – ರಷ್ಯಾ, ಅಮೆರಿಕ ಸೇರಿ 90 ದೇಶಗಳು ಭಾಗಿ

    Aero India 2025 | ವೈಮಾನಿಕ ಪ್ರದರ್ಶನಕ್ಕಿಂದು ಚಾಲನೆ – ರಷ್ಯಾ, ಅಮೆರಿಕ ಸೇರಿ 90 ದೇಶಗಳು ಭಾಗಿ

    – 70 ಯುದ್ಧ ವಿಮಾನ, 100ಕ್ಕೂ ಹೆಚ್ಚು ರಾಷ್ಟ್ರಗಳ ಪ್ರತಿನಿಧಿಗಳು ಭಾಗಿ
    – ಏರ್‌ಪೋರ್ಟ್‌ ಸುತ್ತಮುತ್ತ ಹಲವು ರಸ್ತೆಗಳ ಸಂಚಾರದಲ್ಲಿ ಮಾರ್ಪಾಡು

    ಬೆಂಗಳೂರು: ನೋಡುಗರ ಹೃದಯ ಬಡಿತ ಹೆಚ್ಚಿಸುವ ವೈಮಾನಿಕ ಕಸರತ್ತು, ವೈಮಾನಿಕ ಹಾಗೂ ಬಾಹ್ಯಾಕಾಶ ಉದ್ದಿಮೆ, ಉದ್ಯಮಿಗಳ ಮುಖಾಮುಖಿಗೆ ವೇದಿಕೆಯಾಗಲಿರುವ ದೇಶದ 15ನೇ ಆವೃತ್ತಿಯ ವೈಮಾನಿಕ ಪ್ರದರ್ಶನ ʻಏರೋ ಇಂಡಿಯಾ 2025ʼ (Aero India 2025) ಸೋಮವಾರ ಶುರುವಾಗಲಿದೆ.

    ಯಲಹಂಕ ವಾಯುನೆಲೆಯಲ್ಲಿ (Yelahanka Air Base) ಇಂದು ಬೆಳಗ್ಗೆ 9:30ರ ವೇಳೆಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಚಾಲನೆ ನೀಡಲಿದ್ದಾರೆ. ದೇಶ – ವಿದೇಶಗಳ ಪ್ರಮುಖ ನಾಯಕರು, ರಕ್ಷಣಾ ವಿಭಾಗದ ಅಧಿಕಾರಿಗಳು ಏರ್ ಶೋ ನಲ್ಲಿ ಭಾಗಿಯಾಗಲಿದ್ದಾರೆ. ಇಂದಿನಿಂದ ಫೆಬ್ರವರಿ 14ರ ವರೆಗೆ ನಡೆಯಲಿರುವ ಏರ್ ಶೋನಲ್ಲಿ ಅಮೆರಿಕ, ರಷ್ಯನ್‌ ಸೇರಿದಂತೆ ವಿವಿಧ ದೇಶಗಳ ಯುದ್ಧ ವಿಮಾನಗಳು ಭಾಗಿಯಾಗಲಿವೆ. ಇದನ್ನೂ ಓದಿ: IND vs ENG, 2nd ODI: ರೋಹಿತ್‌ ಅಬ್ಬರದ ಶತಕ, ಜಡೇಜಾ ಸ್ಪಿನ್‌ ಜಾದು – ಆಂಗ್ಲರ ವಿರುದ್ಧ ಭಾರತಕ್ಕೆ 4 ವಿಕೆಟ್‌ಗಳ ಜಯ

    ಈ ಬಾರಿ ʻರನ್ ವೇ ಟು ಬಿಲಿಯನ್ ಆಪರ್ಚುನಿಟಿ ಟ್ಯಾಗ್ ಲೈನ್ʼನಲ್ಲಿ ಏರ್ ಶೋ ಜರುಗಲಿದೆ. 100ಕ್ಕೂ ಹೆಚ್ಚು ದೇಶಗಳ, 900ಕ್ಕೂ ಹೆಚ್ಚು ಉತ್ಪಾದಕರು ಭಾಗಿಯಾಗುತ್ತಿದ್ದು, ಎಐ, ಡ್ರೋನ್‌, ಗ್ಲೋಬಲ್ ಏರೋ ಸ್ಪೇಸ್, ಸೇರಿದಂತೆ ನೂತನ ತಂತ್ರಜ್ಞಾನದ ವಿವಿಧ ವಸ್ತುಪ್ರದರ್ಶನಗಳನ್ನ ಕಣ್ತುಂಬಿಕೊಳ್ಳುವ ಅವಕಾಶ ಇರಲಿದೆ. ಕೊನೆಯ ಎರಡು ದಿನ ಸಾರ್ವಜನಿಕರಿಗೆ ಮುಕ್ತ ಅವಕಾಶ ಇರಲಿದೆ.

    ಈ ಬಾರಿಯ ವಿಶೇಷತೆ ಏನು?
    ಈ ಬಾರಿ 42,438 ವಿಸ್ತೀರ್ಣದಲ್ಲಿ ಏರ್ ಶೋ ನಡೆಯುತ್ತಿದ್ದು, ವಿವಿಧ 30 ದೇಶಗಳ ರಕ್ಷಣಾ ಸಚಿವರು, ವಿವಿಧ ದೇಶಗಳ 43 ಮಂದಿ ಸೇನಾ ಮುಖ್ಯಸ್ಥರು ಭಾಗಿಯಾಗಲಿದ್ದಾರೆ. ಒಟ್ಟಾರೆ 90 ದೇಶಗಳು ಏರೋ ಇಂಡಿಯಾದವನ್ನು ಪ್ರತಿನಿಧಿಸಲಿವೆ. 70 ಯುದ್ಧ ವಿಮಾನಗಳು, ಸರಕು, ತರಬೇತಿ ವಿಮಾನಗಳು, 30 ವಿಮಾನಗಳು, ಹೆಲಿಕಾಫ್ಟರ್‌ ಹೃದಯ ಬಡಿತ ಹೆಚ್ಚಿಸುವ ಕಸರತ್ತು ನಡೆಸಲಿವೆ. ರಷ್ಯನ್ & ಅಮೆರಿಕನ್ ಯುದ್ಧ ವಿಮಾನಗಳು ಈ ಪ್ರದರ್ಶನದ ಆಕರ್ಷಣೆಯಾಗಿವೆ. ಇದನ್ನೂ ಓದಿ: ಫೆ.11ರಂದು ‘ಇನ್ವೆಸ್ಟ್‌ ಕರ್ನಾಟಕ 2025’ಕ್ಕೆ ಚಾಲನೆ – ಹೂಡಿಕೆ ಉತ್ಸವಕ್ಕೆ ಮುನ್ನುಡಿ: ಎಂ.ಬಿ.ಪಾಟೀಲ್‌

    ಅಲ್ಲದೇ ವಿವಿಧ ದೇಶಗಳ 900ಕ್ಕೂ ಹೆಚ್ಚು ಉತ್ಪಾದಕರು ಇದರಲ್ಲಿ ಭಾಗಿಯಾಗಲಿದ್ದಾರೆ. ಎಐ, ಡ್ರೋನ್‌, ಸೈಬರ್ ಸೆಕ್ಯೂರಿಟಿ, ಗ್ಲೋಬರ್ ಏರೋಸ್ಪೇಸ್, ನೂತನ ತಂತ್ರಜ್ಞಾನಗಳನ್ನು ಪರಿಚಯಿಸಲಿದ್ದಾರೆ. ಆತ್ಮನಿರ್ಭರ ಭಾರತ ಉತ್ಪನ್ನಗಳು ಈ ಬಾರಿಯ ಶೋನಲ್ಲಿ ಇರಲಿವೆ. 100 ವಿವಿಧ ಕಂಪನಿಗಳ ಸಿಇಒಗಳು, 50 ವಿದೇಶಿ ಓಎಂಎಸ್ ಭಾಗಿಯಾಗಲಿದ್ದಾರೆ. ಹೂಡಿಕೆ, ಸಂಶೋಧನೆ, ಜಾಯಿಂಟ್ ವೆಂಚರ್, ರಕ್ಷಣಾ ವಲಯದ ಬಗ್ಗೆ ಚರ್ಚೆ ನಡೆಯಲಿದೆ. 10 ವಿವಿಧ ವಿಷಯಗಳನ್ನ ಒಳಗೊಂಡ ಸೆಮಿನಾರ್‌ಗಳು ಇರಲಿದೆ. 70ಕ್ಕೂ ಹೆಚ್ಚು ಫ್ಲೈಯಿಂಗ್ ಡಿಸ್‌ಪ್ಲೇಗಳು ಏರ್ ಶೋನಲ್ಲಿ ಇರಲಿವೆ. 7 ಲಕ್ಷಕ್ಕೂ ಅಧಿಕ ಸಂಖ್ಯೆಯಲ್ಲಿ ವೀಕ್ಷಕರು ಆಗಮಿಸುವ ನಿರೀಕ್ಷೆ ಹೊಂದಲಾಗಿದೆ.

    ಏರ್‌ಪೋರ್ಟ್ ರಸ್ತೆಯ ಸವಾರರಿಗೆ ಟ್ರಾಫಿಕ್ ಬಿಸಿ:
    ಇನ್ನೂ ಇಂದಿನಿಂದ ಏರ್ ಶೋ ಆರಂಭ ಹಿನ್ನೆಲೆ 5 ದಿನಗಳ ಕಾಲ ಏರ್‌ಪೋರ್ಟ್ ರಸ್ತೆಯ ಸವಾರರಿಗೆ ಟ್ರಾಫಿಕ್ ಬಿಸಿ ತಟ್ಟುವ ಸಾಧ್ಯತೆ ಇದೆ. ವಿದೇಶಿ ಗಣ್ಯರು ಆಗಮಿಸುವ ಕಾರಣ ಎಲಿವೇಟೆಡ್ ರಸ್ತೆಯ ಓಡಾಟವನ್ನ ಕೆಲ ಕಾಲ ಬಂದ್ ಮಾಡಲಾಗುತ್ತೆ. ಸರ್ವೀಸ್ ರಸ್ತೆಯಲ್ಲೇ ಸಂಚಾರ ಮಾಡಬೇಕಿರೋ ಕಾರಣ ಆ ಭಾಗದ ವಾಹನ ಸವಾರರು 5 ದಿನಗಳ ಕಾಲ ಇದೇ ಪರಿಸ್ಥಿತಿ ಎದುರಿಸಬೇಕಾಗುತ್ತದೆ. ಇನ್ನೂ, ಏರ್ ಪೋರ್ಟ್ ರಸ್ತೆ ಸುತ್ತಮುತ್ತ ಹಲವು ರಸ್ತೆಗಳಲ್ಲಿ ಸಂಚಾರ ಮಾರ್ಪಾಡು ಮಾಡಿ ಸಂಚಾರಿ ಪೊಲೀಸರು ಆದೇಶಿಸಿದ್ದಾರೆ. ಇದನ್ನೂ ಓದಿ: Hassan | ಮದುವೆಯಾಗಲು ಪ್ರಿಯತಮೆ ನಿರಾಕರಣೆ – ವಿಷ ಸೇವಿಸಿ ಯುವಕ ಆತ್ಮಹತ್ಯೆ

    ಯಾವೆಲ್ಲ ವಾಹನಗಳಿಗೆ ಸಂಚಾರ ನಿಷೇಧ
    * ಲಾರಿ, ಟ್ರಕ್, ಬಸ್, ಸರಕು ಸಾಗಾಣಿಕೆ ವಾಹನಗಳಿಗೆ ಸಂಚಾರ ನಿರ್ಬಂಧ
    * ಮೇಖ್ರಿ ವೃತ್ತದಿಂದ-ಎಂವಿಐಟಿ ಕ್ರಾಸ್‌ವರೆಗೆ ಸಂಚಾರ ನಿಷೇಧ
    * ಗೊರಗುಂಟೆಪಾಳ್ಯದಿಂದ ಹೆಬ್ಬಾಳ ಮಾರ್ಗವಾಗಿ ಹೆಣ್ಣೂರು ಕ್ರಾಸ್‌ವರೆಗೆ ನಿಷೇಧ
    * ನಾಗವಾರ ಜಂಕ್ಷನ್‌ನಿಂದ ರೇವಾ ಕಾಲೇಜ್ ಜಂಕ್ಷನ್‌ವರೆಗೆ ಸಂಚಾರ ನಿಷೇಧ
    * ಹೆಸರಘಟ್ಟ, ಚಿಕ್ಕಬಾಣಾವರ ಕಡೆಯಿಂದ ಬೆಂಗಳೂರು ಕಡೆಗೆ ಸಂಚಾರ ನಿಷೇಧ
    * ಜಿಕೆವಿಕೆ ಕ್ಯಾಂಪಸ್‌ನಲ್ಲಿ ಸಾರ್ವಜನಿಕರಿಗೆ ಉಚಿತ ಪಾರ್ಕಿಂಗ್ ವ್ಯವಸ್ಥೆ

  • ನಾಳೆಯಿಂದ ಏರೋ ಇಂಡಿಯಾ ಶೋ – ಬಾನಂಗಳದಲ್ಲಿ ಮೋಡಿ ಮಾಡಲಿವೆ ಲೋಹದ ಹಕ್ಕಿಗಳು

    ನಾಳೆಯಿಂದ ಏರೋ ಇಂಡಿಯಾ ಶೋ – ಬಾನಂಗಳದಲ್ಲಿ ಮೋಡಿ ಮಾಡಲಿವೆ ಲೋಹದ ಹಕ್ಕಿಗಳು

    ಬೆಂಗಳೂರು: ನಾಳೆಯಿಂದ (ಫೆ.10) 15ನೇ ಆವೃತ್ತಿಯ ಏರೋ ಇಂಡಿಯಾ ಶೋ (Aero India Show) ಆರಂಭವಾಗಲಿದೆ. ಯಲಹಂಕದ (Yelahanka) ವಾಯು ನೆಲೆಯಲ್ಲಿ ನಡೆಯಲಿರುವ ಏಷ್ಯಾದ ಅತಿದೊಡ್ಡ ವೈಮಾನಿಕ ಪ್ರದರ್ಶನ ಈ ಬಾರಿ ಹಲವು ದಾಖಲೆಗಳ ನೀರಿಕ್ಷೆಗಳನ್ನ ಹುಟ್ಟಿಸಿದೆ.

    ರನ್ ಟು ಎ ಬಿಲಿಯನ್ ಆಪರ್ಚುನಿಟೀಸ್ ಎಂಬ ವಿಶಾಲ ಧ್ಯೇಯದೊಂದಿಗೆ 5 ದಿನಗಳ ಕಾಲ ನಡೆಯಲಿರುವ ಈ ಕಾರ್ಯಕ್ರಮಕ್ಕೆ ಯಲಹಂಕ ವಾಯುನೆಲೆ ಸಿದ್ಧವಾಗಿದೆ. ಫೆಬ್ರವರಿ 10 ರಿಂದ 14ರವರೆಗೆ ನಡೆಯಲಿರುವ ಏರ್ ಶೋಗೆ ದೇಶ, ವಿದೇಶದ ಗಣ್ಯರು ಆಗಮಿಸಲಿದ್ದಾರೆ. ದೇಶ, ವಿದೇಶದ ವಾಯುಪಡೆಯ ವಿಮಾನಗಳು ಬಾನಂಗಳದಲ್ಲಿ ಮೋಡಿ ಮಾಡಲು ರೆಡಿಯಾಗಿವೆ. ಇದನ್ನೂ ಓದಿ: ಅಬ್ಬಬ್ಬಾ.. ಮೊದಲ ಚಿತ್ರಕ್ಕೆ ಇಷ್ಟೊಂದು ಸಂಭಾವನೆ ಪಡೆದಿದ್ದಾರಾ ಮೊನಾಲಿಸಾ?

    ಕಾರ್ಯಕ್ರಮವನ್ನು ಭಾರತೀಯ ರಕ್ಷಣಾ ಇಲಾಖೆಯ ಸಚಿವ ರಾಜನಾಥ್ ಸಿಂಗ್ ಉದ್ಘಾಟನೆ ಮಾಡಲಿದ್ದಾರೆ. ಕಾರ್ಯಕ್ರಮದ ಮೊದಲ ಮೂರು ದಿನ ಅಂದರೆ ಫೆಬ್ರವರಿ 10, 11, 12ರವರೆಗೆ ರಕ್ಷಣಾ ಕ್ಷೇತ್ರಕ್ಕೆ ಸಂಬಂಧಿಸಿದ ವ್ಯವಹಾರ ದಿನಗಳಾಗಿರುತ್ತವೆ. 13 ಮತ್ತು 14ರಂದು ಸಾರ್ವಜನಿಕ ವೀಕ್ಷಣೆಗೆ ಅವಕಾಶವನ್ನ ಕಲ್ಪಿಸಲಾಗಿದೆ. ಏರೋಸ್ಪೇಸ್ ವಲಯದಿಂದ ದೊಡ್ಡ ಶ್ರೇಣಿಯ ಮಿಲಿಟರಿ ವೇದಿಕೆಗಳ ವಾಯು ಪ್ರದರ್ಶನ, ವಸ್ತು ಪ್ರದರ್ಶನಗಳನ್ನು ಒಳಗೊಂಡಿದೆ. ಇದನ್ನೂ ಓದಿ: ಐಶ್ವರ್ಯ ಕೇಸಲ್ಲೀಗ ಪೊಲೀಸರಿಗೆ ಸಿಡಿಆರ್‌ ಸಂಕಷ್ಟ – ಎಸಿಪಿ ಚಂದನ್‌ಗೆ ಹೆಗಲಿಗೆ ತನಿಖೆ ಹೊಣೆ

    ಏರೋ ಇಂಡಿಯಾ ಶೋ ಹೈಲೈಟ್ಸ್:
    * ರಕ್ಷಣಾ ಸಚಿವರುಗಳ ಸಮಾವೇಶ, ದೇಶ ವಿದೇಶದ ರಕ್ಷಣಾ ಇಲಾಖೆಯ ಉನ್ನತ ಶ್ರೇಣಿಯ ಅಧಿಕಾರಿಗಳು ಭಾಗಿ.
    * ಮೊದಲ ಮೂರು ದಿನ ಉದ್ಯಮದ ವೃತ್ತಿಪರರು, ನೀತಿ ನಿರೂಪಕರು, ಹೂಡಿಕೆದಾರರಿಗೆ ಮೀಸಲು.
    * ಸಿಇಒ ದುಂಡು ಮೇಜಿನ ಸಭೆ, ಮಂಥನ್ ಸ್ಟಾರ್ಟ್ಅಪ್ ಕಾರ್ಯಕ್ರಮ.
    * ಏರೋಸ್ಪೇಸ್ ಕಂಪನಿಗಳ ವ್ಯಾಪಾರ ಮೇಳ.
    * ಆತ್ಮನಿರ್ಭರ್ ಯೋಜನೆಯಡಿ ಭಾರತೀಯ ರಕ್ಷಣಾ ಉತ್ಪಾದನೆ ಜಗತ್ತಿಗೆ ಪರಿಚಯಿಸುವುದು.
    * ಭಾರತದಲ್ಲಿ ಉತ್ಪಾದನೆಯ ಉಪಕರಣಗಳನ್ನ ಇತರ ದೇಶಗಳಿಗೆ ಮಾರಾಟ ಮಾಡುವ ಕುರಿತು ಒಡಂಬಡಿಕೆಗಳು.
    * ಭಾರತೀಯ ನವೋಧ್ಯಮಗಳ ಪ್ರಚಾರಕ್ಕಾಗಿ, ಅಭಿವೃದ್ಧಿಗಾಗಿ ಉತ್ಪನ್ನಗಳನ್ನ ವಿಶೇಷ ಐಡೆಕ್ಸ್ ಪೆವಿಲಿಯನ್‌ನಲ್ಲಿ ಪ್ರದರ್ಶನ
    * ದೇಶಿಯ ನಿರ್ಮಿತ ಯುದ್ಧ ವಿಮಾನಗಳ ಪ್ರದರ್ಶನ
    * ಡೈನಾಮಿಕ್ ಏರೋಬ್ಯಾಟಿಕ್ ಪ್ರದರ್ಶನಗಳು, ಲೈವ್ ತಂತ್ರಜ್ಞಾನ ಪ್ರದರ್ಶನಗಳು
    * ರಕ್ಷಣಾ ವೈಮಾನಿಕ ಕ್ಷೇತ್ರದಲ್ಲಿ ಯುದ್ಧ ವಿಮಾನಗಳು, ಉಪಕರಣಗಳು ಸೇರಿ ಉತ್ಪನ್ನಗಳ ಖರೀದಿಗೂ ಹಲವು ದೇಶಗಳೊಂದಿಗೆ ಒಪ್ಪಂದಗಳಾಗುವ ನಿರೀಕ್ಷೆ.

    ಏರೋಸ್ಪೇಸ್ ಮತ್ತು ರಕ್ಷಣೆಯಲ್ಲಿ ಸ್ವದೇಶಿಕರಣವನ್ನ ಉತ್ತೇಜಿಸುವುದು, ಅತ್ಯಾಧುನಿಕ ತಂತ್ರಜ್ಞಾನಗಳು, ಉತ್ಪನ್ನಗಳನ್ನು ಪ್ರದರ್ಶನ ಮಾಡಲಾಗುತ್ತದೆ. ಇಗಾಗಲೇ 700ಕ್ಕೂ ಪ್ರದರ್ಶಕರು ನೋಂದಣಿ ಮಾಡಿಕೊಂಡಿದ್ದು, ರಕ್ಷಣಾ ವ್ಯವಸ್ಥೆಗೆ ಸಂಬಂಧಪಟ್ಟಂತೆ ತಮ್ಮ ಉತ್ಪನ್ನಗಳನ್ನು ಪ್ರದರ್ಶನ ಮಾಡಲು ತಯಾರಿಗಳು ನಡೆಯುತ್ತಿವೆ. ಏರ್ ಶೋನಲ್ಲಿ ಯಾವುದೇ ಸಮಸ್ಯೆಗಳಾಗದಂತೆ ಪಾಲಿಕೆ, ಜಿಲ್ಲಾಡಳಿತ ಎಲ್ಲಾ ವ್ಯವಸ್ಥೆಗಳನ್ನು ಮಾಡಿಕೊಂಡಿದೆ. ಇದನ್ನೂ ಓದಿ: ಮಹಾ ಕುಂಭಮೇಳಕ್ಕೆ ತೆರಳಿದ ಡಿಕೆಶಿ

  • Aeroindia 2025 | ಏರ್ ಶೋ ಹಿನ್ನೆಲೆ ಬೆಂಗಳೂರಿನ 21 ಕೆರೆಗಳಲ್ಲಿ ಮೀನುಗಾರಿಕೆಗೆ ನಿಷೇಧ

    Aeroindia 2025 | ಏರ್ ಶೋ ಹಿನ್ನೆಲೆ ಬೆಂಗಳೂರಿನ 21 ಕೆರೆಗಳಲ್ಲಿ ಮೀನುಗಾರಿಕೆಗೆ ನಿಷೇಧ

    ಬೆಂಗಳೂರು: 2025ನೇ ಸಾಲಿನ ಏರ್ ಶೋಗೆ (ಏರೋ ಇಂಡಿಯಾ – Aeroindia 2025) ದಿನಗಣನೆ ಆರಂಭವಾಗಿದೆ. ಇದೇ ಫೆ.10 ರಿಂದ 14ರ ವರೆಗೆ ನಡೆಯಲಿರುವ ವೈಮಾನಿಕ ಪ್ರದರ್ಶನದಲ್ಲಿ ದೇಶಿಯ ಹಾಗೂ ವಿದೇಶಿ ವಿಮಾನಗಳು ಪ್ರದರ್ಶನಗೊಳ್ಳುತ್ತಿವೆ. ವಿಮಾನಗಳ ಸುರಕ್ಷತೆಯ ಹಿನ್ನೆಲೆ ಹಲವಾರು ಸುರಕ್ಷತಾ ಕ್ರಮಗಳನ್ನು ಕೈಕೊಳ್ಳಲಾಗುತ್ತಿದೆ.

    ಅದರಂತೆ ರಾಜ್ಯ ಮೀನುಗಾರಿಕೆ ಇಲಾಖೆ ಕಳೆದ ಜ.23 ರಿಂದ ಫೆ.17ರ ವರೆಗೆ, ಬೆಂಗಳೂರು ಉತ್ತರ, ಯಲಹಂಕ ಸುತ್ತಮುತ್ತಲಿನ 21 ಕರೆಗಳಲ್ಲಿ ಮೀನುಗಾರಿಕೆಯನ್ನು ನಿಷೇಧಿಸಲಾಗಿದೆ (Fishing Ban) ಎಂದು ಮೀನುಗಾರಿಕೆ ಇಲಾಖೆ ನಿರ್ದೇಶಕ ದಿನೇಶ್ ಕುಮಾರ್ ತಿಳಿಸಿದ್ದಾರೆ. ಇದನ್ನೂ ಓದಿ: ಮುಡಾ ಕೇಸಲ್ಲಿ ಸಿಎಂ ಸಿದ್ದರಾಮಯ್ಯಗೆ ಬಿಗ್‌ ರಿಲೀಫ್‌ – CBI ತನಿಖೆಗೆ ವಹಿಸಲು ಹೈಕೋರ್ಟ್‌ ನಕಾರ

    ಮೀನುಗಳು ಹೊರಗೆ ಬಂದ್ರೆ, ಪಕ್ಷಿಗಳ ಹಾರಾಟ ಹೆಚ್ಚಾಗಲಿದೆ‌. ಹೀಗಾಗಿ ವಿಮಾನಗಳ ಹಾರಾಟಕ್ಕೆ ತೊಂದರೆಯಾಗಲಿದೆ. ಆದ್ದರಿಂದ ಯಲಹಂಕ ವಾಯುನೆಲೆಯ ಸುತ್ತಮುತ್ತ ಹಾಗೂ ದೇವನಹಳ್ಳಿ ವ್ಯಾಪ್ತಿಗೆ ಬರುವ ಎಲ್ಲಾ ಕೆರೆಗಳಲ್ಲಿ ಮೀನು ಹಿಡುವಳಿ ಹಾಗೂ ಮೀನು ಮಾರಾಟವನ್ನು ಸ್ಥಗತಗೊಳಿಸಲು ಎಲ್ಲಾ ಟೆಂಡರ್ ಹಾಗೂ ಗುತ್ತಿಗೆದಾರರಿಗೆ ಮೀನುಗಾರಿಕಾ ಇಲಾಖೆ ಸೂಚಿಸಿದೆ. ಇದನ್ನೂ ಓದಿ: ಮುಡಾ ಕೇಸಲ್ಲಿ ಸಿದ್ದರಾಮಯ್ಯ‍ ‍& ಕುಟುಂಬ ನಿರಪರಾಧಿ ಅಂತ ಕೋರ್ಟ್‌ ಹೇಳಿಲ್ಲ: ವಿಜಯೇಂದ್ರ