ಬೀದರ್: ಬೀದರ್ (Bidar) ಜಿಲ್ಲಾಡಳಿತ ಹಾಗೂ ಸ್ಥಳೀಯ ಏರ್ಫೋರ್ಸ್ ಸ್ಟೇಷನ್ದಿಂದ ಶುಕ್ರವಾರ ಮತ್ತು ಶನಿವಾರ ಬಹಮನಿ ಸುಲ್ತಾನರ ಐತಿಹಾಸಿಕ ಕೋಟೆ ಮೇಲೆ ಏರ್ ಶೋ (Air Show) ಹಮ್ಮಿಕೊಳ್ಳಲಾಗಿದೆ.
ಸೂರ್ಯಕಿರಣ ಏರೋಬ್ಯಾಟಿಕ್ ಟೀಮ್ (Surya Kirana Aerobatic Team) ಆಕರ್ಷಕ ವೈಮಾನಿಕ ಪ್ರದರ್ಶನವನ್ನು ನಡೆಸಿಕೊಡಲಿದ್ದಾರೆ. ಕಳೆದ ವರ್ಷ 20,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಹೀಗಾಗಿ ಈ ಬಾರಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗಬಹುದೆಂದು ಹೆಚ್ಚಿನ ರೀತಿಯಲ್ಲಿ ವ್ಯವಸ್ಥೆಯನ್ನು ಮಾಡಿಕೊಳ್ಳಲಾಗುತ್ತಿದೆ. ಇದನ್ನೂ ಓದಿ: ವಜ್ರಕವಚ ಅಲಂಕಾರದಲ್ಲಿ ಭಕ್ತರಿಗೆ ದರ್ಶನ ಕೊಟ್ಟ ಉಡುಪಿ ಕೃಷ್ಣ
ಬೀದರ್ ಜಿಲ್ಲೆಯಲ್ಲೇ ಏರ್ ಫೋರ್ಸ್ (Air Force) ಇರುವುದರಿಂದ ಏರ್ ಶೋ ಹಮ್ಮಿಕೊಳ್ಳಲಾಗಿದೆ. ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಕಾರ್ಯಕ್ರಮ ವೀಕ್ಷಿಸಿ ಆನಂದ ಪಡಲಿದ್ದಾರೆ. ಆಗಸದಲ್ಲಿನ ವೈಮಾನಿಕ ಪ್ರದರ್ಶನ ನೋಡುಗರಿಗೆ ರೋಮಾಂಚನ ಹಾಗೂ ಮೈನವಿರೇಳಿಸುವಂತೆ ಆಕರ್ಷಿಸಲಿದೆ ಎಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ತಿಳಿಸಿದ್ದಾರೆ. ಇದನ್ನೂ ಓದಿ: ಹಿಂದೂ ಧರ್ಮಕ್ಕೆ ಅಪಮಾನ ಮಾಡಿಲ್ಲ, ಧರ್ಮದ ಬಗ್ಗೆ ಗೌರವವಿದೆ: ಪರಮೇಶ್ವರ್
ನವದೆಹಲಿ: ಮೈಸೂರು ದಸರಾ (Mysuru Dasara) ಕಾರ್ಯಕ್ರಮದಲ್ಲಿ ವಿಶೇಷ ಏರ್ ಶೋ (Air Show) ನಡೆಸುವಂತೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ಗೆ (Rajnath Singh) ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಮನವಿ ಮಾಡಿದ್ದಾರೆ. ದೆಹಲಿಯ ಸಂಸತ್ ಭವನದಲ್ಲಿರುವ ರಾಜನಾಥ್ ಸಿಂಗ್ ಕಚೇರಿಯಲ್ಲಿ ಭೇಟಿಯಾಗಿ ಈ ಸಂಬಂಧ ಮಾತುಕತೆ ನಡೆಸಿದರು.
2017 ಮತ್ತು 2019 ರಲ್ಲಿ ಟಾರ್ಚ್ ಲೈಟ್ ಪರೇಡ್ ಮೈದಾನದಲ್ಲಿ ವಾಯುಪಡೆ ವಿಶೇಷ ಏರ್ ಶೋ ನಡೆಸಿತ್ತು. ಬಹಳಷ್ಟು ಜನರು ಇದನ್ನು ನೋಡಿ ಇಷ್ಟಪಟ್ಟಿದ್ದರು. ಈ ವರ್ಷವೂ ವಾಯುಪಡೆಗಳಿಂದ ವಿಶೇಷ ಏರ್ ಶೋ ನಡೆಸಲು ನಿರ್ದೇಶಿಸಬೇಕು ಎಂದು ಮನವಿ ಮಾಡಿದರು. ಮನವಿ ಸ್ವೀಕರಿಸಿದ ರಾಮನಾಥ್ ಸಿಂಗ್ ಈ ಬಗ್ಗೆ ಪರಿಶೀಲನೆ ನಡೆಸುವುದಾಗಿ ಹೇಳಿದರು. ಇದನ್ನೂ ಓದಿ: ಕೇರಳದ ಕೊಚ್ಚಿಯಲ್ಲಿ ಕರ್ನಾಟಕ ಪೊಲೀಸರ ಅರೆಸ್ಟ್ – ಲಂಚಕ್ಕೆ ಬೇಡಿಕೆಯಿಟ್ಟು ಲಾಕ್ ಆದ ಬೆಂಗಳೂರು ಪೊಲೀಸರು
ಬೆಂಗಳೂರು: ಏರೋ ಇಂಡಿಯಾ ‘ಏರ್ ಶೋ 2023’ (Aero India-2023) ರಲ್ಲಿ ಪ್ರದರ್ಶನದಲ್ಲಿದ್ದ ಹೆಚ್ಎಲ್ಎಫ್ಟಿ-42 ತರಬೇತುದಾರ ಯುದ್ಧ ವಿಮಾನದ ಹಿಂಭಾಗದಲ್ಲಿದ್ದ ಹನುಮಾನ್ ಚಿತ್ರವನ್ನು (Hanuman Photo) ಹೆಚ್ಎಎಲ್ (HAL) ತೆಗೆದುಹಾಕಿದೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಫೋಟೋ ವೈರಲ್ ಆಗುತ್ತಿದ್ದು, ಈ ನಡುವೆ ಭಗವಾನ್ ಹನುಮಾನ್ ಚಿತ್ರ ತೆಗೆದುಹಾಕಿರುವುದು ಹಲವು ಪ್ರಶ್ನೆಗೆ ಕಾರಣವಾಗಿದೆ.
ಹಿಂದೂಸ್ತಾನ್ ಲೀಡ್ ಇನ್ ಫೈಟರ್ ಟ್ರೈನರ್ (HLFT-42) ಅನ್ನು ಸೋಮವಾರ ಹೆಚ್ಎಎಲ್ ಪ್ರದರ್ಶಿಸಿತ್ತು. ತರಬೇತಿ ಯುದ್ಧ ವಿಮಾನದ ಹಿಂಭಾಗದಲ್ಲಿ ಲಂಬವಾದ ರೆಕ್ಕೆ ಮೇಲೆ ಭಗವಾನ್ ಹನುಮಂತನ ಫೋಟೋವನ್ನು ಪ್ರದರ್ಶಿಸಲಾಗಿತ್ತು. ಹೆಚ್ಎಲ್ಎಫ್ಟಿ-42 ವಿಮಾನವು ಮೊದಲ ಸ್ವದೇಶಿ ವಿಮಾನವಾದ ಹೆಚ್ಎಎಲ್ ‘ಮಾರುತ್’ನ ಉತ್ತರಾಧಿಕಾರಿಯಾಗಿದೆ.
ಮಾರುತ್ ಎಂಬುದು ಗಾಳಿಯ ಇನ್ನೊಂದು ಹೆಸರು, ಅಥವಾ ಹಿಂದಿಯಲ್ಲಿ ಇದನ್ನು ‘ಪವನ’ ಎಂದು ಕರೆಯಲಾಗುತ್ತದೆ. ಹಿಂದೂ ಪುರಾಣದಲ್ಲಿ ವಾಯುವಿನ ಪುತ್ರ ಹನುಮಂತ. ಈ ಕಾರಣಕ್ಕೆ ಹನುಮಂತನ ಚಿತ್ರವನ್ನು ಮಾದರಿ ವಿಮಾನದಲ್ಲಿ ಪ್ರದರ್ಶಿಸಲಾಗಿತ್ತು.
ಹಾಕ್-132 ಸಬ್ಸಾನಿಕ್ ಟ್ರೈನರ್ ಮತ್ತು ಮಿಗ್-21, ಇವುಗಳನ್ನು ಸೂಪರ್ಸಾನಿಕ್ ತಂತ್ರಜ್ಞಾನದಲ್ಲಿ ಪೈಲಟ್ಗಳಿಗೆ ತರಬೇತಿ ನೀಡಲು ಬಳಸಲಾಗುತ್ತದೆ. ಹೆಚ್ಎಲ್ಎಫ್ಟಿ-42 ಫ್ಲೈ ಬೈ ವೈರ್ ಕಂಟ್ರೋಲ್ (FBW) ವ್ಯವಸ್ಥೆಗಳೊಂದಿಗೆ ಸಕ್ರಿಯ ಎಲೆಕ್ಟ್ರಾನಿಕ್ ಸ್ಕ್ಯಾನ್ಡ್ ಅರೇ (AESA), ಎಲೆಕ್ಟ್ರಾನಿಕ್ ವಾರ್ಫೇರ್ (EW) ಸೂಟ್, ಇನ್ಫ್ರಾರೆಡ್ ಸರ್ಚ್ ಮತ್ತು ಟ್ರ್ಯಾಕ್ (IRST) ನಂತಹ ಅತ್ಯಾಧುನಿಕ ಏವಿಯಾನಿಕ್ಸ್ಗಳನ್ನು ಹೊಂದಿದೆ. ಇದನ್ನೂ ಓದಿ: ಪುಲ್ವಾಮಾ ದಾಳಿಗೆ 4 ವರ್ಷ: ಆ ಒಂದು ಕರಾಳ ದಿನದಲ್ಲಿ ನಡೆದಿದ್ದೇನು?
Live Tv
[brid partner=56869869 player=32851 video=960834 autoplay=true]
ನವದೆಹಲಿ: ಕಳೆದ ಐದು ವರ್ಷಗಳಲ್ಲಿ ಭಾರತಕ್ಕೆ (India) ಸುಮಾರು 13 ಶತಕೋಟಿ ಡಾಲರ್ ಮೌಲ್ಯದ ಶಸ್ತ್ರಾಸ್ತ್ರಗಳನ್ನು ಪೂರೈಕೆ ಮಾಡಿರುವುದಾಗಿ ರಷ್ಯಾದ (Russia) ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ. ಅಷ್ಟೇ ಅಲ್ಲದೇ ಹತ್ತು ಶತಕೋಟಿ ಡಾಲರ್ ಮೌಲ್ಯದ ಶಸ್ತ್ರಾಸ್ತ್ರ ಖರೀದಿಗೆ ಮುಂದಾಗಿದೆ ಎಂದು ತಿಳಿಸಿದೆ.
ಭಾರತ ಹೆಚ್ಚಿನ ಪ್ರಮಾಣದ ಶಸ್ತ್ರಾಸ್ರಗಳನ್ನು (Arms) ರಷ್ಯಾದಿಂದ ಖರೀದಿಸುವ ದೇಶವಾಗಿದೆ. ಖರೀದಿಯ ಆರ್ಡರ್ನಲ್ಲಿ ಶೇ.20 ರಷ್ಟು ಭಾರತದ ಪಾಲಿದೆ ಎಂದು ಅದು ತನ್ನ ವರದಿಯಲ್ಲಿ ತಿಳಿಸಿದೆ.
ಈ ಕಾರಣದಿಂದಾಗಿ ಪ್ರಧಾನಿ ನರೇಂದ್ರ ಮೋದಿಯವರು ಡಿಸೆಂಬರ್ನಲ್ಲಿ ಶಾಂತಿ ಮಾತುಕತೆಗೆ ಕರೆಕೊಟ್ಟಿದ್ದು ನೇರವಾಗಿ ರಷ್ಯಾ, ಉಕ್ರೇನ್ ಮೇಲೆ ನಡೆಸಿದ ದಾಳಿಯನ್ನು ಖಂಡಿಸಲು ಭಾರತಕ್ಕೆ ಸಾಧ್ಯವಾಗಿಲ್ಲ ಎಂದು ಅದು ತನ್ನ ವರದಿಯಲ್ಲಿ ತಿಳಿಸಿದೆ. ಇದನ್ನೂ ಓದಿ: ಭಾರತಕ್ಕೆ ರಷ್ಯಾದಿಂದ ಬಂತು ಎಸ್ 400 ವಾಯು ರಕ್ಷಣಾ ಕ್ಷಿಪಣಿ ವ್ಯವಸ್ಥೆ
ಭಾರತ ಸೇರಿದಂತೆ, ಚೀನಾ ಮತ್ತು ಆಗ್ನೇಯ ಏಷ್ಯಾದ ದೇಶಗಳು ರಷ್ಯಾದ ಶಸ್ತ್ರಾಸ್ತ್ರಗಳನ್ನು ಕೊಂಡುಕೊಳ್ಳಲು ಮನಸ್ಸು ಮಾಡುತ್ತಿವೆ ಎಂದು ಮಿಲಿಟರಿ ತಾಂತ್ರಿಕ ಸೇವೆಯ ಮುಖ್ಯಸ್ಥ ಡ್ಮಿಟ್ರೈ ಶುಘೈವ್ ತಿಳಿಸಿದ್ದಾಗಿ ವರದಿಯಲ್ಲಿ ಹೇಳಲಾಗಿದೆ.
ಏಷ್ಯಾದ ದೇಶಗಳಿಂದ ಎಸ್-400 ಟ್ರಯಾಫ್ ಕ್ಷಿಪಣಿ, ಸುಕೋಯ್ 30 ಯುದ್ಧ ವಿಮಾನಗಳು, ಮಿಗ್-29 ಹೆಲಿಕಾಪ್ಟರ್ ಮತ್ತು ಡ್ರೋಣ್ ಖರೀದಿಗೆ ಬೇಡಿಕೆಯಿದೆ ಎಂದು ಶುಘೈವ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ನಡೆಯುತ್ತಿರುವ 14ನೇ ಅಂತರಾಷ್ಟ್ರೀಯ ಏರ್ ಶೋಗೆ 200 ಬಗೆಯ ವಿವಿಧ ಮಾದರಿಯ ಶಸ್ತ್ರಾಸ್ತ್ರಗಳು ಪ್ರದರ್ಶನಗೊಳ್ಳಲಿದೆ. ಏರ್ ಶೋನಲ್ಲಿ ಪ್ರದರ್ಶನಗೊಳ್ಳುವ ವಿಮಾನಗಳ ಬೇಡಿಕೆ ಆಧಾರದ ಮೇಲೆ ಸ್ಥಳೀಯವಾಗಿ ಉತ್ಪಾದಿಸಲು ಕಂಪನಿಗಳಿಗೆ ಭಾರತ ಒತ್ತಾಯಿಸಲಿದೆ ಎಂದು ವರದಿಯಲ್ಲಿ ತಿಳಿಸಿದೆ.
Live Tv
[brid partner=56869869 player=32851 video=960834 autoplay=true]
ಹುಬ್ಬಳ್ಳಿ: ಏರ್ ಶೋ (Air Show) ಬಡತನ ಓಡಿಸೋ ಕಾರ್ಯಕ್ರಮವಾ? ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ಪ್ರಧಾನಿ ನರೇಂದ್ರ ಮೋದಿ ಅವರನ್ನ ಪ್ರಶ್ನಿಸಿದ್ದಾರೆ.
ಹುಬ್ಬಳ್ಳಿಯಲ್ಲಿಂದು (Hubballi) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದೀಗ 14ನೇ ಏರ್ ಶೋ ನಡೆಯುತ್ತಿದೆ. ಹಿಂದಿನಿಂದಲೂ ಇದನ್ನು ಮೋದಿಯೇ (Narendra Modi) ಆರಂಭಿಸಿದ್ರಾ? ಏರ್ ಶೋ ಬರೋದ್ರಿಂದ ಬಡತನ ನಿವಾರಣೆಯಾಗುತ್ತಾ? ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಕೆಟ್ಟು ನಿಂತ ಅಂಬುಲೆನ್ಸ್ – ನಡುರಸ್ತೆಯಲ್ಲೇ 2 ಗಂಟೆ ನರಳಾಡಿದ ತುಂಬು ಗರ್ಭಿಣಿ
ಬಿಜೆಪಿ ಅಧಿಕಾರಕ್ಕೆ ಬರೋಕೆ ಸಿದ್ದು ಕಾರಣ: ಇದೇ ವೇಳೆ ಸಿದ್ದರಾಮಯ್ಯ (Siddaramaiah) ವಿರುದ್ಧ ವಾಗ್ದಾಳಿ ನಡೆಸಿ, ಸಿದ್ದರಾಮಯ್ಯ ಸುಳ್ಳಿನ ರಾಮಯ್ಯ. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರೋಕೆ ಅವರೇ ಕಾರಣ. ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದ ಎರಡು ತಿಂಗಳಲ್ಲಿಯೇ ಸರ್ಕಾರ ಪತನದ ಬಗ್ಗೆ ಮಾತನ್ನಾಡಿದ್ದರು ಅಂತಾ ಹೆಚ್ಡಿಕೆ ಆರೋಪಿಸಿದ್ದಾರೆ. ಇದನ್ನೂ ಓದಿ: ಪಾಕ್ ಬೌಲರ್ಗಳ ಬೆವರಿಳಿಸಿದ ಜೆಮಿಯಾಗೆ ಸ್ಫೂರ್ತಿಯಾಗಿದ್ದು ಕೊಹ್ಲಿ ಇನ್ನಿಂಗ್ಸ್ǃ
ಅಕ್ರಮ ಹೊರತಂದಿದ್ದು ನಾನು: ಬಿಜೆಪಿ (BJP) ಅಕ್ರಮ ಹೊರ ತಂದಿದ್ದು ನಾನು, ಸಿದ್ದರಾಮಯ್ಯ ಅಲ್ಲ. ನಿಮ್ಮ ಯೋಗ್ಯತೆಗೆ ಸರಿಯಾದ ರೀತಿಯಲ್ಲಿ ಮಾತನಾಡಿ. ಕುರ್ಚಿಗಾಗಿ ಕುತಂತ್ರ ರಾಜಕಾರಣ ಮಾಡ್ತೀರಿ ನಿಮಗೆ ನಾಚಿಕೆಯಾಗಬೇಕು. ಬಿಜೆಪಿಯವರೂ ನನಗೆ ಸಿಎಂ ಸ್ಥಾನ ಕೊಡೋಕೆ ರೆಡಿಯಾಗಿದ್ರು. ಇನ್ನೂ 10 ವರ್ಷಗಳಾದ್ರೂ ಬಿಜೆಪಿಯನ್ನು ತೆಗೆಯೋಕೆ ಕಾಂಗ್ರೆಸ್ ನಿಂದ ಸಾಧ್ಯವಿಲ್ಲ, ಜೆಡಿಎಸ್ ನಿಂದ ಮಾತ್ರ ಸಾಧ್ಯ ಎಂದು ತಿಳಿಸಿದ್ದಾರೆ.
ಬ್ರಾಹ್ಮಣ ಸಿಎಂ ಹೇಳಿಕೆ ವಿಚಾರವಾಗಿ ಮಾತನಾಡಿದ ಹೆಚ್ಡಿಕೆ, ಬ್ರಾಹ್ಮಣ ಸಮುದಾಯ ನನ್ನ ವಿರುದ್ಧ ತಿರುಗಿ ಬಿದ್ದಿಲ್ಲ. ಬಿಜೆಪಿಯವರು ನನ್ನ ಪ್ರಶ್ನೆಗೆ ಯಾರೂ ಉತ್ತರ ಕೊಡ್ತಿಲ್ಲ. ನಾನು ಪೇಶ್ವೆ ಮೂಲದ ಬಗ್ಗೆ ಪ್ರಶ್ನಿಸಿದ್ದೇನೆ. ಈಗಲೂ ನನ್ನ ಹೇಳಿಕೆಗೆ ನಾನು ಬದ್ಧ. ಅದಕ್ಕೆ ಉತ್ತರ ಕೊಡಲಿ ಎಂದಿದ್ದಾರೆ.
`ಜಾತಿ ವ್ಯವಸ್ಥೆಯನ್ನ ಹುಟ್ಟು ಹಾಕಿದ್ದೇ ಪಂಡಿತರು’ ಅಂತಾ ಮೋಹನ್ ಭಾಗವತ್ ಹೇಳಿದ್ದಾರೆ. ಆದರೆ ನಾನು ಆ ಮಟ್ಟಕ್ಕೆ ಹೋಗಿಲ್ಲ. ಪೇಶ್ವೆ ಡಿಎನ್ಎ ಬಗ್ಗೆ ಮಾತ್ರ ಪ್ರಶ್ನೆ ಮಾಡಿದ್ದೇನೆ. ಬಿಜೆಪಿ ಹುನ್ನಾರಗಳ ಬಗ್ಗೆ ಜನಕ್ಕೆ ತಿಳಿಸ್ತೇನೆ ಎಂದು ಹೇಳಿದ್ದಾರೆ.
Live Tv
[brid partner=56869869 player=32851 video=960834 autoplay=true]
ಬೆಂಗಳೂರು: ಯಲಹಂಕದ (Yelahanka) ವಾಯುನೆಲೆಯಲ್ಲಿ 5 ದಿನಗಳ ಕಾಲ ನಡೆಯುವ ಏರೋ ಇಂಡಿಯಾ – 2023 (Aero India-2023) ವೈಮಾನಿಕ ಪ್ರದರ್ಶನಕ್ಕೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅಧಿಕೃತವಾಗಿ ಚಾಲನೆ ನೀಡಿದ್ದಾರೆ. ಈ ವೇಳೆ ಮಾತನಾಡಿರುವ ಮೋದಿ, ವಿಶ್ವದಲ್ಲೇ ಭಾರತದ ರಕ್ಷಣಾ ವಲಯ ದೊಡ್ಡ ಹೆಸರು ಮಾಡಿದೆ. ಬೆಂಗಳೂರಿನ ಬಾನಂಗಳ ಶಕ್ತಿ ಸಾಮರ್ಥ್ಯಕ್ಕೆ ಸಾಕ್ಷಿಯಾಗಿದೆ ಎಂದಿದ್ದಾರೆ.
ಏರ್ ಶೋ ಉದ್ಘಾಟನೆ ಬಳಿಕ ಮಾತನಾಡಿದ ಮೋದಿ, ಏರೋ ಇಂಡಿಯಾದ ರೋಮಾಂಚನಕ್ಕೆ ಮನಸೋತಿದ್ದೇನೆ. ಬೆಂಗಳೂರಿನ ವಾತಾವರಣ ಎಲ್ಲರನ್ನೂ ಸೆಳೆಯುತ್ತಿದೆ. ಏರೋ ಇಂಡಿಯಾದ ಆಯೋಜನೆ ಹೊಸ ಸಾಮರ್ಥ್ಯದ ಉದಾಹರಣೆಯಾಗಿದೆ. ವಿಶ್ವ ಭಾರತವನ್ನು ಬೇರೆಡೆಗೆ ಕೊಂಡೊಯ್ಯುತ್ತಿದೆ. ವಿದೇಶಿ ಕಂಪನಿಗಳು ಸ್ಟಾಲ್ ಹಾಕಿದ್ದಾರೆ. ಏರೋ ಇಂಡಿಯಾ ಥೀಮ್ ರನ್ವೇ ಜಮೀನಿನಿಂದ ಆಕಾಶದ ವರೆಗೂ ಹೊಸತನ್ನು ನಿರೀಕ್ಷಿಸುತ್ತಿದೆ. ಏರೋ ಇಂಡಿಯಾದ ಜೊತೆ, ಡಿಒಎನ್ಸ್ ಕಾನ್ ಕ್ಲೈವ್ ಕೂಡ ಆಯೋಜಿಸಲಾಗಿದೆ. ಮಿತ್ರ ದೇಶದ ಜೊತೆ ಭಾರತ ವಿಶ್ವದ ಹೊಸತನ್ನು ಸೃಷ್ಟಿಸಿದೆ ಎಂದು ನುಡಿದರು.
ಡಿಫೆನ್ಸ್ ಸಂಸ್ಥೆಗೆ ಅಭಿನಂದನೆ ಸಲ್ಲಿಸುತ್ತೇನೆ. ಕರ್ನಾಟಕದಲ್ಲಿ ರಕ್ಷಣಾ ಕ್ಷೇತ್ರದಲ್ಲಿ ಶಕ್ತಿ ತುಂಬುತ್ತಿದೆ. ಹೊಸ ಇನೋವೇಷನ್ ಮಾಡಲು ಅವಕಾಶ ಸಿಕ್ಕಿದೆ. ಹೊಸ ಆಲೋಚನೆಗೆ ಉತ್ತೇಜನ ಸಿಕ್ಕಿದೆ. ಒಂದು ಕಾಲ ಇತ್ತು ಏರ್ ಶೋ ಬರಿ ಶೋ ಆಗಿತ್ತು. ಆದರೀಗ ಇದರ ಮಾದರಿಯನ್ನೇ ಬದಲಿಸಲಾಗಿದೆ. ಇದು ಬರೀ ಶೋ ಅಲ್ಲ, ನಮ್ಮ ದೇಶದ ಶಕ್ತಿ ಕೂಡ ಆಗಿದೆ. ದೇಶದಲ್ಲಿ ಡಿಫೆನ್ಸ್ ಕೇವಲ ಮಾರುಕಟ್ಟೆ ಮಾತ್ರ ಅಲ್ಲ, ಪಾರ್ಟ್ ಕೂಡ ಹೌದು ಎಂದು ಹಾಡಿ ಹೊಗಳಿದರು.
ನಮ್ಮ ಟೆಕ್ನಾಲಜಿ ದೇಶದಲ್ಲಿ ಪ್ರಭಾವಶಾಲಿಯಾಗಿದೆ. ಪ್ರಾಮಾಣಿಕ ಹಾಗೂ ಸದೃಢವಾಗಿಸಿದೆ. ಭಾರತದ ಸಾಮರ್ಥ್ಯ ಪ್ರಮಾಣ ಹೆಚ್ಚಿಸಿದೆ. ಆಕಾಶದಲ್ಲಿ ಓಡೋ ತೇಜಸ್ ವೇಗ ಹೆಚ್ಚಿಸಿದೆ. ಗುಜರಾತ್, ತುಮಕೂರಿನಲ್ಲಿ ತಯಾರಾಗುತ್ತಿರುವ ವಿಮಾನ ಮತ್ತಷ್ಟು ಶಕ್ತಿ ಹೆಚ್ಚಿಸಿದೆ. ನಾವು ರಿಫಾರ್ಮ್ ಮೂಲಕ ಎಲ್ಲಾ ವಿಭಾದಲ್ಲೂ ಬದಲಾಗುತ್ತಿದ್ದೇವೆ. ಡಿಫೆನ್ಸ್ ವಸ್ತುಗಳನ್ನು ರಫ್ತು ಮಾಡುತ್ತಿದ್ದೇವೆ ಎಂದರು.
ಭಾರತ 9 ವರ್ಷಗಳಿಂದ ಡಿಫೆನ್ಸ್ನಲ್ಲಿ ಬದಲಾವಣೆ ಕಂಡಿದೆ. 1.5 ಬಿಲಿಯನ್ ಡಾಲರ್ ಹೆಚ್ಚಳವಾಗಿದೆ. 2 ಬಿಲಿಯನ್ ಇದ್ದ ಡಿಫೆನ್ಸ್ ರಫ್ತನ್ನು ಮುಂದೆ 5 ಬಿಲಿಯನ್ಗೆ ಹೆಚ್ಚಳ ಮಾಡಲಿದ್ದೇವೆ. ಫೈಟರ್ ಜೆಟ್ ತರ ಭಾರತ ಮುನ್ನುಗ್ಗುತ್ತಿದೆ. ಯಾವಾಗಲೂ ಎಲ್ಲಾ ರೀತಿಯಲ್ಲೂ ಮುನ್ನುಗ್ಗುತ್ತೇವೆ. ಆಕಾಶದಲ್ಲಿ ಪೈಲಟ್ ಹಾರಿಸುವ ರೀತಿ, ಸ್ವಾತಂತ್ರ್ಯ ಸರ್ಕಾರ ಇದೆ. ಯಾವುದೇ ರೀತಿಯ ನಿರ್ಧಾರ ತೆಗೆದುಕೊಳ್ಳಲು ಸಿದ್ಧರಿದ್ದೇವೆ ಎಂದರು.
ಇದಕ್ಕೂ ಮುನ್ನ ಮಾತನಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಎಲ್ಲರಿಗೂ ನಮಸ್ಕಾರ ಎಂದು ಕನ್ನಡದಲ್ಲಿಯೇ ಭಾಷಣವನ್ನು ಆರಂಭಿಸಿದರು. ಕರ್ನಾಟಕದ ಈ ಐತಿಹಾಸಿಕ ಪ್ರದೇಶಕ್ಕೆ ನಿಮಗೆ ಸ್ವಾಗತ. ಮೋದಿ ಮಾರ್ಗದರ್ಶನದಲ್ಲಿ ಹಲವು ವರ್ಷಗಳಿಂದ ಈ ಕಾರ್ಯಕ್ರಮ ರೂಪಿಸಲಾಗಿದೆ. ಹೈಟ್ ಮತ್ತು ಸ್ಪೀಡ್ 2 ಪ್ರಮುಖ ವಿಚಾರ ಇಟ್ಟುಕೊಳ್ಳಲಾಗಿದೆ. ಲೋಕ ಕಲ್ಯಾಣ ಶಕ್ತಿ ಇದಾಗಿದ್ದು, ರಾಷ್ಟ್ರ ಸಶಕ್ತೀಕರಣಕ್ಕೆ ನಮ್ಮ ದೇಶ ಸದೃಢವಾಗಿದೆ ಎಂದರು. ಇದನ್ನೂ ಓದಿ: Exclusive Photo Album- ಮೋದಿ ಔತಣಕೂಟ : ಎಕ್ಸ್ ಕ್ಲೂಸಿವ್ ಫೋಟೋ ಆಲ್ಬಂ
ಭಾರತ ರಕ್ಷಣಾ ಕ್ಷೇತ್ರದಲ್ಲಿ ಉತ್ತಮವಾಗಿ ಮುನ್ನುಗುತ್ತಿದೆ. ಕರ್ನಾಟಕದ ಭೂಮಿ, ಶೌರ್ಯ, ಪರಾಕ್ರಮಕ್ಕೆ ಹೆಸರುವಾಸಿಯಾಗಿದೆ. ಏರೋ ಇಂಡಿಯಾ ಆಯೋಜನೆ ಮೂಲಕ ಬೇರೆ ಬೇರೆ ಕಾರ್ಯಕ್ರಮ ರೂಪಿಸಲಾಗಿದೆ. ತುಮಕೂರು, ಲಕ್ನೋ, ಬೆಂಗಳೂರಿನಲ್ಲಿ ಏರ್ಪಡಿಸಲಾಗಿದೆ. ಕರ್ನಾಟಕ ರಾಜ್ಯ ಇಂಡಸ್ಟ್ರಿ ಕಮೀಟ್ಮೆಂಡ್ ಎಕ್ಸ್ ಪ್ರೆಸ್. ಕರ್ನಾಟಕದಲ್ಲಿ ಸಿಗುವ ಗಂಧದ ಮರ ದೇಶ, ವಿದೇಶಗಳಿಗೆ ರಫ್ತು ಆಗುತ್ತಿದೆ. ಈಸ್ ಆಫ್ ಡೂಯಿಂಗ್ ಬ್ಯುಸ್ನೆಸ್ ರ್ಯಾಂಕಿಂಗ್ ದಿನದಿಂದ ದಿನ ಮೇಲೆ ಬರುತ್ತಿದೆ. ಜಿ-20 ಶೃಂಗ ಸಭೆ ಮಾಡುವ ಅವಕಾಶ ಕೂಡ ಸಿಕ್ಕಿದೆ ಎಂದು ತಿಳಿಸಿದರು.
ರಕ್ಷಣಾ ಇಲಾಖೆ ಎಲ್ಲರನ್ನೂ ಸ್ವಾಗತಿಸುತ್ತಿದೆ. 700ಕ್ಕೂ ಹೆಚ್ಚು ದೇಶದ ಎಕ್ಸಿಬ್ಯೂಟರ್ ಸ್ಟಾಲ್ ಹಾಕಿದ್ದಾರೆ. ಡಿಫೆನ್ಸ್ ಮ್ಯಾನುಫ್ಯಾಕ್ಚರ್ ಉತ್ತಮವಾಗಿ ನಡೆಯುತ್ತಿದೆ. ದೇಶ, ವಿದೇಶಗಳಿಂದ ಆಗಮಿಸಿರೋ ಎಲ್ಲರಿಗೂ ಸ್ವಾಗತ ಕೋರುತ್ತೇನೆ ಎಂದರು.
ಏರ್ ಶೋ ಉದ್ಘಾಟನಾ ಸಮಾರಂಭದ ವೇಳೆ ಗವರ್ನರ್ ಥಾವರ್ ಚಂದ್ ಗಹ್ಲೋಟ್, ಸಿಎಂ ಬೊಮ್ಮಾಯಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ನಾಗರೀಕ ವಿಮಾನಯಾನ ಸಚಿವ ಜೋತಿರಾದಿತ್ಯ ಸಿಂಧಿಯಾ, ರಕ್ಷಣಾ ಇಲಾಖೆ ರಾಜ್ಯ ಮಂತ್ರಿ, ಅಜಯ್ ಭಟ್ ಉಪಸ್ಥಿತರಿದ್ದರು. ಇದನ್ನೂ ಓದಿ: ಭಾರತವನ್ನು ಜಾಗತಿಕ ನಾಯಕನಾಗಿಸಲು ಕರ್ನಾಟಕ ದೊಡ್ಡ ಕೊಡುಗೆ ನೀಡಲಿದೆ: ಬೊಮ್ಮಾಯಿ
Live Tv
[brid partner=56869869 player=32851 video=960834 autoplay=true]
ಬೆಂಗಳೂರು: ಏರೋಸ್ಪೇಸ್ (Aerospace) ಅಭಿವೃದ್ಧಿಯ ಶ್ರೇಯಸ್ಸು ಕರ್ನಾಟಕಕ್ಕೆ (Karnataka) ಸಲ್ಲಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ತಿಳಿಸಿದರು.
ಭಾನುವಾರ ತಾಜ್ ವೆಸ್ಟ್ ಎಂಡ್ ಹೋಟೆಲ್ನಲ್ಲಿ ಹಮ್ಮಿಕೊಳ್ಳಲಾಗಿದ್ದ ಏರೋ ಇಂಡಿಯಾ 2023ರ (Aero India 2023) ಕರ್ಟನ್ ರೈಸರ್ ಕಾರ್ಯಕ್ರಮದಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajnath Singh) ಅವರೊಂದಿಗೆ ಪಾಲ್ಗೊಂಡು ಮಾತನಾಡಿದ ಅವರು, ರಾಜ್ಯದ ಏರೋಸ್ಪೇಸ್ ನೀತಿ ಹಾಗೂ ರಕ್ಷಣಾ ಪಾರ್ಕ್ನ ಮೊದಲ ಹಂತ ಪೂರ್ಣಗೊಂಡಿದೆ. 2ನೇ ಹಂತವೂ ಪ್ರಾರಂಭವಾಗುತ್ತಿದೆ. ಬೆಂಗಳೂರು (Bengaluru) ಏರೋಸ್ಪೇಸ್ ಕೇಂದ್ರವಾಗಿದೆ. ಇದು ಏರ್ ಶೊ (Air Show) ನಡೆಸಲು ಅತ್ಯಂತ ಸೂಕ್ತ ಸ್ಥಳ. ಭಾರತೀಯ ಏರೋಸ್ಪೇಸ್ ತಂತ್ರಜ್ಞಾನವನ್ನು ಇದರಿಂದ ಬಿಂಬಿಸಬಹುದಾಗಿದೆ. ಬೆಂಗಳೂರು ವಾಣಿಜ್ಯ ಮತ್ತು ರಕ್ಷಣಾ ಉತ್ಪಾದನೆ ಕೇಂದ್ರವಾಗಿದೆ. ಬೆಂಗಳೂರಿನಲ್ಲಿ ಸ್ವಂತ ಏರ್ಕ್ರಾಫ್ಟ್ ತಯಾರಿಸುವ ಗುರಿಯನ್ನು ನಾವು ಹೊಂದಿದ್ದೇವೆ. ಈ ಕಾರ್ಯಸಾಧನೆಗೆ ಜಾಗತಿಕವಾಗಿ ಸಾಕಷ್ಟು ಕ್ರಮ ವಹಿಸಿದ್ದು, ಈ ದೇಶದ ಭವಿಷ್ಯಕ್ಕೆ ನಾವು ಸೂಕ್ತ ಸ್ಥಳ ಮತ್ತು ಸೂಕ್ತ ತೀರ್ಮಾನ ತೆಗೆದುಕೊಳ್ಳುತ್ತಿದ್ದೇವೆ ಎಂದರು.
ಗೌರವದ ಸಂಕೇತ:
ಏರೋ ಇಂಡಿಯಾ ಶೋ ಆತಿಥ್ಯ ವಹಿಸುವುದು ಗೌರವದ ಸಂಕೇತ. ಇದರ ಆಯೋಜನೆ ಕರ್ನಾಟಕ ಮತ್ತು ಬೆಂಗಳೂರಿಗೆ ಅಭ್ಯಾಸವಾಗಿದೆ. ಏರೊ ಸ್ಪೇಸ್ ಇಕೋ ಸಿಸ್ಟಮ್ ಅಭಿವೃದ್ಧಿಪಡಿಸಿದ ನಮ್ಮ ಹಿರಿಯರಿಗೆ ಅಭಿನಂದಿಸಬೇಕು ಎಂದರು.
ಏರೋಸ್ಪೇಸ್ ಉದ್ಯಮ ಹಾಗೂ ಸಾಮರ್ಥ್ಯದ ಪ್ರದರ್ಶನ:
ಪ್ರತಿ ಬಾರಿ ಆತಿಥ್ಯ ವಹಿಸಿದಾಗಲೂ ಅತ್ಯಂತ ಯಶಸ್ವಿಯಾಗಿ ರಕ್ಷಣಾ, ಏರೋಸ್ಪೇಸ್ ಉದ್ಯಮ ಹಾಗೂ ಸಾಮರ್ಥ್ಯದ ಪ್ರದರ್ಶನ ಮಾಡಿದ್ದೇವೆ. ಕೋವಿಡ್ ಸಮಯದಲ್ಲಿಯೂ ಕಾರ್ಯಕ್ರಮಗಳು ರದ್ದಾದರೂ ನಾವು 2 ವರ್ಷಗಳ ಹಿಂದೆ ಏರ್ ಶೊ ಯಶಸ್ವಿಯಾಗಿ ಜರುಗಿಸಿದ್ದೇವೆ. ಅದು ನಮ್ಮ ಆತ್ಮವಿಶ್ವಾಸವನ್ನು ಹೆಚ್ಚಿಸಿದೆ. ಇದು ಅತ್ಯಂತ ದೊಡ್ಡ ಏರ್ ಶೋ ಆಗಿದ್ದು, ಅತಿ ಹೆಚ್ಚು ವಿದೇಶಿ ರಕ್ಷಣಾ ಮಂತ್ರಿಗಳು, ಏರ್ಪೋರ್ಸ್ ಸಿಇಒಗಳು, 35,000 ಚದರ ಅಡಿ ವಿಸ್ತೀರ್ಣದ ಪ್ರದರ್ಶನ, 67 ವಸ್ತು ಪ್ರದರ್ಶನ, 600 ರಿಂದ 809ಗೆ ಪ್ರದರ್ಶನಗಳು, 98 ವಿದೇಶಿ ಗಣ್ಯರು ಪಾಲ್ಗೊಳ್ಳುತ್ತಿದ್ದಾರೆ. ಒಪ್ಪಂದಗಳ ಸಂಖ್ಯೆಯೂ ಹೆಚ್ಚಾಗಲಿದೆ ಎಂದರು.
ವಾಯುಪಡೆಯ ಬಲವರ್ಧನೆ:
ವಾಯುಪಡೆಯ ತಂತ್ರಜ್ಞಾನ, ಸಾಮರ್ಥ್ಯ, ಮಾನವ ಸಂಪನ್ಮೂಲ ಬಲಪಡಿಸುವುದು ನಿರಂತರ ಪ್ರಕ್ರಿಯೆಯಾಗಿದೆ. ರಾಜನಾಥ್ ಸಿಂಗ್ ಅವರ ನಾಯಕತ್ವದಲ್ಲಿ ರಕ್ಷಣಾ ಉತ್ಪಾದನೆಯಲ್ಲಿ, ತಂತ್ರಜ್ಞಾನ ಮೇಲ್ದರ್ಜೆಗೇರುವಲ್ಲಿ ಭಾರತ ಆತ್ಮ ನಿರ್ಭರವಾಗುತ್ತಿದೆ. ನಮ್ಮ ರಕ್ಷಣಾ ಉಪಕರಣಗಳನ್ನು ಶೇ.75 ರಷ್ಟು ಆಮದು ಮಾಡಿಕೊಳ್ಳುತ್ತಿದ್ದೆವು, ಈಗ ರಪ್ತು ಮಾಡುತ್ತಿದ್ದೇವೆ. ಏರೋಸ್ಪೇಸ್ಗೆ ಸಂಬಂಧಿಸಿದಂತೆ ಕರ್ನಾಟಕ ಮಹತ್ವದ ಪಾತ್ರ ವಹಿಸುತ್ತದೆ. ಕರ್ನಾಟಕದಲ್ಲಿ 1940 ರಲ್ಲಿ ಹೆಚ್ಎಎಲ್ ಸ್ಥಾಪನೆಯಾಗಿದ್ದು, ಎನ್ಎಎಲ್, ಬಿಹೆಚ್ಇಎಲ್, ಡಿಆರ್ಡಿಒ ಎಲ್ಲವೂ ಸಂಶೋಧನೆ ಹಾಗೂ ಅಭಿವೃದ್ಧಿ ಸಾಮರ್ಥ್ಯವನ್ನು ಹೆಚ್ಚಿಸಿವೆ ಎಂದು ತಿಳಿಸಿದರು. ಇದನ್ನೂ ಓದಿ: ಬೆಂಗಳೂರಿಗೆ ಆಗಮಿಸಿದ ಮೋದಿ: ನಾಡಿನ ಗಣ್ಯರ ಜೊತೆ ಸಂವಾದ
1960 ರಲ್ಲಿ ಬೆಂಗಳೂರಿನಲ್ಲಿ ಇಸ್ರೋ ಆರಂಭವಾಯಿತು. ಪ್ರತಿ ದಶಕದಲ್ಲಿ ಏರೋಸ್ಪೇಸ್ ಅಭಿವೃದ್ಧಿಯಾಗಿದೆ. ಸ್ಥಳ, ಸಾಮರ್ಥ್ಯ, ವೃದ್ಧಿಯಾಗಿದೆ. 1960 ಆರ್ಯಭಟ ಉಪಗ್ರಹ ಬೆಂಗಳೂರಿನಿಂದ ಉಡಾವಣೆ ಮಾಡಲಾಯಿತು. ಶೇ.67 ರಷ್ಟು ಏರೋಸ್ಪೇಸ್ ಉಪಕರಣಗಳು ಕರ್ನಾಟಕದಿಂದ ಉತ್ಪಾದನೆಯಾಗುತ್ತದೆ ಎಂದರು.
ಏರೋ ಇಂಡಿಯಾ ಶೋ 2023ನ್ನು ಜನರು ನೆನಪಿನಲ್ಲಿಡುತ್ತಾರೆ ಅಲ್ಲದೇ ಇಲ್ಲಿಂದ ಒಳ್ಳೆಯ ನೆನಪುಗಳನ್ನು ತೆಗೆದುಕೊಂಡು ಹೋಗುತ್ತಾರೆ. ಈ ಕಾರ್ಯಕ್ರಮ ಯಶಸ್ವಿಯಾಗುವ ವಿಶ್ವಾಸವಿದ್ದು, ಏರೋಸ್ಪೇಸ್ ಹಾಗೂ ರಕ್ಷಣಾ ಉದ್ಯಮದ ವಿಸ್ತರಣೆಗೆ ಇದು ಸಹಕಾರಿಯಾಗಲಿದೆ. ಅರ್ಧ ಜಗತ್ತು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದು, ಇಡೀ ವಿಶ್ವವೇ ನಮ್ಮ ಕಡೆ ನೋಡುವಂತಾಗಬೇಕು ಎಂದು ಆಶಿಸಿದರು.
14ನೇ ಬಾರಿ ಏರೋ ಇಂಡಿಯಾ ಶೋ ಆಯೋಜನೆ ಮಾಡಲು ನಮಗೆ ಈ ಅವಕಾಶ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಮುಖ್ಯಮಂತ್ರಿಗಳು ಧನ್ಯವಾದಗಳನ್ನು ತಿಳಿಸಿದರು. ಕೇಂದ್ರ ರಕ್ಷಣಾ ಇಲಾಖೆ ರಾಜ್ಯ ಸಚಿವ ಅಜಯ್ ಭಟ್, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಗಿರಿಧರ್, ಎಸಿಎಸ್ ರಮಣ ರೆಡ್ಡಿ, ನಟರಾಜನ್, ಅನುರಾಗ್ ಬಾಜಪೇಯಿ ಉಪಸ್ಥಿತರಿದ್ದರು. ಇದನ್ನೂ ಓದಿ: ಅಂಬೇಡ್ಕರ್ಗೆ ಅಪಮಾನ – ದಲಿತಪರ ಸಂಘಟನೆಯಿಂದ ಜೈನ್ ವಿವಿ ಬೋರ್ಡ್ಗೆ ಮಸಿ
Live Tv
[brid partner=56869869 player=32851 video=960834 autoplay=true]
ಬೆಂಗಳೂರು: ರಾಜಧಾನಿ ಸಿಲಿಕಾನ್ ಸಿಟಿ ರಾಷ್ಟ್ರಮಟ್ಟದ ಸಭೆ, ಸಮಾರಂಭಗಳಿಗೆ ಸಾಕ್ಷಿಯಾಗುತ್ತಿದೆ. ಬೇರೆ ರಾಜ್ಯಗಳ, ವಿದೇಶದ ಜನರು ಸಿಲಿಕಾನ್ ಸಿಟಿಯತ್ತ ಮುಖ ಮಾಡುತ್ತಿದ್ದಾರೆ. ಈ ತಿಂಗಳಲ್ಲೇ ಬೆಂಗಳೂರಿನಲ್ಲಿ ಭಾರತ ಇಂಧನ ಸಪ್ತಾಹ, ಜಿ-20, ಏರ್ ಶೋ (G-20 Air Show) ಗಳು ನಡೆಯುತ್ತಿವೆ.
ಇದೇ ಫೆ.13ರಿಂದ 17ರ ತನಕ ಏರ್ ಶೋ ಆಯೋಜಿಸಲಾಗಿದೆ. ಹೀಗಾಗಿ ಹೊರ ರಾಜ್ಯ ಹಾಗೂ ವಿದೇಶದ ಪ್ರತಿನಿಧಿಗಳು ಬೆಂಗಳೂರಲ್ಲಿ ವಾಸ್ತವ್ಯ ಹೂಡುತ್ತಿದ್ದಾರೆ. ನಗರದ ಥ್ರೀ ಸ್ಟಾರ್, ಫೈವ್ ಸ್ಟಾರ್ ಹೋಟೆಲ್ (Five Star Hotel) ಗಳು ಆಲ್ ಮೋಸ್ಟ್ ಭರ್ತಿಯಾಗಿವೆ. ಒಂದು ಅಂದಾಜಿನ ಪ್ರಕಾರ 50 ಸಾವಿರ ಕೊಠಡಿಗಳನ್ನು ಕಾಯ್ದಿರಿಸಲಾಗಿದೆ ಅಂತಾ ಬೃಹತ್ ಬೆಂಗಳೂರು ಹೋಟೆಲ್ ಅಸೋಸಿಯೇಷನ್ ಅಧ್ಯಕ್ಷ ಪಿ.ಸಿ.ರಾವ್ ಹೇಳಿದ್ದಾರೆ.
ಕೆಲ ಹೋಟೆಲ್ ಗಳಲ್ಲಿ ಕೆಲವು ಕೊಠಡಿಗಳು ಸಿಕ್ಕರೂ, ಅವುಗಳ ರೇಟ್ ಸಹ ದುಪ್ಪಟಾಗಿದೆ. ಮೂರುಪಟ್ಟು, ನಾಲ್ಕುಪಟ್ಟು ಹೆಚ್ಚು ದರ ಕೊಟ್ಟು ಬುಕ್ ಮಾಡಬೇಕಾದ ಅನಿವಾರ್ಯ ಪರಸ್ಥಿತಿ ಬಂದಿದೆ. ಹೀಗಾಗಿ ಬೆಂಗಳೂರಿನ ಬಹುತೇಕ ಹೋಟೆಲ್ಗಳಲ್ಲಿ ಕೊಠಡಿಗಳು ಖಾಲಿ ಇಲ್ಲ. ಫೆ.20ರ ತನಕ ಇದೇ ಪರಿಸ್ಥಿತಿ ಇರಲಿದೆ ಅಂತಾ ಹೋಟೆಲ್ ಅಸೋಸಿಯೇಷನ್ನವರು ಹೇಳುತ್ತಾರೆ.
ಬೆಂಗಳೂರು: 2023ರ ಫೆಬ್ರವರಿ ತಿಂಗಳಲ್ಲಿ ಬೆಂಗಳೂರಿನಲ್ಲಿ (Bengaluru) ಏರ್ ಶೋ ಆಯೋಜಿಸಲಾಗಿದ್ದು, ಪ್ರಧಾನಿ ಮೋದಿಯವರು (Narendra Modi) ಏರ್ ಶೋಗೆ (Air Show) ಚಾಲನೆ ನೀಡಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ತಿಳಿಸಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಕಾಲಿನ್ಸ್ ಏರೋಸ್ಪೇಸ್ ಗ್ಲೋಬಲ್ ಇಂಜಿನಿಯರಿಂಗ್ ಅಂಡ್ ಟೆಕ್ನಾಲಜಿ ಸೆಂಟರ್ನ್ನು ಉದ್ಘಾಟಿಸಿ ಮಾತನಾಡಿದರು. ಈ ಏರ್ ಶೋ ಕಾರ್ಯಕ್ರಮದಲ್ಲಿ ರಾಜ್ಯದಲ್ಲಿರುವ ಏರೋಸ್ಪೇಸ್ ಸಂಶೋಧನಾ ಕೇಂದ್ರದ ಬಗ್ಗೆ, ವಿಮಾನಯಾನ, ವಿಮಾನ ಉತ್ಪಾದನಾ ರಂಗಗಳಲ್ಲಿನ ಅವಕಾಶಗಳು ಹಾಗೂ ಸಾಧ್ಯತೆಗಳ ಬಗ್ಗೆ ಬೆಳಕು ಚೆಲ್ಲಬೇಕು. ಏರ್ ಶೋ ಅಂತಾರಾಷ್ಟ್ರೀಯ ಮಟ್ಟದ ಕಾರ್ಯಕ್ರಮವಾಗಿದೆ ಎಂದರು.
ಬೆಂಗಳೂರಿನಲ್ಲಿ ಅಂತರರಾಷ್ಟ್ರೀಯ ಮಟ್ಟದ ಸಂಶೋಧನಾ ಕೇಂದ್ರ : ಭಾರತದ ಎಂಜಿನಿಯರ್ಗಳ ಸಾಮರ್ಥ್ಯ ಉತ್ತಮವಾಗಿದೆ. ಮುಂದಿನ ದಿನಗಳಲ್ಲಿ ಎಲ್ಲ ಭಾಗಗಳನ್ನೂ ಒಳಗೊಂಡ ಸಂಪೂರ್ಣ ವಿಮಾನದ ಉತ್ಪಾದನೆಯನ್ನು ಬೆಂಗಳೂರಿನಲ್ಲಿಯೇ ಆಗಬೇಕೆಂಬುದು ನನ್ನ ಕನಸಾಗಿದೆ. ಏರೋಸ್ಪೇಸ್ ಕ್ಷೇತ್ರಕ್ಕೆ ಬೆಂಗಳೂರು ಉತ್ತಮ ಸ್ಥಳವಾಗಿದ್ದು, ಇಲ್ಲಿ ಡಿಆರ್ಡಿಒ, ಎನ್ಎಎಲ್, ಎಚ್ಎಎಲ್ನಂತಹ ಸಂಸ್ಥೆಗಳಿವೆ. ಬೆಂಗಳೂರಿನಲ್ಲಿ ಏರೋಸ್ಪೇಸ್, ಕೃತಕ ಬುದ್ಧಿಮತ್ತೆ, ನವೀಕರಿಸಬಹುದಾದ ಇಂಧನ, ಸೆಮಿ ಕಂಡಕ್ಟರ್ಗೆ ಸಂಬಂಧಿಸಿದ ಅಂತಾರಾಷ್ಟ್ರೀಯ ಮಟ್ಟದ ಸಂಶೋಧನಾ ಕೇಂದ್ರಗಳಿವೆ ಎಂದು ಹೇಳಿದರು.
ಶ್ರಮದ ಫಲ: ಕೊಲಿನ್ಸ್ ಏರೋಸ್ಪೇಸ್ ಎಂಜಿನಿಯರಿಂಗ್ ಸಂಸ್ಥೆಯನ್ನು ಆರಂಭಿಸಿದ್ದು ಸಂತಸವಾಗಿದೆ. ಈ ಸಂಸ್ಥೆ ಬೆಂಗಳೂರಿನಲ್ಲಿ 25 ವರ್ಷ ಪೂರೈಸಿದೆ. ಇದು ಸಂಸ್ಥೆಯ ಸಾಧನೆಯನ್ನು ತೋರಿಸುತ್ತದೆ. ಈ ಸಂಸ್ಥೆ ಬೆಂಗಳೂರಿನ ಪ್ರಮುಖ ಎಂಜಿನಿಯರಿಂಗ್ ಕೇಂದ್ರವಾಗಿದೆ ಇದು ನಿಮ್ಮ ಶ್ರಮದ ಫಲ. ಬೆಂಗಳೂರು, ಕರ್ನಾಟಕ, ಭಾರತ ಹೆಮ್ಮೆ ಪಡುವಂತೆ ಸಂಸ್ಥೆ ಕಾರ್ಯನಿರ್ವಹಿಸಬೇಕೆಂದು ತಿಳಿಸಿದರು.
ಏರೋಸ್ಪೇಸ್ ಅತ್ಯಂತ ವಿಶೇಷ ಇದು ಮನುಷ್ಯನನ್ನು ಮತ್ತೊಂದು ಲೋಕಕ್ಕೆ ತೆಗೆದುಕೊಂಡು ಹೋಗುತ್ತದೆ. ಮನುಷ್ಯನ ಮನಸ್ಸನ್ನು ಒಂದು ಹಂತದವರೆಗೆ ವಿಸ್ತರಣೆ ಮಾಡಬಹುದು. ಮನುಷ್ಯನ ಬುದ್ಧಿ ಶಕ್ತಿ ಶೇ. 80ರಷ್ಟು ಬಳಕೆಯಾಗುವುದಿಲ್ಲ. ಪರಮಹಂಸ ಅತ್ಯಂತ ಭಾರವಾದ ಮತ್ತು ಶುಭ್ರ ಪಕ್ಷಿ ಅದು ಅತಿ ಎತ್ತರದಲ್ಲಿ ಹಾರಬಹುದು. ಅದು ಮಾನಸ ಸರೋವರದಲ್ಲಿ ಇರುತ್ತದೆ. ಅದೇ ರೀತಿ ಏರೋಸ್ಪೇಸ್ ಅತ್ಯಂತ ಎತ್ತರದಲ್ಲಿ ಹಾರಬಹುದು. ಇದನ್ನೂ ಓದಿ: ಪಾರಿವಾಳ ಹಿಡಿಯಲು ಹೋಗಿ ಕರೆಂಟ್ ಶಾಕ್ ಪ್ರಕರಣ – ಚಿಕಿತ್ಸೆ ಫಲಿಸದೇ ಮತ್ತೊಬ್ಬ ಬಾಲಕ ಸಾವು
ಬೆಂಗಳೂರು: 2 ವರ್ಷಗಳಿಗೊಮ್ಮೆ ನಡೆಯುವ ಭಾರತದ ಏರ್ ಶೋ (Air Show) `ಏರೋ ಇಂಡಿಯಾ- 2023′ (Aero India-2023) ಮುಂದಿನ ವರ್ಷ ಫೆಬ್ರವರಿ 13 ರಿಂದ 17ರ ವರೆಗೆ ಬೆಂಗಳೂರಿನ (Bengaluru) ಯಲಹಂಕಾದಲ್ಲಿ (Yalahanka) ನಡೆಯಲಿದೆ ಎಂದು ರಕ್ಷಣಾ ಸಚಿವಾಲಯ ಭಾನುವಾರ ತಿಳಿಸಿದೆ.
ಈ ಬಗ್ಗೆ ರಕ್ಷಣಾ ಸಚಿವಾಲಯ ಟ್ವೀಟ್ನಲ್ಲಿ ತಿಳಿಸಿದ್ದು, ಏಷ್ಯಾದಲ್ಲೇ ಅತಿದೊಡ್ಡ ಏರ್ ಶೋ ಏರೋ ಇಂಡಿಯಾ- 2023 ಘೋಷಣೆಯಾಗಿದೆ. ಫೆಬ್ರವರಿ 13-17ರ ವರೆಗಿನ ದಿನಾಂಕವನ್ನು ಗುರುತು ಮಾಡಿಕೊಳ್ಳಿ. 2023ರ ದ್ವೈವಾರ್ಷಿಕ ವೈಮಾನಿಕ ಪ್ರದರ್ಶನ ಕರ್ನಾಟಕದ ಬೆಂಗಳೂರಿನ ಯಲಹಂಕದ ವಾಯುಪಡೆ ನಿಲ್ದಾಣದಲ್ಲಿ ನಡೆಯಲಿದೆ ಎಂದು ತಿಳಿಸಿದೆ. ಇದನ್ನೂ ಓದಿ: ಅಡಿಕೆ ಬೆಳೆಗಾರರ ಜೊತೆ ಸರ್ಕಾರ ಇದೆ : ಬೊಮ್ಮಾಯಿ
???????????????? ???????????? ???????????????????? ~ ????????????????-???????????????? ???????????????????????????????? ????????????????
The biennial airshow will be held at Air Force Station, Yelahanka, Bengaluru, Karnataka
ಇದು ಏರೋ ಇಂಡಿಯಾದ 14ನೇ ಆವೃತ್ತಿಯಾಗಲಿದೆ. ಹಿಂದಿನ ವರ್ಷದಂತೆ, ರಕ್ಷಣಾ ಸಚಿವಾಲಯ ವೈಮಾನಿಕ ಪ್ರದರ್ಶನದ ದಿನಾಂಕಗಳನ್ನು ಮುಂಚಿತವಾಗಿ ಘೋಷಿಸಿದೆ. ಆದರೆ ಪ್ರದರ್ಶನದಲ್ಲಿ ಭಾಗವಹಿಸಲಿರುವ ದೇಶಗಳು ಹಾಗೂ ಪ್ರದರ್ಶಕರ ಬಗ್ಗೆ ಯಾವುದೇ ರೀತಿಯ ಉಲ್ಲೇಖಗಳನ್ನು ಮಾಡಲಾಗಿಲ್ಲ. ಇದನ್ನೂ ಓದಿ: 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ – ವಿವಿಧ ಸಮಿತಿಗಳು ಪ್ರಕಟ
Live Tv
[brid partner=56869869 player=32851 video=960834 autoplay=true]