Tag: Airlines

  • 179 ಮಂದಿ ಸಾವು ಪ್ರಕರಣ – ದೇಶದ ಎಲ್ಲಾ ಬೋಯಿಂಗ್ 737-800 ವಿಮಾನ ಪರೀಕ್ಷೆಗೆ ಮುಂದಾದ ದ. ಕೊರಿಯಾ

    179 ಮಂದಿ ಸಾವು ಪ್ರಕರಣ – ದೇಶದ ಎಲ್ಲಾ ಬೋಯಿಂಗ್ 737-800 ವಿಮಾನ ಪರೀಕ್ಷೆಗೆ ಮುಂದಾದ ದ. ಕೊರಿಯಾ

    ಸಿಯೋಲ್: ದೇಶದ ವಿಮಾನಯಾನ ಸಂಸ್ಥೆಗಳು ನಿರ್ವಹಿಸುವ ಎಲ್ಲಾ ಬೋಯಿಂಗ್ 737-800 ವಿಮಾನಗಳ (Boeing 737-800 aircraft) ಸುರಕ್ಷತಾ ತಪಾಸಣೆ ನಡೆಸುವುದಾಗಿ ದಕ್ಷಿಣ ಕೊರಿಯಾದ (South Korea) ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

    ದಕ್ಷಿಣ ಕೊರಿಯಾದ ಮುವಾನ್ ವಿಮಾನ ನಿಲ್ದಾಣದಲ್ಲಿ (Muan International Airport) ಲ್ಯಾಂಡಿಂಗ್‌ ವೇಳೆ ಸಂಭವಿಸಿದ ದುರಂತದಲ್ಲಿ 179 ಮಂದಿ ಸಾವಿಗೀಡಾದ ಬೆನ್ನಲ್ಲೇ ದೇಶದ ವಿಮಾನಯಾನ ಸಂಸ್ಥೆಗಳು ಈ ಕ್ರಮಕ್ಕೆ ಮುಂದಾಗಿದೆ. ಅಪಘಾತಕ್ಕೆ ನಿಖರ ಕಾರಣ ಏನೆಂಬುದನ್ನು ಪತ್ತೆಹಚ್ಚುವ ತನಿಖೆಯ ಭಾಗವಾಗಿ ತಪಾಸಣೆಗೆ ಮುಂದಾಗಿದೆ ಎಂದು ವರದಿಯಾಗಿದೆ. ಇದನ್ನೂ ಓದಿ: ದಕ್ಷಿಣ ಕೊರಿಯಾ | ಲ್ಯಾಂಡಿಂಗ್ ಗೇರ್‌ ವೈಫಲ್ಯದಿಂದ ವಿಮಾನ ಪತನ – 179 ಮಂದಿ ದುರ್ಮರಣ

    ದಕ್ಷಿಣ ಕೊರಿಯಾದ ಹಂಗಾಮಿ ಅಧ್ಯಕ್ಷ ಚೋಯ್ ಸಾಂಗ್-ಮೊಕ್ ಅವರಿಂದು ಟಾಸ್ಕ್ ಫೋರ್ಸ್ ಸಭೆಯ ಅಧ್ಯಕ್ಷತೆ ವಹಿಸಿ ದೇಶದ ವಿಮಾನ ಕಾರ್ಯಾಚರಣೆ ವ್ಯವಸ್ಥೆಗಳ ತುರ್ತು ಪರಿಶೀಲನೆ ನಡೆಸಿದರು. ಅಲ್ಲದೇ ಇಂತಹ ಘಟನೆಗಳು ಪುನರಾವರ್ತನೆ ಆಗಬಾರದು. ಅದಕ್ಕಾಗಿ ಬೋಯಿಂಗ್ 737-800 ವಿಮಾನಗಳ ಸುರಕ್ಷತಾ ತಪಾಸಣೆ ನಡೆಸಿ, ದೇಶದ ಒಟ್ಟಾರೆ ವಾಯುಯಾನ ಸುರಕ್ಷತಾ ವ್ಯವಸ್ಥೆಯನ್ನ ನವೀಕರಿಸಲು ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ.

    ಬೋಯಿಂಗ್‌ 737-800 ವಿಮಾನವು ಬೋಯಿಂಗ್‌-737 ಮ್ಯಾಕ್ಸ್‌ ಸರಣಿಗಿಂತಲೂ ವಿಭಿನ್ನವಾಗಿದೆ. ಆದ್ದರಿಂದ ಜೆಟ್‌ ಏರ್‌ಲೈನ್‌ಗಳ ಲೆಕ್ಕಪರಿಶೋಧನೆ ಮತ್ತು ಸುರಕ್ಷತಾ ಮಾನದಂಡಗಳ ಕುರಿತು ವಿಮರ್ಷೆ ನಡೆಸುವುದಾಗಿ ಡೆಲ್ಟಾ ಏರ್ ಲೈನ್ಸ್‌ನ ಮಾಜಿ ಮುಖ್ಯ ಪೈಲಟ್ ಮತ್ತು ಈಗ ಸಲಹೆಗಾರರಾಗಿರುವ ಅಲನ್ ಪ್ರೈಸ್ ಹೇಳಿದ್ದಾರೆ. ಇದನ್ನೂ ಓದಿ: ಮಹಿಳೆಯರನ್ನು ಉದ್ಯೋಗದಿಂದ ಕೈಬಿಡಿ – ಎನ್‌ಜಿಒಗಳಿಗೆ ತಾಲಿಬಾನ್‌ ಎಚ್ಚರಿಕೆ

    ಒಂದು ದಿನದ ಹಿಂದೆಯಷ್ಟೇ ದಕ್ಷಿಣ ಕೊರಿಯಾದ ಮುವಾನ್ ವಿಮಾನ ನಿಲ್ದಾಣದಲ್ಲಿ ಪತನಗೊಂಡ ವಿಮಾನ ಕಂಪನಿಯು 39 ಬೋಯಿಂಗ್ 737-800 ಸರಣಿಯ ವಿಮಾನಗಳನ್ನು ನಿರ್ವಹಿಸುತ್ತದೆ. ಒಟ್ಟು 181 ಮಂದಿ ಪ್ರಯಾಣಿಕ ಪೈಕಿ ಇಬ್ಬರು ಮಾತ್ರ ಬದುಕುಳಿದು ಪವಾಡ ಸೃಷ್ಟಿಸಿದ್ದಾರೆ, ಆದ್ರೆ ಅವರ ಆರೋಗ್ಯ ಸ್ಥಿತಿಯೂ ಗಂಭೀರವಾಗಿದೆ ಏನ್ನಲಾಗಿದೆ. ಇದನ್ನೂ ಓದಿ: ಗ್ರೀನ್‌ಲ್ಯಾಂಡ್‌ ಮೇಲೆ ಟ್ರಂಪ್‌ಗೆ ಕಣ್ಣೇಕೆ? ಲಾಭವೇನು?

  • ಏರ್ ಇಂಡಿಯಾದೊಂದಿಗೆ ವಿಸ್ತಾರ ವಿಲೀನ – ದೋಹಾದಿಂದ ಮುಂಬೈಗೆ ಮೊದಲ ವಿಮಾನ ಹಾರಾಟ

    ಏರ್ ಇಂಡಿಯಾದೊಂದಿಗೆ ವಿಸ್ತಾರ ವಿಲೀನ – ದೋಹಾದಿಂದ ಮುಂಬೈಗೆ ಮೊದಲ ವಿಮಾನ ಹಾರಾಟ

    ನವದೆಹಲಿ: ಏರ್ ಇಂಡಿಯಾ (Air India) ಹಾಗೂ ವಿಸ್ತಾರ (Vistara) ವಿಮಾನಯಾನ ಸಂಸ್ಥೆಗಳ ವಿಲೀನದ ಬಳಿಕ ಮೊದಲ ವಿಮಾನ ಹಾರಾಟಗೊಂಡಿದೆ.

    ಎ12286 ಕೋಡ್‌ನೊಂದಿಗೆ ಕಾರ್ಯನಿರ್ವಹಿಸುವ ವಿಮಾನವು ಸೋಮವಾರ ಸ್ಥಳೀಯ ಕಾಲಮಾನ ರಾತ್ರಿ 10:07ಕ್ಕೆ ಕತಾರ್‌ನ ದೋಹಾದಿಂದ ಮುಂಬೈಗೆ ಹೊರಟಿದ್ದು, ಮಂಗಳವಾರ ಬೆಳಿಗ್ಗೆ ಮುಂಬೈಗೆ ತಲುಪಲಿದೆ. ಟಾಟಾ ಗ್ರೂಪ್ಸ್‌ನ (TATA Groups) ಭಾಗವಾಗಿರುವ ಎರಡು ಸಂಸ್ಥೆಗಳು ವಿಲೀನಗೊಂಡಿದ್ದು, ವಿಲೀನವಾದ ಬಳಿಕ ಮೊದಲ ಅಂತರರಾಷ್ಟ್ರೀಯ ವಿಮಾನ ಹಾರಾಟಗೊಂಡಿದೆ. ಇನ್ನೂ ಭಾರತದಲ್ಲಿ ಮಂಗಳವಾರ ನಸುಕಿನ ಜಾವ 01:30 ಗಂಟೆಗೆ ಮುಂಬೈನಿಂದ (Mumbai) ದೆಹಲಿಗೆ (Delhi) ಮೊದಲ ವಿಮಾನ ಹಾರಾಟಗೊಂಡಿದೆ.ಇದನ್ನೂ ಓದಿ: ರೆಬೆಲ್ ಸ್ಟಾರ್ ಮನೆಯಲ್ಲಿ ಸಂಭ್ರಮ – ಮುದ್ದಾದ ಗಂಡು ಮಗುವಿಗೆ ಜನ್ಮ ಕೊಟ್ಟ ಅವಿವಾ

    ವಿಲೀನದ ನಂತರ ಏರ್ ಇಂಡಿಯಾ ನಿರ್ವಹಿಸುತ್ತಿರುವ ವಿಸ್ತಾರ ವಿಮಾನಗಳಿಗಾಗಿ ‘ಎ12ಎಕ್ಸ್ಎಕ್ಸ್ಎಕ್ಸ್’ ಕೋಡ್‌ನ್ನು ಬಳಸಲಾಗುತ್ತಿದೆ. ಇದು ಪ್ರಯಾಣಿಕರಿಗೆ ಬುಕ್ಕಿಂಗ್ ಸಮಯದಲ್ಲಿ ವಿಸ್ತಾರ ವಿಮಾನವನ್ನು ಗುರುತಿಸಲು ಸಹಾಯ ಮಾಡುತ್ತದೆ.

    ಟಾಟಾ ಗ್ರೂಪ್‌ನ ಭಾಗವಾಗಿರುವ ಎರಡೂ ವಿಮಾಯಾನ ಸಂಸ್ಥೆಗಳ ವಿಲೀನವು ದೇಶದ ನಾಗರಿಕ ವಿಮಾನಯಾನ ಕ್ಷೇತ್ರದಲ್ಲಿ ಪ್ರಮುಖ ಬಲವರ್ಧನೆಯನ್ನು ಸೂಚಿಸುತ್ತದೆ. ವಿಸ್ತಾರ ಇದು ಟಾಟಾಸ್ ಮತ್ತು ಸಿಂಗಾಪುರ್ ಏರಲೈನ್ಸ್ ನಡುವಿನ ಜಂಟಿ ಉದ್ಯಮವಾಗಿದ್ದು, ವಿಸ್ತಾರ ವಿಲೀನಗೊಂಡ ಬಳಿಕ ಸಿಂಗಾಪುರ್ ಏರಲೈನ್ಸ್ (Singapore Airlines) ಏರ್ ಇಂಡಿಯಾದ 25.1 ಶೇಕಡಾ ಪಾಲನ್ನು ಪಡೆಯುತ್ತದೆ.ಇದನ್ನೂ ಓದಿ: ಪಿಜಿ ಆಯುಷ್‌ ತಾತ್ಕಾಲಿಕ ಫಲಿತಾಂಶ ಪ್ರಕಟ – ಕೆಇಎ

  • ಮತ್ತೆ 3 ವಿಮಾನಗಳಿಗೆ ಬಾಂಬ್ ಬೆದರಿಕೆ ಕರೆ – ಬೆಂಗಳೂರಿಂದ ಮುಂಬೈಗೆ ಹೊರಟಿದ್ದ ಫ್ಲೈಟ್‌ಗೂ ಥ್ರೆಟ್ ಕಾಲ್

    ಮತ್ತೆ 3 ವಿಮಾನಗಳಿಗೆ ಬಾಂಬ್ ಬೆದರಿಕೆ ಕರೆ – ಬೆಂಗಳೂರಿಂದ ಮುಂಬೈಗೆ ಹೊರಟಿದ್ದ ಫ್ಲೈಟ್‌ಗೂ ಥ್ರೆಟ್ ಕಾಲ್

    ನವದೆಹಲಿ: ಕಳೆದ 24 ಗಂಟೆಗಳಲ್ಲಿ 3 ವಿಮಾನಗಳಿಗೆ ಬಾಂಬ್ ಬೆದರಿಕೆ (Bomb Threat) ಕರೆಗಳು ಬಂದಿದೆ. ಆ ಮೂಲಕ ಒಂದು ವಾರದಲ್ಲಿ 35ಕ್ಕೂ ಹೆಚ್ಚು ವಿಮಾನಗಳು ಬೆದರಿಕೆ ಕರೆ ಸ್ವೀಕರಿಸಿರುವ ಬಗ್ಗೆ ವರದಿಯಾಗಿದೆ ಎಂದು ನಾಗರಿಕ ವಿಮಾನಯಾನ ಸಚಿವಾಲಯ (Ministry Of Civil Aviation) ತಿಳಿಸಿದೆ.

    ದೆಹಲಿಯಿಂದ ಲಂಡನ್‌ಗೆ ಹೊರಟಿದ್ದ ವಿಸ್ತಾರಾ ವಿಮಾನ (Vistara Flight) ಸೋಷಿಯಲ್ ಮೀಡಿಯಾದಲ್ಲಿ ಬಾಂಬ್ ಬೆದರಿಕೆಯ ಕರೆಯನ್ನು ಸ್ವೀಕರಿಸಿದ್ದು, ತಕ್ಷಣ ಎಲ್ಲಾ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಿ, ಮುನ್ನೆಚ್ಚರಿಕೆ ಕ್ರಮವಾಗಿ ವಿಮಾನವನ್ನು ಫ್ರಾಂಕ್‌ಫರ್ಟ್‌ಗೆ ಕಳುಹಿಸುವಂತೆ ನಿರ್ಧರಿಸಲಾಯಿತು. ವಿಮಾನವನ್ನು ಜರ್ಮನಿಯ ಫ್ರಾಂಕ್‌ಫರ್ಟ್‌ಗೆ ಕಳುಹಿಸಿ, ಬಳಿಕ ಅಲ್ಲಿಂದ ಲಂಡನ್‌ಗೆ ಕಳುಹಿಸಲಾಯಿತು.ಇದನ್ನೂ ಓದಿ: ಅಕ್ರಮ ಹಣ ವರ್ಗಾವಣೆ ಕೇಸ್‌ – ಹಿರಿಯ ಐಎಎಸ್‌ ಅಧಿಕಾರಿ, ಆರ್‌ಜೆಡಿ ಮಾಜಿ ಶಾಸಕ ಅರೆಸ್ಟ್‌

    ಜೈಪುರ್‌ನಿಂದ ದುಬೈಗೆ ಹೊರಟಿದ್ದ ಏರ್ ಇಂಡಿಯಾ (Air India) ಎಕ್ಸ್‌ಪ್ರೆಸ್‌ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದಿತ್ತು. ಇದರಿಂದಾಗಿ ಸ್ವಲ್ವ ಸಮಯದ ಬಳಿಕ ವಿಮಾನ ಟೇಕ್‌ಆಫ್ ಆಯಿತು. ಇಂದು ಬೆಳಗ್ಗೆ 6:10ಕ್ಕೆ ಟೇಕ್ ಆಫ್ ಆಗಬೇಕಿದ್ದ ವಿಮಾನ ತಡವಾಗಿ 7:45ಕ್ಕೆ ಟೇಕ್ ಆಫ್ ಆಯಿತು.

    ಶುಕ್ರವಾರ ಬೆಂಗಳೂರಿನಿಂದ ಮುಂಬೈಗೆ ಹೊರಡಲು ಸಿದ್ಧವಾಗಿದ್ದ ಆಕಾಶ ಏರ್ (Akash Air) ವಿಮಾನಕ್ಕೆ ಬಾಂಬ್ ಬೆದರಿಕೆಯ ಕರೆ ಬಂದ ಹಿನ್ನೆಲೆಯಲ್ಲಿ ವಿಮಾನವನ್ನು ಸಂಪೂರ್ಣ ಪರಿಶೀಲನೆ ನಡೆಸಲಾಯಿತು. ನೆಟ್‌ವರ್ಕ್ ಆಪರೇಷನ್ ಕಂಟ್ರೋಲ್ (NOC) ಒಪ್ಪಿಗೆ ನೀಡಿದ ಬಳಿಕ ಸಂಜೆ ಮುಂಬೈಗೆ ಹೊರಟಿತು.

    ಒಂದು ವಾರದಲ್ಲಿ ಸುಮಾರು 35 ವಿಮಾನಗಳು ಬೆದರಿಕೆಯ ಕರೆಗಳನ್ನು ಸ್ವೀಕರಿಸಿದ್ದು, ನಾಗರಿಕ ವಿಮಾನಯಾನ ಸಚಿವಾಲಯ ಮತ್ತು ಅಧಿಕಾರಿಗಳು ಆ ಸಂದರ್ಭದಲ್ಲಿ ಭದ್ರತಾ ಪರಿಶೀಲನೆ ನಡೆಸಿ, ಕಠಿಣ ಕ್ರಮಗಳನ್ನು ಕೈಗೊಳ್ಳಲಾಯಿತು.

    ಬಾಂಬ್ ಬೆದರಿಕೆ ಸಂಬಂಧಿಸಿದಂತೆ ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು (Rammohan Naidu)  ಮಾತನಾಡಿ, ಅಂತಾರಾಷ್ಟ್ರೀಯ ಮಾರ್ಗಗಳಲ್ಲಿ ಮೂರು ಸೇರಿದಂತೆ ಸೋಮವಾರ ನಾಲ್ಕು ವಿಮಾನಗಳಿಗೆ ಬೆದರಿಕೆ ಹಾಕಲಾಗಿದೆ. 17 ವರ್ಷದ ಹುಡುಗನನ್ನು ಮುಂಬೈ ಪೊಲೀಸರು ಬುಧವಾರ ಕಸ್ಟಡಿಗೆ ತೆಗೆದುಕೊಂಡಿದ್ದು, ಹೆಚ್ಚಿನ ಕರೆಗಳನ್ನು ಅಪ್ರಾಪ್ತರು ಮತ್ತು ಕುಚೇಷ್ಟೆಗಾರರು ಮಾಡಿದ್ದಾರೆ ಎಂದು ಹೇಳಿದರು.

    ಭವಿಷ್ಯದಲ್ಲಿ ಇಂತಹ ಹುಸಿ ಬಾಂಬ್ ಕರೆಗಳು ನಡೆಯದಂತೆ ನೋಡಿಕೊಳ್ಳಲು ಹಾಗೂ ಈ ರೀತಿಯ ಕುಚೇಷ್ಟೆಗಳನ್ನು ಮಾಡಲು ಪ್ರಯತ್ನಿಸುವ ಜನರಿಗೆ ಕಟ್ಟುನಿಟ್ಟಾದ ಕ್ರಮ ತೆಗೆದುಕೊಳ್ಳಲು ನಮ್ಮ ಇಲಾಖೆಯ ನಿಯಮಗಳು ಮತ್ತು ಶಾಸನಗಳಲ್ಲಿ ಬದಲಾವಣೆ ತರಲು ಸೂಚಿಸಿದ್ದೇವೆ ಎಂದು ತಿಳಿಸಿದರು.ಇದನ್ನೂ ಓದಿ: ಬಿಬಿಎಂಪಿಯಿಂದ ತುರ್ತು ಇ-ಖಾತಾ ಪಡೆಯಲು ಮಾರ್ಗಸೂಚಿ ಬಿಡುಗಡೆ – ಗೈಡ್‌ಲೈನ್‌ನಲ್ಲಿ ಏನಿದೆ?

  • ಭಾರತದಲ್ಲಿ ಏರ್‌ಲೈನ್ಸ್ ವ್ಯವಸ್ಥೆಗಳು ಸಹಜ ಸ್ಥಿತಿಗೆ ಮರಳಿವೆ – ನಾಗರಿಕ ವಿಮಾನಯಾನ ಸಚಿವಾಲಯ

    ಭಾರತದಲ್ಲಿ ಏರ್‌ಲೈನ್ಸ್ ವ್ಯವಸ್ಥೆಗಳು ಸಹಜ ಸ್ಥಿತಿಗೆ ಮರಳಿವೆ – ನಾಗರಿಕ ವಿಮಾನಯಾನ ಸಚಿವಾಲಯ

    ನವದೆಹಲಿ: ಮೈಕ್ರೋಸಾಫ್ಟ್ ಕ್ಲೌಡ್‌ನಲ್ಲಿ (Microsoft Cloud) ಕಂಡುಬಂದ ಸಮಸ್ಯೆ ಸರಿಯಾಗಿದ್ದು, ಇದರಿಂದ ಉಂಟಾದ ಸಮಸ್ಯೆಗಳನ್ನು ಹಂತ ಹಂತವಾಗಿ ಸರಿಪಡಿಸಲಾಗುತ್ತಿದೆ. ಭಾರತದ ಎಲ್ಲಾ ವಿಮಾನ ನಿಲ್ದಾಣಗಳಲ್ಲಿ ವಿಮಾನಯಾನ ವ್ಯವಸ್ಥೆಗಳು ಸಹಜ ಸ್ಥಿತಿಗೆ ಮರಳಿವೆ ಎಂದು ನಾಗರಿಕ ವಿಮಾನಯಾನ ಸಚಿವಾಲಯ (Ministry of Civil Aviation) ಶನಿವಾರ ಹೇಳಿದೆ.

    ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಸಚಿವಾಲಯ, ಬೆಳಗ್ಗೆ 3 ಗಂಟೆಯಿಂದ ವಿಮಾನ ನಿಲ್ದಾಣಗಳಲ್ಲಿ ಏರ್‌ಲೈನ್ ವ್ಯವಸ್ಥೆಗಳು ಸಾಮಾನ್ಯವಾಗಿ ಕಾರ್ಯನಿರ್ವಹಿಸಲು ಪ್ರಾರಂಭಿಸಿವೆ. ಈಗ ವಿಮಾನ ಕಾರ್ಯಾಚರಣೆಗಳು ಸುಗಮವಾಗಿ ನಡೆಯುತ್ತಿವೆ. ಶುಕ್ರವಾರ ಅಡಚಣೆಗಳಿಂದ ಉಂಟಾದ ಸಮಸ್ಯೆಗಳನ್ನು ಸರಿಪಡಿಸಲಾಗುತ್ತಿದೆ ಎಂದು ಹೇಳಿದೆ.

    ಈ ನಡುವೆ ಬಯೋಮೆಟ್ರಿಕ್ ಆಧಾರಿತ ಬೋರ್ಡಿಂಗ್ ವ್ಯವಸ್ಥೆಯಾದ ಡಿಜಿ ಯಾತ್ರಾ ವ್ಯವಸ್ಥೆಯು ಕಾರ್ಯನಿರ್ವಹಿಸದ ಕಾರಣ ದೆಹಲಿಯ ಐಜಿಐ ವಿಮಾನ ನಿಲ್ದಾಣವು ಶನಿವಾರ ಬೆಳಗ್ಗೆ ಗಮನಾರ್ಹ ಅಡಚಣೆಗಳನ್ನು ಎದುರಿಸಿತು. ಪ್ರಯಾಣಿಕರು ಮ್ಯಾನುವಲ್ ಚೆಕ್ ಇನ್ ಮಾಡಲು ಪ್ರಯಾಸಪಡುತ್ತಿದ್ದರಿಂದ ನಿರ್ಗಮನ ಟರ್ಮಿನಲ್‌ಗಳಲ್ಲಿ ದೊಡ್ಡ ಸರತಿ ಸಾಲುಗಳು ಏರ್ಪಟ್ಟಿತು.

    ಪ್ರಯಾಣಿಕರಿಗೆ ಸಹಾಯ ಮಾಡಲು ಮತ್ತು ದಟ್ಟಣೆಯನ್ನು ನಿರ್ವಹಿಸಲು ವಿಮಾನ ನಿಲ್ದಾಣದ ಅಧಿಕಾರಿಗಳು ಹೆಚ್ಚುವರಿ ಸಿಬ್ಬಂದಿಯನ್ನು ನಿಯೋಜಿಸಿದ್ದಾರೆ. ದೆಹಲಿ ವಿಮಾನ ನಿಲ್ದಾಣದಲ್ಲಿ 400ಕ್ಕೂ ಹೆಚ್ಚು ವಿಮಾನಗಳು ವಿಳಂಬವನ್ನು ಎದುರಿಸುತ್ತಿವೆ. ಹಲವಾರು ಪ್ರಯಾಣಿಕರು ಕೈಬರಹದ ಬೋರ್ಡಿಂಗ್ ಪಾಸ್‌ಗಳ ಚಿತ್ರಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡುತ್ತಿದ್ದಾರೆ.

  • Microsoft Outage: ದೇಶಾದ್ಯಂತ ವಿಮಾನ ನಿಲ್ದಾಣಗಳಲ್ಲಿ ಅಲ್ಲೋಲ ಕಲ್ಲೋಲ; ಇದು ಸೈಬರ್‌ ದಾಳಿಯಲ್ಲ – ಕ್ರೌಡ್‌ಸ್ಟ್ರೈಕ್‌ ಸಿಇಒ ಸ್ಪಷ್ಟನೆ!

    Microsoft Outage: ದೇಶಾದ್ಯಂತ ವಿಮಾನ ನಿಲ್ದಾಣಗಳಲ್ಲಿ ಅಲ್ಲೋಲ ಕಲ್ಲೋಲ; ಇದು ಸೈಬರ್‌ ದಾಳಿಯಲ್ಲ – ಕ್ರೌಡ್‌ಸ್ಟ್ರೈಕ್‌ ಸಿಇಒ ಸ್ಪಷ್ಟನೆ!

    – 200ಕ್ಕೂ ಹೆಚ್ಚು ಇಂಡಿಗೋ ವಿಮಾನಗಳ ಹಾರಾಟ ಸ್ಥಗಿತ

    ನವದೆಹಲಿ: ಜಾಗತಿಕವಾಗಿ ಮೈಕ್ರೋಸಾಫ್ಟ್ ಕಾರ್ಯನಿರ್ವಹಣೆ ಸ್ಥಗಿತಗೊಂಡ (Microsoft Outage) ಕಾರಣ ದೇಶದ ವಿಮಾನ ನಿಲ್ದಾಣಗಳ (Airports) ಸೇವೆಯಲ್ಲಿ ವ್ಯತ್ಯಯ ಉಂಟಾಗಿದೆ. ಮಾಹಿತಿ ದೊರಕದೇ ಪ್ರಯಾಣಿಕರು ಸಮಸ್ಯೆ ಎದುರಿಸಿದ್ದು ಎಲ್ಲಡೆ ಅಲ್ಲೋಲ ಕಲ್ಲೋಲ ಉಂಟಾಗಿದೆ.

    ಇಂಡಿಗೋ, ಆಕಾಸಾ ಏರ್, ಸ್ಪೈಸ್ ಜೆಟ್, ಏರ್ ಇಂಡಿಯಾ, ವಿಸ್ತಾರಾ ಮತ್ತು ಇತರ ವಿಮಾನಯಾನ ಸಂಸ್ಥೆಗಳ ಚೆಕ್-ಇನ್ ವ್ಯವಸ್ಥೆಗಳಿಗೆ ಸಮಸ್ಯೆಯಾಗಿವೆ. ಹೀಗಾಗಿ ದೇಶಾದ್ಯಂತ ಹಲವಾರು ವಿಮಾನ ನಿಲ್ದಾಣಗಳ ಕಾರ್ಯಾಚರಣೆಗೆ ಅಡಚಣೆ ಉಂಟಾಯಿತು. ರಾಷ್ಟ್ರ ರಾಜಧಾನಿ ದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹಲವಾರು ವಿಮಾನಗಳನ್ನು ರದ್ದುಪಡಿಸಲಾಯಿತು. ಆಮ್‌ಸ್ಟರ್‌ಡ್ಯಾಮ್‌ನಿಂದ ಜ್ಯೂರಿಚ್, ಸಿಂಗಾಪುರದಿಂದ ಹಾಂಗ್ ಕಾಂಗ್‌ನಲ್ಲೂ ಸಮಸ್ಯೆ ಸಂಭವಿಸಿತು.

    ವಿಂಡೋಸ್ ತಾಂತ್ರಿಕ ಸಮಸ್ಯೆ ಲ್ಯಾಪ್‌ಟಾಪ್, ಕಂಪ್ಯೂಟರ್‌ಗಳ ಮೇಲೆ ಬ್ಲೂಸಕ್ರೀನ್‌ ಮಾತ್ರ ಕಾಣಿಸಿದೆ. ಇದನ್ನು ತಾಂತ್ರಿಕ ಭಾಷೆಯಲ್ಲಿ ಬ್ಲೂಸ್ಕ್ರೀನ್‌ ಡೆತ್ ಎಂದು ಕರೆಯಲಾಗುತ್ತದೆ. ಇತ್ತೀಚಿಗೆ ಜಾಗತಿಕ ಸೈಬರ್ ಭದ್ರತಾ ಸಂಸ್ಥೆ ಕ್ರೌಡ್‌ಸ್ಟ್ರೈಕ್‌ನಲ್ಲಿ ಮಾಡಿದ ಫಾಲ್ಕನ್ ಸೆನ್ಸಾರ್ ಎಂಬ ಸಾಫ್ಟ್‌ವೇರ್‌ನಲ್ಲಿ ಆದ ಲೋಪದೋಷದಿಂದ ಈ ಸಮಸ್ಯೆ ಎದುರಾಗಿತ್ತು. ಕೊನೆಗೆ ಆಗಿರುವ ಯಡವಟ್ಟಿಗೆ ವಿಷಾದ ವ್ಯಕ್ತಪಡಿಸಿದ ಮೈಕ್ರೋಸಾಫ್ಟ್ ಸಂಸ್ಥೆ ಸಂಜೆ ಹೊತ್ತಿಗೆ ಸಮಸ್ಯೆ ಸರಿಪಡಿಸುವ ಕೆಲಸ ಮಾಡಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

    200ಕ್ಕೂ ಹೆಚ್ಚು ಇಂಡಿಗೋ ವಿಮಾನ ಸಂಚಾರ ರದ್ದು:
    ದೇಶದಲ್ಲಿ ಮಾತ್ರವಲ್ಲದೇ ವಿದೇಶಸಲ್ಲಿಯೂ ಮೈಕ್ರೋಸಾಫ್ಟ್‌ ತಾಂತ್ರಿಕ ಸಮಸ್ಯೆಯಿಂದ ಏರ್‌ಲೈನ್ಸ್‌ ಸಂಸ್ಥೆಗಳು ಸಮಸ್ಯೆ ಎದುರಿಸುವಂತಾಯಿತು. ದೇಶಾದ್ಯಂತ ಶುಕ್ರವಾರ 200ಕ್ಕೂ ಹೆಚ್ಚು ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಯಿತು. ಇದನ್ನೂ ಓದಿ: ರಾಜ್ಯದ ಜಲಾಶಯಗಳಲ್ಲಿ 536 ಟಿಎಂಸಿ ನೀರು ಸಂಗ್ರಹ – ಈ ಬಾರಿ ವಾಡಿಕೆಗಿಂತ ಹೆಚ್ಚು ಮಳೆ

    ನಮ್ಮ ನಿಯಂತ್ರಣಕ್ಕೆ ಮೀರಿದ ಸಮಸ್ಯೆಯಿಂದಾಗಿ ವಿಮಾನ ಹಾರಾಟವನ್ನ ರದ್ದುಗೊಳಿಸಲಾಗಿದೆ. ವಿಮಾನವನ್ನು ಮರುಬುಕ್ ಮಾಡುವ ಅಥವಾ ಮರುಪಾವತಿ ಪಡೆಯುವ ಆಯ್ಕೆಯು ತಾತ್ಕಾಲಿಕವಾಗಿ ಲಭ್ಯವಿಲ್ಲ ಎಂದೂ ಇಂಡಿಯೋ ಸ್ಪಷ್ಟನೆ ನೀಡಿದೆ. ಇದನ್ನೂ ಓದಿ: 1.6 ಕೋಟಿ ಮೌಲ್ಯದ 3 ಮನೆ, 3 ಕೋಟಿಯ 2 ಶೆಡ್ – ಮುದ್ದುಕುಮಾರ್ ಆಸ್ತಿ ಕಂಡು ಅಧಿಕಾರಿಗಳೇ ಸುಸ್ತು!

    ಈ ಕುರಿತು ಪ್ರತಿಕ್ರಿಯಿಸಿರುವ ನಾಗರಿಕ ವಿಮಾನಯಾನ ಸಚಿವ ರಾಮಮೋಹನ್ ನಾಯ್ಡು, ಸಚಿವಾಲಯ ಮತ್ತು ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರ (AAI) ಕನಿಷ್ಠ ಅಡೆತಡೆಗಳನ್ನು ಖಚಿತಪಡಿಸಿಕೊಳ್ಳಲು ಮ್ಯಾನ್ಯುವಲ್‌ ವಿಧಾನಗಳನ್ನ ಬಳಸಿಕೊಂಡು ಸಕ್ರೀಯವಾಗಿ ಪರಿಸ್ಥಿತಿಯನ್ನು ಸಕ್ರಿಯವಾಗಿ ನಿರ್ವಹಿಸುತ್ತಿದ್ದೇವೆ. ಪ್ರಯಾಣಿಕರು ಇಂತಹ ಸಮಯದಲ್ಲಿ ಸಿಬ್ಬಂದಿಯೊಂದಿಗೆ ಸಹಕರಿಸಬೇಕು ಸೂಚಿಸಲಾಗಿದೆ. ಜೊತೆಗೆ ಎಲ್ಲಾ ವಿಮಾನ ನಿಲ್ದಾಣಗಳ ಪರಿಸ್ಥಿತಿ ಹೇಗಿದೆ ಎಂಬುದರ ಬಗ್ಗೆ ಮಾಹಿತಿ ನೀಡುವಂತೆ ಸೂಚಿಸಿದ್ದೇವೆ ಎಂದು ತಿಳಿಸಿದ್ದಾರೆ.


    ಕ್ರೌಡ್‌ಸ್ಟ್ರೈಕ್‌ ಸ್ಪಷ್ಟನೆ ಏನು?
    ಕ್ರೌಡ್‌ಸ್ಟ್ರೈಕ್‌ ಸಾಫ್ಟ್‌ವೇರ್‌ ಕಂಪನಿ ಸಿಇಒ ಪ್ರತಿಕ್ರಿಯಿಸಿ, ಇದು ಯಾವುದೇ ಸೈಬರ್‌ ದಾಳಿಯಲ್ಲ, ತಾಂತ್ರಿಕ ದೋಷ. ಸಮಸ್ಯೆಯನ್ನು ಗುರುತಿಸಿ, ಪ್ರತ್ಯೇಕಿಸಲಾಗಿದೆ, ಪರಿಹಾರವನ್ನೂ ಕಂಡುಹಿಡಿಯಲಾಗಿದೆ. ನಮ್ಮ ವೆಬ್‌ಸೈಟ್‌ನಲ್ಲಿ ನವೀಕರಣ ಒದಗಿಸುವುದನ್ನು ಮುಂದುವರಿಸುತ್ತೇವೆ. ಕ್ರೌಡ್‌ಸ್ಟ್ರೈಕ್ ಗ್ರಾಹಕರ ಭದ್ರತೆ ಮತ್ತು ಸ್ಥಿರತೆ ಖಚಿತಪಡಿಸಿಕೊಳ್ಳಲು ನಮ್ಮ ತಂಡವನ್ನು ಸಂಪೂರ್ಣವಾಗಿ ಸಜ್ಜುಗೊಳಿಸಲಾಗಿದೆ ಎಂದು ಹೇಳಿದ್ದಾರೆ.

  • ವಿಮಾನದಲ್ಲಿ ಫೈಲಟ್ ಇರಲಿಲ್ಲ- ಸ್ಪೈಸ್‍‌ಜೆಟ್ ವಿರುದ್ಧ ಪ್ರಯಾಣಿಕರು ಧಿಕ್ಕಾರ

    ವಿಮಾನದಲ್ಲಿ ಫೈಲಟ್ ಇರಲಿಲ್ಲ- ಸ್ಪೈಸ್‍‌ಜೆಟ್ ವಿರುದ್ಧ ಪ್ರಯಾಣಿಕರು ಧಿಕ್ಕಾರ

    ಬೆಂಗಳೂರು: ಸ್ಪೈಸ್‌ಜೆಟ್ ಏರ್‌ಲೈನ್ಸ್ ಎಡವಟ್ಟಿನಿಂದ ದೆಹಲಿ ವಿಮಾನ ನಿಲ್ದಾಣದಲ್ಲಿ 12 ಗಂಟೆಗಳ ಕಾಲ ವಿಮಾನದಲ್ಲಿಯೇ ಲಾಕ್ ಆಗಿರುವ ಪ್ರಯಾಣಿಕರು ಕೊನೆಗೂ ಬೆಂಗಳೂರಿಗೆ ಬಂದಿಳಿದಿದ್ದಾರೆ.

    ದೆಹಲಿ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ಬರಬೇಕಿದ್ದ SG8151 ಸ್ಪೈಸ್‌ಜೆಟ್ (SpiceJet Flight), 12 ಗಂಟೆಗಳ ಕಾಲ ಟೆಕಾಫ್ ಆಗದೇ, ದೆಹಲಿಯ ವಿಮಾನ ನಿಲ್ದಾಣದ ರನ್ ವೇ ನಲ್ಲೆ ನಿಂತುಕೊಂಡಿತ್ತು. ಹೀಗಾಗಿ ಪ್ರಯಾಣಿಕರು 12 ಗಂಟೆ ಊಟ, ನೀರು ಇಲ್ಲದೆ ವಿಮಾನದಲ್ಲಿಯೇ ಅಸ್ವಸ್ಥಗೊಂಡಿದ್ರು. ಶುಕ್ರವಾರ ಸಂಜೆ 7:40 ರ ಸಮಯಕ್ಕೆ ಟೇಕಾಫ್ ಆಗಬೇಕಿದ್ದ ವಿಮಾನ ಹಲವು ಗಂಟೆ ಕಳೆದ್ರೂ ಹಾರಾಟ ನಡೆಸಿರಲಿಲ್ಲ. ಪೈಲಟ್ ಬಂದ ಬಳಿಕ ವಿಮಾನ ಬೆಂಗಳೂರಿಗೆ ಹಾರಾಟ ಮಾಡಿದೆ. ಇದನ್ನೂ ಓದಿ: ಬೆಂಗ್ಳೂರಲ್ಲಿ ಡೆಂಗ್ಯೂ ಜ್ವರಕ್ಕೆ ಬಾಲಕ ಬಲಿ

    ಇತ್ತ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿಯುತ್ತಿದ್ದಂತೆಯೇ ಸ್ಪೈಸ್‌ಜೆಟ್ ಏರ್ ಲೈನ್ಸ್ ವಿರುದ್ಧ ಪ್ರಯಾಣಿಕರು ಧಿಕ್ಕಾರ ಕೂಗಿ ಆಕ್ರೋಶ ಹೊರ ಹಾಕಿದ್ರು. ವಿಮಾನದಲ್ಲಿ ಊಟ, ನೀರು ಇಲ್ಲದೆ ಕೆಲ ಪ್ರಯಾಣಿಕರು ಅಸ್ವಸ್ಥಗೊಂಡಿದ್ರು. ಏರ್ ಲೈನ್ಸ್ ನ ಸಿಬ್ಬಂದಿಯನ್ನ ತರಾಟೆಗೆ ತೆಗೆದುಕೊಂಡು, ಅಲ್ಲೇ ಪ್ರತಿಭಟಿಸ್ತಿದ್ದಂತೆ ತಾಂತ್ರಿಕದೋಷ ಅಂತ ಸಮಾಜಾಯಿಷಿ ನೀಡಿದ್ರು. ಆದರೆ ಅಸಲಿಗೆ ಆ ಫ್ಲೈಟ್‍ನಲ್ಲಿ ಪೈಲಟ್ ಅವರೇ ಇರಲಿಲ್ಲ ಅನ್ನೋದು ಇಂದು ಬೆಳಗ್ಗೆ ಗೊತ್ತಾಗಿದೆ. ಬೆಳಗ್ಗೆ 7 ಗಂಟೆ ಸುಮಾರಿಗೆ ಪೈಲಟ್ ಬಂದ ಬಳಿಕ ವಿಮಾನ ಬೆಂಗಳೂರಿಗೆ ಹಾರಾಡಿದೆ ಎಂದು ಪ್ರಯಾಣಿಕರು ತಿಳಿಸಿದರು.

    ವಿಮಾನದಲ್ಲಿದ್ದ ಪ್ರಯಾಣಿಕರನ್ನ ಹೊರ ಬಾರದಂತೆ ಏರ್ ಲೈನ್ಸ್ ಸಿಬ್ಬಂದಿ ತಡೆದಿದ್ರು. ಏರ್ ಲೈನ್ಸ್ ನ ನಿರ್ಲಕ್ಷ್ಯ ಹಾಗೂ ಸಿಬ್ಬಂದಿ ವರ್ತನೆಯಿಂದ ರೊಚ್ಚಿಗೆದ್ದ ಪ್ರಯಾಣಿಕರು ಗಲಾಟೆ ಮಾಡಿದ್ದಾರೆ. ಈ ವೇಳೆ ಸಿಬ್ಬಂದಿ ಕೆಲ ಪ್ರಯಾಣಿಕರ ಮೊಬೈಲ್ ಕಿತ್ತುಕೊಂಡು ಹೊಡೆದು ಹಾಕಿದ್ದಾರೆ ಎಂಬ ಗಂಭೀರ ಆರೋಪ ಕೂಡ ಕೇಳಿಬಂದಿದೆ.

  • ದೇಶೀಯ ವಿಮಾನ ಪ್ರಯಾಣಿಕರ ಸಂಖ್ಯೆಯಲ್ಲಿ ಹೊಸ ದಾಖಲೆ

    ದೇಶೀಯ ವಿಮಾನ ಪ್ರಯಾಣಿಕರ ಸಂಖ್ಯೆಯಲ್ಲಿ ಹೊಸ ದಾಖಲೆ

    ನವದೆಹಲಿ: ಕೊರೊನಾ ಅವಧಿಯ ನಂತರ ಭಾರತದ ದೇಶೀಯ ವಿಮಾನಯಾನ ಕ್ಷೇತ್ರವು ಪುನಶ್ಚೇತನಗೊಂಡಿದ್ದು, ದೇಶೀಯ ವಿಮಾನ (Airlines) ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗಿದೆ.

    ನವೆಂಬರ್ ತಿಂಗಳಿನಲ್ಲಿ ದೇಶೀಯ ವಿಮಾನ ಪ್ರಯಾಣಿಕರ ಸಂಖ್ಯೆ ಕನಿಷ್ಠ ನಾಲ್ಕು ಪಟ್ಟು ಅತ್ಯಧಿಕ ಮಟ್ಟವನ್ನು ತಲುಪಿದ್ದು, ಕಳೆದ ಗುರುವಾರ ಒಂದೇ ದಿನ 4,63,417 ಮಂದಿ ವಿಮಾನದ ಮೂಲಕ ಸಂಚರಿಸಿದ್ದಾರೆ. ಇದನ್ನೂ ಓದಿ: 41 ಕಾರ್ಮಿಕರ ರಕ್ಷಣಾ ಕಾರ್ಯಾಚರಣೆ ಮತ್ತೆ ಸ್ಥಗಿತ

    ನಾಗರಿಕ ವಿಮಾನಯಾನ ಸಚಿವಾಲಯ ಶುಕ್ರವಾರ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದು, ಸಕಾರಾತ್ಮಕ ಮನೋಭಾವ, ಪ್ರಗತಿಪರ ನೀತಿಗಳು ಮತ್ತು ಪ್ರಯಾಣಿಕರ ವಿಶ್ವಾಸದಿಂದಾಗಿ ವಿಮಾನ ಪ್ರಯಾಣಿಕರ ಸಂಖ್ಯೆ ಪ್ರತಿದಿನ ಹೆಚ್ಚುತ್ತಿದೆ ಎಂದು ಹೇಳಿದೆ.

    ಕಳೆದ ಗುರುವಾರ 5,998 ವಿಮಾನ ಪ್ರಯಾಣವಾಗಿದ್ದು, ಈ ಪೈಕಿ 4,63,417 ಮಂದಿ ವಿಮಾನಗಳ ಮೂಲಕ ಸಂಚರಿಸಿದ್ದಾರೆ. 2022 ಇದೇ ದಿನಕ್ಕೆ 5,413 ಬಾರಿ ವಿಮಾನಗಳ ಹಾರಾಟವಾಗಿದ್ದು, 3,86,002 ಮಂದಿ ವಿಮಾನಗಳ ಮೂಲಕ ಸಂಚರಿಸಿದ್ದರು. ಇದನ್ನೂ ಓದಿ: ರಾಹುಲ್ ಗಾಂಧಿ ವಿರುದ್ಧ ಕ್ರಿಮಿನಲ್ ದೂರು ದಾಖಲಿಸಲು ಬಿಜೆಪಿ ಮನವಿ

  • ಇಂಡಿಗೋ ವಿಮಾನ ಸಿಬ್ಬಂದಿಯ ಜೊತೆ ಅನುಚಿತ ವರ್ತನೆ- ಸ್ವೀಡಿಷ್ ಪ್ರಜೆಯ ಬಂಧನ

    ಇಂಡಿಗೋ ವಿಮಾನ ಸಿಬ್ಬಂದಿಯ ಜೊತೆ ಅನುಚಿತ ವರ್ತನೆ- ಸ್ವೀಡಿಷ್ ಪ್ರಜೆಯ ಬಂಧನ

    ನವದೆಹಲಿ: ಇಂಡಿಗೋ (IndiGo) 6ಇ-1052 ಬ್ಯಾಂಕಾಕ್-ಮುಂಬೈ ವಿಮಾನದಲ್ಲಿ ಸಿಬ್ಬಂದಿಗೆ ಕಿರುಕುಳ (Harassment) ನೀಡಿದ ಸ್ವೀಡಿಷ್ (Swedish) ಪ್ರಜೆಯನ್ನು ಗುರುವಾರ ಬಂಧಿಸಲಾಗಿದೆ (Arrest) ಎಂದು ಪೊಲೀಸರು ತಿಳಿಸಿದ್ದಾರೆ.

    ಪೊಲೀಸ್ ಮಾಹಿತಿ ಪ್ರಕಾರ, ಬಂಧಿತ ವ್ಯಕ್ತಿಯನ್ನು ಕ್ಲಾಸ್ ಎರಿಕ್ ಹೆರಾಲ್ಡ್ ಜೋನಾಸ್ಮ್ (62) ಎಂದು ಗುರುತಿಸಲಾಗಿದೆ. ಕ್ಲಾಸ್ ಎರಿಕ್ ಹೆರಾಲ್ಡ್ ಜೋನಾಸ್ಮ್ ಮದ್ಯಪಾನ ಮಾಡಿದ್ದರು ಮತ್ತು ಆಹಾರ ಖರೀದಿಗೆ ಪಾವತಿ ಮಾಡುವಾಗ ಸಿಬ್ಬಂದಿಯನ್ನು ಅನುಚಿತವಾಗಿ ಸ್ಪರ್ಶಿಸಿದ್ದಾರೆ ಎಂದು ದೂರು ದಾಖಲಿಸಿದ್ದರು. ಮುಂಬೈನಲ್ಲಿ (Mumbai) ವಿಮಾನ ಲ್ಯಾಂಡ್ ಆಗುತ್ತಿದ್ದಂತೆ ಕ್ಲಾಸ್ ಎರಿಕ್‌ನನ್ನು ಏರ್‌ಲೈನ್ ಸಿಬ್ಬಂದಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಇದನ್ನೂ ಓದಿ: ಲೈಂಗಿಕ ಕಿರುಕುಳ ಆರೋಪ- ಚೆನೈ ಕಲಾಕ್ಷೇತ್ರದ ಪ್ರೊಫೆಸರ್ ವಿರುದ್ಧ ದೂರು ದಾಖಲು

    crime

    ಇಂಡಿಗೋ ಈ ಘಟನೆಯನ್ನು ದೃಢಪಡಿಸಿದೆ ಮತ್ತು ಅಗತ್ಯ ಪ್ರೋಟೋಕಾಲ್‌ಗಳನ್ನು ಅನುಸರಿಸಲಾಗಿದೆ ಎಂದು ಹೇಳಿದೆ. ಆದರೆ ಇದುವರೆಗೆ ಯಾವುದೇ ಹೇಳಿಕೆಗಳನ್ನು ನೀಡಿಲ್ಲ. ಕ್ಲಾಸ್ ಎರಿಕ್ ಕಳೆದ ಮೂರು ತಿಂಗಳಲ್ಲಿ ಭಾರತದಲ್ಲಿ ಬಂಧಿಸಲ್ಪಟ್ಟ ಎಂಟನೇ ಅಶಿಸ್ತಿನ ವಿಮಾನ ಪ್ರಯಾಣಿಕ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ವಾಣಿಜ್ಯ ಬಳಕೆಯ LPG ಸಿಲಿಂಡರ್ ಬೆಲೆ ಇಳಿಕೆ

    ಮಾರ್ಚ್ 23 ರಂದು ದುಬೈ-ಮುಂಬೈ ಇಂಡಿಗೋ ವಿಮಾನದಲ್ಲಿ ಮದ್ಯ ಸೇವಿಸಿ ಸಹ ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ನಿಂದಿಸಿದ ಇಬ್ಬರು ಪ್ರಯಾಣಿಕರನ್ನು ಬಂಧಿಸಿ ಬಳಿಕ ಜಾಮೀನು ನೀಡಲಾಗಿತ್ತು. ಇದನ್ನೂ ಓದಿ: ಸಾಕುನಾಯಿಯ ಮೇಲೆ 2 ವರ್ಷ ಅತ್ಯಾಚಾರವೆಸಗಿದ 60ರ ವ್ಯಕ್ತಿ

  • 18-65 ವಯಸ್ಸಿನ ಪುರುಷರಿಗೆ ಟಿಕೆಟ್ ಮಾರಾಟ ನಿಲ್ಲಿಸಲು ರಷ್ಯಾದ ಏರ್‌ಲೈನ್ಸ್ ಆದೇಶ

    18-65 ವಯಸ್ಸಿನ ಪುರುಷರಿಗೆ ಟಿಕೆಟ್ ಮಾರಾಟ ನಿಲ್ಲಿಸಲು ರಷ್ಯಾದ ಏರ್‌ಲೈನ್ಸ್ ಆದೇಶ

    ಮಾಸ್ಕೋ: ಉಕ್ರೇನ್‌ನಲ್ಲಿ (Ukraine) ಯುದ್ಧವನ್ನು ಇನ್ನಷ್ಟು ತೀವ್ರಗೊಳಿಸಲು ರಷ್ಯಾದ (Russia) ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (Vladimir Putin) ತನ್ನ ಸೇನೆಯನ್ನು ಭಾಗಶಃ ಸಜ್ಜುಗೊಳಿಸುವಂತೆ ಆದೇಶ ನೀಡಿದ್ದಾರೆ. ಇದರ ಬೆನ್ನಲ್ಲೇ ರಷ್ಯಾದಲ್ಲಿ 18 ರಿಂದ 65 ವಯಸ್ಸಿನವರೆಗಿನ ಪುರುಷರಿಗೆ (Men) ಟಿಕೆಟ್ (Ticket) ಮಾರಾಟ ಮಾಡುವುದನ್ನು ತಡೆಯಲು ರಷ್ಯಾದ ಏರ್‌ಲೈನ್ಸ್ (Airlines) ಆದೇಶ ನೀಡಿದೆ.

    ಪುಟಿನ್ ಉಕ್ರೇನ್‌ನಲ್ಲಿ ತನ್ನ ಕಾರ್ಯಾಚರಣೆಯನ್ನು ಇನ್ನಷ್ಟು ಹೆಚ್ಚಿಸಲು ಸೇನೆಯನ್ನು ಸಜ್ಜುಗೊಳಿಸುತ್ತಿರುವುದಾಗಿ ತಿಳಿಸಿದ ತಕ್ಷಣ ರಷ್ಯಾದಿಂದ ಹೊರಡುತ್ತಿರುವ ಎಲ್ಲಾ ವಿಮಾನಗಳ ಟಿಕೆಟ್‌ಗಳು ಸಂಪೂರ್ಣವಾಗಿ ಮಾರಾಟವಾಗಿದೆ ಎಂದು ವರದಿಯಾಗಿದೆ. ಅಲ್ಲಿನ ಜನರು ಅರ್ಮೇನಿಯಾ, ಜಾರ್ಜಿಯಾ, ಅಜರ್‌ಬೈಜಾನ್, ಕಝಾಕಿಸ್ತಾನ ಸೇರಿದಂತೆ ಹತ್ತಿರದ ದೇಶಗಳಿಗೆ ಹೋಗಲು ಮುಂದಾಗುತ್ತಿದ್ದಾರೆ.

    ಪುಟಿನ್ ಅವರ ಭಾಷಣದ ಬಳಿಕ ರಷ್ಯಾದ ರಕ್ಷಣಾ ಸಚಿವ ಸರ್ಗೆ ಶೋಯಿಗು ಅವರು ದೇಶದ ಸುಮಾರು 3 ಲಕ್ಷ ಪುರುಷರನ್ನು ಸೇನೆಗೆ ಕರೆಸಿಕೊಳ್ಳುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ. ಇದೀಗ ಸಮರ ಕಾನೂನನ್ನು ವಿಧಿಸುವ ಸಾಧ್ಯತೆಗಳ ನಡುವೆಯೇ ರಷ್ಯಾದ ವಿಮಾನಯಾನ ಸಂಸ್ಥೆ 18 ರಿಂದ 65 ವಯಸ್ಸಿನ ನಡುವಿನ ಪುರುಷರಿಗೆ ರಷ್ಯಾದಿಂದ ಹೊರ ಹೋಗಲು ಟಿಕೆಟ್ ನೀಡುವುದನ್ನು ತಡೆಹಿಡಿದಿದೆ. ಈ ವಯಸ್ಸು ರಷ್ಯಾ ಸೈನಿಕರು ಕಾರ್ಯನಿರ್ವಹಿಸುವ ವಯಸ್ಸಾಗಿರುವುದು ಗಮನಾರ್ಹ. ಇದನ್ನೂ ಓದಿ: ಗೌರವ ಹೋದ್ರೆ ಎಲ್ಲರದ್ದೂ ಹೋಗಲಿದೆ – ಪೇ ಸಿಎಂ ಗದ್ದಲ, ಗಲಾಟೆ: ಕಲಾಪ ಮುಂದೂಡಿಕೆ

    ಈ ವರ್ಷದ ಫೆಬ್ರವರಿ ತಿಂಗಳಿನಲ್ಲಿ ಪ್ರಾರಂಭವಾದ ರಷ್ಯಾ ಹಾಗೂ ಉಕ್ರೇನ್ ನಡುವಿನ ಯುದ್ಧದಲ್ಲಿ ಸಾವಿರಾರು ಜನರು ಸಾವನ್ನಪ್ಪಿದ್ದಾರೆ. ಲಕ್ಷಾಂತರ ಜನರನ್ನು ಸ್ಥಳಾಂತರಿಸಲಾಗಿದೆ. ಆದರೂ ವ್ಲಾಡಿಮಿರ್ ಪುಟಿನ್ ಯುದ್ಧವನ್ನು ನಿಲ್ಲಿಸಲು ನಿರಾಕರಿಸಿದ್ದಾರೆ. ಪಾಶ್ಚಿಮಾತ್ಯ ದೇಶಗಳು ಉಕ್ರೇನ್‌ಗೆ ಸಹಾಯ ಮಾಡುತ್ತಿರುವುದಕ್ಕೆ ಕೋಪಗೊಂಡಿರುವ ಪುಟಿನ್ ಪರಮಾಣು ಶಸ್ತ್ರಾಸ್ತ್ರಗಳನ್ನೂ ಬಳಸುವ ಬಗ್ಗೆ ಸುಳಿವು ನೀಡಿದ್ದಾರೆ.

    ಆ ಕಡೆ ಉಕ್ರೇನ್‌ನಲ್ಲಿ ಯುದ್ಧಕ್ಕೆ ಸೇರಲು ಜೈಲಿನಲ್ಲಿರುವ ಕೈದಿಗಳನ್ನೂ ನೇಮಿಸಲಾಗುತ್ತಿರುವುದಾಗಿ ವರದಿಯಾಗಿದೆ. ಸೇನೆಗೆ ಸೇರುವ ಎಲ್ಲಾ ಕೈದಿಗಳಿಗೂ 6 ತಿಂಗಳ ಬಳಿಕ ಅಧ್ಯಕ್ಷೀಯ ಕ್ಷಮಾದಾನ ಹಾಗೂ ತಿಂಗಳಿಗೆ ಭಾರೀ ಮೊತ್ತದ ಸಂಬಳ ನೀಡುವುದಾಗಿ ಭರವಸೆ ನೀಡಿದ್ದಾರೆ. ಇದನ್ನೂ ಓದಿ: ಪಾಪರೆಡ್ಡಿ ಪಾಳ್ಯದಲ್ಲಿ 5 ಅಂತಸ್ತಿನ ಮನೆ ಉಡೀಸ್

    Live Tv
    [brid partner=56869869 player=32851 video=960834 autoplay=true]

  • ದೇಶದಲ್ಲಿ ಕೊರೊನಾ ಏರಿಕೆ – ವಿಮಾನ ಪ್ರಯಾಣದ ವೇಳೆ ಕಡ್ಡಾಯವಾಗಿ ಕೋವಿಡ್ ನಿಯಮ ಪಾಲಿಸಿ: ಡಿಜಿಸಿಎ

    ದೇಶದಲ್ಲಿ ಕೊರೊನಾ ಏರಿಕೆ – ವಿಮಾನ ಪ್ರಯಾಣದ ವೇಳೆ ಕಡ್ಡಾಯವಾಗಿ ಕೋವಿಡ್ ನಿಯಮ ಪಾಲಿಸಿ: ಡಿಜಿಸಿಎ

    ನವದೆಹಲಿ: ದೇಶದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆ ಕಾಣುತ್ತಿದೆ. ಹಾಗಾಗಿ ವಿಮಾನದಲ್ಲಿ ಪ್ರಯಾಣಿಸುವ ಪ್ರಯಾಣಿಕರು ಕಡ್ಡಾಯವಾಗಿ ಕೋವಿಡ್-19 ನಿಯಮ ಪಾಲನೆ ಮಾಡುವಂತೆ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (ಡಿಜಿಸಿಎ) ತಿಳಿಸಿದೆ.

    ವಿದೇಶದಿಂದ ಆಗಮಿಸುವವರು ಮತ್ತು ಭಾರತದಿಂದ ವಿದೇಶಕ್ಕೆ ತೆರಳುವವರು ವಿಮಾನದಲ್ಲಿ ಪ್ರಯಾಣಿಸುವ ಮುನ್ನ ಕಡ್ಡಾಯವಾಗಿ ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಬೇಕು. ಪ್ರತಿಯೊಬ್ಬ ಪ್ರಯಾಣಿಕರಿಗೂ ರ್‍ಯಾಂಡಮ್ ಆಗಿ ಕೊರೊನಾ ಟೆಸ್ಟ್ ಮಾಡಿ. ಮಾಸ್ಕ್‌ಗಳನ್ನು ಪ್ರಯಾಣದ ವೇಳೆ ಬಳಸುವಂತೆ ಪ್ರಯಾಣಿಕರಿಗೆ ತಿಳಿಸಿ ಎಂದು ಡಿಜಿಸಿಎ ವಿಮಾನಯಾನ ಸಂಸ್ಥೆಗಳಿಗೆ ಸ್ಪಷ್ಟವಾಗಿ ತಿಳಿಸಿದೆ. ಇದನ್ನೂ ಓದಿ: ನಮ್ಮದು ಬೆಸ್ಟ್‌ ಡೀಲ್‌ – ರಷ್ಯಾದಿಂದ ತೈಲ ಖರೀದಿಗೆ ಜೈಶಂಕರ್‌ ಸಮರ್ಥನೆ

    ದೇಶದಲ್ಲಿ ಇಂದು ಒಟ್ಟು 9,062 ಕೊರೊನಾ ಪಾಸಿಟಿವ್ ಕೇಸ್‍ಗಳು ದಾಖಲಾಗಿದೆ. ಈ ಮೂಲಕ ಈವರೆಗೆ ದೇಶದಲ್ಲಿ ಒಟ್ಟು 4,42,86,256 ಕೊರೊನಾ ಕೇಸ್ ವರದಿಯಾಗಿದೆ. ಅಲ್ಲದೇ 1,05,058 ಸಕ್ರಿಯ ಪ್ರಕರಣಗಳು ದೇಶದಲ್ಲಿದೆ ಎಂದು ಕೆಂದ್ರ ಆರೋಗ್ಯ ಸಚಿವಾಲಯ ಹೊರಡಿಸಿರುವ ಬುಲೆಟಿನ್‍ನಲ್ಲಿ ಮಾಹಿತಿ ಹಂಚಿಕೊಂಡಿದೆ. ಇದನ್ನೂ ಓದಿ: ಬಿಸಿಯೂಟ ಸೇವಿಸಿ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

    Live Tv
    [brid partner=56869869 player=32851 video=960834 autoplay=true]