Tag: Aircel Maxis

  • ಏರ್‌ಸೆಲ್‌ ಮ್ಯಾಕ್ಸಿಸ್‌ ಪ್ರಕರಣ- ಮಾಜಿ ಸಚಿವ ಪಿ.ಚಿದಂಬರಂ, ಪುತ್ರನಿಗೆ ಸಮನ್ಸ್‌

    ಏರ್‌ಸೆಲ್‌ ಮ್ಯಾಕ್ಸಿಸ್‌ ಪ್ರಕರಣ- ಮಾಜಿ ಸಚಿವ ಪಿ.ಚಿದಂಬರಂ, ಪುತ್ರನಿಗೆ ಸಮನ್ಸ್‌

    ನವದೆಹಲಿ: ಏರ್‌ಸೆಲ್‌ ಮ್ಯಾಕ್ಸಿಸ್‌ ಪ್ರಕರಣದಲ್ಲಿ ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಮತ್ತು ಪುತ್ರ ಕಾರ್ತಿ ಚಿದಂಬರಂ ಸೇರಿದಂತೆ ಹಲವರಿಗೆ ದೆಹಲಿ ನ್ಯಾಯಾಲಯ ಸಮನ್ಸ್‌ ಜಾರಿ ಮಾಡಿದೆ.

    ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಮತ್ತು ಜಾರಿ ನಿರ್ದೇಶನಾಲಯ ಸಲ್ಲಿಸಿದ್ದ ದೋಷಾರೋಪಪಟ್ಟಿಯನ್ನು ಪರಿಶೀಲಿಸಿದ ದೆಹಲಿ ಕೋರ್ಟ್‌, ಡಿ.20ರಂದು ವಿಚಾರಣೆಗೆ ಹಾಜರಾಗುವಂತೆ ಆರೋಪಿಗಳಿಗೆ ಸಮನ್ಸ್‌ ಜಾರಿ ಮಾಡಿದೆ. ಇದನ್ನೂ ಓದಿ: ನಿರೂಪಕರೂ ಚೆಂಜ್- ಬಿಗ್‍ಬಾಸ್‍ಗೆ ರಮ್ಯಾ ಕೃಷ್ಣಾ ಬಾಸ್

    ಪ್ರಕರಣದ ವಿಚಾರಣೆಯನ್ನು ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಎಂ.ಕೆ.ನಾಗಪಾಲ್‌ ನಡೆಸಿದರು. ಸಿಬಿಐ ಮತ್ತು ಜಾರಿ ನಿರ್ದೇಶನಾಲಯ ದಾಖಲಿಸಿರುವ ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಗಳಲ್ಲಿ ಚಿದಂಬರಂ ಮತ್ತು ಇತರ ಆರೋಪಿಗಳ ವಿರುದ್ಧ ಸಮರ್ಪಕ ಸಾಕ್ಷಿಗಳು ಲಭ್ಯವಿವೆ ಎಂದು ನ್ಯಾಯಾಧೀಶರು ಅಭಿಪ್ರಾಯಪಟ್ಟಿದ್ದಾರೆ.

    2006ರಲ್ಲಿ ಪ್ರಕರಣ ನಡೆದಿದ್ದು, ಆಗ ಚಿದಂಬರಂ ಅವರು ಕೇಂದ್ರದ ಹಣಕಾಸು ಸಚಿವರಾಗಿದ್ದರು. 3,500 ಕೋಟಿ ಮೊತ್ತದ ಹಗರಣ ಇದಾಗಿದೆ. ಪ್ರಕರಣದಲ್ಲಿ ಚಿದಂಬರಂ ಅವರನ್ನು ಮೊದಲ ಆರೋಪಿ ಎಂದು ಹೆಸರಿಸಲಾಗಿದೆ. ಇದನ್ನೂ ಓದಿ: ಕೊರೊನಾ ರೂಪಾಂತರ ತಳಿ ಅಪಾಯಕಾರಿ: ರಾಹುಲ್ ಗಾಂಧಿ

    ಚಿದಂಬರಂ ಅವರು ಹಣಕಾಸು ಸಚಿವರಾಗಿದ್ದಾಗ ವಿದೇಶಿ ಕಂಪೆನಿಗೆ “ವಿದೇಶಿ ಹೂಡಿಕೆ ಪ್ರಚಾರ ಮಂಡಳಿ”ಯ (ಎಫ್‌ಐಪಿಬಿ) ಮಂಜೂರಾತಿ ನೀಡಿದ್ದು ಹೇಗೆ ಎಂಬ ಕುರಿತು ಸಿಬಿಐ ತನಿಖೆ ನಡೆಸಿತ್ತು.

  • ಏರ್‍ಸೆಲ್ ಮ್ಯಾಕ್ಸಿಸ್ ಹಗರಣ: ದಯಾನಿಧಿ ಮಾರನ್ ಸಹೋದರರಿಗೆ ಬಿಗ್ ರಿಲೀಫ್

    ನವದೆಹಲಿ: ಏರ್‍ಸೆಲ್ ಮ್ಯಾಕ್ಸಿಸ್ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರದ ಮಾಜಿ ದೂರಸಂಪರ್ಕ ಸಚಿವ ದಯಾನಿಧಿ ಮಾರನ್ ಹಾಗೂ ಇವರ ಸೋದರ ಕಲಾನಿಧಿ ಮಾರನ್ ಎಲ್ಲ ಆರೋಪದಿಂದ ಮುಕ್ತರಾಗಿದ್ದಾರೆ.

    ಸಾಕ್ಷ್ಯಧಾರದ ಕೊರತೆಯಿಂದಾಗಿ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲ ಆರೋಪಿಗಳನ್ನು ವಿಶೇಷ ನ್ಯಾಯಾಲಯದ ನ್ಯಾಯಾಧೀಶರು ಖುಲಾಸೆಗೊಳಿಸಿ ಆದೇಶ ಪ್ರಕಟಿಸಿದ್ದಾರೆ.

    ಇದು ಅಪಾಯಕಾರಿ ವಿದ್ಯಮಾನ, ಈ ರೀತಿಯ ಆರೋಪ ಮಾಡಿದರೆ ಸರ್ಕಾರದಲ್ಲಿರುವ ಎಲ್ಲರನ್ನೂ ವಿಚಾರಣೆಗೆ ಒಳಪಡಿಸಬೇಕಾದಿತು ಎಂದು ಜಡ್ಜ್ ಒ.ಪಿ. ಶೈನಿ ಆದೇಶದಲ್ಲಿ ಹೇಳಿದ್ದಾರೆ.

    ಏನಿದು ಪ್ರಕರಣ?
    ಏರ್‍ಸೆಲ್ ಮ್ಯಾಕ್ಸಿಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾರನ್ ಹಾಗೂ ಇವರ ಸೋದರ ಕಲಾನಿಧಿ ಮಾರನ್ ವಿರುದ್ಧದ ಜಾರಿ ನಿರ್ದೇಶನಾಲಯ ಮತ್ತು ಸಿಬಿಐ ತನಿಖೆ ನಡೆಸಿತ್ತು.

    2006ರಲ್ಲಿ ದೂರಸಂಪರ್ಕ ಸಚಿವರಾಗಿದ್ದ ದಯಾನಿಧಿ ಮಾರನ್ ಅವರು ತಮ್ಮ ಅಧಿಕಾರ ದುರ್ಬಳಕೆ ಮಾಡಿಕೊಂಡು ಮಲೇಷ್ಯಾದ ಮ್ಯಾಕ್ಸಿಸ್ ಕಂಪೆನಿಗೆ ಅನುಕೂಲ ಮಾಡಿಕೊಡಲು ಡೀಲ್ ನಡೆಸಿದ್ದರು. ಈ ಡೀಲ್ ನಡೆಸಿದ್ದಕ್ಕೆ ಮಾರನ್ ಅವರಿಗೆ ಮ್ಯಾಕ್ಸಿಸ್ ಕಡೆಯಿಂದ 700 ಕೋಟಿ ರೂ. ಹಣ ಸಂದಾಯವಾಗಿದೆ. ಈ ಪೈಕಿ ಸ್ವಲ್ಪ ಹಣವನ್ನು ತಮ್ಮ ಸೋದರ ಕಲಾನಿಧಿ ಒಡೆತನದಲ್ಲಿರುವ ಸನ್ ಸಮೂಹ ಕಂಪನಿಯಲ್ಲಿ ಹೂಡಿಕೆ ಮಾಡಿದ್ದರು ಎಂದು ಎನ್ನುವ ಆರೋಪ ಮಾರನ್ ಸಹೋದರರ ಮೇಲೆ ಕೇಳಿ ಬಂದಿತ್ತು. ಈ ಪ್ರಕರಣದಲ್ಲಿ ದಯಾನಿಧಿ ಮಾರನ್ ಹಾಗೂ ಕಲಾನಿಧಿ ಮಾರನ್ ಸೇರಿ 8 ಮಂದಿ ಆರೋಪಿಗಳೆಂದು ಹೆಸರಿಸಲಾಗಿತ್ತು.

    ಆರೋಪ ಕೇಳಿ ಬಂದ ಬಳಿಕ ದಯಾನಿಧಿ ಮಾರನ್ ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.