Tag: airports

  • ಭಾರತ-ಪಾಕ್‌ ಉದ್ವಿಗ್ನತೆಯಿಂದ ಬಂದ್‌ ಆಗಿದ್ದ 32 ಏರ್‌ಪೋರ್ಟ್‌ಗಳು ಮತ್ತೆ ಕಾರ್ಯಾರಂಭ

    ಭಾರತ-ಪಾಕ್‌ ಉದ್ವಿಗ್ನತೆಯಿಂದ ಬಂದ್‌ ಆಗಿದ್ದ 32 ಏರ್‌ಪೋರ್ಟ್‌ಗಳು ಮತ್ತೆ ಕಾರ್ಯಾರಂಭ

    ನವದೆಹಲಿ: ಭಾರತ ಮತ್ತು ಪಾಕಿಸ್ತಾನ (India Pakistan) ನಡುವಿನ ಉದ್ವಿಗ್ನತೆಯಿಂದ ಮುಚ್ಚಲ್ಪಟ್ಟಿದ್ದ ವಿವಿಧ ರಾಜ್ಯಗಳ 32 ವಿಮಾನ ನಿಲ್ದಾಣಗಳು (Airports) ಮತ್ತೆ ಕಾರ್ಯಾರಂಭ ಮಾಡಲು ವಾಯುಪಡೆ ಸೂಚನೆ ನೀಡಿರುವುದಾಗಿ ವರದಿಗಳು ತಿಳಿಸಿವೆ.

    32 ವಿಮಾನ ನಿಲ್ದಾಣಗಳನ್ನು ತೆರೆಯುವಂತೆ ಭಾರತೀಯ ವಾಯುಪಡೆ ಅಧಿಕಾರಿಗಳು ಸೂಚನೆ ನೀಡಿದ ಬಳಿಕ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ (AAI) ಸಂಬಂಧಪಟ್ಟ ವಿಮಾನ ನಿಲ್ದಾಣಗಳಿಗೆ ಸೂಚನೆ ನೀಡಿದೆ. ಹೀಗಾಗಿ ದೇಶದ ಪಶ್ಚಿಮ ಮತ್ತು ಉತ್ತರ ಭಾಗಗಳಲ್ಲಿ ತಾತ್ಕಾಲಿಕವಾಗಿ ಮುಚ್ಚಲಾಗಿದ್ದ ಏರ್‌ಪೋರ್ಟ್‌ಗಳು ಮತ್ತೆ ಕಾರ್ಯಾರಂಭ ಮಾಡಲಿವೆ. ಇದನ್ನೂ ಓದಿ: ಯುದ್ಧ ಭೀತಿ ನಡುವೆ ಮತ್ತೊಂದು ಶಾಕ್‌ – ಪಾಕಿಸ್ತಾನದ 51 ಸ್ಥಳಗಳ ಮೇಲೆ ಬಲೂಚ್‌ ಹೋರಾಟಗಾರರಿಂದ ದಾಳಿ

    AI ಚಿತ್ರ
    AI ಚಿತ್ರ

    ಇತ್ತೀಚೆಗೆ ಭಾರತ ಪಾಕ್‌ ನಡುವಿನ ಸಂಘರ್ಷ ತೀವ್ರಗೊಂಡಿತ್ತು. ಈ ಹಿನ್ನೆಲೆ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರವು 32 ವಿಮಾನ ನಿಲ್ದಾಣಗಳನ್ನು ಮೇ 15ರ ವರೆಗೆ ತಾತ್ಕಾಲಿಕವಾಗಿ ಬಂದ್‌ ಮಾಡುವಂತೆ ಸೂಚಿಸಿತ್ತು. ಇದನ್ನೂ ಓದಿ: ಭಾರತ-ಪಾಕ್ ʻಕದನ-ವಿರಾಮʼ ಮಾತುಕತೆ – ಇಂದು ಎರಡೂ ದೇಶಗಳ ಡಿಜಿಎಂಒಗಳ ಸಭೆ

    ಪಂಜಾಬ್‌ನ ಅಮೃತಸರ, ಲುಧಿಯಾನ, ಪಟಿಯಾಲ, ಬಟಿಂಡಾ, ಹಲ್ವಾರಾ ಮತ್ತು ಪಠಾಣ್‌ಕೋಟ್, ಹಿಮಾಚಲ ಪ್ರದೇಶದ ಭುಂತರ್, ಶಿಮ್ಲಾ ಮತ್ತು ಕಾಂಗ್ರಾ ಗಗ್ಗಲ್, ಚಂಡೀಗಢ, ಜಮ್ಮು ಮತ್ತು ಕಾಶ್ಮೀರದ ಶ್ರೀನಗರ ಮತ್ತು ಜಮ್ಮು, ಲಡಾಖ್‌ನ ಲೇಹ್, ರಾಜಸ್ಥಾನದ ಕಿಶೆಂಗಢ, ಜೈಸರ್, ಜೋದ್‌ಪುರ ಮತ್ತು ಬಿಕಾನೇರ್ ಮತ್ತು ಗುಜರಾತ್‌ನ ಮುಂದ್ರ, ಜಾಮ್‌ನಗರ ಸೇರಿದಂತೆ ಹಲವು ವಿಮಾನ ನಿಲ್ದಾಣಗಳನ್ನು ಬಂದ್‌ ಮಾಡಲಾಗಿತ್ತು. ಆದ್ರೆ ಭಾರತ-ಪಾಕ್‌ ನಡುವೆ ಕದನ ವಿರಾಮ ಘೋಷಣೆಯಾದ ಬೆನ್ನಲ್ಲೇ ಏರ್‌ಪೋರ್ಟ್‌ಗಳನ್ನು ಕಾರ್ಯಾಚರಣೆ ಪುನರಾರಂಭಿಸುತೆ ಭಾರತೀಯ ವಾಯುಸೇನೆ ಸೂಚನೆ ನೀಡಿದೆ. ಇದನ್ನೂ ಓದಿ: ಉಗ್ರರ ಸಂಹಾರಕ್ಕೆ ಭಾರತೀಯ ಸೇನೆಗೆ ನೆರವಾಗಿದ್ದು ಬೆಂಗಳೂರಿನ ʻಇಸ್ರೋʼ

  • ಭಾರತ-ಪಾಕ್ ಗಡಿಯಲ್ಲಿರುವ 24 ವಿಮಾನ ನಿಲ್ದಾಣಗಳು ಮೇ 15ರವರೆಗೆ ಬಂದ್

    ಭಾರತ-ಪಾಕ್ ಗಡಿಯಲ್ಲಿರುವ 24 ವಿಮಾನ ನಿಲ್ದಾಣಗಳು ಮೇ 15ರವರೆಗೆ ಬಂದ್

    ಶ್ರೀನಗರ: ಭಾರತ ಮತ್ತು ಪಾಕಿಸ್ತಾನದ ನಡುವೆ ಸಂಘರ್ಷ ಹೆಚ್ಚಾಗುತ್ತಿರುವ ಬೆನ್ನಲ್ಲೇ ಭಾರತ ಮತ್ತು ಪಾಕ್ ಗಡಿಯ ಬಳಿಯ 24 ವಿಮಾನ ನಿಲ್ದಾಣಗಳು (Airport) ಮೇ 15ರವರೆಗೆ ಬಂದಾಗಲಿವೆ.

    ಗಡಿಯಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆ ಬಂದ್ ವಿಸ್ತರಣೆ ಮಾಡಲಾಗಿದೆ. ಮೇ 15ರ ಬೆಳಗ್ಗೆ 5:30 ರವರೆಗೂ ಬಂದ್ ವಿಸ್ತರಿಸಲಾಗಿದೆ. ವಿಮಾನಯಾನ (Ministry of Civil Aviation) ಸಂಸ್ಥೆಗಳು ಮತ್ತು ವಿಮಾನ ನಿಲ್ದಾಣ ಅಧಿಕಾರಿಗಳಿಗೆ ಇದರ ಬಗ್ಗೆ ತಿಳಿಸಲಾಗಿದೆ ಎಂದು ಹಿರಿಯ ಸರ್ಕಾರಿ ಅಧಿಕಾರಿಯೊಬ್ಬರು ದೃಢಪಡಿಸಿದ್ದಾರೆ. ಇದನ್ನೂ ಓದಿ: ಪಾಕ್‌ನಿಂದ ಜಮ್ಮು & ಕಾಶ್ಮೀರ, ಪೂಂಚ್, ಉರಿ ಮೇಲೆ ಶೆಲ್ ದಾಳಿ

    ಶ್ರೀನಗರ, ಜಮ್ಮು , ಅಮೃತಸರ, ಲೇಹ್, ಚಂಡೀಗಢ, ಧರ್ಮಶಾಲಾ, ಬಿಕಾನೇರ್, ರಾಜ್‌ಕೋಟ್, ಜೋಧ್‌ಪುರ ಮತ್ತು ಕಿಶನ್‌ಗಢ ವಿಮಾನ ನಿಲ್ದಾಣಗಳನ್ನು ಮೇ 15ರವರೆಗೆ ತಾತ್ಕಾಲಿಕವಾಗಿ ಮುಚ್ಚಲಾಗುತ್ತದೆ. ತಾತ್ಕಾಲಿಕ ವಿಮಾನ ನಿಲ್ದಾಣ ಮುಚ್ಚುವಿಕೆಯಿಂದಾಗಿ ಈ ಸ್ಥಳಗಳಿಗೆ ಮತ್ತು ಅಲ್ಲಿಂದ ಹೊರಡುವ ಎಲ್ಲಾ ವಿಮಾನಗಳನ್ನು ಮೇ 15ರಂದು ಬೆಳಿಗ್ಗೆ 5.29 ರವರೆಗೆ ರದ್ದುಗೊಳಿಸಲಾಗುತ್ತದೆ ಎಂದು ಇಂಡಿಗೊ ಏರ್‌ಲೈನ್ಸ್ (Indigo Airlines) ತಿಳಿಸಿದೆ. ಈ ದಿನಗಳಲ್ಲಿ ಟಿಕೆಟ್ ಬುಕ್ ಮಾಡಿರುವ ಪ್ರಯಾಣಿಕರು ಟಿಕೆಟ್ ರದ್ದುಗೊಳಿಸಿದರೆ ಪೂರ್ಣ ರೀತಿಯಲ್ಲಿ ಹಣ ಮರುಪಾವತಿ ಮಾಡಲಾಗುವುದು ಎಂದು ಇಂಡಿಗೊ ತಿಳಿಸಿದೆ.  ಇದನ್ನೂ ಓದಿ: ಭಾರತದ ಧಾರ್ಮಿಕ ಕೇಂದ್ರಗಳನ್ನು ಗುರಿಯಾಗಿಸಿ ಪಾಕ್‌ ದಾಳಿ: ಕೇಂದ್ರ ಸರ್ಕಾರ ವಾಗ್ದಾಳಿ

  • ಪಾಕ್‌ ಕ್ಷಿಪಣಿ ದಾಳಿ ಬೆನ್ನಲ್ಲೇ ಭಾರತದ 24 ಏರ್‌ಪೋರ್ಟ್‌ಗಳು ಬಂದ್‌

    ಪಾಕ್‌ ಕ್ಷಿಪಣಿ ದಾಳಿ ಬೆನ್ನಲ್ಲೇ ಭಾರತದ 24 ಏರ್‌ಪೋರ್ಟ್‌ಗಳು ಬಂದ್‌

    ಶ್ರೀನಗರ: ʻಆಪರೇಷನ್‌ ಸಿಂಧೂರʼಕ್ಕೆ (Operation Sindoor) ಪ್ರತೀಕಾರವಾಗಿ ಪಾಕಿಸ್ತಾನ ಭಾರತದ ಮೇಲೆ ಕ್ಷಿಪಣಿ ದಾಳಿ ನಡೆಸುತ್ತಿದ್ದು, ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆ ಭಾರತದ  24 ವಿಮಾನ ನಿಲ್ದಾಣಗಳನ್ನು ಬಂದ್‌ ಮಾಡಲಾಗಿದೆ.

    ಗುರುವಾರ ಪಾಕಿಸ್ತಾನ ಕ್ಷಿಪಣಿ ಹಾಗೂ ಡ್ರೋನ್‌ ದಾಳಿ ನಡೆಸುತ್ತಿದ್ದಂತೆಯೇ ಭಾರತವು ಕೂಡ ಲಾಹೋರ್‌, ಇಸ್ಲಾಮಾಬಾದ್‌ ಮೇಲೆ ದಾಳಿ ಆರಂಭಿಸಿದೆ. ಹೀಗಾಗಿ ಉಭಯ ದೇಶಗಳ ನಡುವೆ ಉದ್ವಿಗ್ನತೆ ಹೆಚ್ಚುತ್ತಿದ್ದು, ವಿಮಾನ ನಿಲ್ದಾಣದಲ್ಲಿ ಭದ್ರತೆ ಹೆಚ್ಚಿಸಲಾಗಿದೆ.

    ಕ್ಷಿಪಣಿಗಳನ್ನು ಬಳಸಿಕೊಂಡು ಹಮಾಸ್ ಸ್ಟೈಲ್‌ನಲ್ಲಿ ಪಾಕ್ ಆರ್ಮಿ ಜಮ್ಮು, ಪಂಜಾಬ್‌ ಹಾಗೂ ರಾಜಸ್ಥಾನದ ಕೆಲವು ಸ್ಥಳಗಳನ್ನು ಗುರಿಯಾಗಿಸಿಕೊಂಡು ಅಟ್ಯಾಕ್‌ ಮಾಡಿದೆ. ಭಾರತದ ಏರ್ ಡಿಫೆನ್ಸ್ ಯೂನಿಟ್‌ನಿಂದ ಪಾಕ್‌ನ ಎಲ್ಲ ಕ್ಷಿಪಣಿಗಳನ್ನು ಉಡೀಸ್ ಮಾಡಿ, ಭಾರತವು ತಕ್ಕ ಪ್ರತ್ಯುತ್ತರ ನೀಡಿದೆ.

    ಯಾವೆಲ್ಲ ಏರ್‌ಪೋರ್ಟ್‌ಗಳು ಬಂದ್‌?

    ಚಂಡೀಗಢ

    1. ಶ್ರೀನಗರ
    2. ಅಮೃತಸರ
    3. ಲುಧಿಯಾನ
    4. ಭುಂಟರ್
    5. ಕಿಶೆನ್‌ಗಢ
    6. ಪಟಿಯಾಲ
    7. ಶಿಮ್ಲಾ
    8. ಕಾಂಗ್ರಾ-ಗಗ್ಗಲ್
    9. ಭಟಿಂಡಾ
    10. ಜೈಸಲ್ಮೇರ್
    11. ಜೋಧಪುರ
    12. ಬಿಕಾನೆರ್
    13. ಹಲ್ವಾರಾ
    14. ಪಠಾಣ್‌ಕೋಟ್
    15. ಜಮ್ಮು
    16. ಲೆಹ್
    17. ಮುಂದ್ರಾ
    18. ಜಾಮ್‌ನಗರ್
    19. ಹಿರಾಸರ್ (ರಾಜ್‌ಕೋಟ್)
    20. ಪೋರಬಂದರ್
    21. ಕೆಶೋಡ್
    22. ಕಾಂಡ್ಲಾ
    23. ಭುಜ್

  • ಮಂಕಿಪಾಕ್ಸ್ ಭೀತಿ – ವಿಮಾನ ನಿಲ್ದಾಣಗಳಲ್ಲಿ ಹೈ ಅಲರ್ಟ್ ಘೋಷಣೆ

    ಮಂಕಿಪಾಕ್ಸ್ ಭೀತಿ – ವಿಮಾನ ನಿಲ್ದಾಣಗಳಲ್ಲಿ ಹೈ ಅಲರ್ಟ್ ಘೋಷಣೆ

    ನವದೆಹಲಿ: ದೇಶದಲ್ಲೂ ಆತಂಕ ಸೃಷ್ಟಿಸಿರುವ ಮಂಕಿಪಾಕ್ಸ್ ಸೋಂಕಿನ ಭೀತಿಯಿಂದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಎಲ್ಲ ವಿಮಾನ ನಿಲ್ದಾಣಗಳಲ್ಲೂ ಹೈ ಅಲರ್ಟ್ ಘೋಷಿಸಿದೆ. ವಿದೇಶಗಳಿಂದ ಬರುವವರನ್ನು ಕಡ್ಡಾಯವಾಗಿ ತಪಾಸಣೆಗೆ ಒಳಪಡಿಸುವಂತೆ ಸೂಚಿಸಿದೆ.

    ಈ ಕುರಿತು ಆರೋಗ್ಯ ಸಚಿವಾಲಯ ತುರ್ತು ಅದೇಶ ಹೊರಡಿಸಿದ್ದು, ಕೇಂದ್ರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮಾರ್ಗಸೂಚಿಗಳಂತೆ ಪ್ರತಿಯೊಬ್ಬರನ್ನೂ ಕಡ್ಡಾಯವಾಗಿ ತಪಾಸಣೆ ಮಾಡಬೇಕು. ಇದರಿಂದ ಮಂಕಿಪಾಕ್ಸ್ ಹರಡುವುದನ್ನು ತಡೆಗಟ್ಟಬಹುದು ಎಂದು ಹೇಳಿದೆ. ಇದನ್ನೂ ಓದಿ: ಕಾಂಗ್ರೆಸ್‍ನಲ್ಲಿ ಜೋರಾಯ್ತು ಕುರ್ಚಿ ಕದನ – ಸಿಎಂ ಪಟ್ಟಕ್ಕಾಗಿ ಸಮುದಾಯದ ಬೆಂಬಲ ಕೋರಿದ ಡಿಕೆ

    ದುಬೈನಿಂದ ಬಂದಿದ್ದ ಕೇರಳದ ಕಣ್ಣೂರಿನ ವ್ಯಕ್ತಿಯೊಬ್ಬರಿಗೆ ನಿನ್ನೆಯಷ್ಟೇ `ಮಂಕಿಪಾಕ್ಸ್’ ತಗುಲಿರುವುದು ಪತ್ತೆಯಾಗಿತ್ತು. ಇದು ದೇಶದಲ್ಲಿ ಪತ್ತೆಯಾದ 2ನೇ ಪ್ರಕರಣವಾಗಿತ್ತು. ಇದಕ್ಕೂ ಮುನ್ನ ಕೇರಳದ ಕೊಲ್ಲಂ ಜಿಲ್ಲೆಯ ವ್ಯಕ್ತಿಯೊಬ್ಬರಲ್ಲಿ ಮಂಕಿಪಾಕ್ಸ್ ದೃಢಪಟ್ಟಿತ್ತು.

    31 ವರ್ಷದ ವ್ಯಕ್ತಿಯೊಬ್ಬರು ಜುಲೈ 13ರಂದು ದುಬೈಯಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದರು. ಅವರಲ್ಲಿ ಮಂಕಿಪಾಕ್ಸ್‌ನ ಲಕ್ಷಣಗಳು ಕಂಡುಬಂದಿದ್ದವು. ಹೀಗಾಗಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರಿಂದ ಸಂಗ್ರಹಿಸಲಾಗಿದ್ದ ಮಾದರಿಯನ್ನು ಪುಣೆಯ ರಾಷ್ಟ್ರೀಯ ವೈರಾಣು ಸಂಸ್ಥೆಗೆ ರವಾನಿಸಲಾಗಿತ್ತು. ವ್ಯಕ್ತಿಗೆ ರೋಗ ತಗುಲಿರುವುದು ಪರೀಕ್ಷೆಯಿಂದ ದೃಢಪಟ್ಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಅಧಿಕಾರಿಯೊಬ್ಬರು ಹೇಳಿದ್ದಾರೆ. ಇದನ್ನೂ ಓದಿ: ಸುಮ್ಮನೆ ವಾಹನ ತಡೆ ಹಿಡಿಯುತ್ತಿದ್ದ ಟ್ರಾಫಿಕ್ ಪೊಲೀಸ್ ಅಮಾನತು

    ಈ ಬೆನ್ನಲ್ಲೇ ರಾಜ್ಯದ ಆರೋಗ್ಯ ಇಲಾಖೆಯೊಂದಿಗೆ ಕೇಂದ್ರದ ವಿಶೇಷ ತಂಡವು ಪರಿಸ್ಥಿತಿ ಅವಲೋಕಿಸಿತ್ತು. ಬಳಿಕ ಮಂಕಿಪಾಕ್ಸ್ ನಿಯಂತ್ರಣಕ್ಕೆ ಅಗತ್ಯ ಕ್ರಮಗಳನ್ನೂ ಕೈಗೊಳ್ಳಲಾಗಿದೆ. ಪ್ರಕರಣ ಪತ್ತೆಯಾದಲ್ಲಿ, ಅದನ್ನು ತಡೆಯಲು ರಾಜ್ಯಗಳಿಗೆ ಎಲ್ಲ ರೀತಿಯ ಸಹಕಾರಗಳನ್ನು ನೀಡಲಾಗುತ್ತದೆ. ಮಂಕಿಪಾಕ್ಸ್ ಅಷ್ಟೇನೂ ಗಂಭೀರವಾದ ಕಾಯಿಲೆಯಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ. ಹೀಗಾಗಿ ಯಾರೂ ಆತಂಕಕ್ಕೆ ಒಳಗಾಗಬಾರದು ಧೈರ್ಯ ಹೇಳಿದೆ.

    Live Tv
    [brid partner=56869869 player=32851 video=960834 autoplay=true]

  • ಕಾಂಗ್ರೆಸ್ ನಿರ್ಮಿಸಿರುವ ರೈಲ್ವೇ, ವಿಮಾನ ನಿಲ್ದಾಣಗಳನ್ನು ಬಿಜೆಪಿ ಮಾರುತ್ತಿದೆ: ಪ್ರಿಯಾಂಕಾ ಗಾಂಧಿ

    ಕಾಂಗ್ರೆಸ್ ನಿರ್ಮಿಸಿರುವ ರೈಲ್ವೇ, ವಿಮಾನ ನಿಲ್ದಾಣಗಳನ್ನು ಬಿಜೆಪಿ ಮಾರುತ್ತಿದೆ: ಪ್ರಿಯಾಂಕಾ ಗಾಂಧಿ

    ಲಕ್ನೋ: ಕಳೆದ 70 ವರ್ಷಗಳಲ್ಲಿ ಕಾಂಗ್ರೆಸ್ ನಿರ್ಮಿಸಿರುವ ರೈಲ್ವೇ, ವಿಮಾನ ನಿಲ್ದಾಣ, ರಸ್ತೆಗಳನ್ನು ಬಿಜೆಪಿ ಸರ್ಕಾರ ಮಾರಾಟ ಮಾಡುತ್ತಿದೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    PM MODI

    ಉತ್ತರ ಪ್ರದೇಶದ ಗೋರಖ್‍ಪರ್ ನಲ್ಲಿ ನಡೆದ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ದೇಶದಲ್ಲಿ ರೈಲ್ವೇ, ವಿಮಾನ ನಿಲ್ದಾಣ ಮತ್ತು ರಸ್ತೆಗಳನ್ನು ನಿರ್ಮಿಸಿ ಕೊಟ್ಟಿತ್ತು. ಆದರೆ ಬಿಜೆಪಿಯವರು ಕಾಂಗ್ರೆಸ್ ಸರ್ಕಾರ 70 ವರ್ಷಗಳಿಂದ ಏನು ಕೊಟ್ಟಿದೆ ಎಂದು ಪ್ರಶ್ನಿಸುತ್ತಾರೆ. ಅವರಿಗೆ ಪ್ರಶ್ನಿಸುವ ಅಧಿಕಾರವಿಲ್ಲ ಅವರು ನಾವು 70 ವರ್ಷಗಳಲ್ಲಿ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಕೇವಲ 7 ವರ್ಷಗಳಲ್ಲಿ ಹಾಳು ಮಾಡಿದ್ದಾರೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಇಂದಿರಾ ಗಾಂಧಿಗೆ ಶ್ರದ್ಧಾಂಜಲಿ ಸಲ್ಲಿಸಿದ ಮೋದಿ

    ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರ ಎಲ್ಲಾ ಜಾತಿಗಳು ಮತ್ತು ವರ್ಗಗಳ ಜನರನ್ನು ಶೋಷಣೆ ಮಾಡುತ್ತಿದೆ. ದಲಿತರು, ನೇಕಾರರು, ಅಲ್ಪಸಂಖ್ಯಾತರು, ಒಬಿಸಿಗಳು ಮತ್ತು ಬ್ರಾಹ್ಮಣರು ಶೋಷಣೆಗೆ ಒಳಗಾಗಿದ್ದಾರೆ. ಯೋಗಿ ಗುರು ಗೋರಖನಾಥರ ಬೋಧನೆಗೆ ವಿರುದ್ಧವಾಗಿ ಸರ್ಕಾರವನ್ನು ನಡೆಸುತ್ತಿದ್ದಾರೆ. ಜನರನ್ನು ರಕ್ಷಿಸಬೇಕಾಗಿದ್ದ ಸರ್ಕಾರವೇ ಜನರಿಗೆ ಹಲ್ಲೆ ಮಾಡಿ ಶೋಷಣೆಗೆ ಒಳಪಡಿಸಿದೆ. ರಾಜ್ಯದಲ್ಲಿ ನಿರುದ್ಯೋಗ ಪ್ರಮುಖ ಸಮಸ್ಯೆಯಾಗಿದೆ. ಉತ್ತರಪ್ರದೇಶದಲ್ಲಿ 5 ಕೋಟಿ ನಿರುದ್ಯೋಗಿ ಯುವಕರಿದ್ದಾರೆ. ನಿರುದ್ಯೋಗದಿಂದ ಪ್ರತಿದಿನ ಮೂವರು ಯುವಕರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ.

    ಕಾಂಗ್ರೆಸ್ ಪಕ್ಷ, ಬಿಜೆಪಿಯೊಂದಿಗೆ ಯಾವತ್ತು ಸೇರುವುದಿಲ್ಲ. ಸಮಾಜವಾದಿ ಪಕ್ಷ ಹಾಗೂ ಬಹುಜನ ಸಮಾಜ ಪಕ್ಷಗಳ(SP and BSP) ಆರೋಪ ಸುಳ್ಳು ಎಂದು ಪ್ರಿಯಾಂಕಾ ಗಾಂಧಿ ಕಾಂಗ್ರೆಸ್ ಪಕ್ಷದ ಬಗ್ಗೆ ಕೇಳಿಬರುತ್ತಿದ್ದ ಆರೋಪಗಳಿಗೆ ಸ್ಪಷ್ಟನೆ ನೀಡಿದ್ದಾರೆ. ಇದನ್ನೂ ಓದಿ: ಸಕ್ಕರೆ ನಾಡಿಗೆ ನೂತನ ಎಸ್‍ಪಿ ಆಗಮನ

  • ಮಹಿಳೆಯೊಂದಿಗೆ 14 ಸಾವಿರ ಕಿ.ಮೀ ಪ್ರಯಾಣಿಸಿದ ಹೆಬ್ಬಾವು!

    ಮಹಿಳೆಯೊಂದಿಗೆ 14 ಸಾವಿರ ಕಿ.ಮೀ ಪ್ರಯಾಣಿಸಿದ ಹೆಬ್ಬಾವು!

    ಕ್ಯಾನ್ಬೆರಾ: ಸ್ಕಾಟ್ಲೆಂಡ್ ಮಹಿಳೆಯೊಬ್ಬರ ಲಗೇಜಿನಲ್ಲಿ ಹೆಬ್ಬಾವೊಂದು ಬರೋಬ್ಬರಿ 14 ಸಾವಿರ ಕಿ.ಮೀ ಪ್ರಯಾಣ ಮಾಡಿರುವ ಆಘಾತಕಾರಿ ಘಟನೆ ಆಸ್ಟ್ರೇಲಿಯಾದಲ್ಲಿ ನಡೆದಿದೆ.

    ಸ್ಕಾಟ್ಲೆಂಡ್ ಮೂಲದ ಮರಿಯಾ ಬೋಕ್ಸಾಲ್ ಮಹಿಳೆಯ ಲಗೇಜಿನಲ್ಲಿ ಹೆಬ್ಬಾವು ಕಂಡು ಬಂದಿದೆ. ಬೋಕ್ಸಾಲಾ ಅವರು ರಜೆ ಬಳಿಕ ಆಸ್ಟ್ರೇಲಿಯಾದಿಂದ ಸ್ಕಾಟ್ಲೆಂಡ್‍ಗೆ ತೆರಳುತ್ತಿದ್ದರು. ಅವರ ಜೊತೆ ಲಗೇಜಿನಲ್ಲಿ ಶೂ ಒಳಗೆ ಹೆಬ್ಬಾವು ಸೇರಿಕೊಂಡಿದೆ. ಆದರೆ ಅದನ್ನು ಬೋಕ್ಸಾಲ್ ಗಮನಿಸಿರಲಿಲ್ಲ. ಕೊನೆಗೆ ಹೆಬ್ಬಾವಿನ ಜೊತೆ ಬರೋಬ್ಬರಿ 14,000 ಕಿ.ಮೀವರೆಗೂ ಪ್ರಯಾಣ ಮಾಡಿದ್ದಾರೆ.

    ಮಹಿಳೆ ಆಸ್ಟ್ರೇಲಿಯಾದ ಕ್ವೀನ್ಸ್ ಲ್ಯಾಂಡ್ ಏರ್‌ಪೋರ್ಟ್‌ ಗೆ ಬಂದಿದ್ದಾರೆ. ಅಲ್ಲಿ ಬ್ಯಾಗಿನ ಪರಿಶೀಲನೆ ಮಾಡುವಾಗ ಈ ಹೆಬ್ಬಾವು ಪತ್ತೆಯಾಗಿದೆ. ತಕ್ಷಣ ಮಹಿಳೆ ಪ್ರಾಣಿ ರಕ್ಷಣಾ ಸಂಗ್ರಹಾಲಯಕ್ಕೆ ಫೋನ್ ಮಾಡಿ ಮಾಹಿತಿ ತಿಳಿಸಿದ್ದಾರೆ. ಮಾಹಿತಿ ತಕ್ಷಣ ಸ್ಥಳಕ್ಕೆ ಬಂದು ಬ್ಯಾಗಿನಿಂದ ಹೆಬ್ಬಾವನ್ನು ಯಶಸ್ವಿಯಾಗಿ ತೆಗೆದಿದ್ದಾರೆ.

    ಮೊದಲಿಗೆ ನಾನು ಅದನ್ನು ತಮಾಷೆ ಮಾಡಲು ಕುಟುಂಬದವರು ಆಟಿಕೆ ಅಂದರೆ ನಕಲಿ ಹಾವನ್ನು ಇರಿಸಲಾಗಿದೆ ಎಂದುಕೊಂಡಿದೆ. ಆದರೆ ಅದನ್ನು ಹೊರಗಡೆಯಿಂದ ಮುಟ್ಟಿದಾಗ ಅದು ಅಲಗಾಡಿತು. ಆ ಕ್ಷಣ ನನಗೆ ನಿಜವಾಗಿಯೂ ಆಘಾತವಾಗಿತ್ತು ಎಂದು ಬೋಕ್ಸಾಲ್ ಹೇಳಿದ್ದಾರೆ.

    ನಮಗೆ ಕರೆ ಬಂದು ಬ್ಯಾಗಿನಲ್ಲಿ ಶೂ ಒಳಗೆ ಅಡಗಿದ್ದ ಹೆಬ್ಬಾವನ್ನು ಸುರಕ್ಷಿತವಾಗಿ ಹೊರ ತೆಗೆದಿದ್ದೇವೆ. ಮಚ್ಚೆಯುಳ್ಳ ಸ್ಪಾಟ್ಟೆಡ್ ಹೆಬ್ಬಾವು ಎಂದು ಗುರುತಿಸಲಾಗಿದೆ. ಇದು ಶೂ ಒಳಗೆ ತನ್ನ ಪೊರೆಯನ್ನು ಬಿಟ್ಟಿತ್ತು ಎಂದು ಪ್ರಾಣಿ ರಕ್ಷಕ ಅಧಿಕಾರಿ ಟೇಲರ್ ಜಾನ್ಸ್ಟೋನ್ ತಿಳಿಸಿದ್ದಾರೆ.

    ವಿಮಾನ ನಿಲ್ದಾಣದಲ್ಲಿ ಇದೇ ಮೊದಲ ಬಾರಿಗೆ ಹಾವು ಪತ್ತೆಯಾಗಿಲ್ಲ. ಕಳೆದ ವರ್ಷ ಸೆಪ್ಟೆಂಬರ್ ನಲ್ಲಿ ವ್ಯಕ್ತಿಯೊಬ್ಬ 20 ಜೀವಂತ ಹಾವುಗಳನ್ನು ತನ್ನ ಹ್ಯಾಂಡ್ ಬ್ಯಾಗಿನಲ್ಲಿ ಇಟ್ಟುಕೊಂಡು ಜರ್ಮನಿಯಿಂದ ರಷ್ಯಾಕ್ಕೆ ವಿಮಾನದ ಮೂಲಕ ಪ್ರಯಾಣ ಬೆಳೆಸಿದ್ದನು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಜೆಟ್‌ ಏರ್‌ವೇಸ್  ಸಿಬ್ಬಂದಿ ಎಡವಟ್ಟಿನಿಂದಾಗಿ ಪ್ರಯಾಣಿಕರ ಕಿವಿ, ಮೂಗಲ್ಲಿ ರಕ್ತ ಬಂತು! ನಿಜವಾಗಿ ಆಗಿದ್ದು ಏನು?

    ಜೆಟ್‌ ಏರ್‌ವೇಸ್ ಸಿಬ್ಬಂದಿ ಎಡವಟ್ಟಿನಿಂದಾಗಿ ಪ್ರಯಾಣಿಕರ ಕಿವಿ, ಮೂಗಲ್ಲಿ ರಕ್ತ ಬಂತು! ನಿಜವಾಗಿ ಆಗಿದ್ದು ಏನು?

    ನವದೆಹಲಿ: ಜೆಟ್ ಏರ್ ವೇಸ್ ವಿಮಾನ ಸಿಬ್ಬಂದಿಯ ಎಡವಟ್ಟಿನಿಂದಾಗಿ ಪ್ರಯಾಣಿಕರ ಕಿವಿ, ಮೂಗಿನಲ್ಲಿ ರಕ್ತ ಬಂದ ಘಟನೆ ಗುರುವಾರ ಬೆಳಗ್ಗೆ ನಡೆದಿದೆ.

    ಇಂದು ಬೆಳಗ್ಗೆ ಮುಂಬೈನಿಂದ ಜೈಪುರಕ್ಕೆ ಹಾರಾಟ ನಡೆಸಿದ್ದ ಜೆಟ್ ಏರ್ ವೇಸ್ ವಿಮಾನ ಸಿಬ್ಬಂದಿ ಬ್ಲೀಡ್ ಸ್ವಿಚ್ ಆನ್ ಮಾಡದ ಕಾರಣ ಪ್ರಯಾಣಿಕರ ಮೂಗು, ಕಿವಿಯಲ್ಲಿ ರಕ್ತ ಬಂದಿದೆ. ಮಾಧ್ಯಮಗಳಲ್ಲಿ ಈ ಸುದ್ದಿ ಪ್ರಕಟವಾಗುತ್ತಿದ್ದಂತೆ ನಾಗರಿಕ ವಿಮಾನಯಾನ ಸಚಿವಾಲಯ(ಡಿಜಿಸಿಎ) ತಕ್ಷಣವೇ ಈ ಪ್ರಕರಣಕ್ಕೆ ಸಂಬಂಧಿಸದಂತೆ ವರದಿ ನೀಡುವಂತೆ ಸೂಚಿಸಿದೆ.

    ಆಗಿದ್ದು ಏನು?
    ಇಂದು ಬೆಳಗ್ಗೆ 5.50ರ ಸಮಯದಲ್ಲಿ ಮುಂಬೈ ಛತ್ರಪತಿ ಶಿವಾಜಿ ವಿಮಾನ ನಿಲ್ದಾಣದಿಂದ ಜೈಪುರಕ್ಕೆ ಜೆಟ್ ಏರ್ ವೇಸ್ ವಿಮಾನ 166 ಪ್ರಯಾಣಿಕರೊಂದಿಗೆ ಹಾರಾಟ ಆರಂಭಿಸಿತ್ತು. ಆದರೆ ವಿಮಾನ ಹಾರಾಟದ ಸಂದರ್ಭದಲ್ಲಿ ಕ್ಯಾಬಿನ್ ಒತ್ತಡ ಸಮಸ್ಯೆಯನ್ನು ನಿಯಂತ್ರಿಸಲು ಅಳವಡಿಸಿದ್ದ ಸ್ವಿಚನ್ನು ಆನ್ ಮಾಡಲು ಸಿಬ್ಬಂದಿ ಮರೆತಿದ್ದರು. ಇದರಿಂದ ವಿಮಾನದಲ್ಲಿದ್ದ ಸುಮಾರು 30ಕ್ಕೂ ಹೆಚ್ಚು ಮಂದಿ ಪ್ರಯಾಣಿಕರಿಗೆ ಒತ್ತಡ ತಡೆಯಲಾಗದೇ ತಲೆನೋವು ಕಾಣಿಸಿಕೊಂಡು ಬಳಿಕ ಮೂಗು ಹಾಗೂ ಕಿವಿಯಲ್ಲಿ ರಕ್ತಸ್ರಾವವಾಗಿದೆ. ಈ ವೇಳೆ ಪ್ರಯಾಣಿಕರು ಆಸನದ ಮೇಲಿದ್ದ ಆಮ್ಲಜನಕದ ಮಾಸ್ಕನ್ನು ಧರಿಸುವ ಮೂಲಕ ಅಪಾಯದಿಂದ ಪಾರಾದರು.

    ಜೆಟ್ ಏರ್ ವೇಸ್‍ನ 737 ಬೋಯಿಂಗ್ ವಿಮಾನದಲ್ಲಿ ಈ ಘಟನೆ ನಡೆದಿದ್ದು, ವಿಮಾನ ಹಾರಾಟದ ಸಂದರ್ಭದಲ್ಲಿ ಒಟ್ಟು 166 ಮಂದಿ ಪ್ರಯಾಣಿಕರು ಹಾಗೂ 5 ಸಿಬ್ಬಂದಿ ಇದ್ದರು ಎಂದು ವಿಮಾನಯಾನ ನಿಯಂತ್ರಣ ಪ್ರಾಧಿಕಾರದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಅಲ್ಲದೇ ಪ್ರಯಾಣಿಕರು ಅಸ್ವಸ್ಥರಾಗುತ್ತಿದ್ದಂತೆ 45 ನಿಮಿಷಗಳ ಹಾರಾಟದ ಬಳಿಕ ಮತ್ತೆ ಮುಂಬೈ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದ್ದು, ಅಸ್ವಸ್ಥಗೊಂಡಿದ್ದ ಪ್ರಯಾಣಿಕರಿಗೆ ವೈದ್ಯರು ಚಿಕಿತ್ಸೆ ನೀಡಿದ್ದಾರೆ. ಉಳಿದ ಪ್ರಯಾಣಿಕರಿಗೆ ಮತ್ತೊಂದು ವಿಮಾನದ ಮೂಲಕ ಜೈಪುರಕ್ಕೆ ತೆರಳಲು ವ್ಯವಸ್ಥೆ ಮಾಡಿದ್ದಾಗಿ ವಿಮಾನ ಅಪಘಾತ ತನಿಖಾ ಸಂಸ್ಥೆ (ಎಎಐಬಿ) ಮಾಹಿತಿ ನೀಡಿದೆ.

    ಈ ಘಟನೆ ಕುರಿತು ಎಎಐಬಿ ತನಿಖೆಗೆ ಆದೇಶಿಸಿದ್ದು, ಡಿಜಿಸಿಎಗೆ ದೂರನ್ನೂ ನೀಡಲಾಗಿದೆ. ಸದ್ಯ ಲಭ್ಯವಾಗಿರುವ ಮಾಹಿತಿ ಅನ್ವಯ ವಿಮಾನ ಸಿಬ್ಬಂದಿಯ ನಿರ್ಲಕ್ಷ್ಯತನದಿಂದಲೇ ಪ್ರಯಾಣಿಕರಿಗೆ ತೊಂದರೆ ಉಂಟಾಗಿದೆ ಎಂದು ಹೇಳಲಾಗಿದೆ. ಡಿಜಿಸಿಎ ಘಟನೆ ವೇಳೆ ಕರ್ತವ್ಯದಲ್ಲಿದ್ದ ಐವರು ಸಿಬ್ಬಂದಿಯನ್ನು ವಿಚಾರಣೆಗೆ ಒಳಪಡಿಸಿದೆ.

    ಆಗಿದ್ದು ಏನು?
    ಮಾಧ್ಯಮಗಳಲ್ಲಿ ಪ್ರಕಟವಾದಂತೆ ವಿಮಾನದಲ್ಲಿನ ಆಸನಗಳು ಭರ್ತಿಯಾಗಿ ಹಾರುವ ಸಂದರ್ಭದಲ್ಲಿ ಪೈಲಟ್ ಗಳು ಎಂಜಿನ್ ಗಾಳಿಯನ್ನು ಸ್ವಿಚ್ ಆಫ್ ಮಾಡುತ್ತಾರೆ. ವಿಮಾನ ಮೇಲಕ್ಕೆ ಹಾರಿದ ನಂತರ ಬ್ಲೀಡ್ ಸ್ವಿಚ್ ಅನ್ನು ಆನ್ ಮಾಡುತ್ತಾರೆ. ಇದರಿಂದಾಗಿ ಗಾಳಿ ಕ್ಯಾಬಿನ್ ಒಳಗಡೆ ಬರುತ್ತದೆ. ವಿಮಾನದ ಒಳಗಡೆ ಅಮ್ಲಜನಕ ಸಿಗುತ್ತದೆ. ಆದರೆ ಈ ಪ್ರಕರಣದಲ್ಲಿ ಪೈಲಟ್ ವಿಮಾನ ಹಾರುವ ಸಂದರ್ಭದಲ್ಲಿ ಬ್ಲೀಡ್ ಸ್ವಿಚ್ ಅನ್ನು ಆಫ್ ಮಾಡಿದ್ದಾರೆ. ಆದರೆ ನಂತರ ಈ ಸ್ವಿಚ್ ಅನ್ನು ಆನ್ ಮಾಡುವಲ್ಲಿ ಮರೆತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ನೆಲಮಂಗಲ ಸುತ್ತಮುತ್ತ ಮೋಡ ಬಿತ್ತನೆಗೆ ವಿಮಾನ ಹಾರಾಟ

    ನೆಲಮಂಗಲ ಸುತ್ತಮುತ್ತ ಮೋಡ ಬಿತ್ತನೆಗೆ ವಿಮಾನ ಹಾರಾಟ

    ಬೆಂಗಳೂರು: ಮಳೆಗಾಗಿ ಎರಡನೇ ದಿನವಾದ ಇಂದು ಮೋಡ ಬಿತ್ತನೆ ಮಾಡುತ್ತಿರುವ ವಿಶೇಷ ವಿಮಾನ ಬೆಂಗಳೂರು ಹೊರವಲಯ ನೆಲಮಂಗಲ ಸುತ್ತಮುತ್ತ ಹಾರಾಟ ನಡೆಸಿದೆ.

    ಇಂದು ನೆಲಮಂಗಲ ಸುತ್ತಮುತ್ತ ದಟ್ಟವಾದ ಮೋಡಗಳಿದ್ದ ಕಾರಣ ಮೋಡ ಬಿತ್ತನೆಯ ವಿಶೇಷ ವಿಮಾನ ಹಾರಟ ನಡೆಸುತ್ತಿದೆ. ನೆಲಮಂಗಲ ತಾಲೂಕಿನಾದ್ಯಂತ ಇಂದುಮ ಮೋಡಗಳು ಆವರಿಸಿಕೊಂಡಿದ್ದು, ಮೋಡ ಬಿತ್ತನೆ ಯಶಸ್ವಿಯಾಗುವ ಸಾಧ್ಯತೆಗಳಿವೆ.

    ಸೋಮವಾರ ರಾಮನಗರದ ಮಾಗಡಿ ಹಾಗೂ ಇನ್ನಿತರ ಭಾಗದಲ್ಲಿ ವಿಮಾನ ಹಾರಾಟ ನಡೆಸಿದ್ದು, ದಟ್ಟವಾದ ಮೋಡಗಳಿಲ್ಲದ ಕಾರಣ ಮೊದಲ ದಿನದ ಮೋಡ ಬಿತ್ತನೆ ಪ್ರಯತ್ನ ವಿಫಲವಾಗಿತ್ತು.

    ಇದನ್ನೂ ಓದಿ:  ಮೋಡ ಬಿತ್ತನೆಗೆ ಆರಂಭದಲ್ಲೇ ವಿಘ್ನ! ಮೊದಲ ದಿನ ಏನಾಯ್ತು?

    ಇದನ್ನೂ ಓದಿ: ಮಳೆಯಾಗ್ತಿರೋ ಹೊತ್ತಲ್ಲೇ ರಾಜ್ಯದಲ್ಲಿ ಮೋಡ ಬಿತ್ತನೆ- ಇಂದಿನಿಂದ 2 ತಿಂಗಳು ಬಿತ್ತನೆ ಕಾರ್ಯ 

  • ಬಿಸಿಲಿನ ತಾಪ ಹೆಚ್ಚಾಗಿದ್ದಕ್ಕೆ ವಿಮಾನ ಹಾರಾಟವೇ ರದ್ದಾಯ್ತು!

    ಬಿಸಿಲಿನ ತಾಪ ಹೆಚ್ಚಾಗಿದ್ದಕ್ಕೆ ವಿಮಾನ ಹಾರಾಟವೇ ರದ್ದಾಯ್ತು!

    ವಾಷಿಂಗ್ಟನ್: ನಿಲ್ದಾಣಗಳಲ್ಲಿ ಮಂಜು ಹೆಚ್ಚಿದ್ದರೆ ವಿಮಾನಗಳು ಲ್ಯಾಂಡ್ ಆಗದೇ ಇರುವುದನ್ನು ನೀವು ಈ ಹಿಂದೆ ಓದಿರಬಹುದು. ಆದರೆ ಈಗ ಬಿಸಿಲು ಜಾಸ್ತಿಯಾದ ಹಿನ್ನೆಲೆಯಲ್ಲಿ ವಿಮಾನಗಳ ಹಾರಾಟವನ್ನು ಅಮೆರಿಕದಲ್ಲಿ ರದ್ದುಮಾಡಲಾಗಿದೆ.

    ಹೌದು, ಅಮೆರಿಕ ದೇಶದ ರಾಜ್ಯವಾದ ಅರಿಜೋನಾದ ರಾಜಧಾನಿ ಫೀನಿಕ್ಸ್ ನಲ್ಲಿ ಬಿಸಿಲಿನ ತಾಪ ಹೆಚ್ಚಾದ ಹಿನ್ನೆಲೆಯಲ್ಲಿ ಕೆಲ ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿದೆ.

    ಫಿನಿಕ್ಸ್ ನಲ್ಲಿ ಮಂಗಳವಾರ 49 ಡಿಗ್ರಿ ಸೆಲ್ಸಿಯಸ್ ದಾಖಲಾದ ಹಿನ್ನೆಲೆಯಲ್ಲಿ ವಿಮಾನಯಾನ ಕಂಪೆನಿಗಳು ಹಾರಾಟವನ್ನು ಸ್ಥಗಿತಗೊಳಿಸಿದೆ. ಬಂಬಾರ್ಡಿಯರ್ ಸಿಆರ್‍ಜಿ ವಿಮಾನಗಳು ಗರಿಷ್ಠ 48 ಡಿಗ್ರಿ ಸೆಲ್ಸಿಯಸ್ ನಲ್ಲಿ ಹಾರಾಟ ಮಾಡುವ ಸಾಮರ್ಥ್ಯವನ್ನು ಹೊಂದಿದ್ದು, ಈ ಸಂಸ್ಥೆಯ 40 ವಿಮಾನಗಳ ಹಾರಾಟ ರದ್ದಾಗಿದೆ.

    ದೊಡ್ಡ ವಿಮಾನಗಳಾದ ಬೋಯಿಂಗ್ 747 ಮತ್ತು ಏರ್‍ಬಸ್ ಎ320 ಗಳು ಗರಿಷ್ಠ 52 ಡಿಗ್ರಿ ಸೆಲ್ಸಿಯಸ್ ನಲ್ಲಿ ಹಾರಾಟ ಮಾಡುವ ಸಾಮರ್ಥ್ಯ ಇರುವ ಕಾರಣ ಈ ವಿಮಾನಗಳು ಈ ನಿಲ್ದಾಣದಲ್ಲಿ ಲ್ಯಾಂಡ್ ಆಗುತ್ತಿವೆ.

    ಯಾಕೆ ವಿಮಾನ ಹಾರಲ್ಲ:
    ವಾತಾವರಣದ ಉಷ್ಣಾಂಶ ಸಾಧಾರಣವಾಗಿದ್ದರೆ ವಿಮಾನಗಳಿಗೆ ಯಾವುದೇ ಸಮಸ್ಯೆ ಆಗುವುದಿಲ್ಲ. ಎತ್ತರದಲ್ಲಿ ಹಾರಾಟ ನಡೆಸುವುದರಿಂದ ಬಿಸಿಲಿನ ತಾಪ ಮತ್ತು ಎಂಜಿನ್ ನಿಂದ ಉತ್ಪಾದನೆಯಾಗುವ ಶಾಖವನ್ನು ವಿಮಾನ ತಡೆದುಕೊಳ್ಳಬೇಕಾಗುತ್ತದೆ. ಉಷ್ಣಾಂಶ ತಡೆದುಕೊಳ್ಳುವ ಸಾಮರ್ಥ್ಯಕ್ಕಿಂತ ಹೆಚ್ಚಿನ ಸೆಲ್ಸಿಯಸ್ ಇದ್ದರೆ ಎಂಜಿನ್ ಮತ್ತು ವಾತಾವರಣದ ಉಷ್ಣತೆ ಎರಡನ್ನೂ ನಿಯಂತ್ರಿಸುವುದು ಕಷ್ಟವಾಗುತ್ತದೆ. ಅದರಲ್ಲೂ ಫುಲ್ ಟ್ಯಾಂಕ್ ಇಂಧನ ತುಂಬಿದ್ದರೆ ವಿಮಾನಕ್ಕೆ ಹಾನಿಯಾಗುವ ಸಾಧ್ಯತೆ ಹೆಚ್ಚಿರುತ್ತದೆ.

    https://twitter.com/VanessaR12News/status/877341854101929985

    https://twitter.com/BiologistDan/status/877215847407902721