Tag: Air Traffic Control

  • ರಾಹುಲ್‌ ಹೆಲಿಕಾಪ್ಟರ್‌ ಟೇಕ್ ಆಫ್‌ಗೆ ಅನುಮತಿ ವಿಳಂಬ – ಎಟಿಸಿ ವಿರುದ್ಧ ಕಾಂಗ್ರೆಸ್‌ ಕಿಡಿ

    ರಾಹುಲ್‌ ಹೆಲಿಕಾಪ್ಟರ್‌ ಟೇಕ್ ಆಫ್‌ಗೆ ಅನುಮತಿ ವಿಳಂಬ – ಎಟಿಸಿ ವಿರುದ್ಧ ಕಾಂಗ್ರೆಸ್‌ ಕಿಡಿ

    ರಾಂಚಿ: ಹೆಲಿಕಾಪ್ಟರ್‌ ಟೇಕ್ ಆಫ್‌ಗೆ ಏರ್ ಟ್ರಾಫಿಕ್ ಕಂಟ್ರೋಲ್ (Air Traffic Control) ತಡವಾಗಿ ಅನುಮತಿ ನೀಡಿದ ಪರಿಣಾಮ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರು (Rahul Gandhi) 45 ನಿಮಿಷಗಳ ಕಾಲ ಹೆಲಿಕಾಪ್ಟರ್‌ನಲ್ಲೇ ಕಾದು ಕುಳಿತ ಘಟನೆ ಜಾರ್ಖಂಡ್‌ನ (Jharkhand) ಗೊಡ್ಡಾದಲ್ಲಿ ನಡೆದಿದೆ.

    ರಾಜ್ಯದ ವಿಧಾನಸಭಾ ಚುನಾವಣೆಯ ಅಂತಿಮ ಹಂತದ ಪ್ರಚಾರಕ್ಕೆ ಅವರು ತೆರಳಿದ್ದರು. ಈ ವೇಳೆ ಅವರ ಹೆಲಿಕಾಪ್ಟರ್‌ ಟೇಕ್ ಆಫ್‌ಗೆ ತಡವಾಗಿ ಅನುಮತಿ ನೀಡಲಾಗಿದೆ. ಇದರಿಂದ ಸುಮಾರು 45 ನಿಮಿಷಗಳ ಕಾಲ ರಾಹುಲ್‌ ಹೆಲಿಕಾಪ್ಟರ್‌ನಲ್ಲೇ ಕಾದು ಕುಳಿತಿದ್ದಾರೆ.

    ಈ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್‌ (Congress), ರಾಹುಲ್‌ ಗಾಂಧಿ ಪ್ರಚಾರಕ್ಕೆ ಸಮಸ್ಯೆ ಉಂಟು ಮಾಡುವ ಉದ್ದೇಶದಿಂದ ಹೀಗೆ ಮಾಡಲಾಗಿದೆ. ಗೊಡ್ಡಾದಿಂದ ಸುಮಾರು 150 ಕಿಲೋಮೀಟರ್‌ಗಳಷ್ಟು ದೂರದಲ್ಲಿರುವ ಚಕೈಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ (Narendra Modi) ರ‍್ಯಾಲಿ ಇತ್ತು. ಅವರ ಕಾರ್ಯಕ್ರಮಕ್ಕೆ ಎಟಿಸಿ ಆದ್ಯತೆ ನೀಡಿದೆ ಎಂದು ಆರೋಪಿಸಿದೆ.

    ಶಾಸಕಿ ಮತ್ತು ಮಹಾಗಾಮಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ದೀಪಿಕಾ ಪಾಂಡೆ ಸಿಂಗ್ ಪ್ರತಿಕ್ರಿಯಿಸಿ, ಪ್ರಧಾನಿ ದಿಯೋಗಢ್‌ನಲ್ಲಿ ಇದ್ದಿದ್ದರಿಂದ ರಾಹುಲ್ ಗಾಂಧಿಗೆ ಆ ಪ್ರದೇಶವನ್ನು ದಾಟಲು ಅವಕಾಶ ನೀಡಲಿಲ್ಲ. ಕಾಂಗ್ರೆಸ್ 70 ವರ್ಷಗಳ ಕಾಲ ದೇಶವನ್ನು ಆಳಿತ್ತು. ಆಗ ಯಾವ ವಿರೋಧ ಪಕ್ಷದ ನಾಯಕರ ವಿರುದ್ಧವೂ ಈ ರೀತಿ ನಡೆದುಕೊಂಡಿಲ್ಲ. ಈ ನಡೆಯನ್ನು ಒಪ್ಪಲು ಸಾಧ್ಯವಿಲ್ಲ ಎಂದು ಕಿಡಿಕಾರಿದ್ದಾರೆ.

  • ಮಂಗಳೂರಿನಲ್ಲಿ ಟೇಕಾಫ್‍ಗೆ ಸಿದ್ಧವಾಗಿದ್ದ ವಿಮಾನಕ್ಕೆ ಹಕ್ಕಿ ಡಿಕ್ಕಿ – ಸಮಯಪ್ರಜ್ಞೆ ಮೆರೆದ ಪೈಲೆಟ್

    ಮಂಗಳೂರಿನಲ್ಲಿ ಟೇಕಾಫ್‍ಗೆ ಸಿದ್ಧವಾಗಿದ್ದ ವಿಮಾನಕ್ಕೆ ಹಕ್ಕಿ ಡಿಕ್ಕಿ – ಸಮಯಪ್ರಜ್ಞೆ ಮೆರೆದ ಪೈಲೆಟ್

    ಮಂಗಳೂರು: ಟೇಕಾಫ್‍ಗೆ ಸಿದ್ಧವಾಗಿದ್ದ ವಿಮಾನಕ್ಕೆ ಹಕ್ಕಿಯೊಂದು ಡಿಕ್ಕಿ ಹೊಡೆದ ಘಟನೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Mangaluru International Airport) ನಡೆದಿದೆ.

    ಬೆಳಗ್ಗೆ 8:30ಕ್ಕೆ ದುಬೈಗೆ (Dubai) ತೆರಳಲು ಇಂಡಿಗೋ ವಿಮಾನ (IndiGo Flight) ಸಿದ್ಧವಾಗಿತ್ತು. ಈ ವೇಳೆ ಟ್ಯಾಕ್ಸಿ ವೇ ದಾಟಿ ರನ್ ವೇನಲ್ಲಿ ಸಾಗುತ್ತಿದ್ದಾಗ ವಿಮಾನದ ರೆಕ್ಕೆಗೆ ಹಕ್ಕಿಯೊಂದು ಬಡಿದಿದೆ. ತಕ್ಷಣ ಎಚ್ಚೆತ್ತ ಪೈಲೆಟ್ ನಿಯಂತ್ರಣ ಕೊಠಡಿಗೆ (Air Traffic Control) ಮಾಹಿತಿ ನೀಡಿದ್ದಾರೆ. ಟೇಕಾಫ್ ಮಾಡದೇ ಮರಳಿ ನಿಲ್ದಾಣಕ್ಕೆ ತಂದಿದ್ದಾರೆ. ಇದನ್ನೂ ಓದಿ: ಕೆಆರ್‌ಎಸ್‌ನಲ್ಲಿ ನೀರಿನ ಮಟ್ಟ ಕುಸಿತ – 5 ವರ್ಷದ ಬಳಿಕ ಶತಮಾನದ ಹಿಂದಿನ ದೇವಾಲಯ ಗೋಚರ

    ಪ್ರಯಾಣಿಕರನ್ನು ವಿಮಾನದಿಂದ ಇಳಿಸಿ ಹಕ್ಕಿಯ ಡಿಕ್ಕಿಯಿಂದಾಗಿ ಉಂಟಾಗಿರಬಹುದಾದ ಹಾನಿಯ ತಪಾಸಣೆ ಮಾಡಲಾಗುತ್ತಿದೆ. ಅಲ್ಲದೆ ಪ್ರಯಾಣಿಕರನ್ನು ಕರೆದೊಯ್ಯಲು ಬೆಂಗಳೂರಿನಿಂದ (Bengaluru) ಮತ್ತೊಂದು ವಿಮಾನವನ್ನು ತರಿಸಲಾಯಿತು. ಘಟನೆಯಿಂದ ಕೆಲ ಕಾಲ ವಿಮಾನ ನಿಲ್ದಾಣದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಇದನ್ನೂ ಓದಿ: ಹಾಪ್‌ಕಾಮ್ಸ್‌ನಲ್ಲಿ ಮೇ 26 ರಿಂದ ಮಾವು, ಹಲಸು ಮೇಳ

  • ಚೀತಾ ಹೆಲಿಕಾಪ್ಟರ್ ಪತನ – ಭಾರತೀಯ ಸೇನೆಯ ಇಬ್ಬರು ಪೈಲಟ್‌ಗಳು ಹುತಾತ್ಮ

    ಚೀತಾ ಹೆಲಿಕಾಪ್ಟರ್ ಪತನ – ಭಾರತೀಯ ಸೇನೆಯ ಇಬ್ಬರು ಪೈಲಟ್‌ಗಳು ಹುತಾತ್ಮ

    ಇಟಾನಗರ: ಅರುಣಾಚಲ ಪ್ರದೇಶದಲ್ಲಿ (Arunachal Pradesh) ಸಂಭವಿಸಿದ ಚೀತಾ ಹೆಲಿಕಾಪ್ಟರ್ (Cheetah Helicopter) ದುರಂತದಲ್ಲಿ ಭಾರತೀಯ ಸೇನೆಯ (Indian Army) ಇಬ್ಬರು ಪೈಲಟ್‌ಗಳು (Pilots) ಹುತಾತ್ಮರಾಗಿದ್ದಾರೆ.

    ಪೈಲಟ್ ಲೆಫ್ಟಿನೆಂಟ್ ಕರ್ನಲ್ ವಿವಿಬಿ ರೆಡ್ಡಿ ಮತ್ತು ಮೇಜರ್ ಜಯಂತ್ ದುರಂತದಲ್ಲಿ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ಪತನ

    ಅರುಣಾಚಲ ಪ್ರದೇಶದ ಬೊಮ್ಡಿಲಾ ಪಟ್ಟಣದ ಪಶ್ಚಿಮದಲ್ಲಿರುವ ಮಂಡಲ ಪ್ರದೇಶದ ಬಳಿ ಆರ್ಮಿ ಏವಿಯೇಷನ್‌ನ ಚೀತಾ ಹೆಲಿಕಾಪ್ಟರ್ ಕಾರ್ಯಾಚರಣೆ ನಡೆಸುತ್ತಿತ್ತು. ಜಿಲ್ಲೆಯ ಸಂಗೆ ಗ್ರಾಮದಿಂದ ಬೆಳಗ್ಗೆ 9 ಗಂಟೆಗೆ ಹೆಲಿಕಾಪ್ಟರ್ ಟೇಕಾಫ್ ಆಗಿದ್ದು, ಅಸ್ಸಾಂನ ಸೋನಿತ್‌ಪುರ ಜಿಲ್ಲೆಯ ಮಿಸ್ಸಮರಿ ಕಡೆಗೆ ತೆರಳುತ್ತಿತ್ತು. ಬೆಳಗ್ಗೆ 9.15ಕ್ಕೆ ಏರ್ ಟ್ರಾಫಿಕ್ ಕಂಟ್ರೋಲ್‌ನೊಂದಿಗೆ (ATC) ಸಂಪರ್ಕ ಕಳೆದುಕೊಂಡಿತ್ತು. ಬಳಿಕ ಮಂಡಲ ಪ್ರದೇಶದಲ್ಲಿ ಅಪಘಾತ ಸಂಭವಿಸಿತ್ತು ಎಂದು ಗುವಾಹಟಿ ರಕ್ಷಣಾಲಯದ ಸಾರ್ವಜನಿಕ ಸಂಪರ್ಕ ಅಧಿಕಾರಿ ಲೆಫ್ಟಿನೆಂಟ್ ಕರ್ನಲ್ ಮಹೇಂದ್ರ ರಾವತ್ ದೃಢಪಡಿಸಿದ್ದರು.

    ಘಟನೆ ಬಳಿಕ ಸಶಸ್ತç ಸೀಮಾ ಬಾಲ್, ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ (ITBP) ಸೇರಿದಂತೆ ಭಾರತೀಯ ಸೇನಾಪಡೆಯ ಐದು ತಂಡಗಳು ಕಾರ್ಯಾಚರಣೆ ನಡೆಸಿತ್ತು. ಕೆಲ ಗಂಟೆಗಳ ಬಳಿಕ ಮಂಡಲದ ಪೂರ್ವ ಗ್ರಾಮದ ಬಂಗ್ಲಾಜಾಪ್ ಬಳಿ ವಿಮಾನ ಅವಶೇಷಗಳು ಪತ್ತೆಯಾಗಿದ್ದು, ಅಪಘಾತಕ್ಕೆ ನಿಖರ ಕಾರಣವನ್ನು ಪತ್ತೆಹಚ್ಚಲು ಆದೇಶಿಸಲಾಗಿದೆ. ಇದನ್ನೂ ಓದಿ: ಕೊಲೆ ಆರೋಪಿಗಳ ಜಮೀನಿಗೆ ನುಗ್ಗಿದ ಬುಲ್ಡೋಜರ್ – ಬೆಳೆಗಳು ನೆಲಸಮ

    ಹೆಲಿಕಾಪ್ಟರ್ ಅಪಘಾತಕ್ಕೀಡಾದ ಪ್ರದೇಶದಲ್ಲಿ ಮೊಬೈಲ್ ಸಂಪರ್ಕ ಸಾಧ್ಯವಿಲ್ಲ. ಅಲ್ಲದೇ ಹೆಚ್ಚಾಗಿ ಮಂಜಿನಿಂದ ಕೂಡಿತ್ತು ಎಂದು ವಿಶೇಷ ತನಿಖಾ ಕೋಶದ (SIC) ಪೊಲೀಸ್ ವರಿಷ್ಠಾಧಿಕಾರಿ ರೋಹಿತ್ ರಾಜ್‌ಬೀರ್ ಸಿಂಗ್ ತಿಳಿಸಿದ್ದಾರೆ.

  • ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ಪತನ

    ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ಪತನ

    ಇಟಾನಗರ: ಭಾರತೀಯ ಸೇನೆಯ (Indian Army) ಚೀತಾ ಹೆಲಿಕಾಪ್ಟರ್ (Cheetah Helicopter) ಅರುಣಾಚಲ ಪ್ರದೇಶದಲ್ಲಿ (Arunachal Pradesh) ಗುರುವಾರ ಪತನಗೊಂಡಿದೆ.

    ಮಾಹಿತಿ ಪ್ರಕಾರ, ರಾಜ್ಯದ ಬೊಮ್ಡಿಲಾ ಪಟ್ಟಣದ ಪಶ್ಚಿಮದಲ್ಲಿರುವ ಮಂಡಲ ಪ್ರದೇಶದ ಬಳಿ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿದೆ. ಇದನ್ನೂ ಓದಿ: 8 ವರ್ಷ ಭಾರತದಲ್ಲಿ ಅಕ್ರಮವಾಗಿ ನೆಲೆಸಿದ್ದ ಪಾಕಿಸ್ತಾನದ ಯುವಕ ಅರೆಸ್ಟ್

    ಚೀತಾ ಹೆಲಿಕಾಪ್ಟರ್ ಗುರುವಾರ ಬೆಳಗ್ಗೆ ಸುಮಾರು 9.15 ಗಂಟೆಗೆ ಏರ್ ಟ್ರಾಫಿಕ್ ಕಂಟ್ರೋಲ್ (Air Traffic Control)ನೊಂದಿಗೆ ಸಂಪರ್ಕ ಕಳೆದುಕೊಂಡಿದೆ ಎಂದು ಗುವಾಹಟಿ ರಕ್ಷಣಾಲಯದ ಸಾರ್ವಜನಿಕ ಸಂಪರ್ಕ ಅಧಿಕಾರಿ ಲೆಫ್ಟಿನೆಂಟ್ ಕರ್ನಲ್ ಮಹೇಂದ್ರ ರಾವತ್ ದೃಢಪಡಿಸಿದ್ದಾರೆ.

    ಘಟನೆ ಬಳಿಕ ಇಬ್ಬರು ಪೈಲಟ್‌ಗಳು ನಾಪತ್ತೆಯಾಗಿದ್ದು, ಸೇನೆಯಿಂದ ಶೋಧ ಕಾರ್ಯ ನಡೆದಿದೆ. ಇದನ್ನೂ ಓದಿ: ಮಂಡ್ಯದಲ್ಲಿ ಡಿ.ಕೆ ಶಿವಕುಮಾರ್ ಸ್ಪರ್ಧಿಸಲಿ – ಸ್ಥಳೀಯ ಕಾಂಗ್ರೆಸ್ ನಾಯಕರ ಮನವಿ