Tag: air strike

  • ಅಫ್ಘಾನಿಸ್ತಾನದ ಮೇಲೆ ಪಾಕ್‌ ಏರ್‌ಸ್ಟ್ರೈಕ್‌, 15 ಮಂದಿ ಸಾವು

    ಅಫ್ಘಾನಿಸ್ತಾನದ ಮೇಲೆ ಪಾಕ್‌ ಏರ್‌ಸ್ಟ್ರೈಕ್‌, 15 ಮಂದಿ ಸಾವು

    ಕಾಬೂಲ್: ಅಫ್ಘಾನಿಸ್ತಾನದ (Afghanistan) ಪಕ್ಟಿಕಾ ಪ್ರಾಂತ್ಯದ ಬರ್ಮಾಲ್ ಜಿಲ್ಲೆಯ ಮೇಲೆ ಪಾಕಿಸ್ತಾನ (Pakistan) ಏರ್‌ ಸ್ಟ್ರೈಕ್‌ (Air Strike) ಮಾಡಿದೆ. ಈ ದಾಳಿಯಲ್ಲಿ 15 ಮಂದಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ.

    ಡಿಸೆಂಬರ್ 24 ರ ರಾತ್ರಿ ಲಮನ್ ಸೇರಿದಂತೆ ಏಳು ಗ್ರಾಮಗಳನ್ನು ಗುರಿಯಾಗಿಸಿಕೊಂಡು ಈ ದಾಳಿ ನಡೆದಿದೆ. ವರದಿಗಳ ಪ್ರಕಾರ ಬರ್ಮಾಲ್‌ನ ಮುರ್ಗ್ ಬಜಾರ್ ಗ್ರಾಮವನ್ನು ನಾಶಪಡಿಸಲಾಗಿದೆ.

     

    ತಾಲಿಬಾನ್‌ನ (Taliban) ರಕ್ಷಣಾ ಸಚಿವಾಲಯವು ಬರ್ಮಾಲ್, ಪಕ್ಟಿಕಾ ಮೇಲಿನ ವೈಮಾನಿಕ ದಾಳಿಯ ನಂತರ ಪ್ರತೀಕಾರ ತೀರಿಸುವುದಾಗಿ ಪ್ರತಿಜ್ಞೆ ಮಾಡಿದೆ. ಇದನ್ನೂ ಓದಿ: ಸಿರಿಯಾದಲ್ಲಿ ಬಿಕ್ಕಟ್ಟು – ಅಲ್ಲೋಲ ಕಲ್ಲೋಲ ಎಬ್ಬಿಸಿದೆ ಆಕೆಯ ಒಂದು ವೀಡಿಯೋ; ದೊಡ್ಡಣ್ಣನ ಕುತಂತ್ರದಿಂದ ಹೀಗಾಯ್ತಾ?

    ಪಾಕಿಸ್ತಾನದ ಅಧಿಕಾರಿಗಳು ವೈಮಾನಿಕ ದಾಳಿಯನ್ನು ಅಧಿಕೃತವಾಗಿ ದೃಢೀಕರಿಸದಿದ್ದರೂ ಸೇನೆಗೆ ನಿಕಟವಾಗಿರುವ ಭದ್ರತಾ ಮೂಲಗಳು ಗಡಿಯ ಸಮೀಪವಿರುವ ತಾಲಿಬಾನ್ ಅಡಗುತಾಣಗಳ ಮೇಲೆ ದಾಳಿ ನಡೆಸಲಾಗಿದೆ ಎಂದು ಹೇಳಿವೆ.

    ತಮ್ಮ ದೇಶದ ಒಳಗಡೆ ನಡೆಯುತ್ತಿರುವ ಉಗ್ರ ಕೃತ್ಯಗಳಿಗೆ ಅಫ್ಘಾನಿಸ್ತಾನ ಕಾರಣ ಎನ್ನುವುದು ಪಾಕ್‌ ಆರೋಪ. ಪಾಕಿಸ್ತಾನಿ ತಾಲಿಬಾನ್, ಅಥವಾ ತೆಹ್ರೀಕ್-ಎ-ತಾಲಿಬಾನ್ ಪಾಕಿಸ್ತಾನ್ (ಟಿಟಿಪಿ) ಇತ್ತೀಚಿನ ತಿಂಗಳುಗಳಲ್ಲಿ ಪಾಕಿಸ್ತಾನಿ ಪಡೆಗಳ ಮೇಲೆ ತನ್ನ ದಾಳಿಯನ್ನು ಹೆಚ್ಚಿಸಿದ. ಅಫ್ಘಾನ್‌ನಲ್ಲಿರುವ ತಾಲಿಬಾನ್ ಸರ್ಕಾರ ಈ ಉಗ್ರರಿಗೆ  ಆಶ್ರಯ ನೀಡುತ್ತಿದೆ ಎಂದು ಪಾಕಿಸ್ತಾನ ದೂರಿದೆ.

     

  • ಲೆಬನಾನ್‌ ಮೇಲೆ ಇಸ್ರೇಲ್‌ ಏರ್‌ಸ್ಟ್ರೈಕ್‌- ಹಿಜ್ಬುಲ್ಲಾ ಟಾಪ್‌ ಕಮಾಂಡರ್‌ ಹತ್ಯೆ

    ಲೆಬನಾನ್‌ ಮೇಲೆ ಇಸ್ರೇಲ್‌ ಏರ್‌ಸ್ಟ್ರೈಕ್‌- ಹಿಜ್ಬುಲ್ಲಾ ಟಾಪ್‌ ಕಮಾಂಡರ್‌ ಹತ್ಯೆ

    ಟೆಲ್‌ ಅವೀವ್‌: ಲೆಬನಾನ್‌ನ (Lebanon) ರಾಜಧಾನಿ ಬೈರುತ್‌ನಲ್ಲಿರುವ (Beirut) ಕಟ್ಟಡದ ಮೇಲೆ ಶುಕ್ರವಾರ ಇಸ್ರೇಲ್‌ ಏರ್‌ಸ್ಟ್ರೈಕ್‌ (Air Strike) ಮಾಡಿ ಹಿಜ್ಬುಲ್ಲಾದ (Hezbollah) ಟಾಪ್‌ ಮಿಲಿಟರಿ ನಾಯಕನನ್ನು ಹತ್ಯೆ ಮಾಡಿದೆ. ಈ ದಾಳಿಯಲ್ಲಿ 8 ಮಂದಿ ಸಾವನ್ನಪ್ಪಿ 60ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.

    ಹಿಜ್ಬುಲ್ಲಾ ಉಗ್ರ ಸಂಘಟನೆಯ ಆಪರೇಷನ್‌ ಯೂನಿಟ್‌ ನೋಡಿಕೊಳ್ಳುತ್ತಿದ್ದ ಇಬ್ರಾಹಿಂ ಅಖಿಲ್‌ನನ್ನು (Ibrahim Aqil) ಹತ್ಯೆ ಮಾಡಲಾಗಿದೆ ಎಂದು ಇಸ್ರೇಲ್‌ (Israel) ಅಧಿಕೃತವಾಗಿ ತಿಳಿಸಿದೆ.

    ಕಳೆದ ಅಕ್ಟೋಬರ್‌ 7 ರಂದು ಇಸ್ರೇಲ್‌ ಒಳಗೆ ನುಗ್ಗಿ ಅಪಹರಣ ಮಾಡಿ ಅಮಾಯಕ ಜನರನ್ನು ಹತ್ಯೆ ಮಾಡಲಾಗಿತ್ತೋ ಅದೇ ರೀತಿ ದಾಳಿಯನ್ನು ಇಬ್ರಾಹಿಂ ಅಖಿಲ್‌ ಯೋಜಿಸುತ್ತಿದ್ದ. ಹಿಜ್ಬುಲ್ಲಾದ ಮೇಲೆ ನಮ್ಮ ದಾಳಿ ಮುಂದುವರಿಯಲಿದೆ. ಇಸ್ರೇಲ್‌ ಜನರನ್ನು ರಕ್ಷಿಸಲು ನಾವು ಬದ್ಧವಾಗಿದ್ದೇವೆ ಎಂದು ಇಸ್ರೇಲ್‌ ತಿಳಿಸಿದೆ.

    1983ರಲ್ಲಿ ಬೈರುತ್‌ನಲ್ಲಿನ ಅಮೆರಿಕ ರಾಯಭಾರ ಕಚೇರಿಯ ಮೇಲೆ ಬಾಂಬ್‌ ದಾಳಿ ಮಾಡಿ 63 ಜನರನ್ನು ಹತ್ಯೆ ಮಾಡಲಾಗಿತ್ತು. ಈ ಕೃತ್ಯ ಮಾಡಿದ ಸಂಘಟನೆಯ ಪ್ರಧಾನ ಸದಸ್ಯನಾಗಿದ್ದ ಈತನ ಬಗ್ಗೆ ಮಾಹಿತಿ ನೀಡಿದವರಿಗೆ ಅಮೆರಿಕ 7 ದಶಲಕ್ಷ ಡಾಲರ್‌ ಬಹುಮಾನ ನೀಡುವುದಾಗಿ ಪ್ರಕಟಿಸಿತ್ತು. ಇದನ್ನೂ ಓದಿ: ಹಿಜ್ಬುಲ್ಲಾದ 100 ರಾಕೆಟ್ ಲಾಂಚರ್‌ ಉಡೀಸ್‌ – ಪ್ರತೀಕಾರದ ದಾಳಿಗೂ ಮುನ್ನವೇ ಪೆಟ್ಟುಕೊಟ್ಟ ಇಸ್ರೇಲ್‌

    ಇಸ್ರೇಲ್‌ಗೆ ಗೊತ್ತಾಗಿದ್ದು ಹೇಗೆ?
    ಬುಧವಾರ ನಡೆದ ಪೇಜರ್‌ ಸ್ಫೋಟದಿಂದ ಇಬ್ರಾಹಿಂ ಅಖಿಲ್‌ ಗಾಯಗೊಂಡಿದ್ದ. ಚಿಕಿತ್ಸೆಗೆ ಆಸ್ಪತ್ರೆಗೆ ಸೇರಿದ್ದ ಅಖಿಲ್‌ ಡಿಸ್ಚಾರ್ಜ್‌ ಆಗಿದ್ದ. ಈತನ ಚಲನವಲನದ ಬಗ್ಗೆ ಮಾಹಿತಿ ಸಂಗ್ರಹಿಸಿದ್ದ ಇಸ್ರೇಲ್‌ ಅಖಿಲ್‌ ನೆಲೆಸಿದ್ದ ಕಟ್ಟಡದ ಮೇಲೆ ಏರ್‌ಸ್ಟ್ರೈಕ್‌ ಮಾಡಿ ಹತ್ಯೆ ಮಾಡಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ.

     

  • ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ವೈಮಾನಿಕ ದಾಳಿ – 195 ಮಂದಿ ಸಾವು

    ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ವೈಮಾನಿಕ ದಾಳಿ – 195 ಮಂದಿ ಸಾವು

    ಟೆಲ್ ಅವೀವ್: ಹಮಾಸ್ ಉಗ್ರರ ವಿರುದ್ಧದ ಕಾರ್ಯಾಚರಣೆ ವೇಳೆ ಜಬಾಲಿಯಾ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ (Israel) ನಡೆಸಿದ ವೈಮಾನಿಕ ದಾಳಿಯಿಂದ (Air Strike) ಕನಿಷ್ಠ 195 ಪ್ಯಾಲೆಸ್ತೀನ್‍ನ (Palestine) ನಾಗರೀಕರು ಸಾವನ್ನಪ್ಪಿದ್ದಾರೆ. ಇದರಲ್ಲಿ ಸುಮಾರು 770ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

    ದಾಳಿಯ ನಂತರ 120 ಮಂದಿ ಅವಶೇಷಗಳಡಿ ಸಿಲುಕಿದ್ದಾರೆ. ಈ ನಡುವೆ ಓರ್ವ ಇಸ್ರೇಲ್ ಸೈನಿಕ ಕೂಡ ಸಾವನ್ನಪ್ಪಿದ್ದಾನೆ ಎಂದು ಹಮಾಸ್ ಹೇಳಿದೆ. ಕಳೆದ ಎರಡು ದಿನಗಳ ದಾಳಿಯಲ್ಲಿ ಇಬ್ಬರು ಹಮಾಸ್ ಮಿಲಿಟರಿ ನಾಯಕರನ್ನು ಹೊಡೆದುರುಳಿಸಲಾಗಿದೆ ಎಂದು ಇಸ್ರೇಲ್ ಹೇಳಿಕೊಂಡಿದೆ. ಅಲ್ಲದೇ ಇನ್ನೂ ಅಡಗಿರುವ ಹಮಾಸ್ ಉಗ್ರರ ವಿರುದ್ಧ ಕಾರ್ಯಾಚರಣೆ ಮುಂದುವರಿಯುತ್ತಿದೆ ಎಂದು ಇಸ್ರೇಲ್ ಸೇನೆ ಹೇಳಿಕೊಂಡಿದೆ. ಇದನ್ನೂ ಓದಿ: ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್‌ ದಾಳಿ; ಹಮಾಸ್‌ ಕಮಾಂಡರ್‌ ಸೇರಿ 60ಕ್ಕೂ ಹೆಚ್ಚು ಮಂದಿ ಬಲಿ

    ಇಸ್ರೇಲ್, ಈಜಿಪ್ಟ್ ಮತ್ತು ಹಮಾಸ್ ನಡುವಿನ ಒಪ್ಪಂದದ ಅಡಿಯಲ್ಲಿ 500 ಜನರ ಪಟ್ಟಿಯಲ್ಲಿ ಕನಿಷ್ಠ 320 ವಿದೇಶಿ ನಾಗರಿಕರನ್ನು ಈಜಿಫ್ಟ್‌ಗೆ ಕಳುಹಿಸಲಾಗಿದೆ. ಉಳಿದ ವಿದೇಶಿ ನಾಗರಿಕರನ್ನು ಯುದ್ಧ ಪ್ರದೇಶದಿಂದ ಕಳಿಸುವ ಕಾರ್ಯ ನಡೆಯುತ್ತಿದೆ. ಶೀಘ್ರದಲ್ಲೇ ಉಳಿದ ವಿದೇಶಿ ಪ್ರಜೆಗಳನ್ನು ಸುರಕ್ಷಿತವಾಗಿ ಈಜಿಫ್ಟ್‍ಗೆ ಕಳುಹಿಸಲು ಕ್ರಮಕೈಗೊಳ್ಳಲಾಗಿದೆ.

    ಇದರ ನಡುವೆ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಆಂಟೋನಿ ಬ್ಲಿಂಕೆನ್ ಅವರು ಇಸ್ರೇಲ್‍ಗೆ ಒಂದು ತಿಂಗಳಲ್ಲಿ ತಮ್ಮ ಎರಡನೇ ಭೇಟಿಗಾಗಿ ಇಂದು ತೆರಳಲಿದ್ದಾರೆ. ಅಲ್ಲಿ ಅವರು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು (Benjamin Netanyahu) ಸೇರಿದಂತೆ ಇಸ್ರೇಲಿ ಅಧಿಕಾರಿಗಳನ್ನು ಭೇಟಿಯಾಗಲಿದ್ದಾರೆ. ಈ ವೇಳೆ ಮಸ್ಲಿಂ ರಾಷ್ಟ್ರಗಳ ಪ್ರತಿನಿಧಿಗಳು ಭಾಗಿಯಾಗಿ ಶಾಂತಿ ಮಾತುಕತೆ ನಡೆಸುವ ಸಾಧ್ಯತೆ ಇದೆ. ಇದನ್ನೂ ಓದಿ: ಇಸ್ರೇಲ್‌ ನಿಯಂತ್ರಣವಿಲ್ಲದ ಏಕೈಕ ಕ್ರಾಸಿಂಗ್‌ ದಾಟಿ ಈಜಿಪ್ಟ್‌ಗೆ ಹೊರಟ ವಿದೇಶಿಯರು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಗಾಜಾ ಮೇಲೆ ಇಸ್ರೇಲ್ ಮಹಾಯುದ್ಧ – 30 ಪ್ಯಾಲೆಸ್ತೀನಿಯರು ಸಾವು

    ಗಾಜಾ ಮೇಲೆ ಇಸ್ರೇಲ್ ಮಹಾಯುದ್ಧ – 30 ಪ್ಯಾಲೆಸ್ತೀನಿಯರು ಸಾವು

    – ಕಳೆದ 24 ಗಂಟೆಯಲ್ಲಿ 266 ಮಂದಿ ದುರ್ಮರಣ

    ಟೆಲ್ ಅವಿವ್: ಇಸ್ರೇಲ್ (Israel) ಸೋಮವಾರ ಮುಂಜಾನೆ ಗಾಜಾದ (Gaza) ಮೇಲೆ ಬಾಂಬ್ ದಾಳಿಯನ್ನು ಮುಂದುವರಿಸಿದ್ದು, ದಕ್ಷಿಣ ಲೆಬನಾನ್ (Southern Lebanon) ಅನ್ನು ರಾತ್ರಿಯಿಡೀ ಹೊಡೆದಿದೆ. ದಾಳಿಗಳು ಕೇಂದ್ರ ಮತ್ತು ಉತ್ತರದ ಮೇಲೆ ಕೇಂದ್ರೀಕೃತವಾಗಿವೆ ಎಂದು ವರದಿಗಳು ತಿಳಿಸಿವೆ.

    ಸೋಮವಾರ ಮುಂಜಾನೆ ಗಾಜಾ ಪಟ್ಟಿಯಲ್ಲಿರುವ ಮೂರು ಆಸ್ಪತ್ರೆಗಳ (Hospital) ಸಮೀಪದಲ್ಲಿ ಇಸ್ರೇಲ್ ಬಾಂಬ್ ದಾಳಿ ನಡೆಸಿದೆ ಎಂದು ಪ್ಯಾಲೇಸ್ತೀನಿಯನ್ ಮಾಧ್ಯಮ ವರದಿ ಮಾಡಿದೆ. ಆದರೆ ಬಾಂಬ್ ದಾಳಿಯಿಂದ ಆಸ್ಪತ್ರೆ ಹಾನಿಗೊಳಗಾಗಿದೆ ಎಂಬುದು ಸ್ಪಷ್ಟವಾಗಿಲ್ಲ. ಇಸ್ರೇಲ್ ಗಾಜಾ ನಗರದ ಶಿಫಾ ಮತ್ತು ಅಲ್-ಕುದ್ಸ್ ಆಸ್ಪತ್ರೆಗಳ ಬಳಿ ಮತ್ತು ಎನ್‌ಕ್ಲೇವ್‌ನ ಉತ್ತರದಲ್ಲಿರುವ ಇಂಡೋನೇಷಿಯನ್ ಆಸ್ಪತ್ರೆಯ ಬಳಿ ದಾಳಿ ಮಾಡಿದೆ ಎಂದು ವರದಿ ಹೇಳಿದೆ. ಇದನ್ನೂ ಓದಿ: Israel Hamas War: ಸಂಕಷ್ಟದಲ್ಲಿರುವ ಪ್ಯಾಲೆಸ್ತೀನಿಯರಿಗೆ ಭಾರತದಿಂದ ಮಾನವೀಯ ನೆರವು

    ಇದಕ್ಕೂ ಮೊದಲು, ಅಲ್-ಕುಡ್ಸ್ ಆಸ್ಪತ್ರೆಯನ್ನು ಸ್ಥಳಾಂತರಿಸಲು ಇಸ್ರೇಲ್ ಆದೇಶಿಸಿದೆ ಎಂದು ಪ್ಯಾಲೆಸ್ತೀನಿಯನ್ ರೆಡ್ ಕ್ರೆಸೆಂಟ್ ಸೊಸೈಟಿ ಹೇಳಿದೆ. ಗಾಜಾದಲ್ಲಿನ ವಸತಿ ಕಟ್ಟಡದ ಮೇಲೆ ಇಸ್ರೇಲ್ ದಾಳಿ ನಡೆಸಿದ ಪರಿಣಾಮ ಕನಿಷ್ಠ 30 ಪ್ಯಾಲೆಸ್ತೀನಿಯಾದವರು (Palestinians) ಸಾವನ್ನಪ್ಪಿದ್ದಾರೆ. ಜಬಾಲಿಯಾ ನಿರಾಶ್ರಿತರ ಶಿಬಿರದ ಅಲ್-ಶುಹಾದಾ ಪ್ರದೇಶದಲ್ಲಿ ಈ ಕಟ್ಟಡವಿತ್ತು. ಇದನ್ನೂ ಓದಿ: ಸಂಬಂಧವನ್ನು ಮರುಸ್ಥಾಪಿಸುತ್ತೇವೆ – NRIಗಳಿಗೆ ಕೆನಡಾ ವಿರೋಧ ಪಕ್ಷ ಭರವಸೆ

    ಎನ್‌ಕ್ಲೇವ್‌ನಲ್ಲಿ ಕಳೆದ 24 ಗಂಟೆಗಳಲ್ಲಿ ಇಸ್ರೇಲ್ ವೈಮಾನಿಕ ದಾಳಿಯಿಂದ 117 ಮಕ್ಕಳು ಸೇರಿದಂತೆ 266 ಪ್ಯಾಲೆಸ್ತೀನಿಯಾದವರು ಸಾವನ್ನಪ್ಪಿದ್ದಾರೆ ಎಂದು ಗಾಜಾದ ಆರೋಗ್ಯ ಸಚಿವಾಲಯ ತಿಳಿಸಿದೆ. ಹಮಾಸ್‌ನ ರಾಜಕೀಯ ಬ್ಯೂರೋ ಮುಖ್ಯಸ್ಥ ಇಸ್ಮಾಯಿಲ್ ಹನಿಯೆಹ್ ಮತ್ತು ಇರಾನ್ ವಿದೇಶಾಂಗ ಸಚಿವ ಹೊಸೈನ್ ಅಮೀರ್-ಅಬ್ದುಲ್ಲಾಹಿಯಾನ್ ಅವರು ಗಾಜಾದ ಮೇಲೆ ಇಸ್ರೇಲಿ ದಾಳಿಯನ್ನು ಹೇಗೆ ನಿಲ್ಲಿಸಬೇಕು ಎಂಬುದರ ಕುರಿತು ಚರ್ಚಿಸಿದ್ದಾರೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಗಾಜಾಪಟ್ಟಿಗೆ ಜಾಗತಿಕ ನೆರವು – ಪ್ಯಾಲೆಸ್ತೇನಿಗಳಿಗೆ ಆಶ್ರಯ ನೀಡದ ನೆರೆ ದೇಶಗಳು

    ಅಕ್ಟೋಬರ್ 7 ರಂದು ಪ್ಯಾಲೇಸ್ತೀನಿಯನ್ ಗುಂಪು ಹಮಾಸ್ ಇಸ್ರೇಲ್ ಮೇಲೆ ಹಠಾತ್ ದಾಳಿಯನ್ನು ಪ್ರಾರಂಭಿಸಿ 1,400 ಜನರನ್ನು ಕೊಂದ ನಂತರ ಇಸ್ರೇಲ್ ತನ್ನ ದಾಳಿಯನ್ನು ಪ್ರಾರಂಭಿಸಿದೆ. ಎರಡು ವಾರಗಳ ಬಾಂಬ್ ದಾಳಿಯಲ್ಲಿ ಕನಿಷ್ಠ 4,600 ಜನರು ಸಾವನ್ನಪ್ಪಿದ್ದಾರೆ ಎಂದು ಗಾಜಾದ ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಗೆಲುವಿನ ತನಕ ವಿರಮಿಸುವುದಿಲ್ಲ: ಇಸ್ರೇಲ್ ಪ್ರಧಾನಿ ಪ್ರತಿಜ್ಞೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಷರತ್ತು ಪಾಲಿಸಿದ್ರೆ ಒತ್ತೆಯಾಳುಗಳ ಬಿಡುಗಡೆ – ಇಸ್ರೇಲ್‌ ಜೊತೆ ಸಂಧಾನಕ್ಕೆ ಮುಂದಾದ ಇರಾನ್‌

    ಷರತ್ತು ಪಾಲಿಸಿದ್ರೆ ಒತ್ತೆಯಾಳುಗಳ ಬಿಡುಗಡೆ – ಇಸ್ರೇಲ್‌ ಜೊತೆ ಸಂಧಾನಕ್ಕೆ ಮುಂದಾದ ಇರಾನ್‌

    ಟೆಹರಾನ್‌: ಇಸ್ರೇಲ್-ಹಮಾಸ್‌ (Israel – Hamas) ಯುದ್ಧ 10ನೇ ದಿನಕ್ಕೆ ಕಾಲಿಟ್ಟ ಬೆನ್ನಲ್ಲೇ ಇರಾನ್‌ (Iran) ಈಗ ಷರತ್ತು ವಿಧಿಸಿ ಸಂಧಾನ ಮಾಡಲು ಮುಂದಾಗಿದೆ.

    ಗಾಜಾಪಟ್ಟಿ (Gaza Strip) ಮೇಲೆ ಇಸ್ರೇಲ್‌ ನಡೆಸುತ್ತಿರುವ ಏರ್‌ಸ್ಟ್ರೈಕ್‌ (Air Strike) ನಿಲ್ಲಿಸಿದರೆ ಇಸ್ರೇಲ್‌ ಒತ್ತೆಯಾಳುಗಳನ್ನು (Hostages) ಬಿಡುಗಡೆ ಮಾಡಲು ಪ್ರಯತ್ನ ನಡೆಸಲಾಗುವುದು ಎಂದು ಹೇಳಿದೆ.

     

    ಟೆಹರಾನ್‌ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಇರಾನ್ ವಿದೇಶಾಂಗ ಸಚಿವಾಲಯದ ವಕ್ತಾರ ನಾಸರ್ ಕನಾನಿ, ಗಾಜಾಪಟ್ಟಿ ಮೇಲೆ ಇಸ್ರೇಲ್ ತನ್ನ ವೈಮಾನಿಕ ದಾಳಿ ನಿಲ್ಲಿಸಿದರೆ ಹಮಾಸ್ ಒತ್ತೆಯಾಳಾಗಿ ಇಟ್ಟುಕೊಂಡಿರುವ ಇಸ್ರೇಲ್‌ ಪ್ರಜೆಗಳನ್ನು ಬಿಡುಗಡೆ ಮಾಡಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲು ನಾವು ಸಿದ್ಧರಿದ್ದೇವೆ ಎಂದು ಎಂದು ಹೇಳಿದ್ದಾರೆ.  ಇದನ್ನೂ ಓದಿ: 199 ಇಸ್ರೇಲಿ ಪ್ರಜೆಗಳನ್ನು ಒತ್ತೆಯಾಳಾಗಿಟ್ಟುಕೊಂಡ ಹಮಾಸ್

    ಹಮಾಸ್‌ ಉಗ್ರರಿಗೆ ನಾವು ಬೆಂಬಲ ನೀಡುವುದಿಲ್ಲ ಎಂದು ಇರಾನ್‌ ಹೇಳುತ್ತಾ ಬಂದಿದೆ. ಆದರೆ ಹಮಾಸ್‌ ಉಗ್ರರಿಗೆ ಶಸ್ತ್ರಾಸ್ತ್ರವನ್ನು ಇರಾನ್‌ ನೀಡಿದೆ ಎಂದು ಇಸ್ರೇಲ್‌ ನೇರವಾಗಿ ಹೇಳುತ್ತಾ ಬಂದಿದೆ.

    ತನ್ನ ಮೇಲೆ 5000 ರಾಕೆಟ್‌ ಉಡಾವಣೆ ಮಾಡಿದ ಬೆನ್ನಲ್ಲೇ ಇಸ್ರೇಲ್‌ ಹಮಾಸ್‌ ಉಗ್ರರನ್ನು ಸಂಪೂರ್ಣ ನಾಶ ಮಾಡಲು ಪಣತೊಟ್ಟಿದೆ. ಗಾಜಾ ಪಟ್ಟಿಯ ಮೇಲೆ ಬಾಂಬ್‌ ದಾಳಿ ನಡೆಸಿ ಉಗ್ರರ ಸಂಹಾರ ಮಾಡುತ್ತಿದೆ. ಯುದ್ಧವನ್ನು ಹಮಾಸ್‌ ಆರಂಭಿಸಿದರೂ ಈ ಯುದ್ಧವನ್ನು ನಾವೇ ನಿಲ್ಲಿಸುತ್ತೇವೆ ಎಂದು ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಘೋಷಿಸಿದ್ದಾರೆ.

     

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಹಮಾಸ್‌ನ ವೈಮಾನಿಕ ಶ್ರೇಣಿಯ ಮುಖ್ಯಸ್ಥ ಅಬು ಮುರಾದ್ ಹತ್ಯೆ ಮಾಡಿದ ಇಸ್ರೇಲ್ ಭದ್ರತಾ ಪಡೆ

    ಹಮಾಸ್‌ನ ವೈಮಾನಿಕ ಶ್ರೇಣಿಯ ಮುಖ್ಯಸ್ಥ ಅಬು ಮುರಾದ್ ಹತ್ಯೆ ಮಾಡಿದ ಇಸ್ರೇಲ್ ಭದ್ರತಾ ಪಡೆ

    ನವದೆಹಲಿ/ಟೆಲ್ ಅವಿವ್: ಹಮಾಸ್ ಬಂಡುಕೋರರ  (Hamas Militants) ಗುಂಪಿನ ಹಿರಿಯ ಸದಸ್ಯ, ಹಮಾಸ್‌ನ ವೈಮಾನಿಕ ಶ್ರೇಣಿಯ ಮುಖ್ಯಸ್ಥ (Senior Military Commander) ಅಬು ಮುರಾದ್‌ನನ್ನು (Abu Murad)  ಇಸ್ರೇಲ್ (Israel) ಭದ್ರತಾ ಪಡೆಗಳು ಹತ್ಯೆ ಮಾಡಿವೆ.

    ಶನಿವಾರ ಬೆಳಗ್ಗಿನ ಜಾವ ಗಾಜಾ ಪಟ್ಟಿಯಲ್ಲಿ ಇಸ್ರೇಲ್ ವಾಯುಸೇನೆ ನಡೆಸಿದ ಏರ್‌ಸ್ಟ್ರೈಕ್‌ನಲ್ಲಿ (Air Strike) ಹತ್ಯೆ ಮಾಡಲಾಗಿದೆ ಎಂದು ವರದಿಯಾಗಿದೆ. ಇಸ್ರೇಲ್ ರಕ್ಷಣಾ ಪಡೆಗಳು ಗಾಜಾ ಪಟ್ಟಿಯಲ್ಲಿ ರಾತ್ರಿಯಿಡೀ ವೈಮಾನಿಕ ದಾಳಿ ನಡೆಸಿತು. ದಾಳಿಯು ಭಯೋತ್ಪಾದಕ ಗುಂಪು ತನ್ನ ವೈಮಾನಿಕ ಚಟುವಟಿಕೆಯನ್ನು ನಿರ್ವಹಿಸುತ್ತಿದ್ದ ಪ್ರಧಾನ ಕಚೇರಿಯನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿತು. ಈ ದಾಳಿಯಲ್ಲಿ ಅಬು ಮುರಾದ್‌ನನ್ನು ಹತ್ಯೆಗೈಯಲಾಗಿದೆ ಎಂದು ವರದಿ ಮಾಡಿದೆ. ಇದನ್ನೂ ಓದಿ: ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿ – ಬಸ್‌ಗೆ ಸಿಲುಕಿ ಎಂಜಿನಿಯರಿಂಗ್ ವಿದ್ಯಾರ್ಥಿ ಸಾವು

    ಅಬು ಮುರಾದ್ ಕಳೆದ ಶನಿವಾರ ನಡೆದ ರಾಕೆಟ್ ದಾಳಿ ಮತ್ತು ಇಸ್ರೇಲಿ ಪ್ರಜೆಗಳ ಹತ್ಯಾಕಾಂಡದ ಸಮಯದಲ್ಲಿ ಬಂಡುಕೋರರನ್ನು ನಿರ್ದೇಶಿಸುವಲ್ಲಿ ದೊಡ್ಡ ಪಾತ್ರವನ್ನು ವಹಿಸಿದರು. ಅಕ್ಟೋಬರ್ 7ರಂದು ಇಸ್ರೇಲ್‌ಗೆ ಒಳನುಸುಳುವಿಕೆಗೆ ಕಾರಣವಾದ ಹಮಾಸ್‌ನ ಕಮಾಂಡೋ ಪಡೆಗಳಿಗೆ ಸೇರಿದ ಹತ್ತಾರು ಸೈಟ್‌ಗಳನ್ನು ಪ್ರತ್ಯೇಕ ದಾಳಿಗಳಲ್ಲಿ ಹೊಡೆದಿದೆ ಎಂದು ಐಡಿಎಫ್ ಹೇಳಿದೆ. ಇದನ್ನೂ ಓದಿ: ಬೃಹತ್ ದಾಳಿಯ ಮುನ್ಸೂಚನೆ ನೀಡಿದ ಇಸ್ರೇಲ್

    ಹಮಾಸ್ ಶನಿವಾರ ಇಸ್ರೇಲ್ ಮೇಲೆ ದಾಳಿ ಅರಂಭಿಸಿದ ಬಳಿಕ ದಶಕಗಳಲ್ಲೇ ಸಂಘರ್ಷದ ಅತಿದೊಡ್ಡ ಸಂಘರ್ಷ ಉಲ್ಬಣವಾಗಿದೆ. ದಾಳಿಯಲ್ಲಿ ಇಸ್ರೇಲ್‌ನಲ್ಲಿ 1,300 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಇಸ್ರೇಲ್ ಪ್ರತಿ-ವೈಮಾನಿಕ ದಾಳಿಯಲ್ಲಿ ಗಾಜಾದಲ್ಲಿ 1,530ಕ್ಕೂ ಹೆಚ್ಚು ಜನರನ್ನು ಕೊಂದಿದೆ. ಇಸ್ರೇಲ್‌ನಲ್ಲಿ ಸುಮಾರು 1,500 ಹಮಾಸ್ ಉಗ್ರಗಾಮಿಗಳು ಕೊಲ್ಲಲ್ಪಟ್ಟರು ಎಂದು ಇಸ್ರೇಲ್ ಹೇಳಿಕೊಂಡಿದೆ. ಇದನ್ನೂ ಓದಿ: ನಿಮ್ಮ ಜೀವ ಉಳಿಸಿಕೊಳ್ಳಲು ದಕ್ಷಿಣಕ್ಕೆ ತೆರಳಿ- ಗಾಝಾ ನಿವಾಸಿಗಳಿಗೆ ಇಸ್ರೇಲ್ ಮಹತ್ವದ ಸೂಚನೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಅಮೆರಿಕದಿಂದ ಇರಾನ್ ಸೇನಾಧಿಕಾರಿ ಹತ್ಯೆ- ಡೆಡ್ಲಿ ಡ್ರೋನ್ ವಿಶೇಷತೆ ಏನು? ಬೆಲೆ ಎಷ್ಟು?- ವಿಡಿಯೋ ನೋಡಿ

    ಅಮೆರಿಕದಿಂದ ಇರಾನ್ ಸೇನಾಧಿಕಾರಿ ಹತ್ಯೆ- ಡೆಡ್ಲಿ ಡ್ರೋನ್ ವಿಶೇಷತೆ ಏನು? ಬೆಲೆ ಎಷ್ಟು?- ವಿಡಿಯೋ ನೋಡಿ

    ಬಾಗ್ದಾದ್: ಅಮೆರಿಕ ಏರ್ ಸ್ಟ್ರೈಕ್ ನಡೆಸಿ ಇರಾನ್ ದೇಶದ ಸೇನಾ ಮುಖ್ಯಸ್ಥ ಖಾಸೀಂ ಸುಲೈಮನಿಯನ್ನು ಶುಕ್ರವಾರ ಕೊಲೆಗೈದಿತ್ತು. ಈ ದಾಳಿಯ ಬಳಿಕ ಇಡೀ ವಿಶ್ವವೇ ಬೆಚ್ಚಿ ಬಿದ್ದಿದ್ದು, ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ. ಈ ನಡುವೆ ದಾಳಿಗೆ ಅಮೆರಿಕ ಸೇನೆ ಬಳಿಸಿದ ಮಾನವ ರಹಿತ ಡ್ರೋನ್ ವಿಶ್ವದ ಗಮನ ಸೆಳೆದಿದೆ.

    ಅಮೆರಿಕ ಸೇನೆ ತನ್ನ ವಿರೋಧಿಗಳ ವಿರುದ್ಧದ ಪ್ರಮುಖ ಕಾರ್ಯಾಚರಣೆಯಲ್ಲಿ ಎಂಕ್ಯೂ-9 ಹೆಸರಿನ ರೀಪರ್ ಡ್ರೋನ್ ಬಳಕೆ ಮಾಡುತ್ತದೆ. ಇದು ಪ್ರಿಡೇಟರ್ ಡ್ರೋನ್ ಎಂದೇ ಖ್ಯಾತವಾಗಿದ್ದು, ಪ್ರಿಡೇಟರ್ ಎಂದರೇ ಬೇಟೆಗಾರ ಎಂಬರ್ಥವನ್ನು ಹೊಂದಿದೆ. ಎದುರಾಳಿನ ನೆಲದಲ್ಲಿ ಗೂಢಾಚಾರ ಮತ್ತು ನಿಖರ ದಾಳಿ ನಡೆಸುವ 2 ಸಾಮರ್ಥ್ಯಗಳನ್ನು ಹೊಂದಿರುವುದು ಎಂಕ್ಯೂ-9 ಡ್ರೋನ್‍ನ ವಿಶೇಷತೆಯಾಗಿದೆ.

    ಎಂಕ್ಯೂ-9 ರೀಪರ್ ಡ್ರೋನ್ ನಲ್ಲಿ ‘ಎಂ’ ಅಕ್ಷರ ಅಮೆರಿಕ ರಕ್ಷಣಾ ಪಡೆಗಳ ಬಹುಪಾತ್ರವನ್ನು(Multi Role)ಪ್ರತಿನಿಧಿಸಿದರೆ, ‘ಕ್ಯೂ’ ಅಕ್ಷರವೂ ಮಾನವ ರಹಿತ ಹಾಗೂ 9 ಸಂಖ್ಯೆಯೂ ಈ ಮಾದರಿಯ ಡ್ರೋನ್ ವಿಮಾನಗಳ 9ನೇ ಸರಣಿಯನ್ನು ಪ್ರತಿನಿಧಿಸುತ್ತದೆ. ಎಂಕ್ಯೂ-9 ರೀಪರ್ ಡ್ರೋನ್ ಸುಧಾರಿತ ಕ್ಯಾಮೆರಾ ಮತ್ತು ಕ್ಷಿಪಣಿಗಳನ್ನು ಹೊಂದಿದೆ. ಆಧುನಿಕ ತಂತ್ರಜ್ಞಾನವನು ಹೊಂದಿರುವ ಡ್ರೋನ್ ನಿರ್ಧಿಷ್ಟ ಗುರಿಯನ್ನು ತಲುಪಲು ವಿಷ್ಯುವಲ್ ಸೆನ್ಸರ್ ಹೊಂದಿದೆ. ದೂರದಲ್ಲಿದ್ದುಕೊಂಡೇ ಇಬ್ಬರ (ಒಬ್ಬರು ಪೈಲಟ್, ಸೆನ್ಸರ್ ಆಪರೇಟರ್) ಮೂಲಕ ಈ ಡ್ರೋನ್ ನಿಯಂತ್ರಿಸಬಹುದಾಗಿದೆ. ಇದನ್ನು ಓದಿ: ದೆಹಲಿ ದಾಳಿಗೆ ನೆರವು ನೀಡಿದ್ದ ಸುಲೈಮನಿಯನ್ನು ಹತ್ಯೆ ಮಾಡಿದ್ದೇವೆ – ಡೊನಾಲ್ಡ್ ಟ್ರಂಪ್

    ಡ್ರೋನ್ ವಿಶೇಷತೆಗಳು: ಎಂಕ್ಯೂ-9 ರೀಪರ್ ಡ್ರೋನ್ 2,200 ಲೀಟರ್  ಸಾಮರ್ಥ್ಯದ ಇಂಧನ ಟ್ಯಾಂಕ್ ಹೊಂದಿದೆ. ಟೇಕ್ ಆಫ್ ವೇಳೆ ಗರಿಷ್ಠ 4,760 ಕೆಜಿ ತೂಕ ಆಗಿದ್ದು, 1,701 ಕೆಜಿ ತೂಕ ಶಸ್ತ್ರಾಸ್ತ್ರಗಳನ್ನು ಒತ್ತು ಸಾಗುವ ಸಾಮರ್ಥ್ಯವನ್ನು ಹೊಂದಿದೆ. ಭೂಮಿಯಿಂದ 50 ಸಾವಿರ ಅಡಿ ಎತ್ತರದಲ್ಲಿ ಹಾರಾಟ ಮಾಡುವ ಸಾಮರ್ಥ್ಯವನ್ನು ಹೊಂದಿದ್ದು, 1,150 ಮೈಲಿ (1,850 ಕಿ.ಮೀ) ದೂರದ ಗುರಿಯನ್ನು ಹೊಡೆಯುವ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಡ್ರೋನ್ 66 ಅಡಿ ಅಗಲ, 36 ಅಡಿ ಉದ್ದ ಹಾಗೂ 12.5 ಅಡಿ ಎತ್ತರವನ್ನು ಹೊಂದಿದೆ.

    ಜನರಲ್ ಆಟೋವಿಕ್ಸ್ ಏರೋನಾಟಿಕಲ್ ಸಿಸ್ಟಮ್ಸ್ ಐಎನ್‍ಸಿ ಸಂಸ್ಥೆಯೂ ಎಂಕ್ಯೂ-9 ರೀಪರ್ ಡ್ರೋನ್‍ಗಳನ್ನು ಉತ್ಪಾದಿಸುತ್ತಿದೆ. ಒಂದು ಡ್ರೋನ್ ಯ್ಯೂನಿಟ್‍ಗೆ 2016 ರಂತೆ 64.2 ಮಿಲಿಯನ್ ಡಾಲರ್(ಅಂದಾಜು 460.70 ಕೋಟಿ) ವೆಚ್ಚವಾಗಲಿದ್ದು, ಒಂದು ಯ್ಯೂನಿಟ್ ಏರ್ ಕ್ರಾಫ್ಟ್ ಹಾಗೂ ಸೆನ್ಸರ್ ಗಳನ್ನು ಹೊಂದಿರುತ್ತದೆ. ಇದನ್ನು ಓದಿ: ಅಮೆರಿಕದಿಂದ ಏರ್ ಸ್ಟ್ರೈಕ್ – ಕಚ್ಚಾ ತೈಲ ಬೆಲೆ ಏರಿಕೆ

    ಎಂಕ್ಯೂ-9 ರೀಪರ್ ಡ್ರೋನ್ ಮೂಲಕ ಲೇಸರ್ ಗೈಡೆಡ್ ಕ್ಷಿಪಣಿಗಳನ್ನು ಉಡಾಯಿಸಬಹುದಾಗಿದೆ. ಈ ಕ್ಷಿಪಣಿಗಳು ನಿಖರ ಹಾಗೂ ಕಡಿಮೆ ಹಾನಿಯನ್ನು ಮಾಡುವ ಸಾಮರ್ಥ್ಯವನ್ನು ಹೊಂದಿದೆ. ಗಂಟೆಗೆ 400 ಕಿಮೀ ವೇಗದಲ್ಲಿ ಹಾರುವ ಹಾಗೂ ಸತತ 27 ಗಂಟೆ ಹಾರಬಲ್ಲದು. ಅಮೆರಿಕ ನೌಕಾ ಪಡೆಯಲ್ಲಿ ಎಂಕ್ಯೂ-9 ರೀಪರ್ ಡ್ರೋನ್ ಗಳನ್ನು ಬಳಕೆ ಮಾಡಲಾಗುತ್ತಿದೆ. ವಿಶ್ವದ ಅತಿಹೆಚ್ಚು ಶಕ್ತಿಶಾಲಿ ಡ್ರೋನ್‍ಗಳಲ್ಲಿ ಎಂಕ್ಯೂ-9 ಸ್ಥಾನ ಪಡೆದಿದೆ.

  • 41 ಸಾವಿರ ಗಡಿ ದಾಟಿತು – ಗಗನಕ್ಕೇರಿದ ಚಿನ್ನದ ಬೆಲೆ

    41 ಸಾವಿರ ಗಡಿ ದಾಟಿತು – ಗಗನಕ್ಕೇರಿದ ಚಿನ್ನದ ಬೆಲೆ

    ಮುಂಬೈ: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆಯಾಗಿದ್ದು, ಒಂದೇ ದಿನ 24 ಕ್ಯಾರೆಟ್‍ನ 10 ಗ್ರಾಂ ಚಿನ್ನದ ಬೆಲೆ 710 ರೂ. ಏರಿಕೆಯಾಗಿ 41,130 ರೂ.ಗೆ ತಲುಪಿದೆ. ಇದು ಚಿನ್ನದ ಬೆಲೆಯ ಸಾರ್ವಕಾಲಿಕ ದಾಖಲೆಯಾಗಿದೆ.

    ಇದೇ ಮೊದಲ ಬಾರಿಗೆ ದೇಶದಲ್ಲಿ 24 ಕ್ಯಾರೆಟ್‍ನ 10 ಗ್ರಾಂ ಚಿನ್ನದ ಬೆಲೆ 41 ಸಾವಿರ ಗಡಿಯನ್ನು ದಾಟಿದ್ದು, 10 ಗ್ರಾಂ ಚಿನ್ನದ ಬೆಲೆ 2 ಸಾವಿರದಷ್ಟು ಹೆಚ್ಚಿದೆ. ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾದ ಬಳಿಕ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಶೇ.1.10 ರಷ್ಟು ಹೆಚ್ಚಳವಾಗಿದ್ದರೆ, 1 ಕೆಜಿ ಬೆಳ್ಳಿಯ ಬೆಲೆಯಲ್ಲಿ ಶೇ.0.83ರಷ್ಟು ಏರಿಕೆಯಾಗಿದೆ.

    ಡಿಸೆಂಬರ್ ತಿಂಗಳ ಅಂತ್ಯದಿಂದಲೂ ಚಿನ್ನದ ಬೆಲೆ ಏರಿಕೆಯಾಗುತ್ತಿದ್ದು, ಇದು ಆಭರಣಕೊಳ್ಳುವವರಿಗೆ ನಿರಾಸೆಯನ್ನು ಮೂಡಿಸಿದೆ. ಅಮೆರಿಕ ಇರಾನ್ ದೇಶದ ಮೇಲೆ ದಾಳಿ ನಡೆಸಿದ ಹಿನ್ನೆಲೆಯಲ್ಲಿ ಚಿನ್ನ ಹಾಗೂ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಮೇಲೆ ಪರಿಣಾಮ ಬೀರಿದೆ. ಮುಂದಿನ ದಿನಗಳಲ್ಲಿ ಚಿನ್ನದ ಬೆಲೆಯಲ್ಲಿ ಮತ್ತಷ್ಟು ಏರಿಕೆಯಾಗುವ ನಿರೀಕ್ಷೆಯನ್ನು ಆಭರಣ ಅಂಗಡಿ ಮಾಲೀಕರು ವ್ಯಕ್ತಪಡಿಸಿದ್ದಾರೆ. ಇದನ್ನು ಓದಿ:  ಅಮೆರಿಕದಿಂದ ಏರ್ ಸ್ಟ್ರೈಕ್ – ಇರಾನ್ ಸೇನಾಧಿಕಾರಿ ಹತ್ಯೆ, ಕಚ್ಚಾ ತೈಲ ಬೆಲೆ ಏರಿಕೆ

    ಭಾರತದ ಜನರು ಸಂಪೂರ್ಣವಾಗಿ ಚಿನ್ನದ ಆಮದು ಮೇಲೆ ಅವಲಂಬಿತವಾಗಿದ್ದು, ಪರಿಣಾಮ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿಯಾಗುವ ನೇರ ಪರಿಣಾಮವನ್ನು ಎದುರಿಸಬೇಕಿದೆ. ಚೀನಾ ಹಾಗೂ ಅಮೆರಿಕ ನಡುವೆ ನಡೆಯುತ್ತಿರುವ ಟ್ರೆಡ್ ವಾರ್ ಪರಿಣಾಮವೂ ಚಿನ್ನದ ಬೆಲೆಯ ಮೇಲೆ ಬೀರುತ್ತಿದೆ. ಭಾರತದ ವಿಶ್ವದಲ್ಲೇ ಅತಿ ದೊಡ್ಡ ಚಿನ್ನ ಆಮದು ಮಾಡುವ ದೇಶವಾಗಿದೆ. ಆದರೆ ಕಳೆದ ಕೆಲ ವರ್ಷಗಳಿಂದ ಭಾರತದ ಚಿನ್ನದ ಆಮದು ಪ್ರಮಾಣ ಕಡಿಮೆಯಾಗಿದೆ. 2019-20ರ ಅಂಕಿ ಅಂಶಗಳ ಅನ್ವಯ ಚಿನ್ನದ ಆಮದು ಪ್ರಮಾಣ 1.43 ಲಕ್ಷ ಕೋಟಿಗಳಷ್ಟಿದೆ. ವಾರ್ಷಿಕವಾಗಿ 800 ರಿಂದ 900 ಟನ್‍ನಷ್ಟು ಚಿನ್ನವನ್ನು ಆಮದು ಮಾಡಿಕೊಳ್ಳಲಾಗುತ್ತಿದೆ ಎಂದು ವಾಣಿಜ್ಯ ಸಚಿವಾಲಯ ಹೇಳಿದೆ.

    ತೈಲ ಬೆಲೆ ಏರಿಕೆ:
    ಇರಾನ್ ಮೇಲೆ ಅಮೆರಿಕ ದಾಳಿ ನಡೆಸಿದ ಬೆನ್ನಲ್ಲೇ ಕಚ್ಚಾ ತೈಲದ ಬೆಲೆ ದಿಢೀರ್ ಏರಿಕೆಯಾಗಿದೆ. ಬ್ರೆಂಟ್ ಕಚ್ಚಾ ತೈಲದ ಬೆಲೆ ಶೇ.4.39 ರಷ್ಟು ಏರಿಕೆಯಾಗಿದ್ದು ಒಂದು ಬ್ಯಾರೆಲ್ ಕಚ್ಚಾ ತೈಲದ ಬೆಲೆ 69.16 ಡಾಲರ್(ಅಂದಾಜು 4,900 ರೂ.) ತಲುಪಿದೆ. ಈ ಹಿಂದೆ ಒಂದು ಬ್ಯಾರೆಲ್ ಕಚ್ಚಾ ತೈಲದ ಬೆಲೆ 66.25 ಡಾಲರ್(ಅಂದಾಜು 4,700 ರೂ.) ಇತ್ತು.

  • ಅಮೆರಿಕದಿಂದ ಏರ್ ಸ್ಟ್ರೈಕ್ – ಇರಾನ್ ಸೇನಾಧಿಕಾರಿ ಹತ್ಯೆ, ಕಚ್ಚಾ ತೈಲ ಬೆಲೆ ಏರಿಕೆ

    ಅಮೆರಿಕದಿಂದ ಏರ್ ಸ್ಟ್ರೈಕ್ – ಇರಾನ್ ಸೇನಾಧಿಕಾರಿ ಹತ್ಯೆ, ಕಚ್ಚಾ ತೈಲ ಬೆಲೆ ಏರಿಕೆ

    ಬಾಗ್ದಾದ್: ಇರಾನ್ ಮೇಲೆ ಅಮೆರಿಕ ಶುಕ್ರವಾರ ದಾಳಿ ನಡೆಸಿ ಇರಾನಿನ ಉನ್ನತ ಸೇನಾಧಿಕಾರಿ ಮತ್ತು ಮಿಲಿಟರಿ ಪಡೆಯ ಉಪ ಮುಖ್ಯಸ್ಥನನ್ನು ಹತ್ಯೆ ಮಾಡಿದೆ.

    ಇಂದು ನಸುಕಿನ ಜಾವ ಅಮೆರಿಕ ಸೇನೆ ಡ್ರೋನ್ ದಾಳಿ ನಡೆಸಿ ಬಾಗ್ದಾದ್ ವಿಮಾನ ನಿಲ್ದಾಣ ರಸ್ತೆಯಲ್ಲಿ ಇರಾನಿನ ಉನ್ನತ ಸೇನಾಧಿಕಾರಿ ಜನರಲ್ ಕಸ್ಸೆಮ್ ಸುಲೈಮಾನಿ ಮತ್ತು ಮಿಲಿಟರಿ ಪಡೆಯ ಉಪ ಮುಖ್ಯಸ್ಥ ಅಬು ಮಹ್ದಿ ಅಲ್-ಮುಹಂಡೇಸ್ ರನ್ನು ಕೊಂದು ಹಾಕಿದೆ.

    ಇರಾನಿನ ಉನ್ನತ ಸೇನಾಧಿಕಾರಿ ಮತ್ತು ಇರಾನ್ ಮಿಲಿಟರಿ ಪಡೆಯ ಉಪ ಮುಖ್ಯಸ್ಥನನ್ನು ಹತ್ಯೆ ಮಾಡಿದ ನಂತರ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಮೆರಿಕದ ರಾಷ್ಟ್ರಧ್ವಜ ಫೋಟೋವನ್ನು ಅಪ್ಲೋಡ್ ಮಾಡಿ ಟ್ವೀಟ್ ಮಾಡಿದ್ದಾರೆ.

    ದಾಳಿ ನಡೆಸಿದ್ದು ಯಾಕೆ?
    ಅಮೆರಿಕ ಸೇನೆ ನಡೆಸಿದ್ದ ವಾಯುದಾಳಿಯಲ್ಲಿ ಇರಾನ್ ಸೇನೆಯಿಂದ ತರಬೇತಿ ಪಡೆದಿದ್ದ ಪಾಪ್ಯುಲರ್ ಮೊಬಿಲೈಜೇಷನ್ ಫೋರ್ಸಸ್ (ಪಿಎಂಎಫ್) 25 ಮಂದಿ ಹತ್ಯೆಯಾಗಿದ್ದರು. ಈ ಕಾರಣಕ್ಕೆ ಮಂಗಳವಾರ ಬಾಗ್ದಾದ್‍ನಲ್ಲಿ ಅಮೆರಿಕ ರಾಯಭಾರ ಕಚೇರಿಯ ಮೇಲೆ ದಾಳಿ ನಡೆದು ಧ್ವಂಸಗೊಳಿಸುವ ಪ್ರಯತ್ನ ನಡೆದಿತ್ತು. ಈ ದಾಳಿಯನ್ನು ಅಮೆರಿಕ ಖಂಡಿಸಿತ್ತು. ಅಲ್ಲದೇ ಇದಕ್ಕೆ ಪ್ರತೀಕಾರ ತೀರಿಸುವುದಾಗಿ ಹೇಳಿತ್ತು.

    ಈ ಸಂಬಂಧ ಟ್ವಿಟ್ಟರಿನಲ್ಲಿ ಶ್ವೇತಭವನ ಪ್ರತಿಕ್ರಿಯಿಸಿ, ಜನರಲ್ ಕಸ್ಸೆಮ್ ಸುಲೈಮಾನಿ ಅಮೆರಿಕದ ರಾಯಭಾರ ಕಚೇರಿಯ ಅಧಿಕಾರಿಗಳ ಮೇಲೆ ದಾಳಿ ನಡೆಸಲು ಸಂಚು ರೂಪಿಸಿದ್ದ ಹಿನ್ನೆಲೆಯಲ್ಲಿ ವಿದೇಶದಲ್ಲಿರುವ ಅಮೆರಿಕ ಪ್ರಜೆಗಳ ರಕ್ಷಣೆಗಾಗಿ ಡೊನಾಲ್ಡ್ ಟ್ರಂಪ್ ಅವರ ಆದೇಶದ ಅನ್ವಯ ಈ ದಾಳಿ ನಡೆಸಲಾಗಿದೆ ಎಂದು ಟ್ವೀಟ್ ಮಾಡಿದೆ.

    ದಾಳಿಯನ್ನು ಇರಾನ್ ಅಧ್ಯಕ್ಷ ಹಸನ್ ರೂಹಾನಿ ಖಂಡಿಸಿದ್ದು, ದೇಶಕ್ಕಾಗಿ ಕಸ್ಸೆಮ್ ಸುಲೈಮಾನಿ ಪ್ರಾಣವನ್ನು ತೆತ್ತಿದ್ದಾರೆ. ಈ ತ್ಯಾಗವನ್ನು ನಾವು ಮರೆಯುವುದಿಲ್ಲ. ಶೀಘ್ರವೇ ಪ್ರತೀಕಾರವನ್ನು ತೀರಿಸಲಾಗುವುದು ಎಂದು ಹೇಳಿದ್ದಾರೆ. ಹಸನ್ ರೂಹಾನಿಯ ನಂತರ ಇರಾನಿನ ನಂಬರ್ 2 ವ್ಯಕ್ತಿ ಜನರಲ್ ಕಸ್ಸೆಮ್ ಸುಲೈಮಾನಿ ಆಗಿದ್ದರು.

    ತೈಲ ಬೆಲೆ ಏರಿಕೆ:
    ಇರಾನ್ ಮೇಲೆ ಅಮೆರಿಕ ದಾಳಿ ನಡೆಸಿದ ಬೆನ್ನಲ್ಲೇ ಕಚ್ಚಾ ತೈಲದ ಬೆಲೆ ದಿಢೀರ್ ಏರಿಕೆಯಾಗಿದೆ. ಬ್ರೆಂಟ್ ಕಚ್ಚಾ ತೈಲದ ಬೆಲೆ ಶೇ.4.39 ರಷ್ಟು ಏರಿಕೆಯಾಗಿದ್ದು ಒಂದು ಬ್ಯಾರೆಲ್ ಕಚ್ಚಾ ತೈಲದ ಬೆಲೆ 69.16 ಡಾಲರ್(ಅಂದಾಜು 4,900 ರೂ.) ತಲುಪಿದೆ. ಈ ಹಿಂದೆ ಒಂದು ಬ್ಯಾರೆಲ್ ಕಚ್ಚಾ ತೈಲದ ಬೆಲೆ 66.25 ಡಾಲರ್(ಅಂದಾಜು 4,700 ರೂ.) ಇತ್ತು.

  • ಅಭಿನಂದನ್ ಕುರಿತು ಸಿನಿಮಾ ತಯಾರಿಯಲ್ಲಿ ವಿವೇಕ್ ಒಬೇರಾಯ್-ಸೋಶಿಯಲ್ ಮೀಡಿಯಾದಲ್ಲಿ ಟ್ರೋಲ್

    ಅಭಿನಂದನ್ ಕುರಿತು ಸಿನಿಮಾ ತಯಾರಿಯಲ್ಲಿ ವಿವೇಕ್ ಒಬೇರಾಯ್-ಸೋಶಿಯಲ್ ಮೀಡಿಯಾದಲ್ಲಿ ಟ್ರೋಲ್

    ಮುಂಬೈ: ನಟ ವಿವೇಕ್ ಒಬೇರಾಯ್ ಭಾರತೀಯ ವಾಯುಸೇನೆಯ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ಅವರ ಕುರಿತ ಸಿನಿಮಾ ಮಾಡಲು ಮುಂದಾಗಿದ್ದಾರೆ. ಈ ಸಂಬಂಧ ಶುಕ್ರವಾರ ಬಾಲಿವುಡ್ ಸಿನಿಮಾ ವಿಮರ್ಶಕ ತರಣ್ ಆದರ್ಶ್ ಟ್ವೀಟ್ ಮೂಲಕ ವಿಷಯವನ್ನು ರಿವೀಲ್ ಮಾಡಿದ್ದರು. ಸಿನಿಮಾ ವಿಷಯ ಹೊರ ಬೀಳುತ್ತಿದ್ದಂತೆ ಸೋಶಿಯಲ್ ಮೀಡಿಯಾದಲ್ಲಿ ಜನರು ವಿವೇಕ್ ಒಬೇರಾಯ್ ಅವರನ್ನು ಟ್ರೋಲ್ ಮಾಡಲಾರಂಭಿಸಿದ್ದಾರೆ.

    ವಿವೇಕ್ ಒಬೇರಾಯ್ ಬಾಲಕೋಟ್ ಏರ್ ಸ್ಟ್ರೈಕ್ ಕಥೆಯಾದರಿತ ಸಿನಿಮಾದಲ್ಲಿ ನಟಿಸುತ್ತಿದ್ದು, ‘ಬಾಲಕೋಟ್: ದಿ ಟ್ರ್ಯೂ ಸ್ಟೋರಿ’ ಎಂದು ಟೈಟಲ್ ಅಂತಿಮಗೊಳಿಸಲಾಗಿದೆ. ಜಮ್ಮು, ಕಾಶ್ಮೀರ, ದೆಹಲಿ ಮತ್ತು ಆಗ್ರಾದಲ್ಲಿ ಸಿನಿಮಾದ ಚಿತ್ರೀಕರಣ ನಡೆಯಲಿದೆ. ಈ ವರ್ಷದ ಅಂತಿಮದಲ್ಲಿ ಸಿನಿಮಾ ಶೂಟಿಂಗ್ ಆರಂಭಗೊಳ್ಳಲಿದೆ. ಹಿಂದಿ, ತಮಿಳು ಮತ್ತು ತೆಲಗು ಭಾಷೆಯಲ್ಲಿ ಸಿನಿಮಾ ಬಿಡುಗಡೆಯಾಗಲಿದೆ ಎಂದು ತರಣ್ ಆದರ್ಶ್ ಟ್ವೀಟ್ ಮೂಲಕ ತಿಳಿಸಿದ್ದರು.

    ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಜೀವನಾಧರಿತ ಸಿನಿಮಾದಲ್ಲಿ ವಿವೇಕ್ ಒಬೇರಾಯ್ ಪ್ರಧಾನಿಗಳ ಪಾತ್ರದಲ್ಲಿ ನಟಿಸಿದ್ದರು. ಆದ್ರೆ ಸಿನಿಮಾ ಬಾಕ್ಸ್ ಆಫೀಸ್‍ನಲ್ಲಿ ಸದ್ದು ಮಾಡಲು ವಿಫಲವಾಗಿತ್ತು. ಮೋದಿಯವರ ಪಾತ್ರಕ್ಕೆ ಜೀವ ತುಂಬುವಲ್ಲಿ ವಿವೇಕ್ ಒಬೇರಾಯ್ ಯಶಸ್ವಿಯಾಗಿರಲಿಲ್ಲ ಎಂಬ ಮಾತುಗಳು ಸಾಮಾಜಿಕ ಜಾಲತಾಣಗಳಲ್ಲಿ ಕೇಳಿ ಬಂದಿದ್ದವು. ಇದೀಗ ವಿಂಗ್ ಕಮಾಂಡರ್ ಪಾತ್ರದಲ್ಲಿ ಅಭಿನಂದನ್ ಪಾತ್ರದಲ್ಲಿ ವಿವೇಕ್ ಒಬೇರಾಯ್ ನಟಿಸಲಿದ್ದಾರೆ ಎನ್ನಲಾಗುತ್ತಿದ್ದು, ನೆಟ್ಟಿಗರು ಬೇಸರ ವ್ಯಕ್ತಪಡಿಸಿದ್ದಾರೆ.

    ಸಿನಿಮಾ ಕುರಿತು ಪ್ರತಿಕ್ರಿಯಿಸಿರುವ ವಿವೇಕ್ ಒಬೇರಾಯ್, ಓರ್ವ ಭಾರತೀಯ ಮತ್ತು ದೇಶಭಕ್ತನಾಗಿ ಹಾಗೂ ಸಿನಿಮಾ ಉದ್ಯಮದ ಸದಸ್ಯನಾಗಿ ಈ ರೀತಿಯ ಸಿನಿಮಾ ಮಾಡಲು ನನಗೆ ಹೆಮ್ಮೆಯಾಗುತ್ತಿದೆ. ನಮ್ಮ ಸೇನೆಯ ಶಕ್ತಿ ಮತ್ತು ಸಾಮಥ್ರ್ಯ ಬಿಂಬಿಸುವ ಸಿನಿಮಾ ಇದಾಗಿದೆ. ಅಭಿನಂದನ್ ಸೇರಿದಂತೆ ಭಾರತೀಯ ವಾಯುಸೇನೆಯ ಅಧಿಕಾರಿಗಳ ಪಾತ್ರಗಳು ಸಿನಿಮಾದ ಲೀಡ್ ನಲ್ಲಿ ಇರಲಿವೆ ಎಂದು ಹೇಳಿದ್ದಾರೆ.

    https://twitter.com/sagarcasm/status/1164791354582417409

    ಬಾಲಕೋಟ್ ಏರ್ ಸ್ಟ್ರೈಕ್ ಭಾರತೀಯ ವಾಯು ಸೇನೆ ನಡೆಸಿದ ದಾಳಿಯಲ್ಲಿ ಒಂದಾಗಿದೆ. ಪುಲ್ವಾಮಾ ದಾಳಿಯಿಂದ ಏರ್ ಸ್ಟ್ರೈಕ್ ವರೆಗಿನ ಎಲ್ಲ ವಿಷಯಗಳ ಬಗ್ಗೆ ಓದುತ್ತಾ ಬಂದಿದ್ದೇನೆ. ಈ ಸಿನಿಮಾ ಮೂಲಕ ಏರ್ ಸ್ಟ್ರೈಕ್ ದಾಳಿಯ ಸಂಪೂರ್ಣ ಮಾಹಿತಿಯನ್ನು ಚಿತ್ರದಲ್ಲಿ ನೀಡಲು ಪ್ರಯತ್ನಿಸಲಾಗುಗುವುದು ಎಂದು ವಿವೇಕ್ ತಿಳಿಸಿದ್ದಾರೆ.

    ಸಿನಿಮಾ ಘೋಷಣೆ ಬಳಿಕ ನೆಟ್ಟಿಗರು, ಚಿತ್ರದ ನಿರ್ದೇಶಕರು ವಿವೇಕ್ ಬದಲಾಗಿ ಅಕ್ಷಯ್ ಕುಮಾರ್ ಅವರನ್ನು ಆಯ್ಕೆ ಮಾಡಿಕೊಳ್ಳಬಹುದಿತ್ತು ಎಂದು ಸಲಹೆ ನೀಡಿದ್ದಾರೆ. ಕೆಲವರು ಅಜಯ್ ದೇವಗನ್, ಹೃತಿಕ್ ರೋಶನ್ ಅವರ ಹೆಸರನ್ನು ಸೂಚಿಸಿದ್ದಾರೆ. ಈ ಹಿಂದೆ ಉರಿ ಚಿತ್ರದಲ್ಲಿ ವಿಕ್ಕಿ ಕೌಶಲ್ ಪಾತ್ರಕ್ಕೆ ನ್ಯಾಯ ಒದಗಿಸಿದ್ದರು ಎಂದು ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದಾರೆ.

    https://twitter.com/ParijatSingh23/status/1164784448690241537