Tag: airforce

  • ಭಾರತೀಯ ಸೇನೆಗೆ ಕಾಡುತ್ತಿದೆ ಅಧಿಕಾರಿ, ಸೈನಿಕರ ಕೊರತೆ

    ಭಾರತೀಯ ಸೇನೆಗೆ ಕಾಡುತ್ತಿದೆ ಅಧಿಕಾರಿ, ಸೈನಿಕರ ಕೊರತೆ

    ನವದೆಹಲಿ: ಭಾರತದ ಮೂರು ಸೇನಾ ಪಡೆಗಳಲ್ಲಿ ಅಧಿಕಾರಿಗಳು ಹಾಗೂ ಸೈನಿಕರ ಕೊರತೆ ಕಾಡುತ್ತಿದ್ದು, ಪ್ರಸ್ತುತ 9,427 ಅಧಿಕಾರಿಗಳು ಹಾಗೂ 68,864 ಯೋಧರ ಕೊರತೆಯಿದೆ ಎಂದು ಮೂಲಗಳು ತಿಳಿಸಿವೆ.

    2019ರ ಜನವರಿವರೆಗೆ ಲಭ್ಯವಿರುವ ಮಾಹಿತಿ ಪ್ರಕಾರ, ಭೂಸೇನಾ ಪಡೆಯಲ್ಲಿ 50,312 ಅಧಿಕಾರಿಗಳನ್ನು ನೇಮಿಸಿಕೊಳ್ಳುವ ಅವಕಾಶವಿದೆ. ಆದರೆ ಪ್ರಸ್ತುತ 42,913 ಅಧಿಕಾರಿಗಳು ಮಾತ್ರ ಇದ್ದು, ಸುಮಾರು 7,399 ಅಧಿಕಾರಿಗಳ ಹುದ್ದೆಗಳು ಖಾಲಿ ಇವೆ.

    ಹಾಗೆಯೇ ನೌಕಾ ಪಡೆಯಲ್ಲಿ 11,557 ಅಧಿಕಾರಿಗಳನ್ನು ಹೊಂದುವ ಅವಕಾಶವಿದೆ. ಆದರೆ ಸದ್ಯ 10,012 ಮಂದಿ ಅಧಿಕಾರಿಗಳು ಮಾತ್ರ ಕಾರ್ಯ ನಿರ್ವಹಿಸುತ್ತಿದ್ದಾರೆ. ಹೀಗಾಗಿ 1,545 ಅಧಿಕಾರಿಗಳ ಕೊರತೆಯಿದೆ ಎಂದು ಜೂನ್ 2019ರವೆರೆಗೆ ಲಭ್ಯವಿರುವ ಮಾಹಿತಿ ತಿಳಿಸಿದೆ.

    ವಾಯುಪಡೆಯಲ್ಲಿ 12,625 ಅಧಿಕಾರಿಗಳನ್ನು ನೇಮಕ ಮಾಡಿಕೊಳ್ಳಬಹುದು, ಆದರೆ ಪ್ರಸ್ತುತ 12,142 ಮಂದಿ ಅಧಿಕಾರಿಗಳಿದ್ದು, 483 ಅಧಿಕಾರಿಗಳು ಬೇಕಾಗಿದ್ದಾರೆ ಎಂದು ತಿಳಿದುಬಂದಿದೆ.

    ಆಫೀಸರ್ ಅಥವಾ ಏರ್‍ಮೆನ್ ಅಥವಾ ನಾವಿಕ ಶ್ರೇಣಿಗಿಂತಲೂ ಕಡಿಮೆ ಶ್ರೇಣಿಯ ಹುದ್ದೆಗಳನ್ನು ಗಮನಿಸಿದಲ್ಲಿ ಭೂಸೇನಾಪಡೆಗೆ ಒಟ್ಟು 12.23 ಲಕ್ಷ ಯೋಧರನ್ನು ಹೊಂದಲು ಅವಕಾಶವಿದೆ. ಆದರೆ ಪ್ರಸ್ತುತ 11.85 ಲಕ್ಷ ಯೋಧರು ಮಾತ್ರ ಇದ್ದಾರೆ. ಹಾಗಾಗಿ 38,235 ಯೋಧರ ಕೊರತೆಯಿದೆ. ನೌಕಾಪಡೆಯಲ್ಲಿ 16,806 ಹಾಗೂ ವಾಯುಪಡೆಯಲ್ಲಿ 13,823 ಯೋಧರ ಹುದ್ದೆಗಳು ಖಾಲಿ ಉಳಿದಿವೆ.

    ಪ್ರಾದೇಶಿಕ ಸೈನ್ಯ (ಟಿಎ) ಸ್ವಯಂಸೇವಕ ನಾಗರಿಕರಿಗೆ ಸೈನ್ಯದ ಸಮವಸ್ತ್ರವನ್ನು ಧರಿಸಲು ಹಾಗೂ ರಾಷ್ಟ್ರಕ್ಕೆ ಸೇವೆ ಸಲ್ಲಿಸಲು ಲಾಭದಾಯಕ ಉದ್ಯೋಗವನ್ನು ಒದಗಿಸುತ್ತಿದೆ. ಸೈನ್ಯದಲ್ಲಿ ಸ್ಥಿರವಾದ ಕರ್ತವ್ಯಗಳು, ಸಮುದಾಯದ ಜೀವನಕ್ಕೆ ಧಕ್ಕೆ ಉಂಟಾಗುವ ಅಥವಾ ದೇಶದ ಭದ್ರತೆಗೆ ಧಕ್ಕೆ ಉಂಟಾಗುವ ಪರಿಸ್ಥಿತಿಯಲ್ಲಿ ನೈಸರ್ಗಿಕ ವಿಪತ್ತುಗಳನ್ನು ಎದುರಿಸುವುದು, ಅಗತ್ಯ ಸೇವೆಗಳ ನಿರ್ವಹಣೆಯಲ್ಲಿ ನಾಗರಿಕ ಪ್ರಾಧಿಕಾರಕ್ಕೆ ಸಹಾಯ ಮಾಡುವುದು ಪ್ರಾದೇಶಿಕ ಸೈನ್ಯ ಪಾತ್ರವಾಗಿದೆ. ಅಲ್ಲದೆ ಅಗತ್ಯಬಿದ್ದಾಗ ಭಾರತೀಯ ಸೇನೆಯ ಸಹಾಕ್ಕಾಗಿ ಕೂಡ ಟಿಎ ಪಡೆ ಕಾರ್ಯ ನಿರ್ವಹಿಸುತ್ತದೆ.

  • ವಾಯುಸೇನೆಗೆ ಚಿನೂಕ್ ಹೆಲಿಕಾಪ್ಟರ್ ಸೇರ್ಪಡೆ – ವಿಶೇಷತೆ ಏನು ? ವಿಡಿಯೋ ನೋಡಿ

    ವಾಯುಸೇನೆಗೆ ಚಿನೂಕ್ ಹೆಲಿಕಾಪ್ಟರ್ ಸೇರ್ಪಡೆ – ವಿಶೇಷತೆ ಏನು ? ವಿಡಿಯೋ ನೋಡಿ

    ಚಂಡೀಗಢ: ಭಾರತೀಯ ವಾಯು ಸೇನೆಗೆ ಅಮೆರಿಕದ ಚಿನೂಕ್ ಹೆಲಿಕಾಪ್ಟರ್ ಗಳು ಸೇರ್ಪಡೆಯಾಗಿದೆ. ಚಂಡೀಗಢದ ವಾಯುನೆಲೆಯಲ್ಲಿ 4 ಹೆಲಿಕಾಪ್ಟರ್ ಗಳನ್ನು ವಾಯು ಸೇನೆಯ ಮುಖ್ಯಸ್ಥ ಧನೋವಾ ಅವರು ಸೇರ್ಪಡೆಗೊಳಿಸಿದ್ದಾರೆ.

    2015ರಲ್ಲಿ ಭಾರತ ಸರ್ಕಾರ ಅಮೆರಿಕ ಮೂಲದ ಬೋಯಿಂಗ್ ಕಂಪನಿಯ ಜೊತೆ 15 ಚಿನೂಕ್ ಹೆಲಿಕಾಪ್ಟರ್ ಖರೀದಿ ಸಂಬಂಧ 10 ಸಾವಿರ ಕೋಟಿ ರೂ. ವೆಚ್ಚದ ಒಪ್ಪಂದ ಮಾಡಿಕೊಂಡಿತ್ತು. 15ರ ಪೈಕಿ 4 ಹೆಲಿಕಾಪ್ಟರ್ ಗಳು ಈಗ ಭಾರತಕ್ಕೆ ಬಂದಿವೆ.

    ವಿಶೇಷತೆ ಏನು?
    ಬಹುಉಪಯೋಗಿ ಹೆಲಿಕಾಪ್ಟರ್ ಚಿನೂಕ್ ಎಲ್ಲ ಬಗೆಯ ಸೇನಾ ಕಾರ್ಯಾಚರಣೆಗೆ ನೆರವಾಗಲಿದ್ದು, ಪ್ರಮುಖವಾಗಿ ಪ್ರವಾಹ, ಅಗ್ನಿ ಅವಘಡ, ಸೇನಾ ವಸ್ತುಗಳ ಪೂರೈಕೆಯಂತಹ ಕಾರ್ಯಾಚರಣೆಗಳಲ್ಲಿ ಪ್ರಮುಖ ಪಾತ್ರ ನಿರ್ವಹಿಸುತ್ತದೆ.

    ಸೇನಾ ಕ್ಯಾಂಪ್ ಗಳಿಗೆ ಸೈನಿಕರ ರವಾನೆ, ಫಿರಂಗಿಗಳ ರವಾನೆ, ಇತರೆ ಶಸ್ತ್ರಾಸ್ತ್ರಗಳ ಪೂರೈಕೆ, ಇಂಧನವನ್ನು ಸಾಗಿಸಬಲ್ಲದು. ಒಟ್ಟು 9.6 ಟನ್ ತೂಕದ ವಸ್ತುಗಳನ್ನು ಎತ್ತಿಕೊಂಡು ಹೋಗುವ ಸಾಮಥ್ರ್ಯ ಈ ಹೆಲಿಕಾಪ್ಟರ್ ಗೆ ಇದೆ. ಬೋಯಿಂಗ್ ಕಂಪನಿ ಇದೂವರೆಗೆ ಒಟ್ಟು 1,179 ಹೆಲಿಕಾಪ್ಟರ್ ಗಳನ್ನು ಉತ್ಪಾದಿಸಿದೆ.

    ಮೂವರು ಸಿಬ್ಬಂದಿ(ಇಬ್ಬರು ಪೈಲಟ್ ಮತ್ತು ಫ್ಲೈಟ್ ಎಂಜಿನಿಯರ್) ಈ ಹೆಲಿಕಾಪ್ಟರ್ ಅನ್ನು ನಿಯಂತ್ರಿಸಬಹುದು. ಈಗಾಗಲೇ ವಿಶ್ವದ ಹಲವು ರಾಷ್ಟ್ರಗಳ ಬಳಕೆಯಲ್ಲಿ ಚಿನೂಕ್ ಹೆಲಿಕಾಪ್ಟರ್ ಇದ್ದು ತನ್ನ ಸಾಮಥ್ರ್ಯವನ್ನು ತೋರಿಸಿದೆ. ಹೊಸದಾಗಿ ಬಂದಿರುವ ಚಿನೂಕ್ ಹೆಲಿಕಾಪ್ಟರ್ ಗಳು ರಷ್ಯಾ ನಿರ್ಮಿತ ಮಿ-1, ಮಿ-26, ಮಿ-35 ಹೆಲಿಕಾಪ್ಟರ್ ಗಳ ಜಾಗವನ್ನು ತುಂಬಲಿದೆ.

    ದಾಳಿ ನಡೆಸಬಲ್ಲ 22 ಅಪಾಚಿ ಹೆಲಿಕಾಪ್ಟರ್ ಖರೀದಿ ಸಂಬಂಧ ಭಾರತ ಬೋಯಿಂಗ್ ಕಂಪನಿ ಜೊತೆ ಒಪ್ಪಂದ ಮಾಡಿಕೊಂಡಿದೆ. ಈ ವರ್ಷದ ಸೆಪ್ಟೆಂಬರ್ ನಲ್ಲಿ ಈ ಹೆಲಿಕಾಪ್ಟರ್ ಗಳು ಪಂಜಾಬಿನಲ್ಲಿರುವ ಪಠಾಣ್‍ಕೋಟ್ ವಾಯುನೆಲೆಗೆ ಬರಲಿವೆ.

  • ದಾಳಿ ಬಗ್ಗೆ ಮಾಹಿತಿ ಇಲ್ಲ: ಸಿದ್ದರಾಮಯ್ಯ ಉಡಾಫೆ ಮಾತು

    ದಾಳಿ ಬಗ್ಗೆ ಮಾಹಿತಿ ಇಲ್ಲ: ಸಿದ್ದರಾಮಯ್ಯ ಉಡಾಫೆ ಮಾತು

    ಚಿಕ್ಕಮಗಳೂರು: ಉಗ್ರರ ನೆಲೆಯನ್ನು ಭಾರತೀಯ ವಾಯು ಸೇನೆ ಧ್ವಂಸಗೊಳಿಸಿದ್ದು, ದೇಶದೆಲ್ಲೆಡೆ ಸಂಭ್ರಮ ಮನೆ ಮಾಡಿದೆ. ಆದರೆ ಮಾಜಿ ಸಿಎಂ ಸಿದ್ದರಾಮಯ್ಯ ನನಗೆ ಈ ಬಗ್ಗೆ ಮಾಹಿತಿ ಇಲ್ಲ ಎಂದು ಉಡಾಫೆಯ ಉತ್ತರ ನೀಡಿದ್ದಾರೆ.

    ಜಿಲ್ಲೆಯ ತರೀಕೆರೆಯಲ್ಲಿ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, “ದಾಳಿ ಮಾಡಿದವರು ಯಾರು? ದಾಳಿ ನಾವ್ ಮಾಡಿರೋದಾ ಅಥವಾ ಅವರು ಮಾಡಿದ್ದಾರಾ ಎಂದು ಮಾಧ್ಯಮದವರನ್ನೇ ಪ್ರಶ್ನಿಸಿದ್ದಾರೆ. ಅಲ್ಲದೇ ದಾಳಿ ಬಗ್ಗೆ ಮಾಹಿತಿ ಇಲ್ಲ. ನಾನು ಹೆಲಿಕಾಪ್ಟರ್ ನಲ್ಲಿ ಬಂದಿದ್ದೇನೆ. ಹಾಗಾಗಿ ನನಗೆ ಈ ಬಗ್ಗೆ ಮಾಹಿತಿ ಇಲ್ಲ. ಮಾಹಿತಿ ತಿಳಿದು ಉತ್ತರ ನೀಡುತ್ತೇನೆ” ಎಂದ ಹೇಳಿದ್ದಾರೆ.

    “ಉಗ್ರರ ಕ್ಯಾಂಪ್ ಮೇಲೆ ಸರ್ಜಿಕಲ್ ಸ್ಟ್ರೈಕ್-2 ಮಾಡಿದ ವಾಯು ಸೇನೆಗೆ ನಾನು ಸೆಲ್ಯೂಟ್ ಮಾಡುತ್ತೇನೆ. ಈ ದಾಳಿ ಪಾಕಿಸ್ತಾನಕ್ಕೆ ಒಂದು ಒಳ್ಳೆಯ ಪಾಠ” ಎಂದು ಇಂದು ಬೆಳಗ್ಗೆ 10.08ಕ್ಕೆ ಟ್ವೀಟ್ ಮಾಡಿ ಸೇನೆಗೆ ಅಭಿನಂದನೆ ಸಲ್ಲಿಸಿದ್ದರು. ಆದರೆ ಈ ವಿಚಾರದ ಬಗ್ಗೆ ನೇರವಾಗಿ ಪ್ರತಿಕ್ರಿಯೆ ನೀಡುವಾಗ ಉಡಾಫೆಯಾಗಿ ಮಾತನಾಡಿದ್ದಾರೆ.

    ಇಂದು ನಸುಕಿನ ಜಾವ 3.30ರ ಸುಮಾರಿಗೆ ಉಗ್ರರ ನೆಲೆ ಮೇಲೆ ಭಾರತೀಯ ವಾಯು ಸೇನೆ ದಾಳಿ ಮಾಡಿದ್ದು, ಸುಮಾರು 250ಕ್ಕೂ ಹೆಚ್ಚು ಉಗ್ರರು ಸಾವನ್ನಪ್ಪಿದ್ದಾರೆ. ವಾಯು ಸೇನೆಯ ಏರ್ ಸ್ಟ್ರೈಕ್‍ಗೆ ಇಡೀ ದೇಶ ಮೆಚ್ಚುಗೆ ವ್ಯಕ್ತಪಡಿಸಿ, ಸಂಭ್ರಮ ಪಡುತ್ತಿದ್ದಾರೆ.

    https://www.youtube.com/watch?v=H0Eg3K5n5AQ

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ದೇಶದ ಐಕ್ಯತೆ ಮುಖ್ಯ, ಮಾಧ್ಯಮಗಳಲ್ಲಿ ಭಿನ್ನ ವಿಶ್ಲೇಷಣೆ ಬರುತ್ತಿದೆ: ಡಿಕೆಶಿ

    ದೇಶದ ಐಕ್ಯತೆ ಮುಖ್ಯ, ಮಾಧ್ಯಮಗಳಲ್ಲಿ ಭಿನ್ನ ವಿಶ್ಲೇಷಣೆ ಬರುತ್ತಿದೆ: ಡಿಕೆಶಿ

    ಬಳ್ಳಾರಿ: ಪುಲ್ವಾಮಾ ದಾಳಿಗೆ ಪ್ರತೀಕಾರವಾಗಿ ಪಾಕಿನಲ್ಲಿದ್ದ ಉಗ್ರರ ನೆಲೆಯನ್ನು ಭಾರತೀಯ ವಾಯು ಸೇನೆ ಧ್ವಂಸಗೊಳಿಸಿದ ಬಗ್ಗೆ ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಭಿನ್ನ ಹೇಳಿಕೆ ನೀಡಿದ್ದಾರೆ.

    ಪಾಕಿಸ್ತಾನ ಮೇಲೆ ಆದ ದಾಳಿ ಬಗ್ಗೆ ಮಾತನಾಡಿದ ಡಿಕೆಶಿ, “ದೇಶದ ಐಕ್ಯತೆ ಮುಖ್ಯ. ಮಾಧ್ಯಮಗಳಲ್ಲಿ ದಾಳಿ ಬಗ್ಗೆ ಭಿನ್ನ ವಿಶ್ಲೇಷಣೆ ಬರುತ್ತಿದೆ. ದೇಶ ಒಗ್ಗಟ್ಟಿನಲ್ಲಿ ಇರಬೇಕಿದೆ. ಚುನಾವಣೆ ಹೊತ್ತಿನಲ್ಲಿ ನಾನೇನು ಮಾತನಾಡೋದಿಲ್ಲ. ಈ ಸಂಬಂಧ ನಮ್ಮ ನಾಯಕರು ಹೇಳುತ್ತಾರೆ. ಸೈನಿಕರ ಪರ ನಾವು ಇರುತ್ತೇವೆ ಹಾಗೂ ನಮಗೆ ಸೈನಿಕರ ರಕ್ಷಣೆ ಮುಖ್ಯ. ರಾಜಕಾರಣದ ಮಾತು ಈಗ ಬೇಡ. ದಾಳಿ ಸರಿಯೋ ತಪ್ಪೋ ಅದರ ಬಗ್ಗೆ ಈಗ ಮಾತನಾಡೋದು ಸರಿಯಲ್ಲ. ದಾಳಿ ಬಗ್ಗೆ ಬೇರೆ ಬೇರೆ ವಾಖ್ಯಾನ ಬರುತ್ತಿದೆ” ಎಂದರು.

    ಸುಮಲತಾ ಮಂಡ್ಯ ಲೋಕಸಭೆ ಟಿಕೆಟ್ ವಿಚಾರದ ಬಗ್ಗೆ ಮಾತನಾಡಿ “ಸುಮಲತಾ ಅವರು ನಮ್ಮ ರಾಜ್ಯ ನಾಯಕರ ಜೊತೆ ಮಾತನಾಡಲಿ. ಮಂಡ್ಯ ಲೋಕಸಭೆ ಉಪಚುನಾವಣೆಯಲ್ಲಿ ಜೆಡಿಎಸ್‍ಗೆ ಬಿಟ್ಟುಕೊಟ್ಟಿದ್ದೇವೆ. ಇದು ಮುಂದುವರಿಯುತ್ತದೆ. ಸುಮಲತಾ ಪಕ್ಷದ ವೇದಿಕೆಯಲ್ಲಿ ಕೆಲಸ ಮಾಡಲು ಅವಕಾಶ ಇದೆ. ರಾಜಕೀಯಕ್ಕೆ ಬಂದಿರೋದು ಸ್ವಾಗತಾರ್ಹ ಎಂದು ಹೇಳುತ್ತಾ ಪರೋಕ್ಷವಾಗಿ ಸುಮಲತಾಗೆ ಟಿಕೆಟ್ ಇಲ್ಲ ಎಂದು ಡಿಕೆಶಿ ಹೇಳಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಪಾಕ್ ಡ್ರೋನ್ ಹೊಡೆದುರುಳಿಸಿದ ಭಾರತ ಸೇನೆ!

    ಪಾಕ್ ಡ್ರೋನ್ ಹೊಡೆದುರುಳಿಸಿದ ಭಾರತ ಸೇನೆ!

    ನವದೆಹಲಿ: ಗಡಿ ನಿಯಂತ್ರಣ ರೇಖೆಯನ್ನು ದಾಟಿ ಉಗ್ರರ ನೆಲೆ ಮೇಲೆ ಏರ್ ಸರ್ಜಿಕಲ್ ಸ್ಟ್ರೈಕ್ ನಡೆಸಿದ ಬೆನ್ನಲ್ಲೇ ಪಾಕಿಸ್ತಾನದ ಡ್ರೋನ್ ಅನ್ನು ಭಾರತ ಹೊಡೆದು ಉರುಳಿಸಿದೆ.

    ಗುಜರಾತಿನ ಕಚ್ ಗಡಿಯಲ್ಲಿ ಹಾರಾಡುತ್ತಿದ್ದ ಡ್ರೋನ್ ಅನ್ನು ಭಾರತ ಹೊಡೆದು ಉರುಳಿಸಿದೆ. ಬೆಳಗ್ಗೆ 6.30ರ ವೇಳೆ ಭಾರತ ಡ್ರೋನ್ ಹೊಡೆದು ಉರುಳಿಸಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

    ಭಾರತದ ವಾಯುಸೇಬೆ ಗಡಿ ನಿಯಂತ್ರಣ ರೇಖೆಯನ್ನು ದಾಟಿ ಗಡಿ ಭಾಗದಲ್ಲಿ ಬೀಡುಬಿಟ್ಟಿದ್ದ ಜೈಷ್-ಎ-ಮೊಹಮ್ಮದ್ ಸಂಘಟನೆಯ ಉಗ್ರರ ನೆಲೆಯ ಮೇಲೆ ಬರೋಬ್ಬರಿ ಸಾವಿರ ಕೆಜಿಯ ಬಾಂಬ್ ಹಾಕಿದೆ.

    ಕಾಶ್ಮೀರದ ಬಾಲ್ಕೋಟ್ ನಲ್ಲಿ ನೆಲೆ ಕಂಡುಕೊಂಡಿದ್ದ ಉಗ್ರರ ಸಂಘಟನೆಯ ಕ್ಯಾಂಪ್ ಸಂಪೂರ್ಣ ಧ್ವಂಸವಾಗಿದ್ದು, ಪುಲ್ವಾಮಾ ದಾಳಿಗೆ ಪ್ರತೀಕಾರವನ್ನು ಭಾರತ ತೆಗೆದುಕೊಂಡಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಬೆಂಗಳೂರಿಗೆ ಬಂದಿಳಿಯಿತು ರಫೇಲ್ ವಿಮಾನಗಳು – ವಿಶೇಷತೆ ಏನು? ವಿಡಿಯೋ ನೋಡಿ

    ಬೆಂಗಳೂರಿಗೆ ಬಂದಿಳಿಯಿತು ರಫೇಲ್ ವಿಮಾನಗಳು – ವಿಶೇಷತೆ ಏನು? ವಿಡಿಯೋ ನೋಡಿ

    ಬೆಂಗಳೂರು: ಸದ್ಯ ದೇಶದ ರಾಜಕೀಯ ವಲಯದಲ್ಲಿ ಭಾರೀ ಸದ್ದು ಮಾಡುತ್ತಿರುವ ರಫೇಲ್ ವಿಮಾನ ಭಾರತದಲ್ಲಿ ಲ್ಯಾಂಡ್ ಆಗಿದೆ. ಏರೋ ಇಂಡಿಯಾ ವೈಮಾನಿಕ ಪ್ರದರ್ಶನಕ್ಕೆ ಫ್ರಾನ್ಸಿನ ಡಸಾಲ್ಟ್ ಕಂಪನಿಯ 3 ರಫೇಲ್ ವಿಮಾನಗಳು ಯಲಹಂಕ ವಾಯುನೆಲೆಗೆ ಆಗಮಿಸಿವೆ.

    ಮೂರು ವಿಮಾನಗಳ ಪೈಕಿ 2 ವಿಮಾನಗಳು ವೈಮಾನಿಕ ಪ್ರದರ್ಶನ ನೀಡಿದರೆ ಒಂದು ವೀಕ್ಷಣೆಗೆ ಇರಿಸಲಾಗುತ್ತದೆ. ಹಾರಾಟ ಪ್ರದರ್ಶನ ನೀಡಲಿರುವ ವಿಮಾನಗಳ ಅಧಿಕೃತ ಪೂರ್ವಸಿದ್ಧತೆಯ ಹಾರಾಟ ಗುರುವಾರದಿಂದ ಆರಂಭವಾಗಲಿದೆ. 12ನೇ ಆವೃತ್ತಿಯ ಏರೋ ಇಂಡಿಯಾ ವೈಮಾನ ನಿಕ ಪ್ರದರ್ಶನ ಫೆ.20 ರಿಂದ ಫೆ.24ರವರೆಗೆ ನಡೆಯಲಿದೆ. ಇದನ್ನೂ ಓದಿ: ರಫೇಲ್ ಡೀಲ್ – ಯಾವುದು ಅಗ್ಗ? ಯಾವುದು ದುಬಾರಿ?

    ಇದುವರೆಗೆ ದೇಶ- ವಿದೇಶಗಳ 365 ಕಂಪನಿಗಳು ಪ್ರದರ್ಶನದಲ್ಲಿ ಭಾಗವಹಿಸಲು ನೋಂದಣಿ ಮಾಡಿಕೊಂಡಿದ್ದು, ಆಕಾಶದಲ್ಲಿ ಪ್ರದರ್ಶನ ನೀಡಲು 31 ವಿಮಾನಗಳು ಒಪ್ಪಿಗೆ ನೀಡಿವೆ. 22 ವಿಮಾನಗಳನ್ನು ಪ್ರದರ್ಶನಕ್ಕಿಡಲಾಗುತ್ತಿದ್ದು, ದೇಶೀಯ ಸಾರಂಗ್, ಸೂರ್ಯಕಿರಣ್ ವಿಮಾನಗಳು ಭಾಗವಹಿಸಲಿವೆ.

    ರಫೇಲ್ ವಿಶೇಷತೆ ಏನು?
    ಎರಡು ಎಂಜಿನ್, ಎರಡು ಸೀಟ್ ಗಳನ್ನು ಹೊಂದಿರುವ ವಿಮಾನ ಗಂಟೆಗೆ ಗರಿಷ್ಟ 2 ಸಾವಿರ ಕಿ.ಮೀ ವೇಗದಲ್ಲಿ ಹಾರಾಟ ನಡೆಸಬಲ್ಲದು. 9,500 ಕೆಜಿ ತೂಕದ ಈ ವಿಮಾನ 9,500 ಕೆಜಿ ತೂಕದ ಶಸ್ರ್ತಾಸ್ತ್ರಗಳನ್ನು ಹೊತ್ತುಕೊಂಡು ಹೋಗುವ ಸಾಮರ್ಥ್ಯವನ್ನು ಹೊಂದಿದೆ. ಈ ವಿಮಾನ ಇಳಿಯಲು ಮತ್ತು ಹಾರಾಟಕ್ಕೆ 400 ಮೀಟರ್ ಉದ್ದದ ರನ್‍ವೇ ಅಗತ್ಯವಿಲ್ಲ.

    ವೈರಿಗಳನ್ನು ಗುರುತಿಸಲು ರಫೇಲ್ ವಿಮಾನದಲ್ಲಿ ಸ್ಪೆಕ್ಟ್ರಾ ಸಿಸ್ಟಂ ಇದೆ. ಥೇಲ್ಸ್ ಗ್ರೂಪ್ ಈ ಸ್ಪೆಕ್ಟ್ರಾ ಸಿಸ್ಟಂ ಅನ್ನು ಅಭಿವೃದ್ಧಿ ಪಡಿಸಿದೆ. ರೇಡಿಯೋ ಫಿಕ್ವೆನ್ಸಿ, ರೇಡಾರ್ ವಾರ್ನಿಂಗ್ ರಿಸೀವರ್, ಲೇಸರ್ ವಾರ್ನಿಂಗ್, ಮಿಸೈಲ್ ವಾರ್ನಿಂಗ್, ರೇಡಾರ್ ಜಾಮರ್ ಗಳನ್ನು ಸ್ಪೆಕ್ಟ್ರಾ ಸಿಸ್ಟಂ ನಲ್ಲಿರುವ ಸೆನ್ಸರ್ ಗಳು ಗ್ರಹಿಸುತ್ತವೆ. 1800 ಕಿ.ಮಿ ವ್ಯಾಪ್ತಿ ವಿರೋಧಿಗಳ ಕಾರ್ಯ ಚಟುವಟಿಕೆಯನ್ನು ಗ್ರಹಿಸುವ ಸಾಮರ್ಥ್ಯ ಹೊಂದಿದೆ. ಈ ಕಾರಣಕ್ಕಾಗಿಯೇ ರಫೇಲ್ ವಿಮಾನ ಬೇರೆ ಯುದ್ಧ ವಿಮಾನಗಳಿಗಿಂತ ಭಿನ್ನವಾಗಿ ಗುರುತಿಸಿಕೊಂಡಿದೆ.

    ಡಸಾಲ್ಟ್ ಕಂಪನಿ 1986ರಲ್ಲಿ ಮೊದಲ ರಫೇಲ್ ವಿಮಾನವನ್ನು ನಿರ್ಮಿಸಿದ್ದು, ಭಾರತ ಅಲ್ಲದೇ ಈಜಿಪ್ಟ್, ಕತಾರ್ ದೇಶಗಳು ರಫೇಲ್ ಖರೀದಿ ಸಂಬಂಧ ಡಸಾಲ್ಟ್ ಕಂಪನಿಯ ಜೊತೆ ಮಾತುಕತೆ ನಡೆಸಿವೆ. ಇದನ್ನೂ ಓದಿ: ಪ್ರಧಾನಿ ಮೋದಿಗೆ ಅತಿ ದೊಡ್ಡ ಗೆಲುವು: ಸುಪ್ರೀಂ ತೀರ್ಪಿನಲ್ಲಿರುವ ಪ್ರಮುಖ ಅಂಶಗಳು ಏನು?

    ಯಾವ ದೇಶ ಏನು ಬೇಡಿಕೆ ಇಡುತ್ತದೋ ಆ ಬೇಡಿಕೆಗೆ ಅನುಗುಣವಾಗಿ ಡಸಾಲ್ಟ್ ಕಂಪನಿ ರಫೇಲ್ ವಿಮಾನವನ್ನು ಅಭಿವೃದ್ಧಿ ಪಡಿಸುತ್ತದೆ. ಲೋ ಬ್ಯಾಂಡ್ ಜಾಮರ್, 10 ಗಂಟೆಗಳ ಹಾರಾಟ ಮಾಹಿತಿ ಸಂಗ್ರಹ, ಇಸ್ರೇಲಿ ಹೆಲ್ಮೆಟ್ ಮೌಂಟೆಡ್ ಡಿಸ್ಪ್ಲೇ, ರೆಡಾರ್ ವಾರ್ನಿಂಗ್ ಇನ್ಫ್ರಾರೆಡ್ ಶೋಧ ಮತ್ತು ಟ್ರ್ಯಾಕಿಂಗ್ ಸೇರಿದಂತೆ ಹಲವು ಅತ್ಯಾಧುನಿಕ ಉಪಕರಣಗಳ ಹಾಗೂ ಸೌಲಭ್ಯಗಳನ್ನು  ಅಳವಡಿಸಬೇಕೆಂದು ಭಾರತ ಬೇಡಿಕೆ ಇಟ್ಟಿದ್ದು, ಈ ಬೇಡಿಕೆಗೆ ಅನುಗುಣವಾಗಿ ರಫೇಲ್ ವಿಮಾನ ತಯಾರಾಗುತ್ತಿದೆ.

  • ಉತ್ತರಾಖಂಡ್ ರಕ್ಷಣಾ ಕಾರ್ಯಚರಣೆ ಸ್ಫೂರ್ತಿ -ಚಹಾ ಮಾರುವವನ ಪುತ್ರಿ ಭಾರತೀಯ ವಾಯುಸೇನೆಗೆ ಆಯ್ಕೆ!

    ಉತ್ತರಾಖಂಡ್ ರಕ್ಷಣಾ ಕಾರ್ಯಚರಣೆ ಸ್ಫೂರ್ತಿ -ಚಹಾ ಮಾರುವವನ ಪುತ್ರಿ ಭಾರತೀಯ ವಾಯುಸೇನೆಗೆ ಆಯ್ಕೆ!

    ಭೋಪಾಲ್: ಭಾರತೀಯ ವಾಯುಸೇನೆ ನಡೆಸುವ ಹಾರಾಟ ವಿಭಾಗಕ್ಕೆ ನಡೆಸಿದ ಪ್ರವೇಶ ಪರೀಕ್ಷೆಯಲ್ಲಿ ಮಧ್ಯಪ್ರದೇಶದ ಮಿಮುಚ್ ಜಿಲ್ಲೆಯಿಂದ ಚಹಾ ಮಾರಾಟ ಮಾಡುವವನ ಪುತ್ರಿ ನೇಮಕಗೊಂಡು ರಾಜ್ಯಕ್ಕೆ ಕೀರ್ತಿ ತಂದಿದ್ದಾಳೆ.

    ಅಂಚಲ್ ಗಂಗ್ವಾಲ್(24) ಆಯ್ಕೆಗೊಂಡ ಯುವತಿ. ಮೂಲತಃ ಮಿಮುಚ್ ಜಿಲ್ಲೆಯವರಾದ ಅಂಚಲ್ ವಾಯುಸೇನೆ ನೇಮಕಾತಿ ಪ್ರವೇಶ ಪರೀಕ್ಷೆಯಲ್ಲಿ ಮಧ್ಯಪ್ರದೇಶ ರಾಜ್ಯದಿಂದ ಆಯ್ಕೆಯಾದ ಒಬ್ಬಳೆ ಒಬ್ಬ ಯುವತಿ. ಇವರ ತಂದೆ ಸುರೇಶ್ ಗಂಗ್ವಾಲ್ ಮಿಮುಚ್‍ನ ಬಸ್ ನಿಲ್ದಾಣದ ಬಳಿ ಚಹಾ ಅಂಗಡಿ ನಡೆಸುತ್ತಿದ್ದಾರೆ.

    ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅಂಚಲ್, ನಾನು 12ನೇ ತರಗತಿಯಲ್ಲಿ ಓದುತ್ತಿರುವಾಗ 2013ರ ಉತ್ತರಾಖಂಡ್‍ನಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಲ್ಲಿ ಭಾರತೀಯ ರಕ್ಷಣಾ ಪಡೆಗಳು ನಡೆಸಿದ ರಕ್ಷಣಾ ಕಾರ್ಯಚರಣೆಯಿಂದ ಪ್ರೇರೇಪಣೆಗೊಂಡು ಅಂದೇ ಭಾರತೀಯ ಸೇನೆಗೆ ಸೇರಬೇಕೆಂದು ನಿರ್ಧಾರ ಮಾಡಿಕೊಂಡಿದ್ದೆ. ಆದರೆ ನನ್ನ ಕುಟುಂಬ ನನ್ನನ್ನು ಓದಿಸುವಷ್ಟು ಆರ್ಥಿಕ ಸ್ಥಿತಿಯಲ್ಲಿರಲಿಲ್ಲ. ಹೀಗಾಗಿ ನಾನು ಭಾರತೀಯ ವಾಯುಸೇನೆಯ ಪ್ರವೇಶ ಪರೀಕ್ಷೆಯನ್ನು ತೆಗೆದುಕೊಂಡು ಆಯ್ಕೆಯಾಗಿದ್ದೇನೆ ಎಂದು ತಿಳಿಸಿದರು.

    ಭಾರತೀಯ ವಾಯುಸೇನಾ ಪರೀಕ್ಷೆಯು ಅಷ್ಟು ಸುಲಭವಾಗಿರಲಿಲ್ಲ. ನಾನು ಹಲವು ವರ್ಷಗಳಿಂದ 5 ಭಾರೀ ಪರೀಕ್ಷೆ ಬರೆದಿದ್ದರೂ ಆಯ್ಕೆಗೊಂಡಿರಲಿಲ್ಲ. ಈ ವರ್ಷ ಬರೆದ ಪರೀಕ್ಷೆಯಲ್ಲಿ ಜೂನ್ 6ರ ಫಲಿತಾಂಶದಲ್ಲಿ ತೇರ್ಗಡೆಯಾಗಿದ್ದೇನೆ ಎಂದು ಸಂತಸ ಹಂಚಿಕೊಂಡಿದ್ದಾರೆ.

    ಮಗಳ ಸಾಧನೆಯ ಬಗ್ಗೆ ಪ್ರತಿಕ್ರಿಯಿಸಿದ ತಂದೆ, ನಾನು ಬಸ್ ನಿಲ್ದಾಣದ ಹತ್ತಿರ ಚಹಾ ವ್ಯಾಪಾರ ಮಾಡುತ್ತಿದ್ದು, ಎಲ್ಲರೂ ನಾಮದೇವ್ ಟೀ ಸ್ಟಾಲ್ ಎಂದೇ ಗುರುತಿಸುತ್ತಾರೆ. ಮಗಳ ಈ ಸಾಧನೆಗೆ ಬರುವ ಗ್ರಾಹಕರು ಅಭಿನಂದನೆ ಸಲ್ಲಿಸಿ ಹೋಗುತ್ತಿದ್ದಾರೆ ಎಂದು ಹೇಳಿದ್ದಾರೆ.

    ನನ್ನ ಆರ್ಥಿಕ ಸಂಕಷ್ಟದ ನಡುವೆಯೂ ಮೂರು ಮಕ್ಕಳಿಗೆ ವಿದ್ಯಾಭ್ಯಾಸ ಕೊಡಿಸಿದ್ದೇನೆ. ಮಗ ಎಂಜಿನಿಯರಿಂಗ್ ಮಾಡುತ್ತಿದ್ದು, ಮಗಳು 12 ನೇ ತರಗತಿ ಓದುತ್ತಿದ್ದಾಳೆ. ಇಬ್ಬರಿಗೂ ಕೋಚಿಂಗ್ ನೀಡಲು ಸಾಲ ಮಾಡಿ ಸೇರಿಸಿದ್ದೆ ಎಂದು ಈ ವೇಳೆ ಹೇಳಿಕೊಂಡರು.

    ದೇಶಾದ್ಯಂತ ಒಟ್ಟು 6 ಲಕ್ಷ ಅಭ್ಯರ್ಥಿಗಳು ಈ ಪರೀಕ್ಷೆಗೆ ಹಾಜರಾಗಿದ್ದು,  ಕೇವಲ 22 ಮಂದಿ ಆಯ್ಕೆಗೊಂಡಿದ್ದಾರೆ ಇದರಲ್ಲಿ ಅಂಚಲ್‍ ಕೂಡ ಒಬ್ಬರಾಗಿದ್ದಾರೆ. ವಾಯುಸೇನಾ ಪಡೆಯು ಅಂಚಲ್‍ಗೆ ಜೂನ್ 30ರೊಳಗಾಗಿ ಹೈದರಾಬಾದ್‍ನ ದುಂಡಿಗಲ್ ಬಳಿ ಇರುವ ಭಾರತೀಯ ವಾಯುಸೇನಾ ಅಕಾಡೆಮಿಗೆ ಸೇರುವಂತೆ ಸೂಚಿಸಿದೆ.

  • ಪತ್ನಿ ಜೊತೆಗೆ ಅಕ್ರಮ ಸಂಬಂಧ: ವಾಯುಸೇನಾಧಿಕಾರಿ ಸಹೋದ್ಯೋಗಿಯನ್ನು ಕೊಂದು ಏನ್ ಮಾಡ್ದ ಗೊತ್ತಾ?

    ಪತ್ನಿ ಜೊತೆಗೆ ಅಕ್ರಮ ಸಂಬಂಧ: ವಾಯುಸೇನಾಧಿಕಾರಿ ಸಹೋದ್ಯೋಗಿಯನ್ನು ಕೊಂದು ಏನ್ ಮಾಡ್ದ ಗೊತ್ತಾ?

    ಪಂಜಾಬ್: ಪತ್ನಿ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದಾನೆಂದು ಶಂಕಿಸಿ ವಾಯುಪಡೆಯ ಅಧಿಕಾರಿಯೊಬ್ಬ ತನ್ನ ಸಹೋದ್ಯೋಗಿಯನ್ನೇ ಕೊಂದು ತುಂಡು ತುಂಡಾಗಿ ಕತ್ತರಿಸಿ ಬಳಿಕ ಪಾಲಿಥೀನ್ ಚೀಲಗಳಲ್ಲಿ ತುಂಬಿಸಿಟ್ಟ ಭಯಾನಕ ಸತ್ಯವೊಂದು ಪೊಲೀಸರ ವಿಚಾರಣೆಯ ವೇಳೆ ಬೆಳಕಿಗೆ ಬಂದಿದೆ.

    ಉತ್ತರಪ್ರದೇಶದ 27 ವರ್ಷದ ವಿಪಿನ್ ಶುಕ್ಲಾ ಕೊಲೆಯಾದ ದುರ್ಧೈವಿಯಾಗಿದ್ದು. ಈತ ಪಂಜಾಬ್‍ನ ಭಿಸಿಯಾನ ವಾಯುನೆಲೆಯಲ್ಲಿ ಉದ್ಯೋಗ ಮಾಡುತ್ತಿದ್ದನು. ಕೊಲೆ ಪ್ರಕರಣ ಸಂಬಂಧ ಸದ್ಯ ಪೊಲೀಸರು ವಾಯುನೆಲೆ ಅಧಿಕಾರಿಯಾದ ಸುಲೇಶ್ ಕುಮಾರ್ ಹಾಗೂ ಅವರ ಪತ್ನಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

    ಪ್ರಕರಣ ಬೆಳಕಿಗೆ: ಫೆಬ್ರವರಿ 15ರಿಂದ ವಿಪಿನ್ ಶುಕ್ಲಾ ನಾಪತ್ತೆಯಾಗಿದ್ದನು. ಈ ವೇಳೆ ಪತ್ನಿ ಕುಂಕುಮ್, ಪತಿ ನಾಪತ್ತೆಯಾಗಿದ್ದಾರೆ ಅಂತಾ ಬತಿಂಡಾದ ನಥಾನಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

    ದೂರಿನ ಆಧಾರದ ಮೇಲೆ ಪೊಲೀಸರು ವಾಯುನೆಲೆಯ ಅಧಿಕಾರಿಗಳ ಕ್ವಾಟ್ರಸ್‍ನಲ್ಲಿ ಹುಡುಕಾಟ ನಡೆಸುತ್ತಿದ್ದರು. ಈ ವೇಳೆ ಪೊಲೀಸರಿಗೆ ಸುಲೇಶ್ ಕುಮಾರ್ ಅವರ ಮನೆಯ ಆವರಣದಿಂದ ಕೊಳೆತ ಮಾಂಸದ ವಾಸನೆ ಬಂದಂತಾಯ್ತು. ಈ ವಾಸನೆಯ ಜಾಡು ಹಿಡಿದ ಪೊಲೀಸರು ಸುಲೇಶ್ ಮನೆಯನ್ನು ಜಾಲಾಡಿದ್ದರು. ಪರಿಣಾಮ ಮನೆಯ ಫ್ರಿಜ್‍ನಲ್ಲಿ 16 ಪಾಲಿಥೀನ್ ಚೀಲಗಳಲ್ಲಿ ಶವವೊಂದರ ತುಂಡಾದ ದೇಹಗಳನ್ನು ಪ್ಯಾಕ್ ಮಾಡಿಟ್ಟಿರುವ ಬಗ್ಗೆ ಬೆಳಕಿಗೆ ಬಂದಿದೆ. ಕೂಡಲೇ ಸುಲೇಶ್, ಪತ್ನಿ ಅನುರಾಧಳನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.

    ಈ ವೇಳೆ ಸುಲೇಶ್, ಫೆಬ್ರವರಿ 8ರಂದು ನನ್ನ ಮನೆಯನ್ನು ಬದಲಾಯಿಸುವ ಸಲುವಾಗಿ ಮನೆ ವಸ್ತುಗಳನ್ನು ಪ್ಯಾಕ್ ಮಾಡಲು ಇದೆ. ಹೀಗಾಗಿ ವಿಪಿನ್‍ನನ್ನು ಉಪಾಯ ಮಾಡಿ ಮನೆಗೆ ಕರೆದಿದ್ದೆ. ಬಳಿಕ ಕೊಲೆ ಮಾಡಿ ಆತನ ದೇಹವನ್ನು ಒಂದು ಬಾಕ್ಸ್ ನಲ್ಲಿ ಹಾಕಿ ಹೊಸ ಮನೆಯಲ್ಲಿ ಇಟ್ಟಿದ್ದೆ ಅಂತಾ ಮಾಡಿದ ತಪ್ಪನ್ನು ಒಪ್ಪಿಕೊಂಡಿದ್ದಾನೆ. ಮಾತ್ರವಲ್ಲದೇ ತನ್ನ ಪತ್ನಿಯ ಜತೆ ಅಕ್ರಮ ಸಂಬಂಧ ಹೊಂದಿದ್ದರಿಂದಲೇ ವಿಪಿನ್ ನನ್ನು ಕೊಲೆಗೈದಿದ್ದಾಗಿ ಹೇಳಿಕೆ ನೀಡಿದ್ದಾನೆ.

    ಸದ್ಯ ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 302 ರ(ಕೊಲೆ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

  • ಏರ್‍ ಶೋದಿಂದ ತೆರಳುತ್ತಿದ್ದ ಹೆಲಿಕಾಪ್ಟರ್ ಬನ್ನೇರುಘಟ್ಟದಲ್ಲಿ ತುರ್ತು ಭೂಸ್ಪರ್ಶ

    ಏರ್‍ ಶೋದಿಂದ ತೆರಳುತ್ತಿದ್ದ ಹೆಲಿಕಾಪ್ಟರ್ ಬನ್ನೇರುಘಟ್ಟದಲ್ಲಿ ತುರ್ತು ಭೂಸ್ಪರ್ಶ

    ಆನೇಕಲ್: ತಾಂತ್ರಿಕ ದೋಷ ದಿಂದಾಗಿ ಭಾರತೀಯ ವಾಯುಸೇನೆಗೆ ಸೇರಿದ ಹೆಲಿಕಾಪ್ಟರ್ ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಬನ್ನೇರುಘಟ್ಟದ ಬಳಿಯ ಬೇಗೆಹಳ್ಳಿಯಲ್ಲಿ ಭಾನುವಾರ ಸಂಜೆ ತುರ್ತು ಭೂಸ್ಪರ್ಶ ಮಾಡಿದೆ.

    ಯಲಹಂಕದಲ್ಲಿ ನಡೆದಿದ್ದ ಏರೋ ಇಂಡಿಯಾ ಪ್ರದರ್ಶನಕ್ಕೆ ಆಗಮಿಸಿದ್ದ ಹೆಲಿಕಾಪ್ಟರ್ ಇಂದು ಸಂಜೆ ಎಚ್‍ಎಎಲ್‍ಗೆ ತೆರಳುತ್ತಿತ್ತು. 6 ಮಂದಿ ಪ್ರಯಾಣಿಸುತ್ತಿದ್ದಾಗ ಎಂಜಿನ್‍ನಲ್ಲಿ ದೋಷ ಕಂಡು ಬಂದ ಹಿನ್ನೆಲೆಯಲ್ಲಿ ಪೈಲಟ್ ಕೂಡಲೇ ಲ್ಯಾಂಡ್ ಮಾಡಿದ್ದಾರೆ.

    ವಿಷಯ ತಿಳಿದ ಕೂಡಲೇ ಮತ್ತೊಂದು ಹೆಲಿಕಾಪ್ಟರ್ ನಲ್ಲಿ ಬಂದ ಇಂಜಿನಿಯರ್‍ಗಳು ಎಂಜಿನ್‍ನಲ್ಲಿದ್ದ ದೋಷವನ್ನು ಸರಿ ಪಡಿಸಿದ್ದು ಈಗ ಹೆಲಿಕಾಪ್ಟರ್ ಎಚ್‍ಎಎಲ್‍ಗೆ ತೆರಳಿದೆ.

    ಹೆಲಿಕಾಪ್ಟರ್ ಭೂ ಸ್ಪರ್ಶ ವಾದ ಸುದ್ದಿ ತಿಳಿದು ನೂರಾರು ಸಾರ್ವಜನಿಕರು ಸ್ಥಳದಲ್ಲಿ ಜಮಾಯಿಸಿ ಏರ್ ಶೋ ನೋಡಿದಷ್ಟೆ ಸಂಭ್ರಮಪಟ್ಟರು.