Tag: aircraft

  • Nepal Plane Crashː ನಾಲ್ವರು ಭಾರತೀಯರು ಸೇರಿ ಮೃತರ ಸಂಖ್ಯೆ 68ಕ್ಕೆ ಏರಿಕೆ, ಇಂದು ರಾಷ್ಟ್ರೀಯ ಶೋಕಾಚರಣೆ

    Nepal Plane Crashː ನಾಲ್ವರು ಭಾರತೀಯರು ಸೇರಿ ಮೃತರ ಸಂಖ್ಯೆ 68ಕ್ಕೆ ಏರಿಕೆ, ಇಂದು ರಾಷ್ಟ್ರೀಯ ಶೋಕಾಚರಣೆ

    ಕಠ್ಮಂಡು: ನೆರೆರಾಷ್ಟ್ರ ನೇಪಾಳದಲ್ಲಿ (Nepal) ಸಂಭವಿಸಿದ ಭೀಕರ ವಿಮಾನ ದುರಂತದಲ್ಲಿ (Nepal Plane Crash) ನಾಲ್ವರು ಭಾರತೀಯರು ಸೇರಿದಂತೆ ಒಟ್ಟು ಮೃತಪಟ್ಟವರ ಸಂಖ್ಯೆ 68ಕ್ಕೆ ಏರಿಕೆಯಾಗಿದೆ. ಮೃತರಿಗೆ ಸಂತಾಪ ಸೂಚಿಸಲು ಜನವರಿ 16ರಂದು ನೇಪಾಳದಲ್ಲಿ ರಾಷ್ಟ್ರೀಯ ಶೋಕದಿನ ಆಚರಿಸಲಾಗುತ್ತಿದೆ.

    ಯೇತಿ ಏರ್‌ಲೈನ್ಸ್‌ನ (Yeti Airlines) ಈ ವಿಮಾನದಲ್ಲಿ ನಾಲ್ವರು ಸಿಬ್ಬಂದಿ, ಐವರು ಭಾರತೀಯರು, 10 ವಿದೇಶಿಗರು ಸೇರಿ 72 ಜನ ಪ್ರಯಾಣಿಕರಿದ್ದರು. ದುರಂತದಲ್ಲಿ ಐವರಲ್ಲಿ ನಾಲ್ವರು ಭಾರತೀಯರು ಸೇರಿ 68 ಜನ ಸಾವನ್ನಪ್ಪಿದ್ದಾರೆ. ಓರ್ವ ಭಾರತೀಯ ಪತ್ತೆಯಾಗಿಲ್ಲ. ಇದರಲ್ಲಿ 9 ಮಕ್ಕಳು ಕೂಡ ಇದ್ದರು ಎಂಬುದು ತಿಳಿದುಬಂದಿದೆ. ಇದನ್ನೂ ಓದಿ: ಉಕ್ರೇನ್ ಮೇಲೆ ಮತ್ತೆ ರಷ್ಯಾ ಕ್ಷಿಪಣಿ ದಾಳಿ – 12 ಮಂದಿ ಸಾವು

    ಇಬ್ಬರು ನೇಪಾಳಿಗರು ಜೀವನ್ಮರಣದ ಹೋರಾಟ ನಡೆಸ್ತಿದ್ದು, ಇಬ್ಬರ ಶವ ಪತ್ತೆಯಾಗಿಲ್ಲ. ರಾಜಧಾನಿ ಕಠ್ಮಂಡುವಿನಿಂದ ಟೇಕಾಫ್ ಆದ ಯೇತಿ ಏರ್‌ಲೈನ್ಸ್‌ ವಿಮಾನ ಪೋಖ್ರಾದಲ್ಲಿ ಲ್ಯಾಂಡಿಂಗ್ 2 ಕಿ.ಮೀ. ದೂರ ಇರುವಾಗ ಪತನವಾಗಿದೆ. 2 ನಿಲ್ದಾಣಗಳ ನಡುವೆ ಒಟ್ಟು 25 ನಿಮಿಷಗಳ ಪ್ರಯಾಣವಾಗಿದ್ದು, 20 ನಿಮಿಷಗಳ ಪ್ರಯಾಣ ಮಾಡಿದ್ದ ವಿಮಾನ ಲ್ಯಾಂಡಿಂಗ್ ಗೆ 5 ನಿಮಿಷ ಬಾಕಿ ಇರುವಾಗ ರನ್‌ವೇನಲ್ಲಿ ವಿಮಾನ ಪತನಗೊಂಡಿದೆ.

    ಈ ವಿಮಾನದಲ್ಲಿ ಒಟ್ಟು 53 ನೇಪಾಳ, 5 ಭಾರತ, 4 ರಷ್ಯಾ, 2 ಕೊರಿಯಾ, ಅರ್ಜೆಂಟೀನಾ, ಆಸ್ಟ್ರೇಲಿಯಾ, ಐರ್ಲೆಂಡ್ ಹಾಗೂ ಫ್ರಾನ್ಸ್ನ ತಲಾ ಒಬ್ಬರು ಪ್ರಜೆಗಳು ದುರ್ಮರಣಕ್ಕೀಡಾಗಿದ್ದಾರೆ. ಭಾರತೀಯರಾದ ಅಭಿಷೇಕ್ ಕುಶ್ವಾಹ, ಬಿಶಾಲ್ ಶರ್ಮಾ, ಅನಿಲ್ ಕುಮಾರ್ ರಾಜ್‌ಭರ್ , ಸೋನು ಜೈಸ್ವಾಲ್, ಸಂಜಯ್ ಜೈಸ್ವಾಲ್ ಸಜೀವ ದಹನಗೊಂಡಿದ್ದಾರೆ. ಘಟನೆಗೆ ನಿಖರ ಕಾರಣ ಏನು ಎನ್ನುವುದು ತಿಳಿದುಬಂದಿಲ್ಲ. ಇದನ್ನು ಅರಿಯುವ ಪ್ರಯತ್ನವೂ ನಡೆದಿದೆ. ತಾಂತ್ರಿಕ ಕಾರಣವಾ ಅಥವಾ ಪೈಲಟ್ ನಿರ್ಲಕ್ಷö್ಯವಾ ಅನ್ನೋದು ಪರಿಶೀಲಿಸಲಾಗುತ್ತಿದೆ. ಇದನ್ನೂ ಓದಿ: Nepal Plane Crashː 32 ಮೃತದೇಹ ಹೊರಕ್ಕೆ – ತುರ್ತು ಸಭೆ ಕರೆದ ನೇಪಾಳ ಸರ್ಕಾರ

    ಘಟನಾ ಸ್ಥಳಕ್ಕೆ ಪ್ರಧಾನಿ ಪುಷ್ಪ ಕಮಲ್ ದಹಾಲ್ ಮತ್ತು ಗೃಹ ಸಚಿವ ರಬಿ ಲಮಿಚಾನೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸೋಮವಾರ ವಿಮಾನ ಸಂಚಾರ ಬಂದ್ ಮಾಡಲಾಗಿದೆ. ನೇಪಾಳದಲ್ಲಿ 8 ತಿಂಗಳ ಅಂತರದಲ್ಲಿ 2ನೇ ಹಾಗೂ 30 ವರ್ಷಗಳಲ್ಲಿ ಅತಿದೊಡ್ಡ ದುರಂತ ಇದಾಗಿದೆ. ಮೃತರಿಗೆ ಸಂತಾಪ ಸೂಚಿಸಲು ಜನವರಿ 16ರಂದು ನೇಪಾಳ ಸರ್ಕಾರ ರಾಷ್ಟ್ರೀಯ ಶೋಕಾಚರಣೆ ದಿನವನ್ನಾಗಿ ಘೋಷಣೆ ಮಾಡಿದೆ. ಪ್ರಯಾಣದಲ್ಲಿ ಮೃತಪಟ್ಟವರ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • Nepal Plane Crashː 32 ಮೃತದೇಹ ಹೊರಕ್ಕೆ – ತುರ್ತು ಸಭೆ ಕರೆದ ನೇಪಾಳ ಸರ್ಕಾರ

    Nepal Plane Crashː 32 ಮೃತದೇಹ ಹೊರಕ್ಕೆ – ತುರ್ತು ಸಭೆ ಕರೆದ ನೇಪಾಳ ಸರ್ಕಾರ

    ಕಠ್ಮಂಡು: ಐವರು ಭಾರತೀಯರು ಸೇರಿ 72 ಜನರಿದ್ದ ವಿಮಾನವು ನೇಪಾಳದ ಪೋಖ್ರಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ರನ್‌ವೇನಲ್ಲೇ ಪತನಗೊಂಡಿದ್ದು, 32 ಮಂದಿ ಮೃತದೇಹಗಳನ್ನ ಹೊರಕ್ಕೆ ತೆಗೆಯಲಾಗಿದೆ.

    ವಿಮಾನದಲ್ಲಿ 68 ಪ್ರಯಾಣಿಕರು ಮತ್ತು ನಾಲ್ಕು ಸಿಬ್ಬಂದಿ ಪ್ರಯಾಣಿಸುತ್ತಿದ್ದ ಯೇತಿ ಏರ್‌ಲೈನ್ಸ್ ವಿಮಾನವು ಇಲ್ಲಿನ ಹಳೆಯ ವಿಮಾನ ನಿಲ್ದಾಣ ಹಾಗೂ ಪೋಖ್ರಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ನಡುವೆ ಪತನಗೊಂಡಿದೆ. ವಿಮಾನ ಪತನದ ಸ್ಥಳದಲ್ಲಿ 32 ಮಂದಿಯ ಮೃತದೇಹಗಳನ್ನ ಹೊರತೆಗೆಯಲಾಗಿದೆ. ಇದನ್ನೂ ಓದಿ: ಬಿಗ್ ಬಾಸ್ ನಂದು- ಜಶ್ವಂತ್ ಬ್ರೇಕಪ್‌ಗೆ ಕಾರಣವಾದ್ರಾ ಸಾನ್ಯ ಅಯ್ಯರ್?

    ವಿಮಾನವು ರನ್‌ವೇಗೆ ಅಪ್ಪಳಿಸಿದ್ದು, ಅದರ ರಭಸಕ್ಕೆ ಕೂಡಲೇ ಭಾರೀ ಪ್ರಮಾಣದ ಬೆಂಕಿ ಹೊತ್ತಿಕೊಂಡಿದೆ. ಮುಗಿಲೆತ್ತರ ಚಿಮ್ಮುತ್ತಿದ್ದ ಅಗ್ನಿ ಜ್ವಾಲೆಗಳನ್ನು ನಂದಿಸಲು ರಕ್ಷಣಾ ಸಿಬ್ಬಂದಿ ಹರಸಾಹಸಪಟ್ಟಿದ್ದಾರೆ. ರಕ್ಷಣಾ ಕಾರ್ಯಾಚರಣೆ ಇನ್ನೂ ಮುಂದುವರಿದಿದೆ. ರಕ್ಷಣಾ ಕಾರ್ಯಚರಣೆ ಮುಕ್ತಾಯವಾಗುವವರೆಗೂ ವಿಮಾನ ನಿಲ್ದಾಣಕ್ಕೆ ಪ್ರವೇಶ ನಿರ್ಬಂಧಿಸಲಾಗಿದೆ. ಇದನ್ನೂ ಓದಿ: ಸಿಬ್ಬಂದಿ ಸೇರಿ 72 ಜನರಿದ್ದ ವಿಮಾನ ನೇಪಾಳದಲ್ಲಿ ಪತನ – ಹೊತ್ತಿ ಉರಿದ ಫ್ಲೈಟ್‌

    ಈ ವಿಮಾನದಲ್ಲಿ 53 ಮಂದಿ ನೇಪಾಳಿಗರು, ಐವರು ಭಾರತೀಯರು, ನಾಲ್ವರು ರಷ್ಯನ್ನರು, ಇಬ್ಬರು ಕೊರಿಯನ್ಸ್‌, ಅರ್ಜೆಂಟೀನಿಯಾ ಹಾಗೂ ಐರಿಶ್‌ ದೇಶದ ಒಬ್ಬೊಬ್ಬರು ಪ್ರಯಾಣಿಸುತ್ತಿದ್ದರು.

    ತುರ್ತು ಕ್ಯಾಬಿನೆಟ್ ಸಭೆ: ಪೋಖ್ರಾ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕ ವಿಮಾನ ಅಪಘಾತ ಹಿನ್ನೆಲೆಯಲ್ಲಿ ನೇಪಾಳ ಸರ್ಕಾರ ತುರ್ತು ಕ್ಯಾಬಿನೆಟ್ ಸಭೆ ಕರೆದಿದೆ. ರಕ್ಷಣಾ ಕಾರ್ಯಚರಣೆ ಬಗ್ಗೆ ಚರ್ಚೆಗೆ ತಕ್ಷಣವೇ ಬರುವಂತೆ ಸೂಚನೆ ನೀಡಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಸಿಬ್ಬಂದಿ ಸೇರಿ 72 ಜನರಿದ್ದ ವಿಮಾನ ನೇಪಾಳದಲ್ಲಿ ಪತನ – ಹೊತ್ತಿ ಉರಿದ ಫ್ಲೈಟ್‌

    ಸಿಬ್ಬಂದಿ ಸೇರಿ 72 ಜನರಿದ್ದ ವಿಮಾನ ನೇಪಾಳದಲ್ಲಿ ಪತನ – ಹೊತ್ತಿ ಉರಿದ ಫ್ಲೈಟ್‌

    ಕಠ್ಮಂಡು: ನಾಲ್ವರು ಸಿಬ್ಬಂದಿ ಸೇರಿ 72 ಜನರಿದ್ದ ವಿಮಾನವು ನೇಪಾಳದ (Nepal) ಪೋಖ್ರಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ (Pokhara International Airport) ರನ್‌ವೇನಲ್ಲೇ ಪತನಗೊಂಡಿದೆ.

    72 ಆಸನಗಳ ಸಾಮರ್ಥ್ಯ ಹೊಂದಿದ್ದ ಯೇತಿ ಏರ್‌ಲೈನ್ಸ್ (Yeti Airlines) ವಿಮಾನವು ಇಲ್ಲಿನ ಹಳೆಯ ವಿಮಾನ ನಿಲ್ದಾಣ ಹಾಗೂ ಪೋಖ್ರಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ನಡುವೆ ಪತನಗೊಂಡಿದೆ. ಸುಮಾರು 68 ಪ್ರಯಾಣಿಕರು ಇದರಲ್ಲಿ ಪ್ರಯಾಣಿಸುತ್ತಿದ್ದರು ಎಂದು ಹೇಳಲಾಗಿದೆ. ಇದನ್ನೂ ಓದಿ: Exclusive- ‘ಮೇರುನಟ’ ವಿಷ್ಣುವರ್ಧನ್ ಸಮಾಧಿ ನೆಲಸಮ ಆಗತ್ತಾ? ಆತಂಕ ಹೊರಹಾಕಿದ ಅಭಿಮಾನಿ

    ಈ ಕುರಿತು ಮಾತನಾಡಿರುವ ಯೇತಿ ಏರ್‌ಲೈನ್ಸ್ ವಕ್ತಾರ ಸುದರ್ಶನ್ ಬರ್ತೌಲಾ, ವಿಮಾನದಲ್ಲಿ 68 ಪ್ರಯಾಣಿಕರು ಮತ್ತು ನಾಲ್ಕು ಸಿಬ್ಬಂದಿ ಪ್ರಯಾಣಿಸುತ್ತಿದ್ದರು ಎಂದು ಹೇಳಿದ್ದಾರೆ. ಇದನ್ನೂ ಓದಿ: ಕೊನೆಗೂ ಮುದ್ದಿನ ಶ್ವಾನ ಸಿಕ್ಕ ಖುಷಿಯಲ್ಲಿ ನಟಿ ಸುಧಾರಾಣಿ

    ಸದ್ಯ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ವಿಮಾನ ನಿಲ್ದಾಣಕ್ಕೆ ಪ್ರವೇಶ ನಿರ್ಬಂಧಿಸಲಾಗಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಸೂಕ್ತ ಒಳಉಡುಪು ಧರಿಸಲೇಬೇಕು – ಪಾಕ್ ವಿಮಾನಯಾನ ಸಂಸ್ಥೆ ಆದೇಶ

    ಸೂಕ್ತ ಒಳಉಡುಪು ಧರಿಸಲೇಬೇಕು – ಪಾಕ್ ವಿಮಾನಯಾನ ಸಂಸ್ಥೆ ಆದೇಶ

    ಇಸ್ಲಾಮಾಬಾದ್: ಇನ್ಮುಂದೆ ವಿಮಾನದ (AirCraft) ಕ್ಯಾಬಿನ್ ಸಿಬ್ಬಂದಿ ಸೂಕ್ತವಾದ ಒಳಉಡುಪುಗಳನ್ನು ಧರಿಸಲೇಬೇಕು ಎಂದು ಪಾಕಿಸ್ತಾನ ಅಂತಾರಾಷ್ಟ್ರೀಯ ವಿಮಾನಯಾನ ಸಂಸ್ಥೆಯು (PIA) ಆದೇಶಿಸಿದೆ.

    ಈ ಆದೇಶವು ವಿಚಿತ್ರ ಹಾಗೂ ವಿಲಕ್ಷಣ ಎಂದೇ ಅನ್ನಿಸಬಹುದು. ಆದರೆ ಕ್ಯಾಬಿನ್ ಸಿಬ್ಬಂದಿಗೆ ಡ್ರೆಸ್ಸಿಂಗ್ (Dress) ಸೆನ್ಸ್ ತುಂಬಾನೇ ಮುಖ್ಯ. ಇಲ್ಲವಾದಲ್ಲಿ ಸಂಸ್ಥೆಯ ಬಗ್ಗೆ ಪ್ರಯಾಣಿಕರು ನಕಾರಾತ್ಮಕ ಧೋರಣೆ ತಾಳುತ್ತಾರೆ ಎಂದು ಆದೇಶ ಪ್ರತಿಯಲ್ಲಿ ತಿಳಿಸಿದೆ. ಈ ಹೊಸ ಅಧಿಸೂಚನೆಯನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ತನ್ನ ವಿಮಾನ ಸಿಬ್ಬಂದಿಗೆ ಕೇಳಿಕೊಂಡಿದೆ. ಇದನ್ನೂ ಓದಿ: ಕಿಡ್ನಿ ಕಸಿ ಮಾಡಿಸಿಕೊಂಡು 4 ವರ್ಷದ ಬಳಿಕ ಮಗುವಿಗೆ ಜನ್ಮ ನೀಡಿದ ಮಹಿಳೆ

    ಕೆಲ ಕ್ಯಾಬಿನ್ ಸಿಬ್ಬಂದಿ ಇಂಟರ್‌ಸಿಟಿ ಪ್ರಯಾಣ ಮಾಡುವಾಗ, ಹೋಟೆಲ್‌ಗಳಲ್ಲಿ ಉಳಿದುಕೊಳ್ಳುವಾಗ ಮತ್ತು ವಿವಿಧ ಭೇಟಿಗಳ ಸಂದರ್ಭದಲ್ಲಿ ತಮ್ಮಿಚ್ಛೆಯಂತೆ ಉಡುಗೆ ಧರಿಸುತ್ತಾರೆ. ಇಂತಹ ಡ್ರೆಸ್ಸಿಂಗ್ ಸೆನ್ಸ್ ನೋಡುಗರಲ್ಲಿ ಮುಜುಗರ ಉಂಟುಮಾಡುತ್ತದೆ. ಅಷ್ಟೇ ಅಲ್ಲ, ಸಂಸ್ಥೆಯ ಬಗ್ಗೆ ಪ್ರಯಾಣಿಕರಲ್ಲಿ ತಪ್ಪು ಗ್ರಹಿಕೆಗೆ ಈಡುಮಾಡುತ್ತದೆ. ಆದ್ದರಿಂದ ಪುರುಷರೇ ಆಗಲಿ ಮಹಿಳೆಯರೇ ಆಗಲಿ ಸೂಕ್ತ ಒಳಉಡುಪು ಮತ್ತು ಸರಳವಾದ ಉಡುಪುಗಳನ್ನು ಧರಿಸಬೇಕು. ಈ ಧರಿಸುವಿಕೆ ನಮ್ಮ ಸಾಂಸ್ಕೃತಿಕ ಮತ್ತು ರಾಷ್ಟ್ರೀಯ ನೈತಿಕತೆಗೆ ಅನುಗುಣವಾಗಿರಬೇಕು. ಈ ಕುರಿತು ಅಧಿಕಾರಿಗಳು ಗಮನಿಸಬೇಕು ಎಂದು ಪಿಐಎ ಪ್ರಧಾನ ವ್ಯವಸ್ಥಾಪಕ ಅಮೀರ್ ಬಶೀರ್ (Aamir Bashir) ಹೇಳಿದ್ದಾರೆ. ಇದನ್ನೂ ಓದಿ: ಪ್ರೀತಿಸಿದವಳಿಂದ ಕಪಾಳಮೋಕ್ಷ – ಅವಮಾನ ಸಹಿಸಲಾರದೇ ಪ್ರಿಯಕರ ಆತ್ಮಹತ್ಯೆ

    ಪಿಐಎ ಪಾಕಿಸ್ತಾನದ (Pakistan) ಅತಿದೊಡ್ಡ ವಿಮಾನಯಾನ ಸಂಸ್ಥೆಯಾಗಿದ್ದು, 30 ವಿಮಾನಗಳನ್ನ ಲಾಂಚ್ ಮಾಡಿದೆ. ಪ್ರತಿದಿನ 100 ವಿಮಾನಗಳು ಕಾರ್ಯಾಚರಣೆ ನಡೆಸಲಿದ್ದು, ಏಷ್ಯಾ, ಯುರೋಪ್, ಮಧ್ಯಪ್ರಾಚ್ಯ ಮತ್ತು ಉತ್ತರ ಅಮೆರಿಕಾ ಸೇರಿದಂತೆ 18 ದೇಶೀಯ ಸ್ಥಳಗಳು ಹಾಗೂ 25 ಅಂತರರಾಷ್ಟ್ರೀಯ ಸ್ಥಳಗಳಿಗೆ ಪ್ರಯಾಣಿಸುತ್ತದೆ.

    Live Tv
    [brid partner=56869869 player=32851 video=960834 autoplay=true]

  • ಸ್ವದೇಶಿ ನಿರ್ಮಿತ ವಿಮಾನ ವಾಹಕ ನೌಕೆ ವಿಕ್ರಾಂತ್‌ಗೆ ಮೋದಿ ಚಾಲನೆ

    ಸ್ವದೇಶಿ ನಿರ್ಮಿತ ವಿಮಾನ ವಾಹಕ ನೌಕೆ ವಿಕ್ರಾಂತ್‌ಗೆ ಮೋದಿ ಚಾಲನೆ

    ತಿರುವನಂತಪುರಂ: ಭಾರತದಲ್ಲೇ ತಯಾರಾದ ಮೊದಲ ವಿಮಾನ ವಾಹಕ ನೌಕೆ ವಿಕ್ರಾಂತ್‌ಗೆ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಚಾಲನೆ ನೀಡಿದರು. ಕೇರಳದ ಕೊಚ್ಚಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೋದಿ ಅವರು ವಿಕ್ರಾಂತ್ ಅನ್ನು ಭಾರತೀಯ ನೌಕಾಪಡೆಗೆ ಅಧಿಕೃತವಾಗಿ ಸೇರ್ಪಡೆ ಮಾಡಿದ್ದಾರೆ.

    ಭಾರತ ಇದೀಗ ನಮ್ಮದೇ ಆದ ವಿಮಾನವಾಹಕ ನೌಕೆಗಳನ್ನು ನಿರ್ಮಿಸಲು ಪ್ರಾರಂಭಿಸಿದ್ದು, ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುವತ್ತ ಮತ್ತೊಂದು ಹೆಜ್ಜೆ ಇಟ್ಟಿದೆ. ವಿಕ್ರಾಂತ್ ವಿಮಾನ ವಾಹಕ ನೌಕೆ ಒಂದು ದೊಡ್ಡ, ಭವ್ಯ, ವಿಭಿನ್ನ ಹಾಗೂ ವಿಶೇಷ ಎಂದು ಮೋದಿ ಬಣ್ಣಿಸಿದರು.

    ವಿಕ್ರಾಂತ್ ನೌಕಾಪಡೆಯನ್ನು ಆಂತರಿಕ ಯುದ್ಧನೌಕೆ ವಿನ್ಯಾಸ ಬ್ಯೂರೋ (ಡಬ್ಲ್ಯುಡಿಬಿ) ವಿನ್ಯಾಸಗೊಳಿಸಿದೆ. ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ ಇದನ್ನು ನಿರ್ಮಿಸಿದೆ. ವಿಕ್ರಾಂತ್ ಅತ್ಯಾಧುನಿಕ ಶಸ್ತ್ರಾಸ್ತ್ರಗಳು, ನ್ಯಾವಿಗೇಷನ್ ಮತ್ತು ಯಾಂತ್ರೀಕೃತಗೊಂಡ ವಿಶೇಷತೆಗಳನ್ನು ಹೊಂದಿದೆ. ಇದು ಭಾರತದ ಕಡಲ ಇತಿಹಾಸದಲ್ಲಿ ನಿರ್ಮಿಸಲಾದ ಅತಿದೊಡ್ಡ ಹಡಗು ಎಂಬ ಹೆಗ್ಗಳಿಕೆಯನ್ನೂ ಪಡೆದಿದೆ.

    ವಿಕ್ರಾಂತ್ ನಿರ್ಮಾಣವನ್ನು 2009ರ ಫೆಬ್ರವರಿ 28ರಿಂದ ಕೊಚ್ಚಿಯ ಕೊಚ್ಚಿನ್ ಶಿಪ್‌ಯಾರ್ಡ್‌ನಲ್ಲಿ ಪ್ರಾರಂಭಿಸಲಾಯಿತು. 2020ರ ಡಿಸೆಂಬರ್‌ನಲ್ಲಿ ಸಿಎಸ್‌ಎಲ್ ನಡೆಸಿದ ಜಲಾನಯನ ಪ್ರಯೋಗಗಳಲ್ಲಿ ವಿಮಾನವಾಹಕ ನೌಕೆ ಸಂಪೂರ್ಣವಾಗಿ ಯಶಸ್ವಿಯಾಗಿದೆ. 40 ಸಾವಿರ ಟನ್ ತೂಕದ ದೇಶದ ಮೊದಲ ಸ್ವದೇಶಿ ವಿಮಾನವಾಹಕ ನೌಕೆ ವಿಕ್ರಾಂತ್ ಎಲ್ಲಾ 4 ಸಮುದ್ರ ಪ್ರಯೋಗಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಇದನ್ನೂ ಓದಿ: ಮುರುಘಾ ಶ್ರೀಗಳ ಆರೋಗ್ಯದಲ್ಲಿ ಏರುಪೇರು- ಐಸಿಯುಗೆ ಶಿಫ್ಟ್

    ಮೊದಲ ಪರೀಕ್ಷೆಯು ಕಳೆದ ವರ್ಷ ಆಗಸ್ಟ್ 21ರಂದು ಪೂರ್ಣಗೊಂಡಿತು. 2ನೇಯದು ಅಕ್ಟೋಬರ್ 21ರಂದು ಮತ್ತು 3ನೇ ಪರೀಕ್ಷೆಯು ಈ ವರ್ಷ ಜನವರಿ 22 ರಂದು ಪೂರ್ಣಗೊಂಡಿತು. ವಿಕ್ರಾಂತ್ ಕೊನೆಯ ಮತ್ತು 4ನೇ ಸಮುದ್ರ ಪ್ರಯೋಗಗಳು ಮೇ ತಿಂಗಳಲ್ಲಿ ಪ್ರಾರಂಭವಾಗಿದ್ದು, ಇದು ಆಗಸ್ಟ್ ತಿಂಗಳ ಆರಂಭದಲ್ಲಿ ಯಶಸ್ವಿಯಾಗಿ ಪೂರ್ಣಗೊಂಡಿತು.

    ಇದು MiG-29K ಫೈಟರ್ ಜೆಟ್‌ಗಳು, Kamov-31, MH-60R ಬಹು-ಪಾತ್ರ ಹೆಲಿಕಾಪ್ಟರ್‌ಗಳ ಜೊತೆಗೆ ಸ್ಥಳೀಯವಾಗಿ ನಿರ್ಮಿಸಲಾದ ಲಘು ಹೆಲಿಕಾಪ್ಟರ್‌ಗಳು (ALH) ಮತ್ತು ಲಘು ಯುದ್ಧ ವಿಮಾನ (ಐಅಂ) ಸೇರಿದಂತೆ ಸುಮಾರು 30 ವಿಮಾನಗಳನ್ನು ಸಾಗಿಸಬಲ್ಲ ಸಾಮರ್ಥ್ಯ ಹೊಂದಿದೆ. ಇದು Kamov Ka-31 ಏರ್‌ಬೋರ್ನ್ ಅರ್ಲಿ ವಾರ್ನಿಂಗ್ ಅನ್ನು ಅಳವಡಿಸಲಾಗಿದೆ. ವಿಕ್ರಾಂತ್ ಅನ್ನು ಸೇನೆಗೆ ಸೇರಿಸುವ ಮೂಲಕ ಭಾರತವು ಸ್ಥಳೀಯವಾಗಿ ವಿಮಾನನೌಕೆ ವಿನ್ಯಾಸಗೊಳಿಸುವ ಮತ್ತು ಸ್ಥಾಪಿಸುವ ಸಾಮರ್ಥ್ಯ ಹೊಂದಿರುವ ರಾಷ್ಟ್ರಗಳ ಗುಂಪಿಗೆ ಸೇರಿದೆ. ಇದನ್ನೂ ಓದಿ: ಸರ್ಕಾರದ ‘ಪುಣ್ಯಕೋಟಿ’ ಯೋಜನೆಯ ರಾಯಭಾರಿಯಾದ ಕಿಚ್ಚ ಸುದೀಪ್

    ವಿಶೇಷತೆ ಏನು?
    * ಹಿಂದೂ ಮಹಾಸಾಗರ ಪ್ರದೇಶದಲ್ಲಿ (ಐಓಆರ್) ಭಾರತದ ಸ್ಥಾನವನ್ನು ಮತ್ತು ನೀಲಿಜಲ ನೌಕಾಪಡೆಯ ಅನ್ವೇಷಣೆಯನ್ನು ಹೆಚ್ಚಿಸಲು ಕಾರ್ಯನಿರ್ವಹಿಸುತ್ತದೆ.
    * 2,300 ವಿಭಾಗಗಳನ್ನು ಹೊಂದಿದ್ದು, ಮಹಿಳಾ ಅಧಿಕಾರಿಗಳಿಗೆ ಸ್ಥಳಾವಕಾಶ ಕಲ್ಪಿಸಲು ವಿಶೇಷ ಕ್ಯಾಬಿನ್‌ಗಳನ್ನು ಒಳಗೊಂಡಂತೆ 1,700 ಸಿಬ್ಬಂದಿಗಾಗಿ ವಿನ್ಯಾಸ ಮಾಡಲಾಗಿದೆ.
    * ನೌಕೆಯು 262 ಮೀಟರ್ ಉದ್ದ, 62 ಮೀಟರ್ ಅಗಲ ಮತ್ತು 59 ಮೀಟರ್ ಎತ್ತರವಿದೆ. ಇದರ ನಿರ್ಮಾಣಕಾರ್ಯ 2009ರಲ್ಲಿ ಆರಂಭಗೊಂಡಿತ್ತು.
    * 8 ಪವರ್ ಜನರೇಟರ್‌ಗಳನ್ನು ಒಳಗೊಂಡಿದ್ದು, ಎಲ್ಲಾ ಸೌಲಭ್ಯಗಳನ್ನು ಒಳಗೊಂಡಿರುವ ಆಸ್ಪತ್ರೆಯನ್ನೂ ಇದೇ ಸಂಕಿರ್ಣದಲ್ಲಿ ನಿರ್ಮಿಸಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಸೆ.2ರಂದು ಸ್ವದೇಶಿ ನಿರ್ಮಿತ ವಿಮಾನ ವಾಹಕ ನೌಕೆ ವಿಕ್ರಾಂತ್‌ ನೌಕಾಪಡೆಗೆ ಅಧಿಕೃತ ಸೇರ್ಪಡೆ

    ಸೆ.2ರಂದು ಸ್ವದೇಶಿ ನಿರ್ಮಿತ ವಿಮಾನ ವಾಹಕ ನೌಕೆ ವಿಕ್ರಾಂತ್‌ ನೌಕಾಪಡೆಗೆ ಅಧಿಕೃತ ಸೇರ್ಪಡೆ

    ನವಹದೆಲಿ: ದೇಶವು ಅಮೃತ ಮಹೋತ್ಸವದ ಸಂಭ್ರಮದಲ್ಲಿದ್ದು, ‘ದೇಶೀಯವಾಗಿ ಅಭಿವೃದ್ಧಿಪಡಿಸಲಾಗಿರುವ ಮೊದಲ ವಿಮಾನವಾಹಕ ಯುದ್ಧನೌಕೆ ‘ವಿಕ್ರಾಂತ್‌’ ಅನ್ನು ಸೆಪ್ಟೆಂಬರ್‌ 2ರಂದು ಪ್ರಧಾನಿ ನರೇಂದ್ರ ಮೋದಿ ಭಾರತೀಯ ನೌಕಾಪಡೆಗೆ ಅಧಿಕೃತವಾಗಿ ಸೇರ್ಪಡೆ ಮಾಡಲಿದ್ದಾರೆ.

    ಕೊಚ್ಚಿಯ ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ (ಸಿಎಸ್‌ಎಲ್) 20 ಸಾವಿರ ಕೋಟಿ ರೂ. ವೆಚ್ಚದಲ್ಲಿ ತಯಾರಿಸಲಾದ ಯುದ್ಧ ನೌಕೆ ವಿಕ್ರಾಂತ್‌ ಅನ್ನು ಈಗಾಗಲೇ ಭಾರತೀಯ ನೌಕಾಪಡೆಗೆ ಹಸ್ತಾಂತರಿಸಲಾಗಿದ್ದು, ಅಂದು ಪ್ರಧಾನಿ ಅಧೀಕೃತವಾಗಿ ಸೇರ್ಪಡೆಗೊಳಿಸಲಿದ್ದಾರೆ. ಹಿಂದೂ ಮಹಾಸಾಗರ ಪ್ರದೇಶದಲ್ಲಿ ಭಾರತದ ಸ್ಥಾನವನ್ನು ಗಮನಾರ್ಹವಾಗಿ ಬಲಪಡಿಸುವ ನಿಟ್ಟಿನಲ್ಲಿ ಈ ನೌಕೆ ಕಾರ್ಯ ನಿರ್ವಹಿಸಲಿದೆ. ವಿಕ್ರಾಂತ್‌ ಕಳೆದ ಜುಲೈನಲ್ಲಿ ತನ್ನ ಅಂತಿಮ ಹಂತದ ಪ್ರಯೋಗಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ.

    ವಿಕ್ರಾಂತ್ ನಿರ್ಮಾಣವನ್ನು 2009ರ ಫೆಬ್ರವರಿ 28ರಿಂದ ಕೊಚ್ಚಿಯ ಕೊಚ್ಚಿನ್ ಶಿಪ್‌ಯಾರ್ಡ್‌ನಲ್ಲಿ ಪ್ರಾರಂಭಿಸಲಾಯಿತು. 2020ರ ಡಿಸೆಂಬರ್ ನಲ್ಲಿ ಸಿಎಸ್ಎಲ್ ನಡೆಸಿದ ಜಲಾನಯನ ಪ್ರಯೋಗಗಳಲ್ಲಿ ವಿಮಾನವಾಹಕ ನೌಕೆ ಸಂಪೂರ್ಣವಾಗಿ ಯಶಸ್ವಿಯಾಗಿದೆ. 40 ಸಾವಿರ ಟನ್ ತೂಕದ ದೇಶದ ಮೊದಲ ಸ್ವದೇಶಿ ವಿಮಾನವಾಹಕ ನೌಕೆ ವಿಕ್ರಾಂತ್ ಎಲ್ಲಾ 4 ಸಮುದ್ರ ಪ್ರಯೋಗಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಮೊದಲ ಪರೀಕ್ಷೆಯು ಕಳೆದ ವರ್ಷ ಆಗಸ್ಟ್ 21ರಂದು ಪೂರ್ಣಗೊಂಡಿತು. 2ನೇಯದು ಅಕ್ಟೋಬರ್ 21ರಂದು ಮತ್ತು 3ನೇ ಪರೀಕ್ಷೆಯು ಈ ವರ್ಷ ಜನವರಿ 22 ರಂದು ಪೂರ್ಣಗೊಂಡಿತು. ವಿಕ್ರಾಂತ್ ಕೊನೆಯ ಮತ್ತು 4ನೇ ಸಮುದ್ರ ಪ್ರಯೋಗಗಳು ಮೇ ತಿಂಗಳಲ್ಲಿ ಪ್ರಾರಂಭವಾಗಿದ್ದು ಇದು ಈ ತಿಂಗಳ ಆರಂಭದಲ್ಲಿ ಯಶಸ್ವಿಯಾಗಿ ಪೂರ್ಣಗೊಂಡಿತು.

    ಇದು MiG-29K ಫೈಟರ್ ಜೆಟ್‌ಗಳು, Kamov-31, MH-60R ಬಹು-ಪಾತ್ರ ಹೆಲಿಕಾಪ್ಟರ್‌ಗಳ ಜೊತೆಗೆ ಸ್ಥಳೀಯವಾಗಿ ನಿರ್ಮಿಸಲಾದ ಲಘು ಹೆಲಿಕಾಪ್ಟರ್‌ಗಳು (ALH) ಮತ್ತು ಲಘು ಯುದ್ಧ ವಿಮಾನ (LCA) ಸೇರಿದಂತೆ ಸುಮಾರು 30 ವಿಮಾನಗಳನ್ನು ಸಾಗಿಸಬಲ್ಲ ಸಾಮರ್ಥ್ಯ ಹೊಂದಿದೆ. ಇದು Kamov Ka-31 ಏರ್‌ಬೋರ್ನ್ ಅರ್ಲಿ ವಾರ್ನಿಂಗ್ ಅನ್ನು ಅಳವಡಿಸಲಾಗಿದೆ. ವಿಕ್ರಾಂತ್‌ ಅನ್ನು ಸೇನೆಗೆ ಸೇರಿಸುವ ಮೂಲಕ ಭಾರತವು ಸ್ಥಳೀಯವಾಗಿ ವಿಮಾನನೌಕೆ ವಿನ್ಯಾಸಗೊಳಿಸುವ ಮತ್ತು ಸ್ಥಾಪಿಸುವ ಸಾಮರ್ಥ್ಯ ಹೊಂದಿರುವ ರಾಷ್ಟ್ರಗಳ ಗುಂಪಿಗೆ ಸೇರಿದೆ.

    ವಿಕ್ರಾಂತ್‌ ವಿಶೇಷತೆ ಏನು?

    • ಹಿಂದೂ ಮಹಾಸಾಗರ ಪ್ರದೇಶದಲ್ಲಿ (ಐಓಆರ್) ಭಾರತದ ಸ್ಥಾನವನ್ನು ಮತ್ತು ನೀಲಿಜಲ ನೌಕಾಪಡೆಯ ಅನ್ವೇಷಣೆಯನ್ನು ಹೆಚ್ಚಿಸಲು‌ ಕಾರ್ಯನಿರ್ವಹಿಸುತ್ತದೆ.
    • 2,300 ವಿಭಾಗಗಳನ್ನು ಹೊಂದಿದ್ದು, ಮಹಿಳಾ ಅಧಿಕಾರಿಗಳಿಗೆ ಸ್ಥಳಾವಕಾಶ ಕಲ್ಪಿಸಲು ವಿಶೇಷ ಕ್ಯಾಬಿನ್‌ಗಳನ್ನು ಒಳಗೊಂಡಂತೆ 1,700 ಸಿಬ್ಬಂದಿಗಾಗಿ ವಿನ್ಯಾಸ ಮಾಡಲಾಗಿದೆ.
    • ನೌಕೆಯು 262 ಮೀಟರ್‌ ಉದ್ದ, 62 ಮೀಟರ್‌ ಅಗಲ ಮತ್ತು 59 ಮೀಟರ್ ಎತ್ತರವಿದೆ. ಇದರ ನಿರ್ಮಾಣಕಾರ್ಯ 2009ರಲ್ಲಿ ಆರಂಭಗೊಂಡಿತ್ತು.
    • 8 ಪವರ್‌ ಜನರೇಟರ್‌ಗಳನ್ನು ಒಳಗೊಂಡಿದ್ದು, ಎಲ್ಲಾ ಸೌಲಭ್ಯಗಳನ್ನು ಒಳಗೊಂಡಿರುವ ಆಸ್ಪತ್ರೆಯನ್ನೂ ಇದೇ ಸಂಕಿರ್ಣದಲ್ಲಿ ನಿರ್ಮಿಸಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • MIG-21 ವಿಮಾನವನ್ನು ಸೇವೆಯಿಂದ ವಜಾಗೊಳಿಸೋದು ಯಾವಾಗ? – ವರುಣ್ ಗಾಂಧಿ

    MIG-21 ವಿಮಾನವನ್ನು ಸೇವೆಯಿಂದ ವಜಾಗೊಳಿಸೋದು ಯಾವಾಗ? – ವರುಣ್ ಗಾಂಧಿ

    ನವದೆಹಲಿ: MIG-21 ತರಬೇತಿ ವಿಮಾನದಲ್ಲಿ ಹಾರಾಟ ನಡೆಸುತ್ತಿದ್ದ ಭಾರತೀಯ ವಾಯುಪಡೆಯ ಇಬ್ಬರು ಪೈಲಟ್‌ಗಳು ನಿನ್ನೆ ನಡೆದ ಅಪಘಾತದಿಂದ ಮೃತಪಟ್ಟಿದ್ದಾರೆ.

    ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ ಸಂಸದ ವರುಣ್ ಗಾಂಧಿ, ಮಿಗ್-21 ವಿಮಾನಗಳನ್ನು `ಹಾರುವ ಶವಪೆಟ್ಟಿಗೆ’ ಎಂದು ಕರೆದಿದ್ದಾರೆ. ಈ ವಿಮಾನವನ್ನು ಸೇವೆಯಿಂದ ತೆಗೆದು ಹಾಕೋದು ಯಾವಾಗ ಎಂದು ಪ್ರಶ್ನಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ  ಓದಿ: ಭಾರತೀಯ ವಾಯುಪಡೆಯ ವಿಮಾನ ಪತನ – ಇಬ್ಬರು ಪೈಲಟ್ ದುರ್ಮರಣ

    ಗುರುವಾರ ರಾತ್ರಿ ನಡೆದ ಘಟನೆಯಿಂದ ಇಡೀ ದೇಶ ಬೆಚ್ಚಿಬಿದ್ದಿದೆ ಹಾಗೂ ದುಃಖಿತವಾಗಿದೆ. ಇತ್ತೀಚಿನ ಕೆಲವು ವರ್ಷಗಳಲ್ಲಿ ಮಿಗ್-21 ವಿಮಾನಗಳಲ್ಲಿ ಹೆಚ್ಚು ಅಪಘಾತಗಳು ಸಂಭವಿಸುತ್ತಿವೆ. ಈ ವಿಮಾನವು ಇಲ್ಲಿಯ ವರೆಗೆ 200 ಪೈಲೆಟ್‌ಗಳನ್ನು ಬಲಿ ಪಡೆದಿವೆ. ಈ ಹಾರುವ ಶವಪೆಟ್ಟಿಗೆಯನ್ನು ನಮ್ಮ ವಾಯುಪಡೆಯಿಂದ ಯಾವಾಗ ತೆಗೆದುಹಾಕಲಾಗುತ್ತದೆ? ಸಂಸತ್ತು ಯೋಚಿಸಬೇಕು, ನಾವು ನಮ್ಮ ಮಕ್ಕಳಿಗಾದರೆ ಈ ವಿಮಾನವನ್ನು ಹಾರಿಸಲು ಬಿಡುತ್ತೇವೆಯೇ ಎಂದು ಟ್ವೀಟ್‌ನಲ್ಲಿ ಪ್ರಶ್ನಿಸಿದ್ದಾರೆ. ಇದನ್ನೂ  ಓದಿ: ರಾಷ್ಟ್ರಪತ್ನಿ ಹೇಳಿಕೆ ವಿವಾದ – ದ್ರೌಪದಿ ಮುರ್ಮುಗೆ ಪತ್ರ ಬರೆದು ಕ್ಷಮೆಯಾಚಿಸಿದ ಅಧೀರ್

    ಏನಿದು ಘಟನೆ?
    ನಿನ್ನೆ ರಾಜಾಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ಭಾರತೀಯ ವಾಯುಪಡೆಯ (IAF) ವಿಮಾನ ಪತನಗೊಂಡು ವಿಂಗ್ ಕಮಾಂಡರ್ ಎಂ.ರಾಣಾ ಮತ್ತು ಫೈಟ್ ಲೆಫ್ಟಿನೆಂಟ್ ಅದ್ವಿತೀಯ ಬಾಲ್ ಮೃತಪಟ್ಟಿದ್ದಾರೆ. ಜಿಲ್ಲೆಯ ಬೇಟೂದಲ್ಲಿನ ಭೀಮಡಾ ಗ್ರಾಮದ ಬಳಿ ಅಪಘಾತಕ್ಕೀಡಾಗಿ, ಅಲ್ಲಲ್ಲಿ ವಿಮಾನದ ಅವಶೇಷಗಳು ಪತ್ತೆಯಾಗಿದ್ದವು. ಅಲ್ಲಿನ ಸ್ಥಿತಿಗತಿಯ ಬಗ್ಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಐಎಎಫ್ ಮುಖ್ಯಸ್ಥರೊಂದಿಗೆ ಮಾತುಕತೆ ನಡೆಸಿದ್ದರು.

    Live Tv
    [brid partner=56869869 player=32851 video=960834 autoplay=true]

  • ಭಾರತೀಯ ವಾಯುಪಡೆಯ ವಿಮಾನ ಪತನ – ಇಬ್ಬರು ಪೈಲಟ್ ದುರ್ಮರಣ

    ಭಾರತೀಯ ವಾಯುಪಡೆಯ ವಿಮಾನ ಪತನ – ಇಬ್ಬರು ಪೈಲಟ್ ದುರ್ಮರಣ

    ಜೈಪುರ: ರಾಜಾಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ಭಾರತೀಯ ವಾಯುಪಡೆಯ (IAF) ವಿಮಾನ ಪತನಗೊಂಡಿದ್ದು, ಇಬ್ಬರು ಪೈಲಟ್‌ಗಳು ಮೃತಪಟ್ಟಿದ್ದಾರೆ.

    ಇದು IAFನ ಮಿಗ್-21 ವಿಮಾನವಾಗಿದ್ದು, ಜಿಲ್ಲೆಯ ಬೇಟೂದಲ್ಲಿನ ಭೀಮಡಾ ಗ್ರಾಮದ ಬಳಿ ಅಪಘಾತಕ್ಕೀಡಾಗಿದೆ. ಬಾರ್ಮರ್ ಜಿಲ್ಲೆಯ ಗ್ರಾಮದಲ್ಲಿ ಅಲ್ಲಲ್ಲಿ ವಿಮಾನದ ಅವಶೇಷಗಳು ಪತ್ತೆಯಾಗಿವೆ ಎಂದು ಜಿಲ್ಲಾಧಿಕಾರಿ ಲೋಕ್ ಬಂಡು ತಿಳಿಸಿರುವುದಾಗಿ ಸುದ್ದಿಸಂಸ್ಥೆ ವರದಿ ಮಾಡಿದೆ. ಇದನ್ನೂ ಓದಿ: ಪ್ರವೀಣ್‌ ಹತ್ಯೆ ಬೆನ್ನಲ್ಲೇ ಮಂಗಳೂರಲ್ಲಿ ಮತ್ತೊಬ್ಬ ಯುವಕನ ಬರ್ಬರ ಹತ್ಯೆ

    ಸದ್ಯ ವಿಮಾನ ಪತನಗೊಂಡಿರುವ ಬಗ್ಗೆ ಐಎಎಫ್‌ನಿಂದ ಯಾವುದೇ ಅಧಿಕೃತ ಮಾಹಿತಿಗಳೂ ಲಭ್ಯವಾಗಿಲ್ಲ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಐಎಎಫ್ ಮುಖ್ಯಸ್ಥರೊಂದಿಗೆ ಮಾತನಾಡಿ ಅಪಘಾತದ ಬಗ್ಗೆ ವಿಚಾರಿಸುತ್ತಿದ್ದಾರೆ ಎಂದು ಐಎಎಫ್ ಮುಖ್ಯಸ್ಥರು ತಿಳಿಸಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಮಹಮ್ಮದ್ ಫಾಜಿಲ್ ಬರ್ಬರ ಹತ್ಯೆ- ಮಂಗಳೂರಿನ ಬಜ್ಬೆ, ಪಣಂಬೂರು, ಸುರತ್ಕಲ್, ಮುಲ್ಕಿ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ

    ಐಎಫ್‌ಎಸ್ 1963ರಲ್ಲಿ `MiG-21‘ ಅನ್ನು ಪಡೆದುಕೊಂಡಿತು. ಇದು ತನ್ನ ಯುದ್ಧ ಸಾಮರ್ಥ್ಯವನ್ನು ಹೆಚ್ಚಿಸಲು ಸೋವಿಯತ್ ಮೂಲದ ಸೂಪರ್‌ಸಾನಿಕ್ ಫೈಟರ್‌ಗಳ 874 ರೂಪಾಂತರಗಳನ್ನು ಹಂತಹಂತವಾಗಿ ಸೇರಿಸಿತು. ಆದರೆ ಕಳೆದ 6 ದಶಕಗಳಲ್ಲಿ ನಡೆದ 400ಕ್ಕೂ ಹೆಚ್ಚು `MiG-21‘ನ ಅಪಘಾತಗಳಲ್ಲಿ 200 ಪೈಲಟ್‌ಗಳು ಜೀವ ಕಳೆದುಕೊಂಡಿದ್ದಾರೆ ಎಂದು ವರದಿಯಾಗಿದೆ.

    Live Tv
    [brid partner=56869869 player=32851 video=960834 autoplay=true]

  • INS ವಿಕ್ರಮಾದಿತ್ಯ ಯುದ್ಧ ನೌಕೆಯಲ್ಲಿ ಬೆಂಕಿ ಅವಘಡ

    INS ವಿಕ್ರಮಾದಿತ್ಯ ಯುದ್ಧ ನೌಕೆಯಲ್ಲಿ ಬೆಂಕಿ ಅವಘಡ

    ಕಾರವಾರ: ನಗರದ ಕದಂಬ ನೌಕಾನೆಲೆಯಿಂದ ಅರಬ್ಬಿ ಸಮುದ್ರದ ಮಾರ್ಗವಾಗಿ ಮುಂಬೈ ಕಡೆ ತೆರಳುತ್ತಿದ್ದ INS ವಿಕ್ರಮಾದಿತ್ಯ ಯುದ್ಧ ನೌಕೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಯುದ್ಧ ನೌಕೆಯಲ್ಲಿರುವ ಅಗ್ನಿನಿರೋಧಕ ವಸ್ತುಗಳನ್ನು ಬಳಸಿ ಬೆಂಕಿ ನಂದಿಸಲಾಗಿದೆ.

    ಕ್ಯಾಪ್ಟನ್ ಸುಶೀಲ್ ಮೆನನ್ ವಿಕ್ರಮಾದಿತ್ಯದ ಕಮಾಂಡರ್ ಆಗಿ ಕಾರ್ಯನಿರ್ವಹಿಸುತ್ತಿದ್ದು, ಕೆಲವು ತಿಂಗಳಿಂದ ಕಾರವಾರದ ಕದಂಬ ನೌಕಾನೆಲೆಯಲ್ಲಿ ಹಡಗಿನ ದುರಸ್ತಿ ಕಾರ್ಯ ಸಹ ನಡೆಸಲಾಗಿತ್ತು. ಆದರೆ ಬುಧವಾರ ಕಾರವಾರದ ಕದಂಬ ನೌಕಾ ನೆಲೆಯಿಂದ ಮುಂಬೈಗೆ ಹೋಗುವ ಮಾರ್ಗದ ಆಳ ಸಮುದ್ರದಲ್ಲಿ ಹಡಗಿಗೆ ಬೆಂಕಿ ಕಾಣಿಸಿಕೊಂಡಿದೆ. ಇದನ್ನೂ ಓದಿ: ನೂಪುರ್ ಶರ್ಮಾಗೆ ಬೆಂಬಲ, ವ್ಯಕ್ತಿ ಮೇಲೆ ಹಲ್ಲೆ- ಇಬ್ಬರ ಬಂಧನ

    ಘಟನೆಯಲ್ಲಿ ಯಾವುದೇ ಅವಘಡ ಸಂಭವಿಸಿಲ್ಲ. ಅದೃಷ್ಟವಶಾತ್ ಹಡಗಿನಲ್ಲಿದ್ದ ಎಲ್ಲಾ ಸಿಬ್ಬಂದಿ ಸುರಕ್ಷಿತವಾಗಿದ್ದು, ಬೆಂಕಿ ನಂದಿಸಲಾಗಿದೆ. ಈ ಹಿಂದೆ ಸಹ ಕಾರವಾರದ ನೌಕಾನೆಲೆಯಲ್ಲಿದ್ದ ಈ ಹಡಗಿನಲ್ಲಿ ಸಿಲೆಂಡರ್ ಸ್ಫೋಟಗೊಂಡು ಇಬ್ಬರು ಸಿಬ್ಬಂದಿ ಮೃತಪಟ್ಟಿದ್ದರು. ಇದಾದ ಮೂರು ವರ್ಷದ ಬಳಿಕ ಇದೀಗ ಮತ್ತೆ ಹಡಗಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇದನ್ನೂ ಓದಿ: ನ್ಯಾಷನಲ್‌ ಹೆರಾಲ್ಡ್‌ ಕೇಸ್‌- ಇಂದು ಇಡಿ ಮುಂದೆ ಹಾಜರಾಗಲಿದ್ದಾರೆ ಸೋನಿಯಾ

    Live Tv
    [brid partner=56869869 player=32851 video=960834 autoplay=true]

  • ಮೇಕ್ ಇನ್ ಇಂಡಿಯಾಗೆ ಉತ್ತೇಜನ – 96 ಸುಧಾರಿತ ಯುದ್ಧ ವಿಮಾನ ತಯಾರಿಸಲು ಐಎಎಫ್ ಯೋಜನೆ

    ಮೇಕ್ ಇನ್ ಇಂಡಿಯಾಗೆ ಉತ್ತೇಜನ – 96 ಸುಧಾರಿತ ಯುದ್ಧ ವಿಮಾನ ತಯಾರಿಸಲು ಐಎಎಫ್ ಯೋಜನೆ

    ನವದೆಹಲಿ: ಭಾರತೀಯ ವಾಯುಪಡೆ (ಐಎಎಫ್) ಭಾರತದಲ್ಲಿ ಸುಮಾರು 96 ಸುಧಾರಿತ ಯುದ್ಧ ವಿಮಾನಗಳನ್ನು ನಿರ್ಮಿಸಲು ಯೋಜಿಸಿದ್ದು, ಇದಕ್ಕಾಗಿ ಜಾಗತಿಕ ವಿಮಾನ ತಯಾರಕರೊಂದಿಗೆ ಮಾತುಕತೆ ಪ್ರಾರಂಭಿಸಿದೆ. ಈ ಮೂಲಕ ಮೇಕ್ ಇನ್ ಇಂಡಿಯಾಗೆ ಇನ್ನೊಂದು ಪ್ರಮುಖ ಉತ್ತೇಜನ ದೊರಕಿದೆ.

    ಐಎಎಫ್ ತನ್ನ ಭತ್ತಳಿಕೆಗೆ 114 ವಿಮಾನಗಳನ್ನು ಸೇರಿಸಲು ಯೋಜನೆ ನಡೆಸಿದೆ. ಅದರಲ್ಲಿ 18 ವಿಮಾನಗಳನ್ನು ವಿದೇಶೀ ಮಾರಾಟಗಾರರಿಂದ ಆಮದು ಮಾಡಿಕೊಂಡು, ಉಳಿದ 96 ವಿಮಾನಗಳನ್ನು ಭಾರತದಲ್ಲೇ ತಯಾರಿಸಲು ಯೋಜಿಸಿದೆ. ಇದನ್ನೂ ಓದಿ: 2 ವಾರದಿಂದ ಸಿಕ್ಕಿಲ್ಲ ಸೈನಿಕರು – ಮುಂದುವರಿದ ಶೋಧಕಾರ್ಯ

    Fighter jet

    60 ವಿಮಾನಗಳನ್ನು ಭಾರತೀಯ ಕರೆನ್ಸಿಯಲ್ಲಿ ಪಾವತಿ ಮಾಡಲಾಗುವುದು. ಉಳಿದ 36 ವಿಮಾನಗಳಿಗಾಗಿ ಭಾಗಶಃ ಭಾರತೀಯ ಹಾಗೂ ಭಾಗಶಃ ವಿದೇಶೀ ಕರೆನ್ಸಿಯಿಂದ ಪಾವತಿ ಮಾಡಲಾಗುವುದು. ಸುಮಾರು ಶೇ.70 ರಷ್ಟು ವೆಚ್ಚವನ್ನು ಪಾವತಿಸಲು ಭಾರತೀಯ ಕರೆನ್ಸಿಯನ್ನೇ ಬಳಸುವ ಬಗ್ಗೆ ಯೋಜಿಸಲಾಗಿದೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ. ಇದನ್ನೂ ಓದಿ: ದೇಶದಲ್ಲಿ ಆರಂಭವಾಗಿರುವ ದ್ವೇಷದ ಭಾವನೆ ಕುರಿತು ಮೋದಿ ಮೌನ ಮುರಿಯಲಿ: ಶಶಿ ತರೂರ್

    ದೇಶದ ಯುದ್ಧ ಸಾಮರ್ಥ್ಯವನ್ನು ಹೆಚ್ಚಿಸಲು ಹಾಗೂ ಹಳೆ ವಿಮಾನಗಳನ್ನು ಬದಲಿಸಲು ಐಎಎಫ್ 114 ವಿಮಾನಗಳನ್ನು ಸ್ವಾಧೀನಪಡಿಸುವ ಯೋಜನೆ ಮಾಡಿದೆ. ಯೋಜನೆಯಲ್ಲಿ ಕೆಲವು ವಿದೇಶೀ ವಿಮಾನಗಳನ್ನು ಸ್ಪರ್ಧೆಗೆ ನಿಲ್ಲಿಸಿ, ಪ್ರಯೋಗಗಳನ್ನು ನಡೆಸಿ, ಬಳಿಕ ಆಯ್ಕೆ ಮಾಡಲಾಗುವ 18 ವಿಮಾನಗಳನ್ನು ಆಮದು ಮಾಡಿಕೊಳ್ಳಲಾಗುತ್ತದೆ. ಇದಕ್ಕಾಗಿ ಬೋಯಿಂಗ್, ಲಾಕ್‌ಹೀಡ್ ಮಾರ್ಟಿನ್, ಎಂಐಜಿ, ಡಸಲ್ಟ್ ಹಾಗೂ ಸಾಬ್‌ನಂತಹ ಕಂಪನಿಗಳು 3 ವರ್ಷಗಳಲ್ಲಿ ವಿಮಾನಗಳನ್ನು ತಯಾರಿಸುವ ಗುರಿಯಲ್ಲಿವೆ ಎಂದು ಮೂಲಗಳು ತಿಳಿಸಿವೆ.